Tag: ಬಸವಜಯ ಮೃತ್ಯುಂಜಯ ಸ್ವಾಮೀಜಿ

  • ಎಲ್ಲಾ ಲಿಂಗಾಯತ ಶಾಸಕರು ಬಿಜೆಪಿ ಬಿಟ್ಟು ಹೊರಬನ್ನಿ: ಜಯಮೃತ್ಯುಂಜಯ ಸ್ವಾಮೀಜಿ

    ಎಲ್ಲಾ ಲಿಂಗಾಯತ ಶಾಸಕರು ಬಿಜೆಪಿ ಬಿಟ್ಟು ಹೊರಬನ್ನಿ: ಜಯಮೃತ್ಯುಂಜಯ ಸ್ವಾಮೀಜಿ

    ಧಾರವಾಡ: ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ (Basanagouda Patil Yatnal) ಅವರನ್ನು ಬಿಜೆಪಿಯಿಂದ ಉಚ್ಛಾಟನೆ ಮಾಡಿದ ಬೆನ್ನಲ್ಲೇ ಎಲ್ಲಾ ಲಿಂಗಾಯತ ಶಾಸಕರು ಬಿಜೆಪಿ ಬಿಟ್ಟು ಹೊರಬನ್ನಿ ಎಂದು ಕೂಡಲ ಸಂಗಮದ ಬಸವ ಜಯಮೃತ್ಯುಂಜಯ ಸ್ವಾಮೀಜಿ (Jaya Mruthyunjaya Swamiji) ಕರೆ ನೀಡಿದ್ದಾರೆ.

    ಬಿಜೆಪಿ ಹೈಕಮಾಂಡ್‌ ಯತ್ನಾಳ್‌ ಅವರ ಉಚ್ಛಾಟನೆ ಆದೇಶವನ್ನು ವಾಪಸ್ ಪಡೆಯದೇ ಹೋದರೆ ಲಿಂಗಾಯತ (Lingayat Mlas) ಸಮುದಾಯದ ಎಲ್ಲ ಶಾಸಕರು ಬಿಜೆಪಿ ಬಿಟ್ಟು ಹೊರಬರಬೇಕು ಎಂದು ಹೇಳಿದರು.

    ಯತ್ನಾಳ್‌ ಎಂದಿಗೂ ಪಕ್ಷ ವಿರೋಧಿ ಚಟುವಟಿಕೆ ನಡೆಸಿಲ್ಲ. ಕಾಣದ ಕೈಗಳು ಅವರನ್ನು ಉಚ್ಛಾಟನೆ ಮಾಡುವಂತೆ ಮಾಡಿವೆ. ಕುಟುಂಬ ರಾಜಕಾರಣ ಬೇಡ ಎನ್ನುವುದು ತಪ್ಪೇ? ಯತ್ನಾಳ್‌ ಏನೇ ಮಾತನಾಡಿದರೂ ಅವರು ಉತ್ತರ ಕರ್ನಾಟಕ, ಹಿಂದುತ್ವದ ಬಗ್ಗೆಯೇ ಮಾತನಾಡಿದ್ದಾರೆ ಎಂದರು. ಇದನ್ನೂ ಓದಿ: ಹೈಕಮಾಂಡ್ ನಿರ್ಣಯ ನಾವೆಲ್ಲ ಪಾಲಿಸಬೇಕು: ಬಸವರಾಜ ಬೊಮ್ಮಾಯಿ

     

    ಯತ್ನಾಳ್‌ ಅವರನ್ನು ಉಚ್ಛಾಟನೆ ಮಾಡಿ ಬಿಜೆಪಿ (BJP) ತನ್ನ ಕಾಲ ಮೇಲೆ ತಾನೇ ಕಲ್ಲು ಹಾಕಿಕೊಂಡಿದೆ. ಇದರಿಂದ ಬಿಜೆಪಿ ಪಕ್ಷಕ್ಕೆ ಹಿನ್ನಡೆಯಾಗಲಿದೆ. ಈಗ ಬಿಜೆಪಿಗೆ 60 ಸ್ಥಾನ ಬಂದಿವೆ. ಮುಂದೆ ಮೂವತ್ತು ಸೀಟು ಕೂಡ ಬರುವದಿಲ್ಲ. ಮೋದಿ ಹಾಗೂ ಅಮಿತ್ ಶಾ ಅವರಿಗೆ ಗೊತ್ತಿರದೇ ಇರುವ ಅಂಶಗಳು ಇಲ್ಲಿವೆ ಎಂದು ಹೇಳಿದರು.

    ಬೆಳಗಾವಿಯಲ್ಲಿ ನಾಳೆ ಸಭೆ ಕರೆಯುತ್ತೇನೆ. ಮುಂದೆ ಒಂದು ದಿನ ರಾಜ್ಯದ್ಯಂತ ಪ್ರತಿಭಟನೆ ಮಾಡುತ್ತೇವೆ. ಇದು ಪ್ರಧಾನಿ ವಿರುದ್ಧದ ಹೋರಾಟ ಅಲ್ಲ. ಯಾರು ಅಟ್ಟಹಾಸ ಮೆರೆದಿದ್ದಾರೋ ಅವರ ವಿರುದ್ಧ ಹೋರಾಟ. ಬಿಜೆಪಿ ಹೈಕಮಾಂಡ್ ಕೂಡಲೇ ತನ್ನ ಆದೇಶ ವಾಪಸ್ ಪಡೆದು ಆದ ತಪ್ಪನ್ನು ಸರಿಪಡಿಸಿಕೊಳ್ಳಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ಯತ್ನಾಳ್ ಉಚ್ಚಾಟನೆ ಬೆನ್ನಲ್ಲೇ ಬಿಜೆಪಿಯಲ್ಲಿ ರಾಜೀನಾಮೆ ಪರ್ವ ಶುರು

    ನಾಳೆ ಗಾಂಧಿ ಭವನದಲ್ಲಿ ಎಲ್ಲ ಪದಾಧಿಕಾರಿಗಳ ಯುವ ಘಟಕ, ರೈತ ಘಟಕದ ಸಭೆ ಕರೆಯುತ್ತೇನೆ. ಯತ್ನಾಳ್‌ ಉಚ್ಛಾಟನೆ ಹಿಂದೆ ದುಷ್ಟ ಶಕ್ತಿಗಳ ಕೈವಾಡ ಇದೆ. ವೀರೇಂದ್ರ ಪಾಟೀಲ, ಜೆ.ಎಚ್.ಪಟೇಲರಂತೆ ಯತ್ನಾಳರಿಗೂ ಮಾಡುತ್ತಿದ್ದಾರೆ. ಹೈಕಮಾಂಡ್ ನಮಗೆ ಕುಟುಂಬ ರಾಜಕಾರಣ ಬೇಕು ಎಂದು ನೇರವಾಗಿ ಹೇಳಲಿ. ನಾಳೆ ಎಲ್ಲವನ್ನೂ ಸಭೆಯಲ್ಲಿ ನಿರ್ಧಾರ ಮಾಡುತ್ತೇವೆ ಎಂದು ಗುಡುಗಿದರು.

  • 2ಎ ಮೀಸಲಾತಿ ಕಿಚ್ಚು – ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಪಂಚಮಸಾಲಿ ಶ್ರೀ

    2ಎ ಮೀಸಲಾತಿ ಕಿಚ್ಚು – ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಪಂಚಮಸಾಲಿ ಶ್ರೀ

    – ಲಾಠಿಚಾರ್ಜ್ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆ

    ಬೆಳಗಾವಿ: 2ಎ ಮೀಸಲಾತಿಗೆ ಆಗ್ರಹಿಸಿ ಉಗ್ರ ಹೋರಾಟದ ಮಾಡುವುದಾಗಿ ಕೂಡಲಸಂಗಮದ ಪಂಚಮಸಾಲಿ ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ (Basavajaya Mrutunjaya Swamiji) ಎಚ್ಚರಿಕೆ ನೀಡಿದ್ದಾರೆ.

    ಇಂದು (ಡಿ.12) ಬೆಳಗಾವಿ (Belagavi) ಅಧಿವೇಶನದ ವೇಳೆ ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿ ಚಾರ್ಜ್ ಪ್ರಕರಣದ ಹಿನ್ನೆಲೆ ಉಗ್ರ ಹೋರಾಟ ಮಾಡುವುದಾಗಿ ಬಸವಜಯ ಮೃತ್ಯುಂಜಯ ಸ್ವಾಮೀಜಿ ಪಂಚಮಸಾಲಿ ಸಮಾಜಕ್ಕೆ ಪ್ರತಿಭಟನೆಗೆ ಕರೆ ನೀಡಿದ್ದಾರೆ. ರಾಜ್ಯಾದ್ಯಂತ ಪಂಚಮಸಾಲಿ ಸಮಾಜದಿಂದ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಯಲಿದೆ. ಸದನದ ಒಳಗೂ ಹೊರಗೂ ಪಂಚಮಸಾಲಿ ಮೀಸಲಾತಿ ಹೋರಾಟ ಸದ್ದು ಮಾಡಲಿದ್ದು, ಜೊತೆಗೆ ಜಿಲ್ಲೆ, ತಾಲೂಕು, ಹೋಬಳಿ ಮಟ್ಟದಲ್ಲಿ ರಸ್ತೆ ಬಂದ್ ಮಾಡಿ ಪ್ರತಿಭಟನೆಗೆ ಕರೆ ನೀಡಲಾಗಿದೆ.ಇದನ್ನೂ ಓದಿ: ಡ್ರೋನ್‌ ಪ್ರತಾಪ್‌ ಎಡವಟ್ಟು – ನೀರಿನೊಳಗೆ ಕೆಮಿಕಲ್ ಹಾಕಿ ಬ್ಲಾಸ್ಟ್, ಸಾರ್ವಜನಿಕರು ನಿಗಿನಿಗಿ ಕೆಂಡ!

    ಬೆಳಗಾವಿ ಹಿರೇಬಾಗೇವಾಡಿ ಬಳಿಯ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಸ್ವಾಮೀಜಿ ನೇತೃತ್ವದಲ್ಲಿ ಬೆಳಗ್ಗೆ 10:30ಕ್ಕೆ ಪ್ರತಿಭಟನೆ ನಡೆಯಲಿದ್ದು, ಪಂಚಮಸಾಲಿ ಸಮಾಜದವರು ರಾಜ್ಯಪಾಲರಿಗೆ ಮನವಿ ಸಲ್ಲಿಸಲಿದ್ದಾರೆ. ಮನವಿ ಮೂಲಕ ಸಿಎಂ ಸಿದ್ದರಾಮಯ್ಯ, ಎಡಿಜಿಪಿ ಆರ.ಹಿತೇಂದ್ರ ಅವರನ್ನು ವಜಾ ಮಾಡಬೇಕು. ಮೀಸಲಾತಿ ಹೋರಾಟವನ್ನ ಸರ್ಕಾರ ಹತ್ತಿಕ್ಕಲು ಯತ್ನಿಸಿದೆ. ತಕ್ಷಣವೇ ಪಂಚಮಸಾಲಿ ಸಮಾಜಕ್ಕೆ ಕ್ಷಮೆ ಕೇಳಬೇಕು. ಇದು ಲಿಂಗಾಯತ ವಿರೋಧಿ ಸರ್ಕಾರ ಎಂದು ಪ್ರತಿಭಟನೆ ಮೂಲಕ ಆಗ್ರಹಿಸಲಿದ್ದಾರೆ.

    ಒಟ್ಟು 9 ವಿವಿಧ ಸಂಘಟನೆಗಳಿಂದ ಪ್ರತಿಭಟನೆ ನಡೆಯಲಿದ್ದು, 4 ಸಂಘಟನೆಗಳು ಸರ್ಕಾರಕ್ಕೆ ಮನವಿ ಸಲ್ಲಿಸಲಿವೆ. ಬೆಳಗಾವಿ ವಿಧಾನ ಸೌಧದ ಹೊರಗಿನ ಕೊಂಡಸಕೋಪ್ಪ, ಸುವರ್ಣ ಗಾರ್ಡನ್ ಬಳಿಯ ಟೆಂಟ್‌ನಲ್ಲಿ ಹೋರಾಟ ನಡೆಯಲಿದೆ. ಕಾರ್ಮಿಕರ ವಿವಿಧ ಬೇಡಿಕೆಗೆ ಒತ್ತಾಯಿಸಿ ಆಲ್ ಇಂಡಿಯಾ ಟ್ರೇಡ್ ಯೂನಿಯನ್ ಕಾಂಗ್ರೆಸ್, ಸ್ವಾತಂತ್ರ‍್ಯ ಯೋಧರ ಉತ್ತರಾಧಿಕಾರಿ ಸದಸ್ಯರಿಗೆ ಸರ್ಕಾರಿ ನೌಕರಿ ಸೇರಿ ವಿವಿಧ ಬೇಡಿಕೆಗೆ ಒತ್ತಾಯಿಸಿ ಅಖಿಲ ಕರ್ನಾಟಕ ಸ್ವಾತಂತ್ರ‍್ಯ ಯೋಧರ ಉತ್ತರಾಧಿಕಾರಿಗಳ ಸಂಘ, ಒಳ ಮೀಸಲಾತಿ, ಜಾತಿ ಗಣತಿ ಕೂಡಲೆ ಜಾರಿಗೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಹೋರಾಟ ನಡೆಯಲಿದೆ.

    ಪಂಚಮಸಾಲಿ ಮೀಸಲು ಹೋರಾಟದಲ್ಲಿ ನಡೆದ ಲಾಠಿಚಾರ್ಜ್‌ನಿಂದಾಗಿ ಹಲವರು ಗಾಯಗೊಂಡಿದ್ದರು. ಸದ್ಯ ಗಾಯಳುಗಳು ಬೆಳಗಾವಿ ಸಿವಿಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಬಿಜೆಪಿ ನಾಯಕರು ಇಂದು ಗಾಯಾಳುಗಳ ಆರೋಗ್ಯ ವಿಚಾರಿಣೆ ನಡೆಸಲಿದ್ದಾರೆ. ಬಿಜೆಪಿ ರಾಜಾಧ್ಯಕ್ಷ ಬಿವೈ ವಿಜಯೇಂದ್ರ, ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ, ಅರವಿಂದ ಬೆಲ್ಲದ್, ಸಿ.ಸಿ ಪಾಟೀಲ್ ಸೇರಿದಂತೆ ಇನ್ನಿತರರು ಭೇಟಿ ನೀಡಲಿದ್ದಾರೆ.

    ಬಿಜೆಪಿಯಿಂದ ಲಾಠಿಚಾರ್ಜ್ ಖಂಡಿಸಿ ಪ್ರತಿಭಟನೆ:
    ಪಂಚಮಸಾಲಿ ಹೋರಾಟದಲ್ಲಿ ನಡೆದ ಲಾಠಿಚಾರ್ಜ್ ಖಂಡಿಸಿ ಇಂದು ಬಿಜೆಪಿ ಸುವರ್ಣಸೌಧದ ಅಂಬೇಡ್ಕರ್ ಪ್ರತಿಮೆ ಎದುರು ಪ್ರತಿಭಟನೆ ನಡೆಸಲಿದೆ. ಬಿವೈ ವಿಜಯೇಂದ್ರ, ಅಶೋಕ್, ಛಲವಾದಿ ನಾರಾಯಣಸ್ವಾಮಿ ಮುಂದಾಳತ್ವದಲ್ಲಿ ಪ್ರತಿಭಟನೆ ನಡೆಯಲಿದೆ. ಬಿಜೆಪಿಯ ಶಾಸಕರು, ಪರಿಷತ್ ಸದಸ್ಯರು ಈ ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ.ಇದನ್ನೂ ಓದಿ: ಮರುಡೇಶ್ವರದಲ್ಲಿ ವಿದ್ಯಾರ್ಥಿನಿಯರ ಸಾವು ಕೇಸ್: ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ

  • 2028ಕ್ಕೆ ನಮಗೆ ಬೇಕಾದ ಸರ್ಕಾರ ತಂದು ಮೀಸಲಾತಿ ಪಡೆಯುತ್ತೇವೆ: ಜಯ ಮೃತ್ಯುಂಜಯ ಸ್ವಾಮೀಜಿ

    2028ಕ್ಕೆ ನಮಗೆ ಬೇಕಾದ ಸರ್ಕಾರ ತಂದು ಮೀಸಲಾತಿ ಪಡೆಯುತ್ತೇವೆ: ಜಯ ಮೃತ್ಯುಂಜಯ ಸ್ವಾಮೀಜಿ

    – ಲಾಠಿ ಚಾರ್ಜ್‌ ವೇಳೆ 12 ಮಂದಿ ಪೊಲೀಸರು, 6 ಹೋರಾಟಗಾರರಿಗೆ ಗಾಯ
    – ಇದು ಲಿಂಗಾಯತರ ಮೇಲೆ ಲಾಠಿ ಚಾರ್ಜ್‌ ಮಾಡಿದ ಏಕೈಕ ಸರ್ಕಾರ ಎಂದು ಆರೋಪ

    ಬೆಳಗಾವಿ: ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲು ಮುಂದಾಗಿದ್ದ ಪಂಚಮಸಾಲಿ ಹೋರಾಟ ಹಿಂಸಾಚಾರಕ್ಕೆ ತಿರುಗಿದ್ದು ಪ್ರತಿಭಟನಾಕಾರರ (Protester) ಮೇಲೆ ಪೊಲೀಸರು ಲಾಠಿ ಚಾರ್ಜ್‌ ಮಾಡಿದ್ದಾರೆ. ಈ ವೇಳೆ 12 ಮಂದಿ ಪೊಲೀಸರು ಹಾಗೂ 6 ಮಂದಿ ಹೋರಾಟಗಾರರಿಗೆ ಗಾಯಗಳಾಗಿವೆ. ಗಾಯಾಳುಗಳಿಗೆ ಬೆಳಗಾವಿ (Belagavi) ಬಿಮ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

    ಇನ್ನೂ ಪೊಲೀಸರ ಲಾಠಿ ಚಾರ್ಜ್‌ ಕುರಿತು ಬೆಳಗಾವಿ ಚನ್ನಮ್ಮ ವೃತ್ತದಲ್ಲಿ ಮಾಧ್ಯಮಗಳೊಂದಿಗೆ ಬಸವಜಯ ಮೃತ್ಯುಂಜಯ ಸ್ವಾಮೀಜಿ (Basava Jaya Mruthyunjaya Swamiji) ಮಾತನಾಡಿದರು. 2028ಕ್ಕೆ ನಮಗೆ ಬೇಕಾದ ಸರ್ಕಾರ ತಂದು ಮೀಸಲಾತಿ ಪಡೆಯುತ್ತೇವೆ ಎಂದು ಹೇಳಿದರು. ಇದನ್ನೂ ಓದಿ: ಹೈಟೆಕ್‌ ಜಿಮ್‌, ಸ್ಪಾ – ಕೇಜ್ರಿವಾಲ್ ಮನೆ ಭ್ರಷ್ಟಾಚಾರದ ಮ್ಯೂಸಿಯಂ; ವೀಡಿಯೋ ಸಹಿತ ಬಿಜೆಪಿ ಆರೋಪ

    ಸಿಎಂ ಮೇಲೆ ಅನುಮಾನ
    ಪಂಚಮಸಾಲಿ ಹೋರಾಟ ಶಾಂತಿಯುತವಾಗಿತ್ತು, ಸ್ಥಳಕ್ಕೆ ಸಿಎಂ ಬರಬೇಕು ಅಂತಾ ಆಗ್ರಹ ಇತ್ತು. ಆದ್ರೆ ಸ್ಥಳಕ್ಕೆ ಬಂದ ಸಚಿವರ ಮಾತು ಸಮಾಧಾನ ತರಲಿಲ್ಲ. ಹಾಗಾಗಿ ನಾವು ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹೋರಟಿದ್ವಿ. ಆದ್ರೆ ಅಲ್ಲಿದ್ದ ಎಡಿಜಿಪಿ, ಕಮಿಷನರ್ ಕುತಂತ್ರದಿಂದ ಲಾಠಿ ಚಾರ್ಜ್‌ ಮಾಡಿದರು. ಲಾಠಿ ಚಾರ್ಜ್‌ನಿಂದ ಬಹಳಷ್ಟು ಜನರಿಗೆ ಕೈಕಾಲು ಮುರಿದಿದೆ. ಮುಖ್ಯಮಂತ್ರಿಗಳೇ ಹೇಳಿ ಇದನ್ನು ಮಾಡಿಸಿದ್ದಾರಾ ಅನ್ನೋ ಅನುಮಾನ ಇದೆ ಎಂದು ಕಳವಳ ವ್ಯಕ್ತಪಡಿಸಿದರು.

    ಇದು ಲಿಂಗಾಯತರ ಮೇಲೆ ಹಲ್ಲೆ ಮಾಡಿದ ಏಕೈಕ ಸರ್ಕಾರ. ಅವರ ಪಿತೂರಿ ನೋಡಿದ್ರೇ ಗೋಲಿಬಾರ್ ಮಾಡ್ತಿದ್ರೂ ಅನ್ಸತ್ತೆ. ಲಿಂಗಾಯತರಿಗೆ ಮೀಸಲಾತಿ ಕೊಡಲ್ಲ ಅಂತಾ ಇವತ್ತೇ ಹೇಳಲಿ, 2028ಕ್ಕೆ ನಮಗೆ ಬೇಕಾದ ಸರ್ಕಾರ ತಂದು ಮೀಸಲಾತಿ ಪಡೆಯುತ್ತೇವೆ ಎಂದರಲ್ಲದೇ ಗುರುವಾರ (ಡಿ.12) ರಾಜ್ಯದ ಜನರು ನಿಮ್ಮ ಹಳ್ಳಿ, ತಾಲೂಕು, ಜಿಲ್ಲಾ ರಸ್ತೆ ಬಂದ್ ಮಾಡಿ ಹೋರಾಟ ಮಾಡಿ ಎಂದು ಕರೆ ನೀಡಿದರು. ಇದನ್ನೂ ಓದಿ: ರಾಜ್‌ಕುಮಾರ್ ಕಿಡ್ನಾಪ್ ವೇಳೆ ಸ್ಯಾಟ್‌ಲೈಟ್ ಫೋನ್‌ನಿಂದ ವೀರಪ್ಪನ್ ಜೊತೆ ಮಾತನಾಡಿದ್ದ ಎಸ್‌ಎಂಕೆ

    ಹೋರಾಟಗಾರರ ಮೇಲೆ ಲಾಠಿ ಚಾರ್ಜ್‌ ಮಾಡಿಸಿದ ಎಡಿಜಿಪಿ ಮತ್ತು ಕಮಿಷನರ್ ಅವರನ್ನ ಕೂಡಲೇ ಸಸ್ಪೆಂಡ್ ಮಾಡಬೇಕು. ಗಾಯಗೊಂಡವರನ್ನ ಭೇಟಿಯಾಗಿ ಅವರ ಚಿಕಿತ್ಸೆ ವೆಚ್ಚ ಭರಿಸುತ್ತೇವೆ. ನಿಮಗೆ ಅನ್ಯಾಯ ಮಾಡಿ ದೌರ್ಜನ್ಯ ಮಾಡಿದ್ದಕ್ಕೆ ತಕ್ಕ ಉತ್ತರ ಕೊಡ್ತೇವಿ. ಮುಂದಿನ ಹೋರಾಟವನ್ನ ಪ್ರಕಟ ಮಾಡುತ್ತೇವೆ ಎಂದು ಎಚ್ಚರಿಸಿದರು. ಇದನ್ನೂ ಓದಿ: ರಾಜ್ಯದ ರಾಜಕಾರಣದಲ್ಲಿ ಬದಲಾವಣೆ ತಂದವರು ಎಸ್‌ಎಂಕೆ: ಅಭಿಷೇಕ್ ಅಂಬರೀಶ್

  • ಒಡೆದ ಮನೆಯಾಯ್ತು ಪಂಚಮಸಾಲಿ ಮೀಸಲಾತಿ ಹೋರಾಟ – ಯತ್ನಾಳ್‌, ಶ್ರೀಗಳ ವಿರುದ್ಧ ಕಾಶಪ್ಪನವರ್ ಕಿಡಿ

    ಒಡೆದ ಮನೆಯಾಯ್ತು ಪಂಚಮಸಾಲಿ ಮೀಸಲಾತಿ ಹೋರಾಟ – ಯತ್ನಾಳ್‌, ಶ್ರೀಗಳ ವಿರುದ್ಧ ಕಾಶಪ್ಪನವರ್ ಕಿಡಿ

    ಬಾಗಲಕೋಟೆ: ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜದ 2ಎ ಮೀಸಲಾತಿ ಹೋರಾಟದಲ್ಲಿ (Panchamasali Lingayats’ Quota Demand) ಈಗ ಬಿರುಕು ಮೂಡಿದೆ. ಪಂಚಮಸಾಲಿ ಪೀಠದ ಶ್ರೀ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ (Jaya Mruthyunjaya Swamiji) ಮತ್ತು ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ (Basanagouda Patil Yatnal) ವಿರುದ್ಧ ಅಖಿಲ ಭಾರತ ಪಂಚಮಸಾಲಿ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ್‌ (Vijayanand Kashappanavar) ಕಿಡಿಕಾರಿದ್ದಲ್ಲದೇ ಪ್ರತ್ಯೇಕ ಹೋರಾಟಕ್ಕೆ ತಯಾರಿ‌ ನಡೆಸಿದ್ದಾರೆ.

    ಬಾಗಲಕೋಟೆ ಜಿಲ್ಲೆಯ ಕೂಡಲಸಂಗಮದ ಶ್ರೀ ಪಂಚಮಸಾಲಿ ಜಗದ್ಗುರು ಮಹಾಪೀಠದ ಸಭಾಭವನದಲ್ಲಿ ಪಂಚಮಸಾಲಿ ಸಮಾಜದ ರಾಜ್ಯ ಕಾರ್ಯಕಾರಿಣಿ‌ ಸಭೆ ಬಳಿಕ ಮಾತನಾಡಿದ ಅವರು, ಇಲ್ಲಿಯವರೆಗೆ ಹಿಂದುಳಿದ ಆಯೋಗದ ಸಂಪೂರ್ಣ ವರದಿ ಬಂದಿಲ್ಲ. ಸಂಪೂರ್ಣ ವರದಿ ಬಂದ ಬಳಿಕ 2ಎ ಮೀಸಲಾತಿ ಕುರಿತು ಸಭೆ ನಡೆಸಿ ಸೂಕ್ತ ತೀರ್ಮಾನ ತೆಗೆದುಕೊಳ್ಳುವ ಭರವಸೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು (CM Siddarmaiah) ನೀಡಿದರೂ ಕೂಡ ಸ್ವಾಮೀಜಿ ಬಿಜೆಪಿ ಪಕ್ಷದ ಬ್ಯಾನರ್ ಅಡಿಯಲ್ಲಿ ಹೋರಾಟ ನಡೆಸಲು ಮುಂದಾಗಿದ್ದಾರೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಬಳ್ಳಾರಿ ಸಿಸೇರಿಯನ್‌ ದುರಂತ: ಮೃತ ಮಹಿಳೆಯರ ಸಂಖ್ಯೆ ನಾಲ್ಕಕ್ಕೆ ಏರಿಕೆ

    ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುವ ಅಧಿವೇಶನದ ವೇಳೆ ಡಿ.10 ರಂದು ಟ್ರ್ಯಾಕ್ಟರ್ ಮೂಲಕ ಮುತ್ತಿಗೆ ಹಾಕಲು ಸ್ವಾಮೀಜಿ ಹಾಗೂ ಯತ್ನಾಳ್‌ ಅವರು ತಯಾರಿ‌ ನಡೆಸಿದ್ದಾರೆ. ರಾಷ್ಟ್ರೀಯ ಅಧ್ಯಕ್ಷನಾದ ನನ್ನ ಹಾಗೂ ಸಮಾಜದ ಹಿರಿಯರ ಗಮನಕ್ಕೆ ತಂದಿಲ್ಲ. ತಾವೇ ಬಿಜೆಪಿ ಪಕ್ಷದ ಬ್ಯಾನರ್ ಅಡಿಯಲ್ಲಿ ಸಭೆ ಮಾಡುತ್ತಿದ್ದಾರೆ. ಹೀಗಾಗಿ ಸ್ವಾಮೀಜಿಯವರ ನಡೆಯನ್ನು ಖಂಡಿಸುತ್ತೇನೆ ಎಂದು ತಿಳಿಸಿದರು. ಇದನ್ನೂ ಓದಿ: ನಮ್ಮ ಹೋರಾಟ ವಕ್ಫ್ ವಿರುದ್ಧ, ಯಾವುದೇ ಕುಟುಂಬದ ವಿರುದ್ಧವಲ್ಲ: ಯತ್ನಾಳ್

    2ಎ ಮೀಸಲಾತಿ ಹೋರಾಟ ಪಕ್ಷಾತೀತವಾಗಿ ಇರಬೇಕು. ಆದರೆ ಇವರ ಹೋರಾಟ ಒಂದು ಪಕ್ಷಕ್ಕೆ ಮಾತ್ರ ಸೀಮಿತವಾಗಿದೆ. ಬಸನಗೌಡ ಪಾಟೀಲ್ ಯತ್ನಾಳ್‌ ಅವರು ತಮ್ಮ ರಾಜಕೀಯ ಲಾಭಕ್ಕಾಗಿ ರಾಜ್ಯದ‌ ಪಂಚಮಸಾಲಿ ಸಮಾಜ ನನ್ನ ಬೆನ್ನ ಹಿಂದಿದೆ ಎಂದು ಹೇಳುತ್ತಿದ್ದಾರೆ. ತಾಕತ್ತು ದಮ್ಮು ಇದ್ದರೆ ಸಮಾಜದ ಹೆಸರನ್ನು ಬಳಸದೇ ವೈಯಕ್ತಿಕ ವರ್ಚಸ್ಸಿನ ಮೇಲೆ ಹೋರಾಟ ಮಾಡಲಿ ಎಂದು ಸವಾಲ್ ಎಸೆದರು.

     

    ಈ ಹಿಂದೆ ಯತ್ನಾಳ್‌ ಅವರು ನಮ್ಮ ದಿಕ್ಕು ತಪ್ಪಿಸಿ ಬೆಂಗಳೂರಿನವರೆಗೆ ಪ್ರಜ್ಞಾರಹಿತವಾಗಿ ಪಾದಯಾತ್ರೆ ಮಾಡಿದರು. ಬೆಂಗಳೂರಿನಲ್ಲಿ ಶೀಘ್ರದಲ್ಲಿಯೇ ಪಕ್ಷಾತೀತವಾಗಿ ಪಂಚಮಸಾಲಿ ಸಮಾಜದ ಮುಖಂಡರ ಸಭೆ ಕರೆದು 2ಎ ಮೀಸಲಾತಿ ಹೋರಾಟ ಮುಂದುವರೆಸುತ್ತೇವೆ. ಆದರೆ ಈ ಸಭೆಗೆ ಸ್ವಾಮೀಜಿ ಹಾಗೂ ಯತ್ನಾಳ್‌ ಅವರನ್ನು ಆಹ್ವಾನಿಸುವುದಿಲ್ಲ. ಮಾಜಿ‌ ಸಚಿವ ಮುರಗೇಶ್‌ ನಿರಾಣಿ ಅವರಿಗೆ ಆಹ್ವಾನವಿರುತ್ತದೆ ಎಂದು ಹೇಳಿದರು.

     

  • 2A ಮೀಸಲಾತಿಗಾಗಿ ಸೆ.10 ರಂದು ನಿಪ್ಪಾಣಿಯಲ್ಲಿ ಮತ್ತೆ ಹೋರಾಟ ಆರಂಭ: ಕೂಡಲಸಂಗಮ ಶ್ರೀ

    2A ಮೀಸಲಾತಿಗಾಗಿ ಸೆ.10 ರಂದು ನಿಪ್ಪಾಣಿಯಲ್ಲಿ ಮತ್ತೆ ಹೋರಾಟ ಆರಂಭ: ಕೂಡಲಸಂಗಮ ಶ್ರೀ

    ಚಿಕ್ಕೋಡಿ: 2ಎ ಮೀಸಲಾತಿಗಾಗಿ (2A Reservation) ಸೆ.10 ರಂದು ನಿಪ್ಪಾಣಿಯಲ್ಲಿ (Nippani) ಮತ್ತೆ ಹೋರಾಟ ಆರಂಭವಾಗಲಿದೆ ಎಂದು ಕೂಡಲಸಂಗಮ ಪಂಚಮಸಾಲಿ (Panchamasali) ಪೀಠದ ಪೀಠಾಧಿಪತಿ ಬಸವಜಯ ಮೃತ್ಯುಂಜಯ ಸ್ವಾಮೀಜಿ (Basava Jaya Mruthyunjaya Swamiji) ಹೇಳಿದ್ದಾರೆ.

    ಚಿಕ್ಕೋಡಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪುಣೆ-ಬೆಂಗಳೂರು (Pune-Bengaluru) ರಾಷ್ಟ್ರೀಯ ಹೆದ್ದಾರಿಯಲ್ಲಿ ಇಷ್ಟಲಿಂಗ ಪೂಜೆ ನೇರವೇರಿಸಿ ಹೋರಾಟ ಆರಂಭ ಮಾಡಲಾಗುತ್ತಿದೆ. ರಾಜ್ಯಾದ್ಯಂತ ಎಲ್ಲ ಜಿಲ್ಲೆಗಳಲ್ಲಿ ಇಷ್ಟಲಿಂಗ ಪೂಜೆ ಮಾಡುವ ಮೂಲಕ ಸರ್ಕಾರದ ಗಮನ ಸೆಳೆಯಲಾಗುವುದು ಎಂದರು. ಇದನ್ನೂ ಓದಿ: ಭೂಮಿ ನಿರ್ನಾಮ ಹಂತ ತಲುಪಿದ್ರೆ ಮುಂದೇನು?

     

    ಸೆ.10 ರಂದು ನಿಪ್ಪಾಣಿಯಲ್ಲಿ ಬಹಿರಂಗ ಸಭೆ ನಡೆಸಲಾಗುವುದು. ಬಳಿಕ ರಾಷ್ಟ್ರೀಯ ಹೆದ್ದಾರಿಗೆ ಪಾದಯಾತ್ರೆ ಮೂಲಕ ತೆರಳಿ ಇಷ್ಟಲಿಂಗ ಪೂಜೆ ಮಾಡಲಾಗುವುದು. ಲಿಂಗಾಯತ ಸಮುದಾಯಕ್ಕೆ (Lingayat Community) 2ಎ ಮೀಸಲಾತಿ ಸಿಗಬೇಕು. ಕೇಂದ್ರ ಸರ್ಕಾರವು ಒಬಿಸಿ ಪಟ್ಟಿಯಲ್ಲಿ (OBC List) ಸೇರ್ಪಡೆ ಮಾಡುವಂತೆ ಒತ್ತಾಯ ಮಾಡಲಾಗುತ್ತದೆ. ಸೆ.10 ರಂದು ವೀರಶೈವ ಲಿಂಗಾಯತ ಸಮುದಾಯವರು ಹೋರಾಟದಲ್ಲಿ ಪಾಲ್ಗೊಳ್ಳಬೇಕೆಂದು ಶ್ರೀಗಳು ಮನವಿ ಮಾಡಿದ್ದಾರೆ.


    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ತಾಯಿ ಮೇಲೆ ಆಣೆ ಮಾಡಿ ಸಿಎಂ ಕೊಟ್ಟ ಮಾತು ತಪ್ಪಿದ್ರು – ಬಸವಜಯ ಮೃತ್ಯುಂಜಯ ಸ್ವಾಮೀಜಿ ಬೇಸರ

    ತಾಯಿ ಮೇಲೆ ಆಣೆ ಮಾಡಿ ಸಿಎಂ ಕೊಟ್ಟ ಮಾತು ತಪ್ಪಿದ್ರು – ಬಸವಜಯ ಮೃತ್ಯುಂಜಯ ಸ್ವಾಮೀಜಿ ಬೇಸರ

    ಹಾವೇರಿ: ಪಂಚಮಸಾಲಿ (Panchamasali) ಸಮುದಾಯಕ್ಕೆ 2ಎ ಮೀಸಲಾತಿ (2A Reservation) ಕಲ್ಪಿಸುವ ವಿಚಾರದಲ್ಲಿ ತಾಯಿ ಮೇಲೆ ಆಣೆ ಮಾಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಕೊಟ್ಟ ಮಾತು ತಪ್ಪಿದ್ದಾರೆ ಎಂದು ಬಸವಜಯ ಮೃತ್ಯುಂಜಯ ಸ್ವಾಮೀಜಿ (Basavajaya Mrutyunjaya Swamiji) ಬೇಸರ ವ್ಯಕ್ತಪಡಿಸಿದ್ದಾರೆ.

    ಕಳೆದ ಅಧಿವೇಶನದಲ್ಲಿ ನಮಗೆ ಸಿಎಂ ಮಾತು ಕೊಟ್ಟಿದ್ದರು. ತಾಯಿಯ ಮೇಲೆ ಪ್ರಮಾಣ ಮಾಡಿ ಡಿ.29ಕ್ಕೆ 2A ಮೀಸಲಾತಿ ನೀಡುತ್ತೇವೆಂದು ಹೇಳಿದ್ದರು. ಆದರೆ 2C, 2D ಹೊಸ ಪ್ರವರ್ಗ ರಚನೆ ಮಾಡಿ ನಮಗೆ ಘೋಷಣೆ ಮಾಡಿದ್ದಾರೆ. ನಮಗೆ 2A ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: BJP ಸರ್ಕಾರ ಇನ್ನೆರಡು ತಿಂಗಳು ಮಾತ್ರ, ಅದಕ್ಕೆ ಪ್ರತಿಮೆ ಸ್ಥಾಪನೆ ಮಾಡ್ತಿದ್ದಾರೆ- ಡಿಕೆಶಿ

    ಹಾವೇರಿ ಜಿಲ್ಲೆ ಶಿಗ್ಗಾಂವಿ ಪಟ್ಟಣದಲ್ಲಿ ಮಾತನಾಡಿದ ಅವರು, 2D ಮೀಸಲಾತಿಯಲ್ಲಿ ಏನಿದೆ. ಎಷ್ಟು ಮೀಸಲಾತಿ ಎಂಬುವುದರ ಬಗ್ಗೆ ಸ್ಪಷ್ಟನೆ ಕೊಡಲಿಲ್ಲ. ಇದು ಅಸ್ಪಷ್ಟವಾಗಿದ್ದರಿಂದ ನಾವು ಒಪ್ಪಿರಲಿಲ್ಲ. ಅಸಾಂವಿಧಾನಿಕವಾಗಿ ನಿರ್ಣಯ ತೆಗೆದುಕೊಂಡಿದ್ದರು. ನಾವು ಕೇಳಿದ್ದು 2A ಮೀಸಲಾತಿ. ಆದರೆ ಅವರು ನೀಡಿದ್ದು 2Dಯನ್ನು. ತಾಯಿಯ ಮೇಲೆ ಆಣೆ ಮಾಡಿ ಮಾತು ಕೊಟ್ಟು ತಪ್ಪಿದ್ದಾರೆ ಎಂದು ಸಿಎಂ ವಿರುದ್ಧ ಅಸಾಮಾಧಾನ ಹೊರಹಾಕಿದ್ದಾರೆ.

    ಒಂದು ದಿನದ ಸಾಂಕೇತಿಕವಾಗಿ ಸಿಎಂ ಮನೆ ಮುಂದೆ ಸತ್ಯಾಗ್ರಹ ಮಾಡ್ತಿದ್ದೇವೆ. ನಮ್ಮ ನೋವು ಏನಿದೆ ಇಂದು ಇವತ್ತು ತೋರಿಸಲಿದ್ದೇವೆ. ಮುಂದಿನ ಹೋರಾಟಕ್ಕೆ ಏನು ಮಾಡಬೇಕೆಂದು ನಿರ್ಣಯ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.

    ಹೈಕೋರ್ಟ್ ಆದೇಶದ ಕುರಿತು ಮಾತನಾಡಿದ ಅವರು, ಹೈಕೋರ್ಟ್‌ ಇದನ್ನು ನಿರಾಕರಿಸಿದೆ. ನಾವು ಕೂಡ ನಿರಾಕರಣೆ ಮಾಡಿದ್ದೇವೆ. ಎಲ್ಲೋ ಒಂದು ಕಡೆ ನಮ್ಮ ಮೀಸಲಾತಿ ಹೋರಾಟ ಹತ್ತಿಕ್ಕುವ ಪ್ರಯತ್ನ ನಡೆಯುತ್ತಿದೆ. ಹೀಗಾಗಿ ನಮಗೆ ಅನುಮಾನ ಇತ್ತು. ಈಗ ಅದು ಸತ್ಯವಾಗಿದೆ. ನಮಗೆ 2A ಮೀಸಲಾತಿಯೇ ಬೇಕು ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಒಂದೇ ಕಡೆ ನಿಂತ್ರೆ ಬಲವಿಲ್ಲ; ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಬೇಕು – ಸಿದ್ದುಗೆ ರಾಜಕೀಯ ಭವಿಷ್ಯ ನುಡಿದ ಮನೆ ದೇವರು

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಸಿಎಂ ಮನೆ ಮುಂದೆಯೇ ನಾವೆಲ್ಲರೂ ಸಂಕ್ರಾಂತಿ ಆಚರಿಸುತ್ತೇವೆ – ಬಸವಜಯ ಮೃತ್ಯುಂಜಯ ಸ್ವಾಮೀಜಿ

    ಸಿಎಂ ಮನೆ ಮುಂದೆಯೇ ನಾವೆಲ್ಲರೂ ಸಂಕ್ರಾಂತಿ ಆಚರಿಸುತ್ತೇವೆ – ಬಸವಜಯ ಮೃತ್ಯುಂಜಯ ಸ್ವಾಮೀಜಿ

    ಹಾವೇರಿ: ಪಂಚಮಸಾಲಿ ಸಮುದಾಯಕ್ಕೆ (Panchamasali) ಮೀಸಲಾತಿ (Reservation) ಸಂಬಂಧ ಜ.12ರ ಒಳಗೆ ಗೆಜೆಟ್‌ ಅಥವಾ ಆದೇಶ ಹೊರಡಿಸದಿದ್ದರೆ ಮತ್ತೆ ಹೋರಾಟ ನಡೆಸುತ್ತೇವೆ. ಸಿಎಂ ಮನೆ ಮುಂದೆಯೇ ಸಂಕ್ರಾಂತಿ ಆಚರಿಸಿ ಪ್ರತಿಭಟಿಸುತ್ತೇವೆ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ (BasavajayaMrutyunjayaSwamiji) ಎಚ್ಚರಿಕೆ ನೀಡಿದ್ದಾರೆ.

    ಹಾವೇರಿಯಲ್ಲಿ (Haveri) ಮಾತನಾಡಿದ ಅವರು, 2D ಮತ್ತು 2Cಗೆ ತಾತ್ವಿಕವಾಗಿ ಒಪ್ಪಿಗೆ ಸೂಚಿಸಿದ್ದೇವೆ ಎಂದು ಸರ್ಕಾರ ಹೇಳಿತು. ಆಗ ಜನರಿಗೆ ನಾವೇನು ಉತ್ತರ ಕೊಡಬೇಕು ಎಂದು ಸುಮ್ಮನೆ ಕುಳಿತೆವು. ನಾವು ಕಾನೂನು ತಜ್ಞರನ್ನು ಕರೆದು ಚರ್ಚಿಸಿದೆವು. 110ಕ್ಕೂ ಹೆಚ್ಚು ವಕೀಲರನ್ನು ಸೇರಿಸಿ ಚರ್ಚಿಸಿದೆವು. ನಮ್ಮ ಕಾನೂನು ತಜ್ಞರು ಇದನ್ನು ತಿರಸ್ಕರಿಸಲು ಹೇಳಿದ್ದಾರೆ. ಜ.12ರ ಒಳಗಾಗಿ ಗೆಜೆಟ್ ಅಥವಾ ಆದೇಶ ಹೊರಡಿಸದಿದ್ದರೆ ಮತ್ತೆ ಹೋರಾಟ ಶುರುವಾಗುತ್ತದೆ. 13 ರಂದು ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಮನೆಯ ಮುಂದೆ ಧರಣಿ ಸತ್ಯಾಗ್ರಹ ಮಾಡುತ್ತೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಒಳ ಮೀಸಲಾತಿ ಚರ್ಚೆ ಬಳಿಕ ಸರ್ಕಾರದ ನಿರ್ಧಾರ ಪ್ರಕಟ: ಮಾಧುಸ್ವಾಮಿ

    ಡಿ.22 ರಂದು ಸಿಎಂ ನಮ್ಮ ಸಮಾಜದ ವಿರಾಟ ರೂಪದ ಪ್ರತಿಭಟನೆ ನೋಡಿ ಹೋರಾಟ ಶಾಂತಗೊಳಿಸಿದರು. ಆವತ್ತು ಬೆಳಗ್ಗೆ ಆಯೋಗದ ವರದಿ ಪಡೆದುಕೊಂಡರು. ಮಧ್ಯಾಹ್ನ ಕ್ಯಾಬಿನೆಟ್ ಸಭೆಯಲ್ಲಿ ಘೋಷಣೆ ಮಾಡುತ್ತಾರೆ ಎಂದು ಕಾದಿದ್ದೆವು. ಕೊಟ್ಟರೆ ಅಭಿನಂದನೆ, ಕೊಡದಿದ್ದರೆ ಮಹಾಮುತ್ತಿಗೆಗೆ ಸಿದ್ಧತೆ ಮಾಡಿಕೊಂಡು ಬಂದಿದ್ದೆವು. ನಮ್ಮ ಎಲ್ಲ ನಾಯಕರನ್ನು ಕರೆದು ಒಂದೆರಡು ಗಂಟೆಗಳ ಕಾಲ ಚರ್ಚಿಸಿದರು. ನಮ್ಮ ಸಮಾಜಕ್ಕೆ ಸಿಹಿ ಸುದ್ದಿ ಕೊಡುತ್ತಾರೆ ಎಂದು ಕಾದಿದ್ದೆವು. ಸಿಎಂ ಸನ್ಮಾನಕ್ಕೆ ಸಿದ್ಧತೆ ಮಾಡಿಕೊಂಡಿದ್ದೆವು ಎಂದು ಮಾತನಾಡಿದ್ದಾರೆ.

    ಸಿಎಂ ಕೊನೆಯ ಅಸ್ತ್ರವಾಗಿ ತಾಯಿಯ ಮೇಲೆ ಆಣೆ ಮಾಡಿ ಮಾತು ಕೊಟ್ಟರು. ತಾಯಿ ಅಂದರೆ ನಮಗೆ ದೇವರ ಸಮಾನ. ತಾಯಿಯ ಮೇಲೆ ಆಣೆ ಮಾಡಿದ್ದಕ್ಕೆ ಅವರ ಮೇಲೆ ಭರವಸೆ ಇಟ್ಟು ಕಾಯ್ತೀವಿ ಎಂದು ಹೊರಬಂದೆವು‌. ಒಂದು ವಾರ ಕಾಯೋಣ ಎಂದು ಕಾದೆವು. ಹೋರಾಟಕ್ಕೆ ಬಂದ ಜನರ ಮನಸ್ಸಿಗೆ ಭಾರವಾದರೂ ನಮ್ಮ ಮನವಿಗೆ ವಾಪಸ್ ಮನೆಗಳಿಗೆ ತೆರಳಿದರು. ಸಚಿವ ಸಂಪುಟದ ಅಸ್ಪಷ್ಟ ನಿಲುವು ಬಂದು ಗೊಂದಲವಾಯಿತು ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಕಾಲದಲ್ಲೇ ಸ್ಯಾಂಟ್ರೋ ರವಿ ಜೈಲಿನಿಂದ ಹೊರಬಂದಿದ್ದಾನೆ: ಬೊಮ್ಮಾಯಿ

    ಚೆನ್ನಮ್ಮ ಮೂರ್ತಿಯಿಂದ ಸಿಎಂ ಮನೆಯವರೆಗೆ ಹೋರಾಟ ಮಾಡುತ್ತೇವೆ. ಸಿಎಂ ಅವರ ಜೊತೆಗಿನ ಚರ್ಚೆ, ಮಾತು ಕೊಟ್ಟು ತಪ್ಪಿರುವ ಬಗ್ಗೆಯೂ ಚರ್ಚೆ ಆಗಲಿದೆ. ಹೋರಾಟಕ್ಕೆ ನ್ಯಾಯ ಪಡೆದುಕೊಂಡು ಸಂಕ್ರಾಂತಿಯ (Sankranti) ಎಳ್ಳು-ಬೆಲ್ಲ ತಿನ್ನೋಣ. ಮೀಸಲಾತಿಯ ಆದೇಶ ಪ್ರತಿ ನಮ್ಮ ಕೈಗೆ ಸಿಗೋವರೆಗೂ ನಾವು ಹೋರಾಡುತ್ತೇವೆ. ಸಿಎಂ ಮನೆ ಮುಂದೆಯೇ ನಾವೆಲ್ಲರೂ ಸಂಕ್ರಾಂತಿ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • 2ಎ ಮೀಸಲಾತಿ ನೀಡಲು ಕಾನೂನಿನ ಅಡೆತಡೆ ಇದೆ: ಸಿ.ಸಿ. ಪಾಟೀಲ್

    2ಎ ಮೀಸಲಾತಿ ನೀಡಲು ಕಾನೂನಿನ ಅಡೆತಡೆ ಇದೆ: ಸಿ.ಸಿ. ಪಾಟೀಲ್

    ಹಾವೇರಿ: ಪಂಚಮಸಾಲಿಗಳಿಗೆ ಮಿಸಲಾತಿ ಕೊಡಲು ಜಾಗ ಖಾಲಿ ಇಲ್ಲ. ಮೀಸಲಾತಿ ಕೊಡಲು ಕಾನೂನಿನ ಅಡೆತಡೆ ಇದೆ ಎಂದು ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ್ ತಿಳಿಸಿದರು.

    ಹಾವೇರಿ ಜಿಲ್ಲೆ ಶಿಗ್ಗಾಂವಿ ಪಟ್ಟಣದ ಖಾಸಗಿ ಹೊಟೆಲ್‍ನಲ್ಲಿ ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಜೊತೆ ಸಂಧಾನ ಸಭೆ ನಡೆಸಿದ ನಂತರ ಮಾತನಾಡಿದ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಮಾಜಕ್ಕೆ ಮೀಸಲಾತಿ ಕೊಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದಾರೆ. ತರಾತುರಿಯಲ್ಲಿ ಮೀಸಲಾತಿ ಘೋಷಣೆ ಮಾಡಲು ಬರುವುದಿಲ್ಲ. ದೇಶದ ಎರಡು ರಾಜ್ಯಗಳಲ್ಲಿ ತರಾತುರಿಯಲ್ಲಿ ಮೀಸಲಾತಿ ಘೋಷಣೆ ಮಾಡಿದ್ದರ ಪರಿಸ್ಥಿತಿ ಏನಾಗಿದೆ ನಿಮಗೆಲ್ಲ ಗೊತ್ತಿದೆ ಎಂದು ಹೇಳಿದರು. ಇದನ್ನೂ ಓದಿ: ಬಿಜೆಪಿ ಮುಖಂಡನ ಮನೆಗೆ ನುಗ್ಗಿದ ಖದೀಮರು – ವೃದ್ಧೆ ಹಣೆಗೆ ಗನ್ ಇಟ್ಟ ದುಷ್ಕರ್ಮಿ

    ಸಿಎಂ ಬೊಮ್ಮಾಯಿ ಅವರು ಸಮಾಜದ ಪರವಾಗಿದ್ದಾರೆ. ಸಿಎಂ ಮೇಲೆ ಸಂವಿಧಾನಾತ್ಮಕವಾಗಿ ಜವಾಬ್ದಾರಿ ಇದೆ. ಮೀಸಲಾತಿ ಕೊಡುತ್ತಾರೆ. ಹೋರಾಟ ಮಾಡೋದು ಬೇಡ ಅಂತಾ ಸ್ವಾಮೀಜಿಯವರ ಜೊತೆ ಚರ್ಚೆ ಮಾಡಿದ್ದೇನೆ. ಹೋರಾಟ ಕೈ ಬಿಡುವಂತೆ ಸ್ವಾಮೀಜಿಯವರಿಗೆ ಮನವಿ ಮಾಡಿದ್ದೇನೆ. ಸ್ವಾಮೀಜಿಯವರು ಇಂದಿನ ಹೋರಾಟ ಮುಂದೂಡುವುದಾಗಿ ಹೇಳಿದ್ದಾರೆ. ಸಾಂಕೇತಿಕವಾಗಿ ಕಿತ್ತೂರು ಚೆನ್ನಮ್ಮಗೆ ಮಾಲೆ ಹಾಕಿದ್ದಾರೆ ಎಂದರು. ಇದನ್ನೂ ಓದಿ: ಆಗಸ್ಟ್‌ 26ಕ್ಕೆ ಮಡಿಕೇರಿ ಚಲೋ ಇಲ್ಲ: ಸಿದ್ದರಾಮಯ್ಯ ಸ್ಪಷ್ಟನೆ

    Live Tv
    [brid partner=56869869 player=32851 video=960834 autoplay=true]

  • ಸರ್ಕಾರ ಕಾಲಾವಕಾಶ ಕೇಳಿದೆ – ಸಿಎಂ ನಿವಾಸದೆದುರಿನ ಧರಣಿ ಸತ್ಯಾಗ್ರಹವನ್ನು ಮುಂದೂಡಲಾಗಿದೆ: ಜಯಮೃತ್ಯುಂಜಯ ಸ್ವಾಮೀಜಿ

    ಸರ್ಕಾರ ಕಾಲಾವಕಾಶ ಕೇಳಿದೆ – ಸಿಎಂ ನಿವಾಸದೆದುರಿನ ಧರಣಿ ಸತ್ಯಾಗ್ರಹವನ್ನು ಮುಂದೂಡಲಾಗಿದೆ: ಜಯಮೃತ್ಯುಂಜಯ ಸ್ವಾಮೀಜಿ

    ಹಾವೇರಿ: ಪಂಚಮಸಾಲಿ ಮೀಸಲಾತಿ ವಿಚಾರವಾಗಿ ಸರ್ಕಾರ ಮೂರು ಬಾರಿ ಮಾತು ಕೊಟ್ಟು ತಪ್ಪಿತ್ತು. ಮಾತು ತಪ್ಪಿದ್ದಕ್ಕೆ ಜೂನ್ 27 ರಂದು ಸಿಎಂ ಬಸವರಾಜ ಬೊಮ್ಮಾಯಿಯವರ ನಿವಾಸದ ಮುಂದೆ ಒಂದು ದಿನದ ಧರಣಿ ಸತ್ಯಾಗ್ರಹ ಮಾಡಲು ಉದ್ದೇಶಿಸಲಾಗಿತ್ತು. ಆದರೆ ಸರ್ಕಾರ ಎರಡು ಬಾರಿ ನಮ್ಮ ಜೊತೆ ಮಾತುಕತೆ ನಡೆಸಿದೆ. ಹೋರಾಟದ ಕಾವು ಸರ್ಕಾರಕ್ಕೆ ಮುಟ್ಟಿದ್ದರಿಂದ ಆಯೋಗದವರನ್ನು ಅಧ್ಯಯನಕ್ಕೆ ಕಳುಹಿಸಿದೆ. ಸರ್ಕಾರ ಎರಡು ತಿಂಗಳ ಕಾಲವಕಾಶ ಕೇಳಿದೆ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಜಗದ್ಗುರು ಬಸವ ಜಯ ಮೃತ್ಯುಂಜಯ ಹೇಳಿದ್ದಾರೆ.

    ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎರಡು ತಿಂಗಳಲ್ಲಿ ಸಮಾಜಕ್ಕೆ ಸಿಹಿ ಸುದ್ದಿ ಕೊಡುವುದಾಗಿ ಬಸವರಾಜ ಬೊಮ್ಮಾಯಿಯವರು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‍ರಿಗೆ ನೀಡಿದ್ದಾರೆ. ಎರಡು ತಿಂಗಳು ಕಾಲವಕಾಶ ಕೇಳಿದ್ದರಿಂದ ಸಿಎಂ ನಿವಾಸದ ಮುಂದಿನ ಒಂದು ದಿನದ ಧರಣಿ ಸತ್ಯಾಗ್ರಹವನ್ನು ಮುಂದೂಡಲಾಗಿದೆ. ಆಗಸ್ಟ್ 22ರ ಒಳಗಾಗಿ ಸರ್ಕಾರ ಸಮಾಜಕ್ಕೆ ಸಿಹಿ ಸುದ್ದಿ ಕೊಡುವುದಾಗಿ ಹೇಳಿದೆ. ಬಸವರಾಜ ಬೊಮ್ಮಾಯಿಯವರ ಮೇಲೆ ವಿಶ್ವಾಸವಿದೆ. ಸಮಾಜಕ್ಕೆ ನ್ಯಾಯ ಕೊಡುವ ಭರವಸೆ ಇದೆ. ಆಗಸ್ಟ್ 22ಕ್ಕೆ ಬಸವರಾಜ ಬೊಮ್ಮಾಯಿಯವರಿಗೆ ಶಿಗ್ಗಾಂವಿಯಲ್ಲಿ ಸನ್ಮಾನ ಸಮಾರಂಭ ಮಾಡಲಿದ್ದೇವೆ. ಬೊಮ್ಮಾಯಿಯವರಿಗೆ ರಾಜಕೀಯ ಅನಿವಾರ್ಯತೆ ಮತ್ತು ಸಮಾಜಕ್ಕೆ ಕೊಟ್ಟ ಮಾತು ಉಳಿಸಿಕೊಳ್ಳಲು ನ್ಯಾಯ ಕೊಡುತ್ತಾರೆ ಎಂಬ ವಿಶ್ವಾಸವಿದೆ. ಸಿಎಂ ಭರವಸೆ ಕೊಟ್ಟಿದ್ದಾರೆ ಅಂತಾ ನಾವು ಮೈಮರೆತು ಕೂರುವುದು ಬೇಡ. ಆಗಸ್ಟ್ 22ರವರೆಗೆ ನಾವೆಲ್ಲ ಸಮಾಜದ ಸಂಘಟನೆ ಮಾಡೋಣ ಎಂದು ಕರೆ ನೀಡಿದರು. ಇದನ್ನೂ ಓದಿ: ವಿಷಕಂಟನಂತೆ ಮೋದಿ 19 ವರ್ಷಗಳಿಂದ ಗುಜರಾತ್ ಗಲಭೆ ನೋವನ್ನು ಸಹಿಸಿಕೊಂಡಿದ್ದಾರೆ: ಅಮಿತ್ ಶಾ

    ಪ್ರತಿ ಜಿಲ್ಲಾ ಪಂಚಾಯತ್ ಕ್ಷೇತ್ರದಲ್ಲಿ ಸಮಾಜ ಬಾಂಧವರ ಸಭೆ ಮಾಡಿ ಸಂಘಟನೆ ಮಾಡುತ್ತೇವೆ. ಪಂಚಮಸಾಲಿಗಳು ನಾವು ಮೂಲತಃ ಲಿಂಗಾಯಿತರು. ಒಳಪಂಗಡಗಳ ಆಧಾರದ ಮೇಲೆ ನಮಗೆ ಮೀಸಲಾತಿ ಕೇಳುತ್ತಿದ್ದೇವೆ. ಉಪಜಾತಿಗಳಿಗೆ ಸಿಗಬೇಕಾದ ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ ಮಾಡುತ್ತಿದ್ದೇವೆ. ಇದರಲ್ಲಿ ಯಾವುದೇ ರೀತಿಯ ಉಪಜಾತಿ ಪಾಲಿಟಿಕ್ಸ್ ಇಲ್ಲ. ನಮ್ಮ ಜನಾಂಗಕ್ಕೆ ನನ್ನ ಮೊದಲ ಆದ್ಯತೆ. ನಮ್ಮ ಜನಾಂಗದ ನಂತರ ಎಲ್ಲ ಶೋಷಿತ ಸಮಾಜದ ಮೇಲೆ ನನ್ನ ಅಭಿಮಾನ. ರಾಜಕಾರಣ ಬೇರೆ, ಚಳುವಳಿ ಬೇರೆ. ಯಡಿಯೂರಪ್ಪ ಅವರನ್ನು ಲಿಂಗಾಯತ ನಾಯಕರು ಅಂತಾರೆ, ಅವರ ಮೇಲೆ ಗೌರವವಿದೆ. ನಾವು ಬೆಂಗಳೂರಿನಲ್ಲಿ ಹೋರಾಟ ಮಾಡಿದ್ಮೇಲೆ ಎಲ್ಲರೂ ಲಿಂಗಾಯತರಲ್ಲೇ ಪಂಚಮಸಾಲಿಗರು ಬಹುಸಂಖ್ಯಾತರು ಅನ್ನೋದು ಗೊತ್ತಾಗಿದೆ. ಪಾದಯಾತ್ರೆ ಮಾಡಿದ್ಮೇಲೆ ನಮ್ಮ ಪಂಚಮಸಾಲಿ ಸಮಾಜದ ಮುಖಂಡರು ರಾಷ್ಟ್ರನಾಯಕರಾಗಿ ಬೆಳೆದರು. ಹೋರಾಟ ಮಾಡದಿದ್ದರೆ ಬೇರೆ ಒಳಪಂಗಡಗಳ ಮುಖಂಡರನ್ನೇ ನಾವು ನಾಯಕರೆಂದುಕೊಂಡು ಹೋಗಬೇಕಾಗಿತ್ತು. ಇದನ್ನೂ ಓದಿ: ನಾವು ಬುಡಕಟ್ಟು ಸಮುದಾಯದ ಪರ ಎಂದ ಮಾಯಾವತಿ- ಬಿಎಸ್‍ಪಿಯಿಂದ ದ್ರೌಪದಿ ಮುರ್ಮುಗೆ ಬೆಂಬಲ

    ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯ ಸ್ಥಾಪನೆ ಕುರಿತ ಸಚಿವ ಉಮೇಶ ಕತ್ತಿ ಹೇಳಿಕೆ ಕುರಿತಾಗಿ ಮಾತನಾಡಿ, ಅವರಲ್ಲಿ ನೋವಿದೆ ಮಲತಾಯಿ ಧೋರಣೆ ಆದಾಗ ಆ ನೋವು ಇರುತ್ತೆ. ಪ್ರತ್ಯೇಕ ಉತ್ತರ ಕರ್ನಾಟಕದ ಬದಲು ಕಿತ್ತೂರು ಕರ್ನಾಟಕ, ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಮುಂದಾಗಬೇಕು. ಸಮಗ್ರ ಕರ್ನಾಟಕಕ್ಕೆ ಅನೇಕರು ಹೋರಾಟ ಮಾಡಿದ್ದಾರೆ. ಉತ್ತರ ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಪ್ರತ್ಯೇಕ ಪ್ಯಾಕೇಜ್ ಘೋಷಿಸಬೇಕು ಎಂದು ಅಭಿಪ್ರಾಯಪಟ್ಟರು.

    Live Tv

  • 2ಎ ಮೀಸಲಾತಿ ನೀಡಿ, ಕೊಟ್ಟಮಾತು ಉಳಿಸಿಕೊಳ್ಳಿ ಸಿಎಂ ಬೊಮ್ಮಾಯಿ: ಬಸವಜಯ ಮೃತ್ಯುಂಜಯ ಸ್ವಾಮೀಜಿ

    2ಎ ಮೀಸಲಾತಿ ನೀಡಿ, ಕೊಟ್ಟಮಾತು ಉಳಿಸಿಕೊಳ್ಳಿ ಸಿಎಂ ಬೊಮ್ಮಾಯಿ: ಬಸವಜಯ ಮೃತ್ಯುಂಜಯ ಸ್ವಾಮೀಜಿ

    ಹಾವೇರಿ: ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಬೇಕು. ಈ ಹಿಂದೆ 712 ಕಿ.ಮೀ ಬಾಗಲಕೋಟೆಯಿಂದ ಬೆಂಗಳೂರುವರೆಗೆ ಪಾದಯಾತ್ರೆ ಮಾಡಿದ್ದೇವೆ. ನಮ್ಮ ಸಮಾಜಕ್ಕೆ ಮೀಸಲಾತಿ ಅನಿರ್ವಾತೆ ಇದೆ. ಹಿಂದಿನ ಸಿಎಂ ಯಡಿಯೂರಪ್ಪ ಅಧಿವೇಶನದಲ್ಲಿ ಮಾತು ಕೊಟ್ಟಿದ್ದರು. ಈಗ ಯಡಿಯೂರಪ್ಪ ರಾಜೀನಾಮೆ ನೀಡಿದ್ದರಿಂದ ಬಸವರಾಜ ಬೊಮ್ಮಾಯಿ ಸಿಎಂ ಆಗಿದ್ದಾರೆ. ಬಸವರಾಜ ಬೊಮ್ಮಾಯಿ ಕೊಟ್ಟಮಾತು ಉಳಿಸಿಕೊಳ್ಳಬೇಕು ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ.

    ಹಾವೇರಿಯಲ್ಲಿ ಮಾತನಾಡಿದ ಅವರು, ಬೆಳೆಗಾವಿ ಅಧಿವೇಶನದ ಅವಧಿಯಲ್ಲಿ ಬೊಮ್ಮಾಯಿ ಮೂರು ತಿಂಗಳ ಅವಕಾಶ ಕೇಳಿದ್ದರು. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ವಿಜಯಾನಂದ ಕಾಶಪ್ಪನವರ್ ಸೇರಿದಂತೆ ನಮ್ಮ ಸಮುದಾಯದ ನಾಯಕರಿಗೆ ಮೀಸಲಾತಿ ಕೊಡುತ್ತೇನೆ ಎಂದು ಮಾತು ಕೊಟ್ಟಿದ್ದಾರೆ. ಏಪ್ರಿಲ್ 24 ಅಂತಿಮ ಗಡುವು ನೀಡಿದ್ದೇವು. ಆದರೆ ಯಾವುದೇ ಪ್ರಯೋಜನ ಆಗಿಲ್ಲ. ಮೇ 23 ರಂದು ರಾಜ್ಯದ ಜಿಲ್ಲಾಧಿಕಾರಿ ಕಚೇರಿಯ ಮುಂದೆ ಹಾಗೂ ಬಸವರಾಜ ಬೊಮ್ಮಾಯಿ ನಿವಾಸದ ಮುಂದೆ ಸತ್ಯಾಗ್ರಹ ಮಾಡಲು ನಿರ್ಧಾರ ಮಾಡಲಾಗಿತ್ತು. ರಾಜ್ಯದಲ್ಲಿ ನಿರಂತರ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ 23ರಂದು ನಡೆಯುವ ಸತ್ಯಾಗ್ರಹ ಮುಂದೂಡಲಾಗಿದೆ. ಬರುವ ಜೂನ್‍ನಲ್ಲಿ ಇನ್ನೊಂದು ಸಭೆ ನಡೆಸಿ ಸತ್ಯಾಗ್ರಹವನ್ನು ಪ್ರಾರಂಭ ಮಾಡುವ ಕುರಿತಂತೆ ದಿನಾಂಕ ನಿಗದಿ ಮಾಡುತ್ತೇವೆ. ಬೊಮ್ಮಾಯಿ ಪಂಚಮಸಾಲಿ ಸಮುದಾಯದ ಬಗ್ಗೆ ನಿರ್ಲಕ್ಷ್ಯ ಮಾಡುತ್ತಿದ್ದಾರೆ ಎಂದರು.

    ಶಿಗ್ಗಾಂವಿಯಲ್ಲಿ ನಡೆದ ಪಂಚಮಸಾಲಿ ಸಮುದಾಯದ ಕಾರ್ಯಕ್ರಮದಲ್ಲಿ ಬೊಮ್ಮಾಯಿ ಕಣ್ಣೀರು ಹಾಕಿದ್ದೀರಿ. ಬಿಸಿರೊಟ್ಟಿ, ನವಣಕ್ಕಿ ಅನ್ನ ಕೊಟ್ಟಿದ್ದೀರಿ ಅಂತಾ ಹೇಳಿದ್ದೀರಿ. ಅದರ ಋಣ ತೀರಿಸಿ, ಕೊಟ್ಟ ಮಾತಿನಂತೆ ನಡೆದುಕೊಳ್ಳಿ. ಕಳೆದ ಎರಡು ತಿಂಗಳಿನಿಂದ ಬಸವರಾಜ ಬೊಮ್ಮಾಯಿ ಮೌನವಾಗಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

    ಇದೇ ವೇಳೆ ಪರೋಕ್ಷವಾಗಿ ಹರಿಹರದ ಪಂಚಮಸಾಲಿ ಸ್ವಾಮೀಜಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಸುಖದ ಸುಪ್ಪತ್ತಿಗೆಯಲ್ಲಿ ಇದ್ದಾರೆ. ಮೀಸಲಾತಿ ಸಮಾಜಕ್ಕೆ ಬೇಕು. ಸಮಾಜದ ಕಟ್ಟಕಡೆಯ ವ್ಯಕ್ತಿ ಮಾತು ಕೇಳಬೇಕು. ಮಗುವಿಗೆ ಹಸಿವಾದಾಗ ಹಾಲು ಕುಡಿಸಬೇಕು. ಆಗ ಕುಡಿಸದಿದ್ದರೆ ಮಗು ಸಾಯುತ್ತದೆ. ಸಮಾಜ ಈಗ ಮಗುವಿನಂತೆ ಮೀಸಲಾತಿ ಕೇಳುತ್ತಿದೆ. ಸರ್ಕಾರ ತಾಯಿಯಂತೆ ಮೀಸಲಾತಿ ನೀಡಬೇಕು ಇಲ್ಲದಿದ್ದರೆ ಸಮಾಜ ಸಾಯುತ್ತದೆ. ಮೀಸಲಾತಿ ನೀಡುವ ಬಗ್ಗೆ ಸ್ಪಷ್ಟವಾದ ಹೇಳಿಕೆ ನೀಡಿ. ಇಲ್ಲವಾದರೆ ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟ ಪ್ರಾರಂಭ ಆಗುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.