Tag: ಬಿಕ್ಕಟ್ಟು

  • ಪಾಕ್‌ನಲ್ಲಿ ವಿದ್ಯುತ್ ಬಿಕ್ಕಟ್ಟು – ರಾತ್ರಿ 8:30 ಬಳಿಕ ಮಾರುಕಟ್ಟೆ, 10ರ ಬಳಿಕ ಮದುವೆ ಮಾಡುವಂತಿಲ್ಲ

    ಪಾಕ್‌ನಲ್ಲಿ ವಿದ್ಯುತ್ ಬಿಕ್ಕಟ್ಟು – ರಾತ್ರಿ 8:30 ಬಳಿಕ ಮಾರುಕಟ್ಟೆ, 10ರ ಬಳಿಕ ಮದುವೆ ಮಾಡುವಂತಿಲ್ಲ

    ಇಸ್ಲಾಮಾಬಾದ್: ಹಣದ ಕೊರತೆಯನ್ನು ಎದುರಿಸುತ್ತಿರುವ ಪಾಕಿಸ್ತಾನ, ಇಂಧನವನ್ನು ಉಳಿಸುವ ಪ್ರಯತ್ನದಲ್ಲಿದೆ. ಈ ಹಿನ್ನೆಲೆ ಸರ್ಕಾರ ಇಸ್ಲಾಮಾಬಾದ್ ನಗರದಲ್ಲಿ ರಾತ್ರಿ 10 ಗಂಟೆಯ ಬಳಿಕ ಮದುವೆ ಕಾರ್ಯಕ್ರಮಗಳನ್ನು ನಿಷೇಧಿಸಿದೆ ಹಾಗೂ ದೇಶಾದ್ಯಂತ ರಾತ್ರಿ 8:30ರ ಬಳಿಕ ಮಾರುಕಟ್ಟೆಗಳನ್ನು ಮುಚ್ಚಲು ನಿರ್ಧರಿಸಿದೆ.

    ಪಾಕಿಸ್ತಾನದ ವಿದ್ಯುತ್ ಬಿಕ್ಕಟ್ಟು ಅಲ್ಲಿನ ಆರ್ಥಿಕತೆಯ ಮೇಲೂ ಪರಿಣಾಮ ಬೀರಿದೆ. ಈ ಹಿನ್ನೆಲೆ ರಾಷ್ಟ್ರೀಯ ಆರ್ಥಿಕ ಮಂಡಳಿ(ಎನ್‌ಇಸಿ) ದೇಶಾದ್ಯಂತ ಮಾರುಕಟ್ಟೆಗಳನ್ನು ರಾತ್ರಿ 8:30ಕ್ಕೆ ಮುಚ್ಚುವಂತೆ ಒತ್ತಾಯಿಸಿದೆ. ಜೊತೆಗೆ ರಾಜಧಾನಿ ಇಸ್ಲಾಮಾಬಾದ್‌ನಲ್ಲಿ ರಾತ್ರಿ 10 ಗಂಟೆ ಬಳಿಕ ಯಾವುದೇ ಮದುವೆ ಕಾರ್ಯಕ್ರಮಗಳನ್ನು ನಡೆಸದಂತೆ ತಿಳಿಸಿದೆ. ಈ ಕ್ರಮವನ್ನು ಜೂನ್ 8ರಿಂದಲೇ ಕಾರ್ಯಗತಗೊಳಿಸಿದೆ. ಇದನ್ನೂ ಓದಿ: ಯುಎಸ್ ಮಿಲಿಟರಿ ವಿಮಾನ ಪತನ- ನಾಲ್ವರ ದುರ್ಮರಣ

    ಬುಧವಾರ ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಸಿಂಧ್, ಪಂಜಾಬ್ ಹಾಗೂ ಬಲೂಚಿಸ್ತಾನದ ಮುಖ್ಯಮಂತ್ರಿಗಳು ಈ ಬಗ್ಗೆ ಸಮಾಲೋಚನೆ ನಡೆಸಲು 2 ದಿನಗಳ ಕಾಲಾವಕಾಶ ಕೋರಿದ್ದು, ಆದರೂ ಈ ಕ್ರಮಕ್ಕೆ ಒಪ್ಪಿಗೆ ನೀಡಿದ್ದಾರೆ. ಇದನ್ನೂ ಓದಿ: 105 ಗಂಟೆಯಲ್ಲಿ 75 ಕಿ.ಮೀ ಹೆದ್ದಾರಿ ನಿರ್ಮಿಸಿ ಗಿನ್ನಿಸ್ ದಾಖಲೆ ಬರೆದ NHAI

    ದೇಶದಲ್ಲಿ ಉತ್ಪಾದನೆಯಾಗುತ್ತಿರುವ ವಿದ್ಯುತ್ 22,000 ಮೆಗಾವ್ಯಾಟ್ ಹಾಗೂ ಅವಶ್ಯಕತೆ ಇರುವುದು 26,000 ಮೆಗಾವ್ಯಾಟ್. ದೇಶದಲ್ಲಿ ಸುಮಾರು 4,000 ಮೆಗಾವ್ಯಾಟ್ ಶಕ್ತಿಯ ಕೊರತೆಯಿದೆ. ಮಾರುಕಟ್ಟೆಯನ್ನು ಬೇಗನೆ ಮುಚ್ಚುವುದು ಹಾಗೂ ಜನರಿಗೆ ಮನೆಯಿಂದಲೇ ಕೆಲಸ ಮಾಡಿಸುವ ವ್ಯವಸ್ಥೆಗಳಿಂದ ವಿದ್ಯುತ್ ಅನ್ನು ಉಳಿಸಬಹುದು ಎಂದು ವಿದ್ಯುತ್ ಸಚಿವ ಖರ‍್ರುಮ್ ದಸ್ತಗಿರ್ ತಿಳಿಸಿದ್ದಾರೆ.

  • ರಷ್ಯಾ ಉಕ್ರೇನ್ ಬಿಕ್ಕಟ್ಟು ಚಿತ್ರೀಕರಣಕ್ಕೆ ಮುಂದಾದ ಹಾಲಿವುಡ್ ಸ್ಟಾರ್

    ರಷ್ಯಾ ಉಕ್ರೇನ್ ಬಿಕ್ಕಟ್ಟು ಚಿತ್ರೀಕರಣಕ್ಕೆ ಮುಂದಾದ ಹಾಲಿವುಡ್ ಸ್ಟಾರ್

    ಕೀವ್: ಯುದ್ಧ ವಿರೋಧಿ ಮತ್ತು ಮಾನವೀಯ ಕಾರಣಗಳಿಗಾಗಿ ಸದಾ ಮಿಡಿಯುವ ಹಾಲಿವುಡ್ ತಾರೆ, ಆಸ್ಕರ್ ಪ್ರಶಸ್ತಿ ವಿಜೇತ ಸೀನ್ ಪೆನ್ ಉಕ್ರೇನ್‍ನಲ್ಲಿ ನಡೆಯುತ್ತಿರುವ ರಷ್ಯಾದ ಆಕ್ರಮಣದ ಕುರಿತು ಸಾಕ್ಷ್ಯ ಚಿತ್ರ ಮಾಡಲು ಮುಂದಾಗಿದ್ದಾರೆ.

    ಉಕ್ರೇನ್‍ನ ಸರ್ಕಾರಿ ಅಧಿಕಾರಿಗಳು ತಮ್ಮ ನೆಲದಲ್ಲಿ ನಡೆಯುತ್ತಿರುವ ಪ್ರಸ್ತುತ ಬಿಕ್ಕಟ್ಟಿನ ಕುರಿತು ಮಾತನಾಡುತ್ತಿದ್ದ ಪತ್ರಿಕಾಗೋಷ್ಠಿಯಲ್ಲೀ ಸೀನ್ ಭಾಗಿಯಾಗಿದ್ದರು. ಸಾಕ್ಷ್ಯ ಚಿತ್ರಕ್ಕೆ ಬೇಕಾದ ವಿವರಗಳನ್ನು ಅವರು ಪತ್ರಿಕಾಗೋಷ್ಠಿಯಲ್ಲಿ ಆಲಿಸುತ್ತಿದ್ದರು. ಈ ಸಾಕ್ಷ್ಯ ಚಿತ್ರವು ಡಾಕ್ ವೈಸ್ ವಲ್ರ್ಡ್ ನ್ಯೂಸ್ ಮತ್ತು ಎಂಡೀವರ್ ಕಂಟೆಂಟ್‍ನ ಸಹಯೋಗದೊಂದಿಗೆ ವೈಸ್ ಸ್ಟುಡಿಯೋಸ್ ಅಡಿಯಲ್ಲಿ ನಿರ್ಮಾಣವಾಗಲಿದೆ. ಇದನ್ನೂ ಓದಿ:  ರಷ್ಯಾ ದಾಳಿಯಿಂದ ರಕ್ಷಿಸಿಕೊಳ್ಳಲು ಭೂಗತ ಹ್ಯಾಕರ್‌ಗೆ ಉಕ್ರೇನ್ ಕರೆ!

    ಈ ಮೊದಲೇ ಸೀನ್ ಸಾಕ್ಷ್ಯ ಚಿತ್ರಕ್ಕಾಗಿ ಸಾಕಷ್ಟು ಸಿದ್ಧತೆ ಮಾಡಿಕೊಂಡಿದ್ದಾರೆ. ಕೊನೆಯದಾಗಿ ನವೆಂಬರ್ 2021ರಲ್ಲಿ ಉಕ್ರೇನ್‍ಗೆ ಭೇಟಿ ನೀಡಿದ್ದ ಅವರು, ಈ ವೇಳೆ ಉಕ್ರೇನ್ ದೇಶದ ಮಿಲಿಟರಿ ಪ್ರತಿಷ್ಟಾನಗಳಿಗೆ ಭೇಟಿ ನೀಡಿ ಮಾಹಿತಿ ಕಲೆ ಹಾಕಿದ್ದರು ಎಂದು ವರದಿಯಾಗಿದೆ. ಅಲ್ಲದೇ, ಪೆನ್ ಅವರು ಉಕ್ರೇನಿಯನ್ ರಾಯಭಾರ ಕಚೇರಿಗೆ ಭೇಟಿ ನೀಡಿದ್ದರು. ಉಕ್ರೇನಿಯನ್ ಉಪ ಪ್ರಧಾನಿ ಐರಿನಾ ವೆರೆಶ್‍ಚುಕ್ ಜೊತೆಗೆ ಸ್ಥಳೀಯ ಪತ್ರಕರ್ತರು ಮತ್ತು ಉಕ್ರೇನಿಯನ್ ಮಿಲಿಟರಿಯ ಸದಸ್ಯರೊಂದಿಗೆ ಅವರು ಮಾತನಾಡಿ ಸಾಕಷ್ಟು ವಿಷಯ ಸಂಗ್ರಹಿಸಿದ್ದಾರೆ ಎನ್ನಲಾಗುತ್ತಿದೆ.  ಇದನ್ನೂ ಓದಿ:  ಉಕ್ರೇನ್‍ನಲ್ಲಿ ಸಿಲುಕಿದ್ದಾರೆ 10 ಮಂದಿ ಕರ್ನಾಟಕ ವಿದ್ಯಾರ್ಥಿಗಳು!

    ಉಕ್ರೇನಿಯನ್ ರಾಯಭಾರ ಕಚೇರಿಯು ಈ ಚಲನಚಿತ್ರ ನಿರ್ಮಾಪಕರನ್ನು ಶ್ಲಾಘಿಸಿ ಹೇಳಿಕೆ ನೀಡಿದ್ದು, ಉಕ್ರೇನ್‍ನಲ್ಲಿ ಪ್ರಸ್ತುತ ನಡೆಯುತ್ತಿರುವ ಎಲ್ಲಾ ಘಟನೆಗಳನ್ನು ರೆಕಾರ್ಡ್ ಮಾಡಲು ಮತ್ತು ನಮ್ಮ ದೇಶದ ಮೇಲೆ ರಷ್ಯಾದ ಆಕ್ರಮಣದ ಬಗ್ಗೆ ಜಗತ್ತಿಗೆ ಸತ್ಯವನ್ನು ತಿಳಿಸಲು ವಿಶೇಷವಾಗಿ ಪೆನ್ ಅವರು ಕೈವ್‍ಗೆ ಬಂದಿದ್ದಾರೆ ಎಂದು ತಿಳಿಸಿತು. ‘ಉಕ್ರೇನ್‍ಗೆ ಬೆಂಬಲ ನೀಡುವವರಲ್ಲಿ ಸೀನ್ ಪೆನ್ ಕೂಡಾ ಒಬ್ಬರಾಗಿದ್ದಾರೆ. ಅವರ ಧೈರ್ಯ ಮತ್ತು ಪ್ರಾಮಾಣಿಕತೆಗೆ ನಮ್ಮ ದೇಶವು ಅವರಿಗೆ ಸದಾ ಕೃತಜ್ಞರಾಗಿರಬೇಕು’ ಎಂದು ಶ್ಲಾಘಿಸಿದೆ.

  • ಚೀನಾ ವಿಚಾರದಲ್ಲಿ ಮೌನ, ಬಿಕ್ಕಟ್ಟಿನ ವೇಳೆ ಊಹಾಪೋಹಗಳಿಗೆ ಕಾರಣವಾಗಲಿದೆ: ರಾಗಾ

    ಚೀನಾ ವಿಚಾರದಲ್ಲಿ ಮೌನ, ಬಿಕ್ಕಟ್ಟಿನ ವೇಳೆ ಊಹಾಪೋಹಗಳಿಗೆ ಕಾರಣವಾಗಲಿದೆ: ರಾಗಾ

    ನವದೆಹಲಿ: ಚೀನಾದೊಂದಿಗಿನ ಗಡಿ ವಿಚಾರದಲ್ಲಿ ಕೇಂದ್ರ ಸರ್ಕಾರ ಮೌನವಾಗಿರುವುವುದು ಬಿಕ್ಕಟ್ಟಿನ ಸಂದರ್ಭದಲ್ಲಿ ಭಾರೀ ಊಹಾಪೋಹಗಳು ಹಾಗೂ ಅನಿಶ್ಚಿತತೆಗೆ ಕಾರಣವಾಗಲಿದೆ ಎಂದು ಕಾಂಗ್ರೆಸ್ ಪಕ್ಷದ ನಾಯಕ ಹಾಗೂ ಸಂಸದ ರಾಹುಲ್ ಗಾಂಧಿ ಪ್ರತಿಕ್ರಿಯಿಸಿದ್ದಾರೆ.

    ಭಾರತ ಚೀನಾ ಗಡಿಯಲ್ಲ ಉದ್ವಿಗ್ನತೆ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಟ್ವೀಟ್ ಮಾಡಿರುವ ಅವರು, ಗಡಿಯಲ್ಲಿ ನಡೆಯುತ್ತಿರುವ ಬೆಳವಣಿಗಳ ಬಗ್ಗೆ ಮೌನ ಮುರಿದು ವಾಸ್ತವದಲ್ಲಿ ಏನು ನಡೆಯುತ್ತಿದೆ ಎಂದು ಹೇಳುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಒತ್ತಾಯಿಸಿದ್ದಾರೆ.

    ಕಳೆದ ಮೂರು ವಾರಗಳಿಂದ ಗಡಿಯಲ್ಲಿ ಉದ್ವಿಗ್ನ ವಾತಾವರಣ ಸೃಷ್ಟಿಯಾಗಿದೆ. ಸೈನಿಕರು ಮುಖಾಮುಖಿಯಾಗಿದ್ದಾರೆ. ಚೀನಾ ಯುದ್ಧ ಸಿದ್ಧತೆ ಮಾಡಿಕೊಳ್ಳುತ್ತಿದೆ ಎಂದು ವರದಿಯಾಗಿದೆ. ಈ ಹಿನ್ನಲೆ ದೇಶದ ಜನರಿಗೆ ಈ ಬಗ್ಗೆ ಸ್ಪಷ್ಟವಾಗಿ ತಿಳಿಸಬೇಕು ಎಂದು ರಾಹುಲ್ ಗಾಂಧಿ ಕೇಂದ್ರ ಸರ್ಕಾರಕ್ಕೆ ಆಗ್ರಹ ಮಾಡಿದ್ದಾರೆ.

    ಇದಕ್ಕೂ ಮೊದಲು ಅವರು ಸುದ್ದಿಗೋಷ್ಠಿಯೊಂದರಲ್ಲಿ ಮಾತನಾಡಿ, ಗಡಿ ವಿಚಾರದಲ್ಲಿ ರಾಜಕೀಯ ಮಾಡುವುದು ಸರಿಯಲ್ಲ. ಈ ಬಗ್ಗೆ ನಾನು ಮಾತನಾಡುವುದಿಲ್ಲ ಸರ್ಕಾರ ಗಡಿಯಲ್ಲಿ ನಡೆಯುತ್ತಿರುವ ಬೆಳವಣಿಗಳನ್ನು ಹೇಳಬೇಕು. ವಿಚಾರವನ್ನು ದೇಶದ ಮುಂದೆ ಪಾರದರ್ಶಕವಾಗಿಡಬೇಕು ಎಂದು ಅಭಿಪ್ರಾಯ ಪಟ್ಟಿದ್ದರು.

  • ಕನ್ನಡ ಸೇರಿ ದಕ್ಷಿಣ ಭಾರತದ ಹೊಸ ಸಿನಿಮಾಗಳು ಮಾರ್ಚ್ 9ರಿಂದ ಬಿಡುಗಡೆ ಆಗಲ್ಲ!

    ಕನ್ನಡ ಸೇರಿ ದಕ್ಷಿಣ ಭಾರತದ ಹೊಸ ಸಿನಿಮಾಗಳು ಮಾರ್ಚ್ 9ರಿಂದ ಬಿಡುಗಡೆ ಆಗಲ್ಲ!

    ಬೆಂಗಳೂರು: ದಕ್ಷಿಣ ಭಾರತದ ಚಲನಚಿತ್ರ ವಾಣಿಜ್ಯ ಮಂಡಳಿಗಳು ಮತ್ತು ಯುಎಫ್‍ಓ, ಕ್ಯೂಬ್ ನಡುವಿನ ಬಿಕ್ಕಟ್ಟಿನಿಂದಾಗಿ ಮಾರ್ಚ್ 9ರಿಂದ ಹೊಸ ಸಿನಿಮಾಗಳ ಪ್ರದರ್ಶನ ಸ್ಥಗಿತಗೊಳ್ಳಲಿದೆ.

    ಈ ಹಿಂದೆ ಅಪ್‍ಲೋಡ್ ಆಗಿದ್ದ ಸಿನಿಮಾಗಳು ಮಾತ್ರ ತೆರೆಕಾಣುತ್ತೆ. ಯುಎಫ್‍ಓ ಮತ್ತು ಕ್ಯೂಬ್ ದುಬಾರಿ ವೆಚ್ಚದ ಹಿನ್ನೆಲೆಯಲ್ಲಿ ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇರಳ ಹಾಗೂ ಪಾಂಡಿಚೇರಿಯ ವಾಣಿಜ್ಯ ಮಂಡಳಿಗಳು ಕೆಲದಿನಗಳ ಹಿಂದೆ ಬೆಂಗಳೂರಿನಲ್ಲಿ ಸಭೆ ನಡೆಸಿ, ಯುಎಫ್‍ಓ ಕ್ಯೂಬ್‍ಗೆ ಸಿನಿಮಾ ಕೊಡದಿರಲು ತೀರ್ಮಾನ ತೆಗೆದುಕೊಂಡಿತ್ತು.

    ಯುಎಫ್‍ಓ ಮತ್ತು ಕ್ಯೂಬ್ ಜತೆ ಎರಡು ಸುತ್ತಿನ ಮಾತುಕತೆಯಾದರೂ ಸಂಧನ ಯಶಸ್ವಿಯಾಗಿರಲಿಲ್ಲ. ಯುಎಫ್‍ಓ ಮತ್ತು ಕ್ಯೂಬ್‍ನವರ ಸರಿಯಾಗಿ ಸ್ಪಂದಿಸದೇ ಇದ್ದ ಕಾರಣ ಹೊಸ ಮಾರ್ಗವನ್ನು ಹುಡುಕಲು ನಾಲ್ಕು ರಾಜ್ಯಗಳ ಚಲನಚಿತ್ರ ವಾಣಿಜ್ಯ ಮಂಡಳಿಗಳು ಯೋಚಿಸುತ್ತಿವೆ. ಇಂದಿನಿಂದ ರಿಲೀಸ್ ಮಾಡಬೇಕಾದ ಚಿತ್ರಗಳ ಪರಿಸ್ಥಿತಿ ಏನು ಎನ್ನುವ ಬಗ್ಗೆ ದಕ್ಷಿಣ ಭಾರತ ಫಿಲ್ಮ್ ಇಂಡಸ್ಟ್ರಿಯ ನಿರ್ಮಾಪಕರಲ್ಲಿ ಭಯ ಉಂಟಾಗಿದೆ. ಆದರೆ ಚಿತ್ರಗಳ ಬಿಡುಗಡೆಗೆ ಬದಲಿ ವ್ಯವಸ್ಥೆ ಮಾಡಿಕೊಳ್ಳಲಾಗುತ್ತಿದೆ ಎನ್ನಲಾಗಿದೆ.