ರಾಮನಗರ: ಕಂಚುಗಲ್ ಬಂಡೆಮಠದ ಬಸವಲಿಂಗ ಸ್ವಾಮೀಜಿ (Basavalinga Swamiji) ಆತ್ಮಹತ್ಯೆ ಪ್ರಕರಣದಲ್ಲಿ ಮೂವರೂ ಆರೋಪಿಗಳನ್ನು ನವೆಂಬರ್ 15 ರವರೆಗೂ ನ್ಯಾಯಾಂಗ ಬಂಧನಕ್ಕೆ (Judicial Custody) ಒಪ್ಪಿಸಲಾಗಿದೆ.
ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿಗಳನ್ನು ಮಾಗಡಿ ಪೊಲೀಸರು ಇಂದು ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ್ದರು. ಈ ವೇಳೆ ವಿಚಾರಣೆ ನಡೆಸಿದ ಒಂದನೇ ಹೆಚ್ಚುವರಿ ನ್ಯಾಯಾಧೀಶೆ ಎಂ. ಧನಲಕ್ಷ್ಮಿ ಮೂವರು ಆರೋಪಿಗಳಿಗೆ ನ.15ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿದ್ದಾರೆ. ಇದನ್ನೂ ಓದಿ: ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ – NIA ದಾಳಿ, ಮೂವರ ಬಂಧನ
ಪ್ರಕರಣದ ಎ1 ಆರೋಪಿ ಕಣ್ಣೂರು ಮಠದ ಡಾ. ಮೃತ್ಯುಂಜಯಶ್ರೀ, ಎ3 ಆರೋಪಿ ಮಹದೇವಯ್ಯನನ್ನು ರಾಮನಗರ ಜಿಲ್ಲಾ ಕಾರಾಗೃಹಕ್ಕೆ ರವಾನೆ ಮಾಡಲಾಗಿದ್ದು, ಎ2 ಆರೋಪಿ ನೀಲಾಂಬಿಕೆಯನ್ನು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಾಗಿದೆ. ಅಲ್ಲದೇ ಪ್ರಕರಣದಲ್ಲಿ ಮತ್ತಷ್ಟು ಮಂದಿ ಭಾಗಿ ಶಂಕೆ ಇದ್ದು ಪೊಲೀಸರ ತನಿಖೆ ಮುಂದುವರಿದಿದೆ. ಇದನ್ನೂ ಓದಿ: ಹಿಂದೂ ಭಾವನೆಗೆ ಧಕ್ಕೆ: ಮ್ಯೂಸಿಕ್ ಡೈರೆಕ್ಟರ್ ದೇವಿ ಶ್ರೀ ಪ್ರಸಾದ್ ವಿರುದ್ಧ ಪ್ರಕರಣ
Live Tv
[brid partner=56869869 player=32851 video=960834 autoplay=true]
ರಾಮನಗರ: ಮಾಗಡಿ ತಾಲೂಕಿನ ಕಂಚುಗಲ್ ಬಂಡೇಮಠದ (Bande Mutt) ಬಸವಲಿಂಗ ಸ್ವಾಮೀಜಿ (Basavalinga Swamiji) ಆತ್ಮಹತ್ಯೆ ಪ್ರಕರಣ ಸಂಬಂಧ ಮೂವರು ಆರೋಪಿಗಳ ಪೊಲೀಸ್ (Police) ಕಸ್ಟಡಿ ನಾಳೆ ಅಂತ್ಯಗೊಳ್ಳಲಿದೆ.
ನ.5 ಶನಿವಾರ ನಾಳೆ ಮತ್ತೆ ಮಾಗಡಿ ಕೋರ್ಟ್ಗೆ (Court) ಮೃತ್ಯುಂಜಯ ಸ್ವಾಮೀಜಿ, ನೀಲಾಂಬಿಕೆ ಹಾಗೂ ಮಹದೇವಯ್ಯರನ್ನು ಪೊಲೀಸರು ಹಾಜರು ಪಡಿಸಲಿದ್ದಾರೆ. ಕಳೆದ ಅಕ್ಟೋಬರ್ 30 ರಂದು ಬಂಧನವಾಗಿದ್ದ ಮೂವರು ಆರೋಪಿಗಳನ್ನು ಸೋಮವಾರ ಕೋರ್ಟ್ಗೆ ಹಾಜರು ಪಡಿಸಲಾಗಿತ್ತು ಬಳಿಕ ಹೆಚ್ಚಿನ ತನಿಖೆಗಾಗಿ ಪೊಲೀಸ್ ಕಸ್ಟಡಿಗೆ ಪಡೆಯಲಾಗಿತ್ತು. ಸದ್ಯ ನಾಳೆಗೆ ಪೊಲೀಸ್ ಕಸ್ಟಡಿ ಅಂತ್ಯಗೊಳ್ಳಲಿದ್ದು ಈ ಬಗ್ಗೆ ಮತ್ತೆ ಮಾಗಡಿ ಜೆಎಂಎಫ್ಸಿ ಕೋರ್ಟ್ ನಾಳೆ ವಿಚಾರಣೆ ನಡೆಸಲಿದೆ. ಇದನ್ನೂ ಓದಿ: 4 ಕ್ಷೇತ್ರಗಳ ಪೈಕಿ ಸಿದ್ದು ಎಲ್ಲಿಂದ ಸ್ಪರ್ಧೆ – ನ.13ಕ್ಕೆ ಪ್ರಕಟ ಸಾಧ್ಯತೆ
ಪ್ರಕರಣ ಸಂಬಂಧ ಮತ್ತಷ್ಟು ಸಾಕ್ಷಿ ಕಲೆಹಾಕುವ ನಿಟ್ಟಿನಲ್ಲಿ ಮತ್ತೆ ಪೊಲೀಸರು ಕಸ್ಟಡಿಗೆ ಕೇಳ್ತಾರಾ ಅಥವಾ ಆರೋಪಿಗಳಿಗೆ ನ್ಯಾಯಾಂಗ ಬಂಧನಕ್ಕೆ ನೀಡುತ್ತಾರಾ ಎನ್ನುವುದನ್ನು ಕಾದುನೋಡಬೇಕಿದೆ. ಈಗಾಗಲೇ ಪೊಲೀಸ್ ತನಿಖೆ ವೇಳೆ ಕಣ್ಣೂರು ಮಠ ಸ್ವಾಮೀಜಿ ತಪ್ಪೊಪ್ಪಿಕೊಂಡಿದ್ದಾರೆ ಎನ್ನಲಾಗಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ. ಇದನ್ನೂ ಓದಿ: ಬಂಡೇಮಠ ಶ್ರೀಗಳ ಆತ್ಮಹತ್ಯೆ ಕೇಸ್- ವೀರಶೈವ ಲಿಂಗಾಯತ ಮುಖಂಡನಿಗೆ ನೋಟಿಸ್
Live Tv
[brid partner=56869869 player=32851 video=960834 autoplay=true]
ರಾಮನಗರ: ಮಾಗಡಿ ತಾಲೂಕಿನ ಕಂಚುಗಲ್ ಬಂಡೆಮಠದ ಬಸವಲಿಂಗ ಶ್ರೀ (BandeMutt Sri) ಗಳ 11ನೇ ದಿನದ ಕಾರ್ಯ ಇಂದು ನಡೆದಿದೆ. ಸಿದ್ದಗಂಗಾಶ್ರೀಗಳ ನೇತೃತ್ವದಲ್ಲಿ ಶಿವಗಣಾರಾಧನೆ ಕಾರ್ಯಕ್ರಮಕ್ಕೆ ನಡೆಸಲಾಗಿದ್ದು, ಮಠಕ್ಕೆ ಆಗಮಿಸುವ ಭಕ್ತರಿಗೆ ಪ್ರಸಾದದ ವ್ಯವಸ್ಥೆ ಕಲ್ಪಿಸಲಾಗಿತ್ತು. ಮತ್ತೊಂದೆಡೆ ಪೊಲೀಸ್ ಕಸ್ಟಡಿಯಲ್ಲಿರೋ ಆರೋಪಿಗಳ ವಿಚಾರಣೆ ಮುಂದುವರಿದಿದ್ದು ಇಂದು ಸ್ಥಳ ಮಹಜರು ನಡೆಸಲಾಗಿದೆ. ಅಲ್ಲದೇ ವಿಚಾರಣೆ ವೇಳೆ ಕಣ್ಣೂರು ಶ್ರೀ ತಪ್ಪು ಒಪ್ಪಿಕೊಂಡಿದ್ದಾರೆ ಎಂದು ಹೇಳಲಾಗಿದೆ.
ಬಸವಲಿಂಗ ಶ್ರೀಗಳ ಆತ್ಮಹತ್ಯೆ ಪ್ರಕರಣ ಸಂಬಂಧ ಕಸ್ಟಡಿಯಲ್ಲಿರೋ ಮೂವರು ಆರೋಪಿಗಳ ವಿಚಾರಣೆ ಮೂರನೇ ದಿನವೂ ತೀವ್ರಗೊಂಡಿದೆ. ವಿಚಾರಣೆ ವೇಳೆ ಕಣ್ಣೂರು ಮಠದ ಮೃತ್ಯುಂಜಯ ತಪ್ಪೊಪ್ಪಿಕೊಂಡಿರೋ ಸ್ವಾಮೀಜಿ ತಪ್ಪೊಪ್ಪಿಕೊಂಡಿದ್ದಾರೆ ಎನ್ನಲಾಗಿದೆ. ಬಸವಲಿಂಗ ಶ್ರೀ ವಿಚಾರದಲ್ಲಿ ತಪ್ಪು ಮಾಡಿದ್ದೇನೆ, ಅದರ ಹೊರತಾಗಿ ಇನ್ಯಾರನ್ನೂ ಟಾರ್ಗೆಟ್ ಮಾಡಿಲ್ಲ ಅಂತಾ ಪಶ್ಚಾತ್ತಾಪ ವ್ಯಕ್ತಪಡಿಸಿರೋ ಬಗ್ಗೆ ಪೊಲೀಸ್ ಮೂಲಗಳು ಮಾಹಿತಿ ನೀಡಿವೆ. ಅಲ್ಲದೇ ಇಂದು ಮೃತ್ಯುಂಜಯ ಶ್ರೀಗಳ ಜೊತೆ ಕಣ್ಣೂರು ಮಠದಲ್ಲೂ ಸ್ಥಳ ಮಹಜರು ಮಾಡಲಾಗಿದೆ. ಕಣ್ಣೂರು ಮಠ (Kannuru Mutt) ದ ಮೊದಲ ಮಹಡಿಯ ವಿಶ್ರಾಂತಿ ಕೊಠಡಿ ಕಂಪ್ಯೂಟರ್, ಬೀರು, ಲಾಕರ್ ಗಳನ್ನ ಪರೊಶೀಲಿಸಿರೋ ಪೊಲೀಸರು ಅಗತ್ಯ ದಾಖಲೆಗಳನ್ನು ಸಂಗ್ರಹಿಸಿದ್ದಾರೆ ಎನ್ನಲಾಗಿದೆ.
ಇನ್ನೂ ಮತ್ತೊಂದೆಡೆ ಮಠದ ಆವರಣದಲ್ಲಿ ನಡೆದ ಪುಣ್ಯಾರಾಧನೆ ಕಾರ್ಯಕ್ರಮದಲ್ಲಿ ಸಿದ್ದಗಂಗಾ ಮಠದ ಸಿದ್ದಲಿಂಗ ಶ್ರೀ ಸೇರಿ ಹಲವು ಮಠಾಧೀಶರು ಭಾಗಿಯಾಗಿದ್ರು. ಬಸವಲಿಂಗ ಶ್ರೀಗಳ ಗದ್ದುಗೆಯಲ್ಲಿ ಶಿವಪೂಜೆ ಮಾಡಿ ಸಿದ್ದಗಂಗಾ ಶ್ರೀಗಳ ಪಾದಪೂಜೆಯನ್ನ ನೆರವೇರಿಸಲಾಯಿತು. ಮಠಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಪ್ರಸಾದದ ವ್ಯವಸ್ಥೆ ಕಲ್ಪಿಸಲಾಗಿತ್ತು. ಮಠದ ಮುಖಂಡರು ಸೇರಿ ನೂರಾರು ಭಕ್ತಾದಿಗಳು ಪುಣ್ಯಸ್ಮರಣೆಯಲ್ಲಿ ಭಾಗಿಯಾಗಿದ್ದರು. ಇದನ್ನೂ ಓದಿ: ಬಂಡೇಮಠ ಶ್ರೀಗಳ ಆತ್ಮಹತ್ಯೆ ಕೇಸ್- ವೀರಶೈವ ಲಿಂಗಾಯತ ಮುಖಂಡನಿಗೆ ನೋಟಿಸ್
ಇದೇವೇಳೆ ಮಾತನಾಡಿದ ವೀರಶೈವ ಲಿಂಗಾಯತ ನಿಗಮದ ಅಧ್ಯಕ್ಷ ಪರಮಶಿವಯ್ಯ ಮಾತನಾಡಿ ಬಂಧನ ಆಗಿರೋ ಕಣ್ಣೂರು ಶ್ರೀ ನಡೆ ಹಿಂದಿನಿಂದಲೂ ಸರಿ ಇಲ್ಲ. ಸಾಕಷ್ಟು ಹಗರಣ ಮಾಡಿ ಇತರ ಮಠಗಳು ಇವರನ್ನ ದೂರ ಇಟ್ಟಿದ್ರು. ಆದರೆ ಕಣ್ಣೂರು ಮಠದ ಮೃತ್ಯುಂಜಯ ಸ್ವಾಮೀಜಿ ಬಸವಲಿಂಗ ಶ್ರೀಗೆ ಇವರು ಅನ್ಯಾಯ ಮಾಡಿದ್ದಾರೆ. ಈಗ ಅವರ ಬಂಧನ ಆಗಿದೆ. ಅವರು ಜೀವನ ಪೂರ್ತಿ ಜೈಲಿನಲ್ಲಿರಬೇಕು, ಕಾನೂನಿನ ಪ್ರಕಾರ ತಕ್ಕ ಶಿಕ್ಷೆ ನೀಡಬೇಕು ಎಂದು ಒತ್ತಾಯಿಸಿದ್ರು. ಅಲ್ಲದೇ ಶೀಘ್ರದಲ್ಲೇ ಬಂಡೇಮಠಕ್ಕೆ ನೂತನ ಮಠಾಧೀಶರ ನೇಮಕ ಮಾಡಲಾಗುವುದು. ಸಿದ್ದಗಂಗಾ ಶ್ರೀಗಳ ನಿರ್ಣಯದಂತೆ ಸಚ್ಚಾರಿತ್ರ್ಯ, ವಿದ್ಯಾವಂತ, ಆಧ್ಯಾತ್ಮಿಕ ಜ್ಞಾನ ಇರುವವರ ನೇಮಕ ಮಾಡಲಾಗುವು ಎಂದರು.
ಒಟ್ಟಾರೆ ಬಸವಲಿಂಗ ಶ್ರೀಗಳ ಆತ್ಮಹತ್ಯೆಯಿಂದಾಗಿ ಮಠದ ಭಕ್ತರು ಹಾಗೂ ಮಕ್ಕಳಲ್ಲಿ ಅನಾಥ ಪ್ರಜ್ಞೆ ಕಾಡುತ್ತಿದೆ. 25ವರ್ಷಗಳ ಕಾಲ ಮಠ ಮುನ್ನಡೆಸಿ ಅಭಿವೃದ್ಧಿ ಮಾಡಿದ್ದನ್ನ ಭಕ್ತರು ಸ್ಮರಿಸಿದ್ದಾರೆ. ಅಲ್ಲದೇ ಪೊಲೀಸರ ತನಿಖೆ ಕೂಡಾ ತೀವ್ರಗೊಂಡಿದ್ದು ಪ್ರಕರಣದ ಮತ್ತಷ್ಟು ಆರೋಪಿಗಳ ಬಂಧನವಾಗುವ ಸಾಧ್ಯತೆ ಇದೆ. ಇದನ್ನೂ ಓದಿ: ಬಂಡೇ ಮಠ ಶ್ರೀ ಆತ್ಮಹತ್ಯೆ ಪ್ರಕರಣ – ಮತ್ತೊಂದು ಪ್ರಭಾವಿ ಮಠದ ಶ್ರೀ ಭಾಗಿ?
Live Tv
[brid partner=56869869 player=32851 video=960834 autoplay=true]
ರಾಮನಗರ: ಬಂಡೇಮಠದ ಬಸವಲಿಂಗ ಸ್ವಾಮೀಜಿ (BandeMutt Basavalinga Swamji) ಆತ್ಮಹತ್ಯೆ ಪ್ರಕರಣ ದಿನಕ್ಕೊಂದು ಮೇಜರ್ ಟ್ವಿಸ್ಟ್ ಪಡೆದುಕೊಳ್ಳುತ್ತಿದೆ. ಇದೀಗ ಪ್ರಕರಣ ಸಂಬಂಧ ಬೆಂಗಳೂರಿನ ಬಸವೇಶ್ವರ ನಗರದ ನಿವಾಸಿಯಾಗಿರುವ ವೀರಶೈವ ಲಿಂಗಾಯತ ಮುಖಂಡನಿಗೆ ನೋಟಿಸ್ ನೀಡಲಾಗಿದೆ.
ಡೆತ್ನೋಟ್ನಲ್ಲಿ ಸಚ್ಚಿದಾನಂದ ಮೂರ್ತಿ ಹೆಸರು ಉಲ್ಲೇಖ ಆಗಿದ್ದರಿಂದ ಮಾಗಡಿ ಪೋಲಿಸರು (Magadi Police) ನೋಟಿಸ್ ನೀಡಿದ್ದಾರೆ. ಸಚ್ಚಿದಾನಂದ ಮೂರ್ತಿಯಿಂದಲೂ ಅಪಪ್ರಚಾರ ಎಂದು ಬಸವಲಿಂಗ ಶ್ರೀಗಳು ಬರೆದಿದ್ದರು. ಹೆಸರು ಪ್ರಸ್ತಾಪ ಹಿನ್ನಲೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ನಲ್ಲಿ ತಿಳಿಸಲಾಗಿದೆ. ಪ್ರಕರಣ ಸಂಬಂಧ ಮಾಹಿತಿ ಕಲೆಹಾಕುವ ನಿಟ್ಟನಲ್ಲಿ ವಿಚಾರಣೆ ನಡೆಸಲಾಗುತ್ತದೆ. ಇದನ್ನೂ ಓದಿ: ಬಂಡೇ ಮಠ ಶ್ರೀ ಆತ್ಮಹತ್ಯೆ ಪ್ರಕರಣ – ಮತ್ತೊಂದು ಪ್ರಭಾವಿ ಮಠದ ಶ್ರೀ ಭಾಗಿ?
ಪ್ರಕರಣ ಸಂಬಂಧ ಈಗಾಗಲೇ ಪೊಲೀಸ್ ಕಸ್ಟಡಿಯಲ್ಲಿರುವ ಮೂವರು ಆರೋಪಿಗಳು ವಿಚಾರ ವೇಳೆ ಮಹತ್ವದ ವಿಚಾರಗಳನ್ನು ಬಾಯ್ಬಿಟ್ಟಿದ್ದಾರೆ ಎನ್ನಲಾಗಿದೆ. ಡೆತ್ನೋಟ್ನಲ್ಲಿ ಇಬ್ಬರು ಶ್ರೀಗಳಿಂದ ತೊಂದರೆ ಆಗ್ತೀದೆ ಎಂದು ಬಸವಲಿಂಗ ಶ್ರೀ ಉಲ್ಲೇಖಿಸಿದ್ದಾರೆ. ಇದನ್ನ ಬೆನ್ನತ್ತಿರುವ ಪೊಲೀಸರು ಆ ಮತ್ತೊಬ್ಬ ಪ್ರತಿಷ್ಠಿತ ಮಠದ ಶ್ರೀಗೂ ಬಲೆ ಬೀಸಿದ್ದಾರೆ. ಬಂಧಿತ ಮೂವರು ಆರೋಪಿಗಳ ವಿಚಾರಣೆ ನಡೆಸಿದ ಪೊಲೀಸರಿಗೆ ಮತ್ತಷ್ಟು ಆಶ್ಚರ್ಯಕರ ವಿಚಾರಗಳನ್ನು ಆರೋಪಿಗಳು ಬಾಯ್ಬಿಟ್ಟಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಬಂಡೆಮಠ ಶ್ರೀ ಆತ್ಮಹತ್ಯೆ ಪ್ರಕರಣ- ನೀಲಾಂಬಿಕೆ ಮೊಬೈಲ್ನಿಂದ ನಿತ್ಯ ಮೆಸೇಜ್!
ಬಸವಲಿಂಗ ಶ್ರೀಗೆ ಕಿರುಕುಳ ನೀಡಿದ್ದ ಆ ಮತ್ತೊಂದು ಮಠದ ಸ್ವಾಮೀಜಿ ಯಾರು..? ಬಂಡೇಮಠಕ್ಕೂ ಆ ಮತ್ತೊಬ್ಬ ಸ್ವಾಮೀಜಿಗೂ ಏನು ಸಂಬಂಧ ಎಂಬ ಪ್ರಶ್ನೆಗಳು ಉದ್ಭವಿಸಿವೆ. ಸದ್ಯ ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿರುವ ಪೊಲೀಸರು ಆ ಮತ್ತೊಬ್ಬ ಶ್ರೀಗಳನ್ನು ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ. ಅದು ಪ್ರತಿಷ್ಠಿತ ಮಠವೊಂದರ ಸ್ವಾಮೀಜಿ ಎಂಬ ಮಾತುಗಳು ಸಹ ಹರಿದಾಡುತ್ತಿವೆ. ಆದ್ರೆ, ಈ ಕುರಿತು ಮತ್ಯಾವ ಸ್ವಾಮೀಜಿಯನ್ನೂ ವಿಚಾರಣೆ ನಡೆಸಿಲ್ಲ ಎಂದು ಪೊಲೀಸರು ಹೇಳುತ್ತಿದ್ದಾರೆ.
Live Tv
[brid partner=56869869 player=32851 video=960834 autoplay=true]
ರಾಮನಗರ: ಮಾಗಡಿ (Magadi) ತಾಲೂಕಿನ ಬಂಡೆ ಮಠದ (Bande Mutt) ಬಸವಲಿಂಗ ಶ್ರೀಗಳ (Basavalinga Shree) ಆತ್ಮಹತ್ಯೆ ಪ್ರಕರಣವು ದಿನೇ ದಿನೇ ತಿರುವು ಪಡೆದುಕೊಳ್ಳುತ್ತಿದೆ. ಇದೀಗ ಬಂಡೆ ಸ್ವಾಮೀಜಿ ತಮಗಿಂತಲೂ ಎತ್ತರಕ್ಕೆ ಬೆಳೆದಿದ್ದಾರೆ ಎಂಬ ಹೊಟ್ಟೆಕಿಚ್ಚು ತಾಳಲಾರದೇ ಕಣ್ಣೂರು ಶ್ರೀಗಳು ಹನಿಟ್ರ್ಯಾಪ್ಗೆ ಯೋಜಿಸಿದ್ದರು ಎಂಬ ಮಾಹಿತಿ ಬೆಳಕಿಗೆ ಬಂದಿದೆ.
ಬಸವಲಿಂಗ ಸ್ವಾಮೀಜಿ ಹಾಗೂ ಕಣ್ಣೂರು ಸ್ವಾಮೀಜಿ ಸಹೋದರ ಸಂಬಂಧಿಗಳಾಗಿದ್ದು, ದೊಡ್ಡಪ್ಪ, ಚಿಕ್ಕಪ್ಪ ಮಕ್ಕಳಾಗಿದ್ದರು. ಆದರೆ ಬಂಡೆ ಸ್ವಾಮೀಜಿಗಳು ದಿನದಿಂದ ದಿನಕ್ಕೆ ಪ್ರಖ್ಯಾತಿಯನ್ನು ಪಡೆಯುತ್ತಿದ್ದದ್ದನ್ನು ನೋಡಿ ಕಣ್ಣೂರು ಶ್ರೀಗೆ ಹೊಟ್ಟೆಕಿಚ್ಚು ತರಿಸಿತ್ತು. ಈ ಹಿನ್ನೆಲೆಯಲ್ಲಿ ಕಣ್ಣೂರು ಮೃತ್ಯುಂಜಯ ಶ್ರೀ, ಬಂಡೇಮಠದ ಬಸವಲಿಂಗ ಸ್ವಾಮೀಜಿಯನ್ನು ಹೀಗೆ ಬಿಟ್ಟರೆ ನಮಗೆ ಉಳಿಗಾಲ ಇಲ್ಲ ಎಂದು ಇವರಿಗೆ ಖೆಡ್ಡ ತೋಡಲೇಬೇಕು ಎಂದು ನಿರ್ಧರಿಸಿದ್ದರು. ಇದರಿಂದಾಗಿಯೇ ಬಸವಲಿಂಗ ಸ್ವಾಮೀಜಿಯನ್ನು ಹನಿಟ್ರ್ಯಾಪ್ನಲ್ಲಿ ಸಿಕ್ಕಿ ಹಾಕಿಸಬೇಕು ಎಂದು ಯೋಜಿಸಿದರು. ಅದೇ ಸಮಯಕ್ಕೆ ಸ್ಥಳೀಯ ಮುಖಂಡ ಮಹದೇವಯ್ಯನ ಮೂಲಕ ನೀಲಾಂಬಿಕೆ, ಕಣ್ಣೂರು ಶ್ರೀಗಳಿಗೆ ಪರಿಚಯವಾಗಿದ್ದಳು.
ಅದಾದ ಬಳಿಕ ನೀಲಾಂಬಿಕೆ ತಾನು ಹೇಳಿದಂತೆ ಕೇಳುತ್ತಾಳೆ ಎನ್ನುವುದು ತಿಳಿಯುತ್ತಿದ್ದಂತೆ ಬಂಡೆಮಠದ ಶ್ರೀಗಳನ್ನು ಸಿಕ್ಕಿ ಹಾಕಿಸಲು ಕಣ್ಣೂರು ಶ್ರೀ ತಂತ್ರ ಹೂಡಿದ್ದಾರೆ. ಇದಾದ ಬಳಿಕ ಯುವತಿ ಬಂಡೆಮಠದ ಶ್ರೀಗಳ ಪರಿಚಯ ಮಾಡಿಕೊಂಡಿದ್ದಾಳೆ. ಸಲುಗೆ ಜಾಸ್ತಿ ಆಗುತ್ತಿದ್ದಂತೆ ಬಂಡೆ ಮಠದ ಶ್ರೀಗಳನ್ನು ತನ್ನ ತಾಳಕ್ಕೆ ತಕ್ಕಂತೆ ನೀಲಾಂಬಿಕಾ ಕುಣಿಸಿದ್ದಾಳೆ. ಅದಾದ ಬಳಿಕ ಬಂಡೆ ಶ್ರೀಗಳು ಕಾಲ್ ಮಾಡುವ ಬಗ್ಗೆ ಕಣ್ಣೂರು ಶ್ರೀ ಬಳಿ ನೀಲಾಂಬಿಕೆ ಹೇಳಿದ್ದಳು. ಆಗ ಕಣ್ಣೂರು ಶ್ರೀಗಳು, ನಿಲಾಂಬಿಕಾ ಬಳಿ ವೀಡಿಯೋ ಮಾಡ್ಕೊ ಅವರನ್ನ ಮಠದಿಂದ ಓಡಿಸಬೇಕು ಎಂದಿದ್ದರು.
ಕಣ್ಣೂರು ಶ್ರೀ ಅಣತಿಯಂತೆ ಬಸವಲಿಂಗ ಶ್ರೀಗಳ ಜೊತೆ ನಿಲಾಂಬಿಕೆ ವೀಡಿಯೋ ಚಾಟ್ ಆರಂಭಿಸಿದ್ದು, ಅಲ್ಲದೇ ಚಾಟಿಂಗ್ ವೇಳೆ ನಗ್ನವಾಗುವಂತೆ ಹೇಳಿದ್ದಾಳೆ. ಆಕೆಯ ವೈಯ್ಯಾರದ ಮಾತಿಗೆ ಮರುಳಾದ ಶ್ರೀ ನಗ್ನವಾಗಿದ್ದಾರೆ. ಈ ಸಂದರ್ಭದಲ್ಲಿ ವೀಡಿಯೋ ಕರೆಗಳನ್ನು ಆಕೆ ರೆಕಾರ್ಡ್ ಮಾಡುತ್ತಿದ್ದಳು. ನಿಲಾಂಬಿಕೆ ಮೂರು ವೀಡಿಯೋ ಮಾಡಿಟ್ಟುಕೊಂಡು ಮಹದೇವಯ್ಯನಿಗೆ ನೀಡಿದ್ದಳು. ಅದಾದ ಬಳಿಕ ಮಹದೇವಯ್ಯ ವೀಡಿಯೋ ಎಡಿಟ್ ಮಾಡಿ ಬಂಡೆ ಶ್ರೀಗಳಿಗೆ ತೋರಿಸಿ ಬೆದರಿಕೆ ಹಾಕಿದ್ದ ಎನ್ನುವುದು ಇದೀಗ ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ. ಇದನ್ನೂ ಓದಿ: ಬಂಡೆ ಶ್ರೀಗೆ ಖೆಡ್ಡಾ ತೋಡಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿ ಅರೆಸ್ಟ್
ರಾಮನಗರ: ಮಾಗಡಿ (Magadi) ತಾಲೂಕಿನ ಬಂಡೆ ಮಠದ (Bande Mutt) ಬಸವಲಿಂಗ ಶ್ರೀಗಳ (Basavalinga Shree) ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಇದೀಗ ಕಣ್ಣೂರು ಮೃತ್ಯಂಜಯ ಶ್ರೀ (Kannur Swamiji), ಸ್ಥಳೀಯ ಮುಖಂಡ ಮಹಾದೇವಯ್ಯ ಹಾಗೂ ಓರ್ವ ಯುವತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಸವಲಿಂಗ ಶ್ರೀಗಳು ಆತ್ಮಹತ್ಯೆಗೂ ಮುನ್ನ ಡೆತ್ನೋಟ್ನಲ್ಲಿ ಮೂರು ಪುಟಗಳಲ್ಲಿ ಸವಿಸ್ತಾರವಾಗಿ ಮಾಹಿತಿ ನೀಡಿದ್ದರು. ಈ ವೇಳೆ 21ವರ್ಷದ ಯುವತಿಯನ್ನು ಬಿಟ್ಟು ಕಣ್ಣೂರು ಶ್ರೀಗಳು ಹನಿಟ್ರ್ಯಾಪ್ ಮಾಡಿಸಿರುವ ಕುರಿತು ಹಾಗೂ ಕಣ್ಣೂರು ಶ್ರೀಗಳ ಷಡ್ಯಂತ್ರ್ಯದ ಬಗ್ಗೆಯೂ ಡೆತ್ನೋಟ್ನಲ್ಲಿ ಉಲ್ಲೇಖಿಸಿದ್ದರು. ಅಷ್ಟೇ ಅಲ್ಲದೇ ಕಣ್ಣೂರು ಸ್ವಾಮೀಜಿ ಹಾಗೂ ಇತರ ಏಳೆಂಟು ಮಂದಿಯಿಂದ ಕಿರುಕುಳ ಎದುರಾಗ್ತಿದೆ. ಅವರು ಮಠದ ವಿಚಾರದಲ್ಲಿ ಆಗಾಗ ತೊಂದರೆ ಉಂಟುಮಾಡುತ್ತಿದ್ದಾರೆ. ನನ್ನ ಸಾವಿಗೆ ಗೊತ್ತಿಲ್ಲದಿರುವ ಆ ಯುವತಿಯೇ ಕಾರಣ ಎಂದು ಸಾವಿಗೂ ಮೊದಲು ಬಂಡೆ ಮಠದ ಶ್ರೀಗಳು ಡೆತ್ ನೋಟ್ ಬರೆದಿಟ್ಟಿದ್ದರು.
ಈ ಹಿನ್ನೆಲೆಯಲ್ಲಿ ರಾಮನಗರ ಪೊಲೀಸರು ವಿಚಾರಣೆಯನ್ನು ಚುರುಕುಗೊಳಿಸಿದ್ದರು. ಈ ವೇಳೆ ಬೆಂಗಳೂರು ಮೂಲದ ಮಹಿಳೆಯನ್ನು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಕಣ್ಣೂರು ಶ್ರೀ ಹಾಗೂ ಬಂಡೆ ಮಠದ ಶ್ರೀಗಳು ಸಂಬಂಧಿಗಳಾಗಿರುವ ವಿಷಯ ಬೆಳಕಿಗೆ ಬಂದಿದೆ. ಈ ವೇಳೆ ಕಣ್ಣೂರು ಶ್ರೀ ಪೀಠಕ್ಕಾಗಿ ಷಡ್ಯಂತ್ರ ನಡೆಸಿದ್ದ ವಿಷಯವು ಬೆಳಕಿಗೆ ಬಂದಿದ್ದು, ಕಣ್ಣೂರು ಶ್ರೀಗಳನ್ನು ರಾಮನಗರ ಪೊಲೀಸರು ಬಂಧಿಸಿದ್ದಾರೆ. ಇದಲ್ಲದೆ ಸ್ವಾಮೀಜಿ ಜೊತೆ ಏಳೆಂಟು ಮಂದಿ ಸಹ ಕೈಜೋಡಿಸಿರುವ ಬಗ್ಗೆ ಮೂಲಗಳು ತಿಳಿಸಿವೆ. ಇದನ್ನೂ ಓದಿ:ಬಂಡೆಮಠದ ಶ್ರೀ ಆತ್ಮಹತ್ಯೆ ಕೇಸ್ – ನಗ್ನವಾಗಿರುವ ಮೂರನೇ ವೀಡಿಯೋ ಬಹಿರಂಗ
ಒಟ್ಟಾರೆಯಾಗಿ ಬಂಡೆಮಠದ ಬಸವಲಿಂಗ ಶ್ರೀಗಳ ಆತ್ಮಹತ್ಯೆ ಪ್ರಕರಣವು ಪ್ರತಿದಿನ ಹೊಸ ಹೊಸ ತಿರುವು ಪಡೆದುಕೊಳ್ಳುತ್ತಿದೆ. ಬಂಡೆಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ರಾಮನಗರ ಪೊಲೀಸರು ಚುರುಕಿನ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಈಗಾಗಲೇ ಪ್ರಕರಣ ಭೇದಿಸಲು ಮೂರು ತಂಡಗಳನ್ನು ರಚಿಸಿದ್ದಾರೆ. ನಾಲ್ವರು ಸಿಪಿಐ ಹಾಗೂ ಐದು ಜನ ಪಿಎಸ್ಐ ಮತ್ತು ಒಬ್ಬರು ಎವೈಎಸ್ಪಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಬಸವಲಿಂಗ ಶ್ರೀಗಳ ಆತ್ಮಹತ್ಯೆ ಕೇಸ್ನಲ್ಲಿ ಮತ್ತೊಂದು ಮಠದ ಸ್ವಾಮೀಜಿ ಭಾಗಿ?
Live Tv
[brid partner=56869869 player=32851 video=960834 autoplay=true]
ರಾಮನಗರ: ಮಾಗಡಿ (Magadi) ತಾಲೂಕಿನ ಬಂಡೆ ಮಠದ (Bande Mutt) ಬಸವಲಿಂಗ ಶ್ರೀಗಳ (Basavalinga Shree) ಆತ್ಮಹತ್ಯೆ ಪ್ರಕರಣವು ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಶ್ರೀಗಳಿಗೆ ಸಂಬಂಧಿಸಿ ಇದೀಗ ಮೂರನೇ ವೀಡಿಯೋ ವೈರಲ್ ಆಗುತ್ತಿದೆ.
ಬಂಡೆಮಠದ ಬಸವಲಿಂಗ ಶ್ರೀಗಳ ಆತ್ಮಹತ್ಯೆ ಪ್ರಕರಣವು ಪ್ರತಿದಿನ ಹೊಸ ಹೊಸ ತಿರುವು ಪಡೆದುಕೊಳ್ಳುತ್ತಿದೆ. ಇದೀಗ ಸ್ವಾಮೀಜಿಯ ಮೂರನೇ ವೀಡಿಯೋ ವೈರಲ್ ಆಗಿದ್ದು, ಮೊದಲೆರಡು ವೀಡಿಯೋದಲ್ಲಿ ಅರೆ ನಗ್ನವಾಗಿದ್ದ ಬಂಡೆಶ್ರೀ, ಇದೀಗ ನಗ್ನವಾಗಿರುವ ಮೂರನೇ ವೀಡಿಯೋ ಬಹಿರಂಗವಾಗಿದೆ.
ಆದರೆ ವೀಡಿಯೋ ಕಾಲ್ (Video Call) ಮಾಡಿರುವ ಮಹಿಳೆ (Woman) ಯಾರೆಂದು ಈವರೆಗೆ ಗೊತ್ತಾಗಿಲ್ಲ. ಬದಲಿಗೆ ಆಕೆ ಸಂಪೂರ್ಣ ವೀಡಿಯೋ ಕಾಲ್ನ್ನು ರೆಕಾರ್ಡ್ ಮಾಡಿಕೊಂಡಿದ್ದು, ಆಡಿಯೋವನ್ನು ಸಂಪೂರ್ಣವಾಗಿ ಮ್ಯೂಟ್ ಮಾಡಿದ್ದಾಳೆ. ಇದನ್ನೂ ಓದಿ: ಬಂಡೇ ಮಠದ ಸ್ವಾಮೀಜಿ ಆತ್ಮಹತ್ಯೆ ಹಿಂದೆ ಲೋಕಲ್ ಸ್ವಾಮೀಜಿ ಕೈವಾಡ!
ಬಂಡೆಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ರಾಮನಗರ ಪೊಲೀಸರು ಚುರುಕಿನ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಈಗಾಗಲೇ ಪ್ರಕರಣ ಭೇದಿಸಲು ಮೂರು ತಂಡಗಳನ್ನು ರಚಿಸಿದ್ದಾರೆ. ನಾಲ್ವರು ಸಿಪಿಐ ಹಾಗೂ ಐದು ಜನ ಪಿಎಸ್ಐ ಮತ್ತು ಒಬ್ಬರು ಎವೈಎಸ್ಪಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಈಗಾಗಲೇ ಸ್ವಾಮೀಜಿ ಆತ್ಮಹತ್ಯೆ ಮಾಡಿಕೊಂಡಿದ್ದ ಸ್ಥಳದಲ್ಲಿ ದೊರೆತಿದ್ದ ಸ್ಥಳದಲ್ಲಿ ಡೆತ್ನೋಟ್ನಲ್ಲಿದ್ದ 8 ಜನರನ್ನು ವಿಚಾರಣೆ ನಡೆಸಿದ್ದಾರೆ. ಅಷ್ಟೇ ಅಲ್ಲದೇ ಘಟನೆಗೆ ಸಂಬಂಧಿಸಿ ಒಬ್ಬ ಸ್ವಾಮೀಜಿ ಹಾಗೂ ಬೆಂಗಳೂರಿನ ಮಹಿಳೆಯ ಓರ್ವ ಮಹಿಳೆ ಬಗ್ಗೆಯೂ ಮಾಹಿತಿಯನ್ನು ಕಲೆ ಹಾಕಿದ್ದಾರೆ.
ಒಟ್ಟಾರೆ ಶ್ರೀಗಳ ಆತ್ಮಹತ್ಯೆ ಕುರಿತು ಹಲವು ಪ್ರಶ್ನೆಗೆ ಪೊಲೀಸರೇ ಉತ್ತರಿಸಬೇಕಿದೆ. ಶ್ರೀಗಳಿಗೆ ಖೆಡ್ಡಾ ತೋಡಿದ ಆ ಗ್ಯಾಂಗ್ ಯಾವುದು, ಅದರಲ್ಲಿ ಯಾರೆಲ್ಲಾ ಇದ್ದಾರೆ.? ಇಡೀ ಪ್ರಕರಣದ ಮಾಸ್ಟರ್ ಮೈಂಡ್ ಯಾರು ಎಂಬುದು ತನಿಖೆ ಬಳಿಕವಷ್ಟೇ ಬಯಲಾಗಬೇಕಿದೆ. ಇದನ್ನೂ ಓದಿ: ಬಸವಲಿಂಗ ಶ್ರೀಗಳ ಆತ್ಮಹತ್ಯೆ ಕೇಸ್ನಲ್ಲಿ ಮತ್ತೊಂದು ಮಠದ ಸ್ವಾಮೀಜಿ ಭಾಗಿ?
Live Tv
[brid partner=56869869 player=32851 video=960834 autoplay=true]
ರಾಮನಗರ: ಮಾಗಡಿ ತಾಲೂಕಿನ ಬಂಡೇ ಮಠದ (Bande Mutt) ಬಸವಲಿಂಗ ಶ್ರೀಗಳ (Basavalinga Swamiji) ಆತ್ಮಹತ್ಯೆ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಮತ್ತೊಂದು ಸ್ಫೋಟಕ ಮಾಹಿತಿ ಬಹಿರಂಗವಾಗಿದೆ.
ಹೌದು. ಸ್ಥಳೀಯ ಸ್ವಾಮೀಜಿ ಹಾಗೂ ಇತರ ಏಳೆಂಟು ಮಂದಿಯಿಂದ ಕಿರುಕುಳ ಎದುರಾಗ್ತಿದೆ. ಮಠದ ವಿಚಾರದಲ್ಲಿ ಆಗ್ಗಾಗ್ಗೆ ತೊಂದರೆ ಉಂಟು ಮಾಡ್ತಿದ್ದಾರೆ. ನನ್ನ ಸಾವಿಗೆ ಗೊತ್ತಿಲ್ಲದಿರುವ ಆ ಮಹಿಳೆಯೇ ಕಾರಣ ಎಂದು ಸಾವಿಗೂ ಮುನ್ನ ಡೆತ್ ನೋಟ್ನಲ್ಲಿ (Death Note) ಬರೆದಿದ್ದಾರೆ. ಈ ಹಿನ್ನೆಲೆಯಲ್ಲಿ ಶ್ರೀಗಳ ಆತ್ಮಹತ್ಯೆ ಹಿಂದೆ ಲೋಕಲ್ ಸ್ವಾಮೀಜಿಯೊಬ್ಬರ ಕೈವಾಡ ಇರೋದು ತನಿಖೆ (Investigation) ವೇಳೆ ಕನ್ಫರ್ಮ್ ಆಗಿದೆ. ಅಲ್ಲದೇ ಸ್ಥಳೀಯ ಸ್ವಾಮೀಜಿಯೊಂದಿಗೆ ಏಳೆಂಟು ಮಂದಿ ಸಹ ಕೈ ಜೋಡಿಸಿರುವ ಮಾಹಿತಿ ಇದೆ ಅನ್ನೋದು ಪೊಲೀಸರ ಗುಮಾನಿ. ಇದನ್ನೂ ಓದಿ: ಬಂಡೇ ಮಠದ ಶ್ರೀ ಬರೆದಿದ್ದು ಒಟ್ಟು 6 ಪುಟಗಳ ಡೆತ್ನೋಟ್ – ಈಗಾಗಲೇ 20 ಮಂದಿಯ ವಿಚಾರಣೆ
ಮಹಿಳೆ ಮೊಬೈಲ್ ಸಂಖ್ಯೆ ಪತ್ತೆ: ಆತ್ಮಹತ್ಯೆ (Suicide) ದಿನ ಶ್ರೀಗಳ ಮೊಬೈಲ್ (Mobile) ಸೀಜ್ ಮಾಡಿ ಎಫ್ಎಸ್ಎಲ್ಗೆ ಕಳಿಸಿದ್ದ ಪೊಲೀಸರು ಇದೀಗ ಮೊಬೈಲ್ನ ಸಂಪೂರ್ಣ ಡೀಟೈಲ್ಸ್ ಕಲೆಹಾಕಿದ್ದಾರೆ. ಒಟ್ಟು ಮೂರು ವೀಡಿಯೋಗಳನ್ನ ಸ್ವಾಮೀಜಿಗೆ ಮೊಬೈಲ್ನಲ್ಲಿ ಕಳುಹಿಸಲಾಗಿದೆ. ಅದರಲ್ಲಿ ಮಹಿಳೆಯ ಮುಖ ಕಾಣದಂತೆ ಎಡಿಟ್ ಮಾಡಲಾಗಿದೆ. ಇದೀಗ ಸ್ವಾಮೀಜಿಗೆ ವೀಡಿಯೊ ಕಾಲ್ ರೆಕಾರ್ಡ್ ಕಳಿಸಿರೊ ಆ ಮಹಿಳೆಯ ಮೊಬೈಲ್ ನಂಬರ್ ಪತ್ತೆ ಮಾಡಲಾಗಿದೆ. ಮಹಿಳೆಯ ಬಂಧನಕ್ಕೆ ಬಲೆ ಬೀಸಿರುವ ಪೊಲೀಸರು ಇಂದು ಅಥವಾ ನಾಳೆ ಒಳಗಾಗಿ ಅರೆಸ್ಟ್ ಮಾಡುವ ಸಾಧ್ಯತೆ ಇದೆ. ಮಹಿಳೆ ವಿಚಾರಣೆ ಬಳಿಕ ಮಹಿಳೆ ಹಿಂದಿರುವ ಕಾಣದ ಕೈಗಳು ಸಹ ಹೊರಗೆ ಬರುವ ಸಾಧ್ಯತೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.
Live Tv
[brid partner=56869869 player=32851 video=960834 autoplay=true]