Tag: ಬಟ್ಟೆ ಅಂಗಡಿ

  • Kolar | ಶಾರ್ಟ್ ಸರ್ಕ್ಯೂಟ್‌ನಿಂದ ಬಟ್ಟೆ ಅಂಗಡಿಗೆ ಬೆಂಕಿ – 25 ಲಕ್ಷ ಮೌಲ್ಯದ ಬಟ್ಟೆಗಳು ಬೆಂಕಿಗಾಹುತಿ

    Kolar | ಶಾರ್ಟ್ ಸರ್ಕ್ಯೂಟ್‌ನಿಂದ ಬಟ್ಟೆ ಅಂಗಡಿಗೆ ಬೆಂಕಿ – 25 ಲಕ್ಷ ಮೌಲ್ಯದ ಬಟ್ಟೆಗಳು ಬೆಂಕಿಗಾಹುತಿ

    ಕೋಲಾರ: ಶಾರ್ಟ್ ಸರ್ಕ್ಯೂಟ್‌ನಿಂದ ಬಟ್ಟೆ ಅಂಗಡಿ (Textile Shop) ಬೆಂಕಿಗೆ ಆಹುತಿಯಾಗಿರುವ ಘಟನೆ ಕೋಲಾರದಲ್ಲಿ (Kolar) ನಡೆದಿದೆ.

    ಕೋಲಾರದ ಎಂ.ಜಿ.ರಸ್ತೆಯಲ್ಲಿರುವ ಬ್ರಾಂಡೆಡ್ ಫ್ಯಾಕ್ಟರಿ ಅಂಗಡಿಗೆ ಬೆಂಕಿ ಬಿದ್ದು ಅಂಗಡಿಯಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ಬಟ್ಟೆಗಳು ಸುಟ್ಟು ಭಸ್ಮವಾಗಿದೆ. ಬಟ್ಟೆ ವ್ಯಾಪಾರಿ ಹಾಗೂ ಮಾಲೀಕ ಇಕ್ರಂ ಪಾಷಾ ಎಂಬವರಿಗೆ ಸೇರಿದ ಅಂಗಡಿಯಲ್ಲಿ ಮಧ್ಯಾಹ್ನ ಸಂಭವಿಸಿದ ಶಾರ್ಟ್ ಸರ್ಕ್ಯೂಟ್‌ನಿಂದ ಅಂಗಡಿಯಲ್ಲಿದ್ದ 20ರಿಂದ 25 ಲಕ್ಷ ರೂ. ಮೌಲ್ಯದ ಬಟ್ಟೆಗಳು ಹಾಗೂ ಕೆಲ ವಸ್ತುಗಳು ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಕರಕಲಾಗಿದೆ. ಇನ್ನು ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ಯಶಸ್ವಿಯಾಗಿದ್ದಾರೆ. ಇದನ್ನೂ ಓದಿ: ತರಾತುರಿ ಜಾತಿಗಣತಿ, ಜಾತಿಗಳ ಜೊತೆ ಕ್ರಿಶ್ಚಿಯನ್ ಧರ್ಮ ಸೇರಿಸುವುದು ಬೇಡ: ನಿರ್ಮಲಾನಂದ ಶ್ರೀಗಳ ಎಚ್ಚರಿಕೆ

    ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಬೆಂಕಿ ಧಗಧಗವೆಂದು ಹೊತ್ತಿ ಉರಿದಿದ್ದು, ಬೆಂಕಿಯ ಕೆನ್ನಾಲಿಗೆ ಪಕ್ಕದ ಕಟ್ಟಡಗಳಿಗೆ ಆವರಿಸುವ ಮೂಲಕ ಆತಂಕ ಮನೆಮಾಡಿತ್ತು. ಅಲ್ಲದೆ ಅಗ್ನಿ ಶಾಮಕ ದಳದವರು ಬೆಂಕಿ ನಂದಿಸಲು ಕೆಲ ಕಾಲ ಹರಸಾಹಸ ಪಡಬೇಕಾಗಿತ್ತು. ಇನ್ನು ಕೋಲಾರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದರು. ಇದನ್ನೂ ಓದಿ: ಸಿಎಂ ಆಗೋಕೆ ಹೆಲಿಕಾಪ್ಟರ್ ಖರೀದಿಸಿದ್ದಾರೆ ಅನ್ನೋದು ತಪ್ಪು ಕಲ್ಪನೆ – ಸತೀಶ್ ಜಾರಕಿಹೊಳಿ ಪರ ಬೋಸರಾಜು ಬ್ಯಾಟಿಂಗ್

  • ಪಕ್ಕದ ಅಂಗಡಿಯಲ್ಲಿ ವ್ಯಾಪಾರ ಚೆನ್ನಾಗಿದೆ ಅಂತ ಮತ್ಸರ – ಅಂಗಡಿ ಮಾಲೀಕನ ಕೊಲೆಗೆ ಸುಪಾರಿ ಕೊಟ್ಟಿದ್ದವ ಅರೆಸ್ಟ್

    ಪಕ್ಕದ ಅಂಗಡಿಯಲ್ಲಿ ವ್ಯಾಪಾರ ಚೆನ್ನಾಗಿದೆ ಅಂತ ಮತ್ಸರ – ಅಂಗಡಿ ಮಾಲೀಕನ ಕೊಲೆಗೆ ಸುಪಾರಿ ಕೊಟ್ಟಿದ್ದವ ಅರೆಸ್ಟ್

    ಬೆಂಗಳೂರು: ಪಕ್ಕದ ಅಂಗಡಿಯಲ್ಲಿ ವ್ಯಾಪಾರ ಚೆನ್ನಾಗಿ ನಡೆಯುತ್ತಿದೆ ಎಂದು ಮತ್ಸರ ಉಂಟಾಗಿ ಅಂಗಡಿ ಮಾಲೀಕನ ಕೊಲೆಗೆ ಸುಪಾರಿ ಕೊಟ್ಟಿದ್ದ ಆರೋಪಿಯನ್ನು ಬಾಗಲಗುಂಟೆ ಪೊಲೀಸರು (Bagalgunte Police) ಬಂಧಿಸಿದ್ದಾರೆ.

    ವೇನರಾಮ್ (45) ಕೊಲೆಗೆ ಸುಪಾರಿ ಕೊಟ್ಟಿದ್ದ ಆರೋಪಿ. ನೇಮರಾಮ್ ಎಂಬ ವ್ಯಕ್ತಿ ಬಾಗಲಗುಂಟೆ ಸಿಡೇದಹಳ್ಳಿ ಬಳಿ ಹ್ಯಾಪಿ ಟೆಕ್ಸ್‌ಟೈಲ್‌ ಅಂಗಡಿ (Textile Shop) ಇಟ್ಟುಕೊಂಡಿದ್ದರು. ಅಂಗಡಿ ಪಕ್ಕದಲ್ಲೇ ವೇನರಾಮ್ ಹೈ ಫ್ಯಾಷನ್ ಬಟ್ಟೆ ಅಂಗಡಿ ಇಟ್ಟುಕೊಂಡಿದ್ದ. ನೇಮರಾಮ್ ಅಂಗಡಿಯಲ್ಲಿ ವ್ಯಾಪಾರ ಹೆಚ್ಚಾಗಿ ನಡೆಯುತ್ತಿತ್ತು. ಅದರಿಂದ ಮತ್ಸರಗೊಂಡ ಆರೋಪಿ ವೇನರಾಮ್ ಆ ಅಂಗಡಿಯಲ್ಲಿ ಬಟ್ಟೆ ಸರಿ ಇಲ್ಲ ಎಂದು ಅಪಪ್ರಚಾರ ಮಾಡುತ್ತಿದ್ದ. ವೇನರಾಮ್ ಅಂಗಡಿಯಲ್ಲಿದ್ದ ಹುಡುಗನನ್ನ ನೇಮರಾಮ್ ತನ್ನ ಅಂಗಡಿಗೆ ಸೇರಿಸಿಕೊಂಡಿದ್ದ. ಇದರಿಂದ ಕೋಪಗೊಂಡಿದ್ದ ವೇನರಾಮ್, ನೇಮರಾಮ್ ಕೊಲೆಗೆ ಸುಪಾರಿ ಕೊಟ್ಟಿದ್ದ. ಇದನ್ನೂ ಓದಿ: ವಿಶ್ವದಲ್ಲಿ ನಮಗೆ ಯಾರೂ ಶತ್ರುಗಳಿಲ್ಲ, ಬೇರೆ ದೇಶದ ಮೇಲಿನ ಅವಲಂಬನೆಯೇ ನಮ್ಮ ದೊಡ್ಡ ಶತ್ರು – ಮೋದಿ

    ರಾಜಸ್ಥಾನದ ವಿನೋದ್ ಜಾಟ್ ಎಂಬಾತನಿಗೆ ವೇನರಾಮ್ 5 ಲಕ್ಷಕ್ಕೆ ಸುಪಾರಿ ಕೊಟ್ಟಿದ್ದ. ಅದರಂತೆ ವ್ಯಾಪಾರ ಮುಗಿಸಿ ಹೊರಟಿದ್ದ ನೇಮರಾಮ್ ಮೇಲೆ ಅಟ್ಯಾಕ್ ಮಾಡಲಾಗಿತ್ತು. ಎರಡು ಬೈಕ್‌ನಲ್ಲಿ ಬಂದು ವಿನೋದ್ ಟೀಂ ಅಟ್ಯಾಕ್ ಮಾಡಿತ್ತು. ಸದ್ಯ ಸುಪಾರಿ ಸಂಬಂಧ ವೇನರಾಮ್‌ನನ್ನು ಬಾಗಲಗುಂಟೆ ಪೊಲೀಸರು ಬಂಧಿಸಿದ್ದಾರೆ. ಸುಪಾರಿ ಪಡೆದ ಆರೋಪಿ ವಿನೋದ್ ಜಾಟ್‌ಗಾಗಿ ಪೊಲೀಸರ ಹುಡುಕಾಟ ನಡೆಸುತ್ತಿದ್ದಾರೆ. ಘಟನೆ ಸಂಬಂಧ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ದೆಹಲಿ | ಮಾದಕವಸ್ತು ಜಾಲದ ಮೇಲೆ 500 ಪೊಲೀಸರಿಂದ ರೇಡ್ – 63 ಮಂದಿ ಅರೆಸ್ಟ್

  • 8 ಅಂಗಡಿಗಳಲ್ಲಿ ಸರಣಿ ಕಳ್ಳತನ – ಬಟ್ಟೆ ಅಳತೆ ನೋಡಿ ಕದ್ದೊಯ್ದ ಖದೀಮರು

    8 ಅಂಗಡಿಗಳಲ್ಲಿ ಸರಣಿ ಕಳ್ಳತನ – ಬಟ್ಟೆ ಅಳತೆ ನೋಡಿ ಕದ್ದೊಯ್ದ ಖದೀಮರು

    ಹಾಸನ: ತಡರಾತ್ರಿ 8 ಅಂಗಡಿಗಳಲ್ಲಿ ಸರಣಿ ಕಳ್ಳತನ ನಡೆದಿರುವ ಘಟನೆ ಹಾಸನ ಜಿಲ್ಲೆ ಹೊಳೆನರಸೀಪುರ ಪಟ್ಟಣದ ಗಾಂಧಿ ವೃತ್ತದಲ್ಲಿ ನಡೆದಿದೆ. ರಾತ್ರೋರಾತ್ರಿ ಬಟ್ಟೆ ಅಂಗಡಿಗೆ ನುಗ್ಗಿದ ಕಳ್ಳರು ಅಳತೆ ನೋಡಿ ಬಟ್ಟೆಗಳನ್ನು ಕದ್ದೊಯ್ದಿದ್ದಾರೆ.

    ಹೊಳೆನರಸೀಪುರದ ಹೃದಯ ಭಾಗದಲ್ಲಿರುವ ಪುರಸಭೆ ಎದುರೇ ಇರುವ 7 ದಿನಸಿ ಅಂಗಡಿಗಳು, 1 ಬಟ್ಟೆ ಅಂಗಡಿಯಲ್ಲಿ ತಡರಾತ್ರಿ ಕಳ್ಳತನ ನಡೆದಿದೆ. ಮುಖಕ್ಕೆ ಬಟ್ಟೆ ಕಟ್ಟಿಕೊಂಡು ರೋಲಿಂಗ್ ಶಟರ್ ಮುರಿದು ಒಳನುಗ್ಗಿದ ಕಳ್ಳರು 5 ಲಕ್ಷ ರೂ. ನಗದು, ಬೆಲೆ ಬಾಳುವ ಬಟ್ಟೆಗಳು ಹಾಗೂ ವಸ್ತುಗಳನ್ನು ಕೊಂಡೊಯ್ದಿದ್ದಾರೆ. ಇದನ್ನೂ ಓದಿ: ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆ – ಚಕ್ಕಿ ನದಿ ಮೇಲಿನ ರೈಲ್ವೆ ಸೇತುವೆ ಕುಸಿತ

    ಅಂಗಡಿಯಲ್ಲಿ ಕಳ್ಳತನ ಮಾಡುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಪೊಲೀಸ್ ಬೀಟ್ ವ್ಯವಸ್ಥೆ ಸರಿಯಾಗಿ ಇಲ್ಲದೆ ಇರುವುದೇ ಕಳ್ಳತನಕ್ಕೆ ಕಾರಣ ಎಂದು ವರ್ತಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೊಳೆನರಸೀಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಮುಂಬೈ ತಾಜ್ ಹೋಟೆಲ್ ಮಾದರಿಯಲ್ಲೇ ಭೀಕರ ಗುಂಡಿನ ದಾಳಿ – 8 ನಾಗರಿಕರ ಬಲಿ

    Live Tv
    [brid partner=56869869 player=32851 video=960834 autoplay=true]

  • ವೇಗವಾಗಿ ಬೈಕ್‍ನಲ್ಲಿ ಬಂದು ಬಟ್ಟೆ ಅಂಗಡಿಗೆ ನುಗ್ಗಿದ – ವೀಡಿಯೋ ವೈರಲ್

    ವೇಗವಾಗಿ ಬೈಕ್‍ನಲ್ಲಿ ಬಂದು ಬಟ್ಟೆ ಅಂಗಡಿಗೆ ನುಗ್ಗಿದ – ವೀಡಿಯೋ ವೈರಲ್

    ಹೈದರಾಬಾದ್: ರಸ್ತೆಯಲ್ಲಿ ಸಾಗುತ್ತಿದ್ದ ಬೈಕ್ ಸವಾರ ನಿಯಂತ್ರಣ ತಪ್ಪಿ ವೇಗವಾಗಿ ಬಂದು ಅಂಗಡಿಗೆ ನುಗ್ಗಿದ ಭಯಾನಕ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

    ಘಟನೆ ವೇಳೆ ಬಟ್ಟೆ ಅಂಗಡಿಯ ಕೌಂಟರ್ ಬಳಿ ನಿಂತಿದ್ದ ಮೂವರು ಗ್ರಾಹಕರು ಸಮಯಕ್ಕೆ ಸರಿಯಾಗಿ ಪಕ್ಕಕ್ಕೆ ಸರಿದ್ದರಿಂದ ಬಚಾವ್ ಆಗಿದ್ದಾರೆ. ಈ ಘಟನೆ ಸೋಮವಾರ ರಾತ್ರಿ 8.30ರ ಸುಮಾರಿಗೆ ತೆಲಂಗಾಣದ ಖಮ್ಮಂ ಜಿಲ್ಲೆಯ ರಾವಿಚೆಟ್ಟು ಬಜಾರ್‌ನಲ್ಲಿ ನಡೆದಿದೆ. ಘಟನೆಯ ವೀಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, 4 ಜನರು ಅಂಗಡಿಯೊಳಗೆ ಕುಳಿತುಕೊಂಡಿರುವುದನ್ನು ಕಾಣಬಹುದಾಗಿದೆ. ಇವರಲ್ಲಿ 3 ಗ್ರಾಹಕರಾಗಿದ್ದರೆ, ಓರ್ವ ಸಿಬ್ಬಂದಿಯಾಗಿದ್ದಾನೆ. ಇದನ್ನೂ ಓದಿ: ಡೆಸರ್ಟ್ ಸಫಾರಿಯನ್ನು ಎಂಜಾಯ್ ಮಾಡ್ತಿರೋ ಜಾನ್ವಿ, ಖುಷಿ ಕಪೂರ್

    Bike

    ಬ್ರೇಕ್ ಫೇಲ್ ಆಗಿದ್ದರ ಪರಿಣಾಮ ನಿಯಂತ್ರಣ ತಪ್ಪಿ ಬಜಾಜ್ ಪಲ್ಸರ್ ಬೈಕ್ ಅಂಗಡಿಯ ಒಳಗೆ ನುಗ್ಗಿದ್ದು, ವಾಹನ ಸವಾರ ಕೌಂಟರ್‍ಗೆ ಜಿಗಿದಿರುವುದನ್ನು ಕಾಣಬಹುದಾಗಿದೆ. ಅಷ್ಟು ಭಯಾಂಕರವಾದ ಅಪಘಾತ ಸಂಭವಿಸಿದ್ದರು. ಸದ್ಯ ಅದೃಷ್ಟವಶಾತ್ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಜೊತೆಗೆ ಬೈಕ್ ಸವಾರನಿಗೂ ಯಾವುದೇ ದೊಡ್ಡ ಗಾಯಗಳಾಗಿಲ್ಲ. ಇದನ್ನೂ ಓದಿ: ಅಪ್ಪು ನಟನೆಯ ಚಿತ್ರದ ಶೀರ್ಷಿಕೆಗಳಲ್ಲೇ ಗೀತೆ ರಚನೆ ಮಾಡಿದ ತಂದೆ, ಜೀವ ತುಂಬಿದ ಮಗಳು

    ಕೊನೆಗೆ ಅಪಘಾತದ ಬಳಿಕ ಬೈಕ್ ಸವಾರ ಅಂಗಡಿ ಅವರಿಗೆ ಕ್ಷಮೆಯಾಚಿಸಿದ್ದಾನೆ. ಘಟನೆ ಕುರಿತಂತೆ ಪೊಲೀಸರು ವಾಹನವನ್ನು ವಶಪಡಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

  • ಬಟ್ಟೆ, ಮೊಬೈಲ್ ಅಂಗಡಿಗಳಿಗೆ ನುಗ್ಗಿದ ಮಳೆ ನೀರು

    ಬಟ್ಟೆ, ಮೊಬೈಲ್ ಅಂಗಡಿಗಳಿಗೆ ನುಗ್ಗಿದ ಮಳೆ ನೀರು

    ಮಂಡ್ಯ: ಕಳೆದ ರಾತ್ರಿ ಸುರಿದ ಮಳೆಯಿಂದಾಗಿ ಬಟ್ಟೆ ಅಂಗಡಿಗಳಿಗೆ ನೀರು ನುಗ್ಗಿದ ಪರಿಣಾಮ ಅಂಗಡಿಯಲ್ಲಿದ್ದ ಬಟ್ಟೆಗಳು ನೀರಿನಲ್ಲಿ ಮುಳುಗಿ ನೆನೆದಿದ್ದು, ಅಪಾರ ಪ್ರಮಾಣದ ನಷ್ಟ ಉಂಟಾಗಿರುವ ಘಟನೆ ಜಿಲ್ಲೆಯ ಕೆ.ಆರ್.ಪೇಟೆ ಪಟ್ಟಣದಲ್ಲಿ ನಡೆದಿದೆ.

    ಶನಿವಾರ ಸಂಜೆಯಿಂದ ಕೆ.ಆರ್.ಪೇಟೆ ಪಟ್ಟಣ ಸೇರಿದಂತೆ ತಾಲೂಕಿನ ಹಲವು ಭಾಗದಲ್ಲಿ ಮಳೆ ಸುರಿದಿದೆ. ಹೀಗಾಗಿ ಮಳೆ ಹೆಚ್ಚಾದ ಕಾರಣ ಕೆ.ಆರ್.ಪೇಟೆ ಪಟ್ಟಣದ ಮುಖ್ಯ ರಸ್ತೆಯಲ್ಲಿರುವ 10ಕ್ಕೂ ಹೆಚ್ಚು ಬಟ್ಟೆ ಅಂಗಡಿಗಳಿಗೆ ನೀರು ನುಗ್ಗಿದೆ. ಈ ವೇಳೆ ಬಟ್ಟೆ ಅಂಗಡಿಯಲ್ಲಿದ್ದ ಬಟ್ಟೆಗಳು ನೀರಿನಲ್ಲಿ ನೆನೆದು ಹೋಗಿವೆ. ಇದರಿಂದ ಲಕ್ಷಾಂತರ ರೂಪಾಯಿ ನಷ್ಟವಾಗಿದೆ. ಇದನ್ನೂ ಓದಿ: ದೆಹಲಿಯಲ್ಲಿ ಧಾರಾಕಾರ ಮಳೆ- ಕರ್ನಾಟಕದಲ್ಲೂ ಮಳೆಯಾಗುವ ಸಾಧ್ಯತೆ

    ನೆನೆದಿರುವ ಬಟ್ಟೆಗಳನ್ನು ಅಂಗಡಿಯ ಮಾಲೀಕರು ಖಾಸಗಿ ಸಮುದಾಯ ಭವನದಲ್ಲಿ ಒಣ ಹಾಕಿದ್ದಾರೆ. ಕೇವಲ ಬಟ್ಟೆ ಅಂಗಡಿಗಳಿಗಲ್ಲದೇ ಮೊಬೈಲ್ ಅಂಗಡಿಗಳಿಗೂ ಸಹ ನೀರು ನುಗ್ಗಿದೆ. ಇದರಿಂದ ಅಪಾರ ಪ್ರಮಾಣ ನಷ್ಟ ಉಂಟಾಗಿದೆ.

  • ಸೋಂಕಿತ ಭೇಟಿ ನೀಡಿದ್ದಕ್ಕೆ ಬಟ್ಟೆ ಅಂಗಡಿ ಮೊಬೈಲ್ ಶಾಪ್ ಸೀಲ್‍ಡೌನ್

    ಸೋಂಕಿತ ಭೇಟಿ ನೀಡಿದ್ದಕ್ಕೆ ಬಟ್ಟೆ ಅಂಗಡಿ ಮೊಬೈಲ್ ಶಾಪ್ ಸೀಲ್‍ಡೌನ್

    ಹಾಸನ: ಜಿಲ್ಲೆಯ ಅರಕಲಗೂಡಿನಲ್ಲಿರುವ ಬಟ್ಟೆ ಅಂಗಡಿ ಮತ್ತು ಮೊಬೈಲ್ ಅಂಗಡಿಗೆ ಕೊರೊನಾ ಸೋಂಕಿತ ಭೇಟಿ ನೀಡಿರುವ ಹಿನ್ನೆಲೆಯಲ್ಲಿ ಅಂಗಡಿಗಳನ್ನು ಸೀಲ್‍ಡೌನ್ ಮಾಡಲಾಗಿದೆ.

    ಕೊಡಗಿನಲ್ಲಿ ಪಾಸಿಟಿವ್ ಬಂದ ಕೊರೊನಾ ಸೋಂಕಿತರೊಬ್ಬರು ಎರಡು ಬಾರಿ ಹಾಸನ ಜಿಲ್ಲೆ ಅರಕಲಗೂಡು ತಾಲೂಕಿನ ಕೊಣನೂರು ಪಟ್ಟಣದಲ್ಲಿರುವ ಬಟ್ಟೆ ಅಂಗಡಿ ಮತ್ತು ಮೊಬೈಲ್ ಶಾಪ್‍ಗೆ ಭೇಟಿ ನೀಡಿದ್ದರು. ಈ ಹಿನ್ನೆಲೆಯಲ್ಲಿ ಈ ಎರಡು ಅಂಗಡಿಗಳನ್ನು ಜಿಲ್ಲಾಡಳಿತ ಸೀಲ್‍ಡೌನ್ ಮಾಡಿದೆ.

    ಸೋಂಕಿತನ ಜೊತೆ ಪ್ರಾಥಮಿಕ ಸಂಪರ್ಕ ಹೊಂದಿರುವ ನಿಟ್ಟಿನಲ್ಲಿ ಬಟ್ಟೆ ಅಂಗಡಿಯವರನ್ನು ಮತ್ತು ಮೊಬೈಲ್ ಶಾಪ್‍ನವರನ್ನು ಸೇರಿದಂತೆ ಒಟ್ಟು 12 ಜನರನ್ನು ಕೋವಿಡ್ ಟೆಸ್ಟ್ ಮಾಡಿಸಲು ಅರಕಲಗೂಡು ಪಟ್ಟಣದ ಆಸ್ಪತ್ರೆಗೆ ಕಳುಹಿಸಲಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ವೈದ್ಯಾಧಿಕಾರಿಗಳು ಸೋಂಕಿತನ ಜೊತೆ ಇನ್ನು ಎಷ್ಟು ಜನ ಪ್ರಾಥಮಿಕ ಸಂಪರ್ಕ ಹೊಂದಿದ್ದಾರೆ ಎಂಬುದರ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ.

  • ಟ್ರಯಲ್ ರೂಮಿನಲ್ಲಿ ಹಿಡನ್ ಕ್ಯಾಮೆರಾ ಪತ್ತೆ ಹಚ್ಚಿದ ಪತ್ರಕರ್ತೆ

    ಟ್ರಯಲ್ ರೂಮಿನಲ್ಲಿ ಹಿಡನ್ ಕ್ಯಾಮೆರಾ ಪತ್ತೆ ಹಚ್ಚಿದ ಪತ್ರಕರ್ತೆ

    ನವದೆಹಲಿ: ಪ್ರತಿಷ್ಟಿತ ಒಳ ಉಡುಪುಗಳ ಮಳಿಗೆಯ ಟ್ರಯಲ್ ರೂಂನಲ್ಲಿ ಹಿಡನ್ ಕ್ಯಾಮೆರಾ ಇರುವುದನ್ನು ಪತ್ರಕರ್ತೆಯೊಬ್ಬರು ಪತ್ತೆ ಹಚ್ಚಿದ್ದಾರೆ.

    ದಕ್ಷಿಣ ದೆಹಲಿಯ ಗ್ರೇಟರ್ ಕೈಲಾಶ್-2 ಪೋಶ್ ಎಂ-ಬ್ಲಾಕ್ ಮಾರುಕಟ್ಟೆಯ ಅಂಗಡಿಯೊಂದರಲ್ಲಿ ಹಿಡನ್ ಕ್ಯಾಮೆರಾ ಇರುವುದು ಪತ್ತೆಯಾಗಿದ್ದು, ಈ ಕ್ಯಾಮೆರಾ ಮೂಲಕ ಅಂಗಡಿಯವನು ಟ್ರಯಲ್ ರೂಂನ ಲೈವ್ ಫೂಟೇಜ್ ವೀಕ್ಷಿಸುತ್ತಿದ್ದ ಎಂದು ಪತ್ರಕರ್ತೆ ಆರೋಪಿಸಿದ್ದಾರೆ. ಈ ಕುರಿತು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

    ಈ ಘಟನೆ ಆಗಸ್ಟ್ 31ರಂದು ನಡೆದಿದ್ದು, ಮೂರು ದಿನಗಳ ನಂತರ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 354 ಸಿ ಅಡಿ ಪ್ರಕರಣವನ್ನು ದಾಖಲಿಸಲಾಗಿದೆ. ಈವರೆಗೆ ಆರೋಪಿ ಅಂಗಡಿಯವರ ವಿರುದ್ಧ ಯಾವುದೇ ರೀತಿಯ ಕ್ರಮ ಕೈಗೊಂಡಿಲ್ಲ.

    ಕೆಲವು ಉಡುಪುಗಳನ್ನು ಆಯ್ಕೆ ಮಾಡಿಕೊಂಡ ನಂತರ ಟ್ರಯಲ್ ರೂಂಗೆ ತೆರಳಿದೆ. ಆಗ 10 ನಿಮಿಷಗಳ ನಂತರ ಅಂಗಡಿಯ ಒಬ್ಬ ಮಹಿಳಾ ಅಟೆಂಡರ್ ಬಂದು ನನ್ನನ್ನು ಬೇರೆ ರೂಂಗೆ ತೆರಳುವಂತೆ ಸೂಚಿಸಿದರಳು. ಅನುಮಾನದಿಂದ ಇಲ್ಲಿ ಏನಾದರೂ ಇದೆಯೇ ಎಂದು ನಾನು ಗಮನಿಸಿದೆ. ಆಗ ಮೊದಲನೇ ರೂಂನಲ್ಲಿ ಕ್ಯಾಮೆರಾ ಇರುವ ಕುರಿತು ಸಿಬ್ಬಂದಿ ನನ್ನ ಗಮನಕ್ಕೆ ತಂದರು ಎಂದು ತನ್ನ ದೂರಿನಲ್ಲಿ ಪತ್ರಕರ್ತೆ ತಿಳಿಸಿದ್ದಾರೆ.

    ಆ ಟ್ರಯಲ್ ರೂಂನಲ್ಲಿ ಕ್ಯಾಮೆರಾ ಇದೆ ಎಂದಾದರೆ ಅದೇ ರೂಂಗೆ ತೆರಳುವಂತೆ ನನಗೆ ಯಾಕೆ ನಿರ್ದೇಶಿಸಿದಿರಿ ಎಂದು ಅಂಗಡಿಯ ಮಾಲೀಕ ಹಾಗೂ ಸಿಬ್ಬಂದಿಯನ್ನು ಕೇಳಿದೆ. ಆದರೆ ಯಾರೂ ಉತ್ತರಿಸಲಿಲ್ಲ. ನಂತರ ನಾನು ಪೊಲೀಸರಿಗೆ ಕರೆ ಮಾಡಿ ಘಟನೆ ಕುರಿತು ವಿವರಿಸಿದೆ. ಪೊಲೀಸರಿಗೆ ಕರೆ ಮಾಡುತ್ತಿದ್ದಂತೆ ಅಂಗಡಿ ಮಾಲೀಕ ತನ್ನ ಮಗನಿಗೆ ಕರೆ ಮಾಡಿ ವಿಡಿಯೋ ಡಿಲೀಟ್ ಮಾಡಿಸಿದ್ದಾರೆ ಎಂದು ಪತ್ರಕರ್ತೆ ದೂರಿನಲ್ಲಿ ವಿವರಿಸಿದ್ದಾರೆ.

    ಪೊಲೀಸ್ ಮೂಲಗಳ ಪ್ರಕಾರ, ಮಹಿಳಾ ಸಿಬ್ಬಂದಿ ಬೇರೆ ಸ್ಟೋರ್ ರೂಂನಲ್ಲಿ ಬಟ್ಟೆ ಹಾಕಿ ನೋಡುವಂತೆ ಕಳುಹಿಸಿದ್ದಾರೆ. ಹೀಗಾಗಿ ಇದು ಮೇಲ್ನೋಟಕ್ಕೆ ಉದ್ದೇಶಪೂರ್ವಕವಾಗಿ ಮಾಡಿದ ತಪ್ಪು ಎಂದು ಪೊಲೀಸರು ಶಂಕಿಸಿದ್ದಾರೆ.

    ನಾವು ಅಂಗಡಿಯ ಸಿಸಿಟಿವಿ ಫೂಟೇಜ್‍ಗಳನ್ನು ಸಂಗ್ರಹಿಸಿ, ಮಹಿಳೆಯ ಆರೋಪದ ಕುರಿತು ಪರಿಶೀಲಿಸುತ್ತಿದ್ದೇವೆ. ತನಿಖೆ ಪ್ರಗತಿಯಲ್ಲಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

  • ಸ್ವಚ್ಛಗೊಳಿಸಿದ್ದ ಜಾಗದಲ್ಲಿ ಎಸೆದ ಕಸವನ್ನು ಮತ್ತೆ ಅಂಗಡಿಯೊಳಗೆ ಸುರಿದು ಜಾಗೃತಿ ಮೂಡಿಸಿದ ಮಂಗ್ಳೂರು ಯುವಕ!

    ಸ್ವಚ್ಛಗೊಳಿಸಿದ್ದ ಜಾಗದಲ್ಲಿ ಎಸೆದ ಕಸವನ್ನು ಮತ್ತೆ ಅಂಗಡಿಯೊಳಗೆ ಸುರಿದು ಜಾಗೃತಿ ಮೂಡಿಸಿದ ಮಂಗ್ಳೂರು ಯುವಕ!

    ಮಂಗಳೂರು: ರಸ್ತೆಯಲ್ಲಿ ಕಸ ಎಸೆದಿದ್ದಕ್ಕೆ ಸಿಟ್ಟಾದ ಯುವಕನೊಬ್ಬ ಅದೇ ಕಸವನ್ನು ಬಟ್ಟೆ ಅಂಗಡಿ ಒಳಗೆ ಸುರಿದ ಘಟನೆ ಮಂಗಳೂರಿನ ಕರಂಗಲ್ಪಾಡಿಯಲ್ಲಿ ನಡೆದಿದೆ.

    ರಾಮಕೃಷ್ಣ ಮಿಷನ್ ವತಿಯಿಂದ ಪ್ರತಿ ಆದಿತ್ಯವಾರ ನೂರಾರು ಸ್ವಯಂ ಸೇವಕರು ಮಂಗಳೂರು ನಗರವನ್ನು ಸ್ವಚ್ಛಗೊಳಿಸುತ್ತಾರೆ. ಆದ್ರೆ ಮಾರನೇ ದಿನ ಮತ್ತೆ ಸ್ವಚ್ಛಗೊಳಿಸಿದ ಸ್ಥಳದಲ್ಲಿ ಸಾರ್ವಜನಿಕರು ಕಸ ಹಾಕುತ್ತಿದ್ದರು. ಮಂಗಳೂರಿನ ಕರಂಗಲ್ಪಾಡಿಯಲ್ಲೂ ಡಿ.31 ರ ಆದಿತ್ಯವಾರ ಸ್ವಯಂಸೇವಕರು ಸ್ವಚ್ಛಗೊಳಿಸಿದ್ದು, ಅದೇ ದಿನ ಸ್ಥಳೀಯ ಶಾಪ್ ನ ಸಿಬ್ಬಂದಿ ಅದೇ ಜಾಗದಲ್ಲಿ ಕಸ ಎಸೆದಿದ್ದಾರೆ.

    ಇದರಿಂದ ಕೋಪಗೊಂಡ ಸೌರಜ್ ಮಂಗಳೂರು ಎಂಬ ಯುವಕ ಶಾಪ್ ನ ಸಿಬ್ಬಂದಿ ಎಸೆದ ಕಸವನ್ನು ರಸ್ತೆ ಬದಿಯಿಂದ ಸಂಗ್ರಹಿಸಿ ಶಾಪ್ ಒಳಗೆ ಸುರಿದಿದ್ದಾರೆ. ಸ್ವಚ್ಛಗೊಳಿಸಿದ ಸ್ಥಳದಲ್ಲೇ ಕಸ ಸುರಿದ ಶಾಪ್ ನ ಸಿಬ್ಬಂದಿ ಒಂದು ಕ್ಷಣ ವಿಚಲಿತರಾದ್ರೂ ಸೌರಜ್ ನ ಕೋಪದ ಮುಂದೆ ತಣ್ಣಗಾಗಿದ್ದಾರೆ. ಸೌರಜ್ ಫೇಸ್ ಬುಕ್ ಲೈವ್ ಮೂಲಕ ವಿಡಿಯೋ ಮಾಡಿದ್ದು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ.

    ಈ ಹಿಂದೆ ಮೋರ್ಗನ್ಸ್ ಗೇಟ್ ಬಳಿಯೂ ಸ್ವಚ್ಛಗೊಳಿಸಿದ ಸ್ಥಳದಲ್ಲಿ ಅಕ್ಕಪಕ್ಕದ ಮನೆಯವರು ಕಸ ಸುರಿದಿದ್ದು, ಸೌರಜ್ ಅದೇ ಕಸವನ್ನು ಸಂಗ್ರಹಿಸಿ ಮನೆಯೊಳಗೆ ಹಾಕಿದ್ದರು. ಆ ನಂತರವಾಗಿ ಮನೆಯವರು ಎಚ್ಚೆತ್ತು ಕಸವನ್ನು ತೊಟ್ಟಿಯಲ್ಲಿ ಹಾಕಲು ಆರಂಭಿಸಿದ್ರು. ಇನ್ಮುಂದೇ ಇದೇ ರೀತಿಯ ಅಭಿಯಾನ ಮಾಡಲು ರಾಮಕೃಷ್ಣ ಮಿಷನ್ ನ ಸ್ವಯಂ ಸೇವಕರು ನಿರ್ಧರಿಸಿದ್ದು, ಎಲ್ಲೆಂದರಲ್ಲಿ ಕಸ ಎಸೆದವರಿಗೆ ತಕ್ಕ ಪಾಠ ಕಲಿಸಲು ನಿರ್ಧರಿಸಿದ್ದಾರೆ.

    https://www.youtube.com/watch?v=SX_4fh8j_rk

  • ಲವ್ ಮಾಡಿ ಗರ್ಭಿಣಿ ಮಾಡ್ದ, ಮದುವೆಯಾಗು ಎಂದಿದ್ದಕ್ಕೆ ಕೊಲೆಯೇ ಮಾಡ್ಬಿಟ್ಟ ಪಾಪಿ!

    ಲವ್ ಮಾಡಿ ಗರ್ಭಿಣಿ ಮಾಡ್ದ, ಮದುವೆಯಾಗು ಎಂದಿದ್ದಕ್ಕೆ ಕೊಲೆಯೇ ಮಾಡ್ಬಿಟ್ಟ ಪಾಪಿ!

    ಕರ್ನೂಲ್: ಮದುವೆಯಾಗು ಎಂದಿದ್ದಕ್ಕೆ ಗರ್ಭಿಣಿಯನ್ನ ಆಕೆಯ ಪ್ರಿಯತಮ ಕತ್ತು ಹಿಸುಕಿ ಕೊಲೆ ಮಾಡಿರೋ ಆಘಾತಕಾರಿ ಘಟನೆಯೊಂದು ನಡೆದಿರುವ ಬಗ್ಗೆ ಬೆಳಕಿಗೆ ಬಂದಿದೆ.

    ಈ ಘಟನೆ ಡೋನ್ ಮಂಡಲ್ ನ ಎರಗುಂಟ್ಲಾದಲ್ಲಿ ನವೆಂಬರ್ 20ರಂದು ನಡೆದಿದೆ. ಮೃತ ಗರ್ಭಿಣಿಯನ್ನು ರಮಿಜಬಿ ಎಂದು ಗುರುತಿಸಲಾಗಿದ್ದು, ಈಕೆಯ ತಾಯಿ ಸ್ಥಳೀಯ ಪೊಲೀಸ್ ಠಾಣೆಗೆ ದೂರು ನೀಡಿದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ.

    ಏನಿದು ಪ್ರಕರಣ?: ಮೃತ ರಮಿಜಬಿಗೆ ಈ ಹಿಂದೆ ಮದುವೆಯಾಗಿದ್ದು, ತನ್ನ ಗಂಡನಿಂದ ವಿಚ್ಛೇದನ ಪಡೆದು, ಮಗ ಅಖಿಲ್ ಕುಮಾರ್ ಜೊತೆ ತಂದೆ-ತಾಯಿಯೊಂದಿಗೆ ವಾಸವಾಗಿದ್ದರು. ತವರು ಮನೆಯಲ್ಲಿ ವಾಸವಾಗಿದ್ದ ರಮಿಜಬಿಗೆ ಸ್ಥಳೀಯ ಬಟ್ಟೆ ಅಂಗಡಿಯಲ್ಲಿ ಕೆಲಸ ದೊರೆತಿತ್ತು. ಅಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಅಂಗಡಿ ಮಾಲೀಕನ ಮಗ ಶೇಖ್ ರಶೀದ್(22) ಜೊತೆ ಪ್ರೇಮಾಂಕುರವಾಗಿತ್ತು.

    ಕೆಲ ದಿನಗಳ ಬಳಿಕ ಅಂಗಡಿ ಮಾಲೀಕನ ಮಗ ಹಾಗೂ ನಾನು ಪ್ರೀತಿಸಿದ್ದು, ಆದ್ರೆ ಇದೀಗ ಆತ ತನನ್ನನ್ನು ಮದುವೆಯಾಗಲು ನಿರಾಕರಿಸುತ್ತಿದ್ದಾನೆ ಎಂದು ಆರೋಪಿಸಿ ಮಹಿಳೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಆದ್ರೆ ಹಿರಿಯರು ಮಧ್ಯಪ್ರವೇಶಿಸಿ ಪೊಲೀಸ್ ಕೇಸ್ ಇಲ್ಲದೆ ಮಾತುಕತೆ ಮೂಲಕ ಬಗೆಹರಿಸಿದ್ರು.

    ಹಿರಿಯರ ಜೊತೆ ಮಾತುಕತೆ ನಡೆಸಿದ ಬಳಿಕ ರಶೀದ್ ಆಕೆಯ ಜೊತೆ ಸಂಬಂಧ ಮುಂದುವರೆಸಿದ್ದ. ಪರಿಣಾಮ ರಮಿಜಬಿ ಗರ್ಭಿಣಿಯಾದ್ರು. ತಾನು ಗರ್ಭಿಣಿ ಎಂಬ ವಿಚಾರ ತಿಳಿಯುತ್ತಿದ್ದಂತೆಯೇ ಮಹಿಳೆ ಮತ್ತೆ ರಶೀದ್ ಜೊತೆ ಮದುವೆಯ ಪ್ರಸ್ತಾಪ ಮಾಡಿದ್ದರು. ಇದನ್ನೇ ಉಪಾಯವಾಗಿ ಬಳಸಿಕೊಂಡ ರಶೀದ್, ನಾವಿಬ್ಬರು ಖಂಡಿತವಾಗಿ ಚೆನ್ನಾಗಿ ಜೀವನ ನಡೆಸೋಣ. ಹೊಸ ಜೀವನ ಆರಂಭಿಸೋಣ ಅಂತೆಲ್ಲಾ ಪೀಠಿಕೆ ಹಾಕಿ ಕಳೆದ ತಿಂಗಳ 20ರಂದು ಆಕೆಯನ್ನು ಎರಗುಂಟ್ಲಾದ ಅರಣ್ಯ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಬಳಿಕ ಶವವನ್ನು ಅಲ್ಲೇ ಹೂತು ಹಾಕಿದ್ದಾನೆ.

    ಇತ್ತ ಮಗಳು ಕಾಣದಿರುವುದರಿಂದ ಆತಂಕಗೊಂಡ ತಾಯಿ, ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪೊಲೀಸರು ತನಿಖೆ ಆರಂಭಿಸಿ, ರಶೀದ್‍ನನ್ನು ಕರೆಸಿ ವಿಚಾರಣೆ ನಡೆಸಿದಾಗ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ.

    ಆರೋಪಿ ತಪ್ಪೊಪ್ಪಿಕೊಂಡ ಒಂದು ವಾರದ ಹಿಂದೆ ಕೊಲೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ತೆರಳಿ ಮೃತದೇಹ ಹೊರತೆಗೆದು ಅಲ್ಲೇ ಶವಪರೀಕ್ಷೆ ಮಾಡಿಸಿದ್ದಾರೆ. ಬಳಿಕ ಶವವನ್ನು ಅಂತ್ಯಸಂಸ್ಕಾರಕ್ಕಾಗಿ ಮಹಿಳೆ ಹೆತ್ತವರಾದ ಲಕ್ಷ್ಮೀ ದೇವಿ ಹಾಗೂ ಮಲ್ಲೇಶ್ ದಂಪತಿಗೆ ಹಸ್ತಾಂತರಿಸಿದ್ದಾರೆ.