Tag: ಬಾಬಾ ವಂಗಾ

  • ಭಯಾನಕ ಹವಾಮಾನ ಘಟನೆ, ಭಯೋತ್ಪಾದಕ ದಾಳಿಗಳಲ್ಲಿ ಹೆಚ್ಚಳ: 2024 ಕ್ಕೆ ಬಾಬಾ ವಂಗಾ ಭವಿಷ್ಯವಾಣಿ

    ಭಯಾನಕ ಹವಾಮಾನ ಘಟನೆ, ಭಯೋತ್ಪಾದಕ ದಾಳಿಗಳಲ್ಲಿ ಹೆಚ್ಚಳ: 2024 ಕ್ಕೆ ಬಾಬಾ ವಂಗಾ ಭವಿಷ್ಯವಾಣಿ

    – ಪುಟಿನ್‌ ಮೇಲೆ ದೇಶವಾಸಿಯಿಂದ ಹತ್ಯೆ ಯತ್ನ ನಡೆಯಬಹುದು ಎಂದು ಭವಿಷ್ಯ

    ಸೋಫಿಯಾ: 2024 ಕ್ಕೆ ಭಯಾನಕ ಹವಾಮಾನ ಘಟನೆಗಳು ಹಾಗೂ ಭಯೋತ್ಪಾದಕ ದಾಳಿಗಳಲ್ಲಿ ಏರಿಕೆಯಾಗಲಿದೆ ಎಂದು ಬಾಬಾ ವಂಗಾ (Baba Vanga) ಅವರು ಭವಿಷ್ಯ ನುಡಿದಿದ್ದಾರೆ.

    ಬಾಲ್ಕನ್ಸ್‌ನ ನಾಸ್ಟ್ರಾಡಾಮಸ್ ಎಂದೂ ಕರೆಯಲ್ಪಡುವ ಬಾಬಾ ವಂಗಾ ಅವರು, 9/11 ಭಯೋತ್ಪಾದಕ ದಾಳಿಗಳು, ರಾಜಕುಮಾರಿ ಡಯಾನಾ ಸಾವು, ಚೆರ್ನೋಬಿಲ್ ದುರಂತ ಮತ್ತು ಬ್ರೆಕ್ಸಿಟ್‌ನಂತಹ ಪ್ರಮುಖ ವಿಶ್ವ ಘಟನೆಗಳ ಬಗ್ಗೆ ಭವಿಷ್ಯ ನುಡಿದಿದ್ದರು. 2024 ರಲ್ಲಿ ಅವರು ಏಳು ಭವಿಷ್ಯವಾಣಿಗಳನ್ನು ನುಡಿದಿದ್ದಾರೆ. ಇದನ್ನೂ ಓದಿ: 9 ಉಗ್ರರ ಹತ್ಯೆ – ಎಲ್ಲರನ್ನೂ ನರಕಕ್ಕೆ ಕಳುಹಿಸಿದ್ದೇವೆ ಎಂದ ಪಾಕ್‌ ಸೇನೆ

    ಮುಂದಿನ ವರ್ಷ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮೇಲೆ ಸಹ ದೇಶವಾಸಿಯಿಂದ ಹತ್ಯೆಯ ಪ್ರಯತ್ನ ನಡೆಯಬಹುದು. ಯುರೋಪ್‌ನಲ್ಲಿ ಹೆಚ್ಚಿದ ಭಯೋತ್ಪಾದಕ ದಾಳಿಯ ಬಗ್ಗೆ ಎಚ್ಚರಿಕೆಯಿಂದ ಇರಬೇಕು. ಮುಂದಿನ ವರ್ಷ “ದೊಡ್ಡ ದೇಶ” ಜೈವಿಕ ಶಸ್ತ್ರಾಸ್ತ್ರ ಪರೀಕ್ಷೆಗಳು ಅಥವಾ ದಾಳಿಗಳನ್ನು ನಡೆಸುತ್ತದೆ ಎಂದು ಭವಿಷ್ಯ ಹೇಳಿದ್ದಾರೆ.

    ಮುಂದಿನ ವರ್ಷ ಜಾಗತಿಕ ಆರ್ಥಿಕತೆಯ ಮೇಲೆ ಪರಿಣಾಮ ಬೀರುವ ದೊಡ್ಡ ಆರ್ಥಿಕ ಬಿಕ್ಕಟ್ಟು ಉಂಟಾಗಲಿದೆ. ಹೆಚ್ಚುತ್ತಿರುವ ಸಾಲದ ಮಟ್ಟಗಳು ಮತ್ತು ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಯಂತಹ ಅಂಶಗಳು ಇದಕ್ಕೆ ಕಾರಣಗಳಾಗಿವೆ ಎಂದು ಬಾಬಾ ವಂಗಾ ಎಚ್ಚರಿಸಿದ್ದಾರೆ. ಇದನ್ನೂ ಓದಿ: ಸೋವಿಯತ್‌ ಒಕ್ಕೂಟದಂತೆ ಅಮೆರಿಕವೂ ನಾಶವಾಗುತ್ತದೆ – ಹಮಾಸ್‌ ಎಚ್ಚರಿಕೆ

    ಮುಂದಿನ ವರ್ಷ ಭಯಾನಕ ಹವಾಮಾನ ಘಟನೆಗಳು ಮತ್ತು ನೈಸರ್ಗಿಕ ವಿಕೋಪಗಳು ಸಂಭವಿಸಲಿವೆ. ಸೈಬರ್ ದಾಳಿಗಳು ಹೆಚ್ಚಾಗುತ್ತವೆ. ಸುಧಾರಿತ ಹ್ಯಾಕರ್‌ಗಳು ಪವರ್ ಗ್ರಿಡ್‌ಗಳು ಮತ್ತು ನೀರಿನ ಸಂಸ್ಕರಣಾ ಘಟಕಗಳಂತಹ ನಿರ್ಣಾಯಕ ಮೂಲಸೌಕರ್ಯಗಳನ್ನು ಗುರಿಯಾಗಿಸುತ್ತಾರೆ. ಇದು ರಾಷ್ಟ್ರೀಯ ಭದ್ರತೆಗೆ ಅಪಾಯವನ್ನುಂಟು ಮಾಡುತ್ತದೆ ಎಂದಿದ್ದಾರೆ.

    2024 ರಲ್ಲಿ ಆಲ್ಝೈಮರ್ ಮತ್ತು ಕ್ಯಾನ್ಸರ್ ಸೇರಿದಂತೆ ಗುಣಪಡಿಸಲಾಗದ ಕಾಯಿಲೆಗಳಿಗೆ ಹೊಸ ಚಿಕಿತ್ಸೆಗಳು ಬರಲಿವೆ. ಕ್ವಾಂಟಮ್ ಕಂಪ್ಯೂಟಿಂಗ್‌ನಲ್ಲಿ ಪ್ರಮುಖ ಪ್ರಗತಿಯಾಗಲಿದೆ ಎಂದು ಭವಿಷ್ಯವಾಣಿಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: Nepal Earthquake: ಕಟ್ಟಡದಡಿ ಸಿಲುಕಿ ಮಲಗಿದ್ದಲ್ಲೇ ಉಸಿರುಚೆಲ್ಲಿದ ಉಪಮೇಯರ್

    1911 ರಲ್ಲಿ ಜನಿಸಿದ್ದ ಉತ್ತರ ಮ್ಯಾಸಿಡೋನಿಯಾದಲ್ಲಿ ಜನಿಸಿದ್ದರು. ಅವರು 1996 ರಲ್ಲಿ ನಿಧನರಾಗಿದ್ದಾರೆ. ಕುರುಡರಾಗಿದ್ದ ಬಲ್ಗೇರಿಯನ್ ಅತೀಂದ್ರಿಯ ಬಾಬಾ ವಂಗಾ ಅವರ ಭವಿಷ್ಯವಾಣಿಗಳು ಅವರ ಮರಣದ ನಂತರ ಬಹಳ ಕಾಲ ನಿಜವಾಯಿತು ಎಂದು ಹೇಳಲಾಗುತ್ತದೆ.

  • ಏಲಿಯನ್ ಅಟ್ಯಾಕ್, ಸೋಲರ್ ಸುನಾಮಿ – ವಿಶ್ವದ ಅಂತ್ಯದ ಬಗ್ಗೆ ಬಾಬಾ ವಂಗಾ ಭವಿಷ್ಯವಾಣಿ

    ಏಲಿಯನ್ ಅಟ್ಯಾಕ್, ಸೋಲರ್ ಸುನಾಮಿ – ವಿಶ್ವದ ಅಂತ್ಯದ ಬಗ್ಗೆ ಬಾಬಾ ವಂಗಾ ಭವಿಷ್ಯವಾಣಿ

    ಸೋಫಿಯಾ: 2023ರ ಅವಧಿಯಲ್ಲಿ ಅನ್ಯಗ್ರಹ ಜೀವಿಗಳ ದಾಳಿ (Alien Attack), ಸೋಲರ್ ಸುನಾಮಿಯಂತಹ (Solar Storm) ಅನೇಕ ಗಂಡಾ ತರಗಳಿಂದ ವಿಶ್ವ ನಾನಾ ರೀತಿಯ ತೊಂದರೆಗಳನ್ನು ಎದುರಿಸಲಿದೆ ಎಂದು ನಾಸ್ಟ್ರಾಡಾಮಸ್‌ (Nostradamus) ಮಹಿಳೆ ಎಂದೇ ಹೆಸರಾಗಿರುವ ಬಾಬಾ ವಂಗಾ (Baba Vanga) ಭವಿಷ್ಯವಾಣಿ ನುಡಿದಿದ್ದಾರೆ. ವಿಶ್ವದ ಅಂತ್ಯದ ಬಗ್ಗೆಯೂ ಇದೇ ವೇಳೆ ಸುಳಿವು ಕೊಟ್ಟಿದ್ದಾರೆ.

    ಕೆಲ ತಿಂಗಳ ಹಿಂದೆಯಷ್ಟೇ ಭಾರತದ ಭವಿಷ್ಯ ನುಡಿದು ಆತಂಕ ಸೃಷ್ಟಿಸಿದ್ದ ಬಲ್ಗೇರಿಯಾದ ಕುರುಡು ಮಹಿಳೆ ಬಾಬಾ ವಂಗಾ, ಇದೀಗ ವಿಶ್ವದ ಭವಿಷ್ಯ ನುಡಿದು ಮತ್ತೊಮ್ಮೆ ಆತಂಕ ಉಂಟಾಗುವಂತೆ ಮಾಡಿದ್ದಾರೆ. ಇದನ್ನೂ ಓದಿ: ಬಾಂಗ್ಲಾದ ನಾಯಕ-ಭಾರತದ ಬೌಲರ್ – ಏಕದಿನ ಸರಣಿ ಆರಂಭಕ್ಕೂ ಮುನ್ನ ಔಟ್

    ಬಾಬಾ ವಂಗಾರ 2023ರ ಭವಿಷ್ಯವಾಣಿ ಏನು?
    2023ರಲ್ಲಿ ಸೋಲಾರ್ ಸುನಾಮಿ ಸಂಭವಿಸುತ್ತದೆ. ಇದರ ಪರಿಣಾಮವಾಗಿ ಭೂಮಿಯ ಕಾಂತೀಯ ಕವಚವು ನಾಶವಾಗುತ್ತದೆ. ಭೂಮಿಯ ಮೇಲೆ ಏಲಿಯನ್‌ಗಳ (ಅನ್ಯಗ್ರಹ ಜೀವಿ) ದಾಳಿಯಿಂದ ಲಕ್ಷಾಂತರ ನಿವಾಸಿಗಳು ಸಾಯುತ್ತಾರೆ ಎಂದು ಬಾಬಾ ವಂಗಾ ಭವಿಷ್ಯ ನುಡಿದಿದ್ದಾರೆ. ಇದನ್ನೂ ಓದಿ: ಊರು ಬಿಡುವಂತೆ ರೌಡಿಗಳಿಗೆ ಸಿಸಿಬಿ ಖಡಕ್ ಸೂಚನೆ – ರಾಜಕೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ರೆ ಕ್ರಮದ ಎಚ್ಚರಿಕೆ

    ಬಾಬಾ ವಂಗಾ (Baba Vanga) ಅವರ 2023ರ ಭಯಾನಕ ಭವಿಷ್ಯವಾಣಿಗಳು, ಭೂಮಿಯು ಈಗ ಬ್ರಹ್ಮಾಂಡದಲ್ಲಿ ಅನಿಶ್ಚಿತ ಸಮತೋಲನದಲ್ಲಿ ಉಳಿದಿದೆ. ನಂತರ ಅದು ತನ್ನ ಕಕ್ಷೆಯನ್ನು ಬದಲಿಸುತ್ತದೆ. ಇದರಲ್ಲಿನ ಸಣ್ಣ ಬದಲಾವಣೆಯೂ ಹವಾಮಾನದಲ್ಲಿ ಭಾರೀ ಬದಲಾವಣೆ ಉಂಟುಮಾಡಬಹುದು. ಆಗ ಪರಿಸ್ಥಿತಿ ನಿಜಕ್ಕೂ ಭೀರಕವಾಗಿರುತ್ತದೆ ಎಂದು ಹೇಳಲಾಗಿದೆ.

    2023ರ ವೇಳೆಗೆ ಪ್ರಯೋಗಾಲಯಗಳಲ್ಲಿ ಮಾನವರನ್ನು ಉತ್ಪಾದಿಸಲಾಗುತ್ತದೆ (Humans Produce Laboratories). ಹುಟ್ಟದ ಮಗುವಿಗೆ ತಮ್ಮ ಆಯ್ಕೆಯ ಬಣ್ಣ ಮತ್ತು ಗುಣಲಕ್ಷಣಗಳನ್ನು ಆಯ್ಕೆ ಮಾಡುವ ಸಂದರ್ಭ ಬರುತ್ತದೆ. ಈ ಜನನದ ಪ್ರಕ್ರಿಯೆಯು ಮಾನವನ ನಿಯಂತ್ರಣದಲ್ಲಿರುತ್ತದೆ ಮತ್ತು ಬಾಡಿಗೆ ತಾಯ್ತನದ ಸಮಸ್ಯೆಯು ಅದರ ಆವಿಷ್ಕಾರದೊಂದಿಗೆ ಕೊನೆಗೊಳ್ಳುತ್ತದೆ. ವಿದ್ಯುತ್ ಸ್ಥಾವರದಲ್ಲಿನ ಸ್ಫೋಟವು ವಿಷಕಾರಿ ಮೋಡಗಳ ರಚನೆಗೆ ಕಾರಣವಾಗಬಹುದು. ಇದು ಇಡೀ ಏಷ್ಯಾ ಖಂಡವೇ ಮಂಜು ಕವಿಯುವಂತೆ ಮಾಡುತ್ತದೆ. ಈ ಬದಲಾವಣೆಯಿಂದಾಗಿ ಇತರ ದೇಶಗಳು ಸಹ ಗಂಭೀರ ಕಾಯಿಲೆಗಳಿಂದ ಬಾಧಿಸತೊಡಗುತ್ತವೆ.

    Live Tv

    [brid partner=56869869 player=32851 video=960834 autoplay=true]

  • ಭಾರತದ ಭವಿಷ್ಯ ಹೇಳಿ ಆತಂಕ ಸೃಷ್ಟಿಸಿದ ಬಾಬಾ ವಂಗಾ!

    ಭಾರತದ ಭವಿಷ್ಯ ಹೇಳಿ ಆತಂಕ ಸೃಷ್ಟಿಸಿದ ಬಾಬಾ ವಂಗಾ!

    ಸೋಫಿಯಾ: ಬಲ್ಗೇರಿಯಾದ ಕುರುಡು ಮಹಿಳೆ ಬಾಬಾ ವಂಗಾ ಅವರು ಭಾರತದ ಕುರಿತು ಹೇಳಿರುವ ಭವಿಷ್ಯ ಹೇಳಿದ್ದಾರೆ.

    ಈ ವರ್ಷ ಪ್ರಪಂಚದಲ್ಲಿ ಹವಾಮಾನ ಬದಲಾವಣೆಯಿಂದ ತಾಪಮಾನ ಭಾರೀ ಏರಿಕೆಯಾಗಲಿದೆ. ಇದರಿಂದಾಗಿ ಮಿಡತೆಗಳ ಕಾಟ ಏಕಾಏಕಿ ಹೆಚ್ಚಾಗುತ್ತದೆ. ಹಸಿರು ಮತ್ತು ಆಹಾರಕ್ಕಾಗಿ ಮಿಡತೆಗಳ ಹಿಂಡು ಭಾರತದ ಮೇಲೆ ದಾಳಿ ಮಾಡುತ್ತವೆ. ಇವುಗಳ ಬೆಳೆಗಳ ಮೇಲೆ ಗಂಭೀರ ಪರಿಣಾಮ ಬೀರುತ್ತವೆ. ಅಲ್ಲದೆ ದೇಶದಲ್ಲಿ ಕ್ಷಾಮವನ್ನು ಉಂಟುಮಾಡುತ್ತದೆ ಎಂದು ಭವಿಷ್ಯ ನುಡಿದಿದ್ದಾರೆ.

    ಸದ್ಯ ಬಾಬಾ ವಂಗಾ ಅವರ ಈ ಭವಿಷ್ಯದತ್ತ ಎಲ್ಲರ ಚಿತ್ತ ನೆಟ್ಟಿದ್ದು, ಇವರ ಭವಿಷ್ಯವಾಣಿಗಳು ಎಷ್ಟು ನಿಜ ಎಂಬುವುದು ಕಾಲವೇ ಉತ್ತರಿಸಬೇಕಿದೆ. ಆದರೆ ಅವರು ಈ ಹಿಂದೆ ಹೇಳಿರುವುದರಲ್ಲಿ ಹಲವು ವಿಚಾರಗಳು ನಿಜವಾಗಿದೆ. ಇದನ್ನೂ ಓದಿ: ಬಸ್, ತೈಲ ಟ್ಯಾಂಕರ್ ನಡುವೆ ಡಿಕ್ಕಿ – ಸುಟ್ಟು ಕರಕಲಾದ 20 ಜನ

    ಬಾಬಾ ವಂಗಾ ಅವರು ತಮ್ಮ 12 ನೇ ವಯಸ್ಸಿನಲ್ಲಿ ದೃಷ್ಟಿ ಕಳೆದುಕೊಂಡರು. ಇದಾದ ಬಳಿಕ ಅವರಿಗೆ ದೇವರು ಭವಿಷ್ಯ ಗ್ರಹಿಸುವ ಶಕ್ತಿ ನೀಡಿದ್ದಾರೆಂದು ಹೇಳಲಾಗುತ್ತಿದೆ. ಅವರು ಪ್ರಪಂಚದ ಬಗ್ಗೆ ಅನೇಕ ಭವಿಷ್ಯಗಳನ್ನು ನುಡಿದಿದ್ದು, ಅವುಗಳಲ್ಲಿ ಹಲವು ನಿಜವೆಂದು ಸಾಬೀತಾಗಿವೆ.

    2022 ರ ಆರಂಭಿಕ ತಿಂಗಳುಗಳ ಬಗ್ಗೆ 2 ಭವಿಷ್ಯ ನುಡಿದಿದ್ದರು. ಅವುಗಳು ಸಾಬೀತು ಕೂಡ ಆಗಿವೆ. ಇದೀಗ 2022ಕ್ಕೆ ಸಂಬಂಧಿಸಿದಂತೆ ಅವರು ಮಾಡಿದ ಭವಿಷ್ಯವಾಣಿಗಳಲ್ಲಿ ಭಾರತದ ಬಗ್ಗೆ ಹೇಳಿರುವುದು ಕುತೂಹಲದ ಜೊತೆ ಆತಂಕ ಹೆಚ್ಚು ಮಾಡಿದೆ.

    ಸಾಬೀತಾದ ಭವಿಷ್ಯಗಳು:
    ಆಸ್ಟ್ರೇಲಿಯಾದ ಕೆಲವು ಭಾಗಗಳಲ್ಲಿ ತೀವ್ರ ಪ್ರವಾಹದ ಮುನ್ಸೂಚನೆಯಾಗಿದೆ. ಎರಡನೆಯ ಭವಿಷ್ಯವು ಅನೇಕ ನಗರಗಳಲ್ಲಿ ಬರ ಮತ್ತು ನೀರಿನ ಬಿಕ್ಕಟ್ಟಿನ ಬಗ್ಗೆ ಇತ್ತು. ಈ ವರ್ಷದ ಆರಂಭದಲ್ಲಿ ಆಸ್ಟ್ರೇಲಿಯಾದ ಪೂರ್ವ ಕರಾವಳಿಯಲ್ಲಿ ಧಾರಾಕಾರ ಮಳೆಯಾಗಿದ್ದು, ಅಲ್ಲಿ ತೀವ್ರ ಪ್ರವಾಹ ಉಂಟಾಗಿದೆ. ಹೀಗಾಗಿ ಅವರು ನುಡಿದ ಭವಿಷ್ಯ ನಿಜವಾಗಿದೆ.

    ದೊಡ್ಡ ನಗರಗಳು ಬರ ಮತ್ತು ನೀರಿನಿಂದ ತತ್ತರಿಸುತ್ತವೆ ಎಂದು ಅವರು ಇನ್ನೊಂದು ಭವಿಷ್ಯ ನುಡಿದಿದ್ದರು. ಈ ಭವಿಷ್ಯ ಕೂಡ ಈಗ ಯುರೋಪಿನಲ್ಲಿ ನಿಜವೆಂದು ಸಾಬೀತಾಗಿದೆ. ಬೃಹತ್ ಹಿಮನದಿಗಳು ಮತ್ತು ನೀರಿನಿಂದ ಆವೃತವಾಗಿರುವ ಬ್ರಿಟನ್, ಇಟಲಿ ಮತ್ತು ಪೋರ್ಚುಗಲ್ ಈ ದಿನಗಳಲ್ಲಿ ತೀವ್ರ ಬರಗಾಲದ ಹಿಡಿತದಲ್ಲಿವೆ.

    Live Tv
    [brid partner=56869869 player=32851 video=960834 autoplay=true]