Tag: ಬಂಗಾರಪ್ಪ

  • ಬಂಗಾರಪ್ಪನವರ ಹುಟ್ಟುಹಬ್ಬದ ಪ್ರಯುಕ್ತ ಶಿರಸಿ ಮಾರಿಕಾಂಬೆಗೆ ವಿಶೇಷ ಪೂಜೆ ಸಲ್ಲಿಸಿದ ಶಿವಣ್ಣ

    ಬಂಗಾರಪ್ಪನವರ ಹುಟ್ಟುಹಬ್ಬದ ಪ್ರಯುಕ್ತ ಶಿರಸಿ ಮಾರಿಕಾಂಬೆಗೆ ವಿಶೇಷ ಪೂಜೆ ಸಲ್ಲಿಸಿದ ಶಿವಣ್ಣ

    ಕಾರವಾರ: ಮಾಜಿ ಸಿಎಂ ದಿ.ಎಸ್ ಬಂಗಾರಪ್ಪನವರ (S.Bangarappa) ಜನ್ಮ ದಿನದ ಹಿನ್ನಲೆಯಲ್ಲಿ ನಟ ಶಿವರಾಜ್‌ಕುಮಾರ್ (Shivarajkumar) ಕುಟುಂಬ ಸಮೇತರಾಗಿ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಶ್ರೀ ಮಾರಿಕಾಂಬಾ ದೇವಸ್ಥಾನಕ್ಕೆ (Sirsi Marikamba Temple) ಭೇಟಿ ನೀಡಿ, ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

    ಶಿವರಾಜ್‌ಕುಮಾರ್ ಪತ್ನಿ ಹಾಗೂ ಬಂಗಾರಪ್ಪನವರ ಮಗಳಾದ ಗೀತಾ ಶಿವರಾಜಕುಮಾರ್ ಅವರೊಂದಿಗೆ ದೇವಸ್ಥಾನಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಸಚಿವ ಮಧು ಬಂಗಾರಪ್ಪ ಹಾಗೂ ಶಿರಸಿ ಶಾಸಕ ಹಾಗೂ ಬಂಗಾರಪ್ಪನವರ ಬಾವ ಭೀಮಣ್ಣ ನಾಯ್ಕ್‌ ಅವರು ಸಹ ಕುಟುಂಬ ಸಮೇತರಾಗಿ ಪೂಜೆಯಲ್ಲಿ ಭಾಗವಹಿಸಿದ್ದರು.

    ಈ ಸಂದರ್ಭದಲ್ಲಿ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಜಗದೀಶ್ ಗೌಡ, ದೇವಸ್ಥಾನದ ಆಡಳಿತ ಮಂಡಳಿ ಸದಸ್ಯ ಶಿವಾನಂದ ಶೆಟ್ಟಿ, ಸುಧೀರ್ ಹಂದ್ರಾಳ ಸೇರಿದಂತೆ ಹಲವಾರು ಅಭಿಮಾನಿಗಳು, ಕಾರ್ಯಕರ್ತರು ಭಾಗಿಯಾಗಿದ್ದರು.

  • ಬಂಗಾರಪ್ಪ ಕುಟುಂಬವನ್ನ ಒಂದಾಗಿಸಲು ನಾನ್ಯಾರು?: ಶಿವರಾಜಕುಮಾರ್

    ಬಂಗಾರಪ್ಪ ಕುಟುಂಬವನ್ನ ಒಂದಾಗಿಸಲು ನಾನ್ಯಾರು?: ಶಿವರಾಜಕುಮಾರ್

    ಮಾಜಿ ಸಿಎಂ ಬಂಗಾರಪ್ಪ ಕುಟುಂಬವನ್ನ ಒಂದಾಗಿಸಲು ನಾನ್ಯಾರು?,ನಾನು ಅವರ ಮನೆಯ ಅಳಿಯ ಅಷ್ಟೇ, ಮಗನಲ್ಲ ಎಂದು ಹ್ಯಾಟ್ರಿಕ್ ಹಿರೋ ಶಿವರಾಜಕುಮಾರ್ ಹೇಳಿದರು. ನಗರದಲ್ಲಿ ಪತ್ನಿಗೆ ಗೀತಾ ಶಿವರಾಜಕುಮಾರ್ (Shivaraj Kumar)ಗೆ ಟಿಕೆಟ್ ಘೋಷಣೆ ವಿಚಾರಕ್ಕೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಲೋಕಸಭೆ ಚುನಾವಣೆ ಸಿದ್ಧತೆ ನಡೆಯುತ್ತಿದೆ.ಯಾವಾಗಿಂದ ಚುನಾವಣಾ ಪ್ರಚಾರಕ್ಕೆ ಹೋಗಬೇಕು ಅನ್ನೋದು ತೀರ್ಮಾನ ಆಗಿಲ್ಲ.ಯಾವಾಗ ಹೋಗಬೇಕು ಅವಾಗ ಹೋಗ್ತೇನಿಈ ಬಾರಿ ಪೂರ್ತಿ ಚುನಾವಣೆಯಲ್ಲಿ ತೊಡಗಿಸಿಕೊಳ್ಳುತ್ತೇನಿ.ಸಂಸದರಾಗಬೇಕೆಂದೇ ಚುನಾವಣೆಗೆ ಬಂದಿರೋದು.ಕುಮಾರ್ ಬಂಗಾರಪ್ಪ ಬರ್ತಾರಾ ಚುನಾವಣೆ ಪ್ರಚಾರಕ್ಕೆ, ಅದೆಲ್ಲವೂ ಗೊತ್ತಿಲ್ಲ ‌ಸರ್ ನನಗೆ ಎಂದರು‌.

    ಸ್ಟಾರ್ ನಟರು ಚುನಾವಣಾ ಪ್ರಚಾರಕ್ಕೆ ಬರ್ತಾರೆ ಎಂಬ ಪ್ರಶ್ನೆಗೆ ಇನ್ನೂ ನಾವು ಯಾರಿಗೂ ತೊಂದರೆ ಕೊಡುವುದಕ್ಕೆ ಹೋಗಿಲ್ಲ.ಈ ಬಾರಿ ಬಿಸಿಲು ಜಾಸ್ತಿಯಿದೆ.ಅವರು ಪಾಪ ಒತ್ತಡದಿಂದ ಚುನಾವಣಾ ಪ್ರಚಾರಕ್ಕೆ ಬರಬಾರದು.ನಾನು ಕರೆದ್ರೆ ಬರ್ತಾರೆ ಹಾಗಂತ ಅವರನ್ನ ಕರೆಯುವುದಕ್ಕೆ ಹೋಗಬಾರದು.ನಮ್ಮ ನಟರಿಗೆ ಯಾವಾಗಲೂ ಸ್ಪೇಸ್ ಕೊಡಬೇಕು.ಇರೋ ಪ್ರೀತಿ ವಿಶ್ವಾಸ ಹಾಗೇ ಉಳಿಸಿಕೊಳ್ಳಬೇಕು ಎಂದರು.

    ಬಂಗಾರಪ್ಪ ಕುಟುಂಬ ಒಂದಾಗಿಸಲು ಶಿವಕುಮಾರ್ ಮುಂದಾಗ್ತಿಲ್ಲಾ ಯಾಕೇ ಎಂಬ ಪ್ರಶ್ನೆಗೆ‌ನೋಡಿ ಅವರನ್ನ ಒಂದು ಮಾಡೋಕೇ ನಾನ್ಯಾರು.ಅವರಾಗಿಯೇ ಒಂದಾಗಬೇಕು ಅಷ್ಟೇ ನಾನೇನು ಮಾಡಕ್ಕಾಗಲ್ಲ.ನಾನು ಅವರ ಅಳಿಯ ಹೊರತು ಅವರ ಮನೆ ಮಗನಲ್ಲ ಎಂದರು.

    ಲೋಕಸಭೆ ಸಭೆ ಚುನಾವಣೆಯಲ್ಲಿ ಎಲ್ಲೆಡೆಗೂ ಪ್ರಚಾರ ಮಾಡ್ತಿರಾ ಎಂಬ ಪ್ರಶ್ನೆಗೆ ಟೈಮ್ ನೋಡ್ಕೋಂಡು ತೀರ್ಮಾನ ಮಾಡ್ತೇನಿ.ನಾನು ಶೂಟಿಂಗ್ ಹೋಗಬೇಕು, ಗೀತಾ ಅವರ ಏನೇನೂ ಪ್ಲ್ಯಾನ್ ಇದೆ ಅನ್ನೋದನ್ನ ನೋಡಬೇಕು.ಗೀತಾ ನನ್ನ ಹೆಂಡ್ತಿ ಆಗಿರೋದ್ರಿಂದ್ರ ನಾನು ಜಾಸ್ತಿ ಸರ್ಫೋಟ್ ಮಾಡಬೇಕು ಎಂದರು. ಸರ್ಕಾರ ಗ್ಯಾರಂಟಿ ಯೋಜನೆ ವರ್ಕೌಟ್ ಆಗುತ್ತಾ ಪ್ರಶ್ನೆಗೆ ಅದು ನನಗೆ ಗೊತ್ತಿಲ್ಲ, ಒಟ್ಟಿನಲ್ಲಿ ನಾನು ಪ್ರಚಾರಕ್ಕೆ ಹೋಗ್ತಿದಿನಿ.ಮೋಸ್ಟಲಿ ಚುನಾವಣೆಯಲ್ಲಿ ಗ್ಯಾರಂಟಿ ಯೋಜನೆಗಳು ವರ್ಕೌಟ್ ಆಗ್ತಾವೆ.ಮಹಾದಾಯಿ ಹೋರಾಟದಲ್ಲಿ ನೂರರಷ್ಟು ನಟರು ಬರ್ತಾರೆ.ಈ ಬಾರಿ ಎಲ್ಲರೂ ಬರ್ತಾರೆ ನಾನೇ ಕರೆದುಕೊಂಡು ಬರ್ತಿನಿ.ಟೈಮ್ ಇದ್ದರೆ ಈ ಭಾಗದಲ್ಲಿ ಚುನಾವಣೆ ಪ್ರಚಾರಕ್ಕೆ ಬರ್ತಿನಿ ಎಂದು ಶಿವಣ್ಣ ಹೇಳಿದರು.

  • ಸಿದ್ದರಾಮಯ್ಯ ಹರಕೆಯ ಕುರಿ, ಕಾಂಗ್ರೆಸ್‍ಗೆ ದಮ್ಮಿದ್ರೆ ಅವರನ್ನ ಸಿಎಂ ಅಭ್ಯರ್ಥಿಯಾಗಿ ಘೋಷಿಸಲಿ: ಶ್ರೀರಾಮುಲು ಸವಾಲು

    ಸಿದ್ದರಾಮಯ್ಯ ಹರಕೆಯ ಕುರಿ, ಕಾಂಗ್ರೆಸ್‍ಗೆ ದಮ್ಮಿದ್ರೆ ಅವರನ್ನ ಸಿಎಂ ಅಭ್ಯರ್ಥಿಯಾಗಿ ಘೋಷಿಸಲಿ: ಶ್ರೀರಾಮುಲು ಸವಾಲು

    ರಾಯಚೂರು: ಸಿದ್ದರಾಮಯ್ಯ (Siddaramaiah) ಹರಕೆಯ ಕುರಿಯಾಗಿದ್ದಾರೆ. ಅವರು ಹರಕೆಯ ಕುರಿಯಾಗಬಾರದು. ಕಾಂಗ್ರೆಸ್‍ಗೆ (Congress) ದಮ್, ತಾಕತ್ ಇದ್ರೆ ಸಿದ್ದರಾಮಯ್ಯ ಅವರನ್ನ ಸಿಎಂ ಅಭ್ಯರ್ಥಿಯಾಗಿ ಘೋಷಣೆ ಮಾಡಲಿ ಎಂದು ಸಾರಿಗೆ ಸಚಿವ ಶ್ರೀರಾಮುಲು (Sriramulu) ಸವಾಲು ಹಾಕಿದ್ದಾರೆ.

    ರಾಯಚೂರಿನ (Raichuru) ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯಲ್ಲಿ (Vijaya sankalpa yatre) ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ದೇವರಾಜ ಅರಸು (Devaraj Arasu), ನಿಜಲಿಂಗಪ್ಪ (Nijalingappa), ವೀರೇಂದ್ರ ಪಾಟೀಲ್, ಬಂಗಾರಪ್ಪ (Bangarappa) ಅವರನ್ನು ಯಾವ ರೀತಿಯಲ್ಲಿ ನಡೆಸಿಕೊಂಡರೋ, ಅದೇ ರೀತಿಯಲ್ಲಿ ಸಿದ್ದರಾಮಯ್ಯ ಅವರನ್ನು ನಡೆಸಿಕೊಳ್ಳುತ್ತಿದೆ. ಆ ಪರಿಸ್ಥಿತಿ ಸಿದ್ದರಾಮಯ್ಯ ಅವರಿಗೆ ಬರಬಾರದು ಎಂದಿದ್ದಾರೆ. ಇದನ್ನೂ ಓದಿ: ಶಾಸಕ ಹಂಚಿದ ಕುಕ್ಕರ್ ಅಸಲಿ ಮುಖ ತೆರೆದಿಟ್ಟ ಶೃಂಗೇರಿಯ ಮತದಾರರು

    ಕಾಂಗ್ರೆಸ್‍ನಲ್ಲಿ ಒಗ್ಗಟ್ಟಿಲ್ಲ, ಒಳ ಜಗಳಗಳು ಪ್ರಾರಂಭವಾಗಿ ಮನೆಯೊಂದು ಮೂರು ಬಾಗಿಲಾಗಿದೆ ಎಂದು ವ್ಯಂಗ್ಯಮಾಡಿದ್ದಾರೆ.

    ನಾನು ಉಪ ಮುಖ್ಯಮಂತ್ರಿ ಸ್ಥಾನ ಕೇಳವ ಕಾಲ ಹೋಗಿದೆ. ಈಗ ಪ್ರಮೋಷನ್ ಆಗಿ ಸಿಎಂ ಸ್ಥಾನ ಕೇಳುವ ಸಮಯ ಬಂದಿದೆ. ಪಕ್ಷ ಮುಂದೆ ನನ್ನನ್ನ ಸಿಎಂ ಅಭ್ಯರ್ಥಿಯಾಗಿ ಘೋಷಣೆ ಮಾಡಬಹುದು ಎಂದು ಸಿಎಂ ಬಯಕೆಯನ್ನು ತೆರೆದಿಟ್ಟಿದ್ದಾರೆ.

    ಬಿಎಂಟಿಸಿ (BMTC) ಬಸ್‍ನಲ್ಲಿ ಕಂಡಕ್ಟರ್ ಸಜೀವ ದಹನ ವಿಚಾರವಾಗಿ, ಮೃತನ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ನೀಡಲು ಆದೇಶ ಮಾಡಿದ್ದೇನೆ. ಕುಟುಂಬದವರಿಗೆ ಉದ್ಯೋಗ ನೀಡಲು ಆದೇಶಿಸಿಸಲಾಗಿದೆ. ಇನ್ಸೂರೆನ್ಸ್ ಬಗ್ಗೆಯೂ ಈಗಾಗಲೇ ಸೂಚನೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.

    ಸಾರಿಗೆ ನೌಕರರ ಮುಷ್ಕರ ವಿಚಾರದಲ್ಲಿ, ಶೀಘ್ರದಲ್ಲೇ ಸಿಹಿ ಸುದ್ದಿ ಕೊಡುತ್ತೇವೆ. 10% ವೇತನ ಹೆಚ್ಚಳಕ್ಕೆ ನಾವು ಒಪ್ಪಿದ್ದೇವೆ. ಆದರೆ ನೌಕರರು ಒಪ್ಪುತ್ತಿಲ್ಲ ಎಂದಿದ್ದಾರೆ.

    ಜನಾರ್ದನ ರೆಡ್ಡಿಗೆ (Janardhana Reddy) ಸಿಬಿಐ (CBI) ಸಮನ್ಸ್ (Summons) ಜಾರಿ ವಿಚಾರಕ್ಕೆ ಪ್ರತಿಕ್ರಿಯಿಸಿ, ಅದು ಸಾಮಾನ್ಯ ಪ್ರಕ್ರಿಯೆ, ಅದರ ಬಗ್ಗೆ ನಾನು ಮಾತನಾಡುವುದಿಲ್ಲ. ಬಿಜೆಪಿಗರ (BJP) ಮೇಲೂ ದಾಳಿಯಾಗಿವೆ. ಕಾನೂನು ಚೌಕಟ್ಟಿನಲ್ಲಿ ಸಿಬಿಐ ಕಾರ್ಯ ನಿರ್ವಹಿಸುತ್ತದೆ ಎಂದಿದ್ದಾರೆ. ಇದನ್ನೂ ಓದಿ: ನಾನು ರಾಜಕೀಯದಲ್ಲಿ ಇರುವವರೆಗೆ ಅಭಿಷೇಕ್ ರಾಜಕೀಯಕ್ಕೆ ಬರಲ್ಲ: ಸುಮಲತಾ

  • ಶಿಕಾರಿಪುರದಲ್ಲಿ ಬಿಎಸ್‍ವೈಯಿಂದ ವಿಶೇಷ ಪೂಜೆ- ರಾಘವೇಂದ್ರ ಗೆಲ್ತಾರೆ ಅಂದು ಯಡಿಯೂರಪ್ಪ

    ಶಿಕಾರಿಪುರದಲ್ಲಿ ಬಿಎಸ್‍ವೈಯಿಂದ ವಿಶೇಷ ಪೂಜೆ- ರಾಘವೇಂದ್ರ ಗೆಲ್ತಾರೆ ಅಂದು ಯಡಿಯೂರಪ್ಪ

    ಶಿವಮೊಗ್ಗ: ಶಿಕಾರಿಪುರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಶಿಕಾರಿಪುರದ ಹುಚ್ಚರಾಯಸ್ವಾಮಿ ದೇವಸ್ಥಾನಕ್ಕೆ ಪುತ್ರರಾದ ರಾಘವೇಂದ್ರ, ವಿಜಯೇಂದ್ರ ಜತೆ ಆಗಮಿಸಿ ವಿಶೇಷ ಪೂಜೆ ಮಾಡಿದ್ದಾರೆ.

    ಹುಚ್ಚರಾಯಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ರಾಘವೇಂದ್ರ ಸ್ವಾಮಿಗಳ ಮಠಕ್ಕೆ ಬಿಎಸ್ ವೈ ಕಾಲ್ನಡಿಗೆಯಲ್ಲೇ ಮಠಕ್ಕೆ ಭೇಟಿ ನೀಡಿ ಅಲ್ಲಿಯೂ ವಿಶೇಷ ಪೂಜೆ ಸಲ್ಲಿಸಿದ್ದಾರೆ.

    ವಾಕಿಂಗ್ ಮೂಲಕ ಮತದಾನಕ್ಕೆ ಆಗಮಿಸಿದ ಬಿಎಸ್ ವೈ, ಪುತ್ರ, ಸೊಸೆಯರ ಜತೆ ಬಂದು ಶಿಕಾರಿಪುರದ ಆಡಳಿತ ಸೌಧದ ಬೂತ್ ನಂಬರ್ 132 ರಲ್ಲಿ ಮತದಾನ ಮಾಡಿದ್ದಾರೆ. ಬಳಿಕ ಮಾತನಾಡಿದ ಅವರು, ನವೆಂಬರ್ 6 ರ ನಂತರ ಕಾದು ನೋಡಿ. ಜೆಡಿಎಸ್, ಕಾಂಗ್ರೆಸ್ ನಲ್ಲಿ ಗೊಂದಲ ಸೃಷ್ಟಿಯಾಗುತ್ತದೆ. ಅದರ ಪರಿಣಾಮ ಏನಾಗುತ್ತೆ ಅನ್ನೋದನ್ನ ನೋಡಿ. ಆದ್ರೆ ಸರ್ಕಾರ ಬಿದ್ದು ಹೋಗುತ್ತೆ ನಾನು ಹೇಳ್ತಿಲ್ಲ ಎಂದು ಮಾರ್ಮಿಕವಾಗಿ ಹೇಳಿದ್ರು.

    ರಾಘವೇಂದ್ರ ಗೆಲ್ತಾರೆ, ಬಳ್ಳಾರಿ, ಜಮಖಂಡಿಯಲ್ಲಿಯೂ ಗೆಲ್ಲುತ್ತೇವೆ ಅಂತ ವಿಶ್ವಾಸ ವ್ಯಕ್ತಪಡಿಸಿದ ಅವರು, ಇದೇ ವೇಳೆ ಮಾಜಿ ಶಾಸಕ ಎಂ.ಪಿ ರವೀಂದ್ರ ನಿಧನಕ್ಕೆ ಸಂತಾಪ ಸೂಚಿಸಿದ್ರು. ನಿಧನ ಸುದ್ದಿ ಕೇಳಿ ನನಗೆ ದಿಗ್ಭ್ರಮೆಯಾಗಿದೆ. ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಅಂತ ಹೇಳಿದ್ರು.

    ಶಿವಮೊಗ್ಗವು ಮಾಜಿ ಮುಖ್ಯಮಂತ್ರಿಯೂ ಆಗಿರುವ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಮತ್ತು ಮಾಜಿ ಸಿಎಂ ಬಂಗಾರಪ್ಪ ಮಗ ಮಧು ಬಂಗಾರಪ್ಪ ನಡುವಿನ ಜಿದ್ದಿನ ಕಣವಾಗಿದೆ. ಕಾಂಗ್ರೆಸ್-ಜೆಡಿಎಸ್ ದೋಸ್ತಿಗಳು ಯಡಿಯೂರಪ್ಪ ಕೋಟೆಯಲ್ಲಿ ಅಬ್ಬರಿಸಿದ್ರೆ, ಮೈತ್ರಿಕೂಟವನ್ನು ಸೋಲಿಸಲು ಯಡಿಯೂರಪ್ಪ ನೇತೃತ್ವದಲ್ಲಿ ಭರ್ಜರಿ ಪ್ರಚಾರ ಕೈಗೊಂಡಿತ್ತು.

    – ಶಿವಮೊಗ್ಗ ಲೋಕಸಭೆ ಲೆಕ್ಕಾಚಾರ
    – ಒಟ್ಟು ಮತದಾರರು- 16,45,511
    – ಪುರುಷರು- 8,27,111
    – ಮಹಿಳೆಯರು-8,17,948

    ಇನ್ನೈದಾರು ತಿಂಗಳಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಭಾವಿಸಲಾಗಿರುವ ಮೂರು ಲೋಕಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಮತದಾನ ಆರಂಭವಾಗಿದೆ. ಜಿದ್ದಾಜಿದ್ದಿನಿಂದ ಕೂಡಿರುವ ಬಳ್ಳಾರಿ, ಶಿವಮೊಗ್ಗ, ಮಂಡ್ಯ ಕ್ಷೇತ್ರಗಳಲ್ಲಿ ಯಾರನ್ನ ಗೆಲ್ಲಿಸಬೇಕು ಅನ್ನೋದನ್ನ ನಿರ್ಧರಿಸಲು ಮತದಾರರು ಮತಗಟ್ಟೆಗಳತ್ತ ಬರುತ್ತಿದ್ದಾರೆ. ಜೊತೆಗೆ ರಾಮನಗರ ಮತ್ತು ಜಮಖಂಡಿ ವಿಧಾನಸಭಾ ಕ್ಷೇತ್ರಗಳಿಗೂ ಮತದಾನ ನಡೆಯುತ್ತಿದೆ. ಈ ಐದೂ ಕ್ಷೇತ್ರಗಳ ವ್ಯಾಪ್ತಿಗೆ ಬರುವ ಶಾಲಾ-ಕಾಲೇಜು ಮತ್ತು ಸರ್ಕಾರಿ ಕಚೇರಿಗಳಿಗೆ ಇವತ್ತು ರಜೆ ಘೋಷಿಸಲಾಗಿದೆ. 5 ಕ್ಷೇತ್ರಗಳಲ್ಲಿ 6,453 ಮತಗಟ್ಟೆಗಳಿದ್ದು, 1,502 ಸೂಕ್ಷ್ಮ ಮತಗಟ್ಟೆಗಳಿವೆ. ಇದೇ ಮೊದಲ ಬಾರಿಗೆ ವಿಕಲಾಂಗ ಚೇತನರಿಗೆ ಮತಗಟ್ಟೆಗೆ ಕರೆದೊಯ್ಯುವ ವ್ಯವಸ್ಥೆಯನ್ನ ಮಾಡಲಾಗಿದೆ. 9,822 ಮತಯಂತ್ರಗಳ ಜತೆಗೆ 8,922 ವಿವಿ ಪ್ಯಾಟ್‍ಗಳಿದ್ದು, ಮಹಿಳೆಯರಿಗಾಗಿಯೇ ಒಟ್ಟು 57 ಗುಲಾಬಿ ಮತಕೇಂದ್ರಗಳನ್ನ ತೆರೆಯಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಪೂಜಾರಿ ಆತ್ಮಕತೆ ಸುಳ್ಳಿನಕಂತೆ, ಬಂಗಾರಪ್ಪ ಇಂದಿರಾಗಾಂಧಿಗೆ ಹೊಡೆಯಲು ಯತ್ನಿಸಿದ್ದು ಸುಳ್ಳು: ಮಧು ಬಂಗಾರಪ್ಪ

    ಪೂಜಾರಿ ಆತ್ಮಕತೆ ಸುಳ್ಳಿನಕಂತೆ, ಬಂಗಾರಪ್ಪ ಇಂದಿರಾಗಾಂಧಿಗೆ ಹೊಡೆಯಲು ಯತ್ನಿಸಿದ್ದು ಸುಳ್ಳು: ಮಧು ಬಂಗಾರಪ್ಪ

    ಶಿವಮೊಗ್ಗ: ಮಾಜಿ ಸಂಸದ, ಮಾಜಿ ಸಚಿವ, ಕಾಂಗ್ರೆಸ್ ನಾಯಕ ಜನಾರ್ದನ ಪೂಜಾರಿ ಅವರ ಆತ್ಮಕತೆ ಸಾಲ ಮೇಳದ ಸಂಗ್ರಾಮ ಆತ್ಮಕತೆಯಲ್ಲ ಅದೊಂದು ಸುಳ್ಳಿನ ಕಂತೆ ಎಂದು ಮಾಜಿ ಸಿಎಂ ಬಂಗಾರಪ್ಪ ಪುತ್ರ, ಜೆಡಿಎಸ್ ಶಾಸಕ ಮಧು ಬಂಗಾರಪ್ಪ ಟೀಕಿಸಿದ್ದಾರೆ.

    ಕೃತಿಯಲ್ಲಿ ಬಂಗಾರಪ್ಪ ಅವರು, ಇಂದಿರಾಗಾಂಧಿ ಅವರಿಗೆ ಅವಾಚ್ಯವಾಗಿ ಮಾತನಾಡಿದ್ದರು, ಒಮ್ಮೆ ಇಂದಿರಾಗಾಂಧಿ ಅವರ ಮೇಲೆ ಹಲ್ಲೆಗೂ ಯತ್ನಿಸಿದ್ದರು ಎಂದು ಬರೆದಿದ್ದಾರೆ. ಇದು ನಿಜವಾಗಿದ್ದರೆ ರಾಜೀವ್ ಗಾಂಧಿ ಬಂಗಾರಪ್ಪ ಅವರನ್ನು ಸಿಎಂ ಮಾಡುತ್ತಿರಲಿಲ್ಲ. ಇದು ಆತ್ಮಕತೆಯಲ್ಲ- ಸುಳ್ಳಿನ ಕಂತೆ. ಅದು ಆಟೋಬಯೋಗ್ರಫಿ ಅಲ್ಲ. ಅವರ ಪಾಪದ ಕೊಡ ಎಂದು ಮಧು ಹೇಳಿದ್ದಾರೆ.

    ಬಂಗಾರಪ್ಪ ಅವರಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ:
    ಶಿವಮೊಗ್ಗದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿ, ಪೂಜಾರಿ ತಮ್ಮ ಆತ್ಮಕತೆಯಲ್ಲಿ ಬಂಗಾರಪ್ಪ ಅವರ ಬಗ್ಗೆ ಬರೆದಿರುವ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಅಲ್ಲದೆ ಇದರಿಂದ ಬಂಗಾರಪ್ಪ ಅಭಿಮಾನಿಗಳಿಗೆ ನೋವಾಗಿದೆ. ಜನಾರ್ದನ ಪೂಜಾರಿ ಈಗ ಯಾವ ಸ್ಥಿತಿಯಲ್ಲಿ ಇದ್ದಾರೆ ಎಂಬುದು ನನಗೆ ಗೊತ್ತಿಲ್ಲ. ಅರಳು ಮರಳಾಗಿರಬಹುದು ಅಥವಾ ಅವರಿಗೆ ತಲೆಕೆಟ್ಟಿದೆ ಎಂದು ನಾನು ಹೇಳುವುದಿಲ್ಲ. ಬಂಗಾರಪ್ಪ ಅಧಿಕಾರದಿಂದ ಇಳಿದ ಮೇಲೆ ಕಾಂಗ್ರೆಸ್ಸಿಗರೇ ಅವರ ವಿರುದ್ದ ಕ್ಲಾಸಿಕ್ ಕಂಪ್ಯೂಟರ್ ಸೇರಿ ಮೂರು ಪ್ರಕರಣ ದಾಖಲಿಸಿದ್ದರು. ಈ ಎಲ್ಲಾ ಪ್ರಕರಣಗಳಲ್ಲೂ ಬಂಗಾರಪ್ಪ ನಿರ್ದೋಷಿ ಎಂದು ಕೋರ್ಟ್ ಖುಲಾಸೆಗೊಳಿಸಲಾಗಿದೆ. ಆದರೆ ಪೂಜಾರಿ ಬಂಗಾರಪ್ಪ ಭ್ರಷ್ಟಾಚಾರಿ ಎಂದು ಹೇಳಿದ್ದಾರೆ. ಇದು ನ್ಯಾಯಾಂಗ ನಿಂದನೆ ಆಗಲಿದೆ. ತಮ್ಮ ಕ್ಷೇತ್ರದಲ್ಲಿ ಕೋಮುಗಲಭೆ ತಡೆಯಲು ಯಾಕೆ ಸಾಧ್ಯವಾಗಿಲ್ಲ ಏಕೆ ಎಂಬುದನ್ನು ಮೊದಲು ಬರೆಯಿರಿ. ಅವರ ಪಕ್ಷದಲ್ಲಿ ಅವರಿಗೇ ಗೌರವ ಇಲ್ಲ. ಬೇರೆಯವರ ಮೇಲಿರುವ ಗೌರವಕ್ಕೆ ಧಕ್ಕೆ ತರುವ ಕೆಲಸ ಮಾಡುತ್ತಿದ್ದಾರೆ. ಮಾನನಷ್ಟ ಮೊಕದ್ದಮೆ ಹಾಕುವುದಿಲ್ಲ. ಬಂಗಾರಪ್ಪ ಅವರಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ ಎಂದರು

    ಸಾಲ ಮೇಳದ ಸಂಗ್ರಾಮದಲ್ಲಿ ಏನಿದೆ?:
    ನಾನೊಮ್ಮೆ ಬಂಗಾರಪ್ಪ ಅವರನ್ನು ಇಂದಿರಾಗಾಂಧಿಯವರಿಗೆ ಪರಿಚಯ ಮಾಡುವ ಸಂದರ್ಭ ಇಂದಿರಾಗಾಂಧಿ ‘ಹೂ ಈಸ್ ದ್ಯಾಟ್ ಬಂಗಾರಪ್ಪ’ ಎಂದು ಕೇಳಿದ್ದರು. ಅವರು ‘ದೇವರಾಜ ಅರಸರ ಕ್ಯಾಬಿನೆಟ್ನಲ್ಲಿದ್ದಾರೆ’ ಎಂದು ಹೇಳಿ ಪರಿಚಯಿಸಿದ್ದೆ. ಇದಾದ ಬಳಿಕ 1980ರ ಕಾಲಘಟ್ಟದಲ್ಲಿ ಚುನಾವಣೆಗಿಂತ ಮೊದಲು ಗುಂಡೂರಾಯರನ್ನು ರಾಜ್ಯಕ್ಕೆ ಎಲೆಕ್ಷನ್ ಕಮಿಟಿ ಚೇರ್ಮನ್ ಆಗಿ ನೇಮಿಸಿ ಪ್ರಕಟಣೆ ಮಾಡಿದರು. ಅಷ್ಟರವರೆಗೆ ಬಂಗಾರಪ್ಪಗೆ ಮುಖ್ಯಮಂತ್ರಿಯಾಗುವ ಕನಸಿತ್ತು. ಈಗ ಗುಂಡೂರಾಯರನ್ನು ನೇಮಕ ಮಾಡಿದ್ದು ಅವರಿಗೆ ಶಾಕ್ ಹೊಡೆದಂತಾಯಿತು. ಈ ಸಂದರ್ಭ ಇಂದಿರಾಗಾಂಧಿಯನ್ನು ಕೆಟ್ಟಮಾತುಗಳಿಂದ ಬೈದರು.

    ಆ ವೇಳೆ ಸಮಾಧಾನ ಹೇಳಿ ಸ್ವಲ್ಪ ದಿನ ಬಿಟ್ಟು ನಾನೊಮ್ಮೆ ಇಂದಿರಾಗಾಂಧಿ ಬಳಿ ಬಂಗಾರಪ್ಪ ಅವರನ್ನು ಕರೆದುಕೊಂಡು ಹೋದೆ. ಹೋದ ಕೂಡಲೇ ಬಂಗಾರಪ್ಪನವರು ಆರ್ಭಟ ಮಾಡಿದ್ದು, ನನಗೆ ಬಹಳ ಬೇಸರವಾಯಿತು. ಈ ಸಂದರ್ಭ ಇಂದಿರಾಗಾಂಧಿಯವರಿಗೆ ಹೊಡೆಯಲು ಹೋದರು. ನನಗೆ ಆಘಾತವಾಯಿತು. ಕೂಡಲೇ ಬಂಗಾರಪ್ಪರನ್ನು ಹಿಡಿದು ಹಿಂದಕ್ಕೆ ಎಳೆದೆ. ಇಂದಿರಾ ಹೆದರಿ ನಡುಗುತ್ತಿದ್ದರು. ಏನಾಗಿದೆ ನಿಮಗೆ? ತಲೆ ಸರಿ ಉಂಟಾ? ಹೋಗಿ ಹೊರಗೆ ನಿಲ್ಲಿ ಎಂದು ಹೇಳಿದೆ. ಆ ಬಳಿಕ ಇಂದಿರಾಗಾಂಧಿ ನನ್ನಲ್ಲಿ ‘ನನ್ನ ಮಕ್ಕಳು ಕೂಡಾ ಈ ರೀತಿ ಮಾಡಲಿಲ್ಲ. ಈ ರೀತಿ ಮಾಡಬಾರದಿತ್ತು,’ ಎಂದು ನೊಂದುಕೊಂಡರು ಅಂತಾ ಬರೆಯಲಾಗಿದೆ.