Tag: ಬಾಲ್ಯ ವಿವಾಹ

  • 15 ವರ್ಷದ ಬಾಲಕಿ ವಿವಾಹವಾಗಿ ಸಿಕ್ಕಿಬಿದ್ದ ಗ್ರಾಮ ‌ಪಂಚಾಯಿತಿ ಅಧ್ಯಕ್ಷ

    15 ವರ್ಷದ ಬಾಲಕಿ ವಿವಾಹವಾಗಿ ಸಿಕ್ಕಿಬಿದ್ದ ಗ್ರಾಮ ‌ಪಂಚಾಯಿತಿ ಅಧ್ಯಕ್ಷ

    – ಅಧ್ಯಕ್ಷನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು

    ಚಿಕ್ಕೋಡಿ: ಗ್ರಾಮ ಪಂಚಾಯಿತಿ ಅಧ್ಯಕ್ಷನೊಬ್ಬ 15 ವರ್ಷದ ಬಾಲಕಿಯನ್ನು ವಿವಾಹವಾದ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬಸ್ಸಾಪುರ ಗ್ರಾಮದಲ್ಲಿ ತಡವಾಗಿ ಬೆಳಕಿಗೆ ಬಂದಿದೆ.

    ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತವರು ಜಿಲ್ಲೆ ಬೆಳಗಾವಿಯಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದೆ. ಸಚಿವ ಸತೀಶ್‌ ಜಾರಕಿಹೊಳಿ‌ ಪ್ರತಿನಿಧಿಸುವ ಯಮಕನಮರಡಿ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಬಸ್ಸಾಪುರ ಗ್ರಾಮ ಇದು.

    ಬಸ್ಸಾಪುರ ಗ್ರಾಪಂ ಅಧ್ಯಕ್ಷ ‌ಭೀಮಶಿ ಕಾಲಿಮಣಿ ಎಂಬಾತನಿಂದ ಈ ಕೃತ್ಯ ನಡೆದಿದೆ. ಬಾಲ್ಯ ವಿವಾಹ ಮಾಡಿಕೊಂಡ ಗ್ರಾಪಂ ಅಧ್ಯಕ್ಷ ಭೀಮಶಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಹುಕ್ಕೇರಿ ತಾಲೂಕಿನ ಯಮಕನಮರಡಿ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ. 2023ರ ನ.5 ರಂದು ಅಪ್ರಾಪ್ತೆ ಜೊತೆಗೆ ಭೀಮಶಿ ಕಾಲಿಮಣಿ ವಿವಾಹವಾಗಿದ್ದ.

    ಬಂಧನದ ಭೀತಿಯಿಂದ ತಪ್ಪಿಸಿಕೊಳ್ಳಲು ಗ್ರಾಪಂ ಅಧ್ಯಕ್ಷ ಭೀಮಶಿ ಕಳ್ಳಾಟ ನಡೆಸುತ್ತಿದ್ದಾನೆ‌. ದೂರು ಬಂದ ತಕ್ಷಣವೇ ಬಸ್ಸಾಪುರ ಗ್ರಾಮಕ್ಕೆ ನಾಲ್ಕು ಸಲ ಮಕ್ಕಳ ರಕ್ಷಣಾ ತಂಡ ಹೋಗಿದೆ. ಜಿಲ್ಲಾ ‌ಮಕ್ಕಳ ರಕ್ಷಣಾಧಿಕಾರಿ ಡಾ. ಪ್ರವೀಣ ನೇತೃತ್ವದ ತಂಡ ನಾಲ್ಕು ಸಲ ಬಸ್ಸಾಪುರಕ್ಕೆ ಭೇಟಿ ನೀಡಿದೆ. ಆದರೂ, ಬಾಲಕಿ ಪತ್ತೆಹಚ್ಚಲು ಮಕ್ಕಳ ರಕ್ಷಣಾ ‌ತಂಡ ವಿಫಲವಾಗಿದೆ. ಈ ಮಧ್ಯೆಯೇ ಆಕೆ ಪ್ರಾಪ್ತ ವಯಸ್ಸಿನವಳು ಎಂಬ ದಾಖಲೆಯನ್ನು ಅಧ್ಯಕ್ಷ ಬಿಡುಗಡೆ ಮಾಡಿದ್ದ.

    ಅಧ್ಯಕ್ಷ ಬಂಧನದ ಭೀತಿಯಿಂದ ‌ಪತ್ನಿಯ ನಕಲಿ ಜನನ ಪ್ರಮಾಣ ಪತ್ರ ವೈರಲ್ ಮಾಡಿದ್ದ ಎನ್ನಲಾಗಿದೆ. ಶಾಲಾ‌ ಟ್ರಾನ್ಸ್‌ಫರ್ ಸರ್ಟಿಫಿಕೇಟ್ ಜೊತೆಗೆ ಹೊಸ ಜನನ ಪ್ರಮಾಣದ ‌ದಾಖಲೆ‌ ಹೋಲಿಕೆ ಮಾಡಿದ ಅಧಿಕಾರಿಗಳು‌, ಗ್ರಾಪಂ ಅಧ್ಯಕ್ಷ ‌ಭೀಮಶಿ ಕಾಲಿಮಣಿ ಬಾಲ್ಯ ವಿವಾಹ ಆಗಿರುವುದು ದೃಢವಾಗಿದೆ. ಕೃತ್ಯ‌ ಎಸಗಿರುವುದು ದೃಢವಾದ ಹಿನ್ನೆಲೆಯಲ್ಲಿ ಗ್ರಾಪಂ ‌ಅಧ್ಯಕ್ಷನ‌ ವಿರುದ್ಧ ಪೋಕ್ಸೊ ಕೇಸ್ ದಾಖಲಾಗಿದೆ.

  • ಪೋಷಕರಿಗೆ ಸೆಡ್ಡು – ಸಹಾಯವಾಣಿಗೆ ಕರೆ ಮಾಡಿ ತನ್ನ ಬಾಲ್ಯ ವಿವಾಹವನ್ನೇ ನಿಲ್ಲಿಸಿದ ಬಾಲಕಿ

    ಪೋಷಕರಿಗೆ ಸೆಡ್ಡು – ಸಹಾಯವಾಣಿಗೆ ಕರೆ ಮಾಡಿ ತನ್ನ ಬಾಲ್ಯ ವಿವಾಹವನ್ನೇ ನಿಲ್ಲಿಸಿದ ಬಾಲಕಿ

    – ಎಸ್‌ಎಸ್‌ಎಲ್‌ಸಿಯಲ್ಲಿ 94% ಅಂಕ ಪಡೆದಿದ್ದ ವಿದ್ಯಾರ್ಥಿನಿ
    – ಮನೆಗೆ ಅಧಿಕಾರಿಗಳ ಭೇಟಿ, ಶಿಕ್ಷಣಕ್ಕೆ ಸಹಾಯ

    ಬಳ್ಳಾರಿ: ಪೋಷಕರ ನಿರ್ಧಾರಕ್ಕೆ ಸೆಡ್ಡು ಹೊಡೆದು ಬಾಲಕಿಯೇ ತನ್ನ ಬಾಲ್ಯ ವಿವಾಹವನ್ನು ನಿಲ್ಲಿಸಿದ ಘಟನೆ ಹಗರಿಬೊಮ್ಮನಹಳ್ಳಿ ತಾಲೂಕಿನ ಗ್ರಾಮದಲ್ಲಿ ನಡೆದಿದೆ.

    ಪೋಷಕರು ವಿವಾಹ ಮಾಡುತ್ತಿರುವ ವಿಚಾರ ಗೊತ್ತಾಗಿ ಬಾಲಕಿಯೇ ಧೈರ್ಯ ಮಾಡಿ ತನ್ನ ಮದುವೆ ನಿಲ್ಲಿಸಿ ಎಂದು ಮಕ್ಕಳ ಸಹಾಯವಾಣಿಗೆ ಕರೆ ಮಾಡಿದ್ದಳು. ವಿಷಯ ತಿಳಿಯುತ್ತಿದ್ದಂತೆ ಗ್ರಾಮಕ್ಕೆ ಬಂದ ತಹಶೀಲ್ದಾರ್‌, ಪೊಲೀಸರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಮದುವೆಗೆ ಬ್ರೇಕ್ ಹಾಕಿದ್ದಾರೆ.

     

    ಎಸ್‌ಎಸ್‌ಎಲ್‌ಸಿಯಲ್ಲಿ 94% ಅಂಕ ಪಡೆದಿದ್ದ ಬಾಲಕಿ ಉನ್ನತ ವ್ಯಾಸಂಗದ ಕನಸು ಕಂಡಿದ್ದಳು. ಆದರೆ ಪೋಷಕರು ಮದುವೆ ಮಾಡಿ ಕೈ ತೊಳೆದುಕೊಳ್ಳಲು ಯೋಚನೆ ಮಾಡಿದ್ದರು. ಹುಡುಗನನ್ನು ನೋಡಿ ಇನ್ನೇನು ಒಂದು ತಿಂಗಳೊಳಗೆ ಮದುವೆ ಮಾಡಲು ನಿರ್ಧಾರ ಮಾಡಿದ್ದರು.   ಇದನ್ನೂ ಓದಿ: ಟೀಚರ್ಮೇಲೆ ಸಿಕ್ಕಾಪಟ್ಟೆ ಲವ್ ದೂರು ನೀಡಿದ್ದಕ್ಕೆ ಪೆಟ್ರೋಲ್ಸುರಿದು ಬೆಂಕಿ ಹಚ್ಚಿದ ಹಳೇ ವಿದ್ಯಾರ್ಥಿ

    ತನ್ನ ಮದುವೆಯಾಗಲಿದೆ ಎನ್ನುವುದು ಗೊತ್ತಾಗುತ್ತಿದ್ದಂತೆ ಆಕೆ ಧೈರ್ಯ ಮಾಡಿ ಮಕ್ಕಳ ಸಹಾಯವಾಣಿಗೆ ಕರೆ ಮಾಡಿದ್ದಾಳೆ. ತಕ್ಷಣ ಎಚ್ಚೆತ್ತ ಹಗರಿಬೊಮ್ಮನಹಳ್ಳಿಯ ತಾಲೂಕು ಆಡಳಿತ ಬಾಲಕಿ ಮನೆಗೆ ದೌಡಾಯಿಸಿದ್ದಾರೆ.

    ಪೋಷಕರಿಗೆ ಬುದ್ಧಿ ಹೇಳುವ ಮೂಲಕ ಅಧಿಕಾರಿಗಳು ಬಾಲಕಿಗೆ ಕಾಲೇಜೊಂದರಲ್ಲಿ ಸೀಟ್ ಕೊಡಿಸಿ ಹಾಸ್ಟೆಲ್ ವ್ಯವಸ್ಥೆ ಮಾಡಿದ್ದಾರೆ. ಬಾಲಕಿಯ ದಿಟ್ಟ ನಡೆ ಮೆಚ್ಚುಗೆಗೆ ಪಾತ್ರವಾಗಿದೆ.

  • ಬಾಲ್ಯ ವಿವಾಹದ ವಿರುದ್ಧ ಸಮರ – ಮತ್ತೆ 800ಕ್ಕೂ ಅಧಿಕ ಮಂದಿಯ ಬಂಧನ

    ಬಾಲ್ಯ ವಿವಾಹದ ವಿರುದ್ಧ ಸಮರ – ಮತ್ತೆ 800ಕ್ಕೂ ಅಧಿಕ ಮಂದಿಯ ಬಂಧನ

    ಗುವಾಹಟಿ: ಬಾಲ್ಯ ವಿವಾಹದ (Child Marriage) ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುತ್ತಿರುವ ಅಸ್ಸಾಂನ (Assam) ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ (Himanta Biswa Sarma) ನೇತೃತ್ವದ ಸರ್ಕಾರ ಇಂದು ಎರಡನೇ ಹಂತದ ಕಾರ್ಯಾಚರಣೆ ನಡೆಸಿದ್ದು, ಕಾನೂನಿನ ವಿರುದ್ಧ ಅಪ್ರಾಪ್ತರ ಮದುವೆ ಮಾಡಿಸುತ್ತಿದ್ದ 800ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ.

    ಈ ಬಗ್ಗೆ ಎಕ್ಸ್‌ನಲ್ಲಿ (X) ಪೋಸ್ಟ್ ಮಾಡಿರುವ ಹಿಮಂತ ಬಿಸ್ವಾ ಶರ್ಮಾ ಈ ವರ್ಷದ ಆರಂಭದಲ್ಲಿ ಮೊದಲ ಸುತ್ತಿನ ಕಾರ್ಯಾಚರಣೆಯಲ್ಲಿ ರಾಜ್ಯಾದ್ಯಂತ ಸಾವಿರಾರು ಮಂದಿಯನ್ನು ಬಂಧಿಸಲಾಯಿತು. ಕಾರ್ಯಾಚರಣೆ ಇನ್ನೂ ನಡೆಯುತ್ತಿರುವುದರಿಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣಗಳಲ್ಲಿ ಬಂಧಿತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹೇಳಿದರು. ಇದನ್ನೂ ಓದಿ: ಇರುವುದೊಂದೇ ಸನಾತನ ಧರ್ಮ, ಉಳಿದೆಲ್ಲವೂ ಪಂಥಗಳು: ಯೋಗಿ

    ಕಳೆದ ಐದು ವರ್ಷಗಳಲ್ಲಿ ಬಾಲ್ಯವಿವಾಹಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ಒಟ್ಟು 3,907 ಜನರನ್ನು ಬಂಧಿಸಲಾಗಿದೆ. ಅವರಲ್ಲಿ 3,319 ಜನರು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ 2012ರ (POCSO) ಅಡಿಯಲ್ಲಿ ಆರೋಪಗಳನ್ನು ಎದುರಿಸುತ್ತಿದ್ದಾರೆ ಎಂದು ಸೆಪ್ಟೆಂಬರ್ 11 ರಂದು ಅಸ್ಸಾಂ ವಿಧಾನಸಭೆಗೆ ಶರ್ಮಾ ತಿಳಿಸಿದ್ದರು. ಇದನ್ನೂ ಓದಿ: ಬಿಹಾರ ಜಾತಿ ಸಮೀಕ್ಷೆ ವರದಿ ಬಿಡುಗಡೆ; ಜಾತಿ ಹೆಸರಲ್ಲಿ ದೇಶ ವಿಭಜಿಸುವ ಪ್ರಯತ್ನವೆಂದು ಮೋದಿ ವಾಗ್ದಾಳಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • 18 ವರ್ಷಕ್ಕೂ ಮೊದಲೇ ತಾಯಿಯಂದಿರಾದ 15 ಸಾವಿರ ಹೆಣ್ಮಕ್ಕಳು – ಕಾರಣ ಕೇಳಿದ್ರೆ ಶಾಕ್‌!

    18 ವರ್ಷಕ್ಕೂ ಮೊದಲೇ ತಾಯಿಯಂದಿರಾದ 15 ಸಾವಿರ ಹೆಣ್ಮಕ್ಕಳು – ಕಾರಣ ಕೇಳಿದ್ರೆ ಶಾಕ್‌!

    ಮುಂಬೈ: ಇತ್ತೀಚಿನ ದಿನಗಳಲ್ಲಿ ಬಾಲ್ಯವಿವಾಹ (Child Marriage), ಪ್ರೇಮ ವೈಫಲ್ಯ, ಲೈಂಗಿಕ ಹಿತಾಸಕ್ತಿ ಸೇರಿದಂತೆ ವಿವಿಧ ಕಾರಣಗಳಿಂದಾಗಿ ಹೆಣ್ಣುಮಕ್ಕಳು 18 ವರ್ಷ ತುಂಬುವ ಮೊದಲೇ ಗರ್ಭ ಧರಿಸುವ ಪ್ರಕರಣಗಳು ಕಂಡುಬರುತ್ತಿವೆ. ಈ ನಡುವೆ ಮಹಾರಾಷ್ಟ್ರದಲ್ಲಿ ಬಿಡುಗಡೆಯಾಗಿರುವ ವರದಿಯೊಂದು ಅಲ್ಲಿನ ಜನರನ್ನೇ ಬೆಚ್ಚಿ ಬೀಳಿಸಿದೆ.

    ಹೌದು. ಬುಡಕಟ್ಟು ಸಮುದಾಯದ ಜನರೇ ಹೆಚ್ಚಿರುವ ಮಹಾರಾಷ್ಟ್ರದ (Maharashtra) 16 ಜಿಲ್ಲೆಗಳಲ್ಲಿ ಕಳೆದ 3 ವರ್ಷಗಳಲ್ಲಿ 15,253 ಹದಿಹರೆಯದ ಹೆಣ್ಣುಮಕ್ಕಳು 18 ವರ್ಷ ಆಗುವ ಮೊದಲೇ ತಾಯಂದಿರಾಗಿದ್ದಾರೆ (Teenage Mother) ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಮಂಗಲ್‌ ಪ್ರಭಾತ್‌ ಲೋಧಾ (Mangal Prabhat Lodha) ತಿಳಿಸಿದ್ದಾರೆ. ಇದನ್ನೂ ಓದಿ: ಮರ್ಸಿಡಿಸ್ ಕಾರಿನಲ್ಲಿ ವೇಷ ಬದಲಿಸಿಕೊಂಡು ಮರೆಯಾದ ಅಮೃತಪಾಲ್ – ಕೊನೇ ಬಾರಿ ಕಾಣಿಸಿದ್ದು ಎಲ್ಲಿ?

    ಮಹಾರಾಷ್ಟ್ರ ವಿಧಾನ ಪರಿಷತ್ತಿನಲ್ಲಿ ಪ್ರಶ್ನೆಯೊಂದಕ್ಕೆ ಲಿಖಿತ ಉತ್ತರ ನೀಡಿರುವ ಸಚಿವರು, 18 ವರ್ಷಕ್ಕಿಂತ ಕಡಿಮೆ ವಯಸ್ಸಿನ 15 ಸಾವಿರಕ್ಕೂ ಹೆಚ್ಚು ಹೆಣ್ಣುಮಕ್ಕಳು ಗರ್ಭಿಣಿಯರಾಗಿರುವುದು ಕಂಡುಬಂದಿದೆ. ಈ ಬಗ್ಗೆ ಮಾಹಿತಿ ಸಂಗ್ರಹಿಸಲು ಇಲಾಖೆಯು ಮೂರು ಸದಸ್ಯರನ್ನು ಒಳಗೊಂಡ ಸಮತಿ ರಚಿಸಿತ್ತು. ಸಮಿತಿ ನಡೆಸಿದ ತನಿಖೆಯಲ್ಲಿ 15 ಸಾವಿರಕ್ಕೂ ಹೆಚ್ಚು ಬಾಲ್ಯವಿವಾಹಗಳು ನಡೆದಿರುವುದು ಕಂಡುಬಂದಿದೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ವಾಣಿಜ್ಯ ವಾಹನಗಳ ಖರೀದಿದಾರರಿಗೆ Tata Motors ಶಾಕ್‌ – ಏಪ್ರಿಲ್‌ 1ರಿಂದ ಬೆಲೆ ಏರಿಕೆ

    ಅಲ್ಲದೇ, 2019 ಮತ್ತು 2021ರ ಅವಧಿಯಲ್ಲಿ ಬಾಲ್ಯವಿವಾಹ ನಿಷೇಧ ಕಾಯ್ದೆಯಡಿ 152 ಮೊಕದ್ದಮೆ ಹೂಡಿದ್ದು, 136 ಪ್ರಕರಣಗಳು ವಿಚಾರಣೆಯಲ್ಲಿವೆ ಎಂದು ಅವರು ತಿಳಿಸಿದ್ದರು. ಈ ಮಧ್ಯೆ ಸಭಾಧ್ಯಕ್ಷರು ಶೇ.10 ರಷ್ಟು ಬಾಲ್ಯ ವಿವಾಹವನ್ನಾದರೂ ತಡೆಯಲು ಸಾಧ್ಯವಿದೆಯೇ? ಎಂದು ಕೇಳಿದಾಗ, ಲಿಖಿತ ಉತ್ತರದಲ್ಲೇ ಭಾಗಶಃ ಆಗುತ್ತದೆ ಎಂದು ಉತ್ತರಿಸಿದ್ದಾರೆ.

  • ಪತಿಯನ್ನ ಅರೆಸ್ಟ್ ಮಾಡ್ತಾರೆ ಅಂತಾ ಹೆದರಿ ನವ ವಿವಾಹಿತೆ ಆತ್ಮಹತ್ಯೆ

    ಪತಿಯನ್ನ ಅರೆಸ್ಟ್ ಮಾಡ್ತಾರೆ ಅಂತಾ ಹೆದರಿ ನವ ವಿವಾಹಿತೆ ಆತ್ಮಹತ್ಯೆ

    ದಿಸ್ಪುರ್: ಅಸ್ಸಾಂ ಸರ್ಕಾರ (Assam Government) ಬಾಲ್ಯವಿವಾಹ (Child Marriage) ವಿರುದ್ಧ ಕಠಿಣ ಕಾರ್ಯಾಚರಣೆ ಕೈಗೊಂಡಿದೆ. ಈ ಹಿನ್ನೆಲೆಯಲ್ಲಿ ತನ್ನ ಪತಿಯನ್ನು ಬಂಧಿಸುತ್ತಾರೆ ಅಂತಾ ಹೆದರಿ 3 ತಿಂಗಳ ಹಿಂದೆಯಷ್ಟೇ ಮದುವೆಯಾದ ವಿವಾಹಿತೆ ಆತ್ಮಹತ್ಯೆಗೆ ಶರಣಾಗಿದ್ದಾಳೆ.

    ಮಹಿಳೆಯನ್ನ ದಕ್ಷಿಣ ಸಾಲ್ಮರ ಪೊಲೀಸ್ ಠಾಣಾ (Salmar Police Station) ವ್ಯಾಪ್ತಿಯ ಕಮರ್ ಪದ ಗ್ರಾಮದ ನಿವಾಸಿ ಎಂದು ಗುರುತಿಸಲಾಗಿದೆ. ಮಹಿಳೆ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಅಸ್ಸಾಂ ಸರ್ಕಾರ ಕಠಿಣ ಕಾರ್ಯಾಚರಣೆ ಕೈಗೊಂಡ ಬಳಿಕ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ 2ನೇ ಪ್ರಕರಣ ಇದಾಗಿದೆ. ಇದನ್ನೂ ಓದಿ: ಮದುವೆ ಸೀರೆಯ ಮೇಲೆ ಲ್ಯಾಬ್ ಕೋಟ್, ಸ್ಟೆತಸ್ಕೋಪ್ ಧರಿಸಿ ಪರೀಕ್ಷೆಗೆ ಬಂದ ವಧು

    Child Marriage Bride

    ಈ ತಿಂಗಳ ಆರಂಭದಲ್ಲಿ, ಅಸ್ಸಾಂನ ಕ್ಯಾಚಾರ್ ಜಿಲ್ಲೆಯಲ್ಲಿ 17 ವರ್ಷದ ಹುಡುಗಿ ಪೋಷಕರು ಪ್ರೀತಿಸಿದ ಯುವಕನೊಂದಿಗೆ ಮದುವೆ ಮಾಡಿಸಲಿಲ್ಲ ಅಂತಾ ಆತ್ಮಹತ್ಯೆ ಮಾಡಿಕೊಂಡಿದ್ದಳು. ಮತ್ತೊಂದು ಪ್ರಕರಣದಲ್ಲಿ, ಧುಬ್ರಿ ಜಿಲ್ಲೆಯಲ್ಲಿ ಬಾಲ್ಯವಿವಾಹ ಪ್ರಕರಣದಲ್ಲಿ ಬಂಧಿಸಿರುವ ತನ್ನ ಪತಿ ಮತ್ತು ತಂದೆಯನ್ನ ಬಿಡುಗಡೆ ಮಾಡದಿದ್ದರೇ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ರಂಪಾಟ ಮಾಡಿದ್ದಳು. ಹೊರತಾಗಿಯೂ ಪೊಲೀಸರು ತನ್ನ ಪತಿ ಮತ್ತು ತಂದೆಯನ್ನು ನ್ಯಾಯಾಲಯಕ್ಕೆ ಕರೆದೊಯ್ದಿದ್ದನ್ನ ಕಂಡು ಮಹಿಳೆ ಪ್ರಜ್ಞೆ ತಪ್ಪಿ ಬಿದ್ದಿದ್ದಳು.

    ರಾಜ್ಯದಲ್ಲಿ ಶಿಶು ಮರಣ ಪ್ರಮಾಣ ತಗ್ಗಿಸುವ ಸಲುವಾಗಿ ಸಿಎಂ ಹಿಮಂತ ಬಿಸ್ವಾ ಶರ್ಮಾ (Himanta Biswa Sharma) ನೇತೃತ್ವದ ಸರ್ಕಾರವು ರಾಜ್ಯದಲ್ಲಿ ಬಾಲ್ಯ ವಿವಾಹದ ವಿರುದ್ಧ ಸಮರ ಸಾರಿದೆ. ಈಗಾಗಲೇ 2 ಸಾವಿರಕ್ಕೂ ಅಧಿಕ ಆರೋಪಿಗಳನ್ನ ಬಂಧಿಸಿ, ಜೈಲಿಗಟ್ಟಿದ್ದಾರೆ. ಇನ್ನಷ್ಟು ಆರೋಪಿಗಳನ್ನ ಬಂಧಿಸುವ ಕಾರ್ಯಾಚರಣೆ ಮುಂದುವರಿದಿದೆ. ಸರ್ಕಾರದ ಈ ನಡೆ ವಿರುದ್ಧ ಅಸ್ಸಾಂ ರಾಜ್ಯಾದ್ಯಂತ ವಿವಿಧೆಡೆ ಮಹಿಳೆಯರು ಪ್ರತಿಭಟಿಸಿ ಬೀದಿಗಿಳಿದಿದ್ದಾರೆ. ಇದನ್ನೂ ಓದಿ: ವಿಚ್ಛೇದನಕ್ಕಾಗಿ ಕೋರ್ಟ್ ಮೆಟ್ಟಿಲೇರಿದ್ದ 4 ದಂಪತಿ – ಜಡ್ಜ್ ಎದುರೇ ವಿರಸ ಮರೆತು ಮತ್ತೆ ಒಂದಾದ ಜೋಡಿಗಳು

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • Child Marriage Crackdown: ಕಾನೂನಿಗೆ ಹೆದರಿ ಮದ್ವೆ ನಿಲ್ಲಿಸಿದ ಪೋಷಕರು, ಆತ್ಮಹತ್ಯೆ ಮಾಡಿಕೊಂಡ ಮಗಳು

    Child Marriage Crackdown: ಕಾನೂನಿಗೆ ಹೆದರಿ ಮದ್ವೆ ನಿಲ್ಲಿಸಿದ ಪೋಷಕರು, ಆತ್ಮಹತ್ಯೆ ಮಾಡಿಕೊಂಡ ಮಗಳು

    ದಿಸ್ಪುರ್: ಅಸ್ಸಾಂ ಸರ್ಕಾರ (Assam Government) ಬಾಲ್ಯ ವಿವಾಹದ (Child Marriage) ವಿರುದ್ಧ ಕಾರ್ಯಾಚರಣೆ ಕೈಗೊಂಡಿರುವ ಬೆನ್ನಲ್ಲೇ ಪೋಷಕರು ಎಚ್ಚೆತ್ತುಕೊಂಡಿದ್ದಾರೆ. ತಮ್ಮ ಮಕ್ಕಳ ಮೇಲೆ ನಿಗಾ ವಹಿಸಿದ್ದು, ಬಾಲ್ಯ ವಿವಾಹಕ್ಕೆ ಕಡಿವಾಣ ಹಾಕಿಕೊಳ್ಳುತ್ತಿದ್ದಾರೆ.

    ಸರ್ಕಾರದ ಕಠಿಣ ನೀತಿಗೆ ಹೆದರಿ ಕುಟುಂಬವೊಂದು ತಮ್ಮ ಮಗಳ ಮದುವೆ ಮಾಡಲು ನಿರಾಕರಿಸಿದೆ. ಇದರಿಂದ 17 ವರ್ಷದ ಹುಡುಗಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅಸ್ಸಾಂನ ಕ್ಯಾಚಾರ್ ಜಿಲ್ಲೆಯಲ್ಲಿ ನಡೆದಿದೆ.

    ಅಸ್ಸಾಂನ ಕ್ಯಾಚಾರ್ ಜಿಲ್ಲೆಯಲ್ಲಿ 17 ವರ್ಷದ ಹುಡುಗಿ ತನ್ನ ಪೋಷಕರು ಭರವಸೆ ಮುರಿದು ತಾನು ಪ್ರೀತಿಸಿದ ಹುಡುಗನನ್ನು ಮದುವೆಯಾಗಲು ನಿರಾಕರಿಸಿದ ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇದನ್ನೂ ಓದಿ: ಜೈಲಿಗೋದವರ ಹೆಂಡತಿಯರು, ಮಕ್ಕಳನ್ನ ಅಸ್ಸಾಂ ಸಿಎಂ ನೋಡಿಕೊಳ್ತಾರಾ- ಓವೈಸಿ ಪ್ರಶ್ನೆ

    ಕ್ಯಾಚಾರ್‌ನ ಧಲೈ ಪೊಲೀಸ್ (Assam Police) ಠಾಣಾ ವ್ಯಾಪ್ತಿಯ ಖಾಸ್ಪುರ ಗ್ರಾಮದಲ್ಲಿ ವಾಸಿಸುತ್ತಿದ್ದ ಹುಡುಗಿ ಯುವಕನೊಬ್ಬನನ್ನ ಪ್ರೀತಿಸುತ್ತಿದ್ದಳು. ಪೋಷಕರು ಸಹ ಮದುವೆಗೆ ಒಪ್ಪಿದ್ದರು. ಆದರೆ ಅಸ್ಸಾಂ ಸರ್ಕಾರ ಬಾಲ್ಯ ವಿವಾಹಕ್ಕೆ ಕಾನೂನು ನಿರ್ಬಂಧ ಹೇರಿದ ಬಳಿಕ ಹುಡುಗಿ ಪೋಷಕರು ಮದುವೆ ಮಾಡಲು ನಿರಾಕರಿಸಿದರು. ಇದರಿಂದ ಮನನೊಂದ ಹುಡುಗಿ ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾಳೆ.

    ಧುಬ್ರಿ ಜಿಲ್ಲೆಯಲ್ಲಿ ನಡೆದ ಮತ್ತೊಂದು ಪ್ರಕರಣದಲ್ಲಿ ಬಂಧಿಸಿರುವ ತನ್ನ ಪುರುಷ ಹಾಗೂ ತಂದೆಯನ್ನು ಬಿಡುಗಡೆ ಮಾಡುವಂತೆ 23 ವರ್ಷದ ಮಹಿಳೆ ರಂಪಾಟ ಮಾಡಿದ್ದಾಳೆ. ಪೊಲೀಸ್ ಠಾಣೆಗೆ ನುಗ್ಗಿ ಆಕ್ರೋಶ ವ್ಯಕ್ತಪಡಿಸಿದ್ದಲ್ಲದೇ ಇಬ್ಬರನ್ನೂ ಬಿಡುಗಡೆ ಮಾಡದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾಳೆ.

    ಅಫ್ರೋಜಾ ಖಾತುನ್ ಎಂಬಾಕೆ ತಾನು 1999ರಲ್ಲಿ ಜನಿಸಿದ್ದೇನೆ 2018ರಲ್ಲಿ ಮದುವೆಯಾಗಿದ್ದೇನೆ. ಸರಿಯಾಗಿ 19ನೇ ವಯಸ್ಸಿನಲ್ಲಿ ಮದುವೆಯಾಗಿದ್ದೇನೆ. ನಾನು ವಯಸ್ಕಳಾಗಿದ್ದೇನೆ ಎಂದು ಹೇಳಿಕೊಂಡಿದ್ದಾಳೆ.

    ಹಿಮಂತ ಬಿಸ್ವಾ ಶರ್ಮಾ (Himanta Biswa Sharma) ನನ್ನ ಪತಿಯನ್ನು ಏಕೆ ಬಂಧಿಸಲು ಹೇಳಿದ್ದಾರೆ? ನನ್ನ ಪತಿ ಮತ್ತು ತಂದೆಯನ್ನ ಜೈಲಿಂದ ಬಿಡುಗಡೆ ಮಾಡದೇ ಇದ್ದರೇ ನಾನು ನ್ಯಾಯಾಲಯ ಆವರಣದಲೇ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಹೇಳಿದ್ದಾಳೆ.

    ಇದರ ಹೊರತಾಗಿಯೂ ಪೊಲೀಸರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಇದನ್ನು ಕಣ್ಣಾರೆ ಕಂಡ ಮಹಿಳೆ ಸ್ಥಳದಲ್ಲೇ ಕುಸಿದುಬಿದ್ದಿದ್ದಾಳೆ. ಇದನ್ನೂ ಓದಿ: ಬಿನ್‌ ಲಾಡೆನ್‌ನ ಹೊಗಳಿದ್ದ ವ್ಯಕ್ತಿ, ರಾಹುಲ್‌ ಗಾಂಧಿ ಪಿಎಂ ಆಗಬೇಕೆಂದು ಬಯಸಿದ್ದರು – ಕಾಂಗ್ರೆಸ್‌ಗೆ ಬಿಜೆಪಿ ಟಾಂಗ್‌

    ಅಸ್ಸಾಂನಲ್ಲಿ ಬಾಲ್ಯ ವಿವಾಹ ತಡೆ ಕಾರ್ಯಾಚರಣೆ ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು ಬಂಧಿತರ ಸಂಖ್ಯೆ 2,441ಕ್ಕೆ ಏರಿಕೆಯಾಗಿದೆ. ಅಲ್ಲದೇ ಈ ಕಾರ್ಯಾಚರಣೆ 2026ರ ವಿಧಾನಸಭಾ ಚುನಾವಣೆವರೆಗೂ ಮುಂದುವರಿಯಲಿದೆ ಎಂದು ಸಿಎಂ ಹಿಮಂತ ಬಿಸ್ವಾ ಶರ್ಮಾ ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಜೈಲಿಗೋದವರ ಹೆಂಡತಿಯರು, ಮಕ್ಕಳನ್ನ ಅಸ್ಸಾಂ ಸಿಎಂ ನೋಡಿಕೊಳ್ತಾರಾ- ಓವೈಸಿ ಪ್ರಶ್ನೆ

    ಜೈಲಿಗೋದವರ ಹೆಂಡತಿಯರು, ಮಕ್ಕಳನ್ನ ಅಸ್ಸಾಂ ಸಿಎಂ ನೋಡಿಕೊಳ್ತಾರಾ- ಓವೈಸಿ ಪ್ರಶ್ನೆ

    ದಿಸ್ಪುರ್: ಅಸ್ಸಾಂ ರಾಜ್ಯ ಸರ್ಕಾರ (Assam Government) ಬಾಲ್ಯ ವಿವಾಹ (Child Marriage) ತಡೆಗೆ ಕೈಗೊಂಡಿರುವ ಕಠಿಣ ಕ್ರಮದಿಂದ ನಲುಗಿಹೋಗಿರುವ ಹೆಣ್ಣುಮಕ್ಕಳನ್ನ ಯಾರು ನೋಡಿಕೊಳ್ಳುತ್ತಾರೆ? ಜೈಲಿಗೆ ಹೋದವರ ಹೆಂಡತಿಯರು ಹಾಗೂ ಮಕ್ಕಳನ್ನ ಸಿಎಂ ನೋಡಿಕೊಳ್ತಾರಾ? ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ (Asaduddin Owaisi), ಹಿಮಂತ ಬಿಸ್ವಾ ಶರ್ಮಾ (Himanta Biswa Sharma) ಅವರನ್ನ ಪ್ರಶ್ನಿಸಿದ್ದಾರೆ.

    ಅವರಿಂದು ಸುದ್ದಿಗಾರರೊಂದಿಗೆ ಮಾತಮಾಡಿ, ಅಸ್ಸಾಂ ರಾಜ್ಯ ಸರ್ಕಾರ ಬಾಲ್ಯ ವಿವಾಹ ತಡೆಗೆ ಕೈಗೊಂಡಿರುವ ಕಠಿಣ ಕ್ರಮದಿಂದ ನಲುಗಿಹೋಗಿರುವ ಹೆಣ್ಣುಮಕ್ಕಳನ್ನ ಯಾರು ನೋಡಿಕೊಳ್ಳುತ್ತಾರೆ. ಕಳೆದ 6 ವರ್ಷಗಳಿಂದಲೂ ಮೌನ ವಹಿಸಿದ್ದದ್ದು ರಾಜ್ಯ ಸರ್ಕಾರದ ವೈಫಲ್ಯ ಎಂದು ಹೇಳಿದ್ದಾರೆ. ಇದನ್ನೂ ಓದಿ: ಬಾಲ್ಯ ವಿವಾಹದ ವಿರುದ್ಧ ಅಸ್ಸಾಂ ಸರ್ಕಾರ ಸಮರ – ಪತಿ, ಪುತ್ರರ ಬಂಧನ ವಿರೋಧಿಸಿ ಬೀದಿಗಿಳಿದ ಮಹಿಳೆಯರು

    ಬಾಲ್ಯ ವಿವಾಹ (Child Marriage) ತಡೆಗೆ ಅಸ್ಸಾಂ ಸರ್ಕಾರ ಕೈಗೊಂಡಿರುವ ಕಠಿಣ ಕಾರ್ಯಾಚರಣೆ ವಿರುದ್ಧ ಅವರು ಕಿಡಿಕಾರಿದ್ದಾರೆ. ಕಳೆದ 6 ವರ್ಷಗಳಿಂದ ಅಸ್ಸಾಂನಲ್ಲಿ ಬಿಜೆಪಿ ಸರ್ಕಾರವಿದೆ. ಅಷ್ಟು ವರ್ಷಗಳಿಂದ ನೀವು ಏನು ಮಾಡುತ್ತಿದ್ರಿ? ಅದು ನಿಮ್ಮ ಸರ್ಕಾರದ ವೈಫಲ್ಯ. ನೀವು ಪುರುಷರನ್ನ ಜೈಲಿಗೆ ಕಳುಹಿಸುತ್ತಿದ್ದೀರಿ. ಈಗ ಅವರ ಪತ್ನಿಯರು, ಹೆಣ್ಣುಮಕ್ಕಳನ್ನ ಸಿಎಂ ನೋಡಿಕೊಳ್ತಾರಾ? ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ನಿಧನ

    ಬಾಲ್ಯ ವಿವಾಹ ತಡೆಗೆ ಕಠಿಣ ಕಾರ್ಯಾಚರಣೆ ಕೈಗೊಂಡಿರುವ ಅಸ್ಸಾಂ ಪೊಲೀಸರು ಈಗಾಗಲೇ 2,250 ಮಂದಿಯನ್ನ ಬಂಧಿಸಿದ್ದಾರೆ. ಸಚಿವ ಸಂಪುಟದಲ್ಲಿ ಅಸ್ಸಾಂ ಸರ್ಕಾರ ಕ್ರಮ ಕೈಗೊಳ್ಳಲು ನಿರ್ಧರಿಸಿದ ನಂತರ ರಾಜ್ಯಾದ್ಯಂತ ಬಾಲ್ಯ ವಿವಾಹದ ವಿರುದ್ಧ 4,074 ಕೇಸ್‌ಗಳು ದಾಖಲಾಗಿವೆ. 8 ಸಾವಿರ ಆರೋಪಿ ಪಟ್ಟಿಗಳನ್ನು ಹೊಂದಿರುವ ಪೊಲೀಸರು ಒಬ್ಬೊಬ್ಬರನ್ನೂ ಬಂಧಿಸುತ್ತಿದ್ದಾರೆ. ಈಗಾಗಲೇ 2,250 ಮಂದಿಯನ್ನ ಜೈಲಿಗಟ್ಟಿದ್ದಾರೆ.

    14 ವರ್ಷದೊಳಗಿನ ಹುಡುಗಿಯರನ್ನ ಮದುವೆಯಾದವರ ವಿರುದ್ಧ ಪೋಕ್ಸೋ (POCSO) ಕೇಸ್ ಹಾಗೂ 14 ರಿಂದ 18 ವರ್ಷದೊಳಗಿನ ಹುಡುಗಿಯರನ್ನು ಮದುವೆಯಾಗಿದ್ರೆ ಬಾಲ್ಯ ವಿವಾಹ ನಿಷೇಧ ಕಾಯ್ದೆ-2006 ಅಡಿಯಲ್ಲಿ ಪ್ರಕರಣ ದಾಖಲಿಸಲು ಸಚಿವ ಸಂಪುಟ ನಿರ್ಧರಿಸಿತ್ತು. ಇದೀಗ ಅಸ್ಸಾಂ ಸಿಎಂ ಈ ಕ್ರಮ 2026ರ ವಿಧಾನಸಭಾ ಚುನಾವಣೆವರೆಗೂ ಮುಂದುವರಿಯಲಿದೆ ಎಂದು ಪ್ರತಿಪಾದಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಬಾಲ್ಯ ವಿವಾಹದ ವಿರುದ್ಧ ಅಸ್ಸಾಂ ಸರ್ಕಾರ ಸಮರ – ಪತಿ, ಪುತ್ರರ ಬಂಧನ ವಿರೋಧಿಸಿ ಬೀದಿಗಿಳಿದ ಮಹಿಳೆಯರು

    ಬಾಲ್ಯ ವಿವಾಹದ ವಿರುದ್ಧ ಅಸ್ಸಾಂ ಸರ್ಕಾರ ಸಮರ – ಪತಿ, ಪುತ್ರರ ಬಂಧನ ವಿರೋಧಿಸಿ ಬೀದಿಗಿಳಿದ ಮಹಿಳೆಯರು

    ದಿಸ್ಪುರ್: ಬಾಲ್ಯವಿವಾಹ (Child Marriage) ತಡೆಗೆ ಅಸ್ಸಾಂ ಸರ್ಕಾರ ಕಠಿಣ ಕಾರ್ಯಾಚರಣೆ ಕೈಗೊಂಡಿದೆ. ಬಾಲ್ಯ ವಿವಾಹದ ವಿರುದ್ಧ ಸಮರ ಸಾರಿರುವ ಪೊಲೀಸರು (Assam Police) 2 ಸಾವಿರಕ್ಕೂ ಹೆಚ್ಚು ಮಂದಿಯನ್ನು ಬಂಧಿಸಿದ್ದಾರೆ. ಈ ಕ್ರಮ ವಿರೋಧಿಸಿ ರಾಜ್ಯದ ವಿವಿಧೆಡೆ ಹೆಚ್ಚಿನ ಸಂಖ್ಯೆಯ ಮಹಿಳೆಯರು ಬೀದಿಗಿಳಿದು ಪ್ರತಿಭಟನೆ (Protest) ನಡೆಸುತ್ತಿದ್ದಾರೆ.

    ತಮ್ಮ ಪತಿ ಹಾಗೂ ಪುತ್ರರನ್ನು ಬಿಡುಗಡೆಗೊಳಿಸುವಂತೆ ಒತ್ತಾಯಿಸಿದ್ದಾರೆ. ಕುಟುಂಬ ಆರ್ಥಿಕ ನಿರ್ವಹಣೆಗೆ ಬೇರೆ ದಾರಿಯಿಲ್ಲ, ಪುರುಷರನ್ನು ಮಾತ್ರ ಏಕೆ ಬಂಧಿಸಬೇಕು? ನಾವು ನಮ್ಮ ಮಕ್ಕಳು ಬದುಕುವುದಾದರೂ ಹೇಗೆ? ಎಂದು ಮಹಿಳೆಯರು ಪ್ರಶ್ನಿಸುತ್ತಿದ್ದಾರೆ.

    ಇದೇ ವೇಳೆ ಮಹಿಳೆಯೊಬ್ಬರು `ನನ್ನ ಮಗ ಅಪ್ರಾಪ್ತ ಬಾಲಕಿಯೊಂದಿಗೆ ಓಡಿಹೋಗಿದ್ದಾನೆ. ಅವನು ತಪ್ಪು ಮಾಡಿದ್ದಾನೆ ನಿಜ. ಅದಕ್ಕಾಗಿ ನನ್ನ ಗಂಡನನ್ನ ಏಕೆ ಬಂಧಿಸಬೇಕು? ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಅಭಿಮಾನಿಗಳಿಗೆ ಬಿಗ್ ಅಪ್‌ಡೇಟ್ ಕೊಟ್ಟ `ಮೌರ್ಯ’ ನಾಯಕಿ ಮೀರಾ ಜಾಸ್ಮಿನ್

    ಇದೇ ವೇಳೆ ಹೇಸರು ಹೇಳಲಿಚ್ಚಿಸದ ಮಹಿಳೆ, ನನ್ನ ಸೊಸೆ ಮದುವೆಯಾದಾಗ 17 ವರ್ಷ, ಈಗ ಅವಳಿಗೆ 19 ವರ್ಷವಾಗಿದೆ. ಆಕೆ 5 ತಿಂಗಳ ಗರ್ಭಿಣಿಯಾಗಿದ್ದಾಳೆ (Pregnant Women). ಪತಿಯನ್ನ ಜೈಲಿಗೆ ಎಳೆದುಕೊಂಡು ಹೋದ್ರೆ ಅವಳನ್ನ ಯಾರು ನೋಡಿಕೊಳ್ತಾರೆ ಎಂದಿದ್ದಾರೆ.

    ಬಾಲ್ಯ ವಿವಾಹ ತಡೆಗೆ ಕಠಿಣ ಕಾರ್ಯಾಚರಣೆ ಕೈಗೊಂಡಿರುವ ಅಸ್ಸಾಂ ಪೊಲೀಸರು ಈಗಾಗಲೇ 2000ಕ್ಕೂ ಹೆಚ್ಚು ಮಂದಿಯನ್ನ ಬಂಧಿಸಿದ್ದಾರೆ. ಜನವರಿ 23ರಂದು ಸಚಿವ ಸಂಪುಟದಲ್ಲಿ ಅಸ್ಸಾಂ ಸರ್ಕಾರ ಕ್ರಮ ಕೈಗೊಳ್ಳಲು ನಿರ್ಧರಿಸಿದ್ದು, 10 ದಿನಗಳಲ್ಲೇ 4,004 ಕೇಸ್‌ಗಳು ದಾಖಲಾಗಿವೆ. 8 ಸಾವಿರ ಆರೋಪಿ ಪಟ್ಟಿಗಳನ್ನು ಹೊಂದಿರುವ ಪೊಲೀಸರು ಒಬ್ಬೊಬ್ಬರನ್ನೂ ಬಂಧಿಸುತ್ತಿದ್ದಾರೆ. ಈಗಾಗಲೇ 2 ಸಾವಿರಕ್ಕೂ ಅಧಿಕ ಮಂದಿಯನ್ನ ಜೈಲಿಗಟ್ಟಿದ್ದಾರೆ. ಅವರಲ್ಲಿ ಧಾರ್ಮಿಕ ಸಂಸ್ಥೆಗಳಲ್ಲಿ ವಿವಾಹ ಕಾರ್ಯಕ್ರಮ ನಡೆಸಿದ 51 ಪುರೋಹಿತರೂ ಇದ್ದಾರೆ.

    14 ವರ್ಷದೊಳಗಿನ ಹುಡುಗಿಯರನ್ನ ಮದುವೆಯಾದವರ ವಿರುದ್ಧ ಪೋಕ್ಸೋ (POCSO) ಕೇಸ್ ಹಾಗೂ 14 ರಿಂದ 18 ವರ್ಷದೊಳಗಿನ ಹುಡುಗಿಯರನ್ನು ಮದುವೆಯಾಗಿದ್ರೆ ಬಾಲ್ಯ ವಿವಾಹ ನಿಷೇಧ ಕಾಯ್ದೆ-2006 ಅಡಿಯಲ್ಲಿ ಪ್ರಕರಣ ದಾಖಲಿಸಲು ಸಚಿವ ಸಂಪುಟ ನಿರ್ಧರಿಸಿತ್ತು. ಇದನ್ನೂ ಓದಿ: ತುಮಕೂರಿನ HAL ಭಾರತದಲ್ಲೇ ಅತಿದೊಡ್ಡ ಹೆಲಿಕಾಪ್ಟರ್ ಉತ್ಪಾದನಾ ಕೇಂದ್ರ – ಏನಿದರ ವೈಶಿಷ್ಟ್ಯ?

    ಅಸ್ಸಾಂನಲ್ಲಿ ತಾಯಂದಿರು ಹಾಗೂ ಶಿಶುಗಳ ಮರಣ ಪ್ರಮಾಣ ಹೆಚ್ಚಾಗಲು ಬಾಲ್ಯವಿವಾಹವು ಪ್ರಾಥಮಿಕ ಕಾರಣವಾಗಿದೆ. ರಾಜ್ಯದಲ್ಲಿ ನೋಂದಣಿಯಾದ ಶೇ.31ರಷ್ಟು ವಿವಾಹಗಳು ನಿಷೇಧಿತ ವಯೋಮಿತಿಯಲ್ಲಿವೆ ಎಂದು ಗುರುತಿಸಲಾಗಿದೆ. ಇನ್ನೂ 6 ದಿನಗಳ ಕಾಲ ಈ ಕಾರ್ಯಾರಣೆ ಮುಂದುವರಿಯಲಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಪಿಯು ವಿದ್ಯಾರ್ಥಿನಿಗೆ ಬಸ್ ನಿಲ್ದಾಣದಲ್ಲೇ ತಾಳಿ ಕಟ್ಟಿದ 17 ವರ್ಷದ ಹುಡುಗ!

    ಪಿಯು ವಿದ್ಯಾರ್ಥಿನಿಗೆ ಬಸ್ ನಿಲ್ದಾಣದಲ್ಲೇ ತಾಳಿ ಕಟ್ಟಿದ 17 ವರ್ಷದ ಹುಡುಗ!

    ಚೆನ್ನೈ: ಪಾಲಿಟೆಕ್ನಿಕ್‌ನಲ್ಲಿ ಓದುತ್ತಿದ್ದ 17 ವರ್ಷದ ಹುಡುಗನೊಬ್ಬ (Minor Boy) ಪಿಯುಸಿ ಓದುತ್ತಿದ್ದ 16 ವರ್ಷದ ಅಪ್ರಾಪ್ತ ಬಾಲಕಿಗೆ (Minor Girl) ಬಸ್ ನಿಲ್ದಾಣದಲ್ಲಿಯೇ (Bus Stand) ತಾಳಿ ಕಟ್ಟಿರುವ ಘಟನೆ ತಮಿಳುನಾಡಿನ (Tamil Nadu) ಕಡಲೂರು ಜಿಲ್ಲೆಯಲ್ಲಿ ನಡೆದಿದೆ. ಘಟನೆ ಬೆಳಕಿಗೆ ಬರುತ್ತಿದ್ದಂತೆ ಬಾಲ್ಯ ವಿವಾಹ ನಿಷೇಧ ಕಾಯ್ದೆಯಡಿ ಕಡಲೂರು ಪೊಲೀಸರು ಹುಡುಗನನ್ನು ಬಂಧಿಸಿದ್ದಾರೆ.

    ವರದಿಗಳ ಪ್ರಕಾರ ಹುಡುಗ, ಬಸ್ ನಿಲ್ದಾಣದಲ್ಲಿ ಕುಳಿತಿದ್ದಾಗ ಬಾಲಕಿಗೆ ನೋಡುಗರ ಸಮ್ಮುಖದಲ್ಲಿಯೇ ತಾಳಿ ಕಟ್ಟಿದ್ದಾನೆ. ಬಳಿಕ ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಬಳಿಕ ಎಚ್ಚೆತ್ತುಕೊಂಡ ಜಿಲ್ಲಾ ಪೊಲೀಸರು ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ತನಿಖೆ ಆರಂಭಿಸಿದೆ. ಕೊನೆಗೂ ಪೊಲೀಸರು ಮಂಗಳವಾರ ಅಪ್ರಾಪ್ತನನ್ನು ಬಂಧಿಸಿದ್ದಾರೆ.

    STOP CHILD MARRIAGE

    ಬಾಲಕಿಗೆ ಮಕ್ಕಳ ಕಲ್ಯಾಣ ಸಮಿತಿಯ ಕಚೇರಿಯಲ್ಲಿ ಕೌನ್ಸೆಲಿಂಗ್ ನೀಡಲಾಗಿದ್ದು, ಹುಡುಗನನ್ನು ಕಡಲೂರಿನಲ್ಲಿರುವ ಬಾಲಾಪರಾಧಿ ವೀಕ್ಷಣಾಲಯಕ್ಕೆ ಕಳುಹಿಸಲಾಗಿದೆ. ಇದರ ವೀಡಿಯೋವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹರಿಬಿಟ್ಟ ಆರೋಪದ ಮೇಲೆ ಮತ್ತೊಬ್ಬ ವ್ಯಕ್ತಿ ಬಾಲಾಜಿ ಗಣೇಶ್‌ನನ್ನು ಬಂಧಿಸಿರುವುದಾಗಿ ಕಡಲೂರು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಇನ್ಫೋಸಿಸ್ ಅಧ್ಯಕ್ಷ ಸ್ಥಾನಕ್ಕೆ ರವಿಕುಮಾರ್. ಎಸ್ ರಾಜೀನಾಮೆ

    ಅಪ್ರಾಪ್ತರು ಪರಿಶಿಷ್ಟ ಜಾತಿಗೆ ಸೇರಿದ ಕಾರಣ ಬಾಲಾಜಿ ವಿರುದ್ಧ ಬಾಲನ್ಯಾಯ ಕಾಯ್ದೆ, ಮಹಿಳಾ ಕಿರುಕುಳ ತಡೆ ಕಾಯ್ದೆ ಮತ್ತು ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಇದನ್ನೂ ಓದಿ: ನಾಳೆಯಿಂದ ಓಲಾ, ಊಬರ್ ಆಟೋ ಬಂದ್- ಸರ್ಕಾರದಿಂದಲೇ ಆಟೋ ದರ ನಿಗದಿ

    Live Tv
    [brid partner=56869869 player=32851 video=960834 autoplay=true]

  • ಪ್ರತಿದಿನ ಸಾಯೋದಕ್ಕಿಂತ ಒಂದೇ ದಿನ ಸಾಯೋದು ಒಳಿತು – ಮೂವರು ಸಹೋದರಿಯರು ಮಕ್ಕಳೊಂದಿಗೆ ಆತ್ಮಹತ್ಯೆ

    ಜೈಪುರ: ಮೂವರು ಸಹೋದರಿಯರು ಹಾಗೂ ಇಬ್ಬರು ಮಕ್ಕಳ ಶವ ಶನಿವಾರ ರಾಜಸ್ಥಾನದ ಜೈಪುರ ಜಿಲ್ಲೆ, ದುಡು ಪಟ್ಟಣದ ಬಾವಿಯೊಂದರಲ್ಲಿ ಅನುಮಾನಾಸ್ಪದವಾಗಿ ಪತ್ತೆಯಾಗಿದೆ. ಸಹೋದರಿಯರು ತಮ್ಮ ಮಕ್ಕಳೊಂದಿಗೆ ಸಾಮೂಹಿಕವಾಗಿ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣವೇನು ಎಂದು ಜನರಲ್ಲಿ ಪ್ರಶ್ನೆ ಮೂಡಿದೆ.

    ಕಲು ದೇವಿ(27), ಮಮತಾ(23) ಹಾಗೂ ಕಮಲೇಶ್(20) ಸಹೋದರಿಯರು ತಮ್ಮ ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಲು ದೇವಿಯ ಇಬ್ಬರು ಮಕ್ಕಳಲ್ಲಿ ಓರ್ವನಿಗೆ 4 ವರ್ಷ ಹಾಗೂ ಇನ್ನೊಂದು ಕೇವಲ 27 ದಿನದ ಹಸುಗೂಸು. ಅಲ್ಲದೇ ಮಮತಾ ಹಾಗೂ ಕಮಲೇಶ್ ಇಬ್ಬರೂ ತುಂಬು ಗರ್ಭಿಣಿಯರಾಗಿದ್ದರು.

    ಈ ಮೂವರು ಸಹೋದರಿಯರು ಹಾಗೂ ಮಕ್ಕಳು ಬುಧವಾರ ನಾಪತ್ತೆಯಾಗಿದ್ದರು. ಶನಿವಾರದವರೆಗೂ ಪೊಲೀಸರು ಹುಡುಕಾಟ ನಡೆಸುತ್ತಿದ್ದರು. ಇದೀಗ ಅವರ ಶವ ಬಾವಿಯಲ್ಲಿ ಪತ್ತೆಯಾಗಿದೆ. ಘಟನೆಗೂ ಒಂದು ದಿನ ಮುನ್ನ ಮಮತಾ ತನ್ನ ವಾಟ್ಸಪ್ ಸ್ಟೇಟಸ್‌ನಲ್ಲಿ ಪ್ರತಿದಿನ ಸಾಯುವುದಕ್ಕಿಂತ ಒಮ್ಮೆ ಸಾಯುವುದೇ ಉತ್ತಮ ಎಂದು ಬರೆದಿದ್ದಳು. ಇದನ್ನೂ ಓದಿ: ಕೇರಳದಲ್ಲಿ ವ್ಯಾಪಕವಾಗಿ ಹರಡುತ್ತಿದೆ ದೇಶ ವಿರೋಧಿ ಚಿಂತನೆ – ಬಿಜೆಪಿ ಸಂಸದ ಅಲ್ಫೋನ್ಸ್ ಹೇಳಿಕೆ

    ಮೂವರು ಮಹಿಳೆಯರು ಕೌಟುಂಬಿಕ ದೌರ್ಜನ್ಯಕ್ಕೆ ಬಲಿಯಾಗಿದ್ದಾರೆ ಎಂದು ವರದಿಯಾಗಿದೆ. ಸಹೋದರಿಯರು ಒಂದೇ ಕುಟುಂಬದ ಮೂವರನ್ನು 2003ರಲ್ಲಿಯೇ ಬಾಲ್ಯ ವಿವಾಹವಾಗಿದ್ದರು. ಅವರ ಪತಿಯರು ಪ್ರತಿ ದಿನ ಕುಡಿದು ಬಂದು, ಅಮಲಿನಲ್ಲಿ ಪತ್ನಿಯರಿಗೆ ಚಿತ್ರಹಿಂಸೆ ನೀಡುತ್ತಿದ್ದರು. ಇತ್ತೀಚೆಗೆ ಕಲು ದೇವಿಗೆ ತನ್ನ ಅತ್ತಿಗೆ ಥಳಿಸಿದ್ದು, 15 ದಿನಗಳ ಕಾಲ ಆಸ್ಪತ್ರೆಯಲ್ಲಿದ್ದರು. ಆಕೆಯ ಕಣ್ಣಿಗೆ ಗಾಯಗಳಾಗಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ. ಕಿರಿಯ ಸಹೋದರಿ ಕಮಲೇಶ್‌ಗೂ ಇತ್ತೀಚೆಗೆ ತನ್ನ ಫೋನ್‌ನಲ್ಲಿ ಯಾರೊಂದಿಗೋ ಮಾತನಾಡಿದ ಬಳಿಕ ಥಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಮೂವರಿಗೂ ವಿದ್ಯಾಭ್ಯಾಸದಲ್ಲಿ ಆಸಕ್ತಿ ಇದ್ದು, ಓದಿ, ಸಂಪಾದಿಸಬೇಕು ಅಂದುಕೊಂಡಿದ್ದರು. ಮಮತಾ ಪೊಲೀಸ್ ಕಾನ್ಸ್ಟೇಬಲ್ ಪರೀಕ್ಷೆಯಲ್ಲಿ ಆಯ್ಕೆಯಾಗಿದ್ದು, ಕಲು ಅಂತಿಮ ವರ್ಷದ ಬಿಎ ಓದುತ್ತಿದ್ದಳು ಹಾಗೂ ಕಮಲೇಶ್ ವಿಶ್ವವಿದ್ಯಾಲಯಕ್ಕೆ ದಾಖಲಾಗಿದ್ದಳು. ಆದರೆ ಕೇವಲ 5-6ನೇ ತರಗತಿ ಓದಿದ್ದ ಪತಿಯರಿಗೆ ಮಹಿಳೆಯರು ವಿದ್ಯಾಭ್ಯಾಸ ಮಾಡುವುದು ಇಷ್ಟವಿರಲಿಲ್ಲ. ಇದನ್ನೂ ಓದಿ: ಎರಡು ವರ್ಷಗಳ ನಂತರ ಭಾರತ- ಬಾಂಗ್ಲಾ ರೈಲು ಸಂಚಾರ ಪುನಾರಂಭ

    ಸಹೋದರಿಯರ ಶವಗಳು ತಮ್ಮ ಮನೆಯಿಂದ 2 ಕಿಮೀ ದೂರದ ಬಾವಿಯಲ್ಲಿ ಪತ್ತೆಯಾಗಿದ್ದು, ಅದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮಹಿಳೆಯರ ಪತಿಯರಾದ ನರ್ಸಿ, ಗೊರಿಯೊ ಹಾಗೂ ಮುಖೇಶ್‌ನನ್ನು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ. ವರದಕ್ಷಿಣೆ ವಿಚಾರದ ಬಗೆಗೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.