Tag: ಬಂಡಾಯ ಶಾಸಕ

  • ಉದ್ಧವ್‌ ಠಾಕ್ರೆ ರಾಜೀನಾಮೆ ನಮಗೆ ಬೇಸರ ತರಿಸಿದೆ: ಶಿವಸೇನಾ ಬಂಡಾಯ ಶಾಸಕ

    ಉದ್ಧವ್‌ ಠಾಕ್ರೆ ರಾಜೀನಾಮೆ ನಮಗೆ ಬೇಸರ ತರಿಸಿದೆ: ಶಿವಸೇನಾ ಬಂಡಾಯ ಶಾಸಕ

    ಮುಂಬೈ: ಮಹಾರಾಷ್ಟ್ರ ಮೈತ್ರಿಕೂಟದ ಸರ್ಕಾರಕ್ಕೆ ಉದ್ಧವ್‌ ಠಾಕ್ರೆ ರಾಜೀನಾಮೆ ನೀಡಿರುವುದಕ್ಕೆ ಶಿವಸೇನಾ ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಏಕನಾಥ್‌ ಶಿಂಧೆ ಬಣದ ಶಾಸಕರೊಬ್ಬರು ಬೇಸರ ವ್ಯಕ್ತಪಡಿಸಿದ್ದಾರೆ.

    ಉದ್ಧವ್‌ ಠಾಕ್ರೆ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು ನಮಗೆ ಸಂತೋಷದ ವಿಷಯವಲ್ಲ ಎಂದು ಶಿವಸೇನಾ ಬಂಡಾಯ ಶಾಸಕ ಅಭಿಪ್ರಾಯಪಟ್ಟಿದ್ದಾರೆ. ಆದರೆ ಶಾಸಕನ ಹೆಸರು ಬಹಿರಂಗಪಡಿಸಿಲ್ಲ. ಇದನ್ನೂ ಓದಿ: ನಾಳೆ ಬಿಜೆಪಿ-ಶಿಂಧೆ ಸರ್ಕಾರ ರಚನೆ ಸಾಧ್ಯತೆ- ಹೊಸ ಸರ್ಕಾರ ರಚನೆ ಉಸ್ತುವಾರಿ ಹೊತ್ತ ಸಿ.ಟಿ ರವಿ

    ನಾವು ಸೂಚಿಸಿದ ವಿಷಯಗಳನ್ನು ಉದ್ಧವ್ ಠಾಕ್ರೆ ಗಮನಿಸಲಿಲ್ಲ ಎಂದು ಬಂಡಾಯ ಶಾಸಕರ ಬಣದ ವಕ್ತಾರ ದೀಪಕ್ ಕೇಸರ್ಕರ್ ಹೇಳಿದ್ದಾರೆ. ಎನ್‌ಸಿಪಿ ಮತ್ತು ಕಾಂಗ್ರೆಸ್‌ ಜೊತೆಗಿನ ಮೈತ್ರಿ ವಿರುದ್ಧ ಹೋರಾಡುವಾಗ ನಮ್ಮ ನಾಯಕನ (ಉದ್ಧವ್‌ ಠಾಕ್ರೆ) ನಡೆಯ ಬಗ್ಗೆಯೂ ಬೇಸರವಾಯಿತು ಎಂದು ಅವರು ತಿಳಿಸಿದ್ದಾರೆ.

    ಇದಕ್ಕೆಲ್ಲ ಕಾರಣ ಎನ್‌ಸಿಪಿ ಮತ್ತು ಸಂಜಯ್‌ ರಾವತ್‌. ಕೇಂದ್ರ ಸರ್ಕಾರದ ವಿರುದ್ಧ ನಿತ್ಯ ಹೇಳಿಕೆಗಳನ್ನು ನೀಡುವುದು, ಕೇಂದ್ರ ಮತ್ತು ರಾಜ್ಯದ ನಡುವೆ ನಕಾರಾತ್ಮಕ ಅಭಿಪ್ರಾಯ ಮೂಡಿಸುವುದು ಅವರ ಕೆಲಸವಾಗಿತ್ತು ಎಂದಿದ್ದಾರೆ. ಇದನ್ನೂ ಓದಿ: ಶಿಂಧೆ ಬಣದ ಹೊಡೆತಕ್ಕೆ ಅಘಾಡಿ ಸರ್ಕಾರ ಪತನ – ಉದ್ಧವ್‌ ಠಾಕ್ರೆ ರಾಜೀನಾಮೆ

    ಮಹಾರಾಷ್ಟ್ರದ ಮೈತ್ರಿಕೂಟ ಸರ್ಕಾರದ ವಿರುದ್ಧ 50 ಶಾಸಕರು ಬಂಡಾಯ ಎದ್ದಿದ್ದಾರೆ. ಅವರಲ್ಲಿ 40 ಶಾಸಕರು ಶಿವಸೇನಾದವರಾಗಿದ್ದಾರೆ. ಬಂಡಾಯ ಶಾಸಕರ ಬಣದ ನೇತೃತ್ವವನ್ನು ಏಕನಾಥ್‌ ಶಿಂಧೆ ವಹಿಸಿದ್ದಾರೆ.

    Live Tv

  • 2.5 ವರ್ಷಗಳಿಂದ ನಿಮ್ಮ ಮನೆಗೆ ನಮಗೆ ಪ್ರವೇಶವೇ ಇರಲಿಲ್ಲ, ಗೇಟ್‌ ಬಳಿ ಕಾಯಬೇಕಿತ್ತು: ಠಾಕ್ರೆಗೆ ಬಂಡಾಯ ಶಾಸಕನ ಪತ್ರ

    2.5 ವರ್ಷಗಳಿಂದ ನಿಮ್ಮ ಮನೆಗೆ ನಮಗೆ ಪ್ರವೇಶವೇ ಇರಲಿಲ್ಲ, ಗೇಟ್‌ ಬಳಿ ಕಾಯಬೇಕಿತ್ತು: ಠಾಕ್ರೆಗೆ ಬಂಡಾಯ ಶಾಸಕನ ಪತ್ರ

    ಮುಂಬೈ: ಕಳೆದ ಎರಡೂವರೆ ವರ್ಷಗಳಿಂದ ನಿಮ್ಮ ಮನೆಗೆ ನಮಗೆ ಪ್ರವೇಶವೇ ಇರಲಿಲ್ಲ ಎಂದು ಉದ್ಧವ್‌ ಠಾಕ್ರೆಗೆ ಬಂಡಾಯ ಶಾಸಕರೊಬ್ಬರು ಪತ್ರ ಬರೆದು ಕಿಡಿಕಾರಿದ್ದಾರೆ.

    ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟು ತಲೆದೋರಿದ ನಂತರ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಅವರು ಪಕ್ಷದ ಶಾಸಕರನ್ನುದ್ದೇಶಿಸಿ ಭಾವನಾತ್ಮಕವಾಗಿ ಮಾತನಾಡಿದ್ದರು. ನಮ್ಮ ಶಾಸಕರು ಬಯಸಿದರೆ ರಾಜೀನಾಮೆ ಕೊಡಲು ಸಿದ್ಧ. ಏನೇ ಇದ್ದರೂ ನನ್ನ ಎದುರಿಗೆ ಬಂದು ಹೇಳಲಿ ಕೇಳುತ್ತೇನೆ ಠಾಕ್ರೆ ಮಾತನಾಡಿದ್ದರು. ಇದನ್ನೂ ಓದಿ: ಶಾಸಕರು ಆಯ್ತು ಈಗ ಶಿವಸೇನೆ ಸಂಸದರಿಂದಲೂ ಬಂಡಾಯ

    ಇದಕ್ಕೆ ಬಂಡಾಯ ಶಾಸಕ ಸಂಜಯ್‌ ಶಿರ್ಸಾತ್‌, ನಿನ್ನೆ ʻವರ್ಷಾʼದಲ್ಲಿ (ಸಿಎಂ ಅಧಿಕೃತ ನಿವಾಸ) ಜನರನ್ನು ನೋಡಿ ಸಂತೋಷಪಟ್ಟೆವು. ಎರಡೂವರೆ ವರ್ಷಗಳಿಂದ ನಮಗೆ ಮುಖ್ಯಮಂತ್ರಿ ಮನೆಗೆ ಪ್ರವೇಶ ನಿರಾಕರಿಸಲಾಗಿತ್ತು. ನಾವು ಅವರ ಗೇಟ್‌ಗಳ ಹೊರಗೆ ಗಂಟೆಗಟ್ಟಲೆ ಕಾಯುವಂತೆ ಮಾಡಲಾಗಿತ್ತು ಎಂದು ಪತ್ರದಲ್ಲಿ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

    ಏಕನಾಥ್‌ ಶಿಂಧೆ ಅವರ ಮನೆ ಬಾಗಿಲು ನಮಗಾಗಿ ಯಾವಾಗಲೂ ತೆರೆದಿರುತ್ತದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ವಿರುದ್ಧ ಕೇಸ್ ದಾಖಲು

    ಕಷ್ಟದ ಸಂದರ್ಭದಲ್ಲೂ ಸದಾ ತೆರೆದಿರುವ ಶಿಂಧೆಯ ಮನೆ ಹಾಗೆಯೇ ಇರುತ್ತದೆ ಎಂಬ ನಂಬಿಕೆಯೊಂದಿಗೆ ಇಂದು ನಾವಿದ್ದೇವೆ. ನಿನ್ನೆ ನೀವು ಹೇಳಿದ ಮಾತುಗಳು ನಮ್ಮನ್ನು ಭಾವುಕರನ್ನಾಗಿಸಿದೆ. ಆದರೆ ಮೂಲಭೂತ ಪ್ರಶ್ನೆಗಳಿಗೆ ಉತ್ತರ ಸಿಕ್ಕಿಲ್ಲ. ನನ್ನ ಭಾವನೆಗಳನ್ನು ನಿಮಗೆ ತಿಳಿಸಲು ನಾನು ಈ ಭಾವನಾತ್ಮಕ ಪತ್ರವನ್ನು ಬರೆಯಬೇಕಾಯಿತು ಎಂದು ಶಿರ್ಸಾತ್‌ ಹೇಳಿದ್ದಾರೆ.

    Live Tv

  • ಕಾಲಭೈರವನ ಸನ್ನಿಧಿಯಲ್ಲಿ ರೆಬೆಲ್ ಶಾಸಕರಿಂದ ಅಮಾವಾಸ್ಯೆ ಪೂಜೆ

    ಕಾಲಭೈರವನ ಸನ್ನಿಧಿಯಲ್ಲಿ ರೆಬೆಲ್ ಶಾಸಕರಿಂದ ಅಮಾವಾಸ್ಯೆ ಪೂಜೆ

    ಮಂಡ್ಯ: ಮಾಜಿ ಪ್ರಧಾನಿ ದೇವೇಗೌಡರ ಕುಟುಂಬದ ನಂತರ ಇದೀಗ ಜೆಡಿಎಸ್ ಬಂಡಾಯ ಶಾಸಕರಾದ ಚಲುವರಾಯಸ್ವಾಮಿ, ರಮೇಶ್‍ಬಾಬು ಬಂಡಿಸಿದ್ದೇಗೌಡ ಹಾಗೂ ಬಾಲಕೃಷ್ಣ ಆದಿಚುಂಚನಗಿರಿ ಕಾಲಭೈರವೇಶ್ವರ ಕ್ಷೇತ್ರಾದಿ ದೇವತೆಗಳಿಗೆ ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ.

    ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನಲ್ಲಿರುವ ಆದಿಚುಂಚನಗಿರಿ ಕ್ಷೇತ್ರಕ್ಕೆ ಕುಟುಂಬ ಸಮೇತರಾಗಿ ಆಗಮಿಸಿರುವ ಜೆಡಿಎಸ್ ಬಂಡಾಯ ಶಾಸಕರು, ಮೊದಲು ಹೋಮದಲ್ಲಿ ಪಾಲ್ಗೊಂಡ್ರು. ಸ್ವತಃ ನಿರ್ಮಲಾನಂದನಾಥ ಸ್ವಾಮೀಜಿಗಳೇ ಮುಂದೆ ನಿಂತು ಪೂಜೆ ನೆರವೇರಿಸಿದ್ದಾರೆ. ಈ ಹಿಂದೆ ಮಾಜಿ ಪ್ರಧಾನಿ ದೇವೇಗೌಡ, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ಶಾಸಕ ರೇವಣ್ಣ ದಂಪತಿ ಆಗಮಿಸಿ ಆದಿಚುಂಚನಗಿರಿ ಕ್ಷೇತ್ರದ ಕಾಲಭೈರವೇಶ್ವರ ಸ್ವಾಮಿಗೆ ವಿಶೇಷ ಅಮವಾಸ್ಯೆ ಪೂಜೆ ಸಲ್ಲಿಸಿದ್ರು.

    ಕಾಲಭೈರವೇಶ್ವರನ ಸನ್ನಿಧಿಯಲ್ಲಿ ಸತತ ಮೂರು ಅಮವಾಸ್ಯೆ ಪೂಜೆ ಸಲ್ಲಿಸಿದ್ರೆ ಇಷ್ಟಾರ್ಥ ಸಿದ್ಧಿ ಆಗುತ್ತೆ ಎಂಬ ಪ್ರಬಲವಾದ ನಂಬಿಕೆಯಿದೆ. ಹೀಗಾಗಿ ದೇವೇಗೌಡರು, ಕುಮಾರಸ್ವಾಮಿ, ರೇವಣ್ಣ ಮೂವರು ಪ್ರತ್ಯೇಕವಾಗಿ ಪತ್ನಿ ಸಮೇತರಾಗಿ ಆಗಮಿಸಿ ಮೂರು ಅಮವಾಸ್ಯೆ ಪೂಜೆ ನೆರವೇರಿಸಿದ್ರು. ರಾಜ್ಯದ ಜನರಿಗೆ ಒಳಿತಾಗಲಿ, ಜೆಡಿಎಸ್ ಅಧಿಕಾರಕ್ಕೆ ಬರಲಿ ಎಂದು ಕಾಲಭೈರವೇಶ್ವರ ಸ್ವಾಮಿಯಲ್ಲಿ ಕೇಳಿಕೊಂಡಿದ್ರು. ಇದೀಗ ಬಂಡಾಯ ಶಾಸಕರು ತಮ್ಮ ಪತ್ನಿ ಸಮೇತರಾಗಿ ಬಂದು ಪೂಜೆ ಸಲ್ಲಿಸುತ್ತಿದ್ದಾರೆ.

    ಈ ಹಿಂದೆ ನಾನು ಜೆಡಿಎಸ್ ಪಕ್ಷಕ್ಕೆ, ವರಿಷ್ಠರಿಗೆ ಅನ್ಯಾಯ ಮಾಡಿಲ್ಲ. ಈ ಬಗ್ಗೆ ಮುಂದೊಂದು ದಿನ ಕಾಲಭೈರವೇಶ್ವರ ಸನ್ನಿಧಿಯಲ್ಲಿ ಪ್ರಮಾಣ ಕೂಡ ಮಾಡುತ್ತೇನೆ ಎಂದು ಚಲುವರಾಯಸ್ವಾಮಿ ಹೇಳಿದ್ರು. ಹೀಗಾಗಿ ಪೂಜೆ ನಂತ್ರ ಚಲುವರಾಯಸ್ವಾಮಿ ಪ್ರಮಾಣ ಮಾಡುತ್ತಾರಾ ಎಂಬ ಕುತೂಹಲವೂ ಮೂಡಿದ್ದು, ಬಂಡಾಯ ಶಾಸಕರ ಪೂಜೆ ರಾಜಕೀಯವಾಗಿಯೂ ಮಹತ್ವ ಪಡೆದುಕೊಂಡಿದೆ.