Tag: ಬಜರಂಗದಳ

  • ಧಾರವಾಡ | ನಕಲಿ ದಾಖಲೆ ಸೃಷ್ಟಿಸಿ ಹಿಂದೂ ಯುವತಿ ಜೊತೆ ಮದ್ವೆ – ಯುಟ್ಯೂಬರ್‌ ಮುಕಳೆಪ್ಪ ವಿರುದ್ಧ ದೂರು

    ಧಾರವಾಡ | ನಕಲಿ ದಾಖಲೆ ಸೃಷ್ಟಿಸಿ ಹಿಂದೂ ಯುವತಿ ಜೊತೆ ಮದ್ವೆ – ಯುಟ್ಯೂಬರ್‌ ಮುಕಳೆಪ್ಪ ವಿರುದ್ಧ ದೂರು

    – ಲವ್‌ ಜಿಹಾದ್ ಆರೋಪದ ಮೇಲೆ ದೂರು

    ಧಾರವಾಡ: ಕನ್ನಡದ ಜಯಪ್ರಿಯ ಯೂಟ್ಯೂಬರ್ ಕ್ವಾಜಾ aಬಂದೇನ್‌ವಾಜಾ ಮಹಮದ್ ಹನೀಫ್‌ ಶಿರಹಟ್ಟಿ ಅಲಿಯಾಸ್ ಮುಕಳೆಪ್ಪ (Youtuber Mukaleppa) ವಿರುದ್ಧ ಬಜರಂಗದಳ ಕಾರ್ಯಕರ್ತರು ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಲವ್‌ ಜಿಹಾದ್ ಆರೋಪ ಮಾಡಿರುವ ಕಾರ್ಯಕರ್ತರು, ಮುಕಳೆಪ್ಪ ಸುಳ್ಳು ದಾಖಲೆ ನೀಡಿ ಹಿಂದೂ ಯುವತಿಯನ್ನ ಮದುವೆಯಾಗಿದ್ದಾನೆ ಎಂದು ಆರೋಪಿಸಿದ್ದಾರೆ.

    ಮುಕಳೆಪ್ಪ ಮೂಲತಃ ಇಸ್ಲಾಂ (Islam) ಧರ್ಮಕ್ಕೆ ಸೇರಿದವನಾಗಿದ್ದು, ನಕಲಿ ದಾಖಲೆ ಕೊಟ್ಟು ಹಿಂದೂ ಯುವತಿಯನ್ನ ವಿವಾಹವಾಗಿದ್ದಾನೆ. ಈ ಬಗ್ಗೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ರಿಜಿಸ್ಟರ್ ಮಾಡಿಕೊಳ್ಳುವ ಮೂಲಕ ಮುಕಳೆಪ್ಪ ವಿವಾಹವಾಗಿದ್ದಾನೆ ಎಂದು ದೂರಿನಲ್ಲಿ ಬಜರಂಗದಳ ಕಾರ್ಯಕರ್ತರು (Bajrang Dal Workers) ಆರೋಪಿಸಿದ್ದಾರೆ. ಇದನ್ನೂ ಓದಿ: ಪತ್ನಿಗೆ ಅಕ್ರಮ ಸಂಬಂಧ ಶಂಕೆ – ಊಟಕ್ಕೆ ವಿಷ ಹಾಕಿ ಕೊಂದು ನಾಪತ್ತೆಯಾಗಿದ್ದಾಳೆಂದು ದೂರು ಕೊಟ್ಟ ಪತಿ

    ಹಿಂದೂ ಯುವತಿಯರನ್ನೇ ಟಾರ್ಗೆಟ್‌ ಮಾಡಿ ವಿಡಿಯೋ
    ಮುಕಳೆಪ್ಪ ಹಿಂದೂ ಯುವತಿಯರನ್ನೇ ಟಾರ್ಗೆಟ್ ಮಾಡಿ ಅವರ ಜೊತೆ ವೀಡಿಯೋ ಮಾಡುತ್ತಾನೆ. ಶಾರ್ಟ್ ವೀಡಿಯೋದಲ್ಲಿ ಹಿಂದೂ ಯುವತಿಯರು ಹಾಗೂ ಧರ್ಮಕ್ಕೆ ಅವಮಾನ ಮಾಡುವ ರೀತಿಯಲ್ಲಿ ವೀಡಿಯೋ ಮಾಡುತ್ತಾನೆ. ಕಳೆದ ಜೂನ್ 5 ರಂದು ಖೊಟ್ಟಿ ದಾಖಲೆ ಕೊಟ್ಟು ಹಿಂದೂ ಯುವತಿಯನ್ನ ಈತ ವಿವಾಹವಾಗಿದ್ದು, ಆತನ ವಿರುದ್ಧ ಕ್ರಮ ಕೈಗೊಳ್ಳುವಂತೆ ಧಾರವಾಡ ಗ್ರಾಮೀಣ ಠಾಣೆಗೆ (Dharwad Rural Police Station) ನೀಡಿದ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

    ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಧಾರವಾಡ ಎಸ್ಪಿ ಗುಂಜನ್ ಆರ್ಯ, ಮೇಲ್ನೋಟಕ್ಕೆ ಯಾವುದೇ ನಕಲಿ ದಾಖಲೆ ಕೊಟ್ಟು ಮದುವೆಯಾದ ಬಗ್ಗೆ ತಿಳಿದು ಬಂದಿಲ್ಲ. ಮದುವೆಯಾದ ಯುವತಿಯನ್ನ ವಿಚಾರಣೆ ಮಾಡುತಿದ್ದು, ಪೊಲೀಸ್ ಅಧಿಕಾರಿ ಒಬ್ಬರನ್ನ ನೇಮಿಸಿದ್ದೇವೆ ಎಂದಿದ್ದಾರೆ. ಇದನ್ನೂ ಓದಿ:  ಪ್ರಿಂಟಿಂಗ್ ಮಷಿನ್ ಕಾಸ್ಟ್ಯೂಮ್ ಧರಿಸಿ ಬಂದ ಉರ್ಫಿ – ನನಗೊಂದು ಪ್ರಿಂಟ್‌ ಕೊಡಿ ಅಂದ್ರು ನೆಟ್ಟಿಗರು

    ಸದ್ಯಕ್ಕಂತೂ ಮುಕಳೆಪ್ಪನ ವಿರುದ್ಧ ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಬಜರಂಗದಳ ಕಾರ್ಯಕರ್ತರು ದೂರು ಕೊಟ್ಟಿದ್ದು, ಇನ್ನೂ ಎಫ್ಐಆರ್ ದಾಖಲಾಗಿಲ್ಲ. ಪೊಲೀಸರು ಈ ಬಗ್ಗೆ ವಿಚಾರಣೆ ನಡೆಸುತ್ತಿದ್ದಾರೆ. ಹಿಂದೂ ಯುವತಿಯರನ್ನೇ ವೀಡಿಯೋದಲ್ಲಿ ಹಾಕಿಕೊಂಡು ಹಿಂದೂ ಧರ್ಮದ ಹಾಗೂ ಹಿಂದೂ ಆಚರಣೆಗಳನ್ನೇ ಟಾರ್ಗೆಟ್ ಮಾಡಿ ಮುಕಳೆಪ್ಪ ವೀಡಿಯೋಗಳನ್ನು ಮಾಡುತ್ತಿದ್ದು, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಬಜರಂಗದಳ ಕಾರ್ಯಕರ್ತರು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಕ್ಯಾಬಿನೆಟ್‌ನಲ್ಲಿ ಗೆರಿಲ್ಲಾ ಮಾದರಿ ಪೊಲಿಟಿಕಲ್ ಆಟ್ಯಾಕ್ – ಸಿಎಂ ಸೇರಿ ಹಲವರಿಗೆ ಶಾಕ್ ಕೊಟ್ಟ ಸಚಿವರ ಗುಂಪು

  • ಅವಿವಾಹಿತ ಜೋಡಿಗೆ ಓಯೋ ರೂಮ್‌ ನಿರ್ಬಂಧ – ಬೆಂಗಳೂರಲ್ಲೂ ನಿಯಮ ಜಾರಿಗೆ ಬಜರಂಗದಳ ಮನವಿ

    ಅವಿವಾಹಿತ ಜೋಡಿಗೆ ಓಯೋ ರೂಮ್‌ ನಿರ್ಬಂಧ – ಬೆಂಗಳೂರಲ್ಲೂ ನಿಯಮ ಜಾರಿಗೆ ಬಜರಂಗದಳ ಮನವಿ

    ಬೆಂಗಳೂರು: ಓಯೋ ಹೋಟೆಲ್‌ ಬುಕ್ಕಿಂಗ್‌ (OYO Hotel Booking) ಕಂಪನಿ ಚೆಕ್‌ ಇನ್‌ಗೆ ಸಂಬಂಧಿಸಿದಂತೆ ಅವಿವಾಹಿತರಿಗೆ ಹೋಟೆಲ್‌ ರೂಮ್‌ ನೀಡದಂತೆ ಹೊಸ ನಿಯಮ ಜಾರಿಗೊಳಿಸಿದೆ. ಈ ರೀತಿಯ ನಿಯಮವನ್ನ ಬೆಂಗಳೂರಿನಲ್ಲೂ ಜಾರಿಗೆ ತರುವಂತೆ ಬಜರಂಗದಳ (Bajrang Dal) ಮನವಿ ಮಾಡಿದೆ.

    ಬಿಬಿಎಂಪಿ ಆಯುಕ್ತರು (BBMP Commissioner), ನಗರ ಪೊಲೀಸ್‌ ಆಯುಕ್ತರಿಗೆ ಬಜರಂಗದಳದ ಕಾರ್ಯಕರ್ತರು ಮನವಿ ಸಲ್ಲಿಸಿದ್ದಾರೆ. ಹೋಂ ಸ್ಟೇ, ಲಾಡ್ಜ್‌, ಸರ್ವೀಸ್‌ ಅಪಾರ್ಟ್‌ಮೆಂಟ್‌ಗಳು ಹಾಗೂ ಯಾವುದೇ ಹೋಟೆಲ್‌ಗಳಲ್ಲಿ ಅವಿವಾಹಿತರಿಗೆ ಅವಕಾಶ ನೀಡಬಾರದು. ಏಕೆಂದರೆ ಕೆಲವರು ಎಲ್ಲೆ ಮೀರಿ ವರ್ತಿಸುವ ಸಾಧ್ಯತೆಗಳಿವೆ. ಜೊತೆಗೆ ಆ ಸ್ಥಳಗಳು ಅನೈತಿಕ ಚಟುವಟಿಕೆಯ ತಾಣವಾಗುವ ಸಾಧ್ಯತೆಗಳು ಹೆಚ್ಚಿವೆ. ಆದ್ದರಿಂದ ಈ ಮನವಿಯನ್ನು ಗಂಭಿರವಾಗಿ ಪರಿಗಣಿಸುವಂತೆ ಬಜರಂಗದಳ ಮನವಿ ಮಾಡಿದೆ.

    ಓಯೋ ಹೊಸ ನಿಯಮ ಏನು?
    ದೇಶದ ಪ್ರಮುಖ ಲಾಡ್ಜ್ ಬುಕ್ಕಿಂಗ್ ಕಂಪನಿಗಳಲ್ಲಿ ಓಯೋ ಕೂಡ ಒಂದಾಗಿದೆ. ದೇಶದ ಎಲ್ಲಾ ನಗರಗಳಲ್ಲಿಯೂ ತನ್ನ ಹೋಟಲ್‌ ಬುಕ್ಕಿಂಗ್‌ ಜಾಲವನ್ನು ವಿಸ್ತರಣೆ ಮಾಡಿಕೊಂಡಿದೆ. ಕಡಿಮೆ ದರ, ಗುಣಮಟ್ಟದ ಸೇವೆ, ದೊಡ್ಡ ಜಾಲದಿಂದ ಈ ಓಯೋ ಹೋಟೆಲ್‌ಗಳಿಗೂ ಹೆಸರುವಾಸಿಯಾಗಿವೆ. ಅದರಲ್ಲೂ ಅವಿವಾಹಿತರಿಗೆ ಹೋಟೆಲ್‌ ಚೆಕ್‌ ಇನ್‌ಗೆ ಅವಕಾಶ ನೀಡುವ ಕಾರಣಕ್ಕೆ ಈ ಹೋಟೆಲ್‌ ಗ್ರಾಹಕರ ನೆಚ್ಚಿನ ಆಯ್ಕೆಯಾಗಿತ್ತು. ಇದೀಗ ಅವಿವಾಹಿತರಿಗೆ ನಿರ್ಬಂಧ ವಿಧಿಸಿ ಹೊಸ ನಿಯಮ ಜಾರಿಗೊಳಿಸಿದೆ.

    ಮೀರತ್‌ನಲ್ಲಿ ಜಾರಿ:
    ಓಯೋನ ಈ ಹೊಸ ನಿಯಮವು ಉತ್ತರ ಪ್ರದೇಶದ ಮೀರತ್‌ನಲ್ಲಿ ಜಾರಿಯಾಗಿದ್ದು, ಮುಂದಿನ ದಿನಗಳಲ್ಲಿ ಎಲ್ಲಾ ನಗರಗಳಲ್ಲಿಯೂ ಜಾರಿಗೆ ತರುವುದಾಗಿ ಸಂಸ್ಥೆ ಹೇಳಿದೆ. ಹಲವು ನಗರಗಳಲ್ಲಿ ಅವಿವಾಹಿತರಿಗೆ ಚೆಕ್ ಇನ್ ಮಾಡಲು ಅವಕಾಶ ನೀಡದಂತೆ ಸಾರ್ವಜನಿಕರಿಂದ ಅರ್ಜಿ ಸಲ್ಲಿಕೆಯಾಗಿತ್ತು. ಇದರಿಂದಾಗಿ ಓಯೋ ಈ ನಿಮಯ ಜಾರಿಗೊಳಿಸಿದೆ.  ಇದನ್ನೂ ಓದಿ:  ಗಡ್ಕರಿ ಭೇಟಿಯಾದ ಹೆಚ್‌ಡಿಕೆ – ಮಂಡ್ಯ ಹೊರವರ್ತುಲ ರಸ್ತೆ ಯೋಜನೆ, ಬೈಪಾಸ್ ಅಭಿವೃದ್ಧಿಗೆ ಮನವಿ

    ದಾಖಲೆ ಕಡ್ಡಾಯ:
    ಹೊಸ ನಿಯಮದ ಪ್ರಕಾರ, ಹೊಟೇಲ್‌ಗೆ ಬರುವ ಜೋಡಿಗಳು ಕಡ್ಡಾಯವಾಗಿ ತಮ್ಮ ಸಂಬಂಧದ ದಾಖಲೆ ತರುವುದು ಕಡ್ಡಾಯವಾಗಿದೆ. ಆನ್‌ಲೈನ್ ಬುಕ್ಕಿಂಗ್‌ಗೂ ಕೂಡ ಇದು ಕಡ್ಡಾಯವಾಗಿದೆ.

    ಒಟ್ಟಾರೆ ಸುರಕ್ಷಿತ ಮತ್ತು ಜವಾಬ್ದಾರಿಯುತ ಆತಿಥ್ಯ ಪದ್ಧತಿಗಳನ್ನು ಎತ್ತಿಹಿಡಿಯಲು ಬದ್ಧವಾಗಿದೆ ಎಂದು ಓಯೋ ಉತ್ತರ ಭಾರತ ಪ್ರಾದೇಶಿಕ ಮುಖ್ಯಸ್ಥ ತಿಳಿಸಿದ್ದಾರೆ.  ಇದನ್ನೂ ಓದಿ: ಕನ್ನಡದ ನಟಿಗೆ ಬಿಗ್ ಚಾನ್ಸ್- ತೆಲುಗಿನತ್ತ ಶರಣ್ಯ ಶೆಟ್ಟಿ

  • ದಿಲ್ಜಿತ್ ದೋಸಾಂಜ್ ಸಂಗೀತ ಕಚೇರಿಯಲ್ಲಿ ಮದ್ಯ ಮತ್ತು ಮಾಂಸದೂಟ: ಬಜರಂಗದಳ ಪ್ರತಿಭಟನೆ

    ದಿಲ್ಜಿತ್ ದೋಸಾಂಜ್ ಸಂಗೀತ ಕಚೇರಿಯಲ್ಲಿ ಮದ್ಯ ಮತ್ತು ಮಾಂಸದೂಟ: ಬಜರಂಗದಳ ಪ್ರತಿಭಟನೆ

    ಇಂದೋರ್: ಮಧ್ಯಪ್ರದೇಶದ ಇಂದೋರ್‌ನಲ್ಲಿ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ (Diljit Dosanjh) ಅವರ ಸಂಗೀತ ಕಚೇರಿಯಲ್ಲಿ ಮದ್ಯ ಮತ್ತು ಮಾಂಸಾಹಾರದ ಮಳಿಗೆಗಳಿರುವುದನ್ನು ವಿರೋಧಿಸಿ ಬಲಪಂಥೀಯ ಗುಂಪುಗಳಾದ ಬಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ (VHP) ಕಾರ್ಯಕರ್ತರು ಕಾರ್ಯಕ್ರಮ ಪ್ರಾರಂಭವಾಗುವ ಕೆಲವೇ ಗಂಟೆಗಳ ಮೊದಲು ಪ್ರತಿಭಟನೆ ನಡೆಸಿದ್ದಾರೆ.

    ಬಜರಂಗದಳ ಮತ್ತು ವಿಎಚ್‌ಪಿ ಕಾರ್ಯಕರ್ತರು (VHP Workers) ಸಂಗೀತ ಕಚೇರಿಯ ಸ್ಥಳದಲ್ಲಿ ಮದ್ಯ ಮತ್ತು ಮಾಂಸಾಹಾರಿ ಮಳಿಗೆಗಳನ್ನು ಇಡದಂತೆ ಸಂಘಟಕರಿಗೆ ಎಚ್ಚರಿಕೆ ನೀಡಿದರು. ಇಂತಹ ವ್ಯವಸ್ಥೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುತ್ತದೆ ಎಂದು ಗುಂಪು ಆರೋಪಿಸಿದೆ.

    ಸಂಗೀತ ಕಚೇರಿ ನಡೆಯುವ ಸ್ಥಳಕ್ಕೆ ಗುಂಪೊಂದು ತಲುಪಿ ತಮ್ಮ ಆಕ್ಷೇಪಣೆಗಳನ್ನು ಎತ್ತುತ್ತಿರುವ ಘಟನೆಯ ದೃಶ್ಯಾವಳಿಗಳು ವೈರಲ್ ಆಗಿವೆ. ಮದ್ಯ ಮಾರಾಟದ ಟಿಕೆಟ್ ಕೌಂಟರ್ ಮತ್ತು ಕೆಎಫ್‌ಸಿ ಮಳಿಗೆಗಳನ್ನು ತೆಗೆದುಹಾಕುವಂತೆ ಒತ್ತಾಯಿಸಿ ಪ್ರತಿಭಟನಾಕಾರರು ಪೊಲೀಸ್ ಅಧಿಕಾರಿಗಳೊಂದಿಗೆ ವಾಗ್ವಾದ ನಡೆಸಿದ್ದಾರೆ. ಇದನ್ನೂ ಓದಿ: ಆಸೀಸ್‌ ವಿರುದ್ಧ ಹೀನಾಯ ಸೋಲು – WTC ಅಂಕಪಟ್ಟಿಯಲ್ಲಿ 3ನೇ ಸ್ಥಾನಕ್ಕೆ ಕುಸಿದ ಭಾರತ, ಫೈನಲ್‌ ಹಾದಿ ಕಠಿಣ

    ದೋಸಾಂಜ್ ಅವರ ಸಂಗೀತ ಕಚೇರಿಯನ್ನು ಇಂದು ಸಂಜೆ 7 ಗಂಟೆಗೆ ಇಂದೋರ್‌ನಲ್ಲಿ ಪ್ರದರ್ಶನಕ್ಕೆ ನಿರ್ಧರಿಸಲಾಗಿದೆ. ಆದಾಗ್ಯೂ, ಉಪ ಪೊಲೀಸ್ ಆಯುಕ್ತ ಅಮರೇಂದ್ರ ಸಿಂಗ್ ಅವರು ಕಾರ್ಯಕ್ರಮಕ್ಕೆ ಇನ್ನೂ ಅನುಮತಿ ನೀಡಿಲ್ಲ ಮತ್ತು ಅಧಿಕಾರಿಗಳು ನಿರ್ಧಾರ ತೆಗೆದುಕೊಳ್ಳುವ ಮೊದಲು ಎಲ್ಲಾ ಅಂಶಗಳನ್ನು ಪರಿಶೀಲಿಸುತ್ತಿದ್ದೇವೆ ಎಂದು ಹೇಳಿದ್ದಾರೆ. ನಾವು ಸ್ಥಳವನ್ನು ಪರಿಶೀಲಿಸಿದ್ದೇವೆ. ಕೆಲವರು ಈ ಮಳಿಗೆಗಳನ್ನು ವಿರೋಧಿಸುತ್ತಿದ್ದಾರೆ. ನಾವು ಇನ್ನೂ ಎಲ್ಲಾ ವಿವರಗಳನ್ನು ಪರಿಶೀಲಿಸುತ್ತಿದ್ದೇವೆ. ಎಲ್ಲವನ್ನೂ ಅರ್ಥಮಾಡಿಕೊಂಡ ನಂತರವೇ ನಾವು ಅನುಮತಿ ನೀಡುತ್ತೇವೆ. ನಾವು ಸಂಗೀತ ಕಚೇರಿಯ ಪ್ರದರ್ಶನದ ಷರತ್ತುಗಳನ್ನು ಶೀಘ್ರದಲ್ಲೇ ನಿರ್ಧರಿಸುತ್ತೇವೆ ಎಂದು ಡಿಸಿಪಿ ಸಿಂಗ್ ಹೇಳಿದರು.

    ಸ್ಥಳದಲ್ಲಿ ವಿವಾದಕ್ಕೆ ಸಂಬಂಧಿಸಿದಂತೆ ಆಡಳಿತ ಮತ್ತು ಸಂಘಟಕರ ನಡುವೆ ಮಾತುಕತೆ ನಡೆಯುತ್ತಿದೆ. ದಿಲ್ಜಿತ್ ದೋಸಾಂಜ್ ಅವರ ‘ದಿಲ್-ಲುಮಿನಾಟಿ’ ಕಾರ್ಯಕ್ರಮವು ಮದ್ಯ ಸೇವನೆಯನ್ನು ಉತ್ತೇಜಿಸುತ್ತಿದೆ ಎಂದು ಆರೋಪಿಸಿ ಮದ್ಯ ಮಾರಾಟದ ವಿರುದ್ಧ ಕೆಲವು ಗುಂಪುಗಳಿಂದ ಆಕ್ಷೇಪಣೆಗಳಿಂದ ವಿವಾದಗಳನ್ನು ಎದುರಿಸುತ್ತಲೇ ಇದೆ. ಇಂತಹ ವಿರೋಧದ ಪ್ರಥಮ ಘಟನೆಯು ಹೈದರಾಬಾದ್‌ನಲ್ಲಿ ಸಂಭವಿಸಿತ್ತು. ಅಲ್ಲಿ ಗಾಯಕನಿಗೆ ಮದ್ಯ ಉಲ್ಲೇಖಿಸುವ ಹಾಡುಗಳನ್ನು ಹಾಡದಂತೆ ನೋಟಿಸ್ ನೀಡಲಾಗಿತ್ತು. ಅವರು ತಮ್ಮ ಒಂದು ಹಾಡಿನಲ್ಲಿ ʻಮದ್ಯʼ ಪದವನ್ನು ʻಕೋಕ್ʼನೊಂದಿಗೆ ಬದಲಿಸುವ ಮೂಲಕ ಪ್ರತಿಕ್ರಿಯಿಸಿದ್ದರು.

    ಪುಣೆಯಲ್ಲಿ, ಮಹಾರಾಷ್ಟ್ರದ ಅಬಕಾರಿ ಇಲಾಖೆಯು ಸ್ಥಳೀಯ ನಾಯಕರ ಆಕ್ಷೇಪದ ನಂತರ ಅವರ ಸಂಗೀತ ಕಚೇರಿಯಲ್ಲಿ ಮದ್ಯ ಪೂರೈಸುವ ಅನುಮತಿಯನ್ನು ರದ್ದುಗೊಳಿಸಿತ್ತು. ಇದೇ ರೀತಿಯ ವಿರೋಧವು ಅಹಮದಾಬಾದ್‌ನಲ್ಲಿ ಉದ್ಭವಿಸಿತ್ತು. ಅಲ್ಲಿ ದೋಸಾಂಜ್ ಅವರು ಇಂತಹ ನಿರ್ಬಂಧಗಳ ಬಗ್ಗೆ ವ್ಯಂಗ್ಯವಾಡಿದ್ದರು. ಇದನ್ನೂ ಓದಿ: 2 ಸಾವಿರ ಬೇಡ 10 ಸಾವಿರ ಕೊಡಿ – ಹೊಸ ಬಟ್ಟೆ ಅಂಗಡಿ ಮುಂದೆ ಮಂಗಳಮುಖಿಯರ ಕಿರಿಕ್‌

    ನಾವು ಶುಷ್ಕ ರಾಷ್ಟ್ರ ಚಳವಳಿಯನ್ನು ಪ್ರಾರಂಭಿಸೋಣ ಎಂಬ ಶೀರ್ಷಿಕೆಯೊಂದಿಗೆ ಟ್ವಿಟರ್‌ನಲ್ಲಿ ಸಂಗೀತ ಕಚೇರಿಯ ತುಣುಕನ್ನು ಹಂಚಿಕೊಂಡಿದ್ದರು. ನೀವು ಯುವಕರನ್ನು ಮೂರ್ಖರನ್ನಾಗಿಸಲು ಸಾಧ್ಯವಿಲ್ಲ. ಮದ್ಯವನ್ನು ಸಂಪೂರ್ಣ ನಿಷೇಧವಲ್ಲದಿದ್ದರು, ಕೊನೆಪಕ್ಷ ನನ್ನ ಪ್ರದರ್ಶನದ ದಿನದಂದು ನಿಮ್ಮ ರಾಜ್ಯದಲ್ಲಿ ಮದ್ಯ ನಿಷೇಧ ಘೋಷಿಸಿ. ಆಗ ನಾನು ಯಾವುದೇ ಮದ್ಯ-ಸಂಬಂಧಿತ ಹಾಡುಗಳನ್ನು ಹಾಡುವುದನ್ನು ನಿಲ್ಲಿಸುತ್ತೇನೆ ಎಂದು ದೋಸಾಂಜ್ ಪ್ರತಿಕ್ರಿಯಿಸಿದ್ದರು. ಇದನ್ನೂ ಓದಿ: ಸಿಎಂ ಪಟ್ಟಕ್ಕೆ ಕುಮಾರಸ್ವಾಮಿ, ಅಶೋಕ್‌ ಕನಸು – 5 ವರ್ಷ ನಮ್ಮದೇ ಸರ್ಕಾರ ಎಂದ ಸಿದ್ದರಾಮಯ್ಯ

  • ಈದ್ ಮಿಲಾದ್, ಹಿಂದೂ ಸಂಘಟನೆ ಮೆರವಣಿಗೆಗಳು ಶಾಂತಿಯುತವಾಗಿ ನಡೆದಿದೆ: ದ.ಕ ಎಸ್ಪಿ

    ಈದ್ ಮಿಲಾದ್, ಹಿಂದೂ ಸಂಘಟನೆ ಮೆರವಣಿಗೆಗಳು ಶಾಂತಿಯುತವಾಗಿ ನಡೆದಿದೆ: ದ.ಕ ಎಸ್ಪಿ

    ಮಂಗಳೂರು: ಪೊಲೀಸರ ಬಿಗಿ ಬಂದೋಬಸ್ತ್‌ನಲ್ಲಿ ಬಿ.ಸಿ ರೋಡ್ ಚಲೋ ಹಾಗೂ ಈದ್ ಮಿಲಾದ್ ಮೆರವಣಿಗೆ ಶಾಂತಿಯುತವಾಗಿ ನಡೆದಿದೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಎಸ್ಪಿ ಗಿರೀಶ್.ಎನ್  (Girish.N) ತಿಳಿಸಿದ್ದಾರೆ.

    ಬಜರಂಗದಳ ಹಾಗೂ ವಿಹೆಚ್‌ಪಿಯಿಂದ ಬಿ.ಸಿ ರೋಡ್ (B C Road) ಚಲೋ ಕರೆ ಹಿನ್ನೆಲೆಯಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತರು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ.ಸಿ ರೋಡ್‌ನಲ್ಲಿ ಜಮಾಯಿಸಿದ್ದರು. ಬಜರಂಗದಳ ಹಾಗೂ ವಿಹೆಚ್‌ಪಿಯ ಕಾರ್ಯಕರ್ತರ ನಡುವೆ ತಳ್ಳಾಟ ನೂಕಾಟ ನಡೆದಿತ್ತು. ಕೊನೆಗೆ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ.ಇದನ್ನೂ ಓದಿ: ಈದ್‌ ಮೆರವಣಿಗೆಗೆ ಪ್ರತಿಯಾಗಿ ಬಜರಂಗದಳ-ವಿಹೆಚ್‌ಪಿಯಿಂದ ಬಿ.ಸಿ ರೋಡ್ ಚಲೋಗೆ ಕರೆ

    ಪೊಲೀಸರ ಬಿಗಿ ಬಂದೋಬಸ್ತಿನಿಂದಾಗಿ ಬಿ.ಸಿ ರೋಡ್ ಮತ್ತೆ ಸಹಜ ಸ್ಥಿತಿಗೆ ಮರಳುತ್ತಿರುವ ಕುರಿತು ದ.ಕ ಎಸ್ಪಿ ಎನ್. ಯತೀಶ್ (N. Yatish) ಪಬ್ಲಿಕ್ ಟಿವಿ ಜೊತೆ ಮಾತನಾಡಿದ್ದಾರೆ.

    ದಕ್ಷಿಣ ಕನ್ನಡ ಜಿಲ್ಲಾ ಎಸ್‌ಪಿ ಎನ್.ಯತೀಶ್ ಮಾತನಾಡಿ, ಬಂಟ್ವಾಳದ ಬಿ.ಸಿ ರೋಡ್ ಮತ್ತೆ ಸಹಜ ಸ್ಥಿತಿಗೆ ಮರಳುತ್ತಿದೆ. ದ.ಕ ಪೊಲೀಸರು ಪರಿಸ್ಥಿತಿ ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾಗಿದ್ದಾರೆ. ಕೈಕಂಬ ಮಸೀದಿಯ ಈದ್ ಮಿಲಾದ್ ಮೆರವಣಿಗೆ ರೂಟ್ ಬದಲಾವಣೆ ನಾವು ಮಾಡಿಲ್ಲ. ಹಿಂದೂ ಸಂಘಟನೆಯವರು ಶಾಂತಿಯುತವಾಗಿ ಪ್ರತಿಭಟನೆ ಮಾಡುತ್ತೇವೆ ಎಂದಿದ್ದರು. ಹಾಗಾಗಿ ಬಿ.ಸಿ ರೋಡ್ ಜಂಕ್ಷನ್‌ನಲ್ಲಿ ಅವಕಾಶ ನೀಡಿದ್ದೇವು. ಏನಾದರೂ ಸಮಸ್ಯೆಯಾದರೆ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ್ದೇವೆ ಅಷ್ಟೇ ಎಂದು ತಿಳಿಸಿದರು.

    ಪ್ರಚೋದನಾಕಾರಿ ಆಡಿಯೋ ಹರಿಬಿಟ್ಟ ಇಬ್ಬರ ಮೇಲೆಯೂ ಕ್ರಮವಾಗಿದೆ. ಶರೀಫ್ ಹಾಗೂ ಹಸೀನಾರ್ ಇಬ್ಬರನ್ನು ಬಂಧಿಸಿದ್ದೇವೆ. ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಮುನ್ನವೇ ಶಾಂತಿ ಸಭೆ ಮಾಡಿದ್ದೇವೆ. ಈವರೆಗೂ ಯಾವುದೇ ಅಹಿತಕರ ಘಟನೆ ಸಂಭವಿಸಿಲ್ಲ. ಮುಂದೆಯೂ ಅಹಿತಕರ ಘಟನೆಗಳು ಜರುಗದಂತೆ ಕ್ರಮ ಕೈಗೊಳ್ಳುತ್ತೇವೆ. ಪರಿಸ್ಥಿತಿಗೆ ಅನುಗುಣವಾಗಿ ಬಿ.ಸಿ ರೋಡಿನಲ್ಲಿ ಬಂದೋಬಸ್ತ್ ಮುಂದುವರೆಸುತ್ತೇವೆ ಎಂದು ತಿಳಿಸಿದ್ದಾರೆ.

    ಮತ್ತೋರ್ವ ಅಧಿಕಾರಿ ಗಿರೀಶ್.ಎನ್ ಮಾತನಾಡಿ, ಹಿಂದೂ ಸಂಘಟನೆಗಳು ಕರೆ ನೀಡಿದ್ದ ಬಿ.ಸಿ.ರೋಡ್ ಚಲೋ ಹಾಗೂ ಈದ್ ಮಿಲಾದ್ ಶಾಂತಿಯುತವಾಗಿ ನಡೆದಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಭಾರೀ ಪೊಲೀಸ್ ಬಂದೋಬಸ್ತ್ ನಡೆಸಲಾಗಿದೆ. ಘಟನೆಗೆ ಕಾರಣವಾದ ಆಡಿಯೋ ಹರಿಬಿಟ್ಟಿದ್ದ ಇಬ್ಬರನ್ನು ವಶಕ್ಕೆ ಪಡೆಯಲಾಗಿದ್ದು, ಅವರ ಬಗ್ಗೆ ವಿಚಾರಣೆ ನಡೆಸಲಾಗುತ್ತಿದೆ ಎಂದಿದ್ದಾರೆ.ಇದನ್ನೂ ಓದಿ: ಹದಿಹರೆಯದ ಹುಡುಗಿಯರ ಮಿದುಳಿಗೆ ಬೇಗ ವಯಸ್ಸಾಗ್ತಿದೆಯಂತೆ; ಯಾಕೆ ಗೊತ್ತಾ? – ಅಧ್ಯಯನ ಹೇಳೋದೇನು?

  • ಈದ್‌ ಮೆರವಣಿಗೆಗೆ ಪ್ರತಿಯಾಗಿ ಬಜರಂಗದಳ-ವಿಹೆಚ್‌ಪಿಯಿಂದ ಬಿ.ಸಿ ರೋಡ್ ಚಲೋಗೆ ಕರೆ

    ಈದ್‌ ಮೆರವಣಿಗೆಗೆ ಪ್ರತಿಯಾಗಿ ಬಜರಂಗದಳ-ವಿಹೆಚ್‌ಪಿಯಿಂದ ಬಿ.ಸಿ ರೋಡ್ ಚಲೋಗೆ ಕರೆ

    – ಖಾಕಿ ಪಡೆ ಕಣ್ಗಾವಲು; ಹಿಂದೂ ಕಾರ್ಯಕರ್ತರು, ಪೊಲೀಸರ ನಡುವೆ ತಳ್ಳಾಟ ನೂಕಾಟ

    ಮಂಗಳೂರು: ಬಜರಂಗದಳ ಹಾಗೂ ವಿಹೆಚ್‌ಪಿಯಿಂದ ಬಿ.ಸಿ ರೋಡ್ ಚಲೋ ಕರೆ ಹಿನ್ನಲೆಯಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತರು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ.ಸಿ ರೋಡ್‌ನಲ್ಲಿ ಜಮಾಯಿಸಿದ್ದಾರೆ.

    ಬಿ.ಸಿ.ರೋಡ್ ಚಲೋ ಕರೆ ಹಿನ್ನೆಲೆ ಪೊಲೀಸರಿಂದ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಎಸ್ಪಿ ಯತೀಶ್ ನೇತೃತ್ವದಲ್ಲಿ ಹೆಚ್ಚುವರಿ ಪೊಲೀಸರ ನಿಯೋಜನೆ ಮಾಡಿದ್ದಾರೆ. ಈದ್ ಮಿಲಾದ್ ಮೆರವಣಿಗೆ ವಿಚಾರಕ್ಕೆ ಸಂಬಂಧಿಸಿದಂತೆ ಬಿ.ಸಿ.ರೋಡ್‌ಗೆ ಬರದಂತೆ ಮುಂಜಾಗ್ರತಾ ಕ್ರಮವಾಗಿ ಕೈಕಂಬ ಮಸೀದಿ ಪಕ್ಕದಲ್ಲೇ ಮೆರವಣಿಗೆ ಪೊಲೀಸರು ರಸ್ತೆ ಬದಲಾವಣೆ ಮಾಡಿದ್ದಾರೆ. ಇದನ್ನೂ ಓದಿ: Mandya | ನಾಗಮಂಗಲದಲ್ಲಿ ಖಾಕಿ ಹೈ ಅಲರ್ಟ್ – ಈದ್ ಮಿಲಾದ್ ಹಿನ್ನೆಲೆ ಪೊಲೀಸ್ ಸರ್ಪಗಾವಲು

    ಭಾರೀ ಸಂಖ್ಯೆಯಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತರು ಬಿ.ಸಿ ರೋಡ್‌ನ ರಕ್ತೇಶ್ವರಿ ದೇವಸ್ಥಾನದ ಜಮಾಯಿಸಿದ್ದಾರೆ. ವಿಎಚ್‌ಪಿ ಮುಖಂಡ ಶರಣ್ ಪಂಪ್ ವೆಲ್, ಬಜರಂಗದಳ ಮುಖಂಡ ಪುನೀತ್ ಅತ್ತಾವರ ಸ್ಥಳಕ್ಕೆ ಆಗಮಿಸಿದ್ದಾರೆ. ಕೆಎಸ್‌ಆರ್‌ಪಿ ತುಕಡಿಗಳು, ಆರ್ಮ್ ರಿಸರ್ವ್ ಫೋರ್ಸ್ ಸೇರಿದಂತೆ ವಿವಿಧ ತುಕಡಿಗಳ ಮೊಕ್ಕಾಂ ಹೂಡಿವೆ. ಜೊತೆಗೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳದಲ್ಲೇ ಬೀಡುಬಿಟ್ಟಿದ್ದಾರೆ. ಇದನ್ನೂ ಓದಿ: ಕಲಬುರಗಿಯಲ್ಲಿ ದಶಕದ ಬಳಿಕ ಸಚಿವ ಸಂಪುಟ ಸಭೆ – ಮಿನಿವಿಧಾನಸೌಧದಲ್ಲಿ ಸರ್ಕಾರದಿಂದ ಭರ್ಜರಿ ಸಿದ್ಧತೆ!

    ವಿಎಚ್‌ಪಿಯ ಬಂಟ್ವಾಳ ಪ್ರಖಂಡ ಅಧ್ಯಕ್ಷ ಪ್ರಸಾದ್ ಕುಮಾರ್ ಮಾತನಾಡಿ, ಭಜರಂಗದಳ ಹಾಗೂ ವಿಎಚ್‌ಪಿಯಿಂದ ಬಿ.ಸಿ.ರೋಡ್ ಚಲೋ ಕರೆ ಹಿನ್ನಲೆಯಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತರು ಬಿ.ಸಿ.ರೋಡ್ ನಲ್ಲಿ ಜಮಾಯಿಸಿದ್ದಾರೆ. ಬಿ.ಸಿ.ರೋಡ್‌ನ ರಕ್ತೇಶ್ವರಿ ದೇವಸ್ಥಾನದ ಎದುರು ಸೇರಿದ ಕಾರ್ಯಕರ್ತರು ನಾವು ಸವಾಲು ಸ್ವೀಕರಿಸಿ ಬಂದಿದ್ದೇವೆ. ನಮ್ಮ ಮುಖಂಡ ಶರಣ್ ಪಂಪ್ ವೆಲ್ ಬರುತ್ತಾರೆ ಅವರಿಗೆ ಸ್ವಾಗತ ಕೋರಲು ಬಂದಿರೋದಾಗಿ ಹೇಳಿಕೊಂಡಿದ್ದಾರೆ. ಈ ನಡುವೆ ಪೊಲೀಸರು ಹಾಗೂ ಹಿಂದೂ ಸಂಘಟನೆ ಕಾರ್ಯಕರ್ತರ ನಡುವೆ ತಳ್ಳಾಟ-ನೂಕಾಟವೂ ನಡೆದೆ. ಇದನ್ನೂ ಓದಿ:  ಟ್ರಂಪ್‌ ಮೇಲೆ ಮತ್ತೆ ಗುಂಡಿನ ದಾಳಿ – ಆತಂಕ ಹೆಚ್ಚಿಸಿದ ಆ ಒಂದು ರೈಫಲ್‌, ದಾಳಿಕೋರ ಸಿಕ್ಕಿದ್ದು ಹೇಗೆ?

  • ಗೋ ರಕ್ಷಣೆಗೆ ಹೋದವರ ಮೇಲೆ ಹಲ್ಲೆ ಆರೋಪ; ಹಿಂದೂ – ಮುಸ್ಲಿಂ ಯುವಕರ ನಡುವೆ ಗಲಾಟೆ – ಕಿಡಿಗೇಡಿಗಳ ಬಂಧನಕ್ಕೆ ಆಗ್ರಹ!

    ಗೋ ರಕ್ಷಣೆಗೆ ಹೋದವರ ಮೇಲೆ ಹಲ್ಲೆ ಆರೋಪ; ಹಿಂದೂ – ಮುಸ್ಲಿಂ ಯುವಕರ ನಡುವೆ ಗಲಾಟೆ – ಕಿಡಿಗೇಡಿಗಳ ಬಂಧನಕ್ಕೆ ಆಗ್ರಹ!

    – ಧಾರವಾಡ ಉಪನಗರದಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡ

    ಧಾರವಾಡ: ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದ್ದ ಗೋವುಗಳ ರಕ್ಷಣೆಗೆ ಮುಂದಾಗಿದ್ದ ಬಜರಂಗದಳದ ಕಾರ್ಯಕರ್ತ ಸೋಮಶೇಖರ್ ಎಂಬುವವರ ಮೇಲೆ ಅನ್ಯಕೋಮಿನ ಯುವಕರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಹೇಳಿಬಂದಿದೆ. ಈ ಬೆನ್ನಲ್ಲೇ ಹಿಂದೂ-ಮುಸ್ಲಿಮ್‌ ಯುವಕರ ನಡುವೆ ಗಲಾಟೆಯೂ ನಡೆದಿದ್ದು ಕೆವಲರಿಗೆ ಗಾಯಗಳಾಗಿರುವ ಘಟನೆ ಧಾರವಾಡ ನಗರದ ಎಪಿಎಂಸಿ ಬಳಿ ನಡೆದಿದೆ.

    ಹಲ್ಲೆಯನ್ನು ಖಂಡಿಸಿ ಧಾರವಾಡ ಉಪನಗರ ಪೊಲೀಸ್ ಠಾಣೆ ಎದುರು ಬಜರಂಗದಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಸೋಮಶೇಖರ್ ಅವರ ಮೇಲೆ ಹಲ್ಲೆ ಮಾಡಿದ ಅನ್ಯಕೋಮಿನ ಜನರನ್ನು ಬಂಧಿಸುವಂತೆ ಆಗ್ರಹಿಸಿ ಬಜರಂಗದಳ ಕಾರ್ಯಕರ್ತರು ಉಪನಗರ ಠಾಣೆಗೆ ಮುತ್ತಿಗೆ ಹಾಕಲು ಯತ್ನಿಸಿದ ಪ್ರಸಂಗವೂ ನಡೆಯಿತು.

    ಇನ್ನು ಪ್ರತಿಭಟನೆಗೆ ಆಗಮಿಸಿದ ಧಾರವಾಡ ಶಾಸಕ ಅರವಿಂದ ಬೆಲ್ಲದ್, ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿದವರನ್ನು ನಾಳೆವರೆಗೆ ಬಂಧಿಸದೇ ಇದ್ದರೆ, ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಸದ್ಯ ಪ್ರತಿಭಟನೆ ಹಿಂದಕ್ಕೆ ಪಡೆದಿದ್ದೇವೆ, ನಾಳೆ ಬೆಳಗಿನವರೆಗೂ ನಾವು ಕಾದು ನೋಡುತ್ತೇವೆ, ಆ ಬಳಿಕ ಮುಂದಿನ ಹೋರಾಟದ ಬಗ್ಗೆ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಬೆಲ್ಲದ್ ತಿಳಿಸಿದರು.

    ನಂತರ ಮಾತನಾಡಿದ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ್, ಜಾನುವಾರುಗಳ ಸಾಗಾಟಕ್ಕೆ ಸಂಬಂಧಿಸಿದಂತೆ ಎರಡು ಕೋಮಿನವರ ಮಧ್ಯೆ ಗಲಾಟೆಯಾಗಿದೆ. ಇಬ್ಬರು ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆಯಾಗಿದೆ, ಈ ಸಂಬಂಧ ಅವರು ದೂರು ದಾಖಲಿಸಿದ್ದಾರೆ. ಆ ಪ್ರಕಾರ ಎಫ್‌ಐಆರ್ ದಾಖಲಿಸಿಕೊಳ್ಳುತ್ತೇವೆ. ದೂರಿನಲ್ಲಿ ಇಬ್ಬರ ಹೆಸರಿನ ಜೊತೆಗೆ ಇನ್ನಷ್ಟು ಜನ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಹಲ್ಲೆಯಾದ ಏರಿಯಾದಲ್ಲಿ ಸಿಸಿಟಿವಿ ಕ್ಯಾಮೆರಾಗಳಿವೆ, ಅದನ್ನೆಲ್ಲ ಪರಿಶೀಲಿಸಿ ನಾವು ಕಾನೂನು ಕ್ರಮ ಜರುಗಿಸುತ್ತೇವೆ ಎಂದು ಹೇಳಿದ್ದಾರೆ.

  • ಬಕ್ರೀದ್‌ ಹಬ್ಬಕ್ಕೆ ಗೋವುಗಳು ಕುರ್ಬಾನಿಯಾಗದಂತೆ ಕ್ರಮ ವಹಿಸಿ – ಬಜರಂಗದಳ ಆಗ್ರಹ

    ಬಕ್ರೀದ್‌ ಹಬ್ಬಕ್ಕೆ ಗೋವುಗಳು ಕುರ್ಬಾನಿಯಾಗದಂತೆ ಕ್ರಮ ವಹಿಸಿ – ಬಜರಂಗದಳ ಆಗ್ರಹ

    ಧಾರವಾಡ: ಮುಸ್ಲಿಮರ ಪವಿತ್ರ ಹಬ್ಬಗಳಲ್ಲಿ ಒಂದಾದ ಬಕ್ರೀದ್‌ ಹಬ್ಬ ಸಮೀಪಿಸುತ್ತಿದ್ದು, ಪ್ರಾಣಿಯನ್ನು ಕೊಯ್ದು ಮಾಂಸ ವಿತರಿಸುವ ಕುರ್ಬಾನಿ ನಡೆಸಲು ಸಿದ್ಧತೆ ಎಲ್ಲೆಡೆ ನಡೆದಿದೆ. ಬಕ್ರೀದ್‌ ಹಬ್ಬದ (Bakrid Festival) ದಿನ ಸೇರಿದಂತೆ ಮೂರು ದಿನಗಳಲ್ಲಿ ಆಡು, ಟಗರು ಮೊದಲಾದ ಪ್ರಾಣಿಗಳನ್ನು ಕೊಂದು ಮಾಂಸ ಮಾಡಿ, ಸಂಬಂಧಿಕರು, ನೆರೆಹೊರೆಯವರು, ಬಡವರಿಗೆ ಹಂಚುವುದು ಸಂಪ್ರದಾಯ. ಇದಕ್ಕಾಗಿಯೇ ಕೆಲ ವ್ಯಾಪಾರಿಗಳು ಹೊರ ರಾಜ್ಯಗಳಿಂದಲೂ ಪ್ರಾಣಿಗಳನ್ನ ತಂದು ದುಬಾರಿ ಬೆಲೆಗೆ ಮಾರಾಟ ಮಾಡುತ್ತಾರೆ.

    ಈ ಬಾರಿ ಬಕ್ರೀದ್‌ ಹಬ್ಬದಂದು ರಾಜ್ಯದಲ್ಲಿ ಜಾನುವಾರು ಹತ್ಯೆ ಪ್ರತಿಬಂಧಕ ಹಾಗೂ ಸಂರಕ್ಷಣಾ ಕಾಯ್ದೆ-2020 ಹಾಗೂ ಕರ್ನಾಟಕ ಪ್ರಾಣಿ ಬಲಿ ನಿಷೇಧ-1959 ಕಾಯ್ದೆ ಅಡಿಯಲ್ಲಿ ಪ್ರಾಣಿ ಬಲಿಯನ್ನು ನಿಷೇಧಿಸಬೇಕು ಎಂದು ವಿಶ್ವ ಹಿಂದೂ ಪರಿಷತ್ (VHP) ಮತ್ತು ಬಜರಂಗದಳದ (Bajarangadala) ಕಾರ್ಯಕರ್ತರು ಧಾರವಾಡ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ. ಇದನ್ನೂ ಓದಿ: ರೇಣುಕಾಸ್ವಾಮಿ ಕೊಲೆ ಕೇಸ್: ತಪ್ಪಿತಸ್ಥರಿಗೆ ಶಿಕ್ಷೆಯಾಗೋವರೆಗೂ ಪ್ರಾಮಾಣಿಕ ತನಿಖೆ ನಡೆಸಬೇಕು: ಬೊಮ್ಮಾಯಿ

    ಯಾವುದೇ ಗೋವುಗಳ (Cows) ಕುರ್ಬಾನಿ ಮಾಡುವುದನ್ನು ನಿಷೇಧಿಸಬೇಕು, ಇತರೇ ಪ್ರಾಣಿಗಳ ಬಲಿಯನ್ನು ನಿಲ್ಲಿಸಬೇಕು ಹಾಗೂ ಅಕ್ರಮ ಗೋವುಗಳ ಸಾಗಾಟ ಆಗದಂತೆ ಕ್ರಮ ಕೈಗೊಳ್ಳಬೇಕು. ಜೊತೆಗೆ ಗೋವು ಸಾಕಾಣಿಕೆ ಮಾಡುವವರ ಮನೆಗಳಿಂದ, ಬೀದಿಗಳಿಂದ, ಗುಡ್ಡಗಳಿಂದ ಗೋವುಗಳ ಕಳ್ಳತನವಾಗದಂತೆ ನೋಡಿಕೊಳ್ಳಬೇಕು ಎಂದು ಬಜರಂಗದಳದ ಕಾರ್ಯಕರ್ತರು ಆಗ್ರಹಿಸಿದ್ದಾರೆ.

    ಪೊಲೀಸರು ಅಹೋರಾತ್ರಿ ಗಸ್ತು ಹಾಗೂ ಅಗತ್ಯ ಇರುವ ಕಡೆ ನಾಕಾಬಂದಿ ಹಾಕಬೇಕು. ಜೂನ್ 18ರ ತನಕ ಯಾರೂ ಸಹ ಖಾಲಿ ಜಾಗದಲ್ಲಿ ಅಥವಾ ಮನೆಯ ಅಂಗಳದಲ್ಲಿ ಗೋವಂಶವನ್ನು ತಂದು ಕಟ್ಟಿ ಹಾಕಿ ಶೇಖರಿಸದಂತೆ ಎಚ್ಚರಿಕೆ ವಹಿಸಬೇಕು. ಯಾರಾದರೂ ಗೋ ವಧೆ ಮಾಡಿದ್ದು ಕಂಡುಬಂದಲ್ಲಿ ಅವರ ಮೇಲೆ ಗೋ ಹತ್ಯೆ ನಿಷೇಧ ಕಾಯ್ದೆ-2020ರ ಅಡಿಯಲ್ಲಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಮಹಾರಾಷ್ಟ್ರದಿಂದ ಮಾಂಜ್ರಾನದಿಗೆ ಅಪಾರ ಪ್ರಮಾಣದ ನೀರು ಬಿಡುಗಡೆ; ಬೀದರ್‌ ರೈತರ ಜಮೀನುಗಳಿಗೆ ನುಗ್ಗಿದ ನೀರು

  • ದರ್ಗಾದಲ್ಲಿ ದತ್ತಜಯಂತಿ ಆಚರಣೆಗೆ ಶ್ರೀರಾಮ ಸೇನೆ ಸಿದ್ಧತೆ- ಜಿಲ್ಲಾಡಳಿತದಿಂದ ನಿಷೇಧಾಜ್ಞೆ

    ದರ್ಗಾದಲ್ಲಿ ದತ್ತಜಯಂತಿ ಆಚರಣೆಗೆ ಶ್ರೀರಾಮ ಸೇನೆ ಸಿದ್ಧತೆ- ಜಿಲ್ಲಾಡಳಿತದಿಂದ ನಿಷೇಧಾಜ್ಞೆ

    ಚಿಕ್ಕಮಗಳೂರು: ಕರ್ನಾಟಕದ ಅಯೋಧ್ಯೆ ಎಂದೇ ಕರೆಸಿಕೊಳ್ಳುವ ದತ್ತಪೀಠದಲ್ಲಿ (Dattapeeta) ಉತ್ಸವದ ಹಿನ್ನೆಲೆ ನಾಗೇನಹಳ್ಳಿಯ ಸುತ್ತಮುತ್ತ ನಿಷೇಧಾಜ್ಞೆ ಹೊರಡಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

    ದತ್ತಪೀಠದ ದತ್ತಾತ್ರೇಯ ಸ್ವಾಮಿಯ ಉತ್ಸವ (Datta Jayanti) ಈ ಬಾರಿ ಹೊಸ ರೂಪ ಪಡೆದುಕೊಂಡಿದೆ. ವಿ.ಎಚ್.ಪಿ, ಹಾಗೂ ಬಜರಂಗದಳ ದತ್ತಪೀಠದಲ್ಲಿ ದತ್ತಜಯಂತಿ ಮಾಡುತ್ತಿದ್ದರೆ, ಶ್ರೀರಾಮಸೇನೆ (Sri Ram Sena) ದರ್ಗಾದಲ್ಲಿ ದತ್ತಜಯಂತಿಗೆ ಮುಂದಾಗಿದೆ. ಇದೇ ಕಾರಣಕ್ಕೆ ಜಿಲ್ಲಾಡಳಿತ ದರ್ಗಾ ಸುತ್ತಮುತ್ತ ನಿಷೇಧಾಜ್ಞೆ ಹೇರಿದೆ. ಪೊಲೀಸ್ ಇಲಾಖೆಯು ಪ್ರಮೋದ್ ಮುತಾಲಿಕ್ ಹಾಗೂ ಗಂಗಾಧರ್ ಕುಲಕರ್ಣಿ ಅವರಿಗೆ ಜಿಲ್ಲೆಗೆ ಬರಲು ನಿರ್ಬಂಧ ವಿಧಿಸಿದೆ. ಈ ಮಧ್ಯೆ ಸಾವಿರಾರು ಜನರಿಂದ ಬೃಹತ್ ಶೋಭಾಯಾತ್ರೆ ನಡೆಯಲಿದೆ. ಇದನ್ನೂ ಓದಿ: ಚಾರಣಕ್ಕೆ ತೆರಳಿದ್ದ ಯುವಕ ಬೆಟ್ಟದಲ್ಲೇ ಕುಸಿದು ಬಿದ್ದು ದುರ್ಮರಣ

    ದರ್ಗಾ ಇರುವ ನಾಗೇನಹಳ್ಳಿ ಗ್ರಾಮದ ಸರ್ವೇ ನಂಬರ್ 57ರ 200 ಮೀಟರ್ ಸುತ್ತಮುತ್ತ 4 ದಿನಗಳ ಕಾಲ ಜಿಲ್ಲಾಡಳಿತ ನಿಷೇಧಾಜ್ಞೆ ಹೇರಿದೆ. ಪೊಲೀಸ್ ಇಲಾಖೆ ಪ್ರಮೋದ್ ಮುತಾಲಿಕ್ ಹಾಗೂ ಗಂಗಾಧರ್ ಕುಲಕರ್ಣಿ ಅವರಿಗೆ ಮುಂದಿನ ಜ.5ರವರೆಗೆ ಜಿಲ್ಲೆಗೆ ಬರದಂತೆ ನಿರ್ಬಂಧ ವಿಧಿಸಿದೆ.

    ದತ್ತಜಯಂತಿಯ ಮೂರು ದಿನಗಳ ಕಾರ್ಯಕ್ರಮದಲ್ಲಿ ಮೊದಲ ದಿನವಾದ ಭಾನುವಾರ ಶಾಂತಿಯುತವಾಗಿ ತೆರೆಕಂಡಿದೆ. ಉಳಿದ ಎರಡು ದಿನಗಳಲ್ಲಿ ಭಕ್ತರು ಹೆಚ್ಚಾಗಿ ಬರಲಿದ್ದು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ 4,000 ಪೊಲೀಸರನ್ನು ನಿಯೋಜಿಸಲಾಗಿದೆ.

    ಚಿಕ್ಕಮಗಳೂರು ನಗರದ ಪ್ರಮುಖ ರಸ್ತೆಯಲ್ಲಿ ಇಂದು (ಸೋಮವಾರ) ಸುಮಾರು 30 ಸಾವಿರಕ್ಕೂ ಅಧಿಕ ಭಕ್ತರು ಬೃಹತ್ ಶೋಭಾಯಾತ್ರೆ ನಡೆಸಲಿದ್ದಾರೆ. ಕಾಮಧೇನು ಗಣಪತಿ ದೇವಾಲಯದಿಂದ ಆರಂಭವಾಗುವ ಯಾತ್ರೆ ಕೆಇಬಿ ಸರ್ಕಲ್, ಬಸವನಹಳ್ಳಿ, ಹನುಮಂತಪ್ಪ ಸರ್ಕಲ್, ಎಂ.ಜಿ.ರಸ್ತೆ ಮೂಲಕ ಸಾಗಿ ಆಜಾದ್ ಪಾರ್ಕ್‍ವರೆಗೆ ಸುಮಾರು 4 ಕಿ.ಮೀ. ನಡೆಯಲಿದೆ.

    ಇನ್ನೂ ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ತಂತ್ರ ಹೆಣೆಯುತ್ತಿರುವ ವಿಪಕ್ಷ ನಾಯಕ ಆರ್.ಅಶೋಕ್ ಇದೇ ಮೊದಲ ಬಾರಿಗೆ ದತ್ತ ಮಾಲೆ ಧರಿಸಿ ದತ್ತಭಕ್ತರಾಗಿದ್ದಾರೆ. ಮಾಲಾಧಾರಿ ವಿಪಕ್ಷ ನಾಯಕ ಅಶೋಕ್, ದತ್ತಪೀಠ ಅತಿಕ್ರಮಣವಾಗಿದೆ. ದತ್ತಪೀಠ ದತ್ತಪೀಠವಾಗಿಯೇ ಉಳಿಯಬೇಕು ಎಂದು ಆಗ್ರಹಿಸಿದ್ದಾರೆ. ಈ ಮಧ್ಯೆ ಶಾಸಕ ಸಿ.ಟಿ.ರವಿ ದತ್ತಪೀಠ ಹಿಂದೂಗಳ ಪೀಠ, ಹಿಂದೂಗಳಿಗೆ ಸೇರಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಮಿಮಿಕ್ರಿ ಮಾಡೋದು ಕಲೆ ಆಗಿದ್ದು, ಬೇಕಿದ್ರೆ ಸಾವಿರ ಬಾರಿ ಮಾಡ್ತೀನಿ: ಟಿಎಂಸಿ ಸಂಸದ

  • ಕಾಫಿನಾಡಲ್ಲಿ ಡಿ.17 ರಿಂದ 26ರವರೆಗೆ ದತ್ತ ಜಯಂತಿ ಸಂಭ್ರಮ

    ಕಾಫಿನಾಡಲ್ಲಿ ಡಿ.17 ರಿಂದ 26ರವರೆಗೆ ದತ್ತ ಜಯಂತಿ ಸಂಭ್ರಮ

    ಚಿಕ್ಕಮಗಳೂರು: ಪ್ರತಿ ವರ್ಷದಂತೆ ಈ ವರ್ಷವೂ ವಿಶ್ವ ಹಿಂದೂ ಪರಿಷತ್ (VHP) ಮತ್ತು ಬಜರಂಗದಳದ (Bajarang Dal) ವತಿಯಿಂದ ಡಿ.17 ರಿಂದ ಡಿ.26ರವರೆಗೆ ದತ್ತ ಜಯಂತಿ (Datta Jayanti) ಕಾರ್ಯಕ್ರಮವನ್ನು ವಿಜೃಂಭಣೆಯಿಂದ ನಡೆಸಲು ತೀರ್ಮಾನಿಸಲಾಗಿದೆ ಎಂದು ಬಜರಂಗದಳ ದಕ್ಷಿಣ ಕರ್ನಾಟಕ ಪ್ರಾಂತ ಸಂಯೋಜಕ ಕೆ.ಆರ್.ಸುನೀಲ್ ತಿಳಿಸಿದ್ದಾರೆ.

    ನಗರದಲ್ಲಿ ಮಾತನಾಡಿದ ಅವರು, ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದ ನಿರಂತರ ಹೋರಾಟದಿಂದ ದತ್ತಪೀಠದಲ್ಲಿ ಈಗಾಗಲೇ ತ್ರಿಕಾಲ ಪೂಜೆ ನಡೆಯುತ್ತಿದೆ. 2023ರಲ್ಲಿ ದತ್ತ ಜಯಂತಿಯನ್ನು ಕರ್ನಾಟಕ ನಾಡ ಉತ್ಸವದಂತೆ ಆಚರಿಸಲು ಸಂಘಟನೆ ತೀರ್ಮಾನಿಸಿದೆ. ಈ ಹಿನ್ನಲೆಯಲ್ಲಿ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದರು. ಇದನ್ನೂ ಓದಿ: ಒಂದಲ್ಲ ಮೂರು ಬಾರಿ ಮನೋರಂಜನ್‌ಗೆ ಪ್ರತಾಪ್‌ ಸಿಂಹ ಕಚೇರಿಯಿಂದ ಸಿಕ್ಕಿತ್ತು ಪಾಸ್‌!

    ಈ ಬಾರಿಯ ದತ್ತಜಯಂತಿಗೆ ರಾಜ್ಯದ ವಿವಿಧ ಭಾಗಗಳಿಂದ 30 ಸಾವಿರಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಬರುವ ನಿರೀಕ್ಷೆಯಿದೆ. ಡಿ.17ರಂದು ನಗರದ ಕಾಮಧೇನು ಗಣಪತಿ ದೇವಸ್ಥಾನದಲ್ಲಿ ದತ್ತಮಾಲಾಧಾರಣೆ ನಡೆಯಲಿದೆ. ಡಿ.24ರಂದು ಅನುಸೂಯ ಜಯಂತಿ ನಡೆಯಲಿದ್ದು, ಆ ದಿನ ಬೆಳಗ್ಗೆ 9:30ಕ್ಕೆ ಮಹಿಳೆಯರಿಂದ ಸಂಕೀರ್ತನಾ ಯಾತ್ರೆ ನಡೆಯಲಿದೆ. ದತ್ತಪೀಠದಲ್ಲಿ ಗಣಪತಿ ಪೂಜೆ, ಪುಣ್ಯಹವಾಚನ, ಪಂಚಗವ್ಯ ಶುದ್ಧಿ, ಗಣಪತಿ ಹೋಮ, ದುರ್ಗಾಹೋಮ, ಕಲಶಾಭಿಷೇಕ, ಹಾಗೂ ಮಹಾಪೂಜೆ ಜರುಗಲಿದೆ. ಸಂಜೆ ಪಾದುಕಾಶುದ್ಧಿ, ಪ್ರಕಾರ ಶುದ್ಧಿ, ಸುದರ್ಶನ ಹೋಮ, ಕಲಶಾಭಿಷೇಕ ಮಹಾಪೂಜೆ ನಡೆಯಲಿದೆ ಎಂದು ತಿಳಿಸಿದರು. ಇದನ್ನೂ ಓದಿ: ಸಂಸತ್‍ನಲ್ಲಿ ಸ್ಮೋಕ್ ಬಾಂಬ್ ಎಸೆದಿದ್ದ ಮನೋರಂಜನ್ ಯಾರು?, ಈತನ ಹಿನ್ನೆಲೆಯೇನು?

    ಡಿ.25ರಂದು ಚಿಕ್ಕಮಗಳೂರು ನಗರದಲ್ಲಿ ಬೃಹತ್ ಶೋಭಾಯಾತ್ರೆ ಹಾಗೂ ಆಜಾದ್ ಪಾರ್ಕ್ ವೃತ್ತದಲ್ಲಿ ಧಾರ್ಮಿಕ ಸಭೆ ನಡೆಯಲಿದೆ. ಈ ಸಭೆಯಲ್ಲಿ ಸಾಧು-ಸಂತರು, ಸ್ವಾಮೀಜಿಗಳು ಹಾಗೂ ವಿಶ್ವ ಹಿಂದೂ ಪರಿಷತ್ ಅಖಿಲ ಭಾರತೀಯ ಸಹಕಾರ್ಯದರ್ಶಿ ಶಂಕರ್ ಗಾಯ್ಕರ್ ಭಾಗವಹಿಸಲಿದ್ದಾರೆ. ಅಂದು ದತ್ತಪೀಠದಲ್ಲಿ ನವಕಲಶ ಕಲಾವಾಹನಂ, ಕಲಾತತ್ವಾದಿವಾಸ ಪೂಜೆ, ಕಲಾಹೋಮ, ರುದ್ರಹೋಮ, ಕಲಶಾಭೀಷೇಕ ಮಹಾಪೂಜೆ ನಡೆಸಲು ಸಂಘಟನೆ ತೀರ್ಮಾನಿಸಿದೆ. ಡಿ.26ರಂದು ದತ್ತಪೀಠದಲ್ಲಿ ದತ್ತಜಯಂತಿ ಪ್ರಯುಕ್ತ ದತ್ತಭಕ್ತರು ದತ್ತಪೀಠಕ್ಕೆ ತೆರಳಿ ದತ್ತಪಾದುಕೆ ದರ್ಶನ ಪಡೆಯುವರು. ಅಲ್ಲಿ ದತ್ತಾತ್ರೇಯ ಮಹಾಮಂತ್ರ, ಮಹಾಯಾಗ, ಕಲಶಾಭಿಷೇಕ, ಮಹಾಪೂಜೆ, ತಂತ್ರಿಗಳಿಂದ ಆಶೀರ್ವಚನಾ, ಬ್ರಹ್ಮಭೋಜನ, ಪ್ರಸಾದ ವಿನಿಯೋಗ ನಡೆಯಲಿದೆ. ದತ್ತಜಯಂತಿಯನ್ನು ವಿಜೃಂಭಣೆಯಿಂದ ನಡೆಸಲು ನಿರ್ಧರಿಸಿದ್ದು, ಜಿಲ್ಲಾಡಳಿತ ಹೈಕೋರ್ಟ್ ಆದೇಶದಂತೆ ಸೌಕರ್ಯವನ್ನು ಒದಗಿಸಬೇಕೆಂದು ಜಿಲ್ಲಾಡಳಿತಕ್ಕೆ ಮನವಿ ಮಾಡಿದ್ದಾರೆ.  ಇದನ್ನೂ ಓದಿ: ಸಾಗರ್ ಶರ್ಮಾ ಇ-ರಿಕ್ಷಾ ಓಡಿಸುತ್ತಿದ್ದ: ಆರೋಪಿ ಮಗನ ಬಗ್ಗೆ ತಾಯಿ ಹೇಳಿದ್ದೇನು?

  • ಹಿಂದೂ ಯುವಕನ ಕೈ ಹಿಡಿದ ಮುಸ್ಲಿಂ ಯುವತಿ – ಠಾಣೆ ಎದುರೇ ಹಾರ ಬದಲಿಸಿದ ಜೋಡಿ

    ಹಿಂದೂ ಯುವಕನ ಕೈ ಹಿಡಿದ ಮುಸ್ಲಿಂ ಯುವತಿ – ಠಾಣೆ ಎದುರೇ ಹಾರ ಬದಲಿಸಿದ ಜೋಡಿ

    ಧಾರವಾಡ: ಮನೆಯವರ ವಿರೋಧದ ನಡುವೆಯೂ ಮುಸ್ಲಿಂ (Muslim) ಹುಡುಗಿ ಹಿಂದೂ (Hindu) ಹುಡಗನ ಕೈ ಹಿಡಿದ ಘಟನೆ ಧಾರವಾಡದಲ್ಲಿ ನಡೆದಿದೆ.

    ಮಂಜುನಾಥ್ ಹಾಗೂ ಉಮೇದ್ ಕಳೆದ ಆರು ವರ್ಷಗಳಿಂದ ಒಬ್ಬರನ್ನೊಬ್ಬರು ಪ್ರೀತಿಸುತ್ತಿದ್ದರು. ಆದರೆ ಅವರ ಪ್ರೀತಿಗೆ (Love) ಯುವತಿಯ ಮನೆಯವರ ತೀವ್ರ ವಿರೋಧವಿತ್ತು. ಅದಕ್ಕೆ ಕಾರಣ ಅವರಿಬ್ಬರ ಧರ್ಮ. ಆದರೆ ಈ ಪ್ರೇಮಿಗಳು ಧರ್ಮವನ್ನೂ ಮೀರಿ ಪ್ರೀತಿಸಿದ್ದು, ಕೊನೆಗೆ ಪೊಲೀಸ್ ಠಾಣೆಯಲ್ಲಿ ಮದುವೆಯಾಗುವ (Marriage) ಮೂಲಕ ಒಂದಾಗಿದ್ದಾರೆ. ಇದನ್ನೂ ಓದಿ: ಲವ್ವರ್ ಮಾತು ಕೇಳಿ ಪತಿ ಮೊಬೈಲ್‍ನಿಂದ ಬೆದರಿಕೆ ಮೆಸೇಜ್ ಕಳಿಸಿ ಸಿಕ್ಕಿಬಿದ್ದ ಪತ್ನಿ!

    ಧಾರವಾಡ (Dharwad) ತಾಲೂಕಿನ ಬಾಡ ಗ್ರಾಮದವರಾದ ಇವರಿಬ್ಬರು ಅನ್ಯ ಧರ್ಮಕ್ಕೆ ಸೇರಿದವರಾಗಿದ್ದರು. ಯುವಕ ಮಂಜುನಾಥ್ ಹಿಂದೂ ಧರ್ಮಕ್ಕೆ ಸೇರಿದರೆ, ಯುವತಿ ಉಮೇದ್ ಮುಸ್ಲಿಂ ಧರ್ಮದವಳು. ಇವರ ಪ್ರೇಮಕ್ಕೆ ಯುವಕನ ಮನೆಯವರ ವಿರೋಧವೇನೂ ಇರಲಿಲ್ಲ. ಆದರೆ ಯುವತಿಯ ಮನೆಯವರು ಇವರಿಬ್ಬರ ಪ್ರೇಮಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಈ ವಿರೋಧದ ಮಧ್ಯೆಯೂ ಪ್ರೇಮಿಗಳು ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ತಮ್ಮ ವಿವಾಹ ನೋಂದಣಿ ಸಹ ಮಾಡಿಕೊಂಡು ಊರು ಬಿಟ್ಟು ಹೋಗಿದ್ದರು. ಈ ಸಂಬಂಧ ಧಾರವಾಡದ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಯುವತಿ ನಾಪತ್ತೆ ಕೇಸ್ ಕೂಡ ದಾಖಲಾಗಿತ್ತು. ಇದನ್ನೂ ಓದಿ: ಪ್ರಾಂಜಲ್ ಕುಟುಂಬಕ್ಕೆ 50 ಲಕ್ಷ ಪರಿಹಾರದ ಚೆಕ್ ವಿತರಣೆ

    ಇಂದು ಇಬ್ಬರೂ ಪ್ರೇಮಿಗಳು ತಮ್ಮನ್ನು ಒಂದು ಮಾಡುವಂತೆ ಪೊಲೀಸರ ಮೊರೆ ಹೋಗಿದ್ದರು. ಸ್ವತಃ ತಾವೇ ಠಾಣೆಗೆ ಬಂದು ಹಾಜರಾಗಿದ್ದರು. ಆದರೆ ಪೊಲೀಸರು ಯುವತಿಯನ್ನು ಸಾಂತ್ವನ ಕೇಂದ್ರಕ್ಕೆ ಕಳುಹಿಸುವ ಮೂಲಕ ಇಬ್ಬರನ್ನೂ ಬೇರೆ ಬೇರೆ ಮಾಡುವ ಕೆಲಸ ಮಾಡಿದ್ದರು. ಈ ವಿಷಯ ತಿಳಿದು ಸ್ಥಳಕ್ಕೆ ಬಂದ ಬಜರಂಗದಳ ಕಾರ್ಯಕರ್ತರು ಇಬ್ಬರೂ ಪ್ರೇಮಿಗಳನ್ನು ಒಂದು ಮಾಡಬೇಕು. ಯುವಕನ ಜೊತೆ ಹೋಗಲು ಯುವತಿಯ ಮನಸ್ಸಿದ್ದರೂ ಆಕೆಯನ್ನು ಒತ್ತಾಯದಿಂದ ಸಾಂತ್ವನ ಕೇಂದ್ರಕ್ಕೆ ಕಳುಹಿಸಿರುವುದು ಏಕೆ ಎಂದು ಪ್ರಶ್ನೆ ಮಾಡಿದ್ದರು. ಸದ್ಯ ಬಜರಂಗದಳದ ಕಾರ್ಯಕರ್ತರು ಇಬ್ಬರೂ ಪ್ರೇಮಿಗಳಿಗೆ ಠಾಣೆಯಲ್ಲೇ ಮದುವೆ ಸಹ ಮಾಡಿಸಿ ಈ ವಿವಾದಕ್ಕೆ ಅಂತ್ಯ ಹಾಡಿದ್ದಾರೆ. ಇದನ್ನೂ ಓದಿ: ಅರ್ಜುನನ ಅಂತ್ಯಸಂಸ್ಕಾರಕ್ಕೆ ಅಡ್ಡಿ – ಪೊಲೀಸರಿಂದ ಲಾಠಿ ಪ್ರಹಾರ, ದಿಕ್ಕಾಪಾಲಾಗಿ ಓಡಿದ ಜನ