Tag: ಬಲೆ

  • ತಾನೇ ಹಾಕಿದ ಬಲೆಗೆ ಸಿಲುಕಿ ಮೀನುಗಾರ ಸಾವು

    ತಾನೇ ಹಾಕಿದ ಬಲೆಗೆ ಸಿಲುಕಿ ಮೀನುಗಾರ ಸಾವು

    ಯಾದಗಿರಿ: ತಾನೇ ಹಾಕಿದ ಬಲೆಗೆ ಸಿಲುಕಿ ಮೀನುಗಾರ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುಂಡ್ಲೂರು ಸಮೀಪದಲ್ಲಿ ನಡೆದಿದೆ.

    ವಡಗೇರಾ ತಾಲೂಕಿನ ಅಗ್ನಿಹಾಳ ಗ್ರಾಮದ ಮನು(20) ಈ ಅವಘಡದಲ್ಲಿ ಮೃತ ಮೀನುಗಾರ. ಇಂದು ಬೆಳಗ್ಗೆ ತನ್ನ ತಂದೆ ಜೊತೆಗೆ ಕೃಷ್ಣಾನದಿಯಲ್ಲಿ ಮೀನು ಹಿಡಿಯಲು ತೆರಳಿದ್ದ ಮನು, ಥರಮಾಕೋಲ್ ದೋಣಿಯ ಮೂಲಕ ಬಲೆ ಹಾಕಲು ಮುಂದಾಗಿದ್ದ, ಈ ವೇಳೆ ಮನು ಕಾಲಿಗೆ ಬಲೆ ಸಿಕ್ಕು ಹಾಕಿಕೊಂಡಿದೆ. ಇದರಿಂದಾಗಿ ನೀರಿನಲ್ಲಿ ಕಾಲು ಅಲುಗಾಡಿಸಲಾಗದೇ ದೋಣಿಯಿಂದ ಕೆಳಗೆ ಬಿದ್ದು ಸಾವನ್ನಪ್ಪಿದ್ದಾನೆ.

    ಸದ್ಯ ಸಹ ಮೀನುಗಾರರು ಮೃತದೇಹ ಹೊರ ತೆಗೆದಿದ್ದು, ನದಿ ತೀರದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ವಡಗೇರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಇದನ್ನೂ ಓದಿ: ಭಾಗಮಂಡಲ ಜಲಾವೃತ – ಘಟಪ್ರಭಾ, ಕೃಷ್ಣ ನದಿ ತೀರದ ಜನರಿಗೆ ಪ್ರವಾಹ ಭೀತಿ

  • ಒಂದೂವರೆ ವರ್ಷದಿಂದ ಬಲೆ ಹಾಕಿ ಕಾಯ್ತಿದ್ದ – ಕೊನೆಗೂ ಪ್ರತೀಕಾರಕ್ಕಾಗಿ ಚಿರತೆ ಕೊಂದ

    ಒಂದೂವರೆ ವರ್ಷದಿಂದ ಬಲೆ ಹಾಕಿ ಕಾಯ್ತಿದ್ದ – ಕೊನೆಗೂ ಪ್ರತೀಕಾರಕ್ಕಾಗಿ ಚಿರತೆ ಕೊಂದ

    – ಹಸು ಕಳೆದುಕೊಂಡವನ ಸೇಡಿನ ಕಥೆ

    ತಿರುವನಂತಪುರಂ: ವ್ಯಕ್ತಿಯೊಬ್ಬ ತನ್ನ ಹಸುವನ್ನು ಕೊಂದಿದ್ದಕ್ಕೆ ಒಂದೂವರೆ ವರ್ಷದಿಂದ ಕಾದು ಕೊನೆಗೂ ಚಿರತೆಯನ್ನು ಕೊಂದಿರುವ ಘಟನೆ ಕೇರಳದ ಮುನ್ನಾರ್‌ನಲ್ಲಿ ನಡೆದಿದೆ.

    ಚಿರತೆಯನ್ನು ಕೊಂದ 34 ವರ್ಷದ ಕುಮಾರ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಅರಣ್ಯ ಇಲಾಖೆ ಬಂಧಿಸಿದೆ. ಚಿರತೆ ಆರೋಪಿಯ ಹಸುವನ್ನು ಒಂದು ವರ್ಷದ ಹಿಂದೆ ಕೊಂದ ನಂತರ ಚಿರತೆಗಾಗಿ ಬಲೆ ಹಾಕಿದ್ದನು ಎಂದು ತಿಳಿದು ಬಂದಿದೆ.

    ಸೆಪ್ಟೆಂಬರ್ 8 ರಂದು ಕನ್ನಿಮಲಾ ಎಸ್ಟೇಟ್ ಕೆಳ ವಿಭಾಗದಲ್ಲಿ ನಾಲ್ಕು ವರ್ಷದ ಚಿರತೆ ಬಲೆಗೆ ಬಿದ್ದು ಶವವಾಗಿ ಪತ್ತೆಯಾಗಿತ್ತು. ನಂತರ ಅರಣ್ಯ ಇಲಾಖೆ ಚಿರತೆಯ ಸಾವಿನ ಬಗ್ಗೆ ತನಿಖೆ ಆರಂಭಿಸಿತ್ತು. ತನಿಖೆ ವೇಳೆ ಕುಮಾರ್ ಚಿರತೆಯನ್ನು ಕೊಂದಿರುವುದು ಪತ್ತೆಯಾಗಿದ್ದು, ಆತನನ್ನು ಬಂಧಿಸಲಾಗಿದೆ. ಈ ವೇಳೆ ಇದು ಪ್ರತೀಕಾರಕ್ಕಾಗಿ ನಡೆದ ಕಥೆ ಎಂದು ಬಹಿರಂಗವಾಗಿದೆ.

    ಕುಮಾರ್ ಹಸು ಹೊಲದಲ್ಲಿ ಮೇಯುತ್ತಿದ್ದಾಗ ಇದೇ ಚಿರತೆ ಹಾಡಹಗಲೇ ಹಸುವಿನ ದಾಳಿ ಮಾಡಿ ಕೊಂದು ಹಾಕಿತ್ತು. ಆ ಹಸು ಕುಮಾರ್ ಜೀವನದ ಆಧಾರವಾಗಿತ್ತು. ಹೀಗಾಗಿ ತನ್ನ ಹಸುವನ್ನು ಕೊಂದು ಚಿರತೆಯ ವಿರುದ್ಧ ಸೇಡು ತೀರಿಸಿಕೊಳ್ಳುತ್ತೇನೆ ಎಂದು ಪ್ರತಿಜ್ಞೆ ಮಾಡಿದ್ದ ಎಂದು ನೆರೆಹೊರೆಯವರು ಹೇಳಿದ್ದಾರೆ.

    ಕುಮಾರ್‌ನ ಸೇಡಿನ ಕಥೆಯನ್ನು ನೆರೆಹೊರೆಯವರು ಅರಣ್ಯ ಸಿಬ್ಬಂದಿಗೆ ತಿಳಿಸಿದ ನಂತರ ಚಿರತೆಯ ಸಾವಿನ ರಹಸ್ಯ ಬಹಿರಂಗವಾಗಿದೆ. ನಾನು ಚಿರತೆಗಾಗಿ ಬಲೆಯನ್ನು ಹಾಕಿದ್ದೆ. ಸುಮಾರು ಕಳೆದ 1.5 ವರ್ಷಗಳಿಂದ ಚಿರತೆಗಾಗಿ ಕಾಯುತ್ತಿದ್ದೆ. ಆಗಾಗ ನಾನು ಹಾಕಿದ್ದ ಬಲೆಯನ್ನು ಪರಿಶೀಲಿಸುತ್ತಿದ್ದೆ. ಕೊನೆಗೆ ಚಿರತೆ ನಾನು ಹಾಕಿದ್ದ ಬಲೆಗೆ ಬಿದ್ದಿದೆ. ಆಗ ಚಿರತೆಯನ್ನು ಚಾಕುವಿನಿಂದ ಇರಿದು ಕೊಂದಿದ್ದೇನೆ ಎಂದು ಆರೋಪಿ ಕುಮಾರ್ ಅರಣ್ಯ ಸಿಬ್ಬಂದಿಗೆ ತಿಳಿಸಿದ್ದಾನೆ.

    ಮುನ್ನಾರ್ ಎಸಿಎಫ್ ಸಜೀಶ್ ಕುಮಾರ್ ಮತ್ತು ಶ್ರೇಣಿ ಅಧಿಕಾರಿ ಎಸ್.ಹರೀಂದ್ರನಾಥ್ ತಂಡ ಆರೋಪಿಯನ್ನು ಬಂಧಿಸಿದೆ. ಸದ್ಯಕ್ಕೆ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

  • 50 ಕೆ.ಜಿ ತೂಕದ ಅಪರೂಪದ ಆಕಳ ಮೂಗಿನ ತೊರ್ಕೆ ಮೀನು ಪತ್ತೆ

    50 ಕೆ.ಜಿ ತೂಕದ ಅಪರೂಪದ ಆಕಳ ಮೂಗಿನ ತೊರ್ಕೆ ಮೀನು ಪತ್ತೆ

    ಉತ್ತರ ಕನ್ನಡ: ಜಿಲ್ಲೆಯ ಕಾರವಾರ ನಗರದ ಬೈತಖೋಲ್ ಸಮೀಪದ ಲೇಡಿ ಬೀಚ್‍ನಲ್ಲಿ ಮೀನುಗಾರಿಕೆ ನಡೆಸುತ್ತಿದ್ದವರ ಬಲೆಗೆ ಬರೋಬ್ಬರಿ ಅರ್ಧ ಕ್ವಿಂಟಾಲ್ ತೂಕದ ಆಕಳ ಮೂಗಿನ ತೊರ್ಕೆ ಮೀನು ಬಿದ್ದಿದೆ.

    ಸಣ್ಣಪುಟ್ಟ ಮೀನು ಹಿಡಿಯಲು ಹಾಕಿದ್ದ ಬಲೆಗೆ ಇಷ್ಟೊಂದು ದೊಡ್ಡ ಪ್ರಮಾಣದ ಮೀನು ಬಿದ್ದಿರುವುದು ಮೀನುಗಾರರ ಅಚ್ಚರಿಗೂ ಕಾರಣವಾಗಿದೆ. ಇದನ್ನು ಉದ್ದ ತಲೆಯ ಹಕ್ಕಿ ತೊರ್ಕೆ ಅಥವಾ ಆಕಳ ಮೂಗಿನ ತೊರ್ಕೆ ಎಂದು ಕರೆಯುವ ಈ ಮೀನು ಶಾರ್ಕ್ ಜಾತಿಗೆ ಸೇರಿದೆ.

    ಹಿಂದೂ ಮಹಾಸಾಗರದಲ್ಲಿ ಹೆಚ್ಚಾಗಿ ಕಂಡುಬರುವ ಈ ಮೀನು ಎರಡು ಮೀಟರ್ ವರೆಗೂ ಬೆಳೆಯುತ್ತದೆ. ಇದರ ಬಾಲ ಉದ್ದವಾಗಿ ಎರಡು ಮುಳ್ಳುಗಳನ್ನು ಹೊಂದಿರುತ್ತದೆ. ಗರಿಷ್ಠ 16 ವರ್ಷಗಳ ಕಾಲ ಬದುಕುವ ಈ ಮೀನು ಅಳವಿನಂಚಿನಲ್ಲಿರುವ ಪ್ರಬೇಧಗಳಲ್ಲಿ ಒಂದಾಗಿದೆ.

  • ಮೀನು ಹಿಡಿಯಲು ಹೋಗಿ ನೀರಲ್ಲಿ ಕೊಚ್ಚಿ ಹೋದ ಇಬ್ಬರು ಯುವಕರು

    ಮೀನು ಹಿಡಿಯಲು ಹೋಗಿ ನೀರಲ್ಲಿ ಕೊಚ್ಚಿ ಹೋದ ಇಬ್ಬರು ಯುವಕರು

    ಉಡುಪಿ: ಜಿಲ್ಲೆಯಲ್ಲಿ ಮಾನ್ಸೂನ್ ಮಳೆ ಧಾರಾಕಾರವಾಗಿ ಸುರಿಯುತ್ತಿದ್ದು, ಮೀನು ಹಿಡಿಯಲು ಹೋಗಿ ಇಬ್ಬರು ಯುವಕರು ನೀರುಪಾಲಾಗಿದ್ದಾರೆ. ಬ್ರಹ್ಮಾವರ ತಾಲೂಕು ಬಾರ್ಕೂರಿನಲ್ಲಿ ಈ ಘಟನೆ ನಡೆದಿದೆ.

    ಬ್ರಹ್ಮಾವರ ತಾಲೂಕಿನ ಬಾರ್ಕೂರು ಹಾಲೆಕೊಡಿ ಹೊಳೆಗೆ ಹರ್ಷ ಮತ್ತು ಕಾರ್ತಿಕ್ ತೆರಳಿ ಕಳೆದ ರಾತ್ರಿ ಮೀನಿಗೆ ಬಲೆ ಹಾಕಿಟ್ಟಿದ್ದರು. ಇಂದು ಬೆಳಗ್ಗಿನ ಜಾವ ಕಟ್ಟಿದ್ದ ಬಲೆಯನ್ನು ಎಳೆಯುವಾಗ ಯುವಕರು ನೀರಿಗೆ ಬಿದ್ದಿದ್ದಾರೆ. ಈಜಲಾಗದೆ ಮುಳುಗಿ ಸತ್ತಿದ್ದಾರೆ ಎನ್ನಲಾಗಿದೆ.

    ನದಿ ಬದಿಗೆ ಹೋದವರು ವಾಪಸ್ ಆಗದ ಕಾರಣ ಮನೆಯವರು ಹುಡುಕಾಟ ನಡೆಸಿದ್ದಾರೆ. ಸ್ಥಳೀಯರು ಮತ್ತು ಅಗ್ನಿಶಾಮಕ ದಳದ ಅಧಿಕಾರಿಗಳು ಕಾರ್ಯಾಚರಣೆ ಮಾಡಿ ಮೃತದೇಹಗಳನ್ನು ಮೇಲಕ್ಕೆತ್ತಿದ್ದಾರೆ. ಮೃತ ವ್ಯಕ್ತಿಗಳಲ್ಲಿ ಓರ್ವರಾದ ಹರ್ಷ, ಖಾಸಗಿ ಫೆನಾನ್ಸ್ ಕಂಪನಿಯಲ್ಲಿ ರಿಕವರಿ ಕೆಲಸ ಮಾಡಿಕೊಂಡಿದ್ದರು. ಕಾರ್ತಿಕ್ ಕೊನೆಯ ವರ್ಷದ ಬಿಕಾಂ ವಿದ್ಯಾರ್ಥಿಯಾಗಿದ್ದ ಎಂದು ಸಂಬಂಧಿಕರು ಮಾಹಿತಿ ನೀಡಿದರು.

    ಕಳೆದ ರಾತ್ರಿ ಬಿಡಿಸಿಟ್ಟ ಬಲೆಯಲ್ಲಿ ಕಸ ಕಡ್ಡಿ ತುಂಬಿ ಹೆಚ್ಚು ಭಾರವಾಗಿರಬಹುದು. ಬಲೆ ಎಳೆಯುವ ಸಂದರ್ಭ ಆಯತಪ್ಪಿ ಹೊಳೆಗೆ ಬಿದ್ದಿರಬಹುದು ಎಂದು ಶಂಕಿಸಲಾಗಿದೆ. ಇಬ್ಬರು ಯುವಕರ ಮೃತದೇಹಗಳನ್ನು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

  • ಬಲೆಗೆ ಸಿಕ್ಕ ಮರಿ ತಿಮಿಂಗಿಲನ್ನು ಉಳಿಸಲು ಸಮುದ್ರಕ್ಕೆ ಹಾರಿದ- ವಿಡಿಯೋ ನೋಡಿ

    ಬಲೆಗೆ ಸಿಕ್ಕ ಮರಿ ತಿಮಿಂಗಿಲನ್ನು ಉಳಿಸಲು ಸಮುದ್ರಕ್ಕೆ ಹಾರಿದ- ವಿಡಿಯೋ ನೋಡಿ

    – ಸಾರ್ವಜನಿಕರಿಂದ ಮೆಚ್ಚುಗೆ, ಅಧಿಕಾರಿಗಳಿಂದ 3 ಲಕ್ಷ ದಂಡ

    ಕ್ವೀನ್ಸ್‌ಲ್ಯಾಂಡ್: ಬಲೆಗೆ ಸಿಕ್ಕ ಮರಿ ತಿಮಿಂಗಿಲವನ್ನು ಬದುಕಿಸಲು ವ್ಯಕ್ತಿಯೋರ್ವ ಆಳದ ಸಮುದ್ರಕ್ಕೆ ಧುಮುಕಿ ದಿಟ್ಟತನ ಮೆರೆದಿರುವ ಘಟನೆ ಆಸ್ಟ್ರೇಲಿಯಾದ ಕ್ವೀನ್ಸ್‌ಲ್ಯಾಂಡ್ ಸಮುದ್ರದಲ್ಲಿ ನಡೆದಿದೆ.

    ಈ ಸಹಾಯ ಮಾಡಿದ ವ್ಯಕ್ತಿಯನ್ನು ಜಾಂಗೊ ಎಂದು ಗುರುತಿಸಲಾಗಿದೆ. ಒಬ್ಬನೇ ಬೋಟಿನಲ್ಲಿ ಹೋಗಿ ತನ್ನ ಜೀವವನ್ನು ಲೆಕ್ಕಿಸದೆ ತಿಮಿಂಗಿಲಕ್ಕಾಗಿ ಸಮುದ್ರಕ್ಕೆ ಹಾರಿದ ಜಾಂಗೊ ಕಾರ್ಯಕ್ಕೆ ಸಾರ್ವಜನಿಕವಾಗಿ ಮೆಚ್ಚುಗೆ ವ್ಯಕ್ತವಾಗಿದೆ. ಜೊತೆ ಕ್ವೀನ್ಸ್‌ಲ್ಯಾಂಡ್ ಮೀನುಗಾರಿಕೆ ಇಲಾಖೆಯ ಅಧಿಕಾರಿಗಳು ಜಾಂಗೊಗೆ ನಿಯಮ ಉಲ್ಲಂಘನೆ ಮಾಡಿದ್ದಾರೆ ಎಂದು ದಂಡವನ್ನು ವಿಧಿಸಿದ್ದಾರೆ.

    ಜಾಂಗೊ ಮಾಡಿದ ಈ ಸಹಾಸವನ್ನು ಡ್ರೋನ್ ಕ್ಯಾಮೆರಾದಲ್ಲಿ ಸೆರೆಹಿಡಿಯಲಾಗಿದೆ. ಇದರಲ್ಲಿ ಹಂಪ್‍ಬ್ಯಾಕ್ ಜಾತಿಗೆ ಸೇರಿದ ಮರಿ ತಿಮಿಂಗಲವೊಂದು ಸಮುದ್ಯದಲ್ಲಿ ಬಿಟ್ಟಿದ್ದ ಬಲೆಯೊಂದಕ್ಕೆ ಸಿಲುಕಿ ಹೊರಗೆ ಬರಲಾರದೆ ಒದ್ದಾಡುತ್ತಿತ್ತು. ಇದನ್ನು ಕಂಡ ಜಾಂಗೊ ಒಂದು ಚಿಕ್ಕ ಬೋಟಿನಲ್ಲಿ ಹೋಗಿ ಏಕಾಏಕಿ ಸಮುದ್ರಕ್ಕೆ ಧುಮುಕಿ ಸುಮಾರು 5 ನಿಮಿಷಗಳ ಕಾಲ ಈಜಿ ತಿಮಿಂಗಿಲವನ್ನು ಬಲೆಯಿಂದ ಬಿಡಿಸಿ ವಾಪಸ್ ಬಂದಿದ್ದಾರೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ.

    ಈ ವಿಚಾರದ ಬಗ್ಗೆ ಮಾತನಾಡಿರುವ ಜಾಂಗೊ, ನಮ್ಮ ಪರಿಸರದಲ್ಲಿ ಇರುವ ಪ್ರತಿಯೊಂದು ಜೀವರಾಶಿಗಳನ್ನು ರಕ್ಷಿಸುವುದು ನಮ್ಮ ಕರ್ತವ್ಯ. ನನ್ನ ಜಾಗದಲ್ಲಿ ಯಾರೇ ಇದ್ದರೂ ತಿಮಿಂಗಿಲವನ್ನು ಆ ಪರಿಸ್ಥಿತಿಯಲ್ಲಿ ನೋಡಿದರೆ ನಾನು ಮಾಡಿದ ಕೆಲಸವನ್ನೇ ಮಾಡುತ್ತಿದ್ದರು. ಜೊತೆಗೆ ಕ್ವೀನ್ಸ್‌ಲ್ಯಾಂಡ್ ಮೀನುಗಾರಿಕೆ ಇಲಾಖೆಯ ಅಧಿಕಾರಿಗಳು ಕೂಡ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಕೆಲವೊಮ್ಮೆ ಒಳ್ಳೆ ಕೆಲಸ ಮಾಡಿದರೂ ನಾವು ದಂಡ ಕಟ್ಟಬೇಕಾಗುತ್ತದೆ ಎಂದು ಹೇಳಿದ್ದಾರೆ.

    ಕ್ವೀನ್ಸ್‌ಲ್ಯಾಂಡ್ ಮೀನುಗಾರಿಕೆ ಇಲಾಖೆಯ ಸಚಿವ ಮಾತನಾಡಿ, ಈ ರೀತಿಯ ಘಟನೆ ನಡೆದಾಗ ಅದನ್ನು ಮೀನುಗಾರಿಕೆ ಇಲಾಖೆಗೆ ತಿಳಿಸಬೇಕು. ಅದರಲ್ಲಿ ಪರಿಣಿತಿ ಪಡೆದವರು ಹೋಗಿ ರಕ್ಷಿಸುತ್ತಾರೆ. ಅದನ್ನು ಬಿಟ್ಟು ಈ ರೀತಿ ಜನರು ಸಹಾಸಕ್ಕೆ ಕೈ ಹಾಕಬಾರದು. ಇದರಿಂದ ಅವರ ಜೀವಕ್ಕೆ ಅಪಾಯವಿರುತ್ತದೆ. ಆದ್ದರಿಂದ ನಿಯಮವನ್ನು ಉಲ್ಲಂಘನೆ ಮಾಡಿದ ಜಾಂಗೊಗೆ 3 ಲಕ್ಷ ದಂಡವನ್ನು ವಿಧಿಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.

    ಆದರೆ ಜಾಂಗೊ ಮಾಡಿದ ಕೆಲಸಕ್ಕೆ ಸಾರ್ವಜನಿಕವಾಗಿ ಮೆಚ್ಚುಗೆ ವ್ಯಕ್ತವಾಗಿದ್ದು, ಜನರು ಅವರ ಬೆನ್ನಿಗೆ ನಿಂತಿದ್ದಾರೆ. ಜೊತೆಗೆ ಜಾಂಗೊಗೆ ವಿಧಿಸಿರುವ ದಂಡವನ್ನು ಜನರು ಭರಿಸುವುದಾಗಿ ಹೇಳಿದ್ದಾರೆ. ಈಗಾಗಲೇ ಗೋ ಫಂಡ್‍ಮಿ ಎಂಬ ಸಂಸ್ಥೆ ಜಾಂಗೊಗೆ 3 ಲಕ್ಷ ರೂ. ಅನ್ನು ಬಹುಮಾನವಾಗಿ ನೀಡಿದೆ.

  • ಬಲೆಗೆ ಬಿದ್ದ ದೈತ್ಯ ರೇವ್ ಫಿಶ್ – ಮೀನುಗಾರರು ಫುಲ್ ಖುಷ್

    ಬಲೆಗೆ ಬಿದ್ದ ದೈತ್ಯ ರೇವ್ ಫಿಶ್ – ಮೀನುಗಾರರು ಫುಲ್ ಖುಷ್

    ಉಡುಪಿ: ಜಿಲ್ಲೆಯ ಕುಂದಾಪುರ ತಾಲೂಕಿನ ಗಂಗೊಳ್ಳಿ ಮೀನುಗಾರರು ಬಂಪರ್ ಹೊಡೆದಿದ್ದಾರೆ. ಇಲ್ಲಿನ ಮಡಿಕಲ್ ಬೀಚ್ ನಲ್ಲಿ ಭಾರೀ ಗಾತ್ರದ ಮೀನುಗಳು ಬಲೆಗೆ ಬಿದ್ದಿದೆ.

    ಕಳೆದ ಒಂದು ವಾರದಿಂದ ಅರಬ್ಬೀ ಸಮುದ್ರ ಪ್ರಕ್ಷುಬ್ಧಗೊಂಡಿತ್ತು. ಕಡಲು ಬುಡಮೇಲು ಆದಾಗ ಸಾಕಷ್ಟು ಮೀನುಗಳು ತೆರೆಯ ಜೊತೆ ದಡಕ್ಕೆ ಬರುತ್ತದೆ. ಈ ಸಂದರ್ಭದಲ್ಲಿ ಬಲೆ ಬೀಸಿರುವ ಮೀನುಗಾರರಿಗೆ ದೊಡ್ಡ ದೊಡ್ಡ ರೇವ್ ಫಿಶ್ ಗಳು ಸಿಕ್ಕಿದೆ. ಒಂದೊಂದು ಮೀನುಗಳು 30-40 ಕಿಲೋ ಭಾರವಿದೆ.

    ಕಬ್ಬಿಣದ ಸಲಾಕೆಗಳನ್ನು ಉಪಯೋಗಿಸಿ ಮೀನನ್ನು ದಡಕ್ಕೆ ತರಲಾಗಿದೆ. ರೇವ್ ಫಿಶ್ ಗೆ ಸ್ಥಳೀಯವಾಗಿ ತೊರಕೆ ಅನ್ನುವ ಹೆಸರಿದೆ. ಚಪ್ಪಟೆಯಾಗಿರುವ ಈ ಮೀನುಗಳಿಗೆ ಬಾಲವಿರುತ್ತದೆ. ಇವುಗಳು ಮೊಟ್ಟೆಯಿಡಲು ದಡದ ಕಡೆ ಬರುತ್ತದೆ. ಚೂಪಾದ ಮುಳ್ಳುಗಳನ್ನು ಹೊಂದಿರುವ ಈ ಮೀನು ಮನುಷ್ಯ ಅದರ ಮೇಲೆ ಕಾಲಿಟ್ಟರೆ ಕಾಲನ್ನು ತಿವಿಯುತ್ತದೆ. ಹೀಗಾಗಿ ಇದನ್ನು ಡೇಂಜರ್ ಫಿಶ್ ಅಂತ ಮೀನುಗಾರರು ಕರೆಯುತ್ತಾರೆ.

    ಮೊದಲ ಬಾರಿಗೆ ನೋಡುವವರಿಗೆ ಪ್ರಾಣಿಯಂತೆ ಕಾಣುವ ಈ ಮೀನು ಅಚ್ಚರಿ ತರುತ್ತದೆ. ಮಳೆಗಾಲ ಆರಂಭದಲ್ಲಿ ಈ ಮೀನುಗಳು ದಡದತ್ತ ಬರುತ್ತದೆ ಎಂದು ಮೀನುಗಾರರು ಹೇಳುತ್ತಾರೆ. ಮೀನಿನಲ್ಲಿರುವ ಮುಳ್ಳು ವಿಷಕಾರಿ. ಅದರಲ್ಲಿ ನಂಜಿನ ಅಂಶ ಬಹಳ ಇರುತ್ತದೆ. ಆ ಮುಳ್ಳು ಚುಚ್ಚಿದರೆ ಬಹಳ ರಕ್ತಸ್ರಾವ ಆಗುತ್ತದೆ. 24 ಗಂಟೆಗಳ ಕಾಲ ಅದರ ಉರಿ ಇರುತ್ತದೆ ಎಂದು ಹೇಳುತ್ತಾರೆ.

  • ಬಲೆ ಹಾಕಿದ್ದು ಮೀನಿಗಾಗಿ, ಸೆರೆ ಸಿಕ್ಕಿದ್ದು 10 ಕೆಜಿ ತೂಕದ ಹೆಬ್ಬಾವು

    ಬಲೆ ಹಾಕಿದ್ದು ಮೀನಿಗಾಗಿ, ಸೆರೆ ಸಿಕ್ಕಿದ್ದು 10 ಕೆಜಿ ತೂಕದ ಹೆಬ್ಬಾವು

    ಶಿವಮೊಗ್ಗ: ಮೀನಿಗಾಗಿ ಬಲೆ ಹಾಕಿದ್ದು, ಆದರೆ ಮೀನಿನ ಬದಲಾಗಿ ಬಲೆಗೆ ಹೆಬ್ಬಾವು ಬಿದ್ದಿರುವ ಘಟನೆ ಜಿಲ್ಲೆಯ ಆಲ್ಕೊಳ ಬಡಾವಣೆಯ ಕೆರೆಯಲ್ಲಿ ನಡೆದಿದೆ.

    ಬಡಾವಣೆಯ ಕೆರೆಯಲ್ಲಿ ಮೀನಿಗಾಗಿ ಬಲೆ ಹಾಕಲಾಗಿತ್ತು. ಆದರೆ ಸುಮಾರು ಆರು ಅಡಿ ಉದ್ದದ ಹೆಬ್ಬಾವೊಂದು ಮೀನಿಗಾಗಿ ಹಾಕಲಾಗಿದ್ದ ಬಲೆಯಲ್ಲಿ ಸಿಕ್ಕಿ ಹಾಕಿಕೊಂಡಿದೆ. ಬಲೆಯಲ್ಲಿ ಮೀನುಗಳ ಜೊತೆಯಲ್ಲಿ ಹೆಬ್ಬಾವು ಕಾಣಿಸಿಕೊಂಡಿದ್ದು ಆತಂಕಕ್ಕೆ ಕಾರಣವಾಗಿದೆ.

    ಸುಮಾರು 6 ಅಡಿ ಉದ್ದದ ಸುಮಾರು 10 ಕೆಜಿ ತೂಗುವ ಈ ಹೆಬ್ಬಾವು ಸ್ಥಳೀಯರಲ್ಲಿ ಭಯ ಮೂಡಿಸಿತ್ತು. ನಂತರ ಸ್ಥಳೀಯರು ಶಿವಮೊಗ್ಗದ ಉರಗ ಪ್ರೇಮಿ ಸ್ನೇಕ್ ಕಿರಣ್ ಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿದ ಕಿರಣ್ ಸ್ಥಳಕ್ಕೆ ಬಂದು ಹೆಬ್ಬಾವನ್ನು ರಕ್ಷಿಸಿದ್ದಾರೆ. ಅಲ್ಲದೇ ಸಿಕ್ಕಿರುವ ಹೆಬ್ಬಾವನ್ನು ಅರಣ್ಯ ಇಲಾಖೆಯ ಸುಪರ್ದಿಗೆ ಒಪ್ಪಿಸಿದ್ದು, ಸುರಕ್ಷಿತವಾಗಿ ಕಾಡಿಗೆ ಬಿಡಲಾಗಿದೆ.

  • ಹಣ್ಣಿನ ತೋಟದ ರಕ್ಷಣೆಗೆ ಹಾಕಿದ್ದ ಬಲೆಗೆ ಸಿಲುಕಿ ನೂರಾರು ಪಕ್ಷಿಗಳ ಸಾವು- ಶ್ರೀರಂಗಪಟ್ಟಣದಲ್ಲಿ ಮನಕಲಕುವ ಘಟನೆ

    ಹಣ್ಣಿನ ತೋಟದ ರಕ್ಷಣೆಗೆ ಹಾಕಿದ್ದ ಬಲೆಗೆ ಸಿಲುಕಿ ನೂರಾರು ಪಕ್ಷಿಗಳ ಸಾವು- ಶ್ರೀರಂಗಪಟ್ಟಣದಲ್ಲಿ ಮನಕಲಕುವ ಘಟನೆ

    ಮಂಡ್ಯ: ಹಣ್ಣಿನ ತೋಟಗಳ ರಕ್ಷಣೆಗೆ ಹಾಕಿದ್ದ ಬಲೆಗೆ ಸಿಲುಕಿ ನೂರಾರು ಪಕ್ಷಿಗಳು ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ, ಶ್ರೀರಂಗಪಟ್ಟಣ ತಾಲೂಕಿನ, ಗಂಜಾಂ ಬಳಿ ನಡೆದಿದೆ.

    ಟಿಪ್ಪು ಸುಲ್ತಾನ್ ಸಮಾಧಿ ಸ್ಥಳ ಗುಂಬಸ್‍ಗೆ ಕೂಗಳತೆ ದೂರದಲ್ಲಿರುವ ತೋಟದಲ್ಲಿ ಅಂದಾನಯ್ಯ ಎಂಬವರು ಸೀಬೆ ಮತ್ತು ಪನ್ನೇರಳೆ ಬೆಳೆ ಬೆಳೆದಿದ್ದಾರೆ. ಬೆಳೆಗೆ ಪ್ರಾಣಿ ಪಕ್ಷಿಗಳಿಂದ ತೊಂದರೆ ಆಗದಂತೆ ಹಣ್ಣಿನ ತೋಟದ ಸುತ್ತ ಬಲೆ ಕಟ್ಟಿದ್ದಾರೆ. ಇದೀಗ ತೋಟದ ಸುತ್ತ ಹರಡಿರುವ ಬಲೆಗೆ ಪಕ್ಷಿಗಳು ಸಿಲುಕಿ ಪ್ರಾಣ ಕಳೆದುಕೊಳ್ಳುತ್ತಿವೆ.

    ಕೋಗಿಲೆ, ಬಿಳಿಚುಕ್ಕೆ ಗೂಬೆ, ಕಿಂಗ್ ಫಿಷರ್, ಹಸಿರು ಗಿಳಿ, ಮರಕುಟಿಕ, ಸನ್ ಬರ್ಡ್, ಬುಲ್ ಬುಲ್ ಇನ್ನಿತರ ಜಾತಿಯ ಪಕ್ಷಿಗಳ ದೇಹಗಳು ಬಲೆಗೆ ಸಿಲುಕಿ ನೇತಾಡುತ್ತಿರುವ ದೃಶ್ಯ ಮನಕಲಕುವಂತಿದೆ. ಸುಮಾರು 2 ಎಕರೆ ವಿಸ್ತೀರ್ಣದ ತೋಟದಲ್ಲಿ ಆರೇಳು ತಿಂಗಳುಗಳಿಂದಲೂ ಪಕ್ಷಿಗಳು ಬಲೆಗೆ ಸಿಲುಕಿರುವ ಕುರುಹುಗಳಿವೆ. ಪಕ್ಷಿಗಳ ಮೂಳೆ, ರೆಕ್ಕೆ, ಪುಕ್ಕಗಳ ಅವಶೇಷಗಳು ಅಲ್ಲಲ್ಲಿ ಬಿದ್ದಿವೆ.

    ಆಹಾರ ಅರಸಿಕೊಂಡು ಬಂದ ಪಕ್ಷಿಗಳು ಗಟ್ಟಿಯಾದ ಬಲೆಗೆ ಸಿಲುಕಿ, ಅದರಿಂದ ಬಿಡಿಸಿಕೊಳ್ಳಲಾಗದೆ ಪ್ರಾಣ ಕಳೆದುಕೊಂಡಿವೆ. ಪನ್ನೇರಳೆ ಮರಕ್ಕೆ ಕೋತಿಗಳ ಹಾವಳಿ ನಿಯಂತ್ರಿಸಲು ಬಲೆ ಹಾಕಲಾಗಿತ್ತು. ಬಲೆಗೆ ಪಕ್ಷಿಗಳು ಸಿಲುಕಿ ಮೃತ ಪಟ್ಟಿವೆ. ಇದು ಉದ್ದೇಶಪೂರ್ವಕವಲ್ಲ ಅಂತಿದ್ದಾರೆ ತೋಟದ ಮಾಲೀಕ ಅಂದಾನಯ್ಯ.