Tag: ಬಿಎಂಸಿ

  • ಬಿಬಿಎಂಪಿ ಬಜೆಟ್ 2024: ಮುಂಬೈ ಮಾದರಿ ಬಿಬಿಎಂಪಿ ಮೆಡಿಕಲ್ ಕಾಲೇಜು ಸ್ಥಾಪನೆ

    ಬಿಬಿಎಂಪಿ ಬಜೆಟ್ 2024: ಮುಂಬೈ ಮಾದರಿ ಬಿಬಿಎಂಪಿ ಮೆಡಿಕಲ್ ಕಾಲೇಜು ಸ್ಥಾಪನೆ

    ಬೆಂಗಳೂರು: ನಾಡಿನ ಜನರಿಗೆ ಉತ್ತಮ ಆರೋಗ್ಯ ಸೇವೆ ಸಿಗಬೇಕು ಎಂಬ ನಿಟ್ಟಿನಲ್ಲಿ ಬಿಬಿಎಂಪಿ (BBMP) ಮಹತ್ವದ ಹೆಜ್ಜೆ ಇಟ್ಟಿದೆ. ಎಲ್ಲವೂ ಬಿಬಿಎಂಪಿ ಅಂದುಕೊಂಡಂತೆಯೇ ಆದರೆ ಬೆಂಗಳೂರಿನಲ್ಲಿ (Bengaluru) ಬಿಬಿಎಂಪಿಯಿಂದಲೇ ಮೆಡಿಕಲ್ ಕಾಲೇಜು (Medicle College) ಸ್ಥಾಪನೆಯಾಗಲಿದೆ.

    2024ರ ಬಿಬಿಎಂಪಿ ಬಜೆಟ್‌ನಲ್ಲಿ ಮೆಡಿಕಲ್ ಕಾಲೇಜು ವಿಷಯ ಪ್ರಸ್ತಾಪವಾಗಿದ್ದು, ಇದರ ಡಿಪಿಆರ್ ಸಿದ್ಧಪಡಿಸಲು ಕ್ರಮಕೈಗೊಳ್ಳಲು ಬಿಬಿಎಂಪಿ ಮುಂದಾಗಿದೆ. ಇದನ್ನೂ ಓದಿ: BBMP Budget 2024: ಬಡವರ ಹಸಿವು ನೀಗಿಸಲು 50 ಹೊಸ ಇಂದಿರಾ ಕ್ಯಾಂಟೀನ್

    ಮುಂಬೈ ಮಾದರಿ ಮೆಡಿಕಲ್ ಕಾಲೇಜು:
    ‘ಆರೋಗ್ಯಕರ ಬೆಂಗಳೂರು’ ಯೋಜನೆಯಡಿ ಈ ವಿಷಯವನ್ನು ಬಿಬಿಎಂಪಿ ಬಜೆಟ್‌ನಲ್ಲಿ ಮಂಡಿಸಲಾಗಿದೆ. ಈಗಾಗಲೇ ಬೃಹತ್ ಮುಂಬೈ ನಗರ ಪಾಲಿಕೆ ಅಡಿಯಲ್ಲಿ ವೈದ್ಯಕೀಯ ಮಹಾ ವಿದ್ಯಾಲಯ ನಡೆಯುತ್ತಿದೆ. ಹಲವಾರು ವರ್ಷಗಳಿಂದ ಉತ್ತಮ ಆರೋಗ್ಯ ಸೇವೆ ನೀಡುತ್ತಾ ಮುಂಬೈ ಪಾಲಿಕೆಯ ಮೆಡಿಕಲ್ ಕಾಲೇಜುಗಳು ಮೇಲ್ಪಂಕ್ತಿಯಲ್ಲಿವೆ. ಇದನ್ನೂ ಓದಿ: BBMP Budget 2024: ಪಾಲಿಕೆಯ ಶಾಲಾ/ಕಾಲೇಜು ವಿದ್ಯಾರ್ಥಿಗಳು, ಪೋಷಕರಿಗೆ ‘ಆಯುಷ್ಮಾನ್‌ ಭಾರತ್‌’ ವಿಮೆ!

    ಅದೇ ಮಾದರಿಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಕೂಡಾ ಹೊಸದಾಗಿ ವೈದ್ಯಕೀಯ ಮಹಾವಿದ್ಯಾಲಯ ಸ್ಥಾಪಿಸಲು ಉದ್ದೇಶಿಸಲಾಗಿದೆ. ಇದಕ್ಕಾಗಿ ಡಿಪಿಆರ್ ಸಿದ್ಧಪಡಿಸಲು ಕ್ರಮಕೈಗೊಳ್ಳಲಾಗುವುದು ಎಂದು ಬಜೆಟ್‌ನಲ್ಲಿ ಘೋಷಿಸಲಾಗಿದೆ. ಇದನ್ನೂ ಓದಿ: BBMP Budget 2024: ಆಟದ ಮೈದಾನದ ಕೆಳಗೆ ಬರಲಿದೆ ಅಂಡರ್‌ಗ್ರೌಂಡ್‌ ಪಾರ್ಕಿಂಗ್!‌

    ಬಿಎಂಸಿ ಮಾದರಿ ಏನು?
    ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೋರೇಷನ್ ಒಟ್ಟು 4 ಮೆಡಿಕಲ್ ಕಾಲೇಜು ಹಾಗೂ 1 ಡೆಂಟಲ್ ಕಾಲೇಜುಗಳನ್ನು ನಡೆಸುತ್ತಿದೆ. ಪ್ರತಿವರ್ಷ ಈ ಕಾಲೇಜುಗಳಲ್ಲಿ ಒಟ್ಟು 1,600 ವಿದ್ಯಾರ್ಥಿಗಳು ಸೇರ್ಪಡೆಯಾಗುತ್ತಿದ್ದಾರೆ. ಈ ಐದು ಮೆಡಿಕಲ್ ಕಾಲೇಜುಗಳಲ್ಲಿ ವರ್ಷಕ್ಕೆ ಸರಾಸರಿ 1.10 ಕೋಟಿ ಹೊರರೋಗಿಗಳು ಚಿಕಿತ್ಸೆ ಪಡೆಯುತ್ತಾರೆ. ಇದನ್ನೂ ಓದಿ: BBMP Budget 2024: ಬೆಂಗಳೂರು ನಗರದಲ್ಲಿ ನಿರ್ಮಾಣವಾಗಲಿದೆ 2 ಸುರಂಗ ಮಾರ್ಗ

  • ರಾಜ್ ಠಾಕ್ರೆ ವಾರ್ನಿಂಗ್ – ಸಮುದ್ರದಲ್ಲಿ ನಿರ್ಮಾಣವಾಗುತ್ತಿದ್ದ ಅಕ್ರಮ ದರ್ಗಾವನ್ನು ಕೆಡವಿದ ಬಿಎಂಸಿ

    ರಾಜ್ ಠಾಕ್ರೆ ವಾರ್ನಿಂಗ್ – ಸಮುದ್ರದಲ್ಲಿ ನಿರ್ಮಾಣವಾಗುತ್ತಿದ್ದ ಅಕ್ರಮ ದರ್ಗಾವನ್ನು ಕೆಡವಿದ ಬಿಎಂಸಿ

    ಮುಂಬೈ: ಮಹಾರಾಷ್ಟ್ರದ (Maharashtra) ನವನಿರ್ಮಾಣ ಸೇನೆ (MNS) ನಾಯಕ ರಾಜ್ ಠಾಕ್ರೆ (Raj Thackeray) ಅಕ್ರಮವಾಗಿ ನಿರ್ಮಿಸಲಾಗುತ್ತಿದ್ದ ದರ್ಗಾದ (Dargah) ಬಗ್ಗೆ ಟ್ವೀಟ್ ಒಂದನ್ನು ಹಂಚಿಕೊಂಡ ಬಳಿಕ ಬೃಹತ್ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (BMC) ಗುರುವಾರ ಮಾಹಿಮ್ ಕರಾವಳಿ ಪ್ರದೇಶದಲ್ಲಿ ನಿರ್ಮಿಸಲಾಗುತ್ತಿದ್ದ ದರ್ಗಾವನ್ನು ಕೆಡವಿ ಹಾಕಿದೆ.

    ರಾಜ್ ಠಾಕ್ರೆ ಅವರು ಮಾಹಿಮ್ ಕರಾವಳಿ ಪ್ರದೇಶದಲ್ಲಿ ಅನಧಿಕೃತವಾಗಿ ದರ್ಗಾವನ್ನು ನಿರ್ಮಿಸಲಾಗುತ್ತಿದೆ ಎಂದು ಆರೋಪಿಸಿ ಡ್ರೋನ್ ಕ್ಯಾಮೆರಾದಲ್ಲಿ ತೆಗೆಯಲಾಗಿದ್ದ ದೃಶ್ಯಗಳನ್ನು ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದರು. ಠಾಕ್ರೆ ಟ್ವೀಟ್ ಮಾಡಿದ ಕೇವಲ 1 ದಿನದ ಬಳಿಕ ಮುಂಬೈ ನಾಗರಿಕ ಮಂಡಳಿ ಅಕ್ರಮ ದರ್ಗಾವನ್ನು ನೆಲಸಮಗೊಳಿಸುವ ಕಾರ್ಯಾಚರಣೆಗೆ ಮುಂದಾಗಿದೆ.

    ಟ್ವೀಟ್‌ನಲ್ಲೇನಿದೆ?
    ರಾಜ್ ಠಾಕ್ರೆ ಮಾಡಿರುವ ಟ್ವೀಟ್‌ನಲ್ಲಿ, ಮಾಹಿಮ್‌ನ ಮಗ್ದೂಮ್ ಬಾಬಾ ದರ್ಗಾವನ್ನು ಸಮುದ್ರದಲ್ಲಿ ಅನಧಿಕೃತವಾಗಿ ನಿರ್ಮಾಣ ಮಾಡಲಾಗುತ್ತಿದೆ. 2 ವರ್ಷಗಳ ಹಿಂದೆ ಇಲ್ಲಿ ಏನೂ ಇರಲಿಲ್ಲ. ದರ್ಗಾ ನಿರ್ಮಾಣದ ಕಾರ್ಯಾಚರಣೆ ಹಗಲು ಹೊತ್ತಿನಲ್ಲಿ ನಡೆಯುತ್ತಿದ್ದರೂ ಇದು ಪೊಲೀಸರ ಹಾಗೂ ಪುರಸಭೆಯ ಗಮನಕ್ಕೆ ಬಂದಿಲ್ಲವೇ ಎಂದು ಟೀಕಿಸಿದ್ದರು. ಇದನ್ನೂ ಓದಿ: ರಾಹುಲ್‌ಗೆ ಬಿಗ್‌ ರಿಲೀಫ್‌ – 30 ದಿನಗಳ ಜಾಮೀನು ಮಂಜೂರು

    ಮುಖ್ಯಮಂತ್ರಿ ಏಕನಾಥ್ ಶಿಂಧೆ, ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಮುಂಬೈ ಪೊಲೀಸರಿಗೆ ವಾರ್ನಿಗ್ ನೀಡಿದ ರಾಜ್ ಠಾಕ್ರೆ, ಅನಧಿಕೃತವಾಗಿ ನಿರ್ಮಾಣವಾಗುತ್ತಿರುವ ದರ್ಗಾದ ವಿರುದ್ಧ ತಕ್ಷಣವೇ ಕ್ರಮ ತೆಗೆದುಕೊಳ್ಳಿ. ಈಗಲೇ ಇದನ್ನು ನೆಲಸಮಗೊಳಿಸಿ. ಇಲ್ಲದೇ ಹೋದಲ್ಲಿ ನಾವು ಆ ಪ್ರದೇಶದಲ್ಲಿ ದೊಡ್ಡ ಗಣಪತಿಯ ದೇವಾಲಯವನ್ನು ನಿರ್ಮಿಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

    ಟ್ವೀಟ್ ಬೆನ್ನಲೇ ಗುರುವಾರ ಬೆಳಗ್ಗೆ ಬಿಎಂಸಿ ತಂಡ ಹೆಚ್ಚಿನ ಭದ್ರತೆಯೊಂದಿಗೆ ಸಣ್ಣ ದ್ವೀಪ ಮಾದರಿಯ ಪ್ರದೇಶದಲ್ಲಿ ನಿರ್ಮಾಣವಾಗುತ್ತಿದ್ದ ದರ್ಗಾದ ವಿರುದ್ಧ ಕ್ರಮ ಕೈಗೊಳ್ಳಲು ಮುಂದಾಗಿದೆ. ಬಿಎಂಸಿ ತಂಡ ಭಾರೀ ಪೊಲೀಸ್ ಬಂದೋಬಸ್ತ್‌ನೊಂದಿಗೆ ಜೆಸಿಬಿ ಹಾಗೂ ಇತರ ಸಲಕರಣೆಗಳೊಂದಿಗೆ ಸ್ಥಳಕ್ಕೆ ತೆರಳಿ ದರ್ಗಾವನ್ನು ನೆಲಸಮಗೊಳಿಸಿದೆ. ಇದನ್ನೂ ಓದಿ: ವಿಜಯ ಮಲ್ಯ ಬಳಿ ಸಾಲ ತೀರಿಸುವಷ್ಟು ಹಣವಿದೆ – CBIನಿಂದ 3ನೇ ಚಾರ್ಜ್‌ಶೀಟ್‌ ಸಲ್ಲಿಕೆ

  • ಮುಂಬೈ ಬೀದಿಯ ಕಸ ಎತ್ತಿ, ಆಯುಕ್ತರನ್ನು ತರಾಟೆ ತೆಗೆದುಕೊಂಡ ರಾಕಿ ಸಾವಂತ್

    ಮುಂಬೈ ಬೀದಿಯ ಕಸ ಎತ್ತಿ, ಆಯುಕ್ತರನ್ನು ತರಾಟೆ ತೆಗೆದುಕೊಂಡ ರಾಕಿ ಸಾವಂತ್

    ತತ ಮಳೆಯಿಂದಾಗಿ ಮುಂಬೈ ಸೇರಿದಂತೆ ಹಲವು ನಗರಗಳು ಕಸದಿಂದ ತುಂಬಿ ಹೋಗಿವೆ. ಕಸ ತಗೆಯುವುದಕ್ಕೆ ಆಗದೇ ಇರುವಷ್ಟು ಮಳೆ ಆವಾಂತರ ಸೃಷ್ಟಿ ಮಾಡಿದೆ. ಈಗೀಗ ಮಳೆ ನಿಂತರೂ ಕಸದ ಸಮಸ್ಯೆ ಮಾತ್ರ ನಿಂತಿಲ್ಲ. ಹಾಗಾಗಿ ಮುಂಬೈ ನಗರದಲ್ಲಿ ಅಲ್ಲಲ್ಲಿ ಬೀದಿಯಲ್ಲಿ ಕಸದ ರಾಶಿಯೇ ಬಿದ್ದಿವೆ. ಇದನ್ನು ಗಮನಿಸಿದ ವಿವಾದಿತ ನಟಿ ರಾಕಿ ಸಾವಂತ್, ತಾವೇ ಸಲಕಿ ಹಿಡಿದು ಕಸ ತಗೆಯಲು ಮುಂದಾಗಿದ್ದಾರೆ.

    ದಿನವೂ ಜಿಮ್ ಗೆ ಹೋಗುವ ರಾಕಿ ಸಾವಂತ್, ತಾವು ಜಿಮ್ ಗೆ ಹೋಗುವ ರಸ್ತೆಯಲ್ಲಿ ಬಿದ್ದಿರುವ ಕಸವನ್ನು ಹಲವು ದಿನಗಳಿಂದ ನೋಡಿದ್ದಾರೆ. ಮುಂಬೈನ ಬಿಎಂಸಿ ಸಿಬ್ಬಂದಿಗಳು ಯಾವಾಗ ಇದನ್ನು ಸರಿ ಮಾಡುತ್ತಾರೆ ಎಂದು ಕಾದಿದ್ದಾರೆ. ಎರಡ್ಮೂರು ದಿನಗಳ ನಂತರವೂ ಆ ಕಸ ಹಾಗೆಯೇ ಇದ್ದ ಕಾರಣಕ್ಕಾಗಿ ತಾವೇ ಸಲಕಿ ತಗೆದುಕೊಂಡು ಅದನ್ನು ತಗೆಯಲು ಮುಂದಾಗಿದ್ದಾರೆ. ಒಂದಷ್ಟು ಕಸವನ್ನೂ ಅವರು ಸ್ವಚ್ಚಗೊಳಿಸಿದ್ದಾರೆ. ಈ ವಿಡಿಯೋ ಸಖತ್ ವೈರಲ್ ಆಗಿದೆ. ಇದನ್ನೂ ಓದಿ:ಆಗಸ್ಟ್ ನಲ್ಲಿ ‘ಅವನೇ ಶ್ರೀಮನ್ನಾರಾಯಣ’ ನಿರ್ದೇಶಕರ ಸಿನಿಮಾ ಟೈಟಲ್ ಲಾಂಚ್ : ಶಿವರಾಜ್ ಕುಮಾರ್ ಹೀರೋ

    ರಸ್ತೆಯನ್ನು ಸ್ವಚ್ಚ ಮಾಡುವುದರ ಜೊತೆಗೆ ಬಿಎಂಸಿ ಸಿಬ್ಬಂದಿ ಮತ್ತು ಕಮಿಷ್ನರ್ ಅವರನ್ನು ತರಾಟೆಗೆ ತಗೆದುಕೊಂಡಿರುವ ರಾಕಿ, ಅವರೆಲ್ಲರೂ ಗಡದ್ದಾಗಿ ನಿದ್ದೆ ಮಾಡುತ್ತಿದ್ದಾರಾ ಎಂದು ಪ್ರಶ್ನಿಸಿದ್ದಾರೆ. ಸದಾ ವಿವಾದವನ್ನೇ ಮಾಡಿಕೊಂಡು ಓಡಾಡುತ್ತಿದ್ದ ರಾಕಿಯ ಈ ನಡೆ ಕಂಡು ಬಹುತೇಕರು ಹೊಗಳಿದ್ದಾರೆ. ಇಂತಹ ಕೆಲಸಗಳ ಮೂಲಕ ಒಳ್ಳೆಯವರಾಗಿ ಎಂದು ಹಾರೈಸಿದ್ದಾರೆ. ರಾಕಿಯ ಈ ವಿಡಿಯೋವಂತೂ ಮುಂಬೈ ರಸ್ತೆಗಳ ದಾರುಣ ಸ್ಥಿತಿಯನ್ನು ಕಟ್ಟಿಕೊಡುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • ಬಂಧನದಲ್ಲಿರುವ ರಾಣಾ ದಂಪತಿ ನಿವಾಸದಲ್ಲಿ ಅಕ್ರಮ ಕಟ್ಟಡ – ಬಿಎಂಸಿ ನೋಟೀಸ್

    ಬಂಧನದಲ್ಲಿರುವ ರಾಣಾ ದಂಪತಿ ನಿವಾಸದಲ್ಲಿ ಅಕ್ರಮ ಕಟ್ಟಡ – ಬಿಎಂಸಿ ನೋಟೀಸ್

    ಮುಂಬೈ: ಬಂಧನದಲ್ಲಿರುವ ಸ್ವತಂತ್ರ ಸಂಸದೆ ನವನೀತ್ ರಾಣಾ ಮತ್ತು ಶಾಸಕ ಪತಿ ರವಿ ರಾಣಾ ದಂಪತಿಗೆ ಒಂದಾದಂತೆ ಒಂದು ಅಂಕಷ್ಟಗಳು ಎದುರಾಗುತ್ತಿದ್ದು, ಇದೀಗ ಮುಂಬೈ ನಲ್ಲಿರುವ ತಮ್ಮ ನಿವಾಸದಲ್ಲಿ ಅಕ್ರಮ ಕಟ್ಟಡ ನಿರ್ಮಾಣ ಮಾಡಿರುವುದಾಗಿ ಬೃಹತ್ ಮುಂಬೈ ಮಹಾನಗರಪಾಲಿಕೆ (BMC) ನೋಟಿಸ್ ಜಾರಿಗೊಳಿಸಿದೆ.

    navneet kaur 2

    ನೋಟೀಸ್ ಪ್ರಕಾರ ಅಧಿಕಾರಿಗಳು ಮೇ 4ರಂದು ಯಾವುದೇ ಸಮಯದಲ್ಲಿ, ಯಾವುದೇ ಕಟ್ಟಡಕ್ಕೆ ಭೇಟಿ ನೀಡಿ ತಪಾಸಣೆ ನಡೆಸಬಹುದು. ಅಕ್ರಮ ಆಗಿದ್ದರೆ ಬದಲಾವಣೆ ಮಾಡುವುದಕ್ಕೂ ಕ್ರಮ ಕೈಗೊಳ್ಳಬಹುದು ಎಂದು ಹೇಳಲಾಗಿದೆ. ಇದನ್ನೂ ಓದಿ: ಸೊಪೋರ್‌ನಲ್ಲಿ ಮೂವರು ಲಷ್ಕರ್ ಉಗ್ರರು ಅರೆಸ್ಟ್

    ಹಿನ್ನೆಲೆ ಏನು?: ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಸೃಷ್ಟಿಸಿದ್ದಾಗಿ ಮಹಾರಾಷ್ಟ್ರದ ಅಮರಾವತಿಯ ಸಂಸದ ಬದ್ನೇರಾ ಶಾಸಕ ರವಿ ರಾಣಾ ಮತ್ತು ಅವರ ಪತ್ನಿ ನವನೀತ್ ರಾಣಾ ಅವರನ್ನು ಏಪ್ರಿಲ್ 23ರಂದು ಬಂಧಿಸಲಾಗಿದೆ. 

    HANUMAN CHALISA PROTEST

    ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಅವರ ಖಾಸಗಿ ನಿವಾಸದ ಹೊರಗೆ ಹನುಮಾನ್ ಚಾಲೀಸಾ ಪಠಿಸುವ ಯೋಜನೆಯನ್ನು ಈ ದಂಪತಿ ಹಾಕಿಕೊಂಡಿದ್ದರು. ಆದರೆ ಅವರನ್ನು ಬಂಧಿಸಿದ ಮೇಲೆ ಕಾರ್ಯಕ್ರಮವನ್ನು ರದ್ದುಗೊಳಿಸಿಲಾಯಿತು. ಇದನ್ನೂ ಓದಿ: ದೇಶದ ಪರಿಸ್ಥಿತಿ ಚೆನ್ನಾಗಿಲ್ಲ, ಭಯಪಡಬೇಡಿ, ಹೋರಾಟ ಮುಂದುವರೆಸಿ: ಮಮತಾ ಬ್ಯಾನರ್ಜಿ

    ಪ್ರಸ್ತುತ ದಂಪತಿ ವಿರುದ್ಧ ಸೆಕ್ಷನ್ 153(A) (ಧರ್ಮ, ಜನಾಂಗ, ಜನ್ಮಸ್ಥಳ, ವಾಸಸ್ಥಳ, ಭಾಷೆಯ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಮತ್ತು 353 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಅವರಿಬ್ಬರನ್ನೂ ಭಾನುವಾರ ಬಾಂದ್ರಾದ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಇಬ್ಬರನ್ನೂ ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿದೆ.

    Navneet Rana Ravi Rana 2

    ಸರ್ಕಾರಿ ಯಂತ್ರಕ್ಕೆ ಸವಾಲು ಹಾಕಿದ ಮತ್ತು ಸಿಎಂ ಉದ್ಧವ್ ಠಾಕ್ರೆ ವಿರುದ್ಧ ಟೀಕೆಗಳನ್ನು ಮಾಡಿದ್ದರಿಂದ ಅವರ ವಿರುದ್ಧ ಐಪಿಸಿ ಸೆಕ್ಷನ್ 124-A (ದೇಶದ್ರೋಹ) ಅಡಿಯಲ್ಲಿ ಆರೋಪಗಳನ್ನು ಮಾಡಲಾಗಿದೆ ಎಂದು ಪಬ್ಲಿಕ್ ಪ್ರಾಸಿಕ್ಯೂಟರ್ ಪ್ರದೀಪ್ ಘರತ್ ತಿಳಿಸಿದ್ದರು.

  • ಕೋವಿಡ್-19 ಪ್ರಕರಣ ಏರಿಕೆ – ಮದುವೆ ನೋಂದಣಿ ಸೇವೆ ಸ್ಥಗಿತ!

    ಕೋವಿಡ್-19 ಪ್ರಕರಣ ಏರಿಕೆ – ಮದುವೆ ನೋಂದಣಿ ಸೇವೆ ಸ್ಥಗಿತ!

    ಮುಂಬೈ: ನಗರದಾದ್ಯಂತ ಕೋವಿಡ್-19 ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಬೃಹತ್ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ತಾತ್ಕಾಲಿಕವಾಗಿ ಮದುವೆ ನೋಂದಣಿ ಸೇವೆಯನ್ನು ಸ್ಥಗಿತಗೊಳಿಸಿದೆ.

    ಮುಂಬೈನಲ್ಲಿ ಪ್ರಸ್ತುತ ಕೋವಿಡ್-19 ಪರಿಸ್ಥಿತಿಯಿಂದಾಗಿ ಮದುವೆ ನೋಂದಣಿ ಸೇವೆಯನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ. ಪ್ರಕರಣಗಳು ಕಡಿಮೆಯಾದ ಮೇಲೆ ಶೀಘ್ರದಲ್ಲೇ ಸೇವೆಯನ್ನು ಮರುಪ್ರಾರಂಭಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದರ ಜೊತೆಗೆ ಪಾಲಿಕೆ ವೀಡಿಯೋ ಮೂಲಕ ಕೆವೈಸಿ(ನಿಮ್ಮ ಗ್ರಾಹಕರನ್ನು ಅರಿತುಕೊಳ್ಳಿ) ಆಯ್ಕೆ ನೀಡುವ ಬಗ್ಗೆ ಪರಿಶೀಲಿಸುತ್ತಿದೆ. ಇದನ್ನೂ ಓದಿ: ಒಬಿಸಿ ನಾಯಕರಿಂದ ಬಿಜೆಪಿಗೆ ರಾಜೀನಾಮೆ – ದಲಿತರ ಮನೆಯಲ್ಲಿ ಊಟ ಮಾಡಿದ ಯೋಗಿ

    BMC Suspends Marriage Registration in Mumbai Due to COVID

    ಮುಂಬೈನಲ್ಲಿ ಕಳೆದ 24 ಗಂಟೆಗಳಲ್ಲಿ ನಡೆಸಲಾದ 57,534 ಪರೀಕ್ಷೆಗಳಲ್ಲಿ 7,895 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ. ಬಿಎಂಸಿ ಬುಲೆಟಿನ್ ಪ್ರಕಾರ, ಮುಂಬೈನಲ್ಲಿ ಒಟ್ಟು ಸೋಂಕಿನ ಪ್ರಕರಣಗಳ ಸಂಖ್ಯೆ 9,99,862 ಕ್ಕೆ ಏರಿದೆ.

    ಕಳೆದ 24 ಗಂಟೆಗಳಲ್ಲಿ 11 ಜನರು ಈ ವೈರಸ್‍ನಿಂದ ಸಾವನ್ನಪ್ಪಿದ್ದಾರೆ. ಸಾವಿನ ಸಂಖ್ಯೆ 16,257 ಕ್ಕೆ ಏರಿದ್ದು, ನಗರದಲ್ಲಿ 60,371 ಸಕ್ರಿಯ ಪ್ರಕರಣಗಳಿವೆ. ಇದನ್ನೂ ಓದಿ: ಪಕ್ಷದಿಂದ ಸಚಿವನ ಉಚ್ಛಾಟಿಸಿದ ಬಿಜೆಪಿ – ಮತ್ತೆ ‘ಕೈ’ ಹಿಡೀತಾರಾ ಹರಕ್ ಸಿಂಗ್ ರಾವತ್?

    ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಗಳಲ್ಲಿ 41,327 ಹೊಸ ಪ್ರಕರಣಗಳು ಮತ್ತು 29 ಸಾವುಗಳು ವರದಿಯಾಗಿವೆ ಎಂದು ರಾಜ್ಯ ಆರೋಗ್ಯ ಬುಲೆಟಿನ್ ಭಾನುವಾರ ತಿಳಿಸಿದೆ. ಭಾನುವಾರ 8 ಓಮಿಕ್ರಾನ್ ಸೋಂಕುಗಳು ವರದಿಯಾಗಿದ್ದು, ಓಮಿಕ್ರಾನ್ ಪ್ರಕರಣಗಳ ಸಂಖ್ಯೆ 1,738 ಕ್ಕೆ ತಲುಪಿದೆ.

  • ಮುಂಬೈ ಆಸ್ಪತ್ರೆಯಲ್ಲಿ 4 ದಿನಗಳಲ್ಲಿ 4 ನವಜಾತ ಶಿಶುಗಳ ಸಾವು – ಪೋಷಕರಲ್ಲಿ ಆತಂಕ!

    ಮುಂಬೈ ಆಸ್ಪತ್ರೆಯಲ್ಲಿ 4 ದಿನಗಳಲ್ಲಿ 4 ನವಜಾತ ಶಿಶುಗಳ ಸಾವು – ಪೋಷಕರಲ್ಲಿ ಆತಂಕ!

    ಮುಂಬೈ: ಭಾಂಡೂಪ್‌ನಲ್ಲಿರುವ ಬೃಹನ್‌ಮುಂಬೈ ಮುನ್ಸಿಪಲ್ (ಬಿಎಂಸಿ) ನಡೆಸುತ್ತಿರುವ ಸಾವಿತ್ರಿಬಾಯಿ ಫುಲೆ ಹೆರಿಗೆ ಆಸ್ಪತ್ರೆಯಲ್ಲಿ ಕಳೆದ ನಾಲ್ಕು ದಿನಗಳಲ್ಲಿ ನಾಲ್ಕು ನವಜಾತ ಶಿಶುಗಳು ಮೃತಪಟ್ಟಿರುವುದು ಆತಂಕ ಮೂಡಿಸಿದೆ.

    ಕಳೆದ 4 ದಿನಗಳಿಂದ ತೀವ್ರ ನಿಗಾ ಘಟಕದಲ್ಲಿರಿಸಿದ ನವಜಾತಾ ಶಿಶುಗಳು ಸಾವನ್ನಪ್ಪುತ್ತಿರುವುದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಈ ಕುರಿತು ತನಿಖೆ ನಡೆಸಲು ಸಮಿತಿ ರಚಿಸಲಾಗಿದೆ ಎಂದು ಬಿಎಂಸಿ ಗುರುವಾರ ತಿಳಿಸಿದೆ.

    ಗುರುವಾರ ರಾಜ್ಯ ವಿಧಾನಸಭೆಯಲ್ಲಿ ಪ್ರತಿಪಕ್ಷಗಳು ಈ ವಿಷಯವನ್ನು ಪ್ರಸ್ತಾಪಿಸಿದವು. ನಂತರ ನಗರಾಭಿವೃದ್ಧಿ ಸಚಿವ ಏಕನಾಥ್ ಶಿಂಧೆ ಆಸ್ಪತ್ರೆಯ ವೈದ್ಯಾಧಿಕಾರಿಯನ್ನು ಅಮಾನತು ಗೊಳಿಸಲಾಗುವುದು. ಈ ಕುರಿತು ಉನ್ನತ ಮಟ್ಟದ ತನಿಖೆಯನ್ನು ನಡೆಸುವುದಾಗಿ ತಿಳಿಸಿದರು. ಇದನ್ನೂ ಓದಿ: ಕೋವಿಡ್‌ ಎರಡನೇ ಲಸಿಕಾ ಅಭಿಯಾನದಲ್ಲಿ ಬೆಂಗಳೂರು ನಗರ ಜಿಲ್ಲೆ ರಾಜ್ಯಕ್ಕೆ ಪ್ರಥಮ

    ಇದಕ್ಕೂ ಮುನ್ನ ಪ್ರತಿಪಕ್ಷಗಳು ಬಿಎಂಸಿಯನ್ನು ಟೀಕಿಸಿದ್ದವು. ಆಡಳಿತದ ನಿರ್ಲಕ್ಷ್ಯದಿಂದ ಶಿಶುಗಳು ಸಾವನ್ನಪ್ಪುತ್ತಿವೆ ಎಂದು ಹೇಳಲಾಗಿತ್ತು. ಆದರೆ ಸೋಂಕಿನಿಂದಾಗಿ ಶಿಶುಗಳ ಸಾವು ಸಂಭವಿಸಿದೆ ಎಂದು ವೈದ್ಯರು ಪೋಷಕರಿಗೆ ತಿಳಿಸಿರುವ ಬಗ್ಗೆ ವರದಿಯಾಗಿದೆ.

    ನಾಲ್ಕು ಶಿಶುಗಳ ಪೈಕಿ ಮೂರು ಶಿಶುಗಳು ಸೆಪ್ಟಿಕ್ ಶಾಕ್‌ನಿಂದಾಗಿ ಮೃತಪಟ್ಟಿವೆ. ಶಿಶುಗಳಿಗೆ ಸೋಂಕು ತಗುಲಿದ್ದು, ಔಷಧಿಗೆ ಗುಣಮುಖವಾಗಿಲ್ಲ ಎಂದು ಶಿಶುಗಳ ಸಾವಿನ ಬಗ್ಗೆ ವೈದ್ಯಾಧಿಕಾರಿಗಳು ಪ್ರತಿಕ್ರಿಯಿಸಿದ್ದಾರೆ. ಇದನ್ನೂ ಓದಿ: ಫುಡ್ ಡೆಲಿವರಿ ಬಾಯ್ ಮೇಲೆ ಮಹಿಳಾ ಸಿಬ್ಬಂದಿ ದರ್ಪ

  • ಆಲಿಯಾ ವಿರುದ್ಧ FIR ದಾಖಲಿಸಲು ಮುಂದಾದ ಮುಂಬೈ ಪಾಲಿಕೆ

    ಆಲಿಯಾ ವಿರುದ್ಧ FIR ದಾಖಲಿಸಲು ಮುಂದಾದ ಮುಂಬೈ ಪಾಲಿಕೆ

    ಮುಂಬೈ: ಬಾಲಿವುಡ್ ನಟಿ ಆಲಿಯಾ ಭಟ್ ವಿರುದ್ಧ ಬೃಹನ್‍ಮುಂಬೈ ಮುನ್ಸಿಪಲ್ ಕಾರ್ಪೊರೇಷನ್(ಬಿಎಂಸಿ) ಎಫ್‍ಐಆರ್ ದಾಖಲಿಸಲು ಮುಂದಾಗಿದೆ.

    ಬಿಎಂಸಿ ಆರೋಗ್ಯ ಸಮಿತಿಯ ಅಧ್ಯಕ್ಷ ರಾಜುಲ್ ಪಟೇಲ್ ಅವರು ಆಲಿಯಾ ಕೊರೊನಾ ನಿಯಮಗಳನ್ನು ಉಲ್ಲಂಘಿಸುತ್ತಿರುವ ಹಿನ್ನೆಲೆ ಅವರ ವಿರುದ್ಧ ಎಫ್‍ಐಆರ್ ದಾಖಲಿಸಲು ಆದೇಶಿಸಿದ್ದಾರೆ. ಇದನ್ನೂ ಓದಿ: ಸೋಶಿಯಲ್ ಮೀಡಿಯಾದಲ್ಲಿ ಡಿಪಿ ಚೇಂಜ್ ಮಾಡಿದ ಕತ್ರಿನಾ

    ಆಲಿಯಾ ಕೋವಿಡ್-19 ನೆಗೆಟಿವ್ ಆಗಿ ಬಂದಿದ್ದರೂ ಪಾಸಿಟಿವ್ ಬಂದ ಜನರ ಜೊತೆಗೆ ಸಂಪರ್ಕ ಇದ್ದ ಕಾರಣ ಕ್ವಾರಂಟೈನ್ ನಲ್ಲಿ ಇರುವಂತೆ ಸೂಚಿಸಲಾಗಿತ್ತು. ಆದರೆ ಈ ನಿಯಮವನ್ನು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಎಫ್‍ಐಆರ್ ದಾಖಲಿಸಲು ಪಾಲಿಕೆ ಮುಂದಾಗಿದೆ.

    ಈ ಕುರಿತು ಮಾತನಾಡಿದ ರಾಜುಲ್ ಪಾಟೇಲ್, ಹೋಮ್ ಐಸೋಲೇಶನ್ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಆಲಿಯಾ ಭಟ್ ವಿರುದ್ಧ ಎಫ್‍ಐಆರ್ ದಾಖಲಿಸಲು ಸಾರ್ವಜನಿಕ ಆರೋಗ್ಯ ಇಲಾಖೆಯ ಉಪ ಮುನ್ಸಿಪಲ್ ಕಮಿಷನರ್ ಅವರಿಗೆ ನಾನು ಆದೇಶಿಸಿದ್ದೇನೆ. ಸಾಕಷ್ಟು ಜನರಿಗೆ ಮಾದರಿಯಾಗಿರುವ ಅವರು ಜವಾಬ್ದಾರಿಯಿಂದ ವರ್ತಿಸಬೇಕಿತ್ತು. ನಿಯಮಗಳು ಎಲ್ಲರಿಗೂ ಒಂದೇ ಎಂದು ಹೇಳಿದರು.

    ಆಲಿಯಾ ಅವರು ತಮ್ಮ ಮುಂಬರುವ ‘ಬ್ರಹ್ಮಾಸ್ತ್ರ’ ಸಿನಿಮಾದ ಪ್ರಮೋಷನ್ ಮತ್ತು ಪೋಸ್ಟರ್ ಬಿಡುಗಡೆಗಾಗಿ ಇತ್ತೀಚೆಗೆ ದೆಹಲಿಗೆ ಭೇಟಿ ನೀಡಿದ್ದರು. ಈ ವೇಳೆ ಬಿಎಂಸಿ ಆಲಿಯಾ ಅವರನ್ನು ಸಂಪರ್ಕಿಸಿ ದೆಹಲಿಯಲ್ಲೇ ಕ್ವಾರಂಟೈನ್ ಆಗುವಂತೆ ಸೂಚಿಸಿತ್ತು. ಆದರೆ ಸೂಚನೆಯನ್ನು ಧಿಕ್ಕರಿಸಿ ಈಗಲೂ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವ ಹಿನ್ನೆಲೆಯಲ್ಲಿ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿದೆ. ಇದನ್ನೂ ಓದಿ:  ಬೋಲ್ಡ್ ದೃಶ್ಯಗಳೇ ಸಮಂತಾ ದಾಂಪತ್ಯಕ್ಕೆ ಮುಳುವಾಯ್ತು!

    ಆಲಿಯಾ ಭಟ್ ಡಿಸೆಂಬರ್ 15 ರಂದು ರಣಬೀರ್ ಕಪೂರ್ ಜೊತೆಗೆ ದೆಹಲಿಗೆ ಭೇಟಿ ನೀಡಿದ್ದರು. ಇವರಿಬ್ಬರು ‘ಬ್ರಹ್ಮಾಸ್ತ್ರ’ ಚಿತ್ರದ ಪ್ರಮೋಷನ್ ಪೋಸ್ಟರ್ ಅನ್ನು ಬಿಡುಗಡೆ ಮಾಡಿದ್ದಾರೆ. ಈ ಚಿತ್ರದಲ್ಲಿ ಅಮಿತಾಬ್ ಬಚ್ಚನ್, ಮೌನಿ ರಾಯ್ ಮತ್ತು ನಾಗಾರ್ಜುನ ಅಕ್ಕಿನೇನಿ ಕೂಡ ನಟಿಸಿದ್ದು, ಈ ಸಿನಿಮಾ ಮುಂದಿನ ವರ್ಷ ಸೆಪ್ಟೆಂಬರ್‍ನಲ್ಲಿ ಬಿಡುಗಡೆಯಾಗಲಿದೆ.

    ಬಾಲಿವುಡ್ ತಾರೆಯರಿಗೆ ಕೋವಿಡ್-19 ಸೋಂಕು ಇತ್ತೀಚೆಗೆ ಹೆಚ್ಚು ಕಾಣಿಸಿಕೊಳ್ಳುತ್ತಿದ್ದು, ಈ ವಾರದ ಆರಂಭದಲ್ಲಿ ಅಮೃತಾ ಅರೋರಾ, ಮಹೀಪ್ ಕಪೂರ್, ಸೀಮಾ ಖಾನ್, ಕರೀನಾ ಕಪೂರ್ ಖಾನ್ ಅವರಿಗೆ ಪಾಸಿಟಿವ್ ಬಂದಿದೆ. ಈ ಹಿನ್ನೆಲೆ ಬಿಎಂಸಿ ಮುಂಬೈನ ಬಾಂದ್ರಾ ಮತ್ತು ಖಾರ್ ಪ್ರದೇಶಗಳಲ್ಲಿ ನಾಲ್ಕು ಕಟ್ಟಡಗಳನ್ನು ಸೀಲ್ ಮಾಡಿದ್ದು, ಈ ಪ್ರದೇಶಗಳಲ್ಲಿ ಕೋವಿಡ್-19 ಪರೀಕ್ಷಾ ಶಿಬಿರಗಳನ್ನು ಆಯೋಜಿಸಿದೆ.

  • ಕರೀನಾ, ಅಮೃತಾ ಅರೋರಾಗೆ ಕೊರೊನಾ ಪಾಸಿಟಿವ್

    ಕರೀನಾ, ಅಮೃತಾ ಅರೋರಾಗೆ ಕೊರೊನಾ ಪಾಸಿಟಿವ್

    ಮುಂಬೈ: ಬಾಲಿವುಡ್ ನಟಿ ಕರೀನಾ ಕಪೂರ್ ಖಾನ್ ಮತ್ತು ಅವರ ಸ್ನೇಹಿತೆ ಅಮೃತಾ ಅರೋರಾ ಅವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಬ್ರಾಹನ್‍ಮುಂಬೈ ಮುನ್ಸಿಪಲ್ ಕಾರ್ಪೊರೇಷನ್(ಬಿಎಂಸಿ) ಈ ಕುರಿತು ಅಧಿಕೃತ ಮಾಹಿತಿಯನ್ನು ನೀಡಿದೆ.

    ಕರೀನಾ ಕಪೂರ್ ಖಾನ್ ಮತ್ತು ಅಮೃತಾ ಅರೋರಾ ಕೋವಿಡ್-19 ಪರೀಕ್ಷೆಯಲ್ಲಿ ಪಾಸಿಟಿವ್ ಬಂದಿದೆ. ಇಬ್ಬರೂ ಕೋವಿಡ್ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಮತ್ತು ಹಲವಾರು ಪಾರ್ಟಿಗಳಲ್ಲಿ ಭಾಗವಹಿಸಿದ್ದರು. ಇಬ್ಬರು ನಟಿಯರ ಸಂಪರ್ಕಕ್ಕೆ ಬಂದವರಿಗೆ ಆರ್‌ಟಿ-ಪಿಸಿಆರ್ ಪರೀಕ್ಷೆಗೆ ಒಳಗಾಗುವಂತೆ ಬಿಎಂಸಿ ಆದೇಶಿಸಿದೆ. ಇದನ್ನೂ ಓದಿ: ‘ಕಭಿ ಖುಷಿ ಕಭಿ ಗಮ್’ ಸೀನ್ ರೀ ಕ್ರಿಯೇಟ್ ಮಾಡಿದ ಆಲಿಯಾ-ರಣವೀರ್

    ಕರೀನಾ ಮತ್ತು ಅಮೃತಾ ಈ ಕುರಿತು ಇನ್ನೂ ಯಾವುದೇ ಅಧಿಕೃತ ಮಾಹಿತಿಯನ್ನು ನೀಡಿಲ್ಲ. ಆದರೆ ಈ ಸುದ್ದಿ ತಿಳಿದ ಅವರ ಅಭಿಮಾನಿಗಳು ಅಮೃತಾ ಮತ್ತು ಕರೀನಾ ಇಬ್ಬರೂ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತಿದ್ದಾರೆ.

    ಕರೀನಾ ಮತ್ತು ಅಮೃತಾ ಇತ್ತೀಚೆಗೆ ಮುಂಬೈನಲ್ಲಿರುವ ರಿಯಾ ಕಪೂರ್ ಅವರ ಮನೆಯಲ್ಲಿ ಪಾರ್ಟಿಯನ್ನು ಮಾಡಿದ್ದರು. ಈ ವೇಳೆ ಈ ನಟಿಯರು ಕ್ಯಾಮೆರಾಗೆ ಪೋಸ್ ಸಹ ನೀಡಿದ್ದರು. ಅವರೊಂದಿಗೆ ಮಲೈಕಾ ಅರೋರಾ, ಪೂನಂ ದಮಾನಿಯಾ ಮತ್ತು ಮಸಾಬಾ ಗುಪ್ತಾ ಸಹ ಇದ್ದರು.

    ಪ್ರಸ್ತುತ ಕರೀನಾ ‘ಲಾಲ್ ಸಿಂಗ್ ಚಡ್ಡಾ’ ಸಿನಿಮಾ ಪೋಸ್ಟ್-ಪ್ರೊಡಕ್ಷನ್ ಕೆಲಸದಲ್ಲಿ ನಿರತರಾಗಿದ್ದು, ಅಮೀರ್ ಖಾನ್ ಜೊತೆ ಕಾಣಿಸಿಕೊಳ್ಳಲಿದ್ದಾರೆ. ಈ ಸಿನಿಮಾವನ್ನು ಅದವೈತ್ ಚಂದನ್ ನಿರ್ದೇಶನ ಮಾಡುತ್ತಿದ್ದಾರೆ. ಇದನ್ನೂ ಓದಿ: ಬಳ್ಳಾರಿ ಉಸ್ತುವಾರಿ ಬದಲಾಗದಿದ್ದರೆ ಜನವರಿಯಲ್ಲಿ ಸತ್ಯಾಗ್ರಹ ಆರಂಭಿಸುತ್ತೇನೆ: ಸೋಮಶೇಖರ್ ರೆಡ್ಡಿ

  • ಮುಂಬೈನಲ್ಲಿ 200 ರೂ. ದಂಡದ ಜೊತೆಗೆ ಉಚಿತ ಮಾಸ್ಕ್

    ಮುಂಬೈನಲ್ಲಿ 200 ರೂ. ದಂಡದ ಜೊತೆಗೆ ಉಚಿತ ಮಾಸ್ಕ್

    – ಸಾರ್ವಜನಿಕರ ಹಿತದೃಷ್ಟಿಯಿಂದ ಕ್ರಮ

    ಮುಂಬೈ: ಕೊರೊನಾ ಹಿನ್ನೆಲೆ ಮಾಸ್ಕ್ ಹಾಕುವುದನ್ನು ಉತ್ತೇಜಿಸುವ ಸಲುವಾಗಿ ಬೃಹತ್ ಮುಂಬೈ ಮಹಾನಗರ ಪಾಲಿಕೆ(ಬಿಎಂಸಿ) ಉತ್ತಮ ಕ್ರಮ ಕೈಗೊಂಡಿದ್ದು, ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ.

    ಸಾಮಾನ್ಯವಾಗಿ ಮಾಸ್ಕ್ ಹಾಕದ ಸಾರ್ವಜನಿಕರಿಗೆ ಸರ್ಕಾರ ಹಾಗೂ ನಗರ ಪಾಲಿಕೆಗಳು ದಂಡವನ್ನು ಮಾತ್ರ ವಿಧಿಸುತ್ತವೆ. ಆದರೆ ಬೃಹತ್ ಮುಂಬೈ ಮಹಾನಗರ ಪಾಲಿಕೆ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿದ್ದು, ಮಾಸ್ಕ್ ಹಾಕದವರಿಗೆ 200 ರೂ. ದಂಡದ ಜೊತೆಗೆ ಉಚಿತ ಮಾಸ್ಕ್ ನೀಡುವ ಕ್ರಮ ಕೈಗೊಳ್ಳಲಾಗಿದೆ. ಇದಕ್ಕೆ ಸಾರ್ವಜನಿಕರು ಸಹ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

    ಈ ಕುರಿತು ಪ್ರತಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಬಿಎಂಸಿ, ಏಪ್ರಿಲ್‍ನಿಂದ ನವೆಂಬರ್ 28ರ ವರೆಗೆ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಹಾಕದ 4.85 ಲಕ್ಷ ಜನರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಸುಮಾರು 10.7 ಕೋಟಿ ರೂ. ದಂಡ ಸಂಗ್ರಹಿಸಲಾಗಿದೆ. ಆದರೆ ದಂಡ ಪಾವತಿಸಿದ ಬಳಿಕ ಮಾಸ್ಕ್ ಹಾಕದ ವ್ಯಕ್ತಿ ಆ ದಿನ ಹಾಗೇ ಸಂಚರಿಸುತ್ತಾನೆ. ಇದರಿಂದ ಕೊರೊನಾ ನಿಯಮಗಳನ್ನು ಉಲ್ಲಂಘನೆ ಮಾಡಿದಂತಾಗುತ್ತದೆ. ಅಲ್ಲದೆ ಇದರಿಂದ ಕೊರೊನಾ ಹರಡುವ ಸಾಧ್ಯತೆ ಇರುತ್ತದೆ.

    ಈ ಎಲ್ಲ ಅಂಶಗಳನ್ನು ಪರಿಗಣಿಸಿ ಕೊರೊನಾ ನಿಯಮವನ್ನು ಪಾಲಿಸುವ ಉದ್ದೇಶದಿಂದ ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಮಾಸ್ಕ್ ಹಾಕದವರಿಗೆ 200 ರೂ. ದಂಡ ವಿಧಿಸಿ, ಬಳಿಕ ಉಚಿತ ಮಾಸ್ಕ್ ನೀಡಲಾಗುತ್ತದೆ. ದಂಡ ಪಾವತಿಸಿದ ರಶೀದಿಯಲ್ಲಿ ಉಚಿತ ಮಾಸ್ಕ್ ನೀಡಲಾಗಿದೆ ಎಂದು ಉಲ್ಲೇಖಿಸಲಾಗುತ್ತದೆ ಎಂದು ಪ್ರಕಣೆಯಲ್ಲಿ ತಿಳಿಸಿದೆ. ಮಹಾರಾಷ್ಟ್ರದಲ್ಲಿ ಅತೀ ಹೆಚ್ಚು ಕೊರೊನಾ ಪ್ರಕಣಗಳು ದಾಖಲಾಗಿದ್ದು, ಮುಂಬೈ ಒಂದರಲ್ಲೇ 2,82,821 ಪ್ರಕರಣಗಳು ಪತ್ತೆಯಾಗಿವೆ. ಅಲ್ಲದೆ 10,865 ಜನ ಸಾವನ್ನಪ್ಪಿದ್ದಾರೆ.

  • ಕಟ್ಟಡ ನೆಲಸಮ ಕೇಸ್‌ – ಕಂಗನಾಗೆ ಗೆಲುವು, ಬಿಎಂಸಿಗೆ ಹೈಕೋರ್ಟ್‌ ಚಾಟಿ

    ಕಟ್ಟಡ ನೆಲಸಮ ಕೇಸ್‌ – ಕಂಗನಾಗೆ ಗೆಲುವು, ಬಿಎಂಸಿಗೆ ಹೈಕೋರ್ಟ್‌ ಚಾಟಿ

    – ಬಿಎಂಸಿ ಕ್ರಮ ದುರುದ್ದೇಶದಿಂದ ಕೂಡಿದೆ
    – ವಿಲನ್‌ಗಳಿಗೆ ಕಂಗನಾ ಧನ್ಯವಾದ
    – ಕಂಗನಾ ಪರಿಹಾರ ಪಡೆಯಲು ಅರ್ಹರು

    ಮುಂಬೈ: ಬೃಹನ್‌ ಮುಂಬೈ ಮಹಾನಗರ ಪಾಲಿಕೆ(ಬಿಎಂಸಿ) ವಿರುದ್ಧದ ಕಾನೂನು ಹೋರಾಟದಲ್ಲಿ ಬಾಂಬೆ ಹೈಕೋರ್ಟ್‌ ನಟಿ ಕಂಗನಾ ರಾಣಾವತ್‌ ಪರವಾಗಿ ತೀರ್ಪು ನೀಡಿದ್ದು ಮಹಾರಾಷ್ಟ್ರ ಸರ್ಕಾರಕ್ಕೆ ಹಿನ್ನಡೆಯಾಗಿದೆ.

    ಕಂಗನಾ ರಣಾವತ್‌ ಅವರ ಕಟ್ಟಡವನ್ನು ಒಡೆದಿರುವ ಬಿಎಂಸಿ ಕ್ರಮ ದುರುದ್ದೇಶದಿಂದ ಕೂಡಿದೆ ಎಂದು ಹೇಳಿದ ಕೋರ್ಟ್‌ ಕಂಗನಾ ಸರ್ಕಾರದಿಂದ ಪರಿಹಾರ ಪಡೆಯಲು ಅರ್ಹರು ಎಂದು ಹೇಳಿದೆ.

    ನ್ಯಾ.ಎಸ್.ಜೆ.ಕಾತಾವಾಲ ಮತ್ತು ಆರ್.ಐ.ಚಾಗ್ಲಾ ಅವರನ್ನೊಳಗೊಂಡ ದ್ವಿಸದಸ್ಯ ಪೀಠ, ವ್ಯಕ್ತಿಯ ವಿರುದ್ಧ ಅಧಿಕಾರಿಗಳು ತೋಳ್ಬಲವನ್ನು ಪ್ರದರ್ಶಿಸುವುದನ್ನು ಒಪ್ಪಲಾಗದು. ಇದು ಕಾನೂನಿನ ದುರುಪಯೋಗ ಅಲ್ಲದೇ ಬೇರೇ ಏನೂ ಅಲ್ಲ ಎಂದು ಅಭಿಪ್ರಾಯಪಟ್ಟು ಬಿಎಂಸಿಗೆ ಚಾಟಿ ಬೀಸಿದೆ.

    ಅರ್ಜಿಯಲ್ಲಿ ಕಂಗನಾ 2 ಕೋಟಿ ರೂ.ಪರಿಹಾರ ಕೇಳಿದ ವಿಚಾರಕ್ಕೆ ಕೋರ್ಟ್‌, ಈ ಸಂಬಂಧವಾಗಿ ಕೋರ್ಟ್‌ ಓಬ್ಬರು ಮೌಲ್ಯಮಾಪಕರನ್ನು ನೇಮಿಸುತ್ತದೆ. ಇವರು ಕಟ್ಟಡಕ್ಕೆ ಆಗಿರುವ ಹಾನಿಯನ್ನು ಅಂದಾಜಿಸಿ 2021ರ ಮಾರ್ಚ್‌ ಒಳಗಡೆ ಸೂಕ್ತ ಆದೇಶವನ್ನು ಹೊರಡಿಸಬೇಕು ಎಂದು ಸೂಚಿಸಿದೆ. ತನ್ನ ಆದೇಶದಲ್ಲಿ ಕೋರ್ಟ್‌ ಅರ್ಜಿದಾರರು ಸರ್ಕಾರದ ಬಗ್ಗೆಅಭಿಪ್ರಾಯಗಳನ್ನು ಹೇಳುವಾಗ ಸಂಯಮವನ್ನು ತೋರಿಸಬೇಕು ಎಂದು ಹೇಳಿದೆ.

    ಕೋರ್ಟ್‌ ಆದೇಶಕ್ಕೆ ಪ್ರತಿಕ್ರಿಯಿಸಿದ ಕಂಗನಾ ಸತ್ಯಕ್ಕೆ ಜಯವಾಗಿದೆ. ಈ ಹೋರಾಟದಲ್ಲಿ ನನಗೆ ಧೈರ್ಯ ತುಂಬಿ ಪ್ರೋತ್ಸಾಹಿಸಿದ ಎಲ್ಲರಿಗೂ ಧನ್ಯವಾದಗಳು. ತೀರ್ಪು ಬರಲು ಕಾರಣರಾದ ʼವಿಲನ್‌ʼಗಳಿಗೂ ಧನ್ಯವಾದ ಎಂದು ಹೇಳಿದ್ದಾರೆ.

    ಏನಿದು ಪ್ರಕರಣ?
    ಸುಶಾಂತ್‌ ಸಿಂಗ್‌ ಪ್ರಕರಣದ ತನಿಖೆಯನ್ನು ಸರಿಯಾಗಿ ಮಾಡುತ್ತಿಲ್ಲ ಎಂದು ಆರೋಪಿಸಿ ಕಂಗನಾ ಮಹಾರಾಷ್ಟ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದರು. ಈ ಪ್ರಕರಣ ಚರ್ಚೆ ಆಗುತ್ತಿದ್ದಾಗಲೇ ಬಿಎಂಸಿ ಏಕಾಏಕಿ ಮುಂಬೈಯಲ್ಲಿದ್ದ ಕಂಗನಾ ಬಂಗಲೆಯನ್ನು ಕೆಡವಲು ಆದೇಶ ನೀಡಿತ್ತು.

    ಬಿಎಂಸಿ ಕಂಗನಾ ಅವರು ಅಕ್ರಮವಾಗಿ ಈ ಕಟ್ಟಡವನ್ನು ನಿರ್ಮಿಸಿದ್ದಾರೆ ಎಂದು ಹೇಳಿದ್ದರೆ, ಕಂಗನಾ ನಾನು ಅಕ್ರಮ ಎಸಗಿಲ್ಲ ಎಂದು ಹೇಳಿ ಕಂಗನಾ ಕೋರ್ಟ್‌ ಮೊರೆ ಹೋಗಿದ್ದರು.

    ಕೋರ್ಟ್‌ ಏನು ಹೇಳಿತ್ತು?
    ಬಾಂಬೆ ಹೈಕೋರ್ಟ್ 26 ಮಾರ್ಚ್ 2020ರಂದು ರಾಜ್ಯ ಸರ್ಕಾರ, ಬಿಎಂಸಿ ಮತ್ತು ಸಂಬಂಧಿತ ವಿಭಾಗಗಳು ಯಾರ ವಿರುದ್ಧವೂ ಆತುರದ ನಿರ್ಧಾರಗಳನ್ನ ತೆಗೆದುಕೊಳ್ಳುವಂತಿಲ್ಲ ಎಂದು ಆದೇಶ ನೀಡಿತ್ತು. ಮಾರ್ಚ್ 26ರ ಆದೇಶಕ್ಕೆ ಸಂಬಂಧಿಸಿದಂತೆ ಕೋವಿಡ್‌ 19 ಹಿನ್ನೆಲೆಯಲ್ಲಿ ಸೆಪ್ಟೆಂಬರ್‌ 30ರವರೆಗೆ ವಿಚಾರಣೆಯನ್ನು ವಿಸ್ತರಿಸಿತ್ತು. ಈ ಕಾಲಾವಧಿಯಲ್ಲಿ ಯಾರೇ ಸಮಸ್ಯೆ ಅನುಭವಿಸಿದ್ದರೂ ಹೈಕೋರ್ಟ್ ಬಾಗಿಲು ತಟ್ಟಬಹುದು ಎಂದು ನ್ಯಾಯಾಲಯ ಹೇಳಿತ್ತು. ಈ ನಡುವೆ ನೋಟಿಸ್‌ ನೀಡಿದ 24 ಗಂಟೆಯ ಒಳಗಡೆ ಸೆಪ್ಟೆಂಬರ್‌ 9ರಂದು ಬಾಂದ್ರಾದಲ್ಲಿರುವ ಕಂಗನಾ ಅವರಿಗೆ ಸೇರಿದ ಪಲಿಹಿಲ್ ಬಂಗಲೆ ಅಕ್ರಮವಾಗಿದೆ ಎಂದು ಆರೋಪಿಸಿ ಬಿಎಂಸಿ ಕಟ್ಟಡದ ಒಂದು ಭಾಗವನ್ನು ತೆರವುಗೊಳಿಸಿತ್ತು.

    ನ್ಯಾಯಾಲಯದ ಆದೇಶವಿದ್ದರೂ ಬಿಎಂಸಿ ಉದ್ದೇಶಪೂರ್ವಕವಾಗಿ ತನ್ನ ವಿರುದ್ಧ ಸೇಡು ಕೈಗೊಳ್ಳಲು ಬಂಗಲೆಯನ್ನು ಕೆಡವಿದೆ ಎಂದು ಕಂಗನಾ ವಾಗ್ದಾಳಿ ನಡೆಸಿದ್ದರು.