Tag: ಬಾಕ್ಸ್ ಆಫೀಸ್

  • Kantara: Chapter 1ಗೆ ಭರ್ಜರಿ ರೆಸ್ಪಾನ್ಸ್ – ಮೊದಲ ದಿನವೇ 55 ಕೋಟಿ ಗಳಿಕೆ

    Kantara: Chapter 1ಗೆ ಭರ್ಜರಿ ರೆಸ್ಪಾನ್ಸ್ – ಮೊದಲ ದಿನವೇ 55 ಕೋಟಿ ಗಳಿಕೆ

    – ಭಾರತದಲ್ಲಿ 45 ಕೋಟಿ, ವಿದೇಶಗಳಲ್ಲಿ 10 ಕೋಟಿ ಕಲೆಕ್ಷನ್

    ರಿಷಬ್ ಶೆಟ್ಟಿ (Rishab Shetty) ನಟನೆ, ನಿರ್ದೇಶನದ `ಕಾಂತಾರ ಚಾಪ್ಟರ್ 1′ (Kantara: Chapter 1) ಸಿನಿಮಾ ಅ.2ರಂದು ವಿಶ್ವಾದ್ಯಂತ ತೆರೆಕಂಡಿದೆ. ಮೊದಲ ದಿನವೇ ಭರ್ಜರಿ ರೆಸ್ಪಾನ್ಸ್ ಬಂದಿದ್ದು, 55 ಕೋಟಿ ರೂ.ಗೂ ಹೆಚ್ಚಿನ ಗಳಿಗೆ ಮಾಡಿದೆ. ಈ ಮೂಲಕ ದಾಖಲೆ ನಿರ್ಮಾಣವಾಗಿದೆ.

    ಭಾರತದಲ್ಲಿ ಒಟ್ಟು 6,500 ಸ್ಟೀನ್‌ಗಳಲ್ಲಿ ಸುಮಾರು 12,511ಕ್ಕೂ ಹೆಚ್ಚು ಶೋಗಳು ಪ್ರದರ್ಶನಗೊಂಡಿದ್ದು, ಎಲ್ಲಾ ಭಾಷೆಗಳೂ ಸೇರಿ ಭಾರತದಲ್ಲಿ ಅಂದಾಜು 45 ಕೋಟಿ ರೂ.ಗಳಷ್ಟು ಕಲೆಕ್ಷನ್ ಆಗಿದೆ. ರಿಲೀಸ್‌ಗೂ ಒಂದು ದಿನ ಮೊದಲೇ ಅಂದರೆ ಅ.1ರಂದು ದೇಶದ ವಿವಿಧೆಡೆ ಪ್ರೀಮಿಯರ್ ಶೋಗಳು ನಡೆದಿದ್ದು, ಈ ಶೋಗಳೆಲ್ಲ ಹೌಸ್‌ಫುಲ್ ಪ್ರದರ್ಶನ ಕಂಡಿದ್ದವು. ಇದರಿಂದ ಸಿನಿಮಾಗೆ ಉತ್ತಮ ಪ್ರಚಾರ ಸಿಕ್ಕಿದ್ದು, ಬಿಡುಗಡೆ ದಿನ ಉತ್ತಮ ಪ್ರದರ್ಶನ ಕಂಡಿದೆ. ಇನ್ನೂ ಅ.3 ರಾತ್ರಿ ಹೊತ್ತಿಗೆ ಸಿನಿಮಾ 100 ಕೋಟಿ ರೂ. ಕಲೆಕ್ಷನ್ ಆಗುವ ನಿರೀಕ್ಷೆಯಿದೆ.ಇದನ್ನೂ ಓದಿ: ಕಾಂತಾರ ದೃಶ್ಯ ವೈಭೋಗ ಕಣ್ತುಂಬಿಕೊಂಡ ಪ್ರೇಕ್ಷಕರು ಹೇಳಿದ್ದೇನು?

    ಇನ್ನೂ ಭಾರತದ ಹೊರತಾಗಿ ಅಮೆರಿಕ ಒಂದರಲ್ಲೇ ಅಂದಾಜು 4.20 ಕೋಟಿ ರೂ. ಗಳಿಕೆಯಾಗಿದೆ. ಒಟ್ಟು 30 ದೇಶಗಳಲ್ಲಿ ಚಿತ್ರ ಬಿಡುಗಡೆಯಾಗಿದ್ದು, 10 ಕೋಟಿ ರೂ.ವರೆಗೂ ಗಳಿಸಿದೆ ಎಂದು ಅಂದಾಜಿಸಲಾಗಿದೆ. ಇನ್ನೂ ಈಗಾಗಲೇ 10 ಲಕ್ಷಕ್ಕೂ ಅಧಿಕ ಟಿಕೆಟ್‌ಗಳು ಮಾರಾಟವಾಗಿದ್ದು, ಅ.2ರಂದು ಪ್ರತಿ ಗಂಟೆಗೆ 60,000 ಟಿಕೆಟ್ ಸೋಲ್ಡ್ ಆಗಿದೆ ಎಂದು ತಿಳಿದುಬಂದಿದೆ.

    ದೆಹಲಿಯಲ್ಲಿ ಒಂದು ಟಿಕೆಟ್ ದರ 2,400 ರೂ.ಗೆ ಮಾರಾಟವಾಗಿದ್ದು, ಬೆಂಗಳೂರಿನಲ್ಲಿ ಗರಿಷ್ಠ 1,200 ರೂ. ಇತ್ತು. ಆಂಧ್ರ ಮತ್ತು ತೆಲಂಗಾಣದಲ್ಲಿ ಬಾಯ್ಕಾಟ್ ಬೆದರಿಕೆ ಇದ್ದರೂ ಕೂಡ ಸಿನಿಮಾ ಪ್ರದರ್ಶನ ಮೇಲೆ ಪರಿಣಾಮ ಬೀರಿಲ್ಲ, ಚೆನ್ನೈ, ಕೊಚ್ಚಿ, ಮುಂಬೈ ಸೇರಿ ಮಹಾನಗರಗಳಲ್ಲಿ ಸಿನಿಮಾ ಪ್ರದರ್ಶನಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇನ್ನೂ ಉತ್ತರ ಭಾರತ ಒಂದರಲ್ಲೇ ಈ ಚಿತ್ರ ಅಂದಾಜು 8 ರಿಂದ 10 ಕೋಟಿ ರೂ. ಗಳಿಕೆ ಮಾಡಿದೆ ಎನ್ನಲಾಗಿದೆ. ಉಳಿದಂತೆ ಕರ್ನಾಟಕದಲ್ಲಿ ಅಂದಾಜು 20 ಕೋಟಿ ರೂ., ಆಂಧ್ರದಲ್ಲಿ ಅಂದಾಜು 5.3 ಕೋಟಿ ರೂ., ತಮಿಳುನಾಡಿನಲ್ಲಿ 3 ಕೋಟಿ ರೂ., ಮಲಯಾಳಂನಲ್ಲಿ ಸುಮಾರು 65 ಲಕ್ಷ ರೂ.ಗಳಷ್ಟು ಗಳಿಕೆ ಮಾಡಿದೆ ಎನ್ನಲಾಗಿದೆ.ಇದನ್ನೂ ಓದಿ: ಕಾಂತಾರ ಚಾಪ್ಟರ್‌ 1ಗೆ ಪ್ರೇಕ್ಷಕರ ಮೆಚ್ಚುಗೆ ಕಂಡು ರಿಷಬ್‌ ಶೆಟ್ಟಿ ಪತ್ನಿ ಭಾವುಕ – ಅಪ್ಪಿಕೊಂಡು ಸಮಾಧಾನಪಡಿಸಿದ ರಿಷಬ್‌

     

  • ಮೂರು ದಿನಕ್ಕೆ 50 ಕೋಟಿ ರೂ. ಗಳಿಕೆ ಮಾಡಿದ ಆಡುಜೀವಿತಂ

    ಮೂರು ದಿನಕ್ಕೆ 50 ಕೋಟಿ ರೂ. ಗಳಿಕೆ ಮಾಡಿದ ಆಡುಜೀವಿತಂ

    ಗುರುವಾರವಷ್ಟೇ ಪೃಥ್ವಿರಾಜ್ ಸುಕುಮಾರನ್ ನಟನೆಯ ಆಡುಜೀವಿತಂ ಸಿನಿಮಾ ವಿಶ್ವದಾದ್ಯಂತ ಬಿಡುಗಡೆ ಆಗಿತ್ತು. ಸಿನಿಮಾ ರಿಲೀಸ್ ಆಗಿ ಮೂರೇ ಮೂರು ದಿನಕ್ಕೆ 50 ಕೋಟಿ ರೂಪಾಯಿಗೂ ಅಧಿಕ ಹಣ ಬಾಕ್ಸ್ ಆಫೀಸಿಗೆ ಹರಿದು ಬಂದಿದೆ. ಜೊತೆಗೆ ದಿನದಿಂದ ದಿನಕ್ಕೆ ಪ್ರೇಕ್ಷಕರ ಸಂಖ್ಯೆಯೂ ಹೆಚ್ಚಾಗುತ್ತಿದೆ.  ಈ ಸಿನಿಮಾ ನೋಡಿದ ಪ್ರೇಕ್ಷಕರು ಸೇರಿದಂತೆ ಹಲವು ನಟ-ನಟಿಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದೀಗ ಸೌತ್‌ನ ಲೆಜೆಂಡರಿ ಡೈರೆಕ್ಟರ್ ಮಣಿರತ್ನಂ (Maniratnam) ಅವರು ‘ಆಡುಜೀವಿತಂ’ (Aadujeevitham) ಸಿನಿಮಾ ನೋಡಿ ಹಾಡಿ ಹೊಗಳಿದ್ದಾರೆ.

    ಮಲಯಾಳಂ ಸ್ಟಾರ್ ನಟ ಪೃಥ್ವಿರಾಜ್ ಸುಕುಮಾರನ್ (Prithviraj Sukumaran) ಅವರು ಆ ಪಾತ್ರವೇ ತಾವಾಗಿ ನಟಿಸುವ ಪ್ರತಿಭಾನ್ವಿತ ಕಲಾವಿದ. ಅದಕ್ಕೆ ತಾಜಾ ಉದಾಹರಣೆಯಾಗಿ ಆಡುಜೀವಿತಂ ಸಿನಿಮಾದಲ್ಲಿನ ಅವರ ನಟನೆಯೇ ಸಾಕ್ಷಿ. ಇದೀಗ ಅವರ ನಟನೆ, ಚಿತ್ರದ ಬಗ್ಗೆ ಮಣಿರತ್ನಂ ಕೂಡ ಪ್ರತಿಕ್ರಿಯೆ ನೀಡಿದ್ದಾರೆ. ನಿಮ್ಮ ಸಿನಿಮಾಗೆ ಅಭಿನಂದನೆಗಳು, ನೀವು ಇದನ್ನು ಹೇಗೆ ನಿಭಾಯಿಸಿದ್ದೀರಿ ನನಗೆ ತಿಳಿದಿಲ್ಲ. ನಿಮ್ಮೆಲ್ಲರ ಶ್ರಮ ತೆರೆಯ ಮೇಲೆ ಕಾಣುತ್ತಿದೆ. ಸಿನಿಮಾವನ್ನು ಸುಂದರವಾಗಿ ಚಿತ್ರೀಸಲಾಗಿದೆ ಎಂದು ಮಣಿರತ್ನಂ ಸಿನಿಮಾವನ್ನು ಬಣ್ಣಿಸಿದ್ದಾರೆ.  ಬಳಿಕ ಮರುಭೂಮಿಯಲ್ಲಿ ಎದುರಿಸುವ ವಿವಿಧ ಕಷ್ಟಗಳನ್ನು ತೋರಿಸಿದ್ದೀರಿ. ನಿಮ್ಮ ಮತ್ತು ಸುನೀಲ್ ಕೆಲಸ ಅದ್ಭುತವಾಗಿದೆ ಎಂದು ಮಣಿರತ್ನಂ ತಂಡಕ್ಕೆ ಭೇಷ್ ಎಂದಿದ್ದಾರೆ. ಪೃಥ್ವಿರಾಜ್ ಸುಕುಮಾರನ್ ನಟನೆ ನೋಡಿ ಕೊಂಡಾಡಿದ್ದಾರೆ. ಇದು ನಿಜವಾಗಿಯೂ ಸಂಭವಿಸಿದೆ ಎಂದು ಯೋಚಿಸಲು ಭಯಾನಕವಾಗಿದೆ ಎಂದಿದ್ದಾರೆ. ಈ ಚಿತ್ರವು ಸೆಂಟಿಮೆಂಟಲ್ ಆಗಿ ಮೂಡಿ ಬಂದಿದೆ. ಚಿತ್ರದ ಫಿನಿಶಿಂಗ್ ತುಂಬಾ ಇಷ್ಟವಾಯಿತು. ಚಿತ್ರತಂಡಕ್ಕೆ ಶುಭವಾಗಲಿ ಎಂದು ಮಣಿರತ್ನಂ ತಿಳಿಸಿದ್ದಾರೆ.

    ಮಣಿರತ್ನಂ ಅವರ ಬೆಂಬಲಕ್ಕೆ ಆಡುಜೀವಿತಂ ನಿರ್ದೇಶಕ ಬ್ಲೆಸ್ಸಿ ಕೂಡ ಪ್ರತಿಕ್ರಿಯಿಸಿ, ಧನ್ಯವಾದಗಳು ಸರ್ ಎಂದು ಸಂತಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸೋಷಿಯಲ್‌ ಮೀಡಿಯಾದಲ್ಲಿ ನಿರ್ದೇಶಕ ಬ್ಲೆಸ್ಸಿ ಶೇರ್‌ ಮಾಡಿದ್ದಾರೆ. ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಬ್ಲೆಸ್ಸಿ ನಿರ್ದೇಶನದ ಈ ‘ಆಡು ಜೀವಿತಂ’ ಚಿತ್ರದ ಕಥೆ ಇಮಿಗ್ರಟ್ಸ್ ಸುತ್ತವೇ ಸಾಗುತ್ತದೆ. ತನ್ನ ಹೊಟ್ಟೆ ಪಾಡಿಗಾಗಿ ಕೆಲಸ ಅರಸಿ ಸೌದಿ ಅರೇಬಿಯಾಗೆ ವಲಸೆ ಹೋಗುವ ನಸೀಬ್ ಮೊಹಮ್ಮದ್ ಎನ್ನುವ ಕೇರಳದ ವ್ಯಕ್ತಿ ಅಲ್ಲಿ ಅನುಭವಿಸುವ ಕಷ್ಟ, ಎದುರಿಸುವ ಸಮಸ್ಯೆ ಹೈಲೆಟ್. ಇನ್ನು ಆತನ ಪಾಸ್ಪೋರ್ಟ್ ಕಸಿದು ಆತನಿಗೆ ಕೊಡುವ ಹಿಂಸೆಗಳು ಆ ಬಿಸಿಲಿನ ಮರುಭೂಮಿಯಲ್ಲಿ ಆತ ಪಡುವ ಯಾತನೆ ಕುರಿತು ಸಾಗುವ ಕಥೆ ಇಲ್ಲಿದೆ.

    ನಿರ್ದೇಶಕ ಬ್ಲೆಸ್ಸಿ ಅವರ ಹದಿನೈದು ವರ್ಷದ ಕನಸಿನ ಕಥೆ ಇದು. ಅವರ ಕಲ್ಪನೆಯ ಪಾತ್ರದಲ್ಲಿ ವಲಸಿಗ ವ್ಯಕ್ತಿಯಾಗಿ ಹೊಸ ಲುಕ್ ಮೂಲಕ ಕಾಣಿಸಿಕೊಂಡಿರುವ ಪೃಥ್ವಿರಾಜ್ ಸುಕುಮಾರನ್, ಹಲವಾರು ವರ್ಷಗಳಿಂದ ಈ ಚಿತ್ರಕ್ಕಾಗಿ ದುಡಿದಿದ್ದಾರೆ. ಇಡೀ ಚಿತ್ರತಂಡ ಹಗಲು ರಾತ್ರಿ ಎನ್ನದೆ ಚಿತ್ರದ ಔಟ್ಪುಟ್ ಗಾಗಿ ದುಡಿದಿದೆ. ಪೃಥ್ವಿರಾಜ್ ನಿರೀಕ್ಷೆಯ ಚಿತ್ರ ಇದಾಗಿದ್ದು, ಬ್ಲೆಸ್ಸಿ ನಿರ್ದೇಶನದ `ಆಡುಜೀವಿತಂ’ 2008ರಲ್ಲಿ ಬೆನ್ಯಾಮಿನ್ ಬರೆದ ಅದೇ ಹೆಸರಿನ ಮಲಯಾಳಂ ಕಾದಂಬರಿ ಸಿನಿಮಾ ಇದು. ನಜೀಬ್ ಎಂಬ ವಲಸಿಗ ಕಾರ್ಮಿಕನ ಕಥೆಯನ್ನು ಮತ್ತು ಸೌದಿ ಅರೇಬಿಯಾದ ಮರುಭೂಮಿಯಲ್ಲಿ ಅವನು ಅನುಭವಿಸುವ ದುಃಸ್ಥಿತಿ ಮತ್ತು ಅಸಹಾಯಕತೆಯ ಕಥೆ ಚಿತ್ರದ ಸಾರಾಂಶ ಎನ್ನುತ್ತಾರೆ. ಪೃಥ್ವಿರಾಜ್ ನಜೀಬ್ ಪಾತ್ರ ನಿರ್ವಹಿಸಿದ್ದಾರೆ.

     

    ಚಿತ್ರದ ನಜೀಬ್ ಪಾತ್ರಕ್ಕಾಗಿ ಪೃಥ್ವಿರಾಜ್ ಸಾಕಷ್ಟು ದೇಹವನ್ನು ದಂಡಿಸಿದ್ದಾರೆ. ಅವರು ಸಿನುಮಾಗಾಗಿ ಸುಮಾರು 30 ಕೆಜಿ ತೂಕ ಇಳಿಸಿಕೊಂಡಿದ್ದಾರೆ ಕಳೆದ ಚಿತ್ರ ಐದು ವರ್ಷಗಳಿಂದ ತಯಾರಾಗುತ್ತಿದೆ ಎಂಬುದು ವಿಶೇಷ. ಚಿತ್ರದ ತಾಂತ್ರಿಕ ವಿಭಾಗದಲ್ಲಿ ಎ.ಆರ್.ರೆಹಮಾನ್ ಅವರ ಸಂಗೀತ, ಸುನಿಲ್ ಕೆ.ಎಸ್ ಅವರ ಕ್ಯಾಮೆರಾ ಕೈಚಳಕ, ರೆಸುಲ್ ಪೂಕುಟ್ಟಿ ಅವರ ಸೌಂಡ್ ಡಿಸೈನ್ ಮತ್ತು ಶ್ರೀಕರ್ ಪ್ರಸಾದ್ ಅವರ ಸಂಕಲನ ಕೆಲಸವಿದೆ.

  • ‘ಆಡುಜೀವಿತಂ’ ಬಾಕ್ಸ್ ಆಫೀಸಿನಲ್ಲೂ ಅಚ್ಚರಿಯ ಗಳಿಕೆ

    ‘ಆಡುಜೀವಿತಂ’ ಬಾಕ್ಸ್ ಆಫೀಸಿನಲ್ಲೂ ಅಚ್ಚರಿಯ ಗಳಿಕೆ

    ಗುರುವಾರವಷ್ಟೇ ಪೃಥ್ವಿರಾಜ್ ಸುಕುಮಾರನ್ ನಟನೆಯ ಆಡುಜೀವಿತಂ ಸಿನಿಮಾ ವಿಶ್ವದಾದ್ಯಂತ ಬಿಡುಗಡೆ ಆಗಿದೆ. ಪ್ರೇಕ್ಷಕರು ಸಿನಿಮಾವನ್ನು ಮೆಚ್ಚಿಕೊಂಡಿದ್ದಲ್ಲದೇ, ಬಾಕ್ಸ್ ಆಫೀಸಿಗೂ (Box Office)  ಹಣ ಹರಿದು ಬಂದಿದೆ. ಚಿತ್ರದ ಮೊದಲ ದಿನದ ಗಳಿಕೆಯೇ ಬರೋಬ್ಬರಿ 16.07 ಕೋಟಿ ಎಂದು ಅಂದಾಜಿಸಲಾಗಿದೆ. ಎರಡನೇ ವಾರದ ಗಳಿಕೆಯನ್ನು ನಿರೀಕ್ಷೆ ಮಾಡಲಾಗುತ್ತಿದೆ. ಪೃಥ್ವಿರಾಜ್ ಸುಕುಮಾರನ್, ಅಮಲಾ ಪೌಲ್ (Amala Paul) ನಟನೆಯ ‘ಆಡುಜೀವಿತಂ’ ಸಿನಿಮಾ ಮಾ.28ರಂದು ರಿಲೀಸ್ ಆಗಿದೆ. ಈ ಸಿನಿಮಾ ನೋಡಿದ ಪ್ರೇಕ್ಷಕರು ಸೇರಿದಂತೆ ಹಲವು ನಟ-ನಟಿಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದೀಗ ಸೌತ್‌ನ ಲೆಜೆಂಡರಿ ಡೈರೆಕ್ಟರ್ ಮಣಿರತ್ನಂ (Maniratnam) ಅವರು ‘ಆಡುಜೀವಿತಂ’ (Aadujeevitham) ಸಿನಿಮಾ ನೋಡಿ ಹಾಡಿ ಹೊಗಳಿದ್ದಾರೆ.

    ಮಲಯಾಳಂ ಸ್ಟಾರ್ ನಟ ಪೃಥ್ವಿರಾಜ್ ಸುಕುಮಾರನ್ (Prithviraj Sukumaran) ಅವರು ಆ ಪಾತ್ರವೇ ತಾವಾಗಿ ನಟಿಸುವ ಪ್ರತಿಭಾನ್ವಿತ ಕಲಾವಿದ. ಅದಕ್ಕೆ ತಾಜಾ ಉದಾಹರಣೆಯಾಗಿ ಆಡುಜೀವಿತಂ ಸಿನಿಮಾದಲ್ಲಿನ ಅವರ ನಟನೆಯೇ ಸಾಕ್ಷಿ. ಇದೀಗ ಅವರ ನಟನೆ, ಚಿತ್ರದ ಬಗ್ಗೆ ಮಣಿರತ್ನಂ ಕೂಡ ಪ್ರತಿಕ್ರಿಯೆ ನೀಡಿದ್ದಾರೆ. ನಿಮ್ಮ ಸಿನಿಮಾಗೆ ಅಭಿನಂದನೆಗಳು, ನೀವು ಇದನ್ನು ಹೇಗೆ ನಿಭಾಯಿಸಿದ್ದೀರಿ ನನಗೆ ತಿಳಿದಿಲ್ಲ. ನಿಮ್ಮೆಲ್ಲರ ಶ್ರಮ ತೆರೆಯ ಮೇಲೆ ಕಾಣುತ್ತಿದೆ. ಸಿನಿಮಾವನ್ನು ಸುಂದರವಾಗಿ ಚಿತ್ರೀಸಲಾಗಿದೆ ಎಂದು ಮಣಿರತ್ನಂ ಸಿನಿಮಾವನ್ನು ಬಣ್ಣಿಸಿದ್ದಾರೆ.  ಬಳಿಕ ಮರುಭೂಮಿಯಲ್ಲಿ ಎದುರಿಸುವ ವಿವಿಧ ಕಷ್ಟಗಳನ್ನು ತೋರಿಸಿದ್ದೀರಿ. ನಿಮ್ಮ ಮತ್ತು ಸುನೀಲ್ ಕೆಲಸ ಅದ್ಭುತವಾಗಿದೆ ಎಂದು ಮಣಿರತ್ನಂ ತಂಡಕ್ಕೆ ಭೇಷ್ ಎಂದಿದ್ದಾರೆ. ಪೃಥ್ವಿರಾಜ್ ಸುಕುಮಾರನ್ ನಟನೆ ನೋಡಿ ಕೊಂಡಾಡಿದ್ದಾರೆ. ಇದು ನಿಜವಾಗಿಯೂ ಸಂಭವಿಸಿದೆ ಎಂದು ಯೋಚಿಸಲು ಭಯಾನಕವಾಗಿದೆ ಎಂದಿದ್ದಾರೆ. ಈ ಚಿತ್ರವು ಸೆಂಟಿಮೆಂಟಲ್ ಆಗಿ ಮೂಡಿ ಬಂದಿದೆ. ಚಿತ್ರದ ಫಿನಿಶಿಂಗ್ ತುಂಬಾ ಇಷ್ಟವಾಯಿತು. ಚಿತ್ರತಂಡಕ್ಕೆ ಶುಭವಾಗಲಿ ಎಂದು ಮಣಿರತ್ನಂ ತಿಳಿಸಿದ್ದಾರೆ.

    ಮಣಿರತ್ನಂ ಅವರ ಬೆಂಬಲಕ್ಕೆ ಆಡುಜೀವಿತಂ ನಿರ್ದೇಶಕ ಬ್ಲೆಸ್ಸಿ ಕೂಡ ಪ್ರತಿಕ್ರಿಯಿಸಿ, ಧನ್ಯವಾದಗಳು ಸರ್ ಎಂದು ಸಂತಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸೋಷಿಯಲ್‌ ಮೀಡಿಯಾದಲ್ಲಿ ನಿರ್ದೇಶಕ ಬ್ಲೆಸ್ಸಿ ಶೇರ್‌ ಮಾಡಿದ್ದಾರೆ. ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಬ್ಲೆಸ್ಸಿ ನಿರ್ದೇಶನದ ಈ ‘ಆಡು ಜೀವಿತಂ’ ಚಿತ್ರದ ಕಥೆ ಇಮಿಗ್ರಟ್ಸ್ ಸುತ್ತವೇ ಸಾಗುತ್ತದೆ. ತನ್ನ ಹೊಟ್ಟೆ ಪಾಡಿಗಾಗಿ ಕೆಲಸ ಅರಸಿ ಸೌದಿ ಅರೇಬಿಯಾಗೆ ವಲಸೆ ಹೋಗುವ ನಸೀಬ್ ಮೊಹಮ್ಮದ್ ಎನ್ನುವ ಕೇರಳದ ವ್ಯಕ್ತಿ ಅಲ್ಲಿ ಅನುಭವಿಸುವ ಕಷ್ಟ, ಎದುರಿಸುವ ಸಮಸ್ಯೆ ಹೈಲೆಟ್. ಇನ್ನು ಆತನ ಪಾಸ್ಪೋರ್ಟ್ ಕಸಿದು ಆತನಿಗೆ ಕೊಡುವ ಹಿಂಸೆಗಳು ಆ ಬಿಸಿಲಿನ ಮರುಭೂಮಿಯಲ್ಲಿ ಆತ ಪಡುವ ಯಾತನೆ ಕುರಿತು ಸಾಗುವ ಕಥೆ ಇಲ್ಲಿದೆ.

    ನಿರ್ದೇಶಕ ಬ್ಲೆಸ್ಸಿ ಅವರ ಹದಿನೈದು ವರ್ಷದ ಕನಸಿನ ಕಥೆ ಇದು. ಅವರ ಕಲ್ಪನೆಯ ಪಾತ್ರದಲ್ಲಿ ವಲಸಿಗ ವ್ಯಕ್ತಿಯಾಗಿ ಹೊಸ ಲುಕ್ ಮೂಲಕ ಕಾಣಿಸಿಕೊಂಡಿರುವ ಪೃಥ್ವಿರಾಜ್ ಸುಕುಮಾರನ್, ಹಲವಾರು ವರ್ಷಗಳಿಂದ ಈ ಚಿತ್ರಕ್ಕಾಗಿ ದುಡಿದಿದ್ದಾರೆ. ಇಡೀ ಚಿತ್ರತಂಡ ಹಗಲು ರಾತ್ರಿ ಎನ್ನದೆ ಚಿತ್ರದ ಔಟ್ಪುಟ್ ಗಾಗಿ ದುಡಿದಿದೆ. ಪೃಥ್ವಿರಾಜ್ ನಿರೀಕ್ಷೆಯ ಚಿತ್ರ ಇದಾಗಿದ್ದು, ಬ್ಲೆಸ್ಸಿ ನಿರ್ದೇಶನದ `ಆಡುಜೀವಿತಂ’ 2008ರಲ್ಲಿ ಬೆನ್ಯಾಮಿನ್ ಬರೆದ ಅದೇ ಹೆಸರಿನ ಮಲಯಾಳಂ ಕಾದಂಬರಿ ಸಿನಿಮಾ ಇದು. ನಜೀಬ್ ಎಂಬ ವಲಸಿಗ ಕಾರ್ಮಿಕನ ಕಥೆಯನ್ನು ಮತ್ತು ಸೌದಿ ಅರೇಬಿಯಾದ ಮರುಭೂಮಿಯಲ್ಲಿ ಅವನು ಅನುಭವಿಸುವ ದುಃಸ್ಥಿತಿ ಮತ್ತು ಅಸಹಾಯಕತೆಯ ಕಥೆ ಚಿತ್ರದ ಸಾರಾಂಶ ಎನ್ನುತ್ತಾರೆ. ಪೃಥ್ವಿರಾಜ್ ನಜೀಬ್ ಪಾತ್ರ ನಿರ್ವಹಿಸಿದ್ದಾರೆ.

     

    ಚಿತ್ರದ ನಜೀಬ್ ಪಾತ್ರಕ್ಕಾಗಿ ಪೃಥ್ವಿರಾಜ್ ಸಾಕಷ್ಟು ದೇಹವನ್ನು ದಂಡಿಸಿದ್ದಾರೆ. ಅವರು ಸಿನುಮಾಗಾಗಿ ಸುಮಾರು 30 ಕೆಜಿ ತೂಕ ಇಳಿಸಿಕೊಂಡಿದ್ದಾರೆ ಕಳೆದ ಚಿತ್ರ ಐದು ವರ್ಷಗಳಿಂದ ತಯಾರಾಗುತ್ತಿದೆ ಎಂಬುದು ವಿಶೇಷ. ಚಿತ್ರದ ತಾಂತ್ರಿಕ ವಿಭಾಗದಲ್ಲಿ ಎ.ಆರ್.ರೆಹಮಾನ್ ಅವರ ಸಂಗೀತ, ಸುನಿಲ್ ಕೆ.ಎಸ್ ಅವರ ಕ್ಯಾಮೆರಾ ಕೈಚಳಕ, ರೆಸುಲ್ ಪೂಕುಟ್ಟಿ ಅವರ ಸೌಂಡ್ ಡಿಸೈನ್ ಮತ್ತು ಶ್ರೀಕರ್ ಪ್ರಸಾದ್ ಅವರ ಸಂಕಲನ ಕೆಲಸವಿದೆ.

  • ‘ಸಾವರ್ಕರ್’ ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆ: ಬಾಕ್ಸ್ ಆಫೀಸಿಗೆ ಬಂದಿದ್ದೆಷ್ಟು?

    ‘ಸಾವರ್ಕರ್’ ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆ: ಬಾಕ್ಸ್ ಆಫೀಸಿಗೆ ಬಂದಿದ್ದೆಷ್ಟು?

    ನಾನಾ ಕಾರಣಗಳಿಂದ ಅತೀ ನಿರೀಕ್ಷೆ ಮೂಡಿಸಿದ್ದ ‘ಸ್ವಾತಂತ್ರ ವೀರ್ ಸಾವರ್ಕರ್’ (Savarkar) ಸಿನಿಮಾ ನಿನ್ನೆಯಷ್ಟೇ ಬಿಡುಗಡೆ ಆಗಿದೆ. ಆದರೆ, ಅಂದುಕೊಂಡಷ್ಟು ಚಿತ್ರಕ್ಕೆ ಪ್ರತಿಕ್ರಿಯೆ ಸಿಕ್ಕಿಲ್ಲ ಎನ್ನುವುದು ಬಾಕ್ಸ್ ಆಫೀಸಿಗೆ (Box Office) ಹರಿದು ಬಂದ ಹಣವೇ ಹೇಳುತ್ತಿದೆ. ಮೊದಲ ದಿನದ ಕಲೆಕ್ಷನ್ 1.15 ಲಕ್ಷ ರೂಪಾಯಿ ಬಂದಿದೆ ಎಂದು ಅಂದಾಜಿಸಲಾಗಿದೆ.

    ವಿವಾದಿತ ಚಿತ್ರಗಳು ಬಂದಾಗ ಜನರು ಅದನ್ನು ಮುಗಿಬಿದ್ದು ನೋಡಿ ಬಾಕ್ಸ್ ಆಫೀಸ್ ಕೂಡ ತುಂಬಿಸಿದ್ದಾರೆ. ಅದರಲ್ಲೂ ದಿ ಕಾಶ್ಮೀರ ಫೈಲ್ಸ್, ದಿ ಕೇರಳ ಸ್ಟೋರಿ ಚಿತ್ರಗಳನ್ನು ಸಖತ್ತಾಗಿಯೇ ಪ್ರೇಕ್ಷಕರಿಗೆ ಪ್ರಮೋಟ್ ಮಾಡಿದರು. ಆದರೆ, ವೀರ ಸಾವರ್ಕರ್ ಚಿತ್ರವನ್ನು ಅಷ್ಟಾಗಿ ಪ್ರೇಕ್ಷಕರು ಅಪ್ಪಿಕೊಂಡಿಲ್ಲ.

     

    ರಣ್ ದೀಪ್ ಹೂಡ (Randeep Hooda) ನಿರ್ದೇಶನದ ಹಾಗೂ ನಟನೆಯಲ್ಲಿ ಈ ಸಿನಿಮಾ ಮೂಡಿ ಬಂದಿದ್ದು, ನಿರ್ದೇಶಕರ ಕೆಲಸವನ್ನು ಪ್ರೇಕ್ಷಕ ಮೆಚ್ಚಿಕೊಂಡಿದ್ದಾನೆ.  ರಣ್ ದೀಪ್ ಈ ಸಿನಿಮಾದಲ್ಲಿ ಸಾವರ್ಕರ್ ಪಾತ್ರ ಮಾಡಿದ್ದರೆ, ಅವರ ಪತ್ನಿಯಾಗಿ ಅಂಕಿತಾ ಲೋಖಂಡೆ ನಟಿಸಿದ್ದಾರೆ. ಕಲಾ ನಿರ್ದೇಶಕರು ಆ ಕಾಲವನ್ನು ಚಿತ್ರದಲ್ಲಿ ಸೊಗಸಾಗಿ ಕಟ್ಟಿಕೊಟ್ಟಿದ್ದಾರೆ. ಆದರೂ, ಪ್ರೇಕ್ಷಕ ಮಾತ್ರ ತುಂಬಿದ ಪ್ರದರ್ಶನಕ್ಕೆ ಸಾಕ್ಷಿಯಾಗಿಲ್ಲ.

  • ವಾರಂತ್ಯಕ್ಕೆ ಭರ್ಜರಿ ಕಲೆಕ್ಷನ್ ಮಾಡಿದ ‘ಆರ್ಟಿಕಲ್ 370’ ಸಿನಿಮಾ

    ವಾರಂತ್ಯಕ್ಕೆ ಭರ್ಜರಿ ಕಲೆಕ್ಷನ್ ಮಾಡಿದ ‘ಆರ್ಟಿಕಲ್ 370’ ಸಿನಿಮಾ

    ಯಾಮಿನಿ ಗೌತಮ್ ಮುಖ್ಯಭೂಮಿಕೆಯ ಆರ್ಟಿಕಲ್ 370 ಭರ್ಜರಿ ಕಲೆಕ್ಷನ್ ಮಾಡಿದೆ. ವಾರಂತ್ಯಕ್ಕೆ ಈ ಸಿನಿಮಾ 34.71 ಕೋಟಿ ರೂಪಾಯಿ ಗಳಿಕೆ ಮಾಡಿದೆ ಎಂದು ಸ್ವತಃ ಚಿತ್ರತಂಡವೇ ಘೋಷಣೆ ಮಾಡಿದೆ. ಅಲ್ಲಿಗೆ ದಿನದಿಂದ ದಿನಕ್ಕೆ ಬಾಕ್ಸ್ ಆಫೀಸ್ (Box Office) ಗಳಿಕೆ ಏರುತ್ತಲೇ ಇದೆ.

    ಒಂದು ಕಡೆ ಜಗತ್ತಿನಾದ್ಯಂತ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದರೆ ಮತ್ತೊಂದು ಕಡೆ  ಲ್ಫ್ ರಾಷ್ಟ್ರಗಳಲ್ಲಿ (Gulf nation) ಮತ್ತೊಂದು ಭಾರತದ ಸಿನಿಮಾವನ್ನು ಬ್ಯಾನ್ (Ban) ಮಾಡಲಾಗಿದೆ. ಈ ಹಿಂದೆ ದೀಪಿಕಾ ಪಡುಕೋಣೆ ಮತ್ತು ಹೃತಿಕ್ ರೋಷನ್ ನಟನೆಯ ಫೈಟರ್ ಸಿನಿಮಾವನ್ನೂ ಬ್ಯಾನ್ ಮಾಡಲಾಗಿತ್ತು. ಈಗ ಆರ್ಟಿಕಲ್ 370 ಸಿನಿಮಾವನ್ನು ಬಿಡುಗಡೆ ಮಾಡದಂತೆ ಗಲ್ಫ್ ರಾಷ್ಟ್ರಗಳು ಮುಂದಾಗಿವೆ. ಹಾಗಾಗಿ ಗಲ್ಫ್ ರಾಷ್ಟ್ರಗಳಲ್ಲಿ ಈ ಸಿನಿಮಾ ರಿಲೀಸ್ ಆಗಿಲ್ಲ.

    ಇದೇ ಶುಕ್ರವಾರ ಆರ್ಟಿಕಲ್ 370 (Article 370) ಸಿನಿಮಾ ವಿಶ್ವದಾದ್ಯಂತ ಬಿಡುಗಡೆ ಆಗಿದ್ದು, ಪ್ರೇಕ್ಷಕರಿಂದ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಕೇವಲ ನೋಡುಗರು ಮಾತ್ರವಲ್ಲ, ವಿಮರ್ಶಕರೂ ಕೂಡ ಸಿನಿಮಾದ ಬಗ್ಗೆ ಹೊಗಳಿ ಬರೆದಿದ್ದಾರೆ. ಸೋಷಿಯಲ್ ಮೀಡಿಯಾದಲ್ಲೂ ಚಿತ್ರವನ್ನು ನಾನಾ ರೀತಿಯಲ್ಲಿ ಬಣ್ಣಿಸಲಾಗುತ್ತಿದೆ. ಬಾಕ್ಸ್ ಆಫೀಸ್ ಲೆಕ್ಕಾಚಾರ ಕೂಡ ಸಕಾರಾತ್ಮಕವಾಗಿಯೇ ಕೇಳಿ ಬರುತ್ತಿದೆ.

    ಮೊನ್ನೆಯಷ್ಟೇ ಪ್ರಧಾನಿ ನರೇಂದ್ರ ಮೋದಿ ಅವರು ಆರ್ಟಿಕಲ್ 370 ಚಿತ್ರದ ಬಗ್ಗೆ ತಮ್ಮ ಭಾಷಣದಲ್ಲಿ ಉಲ್ಲೇಖ ಮಾಡಿದ್ದರು. ಕಾಶ್ಮೀರದಲ್ಲಿ ನಡೆದ ಕಾರ್ಯಮಕ್ರದಲ್ಲಿ ಮೋದಿ, ‘ಆರ್ಟಿಕಲ್ 370 ಸಿನಿಮಾ ಜಮ್ಮು ಕಾಶ್ಮೀರದ ವಿಶೇಷ ಅಧಿಕಾರವನ್ನು ಯಾಕೆ ತೆಗೆಯಲಾಯಿತು ಎನ್ನುವುದನ್ನು ಸ್ಪಷ್ಟವಾಗಿ ತಿಳಿಸುತ್ತದೆ ಎಂದು ಹೇಳಿದ್ದರು.

     

    ಮೋದಿಯ ಈ ಭಾಷಣವನ್ನು ಕೇಳಿರುವ ಆರ್ಟಿಕಲ್ 370 ಸಿನಿಮಾದ ನಾಯಕಿ ಯಾಮಿನಿ ಗೌತಮ್ (Yamini Gautam), ಮೋದಿ ಅವರಿಗೆ ಧನ್ಯವಾದಗಳನ್ನು ತಿಳಿಸಿದ್ದರು. ಈ ನೈಜ ಕಥೆಯನ್ನು ನಿಮಗೆ ಮತ್ತು ಎಲ್ಲರಿಗೂ ಒಪ್ಪುವಂತೆ ಸಿನಿಮಾ ಮಾಡಿದ್ದೇವೆ ಎನ್ನುವ ಭರವಸೆಯನ್ನು ನಾನು ಮತ್ತು ನನ್ನ ತಂಡ ನೀಡಲಿದೆ ಎಂದು ಯಾಮಿನಿ ಪ್ರತಿಕ್ರಿಯೆ ನೀಡಿದ್ದರು.

  • ರಜನಿ ನಟನೆಯ ‘ಲಾಲ್‍ ಸಲಾಂ’ಗೆ ಮಿಶ್ರ ಪ್ರತಿಕ್ರಿಯೆ

    ರಜನಿ ನಟನೆಯ ‘ಲಾಲ್‍ ಸಲಾಂ’ಗೆ ಮಿಶ್ರ ಪ್ರತಿಕ್ರಿಯೆ

    ಜನಿಕಾಂತ್ ನಟನೆಯ ಲಾಲ್ ಸಲಾಂ ಸಿನಿಮಾ ನಿನ್ನೆಯಷ್ಟೇ ರಿಲೀಸ್ ಆಗಿದೆ. ಸಿನಿಮಾದಲ್ಲಿ ರಜನಿ ಸಖತ್ ಸ್ಟೈಲೀಶ್ ಆಗಿ ಕಂಡಿದ್ದಾರೆ. ಖಡಕ್ ಡೈಲಾಗ್ ಹೊಡೆದಿದ್ದಾರೆ. ರಜನಿ ಅಭಿಮಾನಿಗಳಿಗೆ ಏನೆಲ್ಲ ಬೇಕೊ ಎಲ್ಲವನ್ನೂ ಕೊಟ್ಟಿದ್ದಾರೆ. ಆದರೆ, ಅಂದುಕೊಂಡಷ್ಟು ಚಿತ್ರಕ್ಕೆ ಮೊದಲ ದಿನ ಪ್ರತಿಕ್ರಿಯೆ ನೀಡಿಲ್ಲ.  ಮೊದಲ ದಿನ ಗಳಿಕೆ (Box Office) ನಾಲ್ಕುವರೆ ಕೋಟಿ ಎಂದು ಅಂದಾಜಿಸಲಾಗಿದೆ.

    ಜೈಲರ್’ ಅಭೂತಪೂರ್ವ ಯಶಸ್ಸಿನ ಬಳಿಕ ಸೂಪರ್ ಸ್ಟಾರ್ ರಜನಿಕಾಂತ್ (Rajinikanth) ನಟಿಸಿರುವ ಬಹುನಿರೀಕ್ಷಿತ ಸಿನಿಮಾ ‘ಲಾಲ್ ಸಲಾಂ’ (Lal Salaam) ರಿಲೀಸ್ ಆಗುತ್ತಿರುವುದಕ್ಕೆ ಸಹಜವಾಗಿಯೇ ನಿರೀಕ್ಷೆ ಹೆಚ್ಚಿತ್ತು. ಈ ಚಿತ್ರವನ್ನು ರಜನಿ ಪುತ್ರಿ ಐಶ್ವರ್ಯ ರಜನಿಕಾಂತ್ (Aishwarya Rajinikanth) ನಿರ್ದೇಶಿಸಿದ್ದಾರೆ. ಸ್ಪೋರ್ಟ್ ಡ್ರಾಮಾ ಕಥಾಹಂದರ ಹೊಂದಿರುವ ಸಿನಿಮಾದಲ್ಲಿ ವಿಷ್ಣು ವಿಶಾಲ್, ವಿಕ್ರಾಂತ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದು, ವಿಘ್ನೇಶ್, ಲಿವಿಂಗ್ಸ್ಟನ್, ಸೆಂಥಿಲ್, ಜೀವಿತಾ, ಕೆ.ಎಸ್. ರವಿಕುಮಾರ್ ಮತ್ತು ತಂಬಿ ರಾಮಯ್ಯ ಸೇರಿದಂತೆ ಹಲವರು ತಾರಾಬಳಗದಲ್ಲಿದ್ದಾರೆ.

    ರಜನಿಕಾಂತ್ ಅವರು ಮೊಯ್ದೀನ್ ಭಾಯ್ ಎಂಬ ಪವರ್‌ಫುಲ್ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಕ್ರಿಕೆಟ್ ದಂತಕಥೆ ಕಪಿಲ್ ದೇವ್ ಕೂಡ ಲಾಲ್ ಸಲಾಂ ಸಿನಿಮಾದ ಭಾಗವಾಗಿದ್ದಾರೆ. ಸಿನಿಮಾಗೆ ಮಾಂತ್ರಿಕ ಎ. ಆರ್. ರೆಹಮಾನ್  ಸಂಗೀತ ಸಂಯೋಜನೆ, ವಿಷ್ಣು ರಂಗಸಾಮಿ ಛಾಯಾಗ್ರಹಣ ಮತ್ತು ಬಿ. ಪ್ರವೀಣ್ ಭಾಸ್ಕರ್ ಸಂಕಲನ ಒಳಗೊಂಡಿದೆ.

     

    ಲಾಲ್‌ ಸಲಾಂ ಚಿತ್ರವನ್ನು ಕಾಲಿವುಡ್‌ನ ಖ್ಯಾತ ನಿರ್ಮಾಣ ಸಂಸ್ಥೆ ಲೈಕಾ ಪ್ರೊಡಕ್ಷನ್ಸ್‌ನ ಸುಭಾಸ್ಕರನ್‌ ನಿರ್ಮಿಸಿದ್ದು, ತಮಿಳುನಾಡಿನಲ್ಲಿ ಈ ಚಿತ್ರವನ್ನು ಬಿಡುಗಡೆ ಮಾಡುವ ಹಕ್ಕನ್ನು ರೆಡ್ ಜೈಂಟ್ ಸಂಸ್ಥೆ ಪಡೆದುಕೊಂಡಿದೆ. ಕನ್ನಡ, ತೆಲುಗು, ಹಿಂದಿ ಜತೆಗೆ ಮಲಯಾಳಂನಲ್ಲಿಯೂ ಈ ಸಿನಿಮಾ ಬಿಡುಗಡೆ ಆಗಿದೆ. ಅಂದಹಾಗೇ ರಜನಿಕಾಂತ್ ಪುತ್ರಿ ಐಶ್ವರ್ಯಾಗೆ ಇದು 3ನೇ ಸಿನಿಮಾ.

  • ಹನುಮಾನ್ ಶಕ್ತಿಗೆ ಬಾಕ್ಸ್ ಆಫೀಸ್ ಉಡೀಸ್: 14 ದಿನಕ್ಕೆ 250 ಕೋಟಿ ಲೆಕ್ಕ

    ಹನುಮಾನ್ ಶಕ್ತಿಗೆ ಬಾಕ್ಸ್ ಆಫೀಸ್ ಉಡೀಸ್: 14 ದಿನಕ್ಕೆ 250 ಕೋಟಿ ಲೆಕ್ಕ

    ಕ್ಷಿಣದ ಮತ್ತೊಂದು ಸಿನಿಮಾ ಬಾಕ್ಸ್ ಆಫೀಸ್ (Box office) ದೋಚಿದೆ. ಪ್ರಶಾಂತ್ ವರ್ಮಾ (Prashant Verma) ನಿರ್ದೇಶನದಲ್ಲಿ ಮೂಡಿ ಬಂದಿರುವ ಹನುಮಾನ್ (Hanuman) ಚಿತ್ರ ಜಾಗತಿಕ ಮಟ್ಟದಲ್ಲಿ 14 ದಿನಕ್ಕೆ 250 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಈ ಮೂಲಕ ಸಿನಿಮಾ ತನ್ನ ನಾಗಲೋಟವನ್ನು ಮುಂದುವರೆಸಿದೆ.

    ಹನುಮಾನ್ ಚಿತ್ರಕ್ಕೆ ಅದ್ಭುತ ಪ್ರತಿಕ್ರಿಯೆ ಕಂಡಿರೋ ನಿರ್ದೇಶಕರಿಗೆ ಅಭಿಮಾನಿಗಳಿಗೆ ಮತ್ತೊಂದು ಸಿಹಿ ಸುದ್ದಿ ಕೊಟ್ಟಿದ್ದಾರೆ. ಹನುಮಾನ್ ಪಾರ್ಟ್ 2 ಮಾಡಲು ಅವರು ಮುಂದೆ ಬಂದಿದ್ದಾರೆ. ಕೇವಲ ಬಾಯಿ ಮಾತಲ್ಲಿ ಹೇಳದೇ ಪಾರ್ಟ್ 2 ಚಿತ್ರದ ಕೆಲಸಕ್ಕೂ ಅವರು ಮುಂದಾಗಿದ್ದಾರೆ.

    ಅಯೋಧ್ಯೆಯಲ್ಲಿ ರಾಮ ಪ್ರಾಣ ಪ್ರತಿಷ್ಠಾಪನೆ ಸಮಾರಂಭದ ಐತಿಹಾಸಿಕ ಕ್ಷಣದಲ್ಲಿ ಇಡೀ ದೇಶವೇ ಸಾಕ್ಷಿಯಾಗಿತ್ತು. ಈ ಶುಭ ದಿನದಂದು, ಹನುಮಾನ್ ಸಿನಿಮಾ ನಿರ್ದೇಶಕ ಪ್ರಶಾಂತ್ ವರ್ಮಾ ತಮ್ಮ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ತಮ್ಮ ಮುಂಬರುವ ಚಿತ್ರ ‘ಜೈ ಹನುಮಾನ್’ ಸಿನಿಮಾಗಾಗಿ ತಯಾರಿಯನ್ನು ಪ್ರಾರಂಭಿಸಿದ್ದಾರೆ. ಅದರ ಭಾಗವಾಗಿ ಜೈ ಹನುಮಾನ್ ಸಿನಿಮಾದ ಸ್ಟ್ರಿಪ್ಟ್ ಪೂಜೆ ನೆರವೇರಿಸಿದ್ದಾರೆ.

    ಪ್ರಶಾಂತ್ ವರ್ಮಾ ಅವರ ಸೂಪರ್ ಹೀರೋ ಚಿತ್ರ ಹನುಮಾನ್ ಜನವರಿ 12 ರಂದು ಬಿಡುಗಡೆಯಾಯಿತು. ತೇಜ ಸಜ್ಜ, ವರಲಕ್ಷ್ಮಿ ಶರತ್‌ಕುಮಾರ್, ಅಮೃತ ಅಯ್ಯರ್ ಮತ್ತು ವಿನಯ್ ರೈ ನಟಿಸಿರುವ ಚಿತ್ರವು ವಿಶ್ವದಾದ್ಯಂತ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಕಲೆಕ್ಷನ್ ಮಾಡುತ್ತಿದೆ. ಈ ಸಕ್ಸಸ್ ಬೆನ್ನಲ್ಲೇ ಜೈ ಹನುಮಾನ್ ಸಿನಿಮಾದ ಕೆಲಸ ಶುರುವಾಗಿವೆ.

    ಹನುಮಾನ ಸಿನಿಮಾ ಮೂಲಕ ಪ್ರಶಾಂತ್ ವರ್ಮಾ ರಾಷ್ಟ್ರವ್ಯಾಪಿ ಜನಪ್ರಿಯರಾಗಿದ್ದಾರೆ. ಸೃಜನಶೀಲ ನಿರ್ದೇಶಕರು ಪ್ರಶಾಂತ್ ವರ್ಮಾ ಸಿನಿಮಾಟಿಕ್ ಯೂನಿವರ್ಸ್ (PVCU) ನಿಂದ ಮತ್ತೊಂದು ಮಹಾಕಾವ್ಯ ಸಾಹಸವನ್ನು ಪ್ರೇಕ್ಷಕರ ಎದುರು ತರುತ್ತಿದ್ದಾರೆ. ಅದರ ಭಾಗವಾಗಿ ಜೈ ಹನುಮಾನ್ ಸಿನಿಮಾ ಘೋಷಿಸಿದ್ದು, ದೊಡ್ಡ ಮಟ್ಟದಲ್ಲಿ ಮೂಡಿಬರಲಿರುವ ಸೀಕ್ವೆಲ್‌ಗಾಗಿ ನಿರ್ದೇಶಕರು ಈಗಾಗಲೇ ಸ್ಕ್ರಿಪ್ಟ್ ನ್ನು ಸಿದ್ಧಪಡಿಸಿದ್ದಾರೆ. ಹೈದರಾಬಾದ್‌ನ ಹನುಮಾನ್ ದೇವಾಲಯದಲ್ಲಿಂದು ಸ್ಕ್ರಿಪ್ಟ್ ಪೂಜೆ ನೆರವೇರಿದೆ. ಮುಂದಿನ ದಿನಗಳಲ್ಲಿ ತಾರಾ ಬಳಗ ಹಾಗೂ ತಾಂತ್ರಿಕ ವರ್ಗದ ಬಗ್ಗೆ ಮಾಹಿತಿ ನೀಡಲಿದ್ದಾರೆ.

  • ‘ಹನುಮಾನ್’ ಗಳಿಕೆ ಮತ್ತೆ ಏರಿಕೆ: ಜೈ ಹನುಮಾನ್ ಎಂದ ಫ್ಯಾನ್ಸ್

    ‘ಹನುಮಾನ್’ ಗಳಿಕೆ ಮತ್ತೆ ಏರಿಕೆ: ಜೈ ಹನುಮಾನ್ ಎಂದ ಫ್ಯಾನ್ಸ್

    ನಿರೀಕ್ಷೆಗೂ ಮೀರಿ ಹನುಮಾನ್ ಚಿತ್ರದ ಗಳಿಕೆ ಏರುತ್ತಲೇ ಇದೆ. ಮೊನ್ನೆಯಷ್ಟೇ 11 ದಿನಗಳಲ್ಲಿ 218.42 ಕೋಟಿ ರೂಪಾಯಿ ಸಂಪಾದಿಸಿದ್ದ ಈ ಸಿನಿಮಾ, 13ನೇ ದಿನಕ್ಕೆ 230 ಕೋಟಿ ರೂಪಾಯಿಗೂ ಅಧಿಕ ಹಣ ಬಾಕ್ಸ್ ಆಫೀಸಿಗೆ (box office) ಹರಿದು ಬಂದಿದೆ ಎಂದು ಅಂದಾಜಿಸಲಾಗಿದೆ. ಸಿನಿಮಾ ನೋಡಿದ ಪ್ರತಿಯೊಬ್ಬರೂ ಜೈ ಹನುಮಾನ್ ಎಂದು ಘೋಷಣೆ ಕೂಗುತ್ತಿದ್ದಾರೆ.

    ಹನುಮಾನ್ (Hanuman) ಚಿತ್ರಕ್ಕೆ ಅದ್ಭುತ ಪ್ರತಿಕ್ರಿಯೆ ಕಂಡಿರೋ ನಿರ್ದೇಶಕರಿಗೆ ಅಭಿಮಾನಿಗಳಿಗೆ ಮತ್ತೊಂದು ಸಿಹಿ ಸುದ್ದಿ ಕೊಟ್ಟಿದ್ದಾರೆ. ಹನುಮಾನ್ ಪಾರ್ಟ್ 2 ಮಾಡಲು ಅವರು ಮುಂದೆ ಬಂದಿದ್ದಾರೆ. ಕೇವಲ ಬಾಯಿ ಮಾತಲ್ಲಿ ಹೇಳದೇ ಪಾರ್ಟ್ 2 ಚಿತ್ರದ ಕೆಲಸಕ್ಕೂ ಅವರು ಮುಂದಾಗಿದ್ದಾರೆ.

    ಅಯೋಧ್ಯೆಯಲ್ಲಿ ರಾಮ ಪ್ರಾಣ ಪ್ರತಿಷ್ಠಾಪನೆ ಸಮಾರಂಭದ ಐತಿಹಾಸಿಕ ಕ್ಷಣದಲ್ಲಿ ಇಡೀ ದೇಶವೇ ಸಾಕ್ಷಿಯಾಗಿತ್ತು. ಈ ಶುಭ ದಿನದಂದು, ಹನುಮಾನ್ ಸಿನಿಮಾ ನಿರ್ದೇಶಕ ಪ್ರಶಾಂತ್ ವರ್ಮಾ ತಮ್ಮ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ತಮ್ಮ ಮುಂಬರುವ ಚಿತ್ರ ‘ಜೈ ಹನುಮಾನ್’ ಸಿನಿಮಾಗಾಗಿ ತಯಾರಿಯನ್ನು ಪ್ರಾರಂಭಿಸಿದ್ದಾರೆ. ಅದರ ಭಾಗವಾಗಿ ಜೈ ಹನುಮಾನ್ ಸಿನಿಮಾದ ಸ್ಟ್ರಿಪ್ಟ್ ಪೂಜೆ ನೆರವೇರಿಸಿದ್ದಾರೆ.

    ಪ್ರಶಾಂತ್ ವರ್ಮಾ ಅವರ ಸೂಪರ್ ಹೀರೋ ಚಿತ್ರ ಹನುಮಾನ್ ಜನವರಿ 12 ರಂದು ಬಿಡುಗಡೆಯಾಯಿತು. ತೇಜ ಸಜ್ಜ, ವರಲಕ್ಷ್ಮಿ ಶರತ್‌ಕುಮಾರ್, ಅಮೃತ ಅಯ್ಯರ್ ಮತ್ತು ವಿನಯ್ ರೈ ನಟಿಸಿರುವ ಚಿತ್ರವು ವಿಶ್ವದಾದ್ಯಂತ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಕಲೆಕ್ಷನ್ ಮಾಡುತ್ತಿದೆ. ಈ ಸಕ್ಸಸ್ ಬೆನ್ನಲ್ಲೇ ಜೈ ಹನುಮಾನ್ ಸಿನಿಮಾದ ಕೆಲಸ ಶುರುವಾಗಿವೆ.

     

    ಹನುಮಾನ ಸಿನಿಮಾ ಮೂಲಕ ಪ್ರಶಾಂತ್ ವರ್ಮಾ (Prashant Verma) ರಾಷ್ಟ್ರವ್ಯಾಪಿ ಜನಪ್ರಿಯರಾಗಿದ್ದಾರೆ. ಸೃಜನಶೀಲ ನಿರ್ದೇಶಕರು ಪ್ರಶಾಂತ್ ವರ್ಮಾ ಸಿನಿಮಾಟಿಕ್ ಯೂನಿವರ್ಸ್ (PVCU) ನಿಂದ ಮತ್ತೊಂದು ಮಹಾಕಾವ್ಯ ಸಾಹಸವನ್ನು ಪ್ರೇಕ್ಷಕರ ಎದುರು ತರುತ್ತಿದ್ದಾರೆ. ಅದರ ಭಾಗವಾಗಿ ಜೈ ಹನುಮಾನ್ ಸಿನಿಮಾ ಘೋಷಿಸಿದ್ದು, ದೊಡ್ಡ ಮಟ್ಟದಲ್ಲಿ ಮೂಡಿಬರಲಿರುವ ಸೀಕ್ವೆಲ್‌ಗಾಗಿ ನಿರ್ದೇಶಕರು ಈಗಾಗಲೇ ಸ್ಕ್ರಿಪ್ಟ್ ನ್ನು ಸಿದ್ಧಪಡಿಸಿದ್ದಾರೆ. ಹೈದರಾಬಾದ್‌ನ ಹನುಮಾನ್ ದೇವಾಲಯದಲ್ಲಿಂದು ಸ್ಕ್ರಿಪ್ಟ್ ಪೂಜೆ ನೆರವೇರಿದೆ. ಮುಂದಿನ ದಿನಗಳಲ್ಲಿ ತಾರಾ ಬಳಗ ಹಾಗೂ ತಾಂತ್ರಿಕ ವರ್ಗದ ಬಗ್ಗೆ ಮಾಹಿತಿ ನೀಡಲಿದ್ದಾರೆ.

  • ಮತ್ತೊಂದು ದಾಖಲೆ ಬರೆದ ಕಾಟೇರ: 200 ಕೋಟಿ ರೂ. ಕ್ಲಬ್ ಸೇರಿದ ಸಂಭ್ರಮ

    ಮತ್ತೊಂದು ದಾಖಲೆ ಬರೆದ ಕಾಟೇರ: 200 ಕೋಟಿ ರೂ. ಕ್ಲಬ್ ಸೇರಿದ ಸಂಭ್ರಮ

    ರ್ಶನ್ ನಟನೆ ಕಾಟೇರ ಸಿನಿಮಾ ಮತ್ತೊಂದು ದಾಖಲೆ ಬರೆದಿದೆ. ಒಂದು ಕೋಟಿಗೂ ಅಧಿಕ ಟಿಕೆಟ್ ಮಾರಾಟವಾಗುವ ಮೂಲಕ 206 ಕೋಟಿ ರೂಪಾಯಿಯನ್ನು ಬಾಕ್ಸ್ ಆಫೀಸಿನಿಂದ (Box Office) ಕೊಳ್ಳೆ ಹೊಡೆದಿದೆ. 200 ಕೋಟಿ ರೂಪಾಯಿ ಕ್ಲಬ್ ಸೇರಿದ ಪೋಸ್ಟರ್ ಅನ್ನು ದರ್ಶನ್ ಅಭಿಮಾನಿಗಳು ಹಂಚಿಕೊಂಡು ಸಂಭ್ರಮಿಸುತ್ತಿದ್ದಾರೆ.

    ಈ ನಡುವೆ ಸುದೀಪ್ ಮತ್ತೊಂದು ಸಂಭ್ರಮದ ಸುದ್ದಿ ಕೊಟ್ಟಿದ್ದಾರೆ. ಕೆಲವು ದಿನಗಳಿಂದ ಕಾಟೇರ (Katera) ಸಿನಿಮಾವನ್ನು ಕಿಚ್ಚ ಸುದೀಪ್ (Sudeep) ನೋಡಲಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿತ್ತು. ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಅವರ ಜೊತೆ ಸುದೀಪ್ ಮಾತನಾಡಿ, ಅತೀ ಶೀಘ್ರದಲ್ಲೇ ಸಿನಿಮಾ ನೋಡುತ್ತೇನೆ ಎಂದು ಹೇಳಿದ್ದಾಗಿ ವರದಿ ಆಗಿತ್ತು. ಅದೀಗ ನಿಜವಾಗಿದೆ. ಸುದೀಪ್ ಕಾಟೇರ ಸಿನಿಮಾವನ್ನು ವೀಕ್ಷಿಸಿದ್ದಾರೆ. ಈ ಮಾಹಿತಿಯನ್ನು ಸ್ವತಃ ಸುದೀಪ್ ಅವರೇ ಸೋಷಿಯಲ್ ಮೀಡಿಯಾ ಮೂಲಕ ಹಂಚಿಕೊಂಡಿದ್ದಾರೆ.

    ಈ ಹಿಂದೆ ನಡೆದ ಸೆಲೆಬ್ರಿಟಿ ಶೋಗೆ ಬರುವಂತೆ ಸುದೀಪ್ ಅವರಿಗೆ ಕಾಟೇರ ತಂಡದಿಂದ ಕರೆ ಹೋಗಿತ್ತು. ಕಿಚ್ಚ ಶೂಟಿಂಗ್ ನಲ್ಲಿ ಇರುವ ಕಾರಣದಿಂದಾಗಿ ಬರುವುದಕ್ಕೆ ಆಗಿರಲಿಲ್ಲ. ಆದರೆ ಅತೀ ಶೀಘ್ರದಲ್ಲೇ ಸಿನಿಮಾ ನೋಡುವುದಾಗಿ ಸುದೀಪ್ ಹೇಳಿದ್ದರು. ಇದೀಗ ಕೊಟ್ಟ ಮಾತಿನಂತೆ ಸಿನಿಮಾ ವೀಕ್ಷಣೆ ಮಾಡಿದ್ದಾರೆ.

     

    ಒಂದು ಕಡೆ ಸೆಲೆಬ್ರಿಟಗಳು ಸಿನಿಮಾವನ್ನು ಮೆಚ್ಚಿಕೊಳ್ಳುತ್ತಿದ್ದರೆ, ಮತ್ತೊಂದು ಕಡೆ ಕಾಟೇರ ಸಿನಿಮಾ ರಿಲೀಸ್ ಗಳಿಕೆಯೂ ಭರ್ಜರಿಯಾಗಿದೆ. ಸಿನಿಮಾ ರಿಲೀಸ್ ಆದ ಮೊದಲ ವಾರದಲ್ಲೇ 100 ಕೋಟಿ ರೂಪಾಯಿ ಕ್ಲಬ್ ಸೇರಿತ್ತು. ಈ ಕುರಿತಂತೆ ದರ್ಶನ್ (Darshan) ಅಭಿಮಾನಿಗಳು ಪೋಸ್ಟ್ ಮಾಡಿದ್ದರು. ‘ನಮ್ಮ ಕನ್ನಡ ಭಾಷೆಯಲ್ಲಿ ಮಾತ್ರ ಬಿಡುಗಡೆಯಾದ, ಮತ್ತು  ಕರುನಾಡೆ ಮೆಚ್ಚಿದ ನಮ್ಮ ಕಾಟೇರ ಕೇವಲ ಒಂದು ವಾರದಲ್ಲಿ, 52 ಲಕ್ಷಕ್ಕೂ ಅಧಿಕ ಟಿಕೆಟ್ಸ್ ಸೋಲ್ಡ್ ಔಟ್ ಆಗಿ, 104 ಕೋಟಿಗೂ ಅಧಿಕ ಹಣವನ್ನುಗಳಿಸಿ ಎಲ್ಲಾ ದಾಖಲೆಗಳನ್ನು ಮುರಿದು. ಹೊಸ ದಾಖಲೆಯನ್ನು ಸ್ಥಾಪಿಸಿ ಯಶಸ್ವಿಯಾಗಿ ಮುನ್ನುಗ್ಗುತ್ತಿದೆ’ ಎಂದು ಬರೆದುಕೊಂಡಿದ್ದರು.

  • 200 ಕೋಟಿ ಕ್ಲಬ್ ಸಮೀಪಕ್ಕೆ ಕಾಟೇರ: ಪೋಸ್ಟರ್ ಹಂಚಿಕೊಂಡ ಫ್ಯಾನ್ಸ್

    200 ಕೋಟಿ ಕ್ಲಬ್ ಸಮೀಪಕ್ಕೆ ಕಾಟೇರ: ಪೋಸ್ಟರ್ ಹಂಚಿಕೊಂಡ ಫ್ಯಾನ್ಸ್

    ಕಾಟೇರ ತನ್ನ ಗೆಲುವಿನ ಓಟವನ್ನು ಮುಂದುವರೆಸಿದೆ. 18 ದಿನಗಳಲ್ಲಿ 190 ಕೋಟಿಗೂ ಹೆಚ್ಚು ಕಲೆಕ್ಷನ್ ಗಳಿಸಿ (Gross collection) 200 ಕೋಟಿ ಕಲೆಕ್ಷನ್ ನತ್ತ ಯಶಸ್ವಿಯಾಗಿ ಸಾಗುತ್ತಿದೆ ಎಂದು ದರ್ಶನ್ ಅವರ ಫ್ಯಾನ್ಸ್ ಪೋಸ್ಟರ್ ಹಂಚಿಕೊಂಡಿದ್ದಾರೆ. ಈ ವಾರದಲ್ಲೇ 200 ಕೋಟಿ ರೂಪಾ ಕ್ಲಬ್ ಸೇರೋದು ಗ್ಯಾರಂಟಿ ಎನ್ನುವ ಲೆಕ್ಕಾಚಾರ ಶುರುವಾಗಿದೆ.

    ಈ ನಡುವೆ ಸುದೀಪ್ ಮತ್ತೊಂದು ಸಂಭ್ರಮದ ಸುದ್ದಿ ಕೊಟ್ಟಿದ್ದಾರೆ. ಕೆಲವು ದಿನಗಳಿಂದ ಕಾಟೇರ (Katera) ಸಿನಿಮಾವನ್ನು ಕಿಚ್ಚ ಸುದೀಪ್ (Sudeep) ನೋಡಲಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿತ್ತು. ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಅವರ ಜೊತೆ ಸುದೀಪ್ ಮಾತನಾಡಿ, ಅತೀ ಶೀಘ್ರದಲ್ಲೇ ಸಿನಿಮಾ ನೋಡುತ್ತೇನೆ ಎಂದು ಹೇಳಿದ್ದಾಗಿ ವರದಿ ಆಗಿತ್ತು. ಅದೀಗ ನಿಜವಾಗಿದೆ. ಸುದೀಪ್ ಕಾಟೇರ ಸಿನಿಮಾವನ್ನು ವೀಕ್ಷಿಸಿದ್ದಾರೆ. ಈ ಮಾಹಿತಿಯನ್ನು ಸ್ವತಃ ಸುದೀಪ್ ಅವರೇ ಸೋಷಿಯಲ್ ಮೀಡಿಯಾ ಮೂಲಕ ಹಂಚಿಕೊಂಡಿದ್ದಾರೆ.

    ಈ ಹಿಂದೆ ನಡೆದ ಸೆಲೆಬ್ರಿಟಿ ಶೋಗೆ ಬರುವಂತೆ ಸುದೀಪ್ ಅವರಿಗೆ ಕಾಟೇರ ತಂಡದಿಂದ ಕರೆ ಹೋಗಿತ್ತು. ಕಿಚ್ಚ ಶೂಟಿಂಗ್ ನಲ್ಲಿ ಇರುವ ಕಾರಣದಿಂದಾಗಿ ಬರುವುದಕ್ಕೆ ಆಗಿರಲಿಲ್ಲ. ಆದರೆ ಅತೀ ಶೀಘ್ರದಲ್ಲೇ ಸಿನಿಮಾ ನೋಡುವುದಾಗಿ ಸುದೀಪ್ ಹೇಳಿದ್ದರು. ಇದೀಗ ಕೊಟ್ಟ ಮಾತಿನಂತೆ ಸಿನಿಮಾ ವೀಕ್ಷಣೆ ಮಾಡಿದ್ದಾರೆ.

    ಒಂದು ಕಡೆ ಸೆಲೆಬ್ರಿಟಗಳು ಸಿನಿಮಾವನ್ನು ಮೆಚ್ಚಿಕೊಳ್ಳುತ್ತಿದ್ದರೆ, ಮತ್ತೊಂದು ಕಡೆ ಕಾಟೇರ ಸಿನಿಮಾ ರಿಲೀಸ್ ಗಳಿಕೆಯೂ ಭರ್ಜರಿಯಾಗಿದೆ. ಸಿನಿಮಾ ರಿಲೀಸ್ ಆದ ಮೊದಲ ವಾರದಲ್ಲೇ 100 ಕೋಟಿ ರೂಪಾಯಿ ಕ್ಲಬ್ ಸೇರಿತ್ತು. ಈ ಕುರಿತಂತೆ ದರ್ಶನ್ (Darshan) ಅಭಿಮಾನಿಗಳು ಪೋಸ್ಟ್ ಮಾಡಿದ್ದರು. ‘ನಮ್ಮ ಕನ್ನಡ ಭಾಷೆಯಲ್ಲಿ ಮಾತ್ರ ಬಿಡುಗಡೆಯಾದ, ಮತ್ತು  ಕರುನಾಡೆ ಮೆಚ್ಚಿದ ನಮ್ಮ ಕಾಟೇರ ಕೇವಲ ಒಂದು ವಾರದಲ್ಲಿ, 52 ಲಕ್ಷಕ್ಕೂ ಅಧಿಕ ಟಿಕೆಟ್ಸ್ ಸೋಲ್ಡ್ ಔಟ್ ಆಗಿ, 104 ಕೋಟಿಗೂ ಅಧಿಕ ಹಣವನ್ನುಗಳಿಸಿ ಎಲ್ಲಾ ದಾಖಲೆಗಳನ್ನು ಮುರಿದು. ಹೊಸ ದಾಖಲೆಯನ್ನು ಸ್ಥಾಪಿಸಿ ಯಶಸ್ವಿಯಾಗಿ ಮುನ್ನುಗ್ಗುತ್ತಿದೆ’ ಎಂದು ಬರೆದುಕೊಂಡಿದ್ದರು.

    ಕೇವಲ ಕರ್ನಾಟಕದಲ್ಲಿ ಮಾತ್ರವಲ್ಲ, ದುಬೈನಲ್ಲೂ (Dubai) ಕಾಟೇರ ಹೌಸ್ ಫುಲ್ ಪ್ರದರ್ಶನ ಕಂಡಿದೆ. ನಟ ದರ್ಶನ್, ನಿರ್ದೇಶಕ ತರುಣ್ ಸುಧೀರ್ ಹಾಗೂ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಸೇರಿದಂತೆ ಚಿತ್ರತಂಡ ಭಾಗಿಯಾಗಿತ್ತು. ಅಭಿಮಾನಿಗಳ ಜೊತೆ ಸಿನಿಮಾ ನೋಡಿ ದರ್ಶನ್ ಸಂಭ್ರಮಿಸಿದ್ದರು.

     

    ರಾಜ್ಯದಲ್ಲಿ ಕಾಟೇರ ಹವಾ ಜೋರಾಗಿದೆ. ಕರ್ನಾಟಕದಲ್ಲೇ ಬಾಕ್ಸ್ ಆಫೀಸಿಗೆ ಕೋಟಿ ಕೋಟಿ ರೂಪಾಯಿ ಹಣ ಹರಿದು ಬರುತ್ತಿದೆ. ಜೊತೆಗೆ ನೆರೆಯ ರಾಜ್ಯದಲ್ಲೂ ಕಾಟೇರ ರಿಲೀಸ್ ಆಗಿದ್ದು, ಅಲ್ಲಿಯೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಗೋವಾ, ಆಂಧ್ರಪ್ರದೇಶ, ತಮಿಳು ನಾಡಿನಲ್ಲೂ ಕಾಟೇರ ಬಿಡುಗಡೆ ಆಗಿದ್ದು, ಅಲ್ಲಿಯೂ ಹೆಚ್ಚಿನ ಸಂಖ್ಯೆಯಲ್ಲಿ ಜನರು ಥಿಯೇಟರ್ ಆಗಮಿಸಿದ್ದಾರೆ.