Tag: ಬಂಡಿಪುರ

  • ಬಂಡೀಪುರದಲ್ಲಿ ಹುಲಿ ಗಣತಿ ಆರಂಭ: ಲೆಕ್ಕ ಹೇಗೆ ಹಾಕುತ್ತಾರೆ? ಇಲ್ಲಿದೆ ಪೂರ್ಣ ಮಾಹಿತಿ

    ಬಂಡೀಪುರದಲ್ಲಿ ಹುಲಿ ಗಣತಿ ಆರಂಭ: ಲೆಕ್ಕ ಹೇಗೆ ಹಾಕುತ್ತಾರೆ? ಇಲ್ಲಿದೆ ಪೂರ್ಣ ಮಾಹಿತಿ

    ಚಾಮರಾಜನಗರ: ಬಂಡೀಪುರ ಹುಲಿಸಂರರಕ್ಷಿತ ಪ್ರದೇಶದಲ್ಲಿ 5ನೇ ಅಖಿಲ ಭಾರತ ಹುಲಿ ಗಣತಿ ಪ್ರಕ್ರಿಯೆ ಇಂದಿನಿಂದ ಆರಂಭವಾಗಿದೆ. ಹುಲಿ ಅಂದಾಜು ಪ್ರಕ್ರಿಯೆಗೆ ಇದೇ ಮೊದಲ ಬಾರಿಗೆ ಎಂ ಸ್ಟ್ರೈಪ್ಸ್ ಎಂಬ ಎಕೋಲಾಜಿಕಲ್ ಆ್ಯಪ್‍ನ್ನು ಬಳಸಲಾಗುತ್ತಿದೆ.

    ದೇಶದಲ್ಲಿ ಪ್ರತಿ ಐದು ವರ್ಷಕ್ಕೊಮ್ಮೆ ನಡೆಯುವ ಅಖಿಲ ಭಾರತ ಹುಲಿ ಗಣತಿ ಪ್ರಕ್ರಿಯೆ ಚಾಮರಾಜನಗರ ಜಿಲ್ಲೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲೂ ಆರಂಭವಾಗಿದೆ. ಇಂದಿನಿಂದ ಫೆಬ್ರವರಿ 8 ರವರಗೆ ಗಣತಿ ಪ್ರಕ್ರಿಯೆ ನಡೆಯಲಿದ್ದು, ಮೊದಲ ಹಂತದಲ್ಲಿ ಮಾಂಸಹಾರಿ ಹಾಗೂ ಸಸ್ಯಹಾರಿ ಪ್ರಾಣಿಗಳ ಓಡಾಟಗಳ ಕುರಿತಾದ ಗುರುತುಗಳು, ಅವುಗಳ ಹಿಕ್ಕೆ, ಲದ್ದಿ, ಪಾದದ ಗುರುತು, ಪರಚಿದ ಗುರುತುಗಳನ್ನು ಪತ್ತೆ ಹಚ್ಚುವ ಕಾರ್ಯ ನಡೆಸಲಾಗುತ್ತದೆ. ಬಂಡೀಪುರವನ್ನು ಮೂರು ಬ್ಲಾಕ್‍ಗಳನ್ನಾಗಿ ವಿಂಗಡಿಸಿ 112 ಗಸ್ತುಗಳಲ್ಲಿ ಗಣತಿ ಪ್ರಕ್ರಿಯೆ ನಡೆಸಲಾಗುತ್ತಿದೆ.

    ಕೊರೊನಾ ಸಂದರ್ಭದಲ್ಲಿ ಕಾಡಿನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗೆ ಹೊರಗಿನಿಂದ ಬಂದವರಿಂದ ಸೋಂಕು ತಗುಲಬಾರದು ಎಂಬ ಉದ್ದೇಶದಿಂದ ಗಣತಿ ಕಾರ್ಯದಲ್ಲಿ ಸ್ವಯಂಸೇವಕರ ಸೇವೆ ಬಳಸಿಕೊಳ್ಳುತ್ತಿಲ್ಲ. ಗಣತಿ ಕಾರ್ಯದಲ್ಲಿ ಉಪವಲಯ ಅರಣ್ಯಾಧಿಕಾರಿಗಳು, ಅರಣ್ಯ ರಕ್ಷಕರು ಅರಣ್ಯ ವೀಕ್ಷಕರು ಸೇರಿದಂತೆ 300 ಹೆಚ್ಚು ಮಂದಿ ಗಣತಿ ಕಾರ್ಯದಲ್ಲಿ ಪಾಲ್ಗೊಂಡಿದ್ದಾರೆ.

    ಹುಲಿಗಳ ಗಣತಿಗೆ ಇದೇ ಮೊದಲ ಬಾರಿಗೆ ಎಂ ಸ್ಟ್ರೈಪ್ಸ್ ಎಂಬ ಎಕಾಲಾಜಿಕಲ್ ಆ್ಯಪ್‍ನ್ನು ಬಳಸಲಾಗುತ್ತಿದೆ. ಎಂ ಸ್ಟ್ರೈಪ್ಸ್ ಆ್ಯಪ್‍ನ್ನು ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ ಹಾಗೂ ಭಾರತೀಯ ವನ್ಯಜೀವಿವ ಸಂಸ್ಥೆ ಅಭಿವೃದ್ಧಿ ಪಡಿಸಿದ್ದು, ಬಂಡೀಪುರದಲ್ಲಿ 40 ಮೊಬೈಲ್‍ಗಳಿಗೆ ಈ ತಂತ್ರಾಂಶ ಅಳವಡಿಸಲಾಗಿದೆ.

    ಅಂದಾಜು ಪ್ರಕ್ರಿಯೆಗೆ ನಿಯೋಜಿಸಲಾಗಿರುವ ಅರಣ್ಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಲಭ್ಯವಾಗುವ ಮಾಹಿತಿಗಳನ್ನು ಈ ಆ್ಯಪ್‍ನಲ್ಲಿ ದಾಖಲಿಸಲಿದ್ದು, ಹೆಚ್ಚಿನ ನಿಖರತೆ ಇರಲಿದೆ. ಇದನ್ನೂ ಓದಿ: ಉಡುಪಿಯ ಕಾಂಗ್ರೆಸ್ ನಾಯಕಿಗೆ ಚಾಕು ಇರಿತ

    ಈಗಾಗಲೇ ಕ್ಯಾಮೆರಾ ಟ್ರಾಪ್ ಮೂಲಕ ಹುಲಿ ಅಂದಾಜು ಪ್ರಕ್ರಿಯೆಯು ಪೂರ್ಣಗೊಂಡಿದ್ದು, ಅಂತಿಮ ಹಂತದ ಅಂದಾಜು ಪ್ರಕ್ರಿಯೆ ಇದೀಗ ಆರಂಭಗೊಂಡಿದೆ. 2018ರಲ್ಲಿ ಕೈಗೊಂಡಿದ್ದ ನಾಲ್ಕನೇ ಅಖಿಲ ಭಾರತ ಮಟ್ಟದ ಗಣತಿ ಕಾರ್ಯ ಬಂಡಿಪುರ ಸಂರಕ್ಷಿತ ಪ್ರದೇಶದಲ್ಲಿ 173 ಹುಲಿಗಳನ್ನು ಗುರುತಿಸಲಾಗಿತ್ತು. ಈ ಬಾರಿ ಅರಣ್ಯದಲ್ಲಿ ಹುಲಿಗಳ ಸಂಖ್ಯೆ ಹೆಚ್ಚಳವಾಗುವ ನಿರೀಕ್ಷೆ ಇದೆ. ಇದನ್ನೂ ಓದಿ: ಮೃತ ವ್ಯಕ್ತಿಯ ದೇಹದ ಪಕ್ಕ ಸಿಕ್ತು 124 ಹಾವುಗಳು!

  • ಸಫಾರಿಗರಿಗೆ ಒಟ್ಟಿಗೆ ದರ್ಶನ ನೀಡಿದ 3 ಚಿರತೆಗಳು: ಅಪರೂಪದ ದೃಶ್ಯ ಸೆರೆ!

    ಸಫಾರಿಗರಿಗೆ ಒಟ್ಟಿಗೆ ದರ್ಶನ ನೀಡಿದ 3 ಚಿರತೆಗಳು: ಅಪರೂಪದ ದೃಶ್ಯ ಸೆರೆ!

    ಚಾಮರಾಜನಗರ: ಚಿರತೆ ಎಂದಾಕ್ಷಣ ರಸ್ತೆ ದಾಟುವುದು, ಮರದ ಮೇಲೆ ಬೇಟೆಯಾಡಿದ ಆಹಾರವನ್ನು ತಿನ್ನುವ ದೃಶ್ಯ ಸಾಮಾನ್ಯ. ಆದರೆ ಒಟ್ಟಿಗೆ ಮೂರು ಚಿರತೆಗಳು ಕಾಣಿಸಿಕೊಂಡಿರುವ ರೋಮಾಂಚಕ ಘಟನೆಯೊಂದು ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ.

    ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಸಫಾರಿ ವೇಳೆ ಈ ಘಟನೆ ನಡೆದಿದೆ. ವನ್ಯಜೀವಿ ಛಾಯಾಗ್ರಾಹಕ ಅಬ್ದುಲ್ ಶೇಜ್ ಎಂಬವರ ಕ್ಯಾಮರಾ ಕಣ್ಣಿಗೆ ಅಪರೂಪದ ದೃಶ್ಯ ಸೆರೆಯಾಗಿದೆ. 14 ಸೆಕೆಂಡ್‌ಗಳ ಈ ವೀಡಿಯೋ ಇದಾಗಿದ್ದು, ಸಫಾರಿಗರನ್ನೇ ಚಿರತೆಗಳು ದಿಟ್ಟಿಸಿ ನೋಡುತ್ತಿರುವ ದೃಶ್ಯ ಸೆರೆಯಾಗಿದೆ.

    ವೀಡಿಯೋದಲ್ಲಿ ಏನಿದೆ?: ಮರವೊಂದರ ರೆಂಬೆಯ ಮೇಲೆ 3 ಚಿರತೆಗಳು ಒಟ್ಟಿಗೆ ಕುಳಿತುಕೊಂಡಿದೆ. ಸಫಾರಿಗರನ್ನೇ ಈ 3 ಚಿರತೆಗಳು ಕೆಲವು ಸೆಕೆಂಡ್‌ಗಳ ಕಾಲ ದಿಟ್ಟಿಸಿ ನೋಡುತ್ತಿದೆ. ನಂತರದಲ್ಲಿ ಒಂದು ಚಿರತೆ ರೆಂಬೆಯಿಂದ ಕೆಳಗೆ ಇಳಿಯುತ್ತದೆ. ಮತ್ತೆರಡು ಚಿರತೆಗಳು ಆ ಚಿರತೆಯನ್ನು ನೋಡುವ ದೃಶ್ಯ ಸೆರೆಯಾಗಿದೆ. ಇದನ್ನೂ ಓದಿ: ಮಾಧುಸ್ವಾಮಿ ವಿರುದ್ಧ ಮಾತಾಡಿಲ್ಲ, ಅಧಿಕಾರಿಗಳಿಗೆ ಛೀಮಾರಿ ಹಾಕಿ ಅಂದೆ ಅಷ್ಟೇ: ಬಸವರಾಜ್

    ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಸಫಾರಿಗರಿಗೆ ವನ್ಯಪ್ರಾಣಿಗಳು ಸಖತ್ ದರ್ಶನ ಕೊಡುತ್ತಿದೆ. ಹುಲಿ, ಆನೆ ಹಿಂಡುಗಳು ಕೂಡ ಪ್ರವಾಸಿಗರ ಕಣ್ಣಿಗೆ ಆಗಾಗ್ಗೆ ಕಾಣಿಸಿಕೊಳ್ಳುತ್ತಿವೆ. ಇದನ್ನೂ ಓದಿ: ಜಾರ್ಖಂಡ್‍ ಭೀಕರ ರಸ್ತೆ ಅಪಘಾತ- ಮೃತರ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ಘೋಷಣೆ

  • ಬಂಡೀಪುರ ಪ್ರವಾಸ ಮಾಡಿ ಗಿಡ ನೆಟ್ಟ ಪ್ರೇಮಲೋಕ ಚೆಲುವೆ ಜೂಹಿ ಚಾವ್ಲಾ

    ಬಂಡೀಪುರ ಪ್ರವಾಸ ಮಾಡಿ ಗಿಡ ನೆಟ್ಟ ಪ್ರೇಮಲೋಕ ಚೆಲುವೆ ಜೂಹಿ ಚಾವ್ಲಾ

    ಬೆಂಗಳೂರು: ಬುಹುಭಾಷಾ ನಟಿ, ಕಿಂದರಿಜೋಗಿ ಬೆಡಗಿ ಜೂಹಿ ಚಾವ್ಲಾ ಮೂಸೂರು ಸುತ್ತಮುತ್ತ ಪ್ರವಾಸ ಮಾಡಿ ಎಂಜಾಯ್ ಮಾಡಿದ್ದಾರೆ. ಈ ಫೋಟೋಗಳನ್ನು ನಟಿ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

    ಶಾಂತಿ ಕ್ರಾಂತಿ ಚೆಲುವೆ ಜನಪ್ರಿಯ ಬಾಲಿವುಡ್ ನಟಿ ಜೂಹಿ ಚಾವ್ಲಾ ತಮ್ಮ ಕುಟುಂಬದವರೊಂದಿಗೆ ಇತ್ತೀಚೆಗೆ ಮೈಸೂರು ಭಾಗದಲ್ಲಿ ಪ್ರವಾಸ ಕೈಗೊಂಡು ಹಿಂದಿರುಗಿದ್ದಾರೆ. ಈ ಬಗ್ಗೆ ಖುದ್ದು ಅವರೇ ಸೋಷಿಯಲ್ ಮೀಡಿಯಾದಲ್ಲಿ ವಿಷಯವನ್ನು ಹಂಚಿಕೊಂಡಿದ್ದಾರೆ. ಈ ಫೋಟೋ ಮತ್ತು ವೀಡಿಯೋಗಳು ಸಾಮಾಜಿಕಜಾಲತಾಣದಲ್ಲಿ ಹರಿದಾಡುತ್ತಿದೆ.

    ಎಚ್.ಡಿ. ಕೋಟೆ ತಾಲೂಕಿನಲ್ಲಿರುವ ಕಬಿನಿ ಅಣೆಕಟ್ಟೆಗೆ ಜೂಹಿ ತೆರಳಿದ್ದರು. ಅಲ್ಲಿನ ನಿಸರ್ಗ ತಾಣಗಳನ್ನು ವೀಕ್ಷಿಸಿದ ಬಳಿಕ ಕಾರಾಪುರ ಜಂಗಲ್ ಲಾಡ್ಜ್‌ನಲ್ಲಿ ತಂಗಿದ್ದರು. ನಂತರ ನಾಗರಹೊಳೆ ಸುತ್ತಮುತ್ತಲಿನ ಸುಂದರ ತಾಣಗಳನ್ನು ವೀಕ್ಷಿಸಿದ್ದ ಅವರು ಇಲ್ಲಿನ ಪರಿಸರದ ಭವ್ಯತೆಯನ್ನು ಹಾಡಿಹೊಗಳಿ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

    ಬಂಡೀಪುರ ಪ್ರವಾಸದ ವೇಳೆ ರೆಸಾರ್ಟ್‍ನಲ್ಲಿ ಉಳಿದುಕೊಂಡಿದ್ದರು. ಪ್ರವಾಸದ ನೆನಪಿನಾರ್ಥವಾಗಿ ನಾವು ಉಳಿದುಕೊಂಡಿದ್ದ ರೇಸಾರ್ಟ್‍ನಲ್ಲಿ ಒಂದು ಗಿಡವನ್ನು ಸಹ ನೆಟ್ಟಿದ್ದೇವೆ ಎಂದು ಗಿಡ ನೆಡುತ್ತಿರುವ ವೀಡಿಯೋ ಶೇರ್ ಮಾಡಿದ್ದಾರೆ. ಕರ್ನಾಟಕದ ಕಬಿನಿ ನದಿಯ ಹೊರತಾಗಿ, ನಾಗರ ಹೊಳೆ ವನ್ಯಜೀವಿಗಳಿಗೆ ಮೀಸಲು ಇರುವ ಪ್ರದೇಶದಲ್ಲಿ ಟೈಗರ್ ಸಫಾರಿಗೆ ಹೋಗುತ್ತಿದ್ದೇವೆ ಎಂದು ಬರೆದುಕೊಂಡು ಅದರ ಒಂದು ಫೋಟೋವನ್ನು ಜೂಹಿ ಚಾವ್ಲಾ ಇನ್‍ಸ್ಟಾಗ್ರಾಮ್‍ನಲ್ಲಿ ಹಂಚಿಕೊಂಡಿದ್ದಾರೆ.

     

    View this post on Instagram

     

    A post shared by Juhi Chawla (@iamjuhichawla)

    ಬಂಡೀಪುರ ಹಲವಾರು ಪ್ರವಾಸಿಗರನ್ನು ಕೈಬೀಸಿ ಕರೆಯುತ್ತದೆ. ಹೀರುವಾಗ ಇಂತಹ ಅದ್ಭುತವಾದ ಭೌವ್ಯ ತಾಣಕ್ಕೆ ಬಾಲಿವುಡ್ ನಟರು, ಸೆಲೆಬ್ರಿಟಿಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿ ಬರುತ್ತಿದ್ದಾರೆ. ಈ ಹಿಂದೆ ಹಲವು ನಟ-ನಟಿಯರು ಬಂದು ಹೋಗಿದ್ದಾರೆ. ಇಲ್ಲಿನ ಪ್ರಕೃತಿಯ ಸೊಬಗಿಗೆ ಮನಸೋತಿರುವುದು ಸ್ಥಳೀಯರಿಗೆ ಸಂತಸ ತರಿಸಿದೆ.

  • ಒಂದು ವಾರ ಬಂಡಿಪುರದಲ್ಲಿ ಸಫಾರಿ ಬಂದ್!

    ಒಂದು ವಾರ ಬಂಡಿಪುರದಲ್ಲಿ ಸಫಾರಿ ಬಂದ್!

    ಚಾಮರಾಜನಗರ: ಬಂಡಿಪುರ ಹುಲಿ ಸಂರಕ್ಷಿತ ಪ್ರದೇಶಕ್ಕೆ ಬೆಂಕಿ ಬಿದ್ದಿರುವ ಹಿನ್ನೆಲೆ ಒಂದು ವಾರಗಳ ಕಾಲ ಸಫಾರಿ ಬಂದ್ ಮಾಡಲಾಗಿದ್ದು, ಪ್ರವಾಸಿಗರಿಗೆ ಈ ಪ್ರದೇಶಕ್ಕೆ ಪ್ರವೇಶ ನಿಷೇಧಿಸಲಾಗಿದೆ.

    ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನಲ್ಲಿರುವ ಬಂಡಿಪುರದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡ ಪರಿಣಾಮ ಬೆಂಕಿಯಿಂದ ಬಂಡಿಪುರ ಕಾಡಿನ ಸಫಾರಿ ಝೋನ್ ನಾಶವಾಗಿದೆ. ಆದರಿಂದ ಸಫಾರಿ ಝೋನ್‍ನಲ್ಲಿ ಸಫಾರಿ ಬಂದ್ ಮಾಡಲಾಗಿದೆ. ನೂರಾರು ಪ್ರವಾಸಿಗರು ಸಫಾರಿಗಾಗಿ ಪ್ರತಿ ನಿತ್ಯ ಬಂಡಿಪುರಕ್ಕೆ ಬರುತ್ತಿದ್ದರು. ಸಫಾರಿಯಿಂದ ತಿಂಗಳಿಗೆ ಬಂಡಿಪುರದಲ್ಲಿ ಲಕ್ಷಾಂತರ ರೂಪಾಯಿ ಆದಾಯ ಬರುತ್ತಿತ್ತು. ಆದ್ರೆ ಕಳೆದ ನಾಲ್ಕೈದು ದಿನಗಳಿಂದ ಅರಣ್ಯದಲ್ಲಿ ಹೊತ್ತಿಕೊಂಡಿರುವ ಕಾಡ್ಗಿಚ್ಚಿನಿಂದ ಪ್ರವಾಸಿಗರಿಲ್ಲದೆ ಬಂಡಿಪುರ ಬಿಕೋ ಎನ್ನುತ್ತಿದೆ.

    ಕಾಡ್ಗಿಚ್ಚಿನಿಂದ ಬಂಡಿಪುರದ ಸುಮಾರು 5 ಸಾವಿರ ಎಕರೆಗೂ ಅಧಿಕ ಅರಣ್ಯ ಪ್ರದೇಶ ನಾಶವಾಗಿದೆ. ಬೆಂಕಿ ನಂದಿಸಲು ಅರಣ್ಯ ಇಲಾಖೆ, ಅಗ್ನಿ ಶಾಮಕ ದಳ ಸಿಬ್ಬಂದಿ ಹಾಗೂ ಸ್ವಯಂ ಸೇವಕರ ಹರಸಾಹಸ ಪಟ್ಟಿದ್ದು, ಸದ್ಯ ಬೆಂಕಿ ಹತೋಟಿಗೆ ಬಂದಿದೆ ಎನ್ನಲಾಗುತ್ತಿದೆ.

    ಅಲ್ಲದೆ ಬಂಡಿಪುರದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡ ಹಿನ್ನೆಲೆ ಊಟಿ- ಗುಡ್ಲುಪೇಟೆ ಸಂಚಾರ ಸ್ಥಗಿತಗೊಳಿಸಲಾಗಿತ್ತು. ಆದರೇ ಸದ್ಯ ಬೆಂಕಿ ನಿಯಂತ್ರಣಕ್ಕೆ ಬಂದಿದ್ದು, ಊಟಿ- ಗುಡ್ಲುಪೇಟೆ ಸಂಚಾರಕ್ಕೆ ಅಣುವು ಮಾಡಿಕೊಡಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಅಣ್ಣ ಬಂಡೀಪುರದಲ್ಲಿ ಫ್ಲೈಓವರ್ ಬಗ್ಗೆ ಮಾತನಾಡಿದ್ರೆ, ತಮ್ಮ ಇಲ್ಲ ಅಂದ್ರು!

    ಅಣ್ಣ ಬಂಡೀಪುರದಲ್ಲಿ ಫ್ಲೈಓವರ್ ಬಗ್ಗೆ ಮಾತನಾಡಿದ್ರೆ, ತಮ್ಮ ಇಲ್ಲ ಅಂದ್ರು!

    ಬೆಂಗಳೂರು: ಬಂಡೀಪುರದಲ್ಲಿ ಫ್ಲೈ ಓವರ್ ರಸ್ತೆ ನಿರ್ಮಾಣದ ಕುರಿತು ಚಿಂತನೆ ನಡೆದಿದೆ ಎಂದು ಸಚಿವ ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಹೇಳಿಕೆ ನೀಡಿದ್ದರೆ, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅದು ಸುಳ್ಳು, ಸುಮ್ಮನೆ ಈ ಕುರಿತು ಗೊಂದಲ ಸೃಷ್ಟಿ ಮಾಡಲಾಗುತ್ತಿದೆ ಎಂದು ಗರಂ ಆಗಿ ಪ್ರತಿಕ್ರಿಯಿಸಿದ್ದಾರೆ.

    ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಕುಮಾರಸ್ವಾಮಿ, ಬಂಡೀಪುರದ ಪ್ರಕರಣ ಸುಪ್ರೀಂ ಕೋರ್ಟ್ ನಲ್ಲಿದೆ. ಆದರೂ ಏಕೆ ಫ್ಲೈ ಓವರ್ ರಸ್ತೆ ನಿರ್ಮಾಣದ ಕುರಿತು ಸುಮ್ಮನೆ ಗೊಂದಲ ಸೃಷ್ಟಿ ಮಾಡುತ್ತಿದ್ದಾರೆ. ರಾತ್ರಿ ವೇಳೆ ರಸ್ತೆ ಸಂಚಾರ ಪುನರಾರಂಭಕ್ಕೆ ಅವಕಾಶ ನೀಡುವುದು ಹಾಗೂ ಕೇರಳಕ್ಕೆ ಸಂಪರ್ಕ ಕಲ್ಪಿಸುವ ಉದ್ದೇಶದಿಂದ ಫ್ಲೈ ಓವರ್ ನಿರ್ಮಾಣಕ್ಕೆ ಸರ್ಕಾರ ಮುಂದಾಗಿದೆ ಎನ್ನುವುದು ಸುಳ್ಳು ಮಾಹಿತಿ ಎಂದು ಹೇಳಿದರು.

    ರೇವಣ್ಣ ಹೇಳಿದ್ದು ಏನು?
    ಬಂಡೀಪುರ ರಕ್ಷಿತಾರಣ್ಯದಲ್ಲಿ ರಾತ್ರಿ ವಾಹನ ಸಂಚಾರ ವಿಚಾರಕ್ಕೆ ಸಂಬಂಧಿಸಿದಂತೆ ಹಾಸನದಲ್ಲಿ ಗುರುವಾರ ಪಬ್ಲಿಕ್ ಟಿವಿಗೆ ಪ್ರತಿಕ್ರಿಯಿಸಿದ್ದ ಸಚಿವ ರೇವಣ್ಣ, ಈ ಕುರಿತು ಕೇರಳ ಸರ್ಕಾರ ಸುಪ್ರೀಂಗೆ ಹೋಗಿದೆ. ಅದನ್ನು ಗಮನದಲ್ಲಿಟ್ಟು ಇದರ ಕುರಿತು ಸೂಕ್ತವಾಗಿ ಕ್ರಮ ಕೈಗೊಳ್ಳುತ್ತೇವೆ. ಬಂಡೀಪುರ ಅರಣ್ಯದಲ್ಲಿಯೂ ಕೆಲವೆಡೆಗಳಲ್ಲಿ ಫ್ಲೈಓವರ್ ನಿರ್ಮಾಣಕ್ಕೆ ಚಿಂತನೆ ನಡೆದಿದೆ. ಕಾಡು ಪ್ರಾಣಿಗಳ ಮತ್ತು ಪರಿಸರಕ್ಕೆ ಹಾನಿಯಾಗದಂತೆ ಕಾಮಗಾರಿ ಮಾಡುವ ಕುರಿತು ಚರ್ಚಿಸಲಾಗುವುದು. ಬಂಡೀಪುರ ಅರಣ್ಯ ಪ್ರದೇಶದಲ್ಲಿ ರಾತ್ರಿ ಸಂಚಾರ ಬಗ್ಗೆ ಇನ್ನು ನಿರ್ಧಾರವಾಗಿಲ್ಲ. ಮುಖ್ಯ ಕಾರ್ಯದರ್ಶಿ ಜೊತೆ ಈ ಕುರಿತು ಸಭೆಯ ನಂತರ ಓಡಾಟದ ಬಗ್ಗೆ ತೀರ್ಮಾನ ಮಾಡಲಾಗುವುದು ಅಂತ ಅವರು ತಿಳಿಸಿದ್ದರು. ಇದನ್ನು ಓದಿ: ಬಂಡೀಪುರದಲ್ಲಿ ರಾತ್ರಿ ವಾಹನ ಸಂಚಾರಕ್ಕೆ ಅನುಮತಿ- ಕೇರಳದ ಲಾಬಿಗೆ ಮಣಿದ್ರಾ ಸಿಎಂ? ಏನಿದು ವಿವಾದ?

    ಬಂಡೀಪುರದಲ್ಲಿ ರಾತ್ರಿ 9 ಗಂಟೆಗೆ 6 ವಾಹನ ಸಂಚಾರ ನಿಷೇಧಿಸಲಾಗಿದ್ದು, ಜುಲೈ 18ರಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಜೊತೆ ನಡೆದ ಸಭೆಯ ವೇಳೆ ಸಿಎಂ ಹಾಗೂ ಸಚಿವ ರೇವಣ್ಣ ಸಮ್ಮತಿ ಸೂಚಿಸಿದ್ದಾರೆ ಎನ್ನಲಾಗಿದೆ. ಒಪ್ಪಿಗೆ ಸೂಚಿಸಿದ ಹಿನ್ನೆಲೆಯಲ್ಲಿ ಕೇಂದ್ರ ರಸ್ತೆ ಮತ್ತು ಸಾರಿಗೆ ಕಾರ್ಯದರ್ಶಿ ವೈ.ಎಸ್ ಮಲ್ಲಿಕ್ ಜು.21 ರಂದು ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಪ್ರಕರಣ ಈಗ ಸುಪ್ರೀಂಕೋರ್ಟ್‍ನಲ್ಲಿದ್ದರೂ ಅನುಮತಿ ನೀಡಿರುವುದು ಎಷ್ಟು ಸರಿ ಎಂದು ವನ್ಯಜೀವಿ ಹೋರಾಟಗಾರರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು.