Tag: ಬಸ್ ಕಂಡೆಕ್ಟರ್

  • ಪ್ರಯಾಣಿಸುತ್ತಿದ್ದ ಬಸ್‌ನಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ

    ಪ್ರಯಾಣಿಸುತ್ತಿದ್ದ ಬಸ್‌ನಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ

    ಹಾಸನ: ಪ್ರಯಾಣಿಸುತ್ತಿದ್ದ ಬಸ್‌ನಲ್ಲೇ (Bus) ಮಹಿಳೆಯೊಬ್ಬರು ಹೆಣ್ಣು ಮಗುವಿಗೆ (Baby) ಜನ್ಮ ನೀಡಿರುವ ಘಟನೆ ಚನ್ನರಾಯಪಟ್ಟಣ-ಹಾಸನ ಮಾರ್ಗಮಧ್ಯೆ ನಡೆದಿದೆ.

    ಕೂಲಿ ಕೆಲಸಕ್ಕೆ ಮೂಡುಗೆರೆಗೆ ತೆರಳುತ್ತಿದ್ದ ಸಾರಿಗೆ ಬಸ್‌ನಲ್ಲಿ ಸೋಮವಾರ ಈ ಘಟನೆ ನಡೆದಿದೆ. ಮಹಿಳೆಗೆ ಬಸ್‌ನಲ್ಲಿಯೇ ಹೆರಿಗೆ ನೋವು ಕಾಣಿಸಿಕೊಂಡಿದ್ದು, ತಕ್ಷಣ ಚಾಲಕ ಬಸ್ ಅನ್ನು ನಿಲ್ಲಿದ್ದಾರೆ. ಬಳಿಕ ಬಸ್‌ನ ನಿರ್ವಾಹಕಿ ಗರ್ಭಿಣಿಗೆ ಹೆರಿಗೆ (Delivery) ಮಾಡಿಸಲು ಸಹಾಯ ಮಾಡಿದ್ದಾರೆ.

    ಮಹಿಳೆ ಬಸ್‌ನಲ್ಲಿಯೇ ಮಗುವಿಗೆ ಜನ್ಮ ನೀಡಿದ ಬಳಿಕ ಅಂಬುಲೆನ್ಸ್‌ಗೆ ಕರೆ ಮಾಡಿ ತಾಯಿ ಹಾಗೂ ಮಗುವನ್ನು ಶಾಂತಿಗ್ರಾಮದ ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದಾರೆ. ಬಳಿಕ ಬಸ್‌ನ ನಿರ್ವಾಹಕಿ ವಸಂತ ಹಾಗೂ ಪ್ರಯಾಣಿಕರು ಆಸ್ಪತ್ರೆಗೆ ತೆರಳಿ ಮಹಿಳೆಗೆ ಹಣದ ಸಹಾಯ ಮಾಡಿ ಮಾನವೀಯತೆ ಮೆರೆದಿದ್ದಾರೆ. ಇದನ್ನೂ ಓದಿ: ಹಾಡಹಗಲೇ ಡ್ರ್ಯಾಗರ್ ಹಿಡಿದು ಯುವತಿಗೆ ಕಿರುಕುಳ ನೀಡಿದ ದುಷ್ಕರ್ಮಿ – ಮತ್ತೊಬ್ಬ ಮಹಿಳೆಯಿಂದ ರಕ್ಷಣೆ

    ಸರಿಯಾದ ಸಮಯದಲ್ಲಿ ಮಹಿಳೆಗೆ ಬಸ್‌ನಲ್ಲಿಯೇ ಹೆರಿಗೆ ಮಾಡಿಸಿ, ಆಸ್ಪತ್ರೆಗೆ ದಾಖಲಿಸಿ, ಆಕೆಗೆ ಹಣದ ಸಹಾಯ ಮಾಡಿರುವ ಬಸ್ ಚಾಲಕ, ನಿರ್ವಾಹಕಿ ಹಾಗೂ ಪ್ರಯಾಣಿಕರ ಕಾರ್ಯಕ್ಕೆ ಸಾರ್ವಜನಿಕ ವಲಯದಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಇದನ್ನೂ ಓದಿ: ಸಿಎಂ ಪಟ್ಟಕ್ಕೆ ಸಿದ್ದು ಪಟ್ಟು – ದೆಹಲಿಯಲ್ಲಿ ಬೆಂಬಲಿಗರ ಜೊತೆ ಬಲ ಪ್ರದರ್ಶನ

  • ಉಡುಪಿಯಲ್ಲಿ ದುಷ್ಕರ್ಮಿಗಳಿಂದ ಬಸ್ ನಿರ್ವಾಹಕನ ಕಗ್ಗೊಲೆ

    ಉಡುಪಿಯಲ್ಲಿ ದುಷ್ಕರ್ಮಿಗಳಿಂದ ಬಸ್ ನಿರ್ವಾಹಕನ ಕಗ್ಗೊಲೆ

    ಉಡುಪಿ: ಬಸ್ ನಿರ್ವಾಹಕನನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿದ ಘಟನೆ ಉಡುಪಿ ತಾಲೂಕಿನ ಪೆರ್ಡೂರು ಸಮೀಪ ಬೈರಂಪಳ್ಳಿಯಲ್ಲಿ ಈ ದುರ್ಘಟನೆ ನಡೆದಿದೆ.

    ಪ್ರಶಾಂತ್ ಪೂಜಾರಿ (35) ಕೊಲೆಯಾದ ಬಸ್ ನಿರ್ವಾಹಕ. ಪ್ರಶಾಂತ್ ಪೂಜಾರಿ ದುಷ್ಕರ್ಮಿಗಳ ದಾಳಿಗೆ ತೀವ್ರ ಗಾಯಗೊಂಡು ಮೃತಪಟ್ಟಿದ್ದಾರೆ. ಗುರುವಾರ ರಾತ್ರಿ 12 ಗಂಟೆಗೆ ಸಂತೋಷ್ ಪೂಜಾರಿ ಅವರ ಮನೆಗೆ ಇಬ್ಬರು ದುಷ್ಕರ್ಮಿಗಳು ಬಂದಿದ್ದರು. ವ್ಯವಹಾರ ವಿಚಾರದಲ್ಲಿ ಮೂವರ ನಡುವೆ ರಾತ್ರಿ 12 ಗಂಟೆಯವರೆಗೆ ಮಾತುಕತೆ ನಡೆದಿತ್ತು.

    ಈ ವೇಳೆ ಮಾತಿಗೆ ಮಾತು ಬೆಳೆದು ಜಟಾಪಟಿ ನಡೆದಿದೆ. ಇಬ್ಬರು ಅಪರಿಚಿತರು ಪ್ರಶಾಂತ್ ಪೂಜಾರಿ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿದ್ದಾರೆ ಎಂದು ಮೇಲ್ನೋಟಕ್ಕೆ ಕಂಡು ಬರುತ್ತದೆ. ಸಿಟಿ ಬಸ್ ಪರ್ಮಿಟ್ ಪಡೆದಿದ್ದ ಸಂತೋಷ್ ಅದೇ ಬಸ್ಸಲ್ಲಿ ಕಂಡಕ್ಟರ್ ಆಗಿ ಕೂಡ ಕೆಲಸ ಮಾಡುತ್ತಿದ್ದರು. ಹಿರಿಯಡ್ಕ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    ಮೃತದೇಹವನ್ನು ಮಣಿಪಾಲ ಕೆಎಂಸಿಯಲ್ಲಿ ಮರಣೋತ್ತರ ಪರೀಕ್ಷೆಗೆ ಒಳಪಡಿಸಲಾಗಿದೆ. ಮೃತ ಸಂತೋಷ್ ಪೂಜಾರಿ ಕ್ರಿಕೆಟ್ ಬೆಟ್ಟಿಂಗ್ ದಂಧೆಯಲ್ಲೂ ಕೂಡ ಶಾಮೀಲಾಗಿದ್ದ ಎಂಬ ಬಗ್ಗೆ ಪೊಲೀಸರಿಗೆ ಮಾಹಿತಿ ಇದೆ. ಬಸ್ಸಿನ ವ್ಯವಹಾರ ವಿಚಾರದಲ್ಲಿ ಇಬ್ಬರ ಜೊತೆ ವಾಗ್ವಾದ ನಡೆದಿತ್ತು ಎನ್ನಲಾಗಿದೆ. ಈ ಎಲ್ಲಾ ಆಯಾಮಗಳಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.