Tag: ಬಸವ ಜಯ ಮೃತ್ಯುಂಜಯ ಸ್ವಾಮೀಜಿ

  • ಮತ್ತೆ ಮುಂದುವರೆಯಲಿದೆ ಪಂಚಮಸಾಲಿ ಮೀಸಲಾತಿ ಹೋರಾಟ: ಜಯ ಮೃತ್ಯುಂಜಯ ಸ್ವಾಮೀಜಿ

    ಮತ್ತೆ ಮುಂದುವರೆಯಲಿದೆ ಪಂಚಮಸಾಲಿ ಮೀಸಲಾತಿ ಹೋರಾಟ: ಜಯ ಮೃತ್ಯುಂಜಯ ಸ್ವಾಮೀಜಿ

    ಬಾಗಲಕೋಟೆ: ಮತ್ತೆ ಪಂಚಮಸಾಲಿ ಮೀಸಲಾತಿ (Panchamasali Reservation) ಹೋರಾಟ ಮಾಡಲು ಮುಂದಾಗುತ್ತೇವೆ ಎಂದು ಕೂಡಲಸಂಗಮದ ಪಂಚಮಸಾಲಿ ಜಗದ್ಗುರು ಬಸವ ಜಯ ಮೃತ್ಯುಂಜಯ ಸ್ವಾಮೀಜಿ (Jaya Mruthyunjaya Swamiji) ಹೇಳಿದ್ದಾರೆ.

    ನಾಗರ ಪಂಚಮಿ (Nagara Panchami) ಸಂಬಂಧ ಬಾಗಲಕೋಟೆಯ ಬಾಲಮಂದಿರದ ಮಕ್ಕಳಿಗೆ ಹಾಲು ವಿತರಿಸಿ ಮಾತನಾಡಿದ ಅವರು, ಈ ಬಾರಿ ಲಿಂಗಪೂಜೆ ಮೂಲಕ ಮೀಸಲಾತಿ ಚಳುವಳಿ ಮಾಡುತ್ತೇವೆ. ಶ್ರಾವಣ ಮಾಸದ ವೇಳೆ ನಾವು ಇಷ್ಟಲಿಂಗ ಪೂಜೆ ಮಾಡುತ್ತೇವೆ. ಈಗ ಮೀಸಲಾತಿಗಾಗಿ ಇಷ್ಟಲಿಂಗ ಪೂಜೆ, ಜೊತೆಗೆ ಸರ್ಕಾರಕ್ಕೆ ಮನವಿ ಮಾಡುವುದಾಗಿ ತಿಳಿಸಿದರು. ಇದನ್ನೂ ಓದಿ: ಟೆಂಟ್ ನಡೆಸ್ತಿದ್ದವರು ಇಂದು 1,450 ಕೋಟಿ ಒಡೆಯರು, ಅನಧಿಕೃತ ಎಷ್ಟಿದೆಯೋ? – ಡಿಕೆ ಬ್ರದರ್ಸ್ ವಿರುದ್ಧ ಹೆಚ್‌ಡಿಕೆ ಕಿಡಿ

    ಕಳೆದ ಬಾರಿ ಮೀಸಲಾತಿ ಹೋರಾಟ ಒಂದು ಹಂತಕ್ಕೆ ತಲುಪಿತ್ತು. ಆದ್ರೆ ಸರ್ಕಾರ ಬಹಳ ತಡ ಮಾಡಿ ನಮಗೆ 2ಡಿ ಕೊಟ್ಟಿತು, ಆದ್ರೆ ನಾವು 2ಎ ಕೇಳಿದ್ದೆವು. 2ಡಿ ಸಹ ಇನ್ನೂ ಜಾರಿಗೆ ಬಂದಿಲ್ಲ. ಆ ಕಾರಣಕ್ಕಾಗಿ ಸಚಿವೆ ಹೆಬ್ಬಾಳ್ಕರ್‌, ಶಾಸಕರಾದ ಕಾಶಪ್ಪನವರ್‌, ವಿನಯ್ ಕುಲಕರ್ಣಿ ಜೊತೆಗೆ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದೇವೆ. ತಮ್ಮ ಅವಧಿಯಲ್ಲಿ ಸಮಾಜಕ್ಕೆ ನ್ಯಾಯ ಸಿಗಲಿ ಎಂದು ಮನವಿ ಮಾಡಿಕೊಂಡಿದ್ದೇವೆ ಎಂದರು.

    ಸಿಎಂ ಸಿದ್ದರಾಮಯ್ಯ (CM Siddaramaiah) ಬಜೆಟ್ ಅಧಿವೇಶನ ಬಳಿಕ ಚರ್ಚೆ ಮಾಡಿ, ಮೀಸಲಾತಿಯ ಗೊಂದಲ ಪರಿಹರಿಸುವ ಬಗ್ಗೆ ಭರವಸೆ ನೀಡಿದ್ದರು. ಆದರೆ ಅಧಿವೇಶನ ಮುಗಿದು ಒಂದು ತಿಂಗಳಾಯಿತು. ಅದಕ್ಕಾಗಿ ಸರ್ಕಾರಕ್ಕೆ ಈ ಬಾರಿ ಒತ್ತಡ ಹಾಕುತ್ತೇವೆ. ಆದಷ್ಟು ಬೇಗ ಕಾನೂನು ತಜ್ಞರನ್ನ ಕರೆದು, ಗೊಂದಲ ನಿವಾರಿಸಿ ಎಂದು ಸಿಎಂಗೆ ಮನವಿ ಮಾಡಿಕೊಂಡಿದ್ದೇವೆ ಎಂದು ಹೇಳಿದರು.

    ಈಗಾಗಲೇ ಹೋರಾಟದ ಬಗ್ಗೆ ವಿಜಯಪುರ, ಕೂಡಲಸಂಗಮ, ಬೆಳಗಾವಿಯಲ್ಲಿ ಸಭೆ ಕರೆದು ಚರ್ಚೆ ಮಾಡಿದ್ದೇವೆ. ಮುಂದೆ ರಾಜ್ಯ ಕಾರ್ಯಕಾರಿಣಿ ಸಭೆ ಕರೆದು ಹೋರಾಟದ ರೂಪುರೇಷೆ ಚರ್ಚಿಸಲಿದ್ದೇವೆ. ಜನರು ಮತ್ತೆ ಮೀಸಲಾತಿ ಹೋರಾಟ ಶುರು‌ ಮಾಡಿ ಎಂದು ಹೇಳುತ್ತಿದ್ದಾರೆ. ಜನರ ಭಾವನೆಗಳಿಗೆ ಸ್ಪಂದಿಸುವುದು ನಮ್ಮ ಆದ್ಯ ಕರ್ತವ್ಯವಾಗಿದೆ ಎಂದರು.

    ಈ ಕಾರಣಕ್ಕೆ ರಾಜ್ಯ ಕಾರ್ಯಕಾರಿಣಿ ಸಭೆ ಕರೆದು, ಎಲ್ಲಿಂದ ಹೋರಾಟ ಶುರು ಮಾಡಬೇಕು ಎಂಬುದರ ಬಗ್ಗೆ ಚರ್ಚೆ ಮಾಡುತ್ತೇವೆ. 2ಎಗೆ ಪಂಚಮಸಾಲಿ ಸಮಾಜ ಸೇರಬೇಕು ಎನ್ನುವುದು ನಮ್ಮ ಮುಖ್ಯ ಹೋರಾಟ. ಆದರೆ ಈ ವಿಷಯಕ್ಕೆ ಹೈಕೋರ್ಟ್‌ನಲ್ಲಿ ಸ್ಟೇ ಇದೆ. ನಮ್ಮ ಹೋರಾಟಕ್ಕೆ ಮಣಿದು 2ಡಿ ಕೊಟ್ಟಿದ್ದಾರೆ. ಈಗ ಅದು ಸುಪ್ರೀಂ ಕೋರ್ಟ್‌ಗೆ ಹೋಗಿದೆ. ಕೋರ್ಟ್‌ ಅಡೆತಡೆ ನಿವಾರಿಸಿ ರಾಜ್ಯ ಸರ್ಕಾರ ಯಾವ ರೀತಿ ನ್ಯಾಯ ಕೊಡುತ್ತದೆ ಎನ್ನುವುದು ಅವರಿಗೆ ಬಿಟ್ಟ ವಿಚಾರ. ಇನ್ನೆರಡು ದಿನಗಳಲ್ಲಿ ಸಮಾಜ ಮುಖಂಡರ ಸಭೆ ಕರೆದು ಹೋರಾಟದ ಬಗ್ಗೆ ಚರ್ಚಿಸಿ, ನಿರ್ಧರಿಸುತ್ತೇವೆ ಎಂದು ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಸ್ವಾಮೀಜಿ ಹೇಳಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪಂಚಮಸಾಲಿ ಮೂರನೇ ಪೀಠ ಅಸ್ತಿತ್ವಕ್ಕೆ..?

    ಪಂಚಮಸಾಲಿ ಮೂರನೇ ಪೀಠ ಅಸ್ತಿತ್ವಕ್ಕೆ..?

    ಬಾಗಲಕೋಟೆ: ಲಿಂಗಾಯತ ಪಂಚಮಸಾಲಿ ಸಮಾಜದಲ್ಲಿ ಮನೆಯೊಂದು ಮೂರು ಬಾಗಿಲು ಎನ್ನುವಂತಾಗಿದ್ದು, ಮೂರನೇ ಪೀಠಕ್ಕಾಗಿ ವೀರಶೈವ ಲಿಂಗಾಯತ ಪಂಚಮಸಾಲಿ ಮಠಾಧೀಶರ ಒಕ್ಕೂಟ ಚಾರಿಟೇಬಲ್ ಟ್ರಸ್ಟ್ ನೋಂದಣಿಗೆ ಮುಂದಾಗಿದ್ದಾರೆ.

    ಬಾಗಲಕೋಟೆ ಜಿಲ್ಲೆ ಜಮಖಂಡಿ ಉಪನೊಂದಣಾಧಿಕಾರಿ ಕಚೇರಿಯಲ್ಲಿ ನೋಂದಣಿಗಾಗಿ ಪರ್ಯಾಯ ಒಕ್ಕೂಟದ ಸ್ವಾಮೀಜಿಗಳು ಪ್ರಸ್ತಾವನೆ ಸಲ್ಲಿಸಿದ್ದಾರೆ. ಟ್ರಸ್ಟ್ ಅಧ್ಯಕ್ಷರಾಗಿ ಬಬಲೇಶ್ವರ ಮಹಾದೇವ ಶಿವಾಚಾರ್ಯ ಸ್ವಾಮೀಜಿ, ಉಪಾಧ್ಯಕ್ಷ ರೇವಣ ಸಿದ್ದ ಸ್ವಾಮೀಜಿ ಬೆಂಡವಾಡ, ಕಾರ್ಯದರ್ಶಿ ಸಂಗನ ಬಸವ ಸ್ವಾಮೀಜಿ, ಮನಗೂಳಿ ಹಿರೇಮಠ ಜೊತೆಗೆ 25 ಜನ ಸ್ವಾಮೀಜಿಗಳನ್ನೊಳಗೊಂಡ ಟ್ರಸ್ಟ್ ನೊಂದಣಿ ಪ್ರಕ್ರಿಯೆಗೆ ಅರ್ಜಿ ಸಲ್ಲಿಸಿದ್ದಾರೆ. ಇದನ್ನೂ ಓದಿ: ಜಿಮ್ ಮಾಡೋವ್ರಿಗೆ ಅಪ್ಪು ಸಾವು ಬಿಗ್ ಶಾಕ್ – ಜಿಮ್‍ಗೆ ಹೋಗದಂತೆ ಮಕ್ಕಳಿಗೆ ಪೋಷಕರ ಆಕ್ಷೇಪ

    ಕೆಲವೇ ದಿನದಲ್ಲಿ ಜಮಖಂಡಿ ಸಮೀಪದ ಆಲಗೂರು ರಸ್ತೆ ಬಳಿ ಮೂರನೇ ಪೀಠಕ್ಕೆ ಜಾಗ ಖರೀದಿಸುವ ಸಾಧ್ಯತೆಯಿದ್ದು, ಈಗಾಗಲೇ ಪಂಚಮಸಾಲಿ ಸಮುದಾಯದಲ್ಲಿ ಎರಡು ಪೀಠಗಳಿವೆ. ಬಾಗಲಕೋಟೆ ಜಿಲ್ಲೆ ಹುನಗುಂದ ತಾಲೂಕಿನ ಕೂಡಲಸಂಗಮದಲ್ಲಿ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಪಂಚಮಸಾಲಿ ಲಿಂಗಾಯತ ಪೀಠವಿದೆ. ಜೊತೆಗೆ ದಾವಣಗೆರೆ ಜಿಲ್ಲೆ ಹರಿಹರದಲ್ಲಿ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠವಿದೆ. ಈ ಎರಡು ಪೀಠಗಳಿಗೆ ಪರ್ಯಾಯವಾಗಿ ಮೂರನೇ ಪೀಠಕ್ಕೆ ಪ್ರಕ್ರಿಯೆ ಚುರುಕುಗೊಂಡಿದೆ.


    ಕೂಡಲಸಂಗಮ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಪಂಚಮಸಾಲಿ ಸಮಾಜಕ್ಕೆ 2 ಮೀಸಲಾತಿ ಕೊಡಬೇಕು ಎನ್ನುವ ಹೋರಾಟ ನಡೆದಿದೆ. ಪಾದಯಾತ್ರೆ ಹೋರಾಟದ ಹಿಂಪಡೆಯುವ ಹೇಳಿಕೆಯಿಂದಾಗಿ ಸಚಿವ ಮುರುಗೇಶ್ ನಿರಾಣಿ ಇರಿಸು ಮುರಿಸು ಅನುಭವಿಸುವಂತಾಗಿತ್ತು. ಈಗ ಸದ್ದಿಲ್ಲದೆ ಪರ್ಯಾಯ ಮೂರನೇ ಒಕ್ಕೂಟ ರಚನೆ ಕಸರತ್ತು ನಡೆದಿದೆ. ಮೂರನೇ ಒಕ್ಕೂಟದ ಸ್ವಾಮೀಜಿಗಳಿಗೆ ಮುರುಗೇಶ್ ನಿರಾಣಿ ಅವರ ಬೆಂಬಲವಿದೆ ಎನ್ನಲಾಗುತ್ತಿದೆ. ಕೂಡಲಸಂಗಮ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ವಿರುದ್ಧವೇ ಈ ಒಕ್ಕೂಟ ರಚನೆಯಾಗುತ್ತಿದೆ ಎನ್ನುವ ಮಾತುಗಳು ಸಹ ಕೇಳಿಬರುತ್ತಿದೆ. ಇದನ್ನೂ ಓದಿ: ನಾಳೆ ಪುನೀತ್ 11ನೇ ದಿನದ ಪುಣ್ಯಾರಾಧನೆ – ಅಪ್ಪು ಕುಟುಂಬಸ್ಥರಿಂದ ಭಾರೀ ಸಿದ್ಧತೆ