Tag: ಬಾಲಕಿ

  • ಟ್ಯಾಂಕರ್ ಚಕ್ರದಡಿ ಸಿಲುಕಿ 13 ವರ್ಷದ ಬಾಲಕಿ ದುರ್ಮರಣ

    ಟ್ಯಾಂಕರ್ ಚಕ್ರದಡಿ ಸಿಲುಕಿ 13 ವರ್ಷದ ಬಾಲಕಿ ದುರ್ಮರಣ

    ಚೆನ್ನೈ: ತನ್ನ ಮಾವನ ಜೊತೆ ಬೈಕ್ ನಲ್ಲಿ ಹೋಗುತ್ತಿದ್ದ ಸಂದರ್ಭದಲ್ಲಿ ಮೆಟ್ರೋ ನೀರಿನ ಟ್ಯಾಂಕರ್ ಹರಿದು 13 ವರ್ಷದ ಬಾಲಕಿಯೊಬ್ಬಳು ದುರ್ಮರಣಕ್ಕೀಡಾದ ಘಟನೆ ಚೆನ್ನೈನಲ್ಲಿ ನಡೆದಿದೆ.

    ಈ ಘಟನೆ ಚೆನ್ನೈನ ಕಿಲ್ಪಾಕ್ ಅವಡಿ ರಸ್ತೆಯಲ್ಲಿ ಮಂಗಳವಾರ ಬೆಳಗ್ಗೆ 7.45ರ ಸುಮಾರಿಗೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮೃತ ದುರ್ದೈವಿ ಬಾಲಕಿಯನ್ನು ಜೆಮಿಮಾ ಅಚ್ಚು ಮ್ಯಾಥ್ಯು ಎಂದು ಗುರುತಿಸಲಾಗಿದೆ. ಈಕೆ ಯೂನಿಯನ್ ಕ್ರಿಶ್ಚಿಯನ್ ಪಬ್ಲಿಕ್ ಶಾಲೆಯಲ್ಲಿ 8ನೇ ತರಗತಿಯಲ್ಲಿ ಓದುತ್ತಿದ್ದಳು. ಅಲ್ಲದೇ ಈಕೆ ಡಾನ್ಸರ್ ಕೂಡ ಆಗಿದ್ದಳು.

    ಜಿನೋ ಅಲೆಕ್ಸ್ ಅನ್ನೋರು ತಮ್ಮ ಮಗಳನ್ನು ಬೈಕಿನ ಮುಂದೆ ಕುಳ್ಳಿರಿಸಿಕೊಂಡಿದ್ದು, ಜೆಮಿಮಾ ಹಿಂದೆ ಕುಳಿತಿದ್ದಳು. ನ್ಯೂ ಅವಡಿ ರೋಡ್ ಹಾಗೂ ಕನಲಾ ರೋಡ್ ಜಂಕ್ಷನ್ ಬಳಿ ಬೈಕನ್ನು ಓವರ್ ಟೇಕ್ ಮಾಡುವ ಭರದಲ್ಲಿ ಟ್ಯಾಂಕರ್ ಚಾಲಕ ಒಂದೇ ಸಮನೆ ಹಾರ್ನ್ ಮಾಡುತ್ತಿದ್ದನು. ಚಾಲಕನ ಹಾರ್ನ್ ನಿಂದ ಕಿರಿಕಿರಿಯಾಗಿದ್ದರಿಂದ ಜಿನೋ ಟ್ಯಾಂಕರ್ ಗೆ ಮುಂದೆ ಚಲಿಸಲು ದಾರಿ ಮಾಡಿಕೊಟ್ಟರು. ಆದ್ರೆ ಈ ವೇಳೆ ಟ್ಯಾಂಕರ್, ಬೈಕ್ ಗೆ ಹಿಂಬದಿಯಿಂದ ಗುದ್ದಿದ್ದು, ಜಿನೋ ಹಾಗೂ ಅವರ ಮಗಳು ಎಡಗಡೆಗೆ ಬಿದ್ದರೆ ಜೆಮಿಮಾ ಬಲಗಡೆಗೆ ಬಿದ್ದಿದ್ದಾಳೆ. ಹೀಗಾಗಿ ಟ್ಯಾಂಕರ್ ಆಕೆಯ ಮೆಲೆಯೇ ಹರಿದಿದೆ. ಪರಿಣಾಮ ಟ್ಯಾಂಕರ್ ಚಕ್ರದಡಿ ಸಿಲುಕಿದ್ದಾಳೆ.

    ಇದೊಂದು ದುರದೃಷ್ಟಕರ ಘಟನೆಯಾಗಿದ್ದು, ಜೆಮಿಮಾ ಬಲಗಡೆಗೆ ಬೀಳುತ್ತಿದ್ದಂತೆಯೇ ಆಕೆಯನ್ನ ರಕ್ಷಣೆ ಮಾಡಲು ಜಿನೋ ಪ್ರಯತ್ನಿಸಿದ್ದಾರೆ. ಆದ್ರೆ ಅದಾಗಲೇ ಆಕೆಯ ಮೇಲೆ ಟ್ಯಾಂಕರ್ ಹರಿದಿದೆ ಅಂತ ಕುಟುಂಬದ ಸ್ನೇಹಿತರಾದ ರೋಶನ್ ಥೋಮಸ್ ಹೇಳಿದ್ದಾರೆ.

    ಘಟನೆಯನ್ನು ಕಣ್ಣಾರೆ ಕಂಡ ಪ್ರತ್ಯಕ್ಷದರ್ಶಿಯೊಬ್ಬರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಹೀಗಾಗಿ ತಕ್ಷಣವೇ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಜೆಮಿಮಾಳನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದ್ರೆ ಅದಾಗಲೇ ಬಾಲಕಿ ಮೃತಪಟ್ಟಿದ್ದಾಳೆ ಅಂತ ವೈದ್ಯರು ತಿಳಿದ್ದಾರೆ.

    ಮೃತ ಜೆಮಿಮಾ ತಾಯಿ ಮತ್ತು ತನ್ನ ಮಾವನ ಜೊತೆ ವಾಸವಾಗಿದ್ದಳು. ಜೆಮಿಮಾ ತಂದೆ ಕೇರಳದಲ್ಲಿ ಉದ್ಯೋಗದಲ್ಲಿದ್ದ ಕಾರಣ ಅಲೆಕ್ಸ್ ಆಕೆಯನ್ನು ಪ್ರತಿದಿನ ಶಾಲೆಗೆ ಕರೆದುಕೊಂಡು ಹೋಗುತ್ತಿದ್ದರು.

    ಸ್ಥಳದಲ್ಲಿ ಜನ ಜಮಾಯಿಸುತ್ತಿದ್ದಂತೆಯೇ ಚಾಲಕ ಟ್ಯಾಂಕರ್ ನಿಲ್ಲಿಸಿ ಪರಾರಿಯಾಗಲು ಯತ್ನಿಸಿದ್ದಾನೆ. ಆದ್ರೆ ಅದು ಸಾಧ್ಯವಾಗಲಿಲ್ಲ. ಘಟನೆಗೆ ಸಂಬಂಧಿಸಿದಂತೆ ಟ್ಯಾಂಕರ್ ಚಾಲಕ 23 ವರ್ಷದ ಗೋವಿಂದರಾಜನ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಬಂಧಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಅಮ್ಮ, ಐ ಲವ್ ಯೂ.. ಅಂತ ಬರೆದು 7ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ

    ಅಮ್ಮ, ಐ ಲವ್ ಯೂ.. ಅಂತ ಬರೆದು 7ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ

    ನವದೆಹಲಿ: ಏಳನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ನವದೆಹಲಿಯ ಇಂದೇರ್ ಪುರಿ ಎಂಬಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

    ಡಿಸೆಂಬರ್ 1 ರಂದು ಸಂಜೆ 3 ಗಂಟೆ ಸುಮಾರಿಗೆ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. 12 ವರ್ಷದ ಬಾಲಕಿ ಮನೆಯ ಕೋಣೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆಕೆಯ ಸಾವಿಗೆ ಶಾಲೆಯ ಶಿಕ್ಷಕರೇ ಕಾರಣ ಅಂತ ಬಾಲಕಿ ತಾಯಿ ನೇರವಾಗಿ ಆರೋಪಿಸಿರುವುದಾಗಿ ಪೊಲೀಸ್ ಉಪ ಆಯುಕ್ತ ಸಮೀರ್ ಶರ್ಮಾ ತಿಳಿಸಿದ್ದಾರೆ.

    ಆತ್ಮಹತ್ಯೆಗೂ ಮುನ್ನ ಬಾಲಕಿ ತನ್ನ ಕೈಯಲ್ಲಿ, “ಅಮ್ಮ.. ಐ ಲವ್ ಯೂ.. ನಾನು ಈ ಜಗತ್ತನ್ನೇ ಬಿಟ್ಟು ಹೋಗುತ್ತಿದ್ದೇನೆ” ಅಂತ ಬರೆದುಕೊಂಡಿದ್ದಾಳೆ. ಬಾಲಕಿಗೆ ಶಾಲೆಯಲ್ಲಿ ಟೀಚರ್ ಬೈದಿದ್ದಾರೆ. ಇದರಿಂದ ಆಕೆ ಮನನೊಂದಿದ್ದಳು ಅಂತ ತಾಯಿ ಆರೋಪಿಸಿದ್ದು, ಸದ್ಯ ತಾಯಿಯ ಹೇಳಿಕೆಯ ಕುರಿತು ತನಿಖೆ ನಡೆಸುತ್ತಿರುವುದಾಗಿ ಅಂತ ಶರ್ಮಾ ಹೇಳಿದ್ದಾರೆ.

    ಬಾಲಕಿಯ ತಾಯಿ ತೀಸ್ ಹಜಾರಿ ಕೋರ್ಟ್ ನಲ್ಲಿ ವಕೀಲೆಯಾಗಿದ್ದು, ಕೆಲಸಕ್ಕೆ ಹೋಗುವ ಮೊದಲೇ ನಾನು ಆಕೆಯನ್ನು ಕೊನೆಯ ಬಾರಿ ಜೀವಂತವಾಗಿ ನೋಡಿದ್ದೆ. ಸಂಜೆ 4 ಗಂಟೆ ಸುಮಾರಿಗೆ ನಾನು ಮನೆಗೆ ವಾಪಸ್ ಬಂದು ನೋಡಿದಾಗ ಆಕೆ ಶವವಾಗಿದ್ದಳು ಅಂತ ತಾಯಿ ಹೇಳಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

    ಶಾಲೆಯಲ್ಲಿ ಶಿಕ್ಷಕರಿಂದಾಗಿ ನಾನು ಅವಮಾನಿತಳಾಗಿದ್ದೇನೆ ಅಂತ ಆಕೆ ನನ್ನ ಬಳಿ ದೂರಿದ್ದಳು. ನನ್ನ ಮಗಳು ಯಾವ ಟೀಚರ್ ವಿರುದ್ಧ ದೂರು ನೀಡಿದ್ದಳೋ, ಆ ಟೀಚರ್ ಪ್ರತೀ ನಿತ್ಯ ಆಕೆಯನ್ನು ಅವಮಾನಿಸುತ್ತಿದ್ದರಂತೆ. ಅಲ್ಲದೇ ಶುಕ್ರವಾರವೂ ಕೂಡ ಬಯೋಲಾಜಿ ಲ್ಯಾಬ್ ನಲ್ಲಿ ಸುಮಾರು 10 ನಿಮಿಷಗಳ ಕಾಲ ಇತರ ವಿದ್ಯಾರ್ಥಿಗಳ ಮುಂದೆ ಅವಮಾನ ಮಾಡಿದ್ದರಂತೆ. ಇದರಿಂದ ಬೇಸರಗೊಂಡ ಆಕೆ ಶಾಲೆಯ ಬಾತ್ ರೂಮಿನಲ್ಲಿ ಹೋಗಿ ಅತ್ತಿದ್ದಾಳೆ ಅಂತ ಬಾಲಕಿ ಹೇಳಿರುವುದಾಗಿ ತಾಯಿ ಪೊಲೀಸರಿಗೆ ತಿಳಿಸಿದ್ದಾರೆ.

    ಆಕೆ ಹಲವು ಬಾರಿ ಶಾಲೆ ಬದಲಾವಣೆ ಮಾಡುವಂತೆ ನನಗೆ ಒತ್ತಾಯಿಸಿದ್ದಳು. ಆದ್ರೆ ನಾನು, ಇವತ್ತೋ ನಾಳೆಯೋ ಸರಿಹೋಗಬಹುದೆಂದು ಸುಮ್ಮನಾಗಿದ್ದೆ. ಅಲ್ಲದೇ ಈ ವಿಚಾರ ಇಷ್ಟೊಂದು ಮುಂದುವರಿದು, ಆಕೆ ಆತ್ಮಹತ್ಯೆ ಮಾಡಿಕೊಳ್ಳುವ ಯೋಚನೆ ಮಾಡುತ್ತಾಳೆ ಅಂತ ಅಂದುಕೊಂಡಿರಲಿಲ್ಲ ಅಂತ ತಾಯಿ ತನ್ನ ಅಳಲು ತೋಡಿಕೊಂಡಿದ್ದಾರೆ.

    ಹುಟ್ಟುಹಬ್ಬಕ್ಕೆ ಮಗಳೇ ಇಲ್ಲ:
    ಡಿಸೆಂಬರ್ 20ರಂದು ಆಕೆಯ ಹುಟ್ಟುಹಬ್ಬವಾಗಿದ್ದು, ಆಕೆಯನ್ನು ಹೊರಗಡೆ ಕರೆದುಕೊಂಡು ಹೋಗಿ ಬರ್ತ್ ಡೇಯನ್ನು ಅದ್ಧೂರಿಯಾಗಿ ಆಚರಣೆ ಮಾಡಬೇಕು ಅಂತ ಯೋಚನೆ ಮಾಡಿದ್ದೆನು. ಆದ್ರೆ ಇದೀಗ ಆಕೆಯೇ ನಮ್ಮನ್ನ ಬಿಟ್ಟು ಹೋಗಿದ್ದಾಳೆ. ಆಕೆ ಒತ್ತಾಯಿಸುವಾಗಲೇ ನಾನು ಅರ್ಥಮಾಡಿಕೊಂಡು ಆಕೆಯನ್ನು ಬೇರೆ ಶಾಲೆಗೆ ಕಳುಹಿಸಬೇಕಿತ್ತು. ನಾನು ತಪ್ಪು ಮಾಡಿದೆ ಅಂತ ತಾಯಿ ಕಣ್ಣೀರು ಹಾಕಿದ್ದಾರೆ.

    ಸದ್ಯ ಶಾಲೆಯ ಆಡಳಿತ ಮಂಡಳಿ ಈ ಬಗ್ಗೆ ತನಿಖೆ ನಡೆಸಿ ವರದಿಯನ್ನು ದೆಹಲಿ ಪೊಲೀಸರಿಗೆ ಸಲ್ಲಿಸಲಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕುಸ್ತಿಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುವ ಬಾಲಕಿಗೆ ಬೇಕಿದೆ ಸಹಾಯ

    ಕುಸ್ತಿಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುವ ಬಾಲಕಿಗೆ ಬೇಕಿದೆ ಸಹಾಯ

    ಬೆಳಗಾವಿ (ಚಿಕ್ಕೋಡಿ): ಓದಿನಲ್ಲಿ ಮುಂದಿರುವ ಬಾಲಕಿ ಈಗ ಕುಸ್ತಿಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ ಆಗಿದ್ದಾಳೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಬೇಕೆಂಬ ಉತ್ಸಾಹದಲ್ಲಿರುವ ಬಾಲಕಿಗೆ ಬಡತನ ಅಡ್ಡಿಯಾಗಿದೆ.

    ಅಥಣಿ ತಾಲೂಕಿನ ಮೋಳೆ ಗ್ರಾಮದ ವಲೀಮಾ ಗಡ್ಡೇಕರ ಪುತ್ರಿಯಾಗಿರುವ ಅಲ್ಮಾಸ್‍ಗೆ ಈಗ 14 ವರ್ಷ. ಚಿಕ್ಕೋಡಿ ತಾಲೂಕಿನ ಯಾದನವಾಡಿ ಮೊರಾರ್ಜಿ ವಸತಿ ಶಾಲೆಯಲ್ಲಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರತಿಭಾವಂತೆ. ಓದಿನಲ್ಲಿ ಸದಾ ಮುಂದು. ಕುಸ್ತಿ ಕ್ರೀಡೆಯಲ್ಲಿ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸಿ ಈಗ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.

    ಇಸ್ಲಾಂ ಧರ್ಮದಲ್ಲಿ ಮಹಿಳೆಯರಿಗೆ ಶಿಕ್ಷಣ ನೀಡುವುದೇ ಅಪರೂಪ. ಆದರೆ ಈ ಬಾಲಕಿಗೆ ಯಾವುದೇ ಕಟ್ಟಪ್ಪಣೆಗಳನ್ನು ವಿಧಿಸದೇ ಕ್ರೀಡೆ ಮತ್ತು ವಿದ್ಯಾಭ್ಯಾಸಕ್ಕೆ ತಾಯಿ ಪ್ರೋತ್ಸಾಹ ನೀಡುತ್ತಿರೋದು ಹೆಮ್ಮೆಯ ಸಂಗತಿ. ತಾಯಿಯ ಪ್ರೋತ್ಸಾಹಕ್ಕೆ ಮೊರಾರ್ಜಿ ವಸತಿ ಶಾಲೆಯ ಶಿಕ್ಷಕರು ಹಾಗೂ ಸಂಬಂಧಿಕರು ಸಹಕಾರ ನೀಡುತ್ತಿದ್ದಾರೆ.

    ಕಡು ಬಡತನದಲ್ಲಿಯೂ ವಿದ್ಯಾಭ್ಯಾಸ ಮಾಡುತ್ತಾ ಅಲ್ಮಾಸ್ ಕುಸ್ತಿಯಲ್ಲಿ ಭಾಗವಹಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಅಂತರಾಷ್ಟ್ರೀಯ ಮಟ್ಟದಲ್ಲಿ ದೇಶವನ್ನು ಪ್ರತಿನಿಧಿಸಿ ಪದಕ ಗೆದ್ದು ಕೀರ್ತಿ ತರಬೇಕೆಂದು ಬಾಲಕಿಯ ತಾಯಿ ವಲೀಮಾ ಮಗಳ ಸಾಧನೆಗೆ ಸೂಕ್ತ ತರಬೇತಿ ಹಾಗೂ ಕುಸ್ತಿ ಕ್ರೀಡೆಗೆ ಬೇಕಾಗಿರುವ ಗುಣಮಟ್ಟದ ಸಲಕರಣೆಗಳನ್ನು ಕೊಡಿಸಿ ಅವಳ ಪ್ರತಿಭೆಗೆ ಸಹಾಯ ಮಾಡಿ ಎಂದು ಪಬ್ಲಿಕ್ ಟಿವಿಯ ಬೆಳಕು ಕಾರ್ಯಕ್ರಮದ ಮೊರೆ ಬಂದಿದ್ದಾರೆ.

    ಒಟ್ಟಿನಲ್ಲಿ ಮುಸ್ಲಿಂ ಬಾಲಕಿಯೋರ್ವಳು ಕುಸ್ತಿ ಕ್ರೀಡೆಯಲ್ಲಿ ಭಾಗವಹಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದು, ಸಾಧನೆಯ ಹಾದಿಯಲ್ಲಿ ಬೆಳೆಯುತ್ತಿರುವ ಉದಯೋನ್ಮುಖ ಪ್ರತಿಭಾವಂತೆಗೆ ಯಾರಾದ್ರೂ ದಾನಿಗಳು ಸಹಾಯ ಮಾಡುತ್ತಾರೆಂವ ವಿಶ್ವಾಸದಲ್ಲಿ ಪೋಷಕರಿದ್ದಾರೆ.

    https://www.youtube.com/watch?v=danIGq60-E0

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಋತುಚಕ್ರವಾದಾಗ ಮನೆಯಿಂದ ಹೊರಹಾಕಿದ್ರು- ದಾರುಣವಾಗಿ ಮೃತಪಟ್ಟ ಬಾಲಕಿ

    ಋತುಚಕ್ರವಾದಾಗ ಮನೆಯಿಂದ ಹೊರಹಾಕಿದ್ರು- ದಾರುಣವಾಗಿ ಮೃತಪಟ್ಟ ಬಾಲಕಿ

    ಚೆನ್ನೈ: ಋತಚಕ್ರದ ವೇಳೆ ಬಾಲಕಿಯನ್ನು ಕುಟುಂಬದವರು ಹೊರಹಾಕಿದ್ದರಿಂದ ಆ ಬಾಲಕಿ ದಾರುಣವಾಗಿ ಮೃತಪಟ್ಟ ಘಟನೆಯೊಂದು ತಮಿಳುನಾಡಿನ ಅನಿಕಡು ಗ್ರಾಮದಲ್ಲಿ ನಡೆದಿದೆ.

    ವಿಜಯ(12) ಮೃತಪಟ್ಟ ಬಾಲಕಿ. ವಿಜಯ 7ನೇ ತರಗತಿಯಲ್ಲಿ ಓದುತ್ತಿದ್ದಳು. ನ. 12ರಂದು ಬಾಲಕಿಗೆ ಮೊದಲ ಬಾರಿಗೆ ಋತುಚಕ್ರವಾಗಿದೆ. ವಿಜಯಗೆ ಋತುಚಕ್ರದ ವೇಳೆ ಆಕೆಯ ಕುಟುಂಬದವರು ಮನೆಯೊಳಗೆ ಪ್ರವೇಶಿಸಲು ನಿರ್ಬಂಧಿಸಿದ್ದರು.

    ವಿಜಯ ಕುಟುಂಬದವರು ಆಕೆಯನ್ನು ಮನೆಯಿಂದ ಹೊರಹಾಕಿ ಹತ್ತಿರದಲ್ಲೇ ಒಂದು ಗುಡಿಸಲು ನಿರ್ಮಿಸಿಕೊಟ್ಟಿದ್ದರು. ವಿಜಯ 16 ದಿನ ಈ ಗುಡಿಸಲಲ್ಲಿ ಒಬ್ಬಳೇ ವಾಸಿಸಬೇಕೆಂದು ಆಕೆಯ ಕುಟುಂಬದವರು ಹೇಳಿದ್ದರು ಎಂದು ವರದಿಯಾಗಿದೆ.

                                                                                             ಸಾಂದರ್ಭಿಕ ಚಿತ್ರ

    ನ. 16ರಂದು ವಿಜಯ ಗುಡಿಸಲಲ್ಲಿ ಇದ್ದಳು. ಆ ದಿನ ಜೋರು ಗಜ ಚಂಡಮಾರುತದಿಂದಾಗಿ ಗಾಳಿ ಜೋರಾಗಿ ಬೀಸಿತ್ತು. ಹವಾಮಾನ ಇಲಾಖೆ ಮೊದಲೇ ಜನರಿಗೆ ಮನೆಯಿಂದ ಹೊರಬರಬೇಡಿ, ಮನೆಯ ಒಳಗೆ ಸುರಕ್ಷಿತ ಸ್ಥಳದಲ್ಲಿ ಇರಿ ಎಂದು ಎಚ್ಚರಿಕೆ ನೀಡಿತ್ತು. ಈ ಮುನ್ಸೂಚನೆ ಸಿಕ್ಕಿದ್ದರೂ ಮನೆಯವರು ಇದನ್ನು ಲೆಕ್ಕಿಸದೇ ವಿಜಯಗಾಗಿ ಗುಡಿಸಲು ನಿರ್ಮಿಸಿಕೊಟ್ಟಿದ್ದರು.

    ಚಂಡಮಾರುತದ ಕಾರಣ ಜೋರಾಗಿ ಗಾಳಿ ಬೀಸಿ ಅಲ್ಲಿದ್ದ ತೆಂಗಿನಮರ ವಿಜಯ ಮಲಗಿದ್ದ ಗುಡಿಸಲಿನ ಮೇಲೆ ಬಿದ್ದಿದೆ. ಮರ ಬಿದ್ದ ಪರಿಣಾಮ ವಿಜಯ ಮೃತಪಟ್ಟಿದ್ದಾಳೆ. ಜನರು ಬೆಳಗ್ಗೆ ಎದ್ದು ಬಂದು ನೋಡಿದ್ದಾಗ ವಿಜಯಳ ಮೃತದೇಹ ಪತ್ತೆಯಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ವಿಜ್ಞಾನ ಪ್ರಯೋಗದ ವೇಳೆ ಶಿಕ್ಷಕಿಯ ನಿರ್ಲಕ್ಷ್ಯ – ಬಾಲಕಿ ಕಾಲಿನ ಮೇಲೆ ಬಿದ್ದ ಆಸಿಡ್

    ವಿಜ್ಞಾನ ಪ್ರಯೋಗದ ವೇಳೆ ಶಿಕ್ಷಕಿಯ ನಿರ್ಲಕ್ಷ್ಯ – ಬಾಲಕಿ ಕಾಲಿನ ಮೇಲೆ ಬಿದ್ದ ಆಸಿಡ್

    ಶಿವಮೊಗ್ಗ: ವಿಜ್ಞಾನದ ಪ್ರಯೋಗದ ವೇಳೆ ಶಿಕ್ಷಕಿಯ ನಿರ್ಲಕ್ಷ್ಯದಿಂದ ಆರನೇ ತರಗತಿ ಬಾಲಕಿ ಕಾಲಿನ ಮೇಲೆ ಆಸಿಡ್ ಬಿದ್ದ ಘಟನೆ ಶಿವಮೊಗ್ಗದ ಸಾಗರ ರಸ್ತೆಯಲ್ಲಿರುವ ಸೇಂಟ್ ಜೋನ್ಸ್ ಅಕ್ಷರಧಾಮ ಶಾಲೆಯಲ್ಲಿ ನಡೆದಿದೆ. ಘಟನೆಯಲ್ಲಿ ಬಾಲಕಿಯ ತೊಡೆ ಹಾಗೂ ಕಾಲಿನ ಭಾಗದ ಚರ್ಮ ಸುಟ್ಟು ಹೋಗಿದೆ.

    ಶಾಲೆಯಲ್ಲಿ ಹಮ್ಮಿಕೊಂಡಿದ್ದ ವಸ್ತು ಪ್ರದರ್ಶನದ ವೇಳೆ ವಿಜ್ಞಾನದ ಪ್ರಯೋಗಕ್ಕೆ ಆಸಿಡ್ ಬಳಸಲಾಗಿದೆ. ಇಂತಹ ಪ್ರಯೋಗದ ವೇಳೆ ಮಕ್ಕಳ ಕೈಗೆ ಆಸಿಡ್ ಕೊಡುವಂತಿಲ್ಲ ಎಂಬ ನಿಯಮವಿದ್ದರೂ, ಶಾಲೆಯ ಶಿಕ್ಷಕರು ಹಾಗೂ ಆಡಳಿತ ಮಂಡಳಿ ಮಕ್ಕಳಿಂದಲೇ ಈ ಪ್ರಯೋಗ ಮಾಡಿಸುವ ವೇಳೆ ಈ ದುರ್ಘಟನೆ ನಡೆದಿದೆ.

    ಕಾಲು ಸುಟ್ಟುಕೊಂಡ ಬಾಲಕಿಯನ್ನು ತಕ್ಷಣ ಆಸ್ಪತ್ರೆ ಸೇರಿಸಿಲ್ಲ. ಅಲ್ಲದೇ ಪೋಷಕರಿಗೂ ಸಂರ್ಪಕಿಸಿ ಈ ಘಟನೆ ಬಗ್ಗೆ ಮಾಹಿತಿ ನೀಡಿಲ್ಲ. ನಂತರ ತುಂಗಾನಗರ ಠಾಣೆಯಲ್ಲಿ ಪ್ರಕರಣ ದಾಖಲಾದ ಮೇಲೆ ಶಾಲಾ ಆಡಳಿತ ಮಂಡಳಿ ಹಾಗೂ ಶಿಕ್ಷಕರು ತಪ್ಪೋಪ್ಪಿಕೊಂಡಿದ್ದಾರೆ.

    ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಕಾರ್ಯದರ್ಶಿ ಹಾಗೂ ನ್ಯಾಯಾಧೀಶರಾದ ಸೋಮಶೇಖರ್ ಬಾದಾಮಿ ಹಾಗೂ ಬಿಇಓ ಲೋಕೇಶ್ ಅವರ ಸಮ್ಮುಖದಲ್ಲಿ ನಡೆದ ಸಂಧಾನ ಸಭೆಯಲ್ಲಿ ಘಟನೆ ಬಗ್ಗೆ ಶಾಲಾ ಮುಖ್ಯೋಪಾಧ್ಯಾಯರು, ಮುಂದೆ ಇಂತಹ ಘಟನೆ ನಡೆಯದಂತೆ ಎಚ್ಚರಿಕೆ ವಹಿಸುವುದಾಗಿ ತಪ್ಪೋಪ್ಪಿಕೊಂಡಿದ್ದಾರೆ. ಅಲ್ಲದೇ ಪೊಲೀಸರಿಗೆ ಎಫ್‍ಐಆರ್ ಮಾಡಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ.

    ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ಸಮಾಪ್ತಿ ಮಾಡಲಾಗಿದೆ. ಯಾವುದೇ ಕಾರಣಕ್ಕೂ ಪ್ರಯೋಗಾಲಯಗಳಲ್ಲಿ ಮಕ್ಕಳ ಕೈಗೆ ಆಸಿಡ್ ನಂತಹ ಮಾರಕ ವಸ್ತುಗಳನ್ನು ಪ್ರಯೋಗಗಳಿಗೆ ಕೊಡುವಂತಿಲ್ಲ. ಈ ನಿಯಮವನ್ನು ಕಡ್ಡಾಯವಾಗಿ ಪಾಲನೆ ಮಾಡುವುದಾಗಿ ಶಾಲಾ ಆಡಳಿತ ಮಂಡಳಿ ತಿಳಿಸಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • `ಆ’ ದೃಶ್ಯ ನೋಡಿದ್ದಕ್ಕೆ ಬಾಲಕಿಯನ್ನು ಕೊಂದೇ ಬಿಟ್ಟಳು ಚಿಕ್ಕಮ್ಮ!

    `ಆ’ ದೃಶ್ಯ ನೋಡಿದ್ದಕ್ಕೆ ಬಾಲಕಿಯನ್ನು ಕೊಂದೇ ಬಿಟ್ಟಳು ಚಿಕ್ಕಮ್ಮ!

    ಮೈಸೂರು: ಇಡೀ ಜಿಲ್ಲೆಯನ್ನೇ ಬೆಚ್ಚಿ ಬೀಳಿಸಿದ್ದ ಅಪ್ರಾಪ್ತ ಬಾಲಕಿಯ ಕೊಲೆ ಪ್ರಕರಣದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಶಾಲೆಗೆ ಹೋಗಲು ಸಿದ್ಧವಾಗುತ್ತಿದ್ದ ಬಾಲಕಿ ಚಿಕ್ಕಮ್ಮನ ನೀಚಕೃತ್ಯಕ್ಕೆ ಬಲಿಯಾಗಿದ್ದಾಳೆ ಎಂಬ ಸ್ಫೋಟಕ ಮಾಹಿತಿ ಬೆಳಕಿಗೆ ಬಂದಿದೆ.

    ನವೆಂಬರ್ 16 ರಂದು ಜಿಲ್ಲೆಯ ನಂಜನಗೂಡು ತಾಲೂಕಿನ ಕೈಗಾರಿಕಾ ಪ್ರದೇಶದಲ್ಲಿ ಬಾಲಕಿ ಐಶ್ವರ್ಯಳನ್ನು ಕೊಲೆ ಮಾಡಲಾಗಿತ್ತು. ಬಾಲಕಿಯ ಕೊಲೆ ಪ್ರಕರಣವನ್ನು ಬೇಧಿಸಿರುವ ಪೊಲೀಸರು ಐಶ್ವರ್ಯಳ ಚಿಕ್ಕಮ್ಮ ರಾಜಮ್ಮ, ಪ್ರಿಯಕರ ಸಿದ್ದರಾಜುರನ್ನ ಬಂಧಿಸಿದ್ದಾರೆ.

    ಏನಿದು ಪ್ರಕರಣ?
    ನವೆಂಬರ್ 16 ರಂದು ಕೊಲೆ ಮಾಡಲಾಗಿತ್ತು. ಬಾಲಕಿಯ ತಂದೆ, ತಾಯಿ ತಳ್ಳು ಗಾಡಿಯಲ್ಲಿ ಹೋಟೆಲ್ ನಡೆಸುತ್ತಿದ್ದರು. ಗುಡಿಸಲಿನಲ್ಲಿ ವಾಸವಿದ್ದ ಕುಟುಂಬದಲ್ಲಿ ಬಾಲಕಿ 8ನೇ ತರಗತಿ ಓದುತ್ತಿದ್ದಳು. ಆದರೆ ಅಂದು ಗುಡಿಸಲಿನಲ್ಲಿ ಒಬ್ಬಳೇ ಇದ್ದ ಬಾಲಕಿಯನ್ನು ಅಂದು ಕೊಲೆ ಮಾಡಲಾಗಿತ್ತು. ಬಾಲಕಿಯ ತಂದೆ ಮಗಳ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿದೆ ಎಂದು ಪೊಲೀಸರಿಗೆ ದೂರು ನೀಡಿದ್ದರು.

    ಕೊಲೆಗೆ ಕಾರಣವೇನು:
    ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸರು ಬಾಲಕಿಯೊಂದಿಗೆ ಇದ್ದ ರಾಜಮ್ಮ ಮೇಲೆ ಶಂಕೆ ವ್ಯಕ್ತಪಡಿಸಿ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಈ ವೇಳೆ ಕೊಲೆ ಹಿಂದಿನ ಕಾರಣ ಬೆಳಕಿಗೆ ಬಂದಿದೆ. ರಾಜಮ್ಮ, ಸಿದ್ದರಾಜು ಎಂಬಾತನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದು, ಅಂದು ಐಶ್ವರ್ಯ ಕುಟುಂಬ ವಾಸವಿದ್ದ ಗುಡಿಸಲಿನ ಹಿಂಭಾಗದಲ್ಲಿ ಇಬ್ಬರು ದೈಹಿಕ ಸಂಪರ್ಕ ಬೆಳೆಸಿದ್ದರು. ಆದರೆ ಇದನ್ನು ಐಶ್ವರ್ಯ ಆಕಸ್ಮಾತ್ ಆಗಿ ನೋಡಿದ್ದಳು. ಅಕ್ರಮ ಸಂಬಂಧದ ವಿಚಾರವನ್ನು ಐಶ್ವರ್ಯ ಎಲ್ಲರಿಗೂ ಹೇಳಿ ಬಿಡುತ್ತಾಳೆ ಎಂದು ಹೆದರಿದ ರಾಜಮ್ಮ, ಪ್ರೇಮಿ ಸಿದ್ದರಾಜು ಜೊತೆ ಸೇರಿ ಐಶ್ವರ್ಯಳ ಕತ್ತು ಹಿಸುಕಿ ಕೊಲೆ ಮಾಡಿದ್ದರು. ಬಳಿಕ ರಾಜಮ್ಮ ತನಗೆ ಏನು ಗೊತ್ತೇ ಇಲ್ಲದಂತೆ ಐಶ್ವರ್ಯ ಅಂತ್ಯಕ್ರಿಯೆಯಲ್ಲೂ ಭಾಗಿಯಾಗಿದ್ದಳು.

    ಘಟನೆ ಕುರಿತು ಮಾಹಿತಿ ನೀಡಿದ ಪೊಲೀಸರು ಬಾಲಕಿ ಮೇಲೆ ಅತ್ಯಾಚಾರ ಆಗಿದೆಯೋ ಇಲ್ಲವೋ ಎಂಬುದು ವೈದ್ಯಕೀಯ ವರದಿ ಬಂದ ನಂತರ ಸ್ಪಷ್ಟವಾಗಲಿದೆ. ಸದ್ಯಕ್ಕೆ ಆರೋಪಿಗಳನ್ನು ಬಂಧಿಸಿ ವಿಚಾರಣೆ ಮುಂದುವರಿಸಿದ್ದೇವೆ ಎಂದು ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಆಟವಾಡುತ್ತಿದ್ದ 5ರ ಬಾಲೆಯ ಮೇಲೆ 12ರ ಪೋರನಿಂದ ಅತ್ಯಾಚಾರ!

    ಆಟವಾಡುತ್ತಿದ್ದ 5ರ ಬಾಲೆಯ ಮೇಲೆ 12ರ ಪೋರನಿಂದ ಅತ್ಯಾಚಾರ!

    ಲಕ್ನೋ: ಮನೆಯ ಮುಂದೆ ಆಟವಾಡುತ್ತಿದ್ದ 5 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಅಮಾನವೀಯ ಕೃತ್ಯ ಉತ್ತರ ಪ್ರದೇಶದ ಷಹಜಾನ್‍ಪುರ್ ಜಿಲ್ಲೆಯಲ್ಲಿ ಬುಧವಾರ ನಡೆದಿದೆ.

    ಅತ್ಯಾಚಾರ ಎಸಗಿದ ಬಾಲಕ 12 ವರ್ಷದವನಾಗಿದ್ದು, ಕೃತ್ಯ ಎಸಗಿ ಪರಾರಿಯಾಗಿದ್ದಾನೆ. ಈ ಕುರಿತು ಕಾಲನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯ ಬಂಧನಕ್ಕಾಗಿ ಹುಡುಕಾಟ ನಡೆದಿದೆ ಅಂತಾ ಗುರುವಾರ ಪೊಲೀಸರು ತಿಳಿಸಿದ್ದಾರೆ ಎಂದು ವರದಿಯಾಗಿದೆ.

    ಘಟನೆಯ ವಿವರ:
    ಬಾಲಕಿ ಮನೆಯ ಮುಂದೆ ಆಟವಾಡುತ್ತಿದ್ದಳು. ಈ ವೇಳೆ ಅಲ್ಲಿಯೇ ಇದ್ದ 12 ವರ್ಷದ ಬಾಲಕ ಅಕೆಯನ್ನು ಮನೆಯ ಒಳಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ. ಬಳಿಕ ಅಲ್ಲಿಂದ ಪರಾರಿಯಾಗಿದ್ದಾನೆ. ಈ ಕುರಿತು ಬಾಲಕಿಯ ಪೋಷಕರು ಪ್ರಕರಣ ದಾಖಲಿಸಿದ್ದು, ಅತ್ಯಾಚಾರ ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ. ಆರೋಪಿಯ ವಿರುದ್ಧ ಪೋಕ್ಸೊ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    16ರ ಬಾಲೆ ಮೇಲೆ ಅತ್ಯಾಚಾರ:
    ಇಂತಹದ್ದೇ ಘಟನೆಯೊಂದು ಸೋಮವಾರ ರಾಜಸ್ಥಾನದ ಭೋಪಾ ಠಾಣಾ ವ್ಯಾಪ್ತಿಯ ಗ್ರಾಮದಲ್ಲಿ ನಡೆದಿತ್ತು. ನೆರಮನೆಯಲ್ಲಿ ಕೈ ಬೋರ್ ನೀರು ತರಲು ಹೋಗಿದ್ದ 16 ವರ್ಷದ ಬಾಲಕಿಯ ಮೇಲೆ ಯುವಕರು ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಸೋಮವಾರ ನಡೆದಿತ್ತು. ಈ ಕುರಿತು ಸಂತ್ರಸ್ತ ಬಾಲಕಿಯ ಸಹೋದರ ಭೋಪಾ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದ.

    ಬೋರ್ ನೀರು ತರಲು ಸಹೋದರಿ ಹೋಗಿದ್ದಳು. ಈ ವೇಳೆ ಅಲ್ಲಿಯೇ ಇದ್ದ ಕೆಲವು ಯುವಕರು ಆಕೆಯನ್ನು ಎಳೆದುಕೊಂಡು ಹೋಗಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಜೊತೆಗೆ ಅತ್ಯಾಚಾರದ ದೃಶ್ಯ ವಿಡಿಯೋ ಮಾಡಿಕೊಂಡಿದ್ದಾರೆ ಎಂದು ಸಂತ್ರಸ್ತ ಬಾಲಕಿಯ ಸಹೋದರ ದೂರಿನಲ್ಲಿ ತಿಳಿಸಿದ್ದ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಆನೆ ದಾಳಿಯಿಂದ ಬೆಳೆ ನಷ್ಟ- ಸಿಎಂ ಎಚ್‍ಡಿಕೆಗೆ ಬಾಲಕಿ ಮನವಿ

    ಆನೆ ದಾಳಿಯಿಂದ ಬೆಳೆ ನಷ್ಟ- ಸಿಎಂ ಎಚ್‍ಡಿಕೆಗೆ ಬಾಲಕಿ ಮನವಿ

    ಹಾಸನ: ಮಲೆನಾಡು ಭಾಗಗಳಲ್ಲಿ ಕಾಡಾನೆಗಳ ದಾಳಿಯಿಂದ ಬೇಸತ್ತಿರುವ ಸಕಲೇಶಪುರ ತಾಲೂಕಿನ ಹೊಸಗದ್ದೆ ಗ್ರಾಮದ ಬಾಲಕಿ ಸಿಎಂ ಕುಮಾರಸ್ವಾಮಿಯವರಿಗೆ ವಿಡಿಯೋ ಮೂಲಕ ಮನವಿ ಮಾಡಿಕೊಂಡಿದ್ದಾಳೆ.

    ಹೌದು, ಮಲೆನಾಡು ಭಾಗಗಳಲ್ಲಿ ಕಾಡಾನೆ ಮತ್ತು ಮಾನವನ ನಡುವಿನ ಸಂಘರ್ಷ ಮುಂದುವರೆದಿದೆ. ಸಕಲೇಶಪುರ ತಾಲೂಕಿನ ಹೊಸಗದ್ದೆ ಗ್ರಾಮದ ಸುತ್ತಮುತ್ತ ಆನೆಗಳ ಹಿಂಡು ಬೀಡುಬಿಟ್ಟಿದೆ. ಅಲ್ಲದೇ ಒಂಟಿಸಲಗವೊಂದು ಹಾಡಹಗಲೇ ಭತ್ತದಗದ್ದೆಯಲ್ಲಿ ಓಡಾಟ ನಡೆಸಿದೆ.

    ಕಾಡಾನೆಗಳ ದಾಳಿಯಿಂದಾಗಿ ಕಾಫಿ, ಭತ್ತ ಸೇರಿದಂತೆ ಇತರೆ ಬೆಳೆಗಳ ನಷ್ಟದೊಂದಿಗೆ ಸ್ಥಳೀಯರು ಜೀವ ಭಯದಲ್ಲಿ ಓಡಾಡುವಂತಾಗಿದೆ. ಅಲ್ಲದೇ ಇದರಿಂದ ಬೇಸತ್ತಿರುವ ಹೊಸಗದ್ದೆ ಗ್ರಾಮದ ವಿಸ್ಮಯ ಎಂಬ ಬಾಲಕಿಯು ವಿಡಿಯೋ ಮುಖಾಂತರ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಬಳಿ ಮನವಿ ಮಾಡಿದ್ದಾಳೆ.

    ವಿಡಿಯೋದಲ್ಲಿ ಏನಿದೆ?
    ನಮಸ್ತೆ. ನನ್ನ ಹೆಸರು ವಿಸ್ಮಯ. ನಾನು ಹೊಸಗದ್ದೆ ಗ್ರಾಮದ ನಿವಾಸಿ. ಆನೆಗಳ ಹಾವಳಿ ಹೆಚ್ಚಾಗಿದ್ದು, ಇವುಗಳ ದಾಳಿಯಿಂದಾಗಿ ಸಕಲೇಶಪುರ ತಾಲೂಕಿನ ಬಹುತೇಕ ಹಳ್ಳಿಗಳಲ್ಲಿ ಬೆಳೆ ನಷ್ಟವಾಗಿದೆ. ಹೀಗಾಗಿ ಮುಖ್ಯಮಂತ್ರಿ ಕುಮಾರಸ್ವಾಮಿಗಳು ಪರಿಹಾರ ಕೊಡಬೇಕೆಂದು ಕೇಳಿಕೊಳ್ಳುತ್ತೇನೆಂದು ಹೇಳಿದ್ದಾಳೆ.

    https://www.youtube.com/watch?v=pe1HbEhMRjI

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಸ್ನಾನಕ್ಕೆಂದು ಸಿದ್ಧಪಡಿಸಿದ್ದ ಬಿಸಿ ನೀರಿಗೆ ಬಿದ್ದು ಬಾಲಕಿ ಸಾವು!

    ಸ್ನಾನಕ್ಕೆಂದು ಸಿದ್ಧಪಡಿಸಿದ್ದ ಬಿಸಿ ನೀರಿಗೆ ಬಿದ್ದು ಬಾಲಕಿ ಸಾವು!

    ಮಂಗಳೂರು: ಸ್ನಾನ ಮಾಡಲೆಂದು ಸಿದ್ಧಪಡಿಸಿದ್ದ ಬಿಸಿ ನೀರು ಮೈಮೇಲೆ ಬಿದ್ದು ಚಿಂತಾಜನಕ ಸ್ಥಿತಿಯಲ್ಲಿದ್ದ ಐದು ವರ್ಷದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ.

    ಪುತ್ತೂರಿನ ಬೆದ್ರಾಳದ ರಮೇಶ್ ಗೌಡ ಎಂಬವರ ಪುತ್ರಿ ತನ್ವಿ(5) ಮೃತಪಟ್ಟ ಬಾಲಕಿ. ಎರಡು ದಿನಗಳ ಹಿಂದೆ ಮನೆಯಲ್ಲಿ ಸ್ನಾನಕ್ಕೆಂದು ಸಿದ್ಧಪಡಿಸಿದ್ದ ಬಿಸಿ ನೀರು ಆಕಸ್ಮಿಕವಾಗಿ ಬಾಲಕಿಯ ಮೇಲೆ ಬಿದ್ದಿತ್ತು. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ತನ್ವಿಯನ್ನು ಪೋಷಕರು ಪುತ್ತೂರಿನ ಧನ್ವಂತರಿ ಆಸ್ಪತ್ರೆಗೆ ಸೇರಿಸಿದ್ದರು. ಒಂದು ದಿನ ಚಿಕಿತ್ಸೆ ನೀಡಿದ ಅಲ್ಲಿನ ವೈದ್ಯರು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ತೆರಳುವಂತೆ ಸೂಚಿಸಿದ್ದರು.

    ವೈದ್ಯರ ಸೂಚನೆ ಮೇರೆಗೆ ಪೋಷಕರು ಬಾಲಕಿಯನ್ನು ಮಂಗಳೂರಿನ ಫಾದರ್ ಮುಲ್ಲರ್ಸ್ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಆಸ್ಪತ್ರೆಗೆ ಕರೆತರುವಾಗಲೇ ಮಗು ಮೃತಪಟ್ಟಿದೆ ಎಂದು ವೈದ್ಯರು ದೃಢಪಡಿಸಿದ್ದಾರೆ. ಪುತ್ತೂರಿನ ಧನ್ವಂತರಿ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ನೀಡದೇ ನಿರ್ಲಕ್ಷ್ಯ ವಹಿಸಿದ್ದರಿಂದಲೇ ಮಗಳು ಸಾವಿಗೀಡಾಗಿದ್ದಾಳೆಂದು ಪೋಷಕರು ಗಂಭೀರವಾಗಿ ಆರೋಪಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಎರಡೇ ವರ್ಷಕ್ಕೆ ಇಡೀ ದೇಶದ ಗಮನ ಸೆಳೆದ ಮೈಸೂರಿನ ಪುಟ್ಟ ಪೋರಿ!

    ಎರಡೇ ವರ್ಷಕ್ಕೆ ಇಡೀ ದೇಶದ ಗಮನ ಸೆಳೆದ ಮೈಸೂರಿನ ಪುಟ್ಟ ಪೋರಿ!

    ಮೈಸೂರು: ಸಾಂಸ್ಕೃತಿಕ ನಗರದಲ್ಲಿ ಪುಟ್ಟಪೋರಿ ತನ್ನ ವಯಸ್ಸಿಗೆ ಮೀರಿದ ಸಾಧನೆ ಮಾಡಿದ್ದಾಳೆ. ಎರಡೇ ವರ್ಷಕ್ಕೆ ಇಡೀ ಜಗತ್ತನ್ನು ಗೆದ್ದು ಬಿಗಿದ್ದಾಳೆ. ತನ್ನ ಬುದ್ಧಿ ಸಾಮಾರ್ಥ್ಯದಿಂದಲೇ ಇಂಡಿಯನ್ ಬುಕ್ ಆಫ್ ರೆಕಾರ್ಡ್ ಸೇರಿ ಇಡೀ ಭಾರತದ ಗಮನ ಸೆಳೆದಿದ್ದಾಳೆ.

    ಮೈಸೂರಿನ ಹಳ್ಳದಕೇರಿ ನಿವಾಸಿಯಾಗಿರುವ ಗಣೇಶ್ ಹಾಗೂ ನಯನ ದಂಪತಿಯ ಸುಪುತ್ರಿ ದ್ಯುತಿ ಯಾವ ಕಾರು? ಯಾವ ಟ್ರೈ ಆಂಗಲ್? ಯಾವ ಪ್ರಾಣಿ? ಯಾವ ದೇಶ? ಹೀಗೆ ಯಾವುದೇ ಪ್ರಶ್ನೆಗಳಿಗೆ ಥಟ್ ಅಂತ ಉತ್ತರಿಸುತ್ತಾಳೆ. ತನ್ನ ಎರಡನೇ ವಯಸ್ಸಿನಲ್ಲೇ ಈ ಪೋರಿ ಇಡೀ ಭಾರತವೇ ತಿರುಗಿ ನೋಡುವಂತ ಸಾಧನೆ ಮಾಡಿದ್ದಾಳೆ.

    ದ್ಯುತಿ ಮಾಡಿರುವ ಸಾಧನೆ ನೋಡಿ ಇಂಡಿಯನ್ ಬುಕ್ ಆಫ್ ರೆಕಾರ್ಡ್ ಸಂಸ್ಥೆ ಈ ವರ್ಷದ `ಯೆಂಗೆಸ್ಟ್ ಟ್ಯಾಲೆಂಟೆಡ್ ಗರ್ಲ್’ ವಿಭಾಗದ ಪ್ರಶಸ್ತಿ ನೀಡಿ ಗೌರವಿಸಿದೆ. ಎರಡು ವರ್ಷದೊಳಗಿನ ಮಕ್ಕಳ ಬುದ್ಧಿ ಶಕ್ತಿಗಿಂತ ದ್ಯುತಿಯಲ್ಲಿನ ಬುದ್ಧಿ ಶಕ್ತಿ ಹೆಚ್ಚಿದೆ. ದ್ಯುತಿ ಎಲ್ಲ ಪ್ರಾಣಿಗಳ ಹೆಸರು, ವಾಹನಗಳ ಹೆಸರು, ದೇಶದ ಹೆಸರು ಹಾಗೂ ಪದ್ಯಗಳನ್ನು ಸರಾಗವಾಗಿ ಹೇಳುತ್ತಾಳೆ. ಅಲ್ಲದೆ ಎರಡರಿಂದ ಮೂರು ಕೆಜಿ ತೂಕವನ್ನು ಎತ್ತಿ ತನ್ನ ತೋಳ್ಬಲವನ್ನು ಪ್ರದರ್ಶಿಸಿದ್ದಾಳೆ.

    ದ್ಯುತಿಯ ಈ ಟ್ಯಾಲೆಂಟ್ ಅನ್ನು ಗುರುತಿಸಿದ ತಂದೆ ಗಣೇಶ್ ಹಾಗೂ ತಾಯಿ ನಯನ ಮಗಳ ಚುರುಕುತನವನ್ನು ಜಗತ್ತಿಗೆ ತಿಳಿಸುವ ಪ್ರಯತ್ನ ಮಾಡಿದರು. ಇಂಡಿಯನ್ ಬುಕ್ ಆಫ್ ರೆಕಾರ್ಡ್‍ಗೆ ಅರ್ಜಿ ಸಲ್ಲಿಸಿ ವಿಡಿಯೋ ಮೂಲಕ ಮಗಳ ಚಟುವಟಿಕೆಗಳನ್ನು ಸಂಸ್ಥೆಗೆ ಕಳುಹಿಸಿದ್ದರು. ದ್ಯುತಿ ವಿಡಿಯೋ ನೋಡಿದ ಇಂಡಿಯನ್ ಬುಕ್ ಆಫ್ ರೆಕಾರ್ಡ್ ಸಂಸ್ಥೆ ತಜ್ಞರಿಂದ ಮಗುವಿನ ಬುದ್ಧಿ ಸಾಮರ್ಥ್ಯದ ಬಗ್ಗೆ ಪರಿಶೀಲನೆ ನಡೆಸಿ ದೃಢಿಕರಿಸಿಕೊಂಡಿತು. ನಂತರ ಈ ವರ್ಷದ ಬಂದಿದ್ದ ಟ್ಯಾಲೆಂಟೆಡ್ ಮಕ್ಕಳ ಪೈಕಿ ದ್ಯುತಿ ಅತಿ ಹೆಚ್ಚು ಬುದ್ಧಿವಂತೆ ಹಾಗೂ ಯೆಂಗೆಸ್ಟ್ ಟ್ಯಾಲೆಂಟ್ ಗರ್ಲ್ ಎಂದು ನಿರ್ಧಿರಿಸಿ ಮೈಸೂರಿಗೆ ಆಗಮಿಸಿ ಪ್ರಶಸ್ತಿ ನೀಡಿದ್ದಾರೆ. ಈ ಪ್ರಶಸ್ತಿ ದ್ಯುತಿ ಪೋಷಕರಲ್ಲಿ ಸಂತಸ ತಂದಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews