Tag: ಬಾಣಸವಾಡಿ

  • ಹೈಪರ್ ಟೆನ್ಷನ್, ಮೂಡ್ ಸ್ವಿಂಗ್ ಖಾಯಿಲೆಯಿಂದ ಬಳಲುತ್ತಿರೋ ಪತ್ನಿಯಿಂದ ಪತಿಗೆ ಕಿರುಕುಳ

    ಹೈಪರ್ ಟೆನ್ಷನ್, ಮೂಡ್ ಸ್ವಿಂಗ್ ಖಾಯಿಲೆಯಿಂದ ಬಳಲುತ್ತಿರೋ ಪತ್ನಿಯಿಂದ ಪತಿಗೆ ಕಿರುಕುಳ

    ಬೆಂಗಳೂರು: ಹೈಪರ್ ಟೆನ್ಷನ್ ಹಾಗೂ ಮೂಡ್ ಸ್ವಿಂಗ್ ಖಾಯಿಲೆಯಿಂದ ಬಳಲುತ್ತಿರುವ ಪತ್ನಿಯು ಪತಿಗೆ ಕಿರುಕುಳ ನೀಡಿರುವ ಪ್ರಕರಣವೊಂದು ಸಿಲಿಕಾನ್ ಸಿಟಿಯಲ್ಲಿ ಬೆಳಕಿಗೆ ಬಂದಿದೆ.

    ಪತ್ನಿ ಹಾಗೂ ಅತ್ತೆಯ ಕಿರುಕುಳ ಹಾಗೂ ಹಲ್ಲೆಯಿಂದ ಬೇಸತ್ತು ಕರುಣಾಕರನ್ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಇದನ್ನೂ ಓದಿ: ದನಗಳ ಮೈ ತೊಳೆಯಲು ಹೋದ ರೈತ ನೀರು ಪಾಲು

    ಮ್ಯಾಟ್ರಿಮೋನಿಯಲ್ಲಿ ಲೇಖನಾಶ್ರೀ ಪರಿಚಯವಾಗಿ ಕುಟುಂಬಸ್ಥರ ಒಪ್ಪಿಗೆ ಮೇರೆಗೆ ಕರುಣಾಕರಣ್ ಮದುವೆಯಾಗಿದ್ದ. ಇದೀಗ ಪತ್ನಿ ಹಾಗೂ ಆಕೆಯ ತಾಯಿ ಐದು ವರ್ಷದ ಹಿಂದಿನ ಕೆಲ ಖಾಸಗಿ ಫೋಟೋಗಳನ್ನು ತೋರಿಸಿ ಬೆದರಿಕೆ ಹಾಕಿದ್ದಾರೆ ಎಂದು ಕರುಣಾಕರನ್ ದೂರಿದ್ದಾರೆ.

    ಐದು ವರ್ಷದ ಫೋಟೋಗಳನ್ನ ಇಟ್ಟುಕೊಂಡು ತೊಂದರೆ ನೀಡಿದ್ದ ಹಿನ್ನೆಲೆಯಲ್ಲಿ ಕರುಣಾಕರನ್ ಚೆನ್ನೈಗೆ ತೆರಳಿದ್ದ. ಈ ವೇಳೆ ಪತ್ನಿ ಹಾಗೂ ಅತ್ತೆ ಮಿಸ್ಸಿಂಗ್ ಕಂಪ್ಲೆಂಟ್ ಕೂಡ ನೀಡಿದ್ದರು. ನಂತರ ಮನೆಗೆ ಬಂದಾಗ ಕಟ್ಟಿಗೆಯಿಂದ ಹಲ್ಲೆ ನಡೆಸಿದ್ದಾರೆ. ಹೀಗಾಗಿ ಪತ್ನಿ ಹಾಗೂ ಅತ್ತೆ ವಿರುದ್ಧ ಕ್ರಮ ಕೈಗೊಳ್ಳುವಂತೆ ಕರುಣಾಕರನ್ ದೂರಿನಲ್ಲಿ ತಿಳಿಸಿದ್ದಾರೆ.

    ಈ ಸಂಬಂಧ ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಡಿಎಂಕೆ ಮುಖಂಡನ ಮೇಲೆ ಹಲ್ಲೆ ಪ್ರಕರಣ- ಐವರು ಪೊಲೀಸರ ವಶಕ್ಕೆ

    ಡಿಎಂಕೆ ಮುಖಂಡನ ಮೇಲೆ ಹಲ್ಲೆ ಪ್ರಕರಣ- ಐವರು ಪೊಲೀಸರ ವಶಕ್ಕೆ

    ಬೆಂಗಳೂರು: ಡಿಎಂಕೆ ಮುಖಂಡ ಗುರುಸ್ವಾಮಿ (DMK Leader Guruswamy Murthy) ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಮಧಿಸಿದಂತೆ ಇದೀಗ ಪೊಲೀಸರು ಐವರನ್ನು ವಶಕ್ಕೆ ಪಡೆದಿದ್ದಾರೆ.

    ಪ್ರಕರಣ ಸಂಬಂಧ ಬಾಣಸವಾಡಿ ಪೊಲೀಸರು ಕಳೆದ ಎರಡು ದಿನಗಳಿಂದ ತಮಿಳುನಾಡಿನಲ್ಲಿ ಬೀಡು ಬಿಟ್ಟಿದ್ದರು. ಸದ್ಯ ತಮಿಳುನಾಡಿನ (Tamilnadu) ಮಧುರೈ ಹಾಗೂ ಧರ್ಮಪುರಿಯಲ್ಲಿ ಕಾರ್ಯಾಚರಣೆ ನಡೆಸಿ ಐವರನ್ನು ವಶಕ್ಕೆ ಪಡೆದಿದ್ದಾರೆ. ರಾಜಕೀಯ ದ್ವೇಷಕ್ಕೆ ಕೊಲೆ ಯತ್ನ ನಡೆಸಿರೋ ಬಗ್ಗೆ ಮಾಹಿತಿ ದೊರೆತಿದೆ. ಇದೀಗ ವಶಕ್ಕೆ ಪಡೆದಿರುವ ಐವರನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

    ಏನಿದು ಪ್ರಕರಣ..?: ಗುರುಸ್ವಾಮಿ ಮೂರ್ತಿ ಕಾನೂನು ಸಮಸ್ಯೆ ಇರುವ ಸೈಟ್ ವಿಚಾರವಾಗಿ ಮಾತುಕತೆಗೆ ಬೆಂಗಳೂರಿಗೆ ಬಂದಿದ್ದ. ಭಾನುವಾರ ವಿಮಾನದ ಮೂಲಕ ಬಂದು ಹೋಟೆಲ್ ನಲ್ಲಿ ರೂಂ ಮಾಡಿಕೊಂಡಿದ್ದ. ಸೆ.4 ರಂದು ಸೋಮವಾರ ಮನೆಯೊಂದನ್ನು ಹುಡುಕಿ ಸಂಜೆ ಸೈಟ್ ಬಗ್ಗೆ ಮಾತುಕತೆ ಮಾಡಲು ಹೋಟೆಲ್‍ಗೆ ಹೋಗಿದ್ದ. ಬ್ರೋಕರ್ ಜೊತೆ ಬಾಣಸವಾಡಿಯ ಸುಖ್‍ಸಾಗರ್ ಹೋಟೆಲ್‍ನಲ್ಲಿ ಮಾತುಕತೆ ನಡೆಸುತ್ತಿದ್ದಾಗ ತಮಿಳುನಾಡು ರಿಜಿಸ್ಟ್ರೇಷನ್ ಕಾರಿನಲ್ಲಿ ಬಂದ 5 ಮಂದಿ ಏಕಾಏಕಿ ಗುರುಸ್ವಾಮಿ ಮೂರ್ತಿ ಮೇಲೆ ಹಲ್ಲೆ ನಡೆಸಿದ್ದರು. ಇದನ್ನೂ ಓದಿ: ಡಿಎಂಕೆ ನಾಯಕ ಅಳಗಿರಿ ಆಪ್ತನ ಮೇಲೆ ಬೆಂಗಳೂರಲ್ಲಿ ಡೆಡ್ಲಿ ಅಟ್ಯಾಕ್

    ಹಲ್ಲೆಯಿಂದ ಗಂಭೀರ ಗಾಯಗೊಂಡಿರುವ ಗುರುಸ್ವಾಮಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇತ್ತ ದಾಳಿ ನಡೆದ ಹೋಟೇಲ್‍ನಲ್ಲಿ ಮಾಲೀಕರು ಹೋಮ-ಹವನ ಮಾಡಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಡಿಎಂಕೆ ನಾಯಕ ಅಳಗಿರಿ ಆಪ್ತನ ಮೇಲೆ ಬೆಂಗಳೂರಲ್ಲಿ ಡೆಡ್ಲಿ ಅಟ್ಯಾಕ್

    ಡಿಎಂಕೆ ನಾಯಕ ಅಳಗಿರಿ ಆಪ್ತನ ಮೇಲೆ ಬೆಂಗಳೂರಲ್ಲಿ ಡೆಡ್ಲಿ ಅಟ್ಯಾಕ್

    ಬೆಂಗಳೂರು: ತಮಿಳುನಾಡಿನ ಡಿಎಂಕೆ (DMK) ನಾಯಕ ಎಂಕೆ ಅಳಗಿರಿಯ (MK Alagiri) ಆಪ್ತ ಮಧುರೈನ ವಿಕೆ ಗುರುಸ್ವಾಮಿ ಮೂರ್ತಿ (55) ಮೇಲೆ 5 ಜನರ ಗುಂಪು ದಾಳಿ ಮಾಡಿದೆ.

    ಗುರುಸ್ವಾಮಿ ಮೂರ್ತಿ ಕಾನೂನು ಸಮಸ್ಯೆ ಇರುವ ಸೈಟ್ ವಿಚಾರವಾಗಿ ಮಾತುಕತೆಗೆ ಬೆಂಗಳೂರಿಗೆ ಬಂದಿದ್ದ. ಭಾನುವಾರ ವಿಮಾನದ ಮೂಲಕ ಬಂದು ಹೋಟೆಲ್ ನಲ್ಲಿ ರೂಂ ಮಾಡಿಕೊಂಡಿದ್ದ. ಸೋಮವಾರ ಮನೆಯೊಂದನ್ನು ಹುಡುಕಿ ಸಂಜೆ ಸೈಟ್ ಬಗ್ಗೆ ಮಾತುಕತೆ ಮಾಡಲು ಹೋಟೆಲ್‌ಗೆ ಹೋಗಿದ್ದ. ಬ್ರೋಕರ್ ಜೊತೆ ಮಾತುಕತೆ ನಡೆಸುತ್ತಿದ್ದಾಗ ತಮಿಳುನಾಡು ರಿಜಿಸ್ಟ್ರೇಷನ್ ಕಾರಿನಲ್ಲಿ ಬಂದ 5 ಜನರು ಏಕಾಏಕಿ ಗುರುಸ್ವಾಮಿ ಮೂರ್ತಿ ಮೇಲೆ ಹಲ್ಲೆ ನಡೆಸಿದ್ದಾರೆ.

    ತನ್ನ 20ನೇ ವಯಸ್ಸಿನಲ್ಲೇ ಗುರುಸ್ವಾಮಿ ಮೂರ್ತಿ ಕ್ರಿಮಿನಲ್ ಕೇಸ್‌ಗಳಲ್ಲಿ ಭಾಗಿಯಾಗಿದ್ದ. ಜೀವ ಬೆದರಿಕೆ ಇದ್ದ ಹಿನ್ನೆಲೆ ಆತ ಎಲ್ಲಿಯೂ ಬಹಿರಂಗವಾಗಿ ಕಾಣಿಸಿಕೊಳ್ಳುತ್ತಿರಲಿಲ್ಲ. ಮಧುರೈನಲ್ಲಿ ಸಾಕಷ್ಟು ದ್ವೇಷ ಕಟ್ಟಿಕೊಂಡಿದ್ದ. ಹತ್ಯೆಗೆ ಸ್ಕೆಚ್ ಹಾಕಿ 5 ಜನರ ತಂಡ ಇಂದು ಬೆಂಗಳೂರಿನ ಬಾಣಸವಾಡಿಯ ಸುಖ್‌ಸಾಗರ್ ಹೋಟೆಲ್‌ನಲ್ಲಿದ್ದಾಗ ದಾಳಿ ಮಾಡಿದೆ. ಇದನ್ನೂ ಓದಿ: ಚೆನ್ನೈ ಪೊಲೀಸರಿಗೆ ಲೀಗಲ್ ನೋಟಿಸ್ – ಉದಯ್‌ನಿಧಿ ವಿರುದ್ಧ ಎಫ್‌ಐಆರ್ ದಾಖಲಿಸಲು 7 ದಿನ ಕಾಲಾವಕಾಶ

    ಗುರುಸ್ವಾಮಿ ಜೊತೆಯಲ್ಲಿದ್ದವರಿಂದಲೇ ಆತನ ಬಗ್ಗೆ ಮಾಹಿತಿ ಲೀಕ್ ಮಾಡಿ, ದಾಳಿ ಮಾಡಿರುವ ಶಂಕೆ ಮೂಡಿದೆ. ಮಾರಣಾಂತಿಕವಾಗಿ ಹಲ್ಲೆಗೆ ಒಳಗಾಗಿರುವ ಗುರುಸ್ವಾಮಿಯನ್ನು ಹತ್ತಿರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಪೂರ್ವ ವಿಭಾಗ ಡಿಸಿಪಿ ಭೀಮಾಶಂಕರ್ ಗುಳೇದ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಹಿಂದೂ ಸಮಾಜದ ಅನಿಷ್ಟಗಳಿಗೆ ಮುಸ್ಲಿಮರ ಆಕ್ರಮಣವೇ ಕಾರಣ: ಆರ್‌ಎಸ್ಎಸ್‌ ಮುಖಂಡ ಕೃಷ್ಣ ಗೋಪಾಲ್

    Web Stories

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬಾಣಸವಾಡಿಯಲ್ಲಿರುವ ಸಾಯಿಬಾಬಾ ದೇಗುಲ ನೆಲಸಮ!

    ಬಾಣಸವಾಡಿಯಲ್ಲಿರುವ ಸಾಯಿಬಾಬಾ ದೇಗುಲ ನೆಲಸಮ!

    ಬೆಂಗಳೂರು: ಸಿಲಿಕಾನ್ ಸಿಟಿಯ ಬಾಣಸವಾಡಿಯಲ್ಲಿರುವ ಸಾಯಿಬಾಬಾ ದೇಗುಲವನ್ನು ನೆಲಸಮ ಮಾಡಲಾಗಿದೆ.

    ಅನಧಿಕೃತ ಎಂದು ತಹಶೀಲ್ದಾರರ ನೇತೃತ್ವದಲ್ಲಿ ದೇಗುಲವನ್ನು ನಾಶ ಮಾಡಲಾಗಿದೆ. ಇದೀಗ ದೇಗುಲವನ್ನು ಕೆಡವಿದ ಅಧಿಕಾರಿಗಳ ವಿರುದ್ಧ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೊರಗಡೆ ಪ್ರತಿಷ್ಠಾಪನೆ ಮಾಡಿದ ಆಂಜನೇಯ ದೇಗುಲದ ಹೊರಭಾಗವನ್ನು ಕೂಡ ಸಿಬ್ಬಂದಿ ಜೆಸಿಬಿಯಲ್ಲಿ ತೆಗೆಯುತ್ತಿದ್ದಾರೆ.

    ಮಂತ್ರಿ ಮಹಲ್ ಹಾಗೂ ಬಸವೇಶ್ವರ ವೃತ್ತ (ವಿಧಾನ ಸೌಧದ ಬಳಿ) ಇರುವ ದರ್ಗಾ ಅಧಿಕೃತವೇ ಇದಕ್ಕೆ ಸರ್ಕಾರ ಅನುಮತಿ ನೀಡಿದೆಯಾ? ಹಿಂದೂ ದೇವಾಲಯಗಳೇ ಏಕೆ ಗುರಿ, ರಾಜಕೀಯ ವ್ಯಕ್ತಿಗಳಿಗೆ ಕಾನೋನು ಇಲ್ಲವೇ? ಎಂದು ಸಾರ್ವಜನಿಕರು ಪ್ರಶ್ನಿಸುತ್ತಿದ್ದಾರೆ. ಇದನ್ನೂ ಓದಿ: ಕಾಮಗಾರಿಗಿಂತ ಬೆಂಗಳೂರಿನ ಗೌರವ ಉಳಿಸಿಕೊಳ್ಳಬೇಕು: ಡಿಕೆಶಿ

    ಮೂರ್ತಿಯನ್ನು ನೀವೇ ತೆಗೆದುಕೊಂಡು ಹೋಗಿ ಇಲ್ಲವೇ ನಾವೇ ಎತ್ತಿಕೊಂಡು ಹೋಗುತ್ತೇವೆ ಎಂದು ಸಿಬ್ಬಂದಿ ಗ್ರಾಮಸ್ಥರಿಗೆ ಎಚ್ಚರಿಕೆ ನೀಡಿದ್ದಾರೆ. ಸದ್ಯ ದೇವಾಲಯ ಆವರಣದೊಳಗೆ ಸಾರ್ವಜನಿಕರು ಜಮಾಯಿಸಿದ್ದಾರೆ. ಅಲ್ಲದೆ ಆಂಜನೇಯ ವಿಗ್ರಹ ತೆರವು ಹಿನ್ನೆಲೆಯಲ್ಲಿ ಕೊನೆಯ ಬಾರಿ ಪೂಜೆ ಸಲ್ಲಿಸಿ ಗ್ರಾಮಸ್ಥರು ಭಾವುಕರಾದರು.

  • ನಾಯಿ ಮೂತ್ರ, ವಿರ್ಸಜನೆ ಮಾಡಿದ್ದಕ್ಕೆ ವೃದ್ಧನಿಗೆ ಕಲ್ಲಿನಿಂದ ಹೊಡ್ದ

    ನಾಯಿ ಮೂತ್ರ, ವಿರ್ಸಜನೆ ಮಾಡಿದ್ದಕ್ಕೆ ವೃದ್ಧನಿಗೆ ಕಲ್ಲಿನಿಂದ ಹೊಡ್ದ

    ಬೆಂಗಳೂರು: ಕಾರಿನ ಮೇಲೆ ನಾಯಿ ಮೂತ್ರ ವಿಸರ್ಜನೆ ಮಾಡಿದಕ್ಕೆ ಕಾರಿನ ಮಾಲೀಕ ವಯೋ ವೃದ್ಧರ ಮೇಲೆ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

    ನಗರದ ಬಾಣಸವಾಡಿಯಲ್ಲಿ ಈ ಘಟನೆ ನಡೆದಿದ್ದು, ಕಾರು ಮಾಲೀಕ ಚಾರ್ಲ್ಸ್, ನಾಯಿಯನ್ನು ಸಾಕಿದ್ದ ಗೇರಿ ರೋಜಾರಿಯೋ ಎಂಬ ವೃದ್ಧನ ಮೇಲೆ ಹಲ್ಲೆ ನಡೆಸಿದ್ದಾನೆ. ಭಾನುವಾರ ರಾತ್ರಿ 11 ಗಂಟೆಗೆ ಗೇರಿ ರೋಜಾರಿಯೋ ನಾಯಿಯನ್ನು ಹೊರಗಡೆ ಬಿಟ್ಟಿದ್ದಾರೆ. ಈ ವೇಳೆ ನಾಯಿ ಎದುರುಗಡೆ ರಸ್ತೆಯ ಚಾರ್ಲ್ಸ್ ಮನೆಯ ಮುಂದೆ ನಿಲ್ಲಿಸಿದ್ದ ಕಾರಿನ ಮೇಲೆ ಮೂತ್ರ ವಿಸರ್ಜನೆ ಮಾಡಿದೆ. ಇದನ್ನೂ ಓದಿ: ಮಟನ್ ಚೀಲ ಹೊತ್ತೊಯ್ದ ಬೀದಿ ನಾಯಿ ಹೊಡೆದು ಕೊಂದ

    ನಾಯಿ ಕಾರಿನ ಮೇಲೆ ಮೂತ್ರ ವಿಸರ್ಜನೆ ಮಾಡಿರುವ ವಿಚಾರವಾಗಿ ಎರಡು ಮನೆಯವರ ಮಧ್ಯೆ ಮಾತಿನ ಚಕಮಕಿ ನಡೆದಿದೆ. ಇಷ್ಟಕ್ಕೆ ರೊಚ್ಚಿಗೆದ್ದ ಕಾರು ಮಾಲೀಕ ಚಾರ್ಲ್ಸ್ ಎರಡನೇ ಮಹಡಿಯಿಂದ ಕಲ್ಲು ತಗೆದು ವಯೋವೃದ್ಧ ಗೇರಿ ರೋಜಾರಿಯೋಗೆ ಹೊಡೆದಿದ್ದಾನೆ. ಇದರಿಂದ ಗಂಭೀರವಾಗಿ ಗಾಯಗೊಂಡ ಗೇರಿ ರೋಜಾರಿಯೋ ಸ್ಥಳದಲ್ಲಿಯೇ ಕುಸಿದು ಬಿದ್ದಿದ್ದಾರೆ. ಕಲ್ಲು ಬಿದ್ದ ರಭಸಕ್ಕೆ ಗೇರಿ ರೋಜಾರಿಯ ಎರಡು ಹಲ್ಲುಗಳು ಮುರಿದಿದ್ದು, ಕಣ್ಣುಗಳು ಮಂಜಾಗಿ ಕಾಣುತ್ತಿವೆ. ಇದನ್ನೂ ಓದಿ: ಬೆಂಗಳೂರಲ್ಲಿ ಇಂದು ಮಳೆ ಎಚ್ಚರಿಕೆ – ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆ ಸಾಧ್ಯತೆ

    POLICE JEEP

    ಈ ಕುರಿತಂತೆ ಗೇರಿ ರೋಜಾರಿಯೋ ಅವರು ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದ್ದು, ಚಾರ್ಲ್ಸ್ ತಲೆ ಮರೆಸಿಕೊಂಡಿದ್ದಾರೆ. ಸದ್ಯ ಪೊಲೀಸರು ಆರೋಪಿ ವಿರುದ್ಧ ಎಫ್‍ಐಆರ್ ದಾಖಲಿಸಿದ್ದು, ಆರೋಪಿಗಾಗಿ ಬಲೆ ಬೀಸಲಾಗಿದೆ.

  • ನ್ಯೂ ಇಯರ್ ಪಾರ್ಟಿಯಲ್ಲಿ ಕಿರಿಕ್: ಸಪ್ಲೈಯರ್‌ಗೆ ಚಾಕು ಇರಿದಿದ್ದ ಆರೋಪಿಗಳು ಅರೆಸ್ಟ್

    ನ್ಯೂ ಇಯರ್ ಪಾರ್ಟಿಯಲ್ಲಿ ಕಿರಿಕ್: ಸಪ್ಲೈಯರ್‌ಗೆ ಚಾಕು ಇರಿದಿದ್ದ ಆರೋಪಿಗಳು ಅರೆಸ್ಟ್

    ಬೆಂಗಳೂರು: ಹೊಸ ವರ್ಷಾಚರಣೆ ವೇಳೆ ಸಪ್ಲೈಯರ್ ಮೇಲೆ ಹಲ್ಲೆ ಮಾಡಿ ಚಾಕು ಇರಿದಿದ್ದ ಎಂಟು ಜನ ಆರೋಪಿಗಳನ್ನು ಬೆಂಗಳೂರಿನ ಬಾಣಸವಾಡಿ ಪೊಲೀಸರು ಬಂಧಿಸಿದ್ದಾರೆ.

    ವೆಂಕಟೇಶ್‍ಪುರಂ ನಿವಾಸಿಗಳಾದ ಹರಿ (19), ಪ್ರಕಾಶ್ (19), ರಂಜೀತ್ ಕುಮಾರ್ (22), ಸಂತೋಷ್ (19), ಕರಣ್ (20), ವಿಜಯ್ (19) ಸೇರಿದಂತೆ ಎಂಟು ಜನ ಬಂಧಿತ ಆರೋಪಿಗಳು. ಬಾಣಸವಾಡಿಯ ಓಲಿವ್ ರೆಸಿಡೆನ್ಸಿ ಹೋಟೆಲ್‍ನಲ್ಲಿ ಹೊಸ ವರ್ಷಕ್ಕೆಂದು ಎಂಟು ಜನ ಯುವಕರು ಹೋಗಿದ್ದರು. ಪಾರ್ಟಿ ವೇಳೆ ಕುಡಿದು ಜೋರಾಗಿ ಕೂಗಾಡುತ್ತಿದ್ದರು. ಇದನ್ನು ನೋಡಿದ ಸಪ್ಲೈಯರ್ ಇಶಾಂತ್ ಜೋರಾಗಿ ಕೂಗಾಡಬೇಡಿ, ಇತರರಿಗೆ ತೊಂದರೆ ಆಗುತ್ತೆ ಎಂದು ಬುದ್ಧಿವಾದ ಹೇಳಿದ್ದ. ಇದರಿಂದ ಕೋಪಗೊಂಡ ಯುವಕರು ಸಪ್ಲೈಯರ್ ಇಶಾಂತ್‍ಗೆ ಹಿಗ್ಗಾಮುಗ್ಗಾ ಥಳಿಸಿ, ಚಾಕು ಇರಿದು ಪರಾರಿಯಾಗಿದ್ದರು. ಇದನ್ನೂ ಓದಿ: ಪಬ್ಲಿಕ್ ಟಿವಿ ಇಂಪ್ಯಾಕ್ಟ್: ನ್ಯೂ ಇಯರ್ ಸಂಭ್ರಮದಲ್ಲಿ ಕೀಟಲೆ ಮಾಡಿದ್ದ ನಾಲ್ವರ ಬಂಧನ

    ಸಪ್ಲೈಯರ್ ಮೇಲೆ ಹಲ್ಲೆ ನಡೆಸಿದ ದೃಶ್ಯವು ಹೋಟೆಲ್‍ನ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಬಾಣಸವಾಡಿ ಪೊಲೀಸರು ಆರೋಪಿಗಳಿಗೆ ಬಲೆ ಬೀಸಿದ್ದರು. ಆದರೆ ಆರೋಪಿಗಳು ಪತ್ತೆ ಸಾಧ್ಯವಾಗಿರಲಿಲ್ಲ. ಬಳಿಕ ತೀವ್ರ ಕಾರ್ಯಾಚರಣೆ ನಡೆಸಿ, ಭಾನುವಾರ ಎಲ್ಲ ಎಂಟು ಜನ ಆರೋಪಿಗಳನ್ನು ಬಂಧಿಸಿದ್ದಾರೆ.

  • ದೂರು ನೀಡಲು ಬಂದ ಮಹಿಳೆಯ ಫೋನ್ ನಂ. ಪಡೆದು ಇನ್ಸ್‌ಪೆಕ್ಟರ್ ಕಿರುಕುಳ

    ದೂರು ನೀಡಲು ಬಂದ ಮಹಿಳೆಯ ಫೋನ್ ನಂ. ಪಡೆದು ಇನ್ಸ್‌ಪೆಕ್ಟರ್ ಕಿರುಕುಳ

    ಬೆಂಗಳೂರು: ನಗರದ ನಿವಾಸಿಯಾಗಿರುವ ಮಹಿಳೆಯೊಬ್ಬರು ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪೊಲೀಸ್ ಠಾಣೆಗೆ ದೂರು ನೀಡಲು ತೆರಳಿದ್ದು, ಈ ವೇಳೆ ಮಹಿಳೆಯ ಮೊಬೈಲ್ ನಂಬರ್ ಪಡೆದ ಪೊಲೀಸ್ ಇನ್ಸ್ ಪೆಕ್ಟರ್ ಆಕೆಗೆ ಕಿರುಕುಳ ನೀಡಿರುವ ಘಟನೆ ನಗರದ ಬಾಣಸವಾಡಿಯಲ್ಲಿ ನಡೆದಿದೆ.

    ಮಹಿಳೆಯ ನಂಬರ್ ಪಡೆದ ಇನ್ಸ್ ಪೆಕ್ಟರ್  ಮಿಸ್ ಕಾಲ್ ಸಮೇತ 8 ಸಂದೇಶಗಳನ್ನು ರವಾನಿಸಿದ್ದಾರೆ. ಈ ಬಗ್ಗೆ ದೂರು ನೀಡಲು ಸೈಬರ್ ಕ್ರೈಮ್ ಪೊಲೀಸ್ ಠಾಣೆಗೆ ಮೊರೆ ಹೋದರು ಪೊಲೀಸರು ದೂರು ದಾಖಲಿಸಲು ಹಿಂದೇಟು ಹಾಕಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ. ಅಲ್ಲದೇ ದೂರು ದಾಖಲಿಸಲು ನಿರಾಕರಿಸಿ ಮೊಬೈಲ್ ನಂಬರ್ ಬದಲಾಯಿಸುವಂತೆ ಸಲಹೆ ನೀಡಿದ್ದರು ಎಂದು ಮಹಿಳೆ ಮಾವ ತಿಳಿಸಿದ್ದಾರೆ.

    ಜುಲೈ 18 ರಂದು ಮಹಿಳೆ ಪತಿಯ ವಿರುದ್ಧ ದೂರು ನೀಡಲು ಬಾಣಸವಾಡಿ ಪೊಲೀಸ್ ಠಾಣೆಗೆ ತೆರಳಿದ್ದರು. ಈ ವೇಳೆ ಪೊಲೀಸ್ ಅಧಿಕಾರಿ ಅಂಜನೇಯ ಅವರು ಮಹಿಳೆಯನ್ನು ಭೇಟಿ ಮಾಡಿದ್ದರು. ಆ ಬಳಿಕ ಆಗಸ್ಟ್ 11 ರಿಂದ ಮೊಬೈಲ್‍ನಲ್ಲಿ ಸಂದೇಶ ಕಳುಹಿಸಲು ಆರಂಭಿಸಿದ್ದರು. ‘ಹೆಲೋ’ ಮೂಲಕ ಆರಂಭವಾದ ಸಂದೇಶಗಳು ನಿರಂತರವಾಗಿ ಬರುತ್ತಿತ್ತು. ಆದರೆ ಈ ಸಂದೇಶಗಳಿಗೆ ಮಹಿಳೆ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ ಎಂದು ವರದಿಯಾಗಿದೆ.

    ಮಹಿಳೆಯಿಂದ ಯಾವುದೇ ಪ್ರತಿಕ್ರಿಯೆಬಾರದ ಹಿನ್ನೆಲೆಯಲ್ಲಿ ಇನ್ಸ್‌ಪೆಕ್ಟರ್ ವಾಟ್ಸಾಪ್ ಫೋನ್ ಕರೆ ಕೂಡ ಮಾಡಿದ್ದರು. ಇದಕ್ಕೂ ಮಹಿಳೆ ಪ್ರತಿಕ್ರಿಯೆ ನೀಡಿರಲಿಲ್ಲ. ಪೊಲೀಸ್ ಇನ್ಸ್‌ಪೆಕ್ಟರ್ ಕಿರುಕುಳದಿಂದ ಬೇಸತ್ತ ಮಹಿಳೆ ಕುಟುಂಬಸ್ಥರ ಸಹಾಯ ಪಡೆದು ಅಂತಿಮವಾಗಿ ಸೈಬರ್ ಪೊಲೀಸರಿಗೆ ರಿಜಿಸ್ಟರ್ ಪೋಸ್ಟ್ ಮೂಲಕ ದೂರು ರವಾನಿಸಿದ್ದಾರೆ. ಇದಕ್ಕೂ ಮುನ್ನ ಪೊಲೀಸ್ ಅಧಿಕಾರಿಗೆ ಮಹಿಳೆಯ ಮಾವ ಕರೆ ಮಾಡಿ ಸಂದೇಶ ಕಳುಹಿಸುತ್ತಿರುವ ಬಗ್ಗೆ ಪ್ರಶ್ನಿಸಿದ್ದು, ಇದರಿಂದ ಜಾರಿಕೊಳ್ಳಲು ಯತ್ನಿಸಿದ ಆತ ತಾನು ಬಾಲಾಜಿ ಬಾರ್ ಅಂಡರ್ ರೆಸ್ಟೋರೆಂಟ್ ವ್ಯಕ್ತಿಯಾಗಿದ್ದು, ಯಾರೋ ನನ್ನ ಮೊಬೈಲ್‍ನಿಂದ ಮೇಸೆಜ್ ಮಾಡಿದ್ದಾರೆ ಎಂದು ಜಾರಿಕೊಂಡಿದ್ದಾಗಿ ತಿಳಿಸಿದ್ದಾರೆ.

  • 12 ಪ್ರಕರಣದಲ್ಲಿ ಬೇಕಾಗಿದ್ದ ವಾಂಟೆಡ್ ಆರೋಪಿಯ ಕಾಲು ಸೀಳಿತು ಬೆಂಗ್ಳೂರು ಪೊಲೀಸರ ಬುಲೆಟ್!

    12 ಪ್ರಕರಣದಲ್ಲಿ ಬೇಕಾಗಿದ್ದ ವಾಂಟೆಡ್ ಆರೋಪಿಯ ಕಾಲು ಸೀಳಿತು ಬೆಂಗ್ಳೂರು ಪೊಲೀಸರ ಬುಲೆಟ್!

    ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಪೊಲೀಸರ ಗುಂಡು ಸದ್ದು ಮಾಡಿದ್ದು, ಈ ಬಾರಿ 12 ಪ್ರಕರಣದಲ್ಲಿ ಬೇಕಾಗಿದ್ದ ವಾಂಟೆಡ್ ಆರೋಪಿಯೊಬ್ಬನ ಕಾಲ ಸೀಳಿದ ಘಟನೆ ಬಾಣಸವಾಡಿಯಲ್ಲಿ ನಡೆದಿದೆ.

    ದಿನೇಶ್ ದೋರಾ ಗುಂಡೇಟು ತಿಂದ ಆರೋಪಿ. ದಿನೇಶ್ ಬಲಗಾಲಿಗೆ ಗುಂಡು ಸೇರಿದ್ದು, ಆತನನ್ನು ಬಂಧಿಸಿ ಚಿಕಿತ್ಸೆ ಕೊಡಿಸುತ್ತಿದ್ದಾರೆ. ದಿನೇಶ್ ವಿರುದ್ಧ ಇಂದಿರಾನಗರ, ಡಿಜೆ ಹಳ್ಳಿ, ಹೆಣ್ಣೂರು, ಜೆಸಿ ನಗರ, ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಒಟ್ಟು 12 ಪ್ರಕರಣಗಳಿದ್ದು ದಾಖಲಾಗಿದ್ದು, ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದರು.

    ಇತನ ವಿರುದ್ಧ ಕಳ್ಳತನಕ್ಕೆ ಯತ್ನಿಸುತಿದ್ದ ಆರೋಪಿ ಕೂಡ ದಾಖಲಾಗಿತ್ತು. ಪ್ರಕರಣ ತನಿಖೆ ಆರಂಭಿಸಿದ್ದ ಬಾಣಸವಾಡಿ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ವಿರೂಪಾಕ್ಷ ತಂಡ ರಚಿಸಿ, ದಿನೇಶ್ ಬಂಧನಕ್ಕೆ ಪ್ಲಾನ್ ಮಾಡಿದ್ದರು. ಖಚಿತ ಮಾಹಿತಿ ಪಡೆದಿದ್ದ ಇನ್ಸ್ ಪೆಕ್ಟರ್ ವಿರೂಪಾಕ್ಷ ನೇತೃತ್ವದ ತಂಡವು ಬಾಣಸವಾಡಿ ವ್ಯಾಪ್ತಿಯಲ್ಲಿ ದಿನೇಶ್‍ನನ್ನು ಬಂಧಿಸಲು ಮುಂದಾಗಿದ್ದರು. ಈ ವೇಳೆ ಈತ ಪೇದೆ ಮೂರ್ತಿ ಎಂಬವರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ್ದ.

    ದಿನೇಶ್ ಪರಾರಿಯಾಗುತ್ತಿರುವುದನ್ನು ನೋಡಿದ ವಿರೂಪಾಕ್ಷ ಅವರು ಗುಂಡು ಹಾರಿಸಿದ್ದಾರೆ. ಪರಿಣಾಮ ದಿನೇಶ್ ಬಲಗಾಲಿಗೆ ಗುಂಡು ಹೊಕ್ಕಿದ್ದರಿಂದ ನೆಲಕ್ಕೆ ಬಿದ್ದಿದ್ದಾನೆ. ತಕ್ಷಣವೇ ಆತನನ್ನು ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ಕೊಡಿಸಿ, ಬಂಧಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಸೂಚನೆ ನೀಡಿದ್ರೂ ಶರಣಾಗದ ಸರಗಳ್ಳ- ಬಂಧಿಸಲು ಹೋದ ಪೊಲೀಸ್ರ ಮೇಲೆಯೇ ಹಲ್ಲೆ!

    ಸೂಚನೆ ನೀಡಿದ್ರೂ ಶರಣಾಗದ ಸರಗಳ್ಳ- ಬಂಧಿಸಲು ಹೋದ ಪೊಲೀಸ್ರ ಮೇಲೆಯೇ ಹಲ್ಲೆ!

    ಬೆಂಗಳೂರು: ನಗರದಲ್ಲಿ ಸರಗಳ್ಳನ ಮೇಲೆ ತಡರಾತ್ರಿ ಬಾಣಸವಾಡಿ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ಸುಹೇಲ್ ಅಲಿಯಾಸ್ ಪಪ್ಪಾಯಿ ಗುಂಡೇಟಿಗೆ ಒಳಗಾದ ಸರಗಳ್ಳ. ಸುಹೇಲ್ ಗ್ಯಾಂಗ್ ಗೆ ಶರಣಾಗಲು ಪೊಲೀಸರು ಮಾಹಿತಿ ನಿಡಿದ್ದರೂ ಶರಣಾಗದೇ ಇರುವುದರಿಂದ ಬಂಧಿಸಲು ಹೋದಾಗ ಆತ ಪೊಲೀಸರ ಮೇಲೆಯೇ ಹಲ್ಲೆಗೆ ಮುಂದಾಗಿದ್ದಾನೆ.

    ನಗರದಲ್ಲಿ ಕಳೆದ ಮೂರು ದಿನಗಳಿಂದ ಸರಣಿ ಸರಗಳ್ಳತನದ ಒಂಬತ್ತು ಪ್ರಕರಣಗಳು ದಾಖಲಾಗಿತ್ತು. ಸುಹೇಲ್ ಗ್ಯಾಂಗ್ ಮಾಡಿರುವ ಖಚಿತ ಮಾಹಿತಿ ಮೇರೆಗ ಪೊಲಿಸರು ಆತನ ಬಂಧನಕ್ಕೆ ಬಾಣಸವಾಡಿ ಎಸಿಪಿ ಮಹದೇವಪ್ಪ ನೇತೃತ್ವದಲ್ಲಿ ತಂಡ ರಚನೆ ಮಾಡಿ ಶೋಧ ಕಾರ್ಯ ನಡೆಸುತ್ತಿದ್ದರು. ಈ ವೇಳೆಯಲ್ಲಿ ಸುಹೇಲ್ ಆ್ಯಂಡ್ ಗ್ಯಾಂಗ್ ಬಾಣಸವಾಡಿ ಅಗ್ನಿಶಾಮಕದಳ ಸ್ಟೇಷನ್ ರಸ್ತೆಯಲ್ಲಿ ಇರುವುದಾಗಿ ಮಾಹಿತಿ ಬಂದಿತ್ತು.

    ಸ್ಥಳಕ್ಕೆ ತೆರಳಿದ ಬಾಣಸವಾಡಿ ಇನ್ಸ್ ಪೆಕ್ಟರ್ ಮುನಿಕೃಷ್ಣ ತಂಡ ಸುಹೇಲ್ ಬಂಧನಕ್ಕೆ ಮುಂದಾಗಿತ್ತು. ಈ ವೇಳೆಯಲ್ಲಿ ಸುಹೇಲ್ ಮಾರಕಾಸ್ತ್ರದಿಂದ ಸಬ್ ಇನ್ಸ್ ಪೆಕ್ಟರ್ ಶರತ್ ಹಾಗೂ ಮುಖ್ಯಪೇದೆ ರಫಿಕ್ ಮೇಲೆ ಹಲ್ಲೆಗೆ ಮುಂದಾಗಿದ್ದಾನೆ. ಈ ಹಿನ್ನೆಲೆಯಲ್ಲಿ ಇನ್ಸ್ ಪೆಕ್ಟರ್ ಮುನಿಕೃಷ್ಣ ಮೂರು ಸುತ್ತು ಫೈರಿಂಗ್ ಮಾಡಿದ್ದಾರೆ. ಮೊದಲು ಶರಣಾಗುವಂತೆ ಸೂಚನೆ ನೀಡಿದ್ದರೂ ಆರೋಪಿ ಸುಹೇಲ್ ಶರಣಾಗತಿ ಆಗಲಿಲ್ಲ. ಆಗ ಇನ್ಸ್ ಪೆಕ್ಟರ್ ಸುಹೇಲ್ ಎರಡು ಕಾಲಿಗೂ ಗುಂಡು ಹಾರಿಸಿದ್ದಾರೆ. ಹಲ್ಲೆಗೊಳಗಾದ ಸುಹೇಲ್ ಹಾಗೂ ಪೊಲೀಸರನ್ನು ಚಿಕಿತ್ಸೆಗೆ ಬೌರಿಂಗ್ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

    ಸದ್ಯ ಸುಹೇಲ್ ಜೊತೆಯಿದ್ದ ಇಬ್ಬರು ಪರಾರಿಯಾಗಿದ್ದಾರೆ. ಸುಹೇಲ್ ವಿರುದ್ಧ ನಗರ ವಿವಿಧ ಪೊಲೀಸ್ ಠಾಣೆಗಳಲ್ಲಿ ಸರಗಳ್ಳತನ, ಸುಲಿಗೆ, ದರೋಡೆ ಸೇರಿದಂತೆ 10ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದೆ.

    ಸದ್ಯ ಬಾಣಸವಾಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

     

  • ಪ್ರಸ್ತ ಮುಗಿಸಿ ಮಾರನೇ ದಿನವೇ ಓಡಿ ಹೋಗಿದ್ದ ಪತಿರಾಯನನ್ನ ಹುಡುಕಿ ಕರೆತಂದ ಪೊಲೀಸರು

    ಪ್ರಸ್ತ ಮುಗಿಸಿ ಮಾರನೇ ದಿನವೇ ಓಡಿ ಹೋಗಿದ್ದ ಪತಿರಾಯನನ್ನ ಹುಡುಕಿ ಕರೆತಂದ ಪೊಲೀಸರು

    ಬೆಂಗಳೂರು: ಮದುವೆಯಾಗಿ, ಪ್ರಸ್ತ ಮುಗಿಸಿ ಮಾರನೇ ದಿನವೇ ಓಡಿ ಹೋಗಿದ್ದ ಗಂಡನನ್ನ ಬಾಣಸವಾಡಿ ಪೊಲೀಸರು ಹುಡುಕಿ ಕರೆತಂದಿದ್ದಾರೆ.

    ಮದುವೆಯಾದ ಮೂರೇ ದಿನಕ್ಕೆ ಅನುರಾಧ ಎಂಬವರನ್ನ ವರಿಸಿದ ಕೇಶವಮೂರ್ತಿ ನಾಪತ್ತೆಯಾಗಿದ್ದ. ಬೆಂಗಳೂರಿನ ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿತ್ತು. ಇಂದು ಅನುರಾಧ ಗಂಡ ಕೇಶವಮೂರ್ತಿಯನ್ನು ಕರೆತಂದು ವಿಚಾರಣೆ ಮಾಡಲಾಗ್ತಿದೆ.

    ಏಪ್ರಿಲ್ 2 ರಂದು ಧರ್ಮಸ್ಥಳದಲ್ಲಿ ಗುರುಹಿರಿಯರ ಸಮ್ಮುಖದಲ್ಲೇ ಅನುರಾಧ ಹಾಗೂ ಕೇಶವಮೂರ್ತಿಯ ವಿವಾಹವಾಗಿತ್ತು. ಏಪ್ರಿಲ್ 3 ರಂದು ಬೆಂಗಳೂರಿನ ಶ್ರೀರಾಮಪುರದಲ್ಲಿ ರಿಜಿಸ್ಟರ್ ಮ್ಯಾರೇಜ್ ಆಗಿದ್ರು. ಮದುವೆಗೆ 2 ಲಕ್ಷ ನಗದು 50 ಗ್ರಾಂ ಚಿನ್ನ ನೀಡಲಾಗಿತ್ತು. ಮದುವೆ ಬಳಿಕ ಐದು ಲಕ್ಷ ನಗದು ಮತ್ತು ಚಿನ್ನಾಭರಣದೊಂದಿಗೆ ಕೇಶವಮೂರ್ತಿ ಪರಾರಿಯಾಗಿದ್ದ. ಈ ಸಂಬಂಧ ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

    ಇದೀಗ ಕೇಶವಮೂರ್ತಿಯನ್ನ ಹುಡುಕಿ ಕರೆತಂದಿರೋ ಪೊಲೀಸರು ಎರಡೂ ಕುಟುಂಬಗಳೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ.