Tag: ಬಾಬರ್ ಮಸೀದಿ

  • ನಿಮ್ಮಪ್ಪನಿಂದಲೂ ಬಾಬರ್ ಮಸೀದಿ ಕಟ್ಟಲು ಸಾಧ್ಯವಿಲ್ಲ- ರಶೀದಿಗೆ ಎಚ್ಚರಿಕೆ ಕೊಟ್ಟ ಮುತಾಲಿಕ್

    ನಿಮ್ಮಪ್ಪನಿಂದಲೂ ಬಾಬರ್ ಮಸೀದಿ ಕಟ್ಟಲು ಸಾಧ್ಯವಿಲ್ಲ- ರಶೀದಿಗೆ ಎಚ್ಚರಿಕೆ ಕೊಟ್ಟ ಮುತಾಲಿಕ್

    ಧಾರವಾಡ: ಅಯೋಧ್ಯೆಯಲ್ಲಿ (Ayodhya) ನಿರ್ಮಾಣವಾಗುತ್ತಿರುವ ರಾಮ ಮಂದಿರವನ್ನು (Ram Mandir) ಕೆಡವಿ ಮುಂದೊಂದು ದಿನ ಮತ್ತೆ ಬಾಬರ್ ಮಸೀದಿ ಕಟ್ಟುತ್ತೇವೆ ಎಂದು ಹೇಳಿಕೆ ಕೊಟ್ಟಿರುವ ಇಮಾಮ್ ಅಸೋಸಿಯೇಶನ್ ಅಧ್ಯಕ್ಷ ಮೌಲಾನಾ ಸಾಜಿದ್ ರಶೀದಿ (Maulana Sajid Rashidi) ವಿರುದ್ಧ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ (Pramod Muthalik) ಗುಡುಗಿದ್ದಾರೆ.

    ಮುಂದೆ 50-100 ವರ್ಷ ಆದ ಮೇಲೆ ನಮ್ಮ ದೊರೆ ಬರುತ್ತಾನೆ. ಆಗ ರಾಮ ಮಂದಿರ ಕೆಡವಿ ಮತ್ತೆ ಬಾಬರ್ ಮಸೀದಿ ಕಟ್ಟುತ್ತೇವೆ ಎಂದು ರಶೀದಿ ಹೇಳಿಕೆ ನೀಡಿದ್ದಾರೆ. ಇನ್ನು 100 ವರ್ಷ ಅಲ್ಲ, ಸಾವಿರ ವರ್ಷವಾದರೂ ರಾಮ ಮಂದಿರ ಕೆಡವಿ ಬಾಬರ್ ಮಸೀದಿ ಕಟ್ಟಲು ನಿಮ್ಮಪ್ಪನಿಂದಲೂ ಸಾಧ್ಯವಿಲ್ಲ ಎಂದು ಮುತಾಲಿಕ್ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

    ಸೊಕ್ಕಿನ ಮಾತನ್ನು ರಶೀದಿ ಹೇಳಿದ್ದಾರೆ. ಇಂತವರು ಈ ದೇಶದ ಅನ್ನ ತಿಂದ ನಮಕ್ ಹರಾಮಿಗಳು. ಈ ದೇಶದ ಮುಸ್ಲಿಮರಿಗೆ ಬಾಬರ್ ಯಾವುದೇ ಸಂಬಂಧ ಇಲ್ಲದಿದ್ದರೂ ಇಸ್ಲಾಂ ಪ್ರತಿಷ್ಠಾಪನೆಯ ಮೂಲ ಉದ್ದೇಶ ಹೊಂದಿದ್ದಾರೆ. ಇದು ಮೌಲಾನಾ ರಶೀದಿ ಬಾಯಿಂದ ಹೊರ ಬಂದಿದೆ ಎಂದು ಕಿಡಿ ಕಾರಿದ್ದಾರೆ. ಇದನ್ನೂ ಓದಿ: ಪಾದಯಾತ್ರೆಯನ್ನು ಬುಲೆಟ್ ಪ್ರೂಫ್ ವಾಹನದಲ್ಲಿ ಮಾಡೋಕ್ಕಾಗಲ್ಲ: ನಿಯಮ ಉಲ್ಲಂಘನೆ ಆರೋಪಕ್ಕೆ ರಾಗಾ ತಿರುಗೇಟು

    ಈ ದೇಶದ ಹಿಂದೂಗಳು ಜಾಗೃತಗೊಂಡಿದ್ದಾರೆ. ರಶೀದಿಯಂತಹ ಮಾನಸಿಕತೆ ಇರುವ ಮುಸ್ಲಿಮರಿಗೆ ಎಚ್ಚರಿಕೆ ಕೊಡುವ ಉದ್ದೇಶದಿಂದಲೇ 100 ವರ್ಷಗಳಿಂದ ಆರ್‌ಎಸ್‌ಎಸ್ ಕೆಲಸ ಮಾಡುತ್ತಿದೆ. ಭಜರಂಗದಳ, ವಿಶ್ವ ಹಿಂದೂ ಪರಿಷತ್, ಹಿಂದೂ ಜಾಗರಣ ವೇದಿಕೆ, ಶ್ರೀರಾಮ ಸೇನೆ ಕೆಲಸ ಮಾಡುತ್ತಿವೆ. ನಿಮ್ಮ ಸೊಕ್ಕು ಅಡಗಿಸಲು ನಾವು ಸಿದ್ಧರಿದ್ದೇವೆ. ಅಯೋಧ್ಯೆಯಲ್ಲಿ ರಾಮನ ಮೂರ್ತಿಯೇ ಇರುತ್ತದೆ ಹೊರತು, ಬಾಬರ್, ಔರಂಗಜೇಬನ ಮೂರ್ತಿಯಲ್ಲ. ಅಲ್ಲಿ ಯಾವುದೇ ಇಸ್ಲಾಂ ಧರ್ಮ ಗುರು ಇರಲು ಬಿಡುವುದಿಲ್ಲ ಎಂದಿದ್ದಾರೆ. ಇದನ್ನೂ ಓದಿ: 73 ಜನರ ಬಲಿ ತೆಗೆದುಕೊಂಡ ಬಿಹಾರ ಕಳ್ಳಭಟ್ಟಿ ಪ್ರಕರಣದ ಮಾಸ್ಟರ್ ಮೈಂಡ್ ಕೊನೆಗೂ ಪೊಲೀಸ್ ಬಲೆಗೆ

    Live Tv
    [brid partner=56869869 player=32851 video=960834 autoplay=true]