ಬಳ್ಳಾರಿ: ವಿಜಯನಗರ (Vijayanagar) ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ನಿರಂತರವಾಗಿ ಮಳೆಯಾಗುತ್ತಿದೆ. ಇದರಿಂದ ಹಂಪಿಯ (Hampi) ವಿರೂಪಾಕ್ಷ ದೇವಾಲಯದ (Virupaksha Temple) ಆವರಣದಲ್ಲಿ ಮಳೆ ನೀರು ನಿಂತಿದ್ದು, ಜನರು ಹೈರಾಣಾಗುತ್ತಿದ್ದಾರೆ.
ಐತಿಹಾಸಿಕ ಹಂಪಿಯ ಶ್ರೀ ವಿರೂಪಾಕ್ಷ ದೇಗುಲದ ಆವರಣದಲ್ಲಿ ಮಳೆಯಿಂದಾಗಿ ಮೊಣಕಾಲುದ್ಧ ನೀರು ನಿಂತಿದೆ. ಪರಿಣಾಮ ದೇವಸ್ಥಾನಕ್ಕೆ ಬರುವ ಭಕ್ತರು ಹಾಗೂ ಪ್ರವಾಸಿಗರಿಗೆ ಸಮಸ್ಯೆ ಎದುರಾಗಿದೆ. ಬೇರೆ ದಾರಿಯಿಲ್ಲದೇ ಪ್ರವಾಸಿಗರು ನಿಂತ ನೀರಿನಲ್ಲಿಯೇ ನಡೆದುಕೊಂಡು ಹೋಗಿ, ವಿರೂಪಾಕ್ಷೇಶ್ವರನ ದರ್ಶನ ಪಡೆದಿದ್ದಾರೆ.ಇದನ್ನೂ ಓದಿ: ಮುನಿಯಪ್ಪ ಸಿಎಂ ಆದ್ರೆ ನಾನೂ ಸಂತೋಷ ಪಡ್ತೇನೆ: ಪರಮೇಶ್ವರ್
ಮಳೆ ಬಂದಾಗ ನೀರು ಹೊರಹೋಗುವ ವ್ಯವಸ್ಥೆ ಮಾಡಬೇಕಿದ್ದ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದರಿಂದ ಪ್ರವಾಸಿಗರು ಹಿಡಿಶಾಪ ಹಾಕುತ್ತಿದ್ದಾರೆ.
– 2019ರಲ್ಲೇ ಸಿನೆಮಾ ಮಾದರಿಯಲ್ಲಿ ಚಿನ್ನ ಕಳ್ಳತನದ ಪ್ಲಾನ್ ಮಾಡಿದ್ದ ಕಿರಾತಕ
ಬಳ್ಳಾರಿ: ಕೇರಳದ (Kerala) ಶಬರಿಮಲೆಯಲ್ಲಿ ಚಿನ್ನ ಕಳ್ಳತನ ಪ್ರಕರಣಕ್ಕೆ (Sabarimala Gold Theft Case) ಸಂಬಂಧಿಸಿದಂತೆ ದಿನಕ್ಕೊಂದು ಸತ್ಯ ಹೊರಬರುತ್ತಿದೆ. ನಾಲ್ಕೂವರೆ ಕೆಜಿ ಚಿನ್ನ ಕಳ್ಳತನದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಸಿನಿಮಾ ಮಾದರಿಯಲ್ಲಿ ಪಕ್ಕಾ ಪ್ಲಾನ್ ಮಾಡಿದ್ದ ಅನ್ನೋದು ಎಸ್ಐಟಿ (SIT) ತನಿಖೆ ವೇಳೆ ಬಯಲಾಗಿದೆ.
ಉನ್ನಿಕೃಷ್ಣನ್ ಖತರ್ನಾಕ್ ಪ್ಲಾನ್ಗೆ ಸ್ವತಃ ಕೇರಳ ಎಸ್ಐಟಿ ತಂಡವೇ ಶಾಕ್ ಆಗಿದೆ. 2019ರಲ್ಲೇ ಖತರ್ನಾಕ್ ಪ್ಲಾನ್ ಮಾಡಿದ್ದ ಉನ್ನಿಕೃಷ್ಣನ್, ಬಳ್ಳಾರಿ, ಬೆಂಗಳೂರು ಹಾಗೂ ತಮಿಳುನಾಡು ಸೇರಿ ಒಟ್ಟು 3 ಕಡೆ ಶಬರಿಮಲೆ ದೇವಸ್ಥಾನಕ್ಕೆ ಚಿನ್ನ ಲೇಪಿತ ಬಾಗಿಲು ಮಾಡಿಸಿದ್ದ. 2 ಕಡೆ ಮಾತ್ರ ನಿಜವಾದ ಚಿನ್ನದ ಬಾಗಿಲು ಮಾಡಿಸಿದ್ರೆ, ಇನ್ನೊಂದು ಕಡೆ ತಾಮ್ರ ಹೆಚ್ಚಿರುವ ಬಾಗಿಲು ರೆಡಿ ಮಾಡಿಸಿದ್ದ. ಕೊನೆಗೆ ಅಪ್ಪಟ ಚಿನ್ನದ ಬಾಗಿಲುಗಳನ್ನ ತಾನೇ ಇಟ್ಟುಕೊಂಡಿದ್ದ. ಬಳಿಕ ತಾಮ್ರದ ಬಾಗಿಲನ್ನು ದೇಗುಲಕ್ಕೆ ಕೊಟ್ಟು ತನಗೇನೂ ಗೊತ್ತಿಲ್ಲ ಎಂಬಂತೆ ಅಮಾಯಕನ ರೀತಿ ಇದ್ದ. ಈ ಸತ್ಯ ಇದೀಗ ಎಸ್ಐಟಿ ತನಿಖೆಯಲ್ಲಿ ಬಟಾಬಯಲಾಗಿದೆ. ಇದನ್ನೂ ಓದಿ: ಆರೋಪಿ ಉನ್ನಿಕೃಷ್ಣನ್ ಚಿನ್ನ ಕೊಟ್ಟಿದ್ದು ನಿಜ – ಸತ್ಯ ಒಪ್ಪಿಕೊಂಡ ಜ್ಯುವೆಲ್ಲರಿ ಶಾಪ್ ಮಾಲೀಕ ಗೋವರ್ಧನ್
ಬಳ್ಳಾರಿಯ ಚಿನ್ನದ ಉದ್ಯಮಿ, ರೊದ್ದಂ ಗೋಲ್ಡ್ ಜ್ಯುವೆಲ್ಲರಿ ಮಾಲೀಕ ಗೋವರ್ಧನ್ ಅವರು 2019ರಲ್ಲಿ ಅಯ್ಯಪ್ಪ ಸ್ವಾಮಿ ದೇಗುಲಕ್ಕೆ ಚಿನ್ನದ ಬಾಗಿಲು ರೆಡಿ ಮಾಡಿಕೊಟ್ಟಿದ್ದರು. ಅದು ಬಳ್ಳಾರಿಯಲ್ಲಿಯೇ ಚಿನ್ನದ ಬಾಗಿಲು ರೆಡಿಯಾಗಿತ್ತು. ಉನ್ನಿಕೃಷ್ಣನ್ ಕೇಳಿದ್ದ ಹಿನ್ನೆಲೆಯಲ್ಲಿ ಈ ಚಿನ್ನದ ಉದ್ಯಮಿ ಗೋವರ್ಧನ್ ಚಿನ್ನದ ಬಾಗಿಲು ದಾನ ಮಾಡಿದ್ದರು. ಆದರೆ ಅಸಲಿ ಚಿನ್ನದ ಬಾಗಿಲು ಬದಲಾಗಿದ್ದೇಗೆ ಅನ್ನೋದೆ ಸಸ್ಪೆನ್ಸ್ ಆಗಿ ಉಳಿದಿತ್ತು. ಇನ್ನೂ ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಬಳ್ಳಾರಿಯ ಚಿನ್ನದ ಉದ್ಯಮಿ ಗೋವರ್ಧನ್, ನಾನು 2019ರಲ್ಲಿ ಚಿನ್ನದ ಬಾಗಿಲು ರೆಡಿ ಮಾಡಿ ಕೊಟ್ಟಿದ್ದು ನಿಜ. ಆದ್ರೆ ಅದು ಆಮೇಲೆ ಹೇಗೆ ಬದಲಾಯ್ತು ಅನ್ನೋದು ಗೊತ್ತಿಲ್ಲ. ನಾನು ಅಯ್ಯಪ್ಪಸ್ವಾಮಿ ಭಕ್ತ ಆಗಿದ್ರಿಂದ 2019ರಿಂದಲೇ ನನಗೆ ಉನ್ನಿಕೃಷ್ಣನ್ ಪರಿಚಯ ಆಗಿತ್ತು. ದೇವರ ಚಿನ್ನ ಕದ್ದವರು ಯಾರೇ ಆಗಿದ್ರೂ ಶಿಕ್ಷೆ ಆಗುತ್ತೆ. ನನ್ನ ಮೇಲೂ 475 ಗ್ರಾಂ ಚಿನ್ನ ಖರೀದಿಯ ಆರೋಪವಿದ್ದು, ಎಲ್ಲವನ್ನೂ ಎಸ್ಐಟಿಗೆ ಹಿಂದಿರುಗಿಸಿ ತನಿಖೆಗೆ ಸಹಕಾರ ಕೊಟ್ಟಿದ್ದೇನೆ. ಆದರೆ ಉನ್ನಿಕೃಷ್ಣನ್ ಇತ್ತೀಚೆಗೆ ಕೊಟ್ಟಿದ್ದು ದೇವರ ಚಿನ್ನ ಅನ್ನೋದು ಗೊತ್ತಿರಲಿಲ್ಲ ಎಂದು ಹೇಳುವ ಮೂಲಕ ಉನ್ನಿಕೃಷ್ಣನ್ ಚಿನ್ನ ಕೊಟ್ಟಿದ್ದ ಅಸಲಿ ಸತ್ಯವನ್ನ ಒಪ್ಪಿಕೊಂಡಿದ್ದಾರೆ. ಇದನ್ನೂ ಓದಿ: ಶಬರಿಮಲೆಯಲ್ಲಿ ಚಿನ್ನ ನಾಪತ್ತೆ ಪ್ರಕರಣಕ್ಕೆ ಬೆಂಗಳೂರು ಲಿಂಕ್ – ಬಳ್ಳಾರಿಯಲ್ಲಿ ಚಿನ್ನ ಮಾರಾಟ ಮಾಡಿರೋ ಶಂಕೆ
ಇನ್ನೂ ಶಬರಿಮಲೆ ಅಯ್ಯಪ್ಪ ಸ್ವಾಮಿ ಚಿನ್ನ ಕದ್ದ ಆರೋಪಿ ಉನ್ನಿಕೃಷ್ಣನ್ ಈಗಾಗಲೇ ಕಂಬಿ ಹಿಂದೆ ತಳ್ಳಲ್ಪಟ್ಟಿದ್ದಾನೆ. ಆದ್ರೆ ಈ ಪ್ರಕರಣದಲ್ಲಿ ಉನ್ನಿಕೃಷ್ಣನ್ ನಂಬಿ ಚಿನ್ನ ಖರೀದಿ ಮಾಡಿದವರ ಪಾಡು ಕಾಗೆಯಂತಾಗಿದೆ. ಇನ್ನೆರಡು ದಿನಗಳಲ್ಲಿ ಕೇರಳ ಎಸ್ಐಟಿ ತಂಡ ಕೋರ್ಟ್ಗೆ ತನಿಖಾ ವರದಿ ಸಲ್ಲಿಸಲಿದ್ದು, ಇನ್ನಷ್ಟು ಕರಾಳ ಸತ್ಯ ಬಯಲಾಗಲಿದೆ.
ಬಳ್ಳಾರಿ: ಆರೋಪಿ ಉನ್ನಿಕೃಷ್ಣನ್ ನನಗೆ ಚಿನ್ನ ಕೊಟ್ಟಿದ್ದು ನಿಜ ಎಂದು ಬಳ್ಳಾರಿಯ (Ballari) ರೊದ್ದಂ ಜ್ಯುವೆಲ್ಲರಿ ಶಾಪ್ ಮಾಲೀಕ ಗೋವರ್ಧನ್ ಸತ್ಯ ಒಪ್ಪಿಕೊಂಡಿದ್ದಾರೆ.
ಶಬರಿಮಲೆಯ ಚಿನ್ನ (Sabarimala Gold Theft Case) ಬಳ್ಳಾರಿಯಲ್ಲಿ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ‘ಪಬ್ಲಿಕ್ ಟಿವಿ’ ಜೊತೆ ಮಾತನಾಡಿದ ಗೋವರ್ಧನ್, ಅಯ್ಯಪ್ಪ ಸ್ವಾಮಿ ದೇಗುಲದ ಬಾಗಿಲು ಶಿಥಿಲವಾಗಿದೆ, ದೇವಸ್ಥಾನದ ಒಳಗೆ ಸರ್ಪಗಳು ಹೋಗುತ್ತಿವೆ ಅಂತಾ ಉನ್ನಿಕೃಷ್ಣನ್ ಹೇಳಿದ್ದರು. ಬಾಗಿಲನ್ನ ದೇಣಿಗೆ ರೀತಿ ನೀಡಿ ಎಂದು ಉನ್ನಿಕೃಷ್ಣನ್ ನನ್ನ ಬಳಿ ಕೇಳಿದ್ದರು. ಅಯ್ಯಪ್ಪ ಸ್ವಾಮಿ ಭಕ್ತ ಆಗಿದ್ದರಿಂದ ನಾನು ಒಪ್ಪಿಕೊಂಡೆ. ಕೇರಳದಲ್ಲಿ ಕಟ್ಟಿಗೆ ಖರೀದಿ ಮಾಡಿ, ಬೆಂಗಳೂರಿನ ಶ್ರೀರಾಂಪುರ ಐಯಪ್ಪ ಸ್ವಾಮಿ ದೇಗುಲದಲ್ಲಿ ಬಾಗಿಲು ನಿರ್ಮಾಣ ಮಾಡಿದ್ದೆವು. ಅಲ್ಲಿಂದ ಬಳ್ಳಾರಿಗೆ ಕಟ್ಟಿಗೆ ಬಾಗಿಲು ತಂದು ಅದಕ್ಕೆ ಚಿನ್ನದ ಲೇಪನ ಮಾಡಿ ಕೊಟ್ಟಿದ್ದೇವೆ. 2019ರಲ್ಲಿ ಬಾಗಿಲನ್ನ ನಿರ್ಮಾಣ ಮಾಡಿಕೊಟ್ಟಿದ್ದು ನಿಜ. ದ್ವಾರಪಾಲಕದ ಬಗ್ಗೆ 4 ಕೆಜಿ ಚಿನ್ನ ಕಡಿಮೆ ತೂಕ ಬಂದಿರುವ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದರು. ಇದನ್ನೂ ಓದಿ: ಶಬರಿಮಲೆಯಲ್ಲಿ ಚಿನ್ನ ನಾಪತ್ತೆ ಪ್ರಕರಣಕ್ಕೆ ಬೆಂಗಳೂರು ಲಿಂಕ್ – ಬಳ್ಳಾರಿಯಲ್ಲಿ ಚಿನ್ನ ಮಾರಾಟ ಮಾಡಿರೋ ಶಂಕೆ
ಎಸ್ಐಟಿ (SIT) ಅಧಿಕಾರಿಗಳು ತನಿಖೆ ಮಾಡಿದ್ದು ಸತ್ಯ, ಅವರ ತನಿಖೆಗೆ ಸಹಕಾರ ನೀಡುತ್ತೇವೆ. ನಾನು ಅಯ್ಯಪ್ಪ ಸ್ವಾಮಿ ಭಕ್ತ, ನಾನು ಯಾವುದೇ ತಪ್ಪು ಮಾಡಿಲ್ಲ. ತಪ್ಪು ಮಾಡಿದವರು ಯಾರೇ ಇದ್ದರೂ ಅವರಿಗೆ ಶಿಕ್ಷೆ ಆಗುತ್ತದೆ. ಎಸ್ಐಟಿ ಅಧಿಕಾರಿಗಳು ನಿನ್ನೆ ಬಳ್ಳಾರಿಗೆ ಬಂದಿದ್ದರು. ನಮ್ಮ ಜ್ಯುವೆಲ್ಲರಿ ಶಾಪ್ನಲ್ಲಿ ತನಿಖೆ ಮಾಡಿ ವಿಚಾರಣೆ ಮಾಡಿದರು. 476 ಗ್ರಾಂ ಚಿನ್ನದ ಆರೋಪ ನನ್ನ ಮೇಲೆ ಇದೆ. ಅದು ತನಿಖೆ ನಡಿಯುತ್ತಿದೆ. ಇದರ ಬಗ್ಗೆ ಹೆಚ್ಚಿನ ಮಾಹಿತಿ ಹೇಳಲು ಆಗಲ್ಲ. ಉನ್ನಿಕೃಷ್ಣನ್ ಅವರಿಂದಲೇ ಬಾಗಿಲು ನಿರ್ಮಾಣಕ್ಕೆ ಆರ್ಡರ್ ಬಂದಿತ್ತು. ಉಳಿದ ವಿಚಾರ ತನಿಖೆ ನಡೆಯುತ್ತಿದೆ, ತನಿಖೆಗೆ ನಾನು ಸಹಕರಿಸುತ್ತೇನೆ ಎಂದು ತಿಳಿಸಿದರು. ಇದನ್ನೂ ಓದಿ: ಸ್ನೇಹಿತೆಯ ಖಾಸಗಿ ವೀಡಿಯೋ ಕದ್ದು ಹಂಚಿ ಬ್ಲ್ಯಾಕ್ಮೇಲ್ ಆರೋಪ; ಕಿರುತೆರೆ ನಟಿ ವಿರುದ್ಧ FIR
ಶಬರಿಮಲೆಯಲ್ಲಿ ಚಿನ್ನ ನಾಪತ್ತೆ ಪ್ರಕರಣಕ್ಕೆ ಈಗ ಕರ್ನಾಟಕದ ಬೆಂಗಳೂರು, ಬಳ್ಳಾರಿಯ ಲಿಂಕ್ ಸಿಕ್ಕಿದೆ. ಪ್ರಮುಖ ಆರೋಪಿ ಬೆಂಗಳೂರಿನ ಉನ್ನಿಕೃಷ್ಣನ್ ಪೊಟ್ಟಿಯನ್ನ ವಿಶೇಷ ತನಿಖಾ ತಂಡದ (ಎಸ್ಐಟಿ) ಅಧಿಕಾರಿಗಳು ಸಾಕ್ಷ್ಯ ಸಂಗ್ರಹಕ್ಕಾಗಿ ಬೆಂಗಳೂರಿಗೆ ಕರೆತಂದಿದ್ದಾರೆ. ಇದನ್ನೂ ಓದಿ: Mysuru | ಬಾತ್ರೂಂನಲ್ಲಿ ಗ್ಯಾಸ್ ಗೀಸರ್ ಸೋರಿಕೆ; ಉಸಿರುಗಟ್ಟಿ ಅಕ್ಕ-ತಂಗಿ ಸಾವು
ಬೆಂಗಳೂರಿನ ಶ್ರೀರಾಂಪುರದಲ್ಲಿ ಚಿನ್ನಲೇಪಿತ ಕವಚಗಳನ್ನು ಇರಿಸಿ ಈತ ದೇಣಿಗೆ ಸಂಗ್ರಹಿಸಿದ್ದ ಎಂಬ ಆರೋಪವೂ ಇದೆ. ಹೀಗಾಗಿ ಸಾಕ್ಷ್ಯ ಸಂಗ್ರಹಕ್ಕಾಗಿ ಬೆಂಗಳೂರಿಗೆ ಕರೆತರಲಾಗಿದೆ. ಅಲ್ಲದೇ ಕದ್ದ ಚಿನ್ನವನ್ನ ಬಳ್ಳಾರಿಯಲ್ಲಿ ಮಾರಾಟ ಮಾಡಿರುವ ಆರೋಪದ ಹಿನ್ನೆಲೆ ಬಳ್ಳಾರಿಯಲ್ಲು ತಪಾಸಣೆ ನಡೆಸಿದ್ದು, ಒಂದಿಷ್ಟು ಚಿನ್ನವನ್ನ ರಿಕವರಿ ಮಾಡಲಾಗಿದೆ. ಅದಕ್ಕೆ ಪೂರಕವಾದ ದಾಖಲೆಗಳು ಬೆಂಗಳೂರಿನಲ್ಲಿದ್ದ ಕಾರಣ ಇಬ್ಬರು ಅಧಿಕಾರಿಗಳು ಕೋರ್ಟ್ ಅನುಮತಿಯೊಂದಿಗೆ ಬಂದು ದಾಖಲೆ ಕಲೆ ಹಾಕಿದ್ದಾರೆ. ಇದನ್ನೂ ಓದಿ: ಪಾಕ್ ಪರಮಾಣು ಶಸ್ತ್ರಾಗಾರದ ಮೇಲೆ ಅಮೆರಿಕ ನಿಯಂತ್ರಣ ಹೊಂದಿತ್ತು – CIA ಮಾಜಿ ಅಧಿಕಾರಿ ಜಾನ್ ಕಿರಿಯಾಕೌ ಆರೋಪ
ಶಬರಿಮಲೆಯ ಚಿನ್ನ ಬಳ್ಳಾರಿಯಲ್ಲಿ ಪತ್ತೆ
ಎಸ್ಪಿ ಶಶಿಧರನ್ ನೇತೃತ್ವದ ಕೇರಳದ ಎಸ್ಐಟಿ ಚಿನ್ನ ನಾಪತ್ತೆ ಪ್ರಕರಣದ ತನಿಖೆ ನಡೆಸುತ್ತಿದ್ದು, ನಿನ್ನೆ ರೊದ್ದಂ ಜ್ಯುವೆಲ್ಸ್ ಮಳಿಗೆ ಮೇಲೆ ದಾಳಿ ನಡೆಸಿದೆ. ಈ ವೇಳೆ ನಾಣ್ಯಗಳ ರೂಪದಲ್ಲಿ 476 ಗ್ರಾಂ ಚಿನ್ನ ಪತ್ತೆಯಾಗಿದೆ. ಈ ಚಿನ್ನವನ್ನ ಪೊಟ್ಟಿಯಿಂದ ರೊದ್ದಂ ಗೋಲ್ಡ್ ಮಾಲೀಕ ಗೋವರ್ಧನ್ ಖರೀದಿ ಮಾಡಿದ್ದ. ಚಿನ್ನ ವಶಕ್ಕೆ ಪಡೆದ ಎಸ್ಐಟಿ ತಂಡ ಗೋವರ್ಧನ್ ವಿಚಾರಣೆ ನಡೆಸಿದೆ. ಸದ್ಯ ರೊದ್ದಂ ಗೋಲ್ಡ್ ಶಾಪ್ ಬೀಗ ಹಾಕಲಾಗಿದೆ. ಅಲ್ಲದೇ ಬೆಂಗಳೂರಿನ ಉನ್ನಿಕೃಷ್ಣನ್ ಮನೆಯಲ್ಲಿ ಚಿನ್ನದ ಗಟ್ಟಿ ಹಾಗೂ 2 ಲಕ್ಷ ರೂ. ನಗದು ಪತ್ತೆಯಾಗಿದೆ ಎಂದು ಎಸ್ಐಟಿ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಪಿಓಕೆಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತಿದೆ – ವಿಶ್ವಸಂಸ್ಥೆಯಲ್ಲಿ ಪಾಕ್ ಕುಟುಕಿದ ಭಾರತ
ಬಳ್ಳಾರಿ: ಡ್ರೈವರ್, ಕಂಡಕ್ಟರ್ ಬೆಂಕಿ ನಂದಿಸುತ್ತಿದ್ದರು, ನಾವು 5 ಸೆಕೆಂಡ್ಲ್ಲಿ ಜೀವ ಉಳಿಸಿಕೊಂಡೆವು ಎಂದು ಕರ್ನೂಲ್ ಬಸ್ ಅಪಘಾತದಲ್ಲಿ (Karnool Bus Fire) ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕ ಆಕಾಶ್ ಭಯಾನಕ ದೃಶ್ಯವನ್ನು ಬಿಚ್ಚಿಟ್ಟಿದ್ದಾರೆ.
`ಪಬ್ಲಿಕ್ ಟಿವಿ’ ಜೊತೆ ಮಾತನಾಡಿದ ಅವರು, ನಾನು ಗುರುವಾರ (ಅ.23) ರಾತ್ರಿ 10:30ಕ್ಕೆ ಹೈದರಾಬಾದ್ನಲ್ಲಿ ಬಸ್ ಹತ್ತಿ, ಬೆಂಗಳೂರಿಗೆ ಹೊರಟಿದ್ದೆವು. ಮಧ್ಯರಾತ್ರಿ 2:35ರ ಸುಮಾರಿಗೆ ಈ ಅವಘಡ ಸಂಭವಿಸಿದೆ. ನಾವೆಲ್ಲ ಮಲಗಿಕೊಂಡಿದ್ದೆವು. ಆಗ ಬೈಕ್ ಡಿಕ್ಕಿ ಹೊಡೆದ ಶಬ್ದವೊಂದು ಕೇಳಿಸಿತು. ಆ ಶಬ್ದಕ್ಕೆ ಪಕ್ಕದಲ್ಲಿದ್ದ ಅಂಕಲ್ ಒಬ್ಬರು ನಮ್ಮನ್ನು ಎಬ್ಬಿಸಿದ್ದರು. ಎದ್ದು ನೋಡಿದಾಗ ಬಸ್ಸಿನ ಎಡಗಡೆ ಭಾಗ ಹಾಗೂ ರಸ್ತೆಯ ಮೇಲೆ ಬೆಂಕಿ ಹೊತ್ತಿಕೊಂಡಿತ್ತು. ಡೀಸೆಲ್ ಚೆಲ್ಲಿತ್ತಾ? ಪೆಟ್ರೋಲ್ ಚೆಲ್ಲಿತ್ತಾ? ಗೊತ್ತಿಲ್ಲ. ನಮಗೆ ಹೊರಬರೋಕೆ ಕೇವಲ 5 ಸೆಕೆಂಡ್ ಮಾತ್ರ ಇತ್ತು. ಆ ಸಮಯದಲ್ಲಿ ಡ್ರೈವರ್ ಹಾಗೂ ಕಂಡಕ್ಟರ್ ಬೆಂಕಿ ನಂದಿಸುವ ಕೆಲಸ ಮಾಡುತ್ತಿದ್ದರು. ಅವರೇನಾದರೂ ಎಬ್ಬಿಸಿದ್ರೆ ಹೆಚ್ಚಿನ ಜನ ಆಚೆ ಬರಬಹುದಿತ್ತು ಎಂದು ಹೇಳಿದರು.ಇದನ್ನೂ ಓದಿ: Kurnool Bus Fire | ಸೂರ್ಯೋದಯಕ್ಕೂ ಮುನ್ನ ಸಾವಿನ ಮನೆ ಕದ ತಟ್ಟಿದ ಸುಂದರ ಕುಟುಂಬ
ನಮ್ಮನ್ನು ಎಬ್ಬಿಸಿದ ಅಂಕಲ್ ಡ್ರೈವರ್ ಸೀಟಿನ ಪಕ್ಕದ ಕಿಟಿಕಿಯಿಂದ ಆಚೆ ಹೋದರು. ನಾನು ಆ ಕಿಟಕಿಯನ್ನು ಕೈಯಿಂದ ಒಡೆದು, ಕಾಲಿಂದ ಒದ್ದು ಗಾಜು ಬಿಳಿಸಿ ಆಚೆ ಬಂದೆ. ನನ್ನ ಜೊತೆ ಮೂವರು ಆಚೆ ಬಂದರು. ಹೊರಗಡೆ ಬಂದ 5 ರಿಂದ 10 ಸೆಕೆಂಡ್ನಲ್ಲಿ ಬಸ್ ಸಂಪೂರ್ಣವಾಗಿ ಬೆಂಕಿಗಾಹುತಿಯಾಯಿತು. ಆ ಸಮಯದಲ್ಲಿ ನಾವು ಯಾರಿಗೂ ಸಹಾಯ ಮಾಡುವ ಸ್ಥಿತಿಯಲ್ಲಿರಲಿಲ್ಲ. ಇದನ್ನೆಲ್ಲ ನೋಡಿದರೆ ನಮಗೆ ಪುನರ್ಜನ್ಮ ಸಿಕ್ಕಿದಂತಾಗಿದೆ ಎಂದರು.
ಏನಿದು ಅವಘಡ?
ಆಂಧ್ರದ ಕರ್ನೂಲ್ ಬಳಿಯ ಚಿನ್ನಟೇಕೂರು ಬಳಿ ಹೈದರಾಬಾದ್ನಿಂದ ಬೆಂಗಳೂರಿಗೆ ಬರುತ್ತಿದ್ದ ವೇಳೆ ಅವಘಡ ಸಂಭವಸಿದೆ. ದುರಂತದಲ್ಲಿ 23 ಮಂದಿ ಪ್ರಯಾಣಿಕರು ಪಾರಾದರೂ 19 ಮಂದಿ ಜೀವಂತವಾಗಿ ಸುಟ್ಟು ಹೋಗಿದ್ದಾರೆ. ಪ್ರಯಾಣಿಕರನ್ನು ಕರ್ನೂಲ್ ಸರ್ಕಾರಿ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಪ್ರಯಾಣಿಕರು ಹೈದರಾಬಾದ್ ನಿವಾಸಿಗಳು ಎಂದು ಪೊಲೀಸರು ತಿಳಿಸಿದ್ದಾರೆ
ಮಾಹಿತಿ ತಿಳಿದ ಕೂಡಲೇ ಅಗ್ನಿಶಾಮಕ ದಳ ಮತ್ತು ಪೊಲೀಸ್ ತಂಡಗಳು ಸ್ಥಳಕ್ಕೆ ಆಗಮಿಸಿದವು. ರಕ್ಷಣಾ ತಂಡಗಳು ಸ್ಥಳಕ್ಕೆ ಬರುವಷ್ಟರಲ್ಲಿ ಬಸ್ಸು ಬಹುತೇಕ ಸುಟ್ಟುಹೋಗಿತ್ತು. ಈಗ ಅಧಿಕಾರಿಗಳು ಮೃತ ವ್ಯಕ್ತಿಗಳ ಗುರುತು ಪತ್ತೆ ಹಚ್ಚುವ ಕೆಲಸ ಆರಂಭಿಸಿದ್ದಾರೆ. ಸ್ಲೀಪರ್ ಕೋಚ್ ಬಸ್ಸು ಆಗಿದ್ದ ಕಾರಣ ಪ್ರಯಾಣಿಕರು ನಿದ್ದೆ ಮಾಡುತ್ತಿದ್ದರು. ಸಾಧಾರಣವಾಗಿ ವೋಲ್ವೋ ಬಸ್ಸಿನಲ್ಲಿ ಕಿಟಕಿಯ ಗಾಜುಗಳು ಸಂಪೂರ್ಣವಾಗಿ ಲಾಕ್ ಆಗಿರುತ್ತದೆ. ಹೀಗಿದ್ದರೂ ಬೆಂಕಿ ಕಾಣಿಸಿದ ಕೂಡಲೇ ಕೆಲ ಪ್ರಯಾಣಿಕರು ಗಾಜನ್ನು ಒಡೆದು ಕೆಳಗೆ ಹಾರಿ ಜೀವ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.ಇದನ್ನೂ ಓದಿ: ಭೀಕರ ದುರಂತಕ್ಕೆ 20 ಬಲಿ – ಬೆಂಗಳೂರಿಗೆ ಬರುತ್ತಿದ್ದ ಬಸ್ಸಿಗೆ ಬೆಂಕಿ ಹೊತ್ತಿದ್ದು ಹೇಗೆ? ಬೈಕ್ ಗುದ್ದಿದ್ದಾಗ ಏನಾಯ್ತು?
ಇದರ ವಟ್ ವಟ್ ಸದ್ದಿನಿಂದ ಹಿಂಬಾಲಿಸಿದ ಪಕ್ಷಿ ಪ್ರೇಮಿಗಳಾದ ಸಬ್ಯಸಾಚಿ ರಾಯ್, ಶ್ರೀಧರ್ ಪೆರುಮಾಳ್ ಮತ್ತು ಪಂಪಯ್ಯ ಸ್ವಾಮಿ ಮಳೆಮಠ ಹರಸಾಹಸ ಪಟ್ಟು ಗೂಬೆಯ ಚಿತ್ರ ಸೆರೆಹಿಡಿದ್ದಾರೆ. ಸ್ಕಾಪ್ಸ್ ಗೂಬೆ ಈ ಭಾಗದಲ್ಲಿ ಹೊಸದಾಗಿ ಗೋಚರಿಸಿರುವುದು ಅಚ್ಚರಿ ಸಂಗತಿಯಾಗಿದೆ.
ಕೊಪ್ಪಳ: ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ಪ್ರಕರಣ ಹೆಚ್ಚುತ್ತಿದ್ದು, ಭ್ರಷ್ಟ್ರಾಚಾರಕ್ಕೆ ಸರ್ಕಾರ ಮೂಗುದಾರ ಹಾಕಲು ಮುಂದಾಗಿದೆ. ಲಂಚಗುಳಿತನ ಹಾಗೂ ಅನೇಕ ವರ್ಷದಿಂದ ಇಲ್ಲೇ ಬೀಡುಬಿಟ್ಟ ಅಧಿಕಾರಿಗಳನ್ನು ವರ್ಗಾಯಿಸಿ ಕ್ರಮಕೈಗೊಳ್ಳಲು ಬಸವರಾಜ ರಾಯರೆಡ್ಡಿ (Basavaraj Rayareddy) ಅವರು ಸಿಎಂ ಸಿದ್ದರಾಮಯ್ಯ (Siddaramaiah) ಅವರಿಗೆ ಪತ್ರ ಬರೆದಿದ್ದಾರೆ.
ತುಂಗಭದ್ರಾ ನದಿ, ಹಿರೇಹಳ್ಳದಲ್ಲಿ ಮರಳು ಅಕ್ರಮ ಅವ್ಯಾಹತವಾಗಿದೆ. ನಿಯಂತ್ರಣ ಅಸಾಧ್ಯ ಎಂಬಂತಾಗಿದೆ. ಹಿರೇಹಳ್ಳದಲ್ಲಿನ ಅಕ್ರಮ ಕುರಿತು ಮಾಧ್ಯಮಗಳಲ್ಲಿ ವರದಿ ಆಗುತ್ತಲೇ ಎಚ್ಚೆತ್ತ ಅಧಿಕಾರಿಗಳು ಪ್ರಕರಣ ದಾಖಲಿಸಿದ್ದರು. ಬೂದಗುಂಪಾ, ಕೆರೆಹಳ್ಳಿ, ಬಂಡಿ ಹರ್ಲಾಪುರ ಭಾಗದಲ್ಲಿ ಅಕ್ರಮ ಗ್ರಾನೈಟ್ ಗಣಿಗಾರಿಕೆ ನಡೆಯುತ್ತಿದೆ. ಈ ಬಗ್ಗೆ ದಾಖಲಾದ ದೂರು ಆಧರಿಸಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹೆಚ್ಚುವರಿ ನಿರ್ದೇಶಕ ನೇತೃತ್ವದ ತಂಡ ಸ್ಥಳ ಪರಿಶೀಲನೆ ನಡೆಸಿ, ವರದಿ ಸಲ್ಲಿಸಿದೆ.ಇದನ್ನೂ ಓದಿ: ಮೈದುನನ ಜೊತೆ ಮಲಗೋಕೆ ಒತ್ತಾಯಿಸ್ತಿದ್ರು, ವರದಕ್ಷಿಣೆಗಾಗಿ ಚಿತ್ರಹಿಂಸೆ ನೀಡಿದ್ದಾರೆ – ವಿಡಿಯೋ ಮಾಡಿಟ್ಟು ಗೃಹಿಣಿ ಆತ್ಮಹತ್ಯೆ
ಇನ್ನೂ ಕುಕನೂರು ತಾಲೂಕಿನ ತಳಕಲ್ ಗ್ರಾಮದ 9.4 ಎಕರೆ ಬೆಣ್ಣಿಕೆರೆಯಲ್ಲಿ ಹೂಳು ತೆರವು ಮಾಡಲಾಗಿದೆ. ಇದರಲ್ಲಿ ಮೊದಲು ಹೂಳು ಮಾರಾಟ ಮಾಡಿ, ರಾಜಧನ ಪಾವತಿಗೆ ಸೂಚಿಸಲಾಗಿದೆ. ಬಳಿಕ ಆದೇಶ ಮಾರ್ಪಡಿಸಿ ಹೂಳನ್ನು ಮಾರಾಟ ಮಾಡದಂತೆ ಆದೇಶಿಸಲಾಗಿದೆ. ಈ ಮೂಲಕ ಭ್ರಷ್ಟಾಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ ಎಂದು ತನಿಖೆ ವೇಳೆ ದೃಢಪಟ್ಟಿದೆ. ಈ ಸಂಬಂಧ ಇಲಾಖೆ ನಿರ್ದೇಶಕರಿಗೆ ವರದಿ ಸಲ್ಲಿಕೆಯಾಗಿದ್ದು, ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಶಿಫಾರಸ್ಸು ಮಾಡಲಾಗಿದೆ.
ಹಲವು ವರ್ಷದಿಂದ ಬೀಡು ಬಿಟ್ಟ ಅಧಿಕಾರಿಗಳು:
ಕೊಪ್ಪಳ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಲ್ಲಿ ಕೆಲ ಅಧಿಕಾರಿಗಳು ಹಲವು ವರ್ಷಗಳಿಂದ ಬೀಡು ಬಿಟ್ಟಿದ್ದಾರೆ. ಕಿರಿಯ ಅಭಿಯಂತರ ನವೀನ್ ಕುಮಾರ್ (12 ವರ್ಷ), ಅಧೀಕ್ಷಕ ಮಲ್ಲಿಕಾರ್ಜುನ (9 ವರ್ಷ), ಪ್ರಥಮ ದರ್ಜೆ ಸಹಾಯಕ ಹರೀಶ ಬಿ.ಜಿ. (18 ವರ್ಷ), ಪ್ರಥಮ ದರ್ಜೆ ಸಹಾಯಕಿ ತ್ರಿವೇಣಿ ಬಸವರಾಜ (9 ವರ್ಷ), ದ್ವಿತಿಯ ದರ್ಜೆ ಸಹಾಯಕಿ ಸುಕನ್ಯಾ ಹೊಸಮನಿ (5 ವರ್ಷ), ಭೂ ವಿಜ್ಞಾನಿಗಳಾದ ಸನಿತ್ ಸಿ. (3 ವರ್ಷ), ನಾಗರಾಜ ಈ. (2 ವರ್ಷ), ಕಿರಿಯ ಅಭಿಯಂತರರಾದ ಸಂಪ್ರಿತಾ ಹಿರೇಮಠ 3 ವರ್ಷದಿಂದ ಸೇವೆ ಸಲ್ಲಿಸುತ್ತಿದ್ದಾರೆ. ಎಲ್ಲರೂ ಭ್ರಷ್ಟಾಚಾರಕ್ಕೆ ಸಹಕಾರ ನೀಡುತ್ತಿದ್ದಾರೆಂದು ದೂರುಗಳು ಸಲ್ಲಿಕೆಯಾಗಿವೆ. ಇನ್ನು ಕಳೆದ ಐದು ತಿಂಗಳ ಹಿಂದೆ ಹಿರಿಯ ಭೂವಿಜ್ಞಾನಿಯಾಗಿ ಬಂದಿರುವ ಪುಷ್ಪಲತಾ ಕವಲೂರು ಅವರು ನಿಯಮಾವಳಿ ಪಾಲಿಸಿದ ಕಾರಣ ಕ್ರಮಕ್ಕೆ ಪತ್ರ ಬರೆಯಲಾಗಿದೆ.
ಕಾರ್ಯಪಡೆ ರಚನೆಗೆ ಆಗ್ರಹ:
ಗಣಿಗಾರಿಕೆ ಅಕ್ರಮ ಕುರಿತು ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಸಿಎಂಗೆ ಪತ್ರ ಬರೆದಿದ್ದು, ಸೂಕ್ತ ಕ್ರಮಕ್ಕೆ ಆಗ್ರಹಿಸಿದ್ದಾರೆ. ಕೊಪ್ಪಳದಲ್ಲಿ 85 ಕಿ.ಮೀ. ತುಂಗಭದ್ರಾ ನದಿ ಹರಿಯುತ್ತಿದ್ದು, ಅಪಾರ ಮರಳು ಗಣಿ ಇದೆ. ನಿತ್ಯ 100&150 ಟ್ರಿಪ್ ಮರಳು, ಜಲ್ಲಿ ನೆರೆ ಜಿಲ್ಲೆಗಳಿಗೆ ಅನಧಿಕೃತವಾಗಿ ಸಾಗುತ್ತಿವೆ. ಇದರಿಂದ ಸರ್ಕಾರಕ್ಕೆ ಅಪಾರ ರಾಜಧನ ನಷ್ಟವಾಗುತ್ತಿದೆ. ಇಲಾಖೆ ಅಧಿಕಾರಿಗಳು ಶಾಮೀಲಾಗಿ ಭ್ರಷ್ಟಾಚಾರ ನಡೆಸುತ್ತಿರುವ ಬಗ್ಗೆ ದೂರು ಸಲ್ಲಿಕೆಯಾಗಿವೆ. 200ಕ್ಕೂ ಹೆಚ್ಚು ಜನ ಮರಳು ಮಾಫಿಯಾದಲ್ಲಿ ಭಾಗಿಯಾಗಿದ್ದಾರೆ. ಇದರಿಂದ ಸರ್ಕಾರಕ್ಕೆ ಕೆಟ್ಟ ಹೆಸರು ಬರುತ್ತಿದೆ. ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಕಾರ್ಯಪಡೆ ರಚಿಸಿ ಕ್ರಮ ಕೈಗೊಳ್ಳಬೇಕು. ಕಾನೂನು ಅರಿವು ಇಲ್ಲದೇ ಕೆಳ ಹಂತದ ಅಧಿಕಾರಿಗಳ ಮಾತಿನಂತೆ ಅಕ್ರಮ ದಂಧೆಗೆ ಸಹಕರಿಸುತ್ತಿರುವ ಹಿರಿಯ ಭೂ ವಿಜ್ಞಾನಿ ಪುಷ್ಪಲತಾ ಸೇರಿ ಇತರ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.ಇದನ್ನೂ ಓದಿ: 7 ದಿನ ಲವ್ವರ್ ಜೊತೆ ಲಾಡ್ಜ್ನಲ್ಲಿದ್ದ ಪುತ್ತೂರಿನ ಯುವಕ ಸಾವು – ಹೆಚ್ಚು ಮಾತ್ರೆ ಸೇವಿಸಿದ್ದರಿಂದ ಮೃತಪಟ್ಟಿರೋ ಶಂಕೆ
ಬಳ್ಳಾರಿ: ಬೇಲೆಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ (Belekeri Iron Ore Case) ಸಂಬಂಧಿಸಿದಂತೆ ಬಳ್ಳಾರಿಯಲ್ಲಿ (Ballari) ಇಂದು ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ದಾಳಿ ಮಾಡಿದ್ದಾರೆ. ಮಾಜಿ ಸಚಿವ ನಾಗೇಂದ್ರ (Nagendra) ಅವರ ಆಪ್ತ ಕುರುಬರ ನಾಗರಾಜಗೆ ಸೇರಿದ ತಾಳೂರು ರಸ್ತೆಯ ಮನೆಯ ಮೇಲೆ ದಾಳಿ ಮಾಡಿರುವ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ಮಾಡಿದ್ದಾರೆ.
ಹೊಸಪೇಟೆಯ ಹೊಟೇಲ್ ಉದ್ಯಮಿ ಶ್ರೀನಿವಾಸ್ ರಾವ್ (ಸೀನಾಬಾಬು) ಅವರ ಪ್ರಿಯದರ್ಶನಿ ಹೋಟೆಲ್ ಮೇಲೂ ದಾಳಿಯಾಗಿದೆ. ವಿನಾಯಕ ನಗರ ಮನೆ ಮತ್ತು ಬಸವೇಶ್ವರ ಬಡಾವಣೆಯ ಮನೆಯ ಮೇಲೆ ದಾಳಿ ಮಾಡಿರುವ ಇಡಿ ಅಧಿಕಾರಿಗಳು ದಾಖಲೆ ಪರಿಶೀಲನೆಯಲ್ಲಿ ತೊಡಗಿದ್ದಾರೆ.
ಶ್ರೀನಿವಾಸ ಅವರು ದಾಳಿ ಗಣಿ ಗುತ್ತಿಗೆ ಹಾಗೂ ರಿಯಲ್ ಎಸ್ಟೇಟ್ ವ್ಯವಹಾರ ಮಾಡುತ್ತಿದ್ದರು ಎನ್ನಲಾಗಿದೆ. ಸದ್ಯ ಇಡಿ ಬೇಲಿಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಮರು ಜೀವ ನೀಡಿದ್ದರಿಂದ 17 ಜನ ಆರೋಪಿಗಳಿಗೆ ನಡುಕ ಹುಟ್ಟಿಸಿದೆ.
ಇತ್ತೀಚೆಗಷ್ಟೇ ಶಾಸಕ ಸತೀಶ್ ಸೈಲ್ ಈ ಪ್ರಕರಣದಲ್ಲಿ ದೋಷಿ ಎಂದು ಜಪ್ರತಿನಿಧಿಗಳ ಕೋರ್ಟ್ ತೀರ್ಪು ನೀಡಿತ್ತು. ಈ ಬೇಲಿಕೇರಿ ಪ್ರಕರಣದಲ್ಲಿ ಜನಾರ್ದನ ರೆಡ್ಡಿ, ಬಿ ನಾಗೇಂದ್ರ, ಆನಂದ್ ಸಿಂಗ್ ಸೇರಿ ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಯ ಹಲವರಿದ್ದಾರೆ.
ಬಳ್ಳಾರಿ: ರಾಜ್ಯ ಪ್ರವಾಸದಲ್ಲಿರುವ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman), ಐತಿಹಾಸಿಕ ಹಂಪಿಯ ವಿರುಪಾಕ್ಷೇಶ್ವರನ ಸನ್ನಿಧಿಗೆ (Virupaksha Temple) ಭೇಟಿ ನೀಡಿ ದರ್ಶನ ಪಡೆದು, ಆನೆ ಲಕ್ಷ್ಮೀಯಿಂದ ಹೂವಿನ ಹಾರ ಹಾಕಿಸಿಕೊಂಡರು. ಇದೇ ವೇಳೆ ದೇಶಕ್ಕೆ ಒಳ್ಳೆಯದಾಗಲಿ ಎಂದು ನಿರ್ಮಲಾ ಸೀತಾರಾಮನ್ ಹಂಪಿಯ ವಿರುಪಾಕ್ಷೇಶ್ವರನಿಗೆ ವಿಶೇಷ ಪೂಜೆ ಸಲ್ಲಿಕೆ ಮಾಡಿದರು.
ಪೂಜೆ ಬಳಿಕ ಮಾತನಾಡಿದ ನಿರ್ಮಲಾ ಸೀತಾರಾಮನ್, ನನಗೆ ಬಹಳಷ್ಟು ಜನ ಹಂಪಿಯನ್ನ ವೀಕ್ಷಣೆ ಮಾಡಿ ಎಂದು ಹೇಳುತ್ತಿದ್ದರು. ಇಂದು ಆ ಅವಕಾಶ ನನಗೆ ಸಿಕ್ಕಿರೊದು ನನ್ನ ಅದೃಷ್ಟ. ಹಂಪಿಯ ಸಾಂಸ್ಕೃತಿಕ ಪರಂಪರೆಯನ್ನ ಕಣ್ತುಂಬಿಕೊಂಡಿರೋದು ತುಂಬಾ ಹೆಮ್ಮಯ ಅನುಭವ ಎಂದರು. ಇದನ್ನೂ ಓದಿ: RSS ಸಂಸ್ಕೃತಿ ತೋರಿಸುವ 20 ವಿಡಿಯೋ ರಿಲೀಸ್ ಮಾಡಿದ್ದೇನೆ: ಪ್ರಿಯಾಂಕ್ ಖರ್ಗೆ ಬಾಂಬ್
ಇಲ್ಲಿಯ ಕಲೆ ಸಂಸ್ಕೃತಿ ಈ ನಾಡಿನ ಪರಂಪರೆಯ ಪ್ರತೀಕವಾಗಿದೆ. ಯುನೆಸ್ಕೊ ಗುರುತಿಸಿರುವ ಐತಿಹಾಸಿಕ ತಾಣ ಹಂಪಿಯ ಪ್ರತಿಯೊಂದು ಶಿಲೆಯು ಇಲ್ಲಿನ ಪರಂಪರೆಯನ್ನ ಪ್ರತಿಬಿಂಬಿಸುವಂತಿದೆ. ಇಲ್ಲಿ ಅನೇಕ ಉತ್ಖನನ ಕಾರ್ಯಗಳ ಜೊತೆಗೆ ಹಂಪಿಯ ಅಭಿವೃದ್ಧಿ ಕಾರ್ಯಗಳೂ ನಡೆಯುತ್ತಿವೆ. ನನಗೆ ಇಲ್ಲಿಯ ಇತಿಹಾಸ ಪರಂಪರೆಯ ಬಗ್ಗೆ ಸಂಸದ ತುಕರಾಂ ಹಾಗೂ ರಾಜ ವಶಂಸ್ಥ ಶ್ರೀ ಕೃಷ್ಣದೇವರಾಯ ವಿವರಿಸಿದ್ದರು. ಹಂಪಿಯ ಪ್ರಾಚೀನ ಸಂಸ್ಕೃತಿ ಕಣ್ತುಂಬಿಕೊಳ್ಳುವುದು ಹೆಮ್ಮೆಯ ಸಂಗತಿ ಎನಿಸುತ್ತಿದೆ ಎಂದು ಹೇಳಿದರು. ಇದನ್ನೂ ಓದಿ: ಬಿಹಾರ ಚುನಾವಣೆಯಲ್ಲಿ ನಾನು ಸ್ಪರ್ಧಿಸಲ್ಲ – ಚುನಾವಣಾ ಚಾಣಕ್ಯ ಪ್ರಶಾಂತ್ ಕಿಶೋರ್
ಬಳ್ಳಾರಿ: ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ಮಾಲವಿ ಗ್ರಾಮದ ಹೊರಭಾಗದಲ್ಲಿರುವ ಮಾಲವಿ ಜಲಾಶಯದ (Malavi Dam) ಮಣ್ಣಿನ ಗೋಡೆ ಒಡೆದು ಅಪಾರ ಪ್ರಮಾಣದ ನೀರು ಪೋಲಾಗಿದ್ದು, ಅಧಿಕಾರಿಗಳ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
2.50 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿರುವ ಮಾಲವಿ ಜಲಾಶಯ, ಈ ಭಾರೀ ಉತ್ತಮ ಮಳೆಯಾಗಿದ್ದರಿಂದ ಭರ್ತಿಯಾಗಿದೆ. ಆದ್ರೆ ನೀರಾವರಿ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ರೈತರ (Farmers) ಕೃಷಿ ಚಟುವಟಿಕೆಗೆ ಬಳಕೆಯಾಗಬೇಕಿದ್ದ ಜಲಾಶಯದ ನೀರು ವ್ಯರ್ಥವಾಗಿ ಹರಿಯುತ್ತಿದೆ. ಇದನ್ನೂ ಓದಿ: ದೇವದುರ್ಗ ಶಾಸಕಿ ಕರೆಮ್ಮ ನಾಯಕ್ ಕಾರು ಅಪಘಾತ
ಕ್ರಸ್ಟ್ ಗೇಟ್ ಸಮಸ್ಯೆಯಿಂದ ನೀರು ಪೋಲಾಗುತ್ತಿದೆ. ಪೋಲಾಗುತ್ತಿರುವ ನೀರು ಉಳಿಸಿಕೊಳ್ಳಲು ಆಗುತ್ತಿಲ್ಲ ಎಂದು ಅಧಿಕಾರಿಗಳ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನೀರಾವರಿ ಇಲಾಖೆ ಅಧಿಕಾರಿಗಳು ಕೂಡಲೇ ಎಚ್ಚೆತ್ತು ಒಡೆದಿರುವ ಮಣ್ಣಿನ ಗೋಡೆ ದುರಸ್ಥಿಗೊಳಿಸುವಂತೆ ಒತ್ತಾಯಿಸಿದ್ದಾರೆ.
ಬಳ್ಳಾರಿ: ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯಲ್ಲಿ ಗೈರಾದ ಬಳ್ಳಾರಿ ಜಿಲ್ಲೆಯಲ್ಲಿ ಇಬ್ಬರು ಶಿಕ್ಷಕರನ್ನ ಸೇವೆಯಿಂದ ಅಮಾನತು ಮಾಡಲಾಗಿದೆ.
ಗಣತಿದಾರ ರವಿಚಂದ್ರ ಬಿ.ಸಿ ಹಾಗೂ ಮೇಲ್ವಿಚಾರಕ ರಾಘವೇಂದ್ರ ರಾವ್ ಅಮಾನತಾದ ಶಿಕ್ಷಕರು. ಕಂಪ್ಲಿಯ ಬಾಲಕರ ಪದವಿ ಪೂರ್ವ ಕಾಲೇಜಿನ ಪ್ರೌಢ ಶಾಲೆ ವಿಭಾಗದ ಶಿಕ್ಷಕ ರವಿಚಂದ್ರ ಹಾಗೂ ಸಂಡೂರಿನ ಆದರ್ಶ ವಿದ್ಯಾಲಯದ ಶಿಕ್ಷಕ ರಾಘವೇಂದ್ರ ಇಬ್ಬರನ್ನೂ ಸಮೀಕ್ಷೆಗೆ ನಿಯೋಜಿಸಲಾಗಿತ್ತು. ಸಮೀಕ್ಷಾ ಕರ್ತವ್ಯಕ್ಕೆ ನಿಯೋಜಿಸಿದ್ದರೂ ಇಬ್ಬರೂ ಶಿಕ್ಷಕರು ನಿರ್ಲಕ್ಷ್ಯ ತೋರಿದ್ದರು. ಇದನ್ನೂ ಓದಿ: ಪೂರ್ವತಯಾರಿ ಇಲ್ಲದೇ ಆತುರಾತುರವಾಗಿ ಜಾತಿಗಣತಿ, GBA ಚುನಾವಣೆಗೆ ತಯಾರಿ ಎಲ್ಲಿ?: ಸರ್ಕಾರಕ್ಕೆ ವಿಜಯೇಂದ್ರ ಪ್ರಶ್ನೆ
ಸಮೀಕ್ಷೆಗೆ ತೆರಳದೆ ಗೈರು ಹಾಜರಾಗಿದ್ದ ಹಿನ್ನೆಲೆ ಬೇಜವಾಬ್ದಾರಿ ತೋರಿ, ಜಿಲ್ಲೆಯಲ್ಲಿ ಸಮೀಕ್ಷೆ ಕುಂಠಿತಕ್ಕೆ ಕಾರಣವಾಗಿದ್ದೀರಿ ಎಂದು ಕಾರಣ ನೀಡಿ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್, ಇಬ್ಬರೂ ಶಿಕ್ಷಕರನ್ನ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.