Tag: ಬಾಳಾಸಾಹೇಬ್

  • ಬಾಳಾಸಾಹೇಬ್‌ ಮೇಲಿನ ಗೌರವಕ್ಕೆ ಆದಿತ್ಯ ಠಾಕ್ರೆ ವಿರುದ್ಧ ಕೈಮಕೈಗೊಂಡಿಲ್ಲ: ಶಿಂಧೆ ಬಣ

    ಬಾಳಾಸಾಹೇಬ್‌ ಮೇಲಿನ ಗೌರವಕ್ಕೆ ಆದಿತ್ಯ ಠಾಕ್ರೆ ವಿರುದ್ಧ ಕೈಮಕೈಗೊಂಡಿಲ್ಲ: ಶಿಂಧೆ ಬಣ

    ಮುಂಬೈ: ಶಿವಸೇನಾ ಸ್ಥಾಪಕ ಬಾಳಾಸಾಹೇಬ್‌ ಅವರ ಮೇಲಿನ ಗೌರವದಿಂದಾಗಿ ಆದಿತ್ಯ ಠಾಕ್ರೆ ಅವರ ವಿರುದ್ಧ ಯಾವುದೇ ಕ್ರಮಕೈಗೊಂಡಿಲ್ಲ ಎಂದು ಶಿವಸೇನಾದ ಏಕನಾಥ್‌ ಶಿಂಧೆ ಬಣ ತಿಳಿಸಿದೆ.

    ಮಹಾರಾಷ್ಟ್ರ ವಿಧಾನಸಭೆಯಲ್ಲಿ ಬಹುಮತ ಪರೀಕ್ಷೆಯಲ್ಲಿ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನಾ ಬಣ ಗೆಲುವು ಸಾಧಿಸಿದ್ದು, ಸರ್ಕಾರವನ್ನು ಬೆಂಬಲಿಸಲು ವಿಪ್ ಧಿಕ್ಕರಿಸಿದ ಉದ್ಧವ್ ಠಾಕ್ರೆ ಬಣದ 16 ಶಾಸಕರನ್ನು ಅಮಾನತುಗೊಳಿಸುವಂತೆ ನೂತನವಾಗಿ ಆಯ್ಕೆಯಾದ ಸ್ಪೀಕರ್ ರಾಹುಲ್ ನಾರ್ವೇಕರ್ ಅವರಿಗೆ ಮನವಿ ಸಲ್ಲಿಸಿದೆ. ಇದನ್ನೂ ಓದಿ: ಮಹಾ ಹೈಡ್ರಾಮಾ ಅಂತ್ಯ – ವಿಶ್ವಾಸ ಪರೀಕ್ಷೆ ಗೆದ್ದ ಏಕನಾಥ್‌ ಶಿಂಧೆ

    ಆದಿತ್ಯ ಠಾಕ್ರೆ ಹೊರತುಪಡಿಸಿ ನಮ್ಮ ವಿಪ್ ಧಿಕ್ಕರಿಸಿದಸಿದವರನ್ನು ಅನರ್ಹಗೊಳಿಸುವಂತೆ ನಾವು ನೋಟಿಸ್ ನೀಡಿದ್ದೇವೆ. ಬಾಳಾಸಾಹೇಬ್ ಠಾಕ್ರೆ ಅವರ ಮೇಲಿನ ಗೌರವದ ಕಾರಣದಿಂದ ನಾವು ಆದಿತ್ಯ ಠಾಕ್ರೆ ಹೆಸರನ್ನು ನೀಡಿಲ್ಲ ಎಂದು ಶಿಂಧೆ ಬಣದ ಶಾಸಕ ಭರತ್‌ ಗೊಗವಾಲೆ ತಿಳಿಸಿದ್ದಾರೆ.

    ಪಕ್ಷದ ಮೂರನೇ ಎರಡರಷ್ಟು ಶಾಸಕರ ಬೆಂಬಲದ ಆಧಾರದ ಮೇಲೆ ಶಿಂಧೆ ಬಣ ನಮ್ಮದು ನಿಜವಾದ ಶಿವಸೇನಾ ಎಂದು ಹೇಳಿಕೊಂಡಿದೆ. ಶಿವಸೇನಾದ 40 ಶಾಸಕರು ಬಂಡಾಯವೆದ್ದಿದ್ದ ಶಿಂಧೆ ಬಣವನ್ನು ಸೇರಿದ್ದಾರೆ. ಸೇನಾ ಬಂಡಾಯ ಶಾಸಕರೂ ಸೇರಿ ಶಿಂಧೆ ಬಣವನ್ನು ಒಟ್ಟು 55 ಶಾಸಕರು ಸೇರಿದ್ದರು. ಇದನ್ನೂ ಓದಿ: ಪಾಪುವಿನಂತೆ ರಾಹುಲ್ ಗಾಂಧಿಯನ್ನು ಮುದ್ದು ಮಾಡಿದ ಅಜ್ಜಿ

    ನಮ್ಮ ನಿಲುವು ಬಾಳಾಸಾಹೇಬ್ ಠಾಕ್ರೆಯವರ ಪರಂಪರೆಗೆ ಗೌರವ ಸಲ್ಲಿಸಿದೆ. ಉದ್ಧವ್ ಠಾಕ್ರೆ ಅವರು ಕಾಂಗ್ರೆಸ್ ಮತ್ತು ಶರದ್ ಪವಾರ್ ಅವರ ಎನ್‌ಸಿಪಿಯೊಂದಿಗೆ ಮೈತ್ರಿ ಮಾಡಿಕೊಂಡು ಪಕ್ಷವನ್ನು ದುರ್ಬಲಗೊಳಿಸಿದ್ದಾರೆ ಎಂದು ಶಿಂಧೆ ಬಣದವರು ವಾದಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಬಂಡಾಯ ಶಾಸಕರು ಅವರಪ್ಪನ ಹೆಸರು ಬಳಸಿ ಚುನಾವಣೆ ಎದುರಿಸಲಿ – ಉದ್ಧವ್ ಠಾಕ್ರೆ ಕಿಡಿ

    ಬಂಡಾಯ ಶಾಸಕರು ಅವರಪ್ಪನ ಹೆಸರು ಬಳಸಿ ಚುನಾವಣೆ ಎದುರಿಸಲಿ – ಉದ್ಧವ್ ಠಾಕ್ರೆ ಕಿಡಿ

    ಮುಂಬೈ: ಮಹಾರಾಷ್ಟ್ರ ಸರ್ಕಾರದ ವಿರುದ್ಧ ಬಂಡಾಯವೆದ್ದಿರುವ ಶಿವಸೇನೆಯ ಯಾವುದೇ ಶಾಸಕನಿಗೂ ಸಂಸ್ಥಾಪಕ ಬಾಳಾಸಾಹೇಬ್ ಠಾಕ್ರೆ ಅವರ ಹೆಸರನ್ನು ಬಳಸಲು ಬಿಡುವುದಿಲ್ಲ. ಬಂಡಾಯ ಶಾಸಕರು ಅವರ ತಂದೆಯ ಹೆಸರಿನಲ್ಲೇ ಚುನಾವಣೆ ಎದುರಿಸಲಿ ಎಂದು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಕಿಡಿಕಾರಿದ್ದಾರೆ.

    ಮಹಾರಾಷ್ಟ್ರದ ರಾಜಕೀಯದಲ್ಲಿ ಹಲವು ತಿರುವು ಪಡೆದುಕೊಳ್ಳುತ್ತಿವೆ. ಈ ನಡುವೆ ಏಕನಾಥ್ ಶಿಂಧೆ ಬಣದಲ್ಲಿರುವ ಬಂಡಾಯ ಶಾಸಕರು ತಮ್ಮ ಗುಂಪಿಗೆ `ಶಿವಸೇನಾ ಬಾಳಾಸಾಹೇಬ್’ ಎಂದು ಹೆಸರಿಸುತ್ತಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಫೋಟೋ ಕಳುಹಿಸುವಂತೆ ಪ್ರಿಯಕರನ ಕಾಟ – ಬೇಸತ್ತು ವಿದ್ಯಾರ್ಥಿನಿ ಆತ್ಮಹತ್ಯೆ

    ಇದಕ್ಕೆ ಸಂಬಂಧಿಸಿದಂತೆ ಇಂದಿನ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಠಾಕ್ರೆ, ಚುನಾವಣೆಯಲ್ಲಿ ಗೆಲ್ಲಲು ನನ್ನ ತಂದೆಯ ಹೆಸರನ್ನು ಹೇಳಬೇಡಿ. ನಿಮ್ಮ ತಂದೆಯ ಹೆಸರನ್ನು ಬಳಸಿ ಚುನಾವಣೆ ಎದುರಿಸಿ ಎಂದು ಸವಾಲು ಹಾಕಿದ್ದಾರೆ.

    ಚುನಾವಣೆಯಲ್ಲಿ ಮತ ಪಡೆಯಲು ಇಚ್ಛಿಸಿದರೆ ಈ ಶಾಸಕರು ಅವರವರ ತಂದೆಯ ಹೆಸರನ್ನು ಹೇಳಿಕೊಂಡು ಹೋಗಲಿ. ಶಿವಸೇನಾ ಸಂಸ್ಥಾಪಕ ಬಾಳಾಸಾಹೇಬ್ ಠಾಕ್ರೆ ಹೆಸರನ್ನು ಬಳಸಬಾರದು. ತಮ್ಮ ಸ್ವಾರ್ಥ ರಾಜಕಾರಣಕ್ಕಾಗಿ ಬಾಳಾಸಾಹೇಬ್ ಠಾಕ್ರೆ ಹೆಸರು ಬಳಸಿಕೊಂಡವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುತ್ತೇವೆ. ಈ ಸಂಬಂಧ ಶಿವಸೇನಾ ಪಕ್ಷವು ಚುನಾವಣಾ ಆಯೋಗಕ್ಕೆ ಪತ್ರ ಬರೆಯಲಿದೆ ಎಂದು ಎಚ್ಚರಿಸಿದ್ದಾರೆ. ಇದನ್ನೂ ಓದಿ: ಆನ್‌ಲೈನ್ ಕ್ಲಾಸ್‌ನಲ್ಲಿ ಹೋಂ ವರ್ಕ್ ಬದಲಿಗೆ ಅಶ್ಲೀಲ ವೀಡಿಯೋ ಕಳಿಸಿ ತಗಲಾಕ್ಕೊಂಡ 6ನೇ ಕ್ಲಾಸ್ ವಿದ್ಯಾರ್ಥಿ

    ಇಂದು ನಡೆದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಬಂಡಾಯ ಶಾಸಕರ ವಿರುದ್ಧ ಕ್ರಮ, ಉದ್ಧವ್ ಠಾಕ್ರೆಗೆ ಅಧಿಕಾರ ಸೇರಿದಂತೆ ಕೆಲವು ಪ್ರಮುಖ ನಿರ್ಣಯಗಳನ್ನು ಅವಿರೋಧವಾಗಿ ಕೈಗೊಳ್ಳಲಾಗಿದೆ. ಬಾಳಾಸಾಹೇಬ್ ಠಾಕ್ರೆ ಅವರ ಹಿಂದುತ್ವ ಸಿದ್ಧಾಂತ ಅನುಸರಣೆ, ಮಹಾರಾಷ್ಟ್ರದ ಏಕತೆಯಲ್ಲಿ ಯಾವುದೇ ರಾಜಿ ಮಾಡಿಕೊಳ್ಳದಿರುವುದು ಸೇರಿದಂತೆ 6 ನಿರ್ಣಯಗಳನ್ನು ಅಂಗೀಕರಿಸಲಾಗಿದೆ.

    Live Tv