Tag: ಬಸ್ ಡ್ರೈವರ್

  • BMTC, KSRTC ಸೇರಿ 4 ನಿಗಮಗಳಿಗೂ ಎಚ್ಚರಿಕೆ – ಬೇಕಾಬಿಟ್ಟಿ ಬಸ್ ಚಲಾಯಿಸಿದ್ರೆ ಕೆಲಸ ಹೋಗೋದು ಪಕ್ಕಾ!

    BMTC, KSRTC ಸೇರಿ 4 ನಿಗಮಗಳಿಗೂ ಎಚ್ಚರಿಕೆ – ಬೇಕಾಬಿಟ್ಟಿ ಬಸ್ ಚಲಾಯಿಸಿದ್ರೆ ಕೆಲಸ ಹೋಗೋದು ಪಕ್ಕಾ!

    ಬೆಂಗಳೂರು: ರಾಜ್ಯದಲ್ಲಿ ಸರ್ಕಾರಿ ಬಸ್‌ಗಳ ಚಾಲಕರಿಂದ ಅಪಘಾತಗಳ ಸಂಖ್ಯೆ ಹೆಚ್ಚಾದ ಬೆನ್ನಲ್ಲೇ ಸಾರಿಗೆ ಸಚಿವರು ನಾಲ್ಕು ನಿಗಮಗಳಿಗೂ ಖಡಕ್ ವಾರ್ನಿಂಗ್ ನೀಡಿ, ಕಡಿವಾಣ ಹಾಕುವ ನಿಟ್ಟಿನಲ್ಲಿ ಅಧಿಕಾರಿಗಳಿಗೆ ಮಹತ್ವದ ಸೂಚನೆಯನ್ನು ನೀಡಿದ್ದಾರೆ.

    ಇತ್ತೀಚಿನ ವರ್ಷಗಳಲ್ಲಿ ಸರ್ಕಾರಿ ಬಸ್ ಚಾಲಕರಿಂದ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಕೆಲವೊಂದು ಪ್ರಕರಣಗಳಲ್ಲಿ ವಾಹನಗಳ ಸಮಸ್ಯೆಯಿಂದಾಗಿ ಅಪಘಾತವಾದರೆ, ಬಹುತೇಕ ಘಟನೆಗಳಲ್ಲಿ ಚಾಲಕರ ನಿರ್ಲಕ್ಷ್ಯದಿಂದ ಅಪಘಾತವಾಗಿ ಸಾರ್ವಜನಿಕರು ಪ್ರಾಣ ಕಳೆದುಕೊಂಡಿದ್ದಾರೆ. ಹೀಗಾಗಿ ಇಂತಹ ಘಟನೆಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಸಚಿವರೇ ಖುದ್ದು ಬಿಎಂಟಿಸಿ, ಕೆಎಸ್‌ಆರ್‌ಟಿಸಿ, ಈಶಾನ್ಯ ಸಾರಿಗೆ, ವಾಯುವ್ಯ ಸಾರಿಗೆ ನಾಲ್ಕು ನಿಗಮಗಳಿಗೆ ಅನ್ವಯವಾಗುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.ಇದನ್ನೂ ಓದಿ: ಭ್ರಷ್ಟಾಚಾರವನ್ನ ಜನತೆ ಮುಂದೆ ಬಿಚ್ಚಿಟ್ಟ ಬಿ.ಆರ್‌ ಪಾಟೀಲ್‌ಗೆ ʻಕೈʼ ನಾಯಕರಿಂದಲೇ ಬೆದರಿಕೆ: ವಿಜಯೇಂದ್ರ

    ಸೂಚನೆ ಏನು?
    * ಯಾವುದೇ ಸರ್ಕಾರಿ ಬಸ್ ಚಾಲಕರು ಅಜಾಗರೂಕತೆಯಿಂದ ಚಾಲನೆ ಮಾಡಿ, ತೊಂದರೆ ಉಂಟು ಮಾಡುತ್ತಾರೋ ಅಂತಹ ಚಾಲಕರ ವಿರುದ್ಧ ಮುಲಾಜಿಲ್ಲದೇ ಕಠಿಣ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದಾರೆ.

    * ಈ ಹಿಂದೆ ಯಾವ್ಯಾವ ಚಾಲಕರು ಅಜಾಗರೂಕತೆಯಿಂದ ಚಾಲನೆ ಮಾಡಿ, ಸಮಸ್ಯೆ ಉಂಟು ಮಾಡಿದ್ದಾರೋ ಅಂತಹ ಚಾಲಕರ ಲೀಸ್ಟ್ ರೆಡಿ ಮಾಡಿ, ಮತ್ತೊಮ್ಮೆ ಅದೇ ಚಾಲಕರು ತಪ್ಪು ಮಾಡಿದ್ದಲ್ಲಿ ಮುಲಾಜಿಲ್ಲದೇ ಡಿಸ್ಮಿಸ್ ಮಾಡುವಂತೆ ಸೂಚನೆ ಕೊಟ್ಟಿದ್ದಾರೆ.

    ಈ ಸಂಬಂಧ ಈಗಾಗಲೇ ನಾಲ್ಕು ಸಾರಿಗೆ ನಿಗಮದ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಶೀಘ್ರದಲ್ಲೇ ವಿಚಾರ ಸಂಬಂಧ ಕ್ರಮ ತೆಗೆದುಕೊಳ್ಳಲು ತಿಳಿಸಿದ್ದಾರೆ. ಜೊತೆಗೆ ಖಾಯಂ ನೌಕರರನ್ನು ಹೊರತುಪಡಿಸಿ, ಅನೇಕ ಗುತ್ತಿಗೆ ನೌಕರರು ಕೂಡ ಸಾರಿಗೆ ಬಸ್‌ಗಳಲ್ಲಿ ಚಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಈ ಚಾಲಕರು ಮಾಡುವ ತಪ್ಪಿನಿಂದ ನಿಗಮಗಳಿಗೆ ಕೆಟ್ಟ ಹೆಸರು ಬರುತ್ತಿರುವ ಬಗ್ಗೆ ಕೂಡ ಸಚಿವರು ಗಂಭೀರವಾಗಿ ಪರಿಗಣಿಸಿದ್ದಾರೆ.

    ಸದ್ಯ ಬಿಎಂಟಿಸಿ (BMTC) ಚಾಲಕರಿಗಾಗಿ ಮೂರು ಸಂಸ್ಥೆಗಳಿಗೆ ಟೆಂಡರ್ ನೀಡಲಾಗಿದೆ. ಈಗಾಗಲೇ ಮೂರು ಗುತ್ತಿಗೆ ಕಂಪನಿಗಳಿಗೂ ಸೂಚನೆ ನೀಡಲಾಗಿದ್ದು, ಈ ಹಿಂದೆ ಎರಡಕ್ಕಿಂತ ಹೆಚ್ಚು ಬಾರಿ ಅಜಾಗರೂಕ ಚಾಲನೆ ಮಾಡಿರುವ ಚಾಲಕರನ್ನು ಗುತ್ತಿಗೆಯಿಂದ ಕೈ ಬಿಡಲು ಸೂಚಿಸಲಾಗಿದೆ. ಮುಂದೆಯೂ ಇಂತಹ ಚಾಲಕರ ವಿರುದ್ಧ ಎಚ್ಚರವಹಿಸಿ ತಪ್ಪು ಮಾಡಿದ್ದಲ್ಲಿ, ಕಠಿಣ ಕ್ರಮಕ್ಕೂ ಸೂಚನೆ ನೀಡಿದ್ದಾರೆ.ಇದನ್ನೂ ಓದಿ: ರಶ್ಮಿಕಾ ಡಿಮ್ಯಾಂಡ್ ಕಮ್ಮಿಯಾಯ್ತಾ? ಸಂಭಾವನೆನೂ ಕಮ್ಮಿಯಾಯ್ತಾ?

  • ಬಸ್ ಚಾಲಕಿಗೆ ಕಮಲ್ ಹಾಸನ್ ಕಾರು ಗಿಫ್ಟ್ : ಇದರ ಹಿಂದಿದೆ ಗೊಂದಲದ ಸ್ಟೋರಿ

    ಬಸ್ ಚಾಲಕಿಗೆ ಕಮಲ್ ಹಾಸನ್ ಕಾರು ಗಿಫ್ಟ್ : ಇದರ ಹಿಂದಿದೆ ಗೊಂದಲದ ಸ್ಟೋರಿ

    ರಡ್ಮೂರು ದಿನಗಳಿಂದ ತಮಿಳಿನ ಸ್ಟಾರ್ ನಟ ಕಮಲ್ ಹಾಸನ್ (Kamal Haasan) ಅವರು, ಕೊಯಮತ್ತೂರಿನ ಮೊದಲ ಮಹಿಳಾ ಬಸ್ ಚಾಲಕಿಯನ್ನು (Bus Driver) ಕರೆಯಿಸಿಕೊಂಡು ಕಾರು (Car)  ಗಿಫ್ಟ್ ನೀಡಿರುವ ಸುದ್ದಿ ಸಿನಿಮಾ ರಂಗದಲ್ಲಿ ಭಾರೀ ಸಂಚಲನ ಸೃಷ್ಟಿಸಿದೆ. ಬರೀ ಸಿನಿಮಾ ರಂಗದಲ್ಲಿ ಮಾತ್ರವಲ್ಲ, ಇದೀಗ ತಮಿಳು ನಾಡಿನ ರಾಜಕೀಯ ವಲಯದಲ್ಲೂ ಅದು ಚರ್ಚೆಗೆ ಕಾರಣವಾಗಿದೆ. ಮೇಲ್ನೋಟಕ್ಕೆ ಇದು ರಾಜಕೀಯ ಪ್ರೇರಿತ ನಡೆ ಎಂದು ಹೇಳಲಾಗುತ್ತಿದ್ದು, ಕಾರು ಕೊಟ್ಟಿರುವ ಕಮಲ್ ಬಗ್ಗೆ ಮೆಚ್ಚುಗೆಯೂ ವ್ಯಕ್ತವಾಗುತ್ತಿದೆ.

    ಏನಿದು ಪ್ರಕರಣ?

    ಶರ್ಮಿಳಾ (Sharmila) ಕೊಯಮತ್ತೂರಿನ ಮೊದಲ ಮಹಿಳಾ ಬಸ್ ಚಾಲಕಿ. ಅವತ್ತು ಮಹಿಳಾ ಚಾಲಕಿಯರನ್ನು ಗೌರವಿಸುವುದಕ್ಕಾಗಿ ಡಿಎಂಕೆ ಸಂಸದೆ ಕನಿಮೊಳಿ (Kanimozhi) ಕೊಯಮತ್ತೂರಿಗೆ ಬಂದಿದ್ದರು. ಚಾಲಕಿಯರನ್ನು ಗೌರವಿಸಿದ ಕೆಲವೇ ಗಂಟೆಗಳಲ್ಲೇ ಕನಿಮೊಳಿ ಅವರು ಶರ್ಮಿಳಾ ಚಲಾಯಿಸುತ್ತಿದ್ದ ಬಸ್ ಏರಿದ್ದಾರೆ. ಇಲ್ಲಿಯೇ ಎಡವಟ್ಟು ಆಗಿದೆ.

    ಶರ್ಮಿಳಾ ಚಲಾಯಿಸುತ್ತಿದ್ದ ಬಸ್ ಏರಿದ್ದ ಕನಿಮೊಳಿಗೆ ಆ ಬಸ್ ನಲ್ಲಿದ್ದ ಕಂಡಕ್ಟರ್ ಟಿಕೆಟ್ ತಗೆದುಕೊಳ್ಳುವಂತೆ ಹೇಳಿದ್ದಾರೆ. ಇದಕ್ಕೆ ಶರ್ಮಿಳಾ ಆಕ್ಷೇಪ ವ್ಯಕ್ತ ಪಡಿಸಿದ್ದಾರೆ. ಸಂಸದರು ನಮ್ಮನ್ನು ಗೌರವಿಸುವುದಕ್ಕಾಗಿ ಬಸ್ ಏರಿದ್ದಾರೆ. ಬಸ್‍ ನಲ್ಲಿ ಅವರು ಪ್ರಯಾಣಿಸುತ್ತಿರುವುದು ನಮಗೆ ಗೌರವ. ಟಿಕೆಟ್ ತಗೆದುಕೊಳ್ಳುವುದು ಬೇಡ ಎಂದಿದ್ದಾರೆ ಶರ್ಮಿಳಾ. ಈ ವಿಚಾರವಾಗಿ ಕಂಡಕ್ಟರ್ ಗೂ ಮತ್ತು ಶರ್ಮಿಳಾಗೂ ಗಲಾಟೆ ಆಗಿದೆ. ಈ ಗಲಾಟೆಗೆ ಈಗ ನಾನಾ ಬಣ್ಣಗಳು ಮೆತ್ತಿಕೊಂಡಿವೆ. ಇದನ್ನೂ ಓದಿ:‘ಕಬಾಲಿ’ ನಿರ್ಮಾಪಕ ಅರೆಸ್ಟ್ ಬೆನ್ನಲ್ಲೇ ಡ್ರಗ್ಸ್ ಪ್ರಕರಣದಲ್ಲಿ ನಟಿ ಅಶು ರೆಡ್ಡಿ ಹೆಸರು

    ಈ ಘಟನೆಯಾದ ಕೆಲವೇ ಗಂಟೆಗಳಲ್ಲೇ ಶರ್ಮಿಳಾ ತಮ್ಮ ಕೆಲಸಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ ಸುದ್ದಿ ಒಂದು ಕಡೆಯಾದರೆ, ಮತ್ತೊಂದು ಕಡೆ ಬಸ್ ಮಾಲೀಕರೆ ಶರ್ಮಿಳಾರನ್ನು ಕೆಲಸದಿಂದ ತಗೆದುಹಾಕಿದ್ದಾರೆ ಎನ್ನುವ ಸುದ್ದಿಯೂ ಇದೆ. ಸ್ವಯಂ ಪ್ರಚಾರಕ್ಕಾಗಿ ಸಿಲೆಬ್ರಿಟಿಗಳನ್ನು ಬಸ್ ನಲ್ಲಿ ಹತ್ತಿಸಿಕೊಂಡಿದ್ದಾರೆ ಎನ್ನುವ ಕಾರಣಕ್ಕಾಗಿ ಬಸ್ ಮಾಲೀಕರು ಶರ್ಮಿಳಾರನ್ನು ಕೆಲಸದಿಂದ ತಗೆದು ಹಾಕಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ, ಈ ಸುದ್ದಿಯನ್ನು ಮಾಲೀಕರು ನಿರಾಕರಿಸಿದ್ದಾರೆ.

    ಮತ್ತೊಂದು ಕಡೆ ಶರ್ಮಿಳಾ ಡಿಎಂಕೆ (DMK) ಬೆಂಬಲಿಗರು. ಹಾಗಾಗಿ ಕನಿಮೊಳಿ ಅವರ ಬೆಂಬಲಕ್ಕೆ ನಿಂತು ಟಿಕೆಟ್ ರಹಿತ ಪ್ರಯಾಣ ಮಾಡಿಸಲು ಮುಂದಾಗಿದ್ದರು ಎನ್ನುವ ಮಾತು ಕೇಳಿ ಬರುತ್ತಿದೆ. ಇದೇ ಏನೇ ಆದರೂ ಕೆಲಸ ಕಳೆದುಕೊಂಡು ಶರ್ಮಿಳಾಗೆ ಕಮಲ್ ಹಾಸನ್ ಕಾರು ಗಿಫ್ಟ್ ನೀಡುವ ಮೂಲಕ ಅವರ ಬದುಕಿಗೆ ನೆರವಾಗಿದ್ದಾರೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_title” view=”carousel” /]

  • ಸ್ನೇಹಿತ ಬಿಎಂಟಿಸಿ ಬಸ್ ಡ್ರೈವರ್​​​ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಅರ್ಪಿಸಿದ ರಜನಿಕಾಂತ್

    ಸ್ನೇಹಿತ ಬಿಎಂಟಿಸಿ ಬಸ್ ಡ್ರೈವರ್​​​ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಅರ್ಪಿಸಿದ ರಜನಿಕಾಂತ್

    ನವದೆಹಲಿ: ತಮಿಳು ಸ್ಟಾರ್ ನಟ ರಜನಿಕಾಂತ್ ಸೋಮವಾರ ತಾನು ಸ್ವೀಕರಿಸಿದ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು, ಸಿನಿಮಾ ಕ್ಷೇತ್ರಕ್ಕೆ ಬರಲು ತನ್ನನ್ನು ಪ್ರೇರೇಪಿಸಿದ್ದ ಸ್ನೇಹಿತ ಬಸ್  ಡ್ರೈವರ್​​​ಗೆ ಅರ್ಪಿಸುವ ಮೂಲಕ ಗಮನ ಸೆಳೆದಿದ್ದಾರೆ.

    ತನ್ನ ಮೊದಲ ಸಿನಿಮಾ `ಅಪೂರ್ವ ರಾಗಂಗಳ್’ ನಿರ್ದೇಶಕ ದಿವಂಗತ ಕೆ.ಬಾಲಚಂದರ್, ಸಿನಿಮಾರಂಗಕ್ಕೆ ಪ್ರವೇಶಿಸಲು ನೆರವಾದ ಸಹೋದರ ಸತ್ಯನಾರಾಯಣರಾವ್ ಹಾಗೂ ಎಲ್ಲ ನಿರ್ದೇಶಕರು, ನಿರ್ಮಾಕರು, ಥಿಯೇಟರ್ ಮಾಲೀಕರು, ತಂತ್ರಜ್ಞರು, ಅಭಿಮಾನಿಗಳಿಗೂ ಪ್ರಶಸ್ತಿ ಅರ್ಪಿಸಿ ರಜನಿಕಾಂತ್ ಕೃತಜ್ಞತೆ ಮೆರೆದಿದ್ದಾರೆ. ಇದನ್ನೂ ಓದಿ: ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ನಟ ರಜನಿಕಾಂತ್

    ರಜನಿಕಾಂತ್ ಸಿನಿಮಾ ರಂಗಕ್ಕೆ ಪಾದಾರ್ಪಣೆ ಮಾಡಿದ ಕಥೆಯೇ ಒಂದು ರೋಚಕ. ಒಬ್ಬ ಸಾಮಾನ್ಯ ಬಸ್ ಕಂಡಕ್ಟರ್ ಆಗಿದ್ದ ಅವರು ಮುಂದಿನ ಚಿತ್ರರಂಗದಲ್ಲಿ ಕೋಟಿ ಕೋಟಿ ಸಂಭಾವನೆಯೊಂದಿಗೆ ಕೋಟ್ಯಂತರ ಅಭಿಮಾನಿಗಳ ಹೃದಯದಲ್ಲಿ ಸ್ಥಾನ ಪಡೆಯುವ ಮಟ್ಟಕ್ಕೆ ಬೆಳೆದಿದ್ದು ಸಾಧನೆಯೇ ಸರಿ. ತಾನು ಆ ಮಟ್ಟಕ್ಕೆ ಬೆಳೆಯಲು ಕಾರಣರಾದ ವ್ಯಕ್ತಿಗೆ ರಜನಿಕಾಂತ್ ತಮ್ಮ ಜೀವನದ ಅತ್ಯುತ್ತಮ ಸಾಧನೆ ಪ್ರಶಸ್ತಿಯನ್ನು ಅರ್ಪಿಸಿ ಧನ್ಯತೆ ಮೆರೆದಿದ್ದಾರೆ.

    1950ರಲ್ಲಿ ಬೆಂಗಳೂರಿನಲ್ಲಿ ಜನಿಸಿದ ರಜನಿಕಾಂತ್ ಮೂಲ ಹೆಸರು ಶಿವಾಜಿರಾವ್ ಗಾಯಕ್‍ವಾಡ್. ಬಾಲ್ಯದಲ್ಲಿ ತಾಯಿಯನ್ನು ಕಳೆದುಕೊಂಡ ರಜನಿಕಾಂತ್ ಬೆಂಗಳೂರಿನ ಆಚಾರ್ಯ ಪಾಠಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ ಪೂರೈಸಿದರು. ನಂತರ ರಾಮಕೃಷ್ಣ ಮಿಷನ್ ಶಾಖೆಯಾದ ವಿವೇಕಾನಂದ ಬಾಲಕ ಸಂಘದಲ್ಲಿ ವ್ಯಾಸಾಂಗ ಮಾಡಿದರು. ಇಲ್ಲಿ ವೇದಗಳು, ಭಾರತೀಯ ಸಂಸ್ಕøತಿ ಇತಿಹಾಸವನ್ನು ಅಧ್ಯಯನ ಮಾಡುತ್ತ ನಾಟಕಗಳಲ್ಲಿ ಅಭಿನಯ ಮಾಡುತ್ತಿದ್ದರು.

    ಒಮ್ಮೆ ಏಕಲವ್ಯ ನಾಟಕದಲ್ಲಿ ಏಕಲವ್ಯನ ಸ್ನೇಹಿತನ ಪಾತ್ರದ ಅಭಿನಯಕ್ಕೆ ರಜನಿಕಾಂತ್ ಅಭಿನಯಕ್ಕೆ ವರಕವಿ ದ.ರಾ.ಬೇಂದ್ರೆ ಮೆಚ್ಚುಗೆ ವ್ಯಕ್ತಪಡಿಸುತ್ತಾರೆ. ಇದರಿಂದ ಪುಳಕಿತರಾಗಿ ಅಭಿನಯದ ಕಡೆ ಹೆಚ್ಚಿನ ಆಸಕ್ತಿ ಬೆಳೆಸಿಕೊಳ್ಳುತ್ತಾರೆ. ನಂತರ ಅವರು ಬಸ್ ಕಂಡಕ್ಟರ್ ಆಗಿ ಬೆಂಗಳೂರಿನಲ್ಲಿ ಕೆಲಸ ಆರಂಭಿಸುತ್ತಾರೆ.

    ಅಭಿನಯದಲ್ಲಿ ರಜನಿಕಾಂತ್‍ಗೆ ಇರುವ ಪ್ರತಿಭೆಯನ್ನು ಗುರುತಿಸಿದ ಸ್ನೇಹಿತನೂ ಆದ ಬಸ್ ಚಾಲಕ ರಾಜ್ ಬಹದ್ದೂರ್, ‘ನೀನು ಸಿನಿಮಾ ಕ್ಷೇತ್ರಕ್ಕೆ ಹೋಗು. ಉತ್ತಮ ಸಾಧನೆ ಮಾಡಬಹುದು’ ಎಂದು ಸಲಹೆ ನೀಡುತ್ತಾರೆ. ಸ್ನೇಹಿತನ ಸಲಹೆಯಂತೆ ರಜನಿಕಾಂತ್ ಸಿನಿಮಾ ರಂಗಕ್ಕೆ ಬರಲು ಆಸಕ್ತಿ ತೋರುತ್ತಾರೆ. ಇವರಿಗೆ ಬೆನ್ನೆಲುಬಾಗಿ ಅಣ್ಣ ಸತ್ಯನಾರಾಯಣ ರಾವ್ ಗಾಯಕ್‍ವಾಡ್ ಕೂಡ ನಿಲ್ಲುತ್ತಾರೆ. ಇದನ್ನೂ ಓದಿ: ಈ ಸೋಮವಾರ ತಲೈವಾಗೆ ಡಬ್ಬಲ್ ಖುಷಿ

    ಆಕಸ್ಮಿಕವಾಗಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ರಜನಿಕಾಂತ್ ಈಗ ಕೋಟಿ ಕೋಟಿ ಸಂಭಾವನೆ ಪಡೆಯುತ್ತಾ ಕೋಟ್ಯಂತರ ಅಭಿಮಾನಿಗಳ ಹೃದಯದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಅಷ್ಟೆ ಅಲ್ಲದೇ ಭಾರತೀಯ ಚಿತ್ರರಂಗದ ಜೀವಮಾನ ಸಾಧನೆಗಾಗಿ ನೀಡುವ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನೂ ಪಡೆದುಕೊಂಡಿದ್ದಾರೆ.

  • ಪ್ರಯಾಣಿಕರ ಗಮನಕ್ಕೆ: ಯಾರ ಗಮನಕ್ಕೂ ಬಾರದ ನಿಗೂಢವಿದೆ ಇಲ್ಲಿ…!

    ಪ್ರಯಾಣಿಕರ ಗಮನಕ್ಕೆ: ಯಾರ ಗಮನಕ್ಕೂ ಬಾರದ ನಿಗೂಢವಿದೆ ಇಲ್ಲಿ…!

    ಸದ್ಯ ಪ್ರೇಕ್ಷಕರ ವಲಯದಲ್ಲಿ ಕುತೂಹಲದ ತೀವ್ರತೆಯನ್ನು ಕಾಯ್ದಿಟ್ಟುಕೊಂಡಿರುವ ಚಿತ್ರ ‘ಪ್ರಯಾಣಿಕರ ಗಮನಕ್ಕೆ’. ಅರ್ಜುನ್ ಸರ್ಜಾ ಕುಟುಂಬದ ಭರತ್ ಸರ್ಜಾ ನಾಯಕನಾಗಿರುವ ಈ ಚಿತ್ರ ತೆರೆ ಕಾಣುವ ಸನಿಹದಲ್ಲಿರುವಾಗಲೇ ಚಿತ್ರ ತಂಡ ಕಥೆಯ ಬಗೆಗಿನ ಕೆಲ ಸುಳಿವನ್ನು ಬಿಟ್ಟುಕೊಡುವ ಮೂಲಕ ಪ್ರೇಕ್ಷಕರು ಮತ್ತಷ್ಟು ಆಕರ್ಷಿತರಾಗುವಂತೆಯೂ ಮಾಡುತ್ತಿದೆ.

    ಮನೋಹರ್ ನಿರ್ದೇಶನದ ಈ ಚಿತ್ರದ ಶೀರ್ಷಿಕೆ, ಪೋಸ್ಟರುಗಳು ಇದೊಂದು ಹೊಸಾ ಅಲೆಯ ಚಿತ್ರ ಎಂಬುದನ್ನು ಜಾಹೀರು ಮಾಡಿವೆ. ಇದು ಒಂದು ಪ್ರಯಾಣದ ಸಂದರ್ಭದಲ್ಲಿ ಮುಖಾಮುಖಿಯಾಗುವ ಕೆಲ ಪಾತ್ರಗಳ ನಟುವೆ ನಡೆಯೋ ಕಥಾ ಹಂದರ ಹೊಂದಿದೆ. ಒಂದು ಬಸ್ಸಿನೊಳಗೆ ಬೇರೆ ಬೇರೆ ಥರದ ಬದುಕು ಭಾವಗಳನ್ನು ಅನಾವರಣಗೊಳಿಸಿರೋ ಈ ಚಿತ್ರದಲ್ಲಿ ಬಸ್ ಕಂಡಕ್ಟರ್ ಮತ್ತು ಡ್ರೈವರ್ ನದ್ದೇ ಪ್ರಧಾನ ಪಾತ್ರ.

    ಕಣ್ಣೆದುರೇ ಇದ್ದರೂ ಕಣ್ಣರಳಿಸಿ ನೋಡದಂಥಾ ಅದೆಷ್ಟೋ ವೈಚಿತ್ರ್ಯಗಳು ನಮ್ಮ ಸುತ್ತಲೇ ಇರುತ್ತವೆ. ಅಂಥವನ್ನೆಲ್ಲ ತೀರಾ ಸಹಜವಾಗಿ ಕಾಣಿಸಬೇಕೆಂಬ ಉದ್ದೇಶದಿಂದ ಚಿತ್ರ ತಂಡ ಹಲವಾರು ರಿಸ್ಕಿ ಸವಾಲುಗಳನ್ನೂ ಯಶಸ್ವಿಯಾಗಿ ಸ್ವೀಕರಿಸಿದೆ. ಬೆಂಗಳೂರಿನ ಮೆಜೆಸ್ಟಿಕ್ ಪ್ರಯಾಣದ ಪರಿಕಲ್ಪನೆಗೆ ಅತ್ಯಂತ ಸೂಕ್ತ ಸ್ಥಳ. ಇಲ್ಲಿ ಕತ್ತಲಾವರಿಸುತ್ತಲೇ ಬೇರೆಯದ್ದೇ ಲೋಕ ತೆರೆದುಕೊಳ್ಳುತ್ತದೆ. ಅದನ್ನು ಹಾಗೆಯೇ ಸೆರೆ ಹಿಡಿಯುವ ಉದ್ದೇಶದಿಂದ ಅದೆಷ್ಟೋ ರಾತ್ರಿಗಳಲ್ಲಿ ಕ್ಯಾಮೆರಾ ಮರೆಯಾಗಿಸಿಕೊಂಡು ಕೆಲ ದೃಶ್ಯಗಳನ್ನು ಸೆರೆ ಹಿಡಿಯಲಾಗಿದೆಯಂತೆ. ಇಂಥಾ ಹಲವಾರು ವಿಶಿಷ್ಟವಾದ ಪ್ರಯೋಗಗಳ ಮೊತ್ತವಾಗಿ ಮೂಡಿ ಬಂದಿರೋ ಈ ಚಿತ್ರ ಥೇಟರು ತಲುಪೋ ಕ್ಷಣಗಳು ಸಮೀಪಿಸುತ್ತಿವೆ.

    https://youtu.be/tw-Yw-0l40w

    https://youtu.be/nSFjVroEYKk

  • ಯುವಕನ ಮೆಸೇಜ್ ನಿಂದಾಗಿ ಯುವತಿ ಆತ್ಮಹತ್ಯೆಗೆ ಶರಣು- ಒನ್ ಸೈಡ್ ಲವ್ ಸ್ಟೋರಿಯಲ್ಲೊಂದು ಟ್ವಿಸ್ಟ್!

    ಯುವಕನ ಮೆಸೇಜ್ ನಿಂದಾಗಿ ಯುವತಿ ಆತ್ಮಹತ್ಯೆಗೆ ಶರಣು- ಒನ್ ಸೈಡ್ ಲವ್ ಸ್ಟೋರಿಯಲ್ಲೊಂದು ಟ್ವಿಸ್ಟ್!

    ಹಾಸನ: ಜಿಲ್ಲೆಯ ಸಕಲೇಶಪುರ ವಿಭಾಗದ ಸಾರಿಗೆ ಬಸ್ ಚಾಲಕನ ಲವ್ ಕಹಾನಿಗೆ ಟ್ವಿಸ್ಟ್ ಸಿಕ್ಕಿದೆ. ತಾಲೂಕಿನ ಆದರಗೆರೆ-ದೊಡ್ಡನಹಳ್ಳಿಯ ಎಲ್‍ಎಲ್‍ಬಿ ವಿದ್ಯಾರ್ಥಿನಿ ತನುಶ್ರೀ ಕಳೆನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳಲು ಸಾರಿಗೆ ಬಸ್ ಚಾಲಕ ಸಂತೋಷ್ ಕಾರಣ ಎಂದು ಆರೋಪಿಸಲಾಗಿತ್ತು.

    ತನುಶ್ರೀ ಪೋಷಕರು ನಮ್ಮ ಮಗಳ ಸಾವಿಗೆ ಸಂತೋಷನೇ ಕಾರಣ. ಆತ ನನ್ನನ್ನು ಪ್ರೀತಿಸು, ಮದುವೆಯಾಗು ಎಂದು ತಮ್ಮ ಮಗಳಿಗೆ ಬಲವಂತ ಮಾಡುತ್ತಿದ್ದನು. ಆತನ ಕಿರುಕುಳದಿಂದಲೇ ಮಗಳು ವಿಷ ಕುಡಿದು ಸತ್ತಿದ್ದಾಳೆ ಎಂದು ದೂರಿದ್ದರು. ಮೃತ ತನುಶ್ರೀ ಸಹ ಸಾಯುವ ಮುನ್ನ ಸಂತೋಷನ ವಿರುದ್ಧ ಹೇಳಿಕೆ ನೀಡಿದ್ದಳು.

    ಏನದು ಟ್ವಿಸ್ಟ್?: ಸಂತೋಷನ ಒನ್ ವೇ ಲವ್ ಅಲ್ಲ ಅಥವಾ ಬಲವಂತ ಸಹ ಮಾಡಿಲ್ಲ. ಬದಲಾಗಿ ತನುಶ್ರೀಯೂ ಸಹ ಸಂತೋಷನನ್ನು ಅತಿಯಾಗಿ ಪ್ರೀತಿಸಿದ್ದಳು. ಮಾನಸಿಕವಾಗಿ ಪತಿ ಅಂತಲೇ ಸ್ವೀಕಾರ ಮಾಡಿದ್ದಳು. ನೀನು ನಮ್ಮ ಮನೆಯವರಿಗೆ ಫೋನ್ ಮಾಡಿ ನನ್ನನ್ನು ಮದುವೆ ಮಾಡಿಕೊಡುವಂತೆ ಕೇಳು ಎಂದು ಹೇಳಿದ್ದ ನಿಜ ಸಂಗತಿ ಆಕೆ ಸಂತೋಷ್‍ಗೆ ಮಾಡಿರುವ ಮೆಸೇಜ್‍ಗಳಿಂದ ಬಯಲಾಗಿದೆ.

    2 ವರ್ಷಗಳಿಂದ ಸಂತೋಷ್ ಮತ್ತು ತನುಶ್ರೀ ಪರಸ್ಪರ ಪ್ರೀತಿಸಿ ಮದುವೆಯಾಗಲೂ ನಿರ್ಧರಿಸಿದ್ದರು. ಇದಕ್ಕೆ ಸಂತೋಷ್ ಮನೆಯವರು ಒಪ್ಪಿದ್ದರೆ, ತನುಶ್ರೀ ಪೋಷಕರು ವಿರೋಧ ವ್ಯಕ್ತಪಡಿಸಿದ್ದರು. ಯುವತಿ ತಂದೆ ಸುದೇಶ್ ಲವ್ ಕಾರಣಕ್ಕೆ ಮಗಳನ್ನು ನಿಂದಿಸಿದ್ದರು. ಇದರಿಂದ ತೀವ್ರವಾಗಿ ನೊಂದಿದ್ದ ತನುಶ್ರೀ, ತಾನೇ ಸಂತೋಷನಿಗೆ ಮೆಸೇಜ್ ಮಾಡಿ ನಮ್ಮ ಮದುವೆ ಸಾಧ್ಯವಾಗದೇ ಇದ್ರೆ ಸಾಯೋಣ ಎಂದು ನಿರ್ಧರಿಸಿ ಕಳೆದ ಆಗಸ್ಟ್ 3 ರಂದು ಪ್ರತ್ಯೇಕವಾಗಿ ವಿಷ ಕುಡಿದಿದ್ದಾರೆ.

    ಸದ್ಯ ಸಂತೋಷ್ ಬದುಕುಳಿದಿದ್ದರೆ, ತನುಶ್ರೀ ಸಾವನ್ನಪ್ಪಿದ್ದಾಳೆ. ತನುಶ್ರೀ ಸಾವಿಗೆ ನಮ್ಮ ಮಗ ಕಾರಣ ಅಲ್ಲ, ಬದಲಾಗಿ ಆಕೆಯ ತಂದೆಯೇ ನೇರ ಹೊಣೆ. ನಮ್ಮ ಮಗ ಮತ್ತು ತನುಶ್ರೀ ಕೋರಿಕೆಯಂತೆ ನಾವೇ ದೂರವಾಣಿ ಕರೆ ಮಾಡಿ ತನುಶ್ರೀಯನ್ನು ಮಗನಿಗೆ ಮದುವೆ ಮಾಡಿಕೊಡುವಂತೆ ಕೇಳಿದ್ದೆವು.

    ಆದರೆ ಅದಕ್ಕೆ ಅವರು ಒಪ್ಪಲಿಲ್ಲ. ಇದೇ ಕಾರಣಕ್ಕೆ ತನುಶ್ರೀ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಸಂತೋಷ್ ಪೋಷಕರು ಆರೋಪ ಮಾಡಿದ್ದಾರೆ. ಇದರಿಂದಾಗಿ ತಂದೆಯ ಪ್ರತಿಷ್ಠೆಯೇ ತನುಶ್ರೀ ಸಾವಿಗೆ ಕಾರಣವಾಯಿತೇ ಎಂಬ ಬಲವಾದ ಅನುಮಾನ ಮೂಡಿದೆ. ಆದರೂ ತನುಶ್ರೀ ತಂದೆ, ಮಗಳ ಸಾವಿಗೆ ಸಂತೋಷನೇ ಕಾರಣ, ಆತನನ್ನು ಬಂಧಿಸಿ ಶಿಕ್ಷಿಸಬೇಕು ಎಂದು ಮತ್ತೆ ಮನವಿ ಮಾಡಿದ್ದಾರೆ.

  • ಮಹಿಳೆಯರಿಗೆ ಮಾದರಿಯಾದ್ರು ಹುಬ್ಬಳ್ಳಿಯ ಈ ಮಹಿಳಾ ಬಸ್ ಡ್ರೈವರ್!

    ಮಹಿಳೆಯರಿಗೆ ಮಾದರಿಯಾದ್ರು ಹುಬ್ಬಳ್ಳಿಯ ಈ ಮಹಿಳಾ ಬಸ್ ಡ್ರೈವರ್!

    – ವಾಯವ್ಯ ಸಾರಿಗೆ ಸಂಸ್ಥೆಯ ಮೊದಲ ಮಹಿಳಾ ಬಸ್ ಚಾಲಕಿಯಾಗಿರೋ ಶ್ರೀದೇವಿ

    ಹುಬ್ಬಳ್ಳಿ: ಹೆಣ್ಣು ಮನಸ್ಸು ಮಾಡಿದರೆ ಏನೆಲ್ಲಾ ಮಾಡಬಹುದು ಎಂಬುದಕ್ಕೆ ಈ ಯುವತಿಯೇ ಸಾಕ್ಷಿ. ಗ್ರಾಮೀಣ ಪ್ರದೇಶದಲ್ಲಿ ಇದ್ದುಕೊಂಡು ಹತ್ತಾರು ಸಮಸ್ಯೆಗಳ ನಡುವೆ ಯಾವುದಕ್ಕೂ ಅಂಜದೆ ಮುಜುಗರವನ್ನು ಮಾಡಿಕೊಳ್ಳದೇ ಕಷ್ಟ ಪಟ್ಟು ಡ್ರೈವಿಂಗ್ ಕಲಿತಿದ್ದಾರೆ.

    ಕಾಲ, ಸಮಾಜ, ಜನಜೀವನ ಹೀಗೆ ಎಲ್ಲವೂ ಬದಲಾದಂತೆ ಮಹಿಳೆಯರು ಕೂಡಾ ಬದಲಾಗಿದ್ದಾರೆ. ಬದಲಾದ ಇಂದಿನ ಜಗತ್ತಿನಲ್ಲಿ ಪುರುಷರಷ್ಟೇ ನಾವು ಸಮಾನರು ಎನ್ನುತ್ತಾ ಎಲ್ಲಾ ಕ್ಷೇತ್ರಗಳಲ್ಲೂ ಪಾರುಪತ್ಯವನ್ನು ಮೆರೆಯುತ್ತಿದ್ದಾರೆ. ಈ ಮಾತಿಗೆ ಸಾಕ್ಷಿ ಬಸ್ ಡ್ರೈವ್ ಮಾಡುತ್ತಿರುವ 28 ವರ್ಷದ ಶ್ರೀದೇವಿ. ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಯಮನೂರು ಗ್ರಾಮದ ನಿವಾಸಿಯಾಗಿರೋ ಇವರ ತಂದೆ-ತಾಯಿಗೆ ಮೂವರು ಮಕ್ಕಳು. ಅವರಲ್ಲಿ ಕೊನೆಯ ಮಗಳು ಶ್ರೀದೇವಿ. ಇವರ ತಂದೆ-ತಾಯಿಗೆ ಗಂಡು ಮಕ್ಕಳಿಲ್ಲ ಎಂಬ ಕೊರಗು ಸದಾ ಕಾಡುತ್ತಿತ್ತು. ಹೀಗಾಗಿ ಅದನ್ನೇ ಸವಾಲಾಗಿ ಸ್ವೀಕರಿಸಿದ ಶ್ರೀದೇವಿ, ಏನಾದರೂ ಸಾಧನೆ ಮಾಡಬೇಕು ಎಂದು ಬಸ್ ಡ್ರೈವಿಂಗ್ ಕಲಿತರು. ಹಿಂದೆ ಗುರುವಿಲ್ಲವಾದ್ರೂ ಮುಂದೆ ಗುರಿಯನ್ನು ಇಟ್ಟುಕೊಂಡು ಹೊರಟ ಶ್ರೀದೇವಿಗೆ ಖಾಸಗಿ ಸಾರಿಗೆ ಸಂಸ್ಥೆ ಕೂಡ ಒಂದು ಅವಕಾಶ ನೀಡಿತ್ತು. ನಂತರ 6-7 ವರುಷಗಳ ಕಾಲ ಖಾಸಗಿ ಬಸ್ ಸಂಸ್ಥೆಯಲ್ಲಿ ಬಸ್ ಚಾಲನೆ ಮಾಡಿದ್ರು. ಸದ್ಯ ವಾಯವ್ಯ ಸಾರಿಗೆ ಸಂಸ್ಥೆಯಲ್ಲಿ ಡ್ರೈವರ್ ಮತ್ತು ನಿರ್ವಾಹಕಿಯಾಗಿ ನೇಮಕಗೊಂಡಿದ್ದಾರೆ.

    ಗ್ರಾಮೀಣ ಪ್ರದೇಶವಾಗಿದ್ದರೂ ಕೂಡಾ ಹತ್ತಾರು ಸಮಸ್ಯೆ, ಮುಜುಗರ, ಸಂಕೋಚ, ಆರಂಭದಲ್ಲಿ ಡ್ರೈವಿಂಗ್ ಕಲಿಸುವವರು ಇಲ್ಲ ಇಂತಹ ಪರಿಸ್ಥಿತಿಯಲ್ಲಿ ನಗರಕ್ಕೆ ಕೈಯಲ್ಲೊಂದು ಬಯೋಡಾಟಾ ಹಿಡಿದುಕೊಂಡು ಬಂದ ಈ ಶ್ರೀದೇವಿಗೆ ಖಾಸಗಿ ಸಂಸ್ಥೆ ಅವಕಾಶವನ್ನು ನೀಡಿತು. ಸಿಕ್ಕ ಅವಕಾಶವನ್ನು ಬಳಸಿಕೊಂಡು ಕಷ್ಟ ಪಟ್ಟು ತರಬೇತಿಯನ್ನು ಪಡೆದುಕೊಂಡ ಶ್ರೀದೇವಿ, ವಾಯವ್ಯ ಸಾರಿಗೆ ಸಂಸ್ಥೆಯಲ್ಲಿ ಮೊದಲ ಮಹಿಳಾ ಬಸ್ ಚಾಲಕಿ ಎಂಬ ಕೀರ್ತಿಗೆ ಪಾತ್ರವಾಗಿದ್ದಾರೆ. ಇದೀಗ ಇವರ ಈ ಸಾಧನೆಯನ್ನು ಕಂಡು ಜನ ಕೂಡ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

    ನಗರ ಪ್ರದೇಶವೆಂದರೆ ಅಲ್ಲಿ ಸಿಕ್ಕಾಪಟ್ಟೆ ಟ್ರಾಫಿಕ್ ಜಾಮ್, ವಾಹನಗಳ ದಟ್ಟಣೆ ಹೆಚ್ಚಿರುತ್ತದೆ. ಸ್ವಲ್ಪ ಯಾಮಾರಿದರೂ ಸಾಕು ಅಪಘಾತಗಳಾಗುತ್ತವೆ. ಎಷ್ಟೇ ಜಾಗರೂಕತೆಯಿಂದ ಇದ್ದರೂ ಕೂಡಾ ಭಯ ಇದ್ದೇ ಇರುತ್ತದೆ. ಇಂಥಹ ಪರಸ್ಥಿತಿಯಲ್ಲಿ ಶ್ರೀದೇವಿ ಅವರ ಬಸ್ ಚಾಲನೆಯನ್ನು ನೋಡುತ್ತಿದ್ದರೆ ಅಚ್ಚರಿ ಎನಿಸುತ್ತದೆ. ಮಹಿಳೆ ಮನಸ್ಸು ಮಾಡಿದರೆ ಏನಾದರೂ ಮಾಡಬಹುದು ಎಂಬುದನ್ನು ಸಾಧಿಸಿ ತೋರಿಕೊಟ್ಟಿರುವ ಶ್ರೀದೇವಿಯವರು ನಿಜಕ್ಕೂ ಇತರ ಮಹಿಳೆಯರಿಗೆ ಮಾದರಿಯಾಗಿದ್ದಾರೆ.