Tag: ಬಾಕ್ಸ್ ಆಫೀಸ್

  • ವಿಕ್ರಾಂತ್ ರೋಣ ಬಾಕ್ಸ್ ಆಫೀಸ್ ರಿಪೋರ್ಟ್ : ಪಕ್ಕಾ ಲೆಕ್ಕಾಚಾರ

    ವಿಕ್ರಾಂತ್ ರೋಣ ಬಾಕ್ಸ್ ಆಫೀಸ್ ರಿಪೋರ್ಟ್ : ಪಕ್ಕಾ ಲೆಕ್ಕಾಚಾರ

    ನಿನ್ನೆಯಷ್ಟೇ ವಿಶ್ವದಾದ್ಯಂತ ಬಿಡುಗಡೆ ಆಗಿರುವ ಸುದೀಪ್ ನಟನೆಯ ‘ವಿಕ್ರಾಂತ್ ರೋಣ ‘ ಸಿನಿಮಾದ ಬಾಕ್ಸ್ ಆಫೀಸ್ ರಿಪೋರ್ಟ್ ಬಗ್ಗೆ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ದೇಶಾದ್ಯಂತ ಒಳ್ಳೆಯ ಓಪನಿಂಗ್ ಪಡೆದಿರುವ ಸಿನಿಮಾವನ್ನು ತಮ್ಮದೇ ಆದ ರೀತಿಯಲ್ಲಿ ಬಣ್ಣಿಸಲಾಗುತ್ತಿದೆ. ಅದರಲ್ಲೂ ಹಣ ಗಳಿಕೆಯ ಲೆಕ್ಕಾಚಾರಗಳು ರಾತ್ರಿಯಿಂದಲೇ ಶುರುವಾಗಿದ್ದು, ಬಾಕ್ಸ್ ಆಫೀಸಿನಲ್ಲಿ ಗೆಲುವಿನ ದಾಖಲೆಯನ್ನು ಚಿತ್ರ ಬರೆದಿದೆ.

    ಕರ್ನಾಟಕವೊಂದರಲ್ಲೇ 2500ಕ್ಕೂ ಅಧಿಕ ಸ್ಕ್ರೀನ್ ಗಳಲ್ಲಿ ವಿಕ್ರಾಂತ್ ರೋಣ ಪ್ರದರ್ಶನ ಕಂಡಿದೆ. ಬೆಳಗ್ಗೆ 5 ಗಂಟೆಯಿಂದಲೇ ಕೆಲವು ಕಡೆ ಶೋಗಳು ಆರಂಭವಾಗಿವೆ. ಹಾಗಾಗಿ ಕರ್ನಾಟಕವೊಂದರಲ್ಲೇ ಅಂದಾಜು 20 ಕೋಟಿ ರೂಪಾಯಿ ಹರಿದು ಬಂದಿದೆ ಎನ್ನಲಾಗುತ್ತಿದೆ. ಮೊದಲ ದಿನ ಬಹುತೇಕ ಶೋಗಳು ಹೌಸ್ ಫುಲ್ ಪ್ರದರ್ಶನ ಕಂಡಿವೆ. ಇದನ್ನೂ ಓದಿ:ʻರಶ್ಮಿಕಾ ನನ್ನ ಡಾರ್ಲಿಂಗ್ʼ ಎಂದ ವಿಜಯ್ ದೇವರಕೊಂಡ

    ಬಾಲಿವುಡ್ ನಲ್ಲೂ ಈ ಸಿನಿಮಾ ಹಿಂದೆ ಬಿದ್ದಿಲ್ಲ. ಈಗಾಗಲೇ ರಿಲೀಸ್ ಆಗಿರುವ ಹಿಂದಿ ಸಿನಿಮಾಗಳ ಲೆಕ್ಕಾಚಾರವನ್ನು ಉಲ್ಟಾ ಮಾಡಿ ಚಿತ್ರ ಮುನ್ನುಗ್ಗುತ್ತಿದೆ. ಬಾಲಿವುಡ್ ನಲ್ಲಿ ಸಾವಿರಾರು ಸ್ಕ್ರೀನ್ ಗಳಲ್ಲಿ ಈ ಚಿತ್ರ ರಿಲೀಸ್ ಆಗಿದೆ. ಹಾಗಾಗಿ ಅಂದಾಜು 10 ಕೋಟಿ ಹಣ ಹರಿದು ಬಂದಿದೆ ಎನ್ನುವುದು ಬಾಕ್ಸ್ ಆಫೀಸ್ ಪಂಡಿತರ ಲೆಕ್ಕಾಚಾರ. ಸದ್ಯ ಬಿಡುಗಡೆಯಾಗಿರುವ ಬೇರೆ ಸಿನಿಮಾಗಳಿಗೆ ಹೋಲಿಸಿದರೆ, ವಿಕ್ರಾಂತ್ ರೋಣ ಹೆಚ್ಚು ದುಡ್ಡು ಮಾಡಿದೆ.

    ಆಂಧ್ರ ಮತ್ತು ತೆಲಂಗಾಣದಲ್ಲಿ ಹೆಚ್ಚಿನ ಸ್ಕ್ರೀನ್ ಗಳಲ್ಲಿ ವಿಕ್ರಾಂತ್ ರೋಣ ರಿಲೀಸ ಆಗಿತ್ತು. ಅಲ್ಲಿಯೂ ಕೂಡ ಅಂದಾಜು 8 ಕೋಟಿಗೂ ಅಧಿಕ ಹಣ ಬಂದಿದೆಯಂತೆ. ಈ ಸಿನಿಮಾ ರಂಗದಲ್ಲಿ ಟಿಕೆಟ್ ದರ ಕಡಿಮೆ ಇರುವುದರಿಂದ, ಹಣದ ಗಳಿಕೆ ಕಡಿಮೆಯಾಗಿ ಕಾಣುತ್ತಿದೆ. ಆದರೆ, ಒಂದೊಳ್ಳೆ ಕಲೆಕ್ಷನ್ ಎಂದು ಹೇಳಲಾಗುತ್ತಿದೆ. ತಮಿಳು ಸಿನಿಮಾ ರಂಗದಿಂದಲೂ ಅಂದಾಜು 2 ಕೋಟಿ ಹಣ ಬಂದಿದೆ ಎನ್ನುವ ಲೆಕ್ಕಾಚಾರ ಸಿಗುತ್ತಿದೆ. 27 ದೇಶಗಳಲ್ಲಿ ಈ ಸಿನಿಮಾ ರಿಲೀಸ್ ಆಗಿದ್ದು, ಅಷ್ಟೂ ದೇಶಗಳಿಂದ ಮೊದಲ ದಿನದ ಗಳಿಕೆ 2 ಕೋಟಿ ಎಂದು ಹೇಳಲಾಗುತ್ತಿದೆ. ವೀಕೆಂಡ್ ನಲ್ಲಿ ಹೆಚ್ಚಿನ ಪ್ರಮಾಣದ ಹಣವನ್ನು ನಿರೀಕ್ಷೆ ಮಾಡಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಕಿಚ್ಚ ಸುದೀಪ್ ಅವರನ್ನು ವಿಶ್ವದ ಬಾಕ್ಸ್ ಆಫೀಸಿಗೆ ಹೋಲಿಸಿದ ಉಪೇಂದ್ರ

    ಕಿಚ್ಚ ಸುದೀಪ್ ಅವರನ್ನು ವಿಶ್ವದ ಬಾಕ್ಸ್ ಆಫೀಸಿಗೆ ಹೋಲಿಸಿದ ಉಪೇಂದ್ರ

    ದಿನದಿಂದ ದಿನಕ್ಕೆ ವಿಕ್ರಾಂತ್ ರೋಣ ಸಿನಿಮಾದ ಅಬ್ಬರ ಹೆಚ್ಚಾಗುತ್ತಿದೆ. ದೇಶಾದ್ಯಂತ ಭರ್ಜರಿ ಪ್ರಚಾರವನ್ನೇ ಚಿತ್ರತಂಡ ಕೈಗೊಂಡಿದೆ. ಅದರಲ್ಲೂ ದೇಶದ ನಾನಾ ಭಾಗಗಳಲ್ಲಿ ಇವೆಂಟ್ ಆಯೋಜನೆ ಮಾಡಲಾಗುತ್ತಿದೆ. ಇದೇ ಶುಕ್ರವಾರ ಸಿನಿಮಾ ಬಿಡುಗಡೆ ಆಗುತ್ತಿದ್ದು, ಅದಕ್ಕೂ ಮುನ್ನ ಬೆಂಗಳೂರಿನಲ್ಲಿ ಇವೆಂಟ್ ಆಯೋಜನೆ ಮಾಡಿದ್ದರು ನಿರ್ಮಾಪಕರು. ಈ ಕಾರ್ಯಕ್ರಮಕ್ಕೆ ಉಪೇಂದ್ರ ಅತಿಥಿಯಾಗಿ ಆಗಮಿಸಿದ್ದರು.

    ಕಾರ್ಯಕ್ರಮದಲ್ಲಿ ಮಾತನಾಡಿದ ನಟ ಉಪೇಂದ್ರ, ಇಬ್ಬರು ಸ್ಟಾರ್ ನಟರನ್ನು ತಮ್ಮದೇ ಆದ ರೀತಿಯಲ್ಲಿ ಹೋಲಿಕೆ ಮಾಡಿಕೊಂಡರು. ಕೆಜಿಎಫ್ ಸಿನಿಮಾದ ಮೂಲಕ ಯಶ್ ಇಂಡಿಯಾ ಬಾಕ್ಸ್ ಆಫೀಸ್ ಗೆದ್ದರೆ, ವಿಕ್ರಾಂತ್ ರೋಣ ಚಿತ್ರದ ಮೂಲಕ ಕಿಚ್ಚ ಸುದೀಪ್ ವಿಶ್ವದ ಬಾಕ್ಸ್ ಆಫೀಸ್ ಗೆಲ್ಲಲಿದ್ದಾರೆ ಎಂದರು. ಅಂಥದ್ದೊಂದು ಭರವಸೆ ತಮಗಿದೆ ಎಂದು ಬೆನ್ನು ತಟ್ಟಿದರು. ಇದನ್ನೂ ಓದಿ: ಬ್ಲ್ಯಾಕ್ ಆ್ಯಂಡ್ ವೈಟ್ ಫೋಟೋಶೂಟ್‌ನಲ್ಲಿ ಮಿಂಚಿದ ರಶ್ಮಿಕಾ ಮಂದಣ್ಣ

    ಈಗಾಗಲೇ ಮೂರುವರೆ ಸಾವಿರ ಸ್ಕ್ರೀನ್ ನಲ್ಲಿ ರಿಲೀಸ್ ಆಗಲು ವಿಕ್ರಾಂತ್ ರೋಣ ರೆಡಿಯಾಗಿದೆ. ಕನ್ನಡಕ್ಕಿಂತಲೂ ಇತರ ಭಾಷೆಯಲ್ಲೇ ಹೆಚ್ಚಿನ ಸಂಖ್ಯೆಯಲ್ಲಿ ಸಿನಿಮಾ ರಿಲೀಸ್ ಆಗುತ್ತಿದ್ದು, 27ಕ್ಕೂ ಹೆಚ್ಚು ಅಧಿಕ ದೇಶಗಳಲ್ಲಿ ಈ ಸಿನಿಮಾ ಬಿಡುಗಡೆ ಆಗುತ್ತಿರುವುದು ಮತ್ತೊಂದು ವಿಶೇಷ. ಬಾಕ್ಸ್ ಆಫೀಸ್ ವಿಚಾರದಲ್ಲಿ ಈಗಾಗಲೇ ನಿರ್ಮಾಪಕರು ಸೇಫ್ ಆಗಿದ್ದು, ಇನ್ಮುಂದೆ ಬಂದಿದ್ದೆಲ್ಲವೂ ಲಾಭ ಎನ್ನುವ ಮಾತಿದೆ. ಈವರೆಗಿನ ದಾಖಲೆಗಳನ್ನು ಈ ಸಿನಿಮಾ ಬ್ರೇಕ್ ಮಾಡಲಿದೆ ಎನ್ನುತ್ತಿದೆ ಲೆಕ್ಕಾಚಾರ.

    Live Tv
    [brid partner=56869869 player=32851 video=960834 autoplay=true]

  • ‘ಧಾಕಡ್’ ಸೋಲಿಗೆ ಕಂಗೆಟ್ಟ ಕಂಗನಾ ರಣಾವತ್ : ವೀಕೆಂಡ್ ನಲ್ಲೂ ವೀಕ್ ಕಲೆಕ್ಷನ್

    ‘ಧಾಕಡ್’ ಸೋಲಿಗೆ ಕಂಗೆಟ್ಟ ಕಂಗನಾ ರಣಾವತ್ : ವೀಕೆಂಡ್ ನಲ್ಲೂ ವೀಕ್ ಕಲೆಕ್ಷನ್

    ಮೇ 20 ರಂದು ರಿಲೀಸ್ ಆಗಿರುವ ಕಂಗನಾ ರಣಾವತ್ ನಟನೆಯ ‘ಧಾಕಡ್’ ಸಿನಿಮಾ ಅಂದುಕೊಂಡಷ್ಟು ಬಾಕ್ಸ್ ಆಫೀಸಿನಲ್ಲಿ ಕಲೆಕ್ಷನ್ ಮಾಡುತ್ತಿಲ್ಲ. ಸಾಮಾನ್ಯ ದಿನದಲ್ಲಿ ಮಾತ್ರವಲ್ಲ, ವಾರಾಂತ್ಯದಲ್ಲೂ ಅದು ದುಡ್ಡು ಮಾಡದೇ ಇರುವುದಕ್ಕೆ ಸ್ವತಃ ಕಂಗನಾ ಕಂಗೆಟ್ಟಿದ್ದಾರೆ. ಹಾಕಿದ ಬಂಡವಾಳವಲ್ಲ, ಕಂಗನಾಗೆ ಕೊಟ್ಟಿರುವ ಸಂಭಾವನೆ ಕೂಡ ಬರುವುದು ಅನುಮಾನ ಎನ್ನಲಾಗುತ್ತಿದ್ದು, ನಿರ್ಮಾಪಕರು ಕಂಗಾಲಾಗಿದ್ದಾರೆ. ಇದನ್ನೂ ಓದಿ : ಶೀಘ್ರದಲ್ಲೇ ಶಿವರಾಜ್ ಕುಮಾರ್ ಮತ್ತು ಪ್ರಭುದೇವ ಸಿನಿಮಾ ಶುರು : ಯೋಗರಾಜ್ ಭಟ್ ನಿರ್ದೇಶಕ

    ಕಂಗನಾ ರಣಾವತ್ ವೃತ್ತಿ ಜೀವನದಲ್ಲಿ ಅದ್ಭುತ ಸಿನಿಮಾ ಇದಾಗಲಿದೆ ಎಂದು ನಂಬಲಾಗುತ್ತು. ಸಿನಿಮಾದ ಪ್ರಚಾರದ ವೇಳೆಯೂ ಅದೇ ಮಾತುಗಳನ್ನು ಚಿತ್ರತಂಡ ಆಡಿತ್ತು. ಇದೊಂದು ಸಾಹಸ ಪ್ರಧಾನ ಮತ್ತು ಸಸ್ಪೆನ್ಸ್, ಥ್ರಿಲ್ಲರ್ ಮಾದರಿಯ ಚಿತ್ರವಾಗಿದ್ದರಿಂದ ಬಾಕ್ಸ್ ಆಫೀಸ್ ತುಂಬಿದೆ ಎನ್ನುವ ಮಾತಿತ್ತು. ಅದೆಲ್ಲವನ್ನೂ ಮೂರೇ ದಿನಕ್ಕೆ ಸುಳ್ಳು ಮಾಡಿದೆ ಧಾಕಡ್ ಚಿತ್ರ. ಇದನ್ನೂ ಓದಿ: ವೀಲ್‍ಚೇರ್ ರೋಮಿಯೋಗೆ ಮಯೂರಿ ಜೂಲಿಯಟ್ – ‘ಆ’ ಸವಾಲಿನ ಪಾತ್ರ ಒಪ್ಪಿಕೊಂಡಿದ್ದರ ಹಿಂದಿದೆ ಒಂದು ಕಥಾನಕ!

    ಮೊದಲ ದಿನದ ಕಲೆಕ್ಷನ್ ಕೇವಲ 50 ಲಕ್ಷ ರೂಪಾಯಿ ಮಾತ್ರ ಎನ್ನಲಾಗಿದ್ದು, ಈವರೆಗೂ ಒಂದುವರೆ ಕೋಟಿಯಷ್ಟು ಮಾತ್ರ ಆದಾಯ ತಂದಿದೆಯಂತೆ. ಹಾಗಾಗಿ ಕಂಗನಾಗೆ ಕೊಟ್ಟಿರುವ ಸಂಭಾವನೆ ಕೂಡ ವಾಪಸ್ಸು ಬರುವುದು ಅನುಮಾನ ಎನ್ನುತ್ತಿದೆ ಬಾಕ್ಸ್ ಆಫೀಸ್ ರಿಪೋರ್ಟ್. ಇದನ್ನೂ ಓದಿ : ನಂದಮೂರಿ ಬಾಲಕೃಷ್ಣ ಸಿನಿಮಾದಲ್ಲಿ `ಕಿಸ್’ ಬ್ಯೂಟಿ ಶ್ರೀಲೀಲಾ

    ಕಂಗನಾ ಸಿನಿಮಾದ ಜೊತೆಗೆ ಭೂಲ್ ಭುಲಯ್ಯ 2 ಸಿನಿಮಾ ರಿಲೀಸ್ ಆಗಿದ್ದು, ಈ ಸಿನಿಮಾವನ್ನು ಪ್ರೇಕ್ಷಕರು ಒಪ್ಪಿಕೊಂಡಿದ್ದಾರೆ. ಬಾಕ್ಸ್ ಆಫೀಸಿನಲ್ಲೂ ಈ ಸಿನಿಮಾ ಮಸ್ತ್ ಕಮಾಯಿ ಮಾಡಿದೆ. ಆದರೆ, ಕಂಗನಾ ಅವರ ಸಿನಿಮಾವನ್ನು ಮಾತ್ರ ಪ್ರೇಕ್ಷಕರು ತಿರಸ್ಕರಿಸಿದ್ದಾರೆ. ಭರ್ಜರಿ ಮನರಂಜನೆ ಮತ್ತು ಒಂದೊಳ್ಳೆ ಕಥೆಯನ್ನು ಈ ಸಿನಿಮಾ ಹೊಂದಿದ್ದರೂ, ಪ್ರೇಕ್ಷಕರ ತಿರಸ್ಕಾರಕ್ಕೆ ಕಾರಣವೇನು ಎನ್ನುವುದನ್ನು ಚಿತ್ರತಂಡ ಹುಡುಕುತ್ತಿದೆಯಂತೆ.

  • ಕೆಜಿಎಫ್ 2 ಕಲೆಕ್ಷನ್ 1129.38 ಕೋಟಿ : ಆರ್.ಆರ್.ಆರ್ ದಾಖಲೆ ಉಡಿಸ್

    ಕೆಜಿಎಫ್ 2 ಕಲೆಕ್ಷನ್ 1129.38 ಕೋಟಿ : ಆರ್.ಆರ್.ಆರ್ ದಾಖಲೆ ಉಡಿಸ್

    ಶ್ ಮತ್ತು ಪ್ರಶಾಂತ್ ನೀಲ್ ಕಾಂಬಿನೇಷನ್ ನ ‘ಕೆಜಿಎಫ್ 2’ ಸಿನಿಮಾ ಬಾಕ್ಸ್ ಆಫೀಸಿನಲ್ಲಿ ದಿನದಿಂದ ದಿನಕ್ಕೆ ಒಂದೊಂದೇ ದಾಖಲೆಗಳನ್ನು ಮುರಿಯುತ್ತಾ ಮುಂದೆ ಸಾಗುತ್ತಿದೆ. 25ನೇ ದಿನದತ್ತ ಮುನ್ನುಗ್ಗಿದ್ದರೂ, ಕಲೆಕ್ಷನ್ ಮಾತ್ರ ಯಾವುದೇ ರೀತಿಯಲ್ಲಿ ಕಡಿಮೆಯಾಗಿಲ್ಲ. ಈವರೆಗೂ ಕೆಜಿಎಫ್ 2 ಅಂದಾಜು 1129.38 ಕೋಟಿ ಗಳಿಕೆ ಮಾಡಿದೆ ಎನ್ನಲಾಗುತ್ತಿದೆ. ಈ ಮೂಲಕ ಆರ್.ಆರ್.ಆರ್ ಸಿನಿಮಾದ ವರ್ಲ್ಡ್ ವೈಡ್ ಕಲೆಕ್ಷನ್ ದಾಖಲೆಯನ್ನೂ ಕೆಜಿಎಫ್ 2 ಪುಡಿಪುಡಿ ಮಾಡಿದೆ. ಇದನ್ನೂ ಓದಿ: ಫಸ್ಟ್ ಟೈಮ್ ಮಗಳ ಫೋಟೋ ಶೇರ್ ಮಾಡಿದ ಪ್ರಿಯಾಂಕಾ ಚೋಪ್ರಾ

    25ನೇ ದಿನದೊಳಗಿನ ಆರ್.ಆರ್.ಆರ್ ಸಿನಿಮಾದ ಒಟ್ಟು ಲೆಕ್ಕಾಚಾರ 1127.65 ಕೋಟಿ ಎಂದು ಹೇಳಲಾಗಿತ್ತು. ಕೆಜಿಎಫ್ 2 ಸಿನಿಮಾ 1129.38 ಕೋಟಿ ಗಳಿಕೆ ಮಾಡುವ ಮೂಲಕ ಆರ್.ಆರ್.ಆರ್ ದಾಖಲೆಯನ್ನು ಮುರಿಯಲಾಗಿದೆ. ಅಲ್ಲಿಗೆ ಭಾರತೀಯ ಸಿನಿಮಾ ರಂಗದಲ್ಲೇ ಅತೀ ಹೆಚ್ಚು ಗಳಿಕೆ ಮಾಡಿದ ಸಿನಿಮಾ ಎಂಬ ಕೀರ್ತಿಗೆ ಕೆಜಿಎಫ್ 2 ಪಾತ್ರವಾಗಿದೆ. ಇದನ್ನೂ ಓದಿ : ಜೂನ್ 9ಕ್ಕೆ ನಯನತಾರಾ ಮದುವೆ ಫಿಕ್ಸ್ – ತಿರುಪತಿಯಲ್ಲಿ ವಿವಾಹ

    2022 ನಲ್ಲಿ ಅತೀ ಹೆಚ್ಚು ಬಾಕ್ಸ್ ಆಫೀಸಿನಲ್ಲಿ ಗಳಿಕೆ ಮಾಡಿದ ಚಿತ್ರ ಎಂಬ ದಾಖಲೆಗೂ ಕೆಜಿಎಫ್ 2 ಕಾರಣವಾಗಿದ್ದರೆ, ಭಾರತೀಯ ಸಿನಿಮಾ ರಂಗದಲ್ಲಿ ಅತೀ ಹೆಚ್ಚು ದುಡ್ಡು ಮಾಡಿದ ಮೂರನೇ ಸಿನಿಮಾ ಎಂಬ ಖ್ಯಾತಿಯೂ ಈ ಸಿನಿಮಾದ್ದು. ದೇಶದಲ್ಲಿ ಮಾತ್ರವಲ್ಲ ವಿಶ್ವದಲ್ಲೇ ಇನ್ನೂ ಭರ್ಜರಿ ಪ್ರದರ್ಶನ ಕಾಣುತ್ತಿರುವುದರಿಂದ ಈವರೆಗಿನ ಎಲ್ಲ ದಾಖಲೆಗಳನ್ನು ಕೆಜಿಎಫ್ 2 ಮುರಿದು, ಹೊಸ ದಾಖಲೆಯನ್ನು ಬರೆಯಲಿದೆ ಎಂದು ಅಂದಾಜಿಸಲಾಗಿದೆ. ಇದನ್ನೂ ಓದಿ : ಮಿಸೆಸ್ ಇಂಡಿಯಾ ಆಗಲು ನಿವೇದಿತಾ ಗೌಡ ತಯಾರಿ : ಕ್ಯಾಟ್ ವಾಕ್ ವಿಡಿಯೋದಲ್ಲಿ ಚಂದನ್ ಶೆಟ್ಟಿ ಬೊಂಬೆ

    ಸದ್ಯ ಆರ್. ಆರ್. ಆರ್ ಸಿನಿಮಾದ ವರ್ಲ್ಡ್ ವೈಡ್ ಕಲೆಕ್ಷನ್ ದಾಖಲೆಯನ್ನು ಕೆಜಿಎಫ್ 2 ಮುರಿದಿದ್ದು, ದಂಗಲ್ ಮತ್ತು ಆರ್.ಆರ್.ಆರ್ ಸಿನಿಮಾದ ಒಟ್ಟು ಕಲೆಕ್ಷನ್ ದಾಖಲೆಯನ್ನು ಸದ್ಯದಲ್ಲೇ ದಾಟಲಿದೆ ಎನ್ನುತ್ತಿವೆ ಬಾಕ್ಸ್ ಆಫೀಸ್ ಮೂಲಗಳು. ಈ ಮೂಲಕ ಕನ್ನಡದ ಸಿನಿಮಾವೊಂದು ಐತಿಹಾಸಿಕ ದಾಖಲೆ ಮಾಡಲು ಹೊರಟಿರುವುದು ಹೆಮ್ಮೆಯ ಸಂಗತಿ ಆಗಿದೆ.

  • ಬಾಕ್ಸಾಫೀಸ್‍ನಲ್ಲಿ ಮಕಾಡೆ ಮಲಗಿದ ಆಚಾರ್ಯರು: ಮೆಗಾ ಸ್ಟಾರ್ ಅಭಿಮಾನಿಗಳಿಗೆ ನಿರಾಸೆ

    ಬಾಕ್ಸಾಫೀಸ್‍ನಲ್ಲಿ ಮಕಾಡೆ ಮಲಗಿದ ಆಚಾರ್ಯರು: ಮೆಗಾ ಸ್ಟಾರ್ ಅಭಿಮಾನಿಗಳಿಗೆ ನಿರಾಸೆ

    ಮೆಗಾಸ್ಟಾರ್ ಚಿರಂಜೀವಿ ಹಾಗೂ ಮೆಗಾ ಪವರ್ ಸ್ಟಾರ್ ರಾಮ್‍ಚರಣ್ ಅಭಿನಯಿಸಿರುವ ಆಚಾರ್ಯ ಚಿತ್ರ ಏಪ್ರಿಲ್ 29 ರಂದು ಜಗತ್ತಿನಾದ್ಯಂತ ತೆರೆ ಕಂಡಿತ್ತು. ಚಿತ್ರವು ಬಾಕ್ಸಾಫೀಸ್‍ನಲ್ಲಿ ಅಷ್ಟೇನು ಹೇಳಿಕೊಳ್ಳುವಷ್ಟು ಕಮಾಲು ಮಾಡದೆ ನೀರಸ ಪ್ರದರ್ಶನ ತೋರಿದೆ.

    ಚಿತ್ರದಲ್ಲಿ ಇಬ್ಬರು ಮಹಾನ್ ಕಲಾವಿದರಿದ್ದರು. ಸಿನಿಮಾದ ಮೇಕಿಂಗ್ ಸರಿ ಇಲ್ಲ ಎನ್ನುವ ಕಾರಣಕ್ಕೇ ಪ್ರೇಕ್ಷಕರು ದೂರ ಸರಿಯಿತ್ತಿದ್ದಾರೆ ಎಂದು ತೆಲುಗು ಮಾಧ್ಯಮಗಳು ವರದಿ ಮಾಡಿವೆ. ಈಗ ಈ ಚಿತ್ರ ಜಗತ್ತಿನಾದ್ಯಂತ ಹಣ ಗಳಿಸಲು ಹೆಣಗಾಡುತ್ತಿದೆ. ಇದನ್ನೂ ಓದಿ: ಬಾಲಿವುಡ್ ಗಲ್ಲಾಪೆಟ್ಟಿಗೆಯಲ್ಲಿ 18ನೇ ದಿನವೂ ರಾಕಿಭಾಯ್ ಅಬ್ಬರ: 400 ಕೋಟಿಯತ್ತ `ಕೆಜಿಎಫ್ 2′

    ಮೂರು ದಿನಗಳಲ್ಲಿ ಆಚಾರ್ಯ ವಿಶ್ವಾದ್ಯಂತ 73.1 ಕೋಟಿ ಕಲೆಕ್ಷನ್ ಮಾಡಿದ್ದು, ಥಿಯೇಟರ್‌ಗಳಲ್ಲಿ ಇನ್ನೇನೂ ಬಹಳ ದಿನ ರನ್ ಆಗುವ ಹಂತದಲ್ಲಿಲ್ಲ. ವರದಿಯ ಪ್ರಕಾರ ಚಿತ್ರದ ಥಿಯೇಟ್ರಿಕಲ್ ರೈಟ್ಸ್ 140 ಕೋಟಿ ರೂ. ಸಂಗ್ರಹವನ್ನು ನೋಡಿದರೆ ಆಚಾರ್ಯರು ಗಲ್ಲಾ ಪೆಟ್ಟಿಗೆಯಲ್ಲಿ ಮಕಾಡೆ ಮಲಗುವುದಂತು ಗ್ಯಾರಂಟಿ. ಇದನ್ನೂ ಓದಿ : ಬೆಳ್ಳಿತೆರೆಯಲ್ಲಿ ಕಾಯಕಯೋಗಿ ಬಸವಣ್ಣ: ಯಾರೆಲ್ಲ ಪಾತ್ರ ಮಾಡಿದ್ದಾರೆ ಗೊತ್ತಾ?

    ಮೊದಲವಾರಂತ್ಯದಲ್ಲಿ ಚಿತ್ರವೂ ಕೇವಲ ರೂ. 73 ಕೋಟಿ ಕಲೆಕ್ಷನ್ ಮಾಡಿದ್ದು, ಆರ್‍ಆರ್‍ಆರ್ ಮತ್ತು ಕೆಜಿಎಫ್-ಚಾಪ್ಟರ್ 2 ಚಿತ್ರದ ಅಬ್ಬರದಿಂದಾಗಿ ಚಿತ್ರ ತಂಡಕ್ಕೆ ದೊಡ್ಡ ನಿರಾಸೆಯಾಗಿದೆ. ಚಿತ್ರವನ್ನು ಕೊರಟಾಲ ಶಿವ ನಿರ್ದೇಶಿಸಿದ್ದು, ನಾಯಕಿಯಾಗಿ ಕನ್ನಡತಿ ಪೂಜಾ ಹೆಗ್ಡೆ ನಟಿಸಿದ್ದಾರೆ.

  • ಕೆಜಿಎಫ್ 2 : ಯಾವ ರಾಜ್ಯದಲ್ಲಿ ಎಷ್ಟು ಕಲೆಕ್ಷನ್? ಪಕ್ಕಾ ಲೆಕ್ಕ

    ಕೆಜಿಎಫ್ 2 : ಯಾವ ರಾಜ್ಯದಲ್ಲಿ ಎಷ್ಟು ಕಲೆಕ್ಷನ್? ಪಕ್ಕಾ ಲೆಕ್ಕ

    ಶ್ ನಟನೆಯ ‘ಕೆಜಿಎಫ್ 2’ ಸಿನಿಮಾ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಬಾಕ್ಸ್ ಆಫೀಸ್ ಲೆಕ್ಕಾಚಾರದಲ್ಲಿ ಈ ಹಿಂದೆ ರಿಲೀಸ್ ಆಗಿರುವ ಆರ್.ಆರ್.ಆರ್ ಸಿನಿಮಾದ ಜೊತೆ ತುಲನೆ ಮಾಡಲಾಗುತ್ತಿದೆ. ಜತೆಗೆ ಕೆಜಿಎಫ್ 2 ಸಿನಿಮಾಗೂ ಒಂದು ದಿನ ಮುಂಚೆ ಬಿಡುಗಡೆಯಾದ ಬೀಸ್ಟ್ ಸಿನಿಮಾದ ಜೊತೆಯೂ ಬಾಕ್ಸ್ ಆಫೀಸ್ ಲೆಕ್ಕಾಚಾರವನ್ನು ಹೋಲಿಕೆ ಮಾಡಲಾಗುತ್ತಿದೆ. ಇದನ್ನೂ ಓದಿ : ಪ್ರಧಾನಿ ಭೇಟಿ ಮಾಡಿ ಸಂಭ್ರಮಿಸಿದ ಗ್ರ್ಯಾಮಿ ಅವಾರ್ಡ್ ವಿಜೇತ ರಿಕಿ ಕ್ರೇಜ್

    kgf 2

    ಕೆಜಿಎಫ್ 2 ಮೊದಲ ದಿನದ ಗಳಿಕೆಯು ವಿಶ್ವದಾದ್ಯಂತ ಸೇರಿ 145 ಕೋಟಿ ಎಂದು ವಿತರಕ ವಲಯ ಅಂದಾಜಿಸಲಾಗಿದೆ. ಇನ್ನೂ ಅಚ್ಚರಿಯ ಸಂಗತಿ ಎಂದರೆ, ಕರ್ನಾಟಕಕ್ಕಿಂತಲೂ ಬಾಲಿವುಡ್ ನಲ್ಲೇ ಅತೀ ಹೆಚ್ಚು ಕಲೆಕ್ಷನ್ ಮಾಡಿದ ಸಿನಿಮಾ ಎಂಬ ಅಚ್ಚರಿಗೆ ಕೆಜಿಎಫ್ 2 ಕಾರಣವಾಗಿದೆ. ಇದನ್ನೂ ಓದಿ : ತಾಳಿಕಟ್ಟಿ ಹೆಂಡತಿಯನ್ನು ಎತ್ತಿಕೊಂಡ ರಣಬೀರ್ ಕಪೂರ್

    ದೇಶಾದ್ಯಂತ ಬಹುತೇಕ ಕಡೆ ಮೊದಲ ದಿನ ಎಲ್ಲ ಚಿತ್ರಮಂದಿರಗಳು ಹೌಸ್ ಫುಲ್ ಪ್ರದರ್ಶನ ಕಂಡಿವೆ. ಅದರಲ್ಲೂ ಕರ್ನಾಟಕದಲ್ಲಿ ಐನೂರಕ್ಕೂ ಹೆಚ್ಚು ಸ್ಕ್ರೀನ್ ಗಳಲ್ಲಿ ಕೆಜಿಎಫ್ 2 ರಿಲೀಸ್ ಆಗಿತ್ತು. ಅಷ್ಟೂ ಚಿತ್ರಮಂದಿರಗಳಲ್ಲೂ ಕಲೆಕ್ಷನ್ ಉತ್ತಮವಾಗಿಯೇ ಬಂದಿದೆ. ಹೀಗಾಗಿ ಕರ್ನಾಟಕದಲ್ಲಿ ಕೆಜಿಎಫ್ 2 ಗಳಿಕೆ ಅಂದಾಜು 40 ಕೋಟಿ ಎನ್ನಲಾಗುತ್ತಿದೆ. ಇದನ್ನೂ ಓದಿ: ‘BOSS’ ಪಟ್ಟ ಅಲಂಕರಿಸಿದ ಯಶ್ : ಟ್ವಿಟರ್ ಟ್ರೆಂಡಿಂಗ್ ನಲ್ಲಿ #YASHBOSS

    ಕನ್ನಡ, ಹಿಂದಿ, ತೆಲುಗು, ತಮಿಳು, ಮಲಯಾಳಂ ಹೀಗೆ ಐದು ಭಾಷೆಗಳಲ್ಲಿ ಸಿನಿಮಾ ಏಕಕಾಲಕ್ಕೆ ಬಿಡುಗಡೆ ಆಗಿದೆ. ತಮಿಳು ಹೊರತಾಗಿ ಬಹುತೇಕ ಕಡೆ ಸಿನಿಮಾದ ಕ್ರೇಜ್ ಹೆಚ್ಚಾಗಿದೆ ಎಂದು ಅಂದಾಜಿಸಲಾಗಿತ್ತು. ಅದರಲ್ಲೂ ದಕ್ಷಿಣದಲ್ಲಿ ಕನ್ನಡಕ್ಕಿಂತಲೂ ತೆಲುಗಿನಲ್ಲೇ ಅತೀ ಹೆಚ್ಚು ಹಣ ಹರಿದು ಬರಲಿದೆ ಎಂದು ವಿತರಕರ ವಲಯ ಹೇಳಿತ್ತು. ಒಟ್ಟಾರೆ ಭಾರತದಲ್ಲಿ ಹಿಂದಿಯಲ್ಲಿ ಹೆಚ್ಚು ಕಲೆಕ್ಷನ್ ಮಾಡಲಿದೆ ಎಂದು ಅಂದಾಜಿಸಲಾಗಿತ್ತು. ಹಿಂದಿಯಲ್ಲಿ ಅಂದುಕೊಂಡಂತೆ ಹೆಚ್ಚಿನ ಮೊತ್ತವೇ ನಿರ್ಮಾಪಕರ ಜೇಬು ಸೇರಿದೆ. ಇದನ್ನೂ ಓದಿ:ಬೀಸ್ಟ್ ಸಿನಿಮಾಕ್ಕೆ ಸೆಡ್ಡು ಹೊಡೆದ ಕೆಜಿಎಫ್-2 – ಕೇರಳ, ತಮಿಳುನಾಡಿನಲ್ಲೂ ರಾಕಿಭಾಯ್ ಹವಾ

    ಕರ್ನಾಟಕದಲ್ಲಿ ಅಂದಾಜು 40 ಕೋಟಿ ಕಲೆಕ್ಷನ್ ಆಗಿದ್ದರೆ, ಕೇರಳದಲ್ಲಿ ಅಂದಾಜು 5 ಕೋಟಿ, ಆಂಧ್ರ ಮತ್ತು ತೆಲಂಗಾಣದಲ್ಲಿ ಅಂದಾಜು 25 ಕೋಟಿ, ತಮಿಳು ನಾಡಿನಲ್ಲಿ ಅಂದಾಜು 8 ಕೋಟಿ, ಹಿಂದಿಯಲ್ಲಿ ಅಂದಾಜು 45 ಕೋಟಿ ಹಾಗೂ ವಿದೇಶಗಳಿಂದ 30 ಕೋಟಿ ಹಣ ಹರಿದು ಬಂದಿದೆ ಎನ್ನುವ ಲೆಕ್ಕಾಚಾರ ಸಿಗುತ್ತಿದೆ. ಈ ಮೂಲಕ ಮೊದಲ ದಿನವೇ ಕೆಜಿಎಫ್ 2 ನೂರು ಕೋಟಿ ಕ್ಲಬ್ ಸೇರುವ ಮೂಲಕ ದಾಖಲೆ ಬರೆದಿದೆ.

    ಇದು ಕೇವಲ ವಿತರಕರಿಂದ ಪಡೆದ ಮಾಹಿತಿಯಾಗಿದ್ದು ಒಟ್ಟಾರೆ ಮೊದಲ ದಿನದ ಕಲೆಕ್ಷನ್ ಲೆಕ್ಕಾಚಾರವನ್ನು ಈವರೆಗೂ ಹೊಂಬಾಳೆ ಫಿಲ್ಮ್ಸ್ ಅಧಿಕೃತವಾಗಿ ನೀಡಿಲ್ಲವಾದರೂ, ನಿರ್ಮಾಣ ಸಂಸ್ಥೆ ಹೇಳಿದ ನಂತರವೇ ಅಧಿಕೃತಗೊಳ್ಳಲಿದೆ.

  • ‘ದಿ ಕಾಶ್ಮೀರ್ ಫೈಲ್ಸ್’ ಅಧಿಕೃತ ಬಾಕ್ಸ್ ಆಫೀಸ್ ರಿಪೋರ್ಟ್ : 331 ಕೋಟಿ ಬಾಚಿದ ಸಿನಿಮಾ

    ‘ದಿ ಕಾಶ್ಮೀರ್ ಫೈಲ್ಸ್’ ಅಧಿಕೃತ ಬಾಕ್ಸ್ ಆಫೀಸ್ ರಿಪೋರ್ಟ್ : 331 ಕೋಟಿ ಬಾಚಿದ ಸಿನಿಮಾ

    ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ‘ದಿ ಕಾಶ್ಮೀರ್ ಫೈಲ್ಸ್’ ಸಂಚಲನ ಮೂಡಿಸಿದಷ್ಟೇ ಬಾಕ್ಸ್ ಆಫೀಸಿನಲ್ಲೂ ಅದು ಸದ್ದು ಮಾಡಿತ್ತು. ಈ ಸಿನಿಮಾದ ಬಜೆಟ್ ಹೇಳಿದರೆ ನೀವು ನಂಬುವುದು ಅಸಾಧ್ಯ. ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರೇ ತಮ್ಮ ವಿಕಿಪಿಡಿಯಾ ಪೇಜ್ ನಲ್ಲಿ ಬರೆದುಕೊಂಡಂತೆ, ಕೇವಲ 15 ಕೋಟಿ ವೆಚ್ಚದಲ್ಲಿ ಈ ಸಿನಿಮಾವನ್ನು ತಯಾರಿಸಿದ್ದಾರೆ. ಆದರೆ, ಅದು ಮಾಡಿದ ಗಳಿಕೆ ಮಾತ್ರ ಅಚ್ಚರಿ ಮೂಡಿಸುತ್ತಿದೆ. ಇದನ್ನೂ ಓದಿ : ಪಾವನಾ ನಾಯಕಿಯಾಗಿ ನಟಿಸಿದ ‘ಇನ್’ ಚಿತ್ರದ ಟೀಸರ್ ರಿಲೀಸ್ ಮಾಡಿದ ಕಿಚ್ಚ

    ಕಾಶ್ಮೀರಿ ಪಂಡಿತರ ಹತ್ಯೆ ಮತ್ತು ಅವರ ಮೇಲೆ ಆದ ಹಿಂಸಾಚಾರದ ಕುರಿತಾಗಿ ಮಾಡಿರುವ ಸಿನಿಮಾವಿದು. ಹಾಗಾಗಿ ಹಿಂದೂಪರ ಸಂಘಟನೆಗಳು ಸೇರಿದಂತೆ ಹಲವರು ಈ ಸಿನಿಮಾದ ಬಗ್ಗೆ ಸಾಕಷ್ಟು ಪ್ರಚಾರ ಮಾಡಿದರೆ, ಹಲವು ರಾಜ್ಯಗಳು ಈ ಚಿತ್ರಕ್ಕೆ ತೆರಿಗೆ ವಿನಾಯತಿ ಘೋಷಿಸಿದವು. ಪ್ರಧಾನಿ ನರೇಂದ್ರ ಮೋದಿ ಅವರು ಸೇರಿದಂತೆ ರಾಜ್ಯದ ನಾನಾ ಮುಖ್ಯಮಂತ್ರಿಗಳು, ಸಚಿವ ಸಂಪುಟದ ಸಹೋದ್ಯೋಗಿಗಳು ಮತ್ತು ಶಾಸಕರು ಖುದ್ದಾಗಿ ಈ ಸಿನಿಮಾದ ಪ್ರಚಾರದಲ್ಲಿ ಭಾಗಿಯಾದರು. ಪರಿಣಾಮ ಈವರೆಗೂ ದಿ ಕಾಶ್ಮೀರ್ ಫೈಲ್ಸ್ ಸಿನಿಮಾಗೆ ಹರಿದು ಬಂದ ಮೊತ್ತ 331 ಕೋಟಿ. ಸ್ವತಃ ಈ ಮಾಹಿತಿಯನ್ನು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ. ಇದನ್ನೂ ಓದಿ : ರಾಷ್ಟ್ರ ಪ್ರಶಸ್ತಿ ವಿಜೇತ ಸಾಗರ್ ಪುರಾಣಿಕ್ ನಿರ್ದೇಶನದ ‘ಡೊಳ್ಳು’ ಚಿತ್ರಕ್ಕೆ ಮತ್ತೆರಡು ಪುರಸ್ಕಾರ

    ಅಂಥದ್ದೇನಿದೆ ಈ ಸಿನಿಮಾದಲ್ಲಿ ?

    ನಿರ್ದೇಶಕ ವಿವೇಕ್ ಅಗ್ನಿಹೋತ್ರಿ 1990ರಲ್ಲಿ ನಡೆದ ಕಾಶ್ಮೀರಿ ಪಂಡಿತರ ನರಮೇಧದ ಕುರಿತು ಸಿನಿಮಾ ಮಾಡಿದ್ದಾರೆ. ಅದನ್ನು ‘ದಿ ಕಾಶ್ಮೀರ್ ಫೈಲ್ಸ್’ ಹೆಸರಿನಲ್ಲಿ ಬಿಡುಗಡೆ ಮಾಡಿದ್ದಾರೆ. ಸಿನಿಮಾದ ಶೀರ್ಷಿಕೆಯೇ ಪ್ರಚುರಪಡಿಸುವಂತೆ ನರಮೇಧದ ಹಿಂದಿರುವ ಇತಿಹಾಸವನ್ನು ಬಿಚ್ಚಿಡುವಂತಹ ‘ಫೈಲ್‍’ ಇದಾಗಿದೆ. ಈ ‘ಫೈಲ್’ ನ ಪುಟಪುಟದಲ್ಲೂ ರಕ್ತಸಿಕ್ತ ಅಧ್ಯಾಯಗಳಿವೆ. ಬರೆದ ಶಾಹಿ ಕೂಡ ಕೆಂಪಾಗಿದೆ. ಇಂತಹ ಹತ್ಯಾಕಾಂಡವನ್ನು ಸಿನಿಮಿಯ ರೂಪದಲ್ಲಿ ತರದೇ, ನಡೆದ ಘಟನೆಯನ್ನು ಹಸಿಹಸಿಯಾಗಿಯೇ ತರುವ ಪ್ರಯತ್ನ ಈ ಸಿನಿಮಾದಲ್ಲಿ ಆಗಿದೆ.

    ಸಾಮಾನ್ಯವಾಗಿ ಸಿನಿಮಾಗಳೆಂದರೆ ನಾಟಕೀಯ ನಿರೂಪಣೆಗೆ ಹೆಚ್ಚು ಒತ್ತು ಕೊಡಲಾಗುತ್ತದೆ. ಕಥೆಯ ಕುತೂಹಲವನ್ನು ಕಾಪಿಡಲು ಅಲ್ಲಲ್ಲಿ, ನಾಟಕೀಯ ತಿರುವುಗಳನ್ನೂ ನೀಡಲಾಗುತ್ತದೆ. ಪ್ರೇಕ್ಷಕನ ಆಸಕ್ತಿಯ ಅನುಗುಣವಾಗಿ ಪಾತ್ರಕ್ಕೆ ಹಿನ್ನೆಲೆ ಒದಗಿಸಲಾಗುತ್ತದೆ. ‘ದಿ ಕಾಶ್ಮೀರ್ ಫೈಲ್ಸ್’ ನಲ್ಲಿ ಅದ್ಯಾವ ಗೋಜಿಗೂ ನಿರ್ದೇಶಕರು ಹೋಗಿಲ್ಲ. ತಮ್ಮ ಸಂಶೋಧನೆಯಲ್ಲಿ ಕಂಡುಂಡ ಕಥನವನ್ನು ಹಾಗೆಯೇ ಬಿಚ್ಚಿಡುತ್ತಾ ಹೋಗಿದ್ದಾರೆ. ಹಾಗಾಗಿ ಚಿತ್ರದ ತುಂಬಾ ಮನಸ್ಸಿಗೆ ಘಾಸಿಯಾಗುವಷ್ಟು ಕ್ರೌರ್ಯವೇ ತುಂಬಿದೆ.  ಅದೊಂದು ಹತ್ಯಾಕಾಂಡದ ಕಥೆಯೇ ಆಗಿದ್ದರಿಂದ ತೆರೆಯ ಮೇಲೂ ಅದನ್ನೇ ಮೂಡಿಸಿದ್ದಾರೆ.

  • ಆರ್.ಆರ್.ಆರ್ : ಬಾಕ್ಸ್ ಆಫೀಸ್ ಗಳಿಕೆ ಸುಳ್ಳು ಸುಳ್ಳು ಎಂದ ಬಾಲಿವುಡ್ ಖಾನ್

    ಆರ್.ಆರ್.ಆರ್ : ಬಾಕ್ಸ್ ಆಫೀಸ್ ಗಳಿಕೆ ಸುಳ್ಳು ಸುಳ್ಳು ಎಂದ ಬಾಲಿವುಡ್ ಖಾನ್

    ರಾಜಮೌಳಿ ನಿರ್ದೇಶನದ ಆರ್.ಆರ್.ಆರ್ ಸಿನಿಮಾ ಬಾಕ್ಸ್ ಆಫೀಸಿನಲ್ಲಿ ಧೂಳ್ ಎಬ್ಬಿಸಿದೆ. ಈವರೆಗಿನ ಎಲ್ಲಾ ದಾಖಲೆಗಳನ್ನು ಅದು ಮುರಿದು ಮುನ್ನುಗ್ಗುತ್ತಿದೆ. ಹತ್ತಿರ ಹತ್ತಿರ ಸಾವಿರ ಕೋಟಿ ಸಮೀಪಕ್ಕೆ ಸಿನಿಮಾ ಬರುತ್ತಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಆದರೆ, ಬಾಲಿವುಡ್ ನ ಸ್ವಯಂ ವಿಮರ್ಶಕ ಕಮಲ್ ಆರ್ ಖಾನ್ ಹೇಳುವುದೇ ಬೇರೆ. ಇದನ್ನೂ ಓದಿ: ಲಹರಿ ಸಂಸ್ಥೆ ಹೊರ ತಂದ ರಿಕ್ಕಿ ಕೇಜ್‌ ಆಲ್ಬಂ ಗ್ರ್ಯಾಮಿ ಪ್ರಶಸ್ತಿಗೆ ನಾಮ ನಿರ್ದೇಶನ

    ಭಾರತೀಯ ಬಹುತೇಕ ಭಾಷೆಗಳಲ್ಲಿ ಈ ಸಿನಿಮಾ ರಿಲೀಸ್ ಆಗಿದ್ದು, ಇತರ ದೇಶಗಳ ಭಾಷೆಗಳಿಗೂ ಅದು ಡಬ್ ಆಗಿ ಬಿಡುಗಡೆ ಆಗಿದೆ. ಮೊದಲ ಮೂರು ದಿನಗಳ ಗಳಿಕೆಯಲ್ಲೇ ಅದು ದಾಖಲೆ ನಿರ್ಮಿಸಿತ್ತು. ರಿಲೀಸ್ ಆದ ವಾರದೊಳಗೆ ಹಿಂದಿಯೊಂದರಲ್ಲೇ ಅದು ನೂರು ಕೋಟಿ ಕ್ಲಬ್ ಸೇರಿ ಆಗಿದೆ. ಆದರೆ, ಅದೆಲ್ಲ ಸುಳ್ಳು ಪ್ರಚಾರ ಎಂದು ಕಮಲ್ ಟ್ವೀಟ್ ಮಾಡಿದ್ದಾರೆ. ಓದಿ: ನನ್ನಮ್ಮ ಸೂಪರ್ ಸ್ಟಾರ್’ ಯಶಸ್ಸಿನ ಗರಿಯನ್ನ ಮುಡಿಗೇರಿಸಿಕೊಂಡ ಬಿಜ್ಲಿ ಪಟಾಕಿ ವಂಶಿಕಾ – ಯಶಸ್ವಿನಿ

    ಬಾಲಿವುಡ್ ನ ಸ್ವಯಂ ವಿಮರ್ಶಕ ಖ್ಯಾತಿಯ ಈ ಕಮಲ್ ಆರ್ ಖಾನ್ ಇಂತಹ ಅಚ್ಚರಿಯ ಹೇಳಿಕೆಯನ್ನು  ಕೊಡುವುದು ಇದೇ ಮೊದಲೇನೂ ಅಲ್ಲ. ಬಾಲಿವುಡ್ ನ ಬಹುತೇಕ ಸ್ಟಾರ್ ನಟ ನಟಿಯರನ್ನು ಕಾಲೆಳೆದು ಕಂಗೆಣ್ಣಿಗೆ ಗುರಿಯಾದವರು ಇವರು. ನಿರ್ದೇಶಕರನ್ನೂ, ನಿರ್ಮಾಪಕರನ್ನೂ ಬಿಡದೇ ತಮ್ಮದೇ ಆದ ರೀತಿಯಲ್ಲಿ ಕಟುವಾಗಿ ಟೀಕಿಸುತ್ತಲೇ ಇರುತ್ತಾರೆ ಕಮಲ್. ಇದೀಗ ಆರ್.ಆರ್.ಆರ್ ವಿಷಯದಲ್ಲೂ ಅದನ್ನೇ ಮಾಡಿದ್ದಾರೆ.

     

    ‘ನನ್ನ ಪ್ರಕಾರ ಆರ್.ಆರ್.ಆರ್ ಸಿನಿಮಾವನ್ನು ಜನರು ತಿರಸ್ಕರಿಸಿದ್ದಾರೆ. ಅಷ್ಟೊಂದು ಪ್ರಮಾಣದಲ್ಲಿ ಬಾಕ್ಸ್ ಆಫೀಸ್ ತುಂಬುವುದಕ್ಕೆ ಹೇಗೆ ಸಾಧ್ಯ? ನಿರ್ಮಾಪಕರು ಮತ್ತು ನಿರ್ದೇಶಕರು ಸುಳ್ಳು ಪ್ರಚಾರ ಮಾಡುತ್ತಿದ್ದಾರೆ. ಅಲ್ಲದೇ, ಈ ಸಿನಿಮಾ 680 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿದೆ ಎಂದು ಹೇಳಲಾಗುತ್ತಿದೆ. ಅದು ಕೂಡ ಸುಳ್ಳು. ಜನರಿಗೆ ಬಜೆಟ್ ಅರ್ಥವಾಗಲ್ಲ. ಆ ಪ್ರಮಾಣದಲ್ಲಿ ಈ ಚಿತ್ರಕ್ಕೆ ಹಣ ಹೂಡಿಲ್ಲ ಎಂದು ಮುಂದಿನ ದಿನಗಳಲ್ಲಿ ಸಾಬೀತು ಮಾಡುವುದಾಗಿ’ ನಮ್ಮ ಟ್ವಿಟರ್ ಖಾತೆಯಲ್ಲಿ ಅವರು ಬರೆದುಕೊಂಡಿದ್ದಾರೆ. ಇದನ್ನೂ ಓದಿ: 20ಕ್ಕೂ ಹೆಚ್ಚು ಕೆಜಿ ತೂಕದ ಕಾಸ್ಟ್ಯೂಮ್‌ ಹಾಕಿಕೊಂಡು ಶೂಟ್ ಮಾಡಿದ್ದು ಕಷ್ಟವಾಗಿತ್ತು ಎಂದ ಮುನ್ನಾಭಾಯಿ

    ಕಮಲ್ ಈ ರೀತಿ ಟ್ವಿಟ್ ಮಾಡುತ್ತಿದ್ದಂತೆಯೇ ರಾಜಮೌಳಿ, ರಾಮ್ ಚರಣ್ ತೇಜ, ಜೂನಿಯರ್ ಎನ್.ಟಿ.ಆರ್ ಮತ್ತು ಆಲಿಯಾ ಭಟ್ ಅಭಿಮಾನಿಗಳು ಒಟ್ಟಾಗಿ ಕಮಲ್ ಮೇಲೆ ಮುಗಿಬಿದ್ದಿದ್ದಾರೆ. ಕಮಲ್ ಕುರಿತಾಗಿ ನಿಂದಿಸಿದ್ದಾರೆ. ಕಮಲ್ ಯಾರು ಎನ್ನುವುದನ್ನೂ ಕೆಲವರು ಬಿಚ್ಚಿಟ್ಟಿದ್ದಾರೆ. ಈಗಾಗಲೇ ಸಾವಿರ ಕೋಟಿ ಕ್ಲಬ್ ಸೇರುವತ್ತ ದಾಪುಗಾಲು ಇಡುತ್ತಿರುವ ಆರ್.ಆರ್.ಆರ್ ತನ್ನದೇ ದಾಖಲೆ ಮುರಿದು ಮುನ್ನುಗ್ಗುತ್ತಿದೆ. ಅತೀ ಶೀಘ್ರದಲ್ಲೇ ಅದು ಮೈಲುಗಲ್ಲು ಸ್ಥಾಪಿಸಲಿದೆ ಎಂದಿದ್ದಾರೆ ಅಭಿಮಾನಿಗಳು.

  • ಆರ್.ಆರ್.ಆರ್ ನಿಖರ ಗಳಿಕೆ  ರೂ.611ಕೋಟಿ: ವಾರಾಂತ್ಯಕ್ಕೆ ಸಾವಿರ ಕೋಟಿ ನಿರೀಕ್ಷೆ

    ಆರ್.ಆರ್.ಆರ್ ನಿಖರ ಗಳಿಕೆ ರೂ.611ಕೋಟಿ: ವಾರಾಂತ್ಯಕ್ಕೆ ಸಾವಿರ ಕೋಟಿ ನಿರೀಕ್ಷೆ

    ರಾಜಮೌಳಿ ನಿರ್ದೇಶನದ ಆರ್.ಆರ್.ಆರ್ ಸಿನಿಮಾದ ಗಳಿಕೆಯ ಬಗ್ಗೆ ಹೆಚ್ಚಾಗಿ ಊಹಾಪೋಹಗಳಿಗೆ ಹರಿದಾಡಿದವು. ಒಂದೇ ದಿನಕ್ಕೆ 100 ಕೋಟಿ, ಮೂರೇ ದಿನಕ್ಕೆ 250 ಕೋಟಿ ಎಂಬ ಸುದ್ದಿಯೂ ಬಂತು. ಆದರೆ, ನಿಖರವಾಗಿ ಇಂತಿಷ್ಟೇ ಹಣ ಬಂದಿದೆ ಎಂದು ಅಧಿಕೃತವಾಗಿ ಚಿತ್ರತಂಡವು ಎಲ್ಲಿಯೂ ಹೇಳಿಕೊಂಡಿರಲಿಲ್ಲ. ಇದೀಗ ನಿರ್ಮಾಪಕರೇ ತಮ್ಮ ಚಿತ್ರದ ಗಳಿಕೆಯ ಬಗ್ಗೆ ಮಾತನಾಡಿದ್ದಾರೆ. ಇದನ್ನೂ ಓದಿ: ಟಿಪ್ಪು ಸ್ವಾತಂತ್ರ್ಯ ಹೋರಾಟಗಾರ ಅಲ್ಲವೆಂದರೆ, ಚೆನ್ನಮ್ಮ, ರಾಯಣ್ಣನೂ ಅಲ್ಲ: ನಟ ಚೇತನ್

    ಬುಧವಾರ ನಿರ್ಮಾಪಕರು ನೀಡಿರುವ ಮಾಹಿತಿಯಂತೆ ಈವರೆಗೂ ಆರ್.ಆರ್.ಆರ್ ಸಿನಿಮಾದ ಬಾಕ್ಸ್ ಆಫೀಸ್ ಕಲೆಕ್ಷನ್ ವಿಶ್ವದಾದ್ಯಂತ ರೂ. 611 ಕೋಟಿಯಂತೆ. ಇದರಲ್ಲಿ ಭಾರತದಿಂದಲೇ 474 ಕೋಟಿ ಸಂಗ್ರಹವಾಗಿದೆ ಎಂದಿದ್ದಾರೆ. ಕೇವಲ ಹಿಂದಿ ಅವತರಣಿಕೆಯಿಂದಲೇ ಬರೋಬ್ಬರಿ 107 ಕೋಟಿ ಹಣ ಬಂದಿದೆಯಂತೆ. ಇದನ್ನೂ ಓದಿ: ತಂದೆ, ತಾತನ ಹೆಸರು ಬಳಸಿಕೊಳ್ಳದೆ ಜಿಪಂ ಸ್ಥಾನ ಗೆಲ್ಲಲಿ: ನಿಖಿಲ್‍ಗೆ ಸುಮಲತಾ ಸವಾಲು

    ಮಾರ್ಚ್ 25 ರಂದು ರಿಲೀಸ್ ಆಗಿರುವ ಈ ಸಿನಿಮಾ ಆರು ದಿನಕ್ಕೆ ಒಟ್ಟು 611 ಕೋಟಿ ರೂಪಾಯಿ ಗಳಿಸಿದ್ದು, ವಾರಾಂತ್ಯಕ್ಕೆ ಸಾವಿರ ಕೋಟಿ ರೂಪಾಯಿ ಮುಟ್ಟುವ ನಿರೀಕ್ಷೆಯಿದೆ ಎನ್ನಲಾಗುತ್ತಿದೆ. ಕೇವಲ ಭಾರತದಲ್ಲಿ ಮಾತ್ರವಲ್ಲ, ವಿದೇಶದಿಂದಲೂ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಹಾಗಾಗಿ ಹಣ ಮತ್ತಷ್ಟು ಹರಿದು ಬರಲಿದೆ ಎಂದಿದೆ ಡಿವಿವಿ ಎಂಟರ್ ಟೈನ್ ಮೆಂಟ್ ನಿರ್ಮಾಣ ಸಂಸ್ಥೆ. ಇದನ್ನೂ ಓದಿ: ‘ದಿ ಕಾಶ್ಮೀರ್ ಫೈಲ್ಸ್’ ರಿಯಲ್ ಸ್ಟೋರಿ : ಅಕ್ಕಿ ಡ್ರಮ್ ನಲ್ಲಿ ಕೊಲ್ಲಲ್ಪಟ್ಟ ನಿಜವಾದ ಕಾಶ್ಮೀರಿ ಪಂಡಿತ ಇವರು

    ರಾಜಮೌಳಿ ಅವರ ಹಿಂದಿನ ಎಲ್ಲ ಸಿನಿಮಾಗಳಿಗೂ ಹೋಲಿಸಿದರೆ, ಈ ಪ್ರಮಾಣದಲ್ಲಿ ಹಣ ಹರಿದು ಬಂದಿದ್ದು ಇದೇ ಮೊದಲ ಬಾರಿಗೆ. ಬಾಹುಬಲಿ ಚಿತ್ರಕ್ಕಿಂತಲೂ ಬಾಕ್ಸ್ ಆಫೀಸ್ ಕಲೆಕ್ಷನ್ ಆರ್.ಆರ್.ಆರ್ ನಲ್ಲಿ ಜೋರಾಗಿದೆಯಂತೆ. ತಮಿಳು, ಕನ್ನಡ, ತೆಲುಗು, ಹಿಂದಿ ಮಲಯಾಳಂ ಹೀಗೆ ಬಿಡುಗಡೆಯಾದ ಅಷ್ಟೂ ಭಾಷೆಗಳಲ್ಲೂ ಸಿನಿಮಾ ಉತ್ತಮ ಪ್ರದರ್ಶನ ಕಾಣುತ್ತಿದೆ. ಯಶ್ ನಟನೆಯ ಕೆಜಿಎಫ್ ಸಿನಿಮಾ ಮತ್ತು ತಮಿಳಿನ ವಿಜಯ್ ಅವರ ಚಿತ್ರಗಳು ತೆರೆ ಕಾಣುವತನಕ ಯಾವುದೇ ದೊಡ್ಡ ಸಿನಿಮಾಗಳು ರಿಲೀಸ್ ಆಗುತ್ತಿಲ್ಲ. ಹಾಗಾಗಿ ಚಿತ್ರದ ಓಟಕ್ಕೆ ಯಾವುದೇ ಅಡೆತಡೆ ಕಾಣುತ್ತಿಲ್ಲ. ಇದನ್ನೂ ಓದಿ:  ರಶ್ಮಿಕಾ ವೀಡಿಯೋ ನೋಡಿ ಸುಸ್ತಾದ ಅಭಿಮಾನಿಗಳು – ಕೊಡಗಿನ ಬೆಡಗಿಯ ಜಿಮ್ ಕಸರತ್ತು

    ಸ್ವಾತಂತ್ರ್ಯ ಪೂರ್ವದಲ್ಲಿ ಕ್ರಾಂತಿಕಾರಿಗಳಾದ ಕೋಮರಾಮ್ ಭೀಮ್ ಮತ್ತು ಸೀತಾರಾಮ ರಾಜು ಅವರನ್ನು ಹೋಲುವಂತಹ ಕಾಲ್ಪನಿಕ ಕಥೆಗಳನ್ನಾಧರಿಸಿ ಈ ಸಿನಿಮಾ ಮಾಡಿದ್ದಾರೆ ರಾಜಮೌಳಿ. ಹಾಗಾಗಿ ಈ ಸಿನಿಮಾ ಕಥೆಯಿಂದಲೂ ಮತ್ತು ಮೇಕಿಂಗ್ ನಿಂದಲೂ ಗಮನ ಸೆಳೆದಿದೆ.

  • ಮೂರು ದಿನಕ್ಕೆ 500 ಕೋಟಿ ಬಾಚಿದ ಆರ್.ಆರ್.ಆರ್: ಬಾಕ್ಸ್ ಆಫೀಸ್ ಚಿಂದಿಚಿತ್ರಾನ್ನ

    ಮೂರು ದಿನಕ್ಕೆ 500 ಕೋಟಿ ಬಾಚಿದ ಆರ್.ಆರ್.ಆರ್: ಬಾಕ್ಸ್ ಆಫೀಸ್ ಚಿಂದಿಚಿತ್ರಾನ್ನ

    ರಾಜಮೌಳಿ ನಿರ್ದೇಶನದ ‘ಆರ್.ಆರ್.ಆರ್’ ಸಿನಿಮಾ ಬಾಕ್ಸ್ ಆಫೀಸಿನಲ್ಲಿ ಭರ್ಜರಿ ಕಲೆಕ್ಷನ್ ಮಾಡುತ್ತಿದೆ. ತಮ್ಮ ದಾಖಲೆಗಳನ್ನು ಮುರಿದುಕೊಂಡು ನಿರಾತಂಕವಾಗಿ ಮುನ್ನುಗ್ಗುತ್ತಿದ್ದಾರೆ ರಾಜಮೌಳಿ.  ಈ ಹಿಂದಿನ ಬಾಹುಬಲಿ ಚಿತ್ರಕ್ಕಿಂತಲೂ ಈ ಬಾರಿ ಕಲೆಕ್ಷನ್ ವೇಗ ಜೋರಾಗಿದೆಯಂತೆ. ಹಾಗಾಗಿ ರಿಲೀಸ್ ಆದ ಮೂರೇ ಮೂರು ದಿನಕ್ಕೆ 500 ಕೋಟಿ ಹಣ ಹರಿದು ಬಂದಿದೆ ಎನ್ನುತ್ತಾರೆ ಸಿನಿ ಲೆಕ್ಕಚಾರ ಪಂಡಿತರು. ಇದನ್ನೂ ಓದಿ : ಕೆಜಿಎಫ್ ಸಿನಿಮಾ ಆಗೋಕೆ ಮೂವರು ಮಹಿಳೆಯರು ಕಾರಣ: ವಿಜಯ್ ಕಿರಗಂದೂರು

    ವಿಶ್ವದಾದ್ಯಂತ ಈ ಸಿನಿಮಾ ರಿಲೀಸ್ ಆಗಿದ್ದು, ಕೇವಲ ಭಾರತದಲ್ಲಿ ಮಾತ್ರವಲ್ಲ, ವೀಕೆಂಡ್ ನಲ್ಲಿ ವಿದೇಶದಲ್ಲೂ ಸಖತ್ ಕಮಾಯಿ ಮಾಡಿದೆಯಂತೆ. ಇದೇ ವೇಗದಲ್ಲೇ ಒಂದು ವಾರ ಪ್ರದರ್ಶನ ಕಂಡರೆ, ಒಂದು ವಾರದಲ್ಲಿ ಸಾವಿರ ಕೋಟಿ ಹಣ ಗಳಿಸಿದ ಮೊದಲ ಚಿತ್ರ ಇದಾಗಲಿದೆ. ಇದನ್ನೂ ಓದಿ : ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿ ವೇದಿಕೆಯಲ್ಲೇ ಕಪಾಳಮೋಕ್ಷ: ಅತ್ಯುತ್ತಮ ನಟ ಆಸ್ಕರ್ ವಿಜೇತ ವಿಲ್ ಸ್ಮಿತ್ ಉಗ್ರತಾಪ

    ಈ ಸಿನಿಮಾ ಮೊದಲ ದಿನ ಕರ್ನಾಟಕದಲ್ಲಿ 14.5 ಕೋಟಿ ಗಳಿಕೆ ಮಾಡಿದ್ದರೆ, ಆಂಧ್ರ ಪ್ರದೇಶದಲ್ಲಿ 75 ಕೋಟಿ ಗಳಿಸಿತ್ತು. ತಮಿಳು ನಾಡಿನಲ್ಲಿ 10 ಕೋಟಿ, ಕೇರಳದಲ್ಲಿ 4 ಕೋಟಿ, ಹಿಂದಿಯಲ್ಲಿ 14 ಕೋಟಿ, ಉತ್ತರ ಭಾರತದಲ್ಲಿ 25 ಕೋಟಿ, ಹೀಗೆ ಭಾರತದಲ್ಲೇ ಮೊದಲ ದಿನ ಆರ್.ಆರ್.ಆರ್ ಗಳಿಸಿದ ಒಟ್ಟು ಮೊತ್ತ 156 ಕೋಟಿ ಆಗಿತ್ತು. ವಿದೇಶದಲ್ಲೂ ಕೂಡ ಹಿಂದೆ ಬಿದ್ದಿರಲಿಲ್ಲ. ಯುಎಸ್ ನಲ್ಲೇ 42 ಕೋಟಿ ಕಲೆಕ್ಷನ್ ಮಾಡಿತ್ತು. ಬೇರೆ ಬೇರೆ ದೇಶಗಳಿಂದ 25 ಕೋಟಿ ಬಂದಿತ್ತು. ವಿಶ್ವದಾದ್ಯಂತ ಮೊದಲ ದಿನದ ಒಟ್ಟು ಕಲೆಕ್ಷನ್ 223 ಕೋಟಿ ಆಗಿತ್ತು. ಇದನ್ನೂ ಓದಿ: ಕೆಜಿಎಫ್-2 ಟ್ರೈಲರ್ ರಿಲೀಸ್ ಮಾಡಿದ ಶಿವಣ್ಣ- ರಾಕಿಬಾಯ್ ಅಬ್ಬರ ಶುರು

    ಹಿಂದಿ ವರ್ಷನ್ ಒಂದರಲ್ಲೇ ಶುಕ್ರವಾರ 19 ಕೋಟಿ, ಶನಿವಾರ 24 ಕೋಟಿ ಹಾಗೂ ಭಾನುವಾರ 31.50 ಕೋಟಿ ಏರಿಕೆ ಕಂಡಿದೆ. ಹೀಗಾಗಿ ಶನಿವಾರ ಮತ್ತು ಭಾನುವಾರ ಎರಡನೇ ದಿನದ ಗಳಿಕೆ ವೀಕೆಂಡ್ ಕಾರಣಕ್ಕಾಗಿ ಮತ್ತಷ್ಟು ಏರಿಕೆ ಕಂಡು ಮೂರೇ ದಿನದಲ್ಲಿ 500 ಕೋಟಿ ರೂಪಾಯಿಗಳನ್ನು ಈ ಸಿನಿಮಾ ಬಾಚಿದೆ.