Tag: ಬಸವೇಶ್ವರ ಜಾತ್ರೆ

  • ದೇವಸ್ಥಾನ ಪ್ರವೇಶ ವಿಚಾರಕ್ಕೆ ಹಲ್ಲೆ- ಕಲ್ಲು ತೂರಾಟ, ಬೈಕ್ ಜಖಂ, 30 ಮಂದಿ ವಿರುದ್ಧ ದೂರು

    ದೇವಸ್ಥಾನ ಪ್ರವೇಶ ವಿಚಾರಕ್ಕೆ ಹಲ್ಲೆ- ಕಲ್ಲು ತೂರಾಟ, ಬೈಕ್ ಜಖಂ, 30 ಮಂದಿ ವಿರುದ್ಧ ದೂರು

    ಹಾವೇರಿ: ದೇವಸ್ಥಾನ ಪ್ರವೇಶದ ಮಾಡಿದರೆಂಬ ಕಾರಣಕ್ಕೆ ದಲಿತ (Assault On Dalith at Haveri) ಸಮುದಾಯದ ತಾಯಿ-ಮಗನ ಮೇಲೆ ಸವರ್ಣಿಯರು ಹಲ್ಲೆ ಮಾಡಿದ ಘಟನೆ ರಾಣೆಬೆನ್ನೂರು ತಾಲೂಕಿನ ನಂದಿಹಳ್ಳಿಯಲ್ಲಿ ನಡೆದಿದೆ. ಇದು ಇಷ್ಟಕ್ಕೆ ನಿಲ್ಲದೇ, ದಲಿತರ ಮನೆಗಳ ಮೇಲೆ ಕಲ್ಲು ತೂರಿ, ಬೈಕ್ ಜಖಂ ಮಾಡಿದ್ದಾರೆ. ಅಷ್ಟೇ ಅಲ್ಲದೇ ಮನೆಗಳಿಗೆ ಬೆಂಕಿ ಹಚ್ಚಲು ಮೇಲ್ವರ್ಗದ ಮಂದಿ ಪ್ರಯತ್ನಿಸಿದ್ದಾರೆ.

    ಬಸವೇಶ್ವರ ಜಾತ್ರೆ (Basaveshwara Jathre) ಯಲ್ಲಿ ದೇವರ ಮೆರವಣಿಗೆಯನ್ನ ಗ್ರಾಮದ ಪ್ರಮುಖ ಬೀದಿಯಲ್ಲಿ ಮಾಡಲಾಯಿತು. ಮೆರವಣಿಗೆಯಲ್ಲಿ ದಲಿತರು ಭಾಗವಹಿಸಿ ಮೇಲ್ದರ್ಜೆಯ ಜನರ ಜೊತೆಗೆ ಕುಣಿಯಲು ಹೋದಾಗ, ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಎರಡು ಸಮುದಾಯದವರು ದೊಣ್ಣೆ, ಕಲ್ಲು, ಬಡಿಗೆ ಹಿಡಿದುಕೊಂಡು ಬಡಿದಾಡಿಕೊಂಡಿದ್ದಾರೆ. ಗ್ರಾಮದ ಅಂಬೇಡ್ಕರ್ ಬ್ಯಾನರ್ ಹರಿದು ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ. ಪೊಲೀಸರು ಮಧ್ಯ ಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಪ್ರಕರಣ ಸಂಬಂಧ 30ಕ್ಕೂ ಅಧಿಕ ಮಂದಿ ವಿರುದ್ಧ ಕುಮಾರಪಟ್ಟಣಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಒಟ್ಟಿನಲ್ಲಿ 21ನೇ ಶತಮಾನದ ಈ ಕಾಲದಲ್ಲಿಯೂ ಸಹ, ಮೇಲು ಕೀಳು, ಆ ಜಾತಿ ಈ ಜಾತಿಯಂತೆ ಬಡಿದಾಡಿಕೊಳ್ಳುತ್ತಿದ್ದಾರೆ. 30ಕ್ಕೂ ಅಧಿಕ ಸರ್ವಣೀಯರ ಮೇಲೆ ಜಾತಿ ನಿಂದನೆ ಪ್ರಕರಣ ದಾಖಲಾಗಿದ್ದು, ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಇದನ್ನೂ ಓದಿ: ಮಲಮಿಶ್ರಿತ ನೀರು ಸೇವಿಸಿ ಮೂವರ ಸಾವು; 21 ದಿನ ಕಳೆದ್ರೂ ತಪ್ಪಿತಸ್ಥರ‌ ಮೇಲೆ ಇಲ್ಲ ಕ್ರಮ

     

  • ಐತಿಹಾಸಿಕ ಬಸವೇಶ್ವರ ಜಾತ್ರೆಯಲ್ಲಿ ಯುವತಿಯರಿಂದ ಅಶ್ಲೀಲ ನೃತ್ಯ ಪ್ರದರ್ಶನ

    ಐತಿಹಾಸಿಕ ಬಸವೇಶ್ವರ ಜಾತ್ರೆಯಲ್ಲಿ ಯುವತಿಯರಿಂದ ಅಶ್ಲೀಲ ನೃತ್ಯ ಪ್ರದರ್ಶನ

    – ಸಂಘಟಕರ ವಿರುದ್ಧ ಬಸವ ಭಕ್ತರ ಆಕ್ರೋಶ

    ವಿಜಯಪುರ: ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ನಡೆದ ಬಸವೇಶ್ವರ ಜಾತ್ರೆಯ ಸಮಾರಂಭದಲ್ಲಿ ರಸಮಂಜರಿ ಕಾರ್ಯಕ್ರಮದ ಹೆಸರಿನಲ್ಲಿ ಯುವತಿಯರಿಂದ ಅಶೀಲ ನೃತ್ಯ ಪ್ರದರ್ಶನ ಏರ್ಪಡಿಸಿದ್ದ ಸಂಘಟಕರ ವಿರುದ್ಧ ಬಸವ ಭಕ್ತಾದಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಬಸವೇಶ್ವರ ಜಾತ್ರಾ ಮಹೋತ್ಸವದಲ್ಲಿ ಸಂಘಟಕರು ಆಗಸ್ಟ್ 28 ರಂದು ನಡೆದ ರಸಮಂಜರಿ ಕಾರ್ಯಕ್ರಮದ ಹೆಸರಿನಲ್ಲಿ ಯುವತಿಯರಿಂದ ಅಶ್ಲೀಲ ನೃತ್ಯ ಪ್ರದರ್ಶನ ನಡೆಸಿದ್ದಾರೆ. ಯುವತಿಯರ ಅಶ್ಲೀಲ ನೃತ್ಯದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿತ್ತು. ವಿಡಿಯೋ ವೈರಲ್ ಆದ ಬೆನ್ನಲ್ಲೇ ಬಸವ ಭಕ್ತರು ಆಕ್ರೋಶ ವ್ಯಕ್ತಪಡಿಸಿ, ಸಂಘಟಕರು ಬಸವಣ್ಣನವರಿಗೆ ಅಪಮಾನ ಮಾಡಿದ್ದಾರೆಂದು ಆರೋಪಿಸಿದ್ದಾರೆ. ಅಲ್ಲದೇ ಈ ಕುರಿತು ಸಚಿವರು ಏನು ಮಾಡುತ್ತಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಭಕ್ತರು ತಮ್ಮ ಆಕ್ರೋಶ ಹೊರಹಾಕಿದ್ದಾರೆ.

    ಬಸವೇಶ್ವರ ಜನ್ಮಸ್ಥಳವಾದ ಬಸವನ ಬಾಗೇವಾಡಿಯಲ್ಲಿ ಐತಿಹಾಸಿಕ ಬಸವೇಶ್ವರ ಜಾತ್ರಾ ಮಹೋತ್ಸವ ಕಾರ್ಯಕ್ರಮ ನಡೆಯುತ್ತಿದೆ. ಆಗಸ್ಟ್ 27 ರಿಂದ 30 ರವರೆಗೆ ನಡೆಯುವ ನಾಲ್ಕು ದಿನಗಳ ಜಾತ್ರಾ ಮಹೋತ್ಸವದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಜಾತ್ರಾ ಸಮಿತಿ ಸಂಘಟಕರು ಹಮ್ಮಿಕೊಂಡಿದ್ದರು. ಜಾತ್ರೆಯ ಉಸ್ತುವಾರಿಯನ್ನು ಕೂಡಲ ಸಂಗಮ ಅಭಿವೃದ್ಧಿ ಪ್ರಾಧಿಕಾರ ವಹಿಸಿಕೊಂಡಿತ್ತು. ಆಗಸ್ಟ್ 27 ರಂದು ಆರೋಗ್ಯ ಸಚಿವ ಶಿವಾನಂದ ಪಾಟೀಲರು ಸ್ವತಃ ತಾವೇ ಬೆಳ್ಳಿ ಪಲ್ಲಕ್ಕಿ ಹೊರುವ ಮೂಲಕ ಜಾತ್ರೆಗೆ ವಿದ್ಯುಕ್ತ ಚಾಲನೆ ನೀಡಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv