ಕಾಂತಾರ ಸಿನಿಮಾ ನೋಡಿ ಅಚ್ಚರಿ ಎನ್ನುವಂತೆ ನಿರ್ದೇಶಕ, ನಟ ರಿಷಬ್ ಶೆಟ್ಟಿ (Rishabh Shetty) ಅವರಿಗೆ ಕರೆ ಮಾಡಿದ್ದರು ಸೂಪರ್ ಸ್ಟಾರ್ ರಜನಿಕಾಂತ್ (Rajinikanth). ಅದೊಂದು ಅನಿರೀಕ್ಷಿತ ಕರೆ ಆಗಿದ್ದರಿಂದ ರಿಷಬ್ ಕೂಡ ಅಚ್ಚರಿ ಪಟ್ಟಿದ್ದರು. ಸೂಪರ್ ಸ್ಟಾರ್ ಒಬ್ಬರು ಸಿನಿಮಾ ನೋಡಿ, ಕರೆ ಮಾಡಿದ್ದರಿಂದ ಅವರಿಗೆ ಕೃತಜ್ಞತೆ ಹೇಳುವುದಕ್ಕಾಗಿ ರಿಷಬ್ ರೆಡಿಯಾಗಿದ್ದರು. ಅಷ್ಟರಲ್ಲೇ ಮತ್ತೊಂದು ಸರ್ ಪ್ರೈಸ್ ನೀಡಿದ್ದಾರೆ ರಜನಿ. ಸ್ವತಃ ರಿಷಬ್ ಅವರನ್ನು ತಮ್ಮ ಮನೆಗೆ ಕರೆದು ಸನ್ಮಾನ ಮಾಡಿದ್ದಾರೆ.
ಕಾಂತಾರ (Kantara) ಮೂಲಕ ನ್ಯಾಷಿನಲ್ ಸ್ಟಾರ್ ಆಗಿರುವ ರಿಷಬ್ ಶೆಟ್ಟಿ, ಕೆಲ ಹೊತ್ತು ರಜನಿಕಾಂತ್ ಅವರ ಜೊತೆ ಮಾತನಾಡಿ ತಮ್ಮ ಕನಸುಗಳನ್ನು ಹಂಚಿಕೊಂಡಿದ್ದಾರೆ. ಜೊತೆಗೆ ಕೃತಜ್ಞತೆಯನ್ನೂ ಹೇಳಿದ್ದಾರೆ. ಕಾಂತಾರ ಮೇಕಿಂಗ್, ಅದನ್ನು ಹೇಳಿದ ರೀತಿ, ತೋರಿಸಿದ ಕ್ರಮದ ಬಗ್ಗೆ ರಜನಿಕಾಂತ್ ಮೆಚ್ಚುಗೆಯನ್ನು ಈ ಸಂದರ್ಭದಲ್ಲಿ ವ್ಯಕ್ತ ಪಡಿಸಿದ್ದಾರೆ. ರಜನಿ ಮಾತು ಕೇಳಿ ರಿಷಬ್ ಕೂಡ ಖುಷ್ ಆಗಿದ್ದಾರೆ.
ಈ ಹಿಂದೆ ರಜನಿ ಕರೆ ಮಾಡಿದಾಗ ಥ್ರಿಲ್ ಆಗಿದ್ದ ರಿಷಬ್, ಮಾತಿನ ಮಧ್ಯೆ ರಜನಿ ಸ್ಟೈಲ್ ನಲ್ಲೇ ಸಿಗರೇಟು ತಿರುಗಿಸಿ ಬಾಯಿಗೆ ಹಾಕಿಕೊಂಡ ದೃಶ್ಯವನ್ನು ನೆನಪಿಸಿದ್ದಾರೆ. ಈ ದೃಶ್ಯ ಮಾಡುವಾಗ ನಿಮ್ಮನ್ನೇ ನೆನಪಿಸಿಕೊಂಡು, ನಿಮ್ಮದೇ ಸ್ಟೈಲ್ ನಲ್ಲೇ ಅದನ್ನು ಮಾಡಲು ಪ್ರಯತ್ನಿಸಿದ್ದೇನೆ ಎಂದು ರಿಷಬ್ ಹೇಳಿದ್ದಾರೆ. ಸಿನಿಮಾ, ಮೇಕಿಂಗ್, ಕಥೆ, ನಟನೆ, ಸಂಗೀತ ಸೇರಿದಂತೆ ಹಲವು ವಿಚಾರಗಳನ್ನು ರಜನಿ ಮುಕ್ತವಾಗಿ ರಿಷಬ್ ಜೊತೆ ಮಾತನಾಡಿದ್ದಾರೆ. ಎಲ್ಲಾ ವಿಭಾಗದ ಕೆಲಸವನ್ನೂ ರಜನಿ ಮೆಚ್ಚಿಕೊಂಡಿದ್ದಾರೆ.
ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಕಾಂತಾರ ಸಿನಿಮಾ ಬಾಕ್ಸ್ ಆಫೀಸಿನಲ್ಲಿ ದಿನದಿಂದ ದಿನಕ್ಕೆ ತನ್ನ ಪ್ರಭಾವವನ್ನು ಹೆಚ್ಚಿಸಿಕೊಳ್ಳುತ್ತಲೇ ಇದೆ. ಮೊದಲ ದಿನದಂದು ಈವರೆಗೂ ಹಣ ಗಳಿಕೆಯಲ್ಲಿ ಅದು ಯಾವತ್ತೂ ಹಿಂದೆ ಬಿದ್ದಿಲ್ಲ. 200 ಕೋಟಿಗೂ ಅಧಿಕ ಹಣವನ್ನು ಕಾಂತಾರ ಗಳಿಸಿದೆ ಎಂದು ಅಂದಾಜಿಸಲಾಗಿದೆ. ಈವರೆಗೂ ಕರ್ನಾಟಕವೊಂದರಲ್ಲೇ 100 ಕೋಟಿಗೂ ಅಧಿಕ ಹಣ ತಂದುಕೊಟ್ಟಿರುವ ಕಾಂತಾರ, ತೆಲಂಗಾಣ, ಉತ್ತರ ಭಾರತ, ಕೇರಳ, ವಿದೇಶದಿಂದ ಬಂದ ಒಟ್ಟು ಹಣ 80 ಕೋಟಿಗೂ ಅಧಿಕ ಎಂದು ಅಂದಾಜಿಸಲಾಗಿದೆ.
ದೇಶಾದ್ಯಂತ ಕಾಂತಾರ ಸಿನಿಮಾ ಗೆಲುವಿನ ಓಟವನ್ನು ಮುಂದುವರೆಸಿದೆ. ದೀಪಾವಳಿ ಹಬ್ಬದ ರಜೆಯ ಕಾರಣದಿಂದಾಗಿ ಬಾಕ್ಸ್ ಆಫೀಸ್ ಭರ್ತಿ ಭರ್ತಿ ಆಗಿದೆ. ಇದೊಂದು ಐತಿಹಾಸಿಕ, ಮಹಾ ಗೆಲುವು ಎಂದು ಬಣ್ಣಿಸಲಾಗುತ್ತಿದೆ. ಈ ಗೆಲುವನ್ನು ರಿಷಬ್ ಶೆಟ್ಟಿ ದೈವಕ್ಕೆ ಅರ್ಪಿಸಿದ್ದಾರೆ. ಈ ಸಿನಿಮಾ ಗೆಲ್ಲಲು ದೈವ ಕಾರಣ, ಜನರಲ್ಲಿ ನಾನು ದೇವರನ್ನು ಕಾಣುತ್ತೇನೆ ಎಂದು ಹೇಳಿದ್ದಾರೆ ರಿಷಬ್.
Live Tv
[brid partner=56869869 player=32851 video=960834 autoplay=true]
ಕಾಂತಾರ (Kantara) ಸಿನಿಮಾದ ಗೆಲುವು ರಿಷಬ್ ಶೆಟ್ಟಿ ಅವರಿಗೆ ಅಚ್ಚರಿ ಮೇಲೆ ಅಚ್ಚರಿ ನೀಡುತ್ತಿದೆ. ಭಾರತೀಯ ಸಿನಿಮಾ ರಂಗದ ಅನೇಕ ಕಲಾವಿದರು ಈ ಸಿನಿಮಾ ನೋಡಿ, ಮೆಚ್ಚಿಕೊಂಡಿದ್ದಾರೆ. ಅನೇಕ ತಾರೆಯರು ಸ್ವತಃ ರಿಷಬ್ ಶೆಟ್ಟಿಗೆ ಕರೆ ಮಾಡಿ ಮಾತನಾಡಿದ್ದಾರೆ. ಅಂಥದ್ದೇ ಒಂದು ಸರ್ ಪ್ರೈಸ್ ನೀಡಿದ್ದಾರೆ ಸೂಪರ್ ಸ್ಟಾರ್ ರಜನಿಕಾಂತ್. ಕಾಂತಾರ ಸಿನಿಮಾ ನೋಡಿದ ಮೇಲೆ ರಿಷಬ್ ಜೊತೆ ಮಾತನಾಡಿದ ರಜನಿ, ಸಿನಿಮಾದ ಬಗ್ಗೆ ಹಾಡಿ ಹೊಗಳಿದ್ದಾರೆ.
ರಜನಿ (Rajinikanth) ಕರೆ ಮಾಡಿದಾಗ ಥ್ರಿಲ್ ಆಗಿದ್ದ ರಿಷಬ್, ಮಾತಿನ ಮಧ್ಯೆ ರಜನಿ ಸ್ಟೈಲ್ ನಲ್ಲೇ ಸಿಗರೇಟು ತಿರುಗಿಸಿ ಬಾಯಿಗೆ ಹಾಕಿಕೊಂಡ ದೃಶ್ಯವನ್ನು ನೆನಪಿಸಿದ್ದಾರೆ. ಈ ದೃಶ್ಯ ಮಾಡುವಾಗ ನಿಮ್ಮನ್ನೇ ನೆನಪಿಸಿಕೊಂಡು, ನಿಮ್ಮದೇ ಸ್ಟೈಲ್ ನಲ್ಲೇ ಅದನ್ನು ಮಾಡಲು ಪ್ರಯತ್ನಿಸಿದ್ದೇನೆ ಎಂದು ರಿಷಬ್ ಹೇಳಿದ್ದಾರೆ. ಸಿನಿಮಾ, ಮೇಕಿಂಗ್, ಕಥೆ, ನಟನೆ, ಸಂಗೀತ ಸೇರಿದಂತೆ ಹಲವು ವಿಚಾರಗಳನ್ನು ರಜನಿ ಮುಕ್ತವಾಗಿ ರಿಷಬ್ ಜೊತೆ ಮಾತನಾಡಿದ್ದಾರೆ. ಎಲ್ಲಾ ವಿಭಾಗದ ಕೆಲಸವನ್ನೂ ರಜನಿ ಮೆಚ್ಚಿಕೊಂಡಿದ್ದಾರೆ. ಇದನ್ನೂ ಓದಿ:ದೇಶ-ವಿದೇಶದಲ್ಲಿ ಮಾರ್ದನಿಸ್ತಿರೋ ಗಗ್ಗರ ಶಬ್ಧ- ಅಮೆರಿಕಾದಲ್ಲಿ ಎಂಟೂವರೆ ಕೋಟಿ ಬಾಚಿದ ಕಾಂತಾರ
ರಿಷಬ್ ಶೆಟ್ಟಿ (Rishabh Shetty) ನಿರ್ದೇಶಿಸಿ, ನಟಿಸಿರುವ ಕಾಂತಾರ ಸಿನಿಮಾ ಬಾಕ್ಸ್ ಆಫೀಸಿನಲ್ಲಿ ದಿನದಿಂದ ದಿನಕ್ಕೆ ತನ್ನ ಪ್ರಭಾವವನ್ನು ಹೆಚ್ಚಿಸಿಕೊಳ್ಳುತ್ತಲೇ ಇದೆ. ಮೊದಲ ದಿನದಂದು ಈವರೆಗೂ ಹಣ ಗಳಿಕೆಯಲ್ಲಿ ಅದು ಯಾವತ್ತೂ ಹಿಂದೆ ಬಿದ್ದಿಲ್ಲ. ನಿನ್ನೆವರೆಗೂ 180 ಕೋಟಿಗೂ ಅಧಿಕ ಹಣವನ್ನು ಕಾಂತಾರ ಗಳಿಸಿದೆ ಎಂದು ಅಂದಾಜಿಸಲಾಗಿದೆ. ಈ ವಾರದ ಕೊನೆಯಲ್ಲಿ ಸಿನಿಮಾ 200 ಕೋಟಿ ಕ್ಲಬ್ ಸೇರಲಿದೆ ಎನ್ನುತ್ತಾರೆ ಟ್ರೇಡ್ ಅನಾಲಿಸಿಸ್.
ಈವರೆಗೂ ಕರ್ನಾಟಕವೊಂದರಲ್ಲೇ 100 ಕೋಟಿಗೂ ಅಧಿಕ ಹಣ ತಂದುಕೊಟ್ಟಿರುವ ಕಾಂತಾರ, ತೆಲಂಗಾಣ, ಉತ್ತರ ಭಾರತ, ಕೇರಳ, ವಿದೇಶದಿಂದ ಬಂದ ಒಟ್ಟು ಹಣ 80 ಕೋಟಿಗೂ ಅಧಿಕ ಎಂದು ಅಂದಾಜಿಸಲಾಗಿದೆ. ಈ ವಾರದ ಒಳಗೆ ಸಲೀಸಾಗಿ ಕಾಂತಾರ ಸಿನಿಮಾ 200 ಕೋಟಿ ಕ್ಲಬ್ ಸೇರಲಿದೆ ಎನ್ನುವುದು ಸಿನಿ ಪಂಡಿತರ ಲೆಕ್ಕಾಚಾರ.
ದೇಶಾದ್ಯಂತ ಕಾಂತಾರ ಸಿನಿಮಾ ಗೆಲುವಿನ ಓಟವನ್ನು ಮುಂದುವರೆಸಿದೆ. ದೀಪಾವಳಿ ಹಬ್ಬದ ರಜೆಯ ಕಾರಣದಿಂದಾಗಿ ಬಾಕ್ಸ್ ಆಫೀಸ್ (Box Office) ಭರ್ತಿ ಆಗುತ್ತಿದೆ. ಇದೊಂದು ಐತಿಹಾಸಿಕ, ಮಹಾ ಗೆಲುವು ಎಂದು ಬಣ್ಣಿಸಲಾಗುತ್ತಿದೆ. ಈ ಗೆಲುವನ್ನು ರಿಷಬ್ ಶೆಟ್ಟಿ ದೈವಕ್ಕೆ ಅರ್ಪಿಸಿದ್ದಾರೆ. ಈ ಸಿನಿಮಾ ಗೆಲ್ಲಲು ದೈವ ಕಾರಣ, ಜನರಲ್ಲಿ ನಾನು ದೇವರನ್ನು ಕಾಣುತ್ತೇನೆ ಎಂದು ಹೇಳಿದ್ದಾರೆ ರಿಷಬ್.
Live Tv
[brid partner=56869869 player=32851 video=960834 autoplay=true]
ರಿಷಬ್ ಶೆಟ್ಟಿ (Rishabh Shetty) ನಿರ್ದೇಶಿಸಿ, ನಟಿಸಿರುವ ಕಾಂತಾರ (Kantara) ಸಿನಿಮಾ ಬಾಕ್ಸ್ ಆಫೀಸಿನಲ್ಲಿ ದಿನದಿಂದ ದಿನಕ್ಕೆ ತನ್ನ ಪ್ರಭಾವವನ್ನು ಹೆಚ್ಚಿಸಿಕೊಳ್ಳುತ್ತಲೇ ಇದೆ. ಮೊದಲ ದಿನದಂದು ಈವರೆಗೂ ಹಣ ಗಳಿಕೆಯಲ್ಲಿ ಅದು ಯಾವತ್ತೂ ಹಿಂದೆ ಬಿದ್ದಿಲ್ಲ. ನಿನ್ನೆವರೆಗೂ 180 ಕೋಟಿಗೂ ಅಧಿಕ ಹಣವನ್ನು ಕಾಂತಾರ ಗಳಿಸಿದೆ ಎಂದು ಅಂದಾಜಿಸಲಾಗಿದೆ. ಈ ವಾರದ ಕೊನೆಯಲ್ಲಿ ಸಿನಿಮಾ 200 ಕೋಟಿ ಕ್ಲಬ್ (200 Crore Club) ಸೇರಲಿದೆ ಎನ್ನುತ್ತಾರೆ ಟ್ರೇಡ್ ಅನಾಲಿಸಿಸ್.
ಈವರೆಗೂ ಕರ್ನಾಟಕವೊಂದರಲ್ಲೇ 100 ಕೋಟಿಗೂ ಅಧಿಕ ಹಣ ತಂದುಕೊಟ್ಟಿರುವ ಕಾಂತಾರ, ತೆಲಂಗಾಣ, ಉತ್ತರ ಭಾರತ, ಕೇರಳ, ವಿದೇಶದಿಂದ ಬಂದ ಒಟ್ಟು ಹಣ 80 ಕೋಟಿಗೂ ಅಧಿಕ ಎಂದು ಅಂದಾಜಿಸಲಾಗಿದೆ. ಈ ವಾರದ ಒಳಗೆ ಸಲೀಸಾಗಿ ಕಾಂತಾರ ಸಿನಿಮಾ 200 ಕೋಟಿ ಕ್ಲಬ್ ಸೇರಲಿದೆ ಎನ್ನುವುದು ಸಿನಿ ಪಂಡಿತರ ಲೆಕ್ಕಾಚಾರ.
ದೇಶಾದ್ಯಂತ ಕಾಂತಾರ ಸಿನಿಮಾ ಗೆಲುವಿನ ಓಟವನ್ನು ಮುಂದುವರೆಸಿದೆ. ದೀಪಾವಳಿ ಹಬ್ಬದ ರಜೆಯ ಕಾರಣದಿಂದಾಗಿ ಬಾಕ್ಸ್ ಆಫೀಸ್ (Box Office) ಭರ್ತಿ ಭರ್ತಿ ಆಗುತ್ತಿದೆ. ಇದೊಂದು ಐತಿಹಾಸಿಕ, ಮಹಾ ಗೆಲುವು ಎಂದು ಬಣ್ಣಿಸಲಾಗುತ್ತಿದೆ. ಈ ಗೆಲುವನ್ನು ರಿಷಬ್ ಶೆಟ್ಟಿ ದೈವಕ್ಕೆ ಅರ್ಪಿಸಿದ್ದಾರೆ. ಈ ಸಿನಿಮಾ ಗೆಲ್ಲಲು ದೈವ ಕಾರಣ, ಜನರಲ್ಲಿ ನಾನು ದೇವರನ್ನು ಕಾಣುತ್ತೇನೆ ಎಂದು ಹೇಳಿದ್ದಾರೆ ರಿಷಬ್.
ಅತ್ಯುತ್ತಮ ಚಲನಚಿತ್ರಗಳನ್ನು ನಿರ್ಮಿಸಿ ಕನ್ನಡಿಗರ ಮನೆಮಾತಾಗಿರುವ ಹೆಮ್ಮೆಯ ‘ಹೊಂಬಾಳೆ ಫಿಲಮ್ಸ್ ‘ , ಚಿತ್ರರಸಿಕರ ನಿರೀಕ್ಷೆಯಂತೆ ಸತತವಾಗಿ ಯಶಸ್ವಿ ಚಿತ್ರಗಳನ್ನು ದೇಶದ ಚಲನಚಿತ್ರರಂಗಕ್ಕೆ ಕೊಡುಗೆಯಾಗಿ ನೀಡಿ ಮೆಚ್ಚುಗೆ ಗಳಿಸಿದೆ. ‘ಕಾಂತಾರ’ ದೇಶ-ವಿದೇಶಗಳಲ್ಲಿ ಜನಮೆಚ್ಚುಗೆ ಗಳಿಸಿ ಭರ್ಜರಿ ಯಶಸ್ಸು ಕಂಡಿದೆ. ಇದೀಗ ಕಾಂತಾರ ಬಿಡುಗಡೆಯಾದ ಇಪ್ಪತ್ತೈದು ದಿನಕ್ಕೆ ಹೊಸ ದಾಖಲೆಯೊಂದನ್ನು ನಿರ್ಮಿಸಿರುವುದು ಹೊಂಬಾಳೆ ಫಿಲಮ್ಸ್ ಯಶಸ್ಸಿನ ಮುಕುಟಕ್ಕೆ ಹೊಸ ಗರಿ ಮೂಡಿದೆ.
ಈವರೆಗೆ ಹೊಂಬಾಳೆ ಬ್ಯಾನರ್ ನಲ್ಲಿ ನಿರ್ಮಿಸಿದ ಚಿತ್ರಗಳ ಪೈಕಿ ಕರ್ನಾಟಕದಲ್ಲಿ ಅತ್ಯಂತ ಹೆಚ್ಚು ಜನರು ವೀಕ್ಷಿಸಿದ ಚಲನಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಕರ್ನಾಟಕದಲ್ಲಿ 25 ದಿನಗಳಲ್ಲಿ 77 ಲಕ್ಷ ಮಂದಿ ಸಿನಿಮಾಪ್ರಿಯರು ಕಾಂತಾರ ವೀಕ್ಷಿಸಿರುವುದು ಹೊಸ ದಾಖಲೆಯಾಗಿದೆ.
Live Tv
[brid partner=56869869 player=32851 video=960834 autoplay=true]
ರಿಷಬ್ ಶೆಟ್ಟಿ (Rishabh Shetty) ನಿರ್ದೇಶನದ ಕಾಂತಾರ ಸಿನಿಮಾದ ಒಟ್ಟು ಗಳಿಕೆ 200 ಕೋಟಿ ಎಂದು ಅಂದಾಜಿಸಲಾಗಿದೆ. ಕನ್ನಡದಲ್ಲೇ ಅದು ನೂರು ಕೋಟಿ ಗಳಿಕೆ ಮಾಡಿದೆ. ಬಾಲಿವುಡ್ ನಲ್ಲೂ ಕಾಂತಾರ (Kantara, )ಹಿಂದೆ ಬಿದ್ದಿಲ್ಲ. ಹಿಂದಿಯಲ್ಲಿ ಈವರೆಗೂ 22.25 ಕೋಟಿ ಹಣ ಹರಿದು ಬಂದಿದೆಯಂತೆ. ಕೆಜಿಎಫ್ 2 ಸಿನಿಮಾದ ನಂತರ ಕನ್ನಡ ಸಿನಿಮಾವೊಂದು ಈ ಪರಿ ಗಳಿಕೆ (Collection)ಮಾಡಿದ ಹೆಗ್ಗಳಿಕೆ ಕಾಂತಾರದ್ದು.
ಒಂದು ಕಡೆ ಬಾಕ್ಸ್ (Box Office) ಆಫೀಸಿನಲ್ಲಿ ಸಿನಿಮಾ ಸದ್ದು ಮಾಡುತ್ತಿದ್ದರೆ, ಮತ್ತೊಂದು ಕಡೆ ಹಿಂದೂ ಸಂಸ್ಕೃತಿಗೆ ಸಂಬಂಧಿಸಿದಂತೆ ಈ ಸಿನಿಮಾ ವಿವಾದಕ್ಕೆ ಕಾರಣವಾಗಿದೆ. ಚೇತನ್ ಮತ್ತು ಬೆಂಬಲಿಗರು ಸಿನಿಮಾದ ಬಗ್ಗೆ ಅಪಸ್ವರ ಎತ್ತಿದ್ದಾರೆ. ಹಿಂದೂಪರ ಸಂಘಟನೆಯ ಕಾರ್ಯಕರ್ತರು ಚೇತನ್ ವಿರುದ್ಧ ದಂಗೆ ಎದ್ದಿದ್ದಾರೆ. ಕೆಲವು ಕಡೆ ಚೇತನ್ ಮೇಲೆ ದೂರು ಕೂಡ ದಾಖಲಾಗಿವೆ. ಇದನ್ನೂ ಓದಿ: ಹಿಂದುತ್ವದಲ್ಲೇ ಬ್ರಾಹ್ಮಣತ್ವವಿದೆ; ಪಬ್ಲಿಸಿಟಿಗೋಸ್ಕರ ನಟ ಚೇತನ್ ವಿವಾದಿತ ಹೇಳಿಕೆ – ಪೇಜಾವರ ಶ್ರೀ
ಪ್ರಗತಿಪರ ನಟ ಎಂದೇ ಗುರುತಿಸಿಕೊಂಡಿರುವ ಹಾಗೂ ಈ ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡಿರುವ ಕಿಶೋರ್, ಈ ವಿವಾದದ ಕುರಿತು ಭಿನ್ನ ಹೇಳಿಕೆ ನೀಡಿದ್ದಾರೆ. ಎಲ್ಲ ಒಳ್ಳೆಯ ಸಿನಿಮಾಗಳಂತೆ “ಕಾಂತಾರ” ಜಾತಿ, ಧರ್ಮ, ಭಾಷೆಗಳನ್ನು ಮೀರಿ ದೇಶದ ಜನಗಳನ್ನು ಬೆಸೆಯುತ್ತಿದೆ. ಮನರಂಜನೆಯ ಮೂಲಕವೇ ಹಲವು ಸಾಮಾಜಿಕ ಸಮಸ್ಯೆಗಳ ಬಗ್ಗೆ ಜನರನ್ನು ಜಾಗೃತಗೊಳಿಸುತ್ತಿದೆ. ಅಂಥ ಸಿನಿಮಾವನ್ನು ಬಳಸಿ ಮೂಢನಂಬಿಕೆಯನ್ನೊ ಧರ್ಮಾಂಧತೆಯನ್ನೊ ಪ್ರಚೋದಿಸಿ ಜನಗಳನ್ನು ವಿಭಜಿಸುವ ಮಟ್ಟಕ್ಕೆ ಇಳಿದು ಬಿಟ್ಟರೆ ಇಂಥಾ ದೊಡ್ಡ ಗೆಲುವೂ ಮನುಷ್ಯತ್ವದ ದೊಡ್ಡ ಸೋಲಾಗಿ ಹೋದೀತು ಎಂದು ಫೇಸ್ ಬುಕ್ ನಲ್ಲಿ ಅವರು ಬರೆದುಕೊಂಡಿದ್ದಾರೆ.
ಅಲ್ಲದೇ, ಕೇವಲ ಓಟಿಗಾಗಿ ಪಟೇಲ್ ಗಾಂಧಿ ಬೋಸ್ ನೆಹ್ರೂ ಸಹಿತ ಕೋಟಿ ಕೋಟಿ ಸ್ವತಂತ್ರ್ಯ ಹೋರಾಟಗಾರರನ್ನೂ ಬಳಸುವ, ಬೈಯ್ಯುವ.. ರಾಷ್ಟ್ರ ಗೀತೆ, ಧ್ವಜ,ಲಾಂಛನ, ಕವಿಗಳನ್ನೂ ಬಿಡದೆ ಕಬಳಿಸಿದ ದ್ವೇಷದ ದಲ್ಲಾಳಿಗಳು ಸಿನಿಮಾಗಳನ್ನೂ ಕಬಳಿಸುವ ಮುನ್ನಒಂದು ಕ್ಷಣ ಯೋಚಿಸಿ. ನಮ್ಮ ಸಿನಿಮಾಗಳು ನಮ್ಮ ಹೆಮ್ಮೆ. ಅವುಗಳನ್ನು ಧರ್ಮಾಂಧ ರಾಜಕಾರಣದ ದಾಳಗಳಾಗುವುದು ಬೇಡ ಎಂದು ಕಿಶೋರ್ ಸುದೀರ್ಘ ಬರಹವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
Live Tv
[brid partner=56869869 player=32851 video=960834 autoplay=true]
ಭಾರತೀಯ ಸಿನಿಮಾ ರಂಗದ ಅನೇಕ ಕಲಾವಿದರು ಮತ್ತು ತಂತ್ರಜ್ಞರು ಕಾಂತಾರ (Kantara) ಸಿನಿಮಾ ನೋಡಿ ಮೆಚ್ಚಿಕೊಂಡಿದ್ದಾರೆ. ಅಲ್ಲದೇ ಇನ್ನೂ ಕೆಲವರು ಸಿನಿಮಾ ನೋಡಲು ತುದಿಗಾಲಲ್ಲಿ ನಿಂತಿದ್ದಾರೆ. ಬಾಲಿವುಡ್ ಖ್ಯಾತ ನಟಿ ಕಂಗನಾ ರಣಾವತ್ (Kangana Ranaut) ಕೂಡ ಕಾಂತಾರ ಸಿನಿಮಾ ನೋಡುವುದಾಗಿ ಹೇಳಿದ್ದಾರೆ. ‘ಕಾಂತಾರ ಸಿನಿಮಾ ಕುತೂಹಲ ಹೆಚ್ಚಿಸಿದೆ. ಸಿನಿಮಾ ನೋಡಲು ನಾನೂ ಕಾಯುತ್ತಿದ್ದೇನೆ. ಶೀಘ್ರದಲ್ಲೇ ಸಿನಿಮಾ ನೋಡುವೆ’ ಎಂದು ಹೇಳಿದ್ದಾರೆ.
ಬಾಲಿವುಡ್ ಸಿನಿಮಾಗಳನ್ನು ತೆಗಳುತ್ತಲೇ ಬಂದಿರುವ ಕಂಗನಾ, ಇತ್ತೀಚಿನ ದಿನಗಳಲ್ಲಿ ದಕ್ಷಿಣದ ಸಿನಿಮಾಗಳನ್ನು ಹೊಗಳುತ್ತಿದ್ದಾರೆ. ಅಲ್ಲದೇ, ದಕ್ಷಿಣ ಭಾರತದ ಹೀರೋಗಳ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡುತ್ತಿದ್ದಾರೆ. ಬಾಲಿವುಡ್ ನಟರನ್ನು ಸದಾ ಕಾಲೆಳೆಯುವ ಕಂಗನಾ, ಈ ಹಿಂದೆ ಯಶ್ ಅವರನ್ನು ಹೊಗಳಿದ್ದರು. ಇದೀಗ ಕಾಂತಾರ ಸಿನಿಮಾದ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ. ಶೀಘ್ರದಲ್ಲೇ ಸಿನಿಮಾ ನೋಡುವುದಾಗಿಯೂ ತಿಳಿಸಿದ್ದಾರೆ. ಇದನ್ನೂ ಓದಿ: ‘ಬಿಗ್ ಬಾಸ್ ಸೀಸನ್ 9’ರ ಮೊದಲ ಮಹಿಳಾ ಕ್ಯಾಪ್ಟನ್ ಆಗಿ ದೀಪಿಕಾ ದಾಸ್ ಆಯ್ಕೆ
ಬಾಕ್ಸ್ ಆಫೀಸ್ (Box Office) ವಿಚಾರದಲ್ಲೂ ಸಿನಿಮಾ ಹಿಂದೆ ಉಳಿದಿಲ್ಲ. ಈ ಪೈಕಿ ಶನಿವಾರದಂದು ಚಿತ್ರದ ಹಿಂದಿ ಅವತರಣಿಕೆಯು ಉತ್ತರ ಭಾರತದಲ್ಲಿ 2.75 ಕೋಟಿ ರೂ. ಸಂಗ್ರಹಿಸಿದೆ. ಹಿಂದಿ ಅವತರಣಿಕೆಯು ಶುಕ್ರವಾರವಷ್ಟೇ (ಅ. 14) ಬಿಡುಗಡೆಯಾಗಿತ್ತು. ಮೊದಲ ದಿನದ ಕಲೆಕ್ಷನ್ಗೆ ಹೋಲಿಸಿದರೆ, ಎರಡನೆಯ ದಿನ ದ್ವಿಗುಣ ಕಲೆಕ್ಷನ್ ಆಗಿರುವುದು ವಿಶೇಷ. ಇನ್ನು, ಕನ್ನಡ, ತೆಲುಗು ಮತ್ತು ತಮಿಳು ಅವತರಣಿಕೆಯಿಂದ 12 ಕೋಟಿ ರೂ. ಗಳಿಕೆ ಆಗಿದೆ. ಒಟ್ಟಾರೆ, ಶನಿವಾರವೊಂದೇ ‘ಕಾಂತಾರ‘ ಚಿತ್ರವು ನಾಲ್ಕು ಭಾಷೆಗಳಿಂದ ಸೇರಿ 15 ಕೋಟಿ ರೂ. ಗಳಿಕೆ ಕಂಡಿದೆ. ‘ಕಾಂತಾರ’ ಚಿತ್ರದ ಕನ್ನಡ ಅವತರಿಣಿಕೆಯು ಸೆ. 30ರಂದು ಬಿಡುಗಡೆಯಾಗಿದ್ದು, ಶನಿವಾರಕ್ಕೆ 16 ದಿನಗಳಾಗಿವೆ. 16ನೇ ದಿನ ನಾಲ್ಕು ಭಾಷೆಗಳಿಂದ 15 ಕೋಟಿ ರೂ. ಗಳಿಕೆ ಮಾಡಿ ಹೊಸ ದಾಖಲೆ ಮಾಡಿದೆ.
‘ಕಾಂತಾರ’, ಮನುಷ್ಯ ಮತ್ತು ಪ್ರಕೃತಿಯ ನಡುವಿನ ಸಂಘರ್ಷದ ಕಥೆಯಾಗಿದ್ದು, ಈ ಚಿತ್ರದಲ್ಲಿ ರಿಷಬ್ ಶೆಟ್ಟಿ (Rishabh Shetty) ಜೊತೆಗೆ ಸಪ್ತಮಿ ಗೌಡ, ಕಿಶೋರ್, ಅಚ್ಯುತ್ ಕುಮಾರ್, ಪ್ರಮೋದ್ ಶೆಟ್ಟಿ ಸೇರಿದಂತೆ ಹಲವು ಪ್ರತಿಭಾವಂತ ಕಲಾವಿದರ ದಂಡಿದೆ. ಚಿತ್ರಕ್ಕೆ ಅಜನೀಶ್ ಲೋಕನಾಥ್ ಅವರ ಸಂಗೀತ ಮತ್ತು ಅರವಿಂದ್ ಕಶ್ಯಪ್ ಛಾಯಾಗ್ರಹಣವಿದೆ. ಕನ್ನಡದ ಸಿನಿಮಾವೊಂದು ರಿಲೀಸ್ ಆಗಿ 16 ದಿನಗಳ ನಂತರವೂ ಈ ಪ್ರಮಾಣದಲ್ಲಿ ಹಣ ಹರಿದು ಬಂದಿದ್ದು, ಇದೇ ಮೊದಲು ಎಂದು ಹೇಳಲಾಗುತ್ತಿದೆ. ಅಲ್ಲದೇ, ಇದೊಂದು ಕೇಳರಿಯದಂತಹ ದಾಖಲೆ ಎಂದು ಬಣ್ಣಿಸಲಾಗುತ್ತಿದೆ.
Live Tv
[brid partner=56869869 player=32851 video=960834 autoplay=true]
ಭಾರತೀಯ ಸಿನಿಮಾ ರಂಗದ ಅನೇಕ ಕಲಾವಿದರು ಕಾಂತಾರ (Kantara) ಸಿನಿಮಾ ಮೆಚ್ಚಿಕೊಂಡು ಸೋಷಿಯಲ್ ಮೀಡಿಯಾದಲ್ಲಿ ತಮ್ಮ ಅನಿಸಿಕೆಯನ್ನು ಬರೆಯುತ್ತಿದ್ದಾರೆ. ಈಗಾಗಲೇ ಧನುಷ್, ಪ್ರಭಾಸ್, ಕಾರ್ತಿ, ಅನುಷ್ಕಾ ಶೆಟ್ಟಿ ಸೇರಿದಂತೆ ಸಾಕಷ್ಟು ಕಲಾವಿದರು ಚಿತ್ರದ ಬಗ್ಗೆ ಹೊಗಳಿದ್ದಾರೆ. ರಿಷಬ್ ನಟನೆಯನ್ನು ಕೊಂಡಾಡಿದ್ದರು. ಇದೀಗ ಶಿಲ್ಪಾ ಶೆಟ್ಟಿ ಅವರ ಸರದಿ. ಮೂಲತಃ ಕರಾವಳಿಯ ಹುಡುಗಿಯಾಗಿರುವ ಶಿಲ್ಪಾ (Shilpa Shetty) ಕಾಂತಾರ ಚಿತ್ರಕ್ಕೆ ತಮ್ಮದೇ ಆದ ರೀತಿಯಲ್ಲಿ ಬಣ್ಣಿಸಿದ್ದಾರೆ.
ಓ ಮೈ ಗಾಡ್ ಎಂದು ಅಚ್ಚರಿಯ ಮೂಲಕವೇ ಸಿನಿಮಾದ ಬಗ್ಗೆ ಅನಿಸಿಕೆಗಳನ್ನು ಬರೆದಿರುವ ಶಿಲ್ಪಾ, ‘ಕಾಂತಾರ ಚಿತ್ರವನ್ನು ಇದೀಗ ಚಿತ್ರಮಂದಿರದಲ್ಲಿ ನೋಡಿದೆ. ನರೇಟಿವ್ ಅದ್ಭುತವಾಗಿದೆ. ಕ್ಲೈಮ್ಯಾಕ್ಸ್ ನೋಡಿದ ನಂತರ ಗೂಸ್ ಬಂಪ್ಸ್ ಬಂತು. ಈ ಸಿನಿಮಾ ಪ್ರೇಕ್ಷಕರನ್ನು ಬೇರೆ ಜಗತ್ತಿಗೆ ಕರೆದುಕೊಂಡು ಹೋಗುತ್ತದೆ. ನಾನು ಮೂಲತಃ ಅದೇ ನಾಡಿನವಳು ಆಗಿದ್ದರಿಂದ, ವಾಪಸ್ಸು ನನ್ನ ತಾಯಿ ನೆಲಕ್ಕೆ ನನ್ನನ್ನು ಸಿನಿಮಾ ಕರೆದುಕೊಂಡು ಹೋಯಿತು ಎಂದು ಬರೆದುಕೊಂಡಿದ್ದಾರೆ. ರಿಷಬ್ ಶೆಟ್ಟಿ (Rishabh Shetty) ಪ್ರತಿಭೆಯನ್ನೂ ಕೊಂಡಾಡಿದ್ದಾರೆ. ಇದನ್ನೂ ಓದಿ: ‘ಬಿಗ್ ಬಾಸ್ ಸೀಸನ್ 9’ರ ಮೊದಲ ಮಹಿಳಾ ಕ್ಯಾಪ್ಟನ್ ಆಗಿ ದೀಪಿಕಾ ದಾಸ್ ಆಯ್ಕೆ
ಬಾಕ್ಸ್ ಆಫೀಸಿನಲ್ಲಿ ದಾಖಲೆ ಬರೆದ ಕಾಂತಾರ
ಹೊಂಬಾಳೆ ಫಿಲಂಸ್ ನಿರ್ಮಾಣದ ‘ಕಾಂತಾರ’ ಶನಿವಾರ (ಅ. 15) ಹೊಸ ದಾಖಲೆ ಸೃಷ್ಟಿ ಮಾಡಿದೆ. ಬಿಡುಗಡೆಯಾದ 16ನೇ ದಿನಕ್ಕೆ 15 ಕೋಟಿ ರೂ. ಸಂಗ್ರಹಿಸುವ ಮೂಲಕ ಅತೀ ಹೆಚ್ಚು ಗಳಿಕೆ ಮಾಡಿದೆ. ಇಡೀ ಜಗತ್ತೇ ಕನ್ನಡ ಚಿತ್ರರಂಗದತ್ತ ತಿರುಗಿ ನೋಡುವಂತೆ ಮಾಡಿದ ‘ಕೆಜಿಎಫ್’ ನಿರ್ಮಾಪಕರಾದ ವಿಜಯ್ ಕುಮಾರ್ ಕಿರಗಂದೂರು ನಿರ್ಮಾಣದ ‘ಕಾಂತಾರ’ ಚಿತ್ರದ ಕನ್ನಡ ಅವತರಣಿಕೆಯು ಸೆಪ್ಟೆಂಬರ್ 30ರಂದು ಕರ್ನಾಟಕ ಸೇರಿದಂತೆ ಬೇರೆ ರಾಜ್ಯಗಳಲ್ಲೂ ಬಿಡುಗಡೆಯಾಯಿತು. ಚಿತ್ರಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾದ ಹಿನ್ನೆಲೆಯಲ್ಲಿ ಅಕ್ಟೋಬರ್ 14,15 ಮತ್ತು 16ರಂದು ಕ್ರಮವಾಗಿ ತೆಲುಗು, ಹಿಂದಿ ಮತ್ತು ತಮಿಳಿನಲ್ಲಿ ಬಿಡುಗಡೆ ಮಾಡಲಾಯಿತು.
ಈ ಪೈಕಿ ಶನಿವಾರದಂದು ಚಿತ್ರದ ಹಿಂದಿ ಅವತರಣಿಕೆಯು ಉತ್ತರ ಭಾರತದಲ್ಲಿ 2.75 ಕೋಟಿ ರೂ. ಸಂಗ್ರಹಿಸಿದೆ. ಹಿಂದಿ ಅವತರಣಿಕೆಯು ಶುಕ್ರವಾರವಷ್ಟೇ (ಅ. 14) ಬಿಡುಗಡೆಯಾಗಿತ್ತು. ಮೊದಲ ದಿನದ ಕಲೆಕ್ಷನ್ಗೆ ಹೋಲಿಸಿದರೆ, ಎರಡನೆಯ ದಿನ ದ್ವಿಗುಣ ಕಲೆಕ್ಷನ್ ಆಗಿರುವುದು ವಿಶೇಷ. ಇನ್ನು, ಕನ್ನಡ, ತೆಲುಗು ಮತ್ತು ತಮಿಳು ಅವತರಣಿಕೆಯಿಂದ 12 ಕೋಟಿ ರೂ. ಗಳಿಕೆ ಆಗಿದೆ. ಒಟ್ಟಾರೆ, ಶನಿವಾರವೊಂದೇ ‘ಕಾಂತಾರ‘ ಚಿತ್ರವು ನಾಲ್ಕು ಭಾಷೆಗಳಿಂದ ಸೇರಿ 15 ಕೋಟಿ ರೂ. ಗಳಿಕೆ ಕಂಡಿದೆ. ‘ಕಾಂತಾರ’ ಚಿತ್ರದ ಕನ್ನಡ ಅವತರಿಣಿಕೆಯು ಸೆ. 30ರಂದು ಬಿಡುಗಡೆಯಾಗಿದ್ದು, ಶನಿವಾರಕ್ಕೆ 16 ದಿನಗಳಾಗಿವೆ. 16ನೇ ದಿನ ನಾಲ್ಕು ಭಾಷೆಗಳಿಂದ 15 ಕೋಟಿ ರೂ. ಗಳಿಕೆ ಮಾಡಿ ಹೊಸ ದಾಖಲೆ ಮಾಡಿದೆ.
‘ಕಾಂತಾರ’, ಮನುಷ್ಯ ಮತ್ತು ಪ್ರಕೃತಿಯ ನಡುವಿನ ಸಂಘರ್ಷದ ಕಥೆಯಾಗಿದ್ದು, ಈ ಚಿತ್ರದಲ್ಲಿ ರಿಷಬ್ ಶೆಟ್ಟಿ ಜೊತೆಗೆ ಸಪ್ತಮಿ ಗೌಡ, ಕಿಶೋರ್, ಅಚ್ಯುತ್ ಕುಮಾರ್, ಪ್ರಮೋದ್ ಶೆಟ್ಟಿ ಸೇರಿದಂತೆ ಹಲವು ಪ್ರತಿಭಾವಂತ ಕಲಾವಿದರ ದಂಡಿದೆ. ಚಿತ್ರಕ್ಕೆ ಅಜನೀಶ್ ಲೋಕನಾಥ್ ಅವರ ಸಂಗೀತ ಮತ್ತು ಅರವಿಂದ್ ಕಶ್ಯಪ್ ಛಾಯಾಗ್ರಹಣವಿದೆ. ಕನ್ನಡದ ಸಿನಿಮಾವೊಂದು ರಿಲೀಸ್ ಆಗಿ 16 ದಿನಗಳ ನಂತರವೂ ಈ ಪ್ರಮಾಣದಲ್ಲಿ ಹಣ ಹರಿದು ಬಂದಿದ್ದು, ಇದೇ ಮೊದಲು ಎಂದು ಹೇಳಲಾಗುತ್ತಿದೆ. ಅಲ್ಲದೇ, ಇದೊಂದು ಕೇಳರಿಯದಂತಹ ದಾಖಲೆ ಎಂದು ಬಣ್ಣಿಸಲಾಗುತ್ತಿದೆ.
Live Tv
[brid partner=56869869 player=32851 video=960834 autoplay=true]
ಹೊಂಬಾಳೆ ಫಿಲಂಸ್ ನಿರ್ಮಾಣದ ‘ಕಾಂತಾರ’ (Kantara) ಶನಿವಾರ (ಅ. 15) ಹೊಸ ದಾಖಲೆ ಸೃಷ್ಟಿ ಮಾಡಿದೆ. ಬಿಡುಗಡೆಯಾದ 16ನೇ ದಿನಕ್ಕೆ 15 ಕೋಟಿ ರೂ. ಸಂಗ್ರಹಿಸುವ ಮೂಲಕ ಅತೀ ಹೆಚ್ಚು ಗಳಿಕೆ ಮಾಡಿದೆ. ಕನ್ನಡದ ಸಿನಿಮಾವೊಂದು ರಿಲೀಸ್ ಆಗಿ 16 ದಿನಗಳ ನಂತರವೂ ಈ ಪ್ರಮಾಣದಲ್ಲಿ ಹಣ ಹರಿದು ಬಂದಿದ್ದು, ಇದೇ ಮೊದಲು ಎಂದು ಹೇಳಲಾಗುತ್ತಿದೆ. ಅಲ್ಲದೇ, ಇದೊಂದು ಕೇಳರಿಯದಂತಹ ದಾಖಲೆ ಎಂದು ಬಣ್ಣಿಸಲಾಗುತ್ತಿದೆ.
ಇಡೀ ಜಗತ್ತೇ ಕನ್ನಡ ಚಿತ್ರರಂಗದತ್ತ ತಿರುಗಿ ನೋಡುವಂತೆ ಮಾಡಿದ ‘ಕೆಜಿಎಫ್’ ನಿರ್ಮಾಪಕರಾದ ವಿಜಯ್ ಕುಮಾರ್ ಕಿರಗಂದೂರು ನಿರ್ಮಾಣದ ‘ಕಾಂತಾರ’ ಚಿತ್ರದ ಕನ್ನಡ ಅವತರಣಿಕೆಯು ಸೆಪ್ಟೆಂಬರ್ 30ರಂದು ಕರ್ನಾಟಕ ಸೇರಿದಂತೆ ಬೇರೆ ರಾಜ್ಯಗಳಲ್ಲೂ ಬಿಡುಗಡೆಯಾಯಿತು. ಚಿತ್ರಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾದ ಹಿನ್ನೆಲೆಯಲ್ಲಿ ಅಕ್ಟೋಬರ್ 14,15 ಮತ್ತು 16ರಂದು ಕ್ರಮವಾಗಿ ತೆಲುಗು, ಹಿಂದಿ ಮತ್ತು ತಮಿಳಿನಲ್ಲಿ ಬಿಡುಗಡೆ ಮಾಡಲಾಯಿತು. ಇದನ್ನೂ ಓದಿ:ನಯನತಾರಾ- ವಿಘ್ನೇಶ್ ಶಿವನ್ ಬಾಡಿಗೆ ತಾಯ್ತನದ ಕೇಸ್ಗೆ ಬಿಗ್ ಟ್ವಿಸ್ಟ್
ಈ ಪೈಕಿ ಶನಿವಾರದಂದು ಚಿತ್ರದ ಹಿಂದಿ ಅವತರಣಿಕೆಯು ಉತ್ತರ ಭಾರತದಲ್ಲಿ 2.75 ಕೋಟಿ ರೂ. ಸಂಗ್ರಹಿಸಿದೆ. ಹಿಂದಿ ಅವತರಣಿಕೆಯು ಶುಕ್ರವಾರವಷ್ಟೇ (ಅ. 14) ಬಿಡುಗಡೆಯಾಗಿತ್ತು. ಮೊದಲ ದಿನದ ಕಲೆಕ್ಷನ್ಗೆ ಹೋಲಿಸಿದರೆ, ಎರಡನೆಯ ದಿನ ದ್ವಿಗುಣ ಕಲೆಕ್ಷನ್ ಆಗಿರುವುದು ವಿಶೇಷ. ಇನ್ನು, ಕನ್ನಡ, ತೆಲುಗು ಮತ್ತು ತಮಿಳು ಅವತರಣಿಕೆಯಿಂದ 12 ಕೋಟಿ ರೂ. ಗಳಿಕೆ ಆಗಿದೆ. ಒಟ್ಟಾರೆ, ಶನಿವಾರವೊಂದೇ ‘ಕಾಂತಾರ‘ ಚಿತ್ರವು ನಾಲ್ಕು ಭಾಷೆಗಳಿಂದ ಸೇರಿ 15 ಕೋಟಿ ರೂ. ಗಳಿಕೆ ಕಂಡಿದೆ. ‘ಕಾಂತಾರ’ ಚಿತ್ರದ ಕನ್ನಡ ಅವತರಿಣಿಕೆಯು ಸೆ. 30ರಂದು ಬಿಡುಗಡೆಯಾಗಿದ್ದು, ಶನಿವಾರಕ್ಕೆ 16 ದಿನಗಳಾಗಿವೆ. 16ನೇ ದಿನ ನಾಲ್ಕು ಭಾಷೆಗಳಿಂದ 15 ಕೋಟಿ ರೂ. ಗಳಿಕೆ ಮಾಡಿ ಹೊಸ ದಾಖಲೆ ಮಾಡಿದೆ.
‘ಕಾಂತಾರ’, ಮನುಷ್ಯ ಮತ್ತು ಪ್ರಕೃತಿಯ ನಡುವಿನ ಸಂಘರ್ಷದ ಕಥೆಯಾಗಿದ್ದು, ಈ ಚಿತ್ರದಲ್ಲಿ ರಿಷಬ್ ಶೆಟ್ಟಿ (Rishabh Shetty) ಜೊತೆಗೆ ಸಪ್ತಮಿ ಗೌಡ, ಕಿಶೋರ್, ಅಚ್ಯುತ್ ಕುಮಾರ್, ಪ್ರಮೋದ್ ಶೆಟ್ಟಿ ಸೇರಿದಂತೆ ಹಲವು ಪ್ರತಿಭಾವಂತ ಕಲಾವಿದರ ದಂಡಿದೆ. ಚಿತ್ರಕ್ಕೆ ಅಜನೀಶ್ ಲೋಕನಾಥ್ ಅವರ ಸಂಗೀತ ಮತ್ತು ಅರವಿಂದ್ ಕಶ್ಯಪ್ ಛಾಯಾಗ್ರಹಣವಿದೆ.
Live Tv
[brid partner=56869869 player=32851 video=960834 autoplay=true]
ರಿಷಬ್ ಶೆಟ್ಟಿ (Rishabh Shetty) ನಿರ್ದೇಶಿಸಿ, ನಟಿಸಿರುವ ಕಾಂತಾರ (Kantara) ಸಿನಿಮಾ ರಿಲೀಸ್ ಆಗಿದ ಇಂದಿಗೆ ಒಂದು ವಾರ ಕಳೆದಿದೆ. ಇಂದಿನಿಂದ ಎರಡನೇ ವಾರದ ಲೆಕ್ಕಾಚಾರ ಶುರುವಾಗಿದೆ. ಮೊದಲ ದಿನದಿಂದಲೂ ಬಾಕ್ಸ್ ಆಫೀಸ್ (Box Office) ವಿಚಾರದಲ್ಲಿ ಅಚ್ಚರಿಯನ್ನೇ ಮೂಡಿಸುತ್ತಾ ಬಂದಿರುವ ಸಿನಿಮಾ, ದಿನದಿಂದ ದಿನಕ್ಕೆ ಗಳಿಕೆಯಲ್ಲಿ ಏರುಗತಿಯಲ್ಲೇ ಸಾಗಿದೆ. ಹಾಗಾಗಿ ಸಹಜವಾಗಿಯೇ ಚಿತ್ರತಂಡ ಸಂಭ್ರಮದಲ್ಲಿದೆ.
ಕಾಂತಾರ ಸಿನಿಮಾ ರಿಲೀಸ್ ಆಗಿ ಇಂದಿಗೆ ಎಂಟನೇ ದಿನ. ಇವತ್ತೂ ಕೂಡ ಬಹುತೇಕ ಚಿತ್ರಮಂದಿರಗಳಲ್ಲಿ ಸಿನಿಮಾ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. ಈ ವಾರದಿಂದ ಚಿತ್ರಮಂದಿರಗಳ ಸಂಖ್ಯೆಯೂ ಹೆಚ್ಚಿವೆ. ಈ ವಾರವೂ ಹೇಳಿಕೊಳ್ಳುವಂತಹ ಯಾವುದೇ ಸಿನಿಮಾಗಳು ರಿಲೀಸ್ ಆಗದೇ ಇರುವ ಕಾರಣಕ್ಕಾಗಿ ಮತ್ತಷ್ಟು ಹಣ ಇದೇ ಸಿನಿಮಾಗೆ ಹರಿದು ಬರಲಿದೆ. ಇದನ್ನೂ ಓದಿ :ಕನ್ನಡದ ನಟಿ ದಿವ್ಯಾ ಶ್ರೀಧರ್ ಲವ್ ಜಿಹಾದ್ ಆರೋಪಕ್ಕೆ ಪತಿ ಅಮ್ಜಾದ್ ಖಾನ್ ಪ್ರತಿಕ್ರಿಯೆ
ಸಿನಿಮಾ ರಿಲೀಸ್ ಆದ ಮೊದಲ ದಿನವೇ 4 ರಿಂದ 5 ಕೋಟಿ ಕಲೆಕ್ಷನ್ (Collection) ಮಾಡಿದೆ ಎಂದು ಅಂದಾಜಿಸಲಾಗಿತ್ತು. ಎರಡನೇ ದಿನ 6.50 ಕೋಟಿ, ಮೂರನೇ ದಿನ 8 ರಿಂದ 9 ಕೋಟಿ, ನಾಲ್ಕನೇ ದಿನ 5 ಕೋಟಿ, ಐದನೇ ದಿನ 7 ಕೋಟಿ, ಆರನೇ ದಿನ 8 ಕೋಟಿ, ಏಳನೇ ದಿನ 6 ಕೋಟಿ ಕಲೆಕ್ಷನ್ ಆಗಿದೆ ಎಂದು ಅಂದಾಜು ಲೆಕ್ಕಾಚಾರಗಳು ಹರಿದಾಡುತ್ತಿವೆ. ಎಂಟನೇ ದಿನ ಕೂಡ ಬಹುತೇಕ ಚಿತ್ರಮಂದಿರಗಳು ಹೌಸ್ ಫುಲ್ ಆಗಿರುವುದರಿಂದ 6 ಕೋಟಿ ರೂಪಾಯಿ ಬರಬಹುದು ಎಂದು ಅಂದಾಜಿಸಲಾಗುತ್ತಿದೆ. ಅಲ್ಲಿಗೇ ಸಿನಿಮಾ ರಿಲೀಸ್ ಆದ ಒಂದೇ ವಾರಕ್ಕೆ 50 ಕೋಟಿ ಹಣ ಬಂದಿದೆ ಎಂದು ಹೇಳಲಾಗುತ್ತಿದೆ.
ಈ ಕುರಿತು ಸಿನಿಮಾ ತಂಡವಾಗಲಿ, ನಿರ್ಮಾಪಕರಾಗಲಿ ಅಧಿಕೃತ ಮಾಹಿತಿ ಕೊಡದೇ ಇದ್ದರೂ, ವಿತರಕರ ವಲಯದಿಂದ ಮತ್ತು ಸಿನಿ ಪಂಡಿತರಿಂದ ಇಂಥದ್ದೊಂದು ಲೆಕ್ಕಾಚಾರವಂತೂ ನಡೆದಿದೆ. ಈವರೆಗೂ ಕಾಂತಾರದಿಂದ ಬಂದಿರುವ ಹಣವೆಷ್ಟು ಎನ್ನುವುದನ್ನು ಹೊಂಬಾಳೆ ಫಿಲ್ಮ್ಸ್ (Hombale Films) ಬಹಿರಂಗ ಪಡಿಸಬೇಕಿದೆ. ಬಹುಶಃ ಮುಂದಿನ ದಿನಗಳಲ್ಲಿ ಅಧಿಕೃತವಾಗಿಯೇ ಬಾಕ್ಸ್ ಆಫೀಸ್ ಕಲೆಕ್ಷನ್ ಬಗ್ಗೆ ಮಾಹಿತಿ ಸಿಗಬಹುದು.
Live Tv
[brid partner=56869869 player=32851 video=960834 autoplay=true]
ಕಾಂತಾರ ಸಿನಿಮಾದ ನಂತರ ಹುಟ್ಟಿಕೊಂಡ ಸೈದ್ಧಾಂತಿಕ ಮತ್ತು ರಾಜಕೀಯ ಭಿನ್ನಾಭಿಪ್ರಾಯಗಳು ಒಂದು ಕಡೆ. ಕನ್ನಡ ಸಿನಿಮಾಗಳಲ್ಲಿನ ಪ್ರಾದೇಶಿಕತೆ ಮತ್ತು ಸೊಗಡಿನ ಚರ್ಚೆ ಒಂದು ಕಡೆ. ಮೊದಲನೆಯ ಚರ್ಚೆಯನ್ನು ಗಂಭೀರವಾಗಿ ಪರಿಗಣಿಸುವ ಅಗತ್ಯವಿಲ್ಲ. ಎರಡನೆಯ ಚರ್ಚೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕು.. ಕನ್ನಡ ಸಿನಿಮಾಗಳಲ್ಲಿ ಇದುವರೆಗೆ ಬರೀ ಬೆಂಗಳೂರು, ಮಂಡ್ಯ, ಮೈಸೂರು, ಮಲೆನಾಡಿನ ಪ್ರಾದೇಶಿಕತೆ ಅಥವಾ ಪರಿಸರ ಅಥವಾ ಸೊಗಡು ಮಾತ್ರ ಇರುತ್ತಿತ್ತು. ಈಗ ಕರಾವಳಿಯ ಪ್ರಾದೇಶಿಕತೆ ಮತ್ತು ಸೊಗಡು ಹೆಚ್ಚೆಚ್ಚು ಪ್ರಸಿದ್ಧವಾಗುತ್ತಿದೆ ಆದರೆ “ಎಂದಿನಂತೆ ಉತ್ತರ ಕರ್ನಾಟಕದ ಪ್ರಾದೇಶಿಕತೆ ಮತ್ತು ಸೊಗಡನ್ನು ಕನ್ನಡ ಚಿತ್ರರಂಗ ಕಡೆಗಣಿಸುತ್ತದೆ” ಎಂಬುದು. ಉತ್ತರ ಕರ್ನಾಟಕದ ಸೊಗಡನ್ನು ಹಾಸ್ಯಾಸ್ಪದವಾಗಿ ಮಾತ್ರ ಬಳಸಿಕೊಳ್ಳಲಾಗುತ್ತಿದೆ ಎಂಬು ದೂರು ಮೊದಲಿನಿಂದಲೂ ಕೇಳುತ್ತಿದೆ, ಈಗಲೂ ಇದೆ. ಉತ್ತರ ಕರ್ನಾಟಕದಲ್ಲಿ ಒಂದು ಫಿಲ್ಮ್ ಚೇಂಬರ್ ಮಾಡಿದರೆ ಈ ಸಮಸ್ಯೆ ಸರಿಹೋಗುತ್ತದೆ, ಎಲ್ಲದಕ್ಕೂ ಬೆಂಗಳೂರಿನ ಮೇಲೆ ಅವಲಂಬಿತವಾಗುವುದರಿಂದಲೇ ಹೀಗಾಗಿದೆ, ಉತ್ತರ ಕರ್ನಾಟಕ ರಾಜಕೀಯ, ಆರ್ಥಿಕ ಮತ್ತು ಸಾಮಾಜಿಕವಾಗಿ ಕಡೆಗಣಿಸಲ್ಪಟ್ಟಿದೆ, ಈಗ ಸಾಂಸ್ಕೃತಿಕವಾಗಿಯೂ ಕಡೆಗಣಿಸಲ್ಪಡುತ್ತಿದೆ ಎಂಬುದು ಸಾಮಾಜಿಕ ತಾಣಗಳ ಕಮೆಂಟ್ಸುಗಳಲ್ಲಿ ವ್ಯಕ್ತವಾಗುತ್ತಿರುವ ಅಭಿಪ್ರಾಯಗಳು.
ವಾಸ್ತವದಲ್ಲಿ “ಫಿಲ್ಮ್ ಚೇಂಬರ್” ಮತ್ತು “ಪ್ರಾದೇಶಿಕತೆ” ಎರಡಕ್ಕೂ ಸಂಬಂಧವೇ ಇಲ್ಲ. ಸದ್ಯಕ್ಕೆ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಹೆಚ್ಚಾಗಿ ಸಕ್ರಿಯವಾಗಿರುವುದು ಸಿನಿಮಾದ ಹೆಸರುಗಳನ್ನು ನೋಂದಾಯಿಸಿಕೊಳ್ಳುವ ಕೆಲಸದಲ್ಲಿ ಮತ್ತು ಯಾವುದಾದರೂ ಸಮಸ್ಯೆ ಅಥವ ವಿವಾದ ಹುಟ್ಟಿಕೊಂಡಾಗ ಅದನ್ನು ಬಗೆಹರಿಸುವ ಪ್ರಯತ್ನದಲ್ಲಿ. ಸಿನಿಮಾದ ಹೆಸರು ನೋಂದಾಯಿಸಲು ಮತ್ತು ಸಿನಿಮಾದ ಸೆನ್ಸಾರ್ ಮಾಡಿಸಲು ಬೆಂಗಳೂರಿನ ಮೇಲೆ ಅವಲಂಬಿತವಾಗಬೇಕು ಹೊರತು, ಒಟ್ಟು ಸಿನಿಮಾ ಮಾಡಲು ಬೆಂಗಳೂರನ್ನು ಅವಲಂಬಿಸುವ ಅಗತ್ಯವೇ ಇಲ್ಲ. ಸೆನ್ಸಾರ್ ಮಂಡಳಿ ಕೇಂದ್ರ ಸರ್ಕಾರದ ಅಧೀನದಲ್ಲಿರುವ ಸಂಸ್ಥೆ, ಅದು ರಾಜ್ಯ ರಾಜಧಾನಿಯಲ್ಲದೇ ಬೇರೆಲ್ಲೂ ಬ್ರಾಂಚ್ ಆಫೀಸ್ ತೆರೆಯುವುದಿಲ್ಲ. ಸಿನಿಮಾ ಹೆಸರಿನ ದೃಢೀಕರಣ ಪತ್ರವಷ್ಟೇ ಚಲನಚಿತ್ರ ವಾಣಿಜ್ಯ ಮಂಡಳಿ ಮತ್ತು ಸೆನ್ಸಾರ್ ಮಂಡಳಿಯ ನಡುವೆ ಇರುವ ನಂಟು. ಉಳಿದಂತೆ ಸಿನಿಮಾದ ಬೇರೆ ಎಲ್ಲ ಕೆಲಸಗಳನ್ನು ಕರ್ನಾಟಕದ ಯಾವುದೇ ಭಾಗದಲ್ಲಿ ಕುಳಿತು ಮಾಡಿಕೊಳ್ಳಬಹುದು. ತಂತ್ರಜ್ಞರು, ನಟರು ಮತ್ತು ಚಿತ್ರೀಕರಣಕ್ಕೆ ಅಗತ್ಯ ಉಪಕರಣಗಳನ್ನು ಸರಬರಾಜು ಮಾಡುವವರನ್ನು ಫೋನ್ ಮೂಲಕ ಸಂಪರ್ಕಿಸಿ, ವಿಡಿಯೋ ಕಾಲ್ ಮೂಲಕ ಭೇಟಿ ಮಾಡಿ ಮಾತನಾಡಿಕೊಂಡು, ಆನ್-ಲೈನ್ ಪೇಮೆಂಟ್ ಮಾಡಿ, contract mail confirmation ತೆಗೆದುಕೊಂಡು, physical documentationಗಳನ್ನು ಕೊರಿಯರ್ ಅಥವ speed post ಮೂಲಕ ವಿನಿಮಯ ಮಾಡಿಕೊಳ್ಳಬಹುದು.. ಇದನ್ನೂ ಓದಿ: ಮಣಿರತ್ನಂ ನಿರ್ದೇಶನದ ‘ಪೊನ್ನಿಯಿನ್ ಸೆಲ್ವನ್’ ಮೂರು ದಿನದ ಗಳಿಕೆ 230 ಕೋಟಿಗೂ ಅಧಿಕ
ಮಂಗಳೂರು ಸಹ ಬೆಂಗಳೂರಿನಿಂದ ಬಲುದೂರವೇ ಇದ್ದರೂ ಕನ್ನಡ ಸಿನಿಮಾದಲ್ಲಿ ಕರಾವಳಿಯ ಪ್ರಾದೇಶಿಕತೆ ಮತ್ತು ಸೊಗಡು ಪಸರಿಸಲು ಸಾಧ್ಯವಾಗುತ್ತದೆಂದರೆ, ಉತ್ತರ ಕರ್ನಾಟಕದ ಪ್ರಾದೇಶಿಕತೆ ಮತ್ತು ಸೊಗಡು ಸಿನಿಮಾದಲ್ಲಿ ಬಳಕೆಯಾಗಲು ಬೆಂಗಳೂರು ದೂರವೆಂಬುದು ಕಾರಣ ಹೇಗಾಗುತ್ತದೆ!? ಜಿಲ್ಲೆಗೊಂದರಂತೆ ಚಲನಚಿತ್ರ ವಾಣಿಜ್ಯ ಮಂಡಳಿಯನ್ನು ತೆರೆದರೂ ಅದು ಸಾಧ್ಯವಾಗುವುದಿಲ್ಲ. ತಮಿಳು, ತೆಲುಗು, ಮಲಯಾಳಂ, ಹಿಂದಿ, ಮರಾಠಿ, ಬೆಂಗಾಲಿ ಎಲ್ಲ ಭಾಷೆಗಳ ಸಿನಿಮಾರಂಗಗಳಲ್ಲೂ ತಲಾ ಒಂದೊಂದೇ ಚಲನಚಿತ್ರ ವಾಣಿಜ್ಯ ಮಂಡಳಿಗಳಿದೆ. ಆದರೂ ಆಯಾ ಭಾಷೆಗಳ ಸಿನಿಮಾಗಳಲ್ಲಿ ಆಯಾ ಭಾಗದ ಎಲ್ಲ ಪ್ರಾದೇಶಿಕ ಸೊಗಡನ್ನು ಸಿನಿಮಾಗಳ ಮೂಲಕ ಜನರಿಗೆ ಪರಿಚಯ ಮಾಡಲಾಗಿದೆ ಮತ್ತು ಅಲ್ಲಿನ ಪ್ರೇಕ್ಷಕರಿಗೆ ಆಪ್ತವಾಗಿಸಲಾಗಿದೆ. ಅಲ್ಲಿ ಸಾಧ್ಯವಾದದ್ದು ಕನ್ನಡದಲ್ಲಿ ಯಾಕೆ ಸಾಧ್ಯವಾಗಿಲ್ಲ..?
ಇಚ್ಛಾಶಕ್ತಿಯ ಕೊರತೆ..!?
ಬೆಂಗಳೂರು, ಮೈಸೂರು, ಮಲೆನಾಡು ಮತ್ತು ಕರಾವಳಿ ಭಾಗಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಉತ್ತಮ ನಟರ, ರಂಗಭೂಮಿಯ ಹಿನ್ನೆಲೆ, ಇತಿಹಾಸ ಉತ್ತರ ಕರ್ನಾಟಕದ ಭಾಗದಲ್ಲಿದೆ. ಸಾಹಿತ್ಯಾಸಕ್ತರು, ಓದುಗರು ಮತ್ತು ಸಾಹಿತಿಗಳು ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಹಾಗಿದ್ದೂ ಉತ್ತರ ಕರ್ನಾಟಕ ಎಂದರೆ ಸೂಳಿಮಗನ, ಅವನೌನ, ಬೋಸುಡಿಮಗನಾ, ಬಾಡ್ಕೋ, ಹಡ್ಶಿಮಗನಾ, ಹಡಾ ಎಂಬಿತ್ಯಾದಿ “ಬೈಗುಳಗಳೇ ನಮಗೆ ಭೂಷಣ, ಅವು ಬೈಗುಳಗಳಲ್ಲ ಬಹುಮಾನ” ಎಂದು ಬಿಂಬಿಸುತ್ತಾ, ಮೊದಲಿನಿಂದಲೂ ಉತ್ತರ ಕರ್ನಾಟಕ ಎಂದರೆ ಬೈಗುಳದ ಪದಗಳ ತವರು ಎಂಬ ತಪ್ಪು ಕಲ್ಪನೆಯನ್ನು ಮೂಡಿಸಲಾಗಿದೆ. ಇಂದಿನ 5G ಕಾಲದ ಉತ್ತರ ಕರ್ನಾಟಕದ Instagram, Facebook, YouTube Reels starಗಳು, double meaning short film ಶೂರರು ಉತ್ತರ ಕರ್ನಾಟಕ ಪ್ರಾದೇಶಿಕತೆ, ಪರಿಸರ ಮತ್ತು ಸೊಗಡನ್ನು ಅದೇ ರೀತಿಯಾಗಿ ಕಟ್ಟಿಕೊಡುತ್ತಿದ್ದಾರೆ. ಅದನ್ನು ಮೀರಿದ ಉತ್ತರ ಕರ್ನಾಟಕವನ್ನು ಯಾಕೆ ಕಟ್ಟಿಕೊಡುತ್ತಿಲ್ಲ? ಆ ಭಾಗದಲ್ಲಿ ಬರೆಯುವವರು ಕಡಿಮೆ ಇಲ್ಲ, ನಟಿಸುವವರು ಕಡಿಮೆ ಇಲ್ಲ, ಭೌಗೋಳಿಕವಾಗಿ ಸಾಕಷ್ಟು ವೈವಿದ್ಯತೆ ಇರುವ ಭಾಗ. ಉತ್ತರ ಕರ್ನಾಟಕ ಭಾಗದಿಂದ ಬಂದ ನಿರ್ಮಾಪಕರು, ನಟರು, ಬರಹಗಾರರು ಮತ್ತು ನಿರ್ದೇಶಕರುಗಳೂ ಸಹ ಸಿನಿಮಾದಲ್ಲಿ ಆ ಭಾಗದ ಪ್ರಾದೇಶಿಕತೆಯನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳದೇ ಇರುವುದು ಬೇಸರದ ವಿಚಾರವೇ.
ಕರ್ನಾಟಕದ ಒಂದು ಪ್ರಾದೇಶಿಕ ಸೊಗಡು ಕರ್ನಾಟಕದ ಇತರೆ ಭಾಗದ ಜನರಿಗೆ ಅರ್ಥವಾಗುವುದಿಲ್ಲ, ಆ ಕಾರಣಕ್ಕೆ ಸಿನಿಮಾಗಳಲ್ಲಿ ಬಳಕೆ ಆಗುತ್ತಿಲ್ಲ ಎಂಬುದು ಸುಳ್ಳು. ಕನ್ನಡದ ಮಕ್ಕಳ ಕರುಳ ಬಳ್ಳಿ ಒಂದೇ, ಕನ್ನಡದವರಿಗೆ ಕನ್ನಡವೇ ಅರ್ಥವಾಗುವುದಿಲ್ಲ ಅನ್ನುವ ನೆಪವನ್ನು ಒಪ್ಪಲಾಗದು. ಕೋಲಾರ-ಮುಳಬಾಗಿಲು ಭಾಗದ ಕನ್ನಡ ಮಿಶ್ರಿತ ತೆಲುಗು ಸೊಗಡನ್ನು ಬಳಸಿಕೊಂಡು ನಿರ್ಮಿಸಿದ “ಸಿನಿಮಾಬಂಡಿ” ಎಂಬ ಹೆಸರಿನ ಸಿನಿಮಾವನ್ನು ಆ ಭಾಷೆ ಅರ್ಥವಾಗದ, ಸಬ್ ಟೈಟಲ್ ಓದಲು ಬರದ ಹಲವಾರು ಕನ್ನಡಿಗರೂ ನೋಡಿ ಮೆಚ್ಚಿದ್ದಾರೆ.. “ಅಪರೇಷನ್ ಜಾವಾ” ಎಂಬ ಸಬ್ ಟೈಟಲ್ಸ್ ಇಲ್ಲದ ಅಪ್ಪಟ ಮಲಯಾಳಂ ಸಿನಿಮಾ ಬಗ್ಗೆ ಕನ್ನಡದ ಪ್ರೇಕ್ಷಕರು ಹೊಗಳಿ ಬರೆದಿದ್ದಾರೆ. ಉತ್ತರ ಕರ್ನಾಟಕದ ಭಾಗದಲ್ಲಿ “ಕಮರ್ಷಿಯಲ್” “ಮಾಸ್” “ಆಕ್ಷನ್” ಎನ್ನಿಸಿಕೊಳ್ಳುವ ಮಾದರಿಯ ಸಿನಿಮಾಗಳಿಗೆ ಸಿಕ್ಕುವ ಬೆಂಬಲ ಪ್ರಯೋಗಾತ್ಮಕ ಸಿನಿಮಾಗಳಿಗೆ ಸಿಕ್ಕಿದ್ದು ಕಡಿಮೆಯೇ. ಅಲ್ಲಿನ ಪ್ರಾದೇಶಿಕತೆ ಹಾಗೂ ಸೊಗಡನ್ನು ಗಂಭೀರವಾಗಿ ಮತ್ತು ಪರಿಣಾಮಕಾರಿಯಾಗಿ ಬಳಸಿಕೊಂಡು ಸಣ್ಣ ಮಟ್ಟದ ಪ್ರಯೋಗಗಳನ್ನು ಮಾಡುತ್ತಾ ಅಲ್ಲಿನ ನಿಜವಾದ ಉತ್ತರ ಕರ್ನಾಟಕವನ್ನು ಕಟ್ಟಿಕೊಡುವ ಪ್ರಯತ್ನ ಇನ್ನು ಮುಂದಾದರೂ ಆಗಬೇಕು..
ಸಿನಿಮಾ ಕೆಲಸಗಳಿಗೆ ಬೆಂಗಳೂರನ್ನು ಅವಲಂಬಿಸುವುದು ಬೇಕಾಗಿಲ್ಲ. ರಾಯಚೂರಿಗೆ ಹೈದರಾಬಾದ್ ಸಮೀಪದಲ್ಲಿದೆ, ಹುಬ್ಬಳ್ಳಿ-ಧಾರವಾಡ, ಬೆಳಗಾವಿಗೆ ಪುಣೆ ಹತ್ತಿರದಲ್ಲಿದೆ. ಕ್ಯಾಮರಾ ಲೆನ್ಸ್ ಇತ್ಯಾದಿ ಚಿತ್ರೀಕರಣಕ್ಕೆ ಅಗತ್ಯ ಉಪಕರಣಗಳನ್ನು ಬೆಂಗಳೂರಿನಿಂದ ತೆಗೆದುಕೊಳ್ಳುವ ಬದಲು ಪುಣೆ, ಮುಂಬೈ ಅಥವ ಹೈದರಾಬಾದಿನಿಂದ ಪಡೆದುಕೊಳ್ಳಬಹುದು. ಸಿನಿಮಾ ಚಿತ್ರೀಕರಣೋತ್ತರ ಕೆಲಸಗಳಿಗೆ ಹೆಚ್ಚಿನ ಸೌಲಭ್ಯಗಳು ಪುಣೆ, ಮುಂಬೈ ಮತ್ತು ಹೈದರಾಬಾದಿನಲ್ಲಿ ಸಿಗುತ್ತದೆ. ಬಂಡವಾಳ ಹೂಡಿಕೆ ಸಾಧ್ಯವಾದರೆ ಉತ್ತರ ಕರ್ನಾಟಕದಲ್ಲಿ Edit, Dubbing, Sound Design suit ಹಾಕಿಕೊಳ್ಳುವುದು ಸಾಧ್ಯ. Foley ಕೆಲಸಗಳನ್ನು ಮುಂಬೈ, ಹೈದರಾಬಾದ್ ಅಥವ ಪುಣೆ ಸ್ಟುಡಿಯೋಗಳಿಂದ ಮಾಡಿಸಿಕೊಳ್ಳಬಹುದು. ಕಲರ್ ಗ್ರೇಡಿಂಗ್ ಮಾಡಲು DaVinci Resolve software ಉಚಿತವಾಗಿ ಸಿಗುತ್ತದೆ, freelancing colorists ಸಿಗುತ್ತಾರೆ. ಇನ್ನು ಬೇಕಿರುವುದು ಇಚ್ಛಾಶಕ್ತಿ ಮತ್ತು ಸಿನಿಮಾ ಪ್ರೇಮಿಗಳ ಬೆಂಬಲ. ಸಾಂಸ್ಕೃತಿಕವಾಗಿ ದೃಶ್ಯಮಾಧ್ಯಮದ ಮೂಲಕ ಉತ್ತರ ಕರ್ನಾಟಕದ ಪ್ರಾದೇಶಿಕತೆ ಮತ್ತು ಸೊಗಡನ್ನು ಪಸರಿಸುವ ಕೆಲಸ..
Live Tv
[brid partner=56869869 player=32851 video=960834 autoplay=true]
ರಿಷಬ್ ಶೆಟ್ಟಿ (Rishabh Shetty) ನಿರ್ದೇಶಿಸಿ, ನಟಿಸಿರುವ ಕಾಂತಾರ (Kantara) ಸಿನಿಮಾ ರಿಲೀಸ್ ಆಗಿ ಇವತ್ತಿಗೆ ಆರನೇ ದಿನ. ಈ ದಿನವೂ ಬಹುತೇಕ ಚಿತ್ರಮಂದಿರಗಳಲ್ಲಿ ಸಿನಿಮಾ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. ಸಾಲು ಸಾಲು ರಜೆಗಳ ಕಾರಣದಿಂದಾಗಿ ಶೆಟ್ಟರಿಗೆ ಜಾಕ್ ಪಾಟ್ ಹೊಡೆದಿದೆ. ಈಗಾಗಲೇ 25 ಕೋಟಿಗೂ ಅಧಿಕ ಹಣ ಬಾಕ್ಸ್ ಆಫೀಸಿಗೆ (Box Office) ಹರಿದು ಬಂದಿದೆ ಎಂದು ಹೇಳಲಾಗುತ್ತಿದೆ.
ಸ್ಯಾಂಡಲ್ ವುಡ್ ನಲ್ಲಿ ಇದೀಗ ಕಾಂತಾರ ಸಿನಿಮಾದ ಕಲೆಕ್ಷನ್ (Collection) ಕುರಿತಾದದ್ದೇ ಮಾತು. ಶುಕ್ರವಾರದಿಂದ ಸೋಮವಾರದವರೆಗೂ ಬಹುತೇಕ ಚಿತ್ರಮಂದಿರಗಳಲ್ಲಿ ಸಿನಿಮಾ ಹೌಸ್ ಫುಲ್ ಪ್ರದರ್ಶನ ಕಂಡಿದೆ. ನಾಲ್ಕನೇ ದಿನ ಕೂಡ ಭರ್ಜರಿಯಾಗಿಯೇ ಕಲೆಕ್ಷನ್ ಮಾಡಿದ್ದು, ನಾಲ್ಕು ಮತ್ತು ಐದನೇ ದಿನವೂ ಕೋಟಿಗೂ ಅಧಿಕ ಹಣ ಬಾಕ್ಸ್ ಆಫೀಸಿಗೆ ಹರಿದು ಬಂದಿದೆ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ:ಮಣಿರತ್ನಂ ನಿರ್ದೇಶನದ ‘ಪೊನ್ನಿಯಿನ್ ಸೆಲ್ವನ್’ ಮೂರು ದಿನದ ಗಳಿಕೆ 230 ಕೋಟಿಗೂ ಅಧಿಕ
ಸಿನಿಮಾ ತಂಡವೇ ಹೇಳಿಕೊಂಡಂತೆ ರಿಷಬ್ ಶೆಟ್ಟಿ ಅವರ ಈವರೆಗಿನ ಸಿನಿಮಾಗಳಿಗಿಂತಲೂ ಈ ಚಿತ್ರಕ್ಕೆ ಹೆಚ್ಚು ಹಣ ಬಂದಿದೆಯಂತೆ. ಅದರಲ್ಲೂ ಮೊದಲ ಮೂರು ದಿನಗಳಲ್ಲೂ ಅತೀ ಹೆಚ್ಚು ಹಣ ಮಾಡಿದೆಯಂತೆ. ಹಾಗಾಗಿ ಸಹಜವಾಗಿಯೇ ಚಿತ್ರತಂಡ ಖುಷಿಯಲ್ಲಿದೆ. ಮೂರು ದಿನಗಳ ಕಾಲ ಬಹುತೇಕ ಕಡೆ ಹೌಸ್ ಫುಲ್ ಪ್ರದರ್ಶನ ಕಂಡಿದೆ. ಮುಂದಿನ ಮೂರು ದಿನಗಳ ಟಿಕೆಟ್ ಫಾಸ್ಟ್ ಫಿಲಿಂಗ್ ಆಗುತ್ತಿವೆ.
ಸ್ಯಾಂಡಲ್ ವುಡ್ ಟ್ರೇಡ್ ಅನಲಿಸ್ಟ್ ಗಳ ಪ್ರಕಾರ ಈ ಸಿನಿಮಾ ರಿಲೀಸ್ ಆದ ದಿನ (ಶುಕ್ರವಾರ) 5 ರಿಂದ 6 ಕೋಟಿ ರೂಪಾಯಿ ಬಂದಿದೆ ಎಂದು ಹೇಳಲಾಗಿತ್ತು. ಎರಡನೇ ದಿನ (ಶನಿವಾರ) 8 ಕೋಟಿ, ಮೂರನೇ ದಿನ (ರವಿವಾರ) 10 ಕೋಟಿ ಬಾಕ್ಸ್ ಆಫೀಸಿಗೆ ಹರಿದು ಬಂದಿದೆ ಎಂದು ಹೇಳಲಾಗುತ್ತಿದೆ. ಮೂರನೇ ದಿನಕ್ಕೆ 23 ಕೋಟಿಗೂ ಅಧಿಕ ಹಣ ಬಂದಿದೆ ಎಂದು ಅಂದಾಜಿಸಲಾಗಿದೆ.
ರಿಷಬ್ ಶೆಟ್ಟಿ ನಿರ್ದೇಶಿಸಿ, ಈ ಸಿನಿಮಾದಲ್ಲಿ ನಟಿಸಿದ್ದು, ಹೊಂಬಾಳೆ ಫಿಲ್ಮ್ಸ್ ನಿರ್ಮಾಣ ಮಾಡಿದೆ. ಅಚ್ಯುತ್ ಕುಮಾರ್ (Achyut Kumar), ಪ್ರಮೋದ್ ಶೆಟ್ಟಿ ಸೇರಿದಂತೆ ಹಲವರು ತಾರಾಗಣದಲ್ಲಿ ಇದ್ದು, ಅದ್ದೂರಿಯಾಗಿಯೇ ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ ವಿಜಯ್ ಕಿರಗಂದೂರ್, ತೆಲುಗಿನ ಪ್ರಭಾಸ್ ಸೇರಿದಂತೆ ಅನೇಕ ಸ್ಟಾರ್ ನಟರು ಈ ಸಿನಿಮಾವನ್ನು ಮೆಚ್ಚಿಕೊಂಡಿದ್ದಾರೆ.
Live Tv
[brid partner=56869869 player=32851 video=960834 autoplay=true]