Tag: ಬಂಗಾರಪೇಟೆ

  • ಹಿರಿಯ ಶಾಸಕನಾದ್ರೂ ಉದಾಸೀನ ಮನೋಭಾವದಿಂದ ನೋಡ್ತಾರೆ; ಬೈರತಿ ಸುರೇಶ್ ವಿರುದ್ಧ ನಾರಾಯಣಸ್ವಾಮಿ ಬೇಸರ

    ಹಿರಿಯ ಶಾಸಕನಾದ್ರೂ ಉದಾಸೀನ ಮನೋಭಾವದಿಂದ ನೋಡ್ತಾರೆ; ಬೈರತಿ ಸುರೇಶ್ ವಿರುದ್ಧ ನಾರಾಯಣಸ್ವಾಮಿ ಬೇಸರ

    ಕೋಲಾರ: ನಾನು ಜಿಲ್ಲೆಯ ಮಟ್ಟಿಗೆ ಹಿರಿಯ ಶಾಸಕನಾದರು ನನ್ನನ್ನು ಪರಿಗಣಿಸುವುದಿಲ್ಲ. ಜಿಲ್ಲೆಯ ಅಭಿವೃದ್ಧಿ ಸೇರಿದಂತೆ ಪಕ್ಷ ಸಂಘಟನೆ ವಿಚಾರದಲ್ಲಿ ನನ್ನನ್ನು ಉದಾಸೀನ ಮನೋಭಾವದಿಂದ ನೋಡುತ್ತಿದ್ದಾರೆ ಎಂದು ಕೋಲಾರ ಉಸ್ತುವಾರಿ ಸಚಿವ ಬೈರತಿ ಸುರೇಶ್ (Byrathi Suresh) ವಿರುದ್ಧ ಶಾಸಕ ಹಾಗೂ ಕೆಯುಐಡಿಎಫ್ ಮಂಡಳಿ ಅಧ್ಯಕ್ಷ ಎಸ್.ಎನ್.ನಾರಾಯಣಸ್ವಾಮಿ (SN Narayanaswamy) ಬೇಸರ ವ್ಯಕ್ತಪಡಿಸಿದ್ದಾರೆ.

    ಕೋಲಾರ (Kolar) ಜಿಲ್ಲೆ ಬಂಗಾರಪೇಟೆಯ (Bangarpet) ಪುರಸಭೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವರ್ಗಾವಣೆ ವಿಚಾರದಲ್ಲಿ ನನ್ನ ಮಾತಿಗೆ ಮನ್ನಣೆ ನೀಡುತ್ತಿಲ್ಲ. ಜಿಲ್ಲೆಯಲ್ಲಿರುವ ಗುಂಪುಗಳಲ್ಲಿ ಗುರುತಿಸಿಕೊಳ್ಳಲು ನನಗೆ ಇಷ್ಟವಿಲ್ಲ. ಕೋಲಾರ ಕಾಂಗ್ರೆಸ್ ಹೊಲಸಾಗಿದೆ. ಇಲ್ಲಿ ಯರ‍್ಯಾರೋ ನಾಯಕರಾಗಿದ್ದಾರೆ. ಇತ್ತೀಚೆಗೆ ಕಾಂಗ್ರೆಸ್ ಸಭೆಯಲ್ಲಿ ನಡೆದ ಗಲಾಟೆಯಿಂದ, ತಲೆ ತಗ್ಗಿಸುವಂತಾಗಿದೆ. ಹಿರಿಯ, ಕಿರಿಯ ಶಾಸಕರು ಯಾರೆಂದು ತಿಳಿದು ಆದ್ಯತೆ ನೀಡಬೇಕೆಂದು ಉಸ್ತುವಾರಿ ಸಚಿವ ಬೈರತಿ ಸುರೇಶ್ ವಿರುದ್ಧ ಬಹಿರಂಗವಾಗಿ ಅಸಮಾಧಾನ ಹೊರಹಾಕಿದರು. ಇದನ್ನೂ ಓದಿ: ಕೊಟ್ಟ ಹಣ ವಾಪಸ್‌ ಕೇಳಿದ್ದಕ್ಕೆ ಅಪ್ರಾಪ್ತರಿಂದ ಫೈರಿಂಗ್‌ – ಓರ್ವ ಸಾವು, ಇಬ್ಬರು ಗಂಭೀರ

    ಸದ್ಯಕ್ಕೆ ನನಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಿದ್ದಾರೆ. ಎರಡೂವರೆ ವರ್ಷದ ನಂತರ ನಂಗೆ ಮಂತ್ರಿ ಸ್ಥಾನ ನೀಡುವ ಭರವಸೆಯನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೀಡಿದ್ದಾರೆ. ವಕ್ಪ್ ಬೋರ್ಡ್ ವಿವಾದ ವಿಚಾರದಲ್ಲಿ ನಾವು ರೈತರ ಪರ ನಿಲ್ಲುತ್ತೇವೆ. ಯಾವುದೇ ಕಾರಣಕ್ಕೂ ವಕ್ಫ್ ಬೋರ್ಡ್‌ಗೆ ರೈತರ ಆಸ್ತಿ ನೀಡಬಾರದು. ಈಗಾಗಲೇ ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಬಿಜೆಪಿ ನಾಯಕ ತೀಟೆ ರವಿ ಏನೇನೋ ಹೇಳಿಕೆ ನೀಡುತ್ತಿದ್ದು, ಕೇವಲ ರಾಜಕೀಯ ಮಾಡಲು, ಬಿಜೆಪಿ, ಜೆಡಿಎಸ್ ಹೋರಾಟ ಮಾಡುತ್ತಿದೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಚುನಾವಣೆ ನಡೆದರೆ ತೆಲಂಗಾಣ, ಕರ್ನಾಟಕದಲ್ಲಿ ವಸೂಲಿ ಡಬಲ್ ಆಗಿದೆ: ಮೋದಿ ವಾಗ್ದಾಳಿ

    ಇನ್ನು ರಾಜ್ಯ ಕಾಂಗ್ರೆಸ್‌ನಲ್ಲಿ 5 ವರ್ಷದಲ್ಲಿ ಅಧಿಕಾರ ಹಂಚಿಕೆ ವಿಚಾರ ಕುರಿತು ಮಾತನಾಡಿದ ಅವರು, ಅಂತಹ ಯಾವುದೇ ಹಂಚಿಕೆ ಒಪ್ಪಂದವೂ ಆಗಿಲ್ಲ. ಎಲ್ಲವೂ ಹೈಕಮಾಂಡ್ ನಿರ್ಧಾರಕ್ಕೆ ಬಿಟ್ಟದ್ದು ಎಂದರು. 5 ವರ್ಷ ಸಿಎಂ ಆಗಿರ್ತೀನಿ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆ ವಿಚಾರದ ಕುರಿತು ಪ್ರತಿಕ್ರಿಯಿಸಿ, ಅದು ಸಹಜ ಹೇಳಿಕೆ. ಆದರೆ ಎಲ್ಲವೂ ಹೈಕಮಾಂಡ್ ನಿರ್ಧಾರ ಮಾಡುತ್ತೆ ಎಂದು ತಿಳಿಸಿದರು. ಇದನ್ನೂ ಓದಿ: 20 ಮಾರ್ಗಗಳಲ್ಲಿ 2025ರಲ್ಲಿ ಸೀಪ್ಲೇನ್ ಕಾರ್ಯಾಚರಣೆ ಪ್ರಾರಂಭ: ಸ್ಪೈಸ್‌ಜೆಟ್

  • ಕೋಲಾರದಲ್ಲಿ ಆಡಿ ಕಾರು ಮರಕ್ಕೆ ಡಿಕ್ಕಿ – ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು, ಓರ್ವ ಪಾರು

    ಕೋಲಾರದಲ್ಲಿ ಆಡಿ ಕಾರು ಮರಕ್ಕೆ ಡಿಕ್ಕಿ – ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು, ಓರ್ವ ಪಾರು

    ಕೋಲಾರ: ಆಡಿ ಕಾರೊಂದು (Audi Car) ಮರಕ್ಕೆ ಡಿಕ್ಕಿಯಾಗಿ ಭೀಕರ ಅಪಘಾತ ಉಂಟಾದ ಪರಿಣಾಮ ಮೂವರು ವಿದ್ಯಾರ್ಥಿಗಳು (Students) ಸ್ಥಳದಲ್ಲೇ ಸಾವನ್ನಪ್ಪಿದ್ದು, ಓರ್ವ ಬಚಾವಾದ ಘಟನೆ ಕೋಲಾರ (Kolar) ಹೊರವಲಯದಲ್ಲಿ ನಡೆದಿದೆ.

    ಬಂಗಾರಪೇಟೆ (Bangarpet) ಮುಖ್ಯರಸ್ತೆ ಸಹಕಾರ ನಗರದಲ್ಲಿ ಘಟನೆ ನಡೆದಿದೆ. ಮೃತರನ್ನು ಹಾಸನ ಮೂಲದ ಹರ್ಷವರ್ಧನ್, ಬಳ್ಳಾರಿ ಮೂಲದ ಬಸವರಾಜ್ ಹಾಗೂ ಬಂಗಾರಪೇಟೆಯ ನಿಶ್ಚಲ್ ಎಂದು ಗುರುತಿಸಲಾಗಿದೆ. ಮೃತರು ಪ್ರಸಿದ್ಧ ಯೂನಿವರ್ಸಿಟಿವೊಂದರ ವಿದ್ಯಾರ್ಥಿಗಳು. ಬಂಗಾರಪೇಟೆಯ ಸಾಯಿ ಗಗನ್ ಘಟನೆಯಲ್ಲಿ ಪಾರಾಗಿದ್ದಾನೆ. ವಿದ್ಯಾರ್ಥಿಗಳು ಸಾಯಿ ಗಗನ್ ಮನೆಗೆ ಬಂದಿದ್ದರು. ಅಲ್ಲಿಂದ ವಾಪಸ್ ಕೋಲಾರಕ್ಕೆ ತೆರಳುವ ವೇಳೆ ದುರ್ಘಟನೆ ಸಂಭವಿಸಿದೆ.

    ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಘಟನಾ ಸ್ಥಳಕ್ಕೆ ಕೋಲಾರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

  • ಬಂಗಾರಪೇಟೆ ಮಸೀದಿ ಬಳಿ ರಾತ್ರೋ ರಾತ್ರಿ ಕ್ಲಾಕ್‌ ಟವರ್ ನಿರ್ಮಾಣ

    ಬಂಗಾರಪೇಟೆ ಮಸೀದಿ ಬಳಿ ರಾತ್ರೋ ರಾತ್ರಿ ಕ್ಲಾಕ್‌ ಟವರ್ ನಿರ್ಮಾಣ

    ಕೋಲಾರ : ಬಂಗಾರಪೇಟೆ ನಗರದ (Bangarpet) ಮಸೀದಿ ಬಳಿ ರಾತ್ರೋ ರಾತ್ರಿ ನಿಮಾರ್ಣವಾಗಿದ್ದ ವಿವಾದಿತ ಕ್ಲಾಕ್‌ ಟವರ್ (Clock Tower) ಮಾದರಿಯನ್ನು ಪೊಲೀಸರು (Police) ತೆರವುಗೊಳಿಸಿದ್ದಾರೆ.

     

    ಕೋಲಾರ ಜಿಲ್ಲೆ‌ ಬಂಗಾರಪೇಟೆ ಪಟ್ಟಣದಲ್ಲಿ ಇಂದು ಕೋಲಾರದ ಕ್ಲಾಕ್ ಟವರ್ ಮಾದರಿ ನಿರ್ಮಾಣ ಮಾಡಲಾಗಿತ್ತು. ಬಂಗಾರಪೇಟೆ ಪಟ್ಟಣದ ನ್ಯೂಟೌನ್ ಮಸೀದಿ (New Town Mosque) ಬಳಿ ನಿರ್ಮಾಣ ಮಾಡಲಾಗಿದ್ದ ಕ್ಲಾಕ್ ಟವರ್ ಮಾದರಿ ಇದಾಗಿದ್ದು, ಟವರ್ ಮಾದರಿ ನಿರ್ಮಿಸಿ ಹಸಿರು ಬಟ್ಟೆ ಸುತ್ತಿದ್ದ ಸ್ಥಳೀಯರು ವಿವಾದಕ್ಕೆ ಗುರಿಯಾಗಿದ್ದರು.

    ವಿವಾದವಾಗುವ ಮೊದಲೇ ಪೊಲೀಸರ ಸಮಯ ಪ್ರಜ್ಞೆಯಿಂದ ತೆರವುಗೊಳಿಸಿದ್ದಾರೆ. ಪೊಲೀಸರು ಹಾಗೂ ನಗರಸಭೆ ಅಧಿಕಾರಿಗಳು ನಿರ್ಮಾಣ ಮಾಡಿದ್ದ ಟವರ್ ಮಾದರಿ ತೆರವುಗೊಳಿಸಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಮದ್ಯದಂಗಡಿಗಳಿಗೆ ಹೊಸ ಲೈಸೆನ್ಸ್ ಇಲ್ಲ: ಪಬ್ಲಿಕ್‌ ಟಿವಿಗೆ ಕೊಟ್ಟ ಮಾತು ಉಳಿಸಿಕೊಂಡ ಸಿಎಂ

     
    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಡಾನ್ಸ್‌ ಕ್ಲಾಸ್‌ಗೆ ಹೋಗಬೇಡ ಎಂದ ಪೋಷಕರು – ಮನನೊಂದು ಯುವತಿ ಆತ್ಮಹತ್ಯೆ

    ಡಾನ್ಸ್‌ ಕ್ಲಾಸ್‌ಗೆ ಹೋಗಬೇಡ ಎಂದ ಪೋಷಕರು – ಮನನೊಂದು ಯುವತಿ ಆತ್ಮಹತ್ಯೆ

    ಕೋಲಾರ: ಪೋಷಕರು ಡಾನ್ಸ್‌ ಕ್ಲಾಸ್‌ಗೆ (Dance Class) ಹೋಗಬೇಡ ಎಂದಿದ್ದಕ್ಕೆ ಮನನೊಂದು ಯುವತಿಯೊಬ್ಬಳು (Young Woman) ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಕೋಲಾರದಲ್ಲಿ (Kolar) ನಡೆದಿದೆ.

    ಕೋಲಾರ ಜಿಲ್ಲೆಯ ಬಂಗಾರಪೇಟೆ (Bangarapet) ತಾಲೂಕಿನ ಚಿನ್ನಕೋಟೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಚಿನ್ನಕೋಟೆ ಗ್ರಾಮದ ಕೀರ್ತನಾ (18) ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈಕೆಗೆ ಇತ್ತೀಚೆಗೆ ಡಾನ್ಸ್‌ಗೆ ಹೋಗಬೇಡ ಎಂದು ಪೋಷಕರು ಬುದ್ಧಿವಾದ ಹೇಳಿದ್ದಾರೆ. ಈ ಹಿನ್ನೆಲೆ ಕೀರ್ತನಾ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇದನ್ನೂ ಓದಿ: ಗ್ಯಾಸ್ ಸೋರಿಕೆಯಾಗಿ ಸಿಲಿಂಡರ್ ಸ್ಫೋಟ – ಗಾಯಗೊಂಡಿದ್ದ ದಂಪತಿ ಚಿಕಿತ್ಸೆ ಫಲಿಸದೇ ಸಾವು

    ಡಾನ್ಸ್ ಎಂದರೆ ತುಂಬಾ ಇಷ್ಟಪಡುತ್ತಿದ್ದ ಕೀರ್ತನಾ‌ ಡಾನ್ಸ್‌ ಕ್ಲಾಸ್‌ಗೆ ಹೋಗಬೇಡ ಎಂದು ಹೇಳಿದ ಪೋಷಕರ ಮಾತಿನಿಂದ ಮನನೊಂದು ನೇಣಿಗೆ ಶರಣಾಗಿದ್ದಾಳೆ. ಈ ಕುರಿತು ಬಂಗಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಕುಟುಂಬಸ್ಥರನ್ನು ಕಟ್ಟಿ ಹಾಕಿ ಮೂವರು ಮಹಿಳೆಯರ ಮೇಲೆ ಗ್ಯಾಂಗ್‍ರೇಪ್!

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮಗನಿಗೆ ಹೃದಯಾಘಾತ, ಆರೈಕೆ ಮಾಡೋರಿಲ್ಲದೆ ತಂದೆಯೂ ಸಾವು – ಕೊಳೆತ ಸ್ಥಿತಿಯಲ್ಲಿ ಪತ್ತೆಯಾಯ್ತು ಇಬ್ಬರ ಶವ

    ಮಗನಿಗೆ ಹೃದಯಾಘಾತ, ಆರೈಕೆ ಮಾಡೋರಿಲ್ಲದೆ ತಂದೆಯೂ ಸಾವು – ಕೊಳೆತ ಸ್ಥಿತಿಯಲ್ಲಿ ಪತ್ತೆಯಾಯ್ತು ಇಬ್ಬರ ಶವ

    ಕೋಲಾರ: ತಾಯಿ ತೀರಿಕೊಂಡ ಹಿನ್ನೆಲೆ ಮಗ ಮಾನಸಿಕವಾಗಿ ಕೊರಗಿದ್ದಲ್ಲದೆ ಹೃದಯಾಘಾತದಿಂದ ಪ್ರಾಣ ಬಿಟ್ಟರೆ ಅತ್ತ ವಯಸ್ಸಾದ ತಂದೆಗೆ ಆರೈಕೆ ಮಾಡುವವರಿಲ್ಲದೆ ನರಳಾಡಿ ಪ್ರಾಣ ಬಿಟ್ಟಿರುವ ಹೃದಯವಿದ್ರಾವಕ ಘಟನೆ ಕೋಲಾರದಲ್ಲಿ ವರದಿಯಾಗಿದೆ.

    ಕೊಳೆತ ಸ್ಥಿತಿಯಲ್ಲಿ ತಂದೆ ಹಾಗೂ ಮಗನ ಶವ ಪತ್ತೆಯಾಗಿದೆ. 12 ದಿನಗಳ ಹಿಂದೆಯೇ ಮಗನಿಗೆ ಹೃದಯಾಘಾತವಾಗಿ ಪ್ರಾಣ ಬಿಟ್ಟಿದ್ದು, ತಂದೆಗೆ ಪೋಷಣೆ ಮಾಡುವವರಿಲ್ಲದೆ ಅವರೂ ಮನೆಯಲ್ಲೇ ಉಸಿರು ಚೆಲ್ಲಿದ್ದಾರೆ. ಕೋಲಾರ (Kolar) ಜಿಲ್ಲೆಯ ಬಂಗಾರಪೇಟೆ (Bangarapet) ತಾಲೂಕಿನ ಎಂವಿ ನಗರದಲ್ಲಿ ಕಳೆದ 12 ದಿನಗಳ ಹಿಂದೆಯೇ ಇಬ್ಬರೂ ಮೃತಪಟ್ಟಿರುವ ಶಂಕೆ ಮೂಡಿದೆ. ಅಕ್ಕ ಪಕ್ಕದ ಮನೆಯವರಿಗೆ ದುರ್ವಾಸನೆ ಬಂದ ಹಿನ್ನೆಲೆ ಪರಿಶೀಲಿಸಿದಾಗ ಘಟನೆ ಬೆಳಕಿಗೆ ಬಂದಿದೆ.

    ಕಳೆದ 6 ತಿಂಗಳ ಹಿಂದೆಯಷ್ಟೇ ತಾಯಿ ತೀರಿಕೊಂಡಿದ್ದು, ತಂದೆ ಮಗ ಇಬ್ಬರು ಮಾತ್ರ ಮನೆಯಲ್ಲಿ ವಾಸ ಮಾಡುತ್ತಿದ್ದರು. ಎಂವಿ ನಗರದ ವಸಂತರಾಜುಲು (84) ಹಾಗೂ ಸೂರ್ಯ ಪ್ರಕಾಶ್ (40) ಮೃತಪಟ್ಟಿರುವ ತಂದೆ-ಮಗ. ಕಳೆದ 12 ದಿನಗಳ ಹಿಂದೆಯೇ ಇಬ್ಬರು ಮೃತಪಟ್ಟಿರುವ ಶಂಕೆ ಮೂಡಿದೆ. ವಯಸ್ಸಾಗಿದ್ದ ತಂದೆಯನ್ನು ಪೋಷಣೆ ಮಾಡುತ್ತಿದ್ದ ಮಗ ಇಬ್ಬರು ಉಸಿರು ಚೆಲ್ಲಿದ್ದಾರೆ. ಇದನ್ನೂ ಓದಿ: ನಿಫಾ ವೈರಸ್ ಭೀತಿ – ರಾಜ್ಯದ ಗಡಿಯಲ್ಲಿ ಹೈ ಅಲರ್ಟ್, ಕಟ್ಟುನಿಟ್ಟಿನ ತಪಾಸಣೆಗೆ ಸರ್ಕಾರ ಸೂಚನೆ

    ಮೊದಲಿಗೆ ಮಗ ಹೃದಯಾಘಾತದಿಂದ ಮೃತಪಟ್ಟಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಹೀಗಾಗಿ ಸಮಯಕ್ಕೆ ಸರಿಯಾಗಿ ಊಟ, ತಿಂಡಿ, ಔಷಧ ಸಿಗದೇ ತಂದೆಯೂ ಸಾವನ್ನಪ್ಪಿರಬಹುದು ಎನ್ನಲಾಗಿದೆ. ಸ್ಥಳಕ್ಕೆ ಶ್ವಾನ ದಳ ಸಿಬ್ಬಂದಿ, ಬೆರಳಚ್ಚು ತಜ್ಞರ ತಂಡ ಹಾಗೂ ಕೆಜಿಎಫ್ ಎಸ್‌ಪಿ ಶಾಂತಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    ಮೃತ ವಸಂತರಾಜುಲುಗೆ ಒರ್ವ ಮಗಳಿದ್ದು, ಆಕೆ ಆಮೆರಿಕದಲ್ಲಿದ್ದಾಳೆ. ಹೀಗಾಗಿ ಪಕ್ಕದ ಮನೆಯವರು ನೀಡಿದ ದೂರಿನ ಅನ್ವಯ ಬಂಗಾರಪೇಟೆ ಠಾಣೆಯ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದಾರೆ. ಇದನ್ನೂ ಓದಿ: ದೆಹಲಿಯಲ್ಲಿ ಶಿವಮೊಗ್ಗ ಮೂಲದ ಐಸಿಸ್ ಉಗ್ರನ ಬಂಧನ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕಿಡ್ನಿ ವೈಫಲ್ಯ – ರೈಲಿಗೆ ಸಿಲುಕಿ ವ್ಯಕ್ತಿ ಆತ್ಮಹತ್ಯೆ

    ಕಿಡ್ನಿ ವೈಫಲ್ಯ – ರೈಲಿಗೆ ಸಿಲುಕಿ ವ್ಯಕ್ತಿ ಆತ್ಮಹತ್ಯೆ

    ಕೋಲಾರ: ಅನಾರೋಗ್ಯ ಪೀಡಿತ ವ್ಯಕ್ತಿಯೋರ್ವ ಚಲಿಸುವ ರೈಲಿಗೆ (Train) ಹಾರಿ ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಕೋಲಾರದಲ್ಲಿ (Kolar) ನಡೆದಿದೆ.

    ಕೋಲಾರ ಜಿಲ್ಲೆಯ ಬಂಗಾರಪೇಟೆ (Bangarpet) ತಾಲೂಕಿನ ಹುಣಸನಹಳ್ಳಿ ಗ್ರಾಮದ ಬಳಿ ಘಟನೆ ನಡೆದಿದ್ದು, ಹುಣಸನಹಳ್ಳಿ ನಿವಾಸಿ ಮುನಿರಾಜು ಅಲಿಯಾಸ್ ಪುಟ್ಟಣ್ಣ (56) ಚಲಿಸುವ ರೈಲಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಮಳೆಗಾಗಿ ಮಕ್ಕಳ ಮದುವೆ ಮಾಡಿಸಿದ ಗ್ರಾಮಸ್ಥರು

    ಮೃತ ಮುನಿರಾಜು ವೃತ್ತಿಯಲ್ಲಿ ಮರಗೆಲಸ ಮಾಡಿ ಜೀವನ ಸಾಗಿಸುತ್ತಿದ್ದರು ಎನ್ನಲಾಗಿದೆ. ಹಲವು ತಿಂಗಳುಗಳಿಂದ ಅನಾರೋಗ್ಯ ಭಾದಿತರಾಗಿದ್ದ ಇವರು 2 ಕಿಡ್ನಿ ವೈಫಲ್ಯವಾಗಿ (Kidney Failure) ಡಯಾಲಿಸಿಸ್ ಮಾಡಿಸಿಕೊಳ್ಳುತ್ತಿದ್ದರೆಂದು ಕುಟುಂಬಸ್ಥರು ತಿಳಿಸಿದ್ದಾರೆ. ದಿನಗಳು ಕಳೆದಂತೆ ಆರೋಗ್ಯದ ಸ್ಥಿತಿ ಚಿಂತಾಜನಕವಾಗಿದ್ದು, ಚೇತರಿಸಿಕೊಳ್ಳಲು ಸಾಧ್ಯವಾಗದೇ ಆತ್ಮಹತ್ಯೆ ಮಾಡಿಕೊಳ್ಳುವ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಕಲ್ಲಿನಿಂದ ಹೊಡೆದು ಯುವಕನ ಹತ್ಯೆಗೈದ ದುಷ್ಕರ್ಮಿಗಳು – ಸಿಸಿ ಟಿವಿಯಲ್ಲಿ ಕೃತ್ಯ ಸೆರೆ

    ಚಲಿಸುವ ರೈಲಿಗೆ ಎದೆಯೊಡ್ಡಿ ಆತ್ಮಹತ್ಯೆ ಮಾಡಿಕೊಂಡ ಪರಿಣಾಮ ರೈಲು ಡಿಕ್ಕಿಯಾದ ರಭಸಕ್ಕೆ ಅವರ ದೇಹ ಛಿದ್ರ ಛಿದ್ರವಾಗಿದ್ದು, ರೈಲು ಹಳಿಗಳ ಮೇಲೆ ದೇಹದ ಭಾಗಗಳೆಲ್ಲಾ ಚೆಲ್ಲಾಪಿಲ್ಲಿಯಾಗಿ ಬಿದ್ದಿದೆ. ಮೃತರಿಗೆ ಪತ್ನಿ ಹಾಗು ಮೂವರು ಮಕ್ಕಳಿದ್ದಾರೆ. ಬಂಗಾರಪೇಟೆ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ಕ್ರಮ ಜರುಗಿಸಲಾಗಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ರೈಲಿಗೆ ಬೆಂಕಿ ಆಕಸ್ಮಿಕ ಅಲ್ಲ, ಮಾನವ ಕೃತ್ಯದ ಶಂಕೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಗ್ಯಾಸ್ ಕಟರ್ ಬಳಸಿ ATMನಲ್ಲಿದ್ದ 15 ಲಕ್ಷ ದರೋಡೆ

    ಗ್ಯಾಸ್ ಕಟರ್ ಬಳಸಿ ATMನಲ್ಲಿದ್ದ 15 ಲಕ್ಷ ದರೋಡೆ

    ಕೋಲಾರ: ಗ್ಯಾಸ್ ಕಟರ್ (Gas Cutter) ಬಳಸಿ ಎಟಿಎಂನಲ್ಲಿದ್ದ (ATM) ಲಕ್ಷಾಂತರ ರೂ. ದರೋಡೆ (Robbery) ಮಾಡಿರುವ ಘಟನೆ ಕೋಲಾರದಲ್ಲಿ (Kolar) ನಡೆದಿದೆ.

    ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಹಂಚಾಳ ಗೇಟ್‌ನಲ್ಲಿ ಕೆನರಾ ಬ್ಯಾಂಕ್ ಎಟಿಎಂನ ಮಿಷನ್ ಅನ್ನು ಗ್ಯಾಸ್ ಕಟರ್‌ನಿಂದ ತೆರೆದು ಹಣ ಕಳ್ಳತನ ಮಾಡಲಾಗಿದೆ. ಎಟಿಎಂನಲ್ಲಿದ್ದ ಸುಮಾರು 15 ಲಕ್ಷ ರೂ. ಹಣ ಎಗರಿಸಿರುವ ಮಾಹಿತಿಯನ್ನು ಬ್ಯಾಂಕ್ ಸಿಬ್ಬಂದಿ ನೀಡಿದ್ದು, ಸ್ಥಳಕ್ಕೆ ಕೆಜಿಎಫ್ ಡಿವೈಎಸ್‌ಪಿ ರಮೇಶ್ ಸೇರಿದಂತೆ ಶ್ವಾನದಳ ಹಾಗೂ ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    ವಾಣಿಜ್ಯ ಮಳಿಗೆ ಕಟ್ಟಡದಲ್ಲಿ ಸಿಸಿಟಿವಿ ಇಲ್ಲದ್ದನ್ನು ಕಂಡು ಮಾಲೀಕರಿಗೆ ಪಬ್ಲಿಕ್ ಸೇಫ್ಟಿ ಆಕ್ಟ್ ಅಡಿ ನೋಟಿಸ್ ನೀಡುವಂತೆ ಬಂಗಾರಪೇಟೆ ಪೊಲೀಸರಿಗೆ ಡಿವೈಎಸ್‌ಪಿ ರಮೇಶ್ ಸೂಚನೆ ನೀಡಿದ್ದಾರೆ. ಈ ಹಿಂದೆ ಇದೆ ಜಾಗದಲ್ಲಿ ಕಿಡಿಗೇಡಿಗಳು ರಾತ್ರಿ 11 ಗಂಟೆ ಸಮಯದಲ್ಲಿ ಎಟಿಎಂ ಹಣ ಡ್ರಾ ಮಾಡಿ ಈಚೆ ಬರುತ್ತಿದ್ದ ವ್ಯಕ್ತಿಯ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿ 5 ಸಾವಿರ ರೂ. ದೋಚಿದ್ದ ಘಟನೆ ಕೂಡ ವರದಿಯಾಗಿತ್ತು. ಇದನ್ನೂ ಓದಿ: ಆನ್‍ಲೈನ್ ಗೇಮ್‍ನಲ್ಲಿ 5 ಕೋಟಿ ಗೆದ್ದು, 58 ಕೋಟಿ ಕಳೆದುಕೊಂಡ ಉದ್ಯಮಿ!

    ಇತ್ತೀಚೆಗೆ ಚಿಂತಾಮಣಿ ಹಾಗೂ ಕೋಲಾರದಲ್ಲಿ ಎಟಿಎಂಗಳಿಗೆ ಕನ್ನ ಹಾಕಿದ್ದ ಕಿಡಿಗೇಡಿಗಳು ಲಕ್ಷಾಂತರ ರೂ. ಹಣ ದೋಚಿ ಪರಾರಿಯಾಗಿದ್ರು. ಇನ್ನೂ ಬಂಗಾರಪೇಟೆ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದಾರೆ. ಇದನ್ನೂ ಓದಿ: ಹೆಚ್ಚು ಜನ ಪ್ರಯಾಣಿಸುವ ಬಿಎಂಟಿಸಿ ರೂಟ್ ಮಾರ್ಕ್ ಮಾಡಿಕೊಂಡಿದ್ದ ಶಂಕಿತರು!

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕೋಲಾರದಲ್ಲಿ ಹಳಿ ತಪ್ಪಿದ ಡಬಲ್‌ಡೆಕ್ಕರ್ ರೈಲು – ತಪ್ಪಿದ ಭಾರೀ ದುರಂತ

    ಕೋಲಾರದಲ್ಲಿ ಹಳಿ ತಪ್ಪಿದ ಡಬಲ್‌ಡೆಕ್ಕರ್ ರೈಲು – ತಪ್ಪಿದ ಭಾರೀ ದುರಂತ

    ಕೋಲಾರ: ಡಬಲ್‌ಡೆಕ್ಕರ್ (Double Decker) ರೈಲೊಂದು ಹಳಿ ತಪ್ಪಿ ಲೋಕೋಪೈಲೆಟ್ ಸಮಯಪ್ರಜ್ಞೆಯಿಂದ ಭಾರೀ ದುರಂತ ತಪ್ಪಿದ ಘಟನೆ ಕೋಲಾರ (Kolar) ಜಿಲ್ಲೆಯ ಬಂಗಾರಪೇಟೆ (Bangarapet) ತಾಲೂಕಿನ ಬಿಸಾನತ್ತಂ ಬಳಿ ನಡೆದಿದೆ.

    ರೈಲು ಬೆಂಗಳೂರಿನಿಂದ (Bengaluru) ಚೆನ್ನೈಗೆ (Chennai) ತೆರಳುತ್ತಿದ್ದ ಸಂದರ್ಭ ರೈಲಿನ ಒಂದು ಕೋಚ್ ಹಳಿ ಬಿಟ್ಟು ಪಕ್ಕಕ್ಕೆ ಇಳಿದಿದೆ. ಹಳಿ ತಪ್ಪಿದ್ದನ್ನು ಗಮನಿಸಿದ ಲೋಕೋಪೈಲೆಟ್ ಕೂಡಲೇ ರೈಲನ್ನು ನಿಲ್ಲಿಸಿ ಅಧಿಕಾರಿಗಳಿಗೆ ಘಟನೆ ಕುರಿತು ಮಾಹಿತಿ ನೀಡಿದ್ದಾರೆ. ಇದರಿಂದಾಗಿ ನಡೆಯುತ್ತಿದ್ದ ಭಾರೀ ಅನಾಹುತ ತಪ್ಪಿದೆ. ಇದನ್ನೂ ಓದಿ: ತಮಿಳುನಾಡಿನಲ್ಲಿ ಕಳ್ಳಭಟ್ಟಿ ಸೇವಿಸಿ 10 ಸಾವು – 30ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲು

    ಘಟನೆ ನಡೆದ ಕೂಡಲೇ ತಾಂತ್ರಿಕ ತಜ್ಞರು ಸ್ಥಳಕ್ಕೆ ಭೇಟಿ ನೀಡಿದ್ದು, ಬಂಗಾರಪೇಟೆ ರೈಲ್ವೇ ಸಿಬ್ಬಂದಿ ಸಮಸ್ಯೆ ಬಗೆಹರಿಸಿದ ಬಳಿಕ ರೈಲು ಸಂಚಾರ ಮುಂದುವರಿಸಿದೆ. ಇದನ್ನೂ ಓದಿ: ಹಣವಿಲ್ಲದ್ದಕ್ಕೆ 5 ತಿಂಗಳ ಮಗುವಿನ ಶವವನ್ನು ಬ್ಯಾಗ್‍ನಲ್ಲಿ ತುಂಬಿಕೊಂಡು ಬಸ್‍ನಲ್ಲೇ ಕ್ರಮಿಸಿದ ತಂದೆ

  • ಲೋಕಾಯುಕ್ತ ದಾಳಿ ವೇಳೆ ಹೈಡ್ರಾಮಾ – ಅಧಿಕಾರಿಗಳೇ ಎದುರಲ್ಲೇ ರಸ್ತೆ ಮೇಲೆ ಬಿದ್ದು ಉರುಳಾಡಿದ ಇಓ

    ಲೋಕಾಯುಕ್ತ ದಾಳಿ ವೇಳೆ ಹೈಡ್ರಾಮಾ – ಅಧಿಕಾರಿಗಳೇ ಎದುರಲ್ಲೇ ರಸ್ತೆ ಮೇಲೆ ಬಿದ್ದು ಉರುಳಾಡಿದ ಇಓ

    ಕೋಲಾರ: ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಲೋಕಾಯುಕ್ತ (Lokayukta) ಅಧಿಕಾರಿಗಳು ದಾಳಿ ನಡೆಸಿದ್ದು, ಈ ವೇಳೆ ಅಧಿಕಾರಿಗಳ ಎದುರು ತಾಲೂಕು ಪಂಚಾಯತ್‌ ಇಓ (EO) ವೆಂಕಟೇಶಪ್ಪ ಹೈಡ್ರಾಮಾ ನಡೆಸಿದ ಘಟನೆ ನಡೆದಿದೆ.

    ಜಿಲ್ಲೆಯ ಬಂಗಾರಪೇಟೆಯಲ್ಲಿ (Bangarapete) ಲೋಕಾಯುಕ್ತ ಅಧಿಕಾರಿಗಳು ವೆಂಕಟೇಶಪ್ಪ ಅವರ ಮನೆ ಸೇರಿದಂತೆ 5 ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿದ್ದರು. ಈ ವೇಳೆ ಇಓ ವೆಂಕಟೇಶಪ್ಪ ಮನೆಯಲ್ಲಿ ಇಲ್ಲದೆ ಕರ್ತವ್ಯದ ಮೇರೆಗೆ ಬಾಗೇಪಲ್ಲಿಗೆ ಹೋಗಿದ್ದರು. ದಾಳಿ ವಿಚಾರ ತಿಳಿಯುತ್ತಿದ್ದಂತೆ ಇಓ ವೆಂಕಟೇಶಪ್ಪ ಬಂಗಾರಪೇಟೆಯ ಮನೆಗೆ ಬಂದಿದ್ದು, ಈ ವೇಳೆ ಅಧಿಕಾರಿಗಳ ಮುಂದೆ ಬಿದ್ದು ಅಯ್ಯಯ್ಯೋ, ಅಯ್ಯಯ್ಯೋ ಎಂದು ಒದ್ದಾಡಿ ಹೈಡ್ರಾಮಾ ಸೃಷ್ಟಿಸಿದ್ದಾರೆ.

    ವೆಂಕಟೇಶಪ್ಪ ಈಗಾಗಲೇ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದಾರೆ ಎನ್ನಲಾಗಿದ್ದು, ದಾಳಿಗೆ ಬಂದಿದ್ದ ಅಧಿಕಾರಿಗಳೇ ಆಂಬುಲೆನ್ಸ್‌ಗೆ ಕರೆ ಮಾಡಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲದೆ ದಾಳಿ ಮುಂದುವರಿಸಿದ್ದು ದಾಖಲೆ ಪರಿಶೀಲನೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ತೊಡಗಿದ್ದಾರೆ. ಕೋಲಾರ ಜಿಲ್ಲೆಯ ಬಂಗಾರಪೇಟೆ ಪಟ್ಟಣದ 3 ಕಡೆ ಹಾಗೂ ಮುಳಬಾಗಿಲು ತಾಲೂಕಿನ ತಿಪ್ಪದೊಡ್ಡಿಯಲ್ಲಿ 2 ಕಡೆ ಸೇರಿದಂತೆ ತಾಲೂಕು ಪಂಚಾಯತ್‌ ಕಾರ್ಯನಿರ್ವಹಣಾಧಿಕಾರಿ ವೆಂಕಟೇಶಪ್ಪ ಅವರಿಗೆ ಸೇರಿದ ಒಟ್ಟು 5 ಕಡೆ ಏಕಕಾಲಕ್ಕೆ ದಾಳಿ ಮಾಡಿದ್ದಾರೆ. ಇದನ್ನೂ ಓದಿ: ನಾಲ್ವರಲ್ಲಿ ಯಾರ ಕೈ ಹಿಡಿಯಲಿದೆ ರಾಯಬಾಗ ಮೀಸಲು ಕ್ಷೇತ್ರದ ಜನತೆ

    ಬಂಗಾರಪೇಟೆಯಲ್ಲಿ ಇಓ ಆಗಿ ಕಾರ್ಯನಿರ್ವಹಿಸಿದ್ದ ವೆಂಕಟೇಶಪ್ಪ ಕಳೆದ 2 ದಿನದ ಹಿಂದಷ್ಟೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿಗೆ ವರ್ಗಾವಣೆಗೊಂಡಿದ್ದರು. ಅಲ್ಲದೆ ಗ್ರಾಪಂ ಕಾರ್ಯದರ್ಶಿಯಾಗಿ, ಪಿಡಿಓ ಆಗಿ ಕಾರ್ಯನಿರ್ವಹಿಸಿದ್ದ ವೆಂಟೇಶಪ್ಪ, ಬಂಗಾರಪೇಟೆ ತಾಲೂಕು ಕಚೇರಿಯಲ್ಲಿ ಇಓ ಆಗಿ 8 ವರ್ಷಗಳ ಕಾಲ ಕಾರ್ಯನಿರ್ವಹಿಸುತ್ತಿದ್ದರು.

    ವೆಂಕಟೇಶಪ್ಪ ಬಂಗಾರಪೇಟೆಯಲ್ಲಿ 3 ನಿವೇಶನ, ಅಂಗಡಿ ಸೇರಿದಂತೆ ಕೋಟ್ಯಂತರ ಮೌಲ್ಯದ ಆಸ್ತಿ ಹೊಂದಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಅಕ್ರಮ ಆಸ್ತಿ ಗಳಿಕೆ ಆರೋಪದಡಿ ಲೋಕಾಯುಕ್ತ ಎಸ್ಪಿ ಉಮೇಶ್ ಅವರ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ. ಇದನ್ನೂ ಓದಿ: ರೆಡ್ಡಿ ಕುಟುಂಬಗಳ ನಡುವಿನ ಕಾಳಗಕ್ಕೆ ಸಾಕ್ಷಿಯಾಗಲಿದೆಯಾ ಬಳ್ಳಾರಿ ನಗರ ಕ್ಷೇತ್ರ?

  • ಫಸ್ಟ್‌ ಟೈಂ ಬಯಲುಸೀಮೆ ಕೋಲಾರದ ಏಕೈಕ ಜಲಾಶಯ ಯರಗೋಳ್ ಡ್ಯಾಂ ಭರ್ತಿ

    ಫಸ್ಟ್‌ ಟೈಂ ಬಯಲುಸೀಮೆ ಕೋಲಾರದ ಏಕೈಕ ಜಲಾಶಯ ಯರಗೋಳ್ ಡ್ಯಾಂ ಭರ್ತಿ

    ಕೋಲಾರ: ಕಳೆದ ಐದು ದಿನಗಳಿಂದ ಉತ್ತಮ ಮಳೆಯಾಗುತ್ತಿದ್ದು, ಇದೇ ಮೊದಲ ಬಾರಿಗೆ ಯರಗೋಳ ಡ್ಯಾಂ ಭರ್ತಿಯಾಗಿದೆ.

    ಬಂಗಾರಪೇಟೆ ತಾಲೂಕಿನ ಯರಗೋಳ ಡ್ಯಾಂ, ಸುಮಾರು 100 ಅಡಿ ಎತ್ತರವಿದ್ದು ಈಗ ಸಂಪೂರ್ಣ ಭರ್ತಿಯಾಗಿದೆ. ಬಯಲುಸೀಮೆ ಏಕೈಕ ಜಲಾಶಯ ಭರ್ತಿಯಾದ ಹಿನ್ನೆಲೆಯಲ್ಲಿ ಡ್ಯಾಂ ವೀಕ್ಷಿಸಲು ಸುತ್ತಮುತ್ತಲಿನ ಗ್ರಾಮಸ್ಥರು ತಂಡೋಪ ತಂಡವಾಗಿ ಆಗಮಿಸುತ್ತಿದ್ದಾರೆ.

    ಕೋಲಾರ, ಬಂಗಾರಪೇಟೆ, ಮಾಲೂರು ಪಟ್ಟಣ ಸೇರಿ 45 ಹಳ್ಳಿಗಳಿಗೆ ಕುಡಿಯುವ ನೀರು ಪೂರೈಕೆ ಮಾಡಲು ಈ ಯರಗೋಳ್ ಯೋಜನೆ ಸಹಕಾರಿಯಾಗಲಿದೆ. ಇದನ್ನೂ ಓದಿ: ರಸ್ತೆಬದಿ ಕಟ್ಟಡ ಅಂಕುಶಕ್ಕೆ ನಿಯಮ: ಸಚಿವ ಸಿ.ಸಿ.ಪಾಟೀಲ್

    ಇತ್ತೀಚೆಗೆ ಬಂದ ಮಳೆಗೆ ಕಳೆದ 14 ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಜಲಾಶಯ ಇಂದು ತುಂಬಿರುವುದು ಜಿಲ್ಲೆಯ ಜನರಲ್ಲಿ ಖುಷಿ ತಂದುಕೊಟ್ಟಿದೆ. ಸುಮಾರು 315 ಕೋಟಿ ರೂ. ವೆಚ್ಚದಲ್ಲಿ ಡ್ಯಾಂ ನಿರ್ಮಾಣ ಮಾಡಲಾಗಿದೆ.

    Live Tv
    [brid partner=56869869 player=32851 video=960834 autoplay=true]