Tag: ಬಂಡವಾಳ ಹೂಡಿಕೆ

  • ರಾಜ್ಯದಲ್ಲಿ 27,000 ಕೋಟಿ ಹೂಡಿಕೆಗೆ ಅಸ್ತು – 13 ಯೋಜನೆಗಳಿಂದ 8,000 ಉದ್ಯೋಗ ಸೃಷ್ಟಿ

    ರಾಜ್ಯದಲ್ಲಿ 27,000 ಕೋಟಿ ಹೂಡಿಕೆಗೆ ಅಸ್ತು – 13 ಯೋಜನೆಗಳಿಂದ 8,000 ಉದ್ಯೋಗ ಸೃಷ್ಟಿ

    ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ನೇತೃತ್ವದಲ್ಲಿಂದು ನಡೆದ ಸಭೆಯಲ್ಲಿ ರಾಜ್ಯದಲ್ಲಿ 13 ಕಂಪನಿಗಳಿಂದ 27,000 ಕೋಟಿ ರೂ. ಹೂಡಿಕೆ ಮಾಡಲು ಒಪ್ಪಿಗೆ ಸೂಚಿಸಲಾಯಿತು.

    ಸಿದ್ದರಾಮಯ್ಯ ವಿಧಾನಸೌಧದಲ್ಲಿಂದು ನಡೆದ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ ಸಭೆಯಲ್ಲಿ ರಾಜ್ಯದಲ್ಲಿ 13 ಕಂಪನಿಗಳಿಂದ 27 ಸಾವಿರ ಕೋಟಿ ಹೂಡಿಕೆಗೆ (Investment Proposals) ಒಪ್ಪಿಗೆ ನೀಡಲಾಗಿದೆ. ಅದರ ಅನ್ವಯ 11 ಹೊಸ ಯೋಜನೆಗಳು, 8 ಸಾವಿರಕ್ಕೂ ಹೆಚ್ಚು ಉದ್ಯೋಗ ಸೃಷ್ಟಿಯಾಗಲಿದೆ ಎಂದು ಅಂದಾಜಿಸಲಾಗಿದೆ. 11 ಹೊಸ ಕೈಗಾರಿಕಾ ಯೋಜನೆಗಳು ಮತ್ತು 2 ಹೆಚ್ಚುವರಿ ಹೂಡಿಕೆ ಪ್ರಸ್ತಾವನೆಗಳು ಸೇರಿವೆ ಒಟ್ಟು 13 ಯೋಜನೆಗಳಿಂದ 8,704 ನೇರ ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದು ಸಚಿವ ಎಂ.ಬಿ ಪಾಟೀಲ್‌ (MB Patil) ಎಕ್ಸ್‌ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

    11 ಹೊಸ ಹೂಡಿಕೆ ಯೋಜನೆಗಳ ಪೈಕಿ ತೇಜಸ್ ನೆಟ್ವರ್ಕ್ಸ್ 542.19 ಕೋಟಿ ರೂ., ವಾಯು ಅಸೆಟ್ಸ್ 1,251 ಕೋಟಿ ರೂ., ಜಿಂದಾಲ್ ಸ್ಟೀಲ್ಸ್ 1,300.57 ಕೋಟಿ ರೂ., ಜಿಂದಾಲ್ ಎಲೆಕ್ಟ್ರಿಕಲ್ ಸ್ಟೀಲ್ 7,102 ಕೋಟಿ ರೂ., ಗ್ರಾಸಿಂ ಇಂಡಸ್ಟ್ರೀಸ್ 1,386 ಕೋಟಿ ರೂ., ಎಸ್ಎಫ್ಎಕ್ಸ್ ಇಂಡಿಯಾ 9,298 ಕೋಟಿ ರೂ., ಸ್ನೀಡರ್ ಎಲೆಕ್ಟ್ರಿಕ್ ಐಟಿ ಬಿಝಿನೆಸ್, ಎಚ್ಎಸ್ಎಸ್ ಟೆಕ್ಸ್ಟೈಲ್ಸ್ 740 ಕೋಟಿ ರೂ., ಸ್ನೈಡರ್ ಎಲೆಕ್ಟ್ರಿಕ್ ಬಿಸಿನೆಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ 1,520.75 ಕೋಟಿ ರೂ., ಕ್ಯೂಪಿಐಎಐ ಇಂಡಿಯಾ 1,136 ಕೋಟಿ ರೂ., ಟೊಯೋಟಾ ಇಂಡಸ್ಟ್ರೀಸ್ ಎಂಜಿನ್ ಇಂಡಿಯಾ ಲಿಮಿಟೆಡ್ 1,330 ಕೋಟಿ ರೂ. ಮತ್ತು ರಿಲಯನ್ಸ್ ಕನ್ಸೂಮರ್ ಪ್ರಾಡಕ್ಟ್ಸ್ 1,622 ಕೋಟಿ ರೂ., ಹೂಡಿಕೆ ಮಾಡಲಿವೆ. ಮಿಕ್ಕಂತೆ, ಎಂಬೆಸಿ ಇಂಡಸ್ಟ್ರಿಯಲ್ ಪಾರ್ಕ್ ಮತ್ತು ಬಾಲಾಜಿ ವೇಫರ್ಸ್ ಕಂಪನಿಗಳು ಕ್ರಮವಾಗಿ 80 ಮತ್ತು 298.75 ಕೋಟಿ ರೂ. ಹೆಚ್ಚುವರಿ ಬಂಡವಾಳ ಹೂಡಿಕೆ ಮಾಡಲಿವೆ.

  • ಪೊಲೀಸರು ಪದಕ ಪಡೆದಿರುವುದರ ಹಿಂದೆ ಶ್ರಮ, ಪ್ರಾಮಾಣಿಕತೆ, ಸಮಾಜದ ಸೇವೆ ಇದೆ: ಡಾ.ಜಿ ಪರಮೇಶ್ವರ್

    ಪೊಲೀಸರು ಪದಕ ಪಡೆದಿರುವುದರ ಹಿಂದೆ ಶ್ರಮ, ಪ್ರಾಮಾಣಿಕತೆ, ಸಮಾಜದ ಸೇವೆ ಇದೆ: ಡಾ.ಜಿ ಪರಮೇಶ್ವರ್

    ಬೆಂಗಳೂರು: ರಾಜ್ಯವನ್ನು ಶಾಂತಿಯಿಂದ ಇಡುವುದರಲ್ಲಿ ಪೊಲೀಸ್ ಇಲಾಖೆಯು (Police Department) ಎಲ್ಲ ರೀತಿಯ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ವಿಶೇಷವಾಗಿ ಜನಸಮುದಾಯದ ನಿರೀಕ್ಷೆಯಲ್ಲಿ ತನ್ನ ಪ್ರಾಮಾಣಿಕ ಪ್ರಯತ್ನವನ್ನು ಮಾಡಿದೆ ಎಂದು ಗೃಹ ಸಚಿವ ಡಾ.‌ ಜಿ.ಪರಮೇಶ್ವರ್‌ (G Parameshwara) ಅವರು ಹೇಳಿದರು.

    ರಾಜಭವನದ ಗಾಜಿನ ಮನೆಯಲ್ಲಿ ನಡೆದ ಕರ್ನಾಟಕ ರಾಜ್ಯ ಗೃಹ ಇಲಾಖೆಯಲ್ಲಿ (Home Department) ವಿಶಿಷ್ಟ ಹಾಗೂ ಅಗ್ರಗಣ್ಯ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಮಾನ್ಯ ಗೌರವಾನ್ವಿತ ರಾಜ್ಯಪಾಲ ರವರಿಂದ ʻರಾಷ್ಟ್ರಪತಿಗಳ ಪೊಲೀಸ್ ಪದಕ ಪ್ರದಾನʼ ಹಾಗೂ ʻಕೇಂದ್ರ ಗೃಹ ಮಂತ್ರಿಗಳ ಪದಕ ಪ್ರದಾನʼ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಇದನ್ನೂ ಓದಿ: ಪೊಲೀಸರ ಸಾಮಾಜಿಕ ಬದ್ದತೆಯಿಂದ ಸಮಾಜದಲ್ಲಿ ಶಾಂತಿ ನೆಲೆಸಲು ಸಾಧ್ಯ – ಸಿದ್ದರಾಮಯ್ಯ

    ಪ್ರಶಸ್ತಿ ಎಂಬುದು‌ ಬರೀ ಪದಕವಲ್ಲ. ಅದರ ಹಿಂದೆ ಶ್ರಮ, ಪ್ರಾಮಾಣಿಕತೆ, ಸಮಾಜದ ಸೇವೆ ಮತ್ತು ಮುಂದಿನ ಪೀಳಿಗೆಗೆ ಆದರ್ಶ ಇದೆ. ಕರ್ನಾಟಕ ಪೊಲೀಸ್ ಇಡೀ ರಾಷ್ಟ್ರದಲ್ಲಿ ಪ್ರಖ್ಯಾತಿಯನ್ನು ಪಡೆದಿದೆ. ಪೊಲೀಸ್ ಇಲಾಖೆಯನ್ನು ನಡೆಸುವುದಕ್ಕೆ ನನಗೆ ಬಹಳ ಹೆಮ್ಮೆಯಿದೆ. ಪೊಲೀಸ್ ಕಾನ್‌ಸ್ಟೇಬಲ್‌ನಿಂದ ಅನುಯಾಯಿಗು ಕೂಡ ಪ್ರಶಸ್ತಿ ಸಿಕ್ಕಿದೆ. ಅನುಯಾಯಿಯಿಂದ ಡಿಜಿಪಿವರೆಗೆ ನಮ್ಮ ಪೊಲೀಸ್ ಇಲಾಖೆ ರಾಜ್ಯವನ್ನು ಶಾಂತಿಯಿಂದ ಇಡುವುದರಲ್ಲಿ ಎಲ್ಲ ರೀತಿಯ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ವಿಶೇಷವಾಗಿ ಜನಸಮುದಾಯದ ನಿರೀಕ್ಷೆಯಲ್ಲಿ ತನ್ನ ಪ್ರಾಮಾಣಿಕ ಪ್ರಯತ್ನವನ್ನು ಮಾಡಿದೆ ಎಂದು ಹೇಳಿದರು.

    ರಾಜ್ಯದ ಅಭಿವೃದ್ಧಿಯಾಗಬೇಕಾದರೆ ಸಮಾಜ ಶಾಂತಿಯಿಂದ ಇರಬೇಕಾಗುತ್ತದೆ. ನಾಗರಿಕ ಸಮಾಜ ಶಾಂತಿಯಿಂದ ಇರಬೇಕಾಗುತ್ತದೆ. ಇತ್ತೀಚೆಗೆ ನಾವು ಗಮನಿಸಿದಾಗ, ಗ್ಲೋಬಲ್ ಇನ್‌ವೆಸ್ಟರ್ಸ್ ಮೀಟ್‌ನಲ್ಲಿ 10,500 ಲಕ್ಷ ಕೋಟಿ ರೂ.ಗಿಂತಲೂ ಹೆಚ್ಚು ಬಂಡಾವಾಳ ಹೂಡುತ್ತೇವೆ ಎಂದು ಪ್ರಪಂಚದಾದ್ಯಂತ ನೂರಾರು ಕಂಪನಿಗಳು ಬಂದವು. ಮುಖ್ಯಮಂತ್ರಿಗಳು, ಕೈಗಾರಿಕಾ ಸಚಿವರು ಹಲವು ಒಡಂಬಡಿಕೆಗಳಿಗೆ ಸಹಿ ಹಾಕಿದರು. ಅದಕ್ಕೆ ಮೂಲ ಕಾರಣ, ಯಾವುದೇ ಒಂದು ಕಂಪನಿ ರಾಜ್ಯದಲ್ಲಿ ಅಥವಾ ರಾಷ್ಟ್ರದಲ್ಲಿ ಬಂಡಾವಾಳ ಹೂಡಬೇಕಾದ್ರೆ ಆ ರಾಜ್ಯದ ಸಮಾಜವನ್ನು ನೋಡುತ್ತಾರೆ. ರಾಜಕೀಯ ಇಚ್ಛಾಶಕ್ತಿ, ಆ ಸಮಾಜದಲ್ಲಿ ಶಾಂತಿ ಇದೆಯಾ? ಎಂಬುದನ್ನು ಕಂಪನಿಗಳು ನೋಡುತ್ತವೆ. ಕರ್ನಾಟಕದ‌ ಮಟ್ಟಿಗೆ 10 ಲಕ್ಷ ಕೋಟಿ ರೂ.ಗೂ ಹೆಚ್ಚು ಹೂಡಿಕೆ ಬರುತ್ತದೆ ಅಂದರೆ ಕರ್ನಾಟಕದಲ್ಲಿ ಶಾಂತಿ ಇದೆ. ನೆಮ್ಮದಿ, ತೃಪ್ತಿ ಇದೆ. ಯಾವುದೇ ತೊಂದರೆಗಳು ಆಗುವುದಿಲ್ಲ ಎಂಬುದನ್ನು ಗಮನಿಸಿಯೇ ಬಂಡಾವಾಳ ಹೂಡುತ್ತಾರೆ.‌ ಇದಕ್ಕೆ ನಮ್ಮ ಪೊಲೀಸ್ ಇಲಾಖೆಯೂ ಕಾರಣ ಎಂದು ಶ್ಲಾಘಿಸಿದರು.

    ಕರ್ನಾಟಕವನ್ನು ಶಾಂತಿ, ನೆಮ್ಮದಿಯಿಂದ ಇಡಲು ಅನುಯಾಯಿ, ಕಾನ್‌ಸ್ಟೇಬಲ್‌ನಿಂದ ಡಿಜಿಪಿವರೆಗೆ ಶ್ರಮ ಹಾಕುತ್ತಿದ್ದಾರೆ. ಪ್ರಾಮಾಣಿಕವಾಗಿ ಶ್ರಮಿಸುತ್ತಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ದೇವರ ವಿರುದ್ಧವೇ ಸೇಡು – 10 ವರ್ಷಗಳಿಂದ ದೇವಸ್ಥಾನದ ಹುಂಡಿ ಹಣ ಕದಿಯುತ್ತಿದ್ದ HIV ಸೋಂಕಿತ ಅರೆಸ್ಟ್

    ರಾಜ್ಯ ಪೊಲೀಸ್ ಆಧುನೀಕರಣಗೊಳ್ಳುತ್ತಿದೆ.‌ ಆಧುನೀಕರಣ ಅನೇಕ ಸವಾಲುಗಳನ್ನು ಎದುರಿಸುತ್ತಿದೆ. ರಾಜ್ಯದಲ್ಲಿ ಮತ್ತು ರಾಷ್ಟ್ರದಲ್ಲಿ ಸೈಬರ್ ಅಪರಾಧಗಳು ಬಹಳ ಹೆಚ್ಚಾಗುತ್ತಿವೆ. ಸೈಬರ್ ಅಪರಾಧಗಳನ್ನು ಮಟ್ಟ ಹಾಕದೇ ಹೋದರೆ ಜನರಿಗೆ ಕೋಟ್ಯಂತರ ರೂ.‌ ನಷ್ಟ ಉಂಟಾಗುತ್ತದೆ. ಅದಕ್ಕಾಗಿಯೇ ದೇಶದಲ್ಲೆ ಮೊದಲ ಬಾರಿಗೆ ರಾಜ್ಯದಲ್ಲಿ ಸೈಬರ್ ಪೊಲೀಸ್ ಠಾಣೆಯನ್ನು ಸ್ಥಾಪಿಸಲಾಯಿತು. ಇಂದು ಸೈಬರ್ ಅಪರಾಧಗಳಿಗಾಗಿಯೇ 45ಕ್ಕೂ ಹೆಚ್ಚು ಪೊಲೀಸ್ ಠಾಣೆಗಳನ್ನು ರಾಜ್ಯದಲ್ಲಿ ಸ್ಥಾಪಿಸಲಾಗಿದೆ. ಯಾವುದೇ ಪೊಲೀಸ್ ಠಾಣೆಯಲ್ಲಿಯೂ ಸೈಬರ್ ಅಪರಾಧಕ್ಕೆ ಸಂಬಂಧಿಸಿದ ದೂರುಗಳನ್ನು ದಾಖಲಿಸಬಹುದು ಎಂಬ ಆದೇಶವನ್ನು ಹೊರಡಿಸಲಾಗಿದೆ ಎಂದು ಹೇಳಿದರು. ಇದನ್ನೂ ಓದಿ:  ಧರ್ಮಸ್ಥಳ ಕೇಸ್‌ಲ್ಲಿ SIT ತನಿಖೆಗೆ ಸಮಯ ನಿಗದಿ ಮಾಡಿಲ್ಲ: ಪರಮೇಶ್ವರ್

    ಇತ್ತೀಚೆಗೆ ಸಮಾಜವನ್ನು ಕೆಡಿಸುವಂಥ ಅನೇಕ ಪ್ರಯತ್ನಗಳು ನಡೆಯುತ್ತಿವೆ. ಧಾರ್ಮಿಕವಾಗಿ, ರಾಜಕೀಯವಾಗಿ ಬೇರೆ ರೀತಿಯಲ್ಲಿ ಸಮಾಜದ ಶಾಂತಿಯನ್ನು ಕೆಡಿಸುವಂತದ್ದನ್ನು ಗಮನಿಸುತ್ತಿದ್ದೇವೆ. ಕರ್ನಾಟಕ ಪೊಲೀಸ್ ಪ್ರತಿಯೊಂದು ಸಂದರ್ಭದಲ್ಲಿ ಯಶಸ್ವಿಯಾಗುತ್ತಿದೆ. ಯಾವುದೇ ತನಿಖೆ, ಅಪರಾಧ, ಕೊಲೆ ಪ್ರಕರಣಗಳನ್ನು ಪತ್ತೆ ಹಚ್ಚುವುದರಲ್ಲಿ ರಾಜ್ಯ ಪೊಲೀಸ್ ಯಶಸ್ವಿಯಾಗಿದೆ. ಇಂತಹ ಸೂಕ್ಷ್ಮ ಇಲಾಖೆ ಸ್ವಾಭಾವಿಕವಾಗಿ ಹಲವು ಟೀಕೆ ಟಿಪ್ಪಣಿಗಳಿಗೆ ಗುರಿಯಾಗುತ್ತದೆ. ಟೀಕೆಗಳನ್ನು ಮೀರಿ ಇಲಾಖೆಯ ಸಿಬ್ಬಂದಿಗಳು ಕೆಲಸ‌ ಮಾಡುತ್ತಿದ್ದಾರೆ.‌ ನಾವು ಯಾವುದೇ ಟೀಕೆಗಳನ್ನು ಲಘುವಾಗಿ ತೆಗೆದುಕೊಳ್ಳುವುದಿಲ್ಲ. ಸಲಹೆಗಳ ರೂಪದಲ್ಲಿ ತೆಗೆದುಕೊಳ್ಳುತ್ತೇವೆ. ಆ ಕೆಲಸಗಳನ್ನು ಮಾಡಲು ಪ್ರಯತ್ನ ಮಾಡುತ್ತೇವೆ ಎಂದರು.

    ಪೊಲೀಸ್ ಕಾನ್‌ಸ್ಟೇಬಲ್‌ಗಳ ಪ್ರಾಮಾಣಿಕ ಪ್ರಯತ್ನಗಳು ಆಗದೇ ಹೋದರೆ ನಾವು ಅಪರಾಧಗಳನ್ನು ಮಟ್ಟಹಾಕಲು ಕಷ್ಟವಾದೀತು. ಅವರು ಮಾಡುವ ಸೇವೆಗಳನ್ನು ನಾವು ಗಮನ ಹರಿಸಬೇಕಾಗುತ್ತದೆ. ಎರಡು ವರ್ಷಗಳ ಹಿಂದೆ ಮೈಸೂರು ರಸ್ತೆಯಲ್ಲಿ ರಸ್ತೆ ದಾಟಲು ಸಾಧ್ಯವಾಗದ ಸ್ಥಿತಿಯಲ್ಲಿದ್ದ ತುಂಬು ಗರ್ಭಿಣಿಗೆ ಹೆರಿಗೆ ಮಾಡಿಸಿ, ಸುರಕ್ಷಿತವಾಗಿ ಮನೆಗೆ ತಲುಪಿಸುವ ಕೆಲಸ‌ ಮಾಡುತ್ತಾನೆ. ಒಬ್ಬ ಕಾನ್‌ಸ್ಟೇಬ‌ಲ್‌ಗೆ ಎಂತಹ‌ ಮನಸ್ಥಿತಿ ಇರುತ್ತದೆ ಎಂದು ಯೋಚಿಸಬೇಕಿದೆ. ಕರ್ತವ್ಯದ ವೇಳೆ ಎದುರಾಗುವ ಸಮಸ್ಯೆಗಳನ್ನು ನಿಭಾಯಿಸುವ ಕೆಲಸಗಳನ್ನು ಇಲಾಖೆಯ ಸಿಬ್ಬಂದಿ ಮಾಡುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

    ಅನೇಕ‌ ಸಂದರ್ಭಗಳಲ್ಲಿ ಕರ್ತವ್ಯದ ವೇಳೆ‌ ಅಧಿಕಾರಿ ಮತ್ತು ಸಿಬ್ಬಂದಿ ಪ್ರಾಣ‌ ಕಳೆದು ಕೊಂಡಿದ್ದಾರೆ. ಅವರಿಗೆ ಸಾಂತ್ವನ ಹೇಳಬಯಸುತ್ತೇನೆ. ಕರ್ತವ್ಯದ ವೇಳೆ ಅಪರಾಧಿ ಯಾವ ರೀತಿ ಪ್ರತಿಕ್ರಿಯಿಸುತ್ತಾನೆ ಎಂಬುದು ಗೊತ್ತಿರುವುದಿಲ್ಲ.‌ ಪೊಲೀಸರು ಪ್ರಾಣ ಪಣಕ್ಕಿಟ್ಟು ಕೆಲಸ ಮಾಡುವ ಸಂದರ್ಭಗಳನ್ನು ನೋಡಿದ್ದೇವೆ.

    ಪೊಲೀಸರ ನಿಸ್ವಾರ್ಥ ಸೇವೆ ಬೇರೆಯವರಿಗೆ ಸ್ಫೋರ್ತಿಯಾಗಲಿ. ಇಂದು ತೆಗೆದುಕೊಂಡಿರುವ ಪದಕಗಳು‌ ಅತ್ಯಂತ ಶ್ಲಾಘನೀಯ. ಮುಂದಿನ ಪೀಳಿಗೆಗೆ ಆದರ್ಶವಾಗಲಿ. ನಿಮ್ಮಂತೆ ಸೇವೆ ಮಾಡಿ ರಾಜ್ಯಕ್ಕೆ ಮತ್ತು ಇಲಾಖೆಗೆ ಕೀರ್ತಿಯನ್ನು ತರಲಿ ಎಂದು ಹೇಳಿದರು.

  • NLCILಗೆ ಹೂಡಿಕೆ ವಿನಾಯಿತಿಗೆ ಕೇಂದ್ರ ಸಂಪುಟ ಅಸ್ತು – 7,000 ಕೋಟಿ ಹೂಡಿಕೆ, ಜಂಟಿ ಉದ್ಯಮಕ್ಕೆ ಅವಕಾಶ

    NLCILಗೆ ಹೂಡಿಕೆ ವಿನಾಯಿತಿಗೆ ಕೇಂದ್ರ ಸಂಪುಟ ಅಸ್ತು – 7,000 ಕೋಟಿ ಹೂಡಿಕೆ, ಜಂಟಿ ಉದ್ಯಮಕ್ಕೆ ಅವಕಾಶ

    – RE ವಲಯದ ಮತ್ತಷ್ಟು ವಿಸ್ತಾರ – ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

    ಹುಬ್ಬಳ್ಳಿ: ಭಾರತದಲ್ಲಿ ನವೀಕರಿಸಬಹುದಾದ ಇಂಧನ ವಲಯವನ್ನು ಮತ್ತಷ್ಟು ವಿಸ್ತರಿಸಲು ಮುಂದಾಗಿರುವ ಕೇಂದ್ರ ಸರ್ಕಾರ (Central Government) ಇದೀಗ NLCILಗೆ ಹೂಡಿಕೆ ವಿನಾಯಿತಿ ನೀಡಿದೆ ಎಂದು ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಹ್ಲಾದ್‌ ಜೋಶಿ (Pralhad Joshi) ಮಾಹಿತಿ ನೀಡಿದ್ದಾರೆ.

    ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಕುರಿತಾದ ಸಂಪುಟ ಸಮಿತಿ ಸಭೆಯಲ್ಲಿ ಹೂಡಿಕೆ ವಿನಾಯಿತಿಗೆ ಅನುಮೋದನೆ ನೀಡಿದ್ದು, ನವರತ್ನ ಕೇಂದ್ರ ಸಾರ್ವಜನಿಕ ವಲಯದ ಉದ್ಯಮಗಳಿಗೆ (CPSE) ಅನ್ವಯವಾಗುವಂತೆ ಸದ್ಯ ಚಾಲ್ತಿಯಲ್ಲಿರುವ ಹೂಡಿಕೆ ಮಾರ್ಗಸೂಚಿಗಳಿಂದ NLC ಇಂಡಿಯಾ ಲಿಮಿಟೆಡ್ (NLCIL)ಗೆ ವಿಶೇಷ ವಿನಾಯಿತಿ ನೀಡಲಾಗಿದೆ.

    ಸಚಿವ ಸಂಪುಟ ಹೂಡಿಕೆ ವಿನಾಯಿತಿಗೆ ಅನುಮೋದನೆ ನೀಡಿದ್ದರಿಂದಾಗಿ NLCIL ಸ್ವಾಮ್ಯದ ಅಂಗಸಂಸ್ಥೆಯಾದ NLC ಇಂಡಿಯಾ ನವೀಕರಿಸಬಹುದಾದ ಲಿಮಿಟೆಡ್ (NIRL)ನಲ್ಲಿ 7,000 ಕೋಟಿ ರೂ. ಹೂಡಿಕೆ ಮಾಡಲು ಮತ್ತು NIRL ನೇರವಾಗಿ ಅಥವಾ ಜಂಟಿ ಉದ್ಯಮಗಳ ರಚನೆ ಮೂಲಕ ವಿವಿಧ ಯೋಜನೆಗಳಲ್ಲಿ ಹೂಡಿಕೆಗೆ ಅವಕಾಶವಾಗಲಿದೆ. ಇದನ್ನೂ ಓದಿ: ಅಕ್ರಮ ಹಣ ವರ್ಗಾವಣೆ ಕೇಸ್‌ – ಮಾಜಿ ಸಿಎಂ ಭೂಪೇಶ್‌ ಬಘೇಲ್‌ ಪುತ್ರ ಬಂಧನ

    2030ರ ವೇಳೆಗೆ 10.11 GW ನವೀಕರಿಸಬಹುದಾದ ಇಂಧನ (RE) ಸಾಮರ್ಥ್ಯ ಅಭಿವೃದ್ಧಿಪಡಿಸುವ ಮತ್ತು 2047ರ ವೇಳೆಗೆ 32 GWಗೆ ವಿಸ್ತರಿಸುವ NLCILನ ಮಹತ್ವಾಕಾಂಕ್ಷೆಯ ಗುರಿಗೆ ಬೆಂಬಲವಾಗಿ ಈ ವಿನಾಯಿತಿ ಘೋಷಿಸಲಾಗಿದೆ. ಇದು ನೇರ ಮತ್ತು ಪರೋಕ್ಷವಾಗಿ ಗಮನಾರ್ಹ ಉದ್ಯೋಗಾವಕಾಶ ಸೃಷ್ಟಿಸುವ ನಿರೀಕ್ಷೆಯಿದೆ. ಸಮುದಾಯ ಮತ್ತು ದೇಶದ ಸಮಗ್ರ ಆರ್ಥಿಕ ಬೆಳವಣಿಗೆ ಸಾಕಾರಗೊಳ್ಳಲಿದೆ.

    ʻಪಂಚಾಮೃತʼ ಯೋಜನೆ ಗುರಿ ಮತ್ತು 2070ರ ವೇಳೆಗೆ ನಿವ್ವಳ ಶೂನ್ಯ ಹೊರಸೂಸುವಿಕೆಯನ್ನು ಸಾಧಿಸುವ ದೀರ್ಘಾವಧಿಯ ಬದ್ಧತೆಗೆ ಅನುಗುಣವಾಗಿ 2030ರ ವೇಳೆಗೆ 500 GW ಪಳೆಯುಳಿಕೆಯೇತರ ಇಂಧನ ಸಾಮರ್ಥ್ಯವನ್ನ ಸಾಧಿಸಲು ಭಾರತ ಪಣ ತೊಟ್ಟಿದ್ದು, ಈ ನಿಟ್ಟಿನಲ್ಲಿ ನವೀಕರಿಸಬಹುದಾದ ಇಂಧನ ವಲಯ ಮಹತ್ತರ ಹೆಜ್ಜೆಯಿರಿಸಿದೆ. ಇದನ್ನೂ ಓದಿ: ಬಿಜೆಪಿ ಬಂಡಾಯ ನಾಯಕರ ವಿರುದ್ಧ ವರಿಷ್ಠರಿಗೆ ದೂರು ನೀಡಿದ ಎಂ.ಪಿ ರೇಣುಕಾಚಾರ್ಯ ನೇತೃತ್ವದ ಟೀಂ

    ಮಹತ್ವದ ವಿದ್ಯುತ್ ಸೌಲಭ್ಯ ಮತ್ತು ನವರತ್ನ CPSE ಆಗಿ, NLCIL ಈ ಪರಿವರ್ತನೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ. ಈ ಹೂಡಿಕೆಯ ಮೂಲಕ, NLCIL ತನ್ನ ನವೀಕರಿಸಬಹುದಾದ ಇಂಧನ ಬಂಡವಾಳವನ್ನು ಗಣನೀಯವಾಗಿ ವಿಸ್ತರಿಸಲು ಮತ್ತು ರಾಷ್ಟ್ರೀಯ ಮತ್ತು ಜಾಗತಿಕ ಹವಾಮಾನ ಕ್ರಿಯೆಯ ಉದ್ದೇಶಗಳಿಗೆ ಅರ್ಥಪೂರ್ಣವಾಗಿ ಕೊಡುಗೆ ನೀಡಲು ಪ್ರಯತ್ನಿಸುತ್ತದೆ.

    ಪ್ರಸ್ತುತದಲ್ಲಿ NLCIL ಒಟ್ಟು 2 GW ಸ್ಥಾಪಿತ ಸಾಮರ್ಥ್ಯದೊಂದಿಗೆ 7 ನವೀಕರಿಸಬಹುದಾದ ಇಂಧನ ಸ್ವತ್ತುಗಳನ್ನು ನಿರ್ವಹಿಸುತ್ತಿದ್ದು, ಈ ಸ್ವತ್ತುಗಳನ್ನು NIRLಗೆ ವರ್ಗಾಯಿಸಲಾಗುತ್ತದೆ. NIRL ಹೊಸ ಯೋಜನೆಗಳಿಗೆ ಸ್ಪರ್ಧಾತ್ಮಕ ಬಿಡ್ಡಿಂಗ್‌ನಲ್ಲಿ ಭಾಗವಹಿಸುವುದು ಸೇರಿದಂತೆ ನವೀಕರಿಸಬಹುದಾದ ಇಂಧನ ವಲಯದಲ್ಲಿ ಹೊಸ ಅವಕಾಶಗಳನ್ನು ಅನ್ವೇಷಿಸುತ್ತದೆ. ಇದನ್ನೂ ಓದಿ: ಮನೆಯಲ್ಲಿ ಕಂತೆ ಕಂತೆ ನೋಟು ಪತ್ತೆ| ಸಂಸತ್‌ನಲ್ಲಿ ಮಹಾಭಿಯೋಗಕ್ಕೆ ತಯಾರಿ – ಸುಪ್ರೀಂ ಮೆಟ್ಟಿಲೇರಿದ ನ್ಯಾ.ಯಶವಂತ್ ವರ್ಮಾ

    ಕೇಂದ್ರ ಸಚಿವ ಸಂಪುಟ NLCILಗೆ ಹೂಡಿಕೆ ವಿನಾಯಿತಿ ನೀಡಿದ್ದರಿಂದಾಗಿ ಭವಿಷ್ಯದಲ್ಲಿ ಪಳೆಯುಳಿಕೆ ಇಂಧನಗಳ ಮೇಲಿನ ಅವಲಂಬನೆ ಕಡಿಮೆ ಆಗಲಿದೆ. ಕಲ್ಲಿದ್ದಲು ಆಮದು ಸಹ ಕಡಿತಗೊಳಿಸುವ ಉದ್ದೇಶವಿದೆ. ದೇಶಾದ್ಯಂತ 24×7 ವಿದ್ಯುತ್ ಪೂರೈಕೆಯ ವಿಶ್ವಾಸಾರ್ಹತೆಗೆ ಪ್ರತೀಕವಾಗಿದ್ದು, ಈ ಮೂಲಕ ಹಸಿರು ಇಂಧನ ವಲಯದಲ್ಲಿ ಭಾರತದ ನಾಯಕತ್ವ ಸ್ಥಾನವನ್ನು ಬಲಪಡಿಸಲಿದೆ ಎಂದಿದ್ದಾರೆ.

  • ಜಾಗತಿಕ ಬಂಡವಾಳ ಹೂಡಿಕೆ ಸಮಾವೇಶ ಕರ್ನಾಟಕದ ಸಾಮರ್ಥ್ಯಕ್ಕೆ ಸಾಕ್ಷಿ: ಡಿಕೆಶಿ

    ಜಾಗತಿಕ ಬಂಡವಾಳ ಹೂಡಿಕೆ ಸಮಾವೇಶ ಕರ್ನಾಟಕದ ಸಾಮರ್ಥ್ಯಕ್ಕೆ ಸಾಕ್ಷಿ: ಡಿಕೆಶಿ

    ಬೆಂಗಳೂರು: ಜಾಗತಿಕ ಬಂಡವಾಳ ಹೂಡಿಕೆ ಸಮಾವೇಶ ಕರ್ನಾಟಕ (Karnataka) ರಾಜ್ಯದ ಸಾಮರ್ಥ್ಯಕ್ಕೆ ಸಾಕ್ಷಿಯಾಗಿದೆ. ಬಂಡವಾಳ ಹೂಡಿಕೆ (Investment) ವಿಚಾರದಲ್ಲಿ ಕರ್ನಾಟಕ ದೇಶದ ಇತರ ನಗರಗಳ ಜತೆ ಸ್ಪರ್ಧೆ ಮಾಡುತ್ತಿಲ್ಲ. ಬದಲಿಗೆ ಜಾಗತಿಕ ಮಟ್ಟದಲ್ಲಿ ಸ್ಪರ್ಧೆ ಮಾಡುತ್ತಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ತಿಳಿಸಿದರು. ಇದನ್ನೂ ಓದಿ : ರಕ್ಷಣಾ ಒಪ್ಪಂದ – ಭಾರತಕ್ಕೆ ಅಮೆರಿಕದ F-35 ಯುದ್ಧ ವಿಮಾನ

    ಅರಮನೆ ಮೈದಾನದಲ್ಲಿ ನಡೆದ ಇನ್ವೆಸ್ಟ್ ಕರ್ನಾಟಕ 2025 (Invest Karnataka 2025) ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, ಕಳೆದ ನಾಲ್ಕು ದಿನಗಳಲ್ಲಿ ಈ ಸಮಾವೇಶದಲ್ಲಿ ಅನೇಕ ಒಪ್ಪಂದಗಳು, ಚರ್ಚೆಗಳು ನಡೆದಿವೆ. ನೀವೆಲ್ಲರೂ ಕರ್ನಾಟಕ ರಾಜ್ಯದಲ್ಲಿ ಸೋಲುವ ಮಾತಿಲ್ಲ. ಹೀಗಾಗಿ ಈ ರಾಜ್ಯದ ಮೇಲೆ ನೀವು ವಿಶ್ವಾಸವಿಡಬಹುದು. ಈ ರಾಜ್ಯಕ್ಕೆ ಬಂದವರು ಬರಿಗೈಯಲ್ಲಿ ಹೋಗುವುದಿಲ್ಲ. ಈ ಸಮಾವೇಶದಲ್ಲಿ ಭಾಗವಹಿಸಿದ ಸಜ್ಜನ್ ಜಿಂದಾಲ್, ಆನಂದ್ ಮಹೀಂದ್ರಾ ಅವರ ಮಾತು ಕೇಳಿದ್ದೀರಿ. ಅವರ ಯೋಶೋಗಾಥೆ ಕೇಳಿದ್ದೀರಿ. ಇವರ ಮಾತು ಕೇಳಿದ ನಂತರ ವಿಶ್ವ ಭಾರತವನ್ನು ಬೆಂಗಳೂರು ಹಾಗೂ ಕರ್ನಾಟಕದ ಮೂಲಕ ನೋಡುತ್ತಿದೆ ಎಂದರು.

    ನಿಮ್ಮ ಕರ್ನಾಟಕ ರಾಜ್ಯ ಹಾಗೂ ದೇಶದ ಭವಿಷ್ಯಕ್ಕಾಗಿ ನೀವು ಕರ್ನಾಟಕದಲ್ಲಿ ಬಂಡವಾಳ ಹೂಡಿಕೆ ಮಾಡಬೇಕು. ಇದು ಹೂಡಿಕೆ ಹಾಗೂ ಉದ್ಯೋಗ ಸೃಷ್ಟಿ ಮಾತ್ರವಲ್ಲ ಬೆಂಗಳೂರಿನ ಹೊರತಾಗಿ ಪ್ರಗತಿ ಸಾಧಿಸಲು ನಾವು ಗುರಿ ಹೊಂದಿದ್ದೇವೆ. ನಮ್ಮ ರಾಜ್ಯದಲ್ಲಿ ಏರೋಸ್ಪೇಸ್ ಕ್ಷೇತ್ರದಲ್ಲಿ ನಮ್ಮ ಎಂಎಸ್‌ಎಂಇಗಳು ದೊಡ್ಡ ಶಕ್ತಿ ತುಂಬುತ್ತಿವೆ. ಬಾಹ್ಯಾಕಾಶ ಕ್ಷೇತ್ರದ ಸಾಧನೆಗೆ ರಾಕೆಟ್‌ಗಳನ್ನು ನಮ್ಮ ಪೀಣ್ಯ ಕೈಗಾರಿಕಾ ಪ್ರದೇಶದಲ್ಲೇ ತಯಾರು ಮಾಡಿದ್ದೆವು ಎಂದು ಹೇಳಿದರು.

    ನೆಹರೂ ಅವರ ಕಾಲದಿಂದ ದೊಡ್ಡ ಕೈಗಾರಿಕೆಗಳು ಆರಂಭವಾಗಿ ದೊಡ್ಡ ಮಟ್ಟಕ್ಕೆ ಬೆಳೆದಿವೆ. ದೇಶದ ದೊಡ್ಡ ಕಂಪನಿಗಳು ನಮ್ಮ ರಾಜ್ಯದ ನೀತಿಗಳು, ಸ್ನೇಹ ಸಂಬಂಧವನ್ನು ಮೆಚ್ಚಿ ನಮ್ಮ ರಾಜ್ಯಕ್ಕೆ ಬಂದಿದ್ದಾರೆ. ನಾವೆಲ್ಲರೂ ಒಟ್ಟಾಗಿ ಸೇರಿ ಭವಿಷ್ಯದತ್ತ ಹೆಜ್ಜೆ ಹಾಕೋಣ. ಈ ಸಮಾವೇಶದ ಮೂಲಕ ರಾಜ್ಯಕ್ಕೆ 10 ಲಕ್ಷ ಕೋಟಿ ರೂ. ಗುರಿ ಹೊಂದಿದೆ. ನಮ್ಮ ನೂತನ ಕೈಗಾರಿಕಾ ನೀತಿಯು ಬೆಂಗಳೂರಿನ ಹೊರತಾಗಿ ರಾಜ್ಯದ ಇತರ ಪ್ರದೇಶಗಳಲ್ಲಿ ಬಂಡವಾಳ ಹೂಡಿಕೆ ಮಾಡುವವರಿಗೆ ಹೆಚ್ಚಿನ ಪ್ರೋತ್ಸಾಹ ನೀಡಲಿದೆ ಅಂತ ಭರವಸೆ ನೀಡಿದರು.

    ಸಚಿವ ಹೆಚ್.ಕೆ.ಪಾಟೀಲ್ ಅವರ ನೇತೃತ್ವದಲ್ಲಿ ನಮ್ಮ ಸರ್ಕಾರ ಪ್ರವಾಸೋದ್ಯಮ ನೀತಿ ಪ್ರಕಟಿಸಿದೆ. ಪ್ರವಾಸೋದ್ಯಮ ಕ್ಷೇತ್ರಗಳಲ್ಲಿ ನವೀನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ನಮ್ಮ ರಾಜ್ಯದಲ್ಲಿ 300 ಕಿ.ಮೀ ಕರಾವಳಿ ಪ್ರದೇಶವಿದ್ದು, ಈ ಭಾಗದಲ್ಲಿ ನಮ್ಮ ಐತಿಹಾಸಿಕ ಸ್ಥಳಗಳನ್ನು ಉಳಿಸಿಕೊಂಡು ಪ್ರವಾಸೋದ್ಯಮ ಅಭಿವೃದ್ಧಿಗೆ ಪ್ರತ್ಯೇಕ ಕಾರ್ಯಕ್ರಮ ರೂಪಿಸಲಾಗುವುದು. ಕರ್ನಾಟಕ ರಾಜ್ಯ ಕೈಗಾರಿಕೆಗಳ ಅಭಿವೃದ್ಧಿಗೆ ಅನೇಕ ಕಾರ್ಯಕ್ರಮ ರೂಪಿಸಿದೆ. ಈ ಸಮಾವೇಶ ನಮ್ಮ ರಾಜ್ಯ ಜಾಗತಿಕ ಮಟ್ಟದಲ್ಲಿ ವ್ಯಾಪಾರ ವ್ಯವಹಾರ ಮಾಡುವ ಸಾಮರ್ಥ್ಯಕ್ಕೆ ಸಾಕ್ಷಿಯಾಗಿದೆ. ನಾವು ದೇಶದ ಇತರೆ ನಗರಗಳ ಜತೆ ಸ್ಪರ್ಧೆ ಮಾಡುತ್ತಿಲ್ಲ. ಬದಲಿಗೆ ಜಾಗತಿಕ ಮಟ್ಟದಲ್ಲಿ ಸ್ಪರ್ಧೆ ಮಾಡುತ್ತಿದ್ದೇವೆ. ಇದು ನಮ್ಮ ಸಾಮರ್ಥ್ಯ ಎಂದು ತಿಳಿಸಿದರು. ಇದನ್ನೂ ಓದಿ :ಬೆಂಗಳೂರು | 5 ಕೋಟಿ ವೆಚ್ಚದಲ್ಲಿ ಬೀದಿನಾಯಿಗಳಿಗೆ ವ್ಯಾಕ್ಸಿನ್‌ಗೆ ಬಿಬಿಎಂಪಿ ಪ್ಲ್ಯಾನ್‌!

    ಈ ದೇಶದಲ್ಲಿ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ಆರಂಭಿಸಿದ್ದೆ ಎಸ್.ಎಂ ಕೃಷ್ಣ ಅವರ ಸರ್ಕಾರ ಕರ್ನಾಟಕದಲ್ಲಿ. ಈ ಸಮಾವೇಶ ಕೇವಲ ಆರಂಭವಷ್ಟೇ, ಇಲ್ಲಿಂದ ನಿಮಗೆ ಅವಕಾಶಗಳು ತೆರೆದುಕೊಳ್ಳಲು ಆರಂಭವಾಗುತ್ತವೆ. ವರ್ಷದ 365 ದಿನಗಳು ಕೂಡ ನಿಮಗಾಗಿ ನಾವು ಬಾಗಿಲು ತೆರೆದಿರುತ್ತೇವೆ. ನೀವು ಯಾವಾಗ ಬಂದರೂ ನಾವು ನಿಮಗೆ ಅಗತ್ಯ ನೆರವು ನೀಡಿ ನಿಮ್ಮ ಪ್ರಗತಿ, ಕರ್ನಾಟಕ ರಾಜ್ಯ ಹಾಗೂ ದೇಶದ ಅಭಿವೃದ್ಧಿಗೆ ಸಹಕಾರ ನೀಡುತ್ತೇವೆ. ಎಂ.ಬಿ.ಪಾಟೀಲ್ ಅವರ ನೇತೃತ್ವದಲ್ಲಿ ಈ ಸಮಾವೇಶ ಯಶಸ್ವಿಯಾಗಿದ್ದು, ಇದಕ್ಕಾಗಿ ಶ್ರಮಿಸಿದ ಎಲ್ಲರಿಗೂ ನಾನು ಅಭಿನಂದನೆ ಎಂದು ಕೃತಜ್ಞತೆ ಸಲ್ಲಿಸಿದರು.

  • ಬಂಡವಾಳ ಹೂಡಿಕೆ ವಿಚಾರದಲ್ಲಿ ಮೋದಿಯಿಂದ ಕೆಲ ಕಂಪನಿಗಳಿಗೆ ಬೆದರಿಕೆ – ಪ್ರಿಯಾಂಕ್‌ ಖರ್ಗೆ ಬಾಂಬ್‌!

    ಬಂಡವಾಳ ಹೂಡಿಕೆ ವಿಚಾರದಲ್ಲಿ ಮೋದಿಯಿಂದ ಕೆಲ ಕಂಪನಿಗಳಿಗೆ ಬೆದರಿಕೆ – ಪ್ರಿಯಾಂಕ್‌ ಖರ್ಗೆ ಬಾಂಬ್‌!

    ಬೆಂಗಳೂರು: ಬಂಡವಾಳ ಹೂಡಿಕೆ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಕೆಲ ಕಂಪನಿಗಳಿಗೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ (Priyank Kharge) ಹೊಸ ಬಾಂಬ್‌ ಸಿಡಿಸಿದ್ದಾರೆ.

    ವಿಕಾಸಸೌಧದಲ್ಲಿ ಕಿಯೋನಿಕ್ಸ್ ಅಧ್ಯಕ್ಷ ಶರತ್ ಬಚ್ಚೇಗೌಡ ಅವರೊಂದಿಗೆ ನಡೆದ ಜಂಟಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಬಂಡವಾಳ ಹೂಡಿಕೆಯ (Capital Investment) ವಿಚಾರದಲ್ಲಿ ಪ್ರಧಾನಿ ಮೋದಿ ಕೆಲ ಕಂಪನಿಗಳಿಗೆ ಬೆದರಿಕೆ ಹಾಕುತ್ತಿದ್ದಾರೆ. ಮೋದಿ ಅವರೇ ಕರೆ ಮಾಡಿ ಗುಜರಾತ್‌ನಲ್ಲಿ (Gujarat) ಹೂಡಿಕೆ ಮಾಡುವಂತೆ ಹೇಳುತ್ತಿದ್ದಾರೆ. ಆ ಕಂಪನಿಗಳು ಯಾವುವು ಅಂತಾ ಗೊತ್ತಿದೆ, ಆದ್ರೆ ಹೆಸರು ಉಲ್ಲೇಖಿಸಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಪವಿತ್ರಾಗೌಡ ಬಂಧನವಾದಾಗ ವಿಚಾರಣೆ ತಂಡದಲ್ಲಿದ್ದ ಮಹಿಳಾ ಪಿಎಸ್‌ಐಗೆ ನೋಟಿಸ್

    ಮುಂದುವರಿದು, ನಮ್ಮ ರಾಜ್ಯದ ಮಾನವ ಸಂಪನ್ಮೂಲಕ್ಕೆ ಬಹಳ ಬೇಡಿಕೆ ಇದೆ. ಬೇರೆ ರಾಜ್ಯಗಳಿಗಿಂತ ನಮ್ಮ ರಾಜ್ಯಕ್ಕೆ ಬೇಡಿಕೆ ಹೆಚ್ಚಿದೆ. ಚೀನಾ, ಯುರೋಪಿಯನ್ ದೇಶಗಳು, ಅಮೆರಿಕ ಕಂಪನಿಗಳ ಜೊತೆಗೆ ನಮ್ಮ ಸ್ಪರ್ಧೆ ಇದೆ. ನವೋದ್ಯಮದಲ್ಲಿ, ನಾವು 9ನೇ ಸ್ಥಾನದಲ್ಲಿದ್ದೇವೆ. ಮುಂದಿನ 4 ವರ್ಷಗಳ ಒಳಗೆ ಟಾಪ್‌-4ನೇ ಸ್ಥಾನಕ್ಕೆ ತಲುಪುವ ಗುರಿ ಹೊಂದಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಭಾರೀ ಮಳೆಗೆ ಸೋರಿದ ರಾಮಮಂದಿರ ಗರ್ಭಗುಡಿ; ನಿರ್ಮಾಣ ಕಾರ್ಯದಲ್ಲಿ ಲೋಪ – ಪ್ರಧಾನ ಅರ್ಚಕ ಆರೋಪ

    ರಾಜ್ಯಕ್ಕೆ ಬಂಡವಾಳ ಹೂಡಿಕೆ ಬಗ್ಗೆ, ವಿವಿಧ ಕಂಪನಿಗಳ ಜೊತೆ ಚರ್ಚೆ ಮಾಡಲಾಗಿದೆ. ಲಂಡನ್ ಮತ್ತು ಅಮೇರಿಕ ದೇಶಗಳ ಪ್ರವಾಸ ಮಾಡಿ ವಾಪಸ್ ಬಂದಿದ್ದೇವೆ. ಉದ್ಯೋಗ ಸೃಷ್ಟಿ, ಬಂಡವಾಳ ಹರಿದುಬರುವ ವಿಚಾರಗಳ ಬಗ್ಗೆ ಚರ್ಚೆ ಮಾಡಲಾಗಿದೆ. ಕೌಶಲ್ಯ ಅಭಿವೃದ್ಧಿ ಬಗ್ಗೆಯೂ ಮಾಡಲಾಗಿದೆ. ಮೈಕ್ರೋ ಸಾಫ್ಟ್ ಜೊತೆ ಎಐ (ಕೃತಕ ಬುದ್ಧಿಮತ್ತೆ) ತಂತ್ರಜ್ಞಾನದ ಅಭಿವೃದ್ಧಿ ಬಗ್ಗೆ ಚರ್ಚೆ ಮಾಡಿದ್ದೇವೆ. ಇದರೊಂದಿಗೆ ಮೆಡಿಕಲ್ ಮತ್ತು ಸೆಮಿಕಂಡಕ್ಟರ್ ತಂತ್ರಜ್ಞಾನವನ್ನು ಕರ್ನಾಟಕಕ್ಕೆ ತರುವ ಬಗ್ಗೆಯೂ ಚರ್ಚೆ ಮಾಡಲಾಗಿದೆ. ಕರ್ನಾಟಕ ಬಂಡವಾಳ ಹೂಡಿಕೆಗೆ ಪೂರಕವಾದ ರಾಜ್ಯ ಎಂದು ಉದ್ದಿಮೆದಾರರೂ ಒಪ್ಪಿದ್ದಾರೆ. ಹಲವಾರು ಕಂಪನಿಗಳ ಜೊತೆ ಒಪ್ಪಂದ ಮಾಡಿಕೊಂಡಿದ್ದೇವೆ ಎಂದು ವಿವರಿಸಿದ್ದಾರೆ.

  • 2025ರಲ್ಲಿ 1 ಬಿಲಿಯನ್ ಟನ್ ಕಲ್ಲಿದ್ದಲು ಉತ್ಪಾದನೆ – ಸಮಾವೇಶದಲ್ಲಿ ಹೂಡಿಕೆದಾರರ ಗಮನ ಸೆಳೆದ ಜೋಶಿ

    2025ರಲ್ಲಿ 1 ಬಿಲಿಯನ್ ಟನ್ ಕಲ್ಲಿದ್ದಲು ಉತ್ಪಾದನೆ – ಸಮಾವೇಶದಲ್ಲಿ ಹೂಡಿಕೆದಾರರ ಗಮನ ಸೆಳೆದ ಜೋಶಿ

    ಬೆಂಗಳೂರು: ಬಂಡವಾಳ ಹೂಡಿಕೆಗೆ ಕಲ್ಲಿದ್ದಲು (Coal)  ಕ್ಷೇತ್ರದಲ್ಲಿ ಉತ್ತಮ ಅವಕಾಶ ಕಲ್ಪಿಸಲಾಗಿದ್ದು, 2025ರ ಸಾಲಿನಲ್ಲಿ 1 ಬಿಲಿಯನ್‌ ಟನ್‌ (ಶತಕೋಟಿ) ನಷ್ಟು ಕಲ್ಲಿದ್ದಲು ಉತ್ಪಾದಿಸಲಾಗುವುದು ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ (Pralhad Joshi) ಹೇಳಿದ್ದಾರೆ.

    ಬೆಂಗಳೂರಿನಲ್ಲಿ (Bengaluru) ಬುಧವಾರ ನಡೆದ ಜಾಗತಿಕ ಬಂಡವಾಳ ಹೂಡಿಕೆದಾರ ಸಮಾವೇಶದಲ್ಲಿ ಮಾತನಾಡಿದ ಅವರು, ಪ್ರಸಕ್ತ ಸಾಲಿನಲ್ಲಿ ಡೊಮೆಸ್ಟಿಕ್ ಕೋಲ್ ಪ್ರೊಡಕ್ಷನ್ (Domestic Coal Production) 900 ದಶಲಕ್ಷ ಟನ್ ತಲುಪಿದೆ. 2025ರ ಸಾಲಿನಲ್ಲಿ ಕೋಲ್ ಇಂಡಿಯಾ (Coal India) 1 ಬಿಲಿಯನ್‌ ಟನ್‌ ನಷ್ಟು ಕಲ್ಲಿದ್ದಲು ಉತ್ಪಾದಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಅಶ್ಲೀಲ ದೃಶ್ಯ ನೋಡಿ ಪ್ರಚೋದನೆ – ಅಪ್ರಾಪ್ತನಿಂದ ಬಾಲಕಿಯ ಮೇಲೆ ರೇಪ್‌, ಕೊಲೆ

    ಕಲ್ಲಿದ್ದಲು ಗಣಿಗಾರಿಕೆ ಕ್ಷೇತ್ರದಲ್ಲಿ ಬಂಡವಾಳ ಹೂಡಿಕೆಗೆ ಉತ್ತಮ ಅವಕಾಶಗಳಿವೆ. ಅದಕ್ಕಾಗಿ ಉದ್ಯಮಸ್ನೇಹಿ ವಾತಾವರಣ ಕಲ್ಪಿಸಲಾಗಿದೆ. ಕಲ್ಲಿದ್ದಲು ಕ್ಷೇತ್ರದಿಂದ ದೇಶದ ಜಿಡಿಪಿಗೆ (GDP) ಶೇ 2.5 ರಷ್ಟು ಕೊಡುಗೆ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ನಿರ್ದೇಶನ ನೀಡಿದ್ದಾರೆ. ಈ ಗುರಿ ಮುಟ್ಟುವತ್ತ ನಾವು ಹೆಜ್ಜೆ ಇಡುತ್ತಿದ್ದೇವೆ. ಗುರುವಾರ (ನವೆಂಬರ್‌ 3) 124 ಕಲ್ಲಿದ್ದಲು ಗಣಿ ಹರಾಜು ಪ್ರಕ್ರಿಯೆ ನಡೆಯಲಿದೆ. ಯಾರು ಬೇಕಾದರು ಪಾಲ್ಗೊಳ್ಳಬಹುದು. ಗಣಿಗಾರಿಕೆಗೆ (Mining) ಬೇಕಾದ 21 ಕ್ಲಿಯರೆನ್ಸ್ ಗಳನ್ನ ಸುಲಲಿತವಾಗಿ ವರ್ಗಾಯಿಸುವ ನಿಯಮಗಳನ್ನೂ ಜಾರಿಗೆ ತರಲಾಗಿದೆ. ಇದರ ಪರಿಣಾಮವಾಗಿ ಕಲ್ಲಿದ್ದಲು ಕ್ಷೇತ್ರದಲ್ಲಿ ಹೆಚ್ಚಿನ ಹೂಡಿಕೆಯಾಗುತ್ತಿದೆ. ಉತ್ಪಾದನೆ ಕೂಡ ಹೆಚ್ಚಿದೆ ಹೆಚ್ಚಾಗಿದೆ ಎಂದು ಶ್ಲಾಘಿಸಿದ್ದಾರೆ. ಇದನ್ನೂ ಓದಿ: ಈಶ್ವರಪ್ಪ ರಾಜಕೀಯ ದಾಹಕ್ಕೆ ಇನ್ನೆಷ್ಟು ಹೆಣ ಬೀಳಬೇಕು?: ಸುಂದರೇಶ್

    ಪ್ರಧಾನಿ ಮೋದಿ ಅವರ 5 ಲಕ್ಷಕೋಟಿ ಡಾಲರ್ ಆರ್ಥಿಕತೆಯ ಗುರಿ ತಲುಪುವಲ್ಲಿ ಕರ್ನಾಟಕ ಕೂಡ ಹೆಚ್ಚಿನ ಕೊಡುಗೆ ನೀಡಲಿದೆ ಎಂದು ಭಾವಿಸಿದ್ದಾರೆ. ಪ್ರಗತಿ ಹೊಂದಿರುವ ರಾಜ್ಯ ಕರ್ನಾಟಕದಲ್ಲೂ ಹೆಚ್ಚಿನ ಹೂಡಿಕೆಗೆ ಹೂಡಿಕೆದಾರರು ಮುಂದೆ ಬರಬೇಕು ಎಂದು ಹೇಳಿದ್ದಾರೆ

    Live Tv
    [brid partner=56869869 player=32851 video=960834 autoplay=true]

  • ಬನ್ನಿ, ಕರ್ನಾಟಕದಲ್ಲಿ ಬಂಡವಾಳ ಹೂಡಿ: ಆಂಧ್ರ, ತೆಲಂಗಾಣ ಉದ್ಯಮಿಗಳಿಗೆ ಸಚಿವ ನಿರಾಣಿ ಕರೆ

    ಬನ್ನಿ, ಕರ್ನಾಟಕದಲ್ಲಿ ಬಂಡವಾಳ ಹೂಡಿ: ಆಂಧ್ರ, ತೆಲಂಗಾಣ ಉದ್ಯಮಿಗಳಿಗೆ ಸಚಿವ ನಿರಾಣಿ ಕರೆ

    – ಹೈದರಾಬಾದ್ ರೋಡ್ ಶೋ ಯಶಸ್ವಿ
    – 5 ಲಕ್ಷ ಕೋಟಿ ರೂ. ಬಂಡವಾಳ ಹೂಡಿಕೆಯ ನಿರೀಕ್ಷೆ

    ಹೈದರಾಬಾದ್: ನವೆಂಬರ್ 2ರಿಂದ 4ರ ವರೆಗೆ ಬೆಂಗಳೂರಿನಲ್ಲಿ (Bengaluru) ನಡೆಯಲಿರುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದ ಭಾಗವಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ್ ಆರ್. ನಿರಾಣಿ (Murugesh Nirani) ಅವರು ಹೈದರಾಬಾದ್‌ನಲ್ಲಿ ಶುಕ್ರವಾರ ನಡೆಸಿದ ರೋಡ್‌ಶೋ (Roadshow) ಯಶಸ್ವಿಯಾಗಿದೆ.

    ಹೈದರಾಬಾದ್‌ನ (Hyderabad) ಖಾಸಗಿ ಹೋಟೆಲ್‌ನಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಮಾತನಾಡಿದ ಸಚಿವ ನಿರಾಣಿ, ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶಕ್ಕೆ ಪೂರ್ವಭಾಗವಾಗಿ ದೆಹಲಿಯಲ್ಲಿ ಚಾಲನೆ ನೀಡಿದ ದೇಶೀಯ ರೋಡ್ ಶೋ ಯಶಸ್ವಿಯಾಗಿದೆ. ಅದೇ ರೀತಿ, ಹೈದರಾಬಾದ್ ರೋಡ್ ಶೋ ವೇಳೆ ಉದ್ಯಮಿಗಳ ಜತೆ ಇಂದು ನಡೆಸಿದ ಮಾತುಕತೆ ಫಲಪ್ರದವಾಗಿದೆ ಎಂದಿದ್ದಾರೆ.

    ರಾಜ್ಯದಲ್ಲಿ ಹೂಡಿಕೆಗೆ ಇರುವ ಅವಕಾಶಗಳು ನಮ್ಮ ಕೈಗಾರಿಕಾ ನೀತಿ ಕುರಿತು ಆಂಧ್ರ (Andhra Pradesh) ಹಾಗೂ ತೆಲಂಗಾಣದ (Telangana) ಉದ್ಯಮಿಗಳಿಗೆ ಮಾಹಿತಿ ನೀಡಲಾಗಿದೆ. ರಾಜ್ಯದಲ್ಲಿ ಬಂಡವಾಳ ಹೂಡಲು ಹಾಗೂ ಉದ್ಯಮ ವಿಸ್ತರಣೆಗೆ ಹಲವು ಕಂಪನಿಗಳ ಮುಖ್ಯಸ್ಥರು ಒಲವು ತೋರಿದ್ದಾರೆ ಎಂದು ಸಚಿವ ನಿರಾಣಿ ಹೇಳಿದರು.

    ಜಾಗತಿ ಹೂಡಿಕೆದಾರರ ಸಮಾವೇಶದ ಅಂತಾರಾಷ್ಟ್ರೀಯ ರೋಡ್‌ಶೋನ ಭಾಗವಾಗಿ ಜಪಾನ್, ದಕ್ಷಿಣ ಕೊರಿಯಾ, ಅಮೆರಿಕ ಹಾಗೂ ಯೂರೋಪ್‌ಗೆ ಭೇಟಿ ನೀಡಲಾಗಿದೆ. ಈ ದೇಶಗಳಿಂದ ದೊಡ್ಡ ಮಟ್ಟದ ವಿದೇಶಿ ಬಂಡವಾಳ ಹರಿದು ಬರುವ ನಿರೀಕ್ಷೆ ಇದೆ. ದೇಶೀಯ ರೋಡ್ ಶೋ ಮುಂಬೈಯಲ್ಲಿ ಮುಕ್ತವಾಗಲಿದೆ ಎಂದು ಅವರು ತಿಳಿಸಿದರು.

    ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ 5,000ಕ್ಕೂ ಹೆಚ್ಚು ಗಣ್ಯರು ಭಾಗವಹಿಸುವ ನಿರೀಕ್ಷೆ ಇದೆ. 5 ಲಕ್ಷ ಕೋಟಿ ರೂ. ಬಂಡವಾಳ ಹೂಡಿಕೆಯಾಗುವ ನಿರೀಕ್ಷೆ ಇದ್ದು, ಇದರಿಂದ 5 ಲಕ್ಷ ಜನರಿಗೆ ಉದ್ಯೋಗ ದೊರೆಯಲಿದೆ. ಜಾಗತಿಕ ಹೂಡಿಕೆದಾರರ ಸಮಾವೇಶ ‘ಬಿಲ್ಡ್ ಫಾರ್ ದಿ ವರ್ಲ್ಡ್’ ಎಂಬ ಪರಿಕಲ್ಪನೆಯಡಿ ಅನಾವರಣಗೊಳ್ಳುತ್ತಿದೆ. ಅತ್ಯುತ್ತಮ ಕೈಗಾರಿಕಾ ಪರಿಸರ ವ್ಯವಸ್ಥೆ ಹೊಂದಿರುವ ಕರ್ನಾಟಕ, ಜಾಗತಿಕ ಹೂಡಿಕೆದಾರರ ನೆಚ್ಚಿನ ತಾಣ ಎಂದರು.

    ನಮ್ಮ ಸರ್ಕಾರದ ಹಲವು ಸುಧಾರಣಾ ಕ್ರಮಗಳ ಪರಿಣಾಮವಾಗಿ ಕರ್ನಾಟಕವು ದೇಶದ ಆಕರ್ಷಕ ಹೂಡಿಕೆ ತಾಣವಾಗಿ ಹೊರಹೊಮ್ಮಿದೆ. 2021ರ ಜುಲೈನಿಂದೀಚೆಗೆ ಬರೋಬ್ಬರಿ 3 ಲಕ್ಷ ಕೋಟಿ ರೂ.ಗೂ ಹೆಚ್ಚು ಹೂಡಿಕೆ ಪ್ರಸ್ತಾವನೆಗಳು ರಾಜ್ಯಕ್ಕೆ ಬಂದಿವೆ. ದೇಶದ ಒಟ್ಟಾರೆ ವಿದೇಶಿ ಹೂಡಿಕೆಯಲ್ಲಿ ರಾಜ್ಯದ ಪಾಲು ಶೇ.38 ರಷ್ಟು ಇದೆ. ಬರೋಬ್ಬರಿ 22 ಶತಕೋಟಿ ಡಾಲರ್ ವಿದೇಶಿ ನೇರ ಹೂಡಿಕೆ ರಾಜ್ಯಕ್ಕೆ ಹರಿದು ಬಂದಿದೆ ಎಂದು ಅವರು ವಿವರಿಸಿದರು. ಇದನ್ನೂ ಓದಿ: ಕರ್ನಾಟಕದಲ್ಲಿ ಹೆಚ್ಚಿನ ಹೂಡಿಕೆಗೆ ಕೋವ್ಯಾಕ್ಸಿನ್ ಉತ್ಪಾದಕ ಭಾರತ್ ಬಯೋಟೆಕ್ ಒಲವು

    ಸುಲಲಿತ ವ್ಯವಹಾರಕ್ಕೆ ಅಫಿಡವಿಟ್ ಬೇಸ್ಡ್ ಕ್ಲಿಯರೆನ್ಸ್ ಯೋಜನೆಯ ಜಾರಿಗೊಳಿಸಿರುವ ಕರ್ನಾಟಕ, ಈಸ್ ಆಫ್ ಡೂಯಿಂಗ್ ಬಿಸಿನೆಸ್‌ಗೆ ಶ್ರೇಯಾಂಕ ಪಟ್ಟಿಯಲ್ಲಿ ‘ಟಾಪ್ ಅಚೀವರ್’ ಆಗಿ ಹೊರಹೊಮ್ಮಿದೆ. ಜೊತೆಗೆ, ಹೂಡಿಕೆದಾರರಿಗೆ ಭೂ ಹಂಚಿಕೆಗೆ ಅನುಕೂಲವಾಗುವಂತೆ ‘ಈಸ್ ಆಫ್ ಲ್ಯಾಂಡ್ ಅಲಾಟ್‌ಮೆಂಟ್’ ಕ್ರಮ ಜಾರಿಗೊಳಿಸಲಾಗಿದೆ ಎಂದರು.

    ಜಾಗತಿಕ ಹೂಡಿಕೆದಾರರ ಸಮಾವೇಶದ ಸಂದರ್ಭದಲ್ಲಿ ಭೂ ಹಂಚಿಕೆಗೆ ಅನುಕೂಲವಾಗುವಂತೆ ರಾಜ್ಯದಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಹೆಚ್ಚುವರಿಯಾಗಿ 50 ಸಾವಿರ ಎಕರೆ ಭೂ ಸ್ವಾಧೀನ ಪಡಿಸಿಕೊಳ್ಳಲಾಗುತ್ತಿದೆ. ಬೆಂಗಳೂರಿನಲ್ಲಿ 20 ಸಾವಿರ ಮತ್ತು ಇತರ ಜಿಲ್ಲೆಗಳಲ್ಲಿ 30 ಸಾವಿರ ಎಕರೆ ಭೂಮಿ ಸ್ವಾಧೀನಕ್ಕೆ ಕ್ರಮ ವಹಿಸಲಾಗಿದೆ ಎಂದು ತಿಳಿಸಿದರು.

    ಸಂಭಾವ್ಯ ಹೂಡಿಕೆದಾರರೊಂದಿಗೆ ಚರ್ಚೆ:
    ಹೈದರಾಬಾದ್ ರೋಡ್‌ಶೋನಲ್ಲಿ ಭಾರತ್ ಬಯೋಟೆಕ್, ವಿಮತ ಲ್ಯಾಬ್ಸ್, ಲೌರಸ್ ಲ್ಯಾಬ್ಸ್, ಪೆಂಟಗನ್ ರಗ್ಗಡ್ ಸಿಸ್ಟಮ್, ವೈಬ್ರೆಂಟ್ ಎನರ್ಜಿ ಸೇರಿದಂತೆ ಹಲವು ಕಂಪನಿಗಳ ಪ್ರತಿನಿಧಿಗಳ ಜತೆ ಮಾತುಕತೆ ನಡೆಸಲಾಗಿದೆ ಎಂದು ನಿರಾಣಿ ತಿಳಿಸಿದರು. ಇದನ್ನೂ ಓದಿ: ಭೂತಾನ್‍ನಿಂದ 17 ಸಾವಿರ ಟನ್ ಅಡಿಕೆ ಆಮದಿಗೆ ಮುಂದಾದ ಕೇಂದ್ರ – ರೈತರಿಂದ ವಿರೋಧ

    ವೈನ್ ಮತ್ತು ಆಹಾರ ಮೇಳ:
    ಈ ಸಮಾವೇಶ ಬಂಡವಾಳ ಹೂಡಿಕೆಗಷ್ಟೇ ಸೀಮಿತವಾಗಿಲ್ಲ. ಕರ್ನಾಟಕದ ಸಾಂಸ್ಕೃತಿಕ ಲೋಕ ಅಲ್ಲಿ ಅನಾವರಣಗೊಳ್ಳಲ್ಲಿದೆ. ವೈನ್ ಮತ್ತು ಆಹಾರ ಮೇಳದಲ್ಲಿ ಕರ್ನಾಟಕದ ವಿಶೇಷ ಖಾದ್ಯಗಳನ್ನು ಸವಿಯಬಹುದು ಎಂದು ಸಚಿವರು ಹೇಳಿದರು.

    ಅಸೋಚಾಮ್ ತೆಲಂಗಾಣ ರಾಜ್ಯ ಅಭಿವೃದ್ಧಿ ಮಂಡಳಿ ಅಧ್ಯಕ್ಷ ರವಿ ಕುಮಾರ್ ರೆಡ್ಡಿ, ಅಸೋಚಾಮ್ ಪ್ರಧಾನ ಕಾರ್ಯದರ್ಶಿ ಪೂಜಾ ಅಹ್ಲುವಾಲಿಯಾ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ, ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ ಡಾ.ಇ.ವಿ ರಮಣರೆಡ್ಡಿ, ಕೈಗಾರಿಕಾಭಿವೃದ್ಧಿ ಆಯುಕ್ತರಾದ ಗುಂಜನ್ ಕೃಷ್ಣ ಹಾಗೂ ಹಿರಿಯ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

    Live Tv
    [brid partner=56869869 player=32851 video=960834 autoplay=true]

  • ದಾವೋಸ್ ವಿಶ್ವ ಆರ್ಥಿಕ ಸಮ್ಮೇಳನಕ್ಕೆ ತೆರೆ: ಐತಿಹಾಸಿಕ 52 ಸಾವಿರ ಕೋಟಿ ಬಂಡವಾಳ ಹೂಡಿಕೆಗೆ ರಾಜ್ಯದ ಜೊತೆ ಒಪ್ಪಂದ

    ದಾವೋಸ್ ವಿಶ್ವ ಆರ್ಥಿಕ ಸಮ್ಮೇಳನಕ್ಕೆ ತೆರೆ: ಐತಿಹಾಸಿಕ 52 ಸಾವಿರ ಕೋಟಿ ಬಂಡವಾಳ ಹೂಡಿಕೆಗೆ ರಾಜ್ಯದ ಜೊತೆ ಒಪ್ಪಂದ

    ಬರ್ನ್: ದಾವೋಸ್‍ನಲ್ಲಿ ನಡೆದ ವಿಶ್ವ ಆರ್ಥಿಕ ಶೃಂಗ ಸಭೆ ಫಲಪ್ರದವಾಗಿದ್ದು, ಕರ್ನಾಟಕ ಬಂಡವಾಳ ಹೂಡಿಕೆ ಆಕರ್ಷಿಸುವಲ್ಲಿ ಯಶಸ್ವಿಯಾಗಿದೆ. ಸಿಎಂ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಪ್ರಥಮ ಬಾರಿಗೆ 2 ಮಹತ್ವದ ಕಂಪನಿಗಳ ಜೊತೆ ಒಟ್ಟು 52 ಸಾವಿರ ಕೋಟಿ ರೂ. ಮೊತ್ತದ ಒಪ್ಪಂದಗಳಿಗೆ ಸಹಿ ಮಾಡಲಾಗಿದೆ.

    ಇದು ಕರ್ನಾಟಕ ರಾಜ್ಯದ ಮೇಲೆ ದೊಡ್ಡ ದೊಡ್ಡ ಕಂಪನಿಗಳು ಇಟ್ಟಿರುವ ನಂಬಿಕೆ ಮತ್ತು ವಿಶ್ವಾಸಕ್ಕೆ ಸಾಕ್ಷಿ. ಇತ್ತೀಚಿನ ದಿನಗಳ ರಾಜ್ಯಕ್ಕೆ ಹರಿದು ಬರುತ್ತಿರುವ ಬಹುದೊಡ್ಡ ಮೊತ್ತದ ಬಂಡವಾಳ ಇದಾಗಿದೆ. ಹಲವಾರು ಕಂಪನಿಗಳು ಬಂಡವಾಳ ಹೂಡಿಕೆಗೆ ಆಸಕ್ತಿ ತೋರಿವೆ. ಮುಂದಿನ ದಿನಗಳಲ್ಲಿ ಇನ್ನೂ ಹಲವಾರು ಕಂಪನಿಗಳು ಹೂಡಿಕೆ ಮಾಡಲಿರುವ ಬಂಡವಾಳದಿಂದ ಸಾವಿರಾರು ನೇರ ಮತ್ತು ಪರೋಕ್ಷ ಉದ್ಯೋಗಗಳು ಸೃಷ್ಠಿ ಆಗಲಿವೆ. ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ ಅವರ ಆಸಕ್ತಿಯಿಂದ ಸರ್ಕಾರ ಬೃಹತ್ ಪ್ರಮಾಣದಲ್ಲಿ ಬಂಡವಾಳ ಆಕರ್ಷಿಸುವಲ್ಲಿ ಯಶಸ್ವಿಯಾಗುತ್ತಿದೆ. ಇದನ್ನೂ ಓದಿ: ಪಿಎಸ್‍ಐ ಪರೀಕ್ಷೆ ಅಕ್ರಮ: ಕಿಂಗ್‍ಪಿನ್ ಆರ್.ಡಿ.ಪಾಟೀಲ್ ಮತ್ತೆ ಸಿಐಡಿ ವಶಕ್ಕೆ! 

    ನವೀಕರಿಸಬಹುದಾದ ಇಂಧನ ವಲಯದಲ್ಲಿ ರೆನ್ಯೂ ಪವರ್ ಕಂಪನಿ 50,000 ಕೋಟಿ ರೂ.ಗಳ ಬಂಡವಾಳ ಹೂಡಲು ಕರ್ನಾಟಕ ಸರ್ಕಾರದ ಜೊತೆ ಒಪ್ಪಂದ ಮಾಡಿಕೊಂಡಿದ್ದು, ಕರ್ನಾಟಕದ ಇಂಧನ ಕ್ಷೇತ್ರದಲ್ಲಿ ಈ ಒಪ್ಪಂದ ಪ್ರಮುಖ ಮೈಲಿಗಲ್ಲಾಗಿದೆ. ಮೆ.ಲುಲು ಗ್ರೂಪ್ ಇಂಟರ್ನ್ಯಾಷನಲ್ ಸಂಸ್ಥೆಯು ರಾಜ್ಯದಲ್ಲಿ ಸುಮಾರು 2000 ಕೋಟಿ ರೂ. ಹೂಡಿಕೆ ಮಾಡುವ ಕುರಿತು ಒಪ್ಪಂದ ಮಾಡಿಕೊಳ್ಳಲಾಯಿತು. ಇವೆರಡೂ ಒಪ್ಪಂದಗಳು ರಾಜ್ಯದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉದ್ಯೋಗ ಸೃಷ್ಟಿಗೆ ಸಹಕಾರಿಯಾಗಲಿದೆ.

    ಕರ್ನಾಟಕದಲ್ಲಿ ಕೈಗಾರಿಕೆ ಹಾಗೂ ಉದ್ಯಮಗಳ ಸ್ಥಾಪನೆಗೆ ಪೂರಕವಾಗಿ ಎರಡು ನೀತಿಗಳನ್ನು ಜಾರಿಗೆ ತರಲಾಗುತ್ತಿದೆ. ಸಂಶೋಧನೆಗೆ ಹೆಚ್ಚು ಪ್ರೋತ್ಸಾಹವನ್ನು ನೀಡುವ ಆರ್ ಎಂಡ್ ಡಿ ಪಾಲಿಸಿ, ಹೆಚ್ಚು ಉದ್ಯೋಗವನ್ನು ಒದಗಿಸುವ ಉದ್ಯಮಗಳಿಗೆ ಹೆಚ್ಚು ಪ್ರೋತ್ಸಾಹಕ ನೀತಿಗಳನ್ನು ಜಾರಿಗೆ ತರಲಾಗಿದೆ. ಈ ಎರಡೂ ನೀತಿಗಳ ಲಾಭಗಳನ್ನು ಕರ್ನಾಟಕದಲ್ಲಿ ಬಂಡವಾಳ ಹೂಡಿಕೆ ಮಾಡುವ ಸಂಸ್ಥೆಗಳು ಪಡೆದುಕೊಳ್ಳಬಹುದಾಗಿದೆ ಎಂದು ತಿಳಿಸಿದರು.

    ಇದೇ ಸಂದರ್ಭದ ನವೆಂಬರ್‍ನಲ್ಲಿ ಬೆಂಗಳೂರಿನಲ್ಲಿ ನಡೆಯುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ಹಾಗೂ ಬೆಂಗಳೂರು ಟೆಕ್ ಸಮ್ಮಿಟ್‍ನಲ್ಲಿ ಪಾಲ್ಗೊಳ್ಳುವಂತೆ ಹೂಡಿಕೆದಾರರಿಗೆ ಆಹ್ವಾನ ನೀಡಲಾಯಿತು.

    ಬಂಡವಾಳ ಹೂಡಿಕೆ ಸಂಸ್ಥೆಯ ವಿವರಗಳು:

    ಮೆ. ಲುಲು ಗ್ರೂಪ್ ಇಂಟರ್ನ್ಯಾಷನಲ್:
    ಲುಲು ಗ್ರೂಪ್ ರಾಜ್ಯದಲ್ಲಿ ಸುಮಾರು ಎರಡು ಸಾವಿರ ಕೋಟಿ ರೂ. ಹೂಡಿಕೆ ಮಾಡಲು ಒಪ್ಪಂದಕ್ಕೆ ಸಹಿ ಹಾಕಿದೆ. 4 ಶಾಪಿಂಗ್ ಮಾಲ್ ಮತ್ತು ಹೈಪರ್ ಮಾರ್ಕೆಟ್ ಹಾಗೂ ರಫ್ತು ಆಧಾರಿತ ಆಹಾರ ಮಳಿಗೆಗಳನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ. ಈ ಮೂಲಕ 10 ಸಾವಿರಕ್ಕೂ ಹೆಚ್ಚು ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ ಇದೆ.

    ರೆನ್ಯೂ ಪವರ್ ಪ್ರೈ.ಲಿ:
    ರೆನ್ಯೂ ಪವರ್ ಪ್ರೈ.ಲಿ. ಕಂಪೆನಿಯು ರಾಜ್ಯ ಸರ್ಕಾರದೊಂದಿಗೆ 50,000 ಕೋಟಿ ರೂ. ಹೂಡಿಕೆಯ ಒಪ್ಪಂದಕ್ಕೆ ಸಹಿ ಮಾಡಿತು. ಈ ಕಂಪೆನಿಯು ಮುಂದಿನ 7 ವರ್ಷಗಳಲ್ಲಿ ನವೀಕರಿಸಬಹುದಾದ ಇಂಧನ, ಬ್ಯಾಟರಿ ಸ್ಟೋರೇಜ್, ಗ್ರೀನ್ ಹೈಡ್ರೋಜನ್ ಘಟಕಗಳನ್ನು 2 ಹಂತಗಳಲ್ಲಿ ಸ್ಥಾಪಿಸಲು ಉದ್ದೇಶಿಸಿದ್ದು, ಸುಮಾರು 30 ಸಾವಿರ ಉದ್ಯೋಗ ಸೃಷ್ಟಿಯ ನಿರೀಕ್ಷೆ ಇದೆ.

    ಮೊದಲ ಹಂತದಲ್ಲಿ ಈಗಾಗಲೇ ಜಾರಿಯಲ್ಲಿರುವ ಯೋಜನೆಗಳಿಗೆ 11,900 ಕೋಟಿ ರೂ.ಗಳ ಬಂಡವಾಳ ಹೂಡಿ, ಮುಂದಿನ 2 ವರ್ಷಗಳಲ್ಲಿ ಯೋಜನೆಗಳು ಕಾರ್ಯಾರಂಭ ಮಾಡಲಾಗುತ್ತದೆ.

    ಎರಡನೇ ಹಂತದಲ್ಲಿ ನವೀಕರಿಸಬಹುದಾದ ಇಂಧನ ಹಾಗೂ ಗ್ರೀನ್ ಹೈಡ್ರೋಜನ್ ಘಟಕಗಳನ್ನು ಮುಂದಿನ 5 ವರ್ಷಗಳಲ್ಲಿ ಸ್ಥಾಪಿಸಲು 37,500 ಕೋಟಿ ರೂ.ಗಳ ಬಂಡವಾಳವನ್ನು ಹೂಡಿಕೆ ಮಾಡಲಾಗುತ್ತದೆ. ಈ ಎರಡು ಹಂತದ ಯೋಜನೆಗಳಿಂದ ಸುಮಾರು 30 ಸಾವಿರ ಉದ್ಯೋಗ ಸೃಷ್ಟಿಯ ನಿರೀಕ್ಷೆ ಇದೆ.

    ಬಂಡವಾಳ ಹೂಡಿಕೆಗೆ ಆಸಕ್ತಿ ತೋರಿದ ಸಂಸ್ಥೆಗಳು:

    ಸೀಮೆನ್ಸ್ ಸಂಸ್ಥೆ:
    ಬೆಂಗಳೂರಿನಲ್ಲಿ 2 ಯೋಜನೆಗಳನ್ನು ಸೀಮೆನ್ಸ್ ಸಂಸ್ಥೆ ಕೈಗೆತ್ತಿಕೊಳ್ಳಲಿದೆ. ಆಧುನಿಕ ವೈದ್ಯಕೀಯ ಉಪಕರಣಗಳ ಉತ್ಪಾದನೆಗೆ ಸಂಬಂಧಿಸಿದಂತೆ ವಿಶೇಷ ಪ್ರೋತ್ಸಾಹಕಗಳನ್ನು ಕರ್ನಾಟಕ ಸರ್ಕಾರ ಒದಗಿಸುವ ಭರವಸೆ ನೀಡಿದೆ. ಬಿಯಾಂಡ್ ಬೆಂಗಳೂರು ಯೋಜನೆಯಡಿ ತುಮಕೂರು, ಹುಬ್ಬಳ್ಳಿ-ಧಾರವಾಡ ಮತ್ತು ಮೈಸೂರು ನಗರಗಳಲ್ಲಿಯೂ ಹೂಡಿಕೆ ಮಾಡುವ ಕುರಿತು ರಾಜ್ಯ ಸರ್ಕಾರ ಮತ್ತು ಸೀಮನ್ಸ್ ಸಂಸ್ಥೆ ಮಾತುಕತೆ ನಡೆಸಿತು.

    ದಸ್ಸಾಲ್ಸ್ ಸಿಸ್ಟಮ್ಸ್:
    ರಾಜ್ಯದಲ್ಲಿ ವಿದ್ಯುತ್ ವಾಹನಗಳು ಮತ್ತು ಕೇಂದ್ರ ಉತ್ಪಾದನಾ ತಾಂತ್ರಿಕ ಸಂಸ್ಥೆಯ ಸಹಯೋಗದಲ್ಲಿ ಆಧುನಿಕ ಉತ್ಪಾದನೆ ಕ್ಷೇತ್ರ , ವಿದ್ಯಾರ್ಥಿಗಳಿಗೆ ಕೈಗಾರಿಕೆ 4.0, ಡಿಜಿಟಲ್ ತಂತ್ರಜ್ಞಾನದ ಬಗ್ಗೆ ತರಬೇತಿ ,ರಾಜ್ಯದ ಸ್ಮಾರ್ಟ್ ಸಿಟಿ ಯೋಜನೆಗಳಲ್ಲಿ ಹೂಡಿಕೆ ಮಾಡಲು ದಸ್ಸಾಲ್ಸ್ ಸಿಸ್ಟಮ್ಸ್ ಉತ್ಸುಕತೆ ತೋರಿದರು. ಇದನ್ನೂ ಓದಿ: ಗೃಹಿಣಿಯನ್ನು ಹತ್ಯೆ ಮಾಡಿ ಪರಾರಿಯಾಗಿದ್ದ ಪ್ರಿಯಕರ ಅರೆಸ್ಟ್ 

    ನೆಸ್ಟ್ಲೆ ಸಂಸ್ಥೆ:
    ನಂಜನಗೂಡಿನಲ್ಲಿ ನೆಸ್ಟ್ಲೆ ಇನ್ಸೆಂಟ್ ಕಾಫಿ ಕಾರ್ಖಾನೆಯನ್ನು ನವೀಕರಣ ಹಾಗೂ ವಿಸ್ತರಣಾ ಕಾರ್ಯಕ್ಕೆ ನೆಸ್ಟ್ಲೆ ಸಂಸ್ಥೆ ಮುಂದಾಗಿದ್ದಾರೆ.

    ಮೆಗಾ ಡಾಟಾ ಸೆಂಟರ್:
    ಭಾರ್ತಿ ಎಂಟರ್ ಪ್ರೈಸಸ್ ನ ಅಧ್ಯಕ್ಷ ಹಾಗೂ ಸಿಇಓ ಸುನಿಲ್ ಭಾರ್ತಿ ಮಿತ್ತಲ್ ಅವರು ರಾಜ್ಯದಲ್ಲಿ ಇನ್ನೊಂದು ಮೆಗಾ ಡಾಟಾ ಸೆಂಟರ್ ಸ್ಥಾಪಿಸುವ ಇಂಗಿತ ವ್ಯಕ್ತಪಡಿಸಿದರು. ರಾಜ್ಯ ಸರ್ಕಾರವು ಎಲ್ಲ ಅಗತ್ಯ ಬೆಂಬಲ ನೀಡುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

    Davos 2

    ಬೆಂಗಳೂರಿನಲ್ಲಿ ಐಕಿಯ ಸ್ಟೋರ್:
    ಇಂಗ್ಕಾ ಗ್ರೂಪ್ (ಐಕಿಯ) ಸಿ.ಇ.ಓ. ಜೆಸ್ಪರ್ ಬ್ರಾಡಿನ್ ಅವರು ರಾಜ್ಯದಲ್ಲಿ ಐಕಿಯ ಸ್ಟೋರ್ ತೆರೆಯುತ್ತಿರುವ ಹಿನ್ನೆಲೆಯಲ್ಲಿ ವಿವಿಧ ವಿಷಯಗಳ ಕುರಿತು ಚರ್ಚಿಸಿ, ಜೂನ್‍ನಲ್ಲಿ ನಾಗಸಂದ್ರದಲ್ಲಿ ಐಕಿಯ ಸ್ಟೋರ್ ತೆರೆಯಲಿದ್ದು, ಜೆಸ್ಪರ್ ಬ್ರಾಡಿನ್ ಅವರು ಉದ್ಘಾಟನೆಗೆ ಮುಖ್ಯಮಂತ್ರಿಗಳನ್ನು ಆಹ್ವಾನಿಸಿದರು. ಇದೇ ಸಂದರ್ಭದಲ್ಲಿ ಐಕಿಯದ ಭಾರತೀಯ ಕೇಂದ್ರ ಕಚೇರಿಯೂ ಬೆಂಗಳೂರಿನಲ್ಲಿದ್ದು ಪೀಠೋಪಕರಣಗಳ ತಯಾರಿಕೆಯ ಸಂದರ್ಭದಲ್ಲಿ ಬಿದಿರು ಮತ್ತಿತರ ಸ್ಥಳೀಯ ವಸ್ತುಗಳ ವ್ಯಾಪಕ ಬಳಕೆಯ ಕುರಿತೂ ಸಹ ಚರ್ಚಿಸಲಾಯಿತು.

    ಆಕ್ಸಿಸ್ ಬ್ಯಾಂಕ್:
    ಆಕ್ಸಿಸ್ ಬ್ಯಾಂಕ್ ಸಂಸ್ಥೆಯು ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ (ಸಿಎಸ್ಆರ್) ಕಾರ್ಯಕ್ರಮಗಳಡಿ ರಾಜ್ಯದ ಕೆಲವು ಇಂಜಿನಿಯರಿಂಗ್ ಹಾಗೂ ವಿಶ್ವವಿದ್ಯಾಲಯಗಳ ಉನ್ನತೀಕರಣ ಯೋಜನೆಯನ್ನು ಹಮ್ಮಿಕೊಳ್ಳಲು ಸಲಹೆ ನೀಡಲಾಯಿತು.

    ನೋಕಿಯಾ ಸಂಸ್ಥೆ:
    ಕರ್ನಾಟಕದಲ್ಲಿ ಟೆಲಿಕಾಂ ಉತ್ಪನ್ನಗಳ ಉತ್ಪಾದನೆಯ ಅವಕಾಶಗಳನ್ನು ಬಳಸಿಕೊಳ್ಳಲು ನೋಕಿಯಾ ಸಂಸ್ಥೆಯ ಮುಖ್ಯಸ್ಥರಿಗೆ ಸಲಹೆ ನೀಡಲಾಯಿತು.

    ದಾವೋಸ್‍ನಲ್ಲಿ ನಡೆದ ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ಕರ್ನಾಟಕ ಪೆವಿಲಿಯನ್‍ನಲ್ಲಿ ಹೀರೋ ಮೋಟೋಕಾರ್ಪ್, ಎಬಿಇನ್‍ಬೇವ್ ಸಂಸ್ಥೆ, ಅರ್ಸೆಲರ್ ಮಿತ್ತಲ್, ಅದಾನಿ ಗ್ರೂಪ್, ಜಾನ್ಸನ್ ಕಂಟ್ರೋಲ್ಸ್‍ನ ಸಿಇಓ ಜಾರ್ಜ್ ಒಲಿವರ್, ಹನಿವೆಲ್ ಕಂಪೆನಿ, ಐಬಿಎಂ, ಬೈಜೂಸ್, ಮೀಶೋ ಸಂಸ್ಥೆಯ ಮುಖ್ಯಸ್ಥರೊಂದಿಗೆ ಕರ್ನಾಟಕದಲ್ಲಿ ಹೂಡಿಕೆಗಳ ಅವಕಾಶಗಳ ಬಗ್ಗೆ ಮಾತುಕತೆ ನಡೆಸಿದರು.

    ಈ ಸಂದರ್ಭದಲ್ಲಿ ಹವಾಮಾನ ಬದಲಾವಣೆ ಮತ್ತು ಪರಿಸರ ಮಾಲಿನ್ಯ ಕುರಿತ ಗೋಷ್ಠಿಯಲ್ಲಿ ಭಾಗವಹಿಸಿ ಈಶ ಫೌಂಡೇಶನ್ ಮುಖ್ಯಸ್ಥ ಸದ್ಗುರು ಜಗ್ಗಿ ವಾಸುದೇವ್ ಅವರೊಂದಿಗೆ ಚರ್ಚೆ ನಡೆಸಲಾಯಿತು. ಈ ವೇಳೆ, ರಾಜ್ಯದಲ್ಲಿ ಪರಿಸರ ಹಾಗೂ ಮಣ್ಣಿನ ಸಂರಕ್ಷಣೆ ಕುರಿತು ಸರ್ಕಾರ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ವಿವರಿಸಿದರು.

    ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ಐಟಿ, ಬಿಟಿ, ಉನ್ನತ ಶಿಕ್ಷಣ ಮತ್ತು ಕೌಶಲ್ಯ ಅಭಿವೃದ್ಧಿ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ್, ಕೈಗಾರಿಕಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ.ಇ.ವಿ.ರಮಣ ರೆಡ್ಡಿ, ಸಿಎಂ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ್ ಪ್ರಸಾದ್, ಕೈಗಾರಿಕಾ ಇಲಾಖೆ ಆಯುಕ್ತರಾದ ಗುಂಜನ್ ಕೃಷ್ಣ ಮೊದಲಾದ ಹಿರಿಯ ಅಧಿಕಾರಿಗಳು ರಾಜ್ಯದ ತಂಡದಲ್ಲಿದ್ದರು.

  • ರಸ್ತೆಯಲ್ಲಿ ಖಾಸಗಿ ವಾಹನಗಳು ಓಡಾಡಲ್ವಾ?: ರೈಲ್ವೇ ಖಾಸಗೀಕರಣ ಸಮರ್ಥಿಸಿಕೊಂಡ ಗೋಯಲ್

    ರಸ್ತೆಯಲ್ಲಿ ಖಾಸಗಿ ವಾಹನಗಳು ಓಡಾಡಲ್ವಾ?: ರೈಲ್ವೇ ಖಾಸಗೀಕರಣ ಸಮರ್ಥಿಸಿಕೊಂಡ ಗೋಯಲ್

    – ರೈಲ್ವೇಯಲ್ಲಿ ಖಾಸಗಿ ಬಂಡವಾಳ ಹೂಡಿಕೆ ಅನಿವಾರ್ಯ

    ನವದೆಹಲಿ: ರಸ್ತೆಗಳು ರಾಷ್ಟ್ರದ ಸಂಪನ್ಮೂಲಗಳಲ್ಲಿ ಒಂದು. ಅಲ್ಲಿ ಖಾಸಗಿ ವಾಹನಗಳು ಓಡಾಡುವದಿಲ್ವಾ ಎಂದು ರೈಲ್ವೇ ಸಚಿವ ಪಿಯೂಷ್ ಗೋಯಲ್ ವಿಪಕ್ಷಗಳನ್ನ ಪ್ರಶ್ನಿಸಿ, ಖಾಸಗೀಕರಣವನ್ನ ಸಮರ್ಥಿಸಿಕೊಂಡಿದ್ದಾರೆ.

    ರೈಲ್ವೇ ಖಾಸಗೀಕರಣ ಸಂಬಂಧ ವಿಪಕ್ಷಗಳು ಕೇಂದ್ರ ಸರ್ಕಾರವನ್ನ ತರಾಟೆಗೆ ತೆಗೆದುಕೊಂಡು ಕೆಲ ಆರೋಪಗಳನ್ನ ಮಾಡಿದ್ದವು. ಈ ಸಂಬಂಧ ಲೋಕಸಭೆಯಲ್ಲಿ ವಿಪಕ್ಷಗಳ ಆರೋಪಗಳಿಗೆ ಪ್ರತಿಕ್ರಿಯಿಸಿದ ಪಿಯೂಷ್ ಗೋಯಲ್, ದೇಶದ ಸಂಪನ್ಮೂಲವಾಗಿರುವ ರಸ್ತೆಗಳಲ್ಲಿ ಸರ್ಕಾರಿ ವಾಹನಗಳು ಮಾತ್ರ ಸಂಚರಿಸಬೇಕೆಂದು ಏಕೆ ಯಾರು ಹೇಳುತ್ತಿಲ್ಲ. ಖಾಸಗಿ ಮತ್ತು ಸರ್ಕಾರಿ ವಾಹನಗಳು ದೇಶದ ಆರ್ಥಿಕ ಬೆಳವಣಿಗೆಗೆ ಸಹಾಯಕವಾಗಲಿದೆ ಎಂದರು.

    ರೈಲ್ವೇ ಸಂಪನ್ಮೂಲ ಸರ್ಕಾರದಲ್ಲಿಯೇ ಇರಲಿದೆ. ಅದರ ಒಡೆತನವೂ ಸರ್ಕಾರ ಬಳಿಯಲ್ಲಿರಲಿದೆ. ಇದರಲ್ಲಿ ಖಾಸಗಿ ಬಂಡವಾಳ ಹೂಡಿಕೆಯಾದ್ರೆ ಏನು ಸಮಸ್ಯೆ ಎಂದು ವಿಪಕ್ಷಗಳನ್ನ ಪ್ರಶ್ನೆ ಮಾಡಿದರು. ಇಂದು ರೈಲ್ವೇ ನಿಲ್ದಾಣಗಳಲ್ಲಿ ವೇಟಿಂಗ್ ರೂಮ್, ಎಕ್ಸಲೇಟರ್ ಸೇರಿದಂತೆ ಹಲವು ಸೌಲಭ್ಯಗಳನ್ನ ಪ್ರಯಾಣಿಕರು ಬಯಸುತ್ತಾರೆ. ಹಾಗಾಗಿ ರೈಲ್ವೇಯಲ್ಲಿ ಖಾಸಗಿ ಬಂಡವಾಳ ಹೂಡಿಕೆ ಅನಿವಾರ್ಯ. ಅತ್ಯಾಧುನಿಕ, ಸುಧಾರಿತ ಸೌಲಭ್ಯಗಳನ್ನೊಳಗೊಂಡ ನಿಲ್ದಾಣಗಳ ನಿರ್ಮಾಣಕ್ಕೆ ಸರ್ಕಾರ ಮುಂದಾಗಿದೆ. ಇದಕ್ಕಾಗಿ 50 ರೈಲ್ವೇ ನಿಲ್ದಾಣಗಳನ್ನ ಆಯ್ಕೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಬೆಂಗಳೂರಿನಲ್ಲಿ ಭಾರತದ ಮೊದಲ ಎಸಿ ರೈಲ್ವೆ ನಿಲ್ದಾಣ

    ಸದ್ಯ 44 ವಂದೇ ಭಾರತ್ ರೈಲುಗಳು ಚಲಿಸುತ್ತಿದ್ದು, ಇವುಗಳ ಖಾಸಗೀಕರಣದ ಆದೇಶ ನೀಡಲಾಗಿದೆ. ಶೀಘ್ರದಲ್ಲಿಯೇ ಈ ರೈಲುಗಳು ಮಾರ್ಗ ನಿಗಧಿಪಡಿಸಲಾಗುತ್ತದೆ. ಕೆಲವೇ ದಿನಗಳಲ್ಲಿ ಸೇವೆ ಸಹ ನೀಡುವ ಮಾಹಿತಿಯನ್ನ ಗೋಯಲ್ ನೀಡಿದರು. ಇದನ್ನೂ ಓದಿ:  ಒಂದು ಹನಿ ನೀರು ಹೊರ ಬೀಳಲ್ಲ – ಮೈಸೂರು, ಬೆಂಗಳೂರು ಹಳಿ ನಿರ್ವಹಣೆಗೆ ಗೋಯಲ್‌ ಮೆಚ್ಚುಗೆ

    ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ವಿಪಕ್ಷಗಳು ಕೇಂದ್ರದ ಖಾಸಗೀಕರನ ನೀತಿಯನ್ನ ಖಂಡಿಸಿವೆ. ರೈಲ್ವೇ ಮಾತ್ರವಲ್ಲದೇ ಬ್ಯಾಂಕುಗಳನ್ನ ಸಹ ಖಾಸಗೀಕರಣ ಮಾಡಲಾಗುತ್ತಿದ ಎಂದು ಆರೋಪಿಸಿವೆ. ಬ್ಯಾಂಕ್ ಗಳ ಖಾಸಗೀಕರಣ ವಿರೋಧಿಸಿ ಬ್ಯಾಂಕ್ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ.

     

  • ಶೀಘ್ರದಲ್ಲೇ ಪಬ್‍ಜಿ ಭಾರತಕ್ಕೆ ಕಮ್‍ಬ್ಯಾಕ್

    ಶೀಘ್ರದಲ್ಲೇ ಪಬ್‍ಜಿ ಭಾರತಕ್ಕೆ ಕಮ್‍ಬ್ಯಾಕ್

    ನವದೆಹಲಿ: ಶೀಘ್ರದಲ್ಲಿಯೇ ಪಬ್‍ಜಿ ಮೊಬೈಲ್ ಗೇಮ್ ಭಾರತಕ್ಕೆ ಹೊಸ ಅವತಾರದಲ್ಲಿ ಎಂಟ್ರಿ ನೀಡಲಿದೆ ಎಂದು ಸೌಥ್ ಕೊರಿಯನ್ ಪಬ್‍ಜಿ ಕಾರ್ಪೋರೇಷನ್ ಇಂದು ಘೋಷಣೆ ಮಾಡಿದೆ.

    ಕೇವಲ ಭಾರತದ ಮಾರುಕಟ್ಟೆಗಾಗಿ ಪಬ್‍ಜಿ ಗೇಮ್ ಹೊಸ ಸ್ವರೂಪದಲ್ಲಿ ಬರಲಿದೆ ಎಂದು ಕಂಪನಿ ತನ್ನ ಘೋಷಣೆಯಲ್ಲಿ ಹೇಳಿದೆ. ಜೊತೆಗೆ ಇದರಲ್ಲಿ ಚೀನಾದ ಪಾಲುದಾರಿಕೆ ಇರಲ್ಲ ಎಂದು ಸ್ಪಷ್ಟನೆ ನೀಡಿದೆ.

    ಪಬ್‍ಜಿ ಕಾರ್ಪೋರೇಷನ್ ನ ಪೇರೆಂಟ್ ಕಂಪನಿ ಕ್ರ್ಯಾಫ್ಟನ್ ಇಂಕ್ ಭಾರತದಲ್ಲಿ 100 ಮಿಲಿಯನ್ ಡಾಲರ್ ಬಂಡವಾಳ ಹೂಡಿಕೆ ಮಾಡುವುದಾಗಿ ಸಹ ಘೋಷಿಸಿದೆ. ಕೊರಿಯನ್ ಕಂಪನಿಯೊಂದು ಮೊದಲ ಬಾರಿಗೆ ಭಾರತದಲ್ಲಿ ಇಷ್ಟು ದೊಡ್ಡ ಮೊತ್ತವನ್ನ ಹೂಡಿಕೆ ಮಾಡ್ತಿದೆ ಎಂದು ಹೇಳಿದೆ.

    ಕೇಂದ್ರ ಸರ್ಕಾರ ಸೈಬರ್ ಸೆಕ್ಯೂರಿಟಿ ಮತ್ತು ದೇಶದ ಹಿತದ ಹಿನ್ನೆಲೆ ಪಬ್‍ಜಿ ಸೇರಿದಂತೆ ಚೀನಾ ಅ್ಯಪ್ ಗಳನ್ನು ಬ್ಯಾನ್ ಮಾಡಿತ್ತು. ಇದೀಗ ಕೊರಿಯನ್ ಕಂಪನಿ ಭಾರತಕ್ಕಾಗಿ ಹೊಸ ರೂಪದಲ್ಲಿ ಭದ್ರತೆಗೆ ಧಕ್ಕೆಯಾಗದ ರೀತಿಯಲ್ಲಿ ಪಬ್‍ಜಿ ಗೇಮ್ ಲಾಂಚ್ ಮಾಡಲು ಸಿದ್ಧತೆ ನಡೆಸಿದೆ. ನಿಷೇಧಕ್ಕೊಳಗಾದ ದಿನವೇ ತಾನು ಹಿಂದಿರುಗುವ ಬಗ್ಗೆ ಪಬ್‍ಜಿ ವಿಶ್ವಾಸ ವ್ಯಕ್ತಪಡಿಸಿತ್ತು.

    ಭಾರತಕ್ಕೆ ಪಬ್‍ಜಿ ಮೊಬೈಲ್ ಇಂಡಿಯಾ ಹೆಸರಿನಲ್ಲಿ ಹಿಂದಿರುಗಲಿದೆ. ಆದ್ರೆ ಲಾಂಚ್ ಆಗುವ ದಿನವನ್ನ ಕಂಪನಿ ಘೋಷಣೆ ಮಾಡಿಲ್ಲ. ಭಾರತೀಯ ಖಾಸಗಿತನಕ್ಕೆ ಆ್ಯಪ್ ನಿಂದ ಧಕ್ಕೆ ಆಗಲಾರದು ಎಂದು ಪಬ್‍ಜಿ ಸ್ಪಷ್ಟಪಡಿಸಿದೆ.

    ವೀಡಿಯೋ ಗೇಮ್ಸ್, ಇ-ಸ್ಪೋರ್ಟ್ಸ್ ಮತ್ತು ಐಟಿ ಇಂಡಸ್ಟ್ರಿಗಳಲ್ಲಿ ಪಬ್‍ಜಿ ಕಾರ್ಪೋರೇಷನ್ ಬಂಡವಾಳ ಹೂಡಿಕೆ ಮಾಡಲಿದೆ. ಭಾರತದ ನೂರಕ್ಕೂ ಹೆಚ್ಚು ಜನರಿಗೆ ಉದ್ಯೋಗ ಸಿಗಲಿದೆ. ಜೊತೆಗೆ ಕಾರ್ಯನಿರ್ವಹಣೆ ಹಿನ್ನೆಲೆ ಸ್ಥಳೀಯ ಮಟ್ಟದಲ್ಲಿ ಪಬ್‍ಜಿ ಕಾರ್ಪೋರೇಷನ್ ಕಚೇರಿ ಸಹ ತೆರೆಯಲಿದೆ.

    ವಿಶ್ವದಲ್ಲಿ ಅತಿ ಹೆಚ್ಚು ಡೌನ್‍ಲೋಡ್ ಅಗಿರುವ ಟಾಪ್ 5ರ ಲಿಸ್ಟ್ ನಲ್ಲಿ ಪಬ್‍ಜಿ ಸ್ಥಾನ ಹೊಂದಿದೆ. ಇಡೀ ವಿಶ್ವದಲ್ಲಿ 73 ಕೋಟಿಗೂ ಅಧಿಕ ಜನ ಪಬ್‍ಜಿ ಡೌನ್‍ಲೋಡ್ ಮಾಡಿದ್ದು, ಭಾರತದಲ್ಲಿ 17.5 ಕೋಟಿ ಅಂದ್ರೆ ಶೇ.24ರಷ್ಟು ಬಳಕೆದಾರರನ್ನು ಪಬ್‍ಜಿ ಹೊಂದಿದೆ. ಪಬ್‍ಜಿ ಆಡುವ ಪ್ರತಿ ನಾಲ್ಕು ಜನರಲ್ಲಿ ಓರ್ವ ಭಾರತೀಯನಿರುತ್ತಾನೆ.