Tag: ಬಾರ್ಡರ್

  • ಗಡಿಭಾಗದಲ್ಲಿ ಜನಿಸಿದ ಮಗುವಿಗೆ ಬಾರ್ಡರ್ ಎಂದು ಹೆಸರಿಟ್ಟ ಹೆತ್ತವರು

    ಗಡಿಭಾಗದಲ್ಲಿ ಜನಿಸಿದ ಮಗುವಿಗೆ ಬಾರ್ಡರ್ ಎಂದು ಹೆಸರಿಟ್ಟ ಹೆತ್ತವರು

    ಇಸ್ಲಾಮಾಬಾದ್‌: ಗಡಿ ಭಾಗದಲ್ಲಿ ಜನಿಸಿದ ಗಂಡು ಮಗುವಿಗೆ ದಂಪತಿ ಬಾರ್ಡರ್ ಎಂದು ಹೆಸರಿಡುವ ಮೂಲವಾಗಿ ಸುದ್ದಿಯಾಗಿದ್ದಾರೆ.

    ಪಂಜಾಬ್ ಪ್ರಾಂತ್ಯದ ರಾಜನ್‍ಪುರ್ ಜಿಲ್ಲೆಗೆ ಸೇರಿದ ಪೋಷಕರು, ನಿಂಬು ಬಾಯಿ ಮತ್ತು ಬಲಮ್ ರಾಮ್ ಅವರು ಭಾರತ -ಪಾಕ್ ಗಡಿಯಲ್ಲಿ ಜನಿಸಿದ ಕಾರಣ ಮಗುವಿಗೆ ಈ ಹೆಸರನ್ನು ಇಡಲಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಅರಬ್ಬಿ ಸಮುದ್ರದಲ್ಲಿ ಹತ್ತು ಮೀಟರ್ ಆಳದಲ್ಲಿ ಸ್ಕೂಬಾ ಡೈವ್ ಮಾಡಿದ್ರು ಅಪ್ಪು

    ಲಾಕ್‍ಡೌನ್‍ಗೂ ಮುನ್ನ ತನ್ನ ಸಂಬಂಧಿಕರನ್ನು ಭೇಟಿ ಮಾಡುವುದರ ಜೊತೆಗೆ ತೀರ್ಥಯಾತ್ರೆಗೆ 98 ಮಂದಿ ನಾಗರಿಕರೊಂದಿಗೆ ಭಾರತಕ್ಕೆ ಬಂದಿದ್ದರು. ಇವರು ದಾಖಲೆಗಳ ಕೊರತೆಯಿಂದಾಗಿ ಮನೆಗೆ ಮರಳಲು ಸಾಧ್ಯವಾಗಲಿಲ್ಲ. ಕಳೆದ 71 ದಿನಳಿಂದ ಇತರ 97 ಪಾಕಿಸ್ತಾನಿ ಪ್ರಜೆಗಳೊಂದಿಗೆ ಅಟಾರಿ ಗಡಿಯಲ್ಲಿ ಸಿಲುಕಿಕೊಂಡಿದ್ದಾರೆ. ಇವರು ತಮ್ಮ ಸ್ವಗ್ರಾಮಕ್ಕೆ ತೆರಳವುದಕ್ಕೆ ಮೂಲ ದಾಖಲೆಗಳು ಇಲ್ಲದ ಕಾರಣ ಭಾರತ-ಪಾಕ್ ಗಡಿ ಭಾಗವಾದ ಅತ್ತಾರಿಯಲ್ಲಿ ಟೆಂಟ್‍ಗಳನ್ನು ಹಾಕಿಕೊಂಡು ಜೀವನ ಸಾಗಿಸುತ್ತಿದ್ದಾರೆ. ಇದನ್ನೂ ಓದಿ: ಹತ್ತು ವರ್ಷ ಹಾಸನ ಜಿಲ್ಲೆಗೆ ಎರಡು ಪಕ್ಷಗಳ ಕೊಡುಗೆ ಏನು: ರೇವಣ್ಣ ಪ್ರಶ್ನೆ

    ಆಗ ನಿಂಬು ಬಾಯಿ ತುಂಬು ಗರ್ಭಿಣಿಯಾಗಿದ್ದು, ಡಿಸೆಂಬರ್ 2ರಂದು ಹೆರಿಗೆ ನೋವು ಕಾಣಿಸಿಕೊಂಡಿದೆ. ಪಕ್ಕದ ಪಂಜಾಬ್ ಗ್ರಾಮಗಳಿಂದ ಕೆಲವು ಮಹಿಳೆಯರು ನಿಂಬು ಬಾಯಿಗೆ ಹೆರಿಗೆಗೆ ಸಹಾಯ ಮಾಡಲು ಬಂದಿದ್ದರು. ಸ್ಥಳೀಯರು ಹೆರಿಗೆಗೆ ವೈದ್ಯಕೀಯ ಸೌಲಭ್ಯಗಳ ಜೊತೆಗೆ ಇತರ ಸಹಾಯವನ್ನೂ ಮಾಡಿದರು. ಆಗ ನಿಂಬು ಬಾಯಿಗೆ ಗಂಡು ಮಗು ಜನಿಸಿದೆ. ಈ ಮಗುವಿಗೆ ಪೋಷಕರು ಬಾರ್ಡರ್ ಎಂದು ನಾಮಕರಣ ಮಾಡಿದ್ದಾರೆ.

    ಇನ್ನೊಬ್ಬ ಪಾಕಿಸ್ತಾನಿ ಪ್ರಜೆ ಲಗ್ಯಾ ರಾಮ್ ದಂಪತಿಗೆ 2020 ರಲ್ಲಿ ಜೋಧ್‍ಪುರದಲ್ಲಿ ಮಗು ಜನಿಸಿತ್ತು. ಭಾರತದಲ್ಲಿ ಜನಿಸಿದ್ದ ಕಾರಣ ಆ ಮಗುವಿಗೆ ಭರತ್ ಎಂದು ನಾಮಕರಣ ಮಾಡಿದ್ದರು. ಲಗ್ಯಾ ರಾಮ್ ಜೋಧ್‍ಪುರದಲ್ಲಿರುವ ತನ್ನ ಸಹೋದರನನ್ನು ಭೇಟಿಯಾಗಲು ಬಂದಿದ್ದರು. ಆದರೆ ಅವರು ಸಹ ಅತ್ತಾರಿ ಗಡಿಯಲ್ಲೇ ಸಿಲುಕೊಂಡಿದ್ದಾರೆ.

    ಇವರೆಲ್ಲರೂ ರಹೀಮ್ ಯಾರ್ ಖಾನ್ ಮತ್ತು ರಾಜನ್‍ಪುರ ಸೇರಿದಂತೆ ಪಾಕಿಸ್ತಾನದ ವಿವಿಧ ಜಿಲ್ಲೆಗಳಿಗೆ ಸೇರಿದವರಾಗಿದ್ದಾರೆ. ಪಾಕಿಸ್ತಾನಿ ರೇಂಜರ್‌ಗಳು ತಮ್ಮ ಪ್ರಜೆಗಳನ್ನು ಕರೆಸಿಕೊಳ್ಳಲು ನಿರಾಕರಿಸಿದ್ದರಿಂದ ಅವರು ಪ್ರಸ್ತುತ ಅತ್ತಾರಿ ಗಡಿಯಲ್ಲಿ ಟೆಂಟ್‍ನಲ್ಲಿ ವಾಸಿಸುತ್ತಿದ್ದಾರೆ. ಈ ಕುಟುಂಬಗಳು ಅತ್ತಾರಿ ಅಂತಾರಾಷ್ಟ್ರೀಯ ಚೆಕ್ ಪೋಸ್ಟ್ ಬಳಿಯ ಪಾರ್ಕಿಂಗ್ ಸ್ಥಳದಲ್ಲಿ ಬೀಡುಬಿಟ್ಟಿವೆ. ಸ್ಥಳೀಯರು ಇವರಿಗೆ ಮೂರು ಹೊತ್ತಿನ ಊಟ, ಔಷಧ, ಬಟ್ಟೆ ನೀಡಿ ಮಾನವೀಯತೆ ಮೆರೆಯುತ್ತಿದ್ದಾರೆ.

  • ಬಾರ್ಡರ್‌ನಲ್ಲೇ ಜೋಡಿ ಮದ್ವೆ- ತಮಿಳುನಾಡು ಗಡಿದಾಟದ ವರ, ಕರ್ನಾಟಕ ಗಡಿದಾಟದ ವಧು

    ಬಾರ್ಡರ್‌ನಲ್ಲೇ ಜೋಡಿ ಮದ್ವೆ- ತಮಿಳುನಾಡು ಗಡಿದಾಟದ ವರ, ಕರ್ನಾಟಕ ಗಡಿದಾಟದ ವಧು

    ಚಾಮರಾಜನಗರ: ಅಂತರ್ ರಾಜ್ಯ ಗಡಿದಾಟದೆ ಎರಡೂ ರಾಜ್ಯಗಳ ನೂತನ ಜೋಡಿಯೊಂದು ಬಾರ್ಡರ್‌ನಲ್ಲೇ  ಮದುವೆಯಾದ ವಿಶೇಷ ಘಟನೆ ರಾಜ್ಯದ ತಮಿಳುನಾಡು ಗಡಿಯಾದ ಪುಣಜನೂರು ಚೆಕ್ ಪೋಸ್ಟ್ ನಲ್ಲಿ ನಡೆದಿದೆ.

    ಕೊಡಗು ಜಿಲ್ಲೆಯ ಗೋಣಿಕೊಪ್ಪದ ಹೊಂಬಾಳಯ್ಯ, ತ್ರಿವೇಣಿ ದಂಪತಿ ಪುತ್ರಿ ಯಶಸ್ಮಿತ ಹಾಗೂ ತಮಿಳುನಾಡಿನ ಮೆಟ್ಟುಪಾಳ್ಯಂ ನಿವಾಸಿ ಶಕ್ತಿವೇಲು-ಲತಾ ದಂಪತಿ ಪುತ್ರ ಸತೀಶ್ ಕುಮಾರ್ ಗಡಿ ದಾಟದೆ ಮದುವೆ ಮಾಡಿಕೊಂಡಿದ್ದಾರೆ.

    ಕೊರೊನಾ ಲಾಕ್‍ಡೌನ್ 4.0 ನಲ್ಲಿ ಅಂತರ್ ರಾಜ್ಯಗಳ ಪ್ರವೇಶಕ್ಕೆ ನಿರ್ಬಂಧ ಇದೆ. ಹೀಗಾಗಿ ಗಡಿಯಲ್ಲಿರುವ ಗಣೇಶ ಗುಡಿಯಲ್ಲಿ ವರ ತಮಿಳುನಾಡು ಗಡಿದಾಟದೆ, ವಧು ಕರ್ನಾಟಕ ಗಡಿ ದಾಟದೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

    ಅಂತರ್ ರಾಜ್ಯ ಪ್ರವೇಶ ಅನುಮತಿ ನಿರಾಕರಣೆ ಮಾಡಿದ ಹಿನ್ನೆಲೆಯಲ್ಲಿ ಗಡಿಗೆ ಬಂದ ಜೋಡಿ ಮತ್ತು ಪೋಷಕರು ಬಾರ್ಡರ್‌ನಲ್ಲೇ ವಿವಾಹ ನಡೆಸಿದ್ದಾರೆ. ಬಳಿಕ ತಮ್ಮ ತಮ್ಮ ತವರಿಗೆ ತೆರಳಿದ್ದಾರೆ. ಈ ಮದುವೆಗೆ ಚೆಕ್ ಪೋಸ್ಟ್ ನ ಕರ್ತವ್ಯ ನಿರತ ಸಿಬ್ಬಂದಿ ಸಾಕ್ಷಿಯಾದರು.

    ಸಾಮಾಜಿಕ ಅಂತರ ಕಾಯ್ದುಕೊಂಡು, ಮಾಸ್ಕ್ ಧರಿಸಿ ನಿಗದಿ ಪಡಿಸಿದ ದಿನಾಂಕದಂದು ಸಾಂಸಾರಿಕ ಜೀವನಕ್ಕೆ ಈ ಇಬ್ಬರು ಅಂತರ್ ರಾಜ್ಯ ಜೋಡಿಗಳು ಕಾಲಿಟ್ಟು ಎಲ್ಲರ ಗಮನ ಸೆಳೆದಿದ್ದಾರೆ.