Tag: ಬಿಐಎಎಲ್

  • ಬೆಂಗಳೂರು ಏರ್‌ಪೋರ್ಟ್ ಸಿಟಿಯಲ್ಲಿ ‘ಬಿಸಿನೆಸ್ ಪಾರ್ಕ್’ ತೆರೆಯಲು ಮೊದಲ ಹೆಜ್ಜೆ ಇಟ್ಟ BACL

    ಬೆಂಗಳೂರು ಏರ್‌ಪೋರ್ಟ್ ಸಿಟಿಯಲ್ಲಿ ‘ಬಿಸಿನೆಸ್ ಪಾರ್ಕ್’ ತೆರೆಯಲು ಮೊದಲ ಹೆಜ್ಜೆ ಇಟ್ಟ BACL

    ಬೆಂಗಳೂರು: ಬೆಂಗಳೂರು ಇಂಟರ್‌ನ್ಯಾಶನಲ್ ಏರ್‌ಪೋರ್ಟ್ ಲಿಮಿಟೆಡ್‌ನ (BIAL) ಅಂಗಸಂಸ್ಥೆಯಾದ ಬೆಂಗಳೂರು ಏರ್‌ಪೋರ್ಟ್ ಸಿಟಿ ಲಿಮಿಟೆಡ್‌ನ (BACL) ಮಹತ್ವಾಕಾಂಕ್ಷಿ ಯೋಜನೆಯಾದ ‘ಬಿಸಿನೆಸ್ ಪಾರ್ಕ್’ ತೆರೆಯಲು 2 ದಶಲಕ್ಷ ಚದರ ಅಡಿ ಪ್ರದೇಶವನ್ನು ತನ್ನದಾಗಿಸಿಕೊಳ್ಳುವ ಮೂಲಕ ಈ ಯೋಜನೆಯತ್ತ ತನ್ನ ಮೊದಲ ಹೆಜ್ಜೆಯನ್ನು ಇಟ್ಟಿದೆ.

    ಜಾಗತಿಕ ಸಾಮರ್ಥ್ಯ ಕೇಂದ್ರಗಳಲ್ಲೇ (ಗ್ಲೋಬಲ್ ಕೆಪ್ಯಾಸಿಟಿ ಸೆಂಟರ್,ಜಿಸಿಸಿ) ಬೆಂಗಳೂರನ್ನು ಜಾಗತಿಕ ಕೇಂದ್ರವನ್ನಾಗಿಸುವ ಗುರಿಯನ್ನು ಹೊಂದಲಾಗಿದ್ದು, ಇದರ ಭಾಗವಾಗಿ ಬೃಹತ್ ಬಿಸಿನೆಸ್ ಪಾರ್ಕ್ ತೆರೆಯಲಾಗುತ್ತಿದೆ. ಇದರಿಂದ ಒಟ್ಟು 3.5 ಲಕ್ಷ ಉದ್ಯೋಗ ಸೃಷ್ಟಿಗೆ ಹಾಗೂ ಆರ್ಥಿಕತೆಗೆ 50 ಶತಕೋಟಿ ಡಾಲರ್ ಕೊಡುಗೆ ನೀಡಲಿದೆ.

    ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ (BLR ವಿಮಾನ ನಿಲ್ದಾಣ) ಆವರಣದಲ್ಲಿರುವ ಬೆಂಗಳೂರು ವಿಮಾನ ನಿಲ್ದಾಣ ನಗರವನ್ನು ವಿಶ್ವ ದರ್ಜೆಯ ಮಿಶ್ರ-ಬಳಕೆಯ ತಾಣವಾಗಿ ಅಭಿವೃದ್ಧಿಪಡಿಸಲಾಗುತ್ತಿದೆ. ಈ ವಿಮಾನ ನಿಲ್ದಾಣ ನಗರದಲ್ಲಿ ಪ್ರಮುಖವಾಗಿ ವ್ಯಾಪಾರ, ಉದ್ಯಾನವನಗಳು, ಶಿಕ್ಷಣ ಮತ್ತು ಆರೋಗ್ಯ ಕೇಂದ್ರಗಳು, ಸಂಶೋಧನೆ ಮತ್ತು ಅಭಿವೃದ್ಧಿ (ಆರ್&ಡಿ) ಕೇಂದ್ರಗಳು ಮತ್ತು ವಿವಿಧ ಮನರಂಜನಾ ಹಾಗೂ ಆತಿಥ್ಯ ತಾಣಗಳು ತಲೆಯೆತ್ತಲಿದೆ. ಈ ನಗರವು ಸುಸ್ಥಿರ, ಸ್ಮಾರ್ಟ್, ಆಕರ್ಷಕ ನಗರಾಭಿವೃದ್ಧಿಯಿಂದ ಅಂತಾರಾಷ್ಟ್ರೀಯ ಹೆಬ್ಬಾಗಿಲಾಗಿ ಈ ನಗರ ಕಾರ್ಯನಿರ್ವಹಿಸಲು ಸಿದ್ಧವಾಗುತ್ತಿದೆ.

    ಈ ಬಿಸಿನೆಸ್ ಪಾರ್ಕ್ ಅನ್ನು 17.7 ಎಕರೆಗಳಲ್ಲಿ ನಿರ್ಮಿಸಲಾಗುತ್ತಿರುವ ಈ ಬಿಸಿನೆಸ್ ಪಾರ್ಕ್, ನಾಲ್ಕು ಬ್ಲಾಕ್‌ಗಳನ್ನು ಒಳಗೊಂಡಿದ್ದು, ಪ್ರತಿ ಬ್ಲಾಕ್ 0.5 ಮಿಲಿಯನ್ ಚದರ ಅಡಿ ನಗರ ಅರಣ್ಯದೊಳಗೆ ಮೂಡಿಬರಲಿದೆ. ಬಯೋಫಿಲಿಕ್ ವಿನ್ಯಾಸವು ಸೊಂಪಾದ ಉದ್ಯಾನಗಳು, ಬಾಲ್ಕನಿಗಳು ಮತ್ತು ಹಸಿರಿನಿಂದ ಕೂಡಿರುವ ಸ್ಥಳಗಳನ್ನು ಒಳಗೊಂಡಿದ್ದು, ಈ ಮೂಲಕ ವ್ಯಾಪಾರ ವಹಿವಾಟನ್ನು ಇನ್ನಷ್ಟು ಆಸಕ್ತಿದಾಯಗೊಳಿಸುವ ಉದ್ದೇಶವನ್ನು ಹೊಂದಿದೆ.

    ಬಿಎಸಿಎಲ್‌ನ ಕಾರ್ಯನಿರ್ವಾಹಕ ನಿರ್ದೇಶಕ ಮತ್ತು ಸಿಇಒ ರಾವ್ ಮುನುಕುಟ್ಲ ಮಾತನಾಡಿ, ಬೆಂಗಳೂರು ವಿಶ್ವದ ಜಿಸಿಸಿ ರಾಜಧಾನಿಯಾಗಿ ಬೆಳೆಯುತ್ತಿದೆ. ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ವಾಹನ ಮತ್ತು ಏರೋಸ್ಪೇಸ್ ಕ್ಷೇತ್ರದಲ್ಲಿ ಶೇ.36ರಷ್ಟು ಜಾಗತಿಕ ಸಾಮರ್ಥ್ಯ ಕೇಂದ್ರಗಳಿಗೆ (ಜಿಸಿಸಿಎಸ್) ಬೆಂಗಳೂರು ಭಾರತದ ಪ್ರಧಾನ ಕೇಂದ್ರವಾಗಿ ಹೊರಹೊಮ್ಮುತ್ತಿದೆ. ಬೆಂಗಳೂರು ಏರ್‌ಪೋರ್ಟ್ ಸಿಟಿಯಲ್ಲಿರುವ 2 ಮಿಲಿಯನ್ ಚದರ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಬಿಸಿನೆಸ್ ಪಾರ್ಕ್ ಸಾಕಷ್ಟು ನೆಟ್‌ವರ್ಕಿಂಗ್ ಅವಕಾಶಗಳು, ಸುಧಾರಿತ ಮೂಲಸೌಕರ್ಯಗಳು ಹಾಗೂ ಉನ್ನತ ದರ್ಜೆಯ ಸೌಕರ್ಯಗಳೊಂದಿಗೆ ಅಭಿವೃದ್ಧಿ ಹೊಂದುತ್ತದೆ ಎಂದು ಹೇಳಿದರು.

    ಈ ನಮ್ಮ ಯೋಜನೆಯು ಕರ್ನಾಟಕ ರಾಜ್ಯದ ಪ್ರಸ್ತುತ ಜಿಸಿಸಿ ನೀತಿಯೊಂದಿಗೆ ಸಂಪೂರ್ಣವಾಗಿ ಹೊಂದಿಕೆಯಾಗುವ ಮೂಲಕ, ಬೆಂಗಳೂರನ್ನು ಅಂತಾರಾಷ್ಟ್ರೀಯ ವ್ಯವಹಾರಗಳಿಗೆ ಕೇಂದ್ರಬಿಂದುವಾಗಿಸಲಿದೆ. ವಿಮಾನ ನಿಲ್ದಾಣ ನಗರದ ಒಟ್ಟಾರೆ ಅಭಿವೃದ್ಧಿಯ ಶೇ.52 ರಷ್ಟು ಭಾಗವು ವ್ಯಾಪಾರ ಉದ್ಯಾನವನಗಳ (ಬಿಸಿನೆಸ್ ಪಾರ್ಕ್) ಜಾಲವನ್ನು ಹೊಂದಲಿದ್ದು, ಸಹಯೋಗ ಹಾಗೂ ನಾವಿನ್ಯತೆಗೆ ಪ್ರೋತ್ಸಾಹಕೊಡಲಿದೆ. ಮುಂದಿನ ದಿನಗಳಲ್ಲಿ ತಲೆ ಎತ್ತಲಿರುವ ಏರ್‌ಪೋರ್ಟ್ ವೆಸ್ಟ್ ಮೆಟ್ರೋ ನಿಲ್ದಾಣವು ಈ ಬಿಸಿನೆಸ್‌ನ ಅತಿ ಸಮೀಪದಲ್ಲಿದ್ದು, ಬೆಂಗಳೂರಿನ ಸಿಟಿ ಸೆಂಟರ್‌ಗೆ ಸಂಪರ್ಕವನ್ನು ಕಲ್ಪಿಸಲಿದೆ. ಇದರಿಂದ ಉದ್ಯೋಗಿಗಳು, ಸಂದರ್ಶಕರಿಗೂ ಸಹ ವೇಗ ಮತ್ತು ಪರಿಸರ ಸ್ನೇಹಿ ಪ್ರಯಾಣವನ್ನು ಒದಗಿಸಲಿದೆ. ಬೆಂಗಳೂರು ವಿಮಾನ ನಿಲ್ದಾಣ ನಗರವು ಸುಧಾರಿತ ತಂತ್ರಜ್ಞಾನ ಕೇಂದ್ರವನ್ನು ರೂಪಿಸುತ್ತಿದ್ದು, ಇದರಲ್ಲಿ 3ಡಿ ಮುದ್ರಣ ಸಂಸ್ಥೆ ಮತ್ತು ಹೈಟೆಕ್ ಕೇಂದ್ರ ಪಾಕಶಾಲೆಗಳು ಸೇರಿದಂತೆ ಹಲವು ನಾವಿನ್ಯತೆಯ ಕೇಂದ್ರಬಿಂದುವಾಗಿರಲಿದೆ ಎಂದರು.

    ಈ ನಗರದಲ್ಲಿ ಮನರಂಜನೆ ಮತ್ತು ಆತಿಥ್ಯ ತಾಣಗಳು ತಲೆ ಎತ್ತುತ್ತಿದ್ದು, ವಿಮಾನ ನಿಲ್ದಾಣ ಪರಿಸರ ವ್ಯವಸ್ಥೆಯಲ್ಲಿ ಭಾರತದ ಪ್ರಪ್ರಥಮ ಕನ್ಸರ್ಟ್ ಅರೆನಾ, ಸಮಾವೇಶ ಮತ್ತು ಪ್ರದರ್ಶನ ಕೇಂದ್ರಗಳನ್ನು ಸಹ ಈ ಯೋಜನೆ ಒಳಗೊಂಡಿದೆ. ಈಗಾಗಲೇ ಏರ್‌ಪೋರ್ಟ್ ಆವರಣದಲ್ಲಿರುವ ಹೋಟೆಲ್ ತಾಜ್ ಬೆಂಗಳೂರು ಮತ್ತು ಪ್ರಸ್ತುತ ನಿರ್ಮಾಣ ಹಂತದಲ್ಲಿರುವ 775 ಕೊಠಡಿಗಳ ಕಾಂಬೋ ಹೋಟೆಲ್ (ವಿವಾಂಟಾ&ಜಿಂಜರ್) ಸೇರಿದಂತೆ ಏರ್‌ಪೋರ್ಟ್ ಸಿಟಿಯೊಳಗೆ 5,200 ಹೋಟೆಲ್ ಕೊಠಡಿಗಳನ್ನು ಒಳಗೊಂಡು ಬೃಹತ್ ಆತಿಥ್ಯ ತಾಣವಾಗಿ ಹೊರಹೊಮ್ಮಲಿದೆ.

    ಏರ್‌ಪೋರ್ಟ್ ಸಿಟಿಯು ಅದ್ಭುತ ವಿನ್ಯಾಸದಿಂದ ರೂಪುಗೊಳ್ಳುತ್ತಿದ್ದು, ಇಡೀ ಆವರಣ ಶಕ್ತಿ-ತಟಸ್ಥವಾಗಿ ಕಾರ್ಯನಿರ್ವಹಿಸಿ, ನವೀಕರಿಸಬಹುದಾದ ಸಂಪನ್ಮೂಲಗಳಿಂದ ನಿರ್ಮಾಣಗೊಳ್ಳುತ್ತಿದ್ದು, ಐಜಿಬಿಸಿಯ ಗ್ರೀನ್ ಸಿಟಿಸ್ ಪ್ಲಾಟಿನಂ ಪ್ರಮಾಣೀಕರಣವನ್ನು ಗಳಿಸಿದೆ. ಅಷ್ಟೇ ಅಲ್ಲದೆ ಬೃಹತ್ ಪ್ರಮಾಣದಲ್ಲಿ ಮಳೆನೀರು ಕೊಯ್ಲು ಅಳವಡಿಸಿಕೊಳ್ಳಲಾಗುತ್ತಿದ್ದು, ಇದರಿಂದ ವಿಮಾನ ನಿಲ್ದಾಣ ನಗರದ ನೀರಿನ ಅಗತ್ಯಗಳನ್ನು ಪೂರೈಸಲಿದೆ. ಈ ನಿಟ್ಟಿನಲ್ಲಿ ವಿಶ್ವ ಸಂಸ್ಥೆಯ ಪರಿಸರ ಸ್ನೇಹಿ, ಸುಸ್ಥಿರ ಅಭಿವೃದ್ಧಿ ಮಾರ್ಗದರ್ಶನದ ಜವಾಬ್ದಾರಿ ನಿರ್ವಹಣೆಯ ಧ್ಯೇಯದೊಂದಿಗೆ ಹೊಂದಿಸಲಾಗಿದೆ.

    ಇನ್ನು ಬೆಂಗಳೂರು ವಿಮಾನ ನಿಲ್ದಾಣ ನಗರವು ಅತಿ ನಿರೀಕ್ಷಿತ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರವನ್ನು ಬೃಹತ್ ಪ್ರಮಾಣದಲ್ಲಿ ವಿಸ್ತರಿಸುತ್ತಿದೆ. ಇದಕ್ಕಾಗಿ ಪ್ರಮುಖ ಅಂತಾರಾಷ್ಟ್ರೀಯ ಸಂಸ್ಥೆಗಳನ್ನು ಆಕರ್ಷಿಸುತ್ತಿದ್ದು, ಇದು ರಾಜ್ಯದ ಶೈಕ್ಷಣಿಕ ಮತ್ತು ಆರೋಗ್ಯ ಮೂಲಸೌಕರ್ಯವನ್ನು ಉನ್ನತೀಕರಿಸಲು ಲೈಫ್ ಸೈನ್ಸಸ್ ಪಾರ್ಕ್ ಅನ್ನು ಸ್ಥಾಪಿಸುತ್ತಿದೆ. ಬಿಐಎಎಲ್ ಅಕಾಡೆಮಿ ಮತ್ತು ಏರ್ ಇಂಡಿಯಾ ಅಕಾಡೆಮಿಯಂತಹ ಸಂಸ್ಥೆಗಳು ಮುಂದಿನ ಪೀಳಿಗೆಯ ವಾಯುಯಾನ ಮತ್ತು ಆತಿಥ್ಯ ವೃತ್ತಿಪರರಿಗೆ ತರಬೇತಿ ನೀಡಲಿವೆ.

    ಬೆಂಗಳೂರು ವಿಮಾನ ನಿಲ್ದಾಣ ನಗರವು ಸುಸ್ಥಿರ, ನವೀನ ಮತ್ತು ಸಂಪರ್ಕಿತ ನಗರಾಭಿವೃದ್ಧಿಯ ದೃಷ್ಟಿಯನ್ನು ಸಾಕಾರಗೊಳಿಸುತ್ತಿದ್ದು, ಮಿಶ್ರ-ಬಳಕೆಯ ನಗರದ ಯೋಜನೆಗೆ ಜಾಗತಿಕವಾಗಿ ಮಾದರಿಯಾಗಲಿದೆ. ಈ ಪ್ರದೇಶದ ಆರ್ಥಿಕ ಬೆಳವಣಿಗೆಯ ಕೇಂದ್ರಭಾಗದಲ್ಲಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ವಿಶ್ವಾದ್ಯಂತ ವೇಗವಾಗಿ ಬೆಳೆಯುತ್ತಿರುವ ವಿಮಾನ ನಿಲ್ದಾಣಗಳಲ್ಲಿ ಒಂದಾಗಿದೆ. ಕಳೆದ ವರ್ಷ 37.5 ದಶಲಕ್ಷ ಜನರನ್ನು ನಿರ್ವಹಿಸಿದೆ. ವಿಮಾನ ನಿಲ್ದಾಣವು 2030ರ ವೇಳೆಗೆ ತನ್ನ ಸಾಮರ್ಥ್ಯವನ್ನು 90 ದಶಲಕ್ಷ ಪ್ರಯಾಣಿಕರಿಗೆ ವಿಸ್ತರಿಸಲು ಯೋಜಿಸಲಾಗಿದೆ. ಈ ಅಭಿವೃದ್ಧಿ ಬೆಂಗಳೂರಿನ ಪಾತ್ರವನ್ನು ಜಾಗತಿಕ ವ್ಯವಹಾರಗಳಿಗೆ ಮತ್ತು ಸುಧಾರಿತ ಉತ್ಪಾದನೆಗೆ ಪ್ರಮುಖ ಕೇಂದ್ರವಾಗಿ ಮತ್ತಷ್ಟು ಗಟ್ಟಿಗೊಳಿ ಸಲು ಅನುವು ಮಾಡಿಕೊಡಲಿದೆ. ವಿಶೇಷವಾಗಿ ಏರೋಸ್ಪೇಸ್ ವಲಯದಲ್ಲಿ, ಏರ್‌ಬಸ್ ಮತ್ತು ಬೋಯಿಂಗ್‌ನಂತಹ ಉದ್ಯಮದ ದೈತ್ಯರು ನಗರದ ನುರಿತ ಉದ್ಯೋಗಿಗಳಿಂದ ಲಾಭ ಪಡೆಯಲಿದ್ದಾರೆ.

  • ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ತುರ್ತು ಆಕ್ಸಿಜನ್ ಜನರೇಟರ್ಸ್ ಸ್ಥಾಪನೆ

    ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ತುರ್ತು ಆಕ್ಸಿಜನ್ ಜನರೇಟರ್ಸ್ ಸ್ಥಾಪನೆ

    ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರು ಹಾಗೂ ಸಿಬ್ಬಂದಿಯ ಅನುಕೂಲಕ್ಕಾಗಿ 10 ತುರ್ತು ಆಮ್ಲಜನಕ ಜನರೇಟರ್‌ಗಳನ್ನು ಸ್ಥಾಪಿಸಲಾಗಿದೆ.

    ಡಿಪಾರ್ಚರ್ಸ್ ಮತ್ತು ಆಗಮನದ ಪ್ರದೇಶದಲ್ಲಿ ತುರ್ತು ಆಮ್ಲಜನಕದ ಸಕಾಲಿಕ ಲಭ್ಯತೆಯು ಹೃದಯಾಘಾತ, ಉಸಿರಾಟದ ತೊಂದರೆ, ಮೂರ್ಜೆ ಅಥವಾ ಇತರೆ ಉಸಿರಾಟದ ಸಮಸ್ಯೆಯುಳ್ಳವರಿಗೆ ತುರ್ತಾಗಿ ಆಮ್ಲಜನಕ ಒದಗಿಸುವ ಉದ್ದೇಶದಿಂದ ಈ ಸೇವೆ ಪ್ರಾರಂಭಿಸಲಾಗಿದೆ. ಇದನ್ನೂ ಓದಿ: ಅಮರನಾಥ ಯಾತ್ರೆಗೆ ಎರಡೇ ದಿನ: ಯಾತ್ರಾರ್ಥಿಗಳಿಗೆ ಆಧಾರ್, ಸರ್ಕಾರಿ ಗುರುತಿನ ಚೀಟಿ ಕಡ್ಡಾಯ  

    40 ನಿಮಿಷಗಳವರೆಗೆ 99.7 ಶೇಕಡಾ ಶುದ್ಧ ವೈದ್ಯಕೀಯ ದರ್ಜೆಯ ಆಮ್ಲಜನಕವನ್ನು ಒದಗಿಸುತ್ತದೆ. ಇದು ಆರೋಗ್ಯದಲ್ಲಿ ಸಮಸ್ಯೆ ಇರುವ ವ್ಯಕ್ತಿಯು ಆಸ್ಪತ್ರೆಯನ್ನು ತಲುಪುವವರೆಗೆ ಸಾಕಷ್ಟು ಬೆಂಬಲವನ್ನು ನೀಡುತ್ತದೆ.

    ಈ ಕುರಿತು ಪ್ರತಿಕ್ರಿಯಿಸಿದ ಬಿಐಎಎಲ್(ಬೆಂಗಳೂರು ಇಂಟರ್‌ನ್ಯಾಶನಲ್ ಏರ್‌ಪೋರ್ಟ್ ಲಿಮಿಟೆಡ್) ವಕ್ತಾರರು, ಪ್ರಯಾಣಿಕರ ಆರೋಗ್ಯ ಮತ್ತು ಸುರಕ್ಷತೆಯನ್ನು ರಕ್ಷಿಸುವುದು ನಮ್ಮ ಪ್ರಮುಖ ಆದ್ಯತೆಯಾಗಿದೆ ಎಂದು ವಿವರಿಸಿದರು. ಇದನ್ನೂ ಓದಿ:  ಕಾಶ್ಮೀರದಲ್ಲಿ ಸರಣಿ ಸ್ಫೋಟ- ಇಬ್ಬರು ಲಷ್ಕರ್ ಉಗ್ರರು ಅರೆಸ್ಟ್ 

    Live Tv

  • ವಿಮಾನ ನಿಲ್ದಾಣದಲ್ಲಿ ಕೋವಿಡ್-19 ಟೆಸ್ಟಿಂಗ್ ಹೆಚ್ಚಳ

    ವಿಮಾನ ನಿಲ್ದಾಣದಲ್ಲಿ ಕೋವಿಡ್-19 ಟೆಸ್ಟಿಂಗ್ ಹೆಚ್ಚಳ

    ಬೆಂಗಳೂರು: ಓಮಿಕ್ರಾನ್ ಪತ್ತೆಯಾದ ಬೆನ್ನಲ್ಲೇ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೋವಿಡ್-19 ಪರೀಕ್ಷೆಗಳನ್ನು ಹೆಚ್ಚಿಸಲಾಗಿದೆ.

    ಆರ್‌ಟಿ-ಪಿಸಿಆರ್‌ ವರದಿಯನ್ನು ತ್ವರಿತವಾಗಿ ನೀಡುವ ವ್ಯವಸ್ಥೆಯನ್ನು ಮಾಡಲಾಗಿದೆ. ವಿಮಾನ ಹಾರಾಟ ಕಾರ್ಯಾಚರಣೆ ವೇಳೆ ಕೋವಿಡ್ ಹರಡದಂತೆ ನಿಯಂತ್ರಿಸಲು ಅನೇಕ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ಸಲುವಾಗಿ ಆರಂಭಿಸಲಾದ ಕೋವಿಡ್ ಪರೀಕ್ಷಾ ಕೇಂದ್ರವನ್ನು ಆರಿಗಾ ರಿಸರ್ಚ್ ಸಂಸ್ಥೆ ನಿರ್ವಹಿಸುತ್ತಿದೆ. ಇದನ್ನೂ ಓದಿ: 3ನೇ ಅಲೆ ತೀವ್ರತೆ ಹೆಚ್ಚಾಗಬಹುದು – ಐಎಂಎ ವಾರ್ನಿಂಗ್

    ಈ ಸಂಸ್ಥೆಯು ಪ್ರಯಾಣಿಕರಿಗೆ ಡಿಜಿಟಲ್ ಮಾದರಿಯಲ್ಲಿ ಪರೀಕ್ಷೆಯ ವರದಿ ನೀಡುವ ಸಲುವಾಗಿ ಈವರೆಗೆ 8 ಯಂತ್ರಗಳೊಂದಿಗೆ ಕಾರ್ಯನಿರ್ವಹಿಸುತ್ತಿತ್ತು. ಈಗ ಯಂತ್ರಗಳ ಸಂಖ್ಯೆಯನ್ನು 58ಕ್ಕೆ ಹೆಚ್ಚಿಸಲಾಗಿದೆ. ಹೀಗಾಗಿ ಪ್ರಯಾಣಿಕರು ಪರೀಕ್ಷಾ ವರದಿ ಪಡೆಯಲು ಗಂಟೆಗಟ್ಟಲೆ ಕಾಯುವುದು ತಪ್ಪಲಿದೆ ಎಂದು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಂಸ್ಥೆಯ(ಬಿಐಎಎಲ್) ಪ್ರಕಟಣೆ ತಿಳಿಸಿದೆ.

    ವಿವಿಧೆಡೆಯಿಂದ ಇಲ್ಲಿಗೆ ಬರುವ ಹಾಗೂ ಇಲ್ಲಿಂದ ಬೇರೆಡೆಗೆ ತೆರಳುವ ಪ್ರಯಾಣಿಕರ ಕೋವಿಡ್ ಪರೀಕ್ಷೆಗಾಗಿ ಟರ್ಮಿನಲ್‍ಗಳಲ್ಲಿ ಎಲ್ಲ ವ್ಯವಸ್ಥೆ ಮಾಡಲಾಗಿದೆ. ಅಂತರ ನಿಯಮವನ್ನೂ ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದೆ. ವೃದ್ಧರು, ಮಕ್ಕಳು ಹಾಗೂ ಹಾಲುಣಿಸುವ ತಾಯಂದಿರಿಗೆ ಮೊದಲ ಪ್ರಾಶಸ್ತ್ಯ ನೀಡಲಾಗುತ್ತಿದೆ. ಅವರಿಗಾಗಿ ವಿಶೇಷ ಪರೀಕ್ಷಾ ಕೌಂಟರ್‌ಗಳನ್ನೂ ತೆರೆಯಲಾಗಿದೆ ಎಂದು ಹೇಳಿದೆ.

    ನಿಲ್ದಾಣಕ್ಕೆ ಬಂದಿಳಿದ ಕೂಡಲೇ ಪ್ರಯಾಣಿಕರ ಗಂಟಲ ದ್ರವ ಸಂಗ್ರಹಿಸಲಾಗುತ್ತಿದ್ದು, ಅವರು ಬ್ಯಾಗೇಜ್ ಪಡೆದುಕೊಳ್ಳುವಷ್ಟರಲ್ಲಿ ಕೋವಿಡ್ ಪರೀಕ್ಷಾ ವರದಿ ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದೂ ಸಹ ತಿಳಿಸಿದೆ. ಇದನ್ನೂ ಓದಿ: ಓಮಿಕ್ರಾನ್ ಭೀತಿ – ಮಕ್ಕಳನ್ನು ಪೋಷಕರು ಈ ರೀತಿ ಕಾಪಾಡಿಕೊಳ್ಳಿ