Tag: ಬಂಗಾರ

  • ವಿಜಯದಶಮಿ ವೇಳೆ ಶಮಿ ಮರಕ್ಕೆ ಪೂಜೆ ಮಾಡೋದು ಯಾಕೆ? ಪುರಾಣ ಕಥೆ ಏನು ಹೇಳುತ್ತೆ?

    ವಿಜಯದಶಮಿ ವೇಳೆ ಶಮಿ ಮರಕ್ಕೆ ಪೂಜೆ ಮಾಡೋದು ಯಾಕೆ? ಪುರಾಣ ಕಥೆ ಏನು ಹೇಳುತ್ತೆ?

    ನವರಾತ್ರಿ ವೇಳೆ ಅನೇಕ ರೂಪಗಳ ದೇವಿಗೆ ಅರ್ಚನೆ ನಡೆಯುತ್ತದೆ. ಇದರ ಜೊತೆಯಲ್ಲೇ ಮಹಾನಮಿಯ ದಿನದಂದು ಬನ್ನಿ (ಶಮಿ) ವೃಕ್ಷದ ಪೂಜೆ ನಡೆಯುತ್ತದೆ. ಸಾಧಾರಣವಾಗಿ ಹಿಂದೂ ಧರ್ಮದಲ್ಲಿ ಅರಳಿ ಮರಕ್ಕೆ ವಿಶೇಷ ಗೌರವ. ಬಹುತೇಕ ಎಲ್ಲ ದೇವಾಲಯಗಳಲ್ಲಿ ಅರಳಿ ಮರ ಇದ್ದರೂ ನವಮಿಯಂದು ಶಮಿ ವೃಕ್ಷಕ್ಕೆ ಯಾಕೆ ವಿಶೇಷ ಪೂಜೆ ಎನ್ನುವ ಪ್ರಶ್ನೆಗೆ ಪುರಾಣದಲ್ಲಿ ಉತ್ತರ ಸಿಗುತ್ತದೆ.

    ಪುರಾಣದಲ್ಲಿ ಏನಿದೆ?
    ಮಹಾತಪಸ್ವಿಯಾದ ಜಾರ್ವ ಹಾಗೂ ಆತನ ಪತ್ನಿ ಸಮೇಧರಿಗೆ ಶಮೀಕಾ ಹೆಸರಿನ ಪುತ್ರಿ ಇರುತ್ತಾಳೆ. ಆಕೆಯನ್ನು ಧೌಮ್ಯ ಋಷಿಯ ಪುತ್ರ ಮತ್ತು ಕೌಶಿಕ ಮಹರ್ಷಿಯ ಶಿಷ್ಯನಾಗಿದ್ದ ಮಂದಾರನಿಗೆ ಕೊಟ್ಟು ವಿವಾಹ ಮಾಡುತ್ತಾರೆ. ಕೆಲ ದಿನಗಳ ನಂತರ ನವ ದಂಪತಿ ವಾಯುವಿಹಾರಕ್ಕೆ ಹೋದಾಗ ವನದಲ್ಲಿ ಭೃಶುಂಡಿ (ಸೊಂಡಿಲು ಹೊಂದಿದ್ದ) ಮುನಿಯನ್ನು ನೋಡುತ್ತಾರೆ. ಮುನಿಯ ವಿಚಿತ್ರ ರೂಪವನ್ನು ಕಂಡು ಅವರಿಗೆ ಎಲ್ಲಿಲ್ಲದ ನಗು ಬರುತ್ತದೆ. ಇದನ್ನು ನೋಡಿದ ಭೃಶುಂಡಿಮುನಿ, ನನ್ನನ್ನು ನೋಡಿ ನಕ್ಕಿದ್ದು ಏಕೆ ಎಂದು ಪ್ರಶ್ನಿಸುತ್ತಾನೆ.

    ಮುನಿ ಪ್ರಶ್ನೆ ಕೇಳಿದ್ದರೂ ದಂಪತಿ ಮಾತ್ರ ನಗುತ್ತಲೇ ಇರುತ್ತಾರೆ. ತನ್ನನ್ನು ಅಪಹಾಸ್ಯ ಮಾಡಿದ್ದಕ್ಕೆ ಕೋಪಗೊಂಡ ಭೃಶುಂಡಿ ಮುನಿ, ನೀವು ಯಾವುದೇ ಪ್ರಾಣಿಗೂ ಉಪಯೋಗಕ್ಕೆ ಬಾರದ ಮರಗಳಾಗಿ ಎಂದು ಶಾಪ ಕೊಡುತ್ತಾನೆ. ಕೂಡಲೇ ದಂಪತಿಗೆ ತಮ್ಮ ತಪ್ಪಿನ ಅರಿವಾಗಿ ಮುನಿಯ ಪಾದಕ್ಕೆ ಬಿದ್ದು, ಕ್ಷಮೆ ಕೇಳಿ ತಮ್ಮ ಶಾಪ ವಿಮೋಚನೆ ಆಗುವುದು ಹೇಗೆ ಎಂದು ಅಂಗಲಾಚುತ್ತಾರೆ. ಇದಕ್ಕೆ ಭೃಶುಂಡಿ ನಿಮಗೆ ಗಣಪತಿ ಅನುಗ್ರಹವಾದ ಮೇಲೆಯೇ ಶಾಪ ವಿಮೋಚನೆ ಆಗುತ್ತದೆ ಎಂದು ಉತ್ತರಿಸುತ್ತಾನೆ.

    ಮುನಿಯ ಶಾಪದಂತೆ ಶಮೀಕಳು ಶಮೀವೃಕ್ಷವಾಗಿ, ಮಂದಾರನು ಮಂದಾರ ವೃಕ್ಷವಾಗಿ ಪರಿವರ್ತನೆ ಆಗುತ್ತಾರೆ. ಬಹಳ ಸಮಯವಾದರೂ ದಂಪತಿ ಮನೆಗೆ ಬಾರದಿದ್ದಾಗ ಶಮೀಕಳ ತಂದೆ-ತಾಯಿ ಕಾಡಿನೊಳಗೆ ಬರುತ್ತಾರೆ. ಅಲ್ಲಿ ಅವರು ಎರಡು ವಿಚಿತ್ರವಾದ ಮರಗಳನ್ನು ಕಂಡು, ಭೃಶುಂಡಿ ಮುನಿಯನ್ನು ವಿಚಾರಿಸಿದಾಗ ನಡೆದ ಸಂಗತಿ ತಿಳಿಯುತ್ತದೆ.

    ಮಗಳು ಹಾಗೂ ಅಳಿಯನ ಶಾಪವಿಮೋಚನೆಗೆ ದುರ್ವಾಸ ಮುನಿ ಹೇಳಿಕೊಟ್ಟಿದ್ದ ಗಣೇಶನ ಮಂತ್ರವನ್ನು ಜಾರ್ವ-ಸಮೇಧ ದಂಪತಿ ಪಟಿಸಲು ಆರಂಭಿಸುತ್ತಾರೆ. ಸ್ವಲ್ಪ ಸಮಯದ ಬಳಿಕ ಗಣಪತಿ ಪ್ರತ್ಯಕ್ಷನಾಗಿ, ಶಾಪ ವಿಮೋಚನೆ ಮಾಡುತ್ತಾನೆ. ಮರವಾಗಿದ್ದ ಶಮೀಕಾ ಹಾಗೂ ಮಂದಾರ ಮೊದಲಿನಂತೆ ಆಗುತ್ತಾರೆ.

    ವಿಜಯದಶಮಿ ದಿನದಂದು ಸಾಧಾರಣವಾಗಿ ಒಂದು ಶ್ಲೋಕ ಪ್ರಚಲಿತದಲ್ಲಿದೆ. ಈ ಶ್ಲೋಕವನ್ನು ಹೇಳಿಕೊಂಡು ಪರಸ್ಪರ ಶಮೀ ಪತ್ರೆಯನ್ನು ವಿನಿಮಯ ಮಾಡಿಕೊಳ್ಳುತ್ತಾರೆ.

    ಶಮೀ ಶಮೀಯತೇ ಪಾಪಂ ಶಮೀ ಶತ್ರುವಿನಾಶಿನೀ |
    ಅರ್ಜುನಸ್ಯ ಧನುರ್ಧಾರೀ ರಾಮಸ್ಯ ಪ್ರಿಯದರ್ಶನೀ ||
    ಕರಿಷ್ಯಮಾಣಯಾತ್ರಾಯಾ ಯಥಾಕಾಲಂ ಸುಖಂ ಮಯಾ |
    ತತ್ರ ನಿರ್ವಿಘ್ನಕತ್ರ್ರಿತ್ವಂ ಭವ ಶ್ರೀರಾಮಪೂಜಿತಾ ||

    ಶಮೀ (ಬನ್ನಿ) ವೃಕ್ಷವು ಪಾಪವನ್ನು ಹಾಗೂ ಶತ್ರುಗಳನ್ನು ಶಮನ ಮಾಡುತ್ತದೆ. ಅದು ಅರ್ಜುನನ ಬಾಣವನ್ನು ಕಾಪಾಡಿದ್ದು, ರಾಮನಿಗೆ ಅತಿ ಪ್ರೀಯವಾಗಿರುವುದು ಆಗಿದೆ. ಸದಾ ಕಾಲವು ಸುಖವನ್ನು ನೀಡುತ್ತದೆ. ರಾಮನು ಕೂಡಾ ಬನ್ನಿ ಮರವನ್ನು ಪೂಜಿಸಿದ್ದ. ನಾನು ಎಂದಿನಂತೆ ವಿಜಯಯಾತ್ರೆಗೆ ಹೊರಡುವವನಿದ್ದೇನೆ. ನನ್ನ ಈ ಯಾತ್ರೆಯು ನಿರ್ವಿಘ್ನ, ಸುಖಕರವಾಗುವಂತೆ ಮಾಡು ಎಂದು ಶ್ಲೋಕದ ಮೂಲಕ ಕೇಳಿಕೊಳ್ಳಲಾಗುತ್ತದೆ.

    ಪಾಂಡವರಿಂದ ಬನ್ನಿ ಮರದ ಪೂಜೆ:
    ಮಹಾಭಾರತದಲ್ಲಿ ಪಾಂಡವರು ಒಂದು ವರ್ಷದ ಅಜ್ಞಾತ ವಾಸಕ್ಕೆ ತೆರಳುವಾಗ ಬನ್ನಿ ಮರದಲ್ಲಿ ತಮ್ಮ ಆಯುಧಗಳನ್ನು ಬಚ್ಚಿಟ್ಟು ಹೋಗುತ್ತಾರೆ. ಅಜ್ಞಾತ ವಾಸದಿಂದ ಮರಳಿದ ಅವರು ಬನ್ನಿ ಮರದಲ್ಲಿ ಬಚ್ಚಿಟ್ಟಿದ್ದ ಆಯುಧಗಳನ್ನು ನೋಡುತ್ತಾರೆ. ಯಾರೊಬ್ಬರೂ ಅವುಗಳನ್ನು ತೆಗೆದುಕೊಂಡು ಹೋಗಿರುವುದಿಲ್ಲ. ಹೀಗಾಗಿ ತಮ್ಮ ಆಯುಧಗಳನ್ನು ಕಾಪಾಡಿಕೊಂಡು ಬಂದ ಬನ್ನಿ ಮರಕ್ಕೆ ನಮಸ್ಕರಿಸುತ್ತಾರೆ. ಬಳಿಕ ನಡೆದ ಕೌರವರ ಜೊತೆಗಿನ ಯುದ್ಧದಲ್ಲಿ ವಿಜಯ ಸಾಧಿಸುತ್ತಾರೆ. ಹೀಗಾಗಿ ವಿಜಯ ದಶಮಿಯ ದಿನ ಬನ್ನಿ ಪೂಜೆ ಮಾಡುತ್ತಾರೆ. ಅಂದಿನಿಂದ ಬನ್ನಿಯ ಮರಕ್ಕೆ ಪೂಜೆ ಸಲ್ಲಿಸಲಾಗುತ್ತಿದೆ ಎಂದು ಪುರಾಣದಲ್ಲಿ ಉಲ್ಲೇಖವಾಗಿದೆ.

    ಬನ್ನಿಯನ್ನು ಬಂಗಾರ ಎನ್ನುವುದೇಕೆ?
    ಬನ್ನಿಯನ್ನು ಬಂಗಾರ ಎಂದು ಕರೆಯಲು ತ್ರೇತಾಯುಗದ ಕಥೆಯೊಂದಿದೆ. ಕೌಸ್ತ ಹೆಸರಿನ ವಿದ್ಯಾರ್ಥಿಯ ವಿದ್ಯಾಭ್ಯಾಸದ ನಂತರ ಗುರುವಿಗೆ ಗುರುದಕ್ಷಿಣೆ ಕೊಡಲು ಇಚ್ಛಿಸುತ್ತಾನೆ. ಇದನ್ನು ಗುರುಗಳ ಜೊತೆಗೆ ಹಂಚಿಕೊಳ್ಳುತ್ತಾನೆ. ಆಗ ಗುರು ಸಹಸ್ರ ಕೋಟಿ ಚಿನ್ನದ ನಾಣ್ಯಗಳನ್ನು ಕೇಳುತ್ತಾರೆ.

    ಗುರುಗಳ ಕೇಳಿದಷ್ಟು ಚಿನ್ನದ ನಾಣ್ಯಗಳನ್ನು ಎಲ್ಲಿಂದ ತರುವುದು ಎಂದು ಯೋಚಿಸುತ್ತಾನೆ. ನಂತರ ರಘು ರಾಜನ ಬಳಿಗೆ ಹೋಗಿ, ಗುರುಗಳಿಗೆ ನೀಡಲು ಸಹಸ್ರ ಕೋಟಿ ಚಿನ್ನದ ನಾಣ್ಯಗಳು ಬೇಕು ದಯವಿಟ್ಟು ಕೊಡಿ ಎಂದು ಕೌಸ್ತ ಮನವಿ ಮಾಡಿಕೊಳ್ಳುತ್ತಾನೆ. ರಾಜನು ಕುಬೇರನನ್ನು ಪ್ರಾರ್ಥಿಸಿದಾಗ ಅಲ್ಲಿಯೇ ಇದ್ದ ಶಮೀ ಮರದ ಒಂದೊಂದು ಎಲೆಯೂ ಚಿನ್ನದ ನಾಣ್ಯವಾಗುತ್ತವೆ. ಇದರಿಂದ ಸಂತಸಗೊಂಡ ಕೌಸ್ತನು ನಾಣ್ಯಗಳನ್ನು ಗುರುಗಳಿಗೆ ಅರ್ಪಿಸುತ್ತಾನೆ. ಗುರುದಕ್ಷಿಣೆ ನೀಡಿ, ಉಳಿದ ನಾಣ್ಯಗಳನ್ನು ದಾನ ಮಾಡುತ್ತಾನೆ. ಆದ್ದರಿಂದ ಶಮೀ (ಬನ್ನಿ) ಮರವೆಂದರೇ ಚಿನ್ನ, ಬಂಗಾರ ಎನ್ನುವ ನಂಬಿಕೆ ಮೂಡಿಬಂದಿದೆ

    ಆರೋಗ್ಯಕ್ಕೂ ಒಳ್ಳೇಯದು:
    ಧನ್ವಂತರಿ ನಿಘಂಟಿನ ಪ್ರಕಾರ, `ಪಂಚಭೃಂಗ’ ಎಂಬ 5 ಮರಗಳಲ್ಲಿ ಶಮೀ ವೃಕ್ಷವೂ ಒಂದು. ಯಾವುದೇ ವ್ಯಕ್ತಿಯ ರೋಗ ಗುಣಪಡಿಸಿದ ನಂತರ ಸ್ನಾನ ಮಾಡಲು ಈ ಐದು ಮೂಲಿಕೆಗಳನ್ನು ಬಳಸಲಾಗುತ್ತದೆ. ಇದು ರೋಗದ ಸೋಂಕನ್ನು ನಿವಾರಿಸುವುದಲ್ಲದೇ ಶಕ್ತಿಯನ್ನು ಉತ್ತೇಜಿಸುತ್ತದೆ. ಈ ಮರದ ತೊಗಟೆಯನನ್ನು ಸಂಧಿವಾತದ ಚಿಕಿತ್ಸೆಯಲ್ಲಿ ಮುಖ್ಯವಾಗಿ ಬಳಸುವುದು ವಿಶೇಷ. ಶುಂಠಿಯೊಂದಿಗೆ ಬೆರೆಸಿ ತಯಾರಿಸಿದ ಇದರ ತೊಗಟೆಯ ಕಷಾಯವನ್ನು ಹಲ್ಲುಗಳ ಸಂಕುಚತತೆಯನ್ನು ಹೋಗಲಾಡಿಸಲು ಸೇವಿಸಲಾಗುತ್ತದೆ. ಕೃಷಿಯಲ್ಲಿ ಬೆಳೆಗಳಿಗೆ ಸುಗಮವಾಗಲೆಂದು, ಬೆಳೆಗಳ ಮಧ್ಯ ಈ ಮರವನ್ನು ಬೆಳೆಸಲಾಗುತ್ತದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಇಬ್ಬರು ಕಳ್ಳರನ್ನು ಬಂಧಿಸಿ 17 ಲಕ್ಷ ರೂ. ಮೌಲ್ಯದ ವಸ್ತು ವಶಕ್ಕೆ ಪಡೆದ ಪೊಲೀಸರು!

    ಇಬ್ಬರು ಕಳ್ಳರನ್ನು ಬಂಧಿಸಿ 17 ಲಕ್ಷ ರೂ. ಮೌಲ್ಯದ ವಸ್ತು ವಶಕ್ಕೆ ಪಡೆದ ಪೊಲೀಸರು!

    ಬಳ್ಳಾರಿ: ಒಬ್ಬಂಟಿ ಮಹಿಳೆಯರ ಸರಗಳ್ಳತನ ಹಾಗೂ ಮನೆ ಕಳ್ಳತನ ಮಾಡುತ್ತಿದ್ದ ಇಬ್ಬರು ಖತರನಾಕ್ ಕಳ್ಳರನ್ನು ನಗರದ ಕೌಲಬಜಾರ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶ್ವಿಯಾಗಿದ್ದಾರೆ. ಬಂಧಿತರಿಂದ ಬೆಳ್ಳಿ ಹಾಗೂ ಬಂಗಾರ ಸೇರಿದಂತೆ 17 ಲಕ್ಷ ರೂ. ಮೌಲ್ಯದ ವಿವಿಧ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.

    ಬಳ್ಳಾರಿ ತಾಲೂಕಿನ ಜಾನೆಕುಂಟೆ ತಾಂಡಾದ ಮಲ್ಲಿಕಾರ್ಜುನ ಅಲಿಯಾಸ್ ಮಲ್ಲಿನಾಯಕ್ (38) ಹಾಗೂ ಸಂಡೂರು ತಾಲೂಕಿನ ವೆಂಕಟಗಿರಿ ತಾಂಡಾದ ವೆಂಕಟೇಶ್ ನಾಯ್ಕ್ (43) ಬಂಧಿತ ಕಳ್ಳರು. ಆರೋಪಿಗಳ ವಿರುದ್ಧ ಬಳ್ಳಾರಿಯ ಕೌಲಬಜಾರ, ಕೊಪ್ಪಳದ ಕುಷ್ಟಗಿ, ಆಂಧ್ರಪ್ರದೇಶದ ಗುಂತಕಲ್ಲು, ಚಿಪ್ಪಗಿರಿ, ಹಿರೇಹಾಳ್ ಠಾಣೆಯಲ್ಲಿ ಒಟ್ಟು 17 ಕಳ್ಳತನ ದೂರುಗಳು ದಾಖಲಾಗಿವೆ.

    ಸೋಮವಾರ ಸಂಜೆ ಇಬ್ಬರೂ ಆರೋಪಿಗಳು ಕಳ್ಳತನ ಮಾಡಿದ ಆಭರಣಗಳನ್ನು ಮಾರಾಟ ಮಾಟಲು ನಗರಕ್ಕೆ ಬಂದಿದ್ದರು. ಖಚಿತ ಮಾಹಿತಿ ಆಧಾರ ಮೇಲೆ ಅವರನ್ನು ಬಳ್ಳಾರಿ ಹಳೇ ಬೈಪಾಸ್ ರಸ್ತೆಯ ಈದ್ಗಾ ಮೈದಾನದ ಬಳಿ ಅವರನ್ನು ವಶಕ್ಕೆ ಪಡೆದಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

    ಸದ್ಯ ಬಂಧಿತರಿಂದ 486 ಗ್ರಾಂ ಬಂಗಾರ, 2.6 ಕೆ.ಜಿ ಬೆಳ್ಳಿ, ವಿವಿಧ ಕಂಪೆನಿಯ 3 ಲ್ಯಾಪ್‍ಟಾಪ್, ಎರಡು ಮೊಬೈಲ್, ಬೈಕ್ ಸೇರಿದಂತೆ ಒಟ್ಟು 17 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ವರದಕ್ಷಿಣೆಗಾಗಿ ಸೊಸೆಗೆ ಬೆಂಕಿ ಹಚ್ಚಿ ಕೊಂದ್ರು!

    ವರದಕ್ಷಿಣೆಗಾಗಿ ಸೊಸೆಗೆ ಬೆಂಕಿ ಹಚ್ಚಿ ಕೊಂದ್ರು!

    ಮುಂಬೈ: ವರದಕ್ಷಿಣೆಗಾಗಿ ಮಹಿಳೆಯನ್ನು ಪತಿ ಕುಟುಂಬಸ್ಥರು ಸಜೀವ ದಹಿಸಿ ಕೊಲೆ ಮಾಡಿರುವ ಘಟನೆ ಮಹಾರಾಷ್ಟ್ರ ರಾಜ್ಯದ ಔರಂಗಾಬಾದ್ ಜಿಲ್ಲೆಯ ಮದನಪುರ ತಾಲೂಕಿನ ಮುಹಲಾನ್ ಗ್ರಾಮದಲ್ಲಿ ನಡೆದಿದೆ.

    24 ವರ್ಷದ ಚಂಚಲಾ ದೇವಿ ಸಾವನ್ನಪ್ಪಿದ ಮಹಿಳೆ. ಮಂಗಳವಾರ ಮಧ್ಯರಾತ್ರಿ ಚಂಚಲಾರ ಕೊಲೆಯಾಗಿದ್ದು, ಕುಟುಂಬಸ್ಥರು ಮಹಿಳೆಯ ಪೋಷಕರಿಗೂ ಮಾಹಿತಿ ನೀಡದೇ ಬುಧವಾರ ಅಂತಿಮ ಸಂಸ್ಕಾರ ನೆರವೇರಿಸಿದ್ದಾರೆ.

    ಚಂಚಲಾ ಸಾವಿನ ಸುದ್ದಿ ತಿಳಿದ ಗ್ರಾಮಕ್ಕೆ ಆಗಮಿಸಿದ ಪೋಷಕರು ಆಕೆಯ ಪತಿ ಕುಟುಂಬಸ್ಥರ ವಿರುದ್ಧ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಾಗುತ್ತಿದ್ದಂತೆ ಚಂಚಲಾ ಮಾವ ಕುಮಾರ್ ಬಲಿ ಸಿಂಗ್‍ನನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

    ಚಂಚಲಾ ಪೋಷಕರು ಮೂಲತಃ ಜಾರ್ಖಂಡ್ ರಾಜ್ಯದ ಹುಸೇನಾಬಾದ್ ನಗರದ ನಿವಾಸಿಗಳು. ಮದುವೆ ಬಳಿಕ ಚಂಚಲಾಗೆ ಪತಿ ನೀರಜ್ ಸಿಂಗ್, ಮಾವ ಬಲಿ ಸಿಂಗ್ ಸೇರಿದಂತೆ ಇತರೆ ಕುಟುಂಬಸ್ಥರು ವರದಕ್ಷಿಣೆಗಾಗಿ ಕಿರುಕುಳ ನೀಡುತ್ತಿದ್ದರು ಎಂದು ಚಂಚಲಾ ತಂದೆ ಸುನಿಲ್ ಸಿಂಗ್ ಆರೋಪಿಸಿದ್ದಾರೆ.

    ಕೆಲವು ತಿಂಗಳ ಹಿಂದೆ ಗ್ರಾಮದಲ್ಲಿ ಜಮೀನು ಮಾರಿ ಬಂಗಾರದ ಚೈನ್ ತಂದುಕೊಡಲಾಗಿತ್ತು. ಆದ್ರೂ ಕೆಲವು ದಿನಗಳಿಂದ ಚಂಚಲಾಳನ್ನು ಕೊಲೆ ಮಾಡುತ್ತೇವೆ ಅಂತಾ ಧಮ್ಕಿ ಹಾಕುತ್ತಿದ್ದರು. ಸದ್ಯ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದೇವೆ ಅಂತಾ ಸಿನಿಲ್ ಸಿಂಗ್ ಹೇಳಿದ್ದಾರೆ.

  • ಅರ್ಧ ಕೋಟಿಗಿಂತಲೂ ಅಧಿಕ ನಗದು ಹಣ, 200 ಗ್ರಾಂ ಬಂಗಾರ ವಶ

    ಅರ್ಧ ಕೋಟಿಗಿಂತಲೂ ಅಧಿಕ ನಗದು ಹಣ, 200 ಗ್ರಾಂ ಬಂಗಾರ ವಶ

    ಬೆಂಗಳೂರು/ಬಳ್ಳಾರಿ: ಚುನಾವಣಾ ನೀತಿ ಸಂಹಿತೆ ಜಾರಿಯಾದ ನಂತರ ರಾಜ್ಯದ ಹಲವು ಕಡೆ ದಾಖಲೆ ಇಲ್ಲದ ಹಣ ಪತ್ತೆಯಾಗುತ್ತಲೇ ಇದೆ. ಈಗ ಬರೋಬ್ಬರಿ 53.58 ಲಕ್ಷ ರೂ. ನಗದು ಹಣ ಮತ್ತು ಸುಮಾರು 200ಗ್ರಾಂ ಬಂಗಾರವನ್ನು ವಶಪಡಿಸಿಕೊಂಡಿದ್ದಾರೆ.

    ಬಸ್ಸಿನಲ್ಲಿ ದಾಖಲೆಯಿಲ್ಲದೆ ಸಾಗಿಸುತ್ತಿದ್ದ 52 ಲಕ್ಷ ರೂಪಾಯಿ ನಗದನ್ನು ಬುಧವಾರ ರಾತ್ರಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳ ನೇತೃತ್ವದ ತಂಡ ಜಪ್ತಿ ಮಾಡಿದ್ದಾರೆ. ತಮಿಳುನಾಡು ಮೂಲದ ಕೆಪಿಎನ್ ಟ್ರಾವೆಲ್ಸ್ ಬಸ್ಸಿನಲ್ಲಿ ಬೆಂಗಳೂರಿನಿಂದ ಚಿಕ್ಕಬಳ್ಳಾಪುರ ಕಡೆಗೆ ಹಣ ಸಾಗಿಸಲಾಗುತಿತ್ತು.

    ದೇವನಹಳ್ಳಿ ಬಳಿಯ ರಾಣಿ ಸರ್ಕಲ್‍ನಲ್ಲಿ ದಾಳಿ ನಡೆಸಿದ ಜಿಲ್ಲಾಧಿಕಾರಿ ತಂಡ ಹಣವನ್ನು ವಶಕ್ಕೆ ಪಡೆದು ಚಾಲಕನನ್ನು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಈ ಘಟನೆ ದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

    ಬಳ್ಳಾರಿ ಜಿಲ್ಲೆಯ ಹಡಗಲಿ ತಾಲೂಕಿನ ಮಹಾಜನದನ ಹಳ್ಳಿ ಚೆಕ್ ಪೋಸ್ಟ್ ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಬಂಗಾರದ ಆಭರಣ ಮತ್ತು ನಗದು ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಸರ್ಕಾರಿ ಬಸ್ ನಲ್ಲಿ ಮಂಜುನಾಥ್ ದಾಖಲೆ ಇಲ್ಲದ ಬಂಗಾರದ ಆಭರಣ ಮತ್ತು ನಗದನ್ನು ಸಾಗಿಸುತ್ತಿದ್ದನು.

    ತಪಾಸಣೆ ವೇಳೆ 1 ಲಕ್ಷ 50 ಸಾವಿರ ನಗದು, ಅಂದಾಜು 250 ರಿಂದ 300 ಗ್ರಾಂ ಬಂಗಾರದ ಆಭರಣಗಳನ್ನು ಗಂಗಾವತಿಯಿಂದ ಶಿಕಾರಿಪುರಕ್ಕೆ ಸಾಗಿಸಲಾಗುತ್ತಿತ್ತು ಎನ್ನಲಾಗಿದೆ. ತಪಾಸಣೆ ವೇಳೆ ಕಿವಿ ಒಲೆ, ಮುತ್ತು, 42 ತಾಳಿ ಪೀಸು, 34 ಮಾಟಿಲ್, 49 ಮೂಗತಿ, 42 ಬಟನ್ ಸೇರಿದಂತೆ ಅಂದಾಜು 15 ಲಕ್ಷ ಮೌಲ್ಯದ ಆಭರಣಗಳನ್ನ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಹಡಗಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • 6 ಜೊತೆ ಬೆಳ್ಳಿ ಕಾಲುಂಗುರ ಕದ್ರು ಕಳ್ಳಿಯರು

    6 ಜೊತೆ ಬೆಳ್ಳಿ ಕಾಲುಂಗುರ ಕದ್ರು ಕಳ್ಳಿಯರು

    ಚಿಕ್ಕಬಳ್ಳಾಪುರ: ನಗರದ ಚಿನ್ನದಂಗಡಿಗಳ ಮೇಲೆ ಕಳ್ಳರ ಕಣ್ಣು ಬಿದ್ದಿದೆ. ನಿನ್ನೆಯಷ್ಟೇ ಚೆಮ್ಮನೂರ್ ಜ್ಯುವೆಲ್ಲರ್ಸ್ ದರೋಡೆ ಮಾಡಿದ್ರೆ ರವಿವಾರ ನಗರದ ತಿರುಮಲ ಜ್ಯುವೆಲ್ಲರ್ಸ್‍ನಲ್ಲಿ ಕಳ್ಳಿಯರು ತಮ್ಮ ಕೈಚಳಕ ತೋರಿದ್ದಾರೆ.

    ಹೌದು ಚಿಕ್ಕಬಳ್ಳಾಪುರ ನಗರದ ಗಂಗಮ್ಮ ಗುಡಿ ಬಜಾರ್‍ನಲ್ಲಿರುವ ತಿರುಮಲ ಜ್ಯುವೆಲ್ಲರ್ಸ್‍ಗೆ ಬಂದ ನಾಲ್ವರು ಕಳ್ಳಿಯರು 6 ಜೊತೆ ಬೆಳ್ಳಿ ಕಾಲುಂಗರಗಳನ್ನ ಕಳ್ಳತನ ಮಾಡಿದ್ದಾರೆ.

    ನಾಲ್ವರು ಮಹಿಳೆಯರಲ್ಲಿ ಇಬ್ಬರು ಮಹಿಳೆಯರು ವ್ಯಾಪಾರದಲ್ಲಿ ತೊಡಗಿಕೊಂಡಿದ್ದಾರೆ. ಉಳಿದ ಇಬ್ಬರು ಮಹಿಳೆಯರು ಕುಳಿತುಕೊಂಡಿದ್ದಾರೆ. ಈ ವೇಳೆ ಮಾಲೀಕನ ಗಮನ ಬೇರೆಡೆ ಸೆಳೆದಿದ್ದರಿಂದ ಇಬ್ಬರು ವ್ಯಾಪಾರದ ತರ ಮಾತು ಆಡುತ್ತಲೇ ಬೆಳ್ಳಿ ಕಾಲು ಚೈನುಗಳನ್ನ ಕೆಳಗೆ ಬಿಸಾಡಿದ್ದು, ಅವುಗಳನ್ನು ಅಂಗಡಿಯಲ್ಲಿ ಕೂತಿದ್ದ ಇಬ್ಬರು ಮಹಿಳೆಯರು ಎತ್ತಿಕೊಂಡು ಕಳವು ಮಾಡಿದ್ದಾರೆ.

    ಇನ್ನೂ ಕಳವು ಮಾಡಿದ ಬೆಳ್ಳಿ ಕಾಲು ಚೈನುಗಳನ್ನ ಎತ್ತಕೊಂಡು ಇಬ್ಬರು ಅಲ್ಲಿಂದ ಕಾಲ್ಕಿತ್ತಿದ್ದಾರೆ. ಆದ್ರೆ ಕಾಲು ಚೈನುಗಳು ಕಡಿಮೆ ಇದ್ದ ಕಾರಣ ಅನುಮಾಮಗೊಂಡ ಮಾಲೀಕ ಅಂಗಡಿಯಲ್ಲೇ ಉಳಿದ ಇಬ್ಬರನ್ನ ಪ್ರಶ್ನೆ ಮಾಡಿದಾಗ ಕಳ್ಳತನ ಮಾಡಿದ ಪ್ರಕರಣ ಬಯಲಾಗಿದೆ.

    ಹೀಗಾಗಿ ಇಬ್ಬರು ಕಳ್ಳಿಯರನ್ನ ಚಿಕ್ಕಬಳ್ಳಾಪುರ ನಗರ ಪೊಲೀಸರ ವಶಕ್ಕೆ ನೀಡಿದ್ದಾರೆ. ಇನ್ನಿಬ್ಬರನ್ನ ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸಿದ್ದು ಮಾಡಿದ ತಪ್ಪನ್ನು ಒಪ್ಪಿಕೊಂಡಿದ್ದಾರೆ.

    ಅಂದ ಹಾಗೆ ಪೊಲೀಸರ ಬಳಿ ತಾವು ಗೌನಿಪಲ್ಲಿ ಮೂಲದವರು ತಮ್ಮ ಹೆಸರು ಶ್ವೇತಾ ಹಾಗೂ ಲಕ್ಷ್ಮೀದೇವಮ್ಮ ಅಂತ ತಿಳಿಸಿದ್ದು, ಪರಾರಿಯಾದ ಮತ್ತೊಬ್ಬರು ನಿರ್ಮಲಮ್ಮ ಹಾಗೂ ಶಾರದ ಅಂತ ತಿಳಿಸಿದ್ದಾರೆ. ಇನ್ನೂ ಈ ಕಳ್ಳಿಯರ ಕೈ ಚಳಕ ಸಿಸಿಟಿವಿಯಲ್ಲಿ ಸೆರೆಯಾಗಿದೆ.

    https://youtu.be/WM-UpC-IpOE