Tag: ಬನ್ನೇರುಘಟ್ಟ ಉದ್ಯಾನವನ

  • ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ನೂತನ ಅತಿಥಿಗಳ ಆಗಮನ

    ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ನೂತನ ಅತಿಥಿಗಳ ಆಗಮನ

    – ಅಳಿವಿನಂಚಲ್ಲಿರುವ ಬಿಳಿ ಹುಲಿ, ಕಾಡು ಬೆಕ್ಕು, ಮೊಸಳೆ ಆಮದು

    ಆನೇಕಲ್: ಪ್ರಾಣಿ ವಿನಿಯಯ ಯೋಜನೆಯಡಿ (Animal Exchange) ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ (Bannerghatta Biological Park) ನೂತನ ಅಥಿತಿಗಳ ಆಗಮನವಾಗಿದೆ.

    ನವದೆಹಲಿಯ ಕೇಂದ್ರ ಮೃಗಾಲಯ ಪ್ರಾಧಿಕಾರದ ಅನುಮೋದನೆಯಂತೆ ಬೆಂಗಳೂರು ಹೊರವಲಯದ ಬನ್ನೇರುಘಟ್ಟ ಜೈವಿಕ ಉದ್ಯಾನವನ, ಸಂಜಯ್ ಗಾಂಧಿ ಜೈವಿಕ ಉದ್ಯಾನವನ, ಪಾಟ್ನಾ ಹಾಗೂ ಬಿಹಾರದ ನಡುವೆ ಪ್ರಾಣಿ ವಿನಿಮಯ ಯಶಸ್ವಿಯಾಗಿದೆ. ವಿನಿಮಯದ ಭಾಗವಾಗಿ ಬನ್ನೇರುಘಟ್ಟ ಜೈವಿಕ ಉದ್ಯಾನವನದಿಂದ ಒಂದು ಗಂಡು ಜೀಬ್ರಾ ಮತ್ತು ಎರಡು ಗಂಡು ಥಮಿನ್ ಜಿಂಕೆಗಳನ್ನು ಪಾಟ್ನಾ ಮೃಗಾಲಯಕ್ಕೆ ಕಳುಹಿಸಲಾಗಿದೆ. ಇದರ ಪ್ರತಿಯಾಗಿ ಅಳಿವಿನಂಚಿನಲ್ಲಿರುವ ಘಾರಿಯಲ್ ಮೊಸಳೆ, ಬಿಳಿ ಹುಲಿ ಮತ್ತು ಕಾಡು ಬೆಕ್ಕನ್ನು ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ತರಲಾಗಿದ್ದು, ನೂತನ ಪ್ರಾಣಿಗಳ ಆಗಮನದಿಂದ ಉದ್ಯಾನವನದಲ್ಲಿ ಸಂತಸ ಮನೆ ಮಾಡಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ತಂದೆಯಿಂದಲೇ ಮಗನ ಭೀಕರ ಕೊಲೆ

    ಬೆಂಗಳೂರಿನ ಹವಾಮಾನಕ್ಕೆ ಹೊಂದಿಕೊಳ್ಳಲು ಈ ಹೊಸ ಪ್ರಾಣಿಗಳನ್ನು ಕೆಲವು ದಿನಗಳವರೆಗೆ ಕ್ವಾರಂಟೈನ್ ಪ್ರದೇಶದಲ್ಲಿ ಪ್ರತ್ಯೇಕವಾಗಿ ಇರಿಸಲಾಗಿದೆ ಮತ್ತು ನಿರಂತರ ವೀಕ್ಷಣೆಯಲ್ಲಿರಲು ಪ್ರತ್ಯೇಕ ಸಿಬ್ಬಂದಿಗಳನ್ನು ಕೂಡ ನೇಮಕ ಮಾಡಲಾಗಿದೆ. ಈ ಪ್ರಾಣಿ ವಿನಿಮಯವು ಮೃಗಾಲಯಗಳಲ್ಲಿನ ಪ್ರಾಣಿಗಳ ಸಂರಕ್ಷಣೆ ಮತ್ತು ಸಂತಾನೋತ್ಪತ್ತಿ ಹೆಚ್ಚಿಸಲು ಸಹಕಾರಿಯಾಗಿದ್ದು, ಪ್ರಾಣಿ ವೀಕ್ಷಣೆಗೆ ಆಗಮಿಸುವ ಪ್ರವಾಸಿಗರಿಗೂ ಪ್ರಾಣಿಗಳನ್ನು ಹತ್ತಿರದಿಂದ ವೀಕ್ಷಿಸಿ, ಹೊಸ ಪ್ರಾಣಿಗಳ ಬಗ್ಗೆ ತಿಳಿದುಕೊಳ್ಳಲು ಅವಕಾಶ ಸಿಗಲಿದೆ. ಇದನ್ನೂ ಓದಿ: ಬೆಂಗಳೂರು| ಬೈಕ್‌ನಲ್ಲಿ ಬಂದು ಪೆಪ್ಪರ್ ಸ್ಪ್ರೇ ಹಾಕಿ ಯುವಕರ ಮೇಲೆ ಹಲ್ಲೆ

    ಪ್ರಾಣಿ ವಿನಿಮಯ ಕಾರ್ಯಕ್ರಮಗಳು ಹೆಚ್ಚಾಗಿ ಆದಾಗ ಸಂರಕ್ಷಣೆ, ಶಿಕ್ಷಣ ಮತ್ತು ವಿಭಿನ್ನ ಪ್ರಾಣಿಗಳ ಜೀವನ ಶೈಲಿ ಸೇರಿದಂತೆ ಜನರಲ್ಲಿ ದೇಶದಾದ್ಯಂತ ಇರುವ ಪ್ರಾಣಿಗಳ ಬಗ್ಗೆ ತಿಳಿದುಕೊಳ್ಳಲು ಭಾರತೀಯ ಪ್ರಾಣಿ ಸಂಗ್ರಹಾಲಯ ಈ ಮಹತ್ತರದ ಪ್ರಾಣಿ ವಿನಿಮಯ ಯೋಜನೆಯನ್ನು ಮಾಡಿದೆ. ಇದನ್ನೂ ಓದಿ: ಮಳೆ ಬೆನ್ನಲ್ಲೇ ತರಕಾರಿ ಬೆಲೆ ಏರಿಕೆ – ಗ್ರಾಹಕರು ಹೈರಾಣು, ಯಾವ ತರಕಾರಿಗೆ ಎಷ್ಟು ಬೆಲೆ?

  • ಬನ್ನೇರುಘಟ್ಟ ಉದ್ಯಾನದಲ್ಲಿ ಮಾರಕ ವೈರಸ್‌ಗೆ 7 ಚಿರತೆ ಮರಿಗಳು ಸಾವು

    ಬನ್ನೇರುಘಟ್ಟ ಉದ್ಯಾನದಲ್ಲಿ ಮಾರಕ ವೈರಸ್‌ಗೆ 7 ಚಿರತೆ ಮರಿಗಳು ಸಾವು

    ಆನೇಕಲ್: ಮಾರಕ ವೈರಸ್‌ಗೆ 7 ಚಿರತೆ ಮರಿಗಳು ಸಾವನ್ನಪ್ಪಿರುವ ಘಟನೆ ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ (Bannerghatta National Park) ನಡೆದಿದೆ. ಪೆಲಿನ್ ಪ್ಯಾನ್ಲೂಕೋಪೇನಿಯಾ (Feline Panleukopenia Virus) ಎಂಬ ಮಾರಕ ವೈರಸ್‌ಗೆ ಚಿರತೆ ಮರಿಗಳು ಬಲಿಯಾಗಿವೆ ಎನ್ನಲಾಗಿದೆ.

    ಬೆಕ್ಕಿನಿಂದ ಹರಡುವ‌ ಮಾರಕ ರೋಗ ಇದು. ಮೊದಲಿಗೆ ಆಗಸ್ಟ್ 22 ರಂದು ಕಾಣಿಸಿಕೊಂಡಿತ್ತು. ಆಗಸ್ಟ್ 22 ರಿಂದ ಸೆಪ್ಟೆಂಬರ್ 5ರ ಅವಧಿಯಲ್ಲಿ 7 ಚಿರತೆಗಳ ಸಾವು ಕಂಡಿವೆ. ಮನೆಯಲ್ಲಿ ಬೆಕ್ಕು ಸಾಕಿದ್ದ ಅನಿಮಲ್ ಕೀಪರ್‌ನಿಂದ ಸೋಂಕು ಹರಡಿರುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ. ಇದನ್ನೂ ಓದಿ: ಲಕ್ನೋದಲ್ಲಿ ಇಲಿ ಹಿಡಿಯೋದಕ್ಕೆ 69 ಲಕ್ಷ ರೂ. ಖರ್ಚು ಮಾಡಿದ ರೈಲ್ವೆ

    ರಾಜ್ಯದ ನಾನಾ ಭಾಗಗಳಿಂದ ರೈತರ ಜಮೀನುಗಳ ಬಳಿ ಸಿಕ್ಕಿದ್ದ ಚಿರತೆ ಮರಿಗಳು ಇವಾಗಿದ್ದವು. ಚಿರತೆ ಮರಿಗಳನ್ನ ರಕ್ಷಣೆ ಮಾಡಿ ಬನ್ನೇರುಘಟ್ಟ ಜೈವಿಕ ಉದ್ಯಾನಕ್ಕೆ ತರಲಾಗಿತ್ತು. ಮಾರಕ ರೋಗಕ್ಕೆ ತುತ್ತಾಗಿ ಈಗ ಏಳು ಚಿರತೆ ಮರಿಗಳ ಮೃತಪಟ್ಟಿವೆ.

    ಒಂದು ವರ್ಷದವರೆಗೆ ಮರಿಗಳಿಗೆ ಯಾವುದೇ ವ್ಯಾಕ್ಸಿನೇಷನ್ ನೀಡುವಂತಿಲ್ಲ. 11 ಜನರ ಕಮಿಟಿ‌ ಮಾಡಿ ಬೂಸ್ಟರ್ ಡೋಸ್ ನೀಡಿ ಕಂಟ್ರೋಲ್‌ ಮಾಡಲು ಕ್ರಮ ವಹಿಸಲಾಗಿತ್ತು. ಸೋಂಕು ತಗುಲಿದ ಬಳಿಕ ಜೀರ್ಣ ಕ್ರಿಯೆ ಆಗದೇ ರಕ್ತ ವಾಂತಿಯಾಗಿ ಪ್ರಾಣ ಬಿಟ್ಟಿವೆ. ಇದನ್ನೂ ಓದಿ: ಕುರುಡುಮಲೆ ವಿನಾಯಕನ ಹುಂಡಿಗೆ 2 ಕಂತೆ ಹಣ ಹಾಕಿದ ಯಡಿಯೂರಪ್ಪ – ಎಲ್ಲರಲ್ಲೂ ಅಚ್ಚರಿ

    ಚಿರತೆ, ಹುಲಿ, ಸಿಂಹ ಸೇರಿದಂತೆ ಎಲ್ಲಾ ಕೇಜ್‌ಗಳಿಗೆ ಬರ್ನಿಂಗ್ ಮಾಡಿ ಜಾಗೃತಿ ವಹಿಸಲಾಗಿದೆ. ಬ್ಲೀಚಿಂಗ್ ಪೌಡರ್, ಔಷಧಿ ಸಿಂಪಡಣೆ ಮಾಡಿ ಸ್ವಚ್ಛತೆಗೆ ಆದ್ಯತೆ ನೀಡಲಾಗಿದೆ. ವೈರಾಣು ನಿಯಂತ್ರಣಕ್ಕಾಗಿ ಅಧಿಕಾರಿಗಳು ಮುಂಜಾಗ್ರತಾ ಕ್ರಮ ವಹಿಸಿದ್ದಾರೆ.

    ವಿಶೇಷ ತಜ್ಞರು ವೈದ್ಯರ ಸಮಿತಿ ರಚನೆ ಮಾಡಿ ವೈರಸ್ ನಿಯಂತ್ರಣಕ್ಕೆ ಮುಂದಾಗಿದ್ದಾರೆ. ಹೆಲ್ತ್ ಕಮಿಟಿಯಲ್ಲಿ ಬನ್ನೇರುಘಟ್ಟ ಕಾರ್ಯ ನಿರ್ವಾಹಕ ಅಧಿಕಾರಿ ಸೂರ್ಯ ಸೇನ್, ಡಾ.ರವಿಂದ್ರ ಹೆಗ್ಡೆ, ಡಾ. ಉಮಾಶಂಕರ್, ಮಂಜುನಾಥ್. ವಿಜಯ್ ಇದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಇಸ್ರೇಲ್‍ನಿಂದ ತಂದಿದ್ದ ಜೀಬ್ರಾ ಬನ್ನೇರುಘಟ್ಟದಲ್ಲಿ ಸಾವು

    ಇಸ್ರೇಲ್‍ನಿಂದ ತಂದಿದ್ದ ಜೀಬ್ರಾ ಬನ್ನೇರುಘಟ್ಟದಲ್ಲಿ ಸಾವು

    ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಗಂಡು ಜೀಬ್ರಾ ಏಕಾಏಕಿ ಮೃತಪಟ್ಟಿದ್ದು ಹಲವು ಅನುಮಾನಗಳಿಗೆ ಕಾರಣವಾಗಿದೆ.

    ಇಸ್ರೇಲ್ ನಿಂದ ಪ್ರಾಣಿಯ ವಿನಿಮಯ ಒಪ್ಪಂದದ ಅಡಿಯಲ್ಲಿ 4 ವರ್ಷಗಳ ಹಿಂದೆ ಎರಡು ಹೆಣ್ಣು, ಎರಡು ಗಂಡು ಜೀಬ್ರಾಗಳನ್ನು ತರಲಾಗಿತ್ತು. ಈ ತಂಡದಲ್ಲಿ ಇದ್ದ ಗಂಡು ಜೀಬ್ರಾ ಸಾವನ್ನಪ್ಪಿರುವುದಕ್ಕೆ ಪ್ರಾಣಿ ಪ್ರೀಯರು ಅನುಮಾನ ವ್ಯಕ್ತಪಡಿಸಿದ್ದಾರೆ.

    ಇಸ್ರೇಲ್ ನಿಂದ ತಂದಿದ್ದ ಜೀಬ್ರಾಗಳಲ್ಲಿ ಕಳೆದ ವರ್ಷವಷ್ಟೇ ಗರ್ಭಿಣಿಯಾಗಿದ್ದ ಜೀಬ್ರಾವೊಂದು ಗಿಡ ನೆಡಲು ತೆಗೆಯಲಾಗಿದ್ದ ಗುಂಡಿಗೆ ಬಿದ್ದು ಸಾವನ್ನಪ್ಪಿತ್ತು. ಆದಾದ ಒಂದು ವರ್ಷದ ಮತ್ತೊಂದು ಜೀಬ್ರಾ ಸಾವನ್ನಪ್ಪಿದೆ. ಉದ್ಯಾನವನದ ಸಿಬ್ಬಂದಿಯ ನಿರ್ಲಕ್ಷ್ಯದಿಂದ ಅಂದು ಜೀಬ್ರಾ ಮೃತಪಟ್ಟಿತ್ತು. ಈ ಘಟನೆ ಮಾಸುವ ಮುನ್ನವೇ ಈಗ ಮತ್ತೊಂದು ಜೀಬ್ರಾ ಸಾವನ್ನಪ್ಪಿದೆ.

    ಜೀಬ್ರಾ ಸಾವಿನ ಮಾಹಿತಿಗಾಗಿ ಮರಣೋತ್ತರ ಪರೀಕ್ಷೆ ಯನ್ನು ಉದ್ಯಾನವನದ ವೈದ್ಯರ ತಂಡ ಕೈಗೊಂಡಿದ್ದು, ಇದೀಗ ಉದ್ಯಾನವನದಲ್ಲಿ ವಿದೇಶದಿಂದ ತರಲಾಗಿರುವ ನಾಲ್ಕು ಜೀಬ್ರಾಗಳಲ್ಲಿ ಕೇವಲ 2 ಜೀಬ್ರಾಗಳು ಮಾತ್ರ ಉಳಿದಿವೆ.

    ಜೀಬ್ರಾ ಬಂದ ಆರಂಭದಲ್ಲಿ ಇವುಗಳನ್ನು ಪ್ರತ್ಯೇಕವಾಗಿ ಇರಿಸಿ ನೋಡಲಾಗಿತ್ತು. ಇಲ್ಲಿನ ವಾತಾವರಣಕ್ಕೆ ಹೊಂದಿಕೊಂಡ ಬಳಿಕವೇ ಪ್ರವಾಸಿಗರ ವೀಕ್ಷಣೆಗೆ ಅವಕಾಶ ನೀಡಲಾಗಿತ್ತು.

  • ಬನ್ನೇರುಘಟ್ಟ ಉದ್ಯಾನವನಕ್ಕೆ ಹೊಸ ಅತಿಥಿ ಆಗಮನ

    ಬನ್ನೇರುಘಟ್ಟ ಉದ್ಯಾನವನಕ್ಕೆ ಹೊಸ ಅತಿಥಿ ಆಗಮನ

    ಬೆಂಗಳೂರು: ನಗರದ ಕೂಗಳತೆ ದೂರದಲ್ಲಿರುವ ಬನ್ನೇರುಘಟ್ಟ ಜೈವಿಕ ಉದ್ಯಾನವನ ವನ್ಯ ಜೀವಿಗಳ ತಾಣವಾಗಿರುವುದರಿಂದ ರಾಷ್ಟ್ರ ಮಟ್ಟದಲ್ಲಿ ಪ್ರಖ್ಯಾತಿ ಗಳಿಸಿದ್ದು, ಪ್ರತಿನಿತ್ಯ ಸಾವಿರಾರು ಪ್ರವಾಸಿಗರು ಆಗಮಿಸಿ ಇಲ್ಲಿನ ವನ್ಯ ಜೀವಿಗಳನ್ನು ಕಂಡು ಸಂತಸಗೊಳ್ಳುತ್ತಾರೆ. ಇದೀಗ ಪಾರ್ಕ್ ಗೆ ಹೊಸ ಅತಿಥಿ ಆಗಮನವಾಗಿದ್ದು. ಸಾಕಷ್ಟು ಪ್ರಾಣಿಪ್ರಿಯರನ್ನು ಸೆಳೆಯುತ್ತಿದೆ

    ಉದ್ಯಾನವನದ ಆನೆ ಕ್ಯಾಂಪ್ ನಲ್ಲಿರುವ ನಿಸರ್ಗ ಎಂಬ ಆನೆ ಕಳೆದ 20 ದಿನಗಳ ಹಿಂದೆ ಗಂಡು ಮರಿಗೆ ಜನ್ಮ ನೀಡಿದ್ದು, ಇಷ್ಟು ದಿನ ತಾಯಿಯ ಆರೈಕೆಯಲ್ಲಿದ್ದ ಮರಿ ಆನೆಯನ್ನು ಪಾರ್ಕ್ ಸಿಬ್ಬಂದಿ ಪ್ರವಾಸಿಗರ ವೀಕ್ಷಣೆಗೆ ಬಿಟ್ಟಿರುವುದರಿಂದ ಆಕರ್ಷಣೆಯ ಕೇಂದ್ರ ಬಿಂದುವಾಗಿದೆ. ಆನೆ ಕ್ಯಾಂಪ್ ನಲ್ಲಿ 22 ಆನೆಗಳಿದ್ದು, ಇದೀಗ ಈ ಸಂಖ್ಯೆ 23 ಕ್ಕೆ ಏರಿಕೆಯಾಗಿದೆ. ತಾಯಿ ಮಗನ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿರುವ ಪಾರ್ಕ್ ಸಿಬ್ಬಂದಿ ತಾಯಿ ನಿಸರ್ಗಾಗೆ ಹುಲ್ಲು ಹಾಗು ಬೆಲ್ಲದ ಜೊತೆಗೆ ವಿವಿಧ ಬಗೆಯ ಕಾಳುಗಳ ಆಹಾರ ನೀಡುತ್ತಿದ್ದಾರೆ.

    ಉದ್ಯಾನವನದಲ್ಲಿ ಇತರೇ ಪ್ರಾಣಿಗಳಿಗಿಂತ ಆನೆಗಳು ಹೆಚ್ಚು ಅಕರ್ಷಣಿಯವಾಗಿದ್ದು, ಇದೀಗ ಇದರ ಸೊಬಗನ್ನು ಮರಿ ಆನೆ ಮತ್ತಷ್ಟು ಹೆಚ್ಚಿಸಿದೆ. ಮರಿ ಆನೆಯ ಮತ್ತಷ್ಟು ತುಂಟಾಟವನ್ನು ನೋಡಲು ನೀವು ಒಮ್ಮೆ ಬನ್ನೇರುಘಟ್ಟ ಆನೆ ಕ್ಯಾಂಪ್ ಗೆ ಭೇಟಿ ನೀಡಬಹುದು.