Tag: ಬಾಬಾ ರಾಮದೇವ್

  • ಶರ್ಬತ್ ಜಿಹಾದ್: ಬಾಬಾ ರಾಮ್‌ದೇವ್ ವಿರುದ್ಧ ದೆಹಲಿ ಹೈಕೋರ್ಟ್ ಗರಂ

    ಶರ್ಬತ್ ಜಿಹಾದ್: ಬಾಬಾ ರಾಮ್‌ದೇವ್ ವಿರುದ್ಧ ದೆಹಲಿ ಹೈಕೋರ್ಟ್ ಗರಂ

    ನವದೆಹಲಿ: ಔಷಧ ಮತ್ತು ಆಹಾರ ಕಂಪನಿ ಹಮ್ದರ್ದ್ ಮತ್ತು ಅದರ ಜನಪ್ರಿಯ ಪಾನೀಯ ರೂಹ್ ಅಫ್ಝಾವನ್ನು ಗುರಿಯಾಗಿಸಿಕೊಂಡು ಕೋಮು ನಿಂದನೆಯ ಹೇಳಿಕೆ ನೀಡಿದ ಪತಂಜಲಿ ಸಂಸ್ಥೆಯ ಸಂಸ್ಥಾಪಕ ಬಾಬಾ ರಾಮದೇವ್ (Baba Ramdev) ಅವರನ್ನು ದೆಹಲಿ ಹೈಕೋರ್ಟ್ (Delhi High Court) ತರಾಟೆಗೆ ತೆಗೆದುಕೊಂಡಿದೆ.

    ಪತಂಜಲಿ ಸಂಸ್ಥೆ ಮತ್ತು ರಾಮ್‌ದೇವ್ ವಿರುದ್ಧ ಹಮ್ದರ್ದ್ ದಾಖಲಿಸಿದ್ದ ಮೊಕದ್ದಮೆಯ ಪ್ರಾಥಮಿಕ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅಮಿತ್ ಬನ್ಸಾಲ್ ಅವರು, `ಕಠಿಣ ಆದೇಶದ’ ಎಚ್ಚರಿಕೆ ನೀಡಿದ್ದಾರೆ. ಇದು ನ್ಯಾಯಾಲಯದ ಆತ್ಮಸಾಕ್ಷಿಗೆ ಆಘಾತವನ್ನುಂಟು ಮಾಡುತ್ತದೆ. ಇಂತಹ ಹೇಳಿಕೆ ಸಮರ್ಥನೀಯವಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಇದನ್ನೂ ಓದಿ: ಪತಿಯನ್ನು ಕೊಂದಿದ್ದೀರಿ, ನನ್ನನ್ನೂ ಕೊಂದುಬಿಡಿ – ಉಗ್ರರಿಂದ ಹತ್ಯೆಗೀಡಾದ ಉದ್ಯಮಿ ಪತ್ನಿಯ ಕಣ್ಣೀರು

    ಹಮ್ದರ್ದ್ ಕಂಪನಿ ಪರ ವಾದ ಮಂಡಿಸಿದ ಹಿರಿಯ ವಕೀಲ ಮುಕುಲ್ ರೋಹಟಗಿ, ರಾಮದೇವ್ ಹಮ್ದರ್ದ್ ವಿರುದ್ಧ ಯಾವುದೇ ಅಡೆತಡೆಯಿಲ್ಲದೆ ನಡೆದುಕೊಳ್ಳುತ್ತಿದ್ದಾರೆ. ಕಂಪನಿಯ ಮಾಲೀಕರ ಧರ್ಮದ ಮೇಲೆ ದಾಳಿ ಮಾಡಿದ್ದಾರೆ. ಇದು ಆಘಾತಕಾರಿ ಪ್ರಕರಣವಾಗಿದ್ದು, ಅವಹೇಳನವನ್ನು ಮೀರಿದೆ. ಇದು ದ್ವೇಷ ಭಾಷಣದಂತೆಯೇ ಕೋಮು ವಿಭಜನೆಯನ್ನು ಸೃಷ್ಟಿಸುವ ಪ್ರಕರಣವಾಗಿದೆ. ದೇಶದಲ್ಲಿ ಈಗಾಗಲೇ ನಮಗೆ ಸಾಕಷ್ಟು ಸಮಸ್ಯೆಗಳಿವೆ. ಹಿಮಾಲಯ ಎಂಬ ಮತ್ತೊಂದು ಕಂಪನಿ ಮುಸ್ಲಿಂ ಒಡೆತನದಲ್ಲಿದೆ ಎಂಬ ಕಾರಣಕ್ಕಾಗಿ ರಾಮದೇವ್ ಅದರ ಮೇಲೆಯೂ ದಾಳಿ ನಡೆಸಿದ್ದಾರೆ. ಇಂತಹ ವಿಡಿಯೋಗಳು ಸಾಮಾಜಿಕ ವೇದಿಕೆಯಲ್ಲಿ ಒಂದು ನಿಮಿಷವೂ ಇರಬಾರದು. ಇಂತಹ ಹೇಳಿಕೆಗಳಿಗೆ ಕಾನೂನಿನ ರಕ್ಷಣೆ ನೀಡಬಾರದು ಎಂದು ವಾದಿಸಿದರು.

    ಏ.3 ರಂದು ತಮ್ಮ ಕಂಪನಿಯ ಉತ್ಪನ್ನವಾದ `ಗುಲಾಬ್ ಶರ್ಬತ್’ ಅನ್ನು ಪ್ರಚಾರ ಮಾಡುವಾಗ ರಾಮ್‌ದೇವ್ ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದರು. ನೀವು ಆ ಶರಬತ್ತು ಕುಡಿದರೆ, ಮದರಸಾಗಳು ಮತ್ತು ಮಸೀದಿಗಳು ನಿರ್ಮಾಣವಾಗುತ್ತವೆ. ನೀವು ಪತಂಜಲಿಯ ಗುಲಾಬಿ ಸಿರಪ್ ಕುಡಿದರೆ, ಗುರುಕುಲಗಳು ರೂಪುಗೊಳ್ಳುತ್ತವೆ. ಆಚಾರ್ಯಕುಲಂ ಅಭಿವೃದ್ಧಿ ಹೊಂದುತ್ತದೆ, ಪತಂಜಲಿ ವಿಶ್ವವಿದ್ಯಾಲಯವು ವಿಸ್ತರಿಸುತ್ತದೆ ಮತ್ತು ಭಾರತೀಯ ಶಿಕ್ಷಣ ಮಂಡಳಿಯು ಪ್ರಗತಿ ಹೊಂದುತ್ತದೆ. ರೂಹ್ ಅಫ್ಜಾ ಸಿರಪ್ ಅನ್ನು ಲವ್ ಜಿಹಾದ್‌ಗೆ ಹೋಲಿಸಿ, ಲವ್ ಜಿಹಾದ್ ಇರುವಂತೆಯೇ, ಇದು ಕೂಡ ಒಂದು ರೀತಿಯ ಶರಬತ್ ಜಿಹಾದ್ ಆಗಿದೆ. ಈ ಶರ್ಬತ್ ಜಿಹಾದ್‌ನಿಂದ ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಈ ಸಂದೇಶ ಎಲ್ಲರಿಗೂ ತಲುಪಬೇಕು ಎಂದಿದ್ದರು.

    ರಾಮದೇವ್ ವಿರುದ್ಧ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಕಳೆದ ವಾರ ಭೋಪಾಲ್‌ನಲ್ಲಿ ಧಾರ್ಮಿಕ ದ್ವೇಷವನ್ನು ವ್ಯಕ್ತಪಡಿಸಿದ್ದಾರೆ ಎಂದು ಆರೋಪಿಸಿ ದೂರು ದಾಖಲಿಸಿದ್ದರು. ರಾಮ್‌ದೇವ್ ತಮ್ಮ ಕೋಮುವಾದಿ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದರು. ತಮ್ಮ ವಿಡಿಯೋದಲ್ಲಿ ಯಾವುದೇ ನಿರ್ದಿಷ್ಟ ಬ್ರ‍್ಯಾಂಡ್ ಅನ್ನು ಹೆಸರಿಸಿಲ್ಲ ಎಂದಿದ್ದರು.ಇದನ್ನೂ ಓದಿ: ಕೃತಿ ಸನೋನ್‌ಗೆ ಬಂಪರ್ ಆಫರ್- ಸ್ಟಾರ್ ನಟನ ಜೊತೆ ರೊಮ್ಯಾನ್ಸ್

  • ಯಾವ ರೀತಿ ಜಾಹೀರಾತು ಪ್ರಕಟಿಸಿದ್ದೀರಿ ಅದೇ ಗಾತ್ರದಲ್ಲಿ ಪತ್ರಿಕೆಯಲ್ಲಿ ಕ್ಷಮೆ ಕೇಳಿ: ಪತಂಜಲಿಗೆ ಸುಪ್ರೀಂ ಸೂಚನೆ

    ಯಾವ ರೀತಿ ಜಾಹೀರಾತು ಪ್ರಕಟಿಸಿದ್ದೀರಿ ಅದೇ ಗಾತ್ರದಲ್ಲಿ ಪತ್ರಿಕೆಯಲ್ಲಿ ಕ್ಷಮೆ ಕೇಳಿ: ಪತಂಜಲಿಗೆ ಸುಪ್ರೀಂ ಸೂಚನೆ

    – ಪತಂಜಲಿ ವಿರುದ್ಧ ಕ್ರಮ ಕೈಗೊಳ್ಳದ್ದಕ್ಕೆ ಕೇಂದ್ರದ ವಿರುದ್ಧವೂ ತರಾಟೆ

    ನವದೆಹಲಿ: ಯಾವ ರೀತಿ ಜಾಹೀರಾತು (Advertisements) ಪ್ರಕಟಿಸಿದ್ದೀರಿ ಅದೇ ಗಾತ್ರದಲ್ಲಿ ಪತ್ರಿಕೆಯಲ್ಲಿ ಕ್ಷಮೆಯನ್ನು ಕೇಳಬೇಕೆಂದು ಪತಂಜಲಿ (Patanjali) ಸಂಸ್ಥೆಗೆ ಸುಪ್ರೀಂ ಕೋರ್ಟ್‌ (Supreme Court) ಆದೇಶಿಸಿದೆ. ಅದೇ ರೀತಿಯಾಗಿ ಪತಂಜಲಿ ವಿರುದ್ಧ ಕ್ರಮ ಕೈಗೊಳ್ಳದ್ದಕ್ಕೆ ಕೇಂದ್ರ ಸರ್ಕಾರವನ್ನು (Union Government) ಸುಪ್ರೀಂ ತರಾಟೆಗೆ ತೆಗೆದುಕೊಂಡಿದೆ.

    ಯೋಗ ಗುರು ಬಾಬಾ ರಾಮದೇವ್ (Baba Ramdev) ಮತ್ತು ಆಚಾರ್ಯ ಬಾಲಕೃಷ್ಣ (Acharya Balkrishna) ವಿರುದ್ಧದ ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆ ಇಂದು ನ್ಯಾ.ಹಿಮಾ ಕೊಹ್ಲಿ ಮತ್ತು ನ್ಯಾ. ಅಮಾನುಲ್ಲಾ ಅವರಿದ್ದ ದ್ವಿಸದಸ್ಯ ಪೀಠದಲ್ಲಿ ನಡೆಯಿತು.

    ಬಾಬಾ ರಾಮ್‌ದೇವ್ ಪರ ವಾದ ಮಂಡಿಸಿದ ವಕೀಲ ಮುಕುಲ್ ರೋಹಟಗಿ, ಪತ್ರಿಕೆಗಳಲ್ಲಿ ಕ್ಷಮಾಪಣೆ ಪ್ರಕಟವಾಗಿದೆ ಎಂದು ಕೋರ್ಟ್‌ ಗಮನಕ್ಕೆ ತಂದರು. ಈ ವೇಳೆ ನಿನ್ನೆ ಯಾಕೆ ಕ್ಷಮಾಪಣೆ ಪ್ರಕಟವಾಗಿದೆ ಎಂದು ಪ್ರಶ್ನಿಸಿದ ಪೀಠ ಜಾಹೀರಾತು ಯಾವ ಗಾತ್ರದಲ್ಲಿ ಪ್ರಕಟವಾಗಿದೆಯೇ ಅದೇ ರೀತಿಯಾಗಿ ಕ್ಷಮೆ ಕೇಳಬೇಕೆಂದು ಆದೇಶಿಸಿತು. ಇದನ್ನೂ ಓದಿ: ಕಾಂಗ್ರೆಸ್ ಆಡಳಿತದಲ್ಲಿ ಹನುಮಾನ್ ಚಾಲೀಸಾ ಕೇಳೋದು ಅಪರಾಧ: ಬೆಂಗ್ಳೂರಿನ ಹಲ್ಲೆ ಪ್ರಸ್ತಾಪಿಸಿ ಮೋದಿ ಕಿಡಿ

    ಇಂಡಿಯನ್ ಮೆಡಿಕಲ್ ಅಸೋಷಿಯನ್ (IMA) ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಂದುವರಿಸಿದ ಪೀಠ ತಪ್ಪುದಾರಿಗೆಳೆಯುವ ಜಾಹೀರಾತುಗಳನ್ನು ನೀಡುವ ಇತರ FMCG ಕಂಪನಿಗಳ ವಿರುದ್ಧ ಕ್ರಮ ಕೈಗೊಂಡಿರುವ ಬಗ್ಗೆ ಕೇಂದ್ರವನ್ನು ಈ ವೇಳೆ ಪ್ರಶ್ನಿಸಿತು.

    ಪತಂಜಲಿ ವಿರುದ್ಧ ಕ್ರಮ ಕೈಗೊಳ್ಳುವ ಬದಲು 1945 ರ ಡ್ರಗ್ಸ್ ಮತ್ತು ಕಾಸ್ಮೆಟಿಕ್ಸ್ ನಿಯಮಗಳ 170ನೇ ನಿಯಮದ ಅಡಿಯಲ್ಲಿ ಯಾವುದೇ ಕ್ರಮ ತೆಗೆದುಕೊಳ್ಳದಂತೆ ಆಯುಷ್ ಸಚಿವಾಲಯವು 2023 ರಲ್ಲಿ ಎಲ್ಲಾ ರಾಜ್ಯ ಸರ್ಕಾರಗಳಿಗೆ ಪತ್ರವನ್ನು ಕಳುಹಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿತು.

    ಅಧಿಕಾರಿಗಳು ಆದಾಯವನ್ನು ನೋಡುವಲ್ಲಿ ನಿರತರಾಗಿದ್ದಂತೆ ತೋರುತ್ತಿದೆ ಎಂದು ನ್ಯಾ. ಕೊಹ್ಲಿ ಅಸಮಾಧಾನ ವ್ಯಕ್ತಪಡಿಸಿದರು. ಒಂದು ಸುದ್ದಿಟಿವಿಯಲ್ಲಿ ಆಂಕರ್ ಪತಂಜಲಿ ಪ್ರಕರಣದಲ್ಲಿ ನ್ಯಾಯಾಲಯದಲ್ಲಿ ಏನಾಯಿತು ಎಂಬುದರ ಕುರಿತು ಓದುತ್ತಿದ್ದಾರೆ. ಇದೆ ಅವಧಿಯಲ್ಲಿ ಜಾಹೀರಾತು ಪತಂಜಲಿ ಕೂಡಾ ಚಾಲನೆಯಲ್ಲಿದೆ ಎಂತಹ ಪರಿಸ್ಥಿತಿ ಎಂದು ನ್ಯಾ. ಅಮಾನುಲ್ಲಾ ಟೀಕಿಸಿದರು. ಇದನ್ನೂ ಓದಿ: ನೇಹಾ ಹಿರೇಮಠ ತಂದೆಯ ಬಳಿ ಕ್ಷಮೆಯಾಚಿಸಿದ ಸಿಎಂ!

     

    ಪತಂಜಲಿ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳದಂತೆ ಸರ್ಕಾರ ಹೇಗೆ ಪತ್ರ ಬರೆಯಿತು ಎಂಬುದನ್ನು ವಿವರಿಸಬೇಕು ಎಂದು ಹೇಳಿದ ಪೀಠ, ಡ್ರಗ್ಸ್ ಮತ್ತು ಕಾಸ್ಮೆಟಿಕ್ಸ್ ಆಕ್ಟ್ ಮತ್ತು ಡ್ರಗ್ಸ್ ಮತ್ತು ಮ್ಯಾಜಿಕ್ ರೆಮಿಡೀಸ್ (ಆಕ್ಷೇಪಾರ್ಹ ಜಾಹೀರಾತುಗಳು) ಕಾಯಿದೆಯಂತಹ ಕಾನೂನುಗಳ ಅನುಷ್ಠಾನವನ್ನು ಸೂಕ್ಷ್ಮವಾಗಿ ಗಮನಿಸುವುದಾಗಿ ಕೋರ್ಟ್‌  ತಿಳಿಸಿತು.

    ತಪ್ಪುದಾರಿಗೆಳೆಯುವ ಜಾಹೀರಾತುಗಳಿಂದ ಪ್ರಭಾವಿತರಾಗಿ ಔಷಧಗಳನ್ನು ಸೇವಿಸುವ ಶಿಶುಗಳು ಮತ್ತು ಮಕ್ಕಳು ಮತ್ತು ವೃದ್ಧರ ಆರೋಗ್ಯದ ಮೇಲೆ ಇದು ಹೇಗೆ ಪರಿಣಾಮ ಬೀರುತ್ತದೆ. ನಾವು ನಿರ್ದಿಷ್ಟವಾಗಿ ಒಬ್ಬರ ಮೇಲೆ ಅರೋಪಿಸುತ್ತಿಲ್ಲ, ಗ್ರಾಹಕರು/ಸಾರ್ವಜನಿಕರನ್ನು ಹೇಗೆ ದಾರಿ ತಪ್ಪಿಸಲಾಗುತ್ತಿದೆ ಎಂಬುದರ ಕುರಿತು ಹೆಚ್ಚಿನ ಹಿತಾಸಕ್ತಿಯಾಗಿದೆ ಎಂದು ಎಂದು ನ್ಯಾಯಾಲಯ ಹೇಳಿತು. ಅಲ್ಲದೇ ಕೇಂದ್ರ ಗ್ರಾಹಕ ವ್ಯವಹಾರಗಳ ಇಲಾಖೆ, ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಹಾಗೂ ಮಾಹಿತಿ ಮತ್ತು ಪ್ರಸಾರ ಸಚಿವಾಲಯವನ್ನು ಪ್ರಕರಣದಲ್ಲಿ ಕಕ್ಷಿದಾರರನ್ನಾಗಿ ಸೇರಿಸಲು ನ್ಯಾಯಾಲಯ ನಿರ್ಧರಿಸಿದೆ.

    ಪ್ರಕರಣದ ಅರ್ಜಿ ವಿಚಾರಣೆಯನ್ನು ಏ.30ಕ್ಕೆ ಮುಂದೂಡಿದ ಪೀಠ ಅಂದು ನ್ಯಾಯಾಲಯಕ್ಕೆ ಪತಂಜಲಿ ಸಂಸ್ಥಾಪಕರಾದ ರಾಮ್‌ದೇವ್ ಮತ್ತು ಬಾಲಕೃಷ್ಣ ಹಾಜರಾಗಬೇಕೆಂದು ಸೂಚಿಸಿದೆ.

  • ಬಾಬಾ ರಾಮ್‌ದೇವ್‌ಗೆ ಮತ್ತೆ ಸುಪ್ರೀಂ ತಪರಾಕಿ

    ಬಾಬಾ ರಾಮ್‌ದೇವ್‌ಗೆ ಮತ್ತೆ ಸುಪ್ರೀಂ ತಪರಾಕಿ

    ನವದೆಹಲಿ: ಸುಳ್ಳು ಜಾಹೀರಾತು ಸಂಬಂಧ ಪತಂಜಲಿ(Patanjali) ಸಂಸ್ಥೆಯ ಬಾಬಾ ರಾಮದೇವ್ (Baba Ramdev) ಮತ್ತು ಆಚಾರ್ಯ ಬಾಲಕೃಷ್ಣಗೆ(Acharya Balkrishna) ಸುಪ್ರೀಂಕೋರ್ಟ್ ಮತ್ತೆ ತಪರಾಕಿ ಹಾಕಿದೆ.

    ಕ್ಷಮೆಯಾಚನೆಯ ನೈಜತೆ ತಿಳಿಯಲು ಇಂದು ಇಬ್ಬರ ಜೊತೆ ಸುಪ್ರೀಂಕೋರ್ಟ್ (Supreme Court) ವೈಯಕ್ತಿಕವಾಗಿ ಸಂವಹನ ನಡೆಸಿತು. ಈ ಹಂತದಲ್ಲಿ ಇಬ್ಬರು ಕ್ಷಮೆಯಾಚಿದರೂ, ಅದನ್ನು ಹಿಮಾ ಕೊಹ್ಲಿ, ಅಮಾನುಲ್ಲಾ ಅವರಿದ್ದ ನ್ಯಾಯಪೀಠ ಸಂಪೂರ್ಣವಾಗಿ ಒಪ್ಪಲಿಲ್ಲ.  ಇದನ್ನೂ ಓದಿ: ಸುರ್ಜೇವಾಲಾಗೆ ಶಾಕ್‌ – 2 ದಿನ ಚುನಾವಣಾ ಪ್ರಚಾರಕ್ಕೆ ನಿಷೇಧ

    ನಿಮ್ಮನ್ನು ಕ್ಷಮಿಸಿದ್ದೇವೆ ಎಂದು ನಾವು ಹೇಳುವುದಿಲ್ಲ. ನೀವೇನು ಅಮಾಯಕರಲ್ಲ. ನಿಮ್ಮ ಹಿಂದಿನ ಇತಿಹಾಸದ ಬಗ್ಗೆ ನಾವು ಕುರುಡರಾಗಿರಲು ಸಾಧ್ಯವಿಲ್ಲ. ನಿಮ್ಮ ಕ್ಷಮೆಯಾಚನೆ ಬಗ್ಗೆ ಆಲೋಚಿಸ್ತೇವೆ. ನಿಮ್ಮನ್ನು ಕುಣಿಕೆಯಿಂದ ಬಿಡಿಸಲಾಗಿದೆ ಎಂದು ನಾವು ಹೇಳುತ್ತಿಲ್ಲ. ಮುದ್ರಿಸುವ ಮೂಲಕ ಬಹಿರಂಗವಾಗಿ ಕ್ಷಮೆ ಕೇಳಿ ಎಂದು ಎಚ್ಚರಿಕೆಯ ಧಾಟಿಯಲ್ಲಿ ಸುಪ್ರೀಂಕೋರ್ಟ್ ಚಾಟಿ ಬೀಸಿದೆ.  ಇದನ್ನೂ ಓದಿ: ಅವಕಾಶ ಕೇಳಿ ಬಂದಿದ್ದ ಶೈಲಜಾ ಜೊತೆ 2ನೇ ಮದುವೆಯಾದರು ದ್ವಾರಕೀಶ್

    ಪತಂಜಲಿ ಮತ್ತದರ ಸಂಸ್ಥೆಗಳು ತಮ್ಮನ್ನು ತಾವು ಸುಧಾರಿಸಿಕೊಳ್ಳುವುದಾಗಿ ನೀಡಿದ ಹೇಳಿಕೆ ದಾಖಲಿಸಿಕೊಂಡ ಸುಪ್ರೀಂಕೋರ್ಟ್ ಮುಂದಿನ ವಿಚಾರಣೆಯನ್ನು ಏಪ್ರಿಲ್ 23ಕ್ಕೆ ಮುಂದೂಡಿತು.

     

  • ಅದಾನಿ, ಅಂಬಾನಿ, ಬಿರ್ಲಾಗಿಂತ ನನ್ನ ಸಮಯದ ಮೌಲ್ಯ ಹೆಚ್ಚು: ಬಾಬಾ ರಾಮದೇವ್

    ಅದಾನಿ, ಅಂಬಾನಿ, ಬಿರ್ಲಾಗಿಂತ ನನ್ನ ಸಮಯದ ಮೌಲ್ಯ ಹೆಚ್ಚು: ಬಾಬಾ ರಾಮದೇವ್

    ಪಣಜಿ: ಅದಾನಿ, ಅಂಬಾನಿ (Ambani), ಬಿರ್ಲಾಗಿಂತ ನನ್ನ ಸಮಯದ ಮೌಲ್ಯ ಹೆಚ್ಚು ಎಂದು ಬಾಬಾ ರಾಮ್‌ದೇವ್ (Ramdev) ಹೇಳಿದರು.

    ಗೋವಾದ ಪಣಜಿಯಲ್ಲಿ (Panaji) ಮುಖ್ಯಮಂತ್ರಿ ಪ್ರಮೋದ್ ಸಾವಂತ್ (Pramod Sawant) ಮತ್ತು ಕೇಂದ್ರ ಸಚಿವ ಶ್ರೀಪಾದ್ ನಾಯಕ್ ಅವರ ಸಮ್ಮುಖದಲ್ಲಿ ರಾಮ್‌ದೇವ್ ತಮ್ಮ ಸಹಾಯಕ ಆಚಾರ್ಯ ಬಾಲಕೃಷ್ಣ ಅವರನ್ನು ಸನ್ಮಾನಿಸಲು ಆಯೋಜಿಸಿದ್ದ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದರು.

    ಕಾರ್ಪೊರೇಟ್‌ಗಳು ತಮ್ಮ ಶೇ. 99ರಷ್ಟು ಸಮಯವನ್ನು ಸ್ವಹಿತಾಸಕ್ತಿಗಾಗಿ ಬಳಸುತ್ತಾರೆ, ಆದರೆ ನೋಡುವವರಿಗೆ ಸಮಯವು ಎಲ್ಲರ ಒಳಿತಿಗಾಗಿ ಎಂದು ಅನಿಸುತ್ತದೆ. ಆದರೆ ನನಗೆ ಇಲ್ಲಿದ್ದ ಮೂರು ದಿನಗಳು ಅಂಬಾನಿ ಮತ್ತು ಅದಾನಿಗಳಂತಹ ಬಿಲಿಯನೇರ್ ಕೈಗಾರಿಕೋದ್ಯಮಿಗಳ ಸಮಯಕ್ಕಿಂತ ಹೆಚ್ಚು ಮೌಲ್ಯಯುತವಾಗಿದೆ ಎಂದರು. ಇದನ್ನೂ ಓದಿ: ಅಮಿತ್‌ ಶಾ ಕೊಟ್ಟ ಟಾಸ್ಕ್‌ನಲ್ಲಿ ಕರ್ನಾಟಕ ಬಿಜೆಪಿ ಫೇಲ್‌

    ನಾನು ಹರಿದ್ವಾರದಿಂದ 3 ದಿನಗಳ ಕಾಲ ಇಲ್ಲಿಗೆ ಬಂದಿದ್ದೇನೆ. ನನ್ನ ಸಮಯದ ಮೌಲ್ಯವು ಅದಾನಿ, ಅಂಬಾನಿ, ಟಾಟಾ ಮತ್ತು ಬಿರ್ಲಾ ಅವರ ಸಮಯಕ್ಕಿಂತ ಹೆಚ್ಚು. ಕಾರ್ಪೊರೇಟ್‌ಗಳು ತಮ್ಮ ಸಮಯದ 99 ಪ್ರತಿಶತವನ್ನು ಸ್ವಹಿತಾಸಕ್ತಿಯಲ್ಲಿ ಕಳೆಯುತ್ತಾರೆ, ಆದರೆ ನೋಡುವವರ ಸಮಯ ಸಾಮಾನ್ಯವಾಗಿದೆ ಎಂದು ಹೇಳಿದರು.

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಷೇರು ಮಾರುಕಟ್ಟೆಯಲ್ಲಿ ಸದ್ದು ಮಾಡಲಿದೆ ಪತಂಜಲಿ – 5 ವರ್ಷದಲ್ಲಿ 4 IPO ಲಿಸ್ಟ್‌

    ಷೇರು ಮಾರುಕಟ್ಟೆಯಲ್ಲಿ ಸದ್ದು ಮಾಡಲಿದೆ ಪತಂಜಲಿ – 5 ವರ್ಷದಲ್ಲಿ 4 IPO ಲಿಸ್ಟ್‌

    ಮುಂಬೈ : ಪಂತಜಲಿ(Patanjali) ಸಂಸ್ಥೆಯೂ ಪತಂಜಲಿ ಸಮೂಹ ಸಂಸ್ಥೆಗಳನ್ನು ಆರಂಭಿಸಲು ಸನ್ನದ್ಧವಾಗಿದ್ದು, ಮುಂದಿನ ಐದು ವರ್ಷಗಳಲ್ಲಿ ನಾಲ್ಕು ಹೊಸ ಆರಂಭಿಕ ಸಾರ್ವಜನಿಕ ಕೊಡುಗೆ(IPO) ಬಿಡುಗಡೆ ಮಾಡುವ ತಯಾರಿಯಲ್ಲಿದೆ ಎಂದು ಯೋಗ ಗುರು ಬಾಬಾ ರಾಮದೇವ್(Baba Ramdev) ಹೇಳಿದ್ದಾರೆ.

    ಮುಂಬರುವ ಐದು ವರ್ಷದಲ್ಲಿ ಪತಂಜಲಿ ಆಯುರ್ವೇದ್, ಪತಂಜಲಿ ವೆಲ್ನೆಸ್, ಪತಂಜಲಿ ಮೆಡಿಸಿನ್ ಮತ್ತು ಪತಂಜಲಿ ಲೈಫ್‌ಸೈಲ್ ಐಪಿಒಗಳನ್ನು ಕಂಪನಿ ಶೇರು ಮಾರುಕಟ್ಟೆಯಲ್ಲಿ(Share Market) ಪಟ್ಟಿ ಮಾಡಲಿದೆ. ಕನಿಷ್ಠ 5-7 ಕಂಪನಿಗಳನ್ನು ಹೊಂದುವ ಚಿಂತನೆ ಇದ್ದು ಸದ್ಯ ನಾಲ್ಕು ಪಟ್ಟಿ ಮಾಡಲು ತಯಾರಿ ಆರಂಭಗೊಂಡಿದೆ.

    ಪ್ರಸ್ತುತ ಪತಂಜಲಿಯ ಸಮೂಹದ ವಹಿವಾಟು 40,000 ಕೋಟಿ ರೂ ಇದ್ದು, ಮುಂದಿನ ಐದು ವರ್ಷಗಳಲ್ಲಿ ಇದು 1 ಲಕ್ಷ ಕೋಟಿ ಆಗಲಿದೆ ಎಂಬ ವಿಶ್ವಾಸ ನಮಗಿದೆ ಎಂದು ರಾಮದೇವ್ ಹೇಳಿದ್ದಾರೆ. ಅಲ್ಲದೇ ಈ ಐಪಿಒಗಳೊಂದಿಗೆ 5 ಲಕ್ಷ ಕೋಟಿ ರೂ.ಗಳ ಮಾರುಕಟ್ಟೆ ಮೌಲ್ಯ ತಲುಪುವ ಗುರಿಯನ್ನು ಕಂಪನಿ ಹೊಂದಿದೆ ಎಂದು ಹೇಳಿದರು‌. ಇದನ್ನೂ ಓದಿ: ಪ್ರತಿಷ್ಠಿತ ಟೂರ್ನಿಗಳಲ್ಲಿ ಟೀಂ ಇಂಡಿಯಾಗೆ ನಿರಾಸೆ – ಕಾಡುತ್ತಿದೆ ಕೂಲ್ ಕ್ಯಾಪ್ಟನ್ ಕೊರತೆ

    BABA RAMDEV

    ಮುಂದಿನ ದಿನಗಳಲ್ಲಿ ಪತಂಜಲಿ 5 ಲಕ್ಷ ಉದ್ಯೋಗಾವಕಾಶಗಳನ್ನು ಒದಗಿಸಲಿದೆ. ಕಂಪನಿಯು 1 ಲಕ್ಷ ಪತಂಜಲಿ ವೆಲ್ನೆಸ್ ಸ್ಟೋರ್‌ಗಳನ್ನು ತೆರೆಯಲು ಯೋಜಿಸಿದೆ. ಪ್ರಸ್ತುತ, ಪತಂಜಲಿ ಫುಡ್ಸ್ ಮಾತ್ರ ಷೇರು ಮಾರುಕಟ್ಟೆಯಲ್ಲಿ ಪಟ್ಟಿ ಮಾಡಲಾದ ಏಕೈಕ ಸಮೂಹ ಕಂಪನಿಯಾಗಿದೆ. ರುಚಿ ಸೋಯಾ(Ruchi Soya) ಎಂದು ಪಟ್ಟಿ ಮಾಡಲಾದ ಈ ಕಂಪನಿಯನ್ನು ಪತಂಜಲಿ ಆಯುರ್ವೇದ್ 2019 ರಲ್ಲಿ ರೆಸಲ್ಯೂಶನ್ ಪ್ರಕ್ರಿಯೆಯ ಅಡಿಯಲ್ಲಿ 4,350 ಕೋಟಿ ರೂ.ಗೆ ಖರೀದಿಸಿತು. ಈ ಕಂಪನಿಯ ನಿವ್ವಳ ಮೌಲ್ಯ ಸುಮಾರು 50,000 ಕೋಟಿ ರೂ. ಆಗಿದ್ದು ಕಂಪನಿಯು ಈಗಾಗಲೇ ಷೇರು ವಿನಿಮಯ ಕೇಂದ್ರಗಳಾದ ಬಿಎಸ್‌ಇ(BSE) ಮತ್ತು ಎನ್‌ಎಸ್‌ಇಯಲ್ಲಿ(NSE) ಪಟ್ಟಿಮಾಡಿದೆ.

    ಜೂನ್‌ನಲ್ಲಿ, ಖಾದ್ಯ ತೈಲ ಉತ್ಪಾದಕ ರುಚಿ ಸೋಯಾವನ್ನು ಪತಂಜಲಿ ಫುಡ್ಸ್ ಲಿಮಿಟೆಡ್ ಎಂದು ಮರುನಾಮಕರಣ ಮಾಡಲಾಯಿತು‌. ಪತಂಜಲಿ ಫುಡ್ಸ್ ಷೇರು ಬೆಲೆ ಗುರುವಾರ ಬಿಎಸ್‌ಇಯಲ್ಲಿ ಶೇ.0.5 ಏರಿಕೆಯಾಗಿ 1,349 ರೂ. ತಲುಪಿದೆ. ಕಳೆದ ಒಂದು ತಿಂಗಳಲ್ಲಿ ಈ ಸ್ಟಾಕ್ ಬೆಲೆಯು ಶೇ.20 ಮತ್ತು ಕಳೆದ ಆರು ತಿಂಗಳಲ್ಲಿ ಶೇ. 30 ರಷ್ಟು ಏರಿಕೆಯಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಜನರನ್ನು ದಾರಿ ತಪ್ಪಿಸಬೇಡಿ: ಬಾಬಾ ರಾಮದೇವ್‌ ವಿರುದ್ಧ ದೆಹಲಿ ಹೈಕೋರ್ಟ್‌ ಕಿಡಿ

    ಜನರನ್ನು ದಾರಿ ತಪ್ಪಿಸಬೇಡಿ: ಬಾಬಾ ರಾಮದೇವ್‌ ವಿರುದ್ಧ ದೆಹಲಿ ಹೈಕೋರ್ಟ್‌ ಕಿಡಿ

    ನವದೆಹಲಿ: ಅಧಿಕೃತ ಎನ್ನುವುದಕ್ಕಿಂತ ಹೆಚ್ಚಿನದ್ದನ್ನು ಅಥವಾ ಅಧಿಕೃತವಲ್ಲದ್ದನ್ನು ಹೇಳಿ ಜನರ ದಾರಿ ತಪ್ಪಿಸಬೇಡಿ ಎಂದು ಯೋಗ ಗುರು ಬಾಬಾ ರಾಮದೇವ್‌ ಅವರನ್ನು ದೆಹಲಿ ಹೈಕೋರ್ಟ್‌ ತರಾಟೆಗೆ ತೆಗೆದುಕೊಂಡಿದೆ.

    ಈ ಹಿಂದೆ ಅಲೋಪತಿ ವಿರುದ್ಧ ರಾಮದೇವ್‌ ಹೇಳಿಕೆ ನೀಡಿದ್ದರು. ವಿವಿಧ ವೈದ್ಯರ ಸಂಘಗಳು ಅವರ ವಿರುದ್ಧ ಮೊಕದ್ದಮೆ ಸಲ್ಲಿಸಿವೆ. ಇದರ ವಿಚಾರಣೆಯ ಸಂದರ್ಭದಲ್ಲಿ ನ್ಯಾಯಮೂರ್ತಿ ಭಂಬಾನಿ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

    ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರು ಲಸಿಕೆ ಹಾಕಿಸಿಕೊಂಡಿದ್ದರೂ ಕೋವಿಡ್-19 ಪಾಸಿಟಿವ್ ಬಂದಿದೆ. ಇದು ವೈದ್ಯಕೀಯ ವಿಜ್ಞಾನದ ವೈಫಲ್ಯವಾಗಿದೆ ಎಂಬ ಯೋಗ ಗುರು ಬಾಬಾ ರಾಮದೇವ್ ಅವರ ಇತ್ತೀಚಿನ ಹೇಳಿಕೆ ನೀಡಿದ್ದರು. ಇದನ್ನು ದೆಹಲಿ ಹೈಕೋರ್ಟ್ ಬುಧವಾರ ಪ್ರಶ್ನಿಸಿದೆ. ಇದನ್ನೂ ಓದಿ: ಪತ್ನಿಯನ್ನು ಇತರ ಮಹಿಳೆಯರಿಗೆ ಹೋಲಿಸುವುದು ಮಾನಸಿಕ ಕ್ರೌರ್ಯಕ್ಕೆ ಸಮ: ಹೈಕೋರ್ಟ್

    ಆಯುರ್ವೇದಕ್ಕಿದ್ದ ಒಳ್ಳೆಯ ಹೆಸರು ಈಗ ಕುಂದುತ್ತಿರುವ ಬಗ್ಗೆ ನನಗೆ ಕಾಳಜಿ ಇದೆ. ನಾನು ಅದರ ಬಗ್ಗೆ ಚಿಂತಿಸುತ್ತಿದ್ದೇನೆ. ಆಯುರ್ವೇದವು ಪ್ರಾಚೀನ ವೈದ್ಯಕೀಯ ಪದ್ಧತಿಯಾಗಿದೆ. ಆಯುರ್ವೇದದ ಒಳ್ಳೆಯ ಹೆಸರಿಗೆ ಧಕ್ಕೆ ತರುವಂತಹ ಕೆಲಸವನ್ನು ನಾವು ಮಾಡಬಾರದು ಎಂದು ನ್ಯಾಯಮೂರ್ತಿ ಅನುಪ್ ಜೈರಾಮ್ ಭಂಬಾನಿ ಹೇಳಿದ್ದಾರೆ.

    ಕೆಲವೊಮ್ಮೆ ವಿದೇಶಿ ನಾಯಕರ ಹೆಸರುಗಳನ್ನು ಉಲ್ಲೇಖಿಸಲಾಗುತ್ತಿದೆ. ಇದು ವಿದೇಶಗಳೊಂದಿಗಿನ ಸಂಬಂಧದ ಮೇಲೆ ಪರಿಣಾಮ ಬೀರಬಹುದು ಎಂದಿದ್ದಾರೆ. ಇದನ್ನೂ ಓದಿ: ರೋಹಿಂಗ್ಯಾ ಮುಸ್ಲಿಮರಿಗೆ ಫ್ಲ್ಯಾಟ್‌ : ಯೂಟರ್ನ್‌ ಹೊಡೆದ ಕೇಂದ್ರ

    Live Tv
    [brid partner=56869869 player=32851 video=960834 autoplay=true]

  • ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ: ಬಾಬಾ ರಾಮದೇವ್‌

    ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ: ಬಾಬಾ ರಾಮದೇವ್‌

    ತಿರುಪತಿ: ಗೋವನ್ನು ಭಾರತದ ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಲು ಯೋಗ ಗುರು ಬಾಬಾ ರಾಮದೇವ್‌ ಒತ್ತಾಯಿಸಿದ್ದಾರೆ.

    GOVU POOJA

    ಟಿಟಿಡಿ ವತಿಯಿಂದ ಆಂಧ್ರ ಪ್ರದೇಶದ ತಿರುಪತಿಯಲ್ಲಿ ಆಯೋಜಿಸಿದ್ದ “ಗೋ ಮಹಾ ಸಮ್ಮೇಳನ”ದಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್‌ ಶಾ ಅವರು ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವ ಮಸೂದೆಯನ್ನು ತರಲಿ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕರ್ನಾಟಕವು ಯಶಸ್ಸಿನ ಹೊಸ ಎತ್ತರವನ್ನು ಏರಲಿ: ಮೋದಿ ಶುಭಾಶಯ

    ಈ ಸಂಬಂಧ ಟಿಟಿಡಿ ಟ್ರಸ್ಟ್‌ ಬೋರ್ಡ್‌ ಪ್ರಸ್ತಾಪ ಹೊರಡಿಸಿದೆ ಎಂದು ಹೇಳಿದರು.

    ಪತಂಜಲಿ ಪೀಠವು ಈಗಾಗಲೇ ಗೋ ಸಂರಕ್ಷಣಾ ಅಭಿಯಾನವನ್ನು ಆರಂಭಿಸಿದೆ. ಗೋವು ಮಹಾ ಸಮ್ಮೇಳನದ ನಿರ್ಣಯಗಳು ಎಲ್ಲ ಗೋ ಪ್ರೇಮಿಗಳಲ್ಲಿ ಪ್ರತಿಧ್ವನಿಸುತ್ತಿದೆ ಎಂದರು. ಇದನ್ನೂ ಓದಿ: ಕೋಟೆನಾಡಲ್ಲಿ ಅಸ್ಪೃಶ್ಯತೆ, ಕೋಮುವಾದ ವಿರೋಧಿಸಿ 101 ಜನ ಬೌದ್ಧ ಧರ್ಮಕ್ಕೆ ಮತಾಂತರ

    ಗೋವು ಮಹಾ ಸಮ್ಮೇಳನ ಕಾರ್ಯಕ್ರಮ ಕುರಿತು ಟಿಟಿಡಿ, ಆಂಧ್ರ ಪ್ರದೇಶದ ಮುಖ್ಯಮಂತ್ರಿ ಜಗನ್‌ ಮೋಹನ್‌ ರೆಡ್ಡಿ ಅವರಿಗೆ ಮಾಹಿತಿ ನೀಡಿತ್ತು. ಈ ವೇಳೆ ಹಿಂದೂ ಧಾರ್ಮಿಕ ಪ್ರಚಾರಕ್ಕಾಗಿ ಇತರ ಟಿಟಿಡಿ ಕಾರ್ಯಕ್ರಮಗಳನ್ನು ಸಿಎಂ ಶ್ಲಾಘಿಸಿದರು. ವಿಶೇಷವಾಗಿ ಟಿಟಿಡಿ ಅಧ್ಯಕ್ಷ ವೈ.ಬಿ.ಸುಬ್ಬಾ ರೆಡ್ಡಿ ಅವರ ಕಾರ್ಯಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿದರು ಎಂದು ಬಾಬಾ ರಾಮದೇವ್‌ ತಿಳಿಸಿದರು.

  • ರಾಮ ಜನಿಸಿದ್ದು ಆಯೋಧ್ಯೆಯಲ್ಲಿ ಎಂದು ಮುಸ್ಲಿಂರಿಗೂ ಗೊತ್ತು: ಬಾಬಾ ರಾಮದೇವ್

    ರಾಮ ಜನಿಸಿದ್ದು ಆಯೋಧ್ಯೆಯಲ್ಲಿ ಎಂದು ಮುಸ್ಲಿಂರಿಗೂ ಗೊತ್ತು: ಬಾಬಾ ರಾಮದೇವ್

    ನವದೆಹಲಿ: ಅಯೋಧ್ಯೆಯಲ್ಲಿ ಜನಿಸಿದ್ದು ಪ್ರವಾದಿ ಮುಹಮ್ಮದ್ ಅಲ್ಲ, ಭಗವಾನ್ ರಾಮ ಎಂದು ಇಡೀ ವಿಶ್ವ ಮತ್ತು ಮುಸ್ಲಿಂ ಸಮುದಾಯಕ್ಕೂ ಗೊತ್ತಿದೆ ಎಂದು ಯೋಗ ಗುರು ಬಾಬಾ ರಾಮದೇವ್ ಹೇಳಿದ್ದಾರೆ.

    ಇಂದು ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಯೋಧ್ಯೆ ತೀರ್ಪು ಬಂದ ಕೂಡಲೇ ಆ ವಿವಾದಿತ ಜಾಗದಲ್ಲಿ ರಾಮಮಂದಿರ ನಿರ್ಮಾಣ ಮಾಡಬೇಕು. ಮಹಾರಾಷ್ಟ್ರ ಮತ್ತು ಹರ್ಯಾಣ ರಾಜ್ಯಗಳಲ್ಲಿ ನಡೆಯುವ ವಿಧಾನಸಭಾ ಚುನಾವಣೆಗೆ ಬಿಜೆಪಿ ಪಕ್ಷವನ್ನು ಬೆಂಬಲಿಸುವುದಾಗಿ ತಿಳಿಸಿದ ರಾಮದೇವ್ ದೇಶ ಅಭಿವೃದ್ಧಿಯಾಗಬೇಕು ಎಂದರೆ ರಾಜ್ಯ ಮತ್ತು ಕೇಂದ್ರದಲ್ಲಿ ಸ್ಥಿರ ಸರ್ಕಾರಗಳ ಅವಶ್ಯಕತೆ ಇದೆ ಎಂದು ತಿಳಿಸಿದರು.

    ಯಾವ ಪಕ್ಷಕ್ಕೆ ಅಧಿಕಾರ ನೀಡಿದರೆ ಮುಂದಿನ 10-15 ವರ್ಷದಲ್ಲಿ ಭಾರತ ಯುನೈಟೆಡ್ ಸ್ಟೇಟ್ಸ್, ರಷ್ಯಾ ಮತ್ತು ಯುರೋಪ್ ನಂತಹ ಬಲಿಷ್ಠ ರಾಷ್ಟ್ರಗಳ ವಿರುದ್ಧ ತಲೆ ಎತ್ತಿ ನಿಲ್ಲುತ್ತದೆ ಎಂದು ನಾವು ಯೋಚಿಸಬೇಕು. ಸ್ಥಿರ ರಾಜಕೀಯ ಮತ್ತು ಉತ್ತಮ ಆಡಳಿತಕ್ಕಾಗಿ ನಾವು ಬಲವಾದ ಪಕ್ಷಕ್ಕೆ ಅಧಿಕಾರ ನೀಡಬೇಕಾಗಿದೆ ಎಂದು ರಾಮದೇವ್ ಸಲಹೆ ನೀಡಿದರು.

    ಇದೇ ವೇಳೆ ಜನರು ಹರ್ಯಾಣ ಮತ್ತು ಮಹಾರಾಷ್ಟ್ರದಲ್ಲಿ ಉತ್ತಮ ಸರ್ಕಾರವನ್ನು ಆಯ್ಕೆ ಮಾಡಬೇಕು ಎಂದು ಹೇಳಿದ ಅವರು, ಹರ್ಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರನ್ನು ಹೊಗಳಿದರು. ಖಟ್ಟರ್ ಗೆ ಯಾವುದೇ ಆಸ್ತಿ ಇಲ್ಲ ಮತ್ತು ಅವರು ಪ್ರಾಮಾಣಿಕರು. ಮನೋಹರ್ ಲಾಲ್ ಖಟ್ಟರ್ ಒಳ್ಳೆಯ ಮನುಷ್ಯ ಮತ್ತು ಅವರು ಭ್ರಷ್ಟಾಚಾರವನ್ನು ಸಹಿಸುವುದಿಲ್ಲ ಎಂದು ಹಾಡಿಹೊಗಳಿದರು.

    370 ನೇ ವಿಧಿಯನ್ನು ರದ್ದುಪಡಿಸಿದಕ್ಕೆ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರನ್ನು ಶ್ಲಾಘಿಸಿದ ರಾಮದೇವ್, ಸರ್ದಾರ್ ಪಟೇಲ್ ನಂತರ ಮೋದಿ ಮತ್ತು ಶಾ ಒಂದು ರಾಷ್ಟ್ರ, ಒಂದು ಸಂವಿಧಾನ ಮತ್ತು ಒಂದು ಧ್ವಜದ ಕಲ್ಪನೆಯನ್ನು ತಂದರು. ಇದು ನರೇಂದ್ರ ಮೋದಿ-ಅಮಿತ್ ಶಾ ಸರ್ಕಾರದ ಮೇಲೆ ಜನರ ನಂಬಿಕೆಯನ್ನು ಬಲಪಡಿಸಿದೆ. ಎಲ್ಲಾ ರಾಜಕೀಯ ಮತ್ತು ಸಾಮಾಜಿಕ ಅಡೆತಡೆಗಳನ್ನು ಅಮಿತ್ ಶಾ ಮತ್ತು ಪಿಎಂ ಮೋದಿ ದೂರ ಮಾಡಿದ್ದಾರೆ ಎಂದು ಹೇಳಿದರು.

    ದೇಶದಲ್ಲಿ ಸೈದ್ಧಾಂತಿಕ ಭಯೋತ್ಪಾದನೆ ನಡೆಯುತ್ತಿದೆ. ದಲಿತವಾಡಿ ಮತ್ತು ಕೆಲವು ಸಮಾಜವಾದಿಗಳು ನಮ್ಮವರ ವಿರುದ್ಧ ದ್ವೇಷವನ್ನು ಹರಡುತ್ತಿದ್ದಾರೆ. ಇದನ್ನು ನಿರ್ಮೂಲನೆ ಮಾಡಬೇಕಾಗಿದೆ ಎಂದ ಅವರು ವಿಧಾನ ಸಭೆಚುನಾವಣೆಯಲ್ಲಿ ಹರ್ಯಾಣ ಮತ್ತು ಮಹಾರಾಷ್ಟ್ರದ ಎರಡು ರಾಜ್ಯದ ಎಲ್ಲ ಜನರು ಹೊರಗೆ ಬಂದು ಮತ ಹಾಕಬೇಕು ಎಂದು ಮನವಿ ಮಾಡಿದರು.

  • ಕಪ್ಪು ಹಣಕ್ಕಿಂತ ಕಪ್ಪು ಮನಸ್ಸುಗಳ ವಿರುದ್ಧ ಮೋದಿ ಹೋರಾಟ: ಬಾಬಾ ರಾಮದೇವ್

    ಕಪ್ಪು ಹಣಕ್ಕಿಂತ ಕಪ್ಪು ಮನಸ್ಸುಗಳ ವಿರುದ್ಧ ಮೋದಿ ಹೋರಾಟ: ಬಾಬಾ ರಾಮದೇವ್

    – ಕೆ.ಎಸ್.ಭಗವಾನ್ ವಿರುದ್ಧ ಕಿಡಿಕಾರಿದ ಬಾಬಾ ರಾಮದೇವ್

    ವಿಜಯಪುರ: ಪ್ರಧಾನಿ ನರೇಂದ್ರ ಮೋದಿ ಅವರು ಕಪ್ಪು ಹಣಕ್ಕಿಂತ ಕಪ್ಪು ಮನಸ್ಸುಗಳ ವಿರುದ್ಧ ಹೋರಾಟ ನಡೆಸಿದ್ದಾರೆ ಎಂದು ಬಾಬಾ ರಾಮದೇವ್ ಹೇಳಿದರು.

    ನಗರದ ಸಿದ್ಧೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಬಾಬಾ ರಾಮದೇವ್, ವಿದೇಶದಲ್ಲಿರುವ ಕಪ್ಪು ಹಣವನ್ನು ಭಾರತಕ್ಕೆ ತರುವ ವಿಚಾರವನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಿಟ್ಟಿದ್ದೇವೆ ಎಂದ ಅವರು ದೇಶದಲ್ಲಿ ಬಡತನ, ಆಹಾರ ಪದಾರ್ಥಗಳ ಬೆಲೆಯು ಏರಿಕೆಯಾಗುತ್ತಿದೆ ಎಂದರು.

    ಪ್ರೊ. ಕೆ.ಎಸ್.ಭಗವಾನ್ ವಿರುದ್ಧ ಕಿಡಿಕಾರಿದ ಬಾಬಾ ರಾಮದೇವ್, ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಿನಲ್ಲಿ ಒಂದು ಧರ್ಮದ ಬಗ್ಗೆ ಮಾತನಾಡುವುದು ಸರಿಯಲ್ಲ. ಹೀಗೆ ಮಾತನಾಡುವವರು ಇಸ್ಲಾಂ ಧರ್ಮ, ಮೊಹಮ್ಮದ್ ಪೈಗಂಬರ್, ಖುರಾನ್, ಬೈಬಲ್ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡುತ್ತಾರಾ? ಒಂದು ವೇಳೆ ದಲಿತ ಚಿಂತಕನೇ ಸಂವಿಧಾನ ಶಿಲ್ಪಿ ಬಿ.ಆರ್.ಅಂಬೇಡ್ಕರ್ ವಿರುದ್ಧ ಮಾತನಾಡಿದರೆ ಆತನ ಪರಿಸ್ಥಿತಿ ಹೇಗಿರುತ್ತದೆ ಎಂದು ಪ್ರಶ್ನಿಸಿದರು.

    ಶ್ರೀರಾಮ ದಲಿತ, ಆದಿವಾಸಿ, ವನವಾಸಿ, ಬ್ರಾಹ್ಮಣ ಇದ್ಯಾವುದೂ ನಮಗೆ ಮುಖ್ಯವಲ್ಲ. ಆತ ನಮ್ಮ ಪೂರ್ವಜ ಎನ್ನುವುದಷ್ಟೇ ಮುಖ್ಯ. ನಾವು ರಾಮನನ್ನು ಪೂಜಿಸುತ್ತೇವೆ, ಗೌರವಿಸುತ್ತೇವೆ ಎಂದ ಅವರು, ವಾಲ್ಮೀಕಿ ಬರೆದ ರಾಮಾಯಣದಲ್ಲಿ ರಾಮನ ಬಗ್ಗೆ ಎಲ್ಲಿಯೂ ಕೆಟ್ಟದಾಗಿ ಪ್ರಸ್ತಾಪ ಮಾಡಿಲ್ಲ. ನಾನು ಕೂಡ ರಾಮಾಯಣ ಓದಿದ್ದೇನೆ. ವಾಲ್ಮೀಕಿ ರಾಮನಾಯಣವನ್ನು ಆಧಾರವಾಗಿ ಇಟ್ಟುಕೊಂಡು ಸುಳ್ಳು ಆರೋಪ ಮಾಡುವುದು ಸರಿಯಲ್ಲ ಎಂದು ಭಗವಾನ್ ವಿರುದ್ಧ ಗುಡುಗಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv