Tag: ಬಾಂಗ್ಲಾ ದೇಶ

  • ಬಾಂಗ್ಲಾ ಗೆದ್ದರೆ ಮೆಗಾ ಆಫರ್ ಕೊಟ್ಟಿದ್ದ ಪಾಕ್ ನಟಿ- ಸೋತ ಬಳಿಕ ಹೇಳಿದ್ದೇನು?

    ಬಾಂಗ್ಲಾ ಗೆದ್ದರೆ ಮೆಗಾ ಆಫರ್ ಕೊಟ್ಟಿದ್ದ ಪಾಕ್ ನಟಿ- ಸೋತ ಬಳಿಕ ಹೇಳಿದ್ದೇನು?

    ನವದೆಹಲಿ: ಪುಣೆಯಲ್ಲಿ ನಡೆದ ವಿಶ್ವಕಪ್ ಟೂರ್ನಿಯ 17ನೇ ಪಂದ್ಯದಲ್ಲಿ ಭಾರತ ಸೋಲಿಸಲು ಬಾಂಗ್ಲಾ ಕ್ರಿಕೆಟಿಗರಿಗೆ ಪಾಕಿಸ್ತಾನದ (Pakistan) ನಟಿ ಸೆಹರ್ ಶಿನ್ವಾರಿ (Sehar Shinwari) ಬಿಗ್ ಆಫರ್ ಕೊಟ್ಟಿದ್ದಳು. ಇದೀಗ ಭಾರತ (Team India) ವಿರುದ್ಧ ಸೋಲಿನ ಬಳಿಕವೂ ನಟಿ ಪ್ರತಿಕ್ರಿಯಿಸಿದ್ದಾಳೆ.

    ಭಾರತ ವಿರುದ್ಧ ಬಾಂಗ್ಲಾ ಸೋತ ಬಳಿಕ ಎಕ್ಸ್ ನಲ್ಲಿ ಬರೆದುಕೊಂಡಿರುವ ಮಾಡಿದ ನಟಿ, ಬಾಂಗ್ಲಾ ಟೈಗರ್ಸ್ ಚೆನ್ನಾಗಿ ಆಡಿದ್ದೀರಿ. ಭಾರತದ ವಿರುದ್ಧ ಕನಿಷ್ಠ ಪಕ್ಷ ಅವರದ್ದೇ ನೆಲದಲ್ಲಿ ಒಳ್ಳೆಯ ಸವಾಲು ನೀಡಿದ್ದೀರಿ ಎಂದು ಹೊಗಳಿದ್ದಾಳೆ. ಶಿನ್ವಾರಿ ಟ್ವೀಟ್ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ಅಲ್ಲದೆ ಭಾರತೀಯ ಕ್ರೀಡಾಭಿಮಾನಿಗಳು ಪಾಕ್ ನಟಿಯನ್ನು ಟ್ರೋಲ್ ಮಾಡುತ್ತಿದ್ದಾರೆ.

    ಶಿನ್ವಾರಿ ಆಫರ್ ಏನು?: ಇನ್ ಶಾ ಅಲ್ಲಾ, ನನ್ನ ಬಾಂಗ್ಲಾ ಬಂಧು ಮುಂದಿನ ಪಂದ್ಯದಲ್ಲಿ ಸೇಡು ತೀರಿಸಿಕೊಳ್ಳಲಿ. ಆಗ ನಾನು ಢಾಕಾಗೆ ಭೇಟಿ ನೀಡಿ ಅಲ್ಲಿ ಬೆಂಗಾಲಿ ಹುಡುಗರೊಂದಿಗೆ ಡಿನ್ನರ್ ಡೇಟ್ ಮಾಡುವೆ ಎಂದು ಶಿನ್ವಾರಿ ಆಫರ್ ನೀಡಿದ್ದಳು. ಅಲ್ಲದೆ ಭಾರತ ತಂಡ ವಿಶ್ವಕಪ್‍ನಲ್ಲಿ (Worldcup 2023) ಸೆಮಿಫೈನಲ್‍ನಲ್ಲೇ ಹೊರಬೀಳಲಿದೆ ಎಂದು ಭವಿಷ್ಯ ನುಡಿದಿದ್ದಳು. ಪಾಕಿಸ್ತಾನ ಮತ್ತು ನ್ಯೂಜಿಲೆಂಡ್ ತಂಡಗಳು ಫೈನಲ್‍ನಲ್ಲಿ ಆಡಲಿವೆ ಎಂದಿದ್ದಾಳೆ. ಜೊತೆಗೆ ಪಾಕ್ ತಂಡ ವಿಶ್ವಕಪ್ ಎತ್ತಿಹಿಡಿಯುವ ಕನಸನ್ನೂ ಹಂಚಿಕೊಂಡಿದ್ದಳು.

    ಬಾಂಗ್ಲಾ ವಿರುದ್ಧ ಭಾರತ ಗೆಲುವು: ವಿರಾಟ್ ಕೊಹ್ಲಿ ಅಜೇಯ ಶತಕ, ಶುಭಮನ್ ಗಿಲ್ ಅರ್ಧಶತಕ, ರೋಹಿತ್ ಶರ್ಮಾ ಹಾಗೂ ಕೆ.ಎಲ್ ರಾಹುಲ್ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಟೀಂ ಇಂಡಿಯಾ ಬಾಂಗ್ಲಾದೇಶದ ವಿರುದ್ಧ 7 ವಿಕೆಟ್‍ಗಳ ಭರ್ಜರಿ ಜಯ ಸಾಧಿಸಿದೆ. ಬಾಂಗ್ಲಾದೇಶದ ವಿರುದ್ಧ ಶತಕ ಸಿಡಿಸುವ ಮೂಲಕ ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್‍ನಲ್ಲಿ 48ನೇ ಶತಕ ಸಿಡಿಸಿದ ವಿರಾಟ್, 26 ಸಾವಿರ ಅಂತಾರಾಷ್ಟ್ರೀಯ ರನ್‍ಗಳಮನ್ನೂ ಪೂರೈಸಿದ ವಿಶೇಷ ಸಾಧನೆಯನ್ನೂ ಮಾಡಿದ್ದಾರೆ. ಜೊತೆಗೆ ಎಲ್ಲಾ ಮಾದರಿಯ ಅಂತಾರಾಷ್ಟ್ರೀಯ ಕ್ರಿಕೆಟ್‍ನಲ್ಲಿ 78ನೇ ಶತಕ ಸಿಡಿಸಿದ ವಿಶ್ವದ 2ನೇ ಆಟಗಾರ ಸಹ ಎನಿಸಿಕೊಂಡಿದ್ದಾರೆ.

    ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ನಡೆದ ಭಾರತದ ವಿರುದ್ಧ ನಡೆದ ವಿಶ್ವಕಪ್ ಪಂದ್ಯದಲ್ಲಿ ಬಾಂಗ್ಲಾದೇಶ ತಂಡವು ನಿಗದಿತ 50 ಓವರ್‍ಗಳಲ್ಲಿ 8 ವಿಕೆಟ್ ನಷ್ಟಕ್ಕೆ 256 ರನ್ ಗಳಿಸಿತ್ತು. 257ರನ್‍ಗಳ ಗುರಿ ಬೆನ್ನತ್ತಿದ್ದ ಭಾರತ 41.3 ಓವರ್‍ಗಳಲ್ಲೇ 3 ವಿಕೆಟ್ ನಷ್ಟಕ್ಕೆ 261 ರನ್ ಸಿಡಿಸಿ ಗೆಲುವು ಸಾಧಿಸಿತು. ಈ ಮೂಲಕ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಸತತ 4ನೇ ಗೆಲುವು ತನ್ನದಾಗಿಸಿಕೊಂಡಿತು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • World Cup 2023 – ಬಾಂಗ್ಲಾ ನಾಯಕನಾಗಿ ಮತ್ತೊಮ್ಮೆ ಶಕೀಬ್ ಅಲ್ ಹಸನ್

    World Cup 2023 – ಬಾಂಗ್ಲಾ ನಾಯಕನಾಗಿ ಮತ್ತೊಮ್ಮೆ ಶಕೀಬ್ ಅಲ್ ಹಸನ್

    ಢಾಕಾ: ಬಾಂಗ್ಲಾ (Bangladesh) ತಂಡದ ನಾಯಕನಾಗಿ ಶಕೀಬ್ ಅಲ್ ಹಸನ್ (Shakib Al Hasan) ಮತ್ತೊಮ್ಮೆ ನೇಮಕಗೊಂಡಿದ್ದಾರೆ. ಈ ಮೂಲಕ ಅವರು 2023ರ ವಿಶ್ವಕಪ್‍ನಲ್ಲಿ (World Cup) ತಂಡವನ್ನು ಮುನ್ನಡೆಸಲಿದ್ದಾರೆ ಎಂದು ಬಾಂಗ್ಲಾ ಕ್ರಿಕೆಟ್ ಮಂಡಳಿ ತಿಳಿಸಿದೆ.

    ಶಕೀಬ್ ಈಗ ಎಲ್ಲಾ ಸ್ವರೂಪದ ಕ್ರಿಕೆಟ್‍ನ ನಾಯಕರಾಗಿದ್ದಾರೆ. ಕಳೆದ ವರ್ಷದಿಂದ ಟೆಸ್ಟ್ ಮತ್ತು ಟಿ20 ನಾಯಕರಾಗಿ ತಂಡವನ್ನು ಮುನ್ನಡೆಸಿದ್ದರು. ಏಷ್ಯಾಕಪ್‍ನಿಂದ ಹೊರಗುಳಿದ ನಂತರ ಆಗಸ್ಟ್ 3 ರಂದು ಕೆಳಗಿಳಿದಿದ್ದ ತಮೀಮ್ ಇಕ್ಬಾಲ್ ಬದಲಿಗೆ ನಾಯಕ ಸ್ಥಾನವನ್ನು ಪಡೆದಿದ್ದಾರೆ. ಇದನ್ನೂ ಓದಿ: Asia Cup 2023: ಟೀಂ ಇಂಡಿಯಾ ಜೆರ್ಸಿಯಲ್ಲಿ ಪಾಕ್ ಹೆಸರು – ಫೋಟೋ ವೈರಲ್

    ಶಕೀಬ್ ಲಂಕಾ ಪ್ರೀಮಿಯರ್ ಲೀಗ್‍ನಿಂದ ಹಿಂದಿರುಗಿದಾಗ ನಾವು ಅವರೊಂದಿಗೆ ಹೆಚ್ಚು ಚರ್ಚಿಸಲಿದ್ದೇವೆ. ಅವರ ಜೊತೆ ಫೊನ್‍ನಲ್ಲಿ ಮಾತನಾಡಲಾಗಿದೆ. ಆದರೆ ಅವರು ಪ್ರಸ್ತುತ ಫ್ರಾಂಚೈಸ್ ಲೀಗ್‍ನಲ್ಲಿ ನಿರತರಾಗಿರುವ ಕಾರಣ ನಾವು ಅವರೊಂದಿಗೆ ವೈಯಕ್ತಿಕವಾಗಿ ಮಾತನಾಡುವುದು ಸರಿಯಾದ ಕ್ರಮವಾಗಿದೆ. ಅವರು ಯಾವ ಬಗೆಯ ಕ್ರಿಕೆಟ್‍ನಲ್ಲಿ ತಂಡವನ್ನು ಮುನ್ನಡೆಸುತ್ತಾರೆ ಎಂಬುದರ ಮಾತನಾಡಲಾಗುತ್ತದೆ ಎಂದು ಬಾಂಗ್ಲಾ ಕ್ರಿಕೆಟ್ ಮಂಡಳಿ ಅಧ್ಯಕ್ಷ ನಜ್ಮುಲ್ ಹಸನ್ ತಿಳಿಸಿದ್ದಾರೆ.

    ಶಕಿಬ್ ನಾಯಕತ್ವಕ್ಕೆ ಮೊದಲ ಆಯ್ಕೆಯಾಗಿದ್ದಾರೆ. ಆದರೆ ಅವರನ್ನು ನೇಮಿಸುವ ಮೊದಲು ನಾವು ಅವರೊಂದಿಗೆ ಮಾತನಾಡಬೇಕಾಗಿತ್ತು. ಬೇರೆ ಆಟಗಾರರು ಈ ಬಗ್ಗೆ ಬೇರೆ ಅರ್ಥದಲ್ಲಿ ಯೋಚಿಸಬಾರದು ಎಂದಿದ್ದಾರೆ.

    2011ರ ವಿಶ್ವಕಪ್‍ನಲ್ಲಿ ನಾಯಕತ್ವ ವಹಿಸಿ ಈ ಬಾರಿಯೂ ನಾಯಕತ್ವ ವಹಿಸಲಿರುವ ಏಕೈಕ ಆಟಗಾರ ಶಕಿಬ್ ಆಗಿದ್ದಾರೆ. ಅವರು ಇದುವರೆಗೆ ಬಾಂಗ್ಲಾದೇಶವನ್ನು 19 ಟೆಸ್ಟ್ ಮತ್ತು 39 ಟಿ-20 ಪಂದ್ಯಗಳಲ್ಲಿ ಮುನ್ನಡೆಸಿದ್ದಾರೆ. ನಾಯಕನಾಗಿ ಅವರು 52 ಏಕದಿನ ಪಂದ್ಯಗಳಲ್ಲಿ ತಂಡವನ್ನು ಮುನ್ನೆಡೆಸಿದ್ದಾರೆ. ಇದನ್ನೂ ಓದಿ: ಸ್ಪಿನ್ ಮಾಂತ್ರಿಕ ಮುತ್ತಯ್ಯ ಮುರಳೀಧರನ್ ಹೊಸ ಇನ್ನಿಂಗ್ಸ್ ಆರಂಭ – ಧಾರವಾಡದಲ್ಲಿ 900 ಕೋಟಿ ಹೂಡಿಕೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬಾಂಗ್ಲಾದಿಂದ ಬಂದು ಹಿಂದೂ ಆಗಿ ಭಾರತದಲ್ಲಿ ಅಕ್ರಮವಾಗಿ ನೆಲೆಸಿದ್ದ ಮಹಿಳೆ ಅರೆಸ್ಟ್!

    ಬಾಂಗ್ಲಾದಿಂದ ಬಂದು ಹಿಂದೂ ಆಗಿ ಭಾರತದಲ್ಲಿ ಅಕ್ರಮವಾಗಿ ನೆಲೆಸಿದ್ದ ಮಹಿಳೆ ಅರೆಸ್ಟ್!

    ಬೆಂಗಳೂರು: ಬಾಂಗ್ಲಾ ದೇಶದಿಂದ ಬಂದು ಭಾರತದಲ್ಲಿ ಹಿಂದೂ ಆಗಿ ಅಕ್ರಮವಾಗಿ ಭಾರತೀಯ ಸಾರ್ವಭೌಮತ್ವ ಪಡೆದಿದ್ದ, ಮಹಿಳೆಯೊಬ್ಬಳನ್ನು ಬ್ಯಾಡರಹಳ್ಳಿ ಪೊಲೀಸರು ಬಂಧಿಸಿದ್ದಾರೆ.

    ರೋನಿ ಬೇಗಂ ಅಕ್ರಮವಾಗಿ ಗಡಿ ನುಸುಳಿದ್ದ ಮಹಿಳೆ. ಬೇಗಂ 2006 -2007 ರಲ್ಲಿ ಅಕ್ರಮವಾಗಿ ಭಾರತದ ಗಡಿ ನುಸುಳಿದ್ದು, 2015 ರಲ್ಲಿ ಬೆಂಗಳೂರಿನಲ್ಲಿ ನೆಲೆಸಿದ್ದಳು. ಅವಳು ಬೆಂಗಳೂರಿನ ಮಾಗಡಿ ರಸ್ತೆಯಲ್ಲಿ ಟೈಲರಿಂಗ್ ಮಾಡಿಕೊಂಡಿದ್ದಳು. ಮಹಿಳೆಯು ನಿತೀನ್ ಕುಮಾರ್ ಎಂಬಾತನನ್ನು ಬಾಂಬೆಯಲ್ಲಿ ವಿವಾಹವಾಗಿದ್ದಳು. ಹಿಂದೂ ಸಂಪ್ರದಾಯದಂತೆ ವಿವಾಹವಾಗಿ ಹೆಸರು ಬದಲಿಸಿಕೊಂಡು ಪಾಯಲ್ ಗೋಷ್ ಎಂದು ಮರು ನಾಮಕರಣ ಮಾಡಿಕೊಂಡಿದ್ದಳು. ಇದನ್ನೂ ಓದಿ: ರಾಷ್ಟ್ರಧ್ವಜವನ್ನು ತಲೆಕೆಳಗಾಗಿ ಹಾರಿಸಿದ ಕೇರಳ ಸಚಿವ – ರಾಜೀನಾಮೆಗೆ ಬಿಜೆಪಿ ಆಗ್ರಹ

    ನಕಲಿ ದಾಖಲೆ ಕೊಟ್ಟು ಭಾರತದ ಪ್ರಜೆಯಾಗಿ ಮಾರ್ಪಾಡು ಮಾಡಿಕೊಂಡಿದ್ದಳು. ಈ ವೇಳೆ ಬಾಂಗ್ಲಾಗೆ ಪ್ರಯಾಣ ಮಾಡುವಾಗ ಏರ್ ಪೋರ್ಟ್ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾಳೆ. ಮಹಿಳೆಯು ನಕಲಿ ದಾಖಲೆ ಮುಖಾಂತರ ಓಟರ್ ಐಡಿ, ಆಧಾರ್ ಕಾರ್ಡ್ ಕ್ರಿಯೇಟ್ ಮಾಡಿಕೊಂಡಿದ್ದು, ವೆಸ್ಟ್ ಬೆಂಗಾಲ್ ಏರ್ ಪೋರ್ಟ್‍ನಲ್ಲಿ ಲಾಕ್ ಆಗಿದ್ದಾಳೆ. ಇದನ್ನೂ ಓದಿ: ಋತುಸ್ರಾವದ ರಕ್ತ ಸೇವಿಸುತ್ತೇನೆ, ಫೇಸ್ ಮಾಸ್ಕ್‌ ಆಗಿ ಬಳಸುತ್ತೇನೆ

    ಈ ಕುರಿತು ಎಫ್‍ಆರ್‍ಆರ್‍ಒ ಸೂಚನೆ ಮೇರೆಗೆ ಬ್ಯಾಡರಹಳ್ಳಿ ಠಾಣೆಯಲ್ಲಿ ದೂರು ದಾಖಲಾಗಿತ್ತು. ಒಂದೂವರೆ ವರ್ಷದ ನಂತರ ರೋನಿ ಬೇಗಂನನ್ನು ಪೊಲೀಸರು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಮಹಿಳೆ ಅಕ್ರಮವಾಗಿ ದಾಖಲಾತಿ ಮಾಡಿಕೊಟ್ಟವರನ್ನು ಸಹ ಹುಡುಕಲು ಪೊಲೀಸರು ಬಲೆ ಬೀಸಿದ್ದಾರೆ.

  • ಬಾಂಗ್ಲಾ ಪ್ರಧಾನಿಯೊಂದಿಗೆ ಕೆಲಸ ಮಾಡಲು ಎದುರು ನೋಡುತ್ತಿದ್ದೇನೆ : ಮೋದಿ

    ಬಾಂಗ್ಲಾ ಪ್ರಧಾನಿಯೊಂದಿಗೆ ಕೆಲಸ ಮಾಡಲು ಎದುರು ನೋಡುತ್ತಿದ್ದೇನೆ : ಮೋದಿ

    ನವದೆಹಲಿ: ಭಾರತ ಮತ್ತು ಬಾಂಗ್ಲಾದೇಶದ ನಡುವಿನ ಮೈತ್ರಿ ದಿವಸ್ (ಸ್ನೇಹ ದಿನಾಚರಣೆ)ಯ ಸ್ಮರಣಾರ್ಥವಾಗಿ, ದ್ವಿಪಕ್ಷೀಯ ಸಂಬಂಧಗಳನ್ನು ಮತ್ತಷ್ಟು ವಿಸ್ತರಿಸಲು ಮತ್ತು ಗಟ್ಟಿಗೊಳಿಸಲು ಬಾಂಗ್ಲಾದೇಶದ ಸಹವರ್ತಿ ಶೇಖ್ ಹಸೀನಾ ಅವರೊಂದಿಗೆ ಕೆಲಸ ಮಾಡುವುದನ್ನು ಮುಂದುವರಿಸಲು ಎದುರು ನೋಡುತ್ತಿದ್ದೇನೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.

    1971ರ ಡಿಸೆಂಬರ್ 6ರಂದು ಹೊಸದಾಗಿ ರೂಪುಗೊಂಡ ಬಾಂಗ್ಲಾದೇಶವನ್ನು ಗುರುತಿಸುವ ಸಲುವಾಗಿ ಭಾರತವು ಮೈತ್ರಿ ದಿವಸ್ ಅನ್ನು ಆಚರಿಸುತ್ತದೆ. ಸದ್ಯ ಈ ಕುರಿತಂತೆ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿದ್ದು, ಇಂದು ಭಾರತ ಮತ್ತು ಬಾಂಗ್ಲಾದೇಶ ನಡುವಿನ ಮೈತ್ರಿ ದಿವಸ್ (ಸ್ನೇಹ ದಿನಾಚರಣೆ) ಅನ್ನು ಸ್ಮರಿಸುತ್ತದೆ. ನಾವು ನಮ್ಮ 50 ವರ್ಷಗಳ ಸ್ನೇಹದ ಅಡಿಪಾಯವನ್ನು ಜಂಟಿಯಾಗಿ ನೆನಪಿಸಿಕೊಳ್ಳುತ್ತೇವೆ ಮತ್ತು ಆಚರಿಸುತ್ತೇವೆ. ನಮ್ಮ ಸಂಬಂಧವನ್ನು ಮತ್ತಷ್ಟು ವಿಸ್ತರಿಸಲು ಮತ್ತು ಗಾಢವಾಗಿಸಲು ಶೇಖ್ ಹಸೀನಾ ಅವರೊಂದಿಗೆ ಕೆಲಸ ಮಾಡಲು ನಾನು ಎದುರು ನೋಡುತ್ತಿದ್ದೇನೆ” ಎಂದು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: 200 ಕೋಟಿ ರೂ. ವಂಚನೆ ಪ್ರಕರಣ – ದೇಶ ತೊರೆಯದಂತೆ ಜಾಕ್ವೆಲಿನ್ ಗೆ ತಡೆ

    ನರೇಂದ್ರ ಮೋದಿ ಅವರು ಮಾರ್ಚ್‍ನಲ್ಲಿ ಬಾಂಗ್ಲದೇಶದ ರಾಷ್ಟ್ರೀಯ ದಿನಾಚರಣೆಯಲ್ಲಿ ಪಾಲ್ಗೊಳ್ಳಲು ಭೇಟಿ ನೀಡಿದ್ದ ವೇಳೆ, ನವೆಂಬರ್ 6 ರಂದು ಮೈತ್ರಿ ದಿವಸ್ ಎಂದು ಆಚರಿಸಲು ನಿರ್ಧರಿಸಿದರು. ಬಾಂಗ್ಲಾದೇಶದೊಂದಿಗೆ ದ್ವಿಪಕ್ಷೀಯ ರಾಜತಾಂತ್ರಿಕ ಸಂಬಂಧವನ್ನು ಬೆಳೆಸಿದ ಮೊದಲ ದೇಶಗಳಲ್ಲಿ ಭಾರತವೂ ಸಹ ಒಂದಾಗಿದೆ. ಇದನ್ನೂ ಓದಿ: ಪಕ್ಷ ಅಧಿಕಾರಕ್ಕೆ ಬಂದ್ರೆ 18 ವರ್ಷ ಮೇಲ್ಪಟ್ಟಯುವತಿಯರಿಗೆ ಪತ್ರಿ ತಿಂಗಳು 1 ಸಾವಿರ- ಕೇಜ್ರಿವಾಲ್

  • ಬಾಂಗ್ಲಾ ಯುವತಿ ಮೇಲೆ ಗ್ಯಾಂಗ್‍ರೇಪ್ ಪ್ರಕರಣ- NIA ಪೊಲೀಸರಿಂದ ಸ್ಫೋಟಕ ಮಾಹಿತಿ

    ಬಾಂಗ್ಲಾ ಯುವತಿ ಮೇಲೆ ಗ್ಯಾಂಗ್‍ರೇಪ್ ಪ್ರಕರಣ- NIA ಪೊಲೀಸರಿಂದ ಸ್ಫೋಟಕ ಮಾಹಿತಿ

    ಬೆಂಗಳೂರು: ಇಡೀ ದೇಶವನ್ನೇ ತಲ್ಲಣಗೊಳಿಸಿದ್ದ ಬಾಂಗ್ಲಾದೇಶ ಯುವತಿ ಮೇಲೆ ನಡೆದಿದ್ದ ಗ್ಯಾಂಗ್ ರೇಪ್ ಪ್ರಕರಣಕ್ಕೆ ಇದೀಗ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ.

    ಗ್ಯಾಂಗ್ ರೇಪ್ ಪ್ರಕರಣದ ಬೆನ್ನು ಬಿದ್ದಿದ್ದ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‍ಐಎ) ಪೊಲೀಸರಿಗೆ ಬೇರೆ ಬೇರೆ ದೇಶಗಳಿಗೆ ಯುವತಿಯರನ್ನು ಮಾನವ ಕಳ್ಳಸಾಗಣೆ ಮಾಡುತ್ತಿರೋ ಶಾಕಿಂಗ್ ವಿಚಾರ ತಿಳಿದುಬಂದಿದೆ. ಬಾಂಗ್ಲಾದೇಶ ದೇಶದಿಂದ ಸಮುದ್ರದ ಮೂಲಕ ಚೆನ್ನೈ ತಲುಪಿಸಿ, ಅಲ್ಲಿಂದ ಕರ್ನಾಟಕ, ಕೇರಳ, ತಮಿಳು, ಗೋವಾ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಅಕ್ರಮ ಚಟುವಟಿಕೆಗಳಿಗೆ ಇಲ್ಲಿನ ಯುವಕ – ಯುವತಿಯನ್ನು ಬಳಸಿಕೊಳ್ಳುವುದು ಒಂದು ಕಡೆಯಾದ್ರೆ, ಮತ್ತೊಂದು ಕಡೆ ಇದೇ ಯುವತಿಯನ್ನು ಕೆಲ ಕಿಂಗ್ ಪಿನ್ ಗಳ ಸೂಚನೆಯಂತೆ ದೂರದ ಕೆನಡಾ ದೇಶಕ್ಕೆ ಮಾನವ ಕಳ್ಳ ಸಾಗಾಣಿಕೆ ಮಾಡುತ್ತಿರುವ ಬಗ್ಗೆ ಎನ್‍ಐಎ ಪೊಲೀಸರಿಗೆ ಖಚಿತ ಮಾಹಿತಿ ಸಿಕ್ಕಿದೆ.

    ಬಾಂಗ್ಲಾದಿಂದ ಚೆನ್ನೈಗೆ ಯುವತಿಯನ್ನು ಕರೆತಂದು, ಅಲ್ಲಿಂದ ಯಾರ್ಯಾರು ಎಲ್ಲೆಲ್ಲಿಗೆ ಅಂತಾ ಡಿವೈಡ್ ಮಾಡಲಾಗುತ್ತದೆ. ನಂತರ ಕೆನಡಾ ದೇಶಕ್ಕೆ ಯಾರು ಅಂತಾ ಗುರುತಿಸಿ ಅಲ್ಲಿಂದ ಕರ್ನಾಟಕದ ಮೂಲಕ ಮಂಗಳೂರು ಪೋರ್ಟಿ ಗೆ ತಲುಪಿಸಿ ಕೆನಡಾ ಸೇರಿದಂತೆ ವಿವಿಧ ದೇಶಗಳಿಗೆ ಯುವತಿಯರನ್ನು ಸಾಗಾಣಿಕೆ ಮಾಡುತ್ತಿದ್ದ ಬಗ್ಗೆ ತನಿಖೆಯಲ್ಲಿ ಗೊತ್ತಾಗಿದೆ. ಇದನ್ನೂ ಓದಿ: ಬಾಂಗ್ಲಾ ಯುವತಿ ಮೇಲೆ ರೇಪ್ – ಎನ್‍ಐಎಯಿಂದ ಪ್ರತ್ಯೇಕ ಎಫ್‍ಐಆರ್

    ಕೇವಲ ಬಾಂಗ್ಲಾದೇಶ ದೇಶದ ಯುವತಿಯರು ಮಾತ್ರವಲ್ಲದೇ ನಮ್ಮ ದೇಶದ ಬಡ ಯುವತಿಯರನ್ನು ಕೂಡ ಕೆಲಸ ಕೊಡಿಸುವ ಆಸೆ ತೋರಿಸಿ, ಬೇರೆ ಬೇರೆ ದೇಶಗಳಿಗೆ ಅಕ್ರಮವಾಗಿ ಸಾಗಾಣಿಕೆ ಮಾಡ್ತಿರೋದು ತನಿಖೆಯಲ್ಲಿ ಬಹಿರಂಗವಾಗಿದೆ.

    ಸದ್ಯ ಬೆಂಗಳೂರಿನ ರಾಮಮೂರ್ತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಬಾಂಗ್ಲಾದೇಶ ದೇಶದ ಯುವತಿಯ ಗ್ಯಾಂಗ್ ರೇಪ್ ಪ್ರಕರಣವನ್ನು ತನಿಖೆ ನಡೆಸುತ್ತಿರುವ ಎನ್‍ಐಎ ಪೊಲೀಸರು, ಮಾನವ ಕಳ್ಳಸಾಗಣೆ ಮಾಡುತ್ತಿದ್ದ ಕೆಲ ಮಧ್ಯವರ್ತಿಗಳನ್ನು ಬಂಧಿಸಿದ್ದು, ಕಿಂಗ್ ಪಿನ್ ಗಳಿಗಳಿಗಾಗಿ ಹುಡುಕಾಟ ಮುಂದುವರಿಸಿದ್ದಾರೆ.

  • ಸಾಲ ಮಾಡಿ ರಿಕ್ಷಾ ಖರೀದಿ, ಸರ್ಕಾರದಿಂದ ಬ್ಯಾನ್- ಕಣ್ಣೀರಿಡುತ್ತಿದ್ದವನ ಕೈ ಹಿಡಿದ ಆಪತ್ಬಾಂಧವ

    ಸಾಲ ಮಾಡಿ ರಿಕ್ಷಾ ಖರೀದಿ, ಸರ್ಕಾರದಿಂದ ಬ್ಯಾನ್- ಕಣ್ಣೀರಿಡುತ್ತಿದ್ದವನ ಕೈ ಹಿಡಿದ ಆಪತ್ಬಾಂಧವ

    – ಸಾಲ ಮಾಡಿ 15 ದಿನಗಳ ಹಿಂದೆ ರಿಕ್ಷಾ ಖರೀದಿಸಿದ್ದ ಚಾಲಕ

    ಢಾಕಾ: ಬಾಂಗ್ಲಾದೇಶದ ಢಾಕಾದಲ್ಲಿ ಮನಕಲುಕುವ ಘಟನೆಯೊಂದು ನಡೆದಿದ್ದು, ಸರ್ಕಾರ ರಿಕ್ಷಾ ಸೀಜ್ ಮಾಡಿದೆ. ಇನ್ನೊಂದೆಡೆ ರಿಕ್ಷಾ ಕಳೆದುಕೊಂಡು ಚಾಲಕರು ಕಣ್ಣೀರಿಡುತ್ತಿದ್ದಾರೆ. ಇಂತಹ ಮೂವರಿಗೆ ಅಪರಿಚಿತರೊಬ್ಬರು ಮೂರು ಹೊಸ ಆಟೋ ಕೊಡಿಸುವ ಮೂಲಕ ಅವರ ಜೀವನಕ್ಕೆ ಆಸರೆಯಾಗಿದ್ದಾರೆ.

    ರಿಕ್ಷಾ ನಡೆಸುತ್ತಿದ್ದ ಫಜ್ಲೂರ್ ರಹಮಾನ್ ತಮ್ಮ ರಿಕ್ಷಾ ಕಳೆದುಕೊಂಡು ನಡು ರಸ್ತೆಯಲ್ಲಿ ಕಣ್ಣೀರಿಟ್ಟಿದ್ದಾರೆ. ಢಾಕಾ ಸೌತ್ ಸಿಟಿ ಕಾರ್ಪೋರೇಷನ್(ಡಿಎಸ್‍ಸಿಸಿ) ಅಧಿಕಾರಿಗಳು ರಹಮಾನ್ ಆಟೋವನ್ನು ಸೀಜ್ ಮಾಡಿದ್ದಾರೆ. ಢಾಕಾದಲ್ಲಿ ಆಟೋ ರಿಕ್ಷಾಗಳು ಹೆಚ್ಚುತ್ತಿರುವ ಕಾರಣ ಟ್ರಾಫಿಕ್ ಜಾಮ್ ಉಂಟಾಗುತ್ತಿದೆ. ಹೀಗಾಗಿ ಆಟೋಗಳ ನಿಷೇಧಕ್ಕೆ ಅಲ್ಲಿನ ಸರ್ಕಾರ ಮುಂದಾಗಿದೆ. ಹೀಗಾಗಿ ಅಧಿಕಾರಿಗಳು ರಿಕ್ಷಾ ತೆರವು ಕಾರ್ಯಾಚರಣೆ ನಡೆಸುತ್ತಿದ್ದಾರೆ.

    ಢಾಕಾದಲ್ಲಿ ಬ್ಯಾಟರಿ ಚಾಲಿತ, ಮೊಟರೈಸಡ್ ಸೇರಿದಂತೆ ಎಲ್ಲ ಬಗೆಯ ಆಟೋ ರಿಕ್ಷಾ ಹಾಗೂ ವ್ಯಾನ್‍ಗಳನ್ನು ನಿಷೇಧಿಸಲಾಗಿದೆ. ಅಧಿಕಾರಿಗಳು ತೆರವು ಕಾರ್ಯಾಚರಣೆ ನಡೆಸುತ್ತಿದ್ದಾರೆ. ರಹಮಾನ್ ಅವರ ರಿಕ್ಷಾವನ್ನು ವಶಪಡಿಸಿಕೊಂಡ ಬಳಿಕ ನಡುರಸ್ತೆಯಲ್ಲೇ ಗೋಗರೆದಿದ್ದಾರೆ. ಸ್ಥಳೀಯರು ಇದನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ತಕ್ಷಣವೇ ವಿಡಿಯೋ ವೈರಲ್ ಆಗಿದ್ದು, ಸುಮಾರು 1 ಲಕ್ಷಕ್ಕೂ ಅಧಿಕ ಜನ ಈ ಕುರಿತು ಪ್ರತಿಕ್ರಿಯಿಸಿದ್ದಾರೆ.

    ಕೊರೊನಾ ವೈರಸ್ ಹಿನ್ನೆಲೆ ರಹಮಾನ್ ಅವರು ಕೆಲಸ ಕಳೆದುಕೊಂಡಿದ್ದರು. ನಂತರ 69 ಸಾವಿರ ರೂ. ಸಾಲ ಪಡೆದು ಜೀವನೋಪಾಯಕ್ಕಾಗಿ ಕೇವಲ 15 ದಿನಗಳ ಹಿಂದೆ ಬ್ಯಾಟರಿ ಚಾಲಿತ ರಿಕ್ಷಾ ಖರೀದಿಸಿದ್ದರು. ಆದರೆ ಖರೀದಿಸಿದ ಕೆಲವೇ ದಿನಗಳಲ್ಲಿ ಸರ್ಕಾರ ಇವರ ರಿಕ್ಷಾವನ್ನು ಸೀಜ್ ಮಾಡಿದೆ. ಹೀಗಾಗಿ ಗೋಳಾಡಿದ್ದಾರೆ.

    ভাইরাল রিক্সা চালকের সাথে আরও দুইজন রিক্সা চালক ছিলেন যাদের বুক ফাটা কান্না ক্যামেরার ফ্রেমে ধরা পড়েনি আর তাই তাদের…

    Posted by Ahsan Bhuiyan on Thursday, October 8, 2020

    ಇವರ ಕಷ್ಟದ ಕುರಿತು ಸಾಮಾಜಿಕ ಜಾಲತಾಣದಲ್ಲಿ ಇವರ ಅರಿತ ಅಪರಿಚಿತ ವ್ಯಕ್ತಿ ಅಹ್ಸಾನ್ ಭುಯಾನ್, ರಹಮಾನ್‍ಗಾಗಿ ಹೊಸ ಆಟೋ ಬುಕ್ ಮಾಡಿದ್ದಾರೆ. ನಾವು ಬಯಸಿದರೆ ಬದಲಾಯಿಸಬಹುದು. ಹೊಸ ರಿಕ್ಷಾ ಆರ್ಡರ್ ಮಾಡಿ ಮನಗೆ ತೆರಳಿದ್ದೇನೆ. ನಂತರದ ದಿನವೇ ಡೆಲಿವರಿ ಆಗಿದೆ ಎಂದು ಭುಯಾನ್ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

    ಆನ್‍ಲೈನ್ ದಿನಸಿ ಮಾರಾಟ ಮಳಿಗೆ ಶ್ವಾಪ್ನೋ ಸಹ ರಹಮಾನ್‍ಗೆ ಸಹಾಯ ಮಾಡಲು ಮುಂದಾಗಿದ್ದು, ಇನ್ನೆರಡು ಆಟೋ ಖರೀದಿಸಿದೆ. ಹೀಗಾಗಿ ಹೋಮ್ ಡೆಲಿವರಿ ಸೇವೆಯನ್ನು ಸಹ ಆರಂಭಿಸಲು ರಹಮಾನ್ ಯೋಚಿಸಿದ್ದಾರೆ. ಅಲ್ಲದೆ ರಹಮಾನ್ ಜೊತೆಗಿದ್ದ ಇನ್ನಿಬ್ಬರು ಚಾಲಕರಿಗೂ ಭುಯಾನ್ ಅವರು ಆಟೋ ಬುಕ್ ಮಾಡಿದ್ದಾರೆ. ಈ ಮೂಲಕ ಕಷ್ಟದಲ್ಲಿರುವ ಚಾಲಕರ ನೆರವಿಗೆ ನಿಂತಿದ್ದಾರೆ.

  • ನುಸುಳುಕೋರರು ಪಾಕಿಸ್ತಾನ, ಬಾಂಗ್ಲಾಕ್ಕೆ ತೊಲಗಿ- ಕಲ್ಲಡ್ಕ ಪ್ರಭಾಕರ ಭಟ್

    ನುಸುಳುಕೋರರು ಪಾಕಿಸ್ತಾನ, ಬಾಂಗ್ಲಾಕ್ಕೆ ತೊಲಗಿ- ಕಲ್ಲಡ್ಕ ಪ್ರಭಾಕರ ಭಟ್

    – ಭಾರತೀಯರಿಗೆ ಸಿಎಎಯಿಂದ ಸಮಸ್ಯೆಯಿಲ್ಲ

    ಉಡುಪಿ: ಪೌರತ್ವ ಕಾನೂನು ಬಂದಿರುವುದು ಪಾಕಿಸ್ತಾನದ ನುಸುಳುಕೋರರ ವಿರುದ್ಧ. ಭಾರತೀಯ ಮುಸಲ್ಮಾನರಿಗೆ ಪೌರತ್ವ ಕಾನೂನಿನಿಂದ ಸಮಸ್ಯೆಯಾಗಲ್ಲ ಎಂದು ಆರ್.ಎಸ್.ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಹೇಳಿದ್ದಾರೆ.

    ಉಡುಪಿಯ ಕಟಪಾಡಿಯಲ್ಲಿ ಪೌರತ್ವ ಕಾಯ್ದೆ ಕುರಿತು ಸಮರ್ಥನಾ ಸಮಾವೇಶದಲ್ಲಿ ಸಾವಿರಾರು ಜನರನ್ನು ಉದ್ದೇಶಿಸಿ ಮಾತಾಡಿದ ಅವರು, ನುಸುಳುಕೋರರಾಗಿ ಬಾಂಗ್ಲಾ, ಅಫ್ಘಾನ್, ಪಾಕ್‍ನಿಂದ ಕೆಲ ಪಾಪಿ ಮುಸಲ್ಮಾನರು ಬಂದಿದ್ದಾರೆ. ದೇಶದ ಅರಾಜಕತೆಗೆ ಅವರೇ ಕಾರಣವಾಗಿದ್ದಾರೆ. ನಾವು ಈಗಾಗಲೇ ದೇಶದ್ರೋಹಿಗಳಿಗೆ ಎಲ್ಲಾ ದಾಖಲೆ ಕೊಟ್ಟಿದ್ದೇವೆ. ಅದನ್ನು ಹಿಂಪಡೆದು ನಮ್ಮಲ್ಲಿ ಹುಟ್ಟಿ, ಸಂಕಷ್ಟದಲ್ಲಿದ್ದವರಿಗೆ ನಾವು ಪೌರತ್ವ ಕೊಡುತ್ತೇವೆ ಹೊರತು, ಇಲ್ಲಿನವರ ಪೌರತ್ವ ಹಿಂಪಡೆಯುವುದಿಲ್ಲ ಎಂದು ಸ್ಪಷ್ಟಪಡಿಸಿದರು.

    ಸಿಎಎ, ಎನ್.ಆರ್.ಸಿ, ಎನ್.ಪಿ.ಆರ್ ನಿಂದ ಭಾರತೀಯ ಮುಸಲ್ಮಾನರಿಗೆ ಯಾವುದೇ ಸಮಸ್ಯೆ ಇಲ್ಲ. ದಾಖಲೆ ಇಲ್ಲದವರು ಪಾಕ್‍ನಲ್ಲಿ ಜಮೀನು ಖರೀದಿಸಿ ಎಂದು ಸಲಹೆ ನೀಡಿದರು. ಎಲ್ಲರ ಜೊತೆ ಎಲ್ಲರಂತೆ ಬದುಕುವುದಾದರೆ ಬದುಕಿ. ಆಗದಿದ್ದರೆ ನಿಮ್ಮ ನೆಲ ನಿಮಗಿದೆ. ದಾಖಲೆ ಕೇಳುವಾಗ ಹೆಸರು ಹೇಳುವುದಿಲ್ವಾ? ಅಪ್ಪ ಯಾರೆಂದು ನಿಮಗೆ ಗೊತ್ತಿಲ್ವಾ? ಭಾರತ ಅಂದ್ರೆ ಛತ್ರ ಅಲ್ಲ. ಭಾರತ ಪವಿತ್ರ ನೆಲ ಇಲ್ಲಿ ನೆಲೆಸಲು ಪೌರತ್ವ ಬೇಕು ಎಂದು ಗುಡುಗಿದರು.

    ಮಂಗಳೂರು ಗೋಲಿಬಾರ್ ಪ್ರಕರಣದಲ್ಲಿ ಇಬ್ಬರು ಭಯೋತ್ಪಾದಕರು ಪ್ರಾಣ ಕಳೆದುಕೊಂಡರು. ಕಮಿಷನರ್ ಡಾ. ಹರ್ಷಗೆ ಅಭಿನಂದನೆ. ಪರಿಸ್ಥಿತಿ ಕೈಮೀರಿತ್ತು. ಗೋಲಿಬಾರ್ ಮಾಡದಿದ್ದರೆ ದೇಶದಲ್ಲಿ ಮುಸ್ಲಿಂ ಅಟ್ಟಹಾಸ ನಡೆಯುತ್ತಿತ್ತು. ಪೌರತ್ವ ಕಾಯ್ದೆಗೆ ಎಲ್ಲರೂ ಒಳಗಾಗಬೇಕು. ದಾಖಲೆ ಇಲ್ಲದವರು ಹೊರಗೆ ನಡೆಯಿರಿ. ಪಾಕಿಸ್ತಾನ, ಬಾಂಗ್ಲಾ ಮತ್ತಿತರ ದೇಶದಲ್ಲಿ ಐದು ಸೈಟ್ ತೆಗೆದುಕೊಳ್ಳಿ ಎಂದರು.

    ಭಾರತ ಮೃತ್ಯುಂಜಯ ದೇಶ. ಮೋದಿ, ಅಮಿತ್ ಶಾ ರಂತಹ ಜನ ಹುಟ್ಟಿ ಬರುತ್ತಲೇ ಇರುತ್ತಾರೆ. ಭಾರತ ಸೂಪರ್ ಪವರ್ ಆಗೋದು ಬೇಡ. ಭಾರತ ವಿಶ್ವ ಗುರು ಆದರೆ ಸಾಕು. ನಮ್ಮ ಸಂಸ್ಕೃತಿ, ವಿಚಾರ, ಆಚರಣೆಗಳ ಪಾಲನೆಯಿಂದ ತನ್ನಿಂದ ತಾನೇ ಭಾರತ ವಿಶ್ವಗುರು ಆಗುತ್ತದೆ ಎಂದರು. ಹಿಂದೂ, ಮುಸಲ್ಮಾನ, ಕ್ರೈಸ್ತ, ಜೈನ, ಪಾರಸಿ, ಸಿಖ್ ಹೀಗೆ ದೇಶದ ಪ್ರತಿಯೊಬ್ಬ ನೋಂದಣಿ ಮಾಡಲೇಬೇಕು. ದೇಶದ ನುಸುಳುಕೋರರು ಭಾರತದೊಳಗೆ ಉಳಿಯಲು ಸಾಧ್ಯವಿಲ್ಲ ಎಂದು ಕಲ್ಲಡ್ಕ ಪ್ರಭಾಕರ ಭಟ್ ಹೇಳಿದರು.

  • ಚೊಚ್ಚಲ ಏಷ್ಯಾ ಕಪ್ ಗೆದ್ದ ಬಾಂಗ್ಲಾ ಗೆಲುವಿನ ಹಿಂದಿದ್ದಾರೆ ಟೀಂ ಇಂಡಿಯಾ ಮಾಜಿ ಆಟಗಾರ್ತಿ!

    ಚೊಚ್ಚಲ ಏಷ್ಯಾ ಕಪ್ ಗೆದ್ದ ಬಾಂಗ್ಲಾ ಗೆಲುವಿನ ಹಿಂದಿದ್ದಾರೆ ಟೀಂ ಇಂಡಿಯಾ ಮಾಜಿ ಆಟಗಾರ್ತಿ!

    ನವದೆಹಲಿ: ಚೊಚ್ಚಲ ಏಷ್ಯಾ ಕಪ್ ಗೆಲ್ಲುವ ಮೂಲಕ ಇತಿಹಾಸ ಸೃಷ್ಟಿಸಿರುವ ಬಾಂಗ್ಲಾದೇಶ ಮಹಿಳಾ ಕ್ರಿಕೆಟ್ ತಂಡದ ಹಿಂದೆ ಟೀಂ ಇಂಡಿಯಾ ಮಾಜಿ ಆಟಗಾರ್ತಿ ಹಾಗೂ ಬಾಂಗ್ಲಾ ಕೋಚ್ ಆಗಿ ಕಾರ್ಯನಿರ್ವಹಿಸುತ್ತಿರುವ ಅಂಜು ಜೈನ್ ಪಾತ್ರ ಮಹತ್ವದಾಗಿದೆ.

    ಆರು ಬಾರಿ ಏಷ್ಯಾಕಪ್ ಪ್ರಶಸ್ತಿ ಗೆದ್ದು ಬೀಗಿದ್ದ ಟೀಂ ಇಂಡಿಯಾ, ಏಷ್ಯಾ ಕಪ್ ಟೂರ್ನಿಯಲ್ಲಿ ಒಂದೇ ವಾರದಲ್ಲಿ ಎರಡು ಬಾರಿ ಬಾಂಗ್ಲಾ ವಿರುದ್ಧ ಸೋಲುಂಡಿತ್ತು. ಬಾಂಗ್ಲಾ ಮಹಿಳಾ ತಂಡದ ಈ ಸಾಧನೆಯ ಹಿಂದೆ ಕೋಚ್ ಅಂಜು ಜೈನ್ ರ ಶ್ರಮ ಕಾಣಸಿಗುತ್ತದೆ.

    ಅಂದಹಾಗೇ ಅಂಜು ಜೈನ್ ಟೀಂ ಇಂಡಿಯಾದ ಮಾಜಿ ಆಟಗಾರ್ತಿಯಾಗಿದ್ದು, 8 ಟೆಸ್ಟ್ ಮತ್ತು 65 ಏಕದಿನ ಪಂದ್ಯಗಳನ್ನು ಆಡಿದ್ದಾರೆ. ಅಲ್ಲದೇ 2012 ರ ಟಿ20 ವಿಶ್ವಕಪ್ ಹಾಗೂ 2013 ರ ವಿಶ್ವಕಪ್ ಪಂದ್ಯಗಳಲ್ಲಿ ತಂಡವನ್ನು ಪ್ರತಿನಿಧಿಸಿದ್ದರು. ಏಕದಿನದಲ್ಲಿ 1,729 ರನ್ ಹಾಗೂ ಟೆಸ್ಟ್ ನಲ್ಲಿ 441 ರನ್ ಗಳಿಸಿದ್ದಾರೆ. ಬಾಂಗ್ಲಾ ಮಹಿಳಾ ತಂಡದ ಕೋಚ್ ಆಗಿದ್ದ ಇಂಗ್ಲೆಂಡ್ ಆಲೌಂಡರ್ ಡೇವಿಡ್ ಕ್ಯಾಪೆಲ್ ರ ಸ್ಥಾನಕ್ಕೆ ಮೇ 21 ರಂದು ಅಂಜು ಜೈನ್ ಆಯ್ಕೆ ಆಗಿದ್ದರು.

    ಈ ಕುರಿತು ಖಾಸಗಿ ಮಾಧ್ಯಮವೊಂದರ ಸಂದರ್ಶನದಲ್ಲಿ ಮಾತನಾಡಿದ ಅಂಜು ಜೈನ್, ತಾವು ಕೋಚ್ ಆಗಿ ಆಯ್ಕೆ ಆದ ಸಂದರ್ಭದಲ್ಲಿ ತಂಡದಲ್ಲಿ ಸರಿಯಾದ ವ್ಯವಸ್ಥೆ ಇರಲಿಲ್ಲ. ಆಟಗಾರರಲ್ಲಿ ಮೊದಲು ನೈತಿಕ ಧೈರ್ಯ ತುಂಬುವುದೇ ನನ್ನ ಕಾರ್ಯವಾಗಿತ್ತು. ಟೂರ್ನಿಯ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾವನ್ನು 112 ರನ್ ಗಳಿಗೆ ಕಟ್ಟಿ ಹಾಕಿದ್ದು ಮಹತ್ವದ ಕ್ಷಣವಾಗಿತ್ತು ಎಂದು ಹೇಳಿದ್ದಾರೆ.

    ಏಷ್ಯಾ ಕಪ್ ಗೆದ್ದಿರುವುದು ತಂಡಕ್ಕೆ ಬಹು ದೊಡ್ಡ ಸಾಧನೆಯಾದರೆ, ತಮಗೆ ವೈಯಕ್ತಿಕವಾಗಿ ಸ್ಮರಣೀಯ ಘಟನೆ. ಇದಕ್ಕೂ ಮುನ್ನ ಆಫ್ರಿಕಾ ಪ್ರವಾಸದಿಂದ ಹಿಂದಿರುಗಿದ ವೇಳೆ ತಂಡದ ಕೆಲ ವೈಫಲ್ಯಗಳ ಕುರಿತು ಹೆಚ್ಚಿನ ಗಮನ ನೀಡುವುದು ಬೃಹತ್ ಸವಾಲಾಗಿತ್ತು. ಆದರೆ ಆಟಗಾರ್ತಿಯರು ತಮ್ಮ ಸಾಮಥ್ರ್ಯವನ್ನು ಗಣನೀವಾಗಿ ಉತ್ತಮ ಪಡಿಸಿಕೊಂಡಿದ್ದರು ಎಂದು ಹೇಳಿದರು.

  • ದಿನೇಶ್ ಕಾರ್ತಿಕ್ ಕೊನೆಯ ಸಿಕ್ಸರ್ ನೋಡಿಲ್ಲ ಯಾಕೆ ಅನ್ನೋದನ್ನು ಹೇಳಿದ್ರು ರೋಹಿತ್

    ದಿನೇಶ್ ಕಾರ್ತಿಕ್ ಕೊನೆಯ ಸಿಕ್ಸರ್ ನೋಡಿಲ್ಲ ಯಾಕೆ ಅನ್ನೋದನ್ನು ಹೇಳಿದ್ರು ರೋಹಿತ್

    ಕೊಲಂಬೊ: ವಿಕೆಟ್ ಕೀಪರ್ ದಿನೇಶ್ ಕಾರ್ತಿಕ್ ಬಾಂಗ್ಲಾ ವಿರುದ್ಧ ಫೈನಲ್ ಪಂದ್ಯದ ಕೊನೆಯ ಎಸೆತದಲ್ಲಿ ಸಿಡಿಸಿದ ಸಿಕ್ಸ್ ಹೊಡೆತವನ್ನು ನಾನು ನೋಡಿಲ್ಲ ಎಂದು ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಹೇಳಿದ್ದಾರೆ.

    ಪಂದ್ಯದ ಬಳಿಕ ಮಾತನಾಡಿದ ರೋಹಿತ್ ಶರ್ಮಾ, ಕಾರ್ತಿಕ್ ಕೊನೆಯ ಸಿಕ್ಸರ್ ನೋಡಲು ಸಾಧ್ಯವಾಗಲಿಲ್ಲ. ಪಂದ್ಯ ಡ್ರಾ ಆಗುತ್ತದೆ ಎಂದು ತಿಳಿದು ಸೂಪರ್ ಓವರ್ ಗೆ ಸಿದ್ಧತೆ ನಡೆಸಲು ಡ್ರೆಸ್ಸಿಂಗ್ ರೂಮ್ ಗೆ ತೆರಳಿ ಪ್ಯಾಡ್ ಧರಿಸಿದ್ದಾಗಿ ತಿಳಿಸಿದರು. ಅಲ್ಲದೇ ದಿನೇಶ್ ಅವರ ಪ್ರದರ್ಶನ ನೋಡಲು ಸಂತಸ ಉಂಟಾಯಿತು. ಈ ಮೂಲಕ ದಿನೇಶ್ ತಮ್ಮ ಸಾಮರ್ಥ್ಯವನ್ನು ತೊರಿಸಿದ್ದಾರೆ ಎಂದು ಹೊಗಳಿದರು.

    ಇದೇ ವೇಳೆ ದಿನೇಶ್ ಭಿನ್ನ ಹಾಗೂ ಭಾರೀ ಹೊಡೆತಗಳನ್ನು ಸಿಡಿಸುವ ಕೌಶಲ್ಯ ಹೊಂದಿದ್ದಾರೆ. ಅದ್ದರಿಂದಲೇ ಅವರಿಗೆ ಹಿಂಬಡ್ತಿ ನೀಡಲಾಯಿತು. ಈ ನಿರ್ಧಾರದ ಕುರಿತು ನನಗೆ ಹೆಮ್ಮೆಯಾಗುತ್ತಿದೆ ಎಂದು ರೋಹಿತ್ ತಿಳಿಸಿದರು.

    ನಿದಾಸ್ ತ್ರಿಕೋನ ಟಿ20 ಸರಣಿಯ ಬಾಂಗ್ಲಾ ವಿರುದ್ಧದ ಫೈನಲ್ ಪಂದ್ಯದಲ್ಲಿ ಅರ್ಧ ಶತಕ ಸಿಡಿಸಿದ ರೋಹಿತ್ ಶರ್ಮಾ ಅನುಭವಿ ಆಟಗಾರ ದಿನೇಶ್ ಕಾರ್ತಿಕ್ ರನ್ನು ಏಳನೇ ಕ್ರಮಾಂಕದಲ್ಲಿ ಕಳುಹಿಸಿದ್ದರು. ಈ ವೇಳೆ ಸಂಕಷ್ಟದಲ್ಲಿದ್ದ ತಂಡಕ್ಕೆ ತಮ್ಮ ಭರ್ಜರಿ ಬ್ಯಾಟಿಂಗ್ ನಿಂದ ದಿನೇಶ್ ತಿರುವು ನೀಡಿದರು. ಮಿಂಚಿನ ಆಟವಾಡಿದ ದಿನೇಶ್ ಕಾರ್ತಿಕ್ ಕೊನೆಯ ಎಸೆತವನ್ನು ಸಿಕ್ಸರ್ ಗೆ ಅಟ್ಟಿ ಪಂದ್ಯವನ್ನು ಗೆಲ್ಲಿಸಿ ಕೊಟ್ಟಿದ್ದರು. ಇದನ್ನೂ ಓದಿ: ಸಿಕ್ಸರ್ ಸಿಡಿಸಲು ಅಭ್ಯಾಸ ನಡೆಸುತ್ತಿದ್ದೆ: ಪಂದ್ಯಶ್ರೇಷ್ಠ ದಿನೇಶ್ ಕಾರ್ತಿಕ್

    ಭಾರತದ ಪರವಾಗಿ ರೋಹಿತ್ ಶರ್ಮಾ 56, ಪಾಂಡೆ 28 ರನ್ ಗಳಿಸಿದರು. ಬಾಂಗ್ಲಾ ಪರವಾಗಿ ಶಬ್ಬಿರ್ ರೆಹಮಾನ್ 77, ಶಕೀಬ್ ಅಲ್ ಹಸನ್ 7, ಮುಷ್ಫಿಕುರ್ ರಹೀಮ್ 09, ಮಹಮ್ಮದುಲ್ಲಾ 21, ತಮೀಮ್ ಇಕ್ಬಾಲ್ 15 ರನ್ ಗಳಿಸಿದ್ದರು.

  • ಯುವರಾಜ್ ದಾಖಲೆ ಮುರಿದ ರೋ`ಹಿಟ್’

    ಯುವರಾಜ್ ದಾಖಲೆ ಮುರಿದ ರೋ`ಹಿಟ್’

    ಕೊಲಂಬೊ: ಲಂಕಾ ಪ್ರವಾಸದಲ್ಲಿ ಟೀಂ ಇಂಡಿಯಾವನ್ನು ಮುನ್ನಡೆಸುತ್ತಿರುವ ರೋಹಿತ್ ಶರ್ಮಾ ಟಿ20 ಮಾದರಿಯಲ್ಲಿ ಭಾರತದ ಪರ ಅತೀ ಹೆಚ್ಚು ಸಿಕ್ಸರ್ ಸಿಡಿಸಿದ ಯುವರಾಜ್ ಸಿಂಗ್ ದಾಖಲೆಯನ್ನು ಮುರಿದಿದ್ದಾರೆ.

    ಶ್ರೀಲಂಕಾದಲ್ಲಿ ನಡೆಯುತ್ತಿರುವ ನಿದಾಸ್ ತ್ರಿಕೋನ ಟಿ20 ಸರಣಿಯ ಬಾಂಗ್ಲಾ ವಿರುದ್ಧದ ಪಂದ್ಯದಲ್ಲಿ ರೋಹಿತ್ ಶರ್ಮಾ 5 ಸಿಕ್ಸರ್ ಸಿಡಿಸುವ ಮೂಲಕ ವೃತ್ತಿ ಜೀವನದಲ್ಲಿ 75 ಸಿಕ್ಸರ್ ಗಳಿಸಿ ದಾಖಲೆ ಬರೆದಿದ್ದಾರೆ. ಈ ಹಿಂದೆ ಯುವರಾಜ್ ಸಿಂಗ್ 74 ಸಿಕ್ಸರ್ ಸಿಡಿಸಿದ್ದರು. ಸರಣಿಯ ಆರಂಭಿಕ ಪಂದ್ಯಗಳಲ್ಲಿ ಕಳಪೆ ಫಾರ್ಮ್ ಸಮಸ್ಯೆ ಎದುರಿಸುತ್ತಿದ್ದ ರೋಹಿತ್ ಈ ಪಂದ್ಯದಲ್ಲಿ ಕೇವಲ 61 ಎಸೆತಗಳಲ್ಲಿ 5 ಬೌಂಡರಿ ಹಾಗೂ 5 ಸಿಕ್ಸರ್ ನೆರವಿನಿಂದ 89 ರನ್ ಗಳಿಸಿದರು.

    ಟಿ20 ಮಾದರಿಯಲ್ಲಿ ವೆಸ್ಟ್ ಇಂಡಿಸ್ ನ ಸ್ಫೋಟಕ ಆಟಗಾರರ ಕ್ರಿಸ್ ಗೇಲ್ ಹಾಗೂ ನ್ಯೂಜಿಲೆಂಡ್ ನ ಮಾರ್ಟಿನ್ ಗುಪ್ಟಿಲ್ 103 ಸಿಕ್ಸರ್ ಸಿಡಿಸಿ ಜಂಟಿಯಾಗಿ ಮೊದಲ ಸ್ಥಾನ ಪಡೆದಿದ್ದಾರೆ. ನಂತರದಲ್ಲಿ ನ್ಯೂಜಿಲೆಂಡ್ ನ ಬ್ರೆಂಡನ್ ಮೆಕ್ಲಮ್ (91), ಆಸ್ಟ್ರೇಲಿಯಾದ ಶೇನ್ ವ್ಯಾಟ್ಸನ್ (83) ಸಿಕ್ಸರ್ ಮೂಲಕ ಕ್ರಮವಾಗಿ ನಾಲ್ಕು ಮತ್ತು ಐದನೇ ಸ್ಥಾನ ಪಡೆದಿದ್ದಾರೆ. ನ್ಯೂಜಿಲೆಂಡ್ ನ ಕಾಲಿನ್ ಮನ್ರೋ 78 ಸಿಕ್ಸ್, ಇಂಗ್ಲೆಂಡಿನ ಇಯಾನ್ ಮಾರ್ಗನ್ 76 ಸಿಕ್ಸ್ ಸಿಡಿಸಿದ್ದಾರೆ.

    ಈ ಪಟ್ಟಿಯಲ್ಲಿ ರೋಹಿತ್ ಶರ್ಮಾ 8ನೇ ಸ್ಥಾನ ಪಡೆದಿದ್ದಾರೆ. ಬಾಂಗ್ಲಾ ವಿರುದ್ಧ ಪಂದ್ಯದಲ್ಲಿ ಕೇವಲ 42 ಎಸೆತಗಳಲ್ಲಿ ತಮ್ಮ 13  ನೇ ಅರ್ಧ ಶತಕ ಸಿಡಿಸಿದರು.

    ಪಂದ್ಯದ ನಂತರ ಮಾತನಾಡಿದ ರೋಹಿತ್, ಸುರೇಶ್ ರೈನಾ (47) ಹಾಗೂ ವಾಷಿಂಗ್ಟಂನ್ ಸುಂದರ್ (3/22) ಅವರ ಪ್ರದರ್ಶನವನ್ನು ಪ್ರಶಂಸಿದರು. ಸರಣಿಯ ಪೈನಲ್ ಪಂದ್ಯದಲ್ಲಿ ಗೆಲ್ಲುವ ವಿಶ್ವ ವ್ಯಕ್ತಪಡಿಸಿದರು.