Tag: ಬಾಳೆ ತೋಟ

  • ವಿಜಯನಗರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ – ನೆಲಕ್ಕೆ ಉರುಳಿತು ಹತ್ತಾರು ಎಕರೆ ಬಾಳೆ ಬೆಳೆ

    ವಿಜಯನಗರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ – ನೆಲಕ್ಕೆ ಉರುಳಿತು ಹತ್ತಾರು ಎಕರೆ ಬಾಳೆ ಬೆಳೆ

    ಬಳ್ಳಾರಿ: ವಿಜಯನಗರ (Vijanagara) ಜಿಲ್ಲೆಯಾದ್ಯಂತ ಬಿರುಗಾಳಿ (Rain) ಸಹಿತ ಸುರಿದ ಭಾರೀ ಮಳೆಗೆ ಹತ್ತಾರು ಎಕರೆಯಲ್ಲಿ ಬೆಳೆದಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಬಾಳೆ ಬೆಳೆ ನೆಲಕಚ್ಚಿದೆ.

    ಹೊಸಪೇಟೆಯ ಹೊಸೂರು ಮಾಗಾಣಿಯಲ್ಲಿ ಒಂದೇ ತಿಂಗಳಿನಲ್ಲಿ ಕೈಗೆ ಬರುತ್ತಿದ್ದ ಬಾಳೆಗೊನೆಗಳು (Banana Tree) ನೆಲಕ್ಕುರುಳಿವೆ. ಒಂದು ಕೆಜಿಗೆ 18-20 ರೂ. ಬಾಳೆ ಮಾರಾಟ ಮಾಡುತ್ತಿದ್ದ ರೈತರೀಗಿಗ ದೊಡ್ಡ ಪ್ರಮಾಣದಲ್ಲಿ ನಷ್ಟವಾಗಿದೆ.  ಇದನ್ನೂ ಓದಿ: ಒಂದೇ ಮಳೆಗೆ ಬೆಂಗಳೂರಿನ ಹಲವೆಡೆ ಅವಾಂತರ – ಎಲ್ಲೆಲ್ಲಿ ಎಷ್ಟು ಮಳೆ?

    ಕಳೆದ ಬಾರಿಯೂ ಇದೇ ರೀತಿ ಬಾಳೆ ತೋಟ ನೆಲಕ್ಕೆ ಉರುಳಿ ಬಿದ್ದಿತ್ತು. ನೆಲಕ್ಕೆ ಉರುಳಿದ ಬಾಳೆ ಗೊನೆಗಳು ಸಂಪೂರ್ಣ ಕಟಾವಿಗೆ ಬಂದಿದ್ದವು. ಪ್ರತಿಬಾರಿ ಹೀಗೆ ಆದರೆ ನಮ್ಮ ಜೀವನ ಹೇಗೆ ಎಂದು ರೈತರು ಅಳಲು ತೋಡಿಕೊಂಡಿದ್ದಾರೆ.

    ಕಳೆದ ಬಾರಿಯೂ ಬಾಳೆ ಬೆಳೆ ಬಿದ್ದಾಗ ಅಧಿಕಾರಿಗಳು ಶಾಸಕರು ಬಂದರು. ಆದರೆ ನಮಗೆ ಒಂದು ರೂಪಾಯಿ ಪರಿಹಾರ ನೀಡಲಿಲ್ಲ. ಈ ಬಾರಿಯೂ ಪರಿಹಾರ ಸಿಗುತ್ತೋ ಇಲ್ವೋ ಗೊತ್ತಿಲ್ಲ ಎಂದು ಬಾಳೆ ಬೆಳೆ ಕಳೆದುಕೊಂಡ ರೈತ ಮಾರುತಿ ನೋವು ತೋಡಿಕೊಂದ್ದಾರೆ. ಇದನ್ನೂ ಓದಿ:ಬಂಗಾಳಕೊಲ್ಲಿಯಲ್ಲಿ ಚುರುಕುಗೊಂಡ ಚಂಡಮಾರುತ – ಒಂದು ವಾರ ರಾಜ್ಯದಲ್ಲಿ ಗಾಳಿ ಸಹಿತ ಮಳೆ

     

  • ಬಾಳೆಹಣ್ಣಿನ ಗದ್ದೆಗೆ ಬೆಂಕಿ ಹಚ್ಚಿದ ಅನ್ನದಾತ

    ಬಾಳೆಹಣ್ಣಿನ ಗದ್ದೆಗೆ ಬೆಂಕಿ ಹಚ್ಚಿದ ಅನ್ನದಾತ

    ವಿಜಯಪುರ: ಸೂಕ್ತ ಬೆಲೆ ಸಿಗದ ಕಾರಣ ಅನ್ನದಾತ ತನ್ನ ಬಾಳೆಹಣ್ಣಿನ ಗದ್ದೆಗೆ ತಾನೇ ಬೆಂಕಿ ಹಚ್ಚಿರುವ ಘಟನೆ ಜಿಲ್ಲೆಯ ದೇವರಹಿಪ್ಪರಗಿ ಪಟ್ಟಣದಲ್ಲಿ ನಡೆದಿದೆ.

    ರೈತ ಉಸ್ಮಾನಸಾಬ್ ಬಾಳೆ ಹಣ್ಣಿಗೆ ಸೂಕ್ತ ಬೆಲೆ ಸಿಗದ ಕಾರಣ ಹಾಗೂ ಲಾಕ್‍ಡೌನ್ ಪರಿಣಾಮದಿಂದ ಬಾಳೆ ಹಣ್ಣು ಮಾರಾಟವಾಗದ್ದಕ್ಕೆ ಮನನೊಂದು ಈ ರೀತಿ ಮಾಡಿದ್ದಾರೆ. ತಮ್ಮ ತೋಟದಲ್ಲಿನ 1,200 ಬಾಳೆ ಗಿಡಗಳಿಗೆ ಬೆಂಕಿ ಹಚ್ಚಿ ಸರ್ಕಾರಕ್ಕೆ ಹಿಡಿಶಾಪ ಹಾಕಿದ್ದಾರೆ. ಕಷ್ಟ ಪಟ್ಟು ಮೂರು ವರ್ಷಗಳಿಂದ ಮಕ್ಕಳಂತೆ ಜೋಪಾನ ಮಾಡಿದ್ದ ಬೆಳೆದ ಬಾಳೆಗೆ ಬೆಲೆಯಿಲ್ಲದ್ದಕ್ಕೆ ದಾನ ಮಾಡಿದ್ದಾರೆ. ಉಳಿದ ಬಾಳೆಗಿಡಗಳನ್ನೆಲ್ಲ ಸದ್ಯ ಸುಟ್ಟು ಹಾಕಿದ್ದಾರೆ. ಇದನ್ನೂ ಓದಿ: ಕೊರೊನಾಗೆ ಹೆದರಿ ಊರು ಬಿಟ್ಟು ಗುಡಿಸಲಲ್ಲಿ ಕುಟುಂಬ ಜೀವನ

    ಸಂಕಷ್ಟದ ಮೇಲೆ ಸಂಕಷ್ಟ ನೀಡುತ್ತಿರುವ ಕೊರೊನಾ ಮಹಾಮಾರಿಯಿಂದ ರೈತರ ಗೋಳು ಇಮ್ಮಡಿಯಾದಂತಾಗಿದೆ. ರೈತರು ಬಳೆ ಹಾನಿಗೊಳಿಸುತ್ತಿರುವ ನೂರಾರು ಘಟನೆಗಳು ನಡೆಯುತ್ತಿದ್ದು, ರೈತರ ಗೋಳು ಕೇಳೋರು ಯಾರು ಎನ್ನುವಂತಾಗಿದೆ.

  • ಒಂದು ಗಿಡ ಬಿಟ್ಟು ಇಡೀ ಬಾಳೆ ತೋಟ ನಾಶಗೊಳಿಸಿದ ಆನೆಗಳು

    ಒಂದು ಗಿಡ ಬಿಟ್ಟು ಇಡೀ ಬಾಳೆ ತೋಟ ನಾಶಗೊಳಿಸಿದ ಆನೆಗಳು

    – ಅಚ್ಚರಿಯ ವೀಡಿಯೋ ವೈರಲ್

    ಚೆನ್ನೈ: ಸಾಮಾನ್ಯವಾಗಿ ಆನೆಗಳನ್ನು ದೈತ್ಯ ಜೀವಿಗಳು ಎಂದು ಕರೆಯಲಾಗುತ್ತದೆ. ಏಕೆಂದರೆ ಅವುಗಳು ಮರಗಳನ್ನು ಉರುಳಿಸಬಹುದು ಮತ್ತು ಒಂದೇ ಬಾರಿಗೆ ಎಲ್ಲವನ್ನು ವಿನಾಶ ಮಾಡುತ್ತದೆ. ಇತರ ಪ್ರಾಣಿಗಳಿಗೆ ಹೋಲಿಸಿದರೆ ಆನೆಗಳಿಗೆ ಹೆಚ್ಚು ಬುದ್ಧಿ, ಸಮಯಪ್ರಜ್ಞೆ, ಹೃದಯವಂತಿಕೆ ಹೊಂದಿದೆ ಎಂದೇ ಹೇಳಬಹುದು.

    ಸದ್ಯ ಇದಕ್ಕೆ ಸಾಕ್ಷಿ ಎಂಬಂತೆ ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋವೊಂದು ವೈರಲ್ ಆಗುತ್ತಿದ್ದು, ತಮಿಳುನಾಡಿನ ಹಳ್ಳಿಯೊಂದರಲ್ಲಿ ಕಾಡು ಆನೆಗಳ ಗುಂಪು ಬಾಳೆ ತೋಟದ ಮೇಲೆ ದಾಳಿ ನಡೆಸಿ 300ಕ್ಕೂ ಅಧಿಕ ಬಾಳೆ ಗಿಡಗಳನ್ನು ನೆಲಕ್ಕುರುಳಿಸಿವೆ. ಇಡೀ ತೋಟವನ್ನು ಸಂಪೂರ್ಣ ನಾಶ ಪಡಿಸಿದ ಆನೆಗಳು ಅಲ್ಲಿಯೇ ಇದ್ದ ಪುಟ್ಟ ಪುಟ್ಟ ಪಕ್ಷಿಗಳ ಗೂಡಿನ ಮರವನ್ನು ಮಾತ್ರ ಹಾಗೆಯೇ ಬಿಟ್ಟು ಹೋಗಿದೆ. ಇದನ್ನು ನೋಡಿ ಗ್ರಾಮಸ್ಥರು ಬೆರಗಾಗಿದ್ದಾರೆ.

    ಈ ವೀಡಿಯೋವನ್ನು ಅರಣ್ಯ ಸೇವೆ(ಐಎಫ್‍ಎಸ್) ಅಧಿಕಾರಿ ಸುಸಂತಾ ನಂದಾರವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದು, ವೀಡಿಯೋದಲ್ಲಿ ಕಾಡು ಆನೆಗಳು ಬಾಳೆ ತೋಟವನ್ನು ನಾಶಪಡಿಸಿದ್ದು, ಪುಟ್ಟ ಪುಟ್ಟ ಪಕ್ಷಿಗಳ ಮರಿಗಳಿದ್ದ, ಹಕ್ಕಿಯ ಗೂಡಿಗೆ ಮಾತ್ರ ಯಾವುದೇ ಹಾನಿಗೊಳಿಸದಿರುವುದನ್ನು ಕಾಣಬಹುದಾಗಿದೆ.

    ಸದ್ಯ ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ಅನೇಕ ಮಂದಿ ವೀಕ್ಷಿಸಿದ್ದು, ಲೈಕ್ಸ್ ಹಾಗೂ ಕಾಮೆಂಟ್‍ಗಳ ಸುರಿ ಮಳೆಯೇ ಹರಿದುಬರುತ್ತಿದೆ.

  • ಕಿಡಿಗೇಡಿಗಳಿಂದ ಬೆಂಕಿ- 5 ಎಕರೆ ಬಾಳೆ ತೋಟ ಸುಟ್ಟು ಭಸ್ಮ

    ಕಿಡಿಗೇಡಿಗಳಿಂದ ಬೆಂಕಿ- 5 ಎಕರೆ ಬಾಳೆ ತೋಟ ಸುಟ್ಟು ಭಸ್ಮ

    ಕೋಲಾರ: ಆಕಸ್ಮಿಕವಾಗಿ ಬೆಂಕಿ ಬಿದ್ದ ಪರಿಣಾಮ ಸುಮಾರು 5 ಎಕರೆ ಪ್ರದೇಶದಲ್ಲಿ ಬೆಳೆದಿದ್ದ, ಫಸಲಿಗೆ ಬಂದಿದ್ದ ಬಾಳೆ ತೋಟ ಸಂಪೂರ್ಣವಾಗಿ ಭಸ್ಮವಾಗಿರುವ ಘಟನೆ ಕೋಲಾರದಲ್ಲಿ ನಡೆದಿದೆ.

    ಕೋಲಾರ ತಾಲೂಕಿನ ಕಾಕಿನತ್ತ ಗ್ರಾಮದ ರೈತ ಕೃಷ್ಣಪ್ಪ ಅವರಿಗೆ ಸೇರಿದ 5 ಎಕರೆ ತೋಟದಲ್ಲಿ ಬೆಳೆದಿದ್ದ ಬಾಳೆ ಗಿಡಗಳು ಸಂಪೂರ್ಣ ಸುಟ್ಟು ಕರಕಲಾಗಿದ್ದು, ಕಳೆದ ರಾತ್ರಿ ಕಿಡಿಗೇಡಿಗಳು ಪಕ್ಕದ ಜಮೀನಿನಲ್ಲಿರುವ ಹುಲ್ಲಿಗೆ ಬೆಂಕಿ ಹೊತ್ತಿಸಿರುವ ಅನುಮಾನವಿದೆ. ಇದರಿಂದ ಬಾಳೆ ತೋಟಕ್ಕೂ ಬೆಂಕಿ ಆವರಿಸಿದ ಪರಿಣಾಮ 5 ಎಕರೆಯಲ್ಲಿ ಬೆಳೆದಿದ್ದ ಬಾಳೆ ತೋಟ ಬೆಂಕಿಗಾಹುತಿಯಾಗಿದೆ ಎಂದು ಶಂಕಿಸಲಾಗಿದೆ.

    ಸಾಲ ಮಾಡಿ ಬೆಳಿದಿದ್ದ ಬಾಳೆಯನ್ನು ಇನ್ನೇನು ಕಿತ್ತು ಮಾರುಕಟ್ಟೆಗೆ ಮಾರಬೇಕಿತ್ತು, ಈ ಮಧ್ಯೆ ಫಸಲು ಬಂದು ತಮ್ಮ ಕಷ್ಟಗಳೆಲ್ಲಾ ನಿವಾರಣೆಯಾಗುತ್ತೆ ಎಂದು ರೈತ ಕನಸು ಕಂಡಿದ್ದ. ಆದರೆ ಬೆಂಕಿ ಹೊತ್ತಿಕೊಂಡಿದ್ದರಿಂದ ಇದೀಗ ಕಂಗಾಲಾಗಿದ್ದಾರೆ. ತೋಟ ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಬಾಳೆ ತೋಟ ಮಾತ್ರವಲ್ಲದೆ ಬಾಳೆ ತೋಟದಲ್ಲಿ ಅಳವಡಿಸಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಡ್ರಿಪ್ ಹಾಗೂ ಸ್ಪಿಂಕ್ಲರ್ ಗಳು ಸಹ ಬೆಂಕಿಗಾಹುತಿಯಾಗಿವೆ.

    ವಿಷಯ ತಿಳಿದ ಸ್ಥಳೀಯರು ಹಾಗೂ ಕೃಷ್ಣಪ್ಪ ಬೆಂಕಿ ನಂದಿಸುವ ಕಾರ್ಯ ಮಾಡಿದರು. ಆದರೂ ನಿಯಂತ್ರಣಕ್ಕೆ ಬಂದಿಲ್ಲ. ಬೆಂಕಿಯ ಕೆನ್ನಾಲಿಗೆಯಿಂದ ಸುಮಾರು 90 ಟನ್ ಇಳುವರಿ ನಷ್ಟವಾಗಿದೆ. ಸ್ಥಳಕ್ಕೆ ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಮಂಜುನಾಥ್ ಸೇರಿದಂತೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸರ್ಕಾರದ ಮಾರ್ಗಸೂಚಿಯಂತೆ ಪರಿಹಾರ ನೀಡುವ ಭರವಸೆ ನೀಡಿದ್ದಾರೆ.

  • ಅಯ್ಯಪ್ಪ ಮಾಲಾಧಾರಿಯಂತೆ ಬಂದು ಬಾಳೆ ತೋಟ ನಾಶ ಮಾಡಿದ್ರು

    ಅಯ್ಯಪ್ಪ ಮಾಲಾಧಾರಿಯಂತೆ ಬಂದು ಬಾಳೆ ತೋಟ ನಾಶ ಮಾಡಿದ್ರು

    ಧಾರವಾಡ: ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳ ವೇಷದಲ್ಲಿ ಬಂದು ಹಾಡಹಗಲೇ ಬಾಳೆ ತೋಟವನ್ನು ಗಿಡಗಳ ಸಮೇತ ಲೂಟಿ ಮಾಡಿಕೊಂಡು ಹೋಗಿರುವ ಘಟನೆ ಧಾರವಾಡದಲ್ಲಿ ನಡೆದಿದೆ.

    ಧಾರವಾಡ ತಾಲೂಕಿನ ಸೋಮಾಪುರ ಗ್ರಾಮದ ರಾಯಪ್ಪ ಸುಳ್ಳದ ಎಂಬವರ ತೋಟದಲ್ಲಿ ಈ ಕಳ್ಳತನ ನಡೆದಿದೆ. ಸುಮಾರು 1 ಲಕ್ಷ ಮೌಲ್ಯದಷ್ಟು 200 ಬಾಳೆಗೊಣೆ ಹಾಗೂ ಅಷ್ಟೇ ಬಾಳೆ ಗಿಡಗಳನ್ನು ಸಹ ಕಡಿದುಕೊಂಡು ಹೋಗಿದ್ದಾರೆ.

    ತೋಟದ ಮಾಲೀಕ ರಾಯಪ್ಪ ಇಲ್ಲದ ಸಂದರ್ಭದಲ್ಲಿ ಕಳ್ಳರು ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳಂತೆ ಬಂದಿದ್ದರು. ಆದರೆ ಅಕ್ಕಪಕ್ಕದ ಜಮೀನನಲ್ಲಿ ಇದ್ದವರು ರಾಯಪ್ಪ ಅವರೇ ಬಾಳೆ ತೆಗೆದುಕೊಳ್ಳಲು ಹೇಳಿರಬಹುದು ಎಂದು ತಿಳಿದುಕೊಂಡು ಸುಮ್ಮನಾಗಿದ್ದಾರೆ.

    ಈ ಕಳ್ಳತನ ನಡೆದಿದ್ದರೂ ಸುಮಾರು ಒಂದೂವರೆ ಗಂಟೆಗಳ ಕಾಲ ಯಾರಿಗೂ ಸಂಶಯ ಬಂದಿಲ್ಲ. ಆದ್ರೆ ಇಂದು ಬೆಳಗ್ಗೆ ಮಾಲೀಕ ರಾಯಪ್ಪ ತೋಟಕ್ಕೆ ಬಂದು ನೋಡಿದಾಗಲೇ ಹಾಡಹಗಲೇ ತಮ್ಮ ತೋಟವನ್ನು ದೋಚಿದ್ದು ತಿಳಿದು ಒಂದು ಕ್ಷಣ ದಂಗಾದ್ರು.

    ಅಯ್ಯಪ್ಪ ಸ್ವಾಮಿ ಪೂಜೆ ಎಲ್ಲೆ ನಡೆದರೂ ರಾಯಪ್ಪ ಅವರು ದೇಣಿಗೆ ರೂಪದಲ್ಲಿ ಬಾಳೆ ಹಣ್ಣು ಕೊಡುತ್ತಾ ಬಂದಿದ್ದಾರೆ. ಆದರೆ ಇಂದು ತನ್ನ ತೋಟವನ್ನು ಅಯ್ಯಪ್ಪಸ್ವಾಮಿ ಮಾಲಾಧಾರಿಗಳ ವೇಷದಲ್ಲೇ ಬಂದು ಲೂಟಿ ಮಾಡಿದ್ದರಿಂದ ಅವರಿಗೆ ಸಾಕಷ್ಟು ನೋವುಂಟಾಗಿದೆ.

    ಈ ಘಟನೆ ಧಾರವಾಡ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

  • ಮಂಡ್ಯ: ಮಳೆ-ಗಾಳಿ ರಭಸಕ್ಕೆ ನೆಲಕಚ್ಚಿದ ಬಾಳೆ

    ಮಂಡ್ಯ: ಮಳೆ-ಗಾಳಿ ರಭಸಕ್ಕೆ ನೆಲಕಚ್ಚಿದ ಬಾಳೆ

    ಮಂಡ್ಯ: ಇಷ್ಟು ದಿನ ಭೀಕರ ಬರಗಾಲದಿಂದ ತತ್ತರಿಸಿದ್ದ ಮಂಡ್ಯ ರೈತರು, ಇದೀಗ ಮಳೆಗಾಳಿಯ ರಭಸಕ್ಕೆ ಬೆಳೆ ನಾಶವಾಗಿ ಕಂಗಾಲಾಗಿದ್ದಾರೆ.

    ಸೋಮವಾರ ರಾತ್ರಿ ಸುರಿದ ಬಿರುಗಾಳಿ ಸಹಿತ ಮಳೆಗೆ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಹಡೇನಹಳ್ಳಿ ಗ್ರಾಮದಲ್ಲಿ ಬಾಳೆ ತೋಟ ಬಹುತೇಕ ನಾಶವಾಗಿದೆ. ಗ್ರಾಮದ ಮಾಯಣ್ಣಗೌಡ ಎಂಬುವರಿಗೆ ಸೇರಿದ 8.5 ಎಕರೆ ತೋಟದಲ್ಲಿ ಬಾಳೆ ಬೆಳೆದಿದ್ದರು.

    ಲಕ್ಷಾಂತರ ರೂಪಾಯಿ ಸಾಲ ಮಾಡಿ ಬೆಳೆದಿದ್ದ ಬಾಳೆ ನೆಲ ಕಚ್ಚಿರೋದ್ರಿಂದ ರೈತ ಮಾಯಣ್ಣಗೌಡರಿಗೆ ದಿಕ್ಕು ತೋಚದಂತಾಗಿದೆ. ಸರ್ಕಾರ ಸೂಕ್ತ ಬೆಳೆ ನಷ್ಟ ಪರಿಹಾರ ನೀಡಬೇಕೆಂದು ಮಾಯಣ್ಣಗೌಡ ಮನವಿ ಮಾಡಿಕೊಂಡಿದ್ದಾರೆ.