Tag: ಬಾಲಕರು

  • ಹಾವೇರಿ | ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರುಪಾಲು

    ಹಾವೇರಿ | ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರುಪಾಲು

    ಹಾವೇರಿ: ಕೆರೆಗೆ (Lake) ಈಜಲು ತೆರಳಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಹಾವೇರಿ (Haveri) ಜಿಲ್ಲೆ ಶಿಗ್ಗಾಂವಿ (Shiggaon) ತಾಲೂಕಿನ ಅತ್ತಿಗೇರಿ ಗ್ರಾಮದಲ್ಲಿ ನಡೆದಿದೆ.

    ಮೃತರನ್ನು ಪ್ರಜ್ವಲ್ ದೇವರಮನಿ (15) ಮತ್ತು ಸನತ್ ಭೂಸರೆಡ್ಡಿ (14) ಎಂದು ಗುರುತಿಸಲಾಗಿದೆ. ಸೈಕಲ್ ತೆಗೆದುಕೊಂಡು ಕೆರೆಗೆ ಈಜಲು ಹೋಗಿದ್ದ ಬಾಲಕರು ಸೈಕಲ್ ಅನ್ನು ಕೆರೆಯ ದಡದಲ್ಲಿ ಬಿಟ್ಟು ಈಜಲು ತೆರಳಿದ್ದಾರೆ. ನೀರಿಗಿಳಿದ ಸಂದರ್ಭ ಈಜಲು ಬಾರದೇ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಕೆರೆಯ ದಡದಲ್ಲಿ ಸೈಕಲ್ ಹಾಗೂ ಬಟ್ಟೆಗಳು ಇರುವುದನ್ನು ಗಮನಿಸಿದ ಸ್ಥಳೀಯರು ಕೆರೆಯಲ್ಲಿ ಬಾಲಕರು ಮೃತಪಟ್ಟಿರುವುದನ್ನು ಖಚಿತಪಡಿಸಿಕೊಂಡಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಸ್ಥಳೀಯರು ಓರ್ವ ಬಾಲಕನ ಮೃತದೇಹ ಕೆರೆಯಿಂದ ಹೊರತೆಗೆದಿದ್ದಾರೆ. ಇದನ್ನೂ ಓದಿ: ನಾನು, ಟ್ರಂಪ್, ಮೋದಿ ಒಂದಾದ್ರೆ ಪ್ರಜಾಸತ್ತೆಗೆ ಬೆದರಿಕೆ ಹೇಗಾಗುತ್ತೆ?: ಮೆಲೋನಿ ಪ್ರಶ್ನೆ

    ಘಟನಾ ಸ್ಥಳಕ್ಕೆ ಶಿಗ್ಗಾಂವಿ ತಹಶೀಲ್ದಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೆರೆಯಲ್ಲಿ ಪ್ರಜ್ವಲ್ ಮೃತದೇಹ ಪತ್ತೆಯಾಗಿದ್ದು, ಇನ್ನೋರ್ವ ಬಾಲಕನ ಮೃತದೇಹ ಪತ್ತೆಗೆ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಸ್ಥಳಕ್ಕೆ ಹುಲಗೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹುಲಗೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ. ಇದನ್ನೂ ಓದಿ: ಭಾರತದಲ್ಲಿ ಮತದಾನಕ್ಕೆ ಅಮೆರಿಕ ದೇಣಿಗೆ ನೀಡಿಲ್ಲ, 7 ಯೋಜನೆಗಳಿಗಷ್ಟೇ ಧನಸಹಾಯ – ಹಣಕಾಸು ಸಚಿವಾಲಯ

  • ಮಂಡ್ಯ| ಈಜು ಬಾರದೇ ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರ ದುರ್ಮರಣ

    ಮಂಡ್ಯ| ಈಜು ಬಾರದೇ ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರ ದುರ್ಮರಣ

    ಮಂಡ್ಯ: ಈಜಲೆಂದು (Swim) ಕೆರೆಗೆ ತೆರಳಿದ್ದ ಇಬ್ಬರು ಬಾಲಕರು ಈಜು ಬಾರದೇ ಕೆರೆಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಮಂಡ್ಯ (Mandya) ಜಿಲ್ಲೆ ಮದ್ದೂರು (Maddur) ತಾಲೂಕಿನ ದೇಶಹಳ್ಳಿ ಗ್ರಾಮದಲ್ಲಿ ನಡೆದಿದೆ.

    ಶಂಕರಪುರ ಗ್ರಾಮದ ಸೋಮು (14) ಹಾಗೂ ಮುತ್ತುರಾಜು (17) ಮೃತ ಬಾಲಕರು. ಕೆರೆಯಲ್ಲಿ ಈಜು ಹೊಡೆಯಲೆಂದು ಐವರು ಸ್ನೇಹಿತರು ಕೆರೆಗೆ ತೆರಳಿದ್ದರು. ಈ ವೇಳೆ ಈಜು ಬಾರದೇ ಸೋಮು ಹಾಗೂ ಮುತ್ತುರಾಜು ಕೆರೆಯ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಕೆರೆಯಲ್ಲಿ ಮುಳುಗಿದ ಇಬ್ಬರ ಪೈಕಿ ಮುತ್ತುರಾಜು ಮೃತದೇಹ ಪತ್ತೆಯಾಗಿದೆ. ಇದನ್ನೂ ಓದಿ: ಸಂಡೂರು ಬಿಜೆಪಿಯಲ್ಲಿ ಬಂಡಾಯದ ಹೊಗೆ – ಸಂಧಾನಕ್ಕೂ ಬಗ್ಗದ ಟಿಕೆಟ್ ವಂಚಿತ ದಿವಾಕರ್

    ಸೋಮು ಮೃತದೇಹಕ್ಕಾಗಿ ಶೋಧಕಾರ್ಯ ಮುಂದುವರಿದಿದೆ. ಭಾನುವಾರ ಸಂಜೆ ಘಟನೆ ನಡೆದಿದೆ. ಈ ಸಂಬಂಧ ಬೆಸಗರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಭಾರೀ ಮಳೆ; ಬೆಂಗಳೂರಿನ ಶಾಲೆಗಳಿಗೆ ಇಂದು ರಜೆ ಘೋಷಣೆ

  • ಕುರ್ಕುರೆ, ಬಿಸ್ಕೆಟ್‌ ಪ್ಯಾಕ್‌ ಕದ್ದ ಆರೋಪ – ಬಾಲಕರನ್ನ ಕಂಬಕ್ಕೆ ಕಟ್ಟಿ ಥಳಿಸಿದ ಮಾಲೀಕನ ವಿರುದ್ಧ ಕೇಸ್‌

    ಕುರ್ಕುರೆ, ಬಿಸ್ಕೆಟ್‌ ಪ್ಯಾಕ್‌ ಕದ್ದ ಆರೋಪ – ಬಾಲಕರನ್ನ ಕಂಬಕ್ಕೆ ಕಟ್ಟಿ ಥಳಿಸಿದ ಮಾಲೀಕನ ವಿರುದ್ಧ ಕೇಸ್‌

    ಪಾಟ್ನಾ: ದಿನಸಿ ಅಂಗಡಿಯೊಂದರಲ್ಲಿ ಕುರ್ಕುರೆ, ಬಿಸ್ಕೆಟ್‌ (Kurkure, Biscuits) ಪ್ಯಾಕೆಟ್‌ಗಳನ್ನು ಕದ್ದ ಆರೋಪದ ಮೇಲೆ ನಾಲ್ವರು ಬಾಲಕರನ್ನು ಕಂಬಕ್ಕೆ ಕಟ್ಟಿ ಥಳಿಸಿರುವ ಅಮಾನವೀಯ ಘಟನೆ ಬಿಹಾರದ (Bihar) ಬೇಗುಸರಾಯ್ ಜಿಲ್ಲೆಯಲ್ಲಿ ನಡೆದಿದೆ.

    ಇದೇ ಅಕ್ಟೋಬರ್‌ 28 ರಂದು ಘಟನೆ ನಡೆದಿದ್ದು, ಬೀರ್‌ಪುರದ ಫಜಿಲ್‌ಪುರ ಗ್ರಾಮದಲ್ಲಿ ಘಟನೆ ನಡೆದಿದ್ದು, ಸಾಮಾಜಿಕ ಜಾಲತಾಣದಲ್ಲಿ (Social Media) ವೀಡಿಯೋ ವೈರಲ್‌ ಆದ ಬಳಿಕ ಘಟನೆ ಬೆಳಕಿಗೆ ಬಂದಿದೆ.

    ವೀಡಿಯೋದಲ್ಲಿ ಜನ ಸಮೂಹದ ಅಂಗಡಿ ಮಾಲೀಕ ನಾಲ್ಕು ಬಾಲಕರನ್ನು ಕಂಬಕ್ಕೆ ಕಟ್ಟಿ ಥಳಿಸಿರುವುದನ್ನು ಕಾಣಬಹುದಾಗಿದೆ. ಘಟನೆ ಬೆಳಕಿಗೆ ಬಂದ ನಂತರ ಅಂಗಡಿ ಮಾಲೀಕನ ವಿರುದ್ಧ ಪೊಲೀಸರು (Bihar Police) ಪ್ರಕರಣ ದಾಖಲಿಸಿದ್ದಾರೆ. ಆದ್ರೆ ಈವರೆಗೆ ಬಂಧಿಸಿಲ್ಲ. ಇದನ್ನೂ ಓದಿ: ಮುಕೇಶ್‌ ಅಂಬಾನಿಗೆ 3ನೇ ಬಾರಿಗೆ ಕೊಲೆ ಬೆದರಿಕೆ – ಬೇಡಿಕೆ ಮೊತ್ತ 400 ಕೋಟಿಗೆ ಏರಿಕೆ

    ಪ್ರಕರಣ ದಾಖಲಿಸಿಕೊಂಡ ಬಳಿಕ ತನಿಖೆ ನಡೆಸುವ ಸಮಯದಲ್ಲಿ ಕೆಲ ಹುಡುಗರು ಅಂಗಡಿಯಿಂದ ಕಳ್ಳತನ ಮಾಡುತ್ತಿರುವುದು ಕಂಡುಬಂದಿದೆ. ಕಳ್ಳತನ ಮಾಡುವಾಗ ಅಂಗಡಿ ಮಾಲೀಕನಿಗೆ ಸಿಕ್ಕಿಬಿದ್ದು ಥಳಿಕಕ್ಕೊಳಗಾಗಿದ್ದಾರೆ. ಒಟ್ಟಿನಲ್ಲಿ ಅಂಗಡಿಯವನು ಥಳಿಸಿದ್ದು, ದೊಡ್ಡ ತಪ್ಪು ಮತ್ತು ಅಮಾನವೀಯ ಎಂದು ಬೇಗುಸರೈ ಎಸ್ಪಿ ಯೋಗೇಂದ್ರ ಕುಮಾರ್ ತಿಳಿಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‌ನಲ್ಲಿ 50 ಜನ ಸಿಎಂ ಅಭ್ಯರ್ಥಿಗಳಿದ್ದಾರೆ, ಯಾರು ಸಿಎಂ ಆದ್ರೂ ತಪ್ಪಿಲ್ಲ: ಚೆನ್ನಾರೆಡ್ಡಿ ಪಾಟೀಲ್

    ಅಂಗಡಿ ಮಾಲೀಕನ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಕುಟುಂಬಸ್ಥರೂ ಒತ್ತಾಯಿಸಿದ್ದಾರೆ. ಆದ್ರೆ ಈವರೆಗೆ ಲಿಖಿತ ದೂರು ನೀಡಿಲ್ಲ. ಬೀರ್‌ಪುರ ಪೊಲೀಸ್ ಠಾಣೆ ಸಂಪರ್ಕಿಸಿ ದೂರು ದಾಖಲಿಸುವಂತೆ ನಾವು ಕುಟುಂಬಸ್ಥರಿಗೆ ತಿಳಿಸಿದ್ದೇವೆ. ಅವರು ದೂರು ನೀಡಿದ ನಂತರವೇ ಮುಂದಿನ ಕ್ರಮ ಜರುಗಿಸುತ್ತೇವೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಬೃಹತ್‌ ಜಯದ ನಿರೀಕ್ಷೆಯಲ್ಲಿ ಪಾಕಿಸ್ತಾನ – ಸೆಮಿಸ್‌ ಹಾದಿಯ ಲೆಕ್ಕಾಚಾರ ಏನು?

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕೆರೆಯಲ್ಲಿ ಈಜಲು ಹೋಗಿದ್ದ ಬಾಲಕರು ನೀರಿನಲ್ಲಿ ಮುಳುಗಿ ಸಾವು

    ಕೆರೆಯಲ್ಲಿ ಈಜಲು ಹೋಗಿದ್ದ ಬಾಲಕರು ನೀರಿನಲ್ಲಿ ಮುಳುಗಿ ಸಾವು

    ತುಮಕೂರು: ಕೆರೆಯಲ್ಲಿ (Lake) ಈಜಲು ಹೋದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ತುಮಕೂರು (Tumakuru) ಜಿಲ್ಲೆಯ ಚಿಕ್ಕನಾಯಕನಹಳ್ಳಿ (Chikkanayakanahalli) ತಾಲೂಕಿನ ತಿಮ್ಮನಹಳ್ಳಿಯಲ್ಲಿ ನಡೆದಿದೆ.

    ರಾಕೇಶ್ (14), ಧನುಷ್ (15) ಮೃತ ಬಾಲಕರು. ರಾಕೇಶ್ ತಿಮ್ಮನಹಳ್ಳಿ ಗ್ರಾಮದ ತಿಮ್ಮರಾಜು ಎಂಬವರ ಪುತ್ರನಾಗಿದ್ದು, ಧನುಷ್ ಶಾಂಕೇಶ್ ಎಂಬವರ ಮಗ. ರಾಕೇಶ್ ಹಾಗೂ ಧನುಷ್ ಭಾನುವಾರ ಬೆಳಗ್ಗೆ ಕಂಟಲಗೆರೆ ಕೆರೆಯಲ್ಲಿ ಈಜಲು ಹೋಗಿದ್ದರು. ಈ ವೇಳೆ ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಹುಚ್ಚುನಾಯಿ ದಾಳಿ – ಗಂಭೀರ ಗಾಯಗಳಾಗಿ 13 ಮಂದಿ ಆಸ್ಪತ್ರೆಗೆ ದಾಖಲು

    ಘಟನಾ ಸ್ಥಳಕ್ಕೆ ಚಿಕ್ಕನಾಯಕನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೆರೆಯಿಂದ ಮೃತದೇಹಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಚಿಕ್ಕನಾಯಕನಹಳ್ಳಿ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ. ಮಕ್ಕಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಇದನ್ನೂ ಓದಿ: ವಿವಾಹಿತೆಯೊಂದಿಗೆ ಪ್ರೇಮ; ಮದುವೆ ಬೇಡವೆಂದು ಹಲ್ಲೆ ನಡೆಸಿದ ಪ್ರೇಮಿ ಜೈಲು ಪಾಲು – ಮುಂದೇನಾಯ್ತು?

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮಳೆಗಾಗಿ ಮಕ್ಕಳ ಮದುವೆ ಮಾಡಿಸಿದ ಗ್ರಾಮಸ್ಥರು

    ಮಳೆಗಾಗಿ ಮಕ್ಕಳ ಮದುವೆ ಮಾಡಿಸಿದ ಗ್ರಾಮಸ್ಥರು

    ಚಿಕ್ಕಬಳ್ಳಾಪುರ: ಮಳೆಗಾಗಿ ಮಕ್ಕಳ (Children) ಅಣಕು ಮದುವೆ (Mock Wedding) ಮಾಡಿಸಿರೋ ಘಟನೆ ಚಿಕ್ಕಬಳ್ಳಾಪುರ (Chikkaballapur) ಜಿಲ್ಲೆಯ ಮಗಳಕೊಪ್ಪೆ ಗ್ರಾಮದಲ್ಲಿ ತಡರಾತ್ರಿ ನಡೆದಿದೆ.

    ಗ್ರಾಮದ ಇಬ್ಬರು ಬಾಲಕರಲ್ಲಿ ಒಬ್ಬ ಹುಡುಗನಿಗೆ ವಧು ವೇಷ ಹಾಕಿ ಮತ್ತೋರ್ವ ಹುಡುಗನಿಗೆ ವರನ ಪೋಷಾಕು ಹಾಕಿ ಶಾಸ್ತ್ರೋಕ್ತವಾಗಿ ಅರ್ಚಕರ ನೇತೃತ್ವದಲ್ಲಿ ಅಣಕು ಮದುವೆ ಮಾಡುವ ಮೂಲಕ ಮಳೆಗಾಗಿ ಗ್ರಾಮಸ್ಥರು ಮೊರೆಯಿಟ್ಟಿದ್ದಾರೆ.

    ಗ್ರಾಮದ ಮಧ್ಯಭಾಗದ ಬೀದಿಯಲ್ಲಿ ಮಹಿಳೆಯರೆಲ್ಲ ಕೂತು ಸೋಬಾನೆ ಗೀತೆ ಹಾಡಿ ಮದುವೆಯಲ್ಲಿ ಭಾಗಿಯಾಗಿದ್ದಾರೆ. ಚಿಕ್ಕ ಬಾಲಕರು ಥೇಟ್ ವರ-ವಧುವಿನಂತೆ ಕಂಗೊಳಿಸಿದ್ದಾರೆ. ವರನ ಪೋಷಾಕುನಲ್ಲಿದ್ದ ಬಾಲಕ ವಧು ವೇಷದಲ್ಲಿದ್ದ ಮತ್ತೋರ್ವ ಬಾಲಕನಿಗೆ ಅರಿಶಿನ ಕೊಂಬು (ತಾಳಿ) ಕಟ್ಟುವ ಮೂಲಕ ಮದುವೆ ಮಾಡಲಾಗಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ರೈಲಿಗೆ ಬೆಂಕಿ ಆಕಸ್ಮಿಕ ಅಲ್ಲ, ಮಾನವ ಕೃತ್ಯದ ಶಂಕೆ

    ಅಂದಹಾಗೆ ಮಳೆ ಬಾರದಂತಹ ಸಂದರ್ಭದಲ್ಲಿ ಈ ರೀತಿ ಮಕ್ಕಳಿಗೆ ಮದುವೆ ಮಾಡಿಸಿ ಮಳೆಗಾಗಿ ಪ್ರಾರ್ಥಿಸಿದರೆ ಮಳೆ ಬರುತ್ತದೆ ಎನ್ನುವ ನಂಬಿಕೆ ಜನರದ್ದು. ಹೀಗಾಗಿ ಮಕ್ಕಳ ಮದುವೆ ಮಾಡಿಸಲಾಗಿದೆ.

    ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಈ ಬಾರಿ ನೀರಿಕ್ಷಿಸಿದಷ್ಟು ಮಳೆ ಬಾರದೆ ಇದ್ದುದರಿಂದ ರಾಗಿ, ಮೆಕ್ಕೆಜೋಳ, ಅವರೆ, ತೊಗರಿ ಸೇರಿದಂತೆ ಮಳೆಯಾಶ್ರಿತ ಬೆಳೆಗಳೆಲ್ಲವೂ ಒಣಗಿ ಬಾಡಿ ಹೋಗುತ್ತಿವೆ. ಹೀಗಾಗಿ ಅನ್ನದಾತರು ಆಕಾಶದತ್ತ ಮುಖ ಮಾಡಿ ಮಳೆ ಯಾವಾಗ ಬರುತ್ತದೆ ಎಂದು ಕಾದು ನೋಡುವಂತಾಗಿದೆ. ಮಳೆಗಾಗಿ ಹಾತೊರೆಯುತ್ತಿರುವ ಜನರು ಹಳೆಯ ಸಂಪ್ರದಾಯಗಳ ಮೊರೆ ಹೋಗಿದ್ದಾರೆ. ಇದನ್ನೂ ಓದಿ: ಪ್ರವಾಸಿಗರೇ ಎಚ್ಚರ, ಕಾಫಿನಾಡ ನಾನ್ ವೆಜ್ ಹೋಟೆಲ್‍ನಲ್ಲಿ ಕುರಿ ಬದಲು ದನದ ಮಾಂಸದ ಬಿರಿಯಾನಿ!

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮೂವರು ಅಪ್ರಾಪ್ತರಿಂದಲೇ 12ರ ಬಾಲಕನ ಭೀಕರ ಹತ್ಯೆ – ತಲೆಗೆ ಜಜ್ಜಿ ಕತ್ತು ಸೀಳಿದ್ರು

    ಮೂವರು ಅಪ್ರಾಪ್ತರಿಂದಲೇ 12ರ ಬಾಲಕನ ಭೀಕರ ಹತ್ಯೆ – ತಲೆಗೆ ಜಜ್ಜಿ ಕತ್ತು ಸೀಳಿದ್ರು

    ಭೋಪಾಲ್: 12 ವರ್ಷದ ಬಾಲಕನನ್ನು (Boy) ಆತನ ಮೂವರು ಗೆಳೆಯರೇ ಸೈಕಲ್ ಸರಪಳಿಯಿಂದ ಕತ್ತು ಹಿಸುಕಿ, ತಲೆಗೆ ಕಲ್ಲಿನಿಂದ ಜಜ್ಜಿ, ಚಾಕುವಿನಿಂದ ಕತ್ತು ಸೀಳಿ ಭೀಕರವಾಗಿ ಹತ್ಯೆ (Murder) ನಡೆಸಿರುವ ಆಘಾತಕಾರಿ ಘಟನೆ ಮಧ್ಯಪ್ರದೇಶದ (Madhya Pradesh) ಸಿಯೋನಿ ಜಿಲ್ಲೆಯಲ್ಲಿ ನಡೆದಿದೆ.

    ಘಟನೆ ಭಾನುವಾರ ನಡೆದಿದ್ದು, ಸಿಯೋನಿ ಸಮೀಪದ ಮಗರ್ಕಥಾ ಗ್ರಾಮದಲ್ಲಿ ನಡೆದಿದೆ. ಮೂವರು ಆರೋಪಿಗಳೂ ಅಪ್ರಾಪ್ತರಾಗಿದ್ದು (Minors) ಹತ್ಯೆ ನಡೆಸಿದ ಬಳಿಕ ಗೆಳೆಯನ ಶವವನ್ನು ಪಾಲಿಥಿನ್ ಚೀಲದಲ್ಲಿ ತುಂಬಿ ಎಸೆದಿದ್ದಾಗಿ ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

    ಆರೋಪಿ ಬಾಲಕರು ಕ್ರಮವಾಗಿ 16, 14 ಹಾಗೂ 11 ವರ್ಷ ವಯಸ್ಸಿನವರಾಗಿದ್ದಾರೆ. 16 ವರ್ಷದ ಆರೋಪಿ 12 ವರ್ಷದ ಬಾಲಕನ ಸಹೋದರಿಯೊಂದಿಗೆ ಮಾತನಾಡಲು ಪ್ರಯತ್ನಿಸಿದಾಗ ಅವರಿಬ್ಬರ ನಡುವೆ ವಾಗ್ವಾದ ನಡೆದಿದೆ. ಜಗಳ ಕೊನೆಗೆ ಭೀಕರ ಕೊಲೆಯಲ್ಲಿ ಅಂತ್ಯಗೊಂಡಿದೆ.

    ವರದಿಗಳ ಪ್ರಕಾರ 16 ವರ್ಷದ ಆರೋಪಿ ಬಾಲಕ ತನ್ನ ಇನ್ನಿಬ್ಬರು ಸ್ನೇಹಿತರನ್ನು ಸೇರಿಸಿಕೊಂಡು ಸಂತ್ರಸ್ತ ಬಾಲಕನನ್ನು ನಿರ್ಜನ ಪ್ರದೇಶಕ್ಕೆ ಕರೆದಿದ್ದಾರೆ. ಅಲ್ಲಿ ಅವರು ಬಾಲಕನಿಗೆ ಸೈಕಲ್ ಚೈನ್‌ನಿಂದ ಕತ್ತು ಹಿಸುಕಿದ್ದಾರೆ. ಆತ ನೋವಿನಿಂದ ಅಳಲು ಪ್ರಾರಂಭಿಸಿದಾಗ ದೊಡ್ಡ ಕಲ್ಲಿನಿಂದ ಆತನ ತಲೆಯನ್ನು ಚಚ್ಚಿದ್ದಾರೆ. ಬಳಿಕ ಹರಿತವಾದ ಚಾಕುವಿನಿಂದ ಆತನ ಗಂಟಲನ್ನು ಸೀಳಿದ್ದಾರೆ.

    ಬಳಿಕ ಬಾಲಕನ ಶವವನ್ನು ಪಾಲಿಥಿನ್ ಚೀಲದಲ್ಲಿ ತುಂಬಿ ಮನೆಯ ಸಮೀಪ ಕಲ್ಲಿನ ರಾಶಿಯಲ್ಲಿ ಎಸೆದಿದ್ದಾರೆ. ಮಹಿಳೆಯೊಬ್ಬರು ರಕ್ತದ ಕಲೆಯುಳ್ಳ ಚೀಲವನ್ನು ಪತ್ತೆ ಮಾಡಿದ್ದು, ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ ಬಳಿಕ ಘಟನೆ ಬೆಳಕಿಗೆ ಬಂದಿದೆ. ಇದನ್ನೂ ಓದಿ: ಮೊದಲ ಮತದಾನಕ್ಕೆ ಬಂದು ಸಾವು ಬದುಕಿನ ಮಧ್ಯೆ ಹೋರಾಡುತ್ತಿರುವ ವಿದ್ಯಾರ್ಥಿನಿ

    ಮೂವರು ಅಪ್ರಾಪ್ತ ಆರೋಪಿಗಳನ್ನು ಇದೀಗ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಅವರನ್ನು 14 ದಿನಗಳ ಕಾಲ ಬಾಲಾಪರಾಧಿಗಳ ಸುಧಾರಣಾ ಗೃಹಕ್ಕೆ ಕಳುಹಿಸಲಾಗಿದೆ. ಇದನ್ನೂ ಓದಿ: ಬಿಜೆಪಿಗೆ ವೋಟ್ ಹಾಕಿದ್ದಕ್ಕೆ ಹಲ್ಲೆ ಆರೋಪಕ್ಕೆ ಟ್ವಿಸ್ಟ್ – ಉಲ್ಟಾ ಹೊಡೆದ ಆಟೋ ಚಾಲಕ

  • ಮೀನು ಹಿಡಿಯಲು ಹೋಗಿ ಬಾಲಕರಿಬ್ಬರ ದಾರುಣ ಸಾವು

    ಮೀನು ಹಿಡಿಯಲು ಹೋಗಿ ಬಾಲಕರಿಬ್ಬರ ದಾರುಣ ಸಾವು

    ರಾಮನಗರ: ಕೆರೆಗೆ ಮೀನು ಹಿಡಿಯಲು ಹೋಗಿದ್ದ ಮೂವರ ಪೈಕಿ ಇಬ್ಬರು ಮಕ್ಕಳು ನೀರು ಪಾಲಾಗಿರುವ ದಾರುಣ ಘಟನೆ ಹಾರೋಹಳ್ಳಿಯ (Harohalli) ಮಾರಸಂದ್ರ ಗ್ರಾಮದಲ್ಲಿ ನಡೆದಿದೆ.

    ಮೃತಪಟ್ಟ ಬಾಲಕರನ್ನು ಪಟ್ಟಣದ ಸರ್ಕಲ್ ನಿವಾಸಿಗಳಾದ ಇಸ್ಮಾಯಿಲ್(13) ಮತ್ತು ಆಫ್ರಿದ್(12) ಎಂದು ಗುರುತಿಸಲಾಗಿದೆ. ಬೇಸಿಗೆ ರಜೆಯ ಹಿನ್ನೆಲೆಯಲ್ಲಿ ಮೀನು ಹಿಡಿಯುವ ಆಸೆಯಿಂದ ಪಟ್ಟಣದ ಮಸೀದಿ ಸರ್ಕಲ್ ನಿವಾಸಿಗಳಾದ ಮೂವರು ಬಾಲಕರು ಮಾರಸಂದ್ರ ಕೆರೆಯಲ್ಲಿ ಮೀನು ಹಿಡಿಯಲು ತೆರಳಿದ್ದಾರೆ. ಈ ವೇಳೆ ಒಬ್ಬ ಬಾಲಕ ಕೆರೆಯಲ್ಲಿದ್ದ ಸತ್ತೆಗೆ ಸಿಲುಕಿ ಮುಳುಗುವುದನ್ನು ಕಂಡು ಮತ್ತೊಬ್ಬ ಬಾಲಕ ಆತನನ್ನು ರಕ್ಷಿಸಲು ತೆರಳಿದ್ದಾನೆ. ಇದನ್ನು ಕಂಡ ಇನ್ನೊಬ್ಬ ಬಾಲಕ ಭಯಗೊಂಡು ಓಡಿದ್ದಾನೆ. ಈ ವೇಳೆ ಪಕ್ಕದಲ್ಲೇ ಕೆಲಸ ಮಾಡುತ್ತಿದ್ದ ಕೆಲವರು ರಕ್ಷಣೆಗಾಗಿ ಓಡೋಡಿ ಬಂದಿದ್ದಾರೆ. ಆದರೆ ಅಷ್ಟರಲ್ಲೇ ಬಾಲಕರಿಬ್ಬರ ಪ್ರಾಣಪಕ್ಷಿ ಹಾರಿ ಹೋಗಿದೆ. ಇದನ್ನೂ ಓದಿ: ಹೆಂಡತಿ ಇಬ್ಬರು ಮಕ್ಕಳನ್ನು ಕೊಲೆಗೈದು ವ್ಯಕ್ತಿ ನೇಣಿಗೆ ಶರಣು 

    ಈ ಸಂಬಂಧ ಸ್ಥಳೀಯರು ಪೊಲೀಸ್ ಠಾಣೆಗೆ ವಿಷಯ ಮುಟ್ಟಿಸಿದ್ದು, ಪೊಲೀಸರು ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ (Fire Brigade) ಸಿಬ್ಬಂದಿಗಳ ಸಹಾಯದಿಂದ ಬಾಲಕರಿಬ್ಬರ ಶವವನ್ನು ಹೊರತೆಗೆದಿದ್ದಾರೆ. ಮೃತ ಬಾಲಕರ ಪೋಷಕರು ಮೆಕ್ಕಾ ಮದೀನ ತೀರ್ಥಯಾತ್ರೆಗೆ ತೆರಳಿದ್ದು, ಸಾರ್ವಜನಿಕರು ಘಟನೆ ಕುರಿತು ಮರುಕ ವ್ಯಕ್ತಪಡಿಸಿದ್ದಾರೆ.

    ಈ ಕುರಿತು ಹಾರೋಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: 100 ವರ್ಷದ ಹಳೆಯ ಮರ ಶೆಡ್ ಮೇಲೆ ಬಿದ್ದು 7 ಮಂದಿ ದಾರುಣ ಸಾವು

  • ಪಾರಿವಾಳ ಹಿಡಿಯಲು ಹೋಗಿ ಮಕ್ಕಳಿಬ್ಬರಿಗೆ ಕರೆಂಟ್ ಶಾಕ್ – ಸ್ಥಿತಿ ಚಿಂತಾಜನಕ

    ಪಾರಿವಾಳ ಹಿಡಿಯಲು ಹೋಗಿ ಮಕ್ಕಳಿಬ್ಬರಿಗೆ ಕರೆಂಟ್ ಶಾಕ್ – ಸ್ಥಿತಿ ಚಿಂತಾಜನಕ

    ಬೆಂಗಳೂರು: ಹೈಟೆನ್ಷನ್ ಲೈನ್ ಮೇಲೆ ಕುಳಿತಿದ್ದ ಪಾರಿವಾಳವನ್ನು (Pigeon) ಹಿಡಿಯಲು ಹೋಗಿ ಇಬ್ಬರು ಮಕ್ಕಳಿಗೆ (Children) ಕರೆಂಟ್ ಶಾಕ್ (Electric Shock) ತಗುಲಿ ಸಾವು ಬದುಕಿನ ನಡುವೆ ಮಕ್ಕಳು ಹೋರಾಡುತ್ತಿರುವ ಘಟನೆ ಬೆಂಗಳೂರಿನ (Bengaluru) ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

    ವಿಜಯನಾಂದನಗರದ ಚಂದ್ರು ಹಾಗೂ ಸುಪ್ರೀತ್ ಗುರುವಾರ ಸಂಜೆ ಶಾಲೆ ಮುಗಿಸಿಕೊಂಡು ಬಂದಿದ್ದ ವೇಳೆ ದುರ್ಘಟನೆ ನಡೆದಿದೆ. ಮನೆ ಮಾಲೀಕರು ಮಹಡಿಯನ್ನು ಹತ್ತಬೇಡಿ ಎಂಬ ಎಚ್ಚರಿಕೆಯನ್ನು ನೀಡಿದ್ದರೂ ಕೂಡಾ ಮಕ್ಕಳು ಪಾರಿವಾಳದ ಆಸೆಗೆ ಮನೆ ಮೇಲೆ ಹತ್ತಿದ್ದಾರೆ. ಈ ವೇಳೆ ಮಕ್ಕಳು ಕಬ್ಬಿಣದ ರಾಡ್‌ನಿಂದ ಹೈಟೆನ್ಷನ್ ವೈರ್ ಅನ್ನು ಮುಟ್ಟಿದ್ದಾರೆ. ಈ ವೇಳೆ ಮಕ್ಕಳಿಗೆ ಕರೆಂಟ್ ಶಾಕ್ ತಗುಲಿದೆ. ಇದನ್ನೂ ಓದಿ: ನನಗೆ ಸರ್ವಿಸ್‌ ಕೊಡ್ತೀರಾ, ದಿನಕ್ಕೆ 50 ಸಾವಿರ ರೂ. ಕೊಡ್ತೀನಿ – ಲೆಟರ್ ಬರೆದು ಮಹಿಳೆಗೆ ಲೈಂಗಿಕ ಕಿರುಕುಳ

    ಮಕ್ಕಳಿಗೆ ಕರೆಂಟ್ ಶಾಕ್ ತಗುಲುವ ವೇಳೆ ಅದರ ತೀವ್ರತೆ ಎಷ್ಟಿತ್ತು ಎಂದರೆ, ಮನೆಯಲ್ಲಿದ್ದ ವಿದ್ಯುತ್ ಉಪಕರಣಗಳೆಲ್ಲವೂ ಬ್ಲಾಸ್ಟ್ ಆಗಿವೆ. ಇಬ್ಬರು ಬಾಲಕರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರಿಬ್ಬರ ಸ್ಥಿತಿ ಗಂಭೀರವಾಗಿದೆ. ಸುಪ್ರೀತ್‌ಗೆ ಕರೆಂಟ್ ಶಾಕ್‌ನಿಂದಾಗಿ ದೇಹದಲ್ಲಿ ಶೇ.70 ರಷ್ಟು ಸುಟ್ಟ ಗಾಯಗಳಾಗಿವೆ. ಚಂದ್ರುಗೆ ಶೇ.90 ರಷ್ಟು ಗಾಯಗಳಾಗಿವೆ. ಇದನ್ನೂ ಓದಿ: ಗಂಡನ ಅಕ್ರಮ ಸಂಬಂಧಕ್ಕೆ ಬೇಸತ್ತು ಮೂರು ಮಕ್ಕಳಿಗೆ ವಿಷ ಹಾಕಿ ಮಹಿಳೆ ನೇಣಿಗೆ ಶರಣು

    ಬಾಲಕರಿಬ್ಬರಿಗೂ ಇದೀಗ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ ಬಾಲಕರ ಪೋಷಕರು ತಾವು ಕೂಲಿ ಕೆಲಸಗಾರರು, ನಾವು ಬಡವರು. ನಮ್ಮ ಮಕ್ಕಳು ಉಳಿದರೆ ಸಾಕು ಎಂದು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಮುರುಘಾ ಮಠದಿಂದ ಇಬ್ಬರು ಬಾಲಕರು ನಾಪತ್ತೆ

    ಮುರುಘಾ ಮಠದಿಂದ ಇಬ್ಬರು ಬಾಲಕರು ನಾಪತ್ತೆ

    ಚಿತ್ರದುರ್ಗ: ಲೈಂಗಿಕ ಕಿರುಕುಳದ ಆರೋಪದ ಮೇಲೆ ಕಾನೂನು ಹೋರಾಟ ನಡೆಸುತ್ತಿರುವ ಮುರುಘಾ ಶ್ರೀಗಳಿಗೆ (Murugha Shri) ಈಗ ಮತ್ತೊಂದು ಸಂಕಷ್ಟ ಎದುರಾಗಿದೆ. ಮುರುಘಾ ಮಠದಿಂದ (Murugha Mutt) ಇಬ್ಬರು ಬಾಲಕರು ನಾಪತ್ತೆಯಾಗಿದ್ದಾರೆ.

    ಕಲಬುರಗಿಯ 11 ವರ್ಷದ ಹಾಗೂ ಕೊಪ್ಪಳದ 13 ವರ್ಷದ ಬಾಲಕ ಸೆ.8ರಂದು ನಾಪತ್ತೆಯಾಗಿದ್ದಾರೆ. ಇವರು ಮಠದ SJM ಶಾಲೆಯ ವಿದ್ಯಾರ್ಥಿಗಳು. ಇದನ್ನೂ ಓದಿ: ಮುರುಘಾ ಶ್ರೀಗಳಿಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ

    ಜಯದೇವ ಹಾಸ್ಟೆಲ್‌ನಲ್ಲಿ ಇದ್ದರು. ಶಾಲೆಗೆ ತೆರಳಿದ್ದ ವಿದ್ಯಾರ್ಥಿಗಳು ಸಂಜೆ ಹಾಸ್ಟೆಲ್‌ಗೆ ಬಂದಿಲ್ಲ. ಈ ಬಗ್ಗೆ ಹಾಸ್ಟೆಲ್‌ ಸಿಬ್ಬಂದಿ ವಿಚಾರಿಸಿದ್ದಾರೆ. ವಿದ್ಯಾರ್ಥಿಗಳು ಶಾಲೆಗೂ ಹೋಗದೇ, ಹಾಸ್ಟೆಲ್‌ಗೂ ಬಾರದೇ ನಾಪತ್ತೆಯಾಗಿರುವುದು ಗೊತ್ತಾಗಿದೆ.

    ಈ ಕುರಿತು ಹಾಸ್ಟೆಲ್‌ ಸಿಬ್ಬಂದಿ, ಪೋಷಕರ ಗಮನಕ್ಕೆ ತಂದಿದ್ದಾರೆ. ಮಕ್ಕಳು ಮನೆಗೂ ಬಂದಿಲ್ಲ ಎಂದು ಪೋಷಕರು ತಿಳಿಸಿದ್ದಾರೆ. ಪೋಷಕರ ಸೂಚನೆ ಮೇರೆಗೆ ಹಾಸ್ಟೆಲ್‌ ಸಿಬ್ಬಂದಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗ (Chitradurga) ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಮುರುಘಾ ಶ್ರೀಗಳಿಗೆ ಚಿಕಿತ್ಸೆ ನೀಡಿದ್ದ ವೈದ್ಯಾಧಿಕಾರಿ ವಿರುದ್ಧ ಲೋಕಾಯುಕ್ತಕ್ಕೆ ದೂರು

    ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಮುರುಘಾ ಮಠದ ಶ್ರೀಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಬೆನ್ನಟ್ಟಿಕೊಂಡು ಬಂದ ಬೀದಿ ನಾಯಿಗಳು- ಬಾಲಕರು ಗ್ರೇಟ್ ಎಸ್ಕೇಪ್

    ಬೆನ್ನಟ್ಟಿಕೊಂಡು ಬಂದ ಬೀದಿ ನಾಯಿಗಳು- ಬಾಲಕರು ಗ್ರೇಟ್ ಎಸ್ಕೇಪ್

    ತಿರುವನಂತಪುರಂ: ಕೇರಳ (Kerala) ದಲ್ಲಿ ಶ್ವಾನಗಳ ಹಾವಳಿ ದಿನದಿಂದ ಹೆಚ್ಚಾಗುತ್ತಿದೆ. ಬೀದಿನಾಯಿಗಳ ಅಟ್ಟಹಾಸದಿಂದ ಕೆಲವರು ಸಾವನ್ನಪ್ಪಿದ್ದರೆ, ಇನ್ನೂ ಕೆಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇದೀಗ ಬೀದಿ ನಾಯಿ (Stray Dogs) ಗಳು ಇಬ್ಬರು ಬಾಲಕರನ್ನು ಅಟ್ಟಿಸಿಕೊಂಡು ಬಂದ ವೀಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ.

    ಸದ್ಯ ಕಣ್ಣೂರಿನಲ್ಲಿ ನಡೆದಿರುವ ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಬಾಲಕರು ಬೀದಿ ನಾಯಿಗಳ ದಾಳಿಯಿಂದ ಗ್ರೇಟ್ ಎಸ್ಕೇಪ್ ಆಗಿದ್ದು, ನಿಟ್ಟುಸಿರುಬಿಡುವಂತಾಗಿದೆ. ಇದನ್ನೂ ಓದಿ: 86 ವರ್ಷಗಳ ನಂತರ ಮತ್ತೆ ಕಾಂಗರೂ ದಾಳಿಗೆ ವ್ಯಕ್ತಿ ಬಲಿ

    ವೀಡಿಯೋದಲ್ಲೇನಿದೆ..?: 4-5 ಬೀದಿನಾಯಿಗಳು ಇಬ್ಬರು ಬಾಲಕರನ್ನು ಬೆನ್ನಟ್ಟಿವೆ. ಅಂತೆಯೇ ಅವುಗಳಿಂದ ತಪ್ಪಿಸಿಕೊಂಡು ಓಡಿ ಬಂದ ಬಾಲಕರು, ಮನೆಯ ಗೇಟಿನೊಳಗೆ ಬಂದು ಗೇಟ್ ಹಾಕಿಕೊಳ್ಳುತ್ತಾರೆ. ಈ ಮೂಲಕ ಭಾರೀ ಅನಾಹುತದಿಂದ ಕೂದಲೆಳೆಯ ಅಂತರದಲ್ಲಿ ಬಾಲಕರು ಬಚಾವಾಗಿದ್ದನ್ನು ಗಮನಿಸಬಹುದಾಗಿದೆ.

    ಕೇರಳದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗುತ್ತಿದೆ ಎಂದು ಇತ್ತೀಚೆಗಷ್ಟೇ ಸುಪ್ರೀಂ ಕೋರ್ಟ್ (Supreme Court) ನಲ್ಲಿ ಅರ್ಜಿ ವಿಚಾರಣೆ ನಡೆದಿತ್ತು. ಈ ವೇಳೆ ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ಜೆ.ಕೆ. ಮಹೇಶ್ವರಿ ಅವರನ್ನು ಒಳಗೊಂಡ ಪೀಠ ಬೀದಿ ನಾಯಿಗಳಿಗೆ ಆಹಾರ ಹಾಕಿದವರೇ ಅದರಿಂದ ಹಾನಿಯಾದವರಿಗೆ ಚಿಕಿತ್ಸೆ ವೆಚ್ಚವಬನ್ನು ಭರಿಸಬೇಕು ಎಂದು ಆದೇಶಿಸಿತ್ತು.

    Live Tv
    [brid partner=56869869 player=32851 video=960834 autoplay=true]