Tag: ಬಾಲಯ್ಯ

  • ನಾಯಕಿ ಹನಿ ರೋಸ್ ಜೊತೆ ಬಾಲಯ್ಯ ಪಾರ್ಟಿ

    ನಾಯಕಿ ಹನಿ ರೋಸ್ ಜೊತೆ ಬಾಲಯ್ಯ ಪಾರ್ಟಿ

    `ಅಖಂಡ’ ಚಿತ್ರದ ಸಕ್ಸಸ್ ನಂತರ `ವೀರಸಿಂಹ ರೆಡ್ಡಿ’ (Veerasimha Reddy) ಸಕ್ಸಸ್ ಅಲೆಯಲ್ಲಿ ನಟ ಬಾಲಯ್ಯ ತೇಲುತ್ತಿದ್ದಾರೆ. ಸಿನಿಮಾ ಕೋಟಿ ಕೋಟಿ ಕಲೆಕ್ಷನ್ ಮಾಡಿದ ಖುಷಿಯಲ್ಲಿ ಚಿತ್ರತಂಡ ಸಕ್ಸಸ್ ಪಾರ್ಟಿ ಮಾಡಿದೆ. ನಟಿ ಹನಿ ರೋಸ್ (Honey Rose) ಜೊತೆ ತೆಗೆದಿರುವ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡ್ತಿದೆ.

    ಟಾಲಿವುಡ್ (Tollywood) ಅಂಗಳದಲ್ಲಿ ಸದ್ಯ ನಂದಮೂರಿ ಬಾಲಕೃಷ್ಣ (Nandamuri Balakrishna) ಅವರದ್ದೇ ಸದ್ದು ಸುದ್ದಿ. `ವೀರಸಿಂಹ ರೆಡ್ಡಿ’ ಚಿತ್ರದಲ್ಲಿ ಬಾಲಯ್ಯ ಖಡಕ್ ಆಗಿ ಅಬ್ಬರಿಸಿದ್ದರು. ದುನಿಯಾ ವಿಜಯ್ ವಿಲನ್ ಆಗಿ ಟಕ್ಕರ್ ಕೊಟ್ಟಿದ್ದರು. ಜ.12ಕ್ಕೆ ಸಿನಿಮಾ ತೆರೆಗೆ ಅಬ್ಬರಿಸಿತ್ತು. ರಿಲೀಸ್ ಕೆಲವೇ ದಿನಕ್ಕೆ 124 ಕೋಟಿ ರೂ. ಕಲೆಕ್ಷನ್ ಮಾಡಿದೆ. ಹೀಗಿರುವಾಗ ಚಿತ್ರದ ನಾಯಕಿ ಹನಿ ರೋಸ್ ಜೊತೆ ಬಾಲಯ್ಯ (Balayya) ಸಕ್ಸಸ್ ಪಾರ್ಟಿ ಮಾಡಿದ್ದಾರೆ. ಇದನ್ನೂ ಓದಿ: ರಾಜಮೌಳಿ ಹತ್ಯೆಗೆ ಸ್ಕೆಚ್ ಹಾಕಿದ ಡೈರೆಕ್ಟರ್ಸ್ : ಬಾಯ್ಬಿಟ್ಟ ವರ್ಮಾ

    ಸದ್ಯ ಈ ಪಾರ್ಟಿಯಲ್ಲಿ ಬಾಲಕೃಷ್ಣ ಹಾಗೂ ನಟಿ ಹನಿ ರೋಸ್ ಕೈ ಬಳಸಿ ವಿಭಿನ್ನ ಶೈಲಿಯಲ್ಲಿ ಕುಡಿಯುತ್ತಿರುವ ಫೋಟೊವೊಂದು ವೈರಲ್ ಆಗಿದೆ. ಈ ಫೋಟೋ ನೋಡಿ ನೆಟ್ಟಿಗರು ಬಗೆ ಬಗೆಯ ಕಾಮೆಂಟ್‌ಗಳನ್ನು ಮಾಡುತ್ತಿದ್ದಾರೆ.

    ಇನ್ನು ನಟಿ ಹನಿ ರೋಸ್ ಮೂಲತಃ ಮಲಯಾಳಂನವರಾಗಿದ್ದು, `ವೀರಸಿಂಹ ರೆಡ್ಡಿ’ ಮೂಲಕ ಟಾಲಿವುಡ್ ಪ್ರವೇಶಿಸಿದ್ದಾರೆ. ಈ ಚಿತ್ರದಲ್ಲಿ ಹನಿ ರೋಸ್ ಬಾಲಕೃಷ್ಣ ಪತ್ನಿ ಮೀನಾಕ್ಷಿ ಪಾತ್ರವನ್ನು ನಿರ್ವಹಿಸಿದ್ದರು. ಇನ್ನು ಸಕ್ಸಸ್ ಪಾರ್ಟಿಯಲ್ಲಿ ನೇರಳೆ ಬಣ್ಣದ ಗೌನ್ ಧರಿಸಿದ್ದ ನಟಿ ಹನಿ ರೋಸ್ ಕ್ಯಾಮೆರಾಗೆ ಹಾಟ್ ಪೋಸ್ ಕೊಟ್ಟಿದ್ದು, ಈ ಚಿತ್ರಗಳೂ ಸಹ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಅಷ್ಟೇ ಅಲ್ಲದೇ ಅನಿಲ್ ರವಿಪುಡಿ (Anil Ravipudi) ನಿರ್ದೇಶಿಸಲಿರುವ ಬಾಲಕೃಷ್ಣ ನಟನೆಯ ಮುಂದಿನ ಚಿತ್ರಕ್ಕೂ ಸಹ ಹನಿ ರೋಸ್ ನಾಯಕಿಯಾಗಲಿದ್ದಾರೆ ಎಂಬ ಸುದ್ದಿ ಹೊರಬಿದ್ದಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಬಾಲಯ್ಯ ಮುಂದೆ ಅಬ್ಬರಿಸಲು ದುನಿಯಾ ವಿಜಯ್ ಪಡೆದ ಸಂಭಾವನೆ ಎಷ್ಟು ಗೊತ್ತಾ?

    ಬಾಲಯ್ಯ ಮುಂದೆ ಅಬ್ಬರಿಸಲು ದುನಿಯಾ ವಿಜಯ್ ಪಡೆದ ಸಂಭಾವನೆ ಎಷ್ಟು ಗೊತ್ತಾ?

    ಸ್ಯಾಂಡಲ್‌ವುಡ್ (Sandalwood) `ಕರಿಯ’ ದುನಿಯಾ ವಿಜಯ್ 49ನೇ ವರ್ಷದ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಈ ಸ್ಪೆಷಲ್ ಡೇ ವೇಳೆ ದುನಿಯಾ ವಿಜಯ್ ಬಗ್ಗೆ ಇಂಟರೆಸ್ಟಿಂಗ್ ಮಾಹಿತಿವೊಂದು ಹೊರಬಿದ್ದಿದೆ. ಸೂಪರ್ ಸ್ಟಾರ್ ಬಾಲಯ್ಯ (Balayya) ಮುಂದೆ ಅಬ್ಬರಿಸಲು ದುನಿಯಾ ವಿಜಯ್ (Duniya Vijay) ದೊಡ್ಡ ಮೊತ್ತದ ಸಂಭಾವನೆಯನ್ನೇ ಪಡೆದಿದ್ದಾರೆ ಎನ್ನಲಾಗುತ್ತಿದೆ.

    ಕನ್ನಡ ಚಿತ್ರರಂಗದ `ಸಲಗ’ (Salaga) ದುನಿಯಾ ವಿಜಯ್‌ಗೆ ಯಾವುದೇ ಪಾತ್ರ ಕೊಟ್ಟರು ಅಚ್ಚುಕಟ್ಟಾಗಿ ನಿಭಾಯಿಸುವ ಪ್ರತಿಭಾನ್ವಿತ ನಟ, ಆಕ್ಟಿಂಗ್‌ಗೂ ಸೈ ಮತ್ತು ನಿರ್ದೇಶನಕ್ಕೂ ಜೈ ಎನಿಸಿಕೊಂಡಿದ್ದಾರೆ. ಹುಟ್ಟುಹಬ್ಬದ ಸಂಭ್ರಮದ ನಡುವೆ ದುನಿಯಾ ವಿಜಯ್ ಬಗ್ಗೆ ಅಚ್ಚರಿಯ ವಿಚಾರವೊಂದು ಸದ್ದು ಮಾಡ್ತಿದೆ.

    ಇತ್ತೀಚೆಗಷ್ಟೇ ತೆಲುಗಿನ `ವೀರಸಿಂಹ ರೆಡ್ಡಿ’ (Veera Simha Reddy) ಸಿನಿಮಾದಲ್ಲಿ ಬಾಲಯ್ಯ ಮುಂದೆ ಖಡಕ್ ಆಗಿ ಅಬ್ಬರಿಸಿದ್ದಾರೆ. ಸಿನಿಮಾಗೆ ಪ್ರಶಂಸೆಯ ಸುರಿಮಳೆಯೇ ಹರಿದು ಬರುತ್ತಿದೆ. ಪಕ್ಕದ ರಾಜ್ಯದ ಜೊತೆ ಕರ್ನಾಟಕದಲ್ಲೂ ಈ ಸಿನಿಮಾ ಸದ್ದು ಮಾಡ್ತಿದೆ. ಟಿಕೆಟ್ ಸೋಲ್ಡ್ ಔಟ್ ಆಗುತ್ತಿದೆ. ಇದನ್ನೂ ಓದಿ:`ಕಾಂತಾರ’ ಸಕ್ಸಸ್: ದೈವಕ್ಕೆ ಹರಕೆ ತೀರಿಸಿದ ರಿಷಬ್ ಶೆಟ್ಟಿ

    ಇನ್ನೂ ಸೂಪರ್ ಸ್ಟಾರ್ ಬಾಲಯ್ಯ ಮುಂದೆ ವಿಲನ್ ಆಗಿ ನಟಿಸಲು 1 ಕೋಟಿ ರೂ. ಸಂಭಾವನೆ ಪಡೆದಿದ್ದಾರೆ ಎನ್ನಲಾಗುತ್ತಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಕರ್ನಾಟಕದಲ್ಲಿ ಈ ವಾರ ಪರಭಾಷಾ ಚಿತ್ರಗಳದ್ದೇ ಹಾವಳಿ

    ಕರ್ನಾಟಕದಲ್ಲಿ ಈ ವಾರ ಪರಭಾಷಾ ಚಿತ್ರಗಳದ್ದೇ ಹಾವಳಿ

    ವಾರ ಕರ್ನಾಟಕದಲ್ಲಿ ಕನ್ನಡ ಚಿತ್ರಗಳಿಗೆ ಥಿಯೇಟರ್ (Theatre) ಸಿಗುತ್ತಾ ಎನ್ನುವ ಆತಂಕ ಎದುರಾಗಿದೆ. ಸಂಕ್ರಾಂತಿ ಹಬ್ಬಕ್ಕೆ ಸಾಮಾನ್ಯವಾಗಿ ತೆಲುಗು ಮತ್ತು ತಮಿಳಿನ ಭಾರೀ ಬಜೆಟ್ ಚಿತ್ರಗಳು ಬಿಡುಗಡೆ ಆಗುವುದು ವಾಡಿಕೆ. ಈ ಬಾರಿಯೂ ಅಂತಹ ದೊಡ್ಡ ಬಜೆಟ್  ಮತ್ತು ಹೆಸರಾಂತ ನಟರೇ ನಟಿಸಿರುವ ಚಿತ್ರಗಳು ತೆರೆ ಕಾಣುತ್ತಿವೆ. ಆ ನಟರ ಚಿತ್ರಗಳು ಕರ್ನಾಟಕದಲ್ಲೂ ಈ ಹಿಂದೆ ಬಾಕ್ಸ್ ಆಫೀಸ್ ಕೊಳ್ಳೆ ಹೊಡೆದಿವೆ. ಹೀಗಾಗಿ ಕನ್ನಡ ಚಿತ್ರಗಳಿಗೆ ಅವುಗಳಿಂದಾಗಿ ನಾನಾ ಸಮಸ್ಯೆಗಳು ಎದುರಾಗಬಹುದು.

    ತಮಿಳಿನ ಹೆಸರಾಂತ ನಟ ವಿಜಯ್ (Vijay) ಹಾಗೂ ರಶ್ಮಿಕಾ ಮಂದ‍ಣ್ಣ ಕಾಂಬಿನೇಷನ್ ನ ‘ವಾರಿಸು’ ಮತ್ತು ಅಜಿತ್ ಕುಮಾರ್ (Ajith) ನಟನೆಯ ‘ತುನಿವು’ ಸಿನಿಮಾ ಜನವರಿ 11 ರಂದು ತೆರೆ ಕಾಣುತ್ತಿವೆ. ತೆಲುಗಿನ ಖ್ಯಾತ ನಟ ಬಾಲಕೃಷ್ಣ (Balayya) ಮತ್ತು ಕನ್ನಡದ ದುನಿಯಾ ವಿಜಯ್ ವಿಲನ್ ಆಗಿ ನಟಿಸಿರುವ ‘ವೀರಸಿಂಹ ರೆಡ್ಡಿ’ ಚಿತ್ರ ಜನವರಿ 12 ರಂದು ದೇಶಾದ್ಯಂತ ಬಿಡುಗಡೆ ಆಗುತ್ತಿದೆ. ಅಲ್ಲದೇ, ಜನವರಿ 13ಕ್ಕೆ ಮೆಗಾಸ್ಟಾರ್ ಚಿರಂಜೀವಿ (Chiranjeevi) ನಟನೆಯ ‘ವಾಲ್ತೇರು ವೀರಯ್ಯ’ ಕೂಡ ರಿಲೀಸ್ ಆಗುತ್ತಿದೆ. ಈ ಸಿನಿಮಾಗಳಲ್ಲಿ ಕೆಲವು ಕನ್ನಡಕ್ಕೆ ಡಬ್ ಆಗಿಯೂ ಬಿಡುಗಡೆ ಆಗುತ್ತಿವೆ. ಹಾಗಾಗಿ ಕನ್ನಡ ಸಿನಿಮಾಗಳಿಗೆ ಥಿಯೇಟರ್ ಸಿಗುತ್ತವಾ ಎನ್ನುವುದೇ ಆತಂಕಕ್ಕೆ ಕಾರಣವಾಗಿವೆ. ಇದನ್ನೂ ಓದಿ: ವಿಜಯ್ ವರ್ಮಾ ಜೊತೆಗಿನ ಡೇಟಿಂಗ್ ಸುದ್ದಿ ಬೆನ್ನಲ್ಲೇ ಗುಡ್ ನ್ಯೂಸ್ ಕೊಟ್ರು ತಮನ್ನಾ

     

    ಎದುರಾಗಬಹುದಾದ ಇಂತಹ ಆತಂಕವನ್ನು ಗಮನಿಸಿಯೇ ತೆಲುಗು ಚಿತ್ರರಂಗ ಈ ಹಿಂದೆ ತೀರ್ಮಾನವೊಂದನ್ನು ತಗೆದುಕೊಂಡಿದೆ. ಮೊದಲ ತೆಲುಗು ಸಿನಿಮಾಗಳಿಗೆ ಥಿಯೇಟರ್ ಕೊಡಬೇಕು. ನಂತರ ಇತರ ಭಾಷೆಯ ಚಿತ್ರಗಳಿಗೆ ಅವಕಾಶ  ನೀಡಬೇಕು ಎಂದು. ಆದರೂ, ತೆಲುಗು ವಿತರಕ ದಿಲ್ ರಾಜು, ಈ ನಿಯಮಕ್ಕೆ ಸೆಡ್ಡು ಹೊಡೆದು ತಮಿಳಿನ ವಾರಿಸು ಸಿನಿಮಾವನ್ನು ತೆಲುಗಿಗೆ ಡಬ್ ಮಾಡಿ, ಹೆಚ್ಚಿನ ಸಂಖ್ಯೆಯ ಚಿತ್ರಮಂದಿರಗಳಿಗೆ ರಿಲೀಸ್ ಮಾಡಲು ಹೊರಟಿದ್ದರು. ಈ ವಿಷಯದಲ್ಲಿ ಕೊನೆಗೂ ದಿಲ್ ರಾಜು ಸೋತಿದ್ದಾರೆ. ಚಿತ್ರೋದ್ಯಮದ ಒಗ್ಗಟ್ಟಿನ ಪರಿಣಾಮವಾಗಿ, ಹೆಚ್ಚಿನ ಸಂಖ್ಯೆಯ ಥಿಯೇಟರ್ ಗಳು ತೆಲುಗು ಚಿತ್ರಗಳಿಗೆ ಸಿಕ್ಕಿವೆ. ಅಲ್ಲದೇ ಡಬ್ ಸಿನಿಮಾ ರಿಲೀಸ್ ದಿನಾಂಕವನ್ನು ಅವರು ಮೂರು ದಿನಗಳ ಕಾಲ ಮುಂದೂಡಿದ್ದಾರೆ.

    ಕನ್ನಡ ಚಿತ್ರೋದ್ಯಮದಲ್ಲಿ ಇಂತಹ ಯಾವುದೇ ನಿಯಮಗಳಿಲ್ಲ. ಒಗ್ಗಟ್ಟಿನ ಮಂತ್ರವೂ ಇಲ್ಲ. ಹಾಗಾಗಿ ದೊಡ್ಡ ದೊಡ್ಡ ಪರಭಾಷಾ ಚಿತ್ರಗಳು ತೆರೆಕಂಡಾಗ ಕನ್ನಡದ ನಿರ್ಮಾಪಕರು ಥಿಯೇಟರ್ ಗಾಗಿ ಪರದಾಡಿದ ಸಾಕಷ್ಟು ಉದಾಹರಣೆಗಳಿವೆ. ಈ ವಾರ ಕೂಡ ಕನ್ನಡದ ಅನೇಕ ಚಿತ್ರಗಳಿಗೆ ಬೇಡಿಕೆಗೆ ತಕ್ಕಂತೆ ಚಿತ್ರಮಂದಿರಗಳು ಸಿಗುವುದು ಅನುಮಾನ ಎನ್ನಲಾಗುತ್ತಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಕನ್ನಡದಲ್ಲಿ ದೊಡ್ಡ ಹೀರೋ, ತೆಲುಗಿನಲ್ಲಿ ವಿಲನ್: ಬಾಲಯ್ಯ ಗುಣಗಾನ

    ಕನ್ನಡದಲ್ಲಿ ದೊಡ್ಡ ಹೀರೋ, ತೆಲುಗಿನಲ್ಲಿ ವಿಲನ್: ಬಾಲಯ್ಯ ಗುಣಗಾನ

    ನ್ನಡದ ಹೆಸರಾಂತ ನಟ ದುನಿಯಾ ವಿಜಯ್ (Duniya Vijay), ಇದೇ ಮೊದಲ ಬಾರಿಗೆ ತೆಲುಗು ಸಿನಿಮಾದಲ್ಲಿ ನಟಿಸಿದ್ದಾರೆ. ಮೊದಲ ಸಿನಿಮಾದಲ್ಲೇ ಅವರು ಬಂಪರ್ ಲಾಟರಿಯನ್ನೇ ಹೊಡೆದಿದ್ದಾರೆ. ಸದ್ಯ ಟಾಲಿವುಡ್ ನಲ್ಲಿ ಸಾಕಷ್ಟು ಸದ್ದು ಮಾಡುತ್ತಿರುವ ಹಾಗೂ ಅತೀ ನಿರೀಕ್ಷೆ ಹುಟ್ಟಿಸಿರುವ ಬಾಲಯ್ಯ (Balayya) ನಟನೆಯ ‘ವೀರ ಸಿಂಹ ರೆಡ್ಡಿ’ (Veera Simha Reddy) ಚಿತ್ರದಲ್ಲಿ ಅವರು ವಿಲನ್ ಆಗಿ ನಟಿಸಿದ್ದು ಮೊನ್ನೆಯಷ್ಟೇ ಚಿತ್ರದ ಟ್ರೈಲರ್ ರಿಲೀಸ್ ಆಗಿದೆ. ಟ್ರೈಲರ್ ರಿಲೀಸ್ ಕಾರ್ಯಕ್ರಮದಲ್ಲಿ ದುನಿಯಾ ವಿಜಯ್ ಅವರನ್ನು ಹಾಡಿ ಹೊಗಳಿದ್ದಾರೆ ಬಾಲಯ್ಯ.

    ತೆಲುಗು ಚಿತ್ರೋದ್ಯಮಕ್ಕೆ ದುನಿಯಾ ವಿಜಯ್ ಅವರನ್ನು ಪರಿಚಯಿಸಿದ ರೀತಿಗೆ ಸ್ವತಃ ವಿಜಯ್ ಅವರೇ ಭಾವುಕರಾಗಿದ್ದಾರೆ. ಟ್ರೈಲರ್ ರಿಲೀಸ್ ಮಾಡಿ ಮಾತನಾಡಿದ ಬಾಲಯ್ಯ, ‘ಇವರು ದುನಿಯಾ ವಿಜಯ್. ಕನ್ನಡ ಸಿನಿಮಾ ರಂಗದ ದೊಡ್ಡ ಹೀರೋ. ನಮ್ಮ ಮೇಲಿನ ಪ್ರೀತಿ, ವಿಶ್ವಾಸಕ್ಕೆ ವಿಲನ್ ಪಾತ್ರವಿದ್ದರೂ, ಮಾಡಿದ್ದಾರೆ. ದೊಡ್ಡ ನಟರು ಹೀಗೆ ಪಾತ್ರಗಳನ್ನು ಒಪ್ಪಿಕೊಳ್ಳುವುದು ನನಗಂತೂ ಅವರ ಮೇಲಿ ಮತ್ತಷ್ಟು ಅಭಿಮಾನ ಹೆಚ್ಚಿಸಿದೆ’ ಎಂದಿದ್ದಾರೆ. ಇದನ್ನೂ ಓದಿ: ಸಾನ್ಯ ಎಲಿಮಿನೇಟ್‌ ಆದಮೇಲೆ ಅವಳ ಬೆಲೆ ರೂಪೇಶ್‌ ಶೆಟ್ಟಿಗೆ ಗೊತ್ತಾಯ್ತು: ದೀಪಿಕಾ ದಾಸ್

    ಕಾರ್ಯಕ್ರಮದ ವೇದಿಕೆ ಹತ್ತುವ ಮುನ್ನವೂ ವಿಜಯ್ ಹತ್ತಿರಕ್ಕೆ ಬಂದ ಬಾಲಯ್ಯ, ಎರಡ್ಮೂರು ಬಾರಿ ತಬ್ಬಿಕೊಂಡು ಗೌರವ ಸೂಚಿಸಿದರು. ಅತೀ ಆತ್ಮೀಯವಾಗಿಯೇ ವಿಜಯ್ ಜೊತೆ ಮಾತನಾಡಿದರು. ಅಂದಹಾಗೆ ವೀರ ಸಿಂಹ ರೆಡ್ಡಿ ಸಿನಿಮಾದಲ್ಲಿ ವಿಜಯ್ ವಿಭಿನ್ನ ಪಾತ್ರ ಮಾಡಿದ್ದಾರಂತೆ. ಸಿನಿಮಾ ಪೂರ್ತಿ ಇರಲಿದ್ದಾರಂತೆ. ಚಿತ್ರದಲ್ಲಿ ಅದೊಂದು ಮಹತ್ವದ ಪಾತ್ರ ಎಂದು ಸ್ವತಃ ಬಾಲಯ್ಯ ಅವರೇ ಮಾತನಾಡಿದ್ದಾರೆ.

    ಅಂದಹಾಗೆ ಈ ಸಿನಿಮಾದಲ್ಲಿ ದುನಿಯಾ ವಿಜಯ್ ಅವರದ್ದು ಪ್ರತಾಪ್ ರೆಡ್ಡಿ ಹೆಸರಿನ ಪಾತ್ರ. ಗೋಪಿಚಂದ್ ಮಲಿನೇನಿ (Gopichand Malineni) ಈ ಸಿನಿಮಾವನ್ನು ನಿರ್ದೇಶನ ಮಾಡಿದ್ದರೆ, ವರಲಕ್ಷ್ಮಿ ಶರತ್ ಕುಮಾರ್ ಸೇರಿದಂತೆ ಹಲವರು ತಾರಾಗಣದಲ್ಲಿ ಇದ್ದಾರೆ. ಇಂಥದ್ದೊಂದು ಪಾತ್ರವನ್ನು ತಮಗೆ ಕೊಟ್ಟಿದ್ದಕ್ಕೆ ದುನಿಯಾ ವಿಜಯ್, ತಂಡಕ್ಕೆ ಧನ್ಯವಾದಗಳನ್ನೂ ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಬಾಲಯ್ಯ ಮುಂದೆ ತನ್ನ ಮದುವೆ ಬಗ್ಗೆ ಬಾಯ್ಬಿಟ್ಟ ಪ್ರಭಾಸ್

    ಬಾಲಯ್ಯ ಮುಂದೆ ತನ್ನ ಮದುವೆ ಬಗ್ಗೆ ಬಾಯ್ಬಿಟ್ಟ ಪ್ರಭಾಸ್

    ಟಾಲಿವುಡ್ (Tollywood) ನಟ ಬಾಲಯ್ಯ (Balayya) ಸಿನಿಮಾ ಜೊತೆಗೆ ʻಅನ್‌ಸ್ಟಾಪಬಲ್ʼ ಎಂಬ ಶೋ ಕೂಡ ನಡೆಸಿಕೊಡುತ್ತಾರೆ. ಸ್ಟಾರ್ ತಾರೆಯರ ಸಂದರ್ಶನ ಮಾಡಿ, ಅವರ ಕುರಿತು ಅಚ್ಚರಿಯ ಮಾಹಿತಿಯನ್ನ ರಿವೀಲ್ ಮಾಡುತ್ತಾರೆ. ಈ ಶೋಗೆ (Actor Prabhas) ಪ್ರಭಾಸ್‌ ಕೂಡ ಸಾಥ್‌ ನೀಡಿದ್ದು, ತಮ್ಮ ಮದುವೆಯ ಬಗ್ಗೆ ನಟ ಬಾಯ್ಬಿಟ್ಟಿದ್ದಾರೆ.

    ತೆಲುಗು ಚಿತ್ರರಂಗದ ಲೆಜೆಂಡ್ ಬಾಲಕೃಷ್ಣ ‌ʻಅಖಂಡʼ ಸಕ್ಸಸ್ ನಂತರ ಸಿನಿಮಾ ಶೂಟಿಂಗ್‌,  ತಾರೆಯರ ಸಂದರ್ಶನ ಅಂತಾ ಬ್ಯುಸಿಯಾಗಿದ್ದಾರೆ. ಇತ್ತೀಚಿಗೆ ಪ್ರಭಾಸ್ ಜೊತೆಗಿನ ಸಂದರ್ಶನದ ತುಣುಕು ಸಖತ್ ಸದ್ದು ಮಾಡುತ್ತಿದೆ. ಬಾಲಯ್ಯ ನಿರೂಪಣೆಯ ಅನ್‌ಸ್ಟಾಪಬಲ್ ಶೋಗೆ ಅತಿಥಿಯಾಗಿ ಬಾಹುಬಲಿ ನಟ ಪ್ರಭಾಸ್ ಭಾಗವಹಿಸಿದ್ದಾರೆ. ಅವರ ವಯಸ್ಸು 43 ಆದ್ರೂ ಎಲ್ಲರೂ ಕೇಳೋ ಪ್ರಶ್ನೆ ಮದುವೆ ಯಾವಾಗ ಅಂತಾ? ಹಾಗಾಗಿ ಈ ಬಗ್ಗೆ ಬಾಲಯ್ಯ, ಪ್ರಭಾಸ್‌ ಅವರನ್ನ ನೇರವಾಗಿ ಮದುವೆ ಯಾವಾಗ ಎಂದಿದ್ದಾರೆ.

    ಈ ಹಿಂದಿನ ಶೋನಲ್ಲಿ ನಟ ಶರ್ವಾನಂದ್‌ಗೆ ಮದುವೆ ಯಾವಾಗ ಅಂತಾ ಕೇಳಲಾಗಿತ್ತು. ಆಗ ಪ್ರಭಾಸ್ ಮದುವೆ ಆದ ಮೇಲೆ ಎಂಬ ಉತ್ತರ ನೀಡಿದ್ದರು. ಇದೀಗ ಇದೇ ಪ್ರಶ್ನೆಯನ್ನು ನಿಮಗೆ ಕೇಳುತ್ತೇನೆ. ನಿಮ್ಮ ಮದುವೆ ಯಾವಾಗ ಎಂದು, ಅದಕ್ಕೆ ಸಲ್ಮಾನ್ ಖಾನ್ ಮದುವೆ ಆದ್ಮೇಲೆ ನನ್ನ ಮದುವೆ ಎಂದು ಪ್ರಭಾಸ್ ಉತ್ತರ ನೀಡಿದ್ದಾರೆ. ಈ ಮಾತು ಕೇಳಿ ಅಲ್ಲಿರುವ ಅಭಿಮಾನಿಗಳು ನಕ್ಕಿದ್ದಾರೆ. ಇದನ್ನೂ ಓದಿ: `ಕಾಂತಾರ’ ಎಫೆಕ್ಟ್, ಭೂತಕೋಲ ನೋಡಲು ಧರ್ಮಸ್ಥಳಕ್ಕೆ ಬರಲಿದ್ದಾರೆ ನಟ ವಿಶಾಲ್

    ಸದ್ಯ ಪ್ರಭಾಸ್ (Prabhas) ಹೆಸರು ನಟಿ ಕೃತಿ ಸನೂನ್ (Kriti Sanon) ಜೊತೆ ಕೇಳಿ ಬರುತ್ತಿದೆ. ಇಬ್ಬರು ಡೇಟಿಂಗ್ (Dating) ಮಾಡ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಇವರಿಬ್ಬರ ಮದುವೆಯ ಗುಡ್ ನ್ಯೂಸ್ ಸಿಗಲಿ ಅಂತಾ ಫ್ಯಾನ್ಸ್ ಕೂಡ ಕಾಯ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಬಾಲಯ್ಯ ಅಭಿನಯದ ‘ವೀರ ಸಿಂಹ ರೆಡ್ಡಿ’ ಚಿತ್ರದ ಮೊದಲ ಸಾಂಗ್ ರಿಲೀಸ್

    ಬಾಲಯ್ಯ ಅಭಿನಯದ ‘ವೀರ ಸಿಂಹ ರೆಡ್ಡಿ’ ಚಿತ್ರದ ಮೊದಲ ಸಾಂಗ್ ರಿಲೀಸ್

    ಟಸಿಂಹ ನಂದಮುರಿ ಬಾಲಕೃಷ್ಣ ಅಭಿನಯದ ಮಾಸ್ ಆಕ್ಷನ್ ಸಿನಿಮಾ ‘ವೀರ ಸಿಂಹ ರೆಡ್ಡಿ’ ಚಿತ್ರದ ಮೊದಲ ಸಾಂಗ್ ಇಂದು ಬಿಡುಗಡೆಯಾಗಿದೆ. ಮೈತ್ರಿ ಮೂವಿ ಮೇಕರ್ಸ್ ಬ್ಯಾನರ್ ನಡಿ ಗೋಪಿಚಂದ್ ಮಲಿನೇನಿ ನಿರ್ದೇಶಿಸಿರುವ ಸಿನಿಮಾವಿದು. ಚಿತ್ರದಲ್ಲಿ ಹಿಂದೆಂದೂ ಕಾಣದ ಹೊಸ ಅವತಾರದಲ್ಲಿ ಮಾಸ್ ಮಹರಾಜ ನಂದಮುರಿ ಬಾಲಕೃಷ್ಣ ಕಾಣಿಸಿಕೊಂಡಿದ್ದಾರೆ. ಬಾಲಯ್ಯ ಅಭಿಮಾನಿಗಳು ಈ ಸಿನಿಮಾ ಬಿಡುಗಡೆಯನ್ನೇ ಎದುರು ನೋಡುತ್ತಿದ್ದಾರೆ. ಬಾಲಯ್ಯ ಮಾಸ್ ಅಭಿಮಾನಿಗಳ ಮನತಣಿಸಲು ಚಿತ್ರತಂಡ ‘ಜೈ ಬಾಲಯ್ಯ’ ಮಾಸ್ ಸಾಂಗ್ ಇಂದು ಬಿಡುಗಡೆ ಮಾಡಿದೆ.

    ಹೈದ್ರಾಬಾದ್ ನಲ್ಲಿ ಕೊನೆಯ ಹಂತದ ಚಿತ್ರೀಕರಣದಲ್ಲಿ ಬ್ಯುಸಿಯಾಗಿರುವ ಸಿನಿಮಾ ತಂಡ ಚಿತ್ರದ ಪ್ರಚಾರ ಕಾರ್ಯವನ್ನು ಆರಂಭಿಸಿದೆ. ಹಾಡಿನ ಮೂಲಕ ಸಿನಿರಸಿಕರ ಮನಗೆಲ್ಲಲು ಹೊರಟಿದೆ. ಚಿತ್ರದ ಮಾಸ್ ನಂಬರ್ ಸಾಂಗ್ ‘ಜೈ ಬಾಲಯ್ಯ’ ಹಾಡಿನ ಲಿರಿಕಲ್ ವೀಡಿಯೋ ಸಾಂಗ್ ಬಿಡುಗಡೆ ಮಾಡಿದೆ. ರಾಮ್ ಜೋಗಯ್ಯ ಶಾಸ್ತ್ರಿ ಸಾಹಿತ್ಯಕ್ಕೆ ಕರಿಮುಲ್ಲ ದನಿಯಾಗಿದ್ದು, ತಮನ್ ಎಸ್ ಮಾಸ್ ಮ್ಯೂಸಿಕ್ ಕಿಕ್ ನೀಡಿದೆ. ಬಾಲಯ್ಯ ಅಭಿಮಾನಿಗಳು ಹಾಡು ಕೇಳಿ ಥ್ರಿಲ್ ಆಗಿದ್ದು, ಬಿಡುಗಡೆಯಾದ ಒಂದೇ ಗಂಟೆಯಲ್ಲಿ ಆರು ಲಕ್ಷಕ್ಕೂ ಅಧಿಕ ವೀವ್ಸ್ ಪಡೆದಕೊಂಡಿದೆ. ಇದನ್ನೂ ಓದಿ: ಮತ್ತೆ ಕನ್ನಡಕ್ಕೆ ಬರಲಿದ್ದಾರೆ ಶಿಲ್ಪಾ ಶೆಟ್ಟಿ: ʻಕೆಡಿ’ಯಲ್ಲಿ ಲೇಡಿ ಪವರ್

    2023ರ ಸಂಕ್ರಾಂತಿ ಹಬ್ಬಕ್ಕೆ ‘ವೀರ ಸಿಂಹ ರೆಡ್ಡಿ’ ಸಿನಿಮಾ ಗ್ರ್ಯಾಂಡ್ ಆಗಿ ತೆರೆ ಕಾಣುತ್ತಿದೆ. ಚಿತ್ರದಲ್ಲಿ ಶೃತಿ ಹಾಸನ್ ನಾಯಕಿಯಾಗಿ ನಟಿಸಿದ್ದು, ಸ್ಯಾಂಡಲ್ ವುಡ್ ಬ್ಲ್ಯಾಕ್ ಕೋಬ್ರಾ ದುನಿಯಾ ವಿಜಯ್, ವರಲಕ್ಷ್ಮೀ ಶರತ್ ಕುಮಾರ್ ಚಿತ್ರದ ಮುಖ್ಯ ತಾರಾಗಣದಲ್ಲಿದ್ದಾರೆ. ಮೈತ್ರಿ ಮೂವಿ ಮೇಕರ್ಸ್ ಅದ್ದೂರಿ ಬ್ಯಾನರ್ ನಡಿ ಚಿತ್ರವನ್ನು ನವೀನ್ ಯಾರ್ನೇನಿ ಹಾಗೂ ವೈ.ರವಿ ಶಂಕರ್ ನಿರ್ಮಾಣ ಮಾಡಿದ್ದಾರೆ. ಸಾಯಿ ಮದೇವ್ ಸಂಭಾಷಣೆ, ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನವಿನ್ ನೂಲಿ ಸಂಕಲನ, ರಿಶಿ ಪುಂಜಾಬಿ ಕ್ಯಾಮೆರಾ ವರ್ಕ್, ರಾಮ್- ಲಕ್ಷ್ಮಣ್ ಹಾಗೂ ವೆಂಕಟ್ ಸಾಹಸ ನಿರ್ದೇಶನ ಚಿತ್ರಕ್ಕಿದೆ.

    Live Tv
    [brid partner=56869869 player=32851 video=960834 autoplay=true]

  • ಟಾಲಿವುಡ್ ಲೆಜೆಂಡ್‌ ಬಾಲಯ್ಯ ಮುಂದೆ ಅಬ್ಬರಿಸಲಿದ್ದಾರೆ `ಕೆಜಿಎಫ್ 2′ ನಟ

    ಟಾಲಿವುಡ್ ಲೆಜೆಂಡ್‌ ಬಾಲಯ್ಯ ಮುಂದೆ ಅಬ್ಬರಿಸಲಿದ್ದಾರೆ `ಕೆಜಿಎಫ್ 2′ ನಟ

    ತೆಲುಗಿನ ಲೆಜೆಂಡರಿ ನಂದಮೂರಿ ಬಾಲಕೃಷ್ಣ(Nandamuri Balakrishna) `ಅಖಂಡ’ ಸಕ್ಸಸ್ ನಂತರ `ವೀರ ಸಿಂಹ ರೆಡ್ಡಿ'(Veera Simha Reddy) ಸಿನಿಮಾವನ್ನ ಕೈಗೆತ್ತಿಕೊಂಡಿದ್ದಾರೆ. ಬಾಲಯ್ಯ ಅವರ ಮುಂದೆ ಘರ್ಜಿಸಲು ಘಟಾನುಘಟಿಗಳನ್ನೇ ಕರೆಸಲಾಗುತ್ತಿದೆ. ದುನಿಯಾ ವಿಜಯ್ (Duniya Vijay) ಆನ್‌ಬೋರ್ಡ್ ಆಗಿರುವ ಬೆನ್ನಲ್ಲೇ ಈಗ `ಕೆಜಿಎಫ್ 2′ (Kgf 2) ನಟ ಕೂಡ ಈ ತಂಡಕ್ಕೆ ಸೇರಿಕೊಂಡಿದ್ದಾರೆ.

    `ಅಖಂಡ'(Akanda Film) ಚಿತ್ರದ ಸಕ್ಸಸ್ ನಂತರ ತಮ್ಮ 107ನೇ ಸಿನಿಮಾ `ವೀರ ಸಿಂಹ ರೆಡ್ಡಿ’ಗೆ ಬಾಲಯ್ಯ ಭರ್ಜರಿ ಕಸರತ್ತು ಮಾಡ್ತಿದ್ದಾರೆ. ಸಖತ್ತಾಗಿ ಶೂಟಿಂಗ್ ಕೂಡ ನಡೆಯುತ್ತಿದೆ. ಶ್ರುತಿ ಹಾಸನ್(Shruti Haasan) ನಾಯಕಿಯಾಗಿ ಸಾಥ್ ನೀಡುತ್ತಿದ್ದಾರೆ. ಬಾಲಯ್ಯಗೆ ಖಡಕ್ ವಿಲನ್ ಆಗಿ ಕನ್ನಡದ ಸ್ಟಾರ್ ನಟ ದುನಿಯಾ ವಿಜಯ್ ಎಂಟ್ರಿ ಕೊಟ್ಟ ಬೆನ್ನಲ್ಲೇ `ಕೆಜಿಎಫ್ 2′ ನಟ ಕೂಡ ಚಿತ್ರತಂಡ ಸೇರಿಕೊಂಡಿದ್ದಾರೆ.

     

    View this post on Instagram

     

    A post shared by B.s. Avinash (@avinashbs)

    `ಕೆಜಿಎಫ್ 2′ ಸಿನಿಮಾದಲ್ಲಿ ಖಳನಾಯಕ ಆಂಡ್ರೂಸ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ಅವಿನಾಶ್ ಈಗ ಬಾಲಯ್ಯ ಚಿತ್ರದಲ್ಲಿ ಪ್ರಮುಖ ಪಾತ್ರಕ್ಕೆ ಬಣ್ಣ ಹಚ್ಚುತ್ತಿದ್ದಾರೆ. ಗಂಗಿ ರೆಡ್ಡಿ ಎಂಬ ವಿಲನ್ ಪಾತ್ರದಲ್ಲಿ ಟಾಲಿವುಡ್ ಲೆಜೆಂಡ್‌ಗೆ ಕಿಕ್ ಕೊಡಲಿದ್ದಾರೆ. ಇದೀಗ ನಿರ್ದೇಶಕ ಗೋಪಿ ಚಂದ್ ಮಲಿನೇನಿ ಜೊತೆಗಿರುವ ಅವಿನಾಶ್ ಫೋಟೋ ಕೂಡ ವೈರಲ್ ಆಗುತ್ತಿದೆ. ಇದನ್ನೂ ಓದಿ:ಡಿವೋರ್ಸ್ ವದಂತಿಯ ನಡುವೆ ಸಾನಿಯಾ ಮಿರ್ಜಾ ಬರ್ತ್‌ಡೇಗೆ ಶೋಯೆಬ್ ಮಲಿಕ್ ವಿಶ್

     

    View this post on Instagram

     

    A post shared by B.s. Avinash (@avinashbs)

    ಮೈತ್ರಿ ಮೂವಿ ಮೇಕರ್ಸ್ ನಿರ್ಮಾಣದಲ್ಲಿ ಮೂಡಿ ಬರುತ್ತಿರುವ ಈ ಸಿನಿಮಾದಲ್ಲಿ ಬಾಲಯ್ಯ ಜತೆ ಶ್ರುತಿ ಹಾಸನ್, ದುನಿಯಾ ವಿಜಯ್, ವರಲಕ್ಷ್ಮಿ ಶರತ್‌ಕುಮಾರ್, ಅವಿನಾಶ್ ಸೇರಿದಂತೆ ಬಹುದೊಡ್ಡ ತಾರಾಬಳಗವೇ ಚಿತ್ರದಲ್ಲಿ ಇರಲಿದೆ.

    Live Tv
    [brid partner=56869869 player=32851 video=960834 autoplay=true]

  • ರಶ್ಮಿಕಾ ಮಂದಣ್ಣ ನನ್ನ ಕ್ರಶ್ ಎಂದ ಟಾಲಿವುಡ್ ಸ್ಟಾರ್ ಬಾಲಯ್ಯ

    ರಶ್ಮಿಕಾ ಮಂದಣ್ಣ ನನ್ನ ಕ್ರಶ್ ಎಂದ ಟಾಲಿವುಡ್ ಸ್ಟಾರ್ ಬಾಲಯ್ಯ

    ಟಾಲಿವುಡ್ (Tollywood) ಸ್ಟಾರ್ ಬಾಲಯ್ಯ(Balayya) ಸಿನಿಮಾಗಳಲ್ಲಿ ಆಕ್ಟೀವ್ ಆಗಿರುವುದರ ಜೊತೆಗೆ ಒಟಿಟಿಯಲ್ಲಿ ಚಾಟ್ ಶೋನ ನಿರೂಪಣೆಯ ಹೊಣೆ ಹೊತ್ತಿದ್ದಾರೆ. ಸದ್ಯ ತಮ್ಮ ಶೋನಲ್ಲಿ ನಟ ಬಾಲಯ್ಯ ತಮ್ಮ ಕ್ರಶ್ ಯಾರೆಂದು ರಿವೀಲ್ ಮಾಡಿದ್ದಾರೆ. ಕೊಡಗಿನ ಕುವರಿ ರಶ್ಮಿಕಾ(Rashmika Mandanna) ನನ್ನ ಕ್ರಶ್ ಅಂತಾ ಬಾಲಯ್ಯ ಹೇಳಿದ್ದಾರೆ.

    `ಅಖಂಡ'(Akanda Film) ಸೂಪರ್ ಸಕ್ಸಸ್ ನಂತರ ಒಟಿಟಿಯಲ್ಲಿ `ಅನ್‌ಸ್ಟಾಪಬಲ್ 2′ (Unstoppable 2) ಚಾಟ್ ಶೋನ ಬಾಲಯ್ಯ ನಡೆಸಿಕೊಡುತ್ತಿದ್ದಾರೆ. ಈ ಶೋನ ಮೊದಲ ಸಂಚಿಕೆಯ ಅತಿಥಿಯಾಗಿ ನಟ ವಿಶ್ವಕ್ ಸೇನ್ ಮತ್ತು ಸಿದ್ದು ಜೊನ್ನಲಗಡ್ಡ ಕಾಣಿಸಿಕೊಂಡಿದ್ದಾರೆ. ಈ ಶೋನಲ್ಲಿ ಬಾಲಯ್ಯ ಅವರ ನಿದ್ದೆಗೆಡಿಸಿರುವ ಸುಂದರಿ ರಶ್ಮಿಕಾ ಬಗ್ಗೆ ಮಾತನಾಡಿದ್ದಾರೆ. ಆಕೆ ತನ್ನ ಕ್ರಶ್ ಎಂದು ರಿವೀಲ್ ಮಾಡಿದ್ದಾರೆ. ಇದನ್ನೂ ಓದಿ:ಬಿಗ್ ಬಾಸ್ ವಿರುದ್ಧ ಮ್ಯಾಚ್ ಫಿಕ್ಸಿಂಗ್ ಆರೋಪ: ಗುರೂಜಿ ಮೇಲೆ ಕಿಚ್ಚ ಕೆಂಡಾಮಂಡಲ

    ಈ ಶೋನಲ್ಲಿ ನಟ ಬಾಲಯ್ಯಗೆ ವಿಶ್ವಕ್ ಮತ್ತು ಸಿದ್ಧು ಬಾಲಯ್ಯ ಅವರಿಗೆ ನಿಮ್ಮ ಕ್ರಶ್ ಯಾರೆಂದು ಕೇಳಿದರು. ಇದಕ್ಕೆ ಉತ್ತರಿಸಿದ ಬಾಲಯ್ಯ ರಶ್ಮಿಕಾ ಮಂದಣ್ಣ ಎಂದು ಹೇಳಿದರು. ರಶ್ಮಿಕಾ ತೆಲುಗಿನಲ್ಲಿ(Tollywood) ಮಿಂಚಿ ಸದ್ಯ ಬಾಲಿವುಡ್‌ಗೆ(Bollywood) ಹಾರಿದ್ದಾರೆ.

    ತೆಲುಗು, ತಮಿಳು ಜೊತೆಗೆ ಬಾಲಿವುಡ್‌ನಲ್ಲೂ ನಟಿಸುತ್ತಿದ್ದಾರೆ. ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಹೊಂದಿರುವ ನಟಿ ರಶ್ಮಿಕಾ ಎಂದರೆ ತೆಲುಗು ಸ್ಟಾರ್ ಬಾಲಯ್ಯ ಅವರಿಗೂ ಇಷ್ಟ. ಈ ಬಗ್ಗೆ ಸ್ವತಃ ಬಾಲಯ್ಯ(Nandamuri Balakrishna) ಅವರೇ ರಿವೀಲ್ ಮಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಸರಕಾರಕ್ಕೆ ಟೀಸರ್ ಮೂಲಕ ಟಾಂಗ್ ಕೊಟ್ಟ ಟಾಲಿವುಡ್ ಬಾಲಕೃಷ್ಣ

    ಸರಕಾರಕ್ಕೆ ಟೀಸರ್ ಮೂಲಕ ಟಾಂಗ್ ಕೊಟ್ಟ ಟಾಲಿವುಡ್ ಬಾಲಕೃಷ್ಣ

    ತೆಲುಗು ಸಿನಿಮಾ ರಂಗದ ಲೆಜೆಂಡ್ ನಟ ಬಾಲಕೃಷ್ಣ ಅವರ ಹುಟ್ಟು ಹಬ್ಬಕ್ಕಾಗಿ ಇವರ ನಟನೆಯ 107ನೇ ಸಿನಿಮಾದ ಟೀಸರ್ ರಿಲೀಸ್ ಆಗಿದೆ. ಹೇಳಿ ಕೇಳಿ ಬಾಲಕೃಷ್ಣ ಮಾಸ್ ಹೀರೋ, ಟೀಸರ್ ಕೂಡ ಅಷ್ಟೇ ಮಾಸ್ ಆಗಿ ಮೂಡಿ ಬಂದಿದ್ದು, ಅಭಿಮಾನಿಗಳು ಫಿದಾ ಆಗಿದ್ದಾರೆ. ಟೀಸರ್ ನಲ್ಲಿ ಹೊಡೆದ ಡೈಲಾಗ್ ಇದೀಗ ಟಾಲಿವುಡ್ ನಲ್ಲಿ ವೈರಲ್ ಆಗಿದೆ.

    107ನೇ ಸಿನಿಮಾದ ಶೂಟಿಂಗ್ ನಿರಂತರವಾಗಿ ನಡೆದಿದ್ದು, ನಿರ್ದೇಶಕ ಗೋಪಿಚಂದ್ ಮಲಿನೇನಿ ವಿಶೇಷವಾಗಿ ಟೀಸರ್ ರೆಡಿ ಮಾಡಿದ್ದು, ಬಾಲಕೃಷ್ಣ ಸಾಲ್ಟ್ ಅಂಡ್ ಪೇಪರ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಮಾಸ್ ಲುಕ್ ನಲ್ಲಿ ಕ್ಲಾಸ್ ಡೈಲಾಗ್ ಹೊಡೆದಿದ್ದಾರೆ. ಅದರಲ್ಲೂ ಈ ಟೀಸರ್ ನಲ್ಲಿ ಅಲ್ಲಿನ ಸರಕಾರಕ್ಕೆ ಟಾಂಗ್ ಕೊಟ್ಟಿದ್ದು, ಆ ಡೈಲಾಗ್ ಭಾರೀ ಸದ್ದು ಮಾಡುತ್ತಿದೆ. ಇದನ್ನೂ ಓದಿ: ಕೊನೆಗೂ ರಿವೀಲ್ ಆಯಿತು ನಯನತಾರಾ ಮತ್ತು ವಿಘ್ನೇಶ್ ಶಿವನ್ ಮದುವೆ ಫೋಟೋ

    ಈ ಟೀಸರ್ ನಲ್ಲಿ ಬಾಲಯ್ಯ ‘ನಿಮಗೆಲ್ಲ ಗೌರ್ಮೆಂಟ್ ಆರ್ಡರ್.. ನನಗೆ ದೇವರ ಆರ್ಡರ್’ ಎಂದು ಹೇಳುವ ಡೈಲಾಗ್ ಇದೀಗ ಸಿಕ್ಕಾಪಟ್ಟೆ ಚರ್ಚೆ ಆಗುತ್ತಿದ್ದು, ಇದು ನಿಜವಾಗಿಯೂ ಬಾಲಯ್ಯ ಸರಕಾರಕ್ಕೆ ಕೊಟ್ಟಿರುವ ಟಾಂಗ್? ಎನ್ನುವ ಪ್ರಶ್ನೆಯನ್ನೂ ಅದು ಹುಟ್ಟು ಹಾಕಿದೆ. ಅಲ್ಲದೇ, ಅವರು ಯಾಕೆ ಸರಕಾರಕ್ಕೆ ಈ ರೀತಿ ಟಾಂಗ್ ಕೊಟ್ಟರು ಎನ್ನುವ ಚರ್ಚೆಯನ್ನೂ ಅದು ಹುಟ್ಟು ಹಾಕಿದೆ.

    ಬಾಲಕೃಷ್ಣ ಸಿನಿಮಾದಲ್ಲಿ ಕನ್ನಡದ ದುನಿಯಾ ವಿಜಯ್ ಕೂಡ ನಟಿಸುತ್ತಿದ್ದು, ಎರಡು ಹಂತದ ಶೂಟಿಂಗ್ ಕೂಡ ಅವರು ಮುಗಿಸಿ ಬಂದಿದ್ದಾರೆ. ಈ ಬಾರಿಯ ಹುಟ್ಟು ಹಬ್ಬಕ್ಕೆ ದುನಿಯಾ ವಿಜಯ್, ವಿಶ್ ಮಾಡಿದ್ದಾರೆ. ನಟಸಿಂಹ ಎಂದು ಬಿರುದು ಕೂಡ ಕೊಟ್ಟಿದ್ದಾರೆ.

  • ಸಕ್ಸಸ್‌ಫುಲ್ ನಿರ್ದೇಶಕನಿಗೆ ಸ್ಕ್ರಿಪ್ಟ್ ಬದಲಿಸಲು ಬಾಲಯ್ಯ ಸೂಚನೆ

    ಸಕ್ಸಸ್‌ಫುಲ್ ನಿರ್ದೇಶಕನಿಗೆ ಸ್ಕ್ರಿಪ್ಟ್ ಬದಲಿಸಲು ಬಾಲಯ್ಯ ಸೂಚನೆ

    ಟಾಲಿವುಡ್‌ನ ಲೆಜೆಂಡ್ ನಂದಮೂರಿ ಬಾಲಕೃಷ್ಣ ʻಅಖಂಡʼ ಸೂಪರ್ ಸಕ್ಸಸ್ ನಂತರ ಸಾಕಷ್ಟು ಆಫರ್‌ಗಳು ಅರಸಿ ಬರುತ್ತಿವೆ. ಇದೀಗ ತೆಲುಗು ಚಿತ್ರರಂಗದ ಹಿಟ್ ನಿರ್ದೇಶಕ ಅನಿಲ್ ರವಿಪುಡಿ ಬಾಲಯ್ಯ ಅವರ 107ನೇ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಲಿದ್ದಾರೆ. ಆದರೆ ಈಗ ತಮ್ಮ ಮುಂಬರುವ ಚಿತ್ರಕ್ಕೆ ಸ್ಕ್ರಿಪ್ಟ್ ಬದಲಿಸಲು ಹೇಳಿದ್ದಾರೆ.‌

    `ಅಖಂಡ’ ಸಿನಿಮಾ ಬಾಲಯ್ಯ ಅವರ ಕೆರಿಯರ್‌ಗೆ ಬಿಗ್ ಬ್ರೇಕ್ ಕೊಟ್ಟ ಚಿತ್ರವಾಗಿದ್ದು, ಈಗ ಈ ಚಿತ್ರದ ಸಕ್ಸಸ್ ನಂತರ ಸಾಕಷ್ಟು ಸಿನಿಮಾಗಳಿಗೆ ಬಾಲಯ್ಯ ಅವರೇ ಬೇಕು ಅಂತಾ ಆಫರ್‌ಗಳು ಅರಸಿ ಬರುತ್ತಿವೆ. ಕಥೆಯ ಆಯ್ಕೆಯಲ್ಲೂ ಸಖತ್ ಚ್ಯೂಸಿಯಾಗಿರುವ ಬಾಲಯ್ಯ ಈಗ ತಮ್ಮ ಮುಂಬರುವ ಚಿತ್ರದ ನಿರ್ದೇಶಕ ಅನಿಲ್ ರವಿಪುಡಿ ಅವರಿಗೆ ಕಥೆಯಲ್ಲಿ ಬದಲಾವಣೆ ಮಾಡುವಂತೆ ಹೇಳಿದ್ದಾರೆ.

    ಬಾಲಯ್ಯ ಮತ್ತು ಅನಿಲ್ ರವಿಪುಡಿ ಕಾಂಬಿನೇಷನ್‌ನಲ್ಲಿ ಹೊಸ ಚಿತ್ರ ಬರುತ್ತಿದ್ದು, ಇವರಿಬ್ಬರ ಕಾಂಬಿನೇಷನ್ ಬಗ್ಗೆ ಟಾಲಿವುಡ್‌ನಲ್ಲಿ ಈಗಾಗಲೇ ಟಾಕ್ ಶುರುವಾಗಿದೆ. ಅನಿಲ್ ರವಿಪುಡಿ ನಿರ್ದೇಶಿಸಿದ ಕಳೆದ ಎರಡೂ ಸಿನಿಮಾಗಳು ಬಾಕ್ಸಾಫೀಸ್‌ನಲ್ಲಿ ಗೆದ್ದಿವೆ. ಈ ಕಾರಣಕ್ಕೆ ಈ ಕಾಂಬಿನೇಷನ್ ಬಗ್ಗೆ ನಿರೀಕ್ಷೆ ದೊಡ್ಡ ಮಟ್ಟದಲ್ಲಿದೆ. ಇಷ್ಟರ ಮಧ್ಯೆ ಅನಿಲ್‌ಗೆ ಬಾಲಕೃಷ್ಣ ಸ್ಕ್ರಿಪ್ಟ್ ಬದಲಾಯಿಸುವಂತೆ ಸೂಚನೆ ಕೊಟ್ಟಿದ್ದಾರೆ. ಇದನ್ನೂ ಓದಿ: ಪಠ್ಯ ಪುಸ್ತಕ ಪರಿಷ್ಕರಣೆ ಆಕ್ರೋಶ ಹೊರ ಹಾಕಿದ ನಟ ಚೇತನ್ : ಗಾಂಧಿ, ನೆಹರು ನಮ್ ವಿರೋಧಿಗಳು ಎಂದ ನಟ

    ಇತ್ತೀಚೆಗೆ ಬಾಲಯ್ಯ `ಎಫ್ 3′ ಸಿನಿಮಾ ಸ್ಪೆಷಲ್ ಶೋಗೆ ಹೋಗಿದ್ದರು. ಈ ವೇಳೆ ಸಿನಿಮಾ ನೋಡಿ ಅನಿಲ್ ರವಿಪುಡಿಗೆ ಸ್ಕ್ರಿಪ್ಟ್ ಚೇಂಜ್ ಮಾಡಿ ಎಂದಿದ್ದಾರಂತೆ. ನಿರ್ದೇಶಕ ಅನಿಲ್ ಕಾಮಿಡಿ ಸೆನ್ಸ್‌ಗೆ ಮರುಳಾಗಿರುವ ಬಾಲಯ್ಯ ಹಾಸ್ಯ ಸಿನಿಮಾ ಮಾಡೋಣ ಎಂದಿದ್ದಾರಂತೆ. ಲೆಜೆಂಡ್ ಆಕ್ಟರ್ ಬಾಲಯ್ಯ ಕೂಡ ಕಾಮಿಡಿ ಚಿತ್ರ ಮಾಡಲು ಮನಸ್ಸು ಮಾಡಿದ್ದಾರೆ. ಹೊಸ ಬಗೆಯ ಪಾತ್ರದಲ್ಲಿ ಕಾಣಿಕೊಳ್ಳಲು ನಟ ಬಾಲಯ್ಯ ಸಜ್ಜಾಗಿದ್ದಾರೆ.