Tag: ಬಾಲಕಿ

  • ಸಂಜೆ ಆಗ್ತಿದ್ದಂತೆ ಬೀದಿ ಕಾಮಣ್ಣರ ದರ್ಬಾರ್-ಮೂವರ ಪೈಕಿ ಸಿಕ್ಕಿಬಿದ್ದಿದ್ದು ಇಬ್ಬರು ಕಾಮುಕರು

    ಸಂಜೆ ಆಗ್ತಿದ್ದಂತೆ ಬೀದಿ ಕಾಮಣ್ಣರ ದರ್ಬಾರ್-ಮೂವರ ಪೈಕಿ ಸಿಕ್ಕಿಬಿದ್ದಿದ್ದು ಇಬ್ಬರು ಕಾಮುಕರು

    ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಬೀದಿ ಕಾಮಣ್ಣರ ಹಾವಳಿ ಹೆಚ್ಚಾಗಿದೆ. ಶಾಲಾ ಬಾಲಕಿಯೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದ ಯುವಕರಿಗೆ ಧರ್ಮದೇಟು ಬಿದ್ದಿದೆ.

    ಹೌದು. ಸೋಮವಾರ ಸಂಜೆ ಶಾಲೆ ಮುಗಿಸಿ ಮನೆಗೆ ಹೊರಟ್ಟಿದ್ದ ಶಾಲಾ ಬಾಲಕಿಯನ್ನ ಮೂವರು ಯುವಕರ ತಂಡ ಅಡ್ಡಗಟ್ಟಿ ಶಿವಾಜಿನಗರ ಬಸ್ ನಿಲ್ದಾಣದಿಂದ ಬಲವಂತವಾಗಿ ಕರೆದುಕೊಂಡು ಹೋಗಲು ಪ್ರಯತ್ನ ಮಾಡಿದ್ದಾರೆ. ಜೊತೆಗೆ ಮುಖ್ಯರಸ್ತೆಯಿಂದ ಮುಂದೆ ಹೋಗುತ್ತಿದ್ದಂತೆಯೇ ಹುಡುಗಿ ಜೊತೆ ಅಸಭ್ಯವಾಗಿ ವರ್ತಿಸಿ ಕಾಮುಕ ಯುವಕನೊಬ್ಬ ಮುತ್ತು ಕೊಟ್ಟಿದ್ದಾನೆ.

    ಇದನ್ನ ಗಮನಿಸಿದ ಸ್ಥಳೀಯರು ಕೂಡಲೇ ಬಾಲಕಿಯ ನೆರವಿಗೆ ಧಾವಿಸಿದ್ದಾರೆ. ಇವರೆಲ್ಲ ಯಾರು ಎಂದು ಬಾಲಕಿಯನ್ನು ಕೇಳಿದಾಗ ಇವರೆಲ್ಲ ನನ್ನನ್ನು ಬಲವಂತವಾಗಿ ಎಳೆದುಕೊಂಡು ಬರುತ್ತಿದ್ದಾರೆ ಎಂದು ಹೇಳಿದ್ದಾಳೆ. ಬಾಲಕಿಗೆ ಲೈಂಗಿಕ ಹಿಂಸೆ ನೀಡುತ್ತಿರೋ ವಿಚಾರ ತಿಳಿದ ತಕ್ಷಣವೇ ಸಾರ್ವಜನಿಕರು ಯುವಕರಿಗೆ ಹಿಗ್ಗಾಮುಗ್ಗ ಜಾಡಿಸಿದ್ದಾರೆ.

    ಈ ವೇಳೆ ಅಲ್ಲಿದ್ದ ಓರ್ವ ಯುವಕ ಎಸ್ಕೇಪ್ ಆಗಿದ್ದಾನೆ. ಇಬ್ಬರಿಗೆ ಸರಿಯಾಗಿ ಥಳಿಸಿದ ಬಳಿಕ ಸ್ಥಳೀಯ ಪೊಲೀಸರಿಗೆ ಒಪ್ಪಿಸಿದ್ದಾರೆ. ಒಟ್ಟಿನಲ್ಲಿ ಬಾಲಕಿಯನ್ನ ರಕ್ಷಿಸಿದ ಸ್ಥಳೀಯರು ಕಾಮುಕ ಯುವಕರಿಗೆ ಸರಿಯಾಗಿಯೇ ಪಾಠ ಕಲಿಸಿದ್ದಾರೆ.

    ಕಮರ್ಷಿಯಲ್ ಸ್ಟ್ರೀಟ್ ಪೊಲೀಸರು ಯುವಕರನ್ನ ವಶಕ್ಕೆ ಪಡೆದು ವಿಚಾರಣೆ ಮಾಡುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಅಪ್ರಾಪ್ತೆಯ ಗ್ಯಾಂಗ್ ರೇಪ್: ಮೂವರು ಕಾಮುಕರಿಗೆ 20 ವರ್ಷ ಜೈಲು

    ಅಪ್ರಾಪ್ತೆಯ ಗ್ಯಾಂಗ್ ರೇಪ್: ಮೂವರು ಕಾಮುಕರಿಗೆ 20 ವರ್ಷ ಜೈಲು

    ದಾವಣಗೆರೆ: ಸ್ನೇಹಿತರ ಜೊತೆಗೂಡಿ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದ ಪ್ರಿಯಕರ ಸೇರಿದಂತೆ ಮೂವರು ಅಪರಾಧಿಗಳಿಗೆ 20 ವರ್ಷ ಶಿಕ್ಷೆ, ತಲಾ 25 ಸಾವಿರ ರೂ. ದಂಡವಿಧಿಸಿ ದಾವಣಗೆರೆ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರನ್ಯಾಯಾಲಯ ತೀರ್ಪು ನೀಡಿದೆ.

    ಭದ್ರಾವತಿ ತಾಲೂಕಿನ ರಂಗಾಪುರ ಗ್ರಾಮದ ಪ್ರಿಯಕರ ರಮೇಶ್, ವಿಜಯ್ ಹಾಗೂ ಅರುಣ ಜೈಲು ಶಿಕ್ಷೆಗೆ ಗುರಿಯಾದ ಅಪರಾಧಿಗಳು. ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಅಮ್ಮನಗುಡ್ಡದಲ್ಲಿ ಕಾಮುಕರು ಅತ್ಯಾಚಾರ ಎಸಗಿದ್ದರು. ಕಳೆದ ಒಂದುವರೆ ವರ್ಷದಿಂದ ವಿಚಾರಣೆ ಕೋರ್ಟ್ ನಲ್ಲಿ ವಿಚಾರಣೆ ನಡೆದಿತ್ತು. ಈ ಪ್ರಕರಣದ ಕುರಿತು ನ್ಯಾಯಾಧೀಶರಾದ ನಾಗಶ್ರೀ ಅವರು ವಿಚಾರಣೆ ನಡೆಸಿ ಇಂದು ತೀರ್ಪು ನೀಡಿದ್ದಾರೆ.

    ಪ್ರೀತಿ ನಾಟಕ:
    ರಂಗಾಪುರ ಗ್ರಾಮದ ರಮೇಶ್ ಮತ್ತು ಅಪ್ರಾಪ್ತೆಯ ಪ್ರೀತಿ ಎರಡು ವರ್ಷದ ಹಿಂದೆ ಬ್ರೇಕ್ ಅಪ್ ಆಗಿತ್ತು. ರಮೇಶ್ ಪುನಃ ಪ್ರೀತಿಸುತ್ತೇನೆಂದು ಹೇಳಿ ಬಾಲಕಿಯನ್ನ 2017, ಜೂ.2 ರಂದು ಜೋಳದಾಳು ಅಮ್ಮನ ಗುಡ್ಡಕ್ಕೆ ಕರೆತಂದಿದ್ದ. ರಮೇಶ್ ಜೊತೆ ವಿಜಯ್, ಅರುಣ್ ಕೂಡ ಬಂದಿದ್ದು, ಮೂವರು ಸೇರಿ ಬಾಲಕಿಯನ್ನ ಹೆದರಿಸಿ ಅತ್ಯಾಚಾರ ಮಾಡಿದ್ದಾರೆ.

    ಮೂವರು ಕಾಮುಕರಿಂದ ತಪ್ಪಿಸಿಕೊಂಡು ಹೋದ ಬಾಲಕಿ ಶಿವಮೊಗ್ಗದ ಆಸ್ಪತ್ರೆಗೆ ದಾಖಲಾಗಿದ್ದಳು. ಶಿವಮೊಗ್ಗ ಆಸ್ಪತ್ರೆಯವರು ಈ ಬಗ್ಗೆ ಅಲ್ಲಿನ ಎಸ್‍ಪಿಗೆ ಮಾಹಿತಿ ನೀಡಿದ್ದರು. ನಂತರ ಚನ್ನಗಿರಿ ಪೊಲೀಸರು ಪ್ರಿಯಕರ ರಮೇಶನನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದರು. ಆದರೆ ವಿಜಯ್ ಹಾಗೂ ಅರುಣ್ ತಲೆಮರೆಸಿಕೊಂಡಿದ್ದರು. ಚನ್ನಗಿರಿ ಪಿಸಿಐ ಆರ್.ಆರ್.ಪಾಟೀಲ್ ಅವರ ನೇತೃತ್ವದ ತಂಡವು ಎಲ್ಲರನ್ನು ಬಂಧಿಸಿ ಕೋರ್ಟ್ ಗೆ ಹಾಜರು ಪಡಿಸಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ನದಿ ಸ್ನಾನಕ್ಕೆ ತೆರಳಿದ್ದ ಮೂವರ ಬಾಲಕಿಯರ ಸಾವು

    ನದಿ ಸ್ನಾನಕ್ಕೆ ತೆರಳಿದ್ದ ಮೂವರ ಬಾಲಕಿಯರ ಸಾವು

    ಹಾವೇರಿ: ನದಿ ಸ್ನಾನಕ್ಕೆ ಹೋಗಿದ್ದ ಮೂವರು ಬಾಲಕಿಯರು ಸಾವನ್ನಪ್ಪಿದ ಘಟನೆ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಕೂಲಿ ಗ್ರಾಮದ ಬಳಿ ನಡೆದಿದೆ. ಗ್ರಾಮದ ಬಳಿ ಇರೋ ಕುಮುದ್ವತಿ ನದಿಯಲ್ಲಿ ಸ್ನಾನಕ್ಕೆ ಬಾಲಕಿಯರು ಹೋಗಿದ್ದರು.

    ಮೃತ ಬಾಲಕಿಯರನ್ನು ಸುಮನ್ ತುಮ್ಮಿನಕಟ್ಟಿ (9), ನಿಶತ್ ಬಾನು ಪಾಟೀಲ (13) ಮತ್ತು ಮುಜನ್ ಮಿಲ್ ತೋಟದ (14) ಎಂದು ಗುರುತಿಸಲಾಗಿದೆ. ಇವತ್ತು ಶಾಲೆಗೆ ರಜೆ ಇದ್ದಿದ್ದರಿಂದ ನದಿಗೆ ಸ್ನಾನಕ್ಕೆಂದು ತೆರಳಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಸ್ಥಳೀಯರು ಬಾಲಕಿಯರ ಮೃತದೇಹ ಹೊರತೆಗೆದಿದ್ದಾರೆ.

    ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಸಾರ್ವಜನಿಕ ಆಸ್ಪತ್ರೆಯಲ್ಲಿ ರವಾನಿಸಲಾಗಿದೆ. ಆಸ್ಪತ್ರೆಯ ಮುಂಭಾಗದಲ್ಲಿ ಪೋಷಕರ ಆಕ್ರಂದನ ಮುಗಿಲು ಮುಟ್ಟಿದ್ದು, ಗ್ರಾಮದ ಬಹುತೇಕರು ಆಸ್ಪತ್ರೆಯ ಆವರಣದಲ್ಲಿ ಸೇರಿದ್ದಾರೆ. ಹಲಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಪಶ್ಚಿಮ ಬಂಗಾಳದ ಬಾಲಕಿಗೆ ವಿಚಿತ್ರ ಕಾಯಿಲೆ- ಚಿಕಿತ್ಸೆ ನೀಡಿ ಯಶಸ್ವಿಯಾದ್ರು ಕೋಲಾರದ ವೈದ್ಯ

    ಪಶ್ಚಿಮ ಬಂಗಾಳದ ಬಾಲಕಿಗೆ ವಿಚಿತ್ರ ಕಾಯಿಲೆ- ಚಿಕಿತ್ಸೆ ನೀಡಿ ಯಶಸ್ವಿಯಾದ್ರು ಕೋಲಾರದ ವೈದ್ಯ

    ಕೋಲಾರ: ವಿಚಿತ್ರ ಕಾಯಿಲೆಯಿಂದ ನರಳುತ್ತಿದ್ದ ಪಶ್ಚಿಮ ಬಂಗಾಳದ ಬಾಲಕಿಗೆ ಉತ್ತಮ ಚಿಕಿತ್ಸೆ ನೀಡಿ ರಾಜ್ಯದ ಗೌರವವನ್ನು ಎತ್ತಿ ಹಿಡಿದ ಕೀರ್ತಿ ಕೋಲಾರದ ವೈದ್ಯರೊಬ್ಬರಿಗೆ ಸಿಕ್ಕಿದೆ.

    ಜಿಲ್ಲೆಯ ಮಾಲೂರು ಪಟ್ಟಣದ ಮಕ್ಕಳ ತಜ್ಞ ಡಾ.ಅಂಜಲಿ ಕಿರಣ್ ಎಂಬವರು ಪಶ್ಚಿಮ ಬಂಗಾಳದ 15 ವರ್ಷದ ಬಾಲಕಿಯೊಬ್ಬಳು ಸಿಕೆಲ್ ಸಿಜ್ (ರಕ್ತ ಕಣಗಳು ಆಕೃತಿ ಬದಲಾವಣೆ) ರೋಗದಿಂದ ನರಳುತ್ತಿದ್ದಳು. ಹೀಗಾಗಿ ಕಳೆದ ಮೂರು ದಿನಗಳ ಹಿಂದೆ ಮಾಲೂರು ಪಟ್ಟಣಕ್ಕೆ ಆಗಮಿಸಿ ಡಾ. ಕಿರಣ್ ಸೋಮಣ್ಣ ಬಳಿ ಬಂದು ಚಿಕಿತ್ಸೆ ಪಡೆದುಕೊಂಡು ವಾಪಸ್ಸಾಗಿದ್ದಾರೆ.

    ಇದು ಸಾವಿರ ಜನರಲ್ಲಿ ಒಬ್ಬರಿಗೆ ಮಾತ್ರ ಕಂಡು ಬರುವ ಕಾಯಿಲೆಯಾಗಿದ್ದು, ಪೋಷಕರು ಮಾಲೂರಿಗೆ ಮೂರು ದಿನಗಳ ಹಿಂದೆ ಹುಡುಕಿಕೊಂಡು ಬಂದು ಚಿಕಿತ್ಸೆ ಪಡೆದಿರುವ ಎಲ್ಲಾ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ರೋಗ ಕಂಡು ಬಂದಲ್ಲಿ ಅದು ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಕಡಿಮೆ ಮಾಡಿ ಹಲವು ರೋಗಳಿಗೆ ಎಡೆ ಮಾಡಿಕೊಡಲಿದೆ.

    ಈ ರೋಗಕ್ಕೆ ಸೂಕ್ತ ಸಮಯದಲ್ಲಿ ಚಿಕಿತ್ಸೆ ಸಿಗಬೇಕಾದ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳದ ಪೋಷಕರು ತಮ್ಮ ಮಗಳನ್ನು ಕರೆದುಕೊಂಡು ಬಂದು ಡಾ. ಕಿರಣ್ ಅವರಿಂದ ಚಿಕಿತ್ಸೆ ಕೊಡಿಸಿದ್ದಾರೆ. ಡಾ. ಕಿರಣ್ ಅವರು ಮಕ್ಕಳ ತಜ್ಞ ಮತ್ತು ಪ್ರಾಧ್ಯಾಪಕರಾಗಿ ಇದರ ಬಗ್ಗೆ ಅಧ್ಯಯನ ಮಾಡಿದ್ದರ ಹಿನ್ನೆಲೆಯಲ್ಲಿ ಇವರ ವಿಳಾಸವನ್ನು ಪಡೆದು ಮಾಲೂರಿಗೆ ಬಂದು ಚಿಕಿತ್ಸೆ ಪಡೆದುಕೊಂಡು ಹೋಗಿರುವುದು ಕೋಲಾರ ಜಿಲ್ಲೆಯ ವೈದ್ಯ ಲೋಕಕ್ಕೆ ಗರಿ ತಂದಿದೆ.

    ಒಟ್ಟಿನಲ್ಲಿ ಸದ್ಯ ವೈದ್ಯರ ಕಾರ್ಯಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಅಪ್ರಾಪ್ತೆಯನ್ನು ಅಪಹರಿಸಿ ಗ್ಯಾಂಗ್‍ರೇಪ್!

    ಅಪ್ರಾಪ್ತೆಯನ್ನು ಅಪಹರಿಸಿ ಗ್ಯಾಂಗ್‍ರೇಪ್!

    -ರಾತ್ರಿ ಬಾಲಕಿಯನ್ನು ನಡುರಸ್ತೆಯಲ್ಲಿ ಬಿಟ್ಟು ಪರಾರಿ

    ಚಂಡಿಗಢ: 7 ವರ್ಷದ ಬಾಲಕಿಯನ್ನು ಅಪಹರಿಸಿ ಆಕೆಯ ಮೇಲೆ ಮೂವರು ಕಾಮುಕರು ಸಾಮೂಹಿಕ ಅತ್ಯಾಚಾರ ಎಸೆಗಿರುವ ಅಮಾನವೀಯ ಘಟನೆ ಹರಿಯಾಣದ ರೋಹ್ಟಕ್ ಪ್ರದೇಶದ ರೈಲ್ವೇ ಯಾರ್ಡ್ ಬಳಿ ನಡೆದಿದೆ.

    ಗುರುವಾರ ಸಂಜೆ ವೇಳೆ ರೋಹ್ಟಕ್ ರೈಲ್ವೇ ನಿಲ್ದಾಣದಿಂದ 300 ಮೀ. ದೂರದಲ್ಲಿರುವ ರೈಲ್ವೇ ಯಾರ್ಡ್ ಬಳಿ ಬಾಲಕಿಯನ್ನು ಮೂವರು ಕಾಮುಕರು ಅಪಹರಿಸಿದ್ದಾರೆ. ಬಳಿಕ ರಾತ್ರಿ ವೇಳೆ ಬಾಲಕಿಯ ಮೇಲೆ ಅತ್ಯಾಚಾರ ಮಾಡಿ ದಾರಿ ಮೇಲೆಯೇ ಬಿಟ್ಟು ಹೋಗಿದ್ದಾರೆ. ನಂತರ ಬಾಲಕಿ ಹೇಗೋ ಮನೆಯನ್ನು ತಲುಪಿ ಪೋಷಕರಿಗೆ ನಡೆದ ಘಟನೆಯನ್ನು ವಿವರಿಸಿದ್ದಾಳೆ.

    ಈ ಕುರಿತು ತಿಳಿಯುತ್ತಿದ್ದಂತೆ ಬಾಲಕಿಯ ತಂದೆ ಪೊಲೀಸರಿಗೆ ದೂರು ನೀಡಿದ್ದಾರೆ. ಅಲ್ಲದೆ ಮೂವರು ಆರೋಪಿಗಳಲ್ಲಿ ಸಂತ್ರಸ್ತೆಯ ತಂದೆ ಓರ್ವನನ್ನು ಗುರುತಿಸಿದ್ದಾರೆ. ಇನ್ನುಳಿದವರ ಬಗ್ಗೆ ಮಾಹಿತಿ ತಿಳಿದು ಬಂದಿಲ್ಲ. ರೈಲ್ವೇ ನಿಲ್ದಾಣ ಮತ್ತು ಘಟನಾ ಸ್ಥಳದ ಆಸುಪಾಸಿನಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸದ ಹಿನ್ನೆಲೆಯಲ್ಲಿ ಆರೋಪಿಗಳ ಚಹರೆ ಪತ್ತೆಯಾಗಿಲ್ಲ. ಆದರೂ ಕೂಡ ತನಿಖೆ ನಡೆಸಿ ಆದಷ್ಟು ಬೇಗ ಆರೋಪಿಗಳನ್ನು ಪತ್ತೆ ಮಾಡುತ್ತೇವೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

    ಸದ್ಯ ಘಟನೆ ಕುರಿತು ರೋಹ್ಟಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

  • ಪ್ರೀತಿಸಲಿಲ್ಲ ಎಂದು 12ರ ಬಾಲಕಿಗೆ ಬೆಂಕಿ ಹಚ್ಚಿದ ಪಾಗಲ್ ಪ್ರೇಮಿ!

    ಪ್ರೀತಿಸಲಿಲ್ಲ ಎಂದು 12ರ ಬಾಲಕಿಗೆ ಬೆಂಕಿ ಹಚ್ಚಿದ ಪಾಗಲ್ ಪ್ರೇಮಿ!

    ಹೈದರಾಬಾದ್: ಪ್ರೀತಿಯನ್ನು ನಿರಾಕರಿಸಿದಕ್ಕೆ ಪಾಗಲ್ ಪ್ರೇಮಿಯೊಬ್ಬ ಅಪ್ರಾಪ್ತ ಬಾಲಕಿ ಮೇಲೆ ನಡುರಸ್ತೆಯಲ್ಲೇ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಅಮಾನವೀಯ ಘಟನೆ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿ ನಡೆದಿದೆ.

    ಮೌಲಾನಾ ಸಾಹೇಬ್ ಎಂಬ ಯುವಕ ಅಪ್ರಾಪ್ತೆಗೆ ಬೆಂಕಿ ಹಚ್ಚಿದ್ದಾನೆ. ಕರ್ನೂಲ್ ಜಿಲ್ಲೆಯ ಕೌತಾಲಂ ಮಂಡಲದಲ್ಲಿ ಈ ಅಮಾನವೀಯ ಘಟನೆ ಜರುಗಿದೆ. ಕೌತಾಲಂ ಪ್ರದೇಶದ 12 ವರ್ಷದ ಬಾಲಕಿಯೊಬ್ಬಳನ್ನು ಮೌಲಾನಾ ಪ್ರೀತಿಸುತ್ತಿದ್ದನು. ಆದರಿಂದ ಕಳೆದ ಕೆಲವು ತಿಂಗಳಿಂದ ಬಾಲಕಿಗೆ ಪ್ರೀತಿ ಪ್ರೇಮವೆಂದು ಯುವಕ ಪೀಡಿಸುತ್ತಿದ್ದನು.

    ಬಾಲಕಿಗೆ ಯುವಕನನ್ನು ಪ್ರೀತಿಸಲು ಇಷ್ಟವಿರಲಿಲ್ಲ. ಎಷ್ಟೇ ಬಾರಿ ಯುವಕ ಪ್ರೀತಿ ಮಾಡು ಎಂದು ಕಾಟಕೊಡುತ್ತಿದ್ದರೂ ಬಾಲಕಿ ನಾನು ಪ್ರೀತಿ ಮಾಡಲ್ಲ ಎಂದು ಹೇಳಿದ್ದಾಳೆ. ಹೀಗಾಗಿ ತನ್ನ ಪ್ರೀತಿಯನ್ನು ಬಾಲಕಿ ಒಪ್ಪಲಿಲ್ಲ ಎಂದು ಯುವಕ ಮನನೊಂದಿದ್ದನು. ಹಾಗೆಯೇ ಬಾಲಕಿ ಮೇಲೆ ಹುಚ್ಚು ಪ್ರೀತಿ ಇಟ್ಟಿದ್ದ ಯುವಕ ಆಕೆಯನ್ನು ಪಡೆಯಲೆಬೇಕು ಎಂದು ಹಟಕ್ಕೆ ಬಿದ್ದಿದ್ದನು.

    ಶುಕ್ರವಾರ ರಾತ್ರಿ ವೇಳೆ ಬಾಲಕಿ ರಸ್ತೆಯಲ್ಲಿ ಹೋಗುತ್ತಿದ್ದಾಗ ಯುವಕ ಆಕೆಯನ್ನು ತಡೆದು ತನ್ನನ್ನು ಪ್ರೀತಿ ಮಾಡಲೇ ಬೇಕು ಎಂದು ಬೆದರಿಸಿದ್ದಾನೆ. ಅದ್ಯಾವುದಕ್ಕೂ ಬಾಲಕಿ ಒಪ್ಪದೇ ಇದ್ದಾಗ ನಡುರಸ್ತೆಯಲ್ಲೇ ಆಕೆಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಆಗ ಬಾಲಕಿಯ ಕಿರುಚಾಟವನ್ನು ಕೇಳಿ ಸ್ಥಳಕ್ಕೆ ಬಂದ ಜನರು ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

    ಸದ್ಯ ಅಪ್ರಾಪ್ತ ಬಾಲಕಿ ಮೇಲೆ ಕೊಲೆ ಯತ್ನ ಮಾಡಿದಕ್ಕೆ ಆರೋಪಿ ಮೇಲೆ ಪೊಲೀಸರು ನಿರ್ಭಯ ಕಾಯ್ದೆ ಪ್ರಕಾರ ಕೊಲೆ ಪ್ರಕರಣ ದಾಖಲಿಸಿದ್ದು, ಆತನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಅಪ್ಪ ಊಟ ಕೊಡು ಎಂದು ಅಳುತ್ತಿದ್ದ ಬಾಲಕಿಯ ರೇಪ್ ಮಾಡಿ ಕೊಲೆಗೈದ್ರು!

    ಅಪ್ಪ ಊಟ ಕೊಡು ಎಂದು ಅಳುತ್ತಿದ್ದ ಬಾಲಕಿಯ ರೇಪ್ ಮಾಡಿ ಕೊಲೆಗೈದ್ರು!

    ಭುವನೇಶ್ವರ್: ದೇಶದಲ್ಲಿ ಅತ್ಯಾಚಾರದಂತಹ ಪ್ರಕರಣಗಳಿಗೆ ಕೊನೆಯಿಲ್ಲ ಎಂಬಂತಾಗಿದೆ. ಇದಕ್ಕೆ ಪೂರಕವೆಂಬಂತೆ ಒಡಿಶಾದಲ್ಲಿ 12 ವರ್ಷದ ಬಾಲಕಿಯನ್ನು ದುಷ್ಕರ್ಮಿಗಳು ಕಿಡ್ನಾಪ್ ಮಾಡಿ ಅತ್ಯಾವಾರವೆಸಗಿ ಕೊಲೆ ಮಾಡಿದ್ದಾರೆ.

    ಈ ಘಟನೆ ಒಡಿಶಾದ ಅಂಗುಲ್ ಜಿಲ್ಲೆಯ ಸದರ್ ಪ್ರದೇಶದಲ್ಲಿ ಭಾನುವಾರ ನಡೆದಿದೆ. ವರದಿಗಳ ಪ್ರಕಾರ, ಬಾಲಕಿಯ ತಂದೆ ಒಂದು ಸಣ್ಣ ಅಂಗಡಿ ಇಟ್ಟುಕೊಂಡು ಜೀವನ ನಡೆಸುತ್ತಿದ್ದರು. ಹೀಗಾಗಿ ಬಾಲಕಿ ಅಪ್ಪನ ಅಂಗಡಿ ಬಂದಿದ್ದಳು. ನಿನ್ನೆ ಮಧ್ಯಾಹ್ನ 2 ಗಂಟೆ ಸುಮಾರಿಗೆ ಹಸಿವಾಗುತ್ತಿದೆ ಊಟ ಹಾಕು ಅಂತ ಅಳುತ್ತಿದ್ದಳು.

    ಆದ್ರೆ ಕೆಲ ಹೊತ್ತಿನ ಬಳಿಕ ಬಾಲಕಿ ಪಕ್ಕದಲ್ಲೇ ಇರುವ ದೇವಸ್ಥಾನದ ಸಮೀಪವಿರುವ ಪೊದೆಯಲ್ಲಿ ನಗ್ನವಾಗಿ ಆಕೆಯ ದೇಹದ ಮೇಲೆ ಚೂರಿಯಿಂದ ಇರಿದ ರೀತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಬಾಲಕಿಯ ಶವ ನೋಡಿದಾಗ ಆಕೆಯ ಮೇಲೆ ಅತ್ಯಾಚಾರವೆಸಗಿ ಬಳಿಕ ರೇಪ್ ವಿಚಾರ ಮನೆಯವರಿಗೆ ತಿಳಿಸುತ್ತಾಳೆ ಎಂಬ ಭಯದಿಂದ ಕಾಮುಕರು ಬಾಲಕಿ ದೇಹವನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿರಬಹುದು ಎಂಬುದಾಗಿ ಶಂಕಿಸಲಾಗಿದೆ.

    ಘಟನೆ ಮಾಹಿತಿ ಪಡೆದ ಕೂಡಲೇ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಮರಣೋತ್ತರ ಪರೀಕ್ಷೆಗಾಗಿ ಬಾಲಕಿಯ ಮೃತದೇಹವನ್ನು ಸ್ಥಳೀಯ ಆಸ್ಪತ್ರೆಗೆ ರಾವಾನಿಸಿದ್ದಾರೆ. ಹೀಗಾಗಿ ಬಾಲಕಿ ಸಾವಿಗೆ ನಿಖರ ಕಾರಣವೇನೆಂದು ಪರೀಕ್ಷೆಯ ಬಳಿಕವಷ್ಟೇ ತಿಳಿದುಬರಬೇಕಿದೆ.

    ಘಟನೆ ಸಂಬಂಧ ಸ್ಥಳೀಯ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಹಾಸ್ಟೆಲ್‍ನಲ್ಲೇ ಮಗುವಿಗೆ ಜನ್ಮ ನೀಡಿದ ಅಪ್ರಾಪ್ತ ಬಾಲಕಿ

    ಹಾಸ್ಟೆಲ್‍ನಲ್ಲೇ ಮಗುವಿಗೆ ಜನ್ಮ ನೀಡಿದ ಅಪ್ರಾಪ್ತ ಬಾಲಕಿ

    -ಮಗು ಸಹಿತ ಬಾಲಕಿಯನ್ನು ಕಾಡಿಗೆ ಅಟ್ಟಿದ ಹಾಸ್ಟೆಲ್ ಸಿಬ್ಬಂದಿ

    ಭುವನೇಶ್ವರ: ಅಪ್ರಾಪ್ತ ಬಾಲಕಿಯೊಬ್ಬಳು ಆದಿವಾಸಿ ವಸತಿ ಶಾಲೆಯ ಹಾಸ್ಟೆಲ್ ನಲ್ಲಿ ಮಗುವಿಗೆ ಜನ್ಮ ನೀಡಿದ ಹಿನ್ನೆಲೆಯಲ್ಲಿ ಆರು ಮಂದಿಯನ್ನು ಕೆಲಸದಿಂದ ಅಮಾನತು ಮಾಡಲಾಗಿದೆ.

    ಈ ಘಟನೆ ಒಡಿಶಾದ ಕಂಧಮಾಲ್ ಜಿಲ್ಲೆಯ ದರಿಂಗಿಬಾದಿಯಲ್ಲಿರುವ ‘ಸೇವಾ ಆಶ್ರಯ ಹೈಸ್ಕೂಲ್’ ಹಾಸ್ಟೆಲ್‍ನಲ್ಲಿ ನಡೆದಿದ್ದು, ವಿದ್ಯಾರ್ಥಿನಿ ಶನಿವಾರ ರಾತ್ರಿ ಮಗುವಿಗೆ ಜನ್ಮ ನೀಡಿದ್ದಾಳೆ. ವಿದ್ಯಾರ್ಥಿನಿಗೆ 14 ವಯಸ್ಸಾಗಿದ್ದು, 8ನೇ ತರಗತಿ ವ್ಯಾಸಂಗ ಮಾಡುತ್ತಿದ್ದಾಳೆ ಎಂದು ತಿಳಿದು ಬಂದಿದೆ. ಮಗು ಹುಟ್ಟಿದ ಬಳಿಕ ಆಕೆ ಮತ್ತು ಮಗುವನ್ನು ಹಾಸ್ಟೆಲ್ ನಿಂದ ಹೊರಗೆ ಹತ್ತಿರದ ಅರಣ್ಯಕ್ಕೆ ತಳ್ಳಿದ್ದಾರೆ ಎಂದು ಕಂಧಮಲ್ ಜಿಲ್ಲಾ ಕಲ್ಯಾಣ ಅಧಿಕಾರಿ ಚಾರುಲತಾ ಮಲ್ಲಿಕ್ ತಿಳಿಸಿದ್ದಾರೆ.

    ಈ ಪ್ರಕರಣ ಈಗ ಅಧಿಕಾರಿಗಳಿಗೆ ತಲೆಬಿಸಿಯಾಗಿದ್ದು, ಈ ಬಗ್ಗೆ ತನಿಖೆ ನಡೆಸುವಂತೆ ಜಿಲ್ಲಾಧಿಕಾರಿಗೆ ಎಸ್‍ಸಿ/ಎಸ್‍ಟಿ ಕಲ್ಯಾಣ ಸಚಿವ ರಮೇಶ್ ಮಝಿ ಅವರು ಆದೇಶಿಸಿದ್ದಾರೆ. ಅಷ್ಟೇ ಅಲ್ಲದೇ ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ತನಿಖೆ ಮಾಡಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ. ಪೊಲೀಸರು ಕೂಡ ಈ ಕುರಿತಾಗಿ ತನಿಖೆ ನಡೆಸುತ್ತಿದ್ದಾರೆ.

    ಭಾನುವಾರ ಮುಂಜಾನೆ ಇಬ್ಬರು ಅರಣ್ಯ ಅಧಿಕಾರಿಗಳು ಬಾಲಕಿಯನ್ನು ನೋಡಿ ಸ್ಥಳೀಯ ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಬಾಲಕಿ ಮತ್ತು ಮಗುವನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಬಾಲಕಿ ಹಾಗೂ ಆಕೆಯ ಮಗು ಇಬ್ಬರು ಫುಲಬಾನಿ ವಿಭಾಗೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಮಗು ಮತ್ತು ತಾಯಿ ಇಬ್ಬರ ಸ್ಥಿತಿ ಉತ್ತಮವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

    ಎಂಟು ತಿಂಗಳ ಹಿಂದೆ ಬಾಲಕಿ ಮನೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ಆಕೆಯ ಮೇಲೆ ಅತ್ಯಾಚಾರ ನಡೆದಿದೆ. ಆದರೆ ಬಾಲಕಿ ಭಯದಿಂದ ಈ ಬಗ್ಗೆ ಎಲ್ಲೂ ಹೇಳಿಕೊಂಡಿಲ್ಲ ಎನ್ನಲಾಗುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದರಿಂಗ್‍ಬಾದಿ ಕಾಲೇಜಿನ ವಿದ್ಯಾರ್ಥಿಯೋರ್ವನನ್ನು ಪೊಲೀಸರು ಬಂಧಿಸಿ, ವಿಚಾರಣೆ ಮುಂದುವರಿಸಿದ್ದಾರೆ.

    ಜಿಲ್ಲಾಧಿಕಾರಿ ಬೃಂದ ಅವರು, ಹಾಸ್ಟೆಲ್‍ನ ಇಬ್ಬರು ಅಡುಗೆ ಭಟ್ಟರು, ಮಹಿಳಾ ಮೇಲ್ವಿಚಾರಕಿ ಹಾಗೂ ಓರ್ವ ದಾದಿಯನ್ನು ಅಮಾನತು ಮಾಡಿದ್ದಾರೆ. ಜೊತೆಗೆ ಈ ಶಾಲೆಯ ಮುಖ್ಯಶಿಕ್ಷಕಿ ರಾಧಾ ರಾಣಿ ಅವರನ್ನೂ ಅಮಾನತು ಮಾಡುವಂತೆ ಸರ್ಕಾರ ಆದೇಶಿಸಿರುವುದಾಗಿ ತಿಳಿಸಿದ್ದಾರೆ.

     ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ವಿಡಿಯೋ ತೋರಿಸಿ ಅಪ್ರಾಪ್ತೆ ಮೇಲೆ 4 ವರ್ಷ ಅತ್ಯಾಚಾರ ಮಾಡಿದ್ರು..!

    ವಿಡಿಯೋ ತೋರಿಸಿ ಅಪ್ರಾಪ್ತೆ ಮೇಲೆ 4 ವರ್ಷ ಅತ್ಯಾಚಾರ ಮಾಡಿದ್ರು..!

    ಹೈದರಾಬಾದ್: ಅತ್ಯಚಾರವೆಸೆಗಿದ ವಿಡಿಯೋ ತೋರಿಸಿ ಆರೋಪಿಗಳು 16 ವರ್ಷದ ಬಾಲಕಿಯೊಬ್ಬಳ ಮೇಲೆ 4 ವರ್ಷಗಳಿಂದ ನಿರಂತರ ಲೈಂಗಿಕ ಕಿರುಕುಳ ಕೊಟ್ಟ ಘಟನೆ ಹೈದರಾಬಾದ್‍ನಲ್ಲಿ ತಡವಾಗಿ ಬೆಳಕಿಗೆ ಬಂದಿದೆ.

    4 ವರ್ಷಗಳ ಹಿಂದೆ ಬಾಲಕಿ ಮೇಲೆ ಆಕೆಯ ಸಂಬಂಧಿಕನೊಬ್ಬ ಅತ್ಯಚಾರವೆಸೆಗಿದ್ದ. ಅಲ್ಲದೆ ಆ ದೃಶ್ಯಗಳನ್ನು ವಿಡಿಯೋ ಮಾಡಿ ತನ್ನ ಸ್ನೇಹಿತರಿಗೆ ಕಳುಹಿಸಿದ್ದ. ಬಳಿಕ ಆರೋಪಿ ಹಾಗೂ ಆತನ ಸ್ನೇಹಿತರು ಬಾಲಕಿಗೆ ವಿಡಿಯೋ ತೋರಿಸಿ ಬೆದರಿಸಿದ್ದಾರೆ. ಆದ್ರೆ ಈ ಯಾವ ವಿಷಯವನ್ನು ಬಾಲಕಿ ಮನೆಯವರಿಗೆ ತಿಳಿಸಿರಲಿಲ್ಲ.

    ಆ ವಿಡಿಯೋವೊಂದನ್ನೇ ಇಟ್ಟುಕೊಂಡು ಪಾಪಿಗಳು ಬಾಲಕಿ ಮೇಲೆ ಸತತ 4 ವರ್ಷಗಳಿಂದ ಅತ್ಯಚಾರ ಎಸಗಿದ್ದಾರೆ. ಇದರಿಂದ ಬೇಸತ್ತ ಬಾಲಕಿ ಕಿರುಕುಳ ತಾಳಲಾರದೇ ಕಳೆದ ತಿಂಗಳು ಹೈದರಾಬಾದ್‍ನ ಭರೋಸಾ ಕೇಂದ್ರಕ್ಕೆ ತೆರಳಿ ನಡೆದ ಘಟನೆ ಕುರಿತು ತಿಳಿಸಿದ್ದಾಳೆ. ಬಾಲಕಿಯ ದೂರಿನ ಮೇಲೆ ಸದ್ಯ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

    ವಿಚಾರಣೆ ವೇಳೆ ಬಾಲಕಿ, ತನ್ನ ಸಂಬಂಧಿಯೊಬ್ಬ ಅವರ ಮನೆಯ ಮೇಲಿನ ಮಹಡಿಗೆ ಆಕೆಯನ್ನು ಕರೆದೊಯ್ದು ಕುಡಿಯುವ ಜ್ಯೂಸ್‍ನಲ್ಲಿ ಮತ್ತು ಬರುವ ಮಿಶ್ರಣವನ್ನು ಬೆರೆಸಿ ಕೊಟ್ಟನು. ಬಳಿಕ ತನ್ನ ಮೇಲೆ ಅತ್ಯಚಾರ ಮಾಡಿ ಅದನ್ನ ವಿಡಿಯೋ ಮಾಡಿಕೊಂಡಿದ್ದನು. ಅಲ್ಲದೆ ಆ ವಿಡಿಯೋ ಇಟ್ಟುಕೊಂಡು ಆರೋಪಿ ಹಾಗೂ ಆತನ ಸ್ನೇಹಿತರು ತನ್ನ ಮೇಲೆ ನಿರಂತರವಾಗಿ ಅತ್ಯಚಾರ ಮಾಡಿದ್ದಾರೆ ಅಂತ ಹೇಳಿದ್ದಾಳೆ.

    ಈ ವಿಷಯ ತಿಳಿಯುತ್ತಿದ್ದಂತೆ ಬಾಲಕಿಯ ಕುಟುಂಬಸ್ಥರು ಹಾಗೂ ನೆರೆಹೊರೆ ಮನೆಯವರು ಪ್ರತಿಭಟನೆ ಮಾಡಿ ಆರೋಪಿಗಳನ್ನು ಆದಷ್ಟು ಬೇಗ ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ. ಪೊಲೀಸರು ಕೇವಲ ಮೂವರನ್ನು ಬಂಧಿಸಿದ್ದಾರೆ. ಈ ವಿಚಾರದಲ್ಲಿ ಶಾಮೀಲಾದ ಉಳಿದ 8 ಮಂದಿಯನ್ನು ಕೂಡ ಬಂಧಿಸಬೇಕು. ಇಂತವರಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಆಕ್ರೋಶ ಹೊರಹಾಕಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಜಮೀನಿನಿಂದ ಮನೆಗೆ ಕಳುಹಿಸಿದ ಅಜ್ಜಿ – ಶವವಾಗಿ ಬಾಲಕಿ ಪತ್ತೆ

    ಜಮೀನಿನಿಂದ ಮನೆಗೆ ಕಳುಹಿಸಿದ ಅಜ್ಜಿ – ಶವವಾಗಿ ಬಾಲಕಿ ಪತ್ತೆ

    ಹಾವೇರಿ: ಅನುಮಾನಾಸ್ಪದ ರೀತಿಯಲ್ಲಿ ಏಳು ವರ್ಷದ ಬಾಲಕಿ ಮೃತದೇಹ ಪತ್ತೆಯಾದ ಘಟನೆ ಜಿಲ್ಲೆಯ ಬ್ಯಾಡಗಿ ತಾಲೂಕು ಕಾಗಿನೆಲೆ ಗ್ರಾಮದ ಬಳಿ ನಡೆದಿದೆ.

    ಮೃತ ಬಾಲಕಿಯನ್ನ ತೈಸಿನ್ ಕಲ್ಲಾಪುರ(7) ಎಂದು ಗುರುತಿಸಲಾಗಿದೆ. ಶನಿವಾರ ಅಜ್ಜಿಯೊಂದಿಗೆ ಬಾಲಕಿ ಜಮೀನಿಗೆ ತೆರಳಿದ್ದಳು. ಅಜ್ಜಿ ವಾಪಸ್ ಕಳಿಸಿದ್ದರಿಂದ ಬಾಲಕಿ ಮನೆಗೆ ಮರಳುವಾಗ ಈ ಘಟನೆ ನಡೆದಿದೆ.

    ತೈಸಿನ್‍ಗೆ ನಾಯಿ ಕಚ್ಚಿ ಸಾವನ್ನಪ್ಪಿರುವ ಶಂಕೆ ವ್ಯಕ್ತಪಡಿಸಲಾಗಿದೆ. ಯಾಕೆಂದರೆ ಬಾಲಕಿಯ ಮೈ ಮೇಲೆ ಕಚ್ಚಿರುವ ಗಾಯದ ಗುರುತುಗಳು ಹೆಚ್ಚಾಗಿವೆ. ಬಾಲಕಿಯ ಮೇಲೆ ನಾಯಿ ದಾಳಿ ಮಾಡಿದೆಯಾ ಅಥವಾ ಮತ್ತೆ ಬೇರೆ ಪ್ರಾಣಿ ದಾಳಿ ಮಾಡಿದಿಯಾ ಗೊತ್ತಿಲ್ಲ. ಪೊಲೀಸ್ ಅಧಿಕಾರಿಗಳು ಸೂಕ್ತ ತನಿಖೆ ಮಾಡಬೇಕು. ಅಲ್ಲದೆ ಬೀದಿ ನಾಯಿಗಳನ್ನ ಗ್ರಾಮಪಂಚಾಯ್ತಿಯವರು ಹಿಡಿಯಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

    ಬಾಲಕಿಯ ಸಾವು ಮಾತ್ರ ಸಾಕಷ್ಟು ಅನುಮಾನಾಸ್ಪದವಾಗಿದೆ. ಮೇಲ್ನೋಟಕ್ಕೆ ನಾಯಿ ದಾಳಿ ಮಾಡಿರುವ ಶಂಕೆ ವ್ಯಕ್ತಪಡಿಸಲಾಗಿದೆ. ಈ ಘಟನೆ ಕಾಗಿನಲೆ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ.

     ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv