Tag: ಬಸವರಾಜ ರಾಯರೆಡ್ಡಿ

  • ಅನಿವಾರ್ಯವಾಗಿ ಶರಣಾಗಿದ್ದೇವೆ, ಕಳೆದ 20 ವರ್ಷಗಳಲ್ಲಿ ದಿ ಬೆಸ್ಟ್ ಸಿಎಂ ಅಂದ್ರೆ ಸಿದ್ದರಾಮಯ್ಯ: ರಾಯರೆಡ್ಡಿ

    ಅನಿವಾರ್ಯವಾಗಿ ಶರಣಾಗಿದ್ದೇವೆ, ಕಳೆದ 20 ವರ್ಷಗಳಲ್ಲಿ ದಿ ಬೆಸ್ಟ್ ಸಿಎಂ ಅಂದ್ರೆ ಸಿದ್ದರಾಮಯ್ಯ: ರಾಯರೆಡ್ಡಿ

    ಬೆಂಗಳೂರು: ಮಾಜಿ ಪ್ರಧಾನಿ ದೇವೇಗೌಡರನ್ನು ಬಿಟ್ಟರೆ ಕಳೆದ 20 ವರ್ಷಗಳಲ್ಲಿ ಸಿದ್ದರಾಮಯ್ಯ ಅವರೇ ದಿ ಬೆಸ್ಟ್ ಸಿಎಂ ಎಂದು ಮಾಜಿ ಸಚಿವ ಬಸವರಾಜ ರಾಯರೆಡ್ಡಿ ಪರೋಕ್ಷವಾಗಿ ಸಿಎಂ ಕುಮಾರಸ್ವಾಮಿಗೆ ಟಾಂಗ್ ನೀಡಿದ್ದಾರೆ.

    ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಅನಿವಾರ್ಯತೆಯಿಂದ ಜೆಡಿಎಸ್‍ಗೆ ಕಾಂಗ್ರೆಸ್ ಪಕ್ಷ ಬೆಂಬಲ ನೀಡಿದೆ. ನಮ್ಮ ಪಕ್ಷದ ಔದಾರ್ಯವನ್ನ ಸಿಎಂ ಕುಮಾರಸ್ವಾಮಿಯವರು ಅರ್ಥ ಮಾಡಿಕೊಳ್ಳಬೇಕು. ಚಿಕ್ಕಪುಟ್ಟ ವಿಷಯಗಳಿಗೆ ರಾಜೀನಾಮೆ ನೀಡುತ್ತೇನೆ ಅನ್ನೋದು ತಪ್ಪು. ಕಾಂಗ್ರೆಸ್ ಶಾಸಕರನ್ನ ಕಂಟ್ರೋಲ್ ಮಾಡಿ ಅಂತ ಹೇಳಿದ್ದು ಸರಿಯಲ್ಲ. ಸಿದ್ದರಾಮಯ್ಯ ಅವರನ್ನ ಹೊಗಳಿದರೆ ತಪ್ಪೇನು? ಸಮ್ಮಿಶ್ರ ಸರ್ಕಾರಕ್ಕಾಗಿ ಸಿದ್ದರಾಮಯ್ಯ ಅವರು ತ್ಯಾಗ ಮಾಡಿದ್ದಾರೆ. ಕಳೆದ 20 ವರ್ಷಗಳಲ್ಲಿ ಸಿದ್ದರಾಮಯ್ಯ ದಿ ಬೆಸ್ಟ್ ಸಿಎಂ. ಕುಮಾರಸ್ವಾಮಿ ಅವರಿಗೆ ಇನ್ನಷ್ಟು ಮೆಚ್ಯೂರಿಟಿ ಬರಬೇಕು ಎಂದು ಹೇಳಿದ್ದಾರೆ. ಇದನ್ನೂ ಓದಿ:ಕೈ ಶಾಸಕರು ಸಿದ್ದರಾಮಯ್ಯನವರನ್ನು ಹೊಗಳಿದರೆ ತಪ್ಪೇನು: ಪರಮೇಶ್ವರ್ ಪ್ರಶ್ನೆ

    ಸಿದ್ದರಾಮಯ್ಯ ಒಬ್ಬ ಪ್ರಶ್ನಾತೀತ, ವರ್ಣರಂಜಿತ ಸಿಎಂ. ಅವರೇ ಮತ್ತೆ ಸಿಎಂ ಆಗಲಿ ಅಂತ ನಾನು ಕೂಡ ಬಯಸುತ್ತೇನೆ. ನಾನು ನೋಡಿರುವ ಪ್ರಕಾರ ದೇವೇಗೌಡರನ್ನ ಬಿಟ್ಟರೆ ಸಿದ್ದರಾಮಯ್ಯ ಅವರೇ ಬೆಸ್ಟ್ ಸಿಎಂ. ಅನಿವಾರ್ಯವಾಗಿ ನಾವು ಜೆಡಿಎಸ್‍ಗೆ ಶರಣಾಗಿದ್ದೇವೆ ಎಂದು ಬಸವರಾಜ ರಾಯರೆಡ್ಡಿ ಸಿದ್ದರಾಮಯ್ಯ ಅವರನ್ನು ಸಮರ್ಥಿಸಿಕೊಂಡರು. ಇದನ್ನೂ ಓದಿ: ಸಿಎಂ ರಾಜೀನಾಮೆ ಹೇಳಿಕೆಗೆ ಕಾರಣವಾದ ಸಿದ್ದು ಶಿಷ್ಯರು ಹೇಳಿದ 5 ಹೇಳಿಕೆಗಳು – ವಿಡಿಯೋ ನೋಡಿ

    ಕೇಂದ್ರ ಸರ್ಕಾರ ಆರ್‍ಎಸ್‍ಎಸ್ ಹಾಗೂ ಬಿಜೆಪಿಯ ನಾಯಕರಿಗೆ ಮಾತ್ರ ಭಾರತ ರತ್ನ ನೀಡಿದೆ. ಸಚಿನ್ ತೆಂಡೂಲ್ಕರ್ ಹಾಗೂ ಪ್ರಣಬ್ ಮುಖರ್ಜಿ ಬಿಟ್ಟರೆ ಎಲ್ಲರೂ ಆರ್‍ಎಸ್‍ಎಸ್ ಗೆ ಸೇರಿದವರು. ಮೇಲ್ವರ್ಗದ ಸಾಧಕರಿಗೆ ಮಾತ್ರ ಪ್ರಶಸ್ತಿ ನೀಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಪ್ರಾದೇಶಿಕವಾರು ತಾರತಮ್ಯ ಮಾಡಿದ್ದಾರೆ. ಈಗಲೂ ಕಾಲ ಮಿಂಚಿಲ್ಲ, ನಾಲ್ಕನೇ ಭಾರತರತ್ನ ಪ್ರಶಸ್ತಿಯನ್ನು ಶ್ರೀ ಶಿವಕುಮಾರ ಸ್ವಾಮೀಜಿಗಳಿಗೆ ನೀಡಬೇಕು. ಮೋದಿ ಅವರು ಶ್ರೀಗಳನ್ನು ಹೊಗಳಿದ್ದಾರೆ. ಆದ್ರೆ ಭಾರತ ರತ್ನ ನೀಡಿ ಗೌರವಿಸಿಲ್ಲ. ಪ್ರಧಾನಿ ಅವರಿಗೆ ಶ್ರೀಗಳ ಮೇಲೆ ನಿಜವಾದ ಗೌರವ ಇದ್ದರೆ ಭಾರತ ರತ್ನ ನೀಡಲಿ ಎಂದು ಬಸವರಾಜ ರಾಯರೆಡ್ಡಿ ಆಗ್ರಹಿಸಿದರು.

    https://www.youtube.com/watch?v=OflAzK4wALY

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

  • ಕೊಪ್ಪಳ ಎಂಪಿ ಟಿಕೆಟ್‍ಗೆ ರಾಹುಲ್ ಜೊತೆ ರಾಯರೆಡ್ಡಿ ಕೈಲಾಸ ಯಾತ್ರೆ ಮಾಡಿದ್ರಾ?

    ಕೊಪ್ಪಳ ಎಂಪಿ ಟಿಕೆಟ್‍ಗೆ ರಾಹುಲ್ ಜೊತೆ ರಾಯರೆಡ್ಡಿ ಕೈಲಾಸ ಯಾತ್ರೆ ಮಾಡಿದ್ರಾ?

    ಕೊಪ್ಪಳ: ಮಾಜಿ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಅವರು, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಜೊತೆ ಪ್ರಯಾಣ ಮಾಡಿರುವುದು ಈಗ ಭಾರೀ ಚರ್ಚೆಗೆ ಗ್ರಾಸವಾಗಿದೆ.

    ಬಸವರಾಜ ರಾಯರೆಡ್ಡಿ ಅವರು ರಾಹುಲ್ ಗಾಂಧಿ ಜೊತೆಗೆ ಕೈಲಾಸನಾಥ ಪರ್ವತ ಪ್ರವಾಸ ಕೈಗೊಂಡ ಫೋಟೋ ವೈರಲ್ ಆಗಿವೆ. ಇದರಿಂದಾಗಿ ರಾಯರೆಡ್ಡಿ ಅವರು ಲೋಕಸಭೆ ಟಿಕೇಟ್ ಗಿಟ್ಟಿಸಿಕೊಳ್ಳುವ ಉದ್ದೇಶದಿಂದಲೇ ರಾಹುಲ್ ಗಾಂಧಿ ಜೊತೆ ಪ್ರವಾಸ ಮಾಡಿರಬಹುದು ಎನ್ನುವ ಮಾತನ್ನು ಜಿಲ್ಲೆಯ ಕಾಂಗ್ರೆಸ್ ನಾಯಕರು ಆಡಿಕೊಳ್ಳುತ್ತಿದ್ದಾರೆ.

    2018ರ ವಿಧಾನಸಭೆ ಚುನಾವಣೆ ಸೋಲಿನ ಕಹಿ ಅನುಭವ ಮರೆಯಲು ಕೈಲಸನಾಥ ದರ್ಶನ ಮಾಡುತ್ತಿರುವೆ ಎಂದು ರಾಯರೆಡ್ಡಿ ಹೇಳಿದ್ದರು. ಇತ್ತ ರಾಹುಲ್ ಗಾಂಧಿ ಭೇಟಿ ಆಕಸ್ಮಿಕ ಅಂತಾ ರಾಯರೆಡ್ಡಿ ಹೇಳಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ನನ್ನ ಅವಧಿಯಲ್ಲಿ ಆರಂಭಿಸಲಾದ ಕೆಲ್ಸಗಳನ್ನು ಪೂರ್ಣಗೊಳಿಸಿ: ಸಿಎಂಗೆ ರಾಯರೆಡ್ಡಿ ಪತ್ರ

    ನನ್ನ ಅವಧಿಯಲ್ಲಿ ಆರಂಭಿಸಲಾದ ಕೆಲ್ಸಗಳನ್ನು ಪೂರ್ಣಗೊಳಿಸಿ: ಸಿಎಂಗೆ ರಾಯರೆಡ್ಡಿ ಪತ್ರ

    ಬೆಂಗಳೂರು: ಮಾಜಿ ಉನ್ನತ ಶಿಕ್ಷಣ ಸಚಿವ ಬಸವರಾಜ್ ರಾಯರೆಡ್ಡಿ ಅವರು ಸಿಎಂ ಕುಮಾರಸ್ವಾಮಿ ಅವರಿಗೆ ನನ್ನ ಅವಧಿಯಲ್ಲಿ ಮಾಡಲಾದ ಶೈಕ್ಷಣಿಕ ಕೆಲಸಗಳನ್ನ ಪೂರ್ಣ ಮಾಡುವಂತೆ ಪತ್ರವನ್ನು ಬರೆದಿದ್ದಾರೆ.

    ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಅಧಿಕಾರಿಗಳಿಂದ ಕೂಡಲೇ ನಿಂತಿರುವ ಕೆಲಸ ಪ್ರಾರಂಭ ಮಾಡಿಸಬೇಕು. ಸಚಿವ ಜಿಟಿ ದೇವೇಗೌಡರಿಗೂ ಈ ಬಗ್ಗೆ ಪತ್ರ ಬರೆದು ಮಾತನಾಡುತ್ತೇನೆ. ಈ ಎಲ್ಲಾ ಕೆಲಸಗಳು ವಿದ್ಯಾರ್ಥಿಗಳ ಪರವಾಗಿದೆ. ಈ ಕೆಲಸಗಳನ್ನ ಮುಂದುವರಿಸಿದರೆ ಕುಮಾರಸ್ವಾಮಿ ಅವರಿಗೆ ಹೆಸರು ಬರುತ್ತೆ. ಕೂಡಲೇ ಕೆಲಸಗಳನ್ನ ಮುಕ್ತಾಯ ಮಾಡಬೇಕು ಎಂದು ಹೇಳಿದರು.

    ವಿಶ್ವವಿದ್ಯಾಲಯಗಳ ಸಿಂಡಿಕೇಟ್ ಸದಸ್ಯ ಬದಲಾವಣೆ ವಿಚಾರ ಕುರಿತು ಅಂತಹ ಕೆಲಸ ಜಿಟಿ ದೇವೇಗೌಡರು ಮಾಡಬಾರದಿತ್ತು. ಈ ಬಗ್ಗೆ ಸಿದ್ದರಾಮಯ್ಯ ಮಾತಾಡೋದಾಗಿ ಹೇಳಿದ್ದಾರೆ. ನಮ್ಮ ಅವಧಿಯಲ್ಲಿ ಅರ್ಹರನ್ನ ಸಿಂಡಿಕೇಟ್ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ. ಆದ್ರು ಅನರ್ಹರನ್ನ ನೇಮಕ ಮಾಡಿದ್ದಾರೆ ಅಂತ ಆರೋಪ ಮಾಡಲಾಗುತ್ತಿದೆ. ಈ ಪ್ರಕರಣ ರಾಜಕೀಯ ತಿರುವು ಪಡೆದುಕೊಂಡಿದೆ ಎಂದು ಉನ್ನತ ಶಿಕ್ಷಣ ಸಚಿವ ದೇವೇಗೌಡ ವಿರುದ್ಧ ರಾಯರೆಡ್ಡಿ ಕಿಡಿಕಾರಿದರು.

    ಉನ್ನತ ಶಿಕ್ಷಣ ಸಚಿವರು ಒಂದು ಡಿಗ್ರಿ ಮಾಡಿಕೊಳ್ಳಲಿ ನಾನೇ ಅವರಿಗೆ ಸಲಹೆ ನೀಡುತ್ತೇನೆ. ಕೆಎಸ್ ಓಯುಗೆ ಮರು ಮಾನ್ಯತೆ ಸಿಕ್ಕಿದೆ. ನಿಮ್ಮ ಊರಲ್ಲೆ ಕೋರ್ಸ್ ಮಾಡಿ ಅಂತ ನಾನೇ ಸಲಹೆ ಕೊಡ್ತೀನಿ. ಎಂಎ ರಾಜ್ಯಶಾಸ್ತ್ರ ವಿಭಾಗದಲ್ಲಿ ಪದವಿ ಪಡೆದ್ರೆ ಒಳ್ಳೆಯದು. ಬರೋ ಸ್ವಲ್ಪ ಇಂಗ್ಲೀಷ್ ನಲ್ಲಿ ಯಾಕೆ ಮಾತಾಡಬೇಕು. ಸಚಿವರು ಕನ್ನಡದಲ್ಲೆ ಮಾತಾಡಿದ್ರೆ ತಪ್ಪಿಲ್ಲ. ಎಕ್ಸಾಂ ಬರೆದು ಡಿಗ್ರಿ ಮಾಡಿಕೊಂಡ್ರೆ ದೇವೇಗೌಡರಿಗೆ ಒಳ್ಳೆಯದು ಎಂದು ಉನ್ನತ ಶಿಕ್ಷಣ ಸಚಿವರಿಗೆ ರಾಯರೆಡ್ಡಿ ಟಾಂಗ್ ನೀಡಿದರು.

    ಸಿಎಂಗೆ ಬರೆದ ಪತ್ರದ 17 ಅಂಶದ ಕಾರ್ಯಕ್ರಮಗಳು
    * ಸಮಗ್ರ ವಿಶ್ವವಿದ್ಯಾಲಯ ಕಾಯ್ದೆ ರಾಜ್ಯಪಾಲರ ಅಂಕಿತ ಪಡೆಯಲು ಸರ್ಕಾರ ಮುಂದಾಗಬೇಕು.
    * ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ ನಿರ್ದೇಶಕರು, ಪ್ರಾಧ್ಯಾಪಕರನ್ನ ನೇಮಕ ಮಾಡಲು ಕ್ರಮವಹಿಸಬೇಕು.
    * ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ ಹಾಸ್ಟಲ್ ನಿರ್ಮಾಣಕ್ಕೆ 50 ಕೋಟಿ ಬಿಡುಗಡೆ ಮಾಡಬೇಕು.

    * ರಾಯಚೂರು ಹೊಸ ವಿಶ್ವವಿದ್ಯಾಲಯ, ಮಂಡ್ಯದಲ್ಲಿ ಯೂನಿಟರಿ ವಿಶ್ವವಿದ್ಯಾಲಯ, ಮಹಾರಾಣಿ ಕಾಲೇಜ್ ಕ್ಲಸ್ಟರ್ ವಿವಿ ಪ್ರಾರಂಭಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರ 55 ಕೋಟಿ ರೂ. ಅನುದಾನ ನೀಡಿದೆ. ಇದಕ್ಕೆ ರಾಜ್ಯಪಾಲರಿಂದ ಅನುಮೋದನೆ ನೀಡಿಸಬೇಕು.
    * ಬೆಳಗಾವಿ ರಾಣಿ ಚೆನ್ನಮ್ಮ ವಿವಿ, ತುಮಕೂರು ವಿವಿ, ಮೈಸೂರು ಗಂಗೂಬಾಯಿ ಹಾನಗಲ್ ಸಂಗೀತ ವಿವಿ ಸ್ವಂತ ಕಟ್ಟಡ ನಿರ್ಮಾಣಕ್ಕೆ ನಮ್ಮ ಸಂಪುಟ ಅನುದಾನ ನೀಡಿತ್ತು. ವಿವಿಗಳ ಕಟ್ಟಡ ನಿರ್ಮಾಣ ಕೆಲಸ ಪ್ರಾರಂಭ ಮಾಡಬೇಕು.
    * ಧಾರವಾಡ ಕರ್ನಾಟಕ ವಿವಿಯ ಅಧೀನದ ಕರ್ನಾಟಕ ಕಾಲೇಜು ಶತಮಾನೋತ್ಸವಕ್ಕೆ ಸಂಪುಟ ಹಣ ಬಿಡುಗಡೆ ಮಾಡಿತ್ತು. ಆದ್ರೆ ಕೆಲಸ ಪ್ರಾರಂಭವಾಗಿಲ್ಲ. ಕೂಡಲೇ ಕೆಲಸ ಪ್ರಾರಂಭ ಮಾಡಬೇಕು.

    * ಕೆಎಸ್‍ಓಯು ಗೆ ಮರು ಮಾನ್ಯತೆ ಸಿಕ್ಕಿದೆ. ಹಿಂದೆ ಹಲವು ಜಿಲ್ಲೆಯಲ್ಲಿ ಇದ್ದ ಪ್ರಾದೇಶಿಕ ಕಚೇರಿ ಕಟ್ಟಡಗಳನ್ನ ಆಯಾ ಜಿಲ್ಲೆಯಲ್ಲಿರುವ ವಿಶ್ವವಿದ್ಯಾಲಯಗಳಿಗೆ ಹಸ್ತಾಂತರ ಮಾಡಬೇಕು.
    * ಬೆಂಗಳೂರು ಉತ್ತರ ವಿವಿ ಉಳಿಕೆ ಜಮೀನು ಕೊಡಿಸುವ ಕೆಲಸ ಸರ್ಕಾರ ಮಾಡಬೇಕು.
    * ವಿಟಿಯು ಐಟಿ ಸೀಜ್ ಮಾಡಿದ ಹಣ ವಾಪಸ್ ಬಂದಿದೆ. ಇದನ್ನ ವಿದ್ಯಾರ್ಥಿಗಳ ಅಭಿವೃದ್ಧಿಗೆ ಸಮರ್ಪಕವಾಗಿ ಬಳಸಿಕೊಳ್ಳಬೇಕು.

    * ಕೆಇಎಯ 350 ಕೋಟಿ ಹಣ ಇದೆ. ಇದನ್ನ ಮೆಡಿಕಲ್, ಎಂಜಿನಿಯರ್ ವಿದ್ಯಾರ್ಥಿಗಳ ಮೂಲಭೂತ ಸೌಕರ್ಯಗಳಿಗೆ ಬಳಸಿಕೊಳ್ಳಲು ಕ್ರಮವಹಿಸಬೇಕು.
    * ಬಿಎ, ಬಿಕಾಂ, ಬಿಎಸ್ಸಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟ್ಯಾಪ್ ನೀಡಲು 250 ಕೋಟಿ ಅನುದಾನ ನೀಡಲಾಗಿತ್ತು. ಆದ್ರೆ ಕೆಲಸ ಕಾರಣಗಳಿಂದ ಲ್ಯಾಪ್ ಟಾಪ್ ವಿತರಣೆ ಆಗಿಲ್ಲ. ಕೂಡಲೇ ಟೆಂಡರ್ ಕರೆದು ಲ್ಯಾಪ್ ಟಾಪ್ ಹಂಚಿಕೆ ಮಾಡಬೇಕು.
    * 310 ಪದವಿ ಕಾಲೇಜುಗಳಲ್ಲಿ ಪ್ರಾಂಶುಪಾಲರು ಇಲ್ಲ. ನಾವು ಯುಜಿಸಿ ನಿಯಮ ಬದಲಾವಣೆಗೆ ಮುಂದಾಗಿದ್ದೆವು ಆದರೆ ಅದು ಆಗಲಿಲ್ಲ. ಕೂಡಲೇ ಪ್ರಾಂಶುಪಾಲರ ನೇಮಕ ಸರ್ಕಾರ ಮಾಡಬೇಕು.

    * ಪದವಿ ಕಾಲೇಜುಗಳ ಪ್ರಾಧ್ಯಾಪಕರ ಹುದ್ದೆ ನೇಮಕಾತಿ ಪ್ರಕ್ರಿಯೆ ಮಾಡಬೇಕು.
    * ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳನ್ನ ಆದಷ್ಟು ಬೇಗ ತುಂಬಬೇಕು.
    * ಸಂಸ್ಕೃತ ವಿಶ್ವವಿದ್ಯಾಲಯ ಅಭಿವೃದ್ಧಿಗೆ ಸರ್ಕಾರ ಕ್ರಮವಹಿಸಬೇಕು.
    * ಎಸ್ ಸಿಪಿ ಯೋಜನೆಯಲ್ಲಿ ಶೈಕ್ಷಣಿಕವಾಗಿ ಹಿಂದುಳಿದ ಜಿಲ್ಲೆಗಳ ಅಭಿವೃದ್ಧಿಗೆ ಹಣ ನೀಡಲಾಗಿದೆ. ಈ ಕೆಲಸ ಪ್ರಕ್ರಿಯೆ ಮುಂದುವರೆಸಬೇಕು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews

  • ಎಚ್‍ಡಿಕೆಯ ವೋಟ್ ಹಾಕಿಲ್ಲ ಹೇಳಿಕೆ ಅಪ್ರಬುದ್ಧ: ಬಸವರಾಜ ರಾಯರೆಡ್ಡಿ

    ಎಚ್‍ಡಿಕೆಯ ವೋಟ್ ಹಾಕಿಲ್ಲ ಹೇಳಿಕೆ ಅಪ್ರಬುದ್ಧ: ಬಸವರಾಜ ರಾಯರೆಡ್ಡಿ

    ಬೆಂಗಳೂರು: ಉತ್ತರ ಕರ್ನಾಟಕದ ಜನ ವೋಟ್ ಹಾಕಿಲ್ಲ ಅನ್ನೋ ಸಿಎಂ ಹೇಳಿಕೆ ಸರಿಯಲ್ಲ ಎಂದು ಮಾಜಿ ಸಚಿವ ರಾಯರೆಡ್ಡಿ ಹೇಳಿದ್ದಾರೆ.

    ವಿಧಾನಸೌಧದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ವೋಟ್ ಹಾಕಿಲ್ಲ ಎನ್ನುವ ಹೇಳಿಕೆ ಅಪ್ರಬುದ್ಧ ಹೇಳಿಕೆ. ಅಂತಹ ಹೇಳಿಕೆ ಸಿಎಂ ಮಾತಾಡಿದ್ರೆ ಅ ಮಾತನ್ನು ಸಿಎಂ ವಾಪಸ್ ತೆಗೆದುಕೊಳ್ಳಬೇಕು ಎಂದರು.

    ಉತ್ತರ ಕರ್ನಾಟಕಕ್ಕೆ ಸಚಿವರು ಕಡಿಮೆ ಇದೆ. ಪಕ್ಷದ ಅಧ್ಯಕ್ಷರು, ಸಿಎಂ, ಡಿಸಿಎಂ, ಹೆಚ್ಚು ಸಚಿವರು ದಕ್ಷಿಣ ಭಾಗದಲ್ಲೇ ಇದ್ದಾರೆ. ಸಚಿವ ಸಂಪುಟ ವಿಸ್ತರಣೆ ವೇಳೆ ಉತ್ತರ ಕರ್ನಾಟಕಕ್ಕೆ ಹೆಚ್ಚು ನೀಡಬೇಕು. ಉತ್ತರ ಕರ್ನಾಟಕದ ಬಗ್ಗೆ ಉತ್ತಮವಾಗಿ ಮಾತಾಡೋದನ್ನು ಸಿಎಂ ಕಲಿಯಬೇಕು ಎಂದರು.

    ಕೆಲ ಮಠಾಧೀಶರು, ಸಂಘಟನೆಗಳ ಸದಸ್ಯರು ಉತ್ತರ ಕರ್ನಾಟಕ ಬಂದ್ ಮಾಡುತ್ತಿದ್ದಾರೆ. ಇದೊಂದು ಅಧರ್ಮದ ಕೆಲಸ. ಬಂದ್ ಮಾಡಿ ಅಖಂಡ ಕರ್ನಾಟಕ ಒಡೆಯಬೇಡಿ. ನೆಗಡಿ ಬಂದ್ರೆ ಮೂಗು ಕೊಯ್ದರೆ ಆಗುತ್ತಾ? ಉತ್ತರ ಕರ್ನಾಟಕ ಇಬ್ಬಾಗ ಮಾಡಿದ್ರೆ ಮೂಗು ಕೊಯ್ದ ರೀತಿ ಆಗುತ್ತೆ. ಬಂದ್ ಕರೆ ರಾಜಕೀಯ ಪ್ರೇರಿತ. ಕೆಲವೊಂದು ಗೊಂದಲ ಇರಬಹುದು. ಅದನ್ನು ನಿವಾರಣೆ ಮಾಡಲು ಸಿಎಂಗೆ ಪತ್ರ ಬರೆದಿದ್ದೇನೆ ಎಂದು ತಿಳಿಸಿದರು.

    ಜನರು ಕೂಡಾ ಬಂದ್ ಗೆ ಬೆಂಬಲ ನೀಡಬಾರದು. ಶ್ರೀರಾಮಲು, ಉಮೇಶ್ ಕತ್ತಿ ಇಂತಹ ಕೆಲಸಕ್ಕೆ ಹೋಗಬಾರದು. ರಾಜಕೀಯಕ್ಕೆ ಇಬ್ಬಾಗದ ಮಾತನ್ನು ಯಾರೂ ಆಡಬಾರದು. ಬಜೆಟ್ ನಲ್ಲಿ ಉತ್ತರ ಕರ್ನಾಟಕಕ್ಕೆ ಅನ್ಯಾಯ ಆಗಿಲ್ಲ. ಸಿದ್ದರಾಮಯ್ಯ ಬಜೆಟ್ ನ ಮುಂದುವರಿದ ಭಾಗವಾಗಿದ್ದು, ಯೋಜನೆ ತಯಾರು ಮಾಡೋವಾಗ ಎಲ್ಲ ಭಾಗ ನೋಡಿ ತೆಗೆದುಕೊಂಡಿದ್ದಾರೆ ಎಂದು ವಿವರಿಸಿದರು. ಇದನ್ನೂ ಓದಿ: ನಾನು ಮತ್ತೆ ಭತ್ಯೆ ವಾಪಸ್ ನೀಡುವಂತೆ ಕೇಳಿದ್ದು ಯಾಕೆ: ಕಾರಣ ತಿಳಿಸಿದ ಬಸವರಾಜ ರಾಯರೆಡ್ಡಿ

    ಲೋಕಸಭೆಯಲ್ಲಿ ಮೈತ್ರಿ ಮಾಡಿಕೊಳ್ಳುವ ವಿಚಾರಕ್ಕೆ ಪ್ರತಿಕ್ರಿಯಿಸಿ ಪಕ್ಷದ ತೀರ್ಮಾನಕ್ಕೆ ನಾವು ಬದ್ಧವಾಗಿದ್ದೇವೆ. ಜೆಡಿಎಸ್ ಕೆಲ ಜಿಲ್ಲೆಯಲ್ಲಿ ಪ್ರಾಬಲ್ಯ ಇದೆ. ಮತ ಒಡೆದು ಹೋಗಬಾರದು ಅನ್ನೋದು ನಮ್ಮ ಚಿಂತನೆ. ಹೀಗಾಗಿ ಮೈತ್ರಿ ವಿಚಾರದಲ್ಲಿ ಪಕ್ಷದ ತೀರ್ಮಾನಕ್ಕೆ ನಾವು ಬದ್ಧ ಎಂದು ತಿಳಿಸಿದರು.

    ಸಚಿವ ಜಿಟಿ ದೇವೇಗೌಡ ಸಿಂಡಿಕೇಟ್ ಸದಸ್ಯರ ನೇಮಕಾತಿ ವಾಪಸ್ ಪಡೆದ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಅರ್ಹ ವ್ಯಕ್ತಿಗಳನ್ನ ಸಿದ್ದರಾಮಯ್ಯ ನೇಮಕ ಮಾಡಿದ್ದರು. ಆದರೆ ಉನ್ನತ ಶಿಕ್ಷಣ ಸಚಿವರಾದ ಜಿಟಿ ದೇವೇಗೌಡ ಅವರು ಅರ್ಹರಿಲ್ಲದವರನ್ನ ನೇಮಕ ಮಾಡಿದ್ದಾರೆ ಅಂತ ಆರೋಪ ಮಾಡಿದ್ದಾರೆ. ಸಚಿವರ ಹೇಳಿಕೆ ಸರಿಯಲ್ಲ. ಸಚಿವರು ವಿಷಯವನ್ನ ತಿಳಿದುಕೊಂಡು ಮಾತನಾಡಬೇಕು. ಒಬ್ಬೇ ಒಬ್ಬ ಅನರ್ಹ ವ್ಯಕ್ತಿಗಳನ್ನು ಸಿಂಡಿಕೇಟ್ ಸದಸ್ಯರನ್ನಾಗಿ ನೇಮಕ ಮಾಡಿಲ್ಲ. ಕೆಲವೊಬ್ಬರು ರಾಜಕೀಯ ವ್ಯಕ್ತಿಗಳ ನೇಮಕ ಆಗಿರಬಹುದು. ಉಳಿದಂತೆ ಅರ್ಹರನ್ನೆ ನೇಮಕ ಮಾಡಲಾಗಿದೆ. ಸಚಿವರು ಹೀಗೆ ಮಾತನಾಡುವುದು ಸರಿಯಲ್ಲ ಎಂದು ಹೇಳಿ ಟಾಂಗ್ ನೀಡಿದರು.

    https://www.youtube.com/watch?v=ets0C4vasfM

  • ಹೊಸ ಎಸಿ, ಹೊಸ ಮಂಚ, ಹೊಸ ಟಾಯ್ಲೆಟ್- ರಾಹುಲ್ ಗಾಂಧಿ ಮೆಚ್ಚಿಸಲು ಸಚಿವರ ಸರ್ಕಸ್

    ಹೊಸ ಎಸಿ, ಹೊಸ ಮಂಚ, ಹೊಸ ಟಾಯ್ಲೆಟ್- ರಾಹುಲ್ ಗಾಂಧಿ ಮೆಚ್ಚಿಸಲು ಸಚಿವರ ಸರ್ಕಸ್

    ಕೊಪ್ಪಳ: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಆಗಮನದ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಜಿಲ್ಲೆಯ ಪ್ರವಾಸಿ ಮಂದಿರವನ್ನ ನವೀಕರಣ ಮಾಡಿಸುತ್ತಿದ್ದು ಸರ್ಕಾರದ ಹಣ ಪೋಲು ಮಾಡಲಾಗ್ತಿದೆ ಅನ್ನೋ ಆರೋಪ ಕೇಳಿಬಂದಿದೆ.

    ಫೆ. 10 ರಂದು ಕೊಪ್ಪಳದ ಕುಕನೂರಿನ ಪ್ರವಾಸಿ ಮಂದಿರದಲ್ಲಿ ರಾಹುಲ್ ಗಾಂಧಿ ವಾಸ್ತವ್ಯ ಮಾಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಎರಡು ತಿಂಗಳ ಹಿಂದಷ್ಟೇ ಹೊಸದಾಗಿ ಲೋಕಾರ್ಪಣೆಗೊಂಡಿದ್ದ ಪ್ರವಾಸಿ ಮಂದಿರದಲ್ಲಿ ಹಾಕಲಾಗಿದ್ದ ಉಪಕರಣಗಳನ್ನು ತೆಗೆದು ಹಾಕಿ ಮತ್ತೆ ಹೊಸ ಎಸಿ, ಹೊಸ ಮಂಚ ಹಾಕಿದ್ದು, ಹೊಸ ಟಾಯ್ಲೆಟ್ ನಿರ್ಮಿಸಲಾಗ್ತಿದೆ. ಇದಕ್ಕಾಗಿಯೇ 25 ಲಕ್ಷ ರೂಪಾಯಿ ಖರ್ಚು ಮಾಡಲಾಗ್ತಿದೆ.

     

    ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ರಾಯರೆಡ್ಡಿ ತಮ್ಮ ನಾಯಕ ರಾಹುಲ್ ಗಾಂಧಿಯನ್ನು ಮೆಚ್ಚಿಸಲು ಇಷ್ಟೆಲ್ಲಾ ಕಸರತ್ತು ಮಾಡ್ತಿದ್ದಾರೆ ಅನ್ನೋ ಆರೋಪ ಕೇಳಿಬಂದಿದೆ.

    ಸಿಎಂ ಹಾಗೂ ಸಂಪುಟ ದರ್ಜೆಯ ಸಚಿವರ ಆಗಮನದ ಹಿನ್ನೆಲೆಯಲ್ಲಿ ಸಹ ಎಲ್ಲಾ ರೂಂಗಳಲ್ಲಿ ಎಸಿ ಅಳವಡಿಕೆ ಮಾಡಿ ಸಚಿವರು ದುಂದು ವೆಚ್ಚ ಮಾಡ್ತಿದ್ದಾರೆಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

  • ಮುಕ್ತ ವಿವಿ ಹಗರಣ ಮುಚ್ಚಿ ಹಾಕಲು ಬಸವರಾಯರೆಡ್ಡಿಯಿಂದ ಹಫ್ತಾ ವಸೂಲಿ: ಗೋ ಮಧುಸೂದನ್

    ಮುಕ್ತ ವಿವಿ ಹಗರಣ ಮುಚ್ಚಿ ಹಾಕಲು ಬಸವರಾಯರೆಡ್ಡಿಯಿಂದ ಹಫ್ತಾ ವಸೂಲಿ: ಗೋ ಮಧುಸೂದನ್

    ಮೈಸೂರು: ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಹಗರಣ ಮುಚ್ಚಿ ಹಾಕಲು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಹಫ್ತಾ ವಸೂಲಿ ಮಾಡಿದ್ದಾರೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಗೋ.ಮಧುಸೂದನ್ ಮೈಸೂರಿನಲ್ಲಿ ಗಂಭೀರ ಆರೋಪ ಮಾಡಿದ್ದಾರೆ.

    ರಾಜ್ಯ ಮುಕ್ತ ವಿಶ್ವವಿದ್ಯಾಲಯದ ನಿವೃತ್ತ ಕುಲಪತಿ ಪ್ರೊ.ಕೆ.ಎಸ್.ರಂಗಪ್ಪ ಅವರು ಭ್ರಷ್ಟ ಎಂದು ವರ್ಷದ ಹಿಂದೆ ರಾಯರೆಡ್ಡಿ ಅವರು ಹೇಳಿಕೆ ನೀಡಿದ್ದರು. ಆದರೆ ಈಗ ಇದುವರೆಗೂ ಅವರ ಮೇಲೆ ಕ್ರಮ ಕೈಗೊಂಡಿಲ್ಲ ಯಾಕೆ ಎಂದು ಪ್ರಶ್ನಿಸಿದರು.

    ಭ್ರಷ್ಟಾಚಾರದ ಆರೋಪ ಮಾಡಿದ ನಂತರವೂ ಸಹ ಕ್ರಮ ಕೈಗೊಂಡಿಲ್ಲ ಅಂದ್ರೆ ಏನರ್ಥ ಎಂದು ಪ್ರಶ್ನಿಸಿದ ಅವರು ನನಗೆ ರಾಯರೆಡ್ಡಿ ಅವರು ಹಣ ಪಡೆದು ತೆಪ್ಪಗಾಗಿದ್ದಾರೆ ಎಂಬ ಅನುಮಾನ ಮೂಡುತ್ತಿದೆ ಎಂದು ಆರೋಪಿಸಿದರು.

    ಮುಕ್ತ ವಿವಿಯ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಲು ಮುಖ್ಯಮಂತ್ರಿಗಳು ಮುಂದಾಗುತ್ತಿಲ್ಲ. ಇದಕ್ಕೆ ಕಾರಣ ಜೆಡಿಎಸ್ ವರಿಷ್ಟ ಎಚ್‍ಡಿ ದೇವೇಗೌಡರು ಅವರ ಜೊತೆಗಿನ ಬಾಂಧವ್ಯಕ್ಕಾಗಿ ರಂಗಪ್ಪ ಅವರ ರಕ್ಷಣೆಯನ್ನು ಸಿಎಂ ಮಾಡ್ತಿದ್ದಾರೆ ಎಂದು ಟೀಕಿಸಿದರು.

  • ಪಶುಭಾಗ್ಯ ಯೋಜನೆಯಲ್ಲಿ ಅಕ್ರಮ – ಸಚಿವರಿಂದ್ಲೇ ನಿಯಮಬಾಹಿರವಾಗಿ ಫಲಾನುಭವಿಗಳ ಆಯ್ಕೆ

    ಪಶುಭಾಗ್ಯ ಯೋಜನೆಯಲ್ಲಿ ಅಕ್ರಮ – ಸಚಿವರಿಂದ್ಲೇ ನಿಯಮಬಾಹಿರವಾಗಿ ಫಲಾನುಭವಿಗಳ ಆಯ್ಕೆ

    ಕೊಪ್ಪಳ: ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿಯ ಸ್ವಕ್ಷೇತ್ರದಲ್ಲೇ ಪಶುಭಾಗ್ಯ ಯೋಜನೆಯಲ್ಲಿ ಗೋಲ್‍ಮಾಲ್ ನಡೆದಿರೋ ಆರೋಪ ಕೇಳಿಬಂದಿದೆ.

    ಸ್ವತಃ ಸಚಿವರೇ ನಿಯಮ ಬಾಹಿರವಾಗಿ ಪಶುಭಾಗ್ಯ ಯೋಜನೆಗೆ ಫಲಾನುಭವಿಗಳನ್ನು ಆಯ್ಕೆ ಮಾಡಿರೋ ದಾಖಲೆಗಳು ಪಬ್ಲಿಕ್ ಟಿವಿಗೆ ಲಭ್ಯವಾಗಿವೆ. 2016-17ನೇ ಸಾಲಿನ ಪಶುಭಾಗ್ಯ ಯೋಜನೆಯಡಿ ಯೋಜನೆಗೆ ಸುಮಾರು 1800 ಅರ್ಜಿ ಬಂದಿದ್ದು, ಲಾಟರಿ ಮೂಲಕ ಆಯ್ಕೆ ಮಾಡಬೇಕಿತ್ತು. ಆದ್ರೆ ಅಯ್ಕೆ ಸಮಿತಿ ಅಧ್ಯಕ್ಷರಾಗಿರೋ ಸಚಿವ ರಾಯರೆಡ್ಡಿ ಕೇವಲ ಕಾಂಗ್ರೆಸ್ ಬೆಂಬಲಿತ ಗ್ರಾ.ಪಂ ಸದಸ್ಯರು, ಅಂಗನವಾಡಿ ಕಾರ್ಯಕರ್ತೆಯರು, ಬಿಸಿಯೂಟ ಅಡುಗೆ ಸಹಾಯಕಿಯರು ಹಾಗೂ ಪ್ರಥಮ ದರ್ಜೆ ಗುತ್ತಿಗೆದಾರರಿಗಷ್ಟೇ ಸಾಲ ಮತ್ತು ಧನಸಹಾಯ ಸೌಲಭ್ಯ ನೀಡಿ ಯೋಜನೆಯ ಉದ್ದೇಶವನ್ನೇ ಬುಡಮೇಲು ಮಾಡಿದ್ದಾರೆ.

    ತಮ್ಮ ಇಚ್ಚೆಗೆ ಬಂದಂತೆ 106 ಫಲಾನುಭವಿಗಳನ್ನು ಆಯ್ಕೆ ಮಾಡಿ ಹಣ ನೀಡಿದ್ದಾರೆ. ಸಮಿತಿ ಸದಸ್ಯರು ಹಾಗೂ ಪಶು ಇಲಾಖೆ ಅಧಿಕಾರಿ ಡಾ.ತಿಪ್ಪಣ್ಣ ತಳಕಲ್, ಸಚಿವರ ಕೈಗೊಂಬೆಯಂತೆ ನಡೆದುಕೊಂಡು ಅರ್ಹ ಫಲಾಭುವಿಗಳಿಗೆ ಅನ್ಯಾಯ ಮಾಡಿದ್ದಾರೆ ಅಂತ ಆರೋಪ ಕೇಳಿಬಂದಿದೆ. ಈ ಬಗ್ಗೆ ಯಲಬುರ್ಗಾ ತಾಲೂಕು ಪಂಚಾಯತ್ ಉಪಾಧ್ಯಕ್ಷ ವಿಶ್ವನಾಥ ನೇತೃತ್ವದಲ್ಲಿ ಬಿಜೆಪಿಯ 11 ಸದಸ್ಯರು ಕೊಪ್ಪಳ ಡಿಸಿ, ಜಿಪಂ ಸಿಇಒ, ಜಿಪಂ ಉಪ ಕಾರ್ಯದರ್ಶಿ ಹಾಗೂ ಎಸಿಬಿಗೆ ದೂರು ನೀಡಿದ್ದಾರೆ.

     

  • ವಿಟಿಯು ಫಲಿತಾಂಶಕ್ಕಾಗಿ ಕಾಯ್ತಿದ್ದೀರಾ?- ಹಾಗಿದ್ರೆ ನೀವು ಈ ಸುದ್ದಿ ಓದ್ಲೇಬೇಕು

    ವಿಟಿಯು ಫಲಿತಾಂಶಕ್ಕಾಗಿ ಕಾಯ್ತಿದ್ದೀರಾ?- ಹಾಗಿದ್ರೆ ನೀವು ಈ ಸುದ್ದಿ ಓದ್ಲೇಬೇಕು

    ಬೆಂಗಳೂರು: ಸಿಇಟಿ ಫಲಿತಾಂಶ ಪ್ರಕಟವಾದ ದಿನವೇ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಶಾಕಿಂಗ್ ನ್ಯೂಸ್ ಸಿಕ್ಕಿದೆ.

    ಪ್ರತಿಷ್ಠಿತ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಮುಚ್ಚುವ ಭೀತಿ ಎದರಾಗಿದೆ. ಅಕ್ರಮದ ಗೂಡಾಗಿರುವ ವಿಶ್ವವಿದ್ಯಾಲಯದಲ್ಲಿ ಬಿಡಿಗಾಸು ಇಲ್ಲದೇ ಮುಚ್ಚುವ ಭೀತಿಯಿದೆ. 6 ತಿಂಗಳಾದ್ರೂ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟಿಸದ ಪ್ರತಿಷ್ಠಿತ ವಿಟಿಯು ಭ್ರಷ್ಟಾಚಾರದ ಕೂಪವಾಗಿದೆ ಎಂದು ಸ್ವತಃ ಉನ್ನತ ಶಿಕ್ಷಣ ಸಚಿವ ಬಸವರಾಜರಾಯರೆಡ್ಡಿ ಒಪ್ಪಿಕೊಂಡಿದ್ದಾರೆ.

    ಇಂದು ಬೆಂಗಳೂರಿನಲ್ಲಿ ಮಾತನಾಡಿ ಬಸವರಾಜ ರಾಯರೆಡ್ಡಿ, ಈಗಿನ ಪರಿಸ್ಥಿತಿಯಲ್ಲಿ ವಿಟಿಯುವನ್ನು ಕ್ಲೋಸ್ ಮಾಡಬೇಕಾಗಿದೆ. ವಿಟಿಯುನಲ್ಲಿ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ. ವಿಟಿಯು ವಿದ್ಯಾರ್ಥಿಗಳ ಸಮಸ್ಯೆ ನನ್ನ ಗಮನಕ್ಕೆ ಬಂದಿದೆ. ಆರು ತಿಂಗಳಾದ್ರೂ ಫಲಿತಾಂಶ ನೀಡಿಲ್ಲ. ಈ ಹಿಂದೆ ಇದ್ದ ಕುಲಪತಿಗಳು ಅಕ್ರಮ ನಡೆಸಿದ್ದರಿಂದ ಈ ಪರಿಸ್ಥಿತಿಗೆ ಕಾರಣವಾಗಿದೆ ಅಂದ್ರು.

    ಈ ಹಿನ್ನೆಲೆಯಲ್ಲಿ ಪರೀಕ್ಷೆಯಲ್ಲಿ ಹೊಸ ಪದ್ಧತಿ ತರುತ್ತಿದ್ದೇವೆ. ಮುಂದಿನ ಪರೀಕ್ಷೆಯಿಂದ ಎಲ್ಲವೂ ಸರಿ ಹೋಗಲಿದೆ. ಹಿಂದಿನ ಕುಲಪತಿಗಳ ವಿರುದ್ಧ ತನಿಖೆ ನಡೆಸಲು ಆದೇಶಿಸಿದ್ದೇವೆ. ನಾಳೆ ಈ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿ ಸಂಪೂರ್ಣ ವರದಿ ನೀಡುತ್ತೇನೆ ಅಂತ ಹೇಳಿದ್ರು.

  • ಪರೀಕ್ಷೆ ನಡೆಸಲು ಹಣವಿಲ್ಲ, ಪರಿಸ್ಥಿತಿ ಮುಂದುವರಿದ್ರೆ ವಿಟಿಯು ಮುಚ್ಚಬೇಕಾದಿತು: ಬಸವರಾಜರಾಯ ರೆಡ್ಡಿ

    ಪರೀಕ್ಷೆ ನಡೆಸಲು ಹಣವಿಲ್ಲ, ಪರಿಸ್ಥಿತಿ ಮುಂದುವರಿದ್ರೆ ವಿಟಿಯು ಮುಚ್ಚಬೇಕಾದಿತು: ಬಸವರಾಜರಾಯ ರೆಡ್ಡಿ

    ನವದೆಹಲಿ: ಕೇಂದ್ರ ಸರ್ಕಾರದ ಆದಾಯ ತೆರಿಗೆ ನೀತಿಯಿಂದ ವಿಶೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಮುಚ್ಚುವ ಪರಿಸ್ಥಿತಿ ಗೆ ಬಂದಿದೆ ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಕಿಡಿ ಕಾರಿದ್ದಾರೆ.

    ಆದಾಯ ತೆರಿಗೆ ವಿನಾಯತಿ ಪಡೆದಿಲ್ಲ ಎಂದು ವಿಟಿಯುನ 441 ಕೋಟಿ ರೂ. ಹಣವನ್ನು ಕೇಂದ್ರ ಸರ್ಕಾರದ ಆದಾಯ ತೆರಿಗೆ ಇಲಾಖೆ ಮುಟ್ಟುಗೋಲು ಹಾಕಿಕೊಂಡು, 123 ಕೋಟಿ ದಂಡವನ್ನು ವಿಧಿಸಿರುವ ಹಿನ್ನಲೆಯಲ್ಲಿ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಭೇಟಿಯಾಗಿ ಮಾತುಕತೆ ನಡೆಸಿದ್ರು.

    ಮಾತುಕತೆ ವಿಫಲವಾದ ಬಳಿಕ ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದು ಅವರು, ಸರ್ಕಾರದ ಶಿಕ್ಷಣ ಸಂಸ್ಥೆಗಳು ಆದಾಯ ತೆರಿಗೆ ಕಟ್ಟುವ ಪದ್ದತಿ ಇಲ್ಲ ಆದ್ರೆ, ಆದಾಯ ಇಲಾಖೆ ವಿಶ್ವವಿದ್ಯಾಲಯದ ಹಣವನ್ನು ಜಪ್ತಿ ಮಾಡಿದ್ದು ಸಿಬ್ಬಂದಿಗೆ ಸಂಬಳ ನೀಡಲು ಸಾಧ್ಯವಾಗ್ತಿಲ್ಲ ಜೊತೆಗೆ ಪರೀಕ್ಷೆಗಳು ಹತ್ತಿರವಾಗುತ್ತಿದ್ದು ಪರೀಕ್ಷೆ ನಡೆಸಲು ವಿವಿ ಬಳಿ ಇಲ್ಲ. ಇದೇ ಪರಿಸ್ಥಿತಿ ಮುಂದುವರಿದರೆ ವಿಶ್ವವಿದ್ಯಾಲಯ ಮುಚ್ಚಬೇಕಾದಿತು ಅಂತಾ ರಾಯರೆಡ್ಡಿ ಹೇಳಿದರು.

    ಜಪ್ತಿ ಮಾಡಿಕೊಂಡಿದ್ದ ಹಣವನ್ನು ಮರಳಿನೀಡುವಂತೆ ಮನವಿ ಮಾಡಿದ್ರು ಅರುಣ್ ಜೇಟ್ಲಿ ಮನಸ್ಸು ಮಾಡುತ್ತಿಲ್ಲ. ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವಡೇಕರ್ ಹಾಗೂ ಕೇಂದ್ರ ರಸಗೊಬ್ಬರ ಖಾತೆಯ ಸಚಿವ ಅನಂತ್ ಕುಮಾರ್ ಮನವಿ ಮಾಡಿದ್ರು ಕ್ಯಾರೇ ಮಾಡ್ತಿಲ್ಲ ಅಂತಾ ಅಸಮಾಧಾನ ವ್ಯಕ್ತಪಡಿಸಿದ್ರು.

    ಆದಾಯ ತೆರಿಗೆ ಇಲಾಖೆಯ ನಿಯಮಗಳ ಅನುಸಾರ ಹೈಕೋರ್ಟ್ ಮೊರೆ ಹೋಗಲಾಗುವುದು ಎಂದ ರಾಯರೆಡ್ಡಿ ನಾಲ್ಕು ಲಕ್ಷ ವಿದ್ಯಾರ್ಥಿ ಗಳ ಭವಿಷ್ಯ ಡೋಲಾಯಮಾನವಾಗಿದೆ ಅಂತಾ ಆತಂಕ ವ್ಯಕ್ತಪಡಿಸಿದರು.

  • ಪ್ರಧಾನಿ ಮೋದಿ ಸಾಯಲಿ ಅಂತಾ ಹೇಳಿಲ್ಲ: ಬಸವರಾಜ ರಾಯರೆಡ್ಡಿ ಸ್ಪಷ್ಟನೆ

    ಪ್ರಧಾನಿ ಮೋದಿ ಸಾಯಲಿ ಅಂತಾ ಹೇಳಿಲ್ಲ: ಬಸವರಾಜ ರಾಯರೆಡ್ಡಿ ಸ್ಪಷ್ಟನೆ

    ಕೊಪ್ಪಳ: ನನಗೆ ಪ್ರಧಾನಿ ನರೇಂದ್ರ ಮೋದಿ ಬಗ್ಗೆ ನನಗೆ ಅಪಾರ ಗೌರವ ಇದೆ. ಪ್ರಧಾನಿ ಮೋದಿ ಸಾಯಲಿ ಅಂತಾ ಹೇಳಿಲ್ಲ. ಮಾಧ್ಯಮಗಳು ನನ್ನ ಹೇಳಿಕೆಯನ್ನ ತಪ್ಪಾಗಿ ಅರ್ಥೈಸಿವೆ ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಹೇಳಿದ್ದಾರೆ.

    ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕೆಲ ಮಾಧ್ಯಮಗಳು ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿವೆ. ಮಾಧ್ಯಮಗಳ ಸ್ವಾತಂತ್ರ್ಯದ ಬಗ್ಗೆ ನನಗೆ ಗೌರವ ಇದ್ದು, ನಾನು ಉದ್ದೇಶಪೂರ್ವಕವಾಗಿ ಯಾವುದನ್ನೂ ಹೇಳಿಲ್ಲ. ನನ್ನ ಉದ್ದೇಶ ಪ್ರಧಾನ ಮಂತ್ರಿ ಸಾಯಲಿ ಎಂಬುದು ಇರಲಿಲ್ಲ. ಯಾರೇ ಆಗಲಿ ಭಯದ ವಾತಾವರಣದಲ್ಲಿ ರಾಜಕಾರಣಿಗಳು ಕೆಲಸ ಮಾಡಬಾರದು ಎನ್ನುವುದನ್ನು ಹೇಳಿದ್ದೆ ಎಂದು ಸ್ಪಷ್ಟಪಡಿಸಿದರು.

    ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪನವರು ನನ್ನ ರಾಜೀನಾಮೆ ಕೇಳುತ್ತಿದ್ದಾರೆ. ಇದನ್ನು ಸ್ವಾಗತ ಮಾಡುತ್ತೇನೆ. ನಾನು ತಪ್ಪು ಮಾಡಿದ್ದರೆ ರಾಜೀನಾಮೆ ನೀಡಲು ಸಿದ್ದನಿದ್ದೇನೆ. ಅಧಿಕಾರದ ಆಸೆ ನನಗಿಲ್ಲ ನೈತಿಕವಾಗಿ ಬದುಕುತ್ತಿದ್ದೇನೆ. ದೇಶದಲ್ಲಿ ವಿಐಪಿ ಸಂಸ್ಕೃತಿ ಹೋಗಬೇಕಿದೆ ಎಂದರು.

    ರಾಯರೆಡ್ಡಿ ಮಾನಸಿಕ ಸ್ಥಿತಿ ಕಳೆದು ಕೊಂಡಿದ್ದಾರೆ ಎಂಬ ಬಿಜೆಪಿ ಮುಖಂಡ ಗೋ.ಮಧುಸೂದನ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ನಾನು ಬೆಂಗಳೂರಿನ ಮೆಂಟಲ್ ಆಸ್ಪತ್ರೆಗೆ ಹೋಗಲು ಸಿದ್ದನಿದ್ದೇನೆ. ಬೇಕಾದ್ರೆ ಗೋ ಮಧುಸೂದನ್ ನನ್ನನ್ನು ಕರೆದು ಕೊಂಡು ಹೋಗಲಿ. ಆಗಲಾದ್ರು ನಾನು ಮೆಂಟಲಿ ಫಿಟ್ ಎಂಬುದನ್ನು ಮಧುಸೂದನ್ ತಿಳಿದುಕೊಳ್ಳಲಿ ಎಂದು ಟಾಂಗ್ ನೀಡಿದ್ರು.

    ದೇಶದಲ್ಲಿ ಭದ್ರತೆ ನೇಪದಲ್ಲಿ ವಿಐಪಿ ಸಂಸ್ಕೃತಿ ದೇಶದಿಂದ ತೊಲಗಬೇಕಿದೆ. ಇದರ ಮೇಲೆ ರಾಷ್ಟ್ರೀಯ ಮಟ್ಟದಲ್ಲಿ ಚರ್ಚೆ ನಡೆಯಬೇಕಿದೆ ಎಂದು ಅವರು ಹೇಳಿದರು.

    ಬಸವರಾಜ ರಾಯರೆಡ್ಡಿ ಶುಕ್ರವಾರ ಕೊಪ್ಪಳದಲ್ಲಿ ಹೇಳಿದ ಹೇಳಿಕೆಯ ವಿಡಿಯೋವನ್ನು ಇಲ್ಲಿ ನೀಡಲಾಗಿದೆ.

    https://www.youtube.com/watch?v=ncnWx77c_bQ