Tag: ಬಸವೇಶ್ವರನಗರ

  • ಬಸ್ಸಿನಲ್ಲಿ ಪುತ್ರಿಗೆ ಲೈಂಗಿಕ ಕಿರುಕುಳ – ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ

    ಬಸ್ಸಿನಲ್ಲಿ ಪುತ್ರಿಗೆ ಲೈಂಗಿಕ ಕಿರುಕುಳ – ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ

    – ಹೈದರಾಬಾದ್‌ನಿಂದ ಸ್ಲೀಪರ್‌ ಕೋಚ್‌ ಬಸ್ಸಿನಲ್ಲಿ ಬರುತ್ತಿದ್ದ ಬಾಲಕಿ
    – ಬಸ್ಸಿನಿಂದ ಕೆಳಗೆ ಇಳಿಸಿ ಆರೀಫ್‌ಗೆ ಹೊಡೆದ ತಾಯಿ, ಸಹೋದರ

    ಬೆಂಗಳೂರು: ಬಸ್ಸಿನಲ್ಲಿ (Bus) ಮಗಳಿಗೆ ಲೈಂಗಿಕ ಕಿರುಕುಳ (Sexual Harassment) ನೀಡಿದ ಚಾಲಕನಿಗೆ ತಾಯಿಯೊಬ್ಬಳು ಬಟ್ಟೆ ಬಿಚ್ಚಿ ಥಳಿಸಿದ ಘಟನೆ ಬಸವೇಶ್ವರ ಸರ್ಕಲ್ ಬಳಿ ನಡೆದಿದೆ.

    ಹೈದರಾಬಾದ್‌ನಿಂದ ಬೆಂಗಳೂರಿಗೆ (Bengaluru) ಸ್ಲೀಪರ್‌ ಬಸ್ಸಿನಲ್ಲಿ 15 ವರ್ಷದ ಬಾಲಕಿ ಹೊರಟಿದ್ದಳು. ರಾತ್ರಿ ಮೊಬೈಲಿನ ಚಾರ್ಜ್‌ ಖಾಲಿಯಾಗಿದ್ದರಿಂದ ಚಾಲಕನ ಬಳಿ ಚಾರ್ಜ್‌ ಹಾಕುವಂತೆ ಹೇಳಿದ್ದಳು.

    ಸ್ವಲ್ಪ ಹೊತ್ತಾದ ನಂತರ ಬಾಲಕಿ ಮೊಬೈಲ್‌ ಕೊಡುವಂತೆ ಕೇಳಿದಾಗ ಸಹ ಚಾಲಕ ಆರೀಫ್‌ ಮುತ್ತು ಕೊಟ್ಟರೆ ಮಾತ್ರ ನೀಡುವುದಾಗಿ ಹೇಳಿದ್ದಾನೆ. ಅಷ್ಟೇ ಅಲ್ಲದೇ ಮಲಗಿದ್ದಾಗ ಸೀಟ್‌ ಬಳಿ ಬಂದು ಲೈಂಗಿಕ ದೌರ್ಜನ್ಯ ನೀಡಿದ್ದಾನೆ. ಇದಕ್ಕೆ ವಿರೋಧ ವ್ಯಕ್ತಪಡಿಸಿದರೂ ರಾತ್ರಿ ಪದೇ ಪದೇ ಬಂದು ಲೈಂಗಿಕ ಕಿರುಕುಳ ನೀಡಿದ್ದಾನೆ. ಈತನ ಕಿರುಕುಳ ತಾಳಲಾರದೇ ಬಾಲಕಿ ಕರೆ ಮಾಡಿ ತನ್ನ ತಾಯಿಗೆ (Mother) ನಡೆದ ಘಟನೆಯನ್ನು ವಿವರಿಸಿದ್ದಾಳೆ. ಇದನ್ನೂ ಓದಿ: ಸೊಸೆಗೆ ವರದಕ್ಷಿಣೆ ಕಿರುಕುಳ ಆರೋಪ – ಎಸ್.ನಾರಾಯಣ್, ಪತ್ನಿ, ಪುತ್ರನ ವಿರುದ್ಧ ಎಫ್‌ಐಆರ್

    ಇಂದು ಬೆಳಗ್ಗೆ ಬಸ್ಸು ಬಸವೇಶ್ವರನಗರಕ್ಕೆ (Basaveshwara Nagar) ಬರುತ್ತಿದ್ದಂತೆ ಆರೀಫ್‌ನನ್ನು ಕೆಳಗೆ ಇಳಿಸಿ ತಾಯಿ ಮತ್ತು ಆಕೆಯ ಸಹೋದರ ಪ್ರಶ್ನಿಸಿದ್ದಾರೆ. ಈ ವೇಳೆ ಆರೀಫ್‌ ಕೈ ಮುಗಿದು ತಪ್ಪಾಗಿದೆ ಎಂದು ಹೇಳಿದ್ದಾನೆ. ನಂತರ ಈತನ ಬಟ್ಟೆಯನ್ನು ಬಿಚ್ಚಿ ಚೆನ್ನಾಗಿ ಹೊಡೆದಿದ್ದಾರೆ. ಆತ ಧರಿಸಿದ್ದ ಎಲ್ಲಾ ಬಟ್ಟೆ ತೆಗೆದು ಬೆತ್ತಲೆಗೊಳಿಸಲು ಮುಂದಾದಾಗ ಪೊಲೀಸರು ಸ್ಥಳಕ್ಕೆ ಆಗಮಿಸಿ ತಾಯಿಯನ್ನು ತಡೆದು ಆತನನ್ನು ವಶಕ್ಕೆ ಪಡೆದಿದ್ದಾರೆ.  ಇದನ್ನೂ ಓದಿ:  ಇನ್‌ಸ್ಟಾ ಪ್ರೇಮಿಯನ್ನ ಮದ್ವೆಯಾಗಿದ್ದ ಗೃಹಿಣಿ ಅನುಮಾನಾಸ್ಪದ ಸಾವು

    ಮಾಧ್ಯಮಗಳ ಜೊತೆ ಮಾತನಾಡಿದ ಬಾಲಕಿಯ ತಾಯಿ, ಹೈದರಾಬಾದ್‌ನಲ್ಲಿರುವ ನನ್ನ ಮಗಳ ಮನೆಗೆ ಇವಳು ಹೋಗಿದ್ದಳು. ರಾತ್ರಿ ಮಗಳು ಫೋನ್‌ ಮಾಡಿ ತಂಗಿಯನ್ನು ಬಸ್ಸಿನಲ್ಲಿ ಹತ್ತಿಸಿದ್ದೇನೆ ಎಂದು ಹೇಳಿದ್ದಳು. ಆದರೆ ಈತ ಮಗಳಿಗೆ ಬಸ್ಸಿನಲ್ಲಿ ಕೊಡಬಾರದ ಕಿರುಕುಳ ನೀಡಿದ್ದಾನೆ. ಅದನ್ನು ಇಲ್ಲಿ ಹೇಳಲು ಅಸಹ್ಯವಾಗುತ್ತಿದೆ. ಪೊಲೀಸರು ಏನು ಕ್ರಮ ಕೈಗೊಳ್ಳುತ್ತಾರೋ ಗೊತ್ತಿಲ್ಲ. ನಾನು ಮಾತ್ರ ಈತನನ್ನು ಸುಮ್ಮನೆ ಬಿಡುವುದಿಲ್ಲ ಎಂದು ಆಕ್ರೋಶ ಹೊರಹಾಕಿದರು.

  • ಹಾವೇರಿ| 33 ಸೆಕೆಂಡ್ ನಲ್ಲಿ 33 ಲಕ್ಷ ಹಣ ಕಳ್ಳತನ – ಓರ್ವ ಆರೋಪಿ ಅರೆಸ್ಟ್

    ಹಾವೇರಿ| 33 ಸೆಕೆಂಡ್ ನಲ್ಲಿ 33 ಲಕ್ಷ ಹಣ ಕಳ್ಳತನ – ಓರ್ವ ಆರೋಪಿ ಅರೆಸ್ಟ್

    ಹಾವೇರಿ: ಕಾರಿನ ಗಾಜು ಒಡೆದು 33 ಸೆಕೆಂಡ್‌ನಲ್ಲಿ 33 ಲಕ್ಷ ದೋಚಿದ (Money Theft) ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಹಾವೇರಿ ಪೊಲೀಸರು (Haveri Police) ಬಂಧಿಸಿದ್ದಾರೆ ಎಂದು ಎಸ್ಪಿ ಅಂಶುಕುಮಾರ್ ತಿಳಿಸಿದ್ದಾರೆ.

    ಆಂಧ್ರಪ್ರದೇಶ ಮೂಲದ ಎ.ಜಗದೀಶ್ (28) ಬಂಧಿತ ಆರೋಪಿ. ಕಳೆದ ನಾಲ್ಕು ದಿನಗಳ ಹಿಂದೆ ಕಾರಿನ ಗಾಜು ಒಡೆದು 33 ಲಕ್ಷ ಹಣ ದೋಚಿ ಆರೋಪಿಗಳು ಪರಾರಿಯಾಗಿದ್ದರು. ಕಳ್ಳರ ಕೈಚಳಕದ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಸದ್ಯ ಆರೋಪಿಯಿಂದ 30 ಲಕ್ಷ ನಗದು ವಶಪಡಿಸಿಕೊಳ್ಳಲಾಗಿದೆ.  ಇದನ್ನೂ ಓದಿ: ಪುಣ್ಯಕ್ಷೇತ್ರಗಳ ನದಿ ತೀರದಲ್ಲಿ ಶಾಂಪೂ, ಸೋಪುಗಳ ಮಾರಾಟ ನಿಷೇಧ

    ಘಟನೆ ಏನು?
    ಸಿವಿಲ್ ಕಾಂಟ್ರ್ಯಾಕ್ಟರ್ ಸಂತೋಷ್ ಹಾವೇರಿಯ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ದೈನಂದಿನ ವ್ಯವಹಾರಕ್ಕಾಗಿ 33 ಲಕ್ಷ ರೂ. ಹಣವನ್ನು ಸಂಬಂಧಿಕರ ಖಾತೆಯಿಂದ ಚೆಕ್ ಮುಖಾಂತರ ಡ್ರಾ ಮಾಡಿಕೊಂಡಿದ್ದರು. ಡ್ರಾ ಮಾಡಿದ ಹಣವನ್ನು ಕಾರಿನ ಹಿಂಭಾಗದ ಸೀಟಿನಲ್ಲಿಟ್ಟಿದ್ದರು. ಇದನ್ನೂ ಓದಿ: ರನ್ಯಾ ರಾವ್ ಶೋಕಿಗೆ ಅಧಿಕಾರಿಗಳೇ ಶಾಕ್ – ನಟಿ ಬಳಿಯಿತ್ತು ಕೋಟಿ ಮೌಲ್ಯದ 39 ವಿದೇಶಿ ವಾಚ್‌ಗಳು

    ಸಂತೋಷ್ ಮಾ.6ರಂದು ಸಂಜೆ 4:05ಕ್ಕೆ ಮನೆ ಮುಂದೆ ಕಾರು ನಿಲ್ಲಿಸಿ, ಕಾರಿನಲ್ಲಿ ಹಣ ಬಿಟ್ಟು ಮನೆಯೊಳಗೆ ಹೋಗಿದ್ದರು. ಮನೆಯಲ್ಲಿ ಊಟ ಮಾಡಿ ವಾಪಸ್ ಸಂಜೆ 5:20ಕ್ಕೆ ಕಾರಿನ ಹತ್ತಿರ ಬಂದು ನೋಡಿದಾಗ ಕಾರಿನ ಗ್ಲಾಸ್ ಒಡೆದು ಹಣ ಕಳ್ಳತನ ಆಗಿರುವುದು ಬೆಳಕಿಗೆ ಬಂದಿದೆ. ಇದನ್ನೂ ಓದಿ: Bengaluru| ಕುಂಭಮೇಳ ಟೂರ್ ಪ್ಯಾಕೇಜ್ ನೆಪದಲ್ಲಿ 70 ಲಕ್ಷ ವಂಚನೆ – ಆರೋಪಿ ಅರೆಸ್ಟ್

    2 ಬೈಕ್‌ಗಳಲ್ಲಿ ಬಂದಿದ್ದ 4 ಜನ ಕಳ್ಳರಲ್ಲಿ ಒಬ್ಬ ಕಾರಿನ ಬಳಿ ಸುತ್ತಾಡಿ, ಕಾರಿನ ಗ್ಲಾಸ್ ಒಡೆದು ಕಾರಿನ ಒಳಹೊಕ್ಕು ಹಣವಿದ್ದ ಬ್ಯಾಗ್ ತೆಗೆದುಕೊಂಡಿದ್ದಾನೆ. ನಂತರ ಬೈಕ್‌ನಲ್ಲಿ ಬಂದ ಮತ್ತೊಬ್ಬ ಖದೀಮ ಆತನನ್ನು ಕರೆದುಕೊಂಡು ಪರಾರಿಯಾಗಿದ್ದಾನೆ. ಘಟನೆ ಸಂಬಂಧ ಹಾವೇರಿ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದನ್ನೂ ಓದಿ: 7ನೇ ತರಗತಿ ವಿದ್ಯಾರ್ಥಿನಿಗೆ ಬಾಲ್ಯವಿವಾಹ – ಬರಲ್ಲ ಅಂತ ಕಿರುಚಾಡಿದ್ರೂ ಹೊತ್ತೊಯ್ದ ಪಾಪಿಗಳು

  • ಮಾಲ್‌ನಲ್ಲಿ ಮಹಿಳೆಯರ ಜೊತೆ ಅನುಚಿತ ವರ್ತನೆ – ಆರೋಪಿಯ ಗುರುತು ಪತ್ತೆ

    ಮಾಲ್‌ನಲ್ಲಿ ಮಹಿಳೆಯರ ಜೊತೆ ಅನುಚಿತ ವರ್ತನೆ – ಆರೋಪಿಯ ಗುರುತು ಪತ್ತೆ

    ಬೆಂಗಳೂರು: ಪ್ರತಿಷ್ಠಿತ ಮಾಲ್‌ವೊಂದರಲ್ಲಿ (Mall) ಮಹಿಳೆಯರ ಜೊತೆ ಅನುಚಿತವಾಗಿ ವರ್ತಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೋ ದೃಶ್ಯ ಆಧರಿಸಿ ಪೊಲೀಸರು ಆರೋಪಿಯ ಗುರುತನ್ನು (Identity) ಪತ್ತೆಹಚ್ಚಿದ್ದಾರೆ.

    ಬೆಂಗಳೂರಿನ (Bengaluru) ಬಸವೇಶ್ವರನಗರದ (Basaveshwara Nagar) ನಿವಾಸಿ ಅಶ್ವಥ್ ನಾರಾಯಣ್ (60) ಆರೋಪಿ. ಮೂರು ದಿನಗಳ ಹಿಂದೆ ಬೆಂಗಳೂರಿನ ಮಾಲ್‌ವೊಂದರಲ್ಲಿ ಈತ ಯುವತಿಯರ ಜೊತೆ ಅಸಭ್ಯವಾಗಿ ವರ್ತಿಸಿದ್ದ. ಈ ವೇಳೆ ಯಶವಂತ್ ಎಂಬವರು ಇದನ್ನು ವಿಡಿಯೋ ಚಿತ್ರೀಕರಿಸಿದ್ದರು. ವಿಡಿಯೋ ವೈರಲ್ ಆಗುತ್ತಿದ್ದಂತೆ ಮಾಲ್ ಮ್ಯಾನೇಜರ್ ಆರೋಪಿ ವಿರುದ್ಧ ಕೇಸ್ ದಾಖಲಿಸಿದ್ದರು. ಇದನ್ನೂ ಓದಿ: Operation Leopard: ಬೆಂಗಳೂರಿನಲ್ಲಿ ಚಿರತೆ ಕಾರ್ಯಾಚರಣೆ ಯಶಸ್ವಿ – ಕೊನೆಗೂ ಸೆರೆಹಿಡಿದ ಸಿಬ್ಬಂದಿ

    ಸದ್ಯ ವಿಡಿಯೋ ಆಧರಿಸಿ ಪೊಲೀಸರು ಆರೋಪಿಯ ಗುರುತು ಪತ್ತೆಹಚ್ಚಿದ್ದಾರೆ. ಆರೋಪಿ ಪ್ರತಿಷ್ಠಿತ ಮಠಕ್ಕೆ ಸೇರಿದ ಶಾಲೆಯಲ್ಲಿ ಮುಖ್ಯ ಶಿಕ್ಷಕನಾಗಿ ಕಾರ್ಯನಿರ್ವಹಿಸಿ ಕಳೆದ ಎಂಟು ತಿಂಗಳ ಹಿಂದೆ ನಿವೃತ್ತನಾಗಿದ್ದ. ವಿಡಿಯೋ ವೈರಲ್ ಆಗುತ್ತಿದ್ದಂತೆ ಆರೋಪಿ ಅಶ್ವಥ್ ನಾರಾಯಣ್ ಮನೆಗೆ ಬೀಗ ಹಾಕಿಕೊಂಡು ಎಸ್ಕೇಪ್ ಆಗಿದ್ದಾನೆ. ಆರೋಪಿ ಪತ್ತೆಗಾಗಿ ಮಾಗಡಿರೋಡ್ ಪೊಲೀಸರು ಹುಡುಕಾಟ ಮುಂದುವರಿಸಿದ್ದಾರೆ. ಇದನ್ನೂ ಓದಿ: ಕಾರು ಅಪಘಾತ- ಸಹಾಯಕ್ಕಾಗಿ ಬಂದು ಎಣ್ಣೆ ಬಾಟ್ಲಿಯೊಂದಿಗೆ ಯುವಕರು ಎಸ್ಕೇಪ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಅನೈತಿಕ ಸಂಬಂಧಕ್ಕೆ ಮಹಿಳೆ ಬಲಿ

    ಅನೈತಿಕ ಸಂಬಂಧಕ್ಕೆ ಮಹಿಳೆ ಬಲಿ

    – ಸಾಯುತ್ತೇನೆಂದವಳ ಕುಣಿಕೆಯ ಹಗ್ಗ ಎಳೆದು ಕುರ್ಚಿ ತಳ್ಳಿ ಸಾಯಿಸಿದ ಪ್ರಿಯಕರ

    ಬೆಂಗಳೂರು: ಅನೈತಿಕ ಸಂಬಂಧ (Illegal Relation) ಹೊಂದಿದ್ದನ್ನು ಪ್ರಶ್ನಿಸಿ ಸಾಯುತ್ತೇನೆ ಎಂದು ಹೆದರಿಸಿದ ಮಹಿಳೆಯ ಕುಣಿಕೆ ಎಳೆದು ಕುರ್ಚಿಯನ್ನು ತಳ್ಳಿದ ಪರಿಣಾಮ ಮಹಿಳೆ ಸಾವನ್ನಪ್ಪಿದ ಘಟನೆ ಬೆಂಗಳೂರಿನ (Bengaluru) ಬಸವೇಶ್ವರನಗರದಲ್ಲಿ (Basaveshwar Nagar) ನಡೆದಿದೆ.

    ಸರವಣ (35) ಮೃತ ಮಹಿಳೆ. ಈಕೆಗೆ ಮದುವೆಯಾಗಿ ಎರಡು ಮಕ್ಕಳಿದ್ದರೂ ಸಹ ಗಣೇಶ್ (22) ಎಂಬ ಯುವಕನ ಜೊತೆಗೆ ಅಕ್ರಮ ಸಂಬಂಧ ಹೊಂದಿದ್ದಳು. ಅಷ್ಟೇ ಅಲ್ಲದೇ ಯುವಕನಿಗೆ 50 ಸಾವಿರ ರೂ. ಹಣ ಹಾಗೂ ಒಂದು ಮನೆಯನ್ನೂ ಸಹ ಮಾಡಿಕೊಟ್ಟಿದ್ದಳು. ಇಷ್ಟೆಲ್ಲಾ ಇದ್ದರೂ ಗಣೇಶ್ ಬೇರೆ ಹುಡುಗಿಯೊಂದಿಗೆ ಸಲುಗೆಯನ್ನು ಬೆಳೆಸಿಕೊಂಡಿದ್ದ. ಇದನ್ನು ತಿಳಿದ ಮಹಿಳೆ ಆತನನ್ನು ಮನೆಗೆ ಕರೆಸಿಕೊಂಡಿದ್ದಾಳೆ. ಬಳಿಕ ಆತ ಸಲುಗೆ ಬೆಳೆಸಿಕೊಂಡಿರುವ ಹುಡುಗಿ ಯಾರೆಂದು ಪ್ರಶ್ನಿಸಿದ್ದಾಳೆ. ಅಲ್ಲದೇ ತಾನು ನೀಡಿದ ಹಣವನ್ನು ವಾಪಸ್ ಕೊಡುವಂತೆ ಕೇಳಿದ್ದಾಳೆ. ಇದರಿಂದಾಗಿ ಇವರಿಬ್ಬರ ಮಧ್ಯೆ ಗಲಾಟೆ ನಡೆದಿದೆ. ಇದನ್ನೂ ಓದಿ: ನಕಲಿ ಪಾಸ್‌ಪೋರ್ಟ್‌ ಬಳಸಿ ವಿದೇಶಕ್ಕೆ ಹಾರಲು ಸಂಚು ರೂಪಿಸಿದ್ದ ಆರೋಪಿ ಅಂದರ್‌

    ಈ ವೇಳೆ ಗಣೇಶ್ ಸಾಯುತ್ತೇನೆ ಎಂದು ಹಗ್ಗದಿಂದ ನೇಣುಬಿಗಿದುಕೊಂಡು ಆತ್ಮಹತ್ಯೆಗೆ (Suicide) ಮುಂದಾಗಿದ್ದ. ಇದನ್ನು ನೋಡಿದ ಮಹಿಳೆ ತಾನೂ ಕೂಡಾ ಸಾಯುವುದಾಗಿ ಕುಣಿಕೆ ಹಾಕಿಕೊಂಡಿದ್ದಾಳೆ. ಈ ವೇಳೆ ಗಣೇಶ್ ಆಕೆಯ ಕುಣಿಕೆಯ ಹಗ್ಗ ಎಳೆದು ಕುರ್ಚಿಯನ್ನು ತಳ್ಳಿದ್ದಾನೆ. ಇದರಿಂದಾಗಿ ಕುಣಿಕೆ ಕುತ್ತಿಗೆಗೆ ಬಿಗಿದು ಮಹಿಳೆ ಸಾವನ್ನಪ್ಪಿದ್ದಾಳೆ. ಇದನ್ನೂ ಓದಿ: ಕುಡಿಯಲು ಹಣ ಕೊಡದಿದ್ದಕ್ಕೆ ಇಟ್ಟಿಗೆಯಿಂದ ತಲೆಗೆ ಹೊಡೆದು ತಂದೆಯನ್ನೇ ಕೊಂದ ಪಾಪಿ ಮಗ

    ಈ ಕುರಿತು ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಗಣೇಶ್‌ನನ್ನು ಬಂಧಿಸಲಾಗಿದೆ. ಇದನ್ನೂ ಓದಿ: ಲಿಫ್ಟ್‌ಗೆ ಸಿಲುಕಿ 26ರ ಯುವಕ ಸಾವು