Tag: ಬಾಲರಾಮನ ಪ್ರಾಣ ಪ್ರತಿಷ್ಠಾಪನೆ

  • ಅಯೋಧ್ಯೆ ರಾಮನಿಗೆ ಮೋದಿ ಸಾಷ್ಟಾಂಗ ನಮಸ್ಕಾರ

    ಅಯೋಧ್ಯೆ ರಾಮನಿಗೆ ಮೋದಿ ಸಾಷ್ಟಾಂಗ ನಮಸ್ಕಾರ

    ಅಯೋಧ್ಯೆ: ಉತ್ತರಪ್ರದೇಶದ ಅಯೋಧ್ಯೆ ರಾಮಮಂದಿರದಲ್ಲಿ (Ayodhya Ram mandir) ಇಂದು ಮಧ್ಯಾಹ್ನ ಬಾಲರಾಮನ ಪ್ರಾಣಪ್ರತಿಷ್ಠಾಪನೆ ಆಗಿದೆ. ಈ ಮೂಲಕ 500 ವರ್ಷಗಳ ಹಿಂದೂಗಳ ಕನಸು ನನಸಾಗಿದೆ. ಇತ್ತ ಪ್ರಧಾನಿ ನರೇಂದ್ರ ಮೋದಿಯವರು(Narendra Modi ಪ್ರಾಣಪ್ರತಿಷ್ಠೆ ಬಳಿಕ ಶ್ರೀರಾಮನಿಗೆ ಸಾಷ್ಟಾಂಗ ನಮಸ್ಕಾರ ಹಾಕಿದ್ದಾರೆ.

    ಹೌದು. ಇಂದು 12 ಗಂಟೆಯ ಬಳಿಕ ಪೂಜಾ-ವಿಧಿ ವಿಧಾನಗಳನ್ನು ಪ್ರಧಾನಿ ನರೇಂದ್ರ ಮೋದಿ ಸಾರಥ್ಯದಲ್ಲಿ ನೆರವೇರಿಸಲಾಯಿತು. ಬಳಿಕ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ಮಾಡಲಾಯಿತು. ಈ ವೇಳೆ ಯುಪಿ ಸಿಎಂ ಯೋಗಿ ಆದಿತ್ಯನಾಥ್‌, ರಾಜ್ಯಪಾಲೆ ಆನಂದಿ ಬೆನ್‌ ಪಟೇಲ್‌, ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಹಾಗೂ ಅಲ್ಲಿನ ಪ್ರಧಾನ ಅರ್ಚಕರು ಭಾಗಿಯಾಗಿದ್ದರು. ಇದನ್ನೂ ಓದಿ: ಅಯೋಧ್ಯೆ ರಾಮಮಂದಿರದ ಗರ್ಭಗುಡಿಯಲ್ಲಿ ಬಾಲರಾಮನ ಪ್ರಾಣಪ್ರತಿಷ್ಠಾಪನೆ

    ಪ್ರಾಣಪ್ರತಿಷ್ಠೆಯ (Pran Prathistha ceremony)ಸಂದರ್ಭದಲ್ಲಿ ಶ್ರೀರಾಮ ಇಡೀ ಜಗತ್ತಿನ ದರ್ಶನ ನೀಡಿದ್ದು, ರಾಮಭಕ್ತರು ಶ್ರೀರಾಮನನ್ನು ಆನಂದಭಾಷ್ಪದಿಂದಲೇ ಕಣ್ತುಂಬಿಕೊಂಡರು. ಇತ್ತ ಪ್ರಾಣಪ್ರತಿಷ್ಠೆ ಬಳಿಕ ಶ್ರೀರಾಮನಿಗೆ ಸುತ್ತು ಬಂದ ಪ್ರಧಾನಿಯವರು ಸಾಷ್ಟಾಂಗ ನಮಸ್ಕಾರವನ್ನು ಮಾಡಿದರು. ನಂತರ ಸಾಧುಗಳಿಂದ ಆಶೀರ್ವಾದವನ್ನು ಪಡೆದುಕೊಂಡರು. ಇದಾದ ಬಳಿಕ ಮೋದಿಯವರು ವೇದಿಕೆಯತ್ತ ತೆರಳಿದರು.

    ಇಂದಿನ ಈ ಕಾರ್ಯಕ್ರಮಕ್ಕೆ ಸಿನಿ ತಾರೆಯರು, ರಾಜಕೀಯ ವ್ಯಕ್ತಿಗಳು, ರಾಮಭಕ್ತರು ಸೇರಿದಂತೆ ಸಾಕಷ್ಟು ಜನ ಸಾಕ್ಷಿಯಾದರು. ಕೇವಲ ಅಯೋಧ್ಯೆಯಲ್ಲಿ ಮಾತ್ರವಲ್ಲದೇ ಇಡೀ ದೇಶಾದ್ಯಂತ ಹಬ್ಬದ ವಾತಾವರಣವೇ ನಿರ್ಮಾಣ ಆಗಿದೆ. ಅಯೋಧ್ಯೆಯಲ್ಲಿ ಇಂದು ರಾಮ ಮತ್ತೆ ಹುಟ್ಟಿ ಬಂದಂತೆ ಎಲ್ಲಾ ಕಡೆಗಳಲ್ಲಿಯೂ ಸಂಭ್ರಮಿಸಲಾಗುತ್ತಿದೆ.

  • ಅಯೋಧ್ಯೆ ರಾಮಮಂದಿರದ ಗರ್ಭಗುಡಿಯಲ್ಲಿ ಬಾಲರಾಮನ ಪ್ರಾಣಪ್ರತಿಷ್ಠಾಪನೆ

    ಅಯೋಧ್ಯೆ ರಾಮಮಂದಿರದ ಗರ್ಭಗುಡಿಯಲ್ಲಿ ಬಾಲರಾಮನ ಪ್ರಾಣಪ್ರತಿಷ್ಠಾಪನೆ

    – ಪ್ರಧಾನಿ ಮೋದಿ ಸಾರಥ್ಯದಲ್ಲಿ ನೆರವೇರಿದ ಪ್ರಾಣಪ್ರತಿಷ್ಠೆ

    ಅಯೋಧ್ಯೆ: ರಾಮಭಕ್ತರ 500 ವರ್ಷಗಳ ತಪಸ್ಸಿಗೆ ವರ ಸಿಕ್ಕಿದೆ. ಆಧುನಿಕ ಶಬರಿಯಂತೆ ಕಾದಿದ್ದ ಕೋಟ್ಯಂತರ ಭಕ್ತರಿಗೆ ಭಗವಾನ್‌ ರಾಮ ಕೊನೆಗೂ ದರ್ಶನ ನೀಡಿದ್ದಾನೆ. ಅಯೋಧ್ಯೆ ಇಂದು (ಸೋಮವಾರ) ಅಕ್ಷರಸಹ ರಘುರಾಮನ ಭಕ್ತಿಯಲ್ಲಿ ಮಿಂದೆದ್ದಿತು. ಅಯೋಧ್ಯೆ ರಾಮಮಂದಿರದಲ್ಲಿ (Ayodhya Ram Mandir) ಶಾಸ್ತ್ರೋಕ್ತವಾಗಿ ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಸೋಮವಾರ (ಜ.22) ನೆರವೇರಿತು. ಪುಣ್ಯಪುರುಷ ರಾಮನನ್ನು ಕಣ್ತುಂಬಿಕೊಂಡು ಭಕ್ತರು ಪುನೀತರಾದರು.

    12 ಗಂಟೆ 30 ನಿಮಿಷ 32 ಸೆಕೆಂಡು ಶುಭಘಳಿಗೆಯಲ್ಲಿ ಅಭಿಜಿತ್‌ ಮುಹೂರ್ತದಲ್ಲಿ (ʼಅಭಿಜಿತ್‌ʼ ಅಂದ್ರೆ ʼಜಯಶಾಲಿʼ ಎಂದರ್ಥ) ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ (Pran Prathistha ceremony) ನೆರವೇರಿತು. ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಈ ಕಾರ್ಯಕ್ರಮ ನಡೆಯಿತು. ಇದಕ್ಕೂ ಮುನ್ನ ಪ್ರಧಾನಿಯವರ ಸಾರಥ್ಯದಲ್ಲಿ ಮೂಲ ವಿಗ್ರಹದ ಎದುರು ವಿಧಿ-ವಿಧಾನಗಳನ್ನು ನೆರವೇರಿಸಲಾಯಿತು. ಗರ್ಭಗುಡಿಯಲ್ಲಿ ಪೂಜಾ-ಕೈಂಕರ್ಯಗಳು ನಡೆದವು. ಬಳಿಕ ಬಾಲರಾಮನ ಹಣೆಗೆ ಮೋದಿ ತಿಲಕವಿಟ್ಟರು. ಈ ಸಂದರ್ಭದಲ್ಲಿ ಶಂಖ, ಜಾಗಟೆಗಳು ಮೊಳಗಿದವು.

    ಪ್ರಾಣ ಪ್ರತಿಷ್ಠೆ ಸಂದರ್ಭದಲ್ಲಿ ಗರ್ಭಗುಡಿಯಲ್ಲಿ ಯುಪಿ ಸಿಎಂ ಯೋಗಿ ಆದಿತ್ಯನಾಥ್‌, ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌, ರಾಜ್ಯಪಾಲೆ ಆನಂದಿ ಬೆನ್‌ ಪಟೇಲ್‌ ಹಾಗೂ ಅಯೋಧ್ಯೆಯ ಪ್ರಧಾನ ಅರ್ಚಕರು ಉಪಸ್ಥಿತರಿದ್ದರು.

    ಈ ದಿನಕ್ಕಾಗಿ ಪ್ರಧಾನಿಯವರು ಕಳೆದ 11 ದಿನಗಳಿಂದ ಕಠಿಣ ವ್ರತ ಕೈಗೊಂಡಿದ್ದರು. ಈ ನಡುವೆ ಹಲವಾರು ದೇಗುಲಗಳಿಗೆ ತೆರಳಿ ಪೂಜೆಯನ್ನೂ ಸಲ್ಲಿಸಿದ್ದರು. ಕಾರ್ಯಕ್ರಮಕ್ಕೆ ಸಿನಿಮಾ ತಾರೆಯರು, ರಾಜಕೀಯ ವ್ಯಕ್ತಿಗಳು ಸೇರಿದಂತೆ ಹಲವಾರು ಗಣ್ಯರು ಸಾವಿರಾರು ಸಂಖ್ಯೆಯಲ್ಲಿ ಈ ಕ್ಷಣಕ್ಕೆ ಸಾಕ್ಷಿಯಾದರು. ಒಟ್ಟಿನಲ್ಲಿ ಇಂದು ಎಲ್ಲೆಲ್ಲೂ ಜೈ ಶ್ರೀ ರಾಮ್ ಘೋಷಣೆ ಮೊಳಗುತ್ತಿದೆ. ಎಲ್ಲಾ ಕಡೆಯೂ ಶ್ರೀರಾಮನ ಗುಣಗಾನ ನಡೆಯುತ್ತಿದೆ.

    ಏನಿದು ಪ್ರಾಣ ಪ್ರತಿಷ್ಠೆ?: ಪ್ರಾಣ ಪ್ರತಿಷ್ಠೆ ಎನ್ನುವುದು ಹಿಂದೂ ಮತ್ತು ಜೈನ ಧರ್ಮದ ಪ್ರಮುಖ ಆಚರಣೆಯಾಗಿದೆ. ವಿಗ್ರಹವು ಕೇವಲ ದೇವರ ರೂಪವನ್ನು ಚಿತ್ರಿಸುವ ಒಂದು ಕಲಾಕೃತಿಯಷ್ಟೆ. ಪ್ರಾಣ ಪ್ರತಿಷ್ಠೆಯ ನಂತರವೇ ವಿಗ್ರಹವು ದೈವಿಕವಾಗುತ್ತದೆ. ಅದಕ್ಕಾಗಿ ವಿಗ್ರಹವನ್ನು ಪವಿತ್ರಗೊಳಿಸಿ ದೇವಾಲಯದ ಗರ್ಭಗುಡಿಯಲ್ಲಿ ಸ್ಥಾಪಿಸಲಾಗುತ್ತದೆ. ಪ್ರಾಣ ಎಂದರೆ ‘ಜೀವಶಕ್ತಿ, ಉಸಿರು, ಚೈತನ್ಯ’ ಮತ್ತು ಪ್ರತಿಷ್ಠೆ ಎಂದರೆ ‘ಸ್ಥಾಪನೆ’. ಪ್ರಾಣ ಪ್ರತಿಷ್ಠೆ ಸಮಾರಂಭದಲ್ಲಿ ಪೂಜಾ ವಿಧಾನ, ವೈದಿಕ ಸ್ತೋತ್ರಗಳ ಪಠಣ ನಡೆಸಲಾಗುವುದು. ಪ್ರಾಣ ಪ್ರತಿಷ್ಠೆ ಎಂದರೆ, ವಿಗ್ರಹಕ್ಕೆ ಜೀವಶಕ್ತಿ ತುಂಬಿ ದೈವಿಕವಾಗಿಸುವ ಆಚರಣೆ ಎನ್ನುತ್ತಾರೆ ಹಿರಿಯರು.

    ಪ್ರಾಣ ಪ್ರತಿಷ್ಠೆ ಪ್ರಕ್ರಿಯೆಗೂ ಮೊದಲು ವಿಗ್ರಹದಲ್ಲಿ ದೈವಿಕ ಶಕ್ತಿ ಇರುವುದಿಲ್ಲ. ಪ್ರಾಣ ಪ್ರತಿಷ್ಠೆ ನಂತರವೇ ವಿಗ್ರಹಕ್ಕೆ ವಿಶೇಷ ಶಕ್ತಿ ಬರುತ್ತದೆ. ಬಳಿಕ ವಿಗ್ರಹವು ದೈವಿಕ ಶಕ್ತಿಯಾಗಿ ರೂಪಾಂತರಗೊಳ್ಳುತ್ತದೆ. ಆಗ ದೇವಾಲಯಗಳಲ್ಲಿ ಭಕ್ತರು ವಿಗ್ರಹವನ್ನು ಪೂಜಿಸಬಹುದು ಎಂಬ ನಂಬಿಕೆಯಿದೆ.

  • ಆಹ್ವಾನ ಬಂದಿದ್ದು, ಜ.22 ರ ಬಳಿಕ ರಾಮಮಂದಿರಕ್ಕೆ ಭೇಟಿ ನೀಡುತ್ತೇನೆ: ಅಖಿಲೇಶ್‌ ಯಾದವ್‌

    ಆಹ್ವಾನ ಬಂದಿದ್ದು, ಜ.22 ರ ಬಳಿಕ ರಾಮಮಂದಿರಕ್ಕೆ ಭೇಟಿ ನೀಡುತ್ತೇನೆ: ಅಖಿಲೇಶ್‌ ಯಾದವ್‌

    ಅಯೋಧ್ಯೆ: ರಾಮನೂರಿನಲ್ಲಿ ಬಾಲರಾಮನ ಪ್ರಾಣಪ್ರತಿಷ್ಠಾಪನಾ ಕಾರ್ಯಕ್ರಮಕ್ಕೆ (Pran Prathistha Ceremony) ಸಿದ್ಧತೆಗಳು ಅಂತಿಮ ಹಂತದಲ್ಲಿವೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಸಾವಿರಾರು ಜನರಿಗೆ ಈಗಾಗಲೇ ಆಹ್ವಾನ ಕಳುಹಿಸಲಾಗಿದೆ. ಹೀಗಾಗಿ ಹಲವರು ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿದ್ದು, ಇನ್ನೂ ಕೆಲವರು ಭಾಗವಹಿಸಲ್ಲ. ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಕಾಂಗ್ರೆಸ್ ಹೈಕಮಾಂಡ್ (Congress High Command) ನಿರಾಕರಿಸಿದೆ. ಇದೀಗ ಅಖಿಲೇಶ್ ಯಾದವ್ ಕೂಡ ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರೋ, ಇಲ್ಲವೋ ಎಂಬ ಪ್ರಶ್ನೆಗೆ ಇದೀಗ ಸ್ವತಃ ಅವರೇ ಸ್ಪಷ್ಟನೆ ಕೊಟ್ಟಿದ್ದಾರೆ.

    ಈ ಸಂಬಂಧ ಅಖಿಲೇಶ್‌ (Akhilesh Yadav) ಅವರು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರಿಗೆ ಪತ್ರವನ್ನು ಬರೆದಿದ್ದಾರೆ. ಇದರಲ್ಲಿ ಕಾರ್ಯಕ್ರಮದ ನಂತರ ಬರುವುದಾಗಿ ಹೇಳಿದ್ದಾರೆ. ಜೊತೆಗೆ ಆಹ್ವಾನ ನೀಡಿದ್ದಕ್ಕಾಗಿ ಧನ್ಯವಾದಗಳನ್ನು ಕೂಡ ಅಲ್ಲಿಸಿದ್ದಾರೆ. ಇದರೊಂದಿಗೆ ಈ ಕಾರ್ಯಕ್ರಮವನ್ನು ಸುರಕ್ಷಿತವಾಗಿ ಪೂರ್ಣಗೊಳಿಸಬೇಕು. ಜನವರಿ 22 ರ ಕಾರ್ಯಕ್ರಮದ ಬಳಿಕ ತಮ್ಮ ಕುಟುಂಬದೊಂದಿಗೆ ಅಯೋಧ್ಯೆಗೆ ಭೇಟಿ ನೀಡುವುದಾಗಿಯೂ ಅಖಿಲೇಶ್‌ ತಿಳಿಸಿದ್ದಾರೆ.

    ಆಹ್ವಾನ ಬಂದಿಲ್ಲವೆಂದು ಹೇಳಿದ್ದರು ಅಖಿಲೇಶ್:‌ ಇದಕ್ಕೂ ಮುನ್ನ ಶುಕ್ರವಾರ ಪತ್ರಕರ್ತರೊಂದಿಗೆ ಮಾತನಾಡಿದ್ದ ಅಖಿಲೇಶ್ ಯಾದವ್, ತಮಗೆ ಆಹ್ವಾನ ಬಂದಿಲ್ಲ ಎಂದು ಹೇಳಿದ್ದರು. ಅಯೋಧ್ಯೆಯಲ್ಲಿ ನಡೆಯಲಿರುವ ರಾಮನ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮಕ್ಕೆ ವೈಯಕ್ತಿಕವಾಗಿ ಅಥವಾ ಕೊರಿಯರ್ ಮೂಲಕ ಆಹ್ವಾನ ಬಂದಿಲ್ಲ. ಆಮಂತ್ರಣ ಪತ್ರವನ್ನು ಕೊರಿಯರ್ ಮೂಲಕ ಕಳುಹಿಸಿದ್ದರೆ ಅದರ ರಸೀದಿಯನ್ನು ಅವರಿಗೆ ತೋರಿಸಬೇಕು, ಆಮಂತ್ರಣವನ್ನು ಸರಿಯಾದ ವಿಳಾಸಕ್ಕೆ ಕಳುಹಿಸಲಾಗಿದೆಯೇ ಅಥವಾ ಇಲ್ಲವೇ ಎಂದು ತಿಳಿಯಬಹುದು ಎಂದು ಅವರು ಹೇಳಿದ್ದರು.