Tag: ಬಂಡೆಪ್ಪ ಕಾಶೆಂಪೂರ್

  • ರಾಜ್ಯದ ಜನರನ್ನು ದಾರಿ ತಪ್ಪಿಸಲು ಕದ್ದಾಲಿಕೆ ಕೇಸ್ ಸಿಬಿಐಗೆ: ಕಾಶೆಂಪೂರ್

    ರಾಜ್ಯದ ಜನರನ್ನು ದಾರಿ ತಪ್ಪಿಸಲು ಕದ್ದಾಲಿಕೆ ಕೇಸ್ ಸಿಬಿಐಗೆ: ಕಾಶೆಂಪೂರ್

    ಬೀದರ್: ರಾಜ್ಯದ ಜನರನ್ನು ದಾರಿ ತಪ್ಪಿಸಲು ಫೋನ್ ಕದ್ದಾಲಿಕೆ ಪ್ರಕರಣವನ್ನು ಸಿಬಿಐಗೆ ವಹಿಸಿದ್ದಾರೆ ಎಂದು ಮಾಜಿ ಸಚಿವ ಬಂಡೆಪ್ಪ ಕಾಶೆಂಪೂರ್ ಸಿಎಂ ಯಡಿಯೂರಪ್ಪ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಒಂದು ಕಡೆ ಅತಿವೃಷ್ಟಿ ಮೊತ್ತೊಂದು ಕಡೆ ಬರಗಾಲ ತಾಂಡವಾಡುತ್ತಿದ್ದು ಕೇಂದ್ರದಿಂದ ಎಷ್ಟು ಅನುದಾನ ಬರುತ್ತೆ ಎಂದು ಜನ ಕಾಯುತ್ತಿದ್ದಾರೆ. ಅದ್ದರಿಂದ ಜನರನ್ನು ದಾರಿ ತಪ್ಪಿಸಲು ಸಿಎಂ ಫೋನ್ ಕದ್ದಾಲಿಕೆ ಪ್ರಕರಣವನ್ನು ಸಿಬಿಐಗೆ ವಹಿಸಿದ್ದಾರೆ ಎಂದು ಹೇಳಿದರು.

    ಸಿಬಿಐ ತನಿಖೆಗೆ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಹೆದರುವುದಿಲ್ಲ. ಅವರಿಗೆ ಎಲ್ಲಾ ರೀತಿಯ ಶಕ್ತಿಯಿದ್ದು, ಯಾವ ತನಿಖೆಗೂ ಎಲ್ಲರೂ ಸಿದ್ಧರಿದ್ದಾರೆ. ಹೆಚ್‍ಡಿಕೆ ಕುಟುಂಬ ಮೊದಲಿನಿಂದಲೂ ಹೋರಾಟ ಮಾಡಿಕೊಂಡು ಬಂದಿದೆ. ಈ ಪ್ರಕರಣವನ್ನು ಅವರು ಸಮರ್ಥವಾಗಿ ಎದುರಿಸುತ್ತಾರೆ ಎಂದು ಬಂಡೆಪ್ಪ ಕಾಶೆಂಪೂರ್ ತಿಳಿಸಿದ್ದಾರೆ.

  • ನಿಮ್ಮ ಯೋಗ್ಯತೆಗೆ 30 ಕುರ್ಚಿ ಹಾಕಕ್ಕೆ ಆಗಲ್ವಾ – ಕ್ಯೂ ನಿಂತಿದ್ದ ಗರ್ಭಿಣಿಯರನ್ನ ನೋಡಿ ಸಚಿವರ ತರಾಟೆ

    ನಿಮ್ಮ ಯೋಗ್ಯತೆಗೆ 30 ಕುರ್ಚಿ ಹಾಕಕ್ಕೆ ಆಗಲ್ವಾ – ಕ್ಯೂ ನಿಂತಿದ್ದ ಗರ್ಭಿಣಿಯರನ್ನ ನೋಡಿ ಸಚಿವರ ತರಾಟೆ

    ಬೀದರ್: ಸ್ಕ್ಯಾನಿಂಗ್ ಗಾಗಿ ಎರಡು ಗಂಟೆಗಳಿಂದ ಕ್ಯೂನಲ್ಲಿ ನಿಂತಿರುವ ಗರ್ಭಿಣಿಯರು ಹಾಗೂ ರೋಗಿಗಳನ್ನು ನೋಡಿ ಕೆಂಡಾಮಂಡಲರಾದ ಜಿಲ್ಲಾ ಉಸ್ತುವಾರಿ ಸಚಿವ ಬಂಡೆಪ್ಪ ಕಾಶೆಂಪೂರ್ ಬ್ರಿಮ್ಸ್ ನಿರ್ದೇಶಕರಿಗೆ ಫುಲ್ ತರಾಟೆ ತೆಗೆದುಕೊಂಡು ಘಟನೆ ನಡೆದಿದೆ.

    ಕ್ಯೂನಲ್ಲಿ ನಿಂತಿರುವ ಗರ್ಭಿಣಿಯರಿಗೆ ನಿಮ್ಮ ಯೋಗ್ಯತೆಗೆ 30 ಕುರ್ಚಿ ಹಾಕುವುದಕ್ಕೆ ಆಗಲ್ವಾ. ಗರ್ಭಿಣಿಯರು ಬೆಳಗ್ಗೆಯಿಂದಲೂ ನಿಂತಿದ್ದರು ಕುರ್ಚಿ ಹಾಕಲು ನಿಮ್ಮ ಬಳಿ ಹಣ ಇಲ್ವಾ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಬ್ರಿಮ್ಸ್ ನಿರ್ದೇಶಕರಿಗೆ ರೋಗಿಗಳ ಮುಂದೆಯೇ ಫಲ್ ಕ್ಲಾಸ್ ತೆಗೆದುಕೊಂಡಿದ್ದಾರೆ.

    ಸಚಿವರು ಗರಂ ಆದ ತಕ್ಷಣ ಬ್ರಿಮ್ಸ್ ನಿರ್ದೇಶಕ ಕ್ಷೀರಸಾಗರ ಇನ್ನು ಟೆಂಡರ್ ಆಗಬೇಕು ಸರ್ ಎಂದಿದ್ದಾರೆ. ಅದಕ್ಕೆ ಸಚಿವರು ಟೆಂಡರ್ ಬಿಡ್ರೀ ಒಂದು ಗಂಟೆಯಲ್ಲಿ ಇಲ್ಲಿ ಕುರ್ಚಿ ಹಾಕಬೇಕು ಎಂದು ಸಚಿವರು ತಾಕೀತು ಮಾಡಿದ್ದಾರೆ. ಬೆಳಗ್ಗೆಯಿಂದ ನಾವು ಸ್ಕ್ಯಾನಿಂಗ್‍ಗಾಗಿ ಕ್ಯೂ ನಿಂತಿದ್ದೇವೆ. ನಮಗೆ ಹೋಗಲಿ ಗರ್ಭಿಣಿಯರು ಕ್ಯೂನಲ್ಲಿ ನಿಂತರೂ ಆರೋಗ್ಯ ಅಧಿಕಾರಿ ಸ್ಕ್ಯಾನಿಂಗ್ ಮಾಡಲು ರೆಡಿ ಇಲ್ಲಾ ಎಂದು ರೋಗಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.