Tag: ಬಯೋಕಾನ್

  • ಬಯೋಕಾನ್ ಅಧ್ಯಕ್ಷೆ ಕಿರಣ್ ಮಜುಂದಾರ್ ಪತಿ ಜಾನ್ ಶಾ ನಿಧನ

    ಬಯೋಕಾನ್ ಅಧ್ಯಕ್ಷೆ ಕಿರಣ್ ಮಜುಂದಾರ್ ಪತಿ ಜಾನ್ ಶಾ ನಿಧನ

    ಬೆಂಗಳೂರು: ಬಯೋಕಾನ್ (Biocon) ಅಧ್ಯಕ್ಷೆ ಕಿರಣ್ ಮಜುಂದಾರ್ ಶಾ (Kiran Mazumdar Shaw) ಅವರ ಪತಿ, ಬಯೋಕಾನ್ ಇಂಡಿಯಾದ ಮಾಜಿ ಉಪಾಧ್ಯಕ್ಷ ಜಾನ್ ಶಾ (John Shaw) ಅವರು ಸೋಮವಾರ ತಮ್ಮ 72 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ.

    ಜಾನ್ ಶಾ ಅವರು ಕರುಳಿನ ಕ್ಯಾನ್ಸರ್‌ನಿಂದ ಬಳಲುತ್ತಿದ್ದು, ಕಳೆದ ಕೆಲವು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಚಿಕಿತ್ಸೆ ಫಲಕಾರಿಯಾಗದೇ ಶಾ ನಿಧನ ಹೊಂದಿದ್ದಾರೆ. ಶಾ ನಿಧನಕ್ಕೆ ಉದ್ಯಮ ಕ್ಷೇತ್ರದ ಗಣ್ಯರು ಸಂತಾಪ ಸೂಚಿಸಿದ್ದಾರೆ. ಅವರ ಅಂತ್ಯಕ್ರಿಯೆ ಬೆಂಗಳೂರಿನ ವಿಲ್ಸನ್ ಗಾರ್ಡನ್ ಸ್ಮಶಾನದಲ್ಲಿ ಸೋಮವಾರ ಸಂಜೆ ನೆರವೇರಲಿದೆ.

    ಇಂಗ್ಲೆಂಡ್ ಮೂಲದ ಜಾನ್ ಶಾ ಅವರು ವಿದೇಶಿ ಪ್ರವರ್ತಕರಾಗಿ ಮತ್ತು ವಿವಿಧ ಬಯೋಕಾನ್ ಗ್ರೂಪ್ ಕಂಪನಿಗಳ ಸಲಹಾ ಮಂಡಳಿಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ಅವರು ಮಧುರಾ ಕೋಟ್ಸ್ ಲಿಮಿಟೆಡ್‌ನ ಮಾಜಿ ಅಧ್ಯಕ್ಷರಾಗಿ ಮತ್ತು ಕೋಟ್ಸ್ ವಿಯೆಲ್ಲಾ ಗ್ರೂಪ್‌ನ ಮಾಜಿ ಹಣಕಾಸು ಮತ್ತು ವ್ಯವಸ್ಥಾಪಕ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ.

    ಶಾ ಅವರು ಗ್ಲ್ಯಾಸ್ಗೋ ವಿಶ್ವವಿದ್ಯಾಲಯದಲ್ಲಿ ಇತಿಹಾಸ ಹಾಗೂ ರಾಜಕೀಯ ಆರ್ಥಿಕತೆಯಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದರು. ಜೊತೆಗೆ ಅದೇ ವಿಶ್ವವಿದ್ಯಾನಿಲಯದಿಂದ ಗೌರವ ಡಾಕ್ಟರೇಟ್ ಪಡೆದಿದ್ದರು. ಇದನ್ನೂ ಓದಿ: ಪಾಕಿಸ್ತಾನದ ಹಿರಿಯ ಪತ್ರಕರ್ತ ಕೀನ್ಯಾದಲ್ಲಿ ಹತ್ಯೆ

    2001 ರಲ್ಲಿ ಇವರ ಬಯೋಕಾನ್ ಸಂಸ್ಥೆ ಕೊಲೆಸ್ಟ್ರಾಲ್ ಕಡಿಮೆಗೊಳಿಸುವ ಅಣುವಿನ ತಯಾರಿಕೆಗಾಗಿ ಹಾಗೂ ಆಹಾರ ಮತ್ತು ಔಷಧ ಆಡಳಿತದ ಅನುಮೋದನೆಯನ್ನು ಪಡೆದ ಮೊದಲ ಭಾರತೀಯ ಕಂಪನಿಯಾಗಿದೆ. ಕಿರಣ್ ಮಜುಂದಾರ್ ತಮ್ಮ ಬಯೋಕಾನ್ ಸಂಸ್ಥೆಯನ್ನು ವಿಶ್ವದ ಪ್ರತಿಷ್ಠಿತ ಸಂಸ್ಥೆಯಾಗಿ ಪರಿವರ್ತಿಸಿದ್ದಾರೆ.

    ವೈದ್ಯಕೀಯ ಕ್ಷೇತ್ರದಲ್ಲಿ ಹಲವು ಪ್ರತಿಷ್ಠಿತ ಉತ್ಪನ್ನಗಳನ್ನು ನೀಡುತ್ತಿರುವ ಬಯೋಕಾನ್ ಸಂಸ್ಥೆಯನ್ನು ಕಿರಣ್ ಮಜುಂದಾರ್ ಅವರು ಪ್ರಾರಂಭಿಸಿದ್ದು ತಮ್ಮ ಮನೆಯ ಶೆಡ್ ಒಂದರಲ್ಲಿ. ಅದೂ ಕೇವಲ 10 ಸಾವಿರ ರೂ. ಬಂಡವಾಳದ ಮೂಲಕ. ಅಂದಿನ ದಿನದಲ್ಲಿ ಅವರಿಗೆ ಯಾರೂ ಸಹಾಯಕ್ಕೆ ಬಂದಿರಲಿಲ್ಲ. ತಮ್ಮ ನಿರಂತರ ಪರಿಶ್ರಮದಿಂದ ಇಂದು ಬಯೋಕಾನ್ ಸಂಸ್ಥೆ ವಿಶ್ವದಲ್ಲೇ 7ನೇ ಅತಿ ದೊಡ್ಡ ಸಂಸ್ಥೆಯಾಗಿ ಬೆಳೆದಿದೆ. ಇದನ್ನೂ ಓದಿ: SC-ST ಮೀಸಲಾತಿ ಹೆಚ್ಚಳಕ್ಕೆ ಸುಗ್ರೀವಾಜ್ಞೆ – ಮುಂದಿನ ಅಧಿವೇಶನದಲ್ಲಿ ಅನುಮೋದನೆ: ಬೊಮ್ಮಾಯಿ

    Live Tv
    [brid partner=56869869 player=32851 video=960834 autoplay=true]

  • ರಾಜ್ಯದ ಕೋಮು ಸಂಘರ್ಷ ದೇಶದ ಐಟಿ ಹಬ್‍ಗೆ ಮಾರಕ ಬೊಮ್ಮಾಯಿ ಬಗೆಹರಿಸುವ ಭರವಸೆ ನೀಡಿದ್ದಾರೆ: ಕಿರಣ್ ಮಜುಂದಾರ್

    ರಾಜ್ಯದ ಕೋಮು ಸಂಘರ್ಷ ದೇಶದ ಐಟಿ ಹಬ್‍ಗೆ ಮಾರಕ ಬೊಮ್ಮಾಯಿ ಬಗೆಹರಿಸುವ ಭರವಸೆ ನೀಡಿದ್ದಾರೆ: ಕಿರಣ್ ಮಜುಂದಾರ್

    ಬೆಂಗಳೂರು: ಪಟ್ಟಭದ್ರಾ ಹಿತಾಸಕ್ತಿಗಳು ವಿಷಯವನ್ನು ರಾಜಕೀಯವಾಗಿ ಹೈಜಾಕ್ ಮಾಡುತ್ತಿವೆ. ರಾಜ್ಯದ ಕೋಮು ಸಂಘರ್ಷ ದೇಶದ ಐಟಿ ಹಬ್‍ಗೆ ಮಾರಕವಾಗಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇದನ್ನು ಶಾಂತಿಯುತವಾಗಿ ಬಗೆಹರಿಸುವ ವಿಶ್ವಾಸ ನನ್ನದು ಎಂದಿದ್ದಾರೆ ಎಂದು ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಂದಾರ್ -ಶಾ ಟ್ವಿಟ್ಟರ್ ಮೂಲಕ ತಿಳಿಸಿದ್ದಾರೆ.

    ಇಂದು ಬೆಳಗ್ಗೆ ಜಾತ್ರೆ, ಉತ್ಸವ ಸಂದರ್ಭದಲ್ಲಿ ದೇವಸ್ಥಾನಗಳಲ್ಲಿ ಮುಸ್ಲಿಂ ವ್ಯಾಪಾರಿಗಳನ್ನು ನಿಷೇಧಿಸುವಂತೆ ಬಲಪಂಥೀಯ ಗುಂಪುಗಳ ನೀಡಿರುವ ಕರೆಗೆ ಸಂಬಂಧಿಸಿದಂತೆ ಕಿರಣ್ ಮಜುಂದಾರ್-ಶಾ ಟ್ವಿಟ್ಟರ್ ಮೂಲಕ ಪ್ರತಿಕ್ರಿಯಿಸಿದ್ದರು. ತಂತ್ರಜ್ಞಾನ ಕ್ಷೇತ್ರವು ಕೋಮುವಾದಿಯಾದರೆ ಅದು ಭಾರತದ ಜಾಗತಿಕ ನಾಯಕತ್ವವನ್ನು ನಾಶ ಮಾಡುತ್ತದೆ ಎಂದು ಕಳವಳ ವ್ಯಕ್ತಪಡಿಸಿದ್ದರು. ಇದನ್ನೂ ಓದಿ: ಮುಖ್ಯಮಂತ್ರಿಗಳೇ, ಕೋಮುಗಳ ನಡುವಿನ ವಿಭಜನೆ ತಡೆಯಿರಿ: ಕಿರಣ್‌ ಮಜುಂದಾರ್‌ ಶಾ ಒತ್ತಾಯ

    ಟ್ವೀಟ್‍ನಲ್ಲೇನಿದೆ?
    ಎಲ್ಲಾ ಸಮುದಾಯಗಳನ್ನೂ ಒಳಗೊಂಡ ಆರ್ಥಿಕ ಅಭಿವೃದ್ಧಿಯನ್ನು ಕರ್ನಾಟಕ ರೂಪಿಸಿದೆ. ಇಲ್ಲಿ ಕೋಮುವಾದಕ್ಕೆ ಅನುಮತಿ ನೀಡಬಾರದು. ಐಟಿಬಿಟಿ ಯಂತಹ ಕ್ಷೇತ್ರಗಳಲ್ಲಿ ಕೋಮುವಾದ ಬೆಳೆದರೆ, ಅದು ನಮ್ಮ ಜಾಗತಿಕ ನಾಯಕತ್ವವನ್ನು ನಾಶಪಡಿಸುತ್ತದೆ. ಬಸವರಾಜ ಬೊಮ್ಮಾಯಿ ಅವರೇ, ದಯವಿಟ್ಟು ಕೋಮುಗಳ ನಡುವಿನ ವಿಭಜನೆಯನ್ನು ತಡೆಯಿರಿ. ಇದನ್ನೂ ಓದಿ: ರತನ್‌ ಟಾಟಾಗೆ ಭಾರತ ರತ್ನ ನೀಡುವಂತೆ ಮನವಿ ಮಾಡಿದ್ದ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

    ನಾನು ಬಸವರಾಜ ಬೊಮ್ಮಾಯಿ ಅವರನ್ನು ಅಭಿನಂದಿಸುತ್ತೇನೆ. ರಾಜ್ಯದ ಪರಿಸ್ಥಿತಿಯನ್ನು ಶಾಂತಿಯುತವಾಗಿ ಬಗೆಹರಿಸುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಚರ್ಚೆ ನಡೆಸುವ ಕುರಿತು ಸಿಎಂ ತಿಳಿಸಿರುವುದು ಅಭಿನಂದನಾರ್ಹ.

  • ಬಯೋಕಾನ್‌ಗೆ ಹಿನ್ನಡೆ – ಔಷಧಿ ರಾಷ್ಟ್ರೀಯ ಚಿಕಿತ್ಸಾ ಶಿಷ್ಟಾಚಾರದಲ್ಲಿ ಬರಲ್ಲ ಎಂದ ಕೇಂದ್ರ

    ಬಯೋಕಾನ್‌ಗೆ ಹಿನ್ನಡೆ – ಔಷಧಿ ರಾಷ್ಟ್ರೀಯ ಚಿಕಿತ್ಸಾ ಶಿಷ್ಟಾಚಾರದಲ್ಲಿ ಬರಲ್ಲ ಎಂದ ಕೇಂದ್ರ

    ನವದೆಹಲಿ: ಕೊರೊನಾ ವೈರಸ್‌ ಸೋಂಕಿತರಿಗೆ ಬೆಂಗಳೂರಿನ ಬಯೋಕಾನ್‌ ಅಭಿವೃದ್ಧಿ ಪಡಿಸಿರುವ ಔಷಧಿ ರಾಷ್ಟ್ರೀಯ ಚಿಕಿತ್ಸಾ ಶಿಷ್ಟಾಚಾರದಲ್ಲಿ ಬರುವುದಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ.

    ಜುಲೈ ಮೊದಲ ವಾರದಲ್ಲಿ ಬಯೋಕಾನ್‌ ಸಂಸ್ಥೆ ಅಭಿವೃದ್ಧಿ ಪಡಿಸಿದ್ದ ಚರ್ಮರೋಗ ಔಷಧ ‘ಇಟೋಲಿಝುಮಾಬ್‌’ ಇಂಜೆಕ್ಷನ್‌ನ್ನು ಗಂಭೀರ ಪ್ರಮಾಣದ ಉಸಿರಾಟ ತೊಂದರೆಯಿಂದ ಬಳಲುತ್ತಿರುವ ಕೋವಿಡ್‌ 19 ಸೋಂಕಿತರಿಗೆ ನೀಡಲು ಡ್ರಗ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ(ಡಿಸಿಜಿಐ) ಅನುಮತಿ ನೀಡಿತ್ತು.

    ಡಿಸಿಜಿಐ ಬಯೋಕಾನ್‌ ಔಷಧಿ ಬಳಕೆಗೆ ಅನುಮತಿ ನೀಡಿದಕ್ಕೆ ವೈದ್ಯಕೀಯ ಕ್ಷೇತ್ರದ ಕೆಲ ತಜ್ಞರು ಆರೋಗ್ಯ ಇಲಾಖೆಗೆ ಪತ್ರ ಬರೆದು ಆಕ್ಷೇಪ ಎತ್ತಿದ್ದರು. ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿದ ಸಚಿವಾಲಯ ಈ ಔಷಧಿಯಿಂದ ರೋಗಿ ಗುಣಮುಖರಾಗುತ್ತಾರೆ ಎಂಬುದಕ್ಕೆ ಬಹಳ ಕಡಿಮೆ ಪ್ರಮಾಣದ ಸಾಕ್ಷ್ಯ ಸಿಕ್ಕಿದೆ. ಕೇವಲ 30 ರೋಗಿಗಳಿಗೆ ಟ್ರಯಲ್‌ ಮಾಡಿದ ಈ ಔಷಧಿಯನ್ನು ನೀಡಲು ಅನುಮತಿ ನೀಡಿದ್ದಕ್ಕೆ ಕೆಲ ವೈದ್ಯರು ಪ್ರಶ್ನೆ ಎತ್ತಿದ್ದಾರೆ. ಕೋವಿಡ್‌ 19 ರೋಗಿಗಳಿಗೆ ತುರ್ತು ಸಂದರ್ಭದಲ್ಲಿ ಔಷಧಿ ನೀಡಲು ಅನುಮತಿ ನೀಡಬೇಕಾದರೆ ಅದಕ್ಕೆ ಅಂತರಾಷ್ಟ್ರೀಯ ಮಟ್ಟದಲ್ಲಿ ಒಪ್ಪಿಗೆ ಬೇಕಾಗುತ್ತದೆ ಎಂದು ಹೇಳಿದೆ.

    ಈ ಸಂಬಂಧ ಬಯೋಕಾನ್‌ ಹೇಳಿಕೆ ಬಿಡುಗಡೆ ಮಾಡಿದ್ದು, ರಾಷ್ಟ್ರೀಯ೭ ಕೋವಿಡ್‌ 19 ಟಾಸ್ಕ್‌ ಫೋರ್ಸ್‌ ಔಷಧಿ ಬಳಕೆ ಸಂಬಂಧ ಮತ್ತಷ್ಟು ಸಾಕ್ಷ್ಯಗಳನ್ನು ಕೇಳಿದೆ. ನಾವು ಸಾಕ್ಷ್ಯಗಳನ್ನು ನೀಡುತ್ತೇವೆ. ಹತ್ತಿರ ಹತ್ತಿರ 1 ಸಾವಿರ ಸೋಂಕಿತರಿಗೆ ಈ ಔಷಧಿ ನೀಡಿದ್ದು, ಉತ್ತಮ ಫಲಿತಾಂಶ ಬಂದಿದೆ ಎಂದು ತಿಳಿಸಿದೆ.

    ದೊಡ್ಡ ಪ್ರಮಾಣದಲ್ಲಿ ಈ ಔಷಧಿಯನ್ನು ಟ್ರಯಲ್‌ ಮಾಡಲು ನಾವು ಮುಂದಾಗುತ್ತಿದ್ದೇವೆ. 10-15 ಆಸ್ಪತ್ರೆಗಳ 200 ರೋಗಿಗಳಿಗೆ ಈ ಔಷಧಿ ನೀಡಲು ಮುಂದಾಗುತ್ತಿದ್ದೇವೆ. ಈ ಅಧ್ಯಯನ ವರದಿಯನ್ನು ನಾವು ಡಿಸಿಜಿಐಗೆ ನೀಡುತ್ತೇವೆ ಎಂದು ಬಯೋಕಾನ್‌ ಹೇಳಿದೆ.

    ಬಯೋಕಾನ್‌ ಕಂಪನಿ ಚರ್ಮರೋಗ ಸೋರಿಯಾಸಿಸ್‌ಗೆ ಬಳಸುವ ಈ ಔಷಧವನ್ನು ಉಸಿರಾಟದ ತೊಂದರೆಗೆ ಬಳಸುವ ರೋಗಿಗಳಿಗೆ ನೀಡುವ ಸಂಬಂಧ 2ನೇ ಹಂತದ ಕ್ಲಿನಿಕಲ್‌ ಪ್ರಯೋಗವನ್ನು ಯಶಸ್ವಿಯಾಗಿ ನಡೆಸಿ, ತನ್ನ ಪ್ರಯೋಗದ ವರದಿಯನ್ನು ಡಿಸಿಜಿಐಗೆ ಸಲ್ಲಿಸಿತ್ತು. ಡಿಸಿಜಿಐ ಈ ವರದಿಯನ್ನು ಶ್ವಾಸಕೋಶ, ಔಷಧ ಶಾಸ್ತ್ರ, ಏಮ್ಸ್‌ ತಜ್ಞರ ಸಮಿತಿಗೆ ಪರಿಶೀಲನೆ ನಡೆಸುವಂತೆ ಸೂಚಿಸಿತ್ತು. ತಜ್ಞರಿಂದ ‌ಒಪ್ಪಿಗೆ ಸಿಕ್ಕಿದ ಬಳಿಕ ಕೊರೊನಾ ಸೋಂಕಿತರ ಸಮ್ಮತಿಯ ಮೇರೆಗೆ ಬಳಸಲು ಅನುಮತಿ ನೀಡಿತ್ತು.

    ಈ ಔಷಧಿಯನ್ನು ಅತಿ ಹೆಚ್ಚು ಸೋಂಕಿತರು ಇರುವ ಮುಂಬೈ ಮತ್ತು ದೆಹಲಿಯಲ್ಲಿ ಪ್ರಯೋಗ ಮಾಡಲಾಗಿತ್ತು. ಆಸ್ಪತ್ರೆಯಲ್ಲಿನ ಹಲವು ರೋಗಿಗಳ ಮೇಲೆ ಈ ಔಷಧ ಪ್ರಯೋಗಿಸಲಾಗಿದ್ದು ಗುಣಮುಖರಾಗಿದ್ದಾರೆ ಎಂದು ಮುಂಬೈಯ ಬಿವೈಎಲ್ ನಾಯರ್ ಆಸ್ಪತ್ರೆಯ ಡೀನ್ ಡಾ. ಮೋಹನ್ ಜೋಷಿ ತಿಳಿಸಿದ್ದಾರೆ. ದೆಹಲಿಯ ಲೋಕ ನಾಯಕ ಆಸ್ಪತ್ರೆಯಲ್ಲಿ 8 ರೋಗಿಗಳಿಗೆ ಇಟೋಲಿಝುಮಾಬ್‌ ಔಷಧ ನೀಡಲಾಗಿದ್ದು, ಅವರೆಲ್ಲರೂ ಗುಣಮುಖರಾಗಿದ್ದಾರೆ ಎಂದು ವರದಿಯಾಗಿತ್ತು. ತುರ್ತು ಸ್ಥಿತಿಯಲ್ಲಿ ಹಾಗೂ ನಿಯಂತ್ರಿತ ಪ್ರಮಾಣದಲ್ಲಿ ಬಳಕೆ ಮಾಡಬೇಕು ಎಂಬ ಷರತ್ತನ್ನು ಡಿಸಿಜಿಐ ವಿಧಿಸಿತ್ತು.

    ಈ ಬಗ್ಗೆ ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಂದಾರ್ ಶಾ ಪ್ರತಿಕ್ರಿಯಿಸಿ, ಕೋವಿಡ್-19 ಸಾಂಕ್ರಾಮಿಕ ರೋಗದಿಂದ ಪಾರಾಗಲು ದೇಶ, ವಿದೇಶಗಳಲ್ಲಿ ಸಂಶೋಧಕರು ನಿರತಂತರ ಸಂಶೋಧನೆ ನಡೆಸುತ್ತಿದ್ದಾರೆ. ಇಟೋಲಿಝುಮಾಬ್‌ ಔಷಧ ನೀಡಿದ ಎಲ್ಲ ರೋಗಿಗಳು ಗುಣಮುಖರಾಗಿದ್ದಾರೆ. ಸಕಾರಾತ್ಮಕ ಪ್ರತಿಕ್ರಿಯೆ ಕಂಡುಬಂದ ಹಿನ್ನೆಲೆಯಲ್ಲಿ ಗಂಭೀರ ಪ್ರಮಾಣದ ಉಸಿರಾಟ ತೊಂದರೆಯಿಂದ ಬಳಲುತ್ತಿರುವ ಸೋಂಕಿತರಿಗೆ ಈ ಔಷಧ ನೀಡಲು ಡಿಸಿಜಿಐ ಅನುಮೋದನೆ ನೀಡಿದೆ ಎಂದು ತಿಳಿಸಿದ್ದರು. ಬಯೋಕಾನ್‌ ಕಂಪನಿಯು 2013ರಿಂದಲೂ ಬಯೋಕಾನ್ ಪಾರ್ಕ್ ನಲ್ಲಿ ಈ ಔಷಧವನ್ನು ತಯಾರಿಸುತ್ತದೆ.

    ಈ ವರ್ಷದಲ್ಲೇ ಮೇಡ್ ಇನ್ ಇಂಡಿಯಾ ಕೋವಿಡ್ -19 ಔಷಧಿ ಲಭ್ಯವಾಗಲಿದೆ ಎಂದು ಬಯೋಕಾನ್ ಕಂಪನಿಯ ಆಡಳಿತ ನಿರ್ದೇಶಕಿ ಕಿರಣ್ ಮಜುಂದಾರ್ ಶಾ ಏಪ್ರಿಲ್‌ನಲ್ಲಿ ತಿಳಿಸಿದ್ದರು.

    ಈಗಾಗಲೇ ಎರಡು, ಮೂರು ಸಣ್ಣ ಕಂಪನಿಗಳು ಔಷಧಿ ಅಭಿವೃದ್ಧಿ ಪಡಿಸುತ್ತಿವೆ. ಈ ಕಂಪನಿಗಳು ದೊಡ್ಡ ಕಂಪನಿಗಳ ಸಹಯೋಗದೊಂದಿಗೆ ಔಷಧಿ ತಯಾರಿಸುವ ಕೆಲಸ ಮಾಡುತ್ತಿವೆ. ನಾವು ಔಷಧಿ ನಿರ್ಮಾಣಕ್ಕೆ ಕೈ ಹಾಕಿದ್ದೇವೆ ಎಂದು ಮಾಧ್ಯಮಕ್ಕೆ ತಿಳಿಸಿದ್ದರು.

  • ಸಿಹಿ ಸುದ್ದಿ – ಕೊರೊನಾ ಸೋಂಕಿತರಿಗೆ ಬಯೋಕಾನ್‌ ಔಷಧಿ

    ಸಿಹಿ ಸುದ್ದಿ – ಕೊರೊನಾ ಸೋಂಕಿತರಿಗೆ ಬಯೋಕಾನ್‌ ಔಷಧಿ

    ನವದೆಹಲಿ: ಗಂಭೀರ ಪ್ರಮಾಣದ ಉಸಿರಾಟ ತೊಂದರೆಯಿಂದ ಬಳಲುತ್ತಿರುವ ಕೋವಿಡ್‌ 19 ಸೋಂಕಿತರಿಗೆ ಗುಡ್‌ನ್ಯೂಸ್‌. ಬೆಂಗಳೂರಿನ ಬಯೋಕಾನ್‌ ಸಂಸ್ಥೆ ಅಭಿವೃದ್ಧಿ ಪಡಿಸಿರುವ ಚರ್ಮರೋಗ ಔಷಧ ‘ಇಟೋಲಿಝುಮಾಬ್‌’ ಇಂಜೆಕ್ಷನ್‌‌ ನೀಡಲು ಕೇಂದ್ರ ಸರ್ಕಾರ ಷರತ್ತು ಬದ್ಧ ಅನುಮತಿ ನೀಡಿದೆ.

    ತುರ್ತು ಸ್ಥಿತಿಯಲ್ಲಿ ಹಾಗೂ ನಿಯಂತ್ರಿತ ಪ್ರಮಾಣದಲ್ಲಿ ಬಳಕೆ ಮಾಡಬೇಕು ಎಂಬ ಷರತ್ತನ್ನು ಡ್ರಗ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ(ಡಿಸಿಜಿಐ) ವಿಧಿಸಿದೆ. ಬಯೋಕಾನ್‌ ಕಂಪನಿ ಚರ್ಮರೋಗ ಸೋರಿಯಾಸಿಸ್‌ಗೆ ಬಳಸುವ ಈ ಔಷಧವನ್ನು ಉಸಿರಾಟದ ತೊಂದರೆಗೆ ಬಳಸುವ ರೋಗಿಗಳಿಗೆ ನೀಡುವ ಸಂಬಂಧ 2ನೇ ಹಂತದ ಕ್ಲಿನಿಕಲ್‌ ಪ್ರಯೋಗವನ್ನು ಯಶಸ್ವಿಯಾಗಿ ನಡೆಸಿ, ತನ್ನ ಪ್ರಯೋಗದ ವರದಿಯನ್ನು ಡಿಸಿಜಿಐಗೆ ಸಲ್ಲಿಸಿತ್ತು.

    ಡಿಸಿಜಿಐ ಈ ವರದಿಯನ್ನು ಶ್ವಾಸಕೋಶ, ಔಷಧ ಶಾಸ್ತ್ರ, ಏಮ್ಸ್‌ ತಜ್ಞರ ಸಮಿತಿಗೆ ಪರಿಶೀಲನೆ ನಡೆಸುವಂತೆ ಸೂಚಿಸಿತ್ತು. ತಜ್ಞರಿಂದ ‌ಒಪ್ಪಿಗೆ ಸಿಕ್ಕಿದ ಬಳಿಕ ಕೊರೊನಾ ಸೋಂಕಿತರ ಸಮ್ಮತಿಯ ಮೇರೆಗೆ ಬಳಸಲು ಶುಕ್ರವಾರ ಅನುಮತಿ ನೀಡಿದೆ.

    ಈ ಔಷಧಿಯನ್ನು ಅತಿ ಹೆಚ್ಚು ಸೋಂಕಿತರು ಇರುವ ಮುಂಬೈ ಮತ್ತು ದೆಹಲಿಯಲ್ಲಿ ಪ್ರಯೋಗ ಮಾಡಲಾಗಿತ್ತು.  ಆಸ್ಪತ್ರೆಯಲ್ಲಿನ ಹಲವು ರೋಗಿಗಳ ಮೇಲೆ ಈ ಔಷಧ ಪ್ರಯೋಗಿಸಲಾಗಿದ್ದು ಗುಣಮುಖರಾಗಿದ್ದಾರೆ ಎಂದು ಮುಂಬೈಯ ಬಿವೈಎಲ್ ನಾಯರ್ ಆಸ್ಪತ್ರೆಯ ಡೀನ್ ಡಾ. ಮೋಹನ್ ಜೋಷಿ ತಿಳಿಸಿದ್ದಾರೆ. ದೆಹಲಿಯ ಲೋಕ ನಾಯಕ ಆಸ್ಪತ್ರೆಯಲ್ಲಿ 8 ರೋಗಿಗಳಿಗೆ ಇಟೋಲಿಝುಮಾಬ್‌ ಔಷಧ ನೀಡಲಾಗಿದ್ದು, ಅವರೆಲ್ಲರೂ ಗುಣಮುಖರಾಗಿದ್ದಾರೆ ಎಂದು ವರದಿಯಾಗಿದೆ.

    ಈ ಬಗ್ಗೆ  ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಂದಾರ್ ಶಾ ಪ್ರತಿಕ್ರಿಯಿಸಿ, ಕೋವಿಡ್-19 ಸಾಂಕ್ರಾಮಿಕ ರೋಗದಿಂದ ಪಾರಾಗಲು ದೇಶ, ವಿದೇಶಗಳಲ್ಲಿ ಸಂಶೋಧಕರು ನಿರತಂತರ ಸಂಶೋಧನೆ ನಡೆಸುತ್ತಿದ್ದಾರೆ. ಇಟೋಲಿಝುಮಾಬ್‌ ಔಷಧ ನೀಡಿದ ಎಲ್ಲ ರೋಗಿಗಳು ಗುಣಮುಖರಾಗಿದ್ದಾರೆ. ಸಕಾರಾತ್ಮಕ ಪ್ರತಿಕ್ರಿಯೆ ಕಂಡುಬಂದ ಹಿನ್ನೆಲೆಯಲ್ಲಿ ಗಂಭೀರ ಪ್ರಮಾಣದ ಉಸಿರಾಟ ತೊಂದರೆಯಿಂದ ಬಳಲುತ್ತಿರುವ ಸೋಂಕಿತರಿಗೆ ಈ ಔಷಧ ನೀಡಲು ಡಿಸಿಜಿಐ ಅನುಮೋದನೆ ನೀಡಿದೆ ಎಂದು ತಿಳಿಸಿದ್ದಾರೆ.

    ಬಯೋಕಾನ್‌ ಕಂಪನಿಯು 2013ರಿಂದಲೂ ಬಯೋಕಾನ್ ಪಾರ್ಕ್ ನಲ್ಲಿ ಈ ಔಷಧವನ್ನು ತಯಾರಿಸುತ್ತದೆ. ಕೊರೊನಾ ಸೋಂಕಿತರಿಗೆ ನೀಡಲಾಗುವ ಇಟೋಲಿಝುಮಾಬ್ ‌ ಔಷಧದ ಬೆಲೆ ಎಷ್ಟು ಎನ್ನುವುದು ತಿಳಿದು ಬಂದಿಲ್ಲ.

    ಈ ವರ್ಷದಲ್ಲೇ ಮೇಡ್ ಇನ್ ಇಂಡಿಯಾ ಕೋವಿಡ್ -19 ಔಷಧಿ ಲಭ್ಯವಾಗಲಿದೆ ಎಂದು ಬಯೋಕಾನ್ ಕಂಪನಿಯ ಆಡಳಿತ ನಿರ್ದೇಶಕಿ ಕಿರಣ್ ಮಜುಂದಾರ್ ಶಾ ಏಪ್ರಿಲ್‌ನಲ್ಲಿ ತಿಳಿಸಿದ್ದರು.

    ಈಗಾಗಲೇ ಎರಡು, ಮೂರು ಸಣ್ಣ ಕಂಪನಿಗಳು ಔಷಧಿ ಅಭಿವೃದ್ಧಿ ಪಡಿಸುತ್ತಿವೆ. ಈ ಕಂಪನಿಗಳು ದೊಡ್ಡ ಕಂಪನಿಗಳ ಸಹಯೋಗದೊಂದಿಗೆ ಔಷಧಿ ತಯಾರಿಸುವ ಕೆಲಸ ಮಾಡುತ್ತಿವೆ. ನಾವು ಔಷಧಿ ನಿರ್ಮಾಣಕ್ಕೆ ಕೈ ಹಾಕಿದ್ದೇವೆ ಎಂದು ಮಾಧ್ಯಮಕ್ಕೆ ತಿಳಿಸಿದ್ದಾರೆ.

  • ಈ ವರ್ಷವೇ ಮೇಡ್ ಇನ್ ಇಂಡಿಯಾ ಕೋವಿಡ್-19 ಔಷಧಿ ಲಭ್ಯ – ಕಿರಣ್ ಮಜುಂದಾರ್ ಶಾ

    ಈ ವರ್ಷವೇ ಮೇಡ್ ಇನ್ ಇಂಡಿಯಾ ಕೋವಿಡ್-19 ಔಷಧಿ ಲಭ್ಯ – ಕಿರಣ್ ಮಜುಂದಾರ್ ಶಾ

    ಬೆಂಗಳೂರು: ಈ ವರ್ಷದಲ್ಲೇ ಮೇಡ್ ಇನ್ ಇಂಡಿಯಾ ಕೋವಿಡ್ -19 ಔಷಧಿ ಲಭ್ಯವಾಗಲಿದೆ ಎಂದು ಬಯೋಕಾನ್ ಕಂಪನಿಯ ಆಡಳಿತ ನಿರ್ದೇಶಕಿ ಕಿರಣ್ ಮಜುಂದಾರ್ ಶಾ ಹೇಳಿದ್ದಾರೆ.

    ಈಗಾಗಲೇ ಎರಡು, ಮೂರು ಸಣ್ಣ ಕಂಪನಿಗಳು ಔಷಧಿ ಅಭಿವೃದ್ಧಿ ಪಡಿಸುತ್ತಿವೆ. ಈ ಕಂಪನಿಗಳು ದೊಡ್ಡ ಕಂಪನಿಗಳ ಸಹಯೋಗದೊಂದಿಗೆ ಔಷಧಿ ತಯಾರಿಸುವ ಕೆಲಸ ಮಾಡುತ್ತಿವೆ. ನಾವು ಔಷಧಿ ನಿರ್ಮಾಣಕ್ಕೆ ಕೈ ಹಾಕಿದ್ದೇವೆ ಎಂದು ಮಾಧ್ಯಮಕ್ಕೆ ತಿಳಿಸಿದ್ದಾರೆ.

    ಪ್ಲಾಸ್ಮಾ ಥೆರಪಿ ಬಗ್ಗೆ ಕೇಳಲಾದ ಪ್ರಶ್ನೆಗೆ, ಪ್ಲಾಸ್ಮಾ ಥೆರಪಿ ಸಂಬಂಧ ಕೋವಿಡ್-19ನಿಂದ ಗುಣಮುರಾದ ರೋಗಿಗಳ ರಕ್ತ ಸಂಗ್ರಹಿಸುವ ವಿಚಾರದ ಬಗ್ಗೆ ನಾನು ಕೆಲ ರಾಜ್ಯಗಳ ಜೊತೆ ಚರ್ಚಿಸಿದ್ದೇನೆ. ಈ ಪ್ಲಾಸ್ಮಾ ಕೊರೊನಾ ವೈರಸ್ ಅನ್ನು ನಾಶ ಮಾಡುತ್ತದೆ ಎಂದು ಅಭಿಪ್ರಾಯಪಟ್ಟರು.

    ಈಗಾಗಲೇ ನಮ್ಮ ಬಳಿ ಹಲವು ಡೇಟಾಗಳಿವೆ. ಪ್ಲಾಸ್ಮಾ ಥೆರಪಿ ಯಶಸ್ವಿಯಾದ ಹಲವು ಉದಾಹರಣೆಗಳಿವೆ. 1918ರ ಸ್ಪ್ಯಾನಿಶ್ ಜ್ವರಕ್ಕೆ ಪ್ಲಾಸ್ಮಾ ಥೆರಪಿ ಯಶಸ್ವಿಯಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಕೊರೊನಾ ವೈರಸ್‍ಗೆ ಭಾರತೀಯ ವಿಜ್ಞಾನಿಯಿಂದ ಔಷಧಿ ಎಸ್.ಎಸ್. ವಾಸನ್ ನೇತೃತ್ವದಲ್ಲಿ ಸಂಶೋಧನೆ

    ಕೊರೊನಾ ವೈರಸ್ ನಿಯಂತ್ರಣ ಸಂಬಂಧ ಭಾರತ ಸರ್ಕಾರ ಕ್ರಮವನ್ನು ಶ್ಲಾಘಿಸಿದ ಅವರು, ಕ್ವಾರಂಟೈನ್ ವಿಧಾನ, ರಾಷ್ಟ್ರಮಟ್ಟದ ಲಾಕ್‍ಡೌನ್, ವಲಯವಾರು ಝೋನ್ ಗಳಿಂದ ನಿಯಂತ್ರಣವಾಗಿದೆ. ಸದ್ಯಕ್ಕೆ ನಾವು ಸೇಫ್ ಜಾಗದಲ್ಲಿದೆ ಎಂದರು.

    ಕಳೆದ 5 ವಾರಗಳ ಲಾಕ್‍ಡೌನ್ ನಿಂದ ಭಾರತ ಹಲವು ಪಾಠಗಳನ್ನು ಕಲಿತಿದೆ. ಭಾರತದ ಆಸ್ಪತ್ರೆಗಳು ರೋಗಿಗಳಿಂದ ಭರ್ತಿ ಆಗಿಲ್ಲ. ಕಡಿಮೆ ಸಂಖ್ಯೆಯ ರೋಗಿಗಳು ವೆಂಟಿಲೇಟರ್ ನಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಭಾರತದಲ್ಲಿ ಶೇ.90 ರಷ್ಟು ಜನರು 60 ವರ್ಷದ ಒಳಗಿನವರು. ವಿಶ್ವದಲ್ಲಿ ಶೇ.80 ರಷ್ಟು ಮೃತಪಟ್ಟವರು 60 ವರ್ಷ ಮೇಲ್ಪಟ್ಟವರು ಎಂದು ಅಭಿಪ್ರಾಯಪಟ್ಟರು.

    ನನ್ನ ಪ್ರಕಾರ ಮೇ 3 ರಿಂದ ಹಂತ ಹಂತವಾಗಿ ಲಾಕ್‍ಡೌನ್ ತೆಗೆದು ಜೂನ್ ಕೊನೆಯಲ್ಲಿ ಎಲ್ಲ ಸೇವೆ ಆರಂಭಿಸಬಹುದು. ಆರ್ಥಿಕತೆಗೆ ಸಮಸ್ಯೆಯಾಗುತ್ತದೆ. ಆದರೆ ಜೀವವೂ ಮುಖ್ಯವಾಗುತ್ತದೆ ಎಂದು ತಿಳಿಸಿದರು.

    ಕೆಲ ರಾಜ್ಯಗಳಲ್ಲಿ ಕೊರೊನಾ ನಿಯಂತ್ರಣವಾಗಬೇಕು. ಮಹಾರಾಷ್ಟ್ರದ ಮುಂಬೈ ನಗರದಲ್ಲಿ ಸಾಕಷ್ಟು ಪ್ರಕರಣಗಳು ವರದಿಯಾಗಿದೆ. ಕರ್ನಾಟಕ ಉತ್ತಮವಾಗಿ ಕೆಲಸ ಮಾಡುತ್ತಿದ್ದು ಕಡಿಮೆ ಸಾವಾಗಿದೆ. ಪಾಸಿಟಿವ್ ಪ್ರಕರಣಗಳು ಜಾಸ್ತಿ ಇದ್ದರೂ ಮೃತಪಡುವವರ ಸಂಖ್ಯೆ ಕಡಿಮೆ ಇರುವ ಕಾರಣ ನಾವು ಸುರಕ್ಷಿತ ವಲಯದಲ್ಲಿದ್ದೇವೆ ಎಂದು ತಿಳಿಸಿದರು.