Tag: ಬಾಬಾ ಸಿದ್ದಿಕಿ

  • ಬಾಬಾ ಸಿದ್ದಿಕಿ ಹತ್ಯೆ ಕೇಸ್‌ | ಆರೋಪಿ ಧರ್ಮರಾಜ್ ಕಶ್ಯಪ್‌ ಅಪ್ರಾಪ್ತನಲ್ಲ – ಮೂಳೆ ಪರೀಕ್ಷೆಯಲ್ಲಿ ಸಾಬೀತು

    ಬಾಬಾ ಸಿದ್ದಿಕಿ ಹತ್ಯೆ ಕೇಸ್‌ | ಆರೋಪಿ ಧರ್ಮರಾಜ್ ಕಶ್ಯಪ್‌ ಅಪ್ರಾಪ್ತನಲ್ಲ – ಮೂಳೆ ಪರೀಕ್ಷೆಯಲ್ಲಿ ಸಾಬೀತು

    ಮುಂಬೈ: ಮಹಾರಾಷ್ಟ್ರದ (Maharashtra) ಮಾಜಿ ಸಚಿವ ಬಾಬಾ ಸಿದ್ದಿಕಿ (Baba Siddique) ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಮುಂಬೈ (Mumbai) ಪೊಲೀಸರು ಆರೋಪಿ ಧರ್ಮರಾಜ್ ಕಶ್ಯಪ್‌ನ ಮೂಳೆ ಪರೀಕ್ಷೆಗೆ (Ossification Test) ಹಾಜರುಪಡಿಸಿದ್ದು, ಇದರಲ್ಲಿ ಆತ ಅಪ್ರಾಪ್ತನಲ್ಲ ಎಂಬುದು ಸಾಬೀತಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ಇಬ್ಬರು ಆರೋಪಿಗಳನ್ನು ಈಗಾಗಲೇ ಬಂಧಿಸಿದ್ದರು. ಬಂಧಿತರನ್ನು ಹರಿಯಾಣದ ಗುರ್ಮೈಲ್ ಬಲ್ಜಿತ್ ಸಿಂಗ್ (23) ಮತ್ತು ಉತ್ತರ ಪ್ರದೇಶದ ಧರ್ಮರಾಜ್ ರಾಜೇಶ್ ಕಶ್ಯಪ್ (19) ಎಂದು ಗುರುತಿಸಲಾಗಿದೆ. ಇನ್ನೂ ಭಾನುವಾರ ರಾತ್ರಿ ಪುಣೆಯ ಪ್ರವೀಣ್ ಲೋಂಕರ್‌ನನ್ನು (28) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ.

    ಬಂಧಿತ ಇಬ್ಬರು ಆರೋಪಿಗಳನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಅಲ್ಲಿ ಧರ್ಮರಾಜ್ ಕಶ್ಯಪ್ ಪರ ವಕೀಲರು ಆತ ಅಪ್ರಾಪ್ತ ಎಂದು ವಾದಿಸಿದ್ದರು. ಈ ವೇಳೆ ನ್ಯಾಯಾಲಯವು ಕಶ್ಯಪ್ ಮೂಳೆ ಪರೀಕ್ಷೆಗೆ ಆದೇಶಿಸಿತ್ತು. ಪರೀಕ್ಷೆಯಲ್ಲಿ ಆತ ಅಪ್ರಾಪ್ತನಲ್ಲ ಎಂದು ಸಾಬೀತಾಗಿದೆ. ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಅಕ್ಟೋಬರ್ 21ರವರೆಗೆ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.

    ಈ ಪ್ರಕರಣದಲ್ಲಿ ಬಂಧಿತನಾದ ಮತ್ತೋರ್ವ ಆರೋಪಿ ಪ್ರವೀಣ್ ಲೋಂಕರ್‌, ನಿರ್ಮಲ್ ನಗರ ಫೈರಿಂಗ್ ಪ್ರಕರಣದಲ್ಲಿ ಭಾಗಿಯಾಗಿರುವ ಶುಭಂ ಲೋಂಕರ್ ಸಹೋದರ ಎಂದು ತಿಳಿದು ಬಂದಿದೆ. ಈ ಸಹೋದರರ ಮೇಲೆ ಹತ್ಯೆಗೆ ಸಂಚು ರೂಪಿಸಿದ ಆರೋಪ ಕೇಳಿಬಂದಿದೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ.

    ಬಾಬಾ ಸಿದ್ದಿಕಿ ಅವರ ಹತ್ಯೆಯ ಹೊಣೆಯನ್ನು ಗ್ಯಾಂಗ್‌ಸ್ಟರ್‌ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ (Lawrence Bishnoi Gang) ಭಾನುವಾರ (ಇಂದು) ಹೊತ್ತುಕೊಂಡಿದೆ. 66 ವರ್ಷದ ಹಿರಿಯ ರಾಜಕಾರಣಿಯನ್ನು ಶನಿವಾರ ರಾತ್ರಿ ದಸರಾ ಆಚರಣೆಯ ಸಂದರ್ಭದಲ್ಲಿ ಮುಂಬೈನ (Mumbai) ಬಾಂದ್ರಾದಲ್ಲಿರುವ ಅವರ ಕಚೇರಿಯ ಹೊರಗೆ ಗುಂಡಿಕ್ಕಿ ಹತ್ಯೆಮಾಡಲಾಗಿತ್ತು.

  • ಸಲ್ಮಾನ್‌ ಖಾನ್‌ಗೆ ಸಹಾಯ ಮಾಡುವವರಿಗೆ ಇದೇ ಗತಿ: ಸಿದ್ದಿಕಿ ಹತ್ಯೆ ಗ್ಯಾಂಗ್‌ನಿಂದ ಬೆದರಿಕೆ ಸಂದೇಶ

    ಸಲ್ಮಾನ್‌ ಖಾನ್‌ಗೆ ಸಹಾಯ ಮಾಡುವವರಿಗೆ ಇದೇ ಗತಿ: ಸಿದ್ದಿಕಿ ಹತ್ಯೆ ಗ್ಯಾಂಗ್‌ನಿಂದ ಬೆದರಿಕೆ ಸಂದೇಶ

    ಮುಂಬೈ: ಎನ್‌ಸಿಪಿ ನಾಯಕ ಹಾಗೂ ಮಾಜಿ ಸಚಿವ ಬಾಬಾ ಸಿದ್ದಿಕಿ ಹತ್ಯೆಯ ಹೊಣೆಯನ್ನು ಹೊತ್ತುಕೊಂಡಿರುವ ದರೋಡೆಕೋರ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್, ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡ ವೀಡಿಯೊದಲ್ಲಿ ಬಾಲಿವುಡ್ ನಟ ಸಲ್ಮಾನ್ ಖಾನ್‌ಗೆ ಬೆದರಿಕೆ ಸಂದೇಶ ರವಾನಿಸಿದೆ.

    66 ವರ್ಷದ ಸಿದ್ದಿಕಿ ಅವರನ್ನು ಬಾಂದ್ರಾದಲ್ಲಿರುವ ಅವರ ಮಗ ಜೀಶನ್ ಸಿದ್ದಿಕ್ ಕಚೇರಿಯ ಹೊರಗೆ ಮೂವರು ದುಷ್ಕರ್ಮಿಗಳು ಗುಂಡಿಕ್ಕಿ ಶನಿವಾರ ಹತ್ಯೆ ಮಾಡಿದ್ದರು.

    ಸಿದ್ದಿಕಿ ಜೊತೆ ಬಾಲಿವುಡ್‌ ಸ್ಟಾರ್‌ ಸಲ್ಮಾನ್‌ ಖಾನ್‌ ನಿಕಟ ಒಡನಾಟ ಹೊಂದಿದ್ದರು. ಬಿಷ್ಣೋಯ್ ಗ್ಯಾಂಗ್‌ನಿಂದ ನಟ ಪದೇ ಪದೇ ಬೆದರಿಕೆಗಳನ್ನು ಎದುರಿಸುತ್ತಿದ್ದಾರೆ. ಏಪ್ರಿಲ್ 14 ರಂದು ಬಾಂದ್ರಾದಲ್ಲಿನ ನಟನ ಗ್ಯಾಲಕ್ಸಿ ಅಪಾರ್ಟ್‌ಮೆಂಟ್‌ನ ಹೊರಗೆ ಇಬ್ಬರು ಶೂಟರ್‌ಗಳು ಐದು ಸುತ್ತು ಗುಂಡು ಹಾರಿಸಿ ಸಲ್ಮಾನ್‌ ಖಾನ್‌ ಹತ್ಯೆಗೆ ಯತ್ನಿಸಿದ್ದರು. ಇದಾದ ತಿಂಗಳುಗಳ ನಂತರ ಎನ್‌ಸಿಪಿ ನಾಯಕನ ಹತ್ಯೆಯಾಗಿದೆ.

    ದಾಳಿಕೋರರಾದ ​​ವಿಕ್ಕಿ ಗುಪ್ತಾ ಮತ್ತು ಸಾಗರ್ ಪಾಲ್‌ನನ್ನು ಗುಜರಾತ್‌ನಲ್ಲಿ ಬಂಧಿಸಲಾಗಿದೆ. ಜೈಲಿನಲ್ಲಿರುವ ದರೋಡೆಕೋರ ಲಾರೆನ್ಸ್ ಬಿಷ್ಣೋಯ್‌ಗೆ ಶೂಟರ್‌ಗಳೊಂದಿಗೆ ಸಂಪರ್ಕವಿದೆ ಎಂದು ಮುಂಬೈ ಪೊಲೀಸರು ಚಾರ್ಜ್‌ಶೀಟ್‌ನಲ್ಲಿ ತಿಳಿಸಿದ್ದಾರೆ.

    ಸಿದ್ದಿಕಿ ಹತ್ಯೆಯ ಹೊಣೆಯನ್ನು ಹೊತ್ತುಕೊಂಡು ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ಬಿಷ್ಣೋಯ್ ಗ್ಯಾಂಗ್‌ನ ಸದಸ್ಯನೊಬ್ಬ, ಬಾಲಿವುಡ್ ತಾರೆ ಮತ್ತು ಅವರ ಪರಿಚಯಸ್ಥರಿಗೆ ಬೆದರಿಕೆ ಹಾಕಿದ್ದಾನೆ. ‘ಸಲ್ಮಾನ್ ಖಾನ್ ಅಥವಾ ದಾವೂದ್ ಗ್ಯಾಂಗ್‌ಗೆ ಸಹಾಯ ಮಾಡುವವರಿಗೆ ಇದೇ ಗತಿ’ ಎಂದು ಬೆದರಿಕೆ ಸಂದೇಶ ರವಾನಿಸಿದ್ದಾನೆ.

    ಸಲ್ಮಾನ್ ಖಾನ್ ಮತ್ತು ಭೂಗತ ಪಾತಕಿಗಳಾದ ಅನುಜ್ ಥಾಪನ್ ಮತ್ತು ದಾವೂದ್ ಇಬ್ರಾಹಿಂ ಜೊತೆಗಿನ ಸಂಬಂಧವೇ ಸಿದ್ದಿಕಿ ಹತ್ಯೆಗೆ ಕಾರಣ ಎಂದು ಫೇಸ್‌ಬುಕ್ ಪೋಸ್ಟ್‌ನಲ್ಲಿ ತಿಳಿಸಲಾಗಿದೆ. ಶುಬು ಲೊಂಕರ್ ಮಹಾರಾಷ್ಟ್ರದ ಪೋಸ್ಟ್‌ನಲ್ಲಿ, ಓಂ, ಜೈ ಶ್ರೀ ರಾಮ್, ಜೈ ಭಾರತ್, ನಾನು ಜೀವನದ ಮೌಲ್ಯವನ್ನು ಅರ್ಥಮಾಡಿಕೊಂಡಿದ್ದೇನೆ. ಸಂಪತ್ತು ಮತ್ತು ದೇಹವನ್ನು ಧೂಳಿನಂತೆ ಪರಿಗಣಿಸುತ್ತೇನೆ. ನಾನು ಸರಿಯಾಗಿದ್ದನ್ನು ಮಾತ್ರ ಮಾಡಿದ್ದೇನೆ. ಸ್ನೇಹದ ಕರ್ತವ್ಯವನ್ನು ಗೌರವಿಸಿದೆ. ಸಲ್ಮಾನ್ ಖಾನ್‌.. ನಮಗೆ ಈ ಯುದ್ಧ ಬೇಡ. ಆದರೆ ನಮ್ಮ ಸಹೋದರ ಸಾಯುವಂತೆ ನೀನು ಮಾಡಿದೆ ಎಂದು ಬರೆದುಕೊಂಡಿದ್ದಾನೆ.

    ನಮಗೆ ಯಾರೊಂದಿಗೂ ದ್ವೇಷವಿಲ್ಲ. ಸಲ್ಮಾನ್ ಖಾನ್ ಅಥವಾ ದಾವೂದ್ ಗ್ಯಾಂಗ್‌ಗೆ ಸಹಾಯ ಮಾಡುವ ಯಾರಾದರೂ ಇಂತಹ ಸ್ಥಿತಿಗೆ ಸಿದ್ಧರಾಗಿರಬೇಕು. ಯಾರಾದರೂ ನಮ್ಮ ಸಹೋದರರನ್ನು ಕೊಂದರೆ, ನಾವು ಖಂಡಿತವಾಗಿಯೂ ಪ್ರತಿಕ್ರಿಯಿಸುತ್ತೇವೆ. ನಾವು ಎಂದಿಗೂ ಮೊದಲಿಗೆ ಹೊಡೆಯುವುದಿಲ್ಲ. ಜೈ ಶ್ರೀ ರಾಮ್, ಜೈ ಭಾರತ್, ಹುತಾತ್ಮರಿಗೆ ನಮನ ಎಂದು ಪೋಸ್ಟ್‌ನಲ್ಲಿ ಬರೆಯಲಾಗಿದೆ.

  • ಬಾಬಾ ಸಿದ್ದಿಕಿ ಹತ್ಯೆ ಪ್ರಕರಣ: ಪೊಲೀಸ್‌ ಕಸ್ಟಡಿಗೆ ಓರ್ವ ಕೊಲೆ ಆರೋಪಿ

    ಬಾಬಾ ಸಿದ್ದಿಕಿ ಹತ್ಯೆ ಪ್ರಕರಣ: ಪೊಲೀಸ್‌ ಕಸ್ಟಡಿಗೆ ಓರ್ವ ಕೊಲೆ ಆರೋಪಿ

    ಮುಂಬೈ: ಮಹಾರಾಷ್ಟ್ರದ (Maharashtra) ಮಾಜಿ ಸಚಿವ ಬಾಬಾ ಸಿದ್ದಿಕಿ ಹತ್ಯೆ ಪ್ರಕರಣ (Baba Siddique Murder Case)  ಸಂಬಂಧ ಓರ್ವ ಕೊಲೆ ಆರೋಪಿಯನ್ನು ಅ.21 ರವರೆಗೆ ಪೊಲೀಸ್‌ ಕಸ್ಟಡಿಗೆ ಮುಂಬೈ ಕೋರ್ಟ್ (Mumbai Case) ಒಪ್ಪಿಸಿದೆ

    ಬಂಧಿತ ಆರೋಪಿಗಳನ್ನು ಹರಿಯಾಣ ಮೂಲದ ಗುರ್ಮೈಲ್ ಸಿಂಗ್ ಹಾಗೂ ಉತ್ತರ ಪ್ರದೇಶ ಮೂಲದ ಧರ್ಮರಾಜ್ ಸಿಂಗ್ ಕಶ್ಯಪ್ ಎಂದು ಗುರುತಿಸಲಾಗಿದೆ. ಇಂದು (ಅ.13) ಬೆಳಗ್ಗೆ ಮುಂಬೈ ಪೊಲೀಸರು ಕೊಲೆ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಮುಂಬೈನ ಎಸ್ಪ್ಲೇನೇಡ್‌ ಕೋರ್ಟ್‌ಗೆ (Esplanade Court) ಹಾಜರುಪಡಿಸಿದ್ದಾರೆ.ಇದನ್ನೂ ಓದಿ: ತೆಲಂಗಾಣ ಡಿಎಸ್‌ಪಿ ಆಗಿ ಅಧಿಕಾರ ವಹಿಸಿಕೊಂಡ ಸಿರಾಜ್‌ – ಪೊಲೀಸ್‌ ಡ್ರೆಸ್‌ನಲ್ಲಿ ವೇಗಿ

    ಇಬ್ಬರು ಆರೋಪಿಗಳ ಪೈಕಿ ಗುರ್ಮೈಲ್ ಸಿಂಗ್‌ನನ್ನು ಅ.21ರವರೆಗೆ ಮುಂಬೈ ಕ್ರೈಂ ಬ್ರ್ಯಾಂಚ್‌ ಕಸ್ಟಡಿಗೆ ವಹಿಸಿ ಆದೇಶ ಹೊರಡಿಸಿದೆ. ಆರೋಪಿ ಧರ್ಮರಾಜ್ ಸಿಂಗ್ ಕಶ್ಯಪ್ ತಾನು ಅಪ್ರಾಪ್ತ ಎಂದು ಹೇಳಿಕೊಂಡಿದ್ದ. ಅದಕ್ಕೆ ಕೋರ್ಟ್, ಆತನಿಗೆ ಮೂಳೆ ಪರೀಕ್ಷೆಯ ಬಳಿಕ ಮತ್ತೆ ಕೋರ್ಟ್‌ಗೆ ಹಾಜರುಪಡಿಸುವಂತೆ ಸೂಚಿಸಿದೆ.

    ಆಸಿಫೀಕೇಶನ್ ಪರೀಕ್ಷೆ (Ossification Test) (ಮೂಳೆ ಪರೀಕ್ಷೆ) ಎಂದರೆ ಮೂಳೆಗಳ ಸಮ್ಮಿಲನದ ಆಧಾರದ ಮೇಲೆ ವಯಸ್ಸಿನ ಪತ್ತೆ ಹಚ್ಚುವಿಕೆ ಪರೀಕ್ಷೆಯಾಗಿರುತ್ತದೆ. ಸಾಮಾನ್ಯವಾಗಿ ಯಾವುದೇ ಪ್ರಕರಣದಲ್ಲಿ ವಯಸ್ಸು ಪತ್ತೆ ಹಚ್ಚಲು ಈ ಪರೀಕ್ಷಾ ವಿಧಾನವನ್ನು ಬಳಸುತ್ತಾರೆ.

    ಆರೋಪಿ ಸಿದ್ದಾರ್ಥ ಅಗರವಾಲ್‌ನ ವಕೀಲರು ಮಾತನಾಡಿ, ಪೊಲೀಸರು ಆರೋಪಿಗಳನ್ನು ಹಾಜರುಪಡಿಸಿದ್ದಾರೆ. ನಾವು ಕೆಲವು ಆಧಾರಗಳನ್ನು ನೀಡಿದ್ದೇವೆ. ಅವುಗಳ ಆಧಾರದ ಮೇಲೆ ಓರ್ವ ಆರೋಪಿಗೆ ಪೊಲೀಸ್‌ ಕಸ್ಟಡಿಗೆ ವಹಿಸಿದೆ. ಇನ್ನೋರ್ವ ಆರೋಪಿಯನ್ನು ಆಸಿಫೀಕೇಶನ್ ಪರೀಕ್ಷೆಗೆ ಕಳಿಸಿದ್ದಾರೆ.

    ಮುಂಬೈ ಪೊಲೀಸರ ಮಾಹಿತಿ ಪ್ರಕಾರ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೋರ್ವ ಆರೋಪಿಯನ್ನು ಗುರುತಿಸಲಾಗಿದ್ದು, ಮೊಹಮ್ಮದ್ ಜೀಶನ್ ಅಖ್ತರ್ ಎಂದು ಪತ್ತೆಹಚ್ಚಲಾಗಿದೆ. ಸದ್ಯ ಈ ಪ್ರಕರಣ ಸಂಬಂಧ ಇಬ್ಬರನ್ನು ಬಂಧಿಸಲಾಗಿದ್ದು, ತನಿಖೆ ನಡೆಯುತ್ತಿದೆ.ಇದನ್ನೂ ಓದಿ: ಮುಂಬೈ ಇಂಡಿಯನ್ಸ್ ಮುಖ್ಯ ಕೋಚ್ ಆಗಿ ಮಹೇಲಾ ಜಯವರ್ಧನೆ ಮರುನೇಮಕ

  • ತಿಂಗಳಿಗೂ ಮೊದಲೇ ಸ್ಕೆಚ್‌, ಶೂಟರ್‌ಗಳಿಗೆ ತಲಾ 50,000 ಕಾಂಟ್ರ್ಯಾಕ್ಟ್‌ – ಸಿದ್ದಿಕಿ ಹಂತಕರ ಪ್ಲ್ಯಾನ್‌ ರೋಚಕ

    ತಿಂಗಳಿಗೂ ಮೊದಲೇ ಸ್ಕೆಚ್‌, ಶೂಟರ್‌ಗಳಿಗೆ ತಲಾ 50,000 ಕಾಂಟ್ರ್ಯಾಕ್ಟ್‌ – ಸಿದ್ದಿಕಿ ಹಂತಕರ ಪ್ಲ್ಯಾನ್‌ ರೋಚಕ

    – ಸಿದ್ದಿಕಿ ಹತ್ಯೆ ಹೊಣೆ ಹೊತ್ತುಕೊಂಡ ಬಿಷ್ಣೋಯ್‌ ಗ್ಯಾಂಗ್‌
    – ಬಿಷ್ಣೋಯ್‌ ಗ್ಯಾಂಗ್‌ನಲ್ಲಿದ್ದಾರೆ 700 ಶೂಟರ್ಸ್‌: ಪೊಲೀಸ್‌

    ಮುಂಬೈ: ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕಿ ಅವರ ಹತ್ಯೆಯ ಹೊಣೆಯನ್ನು ಗ್ಯಾಂಗ್‌ಸ್ಟರ್‌ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ (Lawrence Bishnoi Gang) ಭಾನುವಾರ (ಇಂದು) ಹೊತ್ತುಕೊಂಡಿದೆ. 66 ವರ್ಷದ ಹಿರಿಯ ರಾಜಕಾರಣಿಯನ್ನು ಶನಿವಾರ ರಾತ್ರಿ ದಸರಾ ಆಚರಣೆಯ ಸಂದರ್ಭದಲ್ಲಿ ಮುಂಬೈನ (Mumbai) ಬಾಂದ್ರಾದಲ್ಲಿರುವ ಅವರ ಕಚೇರಿಯ ಹೊರಗೆ ಗುಂಡಿಕ್ಕಿ ಹತ್ಯೆಮಾಡಲಾಗಿತ್ತು.

    2 ತಿಂಗಳ ಹಿಂದೆಯೇ ಸ್ಕೆಚ್‌:
    ಸಿದ್ದಿಕಿ ಹತ್ಯೆಗೆ 2 ತಿಂಗಳ ಹಿಂದೆಯೇ ಸ್ಕೆಚ್‌ ಹಾಕಲಾಗಿತ್ತು. ಸತತವಾಗಿ ಅವರ ಚಲವಲಗಳ ಮೇಲೆ ಗ್ಯಾಂಗ್‌ನವರು ನಿಗಾ ಇರಿಸಿದ್ದರು ಎಂದು ಪೊಲೀಸ್‌ (Mumbai Police) ಮೂಲಗಳಿಂದ ತಿಳಿದುಬಂದಿದೆ. ಈ ಪ್ರಕರಣದಲ್ಲಿ ಹರಿಯಾಣ ಹಾಗೂ ಉತ್ತರ ಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನ ಬಂಧಿಸಲಾಗಿದ್ದು, ಮತ್ತೊಬ್ಬ ಆರೋಪಿಗಾಗಿ ವಿಶೇಷ ತಂಡಗಳ ಮೂಲಕ ಶೋಧ ನಡೆಸಲಾಗುತ್ತಿದೆ. ಇದನ್ನೂ ಓದಿ: ಭಾಗಮತಿ ಎಕ್ಸ್‌ಪ್ರೆಸ್ ರೈಲು ದುರಂತ – 18 ಗಂಟೆಗಳ ಬಳಿಕ ತೆರವು ಕಾರ್ಯಾಚರಣೆ ಯಶಸ್ವಿ

     50,000ಕ್ಕೆ ಕಿಲ್ಲಿಂಗ್ ಕಾಂಟ್ರ್ಯಾಕ್ಟ್‌
    ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿರುವ ಪೊಲೀಸರು ಸ್ಫೋಟಕ ವಿಚಾರಗಳನ್ನ ಬಯಲಿಗೆಳೆದಿದ್ದಾರೆ. ತನಿಖೆ ವೇಳೆ ಈ ಪ್ರಕರಣದ ಮಾಸ್ಟರ್‌ ಮೈಂಡ್‌ ಅಜ್ಞಾತ ಸ್ಥಳದಲ್ಲಿದ್ದುಕೊಂಡೇ ಹಂತಕರಿಗೆ ಹಣ ನೀಡುತ್ತಿದ್ದ ಎಂಬ ವಿಚಾರವೂ ಬೆಳಕಿಗೆ ಬಂದಿದೆ. ಮುಂಬೈ ಪೊಲೀಸ್‌ ಮೂಲಗಳ ಪ್ರಕಾರ, ಮೂವರು ಕೊಲೆ ಆರೋಪಿಗಳು ಪಂಜಾಬ್‌ ಜೈಲಿಯಲ್ಲಿ ಭೇಟಿಯಾಗಿದ್ದರು. ಕಳೆದ ಸೆಪ್ಟೆಂಬರ್ 2 ರಿಂದ ಕುರ್ಲಾದಲ್ಲಿ ತಿಂಗಳಿಗೆ 14,000 ರೂ.ನೀಡುವ ಮನೆ ಬಾಡಿಗೆ ಪಡೆದು ವಾಸವಿದ್ದರು. ಸಿದ್ದಿಕ್ಕಿ ಹತ್ಯೆಗೆ ಅಲ್ಲಿಯೇ ಸಂಚು ರೂಪಿಸಿದ್ದರು. ಮೂವರು ಆರೋಪಿಗಳು ತಲಾ 50 ಸಾವಿರ ರೂ.ಗೆ ಗುತ್ತಿಗೆ ಪಡೆದಿದ್ದರು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಚುನಾವಣಾ ಫಲಿತಾಂಶದ ದಿನ ವಾಟ್ಸಪ್ ಗ್ರೂಪ್‌ನಲ್ಲಿ ಹರಿಯಾಣ ಸಿಎಂಗೆ ಕೊಲೆ ಬೆದರಿಕೆ – ಆರೋಪಿ ಅರೆಸ್ಟ್‌

    ಬಿಷ್ಣೋಯ್‌ ಗ್ಯಾಂಗ್‌ನಲ್ಲಿದ್ದಾರೆ 700 ಶೂಟರ್ಸ್‌:
    ಡಜನ್ ಗಟ್ಟಲೇ ಕ್ರಿಮಿನಲ್ ಮೊಕದ್ದಮೆಗಳನ್ನು ಎದುರಿಸುತ್ತಿರುವ ಲಾರೆನ್ಸ್ ಬಿಷ್ಣೋಯ್ ಪ್ರಸ್ತುತ ಗುಜರಾತ್ ಜೈಲಿನಲ್ಲಿದ್ದಾನೆ. ಆದ್ರೆ ಅವನ ಗ್ಯಾಂಗ್‌ನಿಂದ ಉದ್ಯಮಿಗಳು, ಪ್ರಮುಖ ವ್ಯಕ್ತಿಗಳಿಗೆ ಬೆದರಿಕೆ ಕರೆಗಳು ಬರುತ್ತಲೇ ಇವೆ. ಸದ್ಯ ಬಿಷ್ಣೋಯ್ ಗ್ಯಾಂಗ್‌ನಲ್ಲಿ 700ಕ್ಕೂ ಹೆಚ್ಚು ಶೂಟರ್‌ಗಳಿದ್ದಾರೆ. ದೇಶಾದ್ಯಂತ ಅನೇಕ ಸಣ್ಣ ಮತ್ತು ದೊಡ್ಡ ಕ್ರಿಮಿನಲ್‌ಗಳು ಅವನಿಗಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಪೊಲೀಸ್ ಮೂಲಗಳು ಸೂಚಿಸುತ್ತವೆ.

    ಬಾಂದ್ರಾ ಪೂರ್ವದ ಶಾಸಕರಾಗಿರುವ ಅವರ ಪುತ್ರ ಜೀಶಾನ್ ಅವರ ಕಚೇರಿಯಲ್ಲಿ ಶನಿವಾರ ರಾತ್ರಿ 9:30ರ ಸುಮಾರಿಗೆ ಸಿದ್ದಿಕಿ ಮೇಲೆ ಮೂರು ಗುಂಡುಗಳನ್ನು ಹಾರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ಸಿದ್ದಿಕಿ ಮೇಲೆ ದುಷ್ಕರ್ಮಿಗಳು ಮೂರು ಗುಂಡುಗಳನ್ನು ಹಾರಿಸಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಮಾಜಿ ಸಚಿವರನ್ನು ಲೀಲಾವತಿ ಆಸ್ಪತ್ರೆಗೆ ಸಾಗಿಸಲಾಯಿತು. ಒಂದು ಗುಂಡು ಎದೆಗೆ ತಗುಲಿದ್ದರಿಂದ ಅವರು ಸಾವಿಗೀಡಾಗಿದ್ದಾರೆ.

    ಬಾಂದ್ರಾ ಪಶ್ಚಿಮದಿಂದ ಮೂರು ಬಾರಿ ಶಾಸಕರಾಗಿದ್ದ ಸಿದ್ದಿಕಿ ಅವರು 48 ವರ್ಷಗಳ ಕಾಲ ಕಾಂಗ್ರೆಸ್‌ನೊಂದಿಗೆ ಗುರುತಿಸಿಕೊಂಡಿದ್ದರು. ಫೆಬ್ರವರಿಯಲ್ಲಿ ಪಕ್ಷವನ್ನು ತೊರೆದು ಅಜಿತ್ ಪವಾರ್ ಅವರ ಎನ್‌ಸಿಪಿಗೆ ಸೇರಿದ್ದರು. ಜೀಶನ್ ಸಿದ್ದಿಕಿ ಅವರನ್ನು ಆಗಸ್ಟ್‌ನಲ್ಲಿ ಕಾಂಗ್ರೆಸ್‌ನಿಂದ ಉಚ್ಛಾಟಿಸಲಾಗಿತ್ತು. ಇದನ್ನೂ ಓದಿ: ಮಾಜಿ ಸಚಿವ ಸಿದ್ದಿಕಿ ಹತ್ಯೆ – ಬಿಕ್ಕಿ ಬಿಕ್ಕಿ ಕಣ್ಣೀರಿಟ್ಟ ಶಿಲ್ಪಾಶೆಟ್ಟಿ, ಆಸ್ಪತ್ರೆಗೆ ಬಾಲಿವುಡ್‌ ತಾರಾ ದಂಡೇ ದೌಡು

    ಏನಾಗಿತ್ತು?
    ಮುಂಬೈನ ಬಾಂದ್ರಾ ಪೂರ್ವದ ಶಾಸಕರಾಗಿರುವ ಅವರ ಪುತ್ರ ಜೀಶಾನ್ ಅವರ ಕಚೇರಿಯಲ್ಲಿ ಶನಿವಾರ ರಾತ್ರಿ 9:30ರ ಸುಮಾರಿಗೆ ಸಿದ್ದಿಕಿ ಮೇಲೆ ಮೂರು ಗುಂಡುಗಳನ್ನು ಹಾರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ಸಿದ್ದಿಕಿ ಮೇಲೆ ದುಷ್ಕರ್ಮಿಗಳು ಮೂರು ಗುಂಡುಗಳನ್ನು ಹಾರಿಸಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಮಾಜಿ ಸಚಿವರನ್ನು ಲೀಲಾವತಿ ಆಸ್ಪತ್ರೆಗೆ ಸಾಗಿಸಲಾಯಿತು. ಒಂದು ಗುಂಡು ಎದೆಗೆ ತಗುಲಿದ್ದರಿಂದ ಅವರು ಸಾವಿಗೀಡಾಗಿದ್ದಾರೆ. ಬಾಂದ್ರಾ ಪಶ್ಚಿಮದಿಂದ ಮೂರು ಬಾರಿ ಶಾಸಕರಾಗಿದ್ದ ಸಿದ್ದಿಕಿ ಅವರು 48 ವರ್ಷಗಳ ಕಾಲ ಕಾಂಗ್ರೆಸ್‌ನೊಂದಿಗೆ ಗುರುತಿಸಿಕೊಂಡಿದ್ದರು. ಫೆಬ್ರವರಿಯಲ್ಲಿ ಪಕ್ಷವನ್ನು ತೊರೆದು ಅಜಿತ್ ಪವಾರ್ ಅವರ ಎನ್‌ಸಿಪಿಗೆ ಸೇರಿದ್ದರು. ಜೀಶನ್ ಸಿದ್ದಿಕಿ ಅವರನ್ನು ಆಗಸ್ಟ್‌ನಲ್ಲಿ ಕಾಂಗ್ರೆಸ್‌ನಿಂದ ಉಚ್ಛಾಟಿಸಲಾಗಿತ್ತು.

  • ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ – ಸಿದ್ದಿಕಿ ಹತ್ಯೆಗೆ ಸರ್ಕಾರವೇ ಹೊಣೆ: ರಾಗಾ ಸಿಡಿಮಿಡಿ

    ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ – ಸಿದ್ದಿಕಿ ಹತ್ಯೆಗೆ ಸರ್ಕಾರವೇ ಹೊಣೆ: ರಾಗಾ ಸಿಡಿಮಿಡಿ

    ಮುಂಬೈ: ಮಹಾರಾಷ್ಟ್ರದಲ್ಲಿ (Maharashtra) ಕಾನೂನು ವ್ಯವಸ್ಥೆ ಸಂಪೂರ್ಣ ಕುಸಿದಿದೆ. ಸಿದ್ದಿಕ್ಕಿ ಅವರ ಹತ್ಯೆಗೆ ಸರ್ಕಾರವೇ ನೇರ ಹೊಣೆ ಎಂದು ರಾಜ್ಯ ಸರ್ಕಾರದ ವಿರುದ್ಧ ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ (Rahul Gandhi) ವಾಗ್ದಾಳಿ ನಡೆಸಿದ್ದಾರೆ.

    ಮಾಜಿ ಸಚಿವ ಬಾಬಾ ಸಿದ್ದಿಕಿ (Baba Siddique) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಕ್ಸ್‌ ನಲ್ಲಿ ಪ್ರತಿಕ್ರಿಯೆ ಹಂಚಿಕೊಂಡಿರುವ ರಾಗಾ, ಬಾಬಾ ಸಿದ್ದಿಕಿ ಜೀ ಅವರ ದುರಂತ ಸಾವಿನಿಂದ ಆಘಾತಕ್ಕೆ ಒಳಗಾಗಿದ್ದೇನೆ, ತುಂಬಾ ನೋವು ತಂದಿದೆ. ಈ ಕಷ್ಟದ ಸಮಯದಲ್ಲಿ ನಾವು ಅವರ ಕುಟುಂಬದೊಂದಿಗೆ ಇರುತ್ತೇವೆ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಮಾಜಿ ಸಚಿವ ಸಿದ್ದಿಕಿ ಹತ್ಯೆ ಹಿಂದೆ ಬಿಷ್ಣೋಯ್‌ ಗ್ಯಾಂಗ್‌ ಕೈವಾಡ – ಬೆಚ್ಚಿಬೀಳಿಸುವ ರಹಸ್ಯ ಬಯಲು

    ಅಲ್ಲದೇ ಈ ಭಯಾನಕ ಘಟನೆಯು ಮಹಾರಾಷ್ಟ್ರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ (law and order) ಸಂಪೂರ್ಣ ಕುಸಿದಿರುವುದನ್ನು ಬಹಿರಂಗಪಡಿಸುತ್ತದೆ. ಸರ್ಕಾರವೇ ಇದರ ಜವಾಬ್ದಾರಿ ವಹಿಸಬೇಕು. ಸಿದ್ದಿಕಿ ಕುಟುಂಬಕ್ಕೆ ನ್ಯಾಯ ಕಲ್ಪಿಸಿಕೊಡಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕಿಗೆ ಗುಂಡಿಕ್ಕಿ ಹತ್ಯೆ

    ಈಗಾಗಲೇ ನಟಿ ಶಿಲ್ಪಾ ಶೆಟ್ಟಿ, ಸಲ್ಮಾನ್‌ ಖಾನ್‌, ಸಂಜಯ್‌ ದತ್‌, ರಾಜ್‌ ಕುಂದ್ರಾ, ಇನ್ನೂ ಮೊದಲಾದವರು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಈ ವೇಳೆ ಬಾಬಾ ಸಿದ್ದಿಕ್ಕಿ ಅವರೊಂದಿಗಿನ ನಿಕಟ ಬಾಂಧವ್ಯವನ್ನು ಮಾಧ್ಯಮಗಳೊಂದಿಗೆ ಹಂಚಿಕೊಂಡಿದ್ದಾರೆ. ಕುಟುಂಬದೊಂದಿಗೆ ನಾವಿದ್ದೇವೆ ಎಂದು ಅಭಯ ನೀಡಿದ್ದಾರೆ.

    ಸಲ್ಮಾನ್‌ ಖಾನ್‌ ನಿವಾಸಕ್ಕೆ ಹೆಚ್ಚಿದ ಭದ್ರತೆ:
    ಸಿದ್ದಿಕಿ ಹತ್ಯೆ ಹಿಂದೆ ಗ್ಯಾಂಗ್‌ಸ್ಟರ್‌ ಲಾರೆನ್ಸ್‌ ಬಿಷ್ಣೊಯ್‌ ಕೈವಾಡ ಶಂಕೆ ವ್ಯಕ್ತವಾಗುತ್ತಿದ್ದಂತೆ ಮುಂಬೈನ ಗ್ಯಾಲಕ್ಸಿ ಅಪಾರ್ಟ್ಮೆಂಟ್‌ನಲ್ಲಿರುವ ಸಲ್ಮಾನ್‌ ಖಾನ್‌ ನಿವಾಸಕ್ಕೆ ಹೆಚ್ಚಿನ ಪೊಲೀಸ್‌ ಭದ್ರತೆ ನಿಯೋಜಿಸಲಾಗಿದೆ. ಕೆಲ ದಿನಗಳ ಹಿಂದೆಯಷ್ಟೇ ನಟ ಸಲ್ಮಾನ್ ಖಾನ್ ಅವರಿಗೆ ಬಿಷ್ಣೋಯಿ ಗ್ಯಾಂಗ್‌ನಿಂದ ಕೊಲೆ ಬೆದರಿಕೆ ಬಂದಿತ್ತು. ಇದರಿಂದ ಅವರಿಗೆ ವೈ ಕೆಟಗರಿ ಭದ್ರತೆ ನೀಡಲಾಗಿದೆ. ಇದೀಗ ಸಿದ್ದಿಕ್ಕಿ ಹತ್ಯೆ ಬೆನ್ನಲ್ಲೇ ಭದ್ರತೆ ಹೆಚ್ಚಿಸಲಾಗಿದೆ. ಇದನ್ನೂ ಓದಿ: ಮಾಜಿ ಸಚಿವ ಸಿದ್ದಿಕಿ ಹತ್ಯೆ – ಬಿಕ್ಕಿ ಬಿಕ್ಕಿ ಕಣ್ಣೀರಿಟ್ಟ ಶಿಲ್ಪಾಶೆಟ್ಟಿ, ಆಸ್ಪತ್ರೆಗೆ ಬಾಲಿವುಡ್‌ ತಾರಾ ದಂಡೇ ದೌಡು

    ಏನಾಗಿತ್ತು?
    ಮುಂಬೈನ ಬಾಂದ್ರಾ ಪೂರ್ವದ ಶಾಸಕರಾಗಿರುವ ಅವರ ಪುತ್ರ ಜೀಶಾನ್ ಅವರ ಕಚೇರಿಯಲ್ಲಿ ಶನಿವಾರ ರಾತ್ರಿ 9:30ರ ಸುಮಾರಿಗೆ ಸಿದ್ದಿಕಿ ಮೇಲೆ ಮೂರು ಗುಂಡುಗಳನ್ನು ಹಾರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ಸಿದ್ದಿಕಿ ಮೇಲೆ ದುಷ್ಕರ್ಮಿಗಳು ಮೂರು ಗುಂಡುಗಳನ್ನು ಹಾರಿಸಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಮಾಜಿ ಸಚಿವರನ್ನು ಲೀಲಾವತಿ ಆಸ್ಪತ್ರೆಗೆ ಸಾಗಿಸಲಾಯಿತು. ಒಂದು ಗುಂಡು ಎದೆಗೆ ತಗುಲಿದ್ದರಿಂದ ಅವರು ಸಾವಿಗೀಡಾಗಿದ್ದಾರೆ. ಬಾಂದ್ರಾ ಪಶ್ಚಿಮದಿಂದ ಮೂರು ಬಾರಿ ಶಾಸಕರಾಗಿದ್ದ ಸಿದ್ದಿಕಿ ಅವರು 48 ವರ್ಷಗಳ ಕಾಲ ಕಾಂಗ್ರೆಸ್‌ನೊಂದಿಗೆ ಗುರುತಿಸಿಕೊಂಡಿದ್ದರು. ಫೆಬ್ರವರಿಯಲ್ಲಿ ಪಕ್ಷವನ್ನು ತೊರೆದು ಅಜಿತ್ ಪವಾರ್ ಅವರ ಎನ್‌ಸಿಪಿಗೆ ಸೇರಿದ್ದರು. ಜೀಶನ್ ಸಿದ್ದಿಕಿ ಅವರನ್ನು ಆಗಸ್ಟ್ನಲ್ಲಿ ಕಾಂಗ್ರೆಸ್‌ನಿಂದ ಉಚ್ಛಾಟಿಸಲಾಗಿತ್ತು.

  • ಮಾಜಿ ಸಚಿವ ಸಿದ್ದಿಕಿ ಹತ್ಯೆ – ಬಿಕ್ಕಿ ಬಿಕ್ಕಿ ಕಣ್ಣೀರಿಟ್ಟ ಶಿಲ್ಪಾಶೆಟ್ಟಿ, ಆಸ್ಪತ್ರೆಗೆ ಬಾಲಿವುಡ್‌ ತಾರಾ ದಂಡೇ ದೌಡು

    ಮಾಜಿ ಸಚಿವ ಸಿದ್ದಿಕಿ ಹತ್ಯೆ – ಬಿಕ್ಕಿ ಬಿಕ್ಕಿ ಕಣ್ಣೀರಿಟ್ಟ ಶಿಲ್ಪಾಶೆಟ್ಟಿ, ಆಸ್ಪತ್ರೆಗೆ ಬಾಲಿವುಡ್‌ ತಾರಾ ದಂಡೇ ದೌಡು

    – ಸಲ್ಮಾನ್‌ ಖಾನ್‌ ನಿವಾಸಕ್ಕೆ ಭದ್ರತೆ ಹೆಚ್ಚಳ

    ಮುಂಬೈ: ಮಹಾರಾಷ್ಟ್ರದ ಮಾಜಿ ಸಚಿವ ಮತ್ತು ಎನ್‌ಸಿಪಿಯ ಅಜಿತ್ ಪವಾರ್ ಬಣದ ನಾಯಕ ಬಾಬಾ ಸಿದ್ದಿಕಿ (66) (Baba Siddique) ಅವರು ಮುಂಬೈನ ಬಾಂದ್ರಾದಲ್ಲಿ ಗುಂಡಿನ ದಾಳಿಯಿಂದ ಸಾವನ್ನಪ್ಪಿದ್ದಾರೆ.‌ ಸಿದ್ದಿಕ್ಕಿ ಅವರ ಪಾರ್ಥೀವ ಶರೀರ ವೀಕ್ಷಣೆಗೆ ಬಾಲಿವುಡ್‌ ದಂಡೇ ಮುಂಬೈನ ಲೀಲಾವತಿ ಆಸ್ಪತ್ರೆಗೆ (Lilavati Hospital) ದಾಂಗುಡಿಯಿಟ್ಟಿದೆ.

     

    View this post on Instagram

     

    A post shared by Varinder Chawla (@varindertchawla)

    ನಟಿ ಶಿಲ್ಪಾ ಶೆಟ್ಟಿ (Shilpa Shetty), ಸಲ್ಮಾನ್‌ ಖಾನ್‌, ಸಂಜಯ್‌ ದತ್‌, ರಾಜ್‌ ಕುಂದ್ರಾ, ಇನ್ನೂ ಮೊದಲಾದವರು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಈ ವೇಳೆ ಬಾಬಾ ಸಿದ್ದಿಕ್ಕಿ ಅವರೊಂದಿಗಿನ ನಿಕಟ ಬಾಂಧವ್ಯವನ್ನು ಮಾಧ್ಯಮಗಳೊಂದಿಗೆ ಹಂಚಿಕೊಂಡಿದ್ದಾರೆ. ಕುಟುಂಬದೊಂದಿಗೆ ನಾವಿದ್ದೇವೆ ಎಂದು ಅಭಯ ನೀಡಿದ್ದಾರೆ. ಇದನ್ನೂ ಓದಿ: ಸಿಎಂ ಭೇಟಿ ಹೊತ್ತಲ್ಲೇ ಬೆಳಗಾವಿಯಲ್ಲಿ ʻಭವಿಷ್ಯದ ಮುಖ್ಯಮಂತ್ರಿʼ ಬ್ಯಾನರ್ – ರಾಜಕೀಯದಲ್ಲಿ ಸಂಚಲನ

    ಸಲ್ಮಾನ್‌ ಖಾನ್‌ ನಿವಾಸಕ್ಕೆ ಹೆಚ್ಚಿದ ಭದ್ರತೆ:
    ಸಿದ್ದಿಕಿ ಹತ್ಯೆ ಹಿಂದೆ ಗ್ಯಾಂಗ್‌ಸ್ಟರ್‌ ಲಾರೆನ್ಸ್‌ ಬಿಷ್ಣೊಯ್‌ ಕೈವಾಡ ಶಂಕೆ ವ್ಯಕ್ತವಾಗುತ್ತಿದ್ದಂತೆ ಮುಂಬೈನ ಗ್ಯಾಲಕ್ಸಿ ಅಪಾರ್ಟ್ಮೆಂಟ್‌ನಲ್ಲಿರುವ ಸಲ್ಮಾನ್‌ ಖಾನ್‌ *(Salman Khan) ನಿವಾಸಕ್ಕೆ ಹೆಚ್ಚಿನ ಪೊಲೀಸ್‌ ಭದ್ರತೆ ನಿಯೋಜಿಸಲಾಗಿದೆ. ಕೆಲ ದಿನಗಳ ಹಿಂದೆಯಷ್ಟೇ ನಟ ಸಲ್ಮಾನ್ ಖಾನ್ ಅವರಿಗೆ ಬಿಷ್ಣೋಯಿ ಗ್ಯಾಂಗ್‌ನಿಂದ ಕೊಲೆ ಬೆದರಿಕೆ ಬಂದಿತ್ತು. ಇದರಿಂದ ಅವರಿಗೆ ವೈ ಕೆಟಗರಿ ಭದ್ರತೆ ನೀಡಲಾಗಿದೆ. ಇದೀಗ ಸಿದ್ದಿಕ್ಕಿ ಹತ್ಯೆ ಬೆನ್ನಲ್ಲೇ ಭದ್ರತೆ ಹೆಚ್ಚಿಸಲಾಗಿದೆ. ಇದನ್ನೂ ಓದಿ: ಮಾಜಿ ಸಚಿವ ಸಿದ್ದಿಕಿ ಹತ್ಯೆ ಹಿಂದೆ ಬಿಷ್ಣೋಯ್‌ ಗ್ಯಾಂಗ್‌ ಕೈವಾಡ – ಬೆಚ್ಚಿಬೀಳಿಸುವ ರಹಸ್ಯ ಬಯಲು

    ಮುಂಬೈ ಕ್ರೈಂ ಬ್ರ್ಯಾಂಚ್‌ ತನಿಖೆ ಚುರುಕು:
    ಘಟನೆ ಬಳಿಕ ಹರಿಯಾಣದ ಕರ್ನೈಲ್ ಸಿಂಗ್ ಮತ್ತು ಉತ್ತರ ಪ್ರದೇಶದ ಧರ್ಮರಾಜ್ ಕಶ್ಯಪ್ ಎಂಬ ಆರೋಪಿಗಳನ್ನು ಬಂಧಿಸಿರುವ ಮುಂಬೈ ಕ್ರೈಂ ಬ್ರ್ಯಾಂಚ್‌ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ತನಿಖೆಗೆ 4 ವಿಶೇಷ ತಂಡಗಳನ್ನ ರಚಿಸಿದ್ದು, 2 ಆಯಾಮಗಳಿಂದ ಪ್ರಕರಣವನ್ನು ತನಿಖೆ ನಡೆಸುತ್ತಿದ್ದಾರೆ. ಒಂದು ಬಿಷ್ಣೋಯ್ ಗ್ಯಾಂಗ್, ಮತ್ತೊಂದು ಸ್ಲಂ ಪುನರ್ವಸತಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿದ್ದಾರೆ. ಆದ್ರೆ ಸಿದ್ದಿಕಿ ಅವರಿಗೆ ಯಾವುದೇ ಬೆದರಿಕೆಗಳೂ ಬಂದಿರಲಿಲ್ಲ ಎನ್ನಲಾಗಿದೆ. ಇದನ್ನೂ ಓದಿ: Tungabhadra Dam | ಒಳಹರಿವು ಹೆಚ್ಚಳ – ನದಿ ಪಾತ್ರದ ಜನರಿಗೆ ಎಚ್ಚರಿಕೆಯಿಂದ ಇರುವಂತೆ ಸೂಚನೆ

    ಸ್ಫೋಟಕ ಮಾಹಿತಿ:
    ಡಜನ್ ಗಟ್ಟಲೇ ಕ್ರಿಮಿನಲ್ ಮೊಕದ್ದಮೆಗಳನ್ನು ಎದುರಿಸುತ್ತಿರುವ ಲಾರೆನ್ಸ್ ಬಿಷ್ಣೋಯ್ ಪ್ರಸ್ತುತ ಗುಜರಾತ್ ಜೈಲಿನಲ್ಲಿದ್ದಾನೆ. ಆದ್ರೆ ಅವನ ಗ್ಯಾಂಗ್‌ನಿಂದ ಉದ್ಯಮಿಗಳು, ಪ್ರಮುಖ ವ್ಯಕ್ತಿಗಳಿಗೆ ಬೆದರಿಕೆ ಕರೆಗಳು ಬರುತ್ತಲೇ ಇವೆ. ಸದ್ಯ ಬಿಷ್ಣೋಯ್ ಗ್ಯಾಂಗ್‌ನಲ್ಲಿ 700ಕ್ಕೂ ಹೆಚ್ಚು ಶೂಟರ್‌ಗಳಿದ್ದಾರೆ. ದೇಶಾದ್ಯಂತ ಅನೇಕ ಸಣ್ಣ ಮತ್ತು ದೊಡ್ಡ ಕ್ರಿಮಿನಲ್‌ಗಳು ಅವನಿಗಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

    ಏನಾಗಿತ್ತು?
    ಮುಂಬೈನ ಬಾಂದ್ರಾ ಪೂರ್ವದ ಶಾಸಕರಾಗಿರುವ ಅವರ ಪುತ್ರ ಜೀಶಾನ್ ಅವರ ಕಚೇರಿಯಲ್ಲಿ ಶನಿವಾರ ರಾತ್ರಿ 9:30ರ ಸುಮಾರಿಗೆ ಸಿದ್ದಿಕಿ ಮೇಲೆ ಮೂರು ಗುಂಡುಗಳನ್ನು ಹಾರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ಸಿದ್ದಿಕಿ ಮೇಲೆ ದುಷ್ಕರ್ಮಿಗಳು ಮೂರು ಗುಂಡುಗಳನ್ನು ಹಾರಿಸಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಮಾಜಿ ಸಚಿವರನ್ನು ಲೀಲಾವತಿ ಆಸ್ಪತ್ರೆಗೆ ಸಾಗಿಸಲಾಯಿತು. ಒಂದು ಗುಂಡು ಎದೆಗೆ ತಗುಲಿದ್ದರಿಂದ ಅವರು ಸಾವಿಗೀಡಾಗಿದ್ದಾರೆ. ಬಾಂದ್ರಾ ಪಶ್ಚಿಮದಿಂದ ಮೂರು ಬಾರಿ ಶಾಸಕರಾಗಿದ್ದ ಸಿದ್ದಿಕಿ ಅವರು 48 ವರ್ಷಗಳ ಕಾಲ ಕಾಂಗ್ರೆಸ್‌ನೊಂದಿಗೆ ಗುರುತಿಸಿಕೊಂಡಿದ್ದರು. ಫೆಬ್ರವರಿಯಲ್ಲಿ ಪಕ್ಷವನ್ನು ತೊರೆದು ಅಜಿತ್ ಪವಾರ್ ಅವರ ಎನ್‌ಸಿಪಿಗೆ ಸೇರಿದ್ದರು. ಜೀಶನ್ ಸಿದ್ದಿಕಿ ಅವರನ್ನು ಆಗಸ್ಟ್ನಲ್ಲಿ ಕಾಂಗ್ರೆಸ್‌ನಿಂದ ಉಚ್ಛಾಟಿಸಲಾಗಿತ್ತು.

  • ಮಾಜಿ ಸಚಿವ ಸಿದ್ದಿಕಿ ಹತ್ಯೆ ಹಿಂದೆ ಬಿಷ್ಣೋಯ್‌ ಗ್ಯಾಂಗ್‌ ಕೈವಾಡ – ಬೆಚ್ಚಿಬೀಳಿಸುವ ರಹಸ್ಯ ಬಯಲು

    ಮಾಜಿ ಸಚಿವ ಸಿದ್ದಿಕಿ ಹತ್ಯೆ ಹಿಂದೆ ಬಿಷ್ಣೋಯ್‌ ಗ್ಯಾಂಗ್‌ ಕೈವಾಡ – ಬೆಚ್ಚಿಬೀಳಿಸುವ ರಹಸ್ಯ ಬಯಲು

    – ಬಿಷ್ಣೋಯ್‌ ಗ್ಯಾಂಗ್‌ನಲ್ಲಿದ್ದಾರೆ 700 ಶೂಟರ್ಸ್‌: ಪೊಲೀಸರಿಂದ ಮಾಹಿತಿ

    ಮುಂಬೈ: ಮಹಾರಾಷ್ಟ್ರದ ಮಾಜಿ ಸಚಿವ ಮತ್ತು ಎನ್‌ಸಿಪಿಯ ಅಜಿತ್ ಪವಾರ್ ಬಣದ ನಾಯಕ ಬಾಬಾ ಸಿದ್ದಿಕಿ (66) (Baba Siddique) ಅವರು ಮುಂಬೈನ ಬಾಂದ್ರಾದಲ್ಲಿ ಗುಂಡಿನ ದಾಳಿಯಿಂದ ಸಾವನ್ನಪ್ಪಿದ್ದಾರೆ. ಇವರ ಹತ್ಯೆ ಹಿಂದೆ ಬಿಷ್ಣೋಯ್‌ ಗ್ಯಾಂಗ್‌ (Lawrence Bishnoi Gang) ಕೈವಾಡ ಇದೆ ಎಂದು ತಿಳಿದುಬಂದಿದೆ.

    ಹೌದು. ತೀವ್ರ ಗಾಯಗೊಂಡಿದ್ದ ಅವರನ್ನ ಕೂಡಲೇ ಆಸ್ಪತ್ರೆಗೆ ದಾಖಲಿಸತಾಗಿತ್ತಾದರೂ, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಘಟನೆ ಬಳಿಕ ಹರಿಯಾಣದ ಕರ್ನೈಲ್ ಸಿಂಗ್ ಮತ್ತು ಉತ್ತರ ಪ್ರದೇಶದ ಧರ್ಮರಾಜ್ ಕಶ್ಯಪ್ ಎಂದು ಗುರುತಿಸಲಾದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ವಿಚಾರಣೆ ವೇಳೆ ಅವರಿಬ್ಬರೂ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ಗೆ ಸೇರಿದವರು ಎಂದು ಹೇಳಿಕೊಂಡಿದ್ದಾರೆಂದು ಪೊಲೀಸ್ (Mumbai Police) ಮೂಲಗಳು ತಿಳಿಸಿವೆ. ಕಳೆದ ಒಂದು ತಿಂಗಳಿನಿಂದ ಸಿದ್ದಿಕ್‌ನ ಚಲನವಲನಗಳ ಮೇಲೆ ನಿಗಾ ಇರಿಸಿದ್ದಾಗಿಯೂ ಒಪ್ಪಿಕೊಂಡಿದ್ದಾರೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ:  ಉತ್ತರ ಪ್ರದೇಶ| ಮಗಳನ್ನು ಹಗ್ಗದಲ್ಲಿ ತಲೆಕೆಳಗಾಗಿ ನೇತುಹಾಕಿ ಮನಬಂದಂತೆ ಥಳಿಸಿದ ತಂದೆ

    ಪ್ರಕರಣದ ತನಿಖೆ ಕೈಗೊಂಡಿರುವ ಮುಂಬೈ ಪೊಲೀಸರು 4 ವಿಶೇಷ ತಂಡಗಳನ್ನ ರಚಿಸಿ ತನಿಖೆ ನಡೆಸುತ್ತಿದ್ದಾರೆ. ಹರಿಯಾಣ ಹಾಗೂ ಉತ್ತರ ಪ್ರದೇಶದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, 3ನೇ ಆರೋಪಿಗಾಗಿ ಶೂಧ ನಡೆಸಲಾಗುತ್ತಿದೆ. ಆದಾಗ್ಯೂ ಸಿದ್ದಿಕ್‌ ಅವರ ಬಗ್ಗೆ ಬೇರೊಬ್ಬರು ಮಾಹಿತಿ ನೀಡಿರುವ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದಾರೆ. ಮುಂಬೈ ಪೊಲೀಸ್ ಕ್ರೈಂ ಬ್ರಾಂಚ್ ವಿಚಾರಣೆಯಲ್ಲಿ, ಬಂಧಿತರಿಬ್ಬರು ಕಳೆದ ಒಂದು ತಿಂಗಳಿನಿಂದ ಸಿದ್ದಿಕ್‌ನ ಚಲನವಲನಗಳ ಮೇಲೆ ನಿಗಾ ಇರಿಸಿದ್ದಾಗಿಯೂ ಒಪ್ಪಿಕೊಂಡಿದ್ದಾರೆ. ಶನಿವಾರ ರಾತ್ರಿ ಮೂವರು ಘಟನಾ ಸ್ಥಳಕ್ಕೆ ಆಟೋದಲ್ಲಿ ಬಂದು ಸಿದ್ದಿಕ್‌ಗಾಗಿ ಕಾಯುತ್ತಿದ್ದರು ಅನ್ನೋದು ಸಿಸಿಟಿವಿ ದೃಶ್ಯಾವಳಿಗಳಿಂದ ತಿಳಿದುಬಂದಿದೆ.

    ಸದ್ಯ ಪೋಲೀಸರು ಪ್ರಕರಣವನ್ನು 2 ಆಯಾಮಗಳಿಂದ ತನಿಖೆ ನಡೆಸುತ್ತಿದ್ದಾರೆ. ಒಂದು ಬಿಷ್ಣೋಯ್‌ ಗ್ಯಾಂಗ್‌, ಮತ್ತೊಂದು ಸ್ಲಂ ಪುನರ್ವಸತಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿದ್ದಾರೆ. ಕೆಲ ದಿನಗಳ ಹಿಂದೆಯಷ್ಟೇ ನಟ ಸಲ್ಮಾನ್‌ ಖಾನ್‌ ಅವರಿಗೆ ಕೊಲೆ ಬೆದರಿಕೆ ಬಂದಿದ್ದರಿಂದ ಅವರಿಗೆ ವೈ ಕೆಟಗರಿ ಭದ್ರತೆ ನೀಡಲಾಗಿದೆ. ಆದ್ರೆ ಸಿದ್ದಿಕ್‌ ಅವರಿಗೆ ಯಾವುದೇ ಬೆರಿಕೆಗಳೂ ಬಂದಿರಲಿಲ್ಲ ಎನ್ನಲಾಗಿದೆ. ಪ್ರಕರಣದ ತನಿಖೆ ಕುರಿತು ಕೇಂದ್ರ ಏಜೆನ್ಸಿಗಳು ಮುಂಬೈ ಪೊಲೀಸರೊಂದಿಗೆ ಸಂಪರ್ಕದಲ್ಲಿದ್ದು, ಗುಜರಾತ್ ಮತ್ತು ದೆಹಲಿಯ ಪೊಲೀಸರು ಕೂಡ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

    ಸ್ಫೋಟಕ ಮಾಹಿತಿ:
    ಡಜನ್‌ ಗಟ್ಟಲೇ ಕ್ರಿಮಿನಲ್‌ ಮೊಕದ್ದಮೆಗಳನ್ನು ಎದುರಿಸುತ್ತಿರುವ ಲಾರೆನ್ಸ್‌ ಬಿಷ್ಣೋಯ್‌ ಪ್ರಸ್ತುತ ಗುಜರಾತ್‌ ಜೈಲಿನಲ್ಲಿದ್ದಾನೆ. ಆದ್ರೆ ಅವನ ಗ್ಯಾಂಗ್‌ನಿಂದ ಉದ್ಯಮಿಗಳು, ಪ್ರಮುಖ ವ್ಯಕ್ತಿಗಳಿಗೆ ಬೆದರಿಕೆ ಕರೆಗಳು ಬರುತ್ತಲೇ ಇವೆ. ಸದ್ಯ ಬಿಷ್ಣೋಯ್ ಗ್ಯಾಂಗ್‌ನಲ್ಲಿ 700ಕ್ಕೂ ಹೆಚ್ಚು ಶೂಟರ್‌ಗಳಿದ್ದಾರೆ. ದೇಶಾದ್ಯಂತ ಅನೇಕ ಸಣ್ಣ ಮತ್ತು ದೊಡ್ಡ ಕ್ರಿಮಿನಲ್‌ಗಳು ಅವನಿಗಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಪೊಲೀಸ್ ಮೂಲಗಳು ಸೂಚಿಸುತ್ತವೆ. ಇದನ್ನೂ ಓದಿ: ಬಾಲಸೋರ್ ಅಪಘಾತದ ಬಳಿಕವೂ ಸರ್ಕಾರ ಎಚ್ಚೆತ್ತುಕೊಂಡಿಲ್ಲ: ಕೇಂದ್ರದ ವಿರುದ್ಧ ರಾಹುಲ್‌ ಗಾಂಧಿ ಕಿಡಿ

    salman

    ಬಾಂದ್ರಾ ಪೂರ್ವದ ಶಾಸಕರಾಗಿರುವ ಅವರ ಪುತ್ರ ಜೀಶಾನ್ ಅವರ ಕಚೇರಿಯಲ್ಲಿ ಶನಿವಾರ ರಾತ್ರಿ 9:30ರ ಸುಮಾರಿಗೆ ಸಿದ್ದಿಕಿ ಮೇಲೆ ಮೂರು ಗುಂಡುಗಳನ್ನು ಹಾರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ಸಿದ್ದಿಕಿ ಮೇಲೆ ದುಷ್ಕರ್ಮಿಗಳು ಮೂರು ಗುಂಡುಗಳನ್ನು ಹಾರಿಸಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಮಾಜಿ ಸಚಿವರನ್ನು ಲೀಲಾವತಿ ಆಸ್ಪತ್ರೆಗೆ ಸಾಗಿಸಲಾಯಿತು. ಒಂದು ಗುಂಡು ಎದೆಗೆ ತಗುಲಿದ್ದರಿಂದ ಅವರು ಸಾವಿಗೀಡಾಗಿದ್ದಾರೆ.

    ಬಾಂದ್ರಾ ಪಶ್ಚಿಮದಿಂದ ಮೂರು ಬಾರಿ ಶಾಸಕರಾಗಿದ್ದ ಸಿದ್ದಿಕಿ ಅವರು 48 ವರ್ಷಗಳ ಕಾಲ ಕಾಂಗ್ರೆಸ್‌ನೊಂದಿಗೆ ಗುರುತಿಸಿಕೊಂಡಿದ್ದರು. ಫೆಬ್ರವರಿಯಲ್ಲಿ ಪಕ್ಷವನ್ನು ತೊರೆದು ಅಜಿತ್ ಪವಾರ್ ಅವರ ಎನ್‌ಸಿಪಿಗೆ ಸೇರಿದ್ದರು. ಜೀಶನ್ ಸಿದ್ದಿಕಿ ಅವರನ್ನು ಆಗಸ್ಟ್‌ನಲ್ಲಿ ಕಾಂಗ್ರೆಸ್‌ನಿಂದ ಉಚ್ಛಾಟಿಸಲಾಗಿತ್ತು. ಇದನ್ನೂ ಓದಿ: ಬಾಂಗ್ಲಾದೇಶದಲ್ಲಿ ನಡೆಯುತ್ತಿರುವುದು ಭಾರತದ ಹಿಂದೂಗಳಿಗೂ ಒಂದು ಪಾಠ: ಮೋಹನ್‌ ಭಾಗವತ್‌