Tag: ಬಾಗಲಗುಂಟೆ

  • ಪಕ್ಕದ ಅಂಗಡಿಯಲ್ಲಿ ವ್ಯಾಪಾರ ಚೆನ್ನಾಗಿದೆ ಅಂತ ಮತ್ಸರ – ಅಂಗಡಿ ಮಾಲೀಕನ ಕೊಲೆಗೆ ಸುಪಾರಿ ಕೊಟ್ಟಿದ್ದವ ಅರೆಸ್ಟ್

    ಪಕ್ಕದ ಅಂಗಡಿಯಲ್ಲಿ ವ್ಯಾಪಾರ ಚೆನ್ನಾಗಿದೆ ಅಂತ ಮತ್ಸರ – ಅಂಗಡಿ ಮಾಲೀಕನ ಕೊಲೆಗೆ ಸುಪಾರಿ ಕೊಟ್ಟಿದ್ದವ ಅರೆಸ್ಟ್

    ಬೆಂಗಳೂರು: ಪಕ್ಕದ ಅಂಗಡಿಯಲ್ಲಿ ವ್ಯಾಪಾರ ಚೆನ್ನಾಗಿ ನಡೆಯುತ್ತಿದೆ ಎಂದು ಮತ್ಸರ ಉಂಟಾಗಿ ಅಂಗಡಿ ಮಾಲೀಕನ ಕೊಲೆಗೆ ಸುಪಾರಿ ಕೊಟ್ಟಿದ್ದ ಆರೋಪಿಯನ್ನು ಬಾಗಲಗುಂಟೆ ಪೊಲೀಸರು (Bagalgunte Police) ಬಂಧಿಸಿದ್ದಾರೆ.

    ವೇನರಾಮ್ (45) ಕೊಲೆಗೆ ಸುಪಾರಿ ಕೊಟ್ಟಿದ್ದ ಆರೋಪಿ. ನೇಮರಾಮ್ ಎಂಬ ವ್ಯಕ್ತಿ ಬಾಗಲಗುಂಟೆ ಸಿಡೇದಹಳ್ಳಿ ಬಳಿ ಹ್ಯಾಪಿ ಟೆಕ್ಸ್‌ಟೈಲ್‌ ಅಂಗಡಿ (Textile Shop) ಇಟ್ಟುಕೊಂಡಿದ್ದರು. ಅಂಗಡಿ ಪಕ್ಕದಲ್ಲೇ ವೇನರಾಮ್ ಹೈ ಫ್ಯಾಷನ್ ಬಟ್ಟೆ ಅಂಗಡಿ ಇಟ್ಟುಕೊಂಡಿದ್ದ. ನೇಮರಾಮ್ ಅಂಗಡಿಯಲ್ಲಿ ವ್ಯಾಪಾರ ಹೆಚ್ಚಾಗಿ ನಡೆಯುತ್ತಿತ್ತು. ಅದರಿಂದ ಮತ್ಸರಗೊಂಡ ಆರೋಪಿ ವೇನರಾಮ್ ಆ ಅಂಗಡಿಯಲ್ಲಿ ಬಟ್ಟೆ ಸರಿ ಇಲ್ಲ ಎಂದು ಅಪಪ್ರಚಾರ ಮಾಡುತ್ತಿದ್ದ. ವೇನರಾಮ್ ಅಂಗಡಿಯಲ್ಲಿದ್ದ ಹುಡುಗನನ್ನ ನೇಮರಾಮ್ ತನ್ನ ಅಂಗಡಿಗೆ ಸೇರಿಸಿಕೊಂಡಿದ್ದ. ಇದರಿಂದ ಕೋಪಗೊಂಡಿದ್ದ ವೇನರಾಮ್, ನೇಮರಾಮ್ ಕೊಲೆಗೆ ಸುಪಾರಿ ಕೊಟ್ಟಿದ್ದ. ಇದನ್ನೂ ಓದಿ: ವಿಶ್ವದಲ್ಲಿ ನಮಗೆ ಯಾರೂ ಶತ್ರುಗಳಿಲ್ಲ, ಬೇರೆ ದೇಶದ ಮೇಲಿನ ಅವಲಂಬನೆಯೇ ನಮ್ಮ ದೊಡ್ಡ ಶತ್ರು – ಮೋದಿ

    ರಾಜಸ್ಥಾನದ ವಿನೋದ್ ಜಾಟ್ ಎಂಬಾತನಿಗೆ ವೇನರಾಮ್ 5 ಲಕ್ಷಕ್ಕೆ ಸುಪಾರಿ ಕೊಟ್ಟಿದ್ದ. ಅದರಂತೆ ವ್ಯಾಪಾರ ಮುಗಿಸಿ ಹೊರಟಿದ್ದ ನೇಮರಾಮ್ ಮೇಲೆ ಅಟ್ಯಾಕ್ ಮಾಡಲಾಗಿತ್ತು. ಎರಡು ಬೈಕ್‌ನಲ್ಲಿ ಬಂದು ವಿನೋದ್ ಟೀಂ ಅಟ್ಯಾಕ್ ಮಾಡಿತ್ತು. ಸದ್ಯ ಸುಪಾರಿ ಸಂಬಂಧ ವೇನರಾಮ್‌ನನ್ನು ಬಾಗಲಗುಂಟೆ ಪೊಲೀಸರು ಬಂಧಿಸಿದ್ದಾರೆ. ಸುಪಾರಿ ಪಡೆದ ಆರೋಪಿ ವಿನೋದ್ ಜಾಟ್‌ಗಾಗಿ ಪೊಲೀಸರ ಹುಡುಕಾಟ ನಡೆಸುತ್ತಿದ್ದಾರೆ. ಘಟನೆ ಸಂಬಂಧ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ದೆಹಲಿ | ಮಾದಕವಸ್ತು ಜಾಲದ ಮೇಲೆ 500 ಪೊಲೀಸರಿಂದ ರೇಡ್ – 63 ಮಂದಿ ಅರೆಸ್ಟ್

  • ವಿಶೇಷ ಪೂಜೆ ಮಾಡ್ಬೇಕು ಅಂತ ಹೇಳಿ ಪೂಜಾರಿಯಿಂದ ಟೆಕ್ಕಿ ಮಹಿಳೆ ಮೇಲೆ ಅತ್ಯಾಚಾರ

    ವಿಶೇಷ ಪೂಜೆ ಮಾಡ್ಬೇಕು ಅಂತ ಹೇಳಿ ಪೂಜಾರಿಯಿಂದ ಟೆಕ್ಕಿ ಮಹಿಳೆ ಮೇಲೆ ಅತ್ಯಾಚಾರ

    ಬೆಂಗಳೂರು: ದೋಷ ಇದೆ, ವಿಶೇಷ ಪೂಜೆ ಮಾಡಬೇಕೆಂದು ಹೇಳಿ ಪೂಜಾರಿಯೊಬ್ಬ ಮಹಿಳೆಯ (Woman) ಮೇಲೆ ಅತ್ಯಾಚಾರವೆಸಗಿರುವ (Rape) ಘಟನೆ ಬೆಂಗಳೂರಿನ ಬಗಲಗುಂಟೆಯಲ್ಲಿ (Bagalgunte) ನಡೆದಿದೆ.

    ಹಾಸನ (Hassan) ಮೂಲದ ದಯಾನಂದ್ ಅತ್ಯಾಚಾರವೆಸಗಿರುವ ಪೂಜಾರಿ. ಈತ ಹಾಸನದ ಪ್ರಸಿದ್ಧ ಪುರದಮ್ಮ ದೇವಾಲಯದ ಪೂಜಾರಿಯಾಗಿದ್ದ. ಯುವತಿ ಪೂಜೆಗೆ ದೇವಸ್ಥಾನಕ್ಕೆ ಹೋದ ಸಂದರ್ಭದಲ್ಲಿ ಆರೋಪಿ ದಯಾನಂದ್‌ಗೆ ಪರಿಚಯವಾಗಿದ್ದಾರೆ. ಆಗ ಪೂಜಾರಿ ದಯಾನಂದ್ ಯುವತಿಯ ಹಸ್ತರೇಖೆ ನೋಡಿ ನಿನಗೆ ಮದುವೆ ದೋಷ ಇದೆ. ವಿಶೇಷ ಪೂಜೆ ಮಾಡಿದರೆ ಪರಿಹಾರವಾಗುತ್ತೆ ಎಂದು ಪುಂಗಿದ್ದಾನೆ. ಡೋಂಗಿ ಪೂಜಾರಿ ಮಾತು ನಂಬಿದ ಯುವತಿ ಪೂಜೆಗೆ ಎಂದು 10 ಸಾವಿರ ರೂಪಾಯಿ ಕೊಟ್ಟಿದ್ದಾಳೆ ಎಂದು ಹೇಳಲಾಗಿದೆ. ಇದನ್ನೂ ಓದಿ: ಲೋಕಸಭೆಯಲ್ಲೂ ವಾಲ್ಮೀಕಿ ಹಗರಣ ಪ್ರತಿಧ್ವನಿ; ಗ್ಯಾರಂಟಿಗೆ SC-ST ಹಣ ಬಳಕೆ – ಸಿದ್ದರಾಮಯ್ಯ ವಿರುದ್ಧ ವಿತ್ತ ಸಚಿವೆ ಟೀಕೆ

    ಅಲ್ಲದೇ ಆರೋಪಿ ಸಂತ್ರಸ್ತ ಯುವತಿಗೆ ನಿಂಬೆಹಣ್ಣು ಮಂತ್ರಿಸಿ ಮಲಗುವಾಗ ತಲೆದಿಂಬಿನ ಕೆಳಗಡೆ ಇಟ್ಟುಕೊಂಡು ಮಲಗಲು ಸೂಚಿಸಿದ್ದಾನೆ. ಅದೇ ರೀತಿ ನಿಂಬೆ ಹಣ್ಣು ಮಂತ್ರಿಸಿಕೊಟ್ಟು ಯುವತಿಯನ್ನು ವಶೀಕರಣ ಮಾಡಿಕೊಂಡಿದ್ದಾನೆ. ಬಳಿಕ ಯುವತಿಗೆ ತಾನು ಹೇಳಿದಹಾಗೆ ಕೇಳುವಂತೆ ಪಳಗಿಸಿಕೊಂಡು ಕೃತ್ಯ ಎಸಗಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಇದನ್ನೂ ಓದಿ: Wayanad Landslides: 93 ಮೃತದೇಹ ಸಿಕ್ಕಿವೆ, ಸಾವಿನ ಸಂಖ್ಯೆ ಹೆಚ್ಚಾಗಬಹುದು – ಸಿಎಂ ಪಿಣರಾಯಿ ಆತಂಕ

    ಸಂತ್ರಸ್ತ ಯುವತಿ ನಗರದ ಪ್ರತಿಷ್ಠಿತ ಕಂಪನಿಯಲ್ಲಿ ಟೆಕ್ಕಿಯಾಗಿದ್ದರು. ಹಾಗಾಗಿ ಆರೋಪಿ ಆಗಾಗ ಬಂದು ಕಾರಿನಲ್ಲಿ ಕರೆದುಕೊಂಡು ಹೋಗಿ ದೇವರ ತಾಳಿ ಹಾಕಿಕೊಳ್ಳುವಂತೆ ಹೇಳಿ ಫೋಟೋ ತಗೆದುಕೊಂಡಿದ್ದಾನೆ. ಅಲ್ಲಿಂದ ಹೆಚ್‌ಎಸ್‌ಆರ್ ಲೇಔಟ್, ಮೈಸೂರು ರೋಡ್‌ಗೆ ಕರೆದುಕೊಂಡು ಹೋಗಿ ಕಾರಿನಲ್ಲಿಯೇ ಬಲವಂತವಾಗಿ ಅತ್ಯಾಚಾರ ಮಾಡಿದ್ದಾನೆ. ಇತ್ತೀಚಿಗೆ ಬೆಂಗಳೂರಿನ ಲಾಡ್ಜ್ಗೆ ಕರೆದುಕೊಂಡು ಹೋಗಿ ಅತ್ಯಾಚಾರ ಮಾಡಿ ವಿಡಿಯೋ ಮಾಡಿಕೊಂಡು ಬ್ಲಾಕ್‌ಮೇಲ್ ಮಾಡಲು ಶುರು ಮಾಡಿದ್ದಾನೆ. ಸಂತ್ರಸ್ತ ಯುವತಿ ಬಗಲಗುಂಟೆ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಕೇಸ್ ದಾಖಲಿಸಿದ್ದಾರೆ. ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿದ ಪೊಲೀಸರು ಪೂಜಾರಿ ದಯಾನಂದ್‌ನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: Shirur Landslide; ನಾಪತ್ತೆಯಾದವರ ಕುಟುಂಬಸ್ಥರ ಕಣ್ಣೀರು ನೋಡಿ ಮತ್ತೆ ಕಾರ್ಯಾಚರಣೆ ನಿರ್ಧಾರ: ಈಶ್ವರ್ ಮಲ್ಪೆ

  • ವೀಡಿಯೋ ಕಾಲ್‍ನಲ್ಲಿ ಪತ್ನಿಗೆ ಹೆದರಿಸಲು ಹೋಗಿ ನೇಣಿಗೆ ಬಲಿಯಾದ ಜಿಮ್ ಟ್ರೈನರ್

    ವೀಡಿಯೋ ಕಾಲ್‍ನಲ್ಲಿ ಪತ್ನಿಗೆ ಹೆದರಿಸಲು ಹೋಗಿ ನೇಣಿಗೆ ಬಲಿಯಾದ ಜಿಮ್ ಟ್ರೈನರ್

    ಬೆಂಗಳೂರು: ಪತ್ನಿಗೆ ವೀಡಿಯೋ ಕಾಲ್ ಮಾಡಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೆದರಿಸಲು ಯತ್ನಿಸಿದ ಜಿಮ್ ಟ್ರೈನರ್ (Gym Trainer) ಸಾವಿಗೀಡಾದ ಘಟನೆ ನಗರದ ಬಾಗಲಗುಂಟೆಯಲ್ಲಿ (Bagalakunte) ನಡೆದಿದೆ.

    ಮೃತನನ್ನು ಬಿಹಾರ (Bihar) ಮೂಲದ ಅಮಿತ್ ಕುಮಾರ್ (28) ಎಂದು ಗುರುತಿಸಲಾಗಿದೆ. ಸುಮಾರು ಹತ್ತು ವರ್ಷಗಳಿಂದ ಬೆಂಗಳೂರಿನಲ್ಲಿ (Bengaluru) ವಾಸವಾಗಿದ್ದ ಅಮಿತ್, ಹಾಸನ ಮೂಲದ ಯುವತಿಯನ್ನ ಮದುವೆಯಾಗಿದ್ದ. ಇತ್ತೀಚೆಗೆ ಪತ್ನಿ ಹಾಗೂ ಅಮಿತ್ ನಡುವೆ ಗಲಾಟೆ ನಡೆದು, ಆಕೆ ತವರು ಮನೆ ಸೇರಿದ್ದಳು. ಇದರಿಂದ ಬೇಸತ್ತ ಅಮಿತ್ ಆಕೆಗೆ ವೀಡಿಯೋ ಕಾಲ್ ಮಾಡಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಸಲು ಮುಂದಾಗಿದ್ದಾನೆ. ಈ ವೇಳೆ ಮೊಬೈಲ್ ಕೆಳಗೆ ಬಿದ್ದಿದ್ದು, ನೇಣು ಬಿಗಿದುಕೊಂಡಿದೆ. ಇದರಿಂದ ಆತ ಸಾವಿಗೀಡಾಗಿದ್ದಾನೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಮನೆಯ ಬಾತ್‌ ರೂಂನಲ್ಲಿ ಯುವತಿ ಅನುಮಾನಾಸ್ಪದ ಸಾವು

    ಕಳೆದ ಮೂರು ವರ್ಷಗಳ ಹಿಂದೆ ಅಮಿತ್ ಯುವತಿಯನ್ನು ಮದುವೆಯಾಗಿದ್ದ. ಮೂರು ತಿಂಗಳ ಹಿಂದೆ ಅಮಿತ್ ಪತ್ನಿ ನಸಿರ್ಂಗ್ ಕೆಲಸಕ್ಕೆ ಸೇರಿದ್ದಳು. ಇದೇ ವಿಚಾರಕ್ಕೆ ಇಬ್ಬರ ನಡುವೆ ಈ ಹಿಂದೆ ಜಗಳ ನಡೆದಿತ್ತು. ಇದಾದ ಬಳಿ ಆಕೆ ತವರು ಮನೆ ಸೇರಿದ್ದಳು. ಕಳೆದ ವಾರ ಆಕೆಯನ್ನು ಕರೆದುಕೊಂಡು ಬಂದಿದ್ದ ಅಮಿತ್ ಮತ್ತೆ ಇದೇ ವಿಚಾರಕ್ಕೆ ಗಲಾಟೆ ಮಾಡಿದ್ದ. ಇದರಿಂದ ಮನನೊಂದ ಮಹಿಳೆ ಮರಳಿ ತವರು ಮನೆಗೆ ಹೋಗಿದ್ದಳು.

    ಘಟನಾ ಸ್ಥಳಕ್ಕೆ ಬಾಗಲಗುಂಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಇದನ್ನೂ ಓದಿ: ಉಗ್ರ ಕೃತ್ಯಕ್ಕೆ ಸಹಕಾರ – ನಾಪತ್ತೆಯಾಗಿದ್ದ ಆರೋಪಿ ಮೈಸೂರಿನಲ್ಲಿ ಅರೆಸ್ಟ್‌

  • ಮನೆಯಲ್ಲಿ ಗಂಡು.. ಬೀದಿಯಲ್ಲಿ ಹೆಣ್ಣು; ಐಷಾರಾಮಿ ಜೀವನಕ್ಕೆ ಹೆಣ್ಣಾಗಿದ್ದ ಐನಾತಿ ಅರೆಸ್ಟ್

    ಮನೆಯಲ್ಲಿ ಗಂಡು.. ಬೀದಿಯಲ್ಲಿ ಹೆಣ್ಣು; ಐಷಾರಾಮಿ ಜೀವನಕ್ಕೆ ಹೆಣ್ಣಾಗಿದ್ದ ಐನಾತಿ ಅರೆಸ್ಟ್

    ಬೆಂಗಳೂರು: ಹೆಂಡತಿ-ಮಕ್ಕಳಿದ್ದರೂ, ಐಷಾರಾಮಿ ಜೀವನಕ್ಕಾಗಿ ಹೆಣ್ಣಿನ ವೇಷ ಹಾಕಿ ವ್ಯಕ್ತಿಯೊಬ್ಬ ಪೊಲೀಸರ ಅತಿಥಿಯಾದ ಪ್ರಕರಣ ಬಾಗಲಗುಂಟೆಯಲ್ಲಿ (Bagalgunte) ನಡೆದಿದೆ.

    ಬಂಧನಕ್ಕೊಳಗಾದ ವ್ಯಕ್ತಿಯನ್ನು ಚೇತನ್ ಎಂದು ಗುರುತಿಸಲಾಗಿದೆ. ಬೀದಿಯಲ್ಲಿ ಮಂಗಳಮುಖಿಯಂತೆ ನಟಿಸಿ ಜನರಿಂದ ಹಣ ವಸೂಲಿ ಮಾಡುತ್ತಿದ್ದ. ಜನ ಹಣ ಕೊಡದಿದ್ದಾಗ ಹೆದರಿಸಿ ಕೊಲೆ ಮಾಡುವುದಾಗಿ ಬೆದರಿಸುತ್ತಿದ್ದ. ಅಲ್ಲದೇ ಮಂಗಳಮುಖಿಯರ ಸಹವಾಸ ಮಾಡಿದ್ದ ಆರೋಪಿ ಅವರೊಂದಿಗೆ ಭಿಕ್ಷಾಟನೆಗೆ ತೆರಳುತ್ತಿದ್ದ ಎಂಬ ವಿಚಾರ ತಿಳಿದು ಬಂದಿದೆ. ಇದನ್ನೂ ಓದಿ: ವಂಶಿಕಾ ಹೆಸರಲ್ಲಿ ದೋಖಾ : ಬಗೆದಷ್ಟು ಬಯಲಾಗ್ತಿದೆ ನಿಶಾ ಕರ್ಮಕಾಂಡ

    ಮನೆಯಲ್ಲಿ ಪತ್ನಿ ಹಾಗೂ ಇತರರಿಗೆ ತಿಳಿಯದಂತೆ ಪ್ರತ್ಯೇಕ ರೂಮ್ ಸಹ ಮಾಡಿದ್ದ. ನಾಗಸಂದ್ರ ಮೆಟ್ರೋ ನಿಲ್ದಾಣದ ಸುತ್ತಾ ಭಿಕ್ಷಾಟನೆ ಮಾಡುತ್ತಿದ್ದ. ಮೆಟ್ರೋದ ಬಿಎಂಆರ್‌ಸಿಎಲ್ ಜಾಗದಲ್ಲಿ ಶೆಡ್ ನಿರ್ಮಿಸಲು ಮುಂದಾಗಿದ್ದ. ಈ ವೇಳೆ ಅಧಿಕಾರಿಗಳು ಹಾಗೂ ಸ್ಥಳೀಯರು ಪರಿಶೀಲನೆಗೆ ತೆರಳಿದ್ದಾಗ ಸ್ಥಳೀಯ ಮಹಿಳೆಯರ ಸೀರೆ ಎಳೆದಾಡಿ ವಿಕೃತಿ ಮೆರೆದಿದ್ದ.‌

    ಈ ವೇಳೆ ಚೇತನ್‍ನನ್ನು ಹಿಡಿದು ಸ್ಥಳೀಯರು ಥಳಿಸಲು ಮುಂದಾಗಿದ್ದಾರೆ. ಆಗ ಆತನ ಅಸಲಿ ಕತೆ ಬಯಲಾಗಿದೆ. ಬಾಗಲಗುಂಟೆ ಪೊಲೀಸರು (Police) ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ವಿಚಾರಣೆ ಬಳಿಕ ಆರೋಪಿಯನ್ನು ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿದೆ. ಇದನ್ನೂ ಓದಿ: ಜು.19 ರಿಂದ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭ – ಲಕ್ಷ್ಮಿ ಹೆಬ್ಬಾಳ್ಕರ್‌

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪಬ್‍ಜಿ ಆಡುವ ವೇಳೆ ಡಿಸ್ಟರ್ಬ್ ಮಾಡಿದ್ದಕ್ಕೆ ಕೊಲೆಗೈದವನ ಕಾಲಿಗೆ ಗುಂಡೇಟು

    ಪಬ್‍ಜಿ ಆಡುವ ವೇಳೆ ಡಿಸ್ಟರ್ಬ್ ಮಾಡಿದ್ದಕ್ಕೆ ಕೊಲೆಗೈದವನ ಕಾಲಿಗೆ ಗುಂಡೇಟು

    ಬೆಂಗಳೂರು: ಪಬ್ ಜಿ ಆಡುವ ವೇಳೆ ಡಿಸ್ಟರ್ಬ್ ಮಾಡಿದ್ದಕ್ಕೆ ಗೆಳೆಯನನ್ನು ಕೊಲೆಗೈದಿದ್ದ ರೌಡಿಶೀಟರ್ ಕಾಲಿಗೆ ಪೊಲೀಸರ ಗುಂಡೇಟು ತಗುಲಿದೆ. ಬೆಂಗಳೂರಿನ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುಂಡೇಟು ಸದ್ದು ಕೇಳಿದೆ.

    ಪಬ್ ಜಿ ಆಡುವ ವೇಳೆ ಡಿಸ್ಟರ್ಬ್ ಮಾಡಿದ್ದ ಅನ್ನೋ ಕಾರಣಕ್ಕೆ ಕರಣ್ ಸಿಂಗ್ ಎಂಬವನ್ನ ರೌಡಿ ಶೀಟರ್ ಪ್ರಭು ಕೊಲೆ ಮಾಡಿದ್ದನು. ಇಂದು ಪೊಲೀಸರು ಆಚಾರ್ಯ ಕಾಲೇಜ್ ಬಳಿಯ ಸಾಸಿವೆಘಟ್ಟದಲ್ಲಿ ಪ್ರಭು ಬಂಧನಕ್ಕೆ ಮುಂದಾಗಿದ್ದರು. ಈ ವೇಳೆ ಪೇದೆ ಹನುಮಂತೇಗೌಡರ ಮೇಲೆ ಹಲ್ಲೆ ಮಾಡಿ ಎಸ್ಕೇಪ್ ಆಗಲು ಪ್ರಭು ಪ್ರಯತ್ನಿಸಿದ್ದನು.

    ಕೊನೆಗೆ ಆತ್ಮರಕ್ಷಣೆಗಾಗಿ ಬಾಗಲಗುಂಟೆಯ ಸಬ್ ಇನ್‍ಸ್ಪೆಕ್ಟರ್ ಶ್ರೀಕಂಠೇಗೌಡರು ಫೈರಿಂಗ್ ಮಾಡಿದ್ದಾರೆ. ಪ್ರಭು ಕಾಲಿಗೆ ಗುಂಡು ತಗುಲಿದ್ದು ಸಪ್ತಗಿರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕರಣ್ ಸಿಂಗ್ ಕೊಲೆ ಸಂಬಂಧ ಬಾಗಲಗುಂಟೆಯಲ್ಲಿ ಪ್ರಕರಣ ದಾಖಲಾಗಿತ್ತು.