Tag: ಬಹಿರಂಗ

  • ‘ಕಾಂತಾರ’ ಒಟ್ಟು ಬಜೆಟ್ ಎಷ್ಟು?: ಪಕ್ಕಾ ಲೆಕ್ಕಕೊಟ್ಟ ರಿಷಬ್ ಶೆಟ್ಟಿ ತಂದೆ

    ‘ಕಾಂತಾರ’ ಒಟ್ಟು ಬಜೆಟ್ ಎಷ್ಟು?: ಪಕ್ಕಾ ಲೆಕ್ಕಕೊಟ್ಟ ರಿಷಬ್ ಶೆಟ್ಟಿ ತಂದೆ

    ಡಿಮೆ ದಿನಗಳಲ್ಲೇ ನೂರಾರು ಕೋಟಿ ಲಾಭ ತಂದುಕೊಟ್ಟ ಕಾಂತಾರ (Kantara) ಸಿನಿಮಾದ ಒಟ್ಟು ಬಜೆಟ್ ಬಗ್ಗೆ ಹಲವು ದಿನಗಳಿಂದ ಚರ್ಚೆ ನಡೆದಿದೆ. ಈ ಸಿನಿಮಾಗೆ ಒಟ್ಟು ಎಷ್ಟು ಖರ್ಚಾಗಿರಬಹುದು ಎಂದು ಅಂದಾಜಿಸಲಾಗುತ್ತಿದೆ. ಒಬ್ಬೊಬ್ಬರದ್ದು ಒಂದು ಲೆಕ್ಕ. ಆದರೆ, ಈವರೆಗೂ ಹೊಂಬಾಳೆ ಫಿಲ್ಮ್ಸ್ ಆಗಲಿ, ನಿರ್ದೇಶಕ ರಿಷಬ್ ಶೆಟ್ಟಿ ಆಗಲಿ ಬಜೆಟ್ ಬಗ್ಗೆ ಬಾಯಿ ಬಿಟ್ಟಿರಲಿಲ್ಲ. ಇದೇ ಮೊದಲ ಬಾರಿಗೆ ರಿಷಬ್ ಶೆಟ್ಟಿ (Rishabh Shetty) ಅವರ ತಂದೆ ಈ ಕುರಿತು ಮಾತನಾಡಿದ್ದಾರೆ.

    ರಿಷಬ್ ಅವರ ತಂದೆಯೇ (Father) ಹೇಳಿದಂತೆ, ಮೊದಲು ಈ ಸಿನಿಮಾಗೆ ಅಂದುಕೊಂಡ ಬಜೆಟ್ (Budget) 7 ಕೋಟಿ ರೂಪಾಯಿ. ಸಿನಿಮಾ ಮುಗಿದಾಗ ಆದ ಒಟ್ಟು ಬಜೆಟ್ 16 ಕೋಟಿ ರೂಪಾಯಿ. ಈ ಕುರಿತು ಖಾಸಗಿ ವಾಹಿನಿಯ ಜೊತೆ ಮಾತನಾಡುತ್ತಾ, ‘ಮೊದಲು ಈ ಸಿನಿಮಾಗೆ ಅಂದುಕೊಂಡಿದ್ದು ಏಳು ಕೋಟಿ ರೂಪಾಯಿ. ಆನಂತರ ಆಗಿದ್ದು 15 ರಿಂದ 16 ಕೋಟಿ. ಯಾಕೆಂದರೆ, ಮಳೆ ಬಂದು ಮಣ್ಣೇ ಕರಗಿ ಹೋಯಿತು. ರಸ್ತೆ ಕೆಸರಾಗಿ ರಸ್ತೆಯೇ ಮುಚ್ಚಿ ಹೋಯಿತು. ರಸ್ತೆ ನಿರ್ಮಾಣಕ್ಕೆ ಜಲ್ಲಿ ತರಬೇಕಾಯಿತು. ಐದಾರು ತಿಂಗಳು ಮಳೆ ಬಂತು. ಹೀಗೆ ನಾನಾ ರೀತಿಯ ತೊಂದರೆಗಳಿಂದಾಗಿ ಬಜೆಟ್ ಜಾಸ್ತಿ ಆಯಿತು’ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ:ಕೊಟ್ಟ ಮಾತಿನಂತೆ ದಾವಣಗೆರೆ ಬೆಣ್ಣೆದೋಸೆ ಸವಿದ ಸ್ಯಾಂಡಲ್ ವುಡ್ ಕ್ವೀನ್

    ಕಾಂತಾರ ಸಿನಿಮಾ ಇದೀಗ ಕೇವಲ ಭಾರತದಲ್ಲಿ ಮಾತ್ರವಲ್ಲ, ವಿದೇಶಗಳಲ್ಲೂ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. ಕನ್ನಡವೂ ಸೇರಿದಂತೆ ಬಹುತೇಕ ಕಡೆ ಬಾಕ್ಸ್ ಆಫೀಸ್ ಕಲೆಕ್ಷನ್ ಜೋರಾಗಿದೆ. ಕೇವಲ ಸ್ಯಾಂಡಲ್ ವುಡ್ ಗೆ ಮಾತ್ರ ಸೀಮಿತ ಆಗಿದ್ದ ರಿಷಬ್, ಇದೀಗ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಬದಲಾಗಿದ್ದಾರೆ. ಹಾಗಾಗಿ ಅಭಿಮಾನಿಗಳು ತಮ್ಮ ನೆಚ್ಚಿನ ನಟ, ನಿರ್ದೇಶಕನಿಗೆ ಹೊಸದೊಂದು ಬಿರುದು ಕೊಡಲು ಮುಂದಾಗಿದ್ದಾರೆ.

    ರಿಯಲ್ ಸ್ಟಾರ್, ಪವರ್ ಸ್ಟಾರ್, ರಾಕಿಂಗ್ ಸ್ಟಾರ್, ಸೂಪರ್ ಸ್ಟಾರ್ ಹೀಗೆ ತಮ್ಮ ನೆಚ್ಚಿನ ಕಲಾವಿದರಿಗೆ ಅಭಿಮಾನಿಗಳು ಬಿರುದು ಕೊಟ್ಟು ಅಭಿಮಾನ ತೋರಿದ್ದಾರೆ. ರಿಷಬ್ ಶೆಟ್ಟಿ ಅವರಿಗೂ ಕೂಡ ಸದ್ಯ ‘ಡಿವೈನ್ ಸ್ಟಾರ್’ ಎಂದು ಬಿರುದು ಕೊಟ್ಟಿದ್ದು, ಅನೇಕರು ಇದೇ ಹೆಸರಿನಿಂದಲೇ ಕರೆಯುತ್ತಿದ್ದಾರೆ. ಈ ಹಿಂದೆ ಕಾಂತಾರ ಸಿನಿಮಾ ನೋಡಿದ್ದ ನಿರ್ದೇಶಕ ಪ್ರಶಾಂತ್ ನೀಲ್ ಕೂಡ ‘ಡಿವೈನ್’ ಶಬ್ದವನ್ನು ಬಳಸಿಯೇ ಸಿನಿಮಾ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡಿದ್ದರು. ಹೀಗಾಗಿ ಅಭಿಮಾನಿಗಳು ಇನ್ಮುಂದೆ ‘ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ’ ಎಂದು ಕರೆಯಲು ನಿರ್ಧರಿಸಿರುವ ಕುರಿತು ಚರ್ಚೆ ಆಗುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • ಸಿನಿಮಾಗೆ 2 ಕೋಟಿ, ಟಿವಿಗೆ ಹೋದರೆ 3 ಕೋಟಿ ಸಂಭಾವನೆ ಪಡೆಯುತ್ತಾರಂತೆ ಜಗ್ಗೇಶ್: ತಮ್ಮ ಸಂಭಾವನೆ ಬಹಿರಂಗ ಪಡಿಸಿದ ನಟ

    ಸಿನಿಮಾಗೆ 2 ಕೋಟಿ, ಟಿವಿಗೆ ಹೋದರೆ 3 ಕೋಟಿ ಸಂಭಾವನೆ ಪಡೆಯುತ್ತಾರಂತೆ ಜಗ್ಗೇಶ್: ತಮ್ಮ ಸಂಭಾವನೆ ಬಹಿರಂಗ ಪಡಿಸಿದ ನಟ

    ಸಾಮಾನ್ಯವಾಗಿ ನಟ ನಟಿಯರ ಸಂಭಾವನೆ ವಿಚಾರ ಆದಷ್ಟು ಗುಟ್ಟಾಗಿಯೇ ಇರುತ್ತದೆ. ಯಾರು ಎಷ್ಟು ಸಂಭಾವನೆ ಪಡೆಯುತ್ತಾರೆ ಎನ್ನುವುದನ್ನು ಬಹಿರಂಗ ಪಡಿಸುವುದಕ್ಕೆ ಇಷ್ಟ ಪಡುವುದಿಲ್ಲ. ಸಂಭಾವನೆ ವಿಚಾರ ಸದಾ ಗಾಸಿಪ್ ನಂತೆಯೇ ತೇಲು ಬರುತ್ತದೆ. ಆದರೆ, ಇದೇ ಮೊದಲ ಬಾರಿಗೆ ಕನ್ನಡದ ನಟನೊಬ್ಬ ತಮ್ಮ ಸಂಭಾವನೆ ಬಗ್ಗೆ ಬಹಿರಂಗವಾಗಿಯೇ ಮಾತನಾಡಿದ್ದಾರೆ. ತಾವು ಎಷ್ಟು ಸಂಭಾವನೆ ಪಡೆಯುತ್ತೇನೆ ಎನ್ನುವುದನ್ನು ತಿಳಿಸಿದ್ದಾರೆ.

    ಇಂದು ಬೆಂಗಳೂರಿನಲ್ಲಿ ಜಗ್ಗೇಶ್ ನಟನೆಯ ತೋತಾಪುರಿ ಸಿನಿಮಾದ ಪ್ರೆಸ್ ಮೀಟ್ ಆಯೋಜನೆ ಆಗಿತ್ತು. ಈ ಸಂದರ್ಭದಲ್ಲಿ ಮಾತನಾಡಿರುವ ಜಗ್ಗೇಶ್, ‘ಸಂಭಾವನೆ ವಿಚಾರದಲ್ಲಿ ನನ್ನ ಹತ್ತಿರ ಮುಚ್ಚುಮರೆ ಇಲ್ಲ. ಸಿನಿಮಾದಲ್ಲಿ ನಟಿಸಲು ಎರಡು ಕೋಟಿ ತಗೆದುಕೊಳ್ಳುತ್ತೇನೆ. ಟಿವಿ ಅವರು ಮೂರು ಕೋಟಿ ಕೊಡುತ್ತಾರೆ. ನನ್ನ ಹೆಂಡತಿ ಮಕ್ಕಳನ್ನು ನೆಮ್ಮದಿಯಿಂದ ಸಾಕುವುದಕ್ಕೆ ಇಷ್ಟು ಸಾಕಾಗುತ್ತದೆ. ಬೇರೆ ಯಾವ ವಿಚಾರಕ್ಕೂ ನಾನು ತಲೆ ಹಾಕುವುದಿಲ್ಲ’ ಎಂದು ಜಗ್ಗೇಶ್ ಹೇಳಿದ್ದಾರೆ. ಇದನ್ನೂ ಓದಿ:ನಟ ಧನಂಜಯ್ ಮತ್ತು ಅದಿತಿ ಪ್ರಭುದೇವ್ ರಿಯಲ್ ಆಗಿ ಮದುವೆ ಆಗ್ಬೇಕಿತ್ತು: ಆದರೆ ತಪ್ಪಿಸಿದವರು ಯಾರು?

    ಬರೀ ಸಂಭಾವನೆ ವಿಚಾರವನ್ನು ಮಾತ್ರ ಜಗ್ಗೇಶ್ ಹೇಳಲಿಲ್ಲ. ಎರಡೆರಡು ಮದುವೆ ಆದ ಕಲಾವಿದರನ್ನೂ ತಮ್ಮ ಮಾತಿನ ಮಧ್ಯ ಎಳೆತಂದು ‘ನನಗಿರೋದು ಒಬ್ಬರೆ ಹೆಂಡ್ತಿ, ಎರಡು ಮಕ್ಕಳು. ನನ್ನ ಮಕ್ಕಳು ನನ್ನ ಹೆಸರನ್ನು ಎಲ್ಲಿಯೂ ಬಳಸಿಕೊಳ್ಳುವುದಿಲ್ಲ. ನಾನೂ ಕೂಡ ಯಾರ ತಂಟೆಗೂ ಹೋಗುವುದಿಲ್ಲ. ಹಾಗಾಗಿ ನಮ್ಮದು ಸುಖಿ ಕುಟುಂಬ. ದೇವರನ್ನು ನಂಬಿಕೊಂಡು ಬದುಕಿದ್ದೇನೆ. ನಮಗೆಲ್ಲ ಭಗವಂತ ಆನಂದದ ಜೀವನ ಕೊಟ್ಟಿದ್ದಾನೆ ಎಂದಿದ್ದಾರೆ.

    ತಮ್ಮ ಹಳೆಯ ದಿನಗಳನ್ನೂ ನೆನಪಿಸಿಕೊಂಡ ಜಗ್ಗೇಶ್, ಈ ಹಿಂದೆ ಶೂಟಿಂಗ್ ಗೆ ಹೋಗುವಾಗ ಎಷ್ಟೆಲ್ಲ ಕಷ್ಟ ಪಡುತ್ತಿದ್ದೆವು ಎನ್ನುವುದನ್ನೂ ಹೇಳಿಕೊಂಡಿದ್ದಾರೆ. ಸಿನಿಮಾ ರಂಗಕ್ಕೆ ಬಂದಾಗ, ಒಂದು ರೀತಿಯಲ್ಲಿ ಭಯದಿಂದಲೇ ಶೂಟಿಂಗ್ ಗೆ ಹೋಗುತ್ತಿದ್ದೆ. ಯಾರೂ ಆಗ ಪ್ರೀತಿಯಿಂದ ಕಲಿಸಲೇ ಇಲ್ಲ. ಕಷ್ಟಪಟ್ಟು ನಾನು ಈ ಮಟ್ಟಕ್ಕೆ ಬಂದಿರುವುದಾಗಿ ಜಗ್ಗೇಶ್ ಫ್ಲ್ಯಾಶ್ ಬ್ಯಾಕ್‍ ಗೆ ಹೋಗಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಅತ್ಯಾಚಾರ ಸಂತ್ರಸ್ತ ಮಕ್ಕಳ ಬ್ಲರ್ ಫೋಟೋಗಳನ್ನೂ ಪ್ರಕಟಿಸುವಂತಿಲ್ಲ: ಮಾಧ್ಯಮಗಳಿಗೆ ಸುಪ್ರೀಂ

    ಅತ್ಯಾಚಾರ ಸಂತ್ರಸ್ತ ಮಕ್ಕಳ ಬ್ಲರ್ ಫೋಟೋಗಳನ್ನೂ ಪ್ರಕಟಿಸುವಂತಿಲ್ಲ: ಮಾಧ್ಯಮಗಳಿಗೆ ಸುಪ್ರೀಂ

    ನವದೆಹಲಿ: ಇನ್ನು ಮುಂದೆ ಅತ್ಯಾಚಾರ ಸಂತ್ರಸ್ತ ಮಕ್ಕಳ ಫೋಟೋವನ್ನು ಬ್ಲರ್ ಮಾಡಿ ಮಾಧ್ಯಮಗಳು ಸುದ್ದಿ ಪ್ರಕಟಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಆದೇಶ ಪ್ರಕಟಿಸಿದೆ.

    ಅತ್ಯಾಚಾರಕ್ಕೆ ಒಳಗಾದ ಅಪ್ರಾಪ್ತ ಮಕ್ಕಳ ಗುರುತು ಬಹಿರಂಗ ಕುರಿತು ಸ್ವಯಃ ಪ್ರೇರಿತ ದೂರು ದಾಖಲಿಸಿಕೊಂಡು ವಿಚಾರಣೆ ನಡೆಸಿದ ನ್ಯಾಯಾಲಯ ಮಾಧ್ಯಮಗಳಿಗೆ ಸೂಚನೆ ನೀಡಿದೆ.

    ಕಳೆದ ಕೆಲ ದಿನಗಳ ಬಿಹಾರದ ಅಪ್ರಾಪ್ತ ಬಾಲಕಿಯರ ಮೇಲೆ ವಸತಿ ನಿಯಲಯದ ಅಧಿಕಾರಿಗಳೇ ಸಾಮೂಹಿಕವಾಗಿ ಅತ್ಯಾಚಾರ ನಡೆಸಿದ ಪ್ರಕರಣ ಬೆಳಕಿಗೆ ಬಂದ ಬಳಿಕ ನ್ಯಾಯಾಲಯ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿತ್ತು. ಪ್ರಕರಣದ ಕುರಿತು ವಿಚಾರಣೆ ನಡೆಸಿದ ನ್ಯಾಯಾಲಯ ಕೇಂದ್ರ ಸರ್ಕಾರ ಹಾಗೂ ಬಿಹಾರ ರಾಜ್ಯಕ್ಕೆ ನೋಟಿಸ್ ಜಾರಿ ಮಾಡಿದೆ.

    ಬಿಹಾರದ ಸ್ವಯಂ ಸೇವಾ ಸಂಸ್ಥೆಯೊಂದು ನಡೆಸುತ್ತಿದ್ದ ವಸತಿ ನಿಲಯದಲ್ಲಿದ್ದ ಸುಮಾರು 40 ಬಾಲಕಿಯರ ಮೇಲೆ ಅತ್ಯಾಚಾರ ನಡೆದಿತ್ತು. ಅಲ್ಲದೇ ಈ ಕುರಿತು ವೈದ್ಯಕೀಯ ಪರೀಕ್ಷೆಯ ರಿಪೋರ್ಟ್ ಸಹ ಲೈಂಗಿಕ ದೌಜನ್ಯ ನಡೆದಿರುವುದನ್ನು ಖಚಿತ ಪಡಿಸಿತ್ತು. ಈ ವರದಿಯ ಅನ್ವಯ ಎನ್‍ಜಿಒ ಸಂಸ್ಥೆಯನ್ನು ಕಪ್ಪು ಪಟ್ಟಿಗೆ ಸೇರಿಸಿ ವಸತಿ ನಿಲಯದಲ್ಲಿದ್ದ ಎಲ್ಲಾ ಬಾಲಕಿಯನ್ನು ರಕ್ಷಣೆ ಮಾಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರ ರಾಜ್ಯಪಾಲರು ಸಹ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಪತ್ರ ಬರೆದು ಇಂತಹ ಇತರೇ ಎನ್‍ಜಿಒ ಗಳ ವಿರುದ್ಧ ನೇರ, ಕಠಿಣ ಕ್ರಮಕೈಗೊಳ್ಳುವಂತೆ ಮನವಿ ಮಾಡಿದ್ದರು.

    ಬಿಹಾರದ ಮುಜಾಫರ್ ನಗರದ ಬ್ರಿಜೆಷ್ ಠಾಕೂರ್ ಎಂಬಾತ ತನ್ನ ಎನ್‍ಜಿಒ ಅಡಿ ಎರಡು ಬಾಲಕಿಯರ ವಸತಿ ನಿಲಯಗಳನ್ನು ನಡೆಸುತ್ತಿದ್ದ. ಈ ವಸತಿ ನಿಲಯದಲ್ಲಿದ್ದ 34 ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ ಎಸಗಲಾಗಿತ್ತು. ಅಲ್ಲದೇ 11 ಬಾಲಕಿಯರು ವಸತಿ ನಿಲಯದಿಂದ ನಾಪತ್ತೆಯಾಗಿದ್ದರು.

    ವಿಚಾರಣೆ ವೇಳೆ ದೇಶದಲ್ಲಿ ನಡೆದ ಅಪ್ರಾಪ್ತ ಬಾಲಕಿಯರ ಮೇಲಿನ ಅತ್ಯಾಚಾರ ಪ್ರಕರಣಗಳನ್ನು ಉದಾಹಣೆಯಾಗಿ ನೀಡಿದ ನ್ಯಾಯಾಲಯ, ಅಪ್ರಾಪ್ತ ಮಕ್ಕಳ ಗುರುತು ಬಹಿರಂಗವಾದ ಬಳಿಕ ಬಾಲಕಿಯರ ಭವಿಷ್ಯ ಮೇಲೆ ಬೀಳುವ ಪರಿಣಾಮದ ಬಗ್ಗೆ ಕಳವಳ ವ್ಯಕ್ತಪಡಿಸಿತು.

    ಜಮ್ಮು ಕಾಶ್ಮೀರದ ಕತುವಾದಲ್ಲಿ ನಡೆದ 8 ವರ್ಷದ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣದ ವೇಳೆ ಬಾಲಕಿಯ ಫೋಟೋ ಹಾಗೂ ಧರ್ಮವನ್ನು ಕೆಲ ಮಾಧ್ಯಮಗಳು ಬಹಿರಂಗಗೊಳಿಸಿತ್ತು. ಪ್ರಕರಣಕ್ಕೆ ಸಂಬಂಧಿಸದಂತೆ ದೆಹಲಿ ಹೈಕೋರ್ಟ್ 12 ಮಾಧ್ಯಮಗಳಿಗೆ ತಲಾ 10 ಲಕ್ಷ ರೂ. ದಂಡವನ್ನು ವಿಧಿಸಿ ಆದೇಶಿಸಿತ್ತು. ದಂಡ ಹಣವನ್ನು ಜಮ್ಮು ಕಾಶ್ಮೀರದ ಸಂತ್ರಸ್ತ ಪರಿಹಾರ ನಿಧಿಗೆ ನೀಡುವಂತೆ ಸೂಚಿಸಿತ್ತು.

    ಈ ವಿಚಾರಣೆ ವೇಳೆ ಮಾಧ್ಯಮಗಳ ಪರ ವಕೀಲರು ಕಾನೂನನ್ನು ಅರ್ಥ ಮಾಡಿಕೊಳ್ಳುವಲ್ಲಿ ಲೋಪವಾಗಿದೆ. ಸಂತ್ರಸ್ತ ಬಾಲಕಿ ಮೃತಪಟ್ಟ ಕಾರಣ ನಾವು ಆಕೆಯ ಫೋಟೋವನ್ನು ಪ್ರಕಟಿಸಿದ್ದೇವೆ. ನಾವು ಎಸಗಿರುವ ತಪ್ಪಿಗೆ ಕ್ಷಮೆಯಾಚಿಸುತ್ತೇವೆ ಎಂದು ಹೇಳಿದ್ದರು. ಆದರೆ ಹೈಕೋರ್ಟ್ ಮಾಧ್ಯಮಗಳ ಕ್ಷಮೆಯನ್ನು ಒಪ್ಪದೇ 10 ಲಕ್ಷ ರೂ. ದಂಡವನ್ನು ವಿಧಿಸಿತ್ತು. ಈ ಪ್ರಕರಣ ಬಳಿಕ ನ್ಯಾಯಾಲಯ ಮತ್ತೊಮ್ಮೆ ಮಾಧ್ಯಮಗಳಿಗೆ ಸೂಚನೆ ರವಾನಿಸಿದೆ.

    ಅಪ್ರಾಪ್ತ ಮಕ್ಕಳ ಮೇಲೆ ನಡೆಯುವ ಲೈಂಗಿಕ ದೌರ್ಜನ್ಯ ಪ್ರಕರಣಗಳು ಪೋಕ್ಸೋ ಕಾಯ್ದೆಯ ಅಡಿಯಲ್ಲಿ ದಾಖಲಾಗುತ್ತದೆ. ಈ ಕಾಯ್ದೆ ಅಡಿಯಲ್ಲಿ ಪ್ರಕರಣಗಳು ದಾಖಲಾದರೆ ಸಂತ್ರಸ್ತರ ವಿವರ, ಫೋಟೋ ಸೇರಿದಂತೆ ಯಾವುದೇ ಮಾಹಿತಿಯನ್ನು ಪ್ರಕಟಿಸುವಂತಿಲ್ಲ.