Tag: ಬಜೆಪಿ

  • RSS ಹುಟ್ಟಿದಾಗಿಂದ್ಲೂ ಏನೆಲ್ಲ ಮಾಡ್ಕೊಂಡು ಬಂದಿದೆ ಅನ್ನೋದು ಜಗತ್ತಿಗೆ ಗೊತ್ತಿದೆ: ಎಚ್‍ಡಿಕೆ

    RSS ಹುಟ್ಟಿದಾಗಿಂದ್ಲೂ ಏನೆಲ್ಲ ಮಾಡ್ಕೊಂಡು ಬಂದಿದೆ ಅನ್ನೋದು ಜಗತ್ತಿಗೆ ಗೊತ್ತಿದೆ: ಎಚ್‍ಡಿಕೆ

    ಬೆಂಗಳೂರು: ಸೇವೆಯ ಸೋಗಿನಲ್ಲಿ ಸಂಸ್ಥೆಗಳು ರಾಜಕೀಯ ಮಾಡಬಾರದು. ಜನರ ಬವಣೆಗಳ ನಿವಾರಣೆ ನಿಟ್ಟಿನಲ್ಲಿ ದುಡಿಯಬೇಕೆ ಹೊರತು ಬದುಕಿಗೇ ಬೆಂಕಿ ಇಡಬಾರದು. ಸಮಾಜದ ಶಾಂತಿಯನ್ನು ಕಾಪಾಡಬೇಕೇ ಹೊರತು, ಅದಕ್ಕೆ ಕೊಳ್ಳಿ ಇಡಬಾರದು. ಆರ್‌ಎಸ್‌ಎಸ್‌ ಹುಟ್ಟಿದಾಗಿನಿಂದಲೂ ಏನೆಲ್ಲ ಮಾಡಿಕೊಂಡು ಬಂದಿದೆ ಎನ್ನುವುದು ಜಗತ್ತಿಗೇ ಗೊತ್ತಿರುವ ಸಂಗತಿ ಎಂದು ಎಚ್.ಡಿ ಕುಮಾರಸ್ವಾಮಿ ಆರ್‌ಎಸ್‌ಎಸ್‌ ವಿರುದ್ಧ ಟ್ವಿಟ್ಟರ್‍ ನಲ್ಲಿ ಟ್ವೀಟ್ ಮಾಡಿದ್ದಾರೆ.

    ಟ್ವೀಟ್‍ನಲ್ಲಿ ಏನಿದೆ?

    ಜನ ಪ್ರತಿನಿಧಿಗಳನ್ನು, ಸರ್ಕಾರಗಳನ್ನು, ಆಡಳಿತ ಯಂತ್ರಾಂಗವನ್ನು ಕಪಿಮುಷ್ಠಿಯಲ್ಲಿ ಇಟ್ಟುಕೊಳ್ಳುವ ಪರಿಪಾಠ ದೇಶಕ್ಕೆ ಒಳ್ಳೆಯದಲ್ಲ. ಅರ್ಥ ಮಾಡಿಕೊಳ್ಳಿ ಸಿ.ಟಿ ರವಿಯರೇ. ನಾನು ಸತ್ಯದ ಪರ. ಸಿ.ಟಿ ರವಿಯವರೇ, ಮನೆಯಲ್ಲಿ ಕೂತು ಪುಸ್ತಕ ಓದಿದರೆ ಸಾಲದು ಎಂದಿದ್ದೀರಿ. ಆರ್‌ಎಸ್‌ಎಸ್‌ ಬಗ್ಗೆ ಜ್ಞಾನಾರ್ಜನೆ, ಅಧ್ಯಯನ, ಸಂಶೋಧನೆ ಮಾಡಲು ಸಂಘದ ಶಾಖೆಗೆ ಬನ್ನಿ ಎಂದು ನನಗೆ ಆಹ್ವಾನ ಕೊಟ್ಟಿದ್ದೀರಿ. ನಿಮ್ಮ ಸಂಘದೊಳಗಿನ ವಾಸ್ತಾವಾಂಶಗಳನ್ನು ಪ್ರತ್ಯಕ್ಷವಾಗಿ ನೋಡಿದವರೇ ಬರೆದ ಪುಸ್ತಕ ಓದಿ ನನಗೆ ಅಲ್ಲಿನ ವ್ಯವಹಾರಗಳ ವಿರಾಟ್ ದರ್ಶನ ಆಗಿದೆ. ಇನ್ನು ಶಾಖೆಯನ್ನೇ ಸೇರಿಕೊಂಡರೆ ಇನ್ನೆಷ್ಟು ಸತ್ಯ ಸಂಗತಿಗಳು ಗೊತ್ತಾಗಬಹುದು. ನೀವೇ ಒಮ್ಮೆ ಊಹಿಸಿ. ಇದನ್ನೂ ಓದಿ: RSS ಜಾತಿ, ಧರ್ಮ ಮೀರಿದ ಮಾತೃಹೃದಯಿ ಸಂಘಟನೆ: ಜಗ್ಗೇಶ್

    ಶಿವಮೊಗ್ಗದಲ್ಲಿ 2,000 ರೂ. ಪರಿಹಾರ ಪಡೆಯಲು 100 ರೂ. ಲಂಚ ಕೇಳಿದ ವರದಿಗಳು ಬಂದಿವೆ. ಇದಾ ನಿಮ್ಮ ಸಮಾಜ ಸೇವೆ? ಛಿದ್ರವಾದ ಬದುಕುಗಳನ್ನೊಮ್ಮೆ ನೋಡಿ. ಜನರ ಬವಣೆಗಳ ಬಗ್ಗೆ ಆರ್‌ಎಸ್‌ಎಸ್‌ ಶಾಖೆಗಳಲ್ಲಿ ನಿಮಗೆಲ್ಲರಿಗೂ ಏನನ್ನೂ ಹೇಳಿಕೊಡುವುದಿಲ್ಲವಾ ಸಿ.ಟಿ.ರವಿಯವರೇ? ಸ್ವಜನ ಪಕ್ಷಪಾತ, ಭ್ರಷ್ಟಾಚಾರ, ಕುಟುಂಬ ರಾಜಕಾರಣದ ಬಗ್ಗೆ ಮಾತನಾಡಿದ್ದೀರಿ. ನಿಮ್ಮ ಪಕ್ಷ ಮತ್ತು ನಿಮ್ಮ ಸರ್ಕಾರದಲ್ಲಿ ತಾಂಡವವಾಡುತ್ತಿರುವ ಅಪರಿಮಿತ ಭ್ರಷ್ಟಾಚಾರ, ಕುಟುಂಬ ರಾಜಕಾರಣ, ಸ್ವಜನ ಪಕ್ಷಪಾತದ ಬಗ್ಗೆಯೂ ನೀವು ಹೇಳಬೇಕು. ಅದಕ್ಕೂ RSS ಶಾಖೆಯಲ್ಲೇ ತರಬೇತಿ ನೀಡಲಾಯಿತಾ? ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಬುಡಮೇಲು ಮಾಡುವಂಥ ‘ಆಪರೇಷನ್ ಕಮಲ’ದಂಥ ‘ಅನೈತಿಕ’, ‘ನಿರ್ಲಜ್ಜ’, ‘ನೀಚ’ ರಾಜಕಾರಣವನ್ನು ಆರ್‌ಎಸ್‌ಎಸ್‌ ಶಾಖೆಯಲ್ಲೇ ಕಲಿಸಲಾಯಿತಾ ಎಂಬುದನ್ನೂ ನೀವು ಜನರಿಗೆ ಹೇಳಬೇಕು ಸಿ.ಟಿ.ರವಿಯವರೇ?. ಇದನ್ನೂ ಓದಿ: ಗ್ರಾಹಕರಿಗೆ ಇನ್ನಷ್ಟು ಹೊರೆ- ಸಿಲಿಂಡರ್ ದರದಲ್ಲಿ 15 ರೂ. ಏರಿಕೆ

  • ನನ್ನನ್ನು ಟಾರ್ಗೆಟ್ ಮಾಡುವುದಕ್ಕೆ ಬಂದವರೆಲ್ಲಾ ಮಣ್ಣಲ್ಲಿ ಮಣ್ಣಾಗಿ ಹೋಗಿದ್ದಾರೆ: ಪುಟ್ಟರಾಜು

    ನನ್ನನ್ನು ಟಾರ್ಗೆಟ್ ಮಾಡುವುದಕ್ಕೆ ಬಂದವರೆಲ್ಲಾ ಮಣ್ಣಲ್ಲಿ ಮಣ್ಣಾಗಿ ಹೋಗಿದ್ದಾರೆ: ಪುಟ್ಟರಾಜು

    ಮೈಸೂರು: ನನ್ನ 37 ವರ್ಷದ ರಾಜಕೀಯ ಜೀವನದ ಎದುರಾಳಿಗಳು ಈಗ ನಮ್ಮ ಮುಂದೆ ಇಲ್ಲ. ಹಾಗಾಗಿ ನನ್ನನ್ನು ಟಾರ್ಗೆಟ್ ಮಾಡುವುದಕ್ಕೆ ಬಂದವರೆಲ್ಲಾ ಮಣ್ಣಲ್ಲಿ ಮಣ್ಣಾಗಿ ಹೋಗಿದ್ದಾರೆ. ನನಗೆ ಬುದ್ದಿ ಹೇಳಿ ಸರಿ ದಾರಿ ತೋರಿದವರೂ ಇದ್ದಾರೆ, ಖ್ಯಾತೆ ತೆಗೆದು ಕಣ್ಮರೆಯಾದವರೂ ಇದ್ದಾರೆ ಎನ್ನುವ ಮೂಲಕ ಪರೋಕ್ಷವಾಗಿ ಸಂಸದೆ ಸುಮಲತಾ ಅಂಬರೀಶ್ ವಿರುದ್ಧ ಶಾಸಕ ಸಿ.ಎಸ್ ಪುಟ್ಟರಾಜು ಆಕ್ರೋಶ ಹೊರಹಾಕಿದ್ದಾರೆ.

    ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಪುಟ್ಟರಾಜು ಅವರು, 1983ರಲ್ಲೇ ನಾನು ಸಕ್ರಿಯವಾಗಿ ರಾಜಕೀಯಕ್ಕೆ ಬಂದವನು. ಗಣಿಗಾರಿಕೆ ವಿಚಾರದಲ್ಲಿ ಯಾರೇ ಅಕ್ರಮ ಮಾಡಿದ್ದರೂ ಮುಲಾಜಿಲ್ಲದೇ ಕ್ರಮ ಕೈಗೊಳ್ಳಲಿ. ಆದರೆ ಸಕ್ರಮ ಇರುವ ಕ್ರಷರ್ ಗಳನ್ನು ಅಭಿವೃದ್ಧಿ ದೃಷ್ಟಿಯಿಂದ ಆರಂಭಿಸಬೇಕು. ಈ ಬಗ್ಗೆ ದಿಶಾ ಮೀಟಿಂಗ್ ನಲ್ಲಿ ಚರ್ಚೆ ಮಾಡಿದ್ದೇವೆ. ಅಕ್ರಮ ಗಣಿಗಾರಿಕೆ ಎಂದು ಎರಡು ತಿಂಗಳಿಂದ ಅಭಿವೃದ್ಧಿ ಕೆಲಸ ಆಗುತ್ತಿಲ್ಲ. ಹಾಗಾಗಿ ದಿಶಾ ಸಭೆಯಲ್ಲಿ ಜಿಲ್ಲೆ ಅಭಿವೃದ್ಧಿಗೆ ಒತ್ತು ನೀಡುವಂತೆ ತೀರ್ಮಾನ ಮಾಡಲಾಗಿದೆ. ಕಾನೂನು ಚೌಕಟ್ಟಿನಲ್ಲೇ ಎಲ್ಲರೂ ಒಟ್ಟಾಗಿ ಅಭಿವೃದ್ಧಿ ಕೆಲಸ ಮಾಡುತ್ತಿದ್ದೇವೆ ಎಂದು ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: ದಶಪಥದ ರಸ್ತೆ ಇರೋದು ಮೈಸೂರಿಗಾಗಿ, ಇದಕ್ಕಾಗಿ ಹೆಚ್ಚು ಆಸಕ್ತಿವಹಿಸಿದ್ದೇನೆ: ಪ್ರತಾಪ್ ಸಿಂಹ

    ನನಗೆ ಎಸ್.ಎಂ ಕೃಷ್ಣ ರಂತಹ ಮುಖ್ಯಮಂತ್ರಿ ಇಷ್ಟ. ಎಸ್.ಎಂ ಕೃಷ್ಣ ಅವರು ರಾಜ್ಯದ ಸಿಎಂ ಆಗಿದ್ದಾಗ ಕೈಗಾರಿಕೆ ಬೆಳವಣಿಗೆಗೆ ಉತ್ತೇಜನ ನೀಡಿದ್ದರು. ಕೃಷ್ಣ ಅವರ ಮುಂದಾಲೋಚನೆ ಕೆಲಸಗಳನ್ನು ಫಾಲೋ ಮಾಡಬೇಕು. ಆದರೂ ನಾನು ಎಲ್ಲ ಮುಖ್ಯಮಂತ್ರಿಗಳಿಗಿಂತ ಎಸ್.ಎಂ ಕೃಷ್ಣ ಅವರನ್ನು ಬಹಳ ಇಷ್ಟ ಪಡುತ್ತೇನೆ. ಅವರ ಕಾರ್ಯವೈಖರಿ ನನಗೆ ವೈಯಕ್ತಿಕವಾಗಿ ಇಷ್ಟ ಎಂದು ಹಾಡಿ ಹೊಗಳಿದ್ದಾರೆ. ಇದನ್ನೂ ಓದಿ: ಚಾಮುಂಡಿ ಬೆಟ್ಟದಲ್ಲಿ ಜನಸ್ತೋಮ – ಇಂದು ಸೇರಿದಂತೆ 3 ದಿನ ಭಕ್ತರ ಪ್ರವೇಶಕ್ಕೆ ನಿರ್ಬಂಧ

  • ಸಮ್ಮಿಶ್ರ ಸರ್ಕಾರ ಪತನಕ್ಕೆ ಪೆಗಾಸಸ್ ಕಾರಣ: ಪರಮೇಶ್ವರ್

    ಸಮ್ಮಿಶ್ರ ಸರ್ಕಾರ ಪತನಕ್ಕೆ ಪೆಗಾಸಸ್ ಕಾರಣ: ಪರಮೇಶ್ವರ್

    ತುಮಕೂರು: ಮಾಜಿ ಸಿಎಂ ಕುಮಾರಸ್ವಾಮಿ ಆಪ್ತ ಕಾರ್ಯದರ್ಶಿ, ಸಮನ್ವಯ ಸಮಿತಿ ಅಧ್ಯಕ್ಷರಾಗಿದ್ದ ಸಿದ್ದರಾಮಯ್ಯ ಆಪ್ತ ಕಾರ್ಯದರ್ಶಿ ಹಾಗೂ ನನ್ನದು ಫೋನ್ ಟ್ಯಾಪಿಂಗ್ ಮಾಡಿರುವುದು ಬೆಳಕಿಗೆ ಬಂದಿದೆ ಎಂದು ಮಾಜಿ ಡಿಸಿಎಂ ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ್ ಅವರು, ಪೆಗಾಸಸ್ ಫೋನ್ ಟ್ಯಾಪಿಂಗ್ ಕಾನೂನಿಗೆ ವಿರೋಧ. ಅನೇಕ ಸರ್ಕಾರಗಳು ಫೋನ್ ಟ್ಯಾಪಿಂಗ್ ನಿಂದ ಬಿದ್ದು ಹೊಗಿವೆ. ನಮ್ಮ ರಾಜ್ಯದಲ್ಲೂ ಉದಾಹರಣೆ ಇದೆ. ಅನೇಕ ಸಚಿವರು, ಅಧಿಕಾರವನ್ನು ಕಳೆದುಕೊಂಡಿರುವ ಉದಾಹರಣೆ ದೇಶದಲ್ಲಿದೆ. ರಾಜ್ಯದಲ್ಲಿ 17 ಶಾಸಕರು ಕಾಂಗ್ರೆಸ್, ಜೆಡಿಎಸ್ ನಿಂದ ಹೋದರು. ಅವರು ಸುಮ್ಮನೆ ಹೋಗಿದ್ದಾರೆ ಎಂದು ಅನಿಸುತ್ತಿಲ್ಲ ಹಣ ಪಡೆದುಕೊಂಡು ಹೋಗಿರಬಹುದು. ಆ ಸಂದರ್ಭದಲ್ಲಿ ಫೋನ್ ಟ್ಯಾಪಿಂಗ್ ನಡೆದಿದೆ ಎಂದು ಆರೋಪಿಸಿದ್ದಾರೆ.

    ರಾಜಕೀಯ ನಾಯಕರ, ಪತ್ರಕರ್ತರ, ಕೈಗಾರಿಕೊದ್ಯಮಿಗಳ ಫೋನ್ ಟ್ಯಾಪಿಂಗ್ ಆಗಿದೆ. ಇವರೆಲ್ಲರ ಟೆಲಿಫೋನ್ ಟ್ಯಾಪ್ ಯಾವ ಕಾರಣಕ್ಕೆ ಆಗಿದೆ. ಪೆಗಾಸಸ್ ಕಂಪನಿ ನೇರವಾಗಿ ಬಂದು ಟ್ಯಾಪ್ ಮಾಡಲು ಸಾಧ್ಯವಿಲ್ಲ. ಟ್ಯಾಪ್ ಮಾಡಬೇಕಾದರೇ ಪ್ರಸ್ತುತ ಸರ್ಕಾರದ ಅನುಮತಿ ಬೇಕು. ಗೃಹಖಾತೆ ಕಾರ್ಯದರ್ಶಿ ಅನುಮತಿ ನೀಡುತ್ತಾರೆ. ಇಂದು ಹೊರದೇಶದ ಪೆಗಾಸಿಸ್ ಬಂದು ಟ್ಯಾಪ್ ಮಾಡ್ತಾರೆ ಅಂದರೆ ಯಾರು ಅನುಮತಿ ನೀಡಿದರು? ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರ ಅನುಮತಿ ನೀಡಿರಬೇಕು. ಕೇಂದ್ರ ಸರ್ಕಾರ ಇಲ್ಲಿ ಅನುಮತಿ ಕೊಟ್ಟಿರಬೇಕು. ಇಲ್ಲದಿದ್ದರೆ ಹೇಗೆ ಫೋನ್ ಟ್ಯಾಪಿಂಗ್ ಮಾಡಿದರು? ಈ ಬಗ್ಗೆ ಕೇಂದ್ರ ಸ್ಪಷ್ಟನೆ ನೀಡಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: ಫೋನ್ ಕದ್ದಾಲಿಕೆ ಯಾಕೆ? ಹೇಗೆ? ಯಾರು ಮಾಡಬಹುದು?

    ಕೇಂದ್ರ ಸರ್ಕಾರ ಅನುಮತಿ ನೀಡಿದೆಯೇ ಎಂಬ ಅನುಮಾನ. ಇಲ್ಲಾ ಅವರೇ ಮಾಡಿದ್ದಾರ? ನಮ್ಮ ರಕ್ಷಣೆ ಕೇಂದ್ರ ಮಾಡುತ್ತಿದೆಯಾ ಇಲ್ವಾ ಅನ್ನೋ ಅನುಮಾನ ಬರ್ತಿದೆ. ಯಾವ ಉದ್ದೇಶಕ್ಕೆ ಫೋನ್ ಟ್ಯಾಪ್ ಆಗಿದೆ? ಜುಲೈ ತಿಂಗಳಲ್ಲಿ ಟೆಲಿಫೋನ್ ಟ್ಯಾಪ್ ನಡೆದಿರಬಹುದು. ಆಗಿನ ಫೋನ್ ಸಂಭಾಷಣೆ ಬಳಸಿಕೊಂಡು ಸರ್ಕಾರ ಕೆಡವಿರಬಹುದು ಎಂದು ಆರೋಪಿಸಿದರು. ಸರ್ಕಾರ ಕೆಡವಲು ಪೆಗಾಸಿಸ್ ಸಾಫ್ಟ್‍ವೇರ್ ಬಳಸಿಕೊಂಡು ಮಾಡಿದ್ದಾರಾ? ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇದು ನಡೆಯಬಾರದು ಎಂದು ಪರಮೇಶ್ವರ್ ಫೋನ್ ಟ್ಯಾಪಿಂಗ್ ಅನ್ನು ಖಂಡಿಸಿದರು.

  • ಸರ್ಕಾರಕ್ಕೆ ಪಂಚೇಂದ್ರಿಯಗಳು ಇದ್ರೆ ನೌಕರರ ಬೇಡಿಕೆ ಈಡೇರಿಸಲಿ: ರಮೇಶ್ ಕುಮಾರ್

    ಸರ್ಕಾರಕ್ಕೆ ಪಂಚೇಂದ್ರಿಯಗಳು ಇದ್ರೆ ನೌಕರರ ಬೇಡಿಕೆ ಈಡೇರಿಸಲಿ: ರಮೇಶ್ ಕುಮಾರ್

    ಕೋಲಾರ: ಸಾರಿಗೆ ನೌಕರರು ಹಾಗೂ ಸಾರಿಗೆಯನ್ನು ಅವಲಂಬಿಸಿರುವವರೆಲ್ಲರೂ ಮಧ್ಯಮ ವರ್ಗದವರು, ಸರ್ಕಾರಕ್ಕೆ ಪಂಚೇಂದ್ರಿಯಗಳು ಕೆಲಸ ಮಾಡುತ್ತಿದ್ದರೆ ಮುಷ್ಕರವನ್ನು ಹತ್ತಿಕ್ಕುವ ಬದಲು ನೌಕರರ ಬೇಡಿಕೆ ಈಡೇರಿಸಿ ಎಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಸರ್ಕಾರವನ್ನು ಆಗ್ರಹಿಸಿದರು.

    ಕೋಲಾರದ ಶ್ರೀನಿವಾಸಪುರದ ಕಾಂಗ್ರೆಸ್ ಕಚೇರಿಯಲ್ಲಿ ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರಕ್ಕೆ ಸಂಬಂಧಿಸಿದಂತೆ ಮಾತನಾಡಿದ ರಮೇಶ್ ಕುಮಾರ್, ಜನರನ್ನು ಅತಂತ್ರ ಸ್ಥಿತಿಗೆ ತಲುಪಿಸಿ ಸಾರಿಗೆ ನೌಕರರಿಗೆ ನೋಟಿಸ್ ಜಾರಿ ಮಾಡುವುದು ಸರಿಯಲ್ಲ, ಮುಷ್ಕರವನ್ನು ಹತ್ತಿಕ್ಕಲು ಸರ್ಕಾರ ಮುಂದಾಗಿದೆ ಹೊರತು, ಅವರ ಬೇಡಿಕೆಗಳನ್ನು ಕೇಳುವ ಗೋಜಿಗೆ ಹೋಗಿಲ್ಲ. ಸಾರಿಗೆ ನೌಕರರ ವಿಚಾರದಲ್ಲಿ ರಾಜ್ಯ ಸರ್ಕಾರ ಅವೈಜ್ಞಾನಿಕವಾಗಿ ನಡೆದುಕೊಳ್ಳುತ್ತಿದೆ. ನೌಕರರಿಗೆ ಎಸ್ಮಾ ಅಸ್ತ್ರ ಪ್ರಯೋಗ, ಕಾನೂನು ತೋರಿಸಿ ಬೆದರಿಸುವುದು ಸರಿಯಲ್ಲ ಎಂದು ಅವರು ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

    ಪೆಟ್ರೋಲ್ ಡಿಸೇಲ್ ಬೆಲೆ ಏರಿಕೆಯಾಗಿದೆ ಆ ವಿಚಾರ ನಮಗು ಅದಕ್ಕೂ ಸಂಬಂಧವಿಲ್ಲವೆನ್ನುವಂತ್ತಿರುವ ಸರ್ಕಾರ, ಖಾಸಗಿಯವರಿಗೆ ಅನುಮತಿ ಕೊಟ್ಟು ಸಾರಿಗೆ ನೌಕರರ ಮೇಲೆ ಅರೋಪ ಮಾಡುತ್ತಿದೆ. ನನ್ನ ಅಂತಃಕರಣ ಕಾಳಜಿಯಿಂದ ಹೇಳುವೆ ಸರ್ಕಾರ ಕೂಡಲೆ ನೌಕರರಿಗೆ ಸ್ಪಂದಿಸಬೇಕು, ನೌಕರರನ್ನು ಶತ್ರುಗಳ ರೀತಿ ನೋಡುವುದು ಸರಿಯಲ್ಲ. ಪ್ರಯಾಣಿಕರಿಗೆ, ಸಾರ್ವಜನಿಕರಿಗೆ ತೊಂದರೆ ಕೊಡುವುದು ಸರಿಯಲ್ಲ. ನಮ್ಮ ಒಲವು ದುಡಿಯುವ ವರ್ಗದವರ ಪರವಾಗಿರುತ್ತೆ. ರಾಜ್ಯ ಸರ್ಕಾರದ ಸಿಎಂ ಸೇರಿ ಎಲ್ಲರೂ ಉಪ ಚುನಾವಣೆಯಲ್ಲಿ ಬ್ಯುಸಿಯಾಗಿದ್ದಾರೆ ಎಂದು ಸರ್ಕಾರಕ್ಕೆ ಛಾಟಿ ಬೀಸಿದರು.

    ಯುಗಾದಿ ಹಬ್ಬ ಸಮೀಪಿಸುತ್ತಿದ್ದು ಸರ್ಕಾರ ಕೂಡಲೇ ಎಚ್ಚೆತ್ತುಕೊಂಡು ನೌಕರರ ಸಮಸ್ಯೆ ಇತ್ಯರ್ಥ ಮಾಡಬೇಕು. ಅಲ್ಲದೆ ಸರ್ಕಾರ ನೌಕರರನ್ನು ಪರೋಕ್ಷವಾಗಿ ಹೆದರಿಸಲು ಮುಂದಾದರೆ ದಬ್ಬಾಳಿಕೆ, ದೌರ್ಜನ್ಯ ಮಾಡಿದರೆ ಖಂಡಿಸುತ್ತೇವೆ ಎಂದು ತಿಳಿಸಿದರು.

  • ಯಾರಿಗೂ ಹೆದರುವುದಿಲ್ಲ, ಪಕ್ಷಕ್ಕೆ ನನ್ನಿಂದ ಡ್ಯಾಮೇಜ್ ಆಗಿಲ್ಲ: ರೇಣುಕಾಚಾರ್ಯ

    ಯಾರಿಗೂ ಹೆದರುವುದಿಲ್ಲ, ಪಕ್ಷಕ್ಕೆ ನನ್ನಿಂದ ಡ್ಯಾಮೇಜ್ ಆಗಿಲ್ಲ: ರೇಣುಕಾಚಾರ್ಯ

    ದಾವಣಗೆರೆ: ನಾನು ಯಾರಿಗೂ ಹೆದರುವುದಿಲ್ಲ. ಪಕ್ಷಕ್ಕೆ ನನ್ನಿಂದ ಡ್ಯಾಮೇಜ್ ಆಗಿಲ್ಲ ಎಂದು ಶಾಸಕ ಎಂ.ಪಿ.ರೇಣುಕಾಚಾರ್ಯ ಹೇಳಿದ್ದಾರೆ.

    ನ್ಯಾಮತಿ ತಾಲೂಕಿನ ಸೂರಗೊಂಡನಕೊಪ್ಪ ಗ್ರಾಮದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಕ್ಷದ ಹೈಕಮಾಂಡ್‍ನಿಂದ ಯಾವುದೇ ಸೂಚನೆ ಬಂದಿಲ್ಲ. ನಾನೇನೂ ತಪ್ಪೇ ಮಾಡಿಲ್ಲ. ವಾಸ್ತವ ಮಾತನಾಡಿದ್ದೇನೆ ಅಷ್ಟೇ. ನನಗ್ಯಾಕೆ ಸೂಚನೆ ಬರುತ್ತದೆ. ನನ್ನ ಹೇಳಿಕೆಯಿಂದ ಯಾವುದೇ ಹಾನಿಯಾಗಿಲ್ಲ ಎಂದರು.

    ಪಕ್ಷಕ್ಕೆ ಹಾಗೂ ಸಿಎಂ ಯಡಿಯೂರಪ್ಪ ಅವರಿಗೆ ಮುಜುಗರ ತರಬಾರದು ಎಂಬ ಕಾರಣಕ್ಕೆ ಸಚಿವ ಸ್ಥಾನದ ಬಗ್ಗೆ ಹೆಚ್ಚು ಮಾತನಾಡಿಲ್ಲ. ಈ ಬಗ್ಗೆ ಹೇಳಿಕೆ ಕೊಟ್ಟು ಅಪಹಾಸ್ಯಕ್ಕೆ ಒಳಗಾಗಲು ಇಷ್ಟಪಡುವುದಿಲ್ಲ. ಮಾತೇ ಸಾಧನೆ ಆಗಬಾರದು. ಸಾಧನೆ ಮಾತಾಗಬೇಕು ಎಂದು ತಿಳಿಸಿದರು.

    ರಾಜಕಾರಣದಲ್ಲಿ ಮಹತ್ವಾಕಾಂಕ್ಷೆ ಹೊಂದಿದ್ದೇನೆ. ರಾಜಕೀಯದಲ್ಲಿ ನಾನಿನ್ನು ಚಿಕ್ಕವನು. ಮಾಧ್ಯಮದಲ್ಲಿ ಹೇಳಿದಾಕ್ಷಣ ಸಿಎಂ ಆಗಲು, ಪ್ರಧಾನಿ ಆಗಲು ಸಾಧ್ಯವಿಲ್ಲ. ನಾನು ಆಕಾಶಕ್ಕೆ ಏಣಿ ಹಾಕುವ ವ್ಯಕ್ತಿ ಅಲ್ಲ. ನಾನಿನ್ನು ಕಲಿಯುವುದು ಬಹಳಷ್ಟಿದೆ. ಮುಂದೆ ಅವಕಾಶ ಸಿಗಬಹುದೆಂಬ ವಿಶ್ವಾಸ ಇದೆ. ಮಧ್ಯ ಕರ್ನಾಟಕದ ಹೆಬ್ಬಾಗಿಲು ದಾವಣಗೆರೆ ಜಿಲ್ಲೆಗೆ ಮಂತ್ರಿ ಸ್ಥಾನ ನೀಡುವ ಬಗ್ಗೆ ಸಿಎಂ ಯಡಿಯೂರಪ್ಪ ನಿರ್ಧರಿಸಲಿದ್ದಾರೆ ಎಂದು ಹೇಳುವ ಮೂಲಕ ಅಚ್ಚರಿಮೂಡಿಸಿದರು.

    ಕುದುರೆ ಏರುವುದು ಗೊತ್ತು, ಆಡಳಿತ ನಡೆಸುವುದು ಗೊತ್ತು. ಹೊನ್ನಾಳಿ, ನ್ಯಾಮತಿ ಜನ ಗೆಲ್ಲಿಸಿರುವುದು ಅಭಿವೃದ್ಧಿ ಕೆಲಸ ಮಾಡಲು. ರಾಜಕಾರಣ ಮಾಡಲು ಅಲ್ಲ. ಗಾಂಭೀರ್ಯದಿಂದ ಇರುತ್ತೇನೆ. ಮುಜುಗರ ತರಬಾರದು ಎಂಬ ಕಾರಣಕ್ಕೆ ಏನನ್ನೂ ಮಾತನಾಡಲ್ಲ. ಹೊನ್ನಾಳಿ ಕೇಂದ್ರಬಿಂದು ಪ್ರದೇಶ. ಹಾಗಾಗಿ ಅವಕಾಶ ಕೊಡಬೇಕು ಎಂಬುದಷ್ಟೇ ಅಭಿಪ್ರಾಯ. ಬಿಜೆಪಿಯ ಹಿರಿಯ ಶಾಸಕರು ನಾಲ್ಕು ಗೋಡೆಗಳ ಮಧ್ಯೆ ಮಾತನಾಡಬೇಕು ಎಂದು ರೇಣುಕಾಚಾರ್ಯ ಸ್ವಪಕ್ಷೀಯರಿಗೆ ಕಿವಿಮಾತು ಹೇಳಿದರು.