Tag: ಬಾಹುಬಲಿ-3

  • ‘ಬಾಹುಬಲಿ 3’ಗಾಗಿ ಮತ್ತೆ ಒಂದಾಗ್ತಾರಾ ರಾಜಮೌಳಿ, ಪ್ರಭಾಸ್?

    ‘ಬಾಹುಬಲಿ 3’ಗಾಗಿ ಮತ್ತೆ ಒಂದಾಗ್ತಾರಾ ರಾಜಮೌಳಿ, ಪ್ರಭಾಸ್?

    ‘ಬಾಹುಬಲಿ’ (Bahubali) ಪಾರ್ಟ್‌ 1 ಮತ್ತು 2ರ ಮೂಲಕ ಸೆನ್ಸೇಷನ್ ಕ್ರಿಯೆಟ್ ಮಾಡಿದ್ದ ಪ್ರಭಾಸ್ ಮತ್ತು ರಾಜಮೌಳಿ ಮತ್ತೆ ಒಂದಾಗಲಿದ್ದಾರೆ ಎಂಬ ಸುದ್ದಿಯೊಂದು ಹೊರಬಿದ್ದಿದೆ. ‘ಬಾಹುಬಲಿ 3’ ಕುರಿತು ಫ್ಯಾನ್ಸ್‌ಗೆ ಗುಡ್ ನ್ಯೂಸ್‌ವೊಂದು ಸಿಕ್ಕಿದೆ. ಇದನ್ನೂ ಓದಿ:ಖಡಕ್ ಲುಕ್‌ನಲ್ಲಿ ಬಂದ ಪುಷ್ಪರಾಜ್- ‘ಪುಷ್ಪ 2’ ಪೋಸ್ಟರ್ ಔಟ್

    ಇತ್ತೀಚೆಗೆ ‘ಕಂಗುವ’ (Kanguva) ಚಿತ್ರದ ನಿರ್ಮಾಪಕ ಕೆ.ಇ ಜ್ಞಾನವೇಲ್ ರಾಜ ಸಂದರ್ಶನವೊಂದರಲ್ಲಿ ಮಾತನಾಡಿ, ‘ಬಾಹುಬಲಿ 3’ (Bahubali 3) ಚಿತ್ರ ಮಾಡುವ ಕುರಿತು ಪ್ಲ್ಯಾನ್ ನಡೆಯುತ್ತಿದೆ ಎಂದಿದ್ದಾರೆ. ಬಾಹುಬಲಿ 1 ಮತ್ತು 2 ಬ್ಯಾಕ್ ಟು ಬ್ಯಾಕ್ ಸಿನಿಮಾ ಮಾಡಿದರು. ಈಗ ಗ್ಯಾಪ್ ನಂತರ ಬಾಹುಬಲಿ ಪಾರ್ಟ್ 3ಗಾಗಿ ಪ್ಲ್ಯಾನಿಂಗ್ ನಡೆಯುತ್ತಿದೆ ಎಂದಿದ್ದಾರೆ.

    ‘ಬಾಹುಬಲಿ 3’ ಮಾಡುವ ಕುರಿತು ರಾಜಮೌಳಿ (Rajamouli) ಕಡೆಯಿಂದ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ‘ಬಾಹುಬಲಿ 3’ಗಾಗಿ ಪ್ರಭಾಸ್ (Prabhas) ಮತ್ತು ರಾಜಮೌಳಿ ಜೊತೆಯಾಗಿ ಮತ್ತೆ ಕೆಲಸ ಮಾಡುತ್ತಾರಾ? ಎಂಬ ಪ್ರಶ್ನೆ ಅಭಿಮಾನಿಗಳಲ್ಲಿ ಮೂಡಿದಿದೆ.

    ಇನ್ನೂ ರಾಜಮೌಳಿ ಸದ್ಯ ಮಹೇಶ್ ಬಾಬು ಜೊತೆಗಿನ ಹೊಸ ಸಿನಿಮಾದ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ. ಇತ್ತ ಪ್ರಭಾಸ್ ಅವರು ‘ಕಣ್ಣಪ್ಪ’ ಮತ್ತು ‘ದಿ ರಾಜ ಸಾಬ್’ ಚಿತ್ರದಲ್ಲಿ ತೊಡಗಿಸಿಕೊಂಡಿದ್ದಾರೆ. ಹಾಗಾದ್ರೆ ಮುಂದಿನ ದಿನಗಳಲ್ಲಿ ಬಾಹುಬಲಿ ಸೀಕ್ವೆಲ್ ಬಗ್ಗೆ ಅಧಿಕೃತ ಅಪ್‌ಡೇಟ್ ಸಿಗುತ್ತಾ? ಎಂಬುದನ್ನು ಕಾದುನೋಡಬೇಕಿದೆ.

  • ಬರಲಿದೆ ಬಾಹುಬಲಿ 3 – ರಾಜಮೌಳಿ ನಂತರ ನಿರ್ಮಾಪಕರ ಪ್ರತಿಕ್ರಿಯೆ

    ಬರಲಿದೆ ಬಾಹುಬಲಿ 3 – ರಾಜಮೌಳಿ ನಂತರ ನಿರ್ಮಾಪಕರ ಪ್ರತಿಕ್ರಿಯೆ

    ಬಾಹುಬಲಿ, ಬಾಹುಬಲಿ-2 ಎರಡೂ ಸಿನಿಮಾಗಳು ವರ್ಲ್ಡ್ ವೈಡ್ ಭಾರೀ ಸಂಚಲನ ಮೂಡಿಸಿದವುಗಳು. ಈ ಎರಡೂ ಸಿನಿಮಾಗಳು ನಟ ಪ್ರಭಾಸ್‍ಗೆ ನೇಮ್ ಮತ್ತು ಫ್ರೇಮ್ ತಂದು ಕೊಡುವ ಜೊತೆಗೆ ದೊಡ್ಡ ಮಟ್ಟದ ಯಶಸ್ಸನ್ನು ತಂದು ಕೊಟ್ಟಿವೆ. ಪ್ರಭಾಸ್‍ಗೆ ನ್ಯಾಷನಲ್ ಆ್ಯಕ್ಟರ್ ಪಟ್ಟ ಗಿಟ್ಟಿಸಿಕೊಳ್ಳುವಲ್ಲಿ ಸಹಾಯ ಮಾಡಿವೆ. ನಿರ್ದೇಶಕ ರಾಜಮೌಳಿ ಸಾರಥ್ಯದಲ್ಲಿ ಮೂಡಿ ಬಂದ ಈ ಎರಡೂ ಸಿನಿಮಾಗಳು ಭಾರತೀಯ ಚಿತ್ರರಂಗದ ಇತಿಹಾಸದಲ್ಲಿ ಹೊಸ ಅಲೆಯನ್ನೇ ಎಬ್ಬಿಸಿದವು. ಸದ್ಯ ಮತ್ತೆ ಪ್ರಭಾಸ್ ಹಾಗೂ ರಾಜಮೌಳಿ ಕಾಂಬೀನೇಷನ್‍ನಲ್ಲಿ ಬಾಹುಬಲಿ-3 ಸೆಟ್ಟೆರಲಿದೆ ಎಂದು ಹೇಳಲಾಗುತ್ತಿದೆ.

    ಹೌದು ಇತ್ತೀಚೆಗಷ್ಟೇ ಟಾಲಿವುಡ್ ನಟ ರಾಮ್‍ಚರಣ್ ತೇಜ ಹಾಗೂ ಜೂ.ನಿಯರ್ ಎನ್‍ಟಿಆರ್ ಒಟ್ಟಾಗಿ ಅಭಿನಯಿಸಿದ್ದ ಆರ್‌ಆರ್‌ಆರ್‌ ಸಿನಿಮಾಕ್ಕೆ ಆ್ಯಕ್ಷನ್ ಕಟ್ ಹೇಳಿದ್ದ ರಾಜಮೌಳಿ ಅವರು, ಈ ಸಿನಿಮಾದ ಪ್ರಮೋಷನ್ ವೇಳೆ ಬಾಹುಬಲಿ -3 ಚಿತ್ರವನ್ನು ನಿರ್ದೇಶಿಸುವ ಪ್ಲಾನ್ ಹೊಂದಿರುವ ಬಗ್ಗೆ ಸುಳಿವು ನೀಡಿದ್ದರು. ಇದನ್ನೂ ಓದಿ: ಲಿವ್ ಇನ್ ರಿಲೇಶನ್‍ಶಿಪ್ – ಮದುವೆ ಬಗ್ಗೆ ವಿದ್ಯಾ ಬಾಲನ್ ಹೇಳೋದೇನು?

    ಇದೀಗ ಮಧ್ಯಮವೊಂದರಲ್ಲಿ ಬಾಹುಬಲಿ ಸಿನಿಮಾದ ನಿರ್ಮಾಪಕ ಪ್ರಸಾದ್ ದೇವಿನೇನಿ, ಎಸ್‍ಎಸ್ ರಾಜಮೌಳಿ ಅವರು ಮತ್ತೊಂದು ಬಾಹುಬಲಿ ಕಥೆಯನ್ನು ಹೇಳುವ ಸಾಧ್ಯತೆ ಇದೆ. ಜೀವನಕ್ಕಿಂತ ಪ್ರಪಂಚ ಮತ್ತು ಪಾತ್ರಗಳು ದೊಡ್ಡದಾಗಿದೆ. ಆದರೆ ನಾವು ಈಗಲೇ ಬಾಹುಬಲಿ-3 ಸಿನಿಮಾವನ್ನು ಪ್ರಾರಂಭಿಸುವುದರ ಬಗ್ಗೆ ಯೋಚಿಸಿಲ್ಲ. ಏಕೆಂದರೆ ರಾಜಮೌಳಿ ಅವರು ಒಂದೆರಡು ಕಮಿಟ್‍ಮೆಂಟ್‍ಗಳನ್ನು ಹೊಂದಿದ್ದಾರೆ. ಅದೆಲ್ಲ ಮುಗಿದ ಬಳಿಕ ನಾವು ಈ ಬಗ್ಗೆ ಯೋಚಿಸುತ್ತೇವೆ. ಎಲ್ಲವೂ ಸರಿಯಾಗಿದ್ದರೆ ಖಂಡಿತವಾಗಿಯೂ ಬಾಹುಬಲಿ-3 ಸಿನಿಮಾ ಮಾಡುತ್ತೇವೆ. ಸದ್ಯಕ್ಕೆ ಇದರ ಬಗ್ಗೆ ಯೋಚಿಸಿಲ್ಲ ಎಂದಿದ್ದಾರೆ.

     

    ಇತ್ತೀಚೆಗೆ ನಾವು ಬಾಹುಬಲಿ ಸಿನಿಮಾ ಕಥೆಯನ್ನು ಬರೆದಿದ್ದ, ಕೆ.ವಿ ವಿಜಯೇಂದ್ರ ಪ್ರಸಾದ್ ಅವರನ್ನೂ ಸಂಪರ್ಕಿಸಿದ್ದೆವು. ಅವರು ಖಂಡಿತವಾಗಿವಾಗಿಯೂ ಬಹುಬಲಿ-3 ಸಿನಿಮಾಕ್ಕೆ ಕಥೆಯನ್ನು ಬರೆದುಕೊಡುತ್ತೇನೆ. ಆದರೆ ಅದಕ್ಕೂ ಮುನ್ನ ಮಹೇಶ್ ಬಾಬು ಅವರ ಪ್ರಾಜೆಕ್ಟ್ ಮುಗಿಯಬೇಕು. ಅದಕ್ಕೂ ಮುನ್ನ ಈ ಬಗ್ಗೆ ಯೋಚಿಸಲು ಸಾಧ್ಯವಿಲ್ಲ ಎಂದು ಹೇಳಿರುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ:  ಮೂರು ವರ್ಷದ ಪ್ರೀತಿ ಖತಂ: ಅನನ್ಯಾ ಪಾಂಡೆ ದೂರವಾಗಲು ಕಾರಣವೇನು?

    ಇತ್ತೀಚೆಗಷ್ಟೇ ಬಿಡುಗಡೆಯಾದ ಆರ್‌ಆರ್‌ಆರ್‌ ಸಕ್ಸಸ್ ಅಲೆಯಲ್ಲಿ ರಾಜಮೌಳಿ ತೇಲುತ್ತಿದ್ದು, ಚಿತ್ರದಲ್ಲಿ ಜೂ. ಎನ್‍ಟಿಆರ್ ಮತ್ತು ರಾಮ್ ಚರಣ್ ನಾಯಕರಾಗಿ ಅಭಿನಯಿಸಿದ್ದಾರೆ. ಈ ಸಿನಿಮಾದ ಪ್ರಮುಖ ಪಾತ್ರದಲ್ಲಿ ಬಾಲಿವುಡ್ ಆಲಿಯಾ ಭಟ್ ಮತ್ತು ನಟ ಅಜಯ್ ದೇವಗನ್ ಕೂಡ ಕಾಣಿಸಿಕೊಂಡಿದ್ದಾರೆ.