Tag: ಬಾಬುಲ್ ಸುಪ್ರಿಯೋ

  • TMC ನಾಯಕ ಬಾಬುಲ್ ಸುಪ್ರಿಯೋ, ಪತ್ನಿ, ತಂದೆಗೆ ಕೊರೊನಾ

    TMC ನಾಯಕ ಬಾಬುಲ್ ಸುಪ್ರಿಯೋ, ಪತ್ನಿ, ತಂದೆಗೆ ಕೊರೊನಾ

    ಕೋಲ್ಕತ್ತಾ: ತೃಣ ಮೂಲಕ ಕಾಂಗ್ರೆಸ್ ನಾಯಕ ಮತ್ತು ಲೋಕಸಭಾ ಮಾಜಿ ಸದಸ್ಯ ಬಾಬುಲ್ ಸುಪ್ರಿಯೊ ತಮಗೆ, ತಮ್ಮ ಪತ್ನಿ, ತಂದೆ ಮತ್ತು ಇಬ್ಬರು ಸಿಬ್ಬಂದಿ ಇಬ್ಬರಿಗೆ ಕೊರೊನಾ ವೈರಸ್ ದೃಢಪಟ್ಟಿರುವುದಾಗಿ ತಿಳಿಸಿದ್ದಾರೆ.

    ಭಾರತೀಯ ಹಿನ್ನೆಲೆ ಗಾಯಕ ಮತ್ತು ಟೆಲಿವಿಷನ್ ಹೋಸ್ಟ್ ಆಗಿರುವ ಬಾಬುಲ್ ಸುಪ್ರಿಯೋ ಅವರು ಈ ಕುರಿತಂತೆ ತಮ್ಮ ಟ್ವಿಟ್ಟರ್ ಮೂಲಕ ಮಾಹಿತಿ ನೀಡಿದ್ದಾರೆ. ನನಗೆ, ನನ್ನ ಪತ್ನಿ, ಕೆಲ ಸಿಬ್ಬಂದಿಗೆ ಕೊರೊನಾ ಟೆಸ್ಟ್ ಮಾಡಿಸಿದಾಗ ಪಾಸಿಟಿವ್ ಬಂದಿದೆ. ಒಂದು ಕಾಕ್‍ಟೈಲ್ ಜಬ್‍ನ ಬೆಲೆ ರೂ.61,000ದಷ್ಟು ದುಬಾರಿಯಾಗಿದೆ. ಇದನ್ನು ಗಂಭೀರವಾಗಿ ಅಸ್ವಸ್ಥರಾಗಿರುವ ಕೊರೊನಾ ಸೋಂಕಿತರಿಗೆ ನೀಡಬೇಕಾಗಿದೆ. ನನ್ನ ತಂದೆ 84 ವರ್ಷದವರಾಗಿದ್ದು, ಅವರಿಗೆ ಕಾಕ್‍ಟೈಲ್ ಜಬ್‍ನ ಅಗತ್ಯವಿತ್ತು. ಹಾಗಾಗಿ ಅದನ್ನು ನಾನು ಕೂಡಲೇ ಖರೀದಿಸಿದೆ. ಆದರೆ ಬಡವರು ಖರೀದಿಸಲು ಹೇಗೆ ಸಾಧ್ಯ ಎಂದು ಟ್ವೀಟ್ ಮಾಡಿದ್ದಾರೆ.  ಇದನ್ನೂ ಓದಿ: ಬಿಜೆಪಿ ನಾಯಕ ಮನೋಜ್ ತಿವಾರಿಗೆ ಕೊರೊನಾ ಪಾಸಿಟಿವ್

    ಅಂದರೆ ಗಂಭೀರವಾಗಿ ಅಸ್ವಸ್ಥರಾಗಿರುವ ಕೊರೊನಾ ಸೋಂಕಿತರಿಗೆ ನೀಡಬೇಕಾದ ಕಾಕ್‍ಟೈಲ್ ಲಸಿಕೆಯ ಬೆಲೆ 61,000 ರೂ. ಆಗಿದ್ದು, ನನ್ನ 84 ವರ್ಷದ ತಂದೆಗೆ ಅಗತ್ಯ ಇರುವುದರಿಂದ ಅದನ್ನು ತಕ್ಷಣ ಖರೀದಿಸಿದೆ. ಆದರೆ ಈ ಲಸಿಕೆಯನ್ನು ಆರ್ಥಿಕವಾಗಿ ದುರ್ಬಲಗೊಂಡಿರುವ ಜನರಿಗೆ ಖರೀದಿಸಲು ಹೇಗೆ ಸಾಧ್ಯವಾಗುತ್ತದೆ ಎಂದು ಪ್ರಶ್ನಿಸಿದ್ದಾರೆ.  ಇದನ್ನೂ ಓದಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‍ಗೆ ಕೊರೊನಾ

    ಮತ್ತೊಂದೆಡೆ ಇಂದು  ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಬಿಜೆಪಿ ನಾಯಕ ಮನೋಜ್ ತಿವಾರಿ ಅವರಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಈ ಬಗ್ಗೆ ಟ್ವೀಟ್ ಮಾಡುವ ಮೂಲಕ ಮಾಹಿತಿ ನೀಡಿದ್ದಾರೆ.

  • ಬಂಗಾಳದ ಐವರು ಬಿಜೆಪಿ ಶಾಸಕರು ಪಕ್ಷ ತೊರೆಯಬಹುದು: ಬಾಬುಲ್ ಸುಪ್ರಿಯೋ

    ಬಂಗಾಳದ ಐವರು ಬಿಜೆಪಿ ಶಾಸಕರು ಪಕ್ಷ ತೊರೆಯಬಹುದು: ಬಾಬುಲ್ ಸುಪ್ರಿಯೋ

    ಕೋಲ್ಕತ್ತಾ: ಬಿಜೆಪಿ ವಾಟ್ಸಾಪ್ ಗ್ರೂಪ್‍ನಿಂದ ಹೊರಬಂದ ಪಶ್ಚಿಮ ಬಂಗಾಳದ ಐವರು ಅತೃಪ್ತ ಶಾಸಕರು ಕೇಸರಿ ಪಕ್ಷವನ್ನು ತೊರೆಯಲಿದ್ದಾರೆ ಎಂದು ತೃಣಮೂಲ ಕಾಂಗ್ರೆಸ್ ನಾಯಕ ಬಾಬುಲ್ ಸುಪ್ರಿಯೋ ಹೇಳಿದ್ದಾರೆ.

    ಮೂರು ತಿಂಗಳ ಹಿಂದೆ ಮಮತಾ ಬ್ಯಾನರ್ಜಿ ನೇತೃತ್ವದ ಪಕ್ಷಕ್ಕೆ ಸೇರ್ಪಡೆಗೊಂಡ ಕೇಂದ್ರದ ಮಾಜಿ ಸಚಿವ ಮತ್ತು ತೃಣಮೂಲ ಕಾಂಗ್ರೆಸ್ ನಾಯಕ ಬಾಬುಲ್ ಸುಪ್ರಿಯೋ ಅವರು ಈ ಕುರಿತಂತೆ ಟ್ವಿಟ್ಟರ್‌ನಲ್ಲಿ ಬಿಜೆಪಿಯಲ್ಲಿ ಒಂದರ ಹಿಂದೆ ಒಂದು ವಿಕೆಟ್ ಬೀಳುತ್ತಿದೆ. ಇನ್ನೂ ಐದು ವಿಕೆಟ್ ಬೀಳಲಿದೆ. ವಿಧಾನಸಭಾ ಚುನಾವಣೆಗೂ ಮುನ್ನ ಬಿಜೆಪಿ ಪ್ರಚಾರದ ಮೇಲ್ವಿಚಾರಣೆ ನಡೆಸಿದ್ದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶಿವಪ್ರಕಾಶ್ ಇದೀಗ ಕೈಲಾಸ ಪರ್ವತಕ್ಕೆ ಹೋಗಿದ್ದಾರೆ. ನಿಮ್ಮನ್ನು ಹಿಂದಿನಿಂದ ಎಳೆಯುವ ಬಂಗಾಳಿ ಹೇಡಿಗಳನ್ನು ಹುಡುಕಲು ಪ್ರಯತ್ನಿಸುತ್ತದ್ದರೆ ಮುರಳೀಧರ್ ಲೇನ್‍ಗೆ ಹೋಗಿ ಎಂದಿದ್ದಾರೆ.

    ಪಶ್ಚಿಮ ಬಂಗಾಳದ ಐವರು ಶಾಸಕರಾದ ಮುಕುತ್ಮೋನಿ ಅಧಿಕಾರಿ (ರಣಘಾಟ್ ದಕ್ಷಿಣ), ಸುಬ್ರತಾ ಠಾಕೂರ್ (ಗೈಘಾಟ), ಅಂಬಿಕಾ ರಾಯ್ (ಕಲ್ಯಾಣಿ), ಅಶೋಕ್ ಕೀರ್ತಾನಿಯಾ (ಬೊಂಗಾವ್ ಉತ್ತರ), ಮತ್ತು ಅಸಿಮ್ ಸರ್ಕಾರ್ (ಹರಿಂಘಟ) ಬಿಜೆಪಿ ವಾಟ್ಸಾಪ್ ಗ್ರೂಪ್ ತೊರೆದಿದ್ದಾರೆ. ಇದನ್ನೂ ಓದಿ:  ಪ್ರಧಾನಿ ಮೋದಿ ನಮ್ಮ ದೇಶದ ಹೆಮ್ಮೆ: ಗುಲಾಂ ನಬಿ ಆಜಾದ್

    ಈ ವಿಚಾರವಾಗಿ ಪ್ರತಿಕ್ರಿಯಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಸುಕಾಂತ ಮಜುಂದಾರ್ ಅವರು, ಐವರು ಶಾಸಕರಲ್ಲಿ ಯಾರನ್ನು ಸಹ ಬಿಡುವುದಿಲ್ಲ, ಹೊಸ ಸಮಿತಿಗಳಲ್ಲಿ ಅವರಿಗೆ ಅವಕಾಶ ಕಲ್ಪಿಸುತ್ತೇವೆ. ಎಲ್ಲರೂ ಸ್ವಲ್ಪ ತಾಳ್ಮೆಯಿಂದಿರಬೇಕು ಎಂದಿದ್ದಾರೆ. ಇದನ್ನೂ ಓದಿ: 40 ವರ್ಷ ಮೇಲ್ಪಟ್ಟ ಮಹಿಳೆಯರು ಮೋದಿಯಿಂದ ಪ್ರಭಾವಿತರಾಗಿದ್ದಾರೆಯೇ ಹೊರತು ಜೀನ್ಸ್ ತೊಟ್ಟ ಹುಡುಗಿಯರಲ್ಲ: ದಿಗ್ವಿಜಯ್ ಸಿಂಗ್