Tag: ಬಂಗಾಳಕೊಲ್ಲಿ

  • ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ- ಆಂಧ್ರ, ಒಡಿಶಾ ಕರಾವಳಿ ಜಿಲ್ಲೆಗಳಲ್ಲಿ ಗುಲಾಬ್ ಚಂಡಮಾರುತ ಭೀತಿ

    ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ- ಆಂಧ್ರ, ಒಡಿಶಾ ಕರಾವಳಿ ಜಿಲ್ಲೆಗಳಲ್ಲಿ ಗುಲಾಬ್ ಚಂಡಮಾರುತ ಭೀತಿ

    ನವದೆಹಲಿ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಆಂಧ್ರ, ಒಡಿಶಾ ಕರಾವಳಿ ಜಿಲ್ಲೆಗಳಲ್ಲಿ ಗುಲಾಬ್ ಚಂಡಮಾರುತ ಭೀತಿ ಎದುರಾಗಿದೆ. ಛತ್ತೀಸ್‍ಗಢ, ತೆಲಂಗಾಣದಲ್ಲೂ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ.

    ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಕಂಡ ಹಿನ್ನೆಲೆ ಗುಲಾಬ್ ಚಂಡಮಾರುತದ ಭೀತಿ ಆವರಿಸಿದ್ದು, ರಾಷ್ಟ್ರೀಯ ವಿಪತ್ತು ನಿರ್ವಹಣಾ ದಳ (NDRF) ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ. ಒಡಿಶಾದ ಹಿರಿಯ ಅಧಿಕಾರಿಗಳು ನೀಡಿರುವ ಮಾಹಿತಿಯ ಪ್ರಕಾರ ರಾಜ್ಯದ 7 ಜಿಲ್ಲೆಗಳಲ್ಲಿ ಹೆಚ್ಚಿನಾ ನಿಗಾ ವಹಿಸಲಾಗುತ್ತಿದ್ದು, ಗಜಪತಿ, ಗಂಜಾಮ್, ರಾಯಗಡ, ಕೋರಾಪುತ್, ಮಲ್ಕನಿಗಿರಿ, ನಬರಂಗಪುರ, ಕಂಧಮಲ್‍ಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಚಂಡಮಾರುತ ಒಡಿಶಾ ಹಾಗೂ ಆಂಧ್ರಪ್ರದೇಶದ ದಕ್ಷಿಣಕ್ಕೆ ಬೀಸಲಿದ್ದು, ಕರಾವಳಿ ಜಿಲ್ಲೆಗಳಲ್ಲೂ ಇದರ ಪ್ರಭಾವ ಬೀರಲಿದೆ. ಇದನ್ನೂ ಓದಿ: ತಾಲಿಬಾನಿ ಬಿಜೆಪಿ ಸರ್ಕಾರದಿಂದ ದೇಶವನ್ನು ಮುನ್ನಡೆಸಲು ಸಾಧ್ಯವಿಲ್ಲ: ಮಮತಾ ಬ್ಯಾನರ್ಜಿ

    ಈ ಬಗ್ಗೆ ಎನ್‌ಡಿಆರ್‌ಎಫ್‌ನ ಪ್ರಧಾನ ನಿರ್ದೇಶಕ ಎಸ್.ಎನ್ ಪ್ರಧಾನ್ ಟ್ವಿಟ್ಟರ್‌ನಲ್ಲಿ ಟ್ವೀಟ್ ಮಾಡಿದ್ದು, ಆಂಧ್ರಪ್ರದೇಶದಲ್ಲಿ 5 ತಂಡ, ಒಡಿಶಾದಲ್ಲಿ 13 ತಂಡಗಳನ್ನು ನಿಯೋಜಿಸಲಾಗುತ್ತದೆ. ಒಡಿಶಾದ ಬಾಲಸೋರ್, ಗಂಜಾಬ್, ಗಜಪತಿ, ರಾಯಗಢ, ಕೊರಾಪುತ್, ನಯಾಗರ್, ಮಲ್ಕಂಗಿರಿ ಜಿಲ್ಲೆಗಳಲ್ಲಿ ಎನ್‌ಡಿಆರ್‌ಎಫ್‌ ಪಡೆಗಳನ್ನು ನಿಯೋಜಿಸಲು ಕ್ರಮ ಕೈಗೊಂಡಿದ್ದು, ಆಂಧ್ರಪ್ರದೇಶದ ವಿಶಾಖಪಟ್ಟಣ, ಶ್ರೀಕಾಕುಳಂ, ಯನಮ್, ವಿಜಿಯನಗರಮ್‍ಗಳಲ್ಲಿ ಎನ್‌ಡಿಆರ್‌ಎಫ್‌ ಪಡೆಗಳನ್ನು ನಿಯೋಜಿಸುವ ಕಾರ್ಯ ನಡೆದಿದೆ. ಒಂದು ಎನ್‌ಡಿಆರ್‌ಎಫ್‌ ತಂಡದಲ್ಲಿ 47 ಸಿಬ್ಬಂದಿಗಳಿರಲಿದ್ದು, ಮರ, ಪೋಲ್ ಗಳನ್ನು ತುಂಡರಿಸುವ ಸಾಧನಗಳು, ಗಾಳಿ ತುಂಬಬಹುದಾದ ದೋಣಿಗಳು, ತುರ್ತು ವೈದ್ಯಕೀಯ ಸೌಲಭ್ಯ, ರಕ್ಷಣಾ ಕಾರ್ಯಾಚರಣೆಗಳಲ್ಲಿ ರಕ್ಷಿಸಿದ ಜನರಿಗೆ ಅಗತ್ಯವಿರುವ ನೆರವು ನೀಡುವ ಸಾಧನಗಳನ್ನು ಹೊಂದಿರಲಿದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಬೆಂಗ್ಳೂರಲ್ಲಿ ನಿಲ್ಲದ ದೊಡ್ಡವರ ಮಕ್ಕಳ ಆಕ್ಸಿಡೆಂಟ್ – Textile ಮಾಲೀಕನ ಮಗನ ಕಾರು ಅಪಘಾತ

     

  • ನಿವಾರ್ ಅಬ್ಬರ- ಕೋಲಾರದಲ್ಲಿ ಭಾರೀ ಮಳೆ, ಹಲವು ಮನೆಗಳ ಗೋಡೆ ಕುಸಿತ

    ನಿವಾರ್ ಅಬ್ಬರ- ಕೋಲಾರದಲ್ಲಿ ಭಾರೀ ಮಳೆ, ಹಲವು ಮನೆಗಳ ಗೋಡೆ ಕುಸಿತ

    – ಗೋಡೆ ಕುಸಿದು ವ್ಯಕ್ತಿ ಕಾಲು ಮುರಿತ

    ಕೋಲಾರ: ಚೆನ್ನೈ ನಿವಾರ್ ಚಂಡ ಮಾರುತದ ಅಬ್ಬರ ಮುಂದುವರೆದಿದ್ದು, ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿದೆ. ಪರಿಣಾಮ ಮನೆಯ ಗೋಡೆ ಕುಸಿದಿದ್ದು, ವ್ಯಕ್ತಿಯ ಕಾಲು ಮುರಿದಿದೆ.

    ಜಿಲ್ಲೆಯ ಮುಳಬಾಗಿಲು ತಾಲೂಕಿನಲ್ಲಿ ಪ್ರತ್ಯೇಕ ಪ್ರಕರಣದಲ್ಲಿ ನಾಲ್ಕು ಮನೆ ಗೋಡೆ ಕುಸಿತವಾಗಿವೆ. ಪೆದ್ದೂರು ಗ್ರಾಮದ ಸೂರ್ಯ ನಾರಾಯಣ ಅವರ ಕಾಲು ಮುರಿದಿದೆ. ಮಲಗಿದ್ದಾಗ ಗೋಡೆ ಕುಸಿದ್ದರಿಂದ ಕಾಲು ಮುರಿದಿದೆ. ಮುಷ್ಟೂರಲ್ಲಿ ನಾಗಮಣಿ, ವಿಜಿಯಮ್ಮ ಅವರ 2 ಮನೆಯ ಗೋಡೆ ಕುಸಿತವಾಗಿದೆ. ಅಬ್ಬೆಹಳ್ಳಿಯ ಭಾಗ್ಯಮ್ಮ ಅವರ ಮನೆಯ ಗೋಡೆ ಸಹ ಕುಸಿತವಾಗಿದೆ.

    ಜಿಲ್ಲೆಯ ಹಲವೆಡೆ ಬೆಳೆಗಳು ನಾಶವಾಗಿದ್ದು, ಮುಳಬಾಗಿಲು ತಾಲೂಕಿನ ಗುಮ್ಮಕಲ್ಲು, ಹೆಡಹಳ್ಳಿ ಬಳಿ ರೈತರ ಬೆಳೆಗಳು ನಾಶವಾಹಿವೆ. ಸ್ಥಳಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಂಗಲಿ ಪೊಲೀಸ್ ಠಾಣಾ ವ್ಯಪ್ತಿಯಲ್ಲಿ ಘಟನೆ ನಡೆದಿದೆ.

    ಬಂಗಾಳಕೊಲ್ಲಿಯಲ್ಲಿ ವಾಯು ಭಾರ ಕುಸಿತ ಹಿನ್ನೆಲೆ ಜಿಲ್ಲೆಯಾದ್ಯಂತ ರಾತ್ರಿಯಿಡಿ ಮಳೆ ಸುರಿದಿದ್ದು, ರಾತ್ರಿ 9 ಗಂಟೆಯಿಂದ ನಿರಂತರವಾಗಿ ಮಳೆ ಸುರಿದಿದೆ. ನಾಳೆ ಸಹ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಕೋಲಾರ ಜಿಲ್ಲಾ ಕೃಷಿ ಹವಾಮಾನ ಘಟಕ ಮುನ್ಸೂಚನೆ ನೀಡಿದೆ. ಜಿಲ್ಲೆಯ ತಾಲೂಕುವಾರು ಮಳೆಯ ಪ್ರಮಾಣ ನೀಡಿ ಎಚ್ಚರಿಕೆ ನೀಡಿದೆ. ವಿಪರೀತ ಮಳೆಗೆ ಜನ ಮನೆಯಿಂದ ಹೊರ ಬರುತ್ತಿಲ್ಲ.

    ತಾಲೂಕುವಾರು ಮಳೆ ಪ್ರಮಾಣ
    ಮುಳಬಾಗಿಲಿನಲ್ಲಿ ಅತೀ ಹೆಚ್ಚು 137.2 ಮಿ.ಮೀ, ಬಂಗಾರಪೇಟೆ 133.4 ಮಿ.ಮಿ., ಕೋಲಾರ 123.1 ಮಿ.ಮೀ, ಶ್ರೀನಿವಾಸಪುರ 119.8 ಮಿ.ಮೀ ಹಾಗೂ ಮಾಲೂರಿನಲ್ಲಿ 95 ಮಿ.ಮೀ ಮಳೆಯಾಗಿದೆ.

    ಭಾರೀ ಮಳೆಯಾಗುತ್ತಿರುವುದರಿಂದ ಎಚ್ಚೆತ್ತ ಜಿಲ್ಲಾಡಳಿತ ಮುನ್ನೆಚ್ಚರಿಕಾ ಕ್ರಮ ವಹಿಸಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಇಂದು ಪತ್ರದ ಮೂಲಕ ಅಧಿಕಾರಿಗಳಿಗೆ ಸೂಚನೆ ನೀಡಿರುವ ಜಿಲ್ಲಾಧಿಕಾರಿ ಸಿ.ಸತ್ಯಭಾಮ, ಮುಂದಿನ 3 ದಿನಗಳ ಕಾಲ ಹೆಚ್ಚು ಮಳೆಯಾಗುವ ಸಾಧ್ಯತೆ ಇದ್ದು, ಸಾರ್ವಜನಿಕ ಆಸ್ತಿ-ಪಾಸ್ತಿ, ಜೀವ ಹಾನಿಗಳಾಗದಂತೆ ತಾಲೂಕು ಮಟ್ಟದ ತಹಶೀಲ್ದಾರ್‍ಗಳಿಗೆ ಸೂಚನೆ ನೀಡಿದ್ದಾರೆ. ಈಗಾಗಲೇ ಜಿಲ್ಲಾಮಟ್ಟದಲ್ಲಿ ಕಂಟ್ರೋಲ್ ರೂಂ ತೆರೆಯಲಾಗಿದ್ದು, ತುರ್ತು ಸಂದರ್ಭದಲ್ಲಿ 1077 ಹಾಗೂ 08152-243506 ಗೆ ಕರೆ ಮಾಡಿ ತಿಳಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 24*7 ಕಂಟ್ರೋಲ್ ರೂಂಗೆ ಚಾಲನೆ ನೀಡಿ, ಪ್ರತಿ ದಿನ ಜಿಲ್ಲಾಡಳಿತಕ್ಕೆ ವರದಿ ಸಲ್ಲಿಸುವಂತೆ ತಹಶಿಲ್ದಾರರಿಗೆ ಡಿಸಿ ಸತ್ಯಭಾಮ ಸೂಚನೆ ನೀಡಿದ್ದಾರೆ. ಅಲ್ಲದೆ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿ ಲಭ್ಯವಿದ್ದು, ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.

  • ರಾಜ್ಯಕ್ಕೆ ಚಂಡಮಾರುತ ಬಿಸಿ: ಏಪ್ರಿಲ್ 28ರ ನಂತರ ಭಾರೀ ಮಳೆ ಸಾಧ್ಯತೆ

    ರಾಜ್ಯಕ್ಕೆ ಚಂಡಮಾರುತ ಬಿಸಿ: ಏಪ್ರಿಲ್ 28ರ ನಂತರ ಭಾರೀ ಮಳೆ ಸಾಧ್ಯತೆ

    ಬೆಂಗಳೂರು: ರಾಜ್ಯಕ್ಕೆ ಚಂಡಮಾರುತದ ಬಿಸಿ ತಟ್ಟಲಿದ್ದು, ಏಪ್ರಿಲ್ 28ರ ನಂತರ ಹಳೆ ಮೈಸೂರು ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

    ಮೈಸೂರು, ಮಂಡ್ಯ, ಚಾಮರಾಜನಗರ, ಕೊಡಗು, ಹಾಸನದಲ್ಲಿ ಚಂಡಮಾರುತ ಪರಿಣಾಮ ಬಿರುಗಾಳಿ ಸಹಿತ ಭಾರೀ ಮಳೆಯಾಗಲಿದೆ. ಇತ್ತ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ಇದರಿಂದಾಗಿ ಮುಂದಿನ ಮೂರು ದಿನಗಳ ಕಾಲ ರಾಜ್ಯದಲ್ಲಿ ಎಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿಗಳಿಗೆ ರಾಜ್ಯ ಪ್ರಾಕೃತಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಡಾ.ಜಿ.ಎನ್.ಶ್ರೀನಿವಾಸರೆಡ್ಡಿ ಅವರು ತಿಳಿಸಿದ್ದಾರೆ.

    ಬಂಗಾಳಕೊಲ್ಲಿ (ಶ್ರೀಲಂಕಾ ಹಾಗೂ ತಮಿಳುನಾಡಿನ ಆಗ್ನೇಯ ಭಾಗದಲ್ಲಿ) ವಾಯುಭಾರ ಕುಸಿತ ಉಂಟಾಗಿದ್ದು, ಇನ್ನೆರಡು ದಿನಗಳೊಳಗೆ ಚಂಡಮಾರುತವಾಗಿ ಪರಿವರ್ತನೆಯಾಗುವ ಸಾಧ್ಯತೆಗಳಿವೆ. ಒಂದು ವೇಳೆ ರಾಜ್ಯದ ಚಂಡಮಾರುತದ ನೇರ ಪರಿಣಾಮ ಬೀರದಿದ್ದರೂ ಏಪ್ರಿಲ್ 28ರಿಂದ ಮೇ 2ರ ವರೆಗೆ ರಾಜ್ಯದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಎಂದು ಹೇಳಿದ್ದಾರೆ.

    ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ನಿರೀಕ್ಷಿತ ಚಂಡಮಾರುತಕ್ಕೆ ‘ಫನಿ’ ಎಂದು ಹೆಸರಿಡಲಾಗಿದೆ. ಇದು ತಮಿಳುನಾಡಿದ ದಕ್ಷಿಣ ಭಾಗಕ್ಕೆ ಬಂದು ತಲುಪುತ್ತದೆ ಎನ್ನುವ ನಿರೀಕ್ಷೆ ಇತ್ತು. ಆದರೆ ದಿಕ್ಕು ಬದಲಾಯಿಸಿ, ಪೂರ್ವದ ಕಡೆಗೆ ಆಗುತ್ತಿದೆ. ಇದರ ನಿರ್ಧಿಷ್ಟ ದಿಕ್ಕು ಮುಂದಿನ ಎರಡು ದಿನಗಳಲ್ಲಿ ತಿಳಿಯಲಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

    ಚಂಡಮಾರುತದ ಪರಿಣಾಮ ರಾಜ್ಯದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮೋಡ ಕವಿದ ವಾತಾವರಣ ಕಂಡುಬರಲಿದೆ ಎಂದು ಶ್ರೀನಿವಾಸ ರೆಡ್ಡಿ ಮಾಹಿತಿ ನೀಡಿದ್ದಾರೆ.

  • ಎರಡು ದಿನ ಸಿಲಿಕಾನ್ ಸಿಟಿ ಇರಲಿದೆ ಕೂಲ್ ಕೂಲ್

    ಎರಡು ದಿನ ಸಿಲಿಕಾನ್ ಸಿಟಿ ಇರಲಿದೆ ಕೂಲ್ ಕೂಲ್

    ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಕಾಣಿಸಿಕೊಂಡ ಸೈಕ್ಲೋನ್ ನಿಂದಾಗಿ ಇನ್ನೂ ಎರಡು ದಿನಗಳ ಕಾಲ ಸಿಲಿಕಾನ್ ಸಿಟಿ ಕೂಲ್ ಕೂಲ್ ಆಗಿರುತ್ತದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಇಲಾಖೆಯ ನಿರ್ದೇಶಕ ಶ್ರೀನಿವಾಸ್ ತಿಳಿಸಿದ್ದಾರೆ.

    ಈ ಕುರಿತು ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ ಅವರು, ಬಂಗಾಳಕೊಲ್ಲಿಯಲ್ಲಿ ಪೆಥೈ ಎಂಬ ಸೈಕ್ಲೋನ್ ಕಾಣಿಸಿಕೊಂಡಿದೆ. ಇದರಿಂದಾಗಿ ಬೆಂಗಳೂರಿನಲ್ಲಿ ಎರಡು ದಿನಗಳ ಕಾಲ ಮೋಡ ಕವಿದ ವಾತಾವರಣ ಇರಲಿದ್ದು, ತಂಪು ಹವಾಮಾನ ನಿರ್ಮಾಣವಾಗಲಿದೆ. ಸಿಲಿಕಾನ್ ಸಿಟಿಯಲ್ಲಿ ಅಷ್ಟೇ ಅಲ್ಲದೆ ಮೈಸೂರು, ಮಂಡ್ಯ, ರಾಮನಗರದಲ್ಲಿ ಮೋಡ ಕವಿದ ವಾತಾವರಣವಿರಲಿದೆ ಎಂದು ಮಾಹಿತಿ ನೀಡಿದ್ದಾರೆ.

    ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು, ಇದರ ಪರಿಣಾಮ ಪೆಥೈ ಸೈಕ್ಲೋನ್ ಉಂಟಾಗಿದೆ. ಪೆಥೈ ನಿಂದಾಗಿ ಪುದುಚೆರಿ, ಆಂಧ್ರ ಪ್ರದೇಶ ಮತ್ತು ತಮಿಳುನಾಡಿನ ಕರಾವಳಿ ಪ್ರದೇಶದಲ್ಲಿ ಭಾರೀ ಬಿರುಗಾಳಿ ಸಹಿತ ಮಳೆಯಾಗುವ ಸಂಭವವಿದೆ. ಈ ನಿಟ್ಟಿನಲ್ಲಿ ಕರಾವಳಿ ಪ್ರದೇಶದ ಜನರನ್ನು ಅಲ್ಲಿನ ಸ್ಥಳೀಯ ಸರ್ಕಾರವು ಸುರಕ್ಷಿತ ಪ್ರದೇಶಗಳಿಗೆ ಕಳುಹಿಸಿದೆ. ಈ ಮೂರು ರಾಜ್ಯಗಳ ಕರಾವಳಿ ಪ್ರದೇಶಗಳಲ್ಲಿ ಗಂಟೆಗೆ 45-65 ಕಿ.ಮೀ. ವೇಗದಲ್ಲಿ ಬಿರುಗಾಳಿ ಬೀಸುತ್ತಿದೆ. ಈ ವೇಗ ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com

  • ನಾಳೆಯಿಂದ ರಾಜ್ಯದಲ್ಲಿ ಗಾಳಿ, ಮಳೆ- ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

    ನಾಳೆಯಿಂದ ರಾಜ್ಯದಲ್ಲಿ ಗಾಳಿ, ಮಳೆ- ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

    ಬೆಂಗಳೂರು: ರಾಜ್ಯದಲ್ಲಿ ಮತ್ತೆ ಮಳೆರಾಯನ ಆರ್ಭಟ ಶುರುವಾಗಲಿದ್ದು, ನಾಳೆಯಿಂದ 5 ದಿನಗಳ ಕಾಲ ರಾಜ್ಯದಲ್ಲಿ ಮಳೆಯಾಗುವ ಸಾಧ್ಯತೆಯಿದೆ.

    ಬಂಗಾಳಕೊಲ್ಲಿ ಹಾಗೂ ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆ ರಾಜ್ಯದ ದಕ್ಷಿಣ ಒಳನಾಡು ಭಾಗದಲ್ಲಿ ಅಧಿಕ ಮಳೆಯಾಗಲಿದೆ. ಮಲೆನಾಡು ಹಾಗೂ ಕರಾವಳಿ ಸೇರಿದಂತೆ ಬೆಂಗಳೂರು ಭಾಗದಲ್ಲೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

    ಕರ್ನಾಟಕ ಸೇರಿ ಕೇರಳ, ತಮಿಳುನಾಡು, ಲಕ್ಷದ್ವೀಪದಲ್ಲಿ ಗಾಳಿ ಮಳೆಯಾಗಲಿದ್ದು, ಮೀನುಗಾರರು ಸಮುದ್ರಕ್ಕೆ ತೆರಳದಂತೆ ಎಚ್ಚರಿಕೆ ನೀಡಲಾಗಿದೆ. ಆಳ ಸಮುದ್ರಕ್ಕೆ ತೆರಳಿರುವ ಮೀನುಗಾರರನ್ನು ಕೂಡಲೇ ಕರೆಸುವಂತೆ ಕೇಂದ್ರ ಹವಾಮಾನ ಇಲಾಖೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾಡಳಿತಕ್ಕೆ ಸೂಚಿಸಿದೆ.

    ಅ.5ರಿಂದ ಎರಡು ದಿನಗಳ ಕಾಲ ಕರಾವಳಿ ಬಹುತೇಕ ಕಡೆ, ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಅ.8ರಂದು ಚಾಮರಾಜನಗರ, ಮಂಡ್ಯ, ಬೆಂಗಳೂರು ನಗರ, ಗ್ರಾಮಾಂತರ ಜಿಲ್ಲೆಗಳಲ್ಲಿ ಮಳೆ ಸುರಿಯುವ ಸಾಧ್ಯತೆಯಿದೆ.

    ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ ಹಾಗೂ ಕೋಲಾರ ಜಿಲ್ಲೆಗಳಲ್ಲಿ ಸಂಜೆ ಮಳೆಯಾಗುತ್ತಿದ್ದು, ಮುಂದಿನ ಎರಡು ದಿನಗಳ ಕಾಲ ಉತ್ತರ ಒಳನಾಡಿನ ವಿವಿಧೆಡೆ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

  • ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಮತ್ತೆ ಮೂರು ದಿನ ಮಳೆ

    ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಮತ್ತೆ ಮೂರು ದಿನ ಮಳೆ

    ಬೆಂಗಳೂರು: ಮಹಾಮಳೆಗೆ ಪ್ರವಾಹ ಪರಿಸ್ಥಿತಿ ಎದುರಿಸಿ ಸಂತ್ರಸ್ತರಗಿರುವ ಕೊಡಗು ಮತ್ತು ಕರಾವಳಿ ಭಾಗದಲ್ಲಿ ಮತ್ತೆ ಮಳೆ ಸುರಿಯಲಿದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಇಲಾಖೆ ಮಾಹಿತಿ ನೀಡಿದೆ.

    ಈ ಕುರಿತು ಪಬ್ಲಿಕ್ ಟಿವಿಗೆ ಮಾಹಿತಿ ನೀಡಿರುವ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ನಿರ್ದೇಶಕರಾದ ಶ್ರೀನಿವಾಸ ರೆಡ್ಡಿ, ಬಂಗಾಳಕೊಲ್ಲಿಯ ಒಡಿಶಾ ಭಾಗದಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಶನಿವಾರದಿಂದ ಮೂರು ದಿನಗಳ ಕಾಲ ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ಭಾಗದಲ್ಲಿ ಸುಮಾರು 30 ರಿಂದ 35 ಮೀ.ಮೀ ವರೆಗೂ ಮಳೆಯಾಲಿದೆ ಎಂದು ತಿಳಿಸಿದ್ದಾರೆ.

    ಕಳೆದ 7 ದಿನಗಳ ಮಳೆ ಪ್ರಮಾಣ ಗಮನಿಸಿದರೆ ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಕ್ರಮೇಣ ಮಳೆಯ ಪ್ರಮಾಣ ಕಡಿಮೆಯಾಗಿದೆ. ಮುಂದಿನ 24 ಗಂಟೆಯಲ್ಲಿ ಬಂಗಾಳಕೊಲ್ಲಿ ಒಡಿಶಾ ಭಾಗದಲ್ಲಿ ವಾಯುಭಾರ ಕುಸಿತ ಆಗುವ ಸಾಧ್ಯತೆ ಇದೆ. ಒಂದೊಮ್ಮೆ ವಾಯುಭಾರ ಕುಸಿತವಾದರೆ ಮೋಡಗಳು ಮತ್ತೆ ಘಟ್ಟಪ್ರದೇಶದ ಕಡೆ ಚಲಿಸುವ ಸಾಧ್ಯತೆಯಿದೆ ಎಂದರು.

    ಕಳೆದ ಮೂರು ದಿನಗಳಿಂದ ಮಲೆನಾಡು ಮತ್ತು ಕರಾವಳಿ ಪ್ರದೇಶದಲ್ಲಿ ಅಲ್ಪ ಪ್ರಮಾಣದಲ್ಲಿ ಬಿಡುವು ನೀಡಿತ್ತು. ಇದರಿಂದ ಪ್ರವಾಹದಲ್ಲಿ ಸಿಲುಕಿರುವ ಸಂತ್ರಸ್ತರ ಹಾಗೂ ಭೂ ಕುಸಿತದಿಂದ ನಾಪತ್ತೆಯಾದ ಜನರ ಹುಡುಕಾಟ ಕಾರ್ಯಾಚರಣೆ ಕೂಡ ಕೈಗೊಳ್ಳಲಾಗಿತ್ತು. ಮೂರು ದಿನಗಳ ಕಾಲ ಬಿಡುವು ನೀಡಿದ್ದ ಮಳೆ ಮತ್ತೆ ಮುಂದುವರಿದರೆ ರಕ್ಷಣಾ ಕಾರ್ಯಕ್ಕೆ ಅಡ್ಡಿಯಾಗುವ ಅತಂಕ ಇದ್ದು, ಮತ್ತಷ್ಟು ಭೂ ಕುಸಿತ ಸಂಭವಿಸುವ ಭಯವೂ ಜನರನ್ನು ಕಾಡುತ್ತಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv