Tag: ಬಿಎಲ್ ಸಂತೋಷ್

  • ಮಹೇಶ್ ಶೆಟ್ಟಿ ತಿಮರೋಡಿಗೆ ಜೈಲಾ? ಬೇಲಾ? – ಇಂದು ಉಡುಪಿ ಕೋರ್ಟ್‌ನಲ್ಲಿ ಅರ್ಜಿ ವಿಚಾರಣೆ

    ಮಹೇಶ್ ಶೆಟ್ಟಿ ತಿಮರೋಡಿಗೆ ಜೈಲಾ? ಬೇಲಾ? – ಇಂದು ಉಡುಪಿ ಕೋರ್ಟ್‌ನಲ್ಲಿ ಅರ್ಜಿ ವಿಚಾರಣೆ

    ಉಡುಪಿ: ಬಿ.ಎಲ್ ಸಂತೋಷ್ (BL Santosh) ವಿರುದ್ಧ ಅವಹೇಳನಕಾರಿ ಮಾತುಗಳನ್ನಾಡಿ ಜೈಲು ಸೇರಿರುವ ಮಹೇಶ್ ಶೆಟ್ಟಿ ತಿಮರೋಡಿಗೆ (Mahesh Shetty Thimarody) ಇಂದು ಮಹತ್ವದ ದಿನವಾಗಿದೆ. ಗುರುವಾರ ಬ್ರಹ್ಮಾವರ ಪೊಲೀಸರು ತಿಮರೋಡಿಯನ್ನ ವಶಕ್ಕೆ ಪಡೆದು ಬಳಿಕ ಅರೆಸ್ಟ್ ಮಾಡಿದ್ದರು. ನಂತರ ಕೋರ್ಟ್ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿತ್ತು. ಹಿರಿಯಡ್ಕ ಸಬ್ ಜೈಲಿನಲ್ಲಿರುವ ತಿಮರೋಡಿಯ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಲಿದೆ.

    ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ವಿರುದ್ಧ ಮಾತನಾಡಿದ್ದಕ್ಕೆ ಬ್ರಹ್ಮಾವರ ಪೊಲೀಸರು ಮಹೇಶ್ ತಿಮರೋಡಿಯನ್ನು ಬಂಧಿಸಿ ಆನಂತರ ಹೈಡ್ರಾಮಾ ನಡೆದು ಕೋರ್ಟ್‌ಗೆ ಹಾಜರು ಪಡಿಸಿದರು. ವಿಚಾರಣೆ ನಡೆಸಿದ ನ್ಯಾಯಾಲಯ 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿತ್ತು. ಹಿರಿಯಡ್ಕ ಸಬ್ ಜೈಲಿನಲ್ಲಿರುವ ಮಹೇಶ್ ತಿಮರೋಡಿ ಪ್ರತ್ಯೇಕ ಸೆಲ್‌ನಲ್ಲಿ ಚಡಪಡಿಸುತ್ತಾ ಎರಡು ದಿನ ಕಳೆದಿದ್ದಾರೆ. ತಿಮರೋಡಿ ಭೇಟಿಗೆ ಬಂದ ಬೆಂಬಲಿಗರಿಗೆ ಅವಕಾಶವೂ ಸಿಕ್ಕಿಲ್ಲ. ಬಿಪಿ ಏರುಪೇರು ಆದ ಕಾರಣ ವೈದ್ಯರನ್ನು ಕರೆಸಿ ತಪಾಸಣೆ ಮಾಡಿಸಲಾಗಿದೆ. ಇದನ್ನೂ ಓದಿ: ಭೀಮಾ ನದಿಗೆ 2.10 ಲಕ್ಷ ಕ್ಯೂಸೆಕ್ ನೀರು ರಿಲೀಸ್‌ – ಯಲ್ಲಮ್ಮ ದೇವಿ ದೇವಸ್ಥಾನ ಜಲಾವೃತ

    ಗುರುವಾರ ಬ್ರಹ್ಮಾವರ ನ್ಯಾಯಾಲಯದಲ್ಲಿ ವಿಚಾರಣೆ ನಡೆದಿತ್ತು. ಸಂಚಾರಿ ಪೀಠವಾದ ಕಾರಣ ಇಂದು ಉಡುಪಿ ಜಿಲ್ಲಾ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಲಿದೆ. ತಿಮರೋಡಿ ಬೇಲ್ ಸಂಬಂಧ ಕೋರ್ಟ್‌ನಲ್ಲಿ ಯಾವೆಲ್ಲಾ ಅಂಶಗಳ ಮೇಲೆ ವಾದ-ಪ್ರತಿವಾದ ನಡೆಯಲಿದೆ? ನ್ಯಾಯಾಲಯದ ಮುಂದೆ ಇರುವ ಆಯ್ಕೆಗಳೇನು ಎಂಬುದನ್ನು ಈ ಕೆಳಗೆ ನೀಡಲಾಗಿದೆ. ಇದನ್ನೂ ಓದಿ: Nelamangala | 16 ವರ್ಷದ ಬಾಲಕಿ ನೇಣಿಗೆ ಶರಣು

    ನ್ಯಾಯಾಲಯದ ಮುಂದೆ ಹಲವು ಆಯ್ಕೆಗಳು:
    -ಪಬ್ಲಿಕ್ ಪ್ರಾಸಿಕ್ಯೂಟರ್ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ಕೇಳಬಹುದು.
    -ಪಬ್ಲಿಕ್ ಪ್ರಾಸಿಕ್ಯೂಟರ್ ಆಕ್ಷೇಪಣೆ ಸಲ್ಲಿಸಿ ವಾದ-ಪ್ರತಿವಾದ.
    -ವಾದ-ಪ್ರತಿವಾದ ನಡೆದು ತೀರ್ಪನ್ನು ಕಾಯ್ದಿರಿಸುವ ಅವಕಾಶ.
    -ಮಹೇಶ್ ಶೆಟ್ಟಿ ತಿಮರೋಡಿಗೆ ಬೇಲ್ ಸಿಗಬಹುದು.
    -ಬೇಲ್ ಸಿಕ್ಕ ನಂತರವೂ ಬಾಡಿ ವಾರೆಂಟ್ ಪಡೆದು ಮತ್ತೆ ಅರೆಸ್ಟ್ ಸಾಧ್ಯತೆ.
    -ಬೆಳ್ತಂಗಡಿ ಕೇಸ್‌ನ ಆಧಾರದಲ್ಲಿ ಬಾಡಿ ವಾರೆಂಟ್ ಮೇಲೆ ಮತ್ತೆ ಬಂಧಿಸಬಹುದು.
    -ಈ ಮಧ್ಯೆ ಆರೋಪಿ ಹೈಕೋರ್ಟ್ನಿಂದ ಸ್ಟೇ ತರಲು ಅವಕಾಶ ಇದೆ.
    -ಬಿ.ಎಲ್ ಸಂತೋಷ್ ವಿರುದ್ಧ ಮಾತನಾಡಿದ ಕೇಸ್‌ಗೆ ಸ್ಟೇ ಪಡೆಯಬಹುದು.
    -ತಡೆಯಾಜ್ಞೆ ಸಿಕ್ಕರೆ ಆರೋಪಿ ತಿಮರೋಡಿ ಬಿಡುಗಡೆಯೂ ಆಗಬಹುದು.

    ಒಟ್ಟಾರೆ ಬಿ.ಎಲ್ ಸಂತೋಷ್ ವಿರುದ್ಧ ಮಾತನಾಡಿ ಜೈಲು ಸೇರಿರುವ ತಿಮರೋಡಿಗೆ ಇಂದು ಕೋರ್ಟ್‌ನಲ್ಲಿ ಬೇಲ್ ಸಿಗುತ್ತಾ? ಇಲ್ವಾ ಅನ್ನೋದು ಸದ್ಯದ ಕುತೂಹಲದ ಸಂಗತಿಯಾಗಿದೆ. ಇದನ್ನೂ ಓದಿ: ರಷ್ಯಾ ತೈಲ ಖರೀದಿಸಲು ಸಾಧ್ಯವಾಗದಿದ್ರೆ ಭಾರತಕ್ಕಿರೋ ಆಯ್ಕೆಗಳೇನು? – ಅಮೆರಿಕಗೆ ಭಾರತವೇ ಯಾಕೆ ಟಾರ್ಗೆಟ್?‌

  • ಮಹೇಶ್‌ ಶೆಟ್ಟಿ ತಿಮರೋಡಿಯನ್ನು ಒದ್ದು ಒಳಗೆ ಹಾಕಿದ್ದೀವಿ: ಡಿಕೆಶಿ

    ಮಹೇಶ್‌ ಶೆಟ್ಟಿ ತಿಮರೋಡಿಯನ್ನು ಒದ್ದು ಒಳಗೆ ಹಾಕಿದ್ದೀವಿ: ಡಿಕೆಶಿ

    ಬೆಂಗಳೂರು: ಮಹೇಶ್‌ ಶೆಟ್ಟಿ ತಿಮರೋಡಿಯನ್ನು (Mahesh Shetty Thimarody) ಒದ್ದು ಒಳಗೆ ಹಾಕಿದ್ದೀವಿ ಎಂದು ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ಹೇಳಿದ್ದಾರೆ.

    ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಬಿ.ಎಲ್ ಸಂತೋಷ್ (BL Santosh) ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಬ್ರಹ್ಮಾವರ ಪೊಲೀಸರು ಮಹೇಶ್‌ ಶೆಟ್ಟಿ ತಿಮರೋಡಿಯನ್ನು ಬಂಧಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಕೆಶಿ ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು. ಇದನ್ನೂ ಓದಿ: ಮಟ್ಟಣ್ಣನವರ್‌ ಸೇರಿದಂತೆ ಹಲವರ ಮೇಲೆ ಕೇಸ್‌ ದಾಖಲು

     

    ಮೊಹಂತಿ ಮತ್ತು ತಂಡ ಕ್ಲೀನ್‌ ಆಗಿ ಕೆಲಸ ಮಾಡುತ್ತಿದೆ. ಬಿಎಲ್‌ ಸಂತೋಷ್‌ ಬಿಜೆಪಿಯ ರಾಷ್ಟ್ರೀಯ ಕಾರ್ಯದರ್ಶಿಯಾಗಿದ್ದಾರೆ. ರಾಜಕೀಯವಾಗಿ ನಮಗೂ ಅವರಿಗೂ 100 ವಿರೋಧ ಇರಬಹುದು. ಏನೇ ಹೋರಾಟ ಮಾಡುವುದಿದ್ದರೂ ಸೈದ್ಧಾಂತಿಕವಾಗಿ ಮಾಡಬೇಕು. ಅದನ್ನು ಬಿಟ್ಟು ವೈಯಕ್ತಿಕವಾಗಿ ತೇಜೋವಧೆ ಮಾಡಬಾರದು ಎಂದರು. ಇದನ್ನೂ ಓದಿಧರ್ಮಸ್ಥಳ ಕೇಸ್‌- ಮೊದಲ ಬಾರಿಗೆ ಮೌನ ಮುರಿದ ಸಿಎಂ

    ಈ ಹಿಂದೆ ಆ ವ್ಯಕ್ತಿ ನನ್ನ ವಿರುದ್ಧವೂ ಮಾತನಾಡಿದ್ದ. ಸಿಎಂ ವಿರುದ್ಧವೂ ಮಾತನಾಡಿದ್ದ. ಆರೋಪ ಮಾಡುವುದಾದರೆ ದಾಖಲೆ ಇಟ್ಟು ಮಾತನಾಡಬೇಕು. ಮಾತನಾಡಿದನ ಹತ್ತಿರ ಏನು ದಾಖಲೆ ಇದೆ? ವಿರೋಧಿಗಳ ವಿರುದ್ಧ ಮಾತನಾಡಿದ್ದಾನೆ ಅಂತ ನಾವು ಖುಷಿ ಪಡುವುದಲ್ಲ. ಮುಂದೆ ನಮ್ಮ ವಿರುದ್ಧವೂ ಆತ ಮಾತನಾಡಬಹುದು. ಯಾವುದೇ ಕಾರಣಕ್ಕೂ ಕರ್ನಾಟಕದಲ್ಲಿ ಇವುಗಳಿಗೆಲ್ಲ ನಾವು ಅನುಮತಿ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

  • ಬಿ.ಎಲ್ ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ – ಮಹೇಶ್ ಶೆಟ್ಟಿ ತಿಮರೋಡಿ ಅರೆಸ್ಟ್‌

    ಬಿ.ಎಲ್ ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ – ಮಹೇಶ್ ಶೆಟ್ಟಿ ತಿಮರೋಡಿ ಅರೆಸ್ಟ್‌

    ಮಂಗಳೂರು: ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ (BL Santosh) ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಸಾಮಾಜಿಕ ಕಾರ್ಯಕರ್ತ ಮಹೇಶ್ ಶೆಟ್ಟಿ ತಿಮರೋಡಿಯನ್ನು (Mahesh Shetty Thimarodi) ಬ್ರಹ್ಮಾವರ ಪೊಲೀಸರು ಬಂಧಿಸಿದ್ದಾರೆ.

    ಫೇಸ್‌ಬುಕ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದ ತಿಮರೋಡಿ, ಬಿ.ಎಲ್ ಸಂತೋಷ್ ವಿರುದ್ಧ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದರು. ಈ ಕುರಿತು ರಾಜೀವ್ ಕುಲಾಲ್ ಅವರು ನೀಡಿದ ದೂರಿನ ಮೇರೆಗೆ ಬ್ರಹ್ಮಾವರ ಠಾಣೆಯಲ್ಲಿ BNS 196(1),352,353(2) ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ತಿಮರೋಡಿಗೆ ಬ್ರಹ್ಮಾವರ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದ್ದರು. 2 ಬಾರಿ ನೋಟಿಸ್‌ ಜಾರಿಮಾಡಿದ್ದರೂ ವಿಚಾರಣೆಗೆ ಹಾಜರಾಗದ ಕಾರಣ ಉಜಿರೆಯ ಮನೆಯಲ್ಲಿ ಇಂದು ಬೆಳಗ್ಗೆ ವಶಕ್ಕೆ ಪಡೆಯಲಾಗಿತ್ತು. ಕೆಲಕಾಲ ವಿಚಾರಣೆ ಬಳಿಕ ಬಂಧಿಸಿದ್ದಾರೆ. ಇದನ್ನೂ ಓದಿ: ನನ್ನ ಜೀವಕ್ಕೆ ಹಾನಿಯಾದ್ರೆ ರಾಜ್ಯ ಸರ್ಕಾರ, ಇಡೀ ಬಿಜೆಪಿ ಹೊಣೆ: ತಿಮರೋಡಿ ಫಸ್ಟ್‌ ರಿಯಾಕ್ಷನ್‌

    ತಿಮರೋಡಿಯ ಉಜಿರೆ ನಿವಾಸದಲ್ಲಿ ಹೈಡ್ರಾಮಾ
    ಇನ್ನೂ ಬೆಳಗ್ಗೆ ಉಡುಪಿ ಜಿಲ್ಲೆಯ ಬ್ರಹ್ಮಾವರ ಠಾಣೆಯ 30ಕ್ಕೂ ಹೆಚ್ಚು ಪೊಲೀಸರು 8ಕ್ಕೂ ಹೆಚ್ಚು ವಾಹನಗಳಲ್ಲಿ ಭಾರೀ ಬಂದೋಬಸ್ತ್‌ನಿಂದ ಉಜಿರೆಯಲ್ಲಿರುವ ಮಹೇಶ್ ಶೆಟ್ಟಿ ತಿಮರೋಡಿ ನಿವಾಸಕ್ಕೆ ತೆರಳಿದ್ರು. ಪೊಲೀಸರು ತೆರಳಿದ್ದ ವೇಳೆ ಮಹೇಶ್ ಶೆಟ್ಟಿ ಹಾಗೂ ಅವರ ಆಪ್ತ ಬಳಗ ಉಜಿರೆಯ ನಿವಾಸದಲ್ಲೇ ಇದ್ದರು. ತಿಮರೋಡಿಯನ್ನು ವಶಕ್ಕೆ ಪಡೆಯಲು ಪೊಲೀಸ್ರು ಮುಂದಾದಾಗ ಮತ್ತೊಬ್ಬ ಹೋರಾಟಗಾರ ಗಿರೀಶ್ ಮಟ್ಟಣ್ಣನವರ್ ಸೇರಿದಂತೆ ಹಲವು ಬೆಂಬಲಿಗರು ವಿರೋಧಿಸಿದ್ರು. ತಿಮರೋಡಿಯನ್ನು ವಶಕ್ಕೆ ಪಡೆಯೋದು ಸರಿಯಲ್ಲ. ಯಾವ ಕಾರಣಕ್ಕೆ ವಶಕ್ಕೆ ಪಡೆಯುತ್ತಿದ್ದೀರಿ. ಅರೆಸ್ಟ್ ವಾರೆಂಟ್ ತೋರಿಸಿ.. ನಾವು ಠಾಣೆಗೆ ಬಂದಿಲ್ಲ ಅಂದಾಗ ಕ್ರಮ ಕೈಗೊಳ್ಳಿ ಎಂದು ವಾದಿಸಿದ್ರು.

    ಮನೆಯ ಆವರಣದಲ್ಲಿ ಪೊಲೀಸರು ಹಾಗೂ ಬೆಂಬಲಿಗರ ನಡುವೆ ವಾಗ್ವಾದ ಜೋರಾಗ್ತಿದ್ರೆ, ಇತ್ತ ಮನೆಯ ಕೋಣೆಯನ್ನು ಲಾಕ್ ಮಾಡಿ ತಿಮರೋಡಿ ಕೂತಿದ್ರು. ತಿಮರೋಡಿಯನ್ನು ತಮ್ಮ ವಶಕ್ಕೆ ಪಡೆಯುವ ಸಂದರ್ಭದಲ್ಲಿ ಅವ್ರ ವಕೀಲರು, ಬೆಂಬಲಿಗರು ಪೊಲೀಸರಿಗೆ ಕ್ಲಾರಿಟಿ ಕೊಡಿ ಎಂದು ಒತ್ತಾಯಿಸಿದ್ರು. ಇದಕ್ಕೆ ಪೊಲೀಸರು, ತಿಮರೋಡಿಯವ್ರೇ ಹೊರ ಬರಲಿ ಎಂದು ಹೇಳಿದ್ದಾರೆ. ಹೀಗಾಗಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಇದನ್ನೂ ಓದಿ: ಗಿರೀಶ್ ಮಟ್ಟಣ್ಣನವರ್, ತಿಮರೋಡಿ, ಸಮೀರ್ ವಿರುದ್ಧ ಸ್ನೇಹಮಯಿ ಕೃಷ್ಣ ದೂರು

    ತಮ್ಮ ಕಾರಿನಲ್ಲೇ ಠಾಣೆಗೆ ತೆರಳಿದ ತಿಮರೋಡಿ
    ವಾಗ್ದಾದ, ಕೆಲಕಾಲ ಉದ್ವಿಗ್ನ ವಾತಾವರಣ ಬಳಿಕ ಭಾರೀ ಹೈಡ್ರಾಮಾ ಸೃಷ್ಟಿಯಾದರೂ ಮಹೇಶ್ ಶೆಟ್ಟಿ ತಿಮರೋಡಿಯನ್ನು ಪೊಲೀಸರು ಬಂಧಿಸಿದ್ರು. ಆದರೆ ಪೊಲೀಸ್ ವಾಹನದಲ್ಲಿ ಬರುವುದಿಲ್ಲ ಎಂದು ತಿಮರೋಡಿ ನಿರಾಕರಿಸಿದ್ದಾರೆ. ನಂತರ ಅವರೇ ಬರುವುದಾಗಿ ಹೇಳಿದ್ದಾರೆ. ಹೀಗಾಗಿ ಪೊಲೀಸರ ಸುಪರ್ಧಿಯಲ್ಲೇ ತಿಮರೋಡಿ ಖಾಸಗಿ ವಾಹನದಲ್ಲೇ ತೆರಳಿದ್ರು. ಇದೇ ವಾಹನದಲ್ಲಿ ಮತ್ತೊಬ್ಬ ದೂರುದಾರ ಜಯಂತ್, ಗಿರೀಶ್ ಮಟ್ಟಣ್ಣನವರ್ ಸಹ ತೆರಳಿದ್ರು.

    ಅತ್ಯಾಚಾರಿಗಳ ಬಂಧನಕ್ಕೆ ಆಗ್ರಹ
    ಇನ್ನು ಮನೆಯಿಂದ ಪೊಲೀಸರು ಕರೆದೊಯ್ಯುತ್ತಿದ್ದಾಗ ಮಹೇಶ್ ಶೆಟ್ಟಿ ತಿಮರೋಡಿ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುಳ್ಳು ಕೇಸ್ ಮಾಡಿ ವಶಕ್ಕೆ ಪಡೆದಿದ್ದಾರೆ. ಬಿಜೆಪಿಯವರ ಸುಳ್ಳು ದಾಖಲೆ. ಬಿಜೆಪಿಯವರ ಪಾಪದ ಕೂಸು, ಸೌಜನ್ಯಳಿಗೆ ನ್ಯಾಯ ಸಿಗಬೇಕು. ಅತ್ಯಾಚಾರಿಗಳ ಬಂಧನ ಆಗಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಬಿಎಲ್‌ ಸಂತೋಷ್‌ ವಿರುದ್ಧ ಅವಹೇಳನ – ಮಹೇಶ್ ಶೆಟ್ಟಿ ತಿಮರೋಡಿ ಪೊಲೀಸ್‌ ವಶಕ್ಕೆ

  • ಅಣುಬಾಂಬ್‌ ಪರೀಕ್ಷೆಯನ್ನು ವಿಶ್ವವೇ ವಿರೋಧಿಸಿದಾಗ ಇನ್ನೂ 2 ಬಾಂಬ್‌ ಪರೀಕ್ಷೆ ಮಾಡಿ ಅಂದವರು ಅಟಲ್‌ಜೀ: ಬಿಎಲ್‌ ಸಂತೋಷ್‌

    ಅಣುಬಾಂಬ್‌ ಪರೀಕ್ಷೆಯನ್ನು ವಿಶ್ವವೇ ವಿರೋಧಿಸಿದಾಗ ಇನ್ನೂ 2 ಬಾಂಬ್‌ ಪರೀಕ್ಷೆ ಮಾಡಿ ಅಂದವರು ಅಟಲ್‌ಜೀ: ಬಿಎಲ್‌ ಸಂತೋಷ್‌

    ಬೆಂಗಳೂರು: ಪಾಕಿಸ್ತಾನದ ಜೊತೆ ಸ್ನೇಹಕ್ಕೂ ಸಿದ್ಧ, ಸಮರಕ್ಕೂ ಸಿದ್ದ ಅಂತ ತೋರಿಸಿಕೊಟ್ಟವರು ಅಟಲ್ ಜೀ ಎಂದು ಬಿಜೆಪಿ ರಾಷ್ಟ್ರೀಯ ಸಂಘಟನೆ ಕಾರ್ಯದರ್ಶಿ ಬಿಎಲ್‌ ಸಂತೋಷ್ ಹೇಳಿದ್ದಾರೆ.

    ಟೌನ್ ಹಾಲ್‌ನಲ್ಲಿ ನಡೆದ ವಾಜಪೇಯಿರವರ ಜನ್ಮ ಶತಮಾನೋತ್ಸವ ಕಾರ್ಯಕ್ರಮದಲ್ಲಿ ವಾಜಪೇಯಿ ಅವರ ಸ್ಮರಣೆ ಸಂಚಿಕೆಯನ್ನು ಬಿಡುಗಡೆ ಮಾಡಿ ಮಾತನಾಡಿದರು.

    ಅಣುಬಾಂಬ್ ಪರೀಕ್ಷೆ ಮಾಡಿದಾಗ ಅಂದು ಅಮೆರಿಕ ವಿರೋಧ ಮಾಡಿತ್ತು. ವಿಶ್ವವೇ ನಮ್ಮನ್ನ ವಿರೋಧ ಮಾಡುವ ಹೆದರಿಕೆ ಹಾಕಿದಾಗ ಇನ್ನು 2 ಬಾಂಬ್ ಪರೀಕ್ಷೆ ಮಾಡಿ ಅಂತ ಹೇಳಿದವರು ಅಟಲ್ ಅಂತ ನೆನಪಿಸಿಕೊಂಡರು.ಇದನ್ನೂ ಓದಿ: ಆರ್‌ಎಸ್‌ಎಸ್ಭಾರತದ ತಾಲಿಬಾನ್‌: ಬಿಕೆ ಹರಿಪ್ರಸಾದ್

     

    ಸಿಎಂ ಸಿದ್ದರಾಮಯ್ಯ ವಿರುದ್ಧವೂ ವಾಗ್ದಾಳಿ ನಡೆಸಿದ ಅವರು, ಆರ್‌ಎಸ್‌ಎಸ್ ಬಗ್ಗೆ ಪ್ರಧಾನಿ ಮಾತಾನಾಡಿದ್ದಕ್ಕೆ ಇಲ್ಲಿ ಸಿದ್ದರಾಮಯ್ಯ ವಟವಟ ಅಂತ ಟ್ವೀಟ್ ಮಾಡಿದ್ದಾರೆ. ನೀವು ಎಷ್ಟೇ ಟ್ವೀಟ್ ಮಾಡಿದರೂ ವೈಚಾರಿಕ, ಸೈದ್ಧಾಂತಿಕವಾಗಿ ಬಿಜೆಪಿ ಜೊತೆ ಆರ್‌ಎಸ್‌ಎಸ್ ಇದ್ದೇ ಇರುತ್ತದೆ. ಮುಖ್ಯಮಂತ್ರಿ ಸ್ಥಾನ ಸಿಗದ್ದಕ್ಕೆ ಬೇರೆ ಪಕ್ಷಕ್ಕೆ ಹೋಗುವುದು. ಈಗ ಇಳಿಸುತ್ತಾರೆ ಎಂದು ಬೇರೆ ಪ್ಲ್ಯಾನ್ ಮಾಡುವ ಕೆಲಸ ಬಿಜೆಪಿಯಲ್ಲಿ ಆಗುವುದಿಲ್ಲ ಎಂದು ಕಿಡಿಕಾರಿದರು.

    ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ವಿಪಕ್ಷ ನಾಯಕರಾದ ಅಶೋಕ್, ಚಲವಾದಿ ನಾರಾಯಣಸ್ವಾಮಿ, ಮಾಜಿ ಸಿಎಂ ಸದಾನಂದಗೌಡ, ತೇಜಸ್ವಿನಿ ಅನಂತ್ ಕುಮಾರ್ ಭಾಗಿಯಾಗದ್ದರು.

  • ಬಿಜೆಪಿಯಲ್ಲಿ ತೀವ್ರಗೊಂಡ ಬಣ ಕಚ್ಚಾಟ – ವಸ್ತುಸ್ಥಿತಿ ವರದಿ ಪಡೆಯಲು ರಾಜ್ಯಕ್ಕೆ ಬಿಎಲ್ ಸಂತೋಷ್ ಎಂಟ್ರಿ

    ಬಿಜೆಪಿಯಲ್ಲಿ ತೀವ್ರಗೊಂಡ ಬಣ ಕಚ್ಚಾಟ – ವಸ್ತುಸ್ಥಿತಿ ವರದಿ ಪಡೆಯಲು ರಾಜ್ಯಕ್ಕೆ ಬಿಎಲ್ ಸಂತೋಷ್ ಎಂಟ್ರಿ

    ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ (BJP) ಕಳೆದ ಒಂದು ವರ್ಷದಿಂದ ನಡೆಯುತ್ತಿರುವ ಆಂತರಿಕ ಕಚ್ಚಾಟ ಮತ್ತಷ್ಟು ತೀವ್ರಗೊಂಡಿದೆ. ಪರಸ್ಪರ ವೈಯಕ್ತಿಕ ನಿಂದನೆ ಹೆಚ್ಚಾಗಿದೆ. ರಾಜ್ಯ ಘಟಕ ಅಧ್ಯಕ್ಷ ಸ್ಥಾನದ ಚುನಾವಣೆ ಸಮೀಪ ಪರಿಸ್ಥಿತಿ ಕೈ ಮೀರಿದ್ದು, ವಸ್ತುಸ್ಥಿತಿ ಪಡೆಯಲು ಬಿಎಲ್ ಸಂತೋಷ್ (B. L. Santhosh) ರಾಜ್ಯಕ್ಕೆ ಬಂದಿದ್ದಾರೆ. ಈ ಮಧ್ಯೆ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸುನಿಲ್ ಕುಮಾರ್ (Sunil Kumar) ವಿಮುಕ್ತಿ ಕೇಳೋ ಮೂಲಕ ನಾಯಕರಿಗೆ ಶಾಕ್ ಕೊಟ್ಟಿದ್ದಾರೆ.

    ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ಸಮೀಪಿಸುತ್ತಿದೆ. ಈ ಚುನಾವಣೆ ಪಕ್ಷದೊಳಗಿನ ಬಣಗಳ ಮಧ್ಯೆ ಬಲ ಪ್ರದರ್ಶನಕ್ಕೆ ವೇದಿಕೆ ಆಗುವ ಎಲ್ಲಾ ಲಕ್ಷಣಗಳೂ ಈಗಿಂದಲೇ ಕಾಣಿಸುತ್ತಿದೆ. ಹೌದು, ಬಿಜೆಪಿ ಮನೆ ಬಿರುಕು ಮುಚ್ಚಲಾಗದಷ್ಟು ಹೆಚ್ಚಾಗಿದ್ದು, ಆಂತರಿಕ ಕಚ್ಚಾಟ ಉಲ್ಬಣಗೊಂಡಿದೆ. ಯತ್ನಾಳ್ ತಂಡ ಹಾಗೂ ವಿಜಯೇಂದ್ರ ಮಧ್ಯೆ ವಾಕ್ಸಮರ ತೀವ್ರಗೊಂಡಿದ್ದು, ವೈಯಕ್ತಿಕ ಹಂತಕ್ಕೆ ಹೋಗಿದೆ. ಇದನ್ನೂ ಓದಿ: ಒಂದೇ ವಾರದಲ್ಲಿ ಇಬ್ಬರಿಗೆ ಕೆಎಫ್‌ಡಿ ಸೋಂಕು – ಆತಂಕದಲ್ಲಿ ಕಾಫಿನಾಡ ಜನ

    ರಮೇಶ್ ಜಾರಕಿಹೊಳಿಯವರು ಇತ್ತೀಚೆಗಷ್ಟೇ ಯಡಿಯೂರಪ್ಪ ಪ್ರವಾಸದ ಬಗ್ಗೆ ಟೀಕೆ ಮಾಡಿದ್ದರು. ಇದರಿಂದ ಕೆರಳಿದ ವಿಜಯೇಂದ್ರ ನಾಲಿಗೆ ಬಿಗಿ ಹಿಡಿದು ಮಾತನಾಡುವಂತೆ ಎಚ್ಚರಿಕೆ ಕೊಟ್ಟಿದ್ದರು. ಅಲ್ಲದೇ ತಾವೇ ಮುಂದಿನ ಅಧ್ಯಕ್ಷ ಆಗೋದು ಖಚಿತ ಎಂದು ಭಿನ್ನರನ್ನು ಕೆಣಕಿದ್ದರು. ಇದರಿಂದ ರೆಬೆಲ್ ಪಡೆ ಉಗ್ರರೂಪ ತಾಳಿ ವಿಜಯೇಂದ್ರ ಹಾಗೂ ಯಡಿಯೂರಪ್ಪ ವಿರುದ್ಧ ವೈಯಕ್ತಿಕ ಹಂತಕ್ಕಿಳಿದು ವಾಕ್ಸಮರ ನಡೆಸುತ್ತಿದೆ. ವಿಜಯೇಂದ್ರ ಬಚ್ಚಾ, ರಾಜ್ಯಾಧ್ಯಕ್ಷ ಆಗಲು ಯೋಗ್ಯರಲ್ಲ, ಕಲೆಕ್ಷನ್ ಮಾಸ್ಟರ್, ಯಡಿಯೂರಪ್ಪ ಜೈಲಿಗೆ ಹೋಗಲು ವಿಜಯೇಂದ್ರ ಕಾರಣ ಎಂದೆಲ್ಲಾ ಯತ್ನಾಳ್-ರಮೇಶ್ ಜಾರಕಿಹೊಳಿ ವಾಗ್ದಾಳಿ ನಡೆಸಿದ್ದಾರೆ. ಯಡಿಯೂರಪ್ಪ ಕೂಡ ಹಲವರಿಗೆ ಮೋಸ ಮಾಡಿದ್ದು, ಈಗ ಮೊಮ್ಮಕ್ಕಳ ಜೊತೆ ಆಟ ಆಡಿಕೊಂಡಿರಲಿ, ಪುತ್ರ ವ್ಯಾಮೋಹ ಬಿಡಲಿ ಎಂದು ಯತ್ನಾಳ್, ಟೀಕಿಸಿದ್ದಾರೆ. ರಾಜ್ಯಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದರೆ, ತಮ್ಮ ಕಡೆಯಿಂದಲೂ ಒಬ್ಬರ ಸ್ಪರ್ಧೆ ಖಚಿತ ಎಂದು ಭಿನ್ನರು ಸವಾಲೆಸೆದಿದ್ದಾರೆ. ಇದನ್ನೂ ಓದಿ: ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ – ಇಬ್ಬರು ಮಕ್ಕಳು ಸೇರಿ ನಾಲ್ವರು ಸಜೀವ ದಹನ

    ಇತ್ತ ವಿಜಯೇಂದ್ರ ಸಹ ರೆಬೆಲ್ ತಂಡವನ್ನ ಕೆಣಕಿದ್ದಾರೆ. ವರಿಷ್ಠರು ನನ್ನನ್ನೇ ಮತ್ತೊಂದು ಅವಧಿಗೆ ಮುಂದುವರೆಸುವ ವಿಶ್ವಾಸ ಇದೆ ಎಂದು ಹೇಳಿದ್ದಾರೆ. ಆದರೆ ಬಿಎಸ್‌ವೈ ಪ್ರವಾಸದ ಬಗ್ಗೆ ಮಾತಾಡಿದ್ದ ರಮೇಶ್ ಜಾರಕಿಹೊಳಿ ವಿರುದ್ಧ ಗುಡುಗಿದ ವಿಜಯೇಂದ್ರ ರಾಯಚೂರಿನಲ್ಲಿ ಇಂದು ಮಾತನಾಡಿ, ಯತ್ನಾಳ್‌ಗೆ ಒಳ್ಳೆಯದಾಗಲಿ, ಅವರಿಗೆಲ್ಲ ಭಗವಂತ ಒಳ್ಳೆಯದು ಮಾಡಲಿ ಎಂದಿದ್ದಾರೆ. ಇದನ್ನೂ ಓದಿ: ಜಾತಿನಿಂದನೆ ಪದ ಬಳಕೆ – ರಟಕಲ್ ಪಿಎಸ್‌ಐ ಸಸ್ಪೆಂಡ್

    ಇತ್ತ ಪಕ್ಷದ ಬಣ ಕದನದ ಬಗ್ಗೆ ಹಲವರು ರಕ್ಷಣಾತ್ಮಕ ಹೇಳಿಕೆ ಕೊಡುತ್ತಿದ್ದಾರೆ. ಸಂಸದ ಜಗದೀಶ್ ಶೆಟ್ಟರ್ ಮಾತಾಡಿ, ಪಕ್ಷದ ವಿದ್ಯಮಾನಗಳು ಹೈಕಮಾಂಡ್ ಗಮನಕ್ಕಿವೆ. ಎಲ್ಲವನ್ನೂ ವರಿಷ್ಠರು ಸರಿಪಡಿಸ್ತಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ವಿಜಯೇಂದ್ರ ಸಿಎಂ ಆಗೋದನ್ನ ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ – ಕೆ.ಶಿವನಗೌಡ ನಾಯಕ್

    ಪಕ್ಷದಲ್ಲಿ ಇಷ್ಟೆಲ್ಲಾ ಜಟಾಪಟಿ ನಡೀತಿರುವ ನಡುವೆ ನಾಯಕರಿಗೆ ಶಾಸಕ ಸುನಿಲ್ ಕುಮಾರ್ ಶಾಕ್ ಕೊಟ್ಟಿದ್ದಾರೆ. ತಮ್ಮನ್ನು ಪ್ರಧಾನ ಕಾರ್ಯದರ್ಶಿ ಸ್ಥಾನದಿಂದ ವಿಮುಕ್ತಿಗೊಳಿಸಲು ಸುನಿಲ್ ಕುಮಾರ್ ವಿಜಯೇಂದ್ರ ಹಾಗೂ ಬಿ ಎಲ್ ಸಂತೋಷ್ ಬಳಿ ಕೇಳಿಕೊಂಡಿದ್ದು, ಮತ್ತಷ್ಟು ಗೊಂದಲ ಸೃಷ್ಟಿಸಿದೆ. ಸುನಿಲ್ ಕುಮಾರ್ ರಾಜೀನಾಮೆ ಕೊಡಲು ಮುಂದಾಗಿದ್ದಕ್ಕೆ ವಿಜಯೇಂದ್ರ ಕಾರಣ ಎಂದು ಯತ್ನಾಳ್ ಆರೋಪಿಸಿದ್ದಾರೆ. ಇದನ್ನೂ ಓದಿ: ವಿಶೇಷ ಕಾರ್ಯಾಚರಣೆ – ರಾತ್ರಿ ಕುಡುಕರಿಗೆ ಚಳಿ ಬಿಡಿಸಿದ ಗದಗ ಎಸ್‌ಪಿ

    ಬಿಜೆಪಿಯಲ್ಲಿ ಆಂತರಿಕ ಕಚ್ಚಾಟ ತೀವ್ರಗೊಂಡ ಬೆನ್ನಲ್ಲೇ ಇಂದು ಬಿಜೆಪಿ ಕಚೇರಿಗೆ ಪಕ್ಷದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ ಭೇಟಿ ಕೊಟ್ಟಿದ್ದರು. ರಾಜ್ಯ ಘಟಕ ಅಧ್ಯಕ್ಷ ಸ್ಥಾನದ ಚುನಾವಣೆ ಮುನ್ನ ಸಂತೋಷ್ ವಸ್ತುಸ್ಥಿತಿ ರಿಪೋರ್ಟ್ ಪಡೆದಿದ್ದಾರೆ ಎನ್ನಲಾಗಿದೆ. ಸದ್ಯಕ್ಕೆ ಬಿಜೆಪಿ ಮನೆ ಕಂಟ್ರೋಲ್ ತಪ್ಪಿರೋದಂತೂ ಸ್ಪಷ್ಟ. ಇದನ್ನೂ ಓದಿ: Bihar | ಗಂಗಾ ನದಿಯಲ್ಲಿ ದೋಣಿ ಮಗುಚಿ ಮೂವರು ಸಾವು – ನಾಲ್ವರು ನಾಪತ್ತೆ

  • ನಾನೇ ಬಿಜೆಪಿಯಿಂದ ಹೊರ ಬಂದಿದ್ದೇನೆ; ಸಂತೋಷ್ ಮೊದಲು ಪಕ್ಷದಲ್ಲಿರೋರನ್ನ ಉಳಿಸಿಕೊಳ್ಳಲಿ: ಶೆಟ್ಟರ್ ವ್ಯಂಗ್ಯ

    ನಾನೇ ಬಿಜೆಪಿಯಿಂದ ಹೊರ ಬಂದಿದ್ದೇನೆ; ಸಂತೋಷ್ ಮೊದಲು ಪಕ್ಷದಲ್ಲಿರೋರನ್ನ ಉಳಿಸಿಕೊಳ್ಳಲಿ: ಶೆಟ್ಟರ್ ವ್ಯಂಗ್ಯ

    ಹುಬ್ಬಳ್ಳಿ: ಬಿಎಲ್ ಸಂತೋಷ್ (BL Santosh) ಅವರು ಮೊದಲು ಪಕ್ಷದಲ್ಲಿದ್ದವರನ್ನು ಉಳಿಸಿಕೊಳ್ಳಲಿ. ಅವರ ಪಕ್ಷದ ಶಾಸಕರು ಮತ್ತು ಮಾಜಿ ಶಾಸಕರನ್ನು ಉಳಿಸಿಕೊಂಡು, ಪಕ್ಷದ ಅಸ್ತಿತ್ವ ಉಳಿಸಿಕೊಂಡರೆ ಸಾಕಾಗಿದೆ. ಒಂದು ವೇಳೆ ಅವರ ಸಂಪರ್ಕದಲ್ಲಿ ಶಾಸಕರುಗಳು ಇದ್ದರೆ ನಾಳೆಯಿಂದಲೇ ಆಪರೇಶನ್ ಸ್ಟಾರ್ಟ್ ಮಾಡಲಿ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ (Jagadish Shettar) ವ್ಯಂಗ್ಯವಾಡಿದ್ದಾರೆ.

    ಕಾಂಗ್ರೆಸ್ ಶಾಸಕರು ಸಂಪರ್ಕದಲ್ಲಿದ್ದಾರೆ ಎಂಬ ಬಿಎಲ್ ಸಂತೋಷ್ ಹೇಳಿಕೆ ವಿಚಾರವಾಗಿ ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಬೇರೆ ಪಕ್ಷದವರನ್ನು ಕರೆದುಕೊಂಡು ಬಂದು ಹೊಸ ಸರ್ಕಾರ ಮಾಡೋದನ್ನು ಬಿಜೆಪಿ ನಾಯಕರು ಬಿಟ್ಟು ಬಿಡಲಿ. ಬರೀ ಆಪರೇಶನ್ ಮಾಡಿ ಸರ್ಕಾರ ರಚನೆ ಮಾಡೋದಾ? ಇಡೀ ರಾಷ್ಟ್ರದಲ್ಲಿ ಬೆಳಗ್ಗೆ ಇಂದ ಸಾಯಂಕಾಲವರೆಗೂ ಆಪರೇಶನ್ ಮಾಡೋದು, ಹಿರಿಯರನ್ನು ಕಡೆಗಣಿಸಿ ಹೊಸಬರನ್ನು ಕರೆದುಕೊಂಡು ಬರೋದು ನಿಮ್ಮ ಕೆಲಸ. ದಿನದಿಂದ ದಿನಕ್ಕೆ ಬಿಜೆಪಿ ಪಕ್ಷ ಅಧೋಗತಿಗೆ ಹೋಗ್ತಿದೆ. ಬಿಜೆಪಿ ಮುಳುಗುತ್ತಿರೋ ಹಡಗು ಎಂದು ಟಾಂಗ್ ನೀಡಿದರು. ಇದನ್ನೂ ಓದಿ: ಗೃಹಬಳಕೆಯ ಬೆನ್ನಲ್ಲೇ ವಾಣಿಜ್ಯ ಬಳಕೆಯ LPG ಬೆಲೆ 158 ರೂ. ಇಳಿಕೆ

    ಕರ್ನಾಟಕದಲ್ಲಿ ಬಿಜೆಪಿ ಅಸ್ತಿತ್ವ ಕಳೆದುಕೊಳ್ತಿದೆ. ಇದಕ್ಕೆ ಕಾರಣ ಬಿಜೆಪಿ ಕೆಲವೇ ಜನರ ಕೈಯಲ್ಲಿದೆ. ಅದರಿಂದ ಹೊರಬಂದರೆ ಮಾತ್ರ ಭವಿಷ್ಯ. ಅದರಿಂದ ಹೊರಬರೋಕೆ ಆಗತ್ತೋ ಇಲ್ವೋ, ಆದರೆ ನಾನೇ ಹೊರಗೆ ಬಂದು ಬಿಟ್ಟಿದ್ದೆನೆ. ರಾಜ್ಯ ಬಿಜೆಪಿ ನಾಯಕರ ಪರಸ್ಥಿತಿ ಇಡೀ ಜಗತ್ತಿಗೆ ಗೊತ್ತಾಗಿದೆ. ದೆಹಲಿಯಲ್ಲಿ ಕೂತ ನಾಯಕರು ಈ ಬಗ್ಗೆ ಯೋಚನೆ ಮಾಡಬೇಕು. ಕರ್ನಾಟಕದಲ್ಲಿ ಬಿಜೆಪಿಗೆ ಒಂದು ಸಲವೂ ಬಹುಮತ ಬರಲಿಲ್ಲ. ಆದರೆ ಕಾಂಗ್ರೆಸ್‌ಗೆ 136 ಸೀಟ್ ಬಂದಿದೆ ಎಂದರು. ಇದನ್ನೂ ಓದಿ: ಮೆಟ್ರೋ ಪ್ರಯಾಣಿಕರಿಗೆ ಗುಡ್‍ನ್ಯೂಸ್- ಇಂದಿನಿಂದ ಹೆಚ್ಚುವರಿ ಸರ್ವಿಸ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ರಾಜ್ಯ ಬಿಜೆಪಿಗೆ ಬಿಎಲ್ ಸಂತೋಷ್ ಟಾನಿಕ್ – ವಲಸಿಗರ ಪರ ಬ್ಯಾಟಿಂಗ್

    ರಾಜ್ಯ ಬಿಜೆಪಿಗೆ ಬಿಎಲ್ ಸಂತೋಷ್ ಟಾನಿಕ್ – ವಲಸಿಗರ ಪರ ಬ್ಯಾಟಿಂಗ್

    ಬೆಂಗಳೂರು: ವಿಧಾನಸಭೆ ಚುನಾವಣೆ ನಂತರ ಸೋಲಿನ ಹತಾಶೆಯಲ್ಲಿರುವ ರಾಜ್ಯ ಬಿಜೆಪಿಗೆ ಬೂಸ್ಟ್ ಕೊಡಲು ರಾಷ್ಟ್ರೀಯ ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ (BL Santosh) ಅಖಾಡಕ್ಕಿಳಿದಿದ್ದಾರೆ. ಬೆಂಗಳೂರಿನ ಬಿಜೆಪಿ (BJP) ಕಚೇರಿಯಲ್ಲಿಂದು ಮಹತ್ವದ ಸಭೆ ನಡೆಸಿ ನಾಯಕರಲ್ಲಿ ಜೋಷ್ ತುಂಬೋ ಕೆಲಸ ಮಾಡಿದ್ದಾರೆ. ಲೋಕಸಭೆ ಚುನಾವಣಾ ತಯಾರಿಗೆ ಟಾಸ್ಕ್ ಕೊಟ್ಟಿದ್ದಾರೆ. ಇದೇ ವೇಳೆ ಆಪರೇಷನ್ ಹಸ್ತಕ್ಕೆ ಠಕ್ಕರ್ ಕೊಡಲು ರಿವರ್ಸ್ ಆಪರೇಷನ್‌ನ ಸುಳಿವನ್ನೂ ಸಭೆಯಲ್ಲಿ ಬಿಎಲ್ ಸಂತೋಷ್ ನೀಡಿದ್ದಾರೆ.

    ವಿಧಾನಸಭೆ ಚುನಾವಣೆ ಮುಗಿದು ಮೂರೂವರೆ ತಿಂಗಳಾದರೂ ರಾಜ್ಯ ಬಿಜೆಪಿಯಲ್ಲಿ ಶೂನ್ಯ ಮನಸ್ಥಿತಿ. ಯಾವ ನಾಯಕರಲ್ಲೂ ಜೋಷ್ ಉಳಿದಿಲ್ಲ. ಪರಿಣಾಮ ಪಕ್ಷ ಸಂಘಟನೆಯಲ್ಲಿ ಬಿಜೆಪಿ ಹಿಂದೆ ಬಿದ್ದಿದೆ. ಈ ಪರಿಣಾಮ ಅರಿತ ಹೈಕಮಾಂಡ್ ಈಗ ರಾಷ್ಟ್ರೀಯ ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ಮೂಲಕ ರಾಜ್ಯ ಬಿಜೆಪಿಗೆ ಬೂಸ್ಟ್ ಕೊಡಿಸುವ ಕಾರ್ಯಕ್ಕೆ ಕೈ ಹಾಕಿದೆ.

    ಈ ಹಿನ್ನೆಲೆಯಲ್ಲಿ ಬೆಂಗಳೂರಿನ ರಾಜ್ಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಇಂದು ಬಿಎಲ್ ಸಂತೋಷ್ ನೇತೃತ್ವದಲ್ಲಿ ಮಹತ್ವದ ಸಭೆ ನಡೆಸಲಾಯಿತು. ಸಭೆಯಲ್ಲಿ ಹಾಲಿ/ಮಾಜಿ ಸಂಸದರು, ಶಾಸಕರು, ಜಿಲ್ಲಾ ಸಂಘಟನಾ ಪದಾಧಿಕಾರಿಗಳು ಭಾಗವಹಿಸಿದ್ದರು. ಈ ಸಭೆಯಲ್ಲಿ ರಾಜ್ಯದಲ್ಲಿ ಪ್ರಸ್ತುತ ಬಿಜೆಪಿಯ ಪರಿಸ್ಥಿತಿ, ಪಕ್ಷ ಸಂಘಟನೆ, ಲೋಕಸಭೆ ಚುನಾವಣಾ ತಯಾರಿ, ಗ್ಯಾರಂಟಿಗಳ ಜಾರಿ, ಸರ್ಕಾರದ ನಕಾರಾತ್ಮಕ ನಡೆ, ನಿರ್ಧಾರಗಳು, ಆಪರೇಷನ್ ಹಸ್ತ ಸೇರಿ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಲಾಯ್ತು. ನಾಯಕರಿಗೆ ಬಿಎಲ್ ಸಂತೋಷ್ ಪಕ್ಷ ಸಂಘಟನೆ ಕುರಿತು ಟಾಸ್ಕ್‌ಗಳನ್ನು ನೀಡಿದರು.

    ಮುಖ್ಯವಾಗಿ ಚುನಾವಣಾ ಸೋಲಿಗೆ ಹೆದರದಂತೆ, ನಿರಾಶರಾಗದಂತೆ ಸಂತೋಷ್ ಧೈರ್ಯ ಹೇಳಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಅತಿ ಹೆಚ್ಚು ಸ್ಥಾನ ಬಿಜೆಪಿ ಗೆಲ್ಲಲಿದೆ. ಆ ನಂತರ ರಾಜ್ಯ ಕಾಂಗ್ರೆಸ್ ಸರ್ಕಾರದ ಪರಿಸ್ಥಿತಿ ಏನಾಗುತ್ತೆ ಅಂತಾ ನೋಡಿ. ನಮ್ಮಲ್ಲಿಂದ ಯಾರೂ ಕಾಂಗ್ರೆಸ್‌ಗೆ ಹೋಗಲ್ಲ. 10 ಜನ ಹೋದರೂ ಅದಕ್ಕೆ ಸಮನಾದ ಒಬ್ಬರನ್ನು ಕರೆತರಬಹುದು. ನನ್ನ ಜೊತೆಯೇ ಸಂಪರ್ಕದಲ್ಲಿ 40-45 ಜನ ಇದ್ದಾರೆ. ದೆಹಲಿಯವರು ಒಪ್ಪಿಗೆ ಕೊಟ್ಟರೆ ನಾಳೆಯೇ ಒಂದು ದಿನದ ಕೆಲಸ. ಆದರೆ ನಮಗೆ ಈಗ ಆಪರೇಷನ್ ಅಗತ್ಯವಿಲ್ಲ. ನಾವು ಈಗ ಸರ್ಕಾರ ಮಾಡಬೇಕಾಗಿಲ್ಲ. ಮುಂದೆ ನೋಡೋಣ ಅಂತ ಸಂತೋಷ್ ರಿವರ್ಸ್ ಆಪರೇಷನ್ ಸುಳಿವು ಕೊಟ್ಟಿದ್ದಾರೆ. ಪಕ್ಷ ಬಿಟ್ಟು ಹೋಗುವವರ ಬಗ್ಗೆ ಚಿಂತೆ ಬೇಡ. ಯಾರೂ ಕೂಡಾ ಪಕ್ಷ ಬಿಟ್ಟು ಹೋಗುವುದಿಲ್ಲ ಅಂತಲೂ ಸಭೆಯಲ್ಲಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಬಜೆಟ್‌ನಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆ ನಿರ್ಲಕ್ಷ್ಯ – ಸಿಎಂರಿಂದ ಸಿಗುತ್ತಾ ಪರಿಹಾರ?

    ಇನ್ನು ರಾಜ್ಯಾಧ್ಯಕ್ಷ ಸ್ಥಾನ, ವಿಪಕ್ಷ ನಾಯಕನ ಆಯ್ಕೆ ವಿಳಂಬ ಬಗ್ಗೆ ಸಭೆಯಲ್ಲಿ ಮಾತಾಡಿದ ಸಂತೋಷ್, ನೇಮಕ ಆಗಿದೆ ನಿಜ. ಆದರೆ ಅದರ ಬಗ್ಗೆ ಎಲ್ಲ ನೀವು ತಲೆಕೆಡೆಸಿಕೊಳ್ಳಬೇಡಿ. ಅದರ ಬಗ್ಗೆ ವರಿಷ್ಠರು ಸೂಕ್ತ ಸಂದರ್ಭದಲ್ಲಿ ಸೂಕ್ತ ತೀರ್ಮಾನ ಮಾಡಲಿದ್ದಾರೆ. ಆದರೆ ನೀವಂತೂ ಒಟ್ಟಾಗಿ ಪಕ್ಷದ ಕೆಲಸ ಮಾಡಿ. ಬೂತ್ ಮಟ್ಟದಿಂದ ಪಕ್ಷ ಸಂಘಟಿಸಿ, ಪಕ್ಷ ವಹಿಸಿದ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿ ಎಂದು ನಾಯಕರಿಗೆ ಸಂತೋಷ್ ಕಿವಿಮಾತು ಹೇಳಿದ್ದಾರೆ.

    ಆಪರೇಷನ್ ಹಸ್ತದ ಆತಂಕ ಇರೋ ಹಿನ್ನೆಲೆಯಲ್ಲಿ ವಲಸಿಗರ ವಿಶ್ವಾಸ ಗಳಿಸುವ ಕಸರತ್ತಿಗೂ ಬಿಜೆಪಿ ಮುಂದಾಗಿದೆ. ಈ ಸಭೆಯಲ್ಲಿ ಮಾತಾಡಿರುವ ಬಿಎಲ್ ಸಂತೋಷ್, ಬಾಂಬೆ ಬಾಯ್ಸ್, ವಲಸಿಗರು ಅಂತಾ ನಮ್ಮ ಜೊತೆ ಬಂದವರನ್ನು ನಾವೇ ಹೇಳುವುದು ಬೇಡ ಎಂದು ಎಲ್ಲರಿಗೂ ತಾಕೀತು ಮಾಡಿದ್ದಾರೆ. ಅವರು ನಮ್ಮ ಕಷ್ಟ ಕಾಲಕ್ಕೆ ನಮ್ಮ ಜೊತೆ ಬಂದಿದ್ದಾರೆ. ಅವರು ಹೋಗುತ್ತಾರೆ ಅಂತಾ ನಾವೇ ಹೇಳುವುದು ಸರಿಯಲ್ಲ ಎಂದು ವಲಸಿಗರ ಪರ ಸಭೆಯಲ್ಲಿ ಸಂತೋಷ್ ಬ್ಯಾಟಿಂಗ್ ಮಾಡಿದ್ದಾರೆ.

    ಈ ಸಭೆಗೆ ಶಾಸಕ ಎಸ್‌ಟಿ ಸೋಮಶೇಖರ್, ಶಿವರಾಂ ಹೆಬ್ಬಾರ್, ಮಾಜಿ ಸಚಿವರಾದ ವಿ ಸೋಮಣ್ಣ, ನಾರಾಯಣ ಗೌಡ, ಶಂಕರ್ ಪಾಟೀಲ್ ಮುನೇನಕೊಪ್ಪ, ಮಾಜಿ ಶಾಸಕ ಕುಮಾರ್ ಬಂಗಾರಪ್ಪ, ಮಾಜಿ ಶಾಸಕ ರೇಣುಕಾಚಾರ್ಯ ಮತ್ತಿತರರು ಗೈರಾಗುವ ಮೂಲಕ ಸೆಡ್ಡು ಹೊಡೆದಿದ್ದಾರೆ. ಸಭೆಗೆ ರಮೇಶ್ ಜಾರಕಿಹೊಳಿ ಅಂಡ್ ಟೀಂ, ಮಾಜಿ ಸಚಿವ ಡಾ.ಕೆ ಸುಧಾಕರ್, ಬಿಸಿ ಪಾಟೀಲ್ ಮತ್ತಿತರ ವಲಸಿಗರು ಭಾಗವಹಿಸಿದರು. ಇದನ್ನೂ ಓದಿ: ಮಾರ್ಗ ಮಧ್ಯೆ ಕೈಕೊಟ್ಟ ಅಂಬುಲೆನ್ಸ್ – ಆನೆ ದಾಳಿಯಿಂದ ಗಾಯಗೊಂಡಿದ್ದ ಶಾರ್ಪ್ ಶೂಟರ್ ಅರಣ್ಯ ಸಿಬ್ಬಂದಿ ಸಾವು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಲೋಕಸಭೆ ಚುನಾವಣೆಗೆ ಮೋದಿ ತಯಾರಿ – ಹಿರಿಯ ನಾಯಕರಿಗೆ 3 ಟಾರ್ಗೆಟ್

    ಲೋಕಸಭೆ ಚುನಾವಣೆಗೆ ಮೋದಿ ತಯಾರಿ – ಹಿರಿಯ ನಾಯಕರಿಗೆ 3 ಟಾರ್ಗೆಟ್

    ನವದೆಹಲಿ: ಮಧ್ಯಮ ವರ್ಗ, ಬಡವರು, ತುಳಿತಕ್ಕೊಳಗಾದ ಮತ್ತು ಹಿಂದುಳಿದ ಸಮುದಾಯಗಳ ಮಹತ್ವವನ್ನು ಗುರುತಿಸಿ, ಅವರ ಕಾಳಜಿ ಮತ್ತು ಆಕಾಂಕ್ಷೆಗಳನ್ನು ನೇರವಾಗಿ ಪರಿಹರಿಸುವ ಕೆಲಸಗಳನ್ನು ಮಾಡಿ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಪಕ್ಷದ ಹಿರಿಯ ನಾಯಕರಿಗೆ ಸೂಚಿಸಿದ್ದಾರೆ.

    2024ರ ಲೋಕಸಭೆ ಚುನಾವಣೆ (Lok Sabha Election 2024) ತಯಾರಿ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಹಿರಿಯ ನಾಯಕರ ಸಭೆ ನಡೆಸಿದರು. ಸಭೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ಸೇರಿದಂತೆ ಹಲವು ನಾಯಕರು ಭಾಗಿಯಾಗಿದ್ದರು.

    ಸದ್ಯದ ಪರಿಸ್ಥಿತಿಗಳ ಬಗ್ಗೆ ಅವಲೋಕನ ಮಾಡಿದ ನರೇಂದ್ರ ಮೋದಿ ಪ್ರಮುಖ 3 ಅಂಶಗಳ ಬಗ್ಗೆ ಕೇಂದ್ರಿಕರಿಸಿ ತಯಾರಿ ಆರಂಭಿಸಲು ಸೂಚಿಸಿದ್ದಾರೆ. ಮುಖ್ಯವಾಗಿ ಮಧ್ಯಮ ವರ್ಗ, ಬಡವರು, ತುಳಿತಕ್ಕೊಳಗಾದ ಮತ್ತು ಹಿಂದುಳಿದ ಸಮುದಾಯಗಳ ಮಹತ್ವವನ್ನು ಗುರುತಿಸಿದ ಪ್ರಧಾನಿ ಮೋದಿ ಅವರ ಕಾಳಜಿ ಮತ್ತು ಆಕಾಂಕ್ಷೆಗಳನ್ನು ನೇರವಾಗಿ ಪರಿಹರಿಸುವ ಯೋಜನೆಗಳನ್ನು ರೂಪಿಸುವ ಅಗತ್ಯವನ್ನು ಒತ್ತಿ ಹೇಳಿದರು.

    ಸಂಸದರು ಕೂಡಲೇ ಕಾರ್ಯಪ್ರವೃತ್ತರಾಗಬೇಕು ಸಂಸದೀಯ ಕ್ಷೇತ್ರಗಳೊಂದಿಗೆ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು, ಆಯಾ ಕ್ಷೇತ್ರಗಳಲ್ಲಿ ಸಮಾಜದ ಹಿಂದುಳಿದ ಮತ್ತು ದುರ್ಬಲ ವರ್ಗಗಳ ಪ್ರತಿನಿಧಿಗಳ ನಡುವೆ ಸಣ್ಣ ಪ್ರಮಾಣದ ಸಭೆಗಳು ಮತ್ತು ಸೆಮಿನಾರ್‌ಗಳ ಮೂಲಕ ನೇರ ಸಂವಾದವನ್ನು ನಡೆಸಲು ಮೋದಿ ಶಿಫಾರಸು ಮಾಡಿದರು.

    ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳಿಗೆ ಮುಂಚಿತವಾಗಿ ಕ್ಷೇತ್ರಗಳ ಮತ್ತು ಸ್ಥಾನಗಳ ಸೂಕ್ಷ್ಮ ನಿರ್ವಹಣೆಗೆ ನೀಲನಕ್ಷೆಯನ್ನು ತಯಾರಿಸಲು, ಚುನಾವಣಾ ಪ್ರಯತ್ನಗಳನ್ನು ಸರಳಗೊಳಿಸಲು 543 ಲೋಕಸಭಾ ಸ್ಥಾನಗಳನ್ನು ಉತ್ತರ, ದಕ್ಷಿಣ ಮತ್ತು ಪೂರ್ವ ಎಂದು 3 ಭಾಗವಾಗಿ ವಿಂಗಡಿಸಲು ಮೋದಿ ಸೂಚಿಸಿದ್ದಾರೆ. ಇದನ್ನೂ ಓದಿ: ಬಕ್ರೀದ್ ಆಚರಣೆ – ಮುಸ್ಲಿಂ ಬಾಂಧವರ ಸಾಮೂಹಿಕ ಪ್ರಾರ್ಥನೆಯಲ್ಲಿ ಸಿದ್ದರಾಮಯ್ಯ ಭಾಗಿ

    ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ಜುಲೈ 6 ರಿಂದ 8 ರವರೆಗೆ ಪ್ರತಿ ಪ್ರದೇಶದ ಉನ್ನತ ನಾಯಕರೊಂದಿಗೆ ಸಭೆ ನಡೆಸಲು ಸೂಚಿಸಿದ್ದು, ಸಭೆಯಲ್ಲಿ ರಾಜ್ಯ ಉಸ್ತುವಾರಿಗಳು, ರಾಜ್ಯ ಘಟಕದ ಅಧ್ಯಕ್ಷರು, ರಾಜ್ಯ ಸಂಘಟನಾ ಕಾರ್ಯದರ್ಶಿಗಳು, ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು, ಶಾಸಕರು, ಸಂಸದರು ಮತ್ತು ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯರು ಭಾಗವಹಿಸಲು ನಿರ್ದೇಶಿಸಲಾಗಿದೆ.

    ಕೇಂದ್ರ ಸಚಿವರು ತಮ್ಮ ಸಚಿವಾಲಯದಲ್ಲಿ ವಿಭಿನ್ನ ಯೋಜನೆಗಳ ಜಾರಿಗೆ ಪ್ರಯತ್ನಿಸಬೇಕು, ಹೊಸತನಕ್ಕೆ ಆದ್ಯತೆ ನೀಡಬೇಕು. ಸಮಾಜದ ಎಲ್ಲಾ ವರ್ಗಗಳಿಗೆ ಉತ್ತಮ ಭವಿಷ್ಯವನ್ನು ನಿರ್ಮಿಸುವ ಮತ್ತು ಎಲ್ಲರನ್ನೂ ಒಳಗೊಳ್ಳುವ ಆಡಳಿತವನ್ನು ಉತ್ತೇಜಿಸುವ ಗುರಿ ಹೊಂದಬೇಕು ಎಂದು ನರೇಂದ್ರ ಮೋದಿ ತಿಳಿಸಿದ್ದಾರೆ. ಇದನ್ನೂ ಓದಿ: ಚೀನಾ, ಪಾಕಿಸ್ತಾನದೊಂದಿಗೆ ಸಂಬಂಧ ಕಷ್ಟ: ಜೈಶಂಕರ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸಿಇಟಿ ಪರೀಕ್ಷೆ ದಿನವೇ ಪ್ರಮಾಣವಚನ – ಮೋದಿ ರ‍್ಯಾಲಿ ಇರೋವಾಗ ಮಾತ್ರ ನಿಮ್ಗೆ ವಿದ್ಯಾರ್ಥಿಗಳು ಕಾಣೋದ?: ಬಿಎಲ್ ಸಂತೋಷ್

    ಸಿಇಟಿ ಪರೀಕ್ಷೆ ದಿನವೇ ಪ್ರಮಾಣವಚನ – ಮೋದಿ ರ‍್ಯಾಲಿ ಇರೋವಾಗ ಮಾತ್ರ ನಿಮ್ಗೆ ವಿದ್ಯಾರ್ಥಿಗಳು ಕಾಣೋದ?: ಬಿಎಲ್ ಸಂತೋಷ್

    ಬೆಂಗಳೂರು: ಶನಿವಾರ ಹಾಗೂ ಭಾನುವಾರ ರಾಜ್ಯಾದ್ಯಂತ ಸಿಇಟಿ ಪರೀಕ್ಷೆ (CET Exam) ನಡೆಯಲಿದೆ. ಇದೇ ಸಂದರ್ಭದಲ್ಲಿ ಶನಿವಾರ ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ (Siddaramaiah) ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇದೀಗ ಸಿಇಟಿ ಪರೀಕ್ಷೆಗೆ ತಯಾರಿ ನಡೆಸುತ್ತಿರುವ ಬೆಂಗಳೂರಿನ (Bengaluru) ವಿದ್ಯಾರ್ಥಿಗಳಿಗೆ ಟ್ರಾಫಿಕ್ ಜಾಮ್ ಆತಂಕ ಎದುರಾಗಿದೆ.

    ವಿಧಾನಸಭಾ ಚುನಾಣೆಗೂ ಮುನ್ನ ಬಿಜೆಪಿ (BJP) ಪಕ್ಷದ ಪರವಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಅವರು ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ರೋಡ್‌ಶೋ (Road Show) ಮಾಡಿದ್ದರು. ಬೆಂಗಳೂರಿನಲ್ಲಿ ಮೋದಿ ರೋಡ್‌ಶೋ ಮಾಡಿದ್ದ ಒಂದು ದಿನ ನೀಟ್ ಪರೀಕ್ಷೆಯೂ (NEET Exam) ಇತ್ತು. ಇದಕ್ಕೆ ಕಾಂಗ್ರೆಸ್ಸಿಗರು ಮೋದಿ ರೋಡ್‌ಶೋಗೆ ಭಾರೀ ವಿರೋಧ ವ್ಯಕ್ತಪಡಿಸಿದ್ದರು. ಇದೀದ ಸಿದ್ದರಾಮಯ್ಯ ಪ್ರಮಾಣವಚನ ತೆಗೆದುಕೊಳ್ಳುವ ದಿನವೇ ಸಿಇಟಿ ಪರೀಕ್ಷೆ ಇರುವುದರಿಂದ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ (BL Santosh) ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ.

    ಈ ಹಿಂದೆ ಸಿದ್ದರಾಮಯ್ಯ ಅವರು, ಬೇಜವಾಬ್ದಾರಿ ಹಾಗೂ ಬೆಂಗಳೂರಿನ ಜನರ ವಿರೋಧವನ್ನು ಲೆಕ್ಕಿಸದೇ ರೋಡ್ ಶೋ ನಡೆಸಿದ್ದಾರೆ ಎಂದು ಟ್ವೀಟ್ ಮಾಡಿದ್ದರು. ಇದಕ್ಕೆ ರೀಟ್ವೀಟ್ ಮಾಡುವ ಮೂಲಕ ಕೌಂಟರ್ ಕೊಟ್ಟಿರುವ ಸಂತೋಷ್, ಮೋದಿ ರ‍್ಯಾಲಿ ಮಾಡೋವಾಗ ಮಾತ್ರ ನಿಮಗೆ ವಿದ್ಯಾರ್ಥಿಗಳು ಕಾಣೋದಾ? ಸಿಇಟಿ ಪರೀಕ್ಷೆ ದಿನವೇ ವಿದ್ಯಾರ್ಥಿಗಳಿಗೆ ತೊಂದರೆ ಕೊಟ್ಟು ಪ್ರಮಾಣವಚನ ಕಾರ್ಯಕ್ರಮ ಮಾಡುತ್ತಿದ್ದೀರಿ. ಈಗ ನೀವು ಮಾಡುತ್ತಿರುವುದು ಸರೀನಾ ಎಂದು ಸಿದ್ದು ಹಾಗೂ ಡಿಕೆಶಿಗೆ ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಮೇ 20, 21 ರಂದು ಸಿಇಟಿ ಪರೀಕ್ಷೆ – ಪ್ರಮಾಣವಚನ ಹಿನ್ನೆಲೆ ಟ್ರಾಫಿಕ್ ಆತಂಕ

    ಈ ಬಾರಿ ಸಿಇಟಿ ಪರೀಕ್ಷೆ ರಾಜ್ಯದ 592 ಕೇಂದ್ರಗಳಲ್ಲಿ ನಡೆಯಲಿದೆ. ಬೆಂಗಳೂರಿನಲ್ಲೇ 121 ಪರೀಕ್ಷಾ ಕೇಂದ್ರಗಳಿದ್ದು, ಉಳಿದ ಜಿಲ್ಲೆಗಳಲ್ಲಿ 471 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಇದೀಗ ಪರೀಕ್ಷೆ ನಡೆಯಲಿರುವ ಮೊದಲ ದಿನ ಶನಿವಾರದಂದೇ ಸಿದ್ದರಾಮಯ್ಯ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಪ್ರಮಾಣವಚನ ಕಾರ್ಯಕ್ರಮ ನಡೆಸಲು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಆದರೆ ಪರೀಕ್ಷೆಗೆ ತೆರಳಲು ವಿದ್ಯಾರ್ಥಿಗಳಿಗೆ ಟ್ರಾಫಿಕ್ ಜಾಮ್‌ನ ಭೀತಿ ಎದುರಾಗಿದೆ. ಇದನ್ನೂ ಓದಿ: ಪುತ್ತೂರಿನ ಘಟನೆಗೆ ಪ್ರಭಾಕರ್ ಭಟ್, ನಳಿನ್ ಕುಮಾರ್ ಕಟೀಲ್ ಕಾರಣ: ಅಭಯ್ ಚಂದ್ರ ಜೈನ್

  • ಬಿಎಸ್‌ವೈ ಭೇಟಿ ಮಾಡಿದ ಬಿಎಲ್ ಸಂತೋಷ್ – ಕುತೂಹಲ ಮೂಡಿಸಿದ ನಾಯಕರ ಭೇಟಿ

    ಬಿಎಸ್‌ವೈ ಭೇಟಿ ಮಾಡಿದ ಬಿಎಲ್ ಸಂತೋಷ್ – ಕುತೂಹಲ ಮೂಡಿಸಿದ ನಾಯಕರ ಭೇಟಿ

    ಬೆಂಗಳೂರು: ವಿಧಾನಸಭಾ ಚುನಾವಣೆ ಹತ್ತಿರಾಗುತ್ತಲೇ ರಾಜ್ಯ ರಾಜಕೀಯದಲ್ಲಿ ಕುತೂಹಲಕರ ಬದಲಾವಣೆಗಳು ಆಗುತ್ತಲೇ ಇವೆ. ಪಕ್ಷದ ನಾಯಕರುಗಳ ಪ್ರತಿಯೊಂದು ಹೆಜ್ಜೆಯೂ ಮಹತ್ವದ್ದೆನಿಸುತ್ತಿದೆ.

    ಮಂಗಳವಾರ ಬಿಜೆಪಿ (BJP) ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ (BL Santosh), ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ (BS Yediyurappa) ಅವರನ್ನು ಭೇಟಿಯಾಗಿದ್ದಾರೆ. ಯಡಿಯೂರಪ್ಪ ಅವರ ಕಾವೇರಿ ನಿವಾಸಕ್ಕೆ ತೆರಳಿ ಸಂತೋಷ್ ಮಾತುಕತೆ ನಡೆಸಿದ್ದಾರೆ.

    ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ಸಂತೋಷ್ ಹಾಗೂ ಯಡಿಯೂರಪ್ಪ ಮಹತ್ವದ ಚರ್ಚೆ ನಡೆಸಿದ್ದಾರೆ. ಈಗಾಗಲೇ ಪಕ್ಷ ತೊರೆದಿರುವ ಲಿಂಗಾಯತ ನಾಯಕರ ಕ್ಷೇತ್ರದಲ್ಲಿ ತಂತ್ರಗಾರಿಕೆ ಬಗ್ಗೆ ಸಮಾಲೋಚನೆ ನಡೆಸಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಯಾದಗಿರಿಯಲ್ಲಿ ಅಮಿತ್ ಶಾ ರೋಡ್ ಶೋ – ಬಿಜೆಪಿ ಅಭ್ಯರ್ಥಿ ವೆಂಕಟರೆಡ್ಡಿ ಮುದ್ನಾಳ್ ಪರ ಮತಯಾಚನೆ

    ಮಾಜಿ ಸಿಎಂ ಜಗದಿಶ್ ಶೆಟ್ಟರ್ ಬಿಜೆಪಿ ತೊರೆದು ಕಾಂಗ್ರೆಸ್ ಸೇರುತ್ತಲೇ ತಮಗೆ ಟಿಕೆಟ್ ಕೈತಪ್ಪಲು ಬಿಎಲ್ ಸಂತೋಷ್ ಕಾರಣ ಎಂದು ಆರೋಪ ಹೊರಿಸಿದ್ದರು. ಇದಾದ ಬಳಿಕ ಕಾಂಗ್ರೆಸ್ ನಾಯಕರುಗಳು ಒಬ್ಬೊಬ್ಬರಂತೆ ಸಂತೋಷ್ ವಿರುದ್ಧ ಹೇಳಿಕೆಗಳನ್ನು ನೀಡಿದ್ದರು. ಲಿಂಗಾಯತ ನಾಯಕರುಗಳನ್ನು ಬಿಜೆಪಿ ಕಡೆಗಣಿಸಿದೆ ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ. ಇದೀಗ ಬಿಎಲ್ ಸಂತೋಷ್, ಲಿಂಗಾಯತ ನಾಯಕ ಯಡಿಯೂರಪ್ಪರನ್ನು ಭೇಟಿ ಮಾಡಿರುವುದು ರಾಜಕೀಯದಲ್ಲಿ ಕುತೂಹಲ ಮೂಡಿಸಿದೆ. ಇದನ್ನೂ ಓದಿ: ಕಾಂಗ್ರೆಸ್‌ ಮಾಜಿ ಸಚಿವ ಡಿ.ಬಿ ಇನಾಮ್ದಾರ್ ವಿಧಿವಶ