Tag: ಬಿಗ್‌ಬಾಸ್‌ 12

  • ಒಂದು ಬಾರಿ ನೋಟಿಸ್ ಕೊಟ್ಟ ಮೇಲೆ ಅದು ಸರಿ ಆಗೋವರೆಗೂ ಬೀಗ ತೆಗೆಯೋದು ಸರಿಯಲ್ಲ: ರಾಮಲಿಂಗಾರೆಡ್ಡಿ

    ಒಂದು ಬಾರಿ ನೋಟಿಸ್ ಕೊಟ್ಟ ಮೇಲೆ ಅದು ಸರಿ ಆಗೋವರೆಗೂ ಬೀಗ ತೆಗೆಯೋದು ಸರಿಯಲ್ಲ: ರಾಮಲಿಂಗಾರೆಡ್ಡಿ

    ಬೆಂಗಳೂರು: ಒಂದು ಬಾರಿ ಬಿಗ್‌ಬಾಸ್ (Bigg Boss Kannada 12) ಶೋಗೆ ನೋಟಿಸ್ ಕೊಟ್ಟ ಮೇಲೆ ಅದು ಸರಿ ಆಗೋವರೆಗೂ ಬೀಗ ತೆಗೆಯೋದು ಸರಿಯಲ್ಲ ಎಂದು ಸಚಿವ ರಾಮಲಿಂಗಾರೆಡ್ಡಿ (Ramalingareddy) ಬಿಗ್‌ಬಾಸ್ ವಿಚಾರದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ನಡೆಗೆ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದ್ದಾರೆ.

    ಬಿಗ್‌ಬಾಸ್‌ಗೆ ಬೀಗ ಹಾಕಿ ಮತ್ತೆ ತೆಗೆದ ವಿಚಾರಕ್ಕೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ನಾನು ಈ ವಿಷಯವನ್ನು ಮಾಧ್ಯಮಗಳ ಮೂಲಕ ನೋಡಿದೆ. ಮಾಲಿನ್ಯ ನಿಯಂತ್ರಣ ಬೋರ್ಡ್ ಅಧ್ಯಕ್ಷ ನರೇಂದ್ರಸ್ವಾಮಿ ಅವರು ಬಿಗ್‌ಬಾಸ್ ನಿಯಮ ಮೀರಿದ್ದಾರೆ ಅಂತ ನೋಟಿಸ್ ಕೊಟ್ಟಿದ್ದರು. ಅವರು ನೋಟಿಸ್‌ಗೂ ಕ್ಯಾರೆ ಎನ್ನಲಿಲ್ಲ ಅಂತ ಬೀಗ ಹಾಕಿದ್ರು. ಈಗ ನಿನ್ನೆ ಡಿಕೆ ಶಿವಕುಮಾರ್ (D.K.Shivakumar) ಅನುಮತಿ ಕೊಡಿ ಅಂತ ಹೇಳಿದ್ದಾರೆ ಅಂತ ಮಾಧ್ಯಮಗಳಲ್ಲಿ ನೋಡಿದೆ. ನನಗೆ ಇಷ್ಟೇ ಮಾಹಿತಿ ಗೊತ್ತಿರೋದು. ನಾನು ಊರಲ್ಲಿ ಇರಲಿಲ್ಲ. ಇಷ್ಟೇ ಗೊತ್ತಿರೋದು ಅಂತ ತಿಳಿಸಿದರು. ಇದನ್ನೂ ಓದಿ: ಬಿಗ್‌ಬಾಸ್ ಮನೆ ಬೀಗ ಓಪನ್ ಆದ್ರೂ ಶೂಟಿಂಗ್ ಇನ್ನೂ ಶುರುವಾಗಿಲ್ಲ!

    ಒಂದು ಸಾರಿ ನೋಟಿಸ್ ಕೊಟ್ಟ ಮೇಲೆ, ಮುಚ್ಚಿದ ಮೇಲೆ ಅದು ಸರಿ ಆಗೋವರೆಗೂ ತೆಗೆಯೋಕೆ ಅವಕಾಶ ಕೊಡಬಾರದು. ನನಗೆ ಡಿಸಿ ಮಾಹಿತಿ ಕೊಡೋಕೆ ನಾನು ಊರಲ್ಲಿ ಇರಲಿಲ್ಲ. ಮಾಲಿನ್ಯ ‌ಬೋರ್ಡ್ ಸ್ವಾಯತ್ತ ಸಂಸ್ಥೆ. ಅದರ ಕೆಲಸ ಅದು ಮಾಡಿದೆ. ಏನಾಗಿದೆ ತಿಳಿದುಕೊಳ್ಳುತ್ತೇನೆ. ಈಗ ಏನ್ ಆಯ್ತು ಅಂತ ಡಿಕೆ ಶಿವಕುಮಾರ್ ಅವರನ್ನೇ ಕೇಳಿ ಎಂದರು.

    ಪರಿಸರ ನಿಯಮ ಉಲ್ಲಂಘಿಸಿದ ಆರೋಪದಲ್ಲಿ ಬಿಡದಿಯಲ್ಲಿರುವ ಜಾಲಿವುಡ್‌ ಸ್ಟುಡಿಯೋಸ್‌ ಬಂದ್‌ ಮಾಡಲಾಗಿತ್ತು. ಅಲ್ಲೇ ಇರುವ ಬಿಗ್‌ಬಾಸ್‌ ಮನೆಗೂ ಇದರ ಬಿಸಿ ತಟ್ಟಿತ್ತು. ರಾತ್ರೋರಾತ್ರಿ ಬಿಗ್‌ಬಾಸ್‌ ಸ್ಪರ್ಧಿಗಳನ್ನು ಮನೆಯಿಂದ ಹೊರಹಾಕಲಾಗಿತ್ತು. ಒಂದು ದಿನದ ನಾಟಕೀಯ ಬೆಳವಣಿಗೆ ಬೆನ್ನಲ್ಲೇ, ಜಾಲಿವುಡ್‌ ಸ್ಟುಡಿಯೋಸ್‌ ಗೇಟ್‌ಗೆ ಹಾಕಿರುವ ಸೀಲ್‌ ತೆಗೆಯುವಂತೆ ಡಿಸಿಎಂ ಸೂಚನೆ ನೀಡಿದರು. ಈಗ ಜಾಲಿವುಡ್‌ ಓಪನ್‌ ಆಗಿದ್ದು, ಸ್ಪರ್ಧಿಗಳು ಕೂಡ ಬಿಗ್‌ಬಾಸ್‌ ಮನೆಗೆ ವಾಪಸ್‌ ಆಗಿದ್ದಾರೆ. ಇದನ್ನೂ ಓದಿ: ಡಿಕೆಶಿ ವೈಲ್ಡ್‌ ಕಾರ್ಡ್‌ಎಂಟ್ರಿ – ಬಿಗ್‌ಬಾಸ್‌ ಮನೆ ಓಪನ್‌ | ರಾತ್ರಿ ಏನೇನಾಯ್ತು? ಇಲ್ಲಿದೆ ಇನ್‌ಸೈಡ್‌ ಸ್ಟೋರಿ

  • ಬಿಗ್‌ಬಾಸ್ ಮನೆ ಬೀಗ ಓಪನ್ ಆದ್ರೂ ಶೂಟಿಂಗ್ ಇನ್ನೂ ಶುರುವಾಗಿಲ್ಲ!

    ಬಿಗ್‌ಬಾಸ್ ಮನೆ ಬೀಗ ಓಪನ್ ಆದ್ರೂ ಶೂಟಿಂಗ್ ಇನ್ನೂ ಶುರುವಾಗಿಲ್ಲ!

    ಜಾಲಿವುಡ್ ಸ್ಟುಡಿಯೋಸ್‌ (Jollywood Studios) ಬೀಗ ಓಪನ್ ಆಗಿದೆ. ಒಂದು ಕಡೆ ಜಾಲಿವುಡ್ ಹಾಗೂ ಬಿಗ್‌ಬಾಸ್‌ಗೆ (Bigg Boss Kannada 12) ಗುಡ್ ನ್ಯೂಸ್ ಸಿಕ್ಕಿದೆ. ರಾತ್ರೋರಾತ್ರಿ ಬಿಗ್‌ಬಾಸ್ ಸ್ಪರ್ಧಿಗಳು ವಾಪಸ್ ಬಿಗ್‌ಹೌಸ್ ಸೇರಿದ್ದಾರೆ. ಆದರೆ, ಬಿಗ್‌ಬಾಸ್ ಮನೆಯೊಳಗೆ ಹೋದರೂ ಶೂಟಿಂಗ್ ಇನ್ನೂ ಶುರುವಾಗಿಲ್ಲ.

    ಬಿಗ್‌ಬಾಸ್ ಆಡಳಿತ ಮಂಡಳಿ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಆದೇಶ ಕಾಪಿ ಬರೋವರೆಗೂ ಶೂಟಿಂಗ್ ಶುರು ಮಾಡಲು ಹಿಂದೇಟು ಹಾಕಿದೆ. ಡಿಸಿಎಂ ಡಿಕೆ ಶಿವಕುಮಾರ್ ಜಾಲಿವುಡ್ ಸ್ಟುಡಿಯೋಸ್‌ ಓಪನ್ ಮಾಡಿಸಿದರೂ ಶುರುವಾಗಿಲ್ಲ ಬಿಗ್‌ಬಾಸ್ ಶೂಟಿಂಗ್. ಮಾಲಿನ್ಯ ನಿಯಂತ್ರಣ ಮಂಡಳಿಯ ಅನುಮತಿ ಸಿಗುವ ತನಕ ಬಿಗ್‌ಬಾಸ್ ಆಯೋಜಕರ ತಂಡ ಶೂಟಿಂಗ್ ಶುರು ಮಾಡುತ್ತಿಲ್ಲ. ಇದನ್ನೂ ಓದಿ: ಡಿಕೆಶಿ ವೈಲ್ಡ್‌ ಕಾರ್ಡ್‌ಎಂಟ್ರಿ – ಬಿಗ್‌ಬಾಸ್‌ ಮನೆ ಓಪನ್‌ | ರಾತ್ರಿ ಏನೇನಾಯ್ತು? ಇಲ್ಲಿದೆ ಇನ್‌ಸೈಡ್‌ ಸ್ಟೋರಿ

    ಅಂದಹಾಗೆ ಇನ್ನು ಎರಡು ದಿನಗಳ ಕಾಲ ಆಗುವಷ್ಟು ಎಪಿಸೋಡ್ ಬ್ಯಾಂಕಿಂಗ್ ಇರುವ ಧೈರ್ಯ ಬಿಗ್‌ಬಾಸ್ ಆಡಳಿತ ಮಂಡಳಿಗಿದೆ. ಹೀಗಾಗಿ, ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಅನುಮತಿ ಸಿಗುವವರೆಗೂ ಕಾಯುತ್ತಿದೆ. ಬಿಗ್‌ಬಾಸ್ ಆಡಳಿತ ಮಂಡಳಿ. ‘ಪಬ್ಲಿಕ್ ಟಿವಿ’ಗೆ ಬಿಗ್‌ಬಾಸ್ ಆಡಳಿತ ಮಂಡಳಿಯ ಉನ್ನತ ಮೂಲಗಳ ಮಾಹಿತಿ ಸಿಕ್ಕಿದೆ.

  • ರೆಸಾರ್ಟ್‌ನಲ್ಲಿ ರಿಲ್ಯಾಕ್ಸ್ ಮೂಡ್‌ಗೆ ಜಾರಿದ ಬಿಗ್ ಬಾಸ್ ಸ್ಪರ್ಧಿಗಳು

    ರೆಸಾರ್ಟ್‌ನಲ್ಲಿ ರಿಲ್ಯಾಕ್ಸ್ ಮೂಡ್‌ಗೆ ಜಾರಿದ ಬಿಗ್ ಬಾಸ್ ಸ್ಪರ್ಧಿಗಳು

    ಬಿಗ್ ಬಾಸ್ ಸೀಸನ್ -12 (Bigg Boss Season 12) ಆರಂಭದಲ್ಲಿ ಆತಂಕ ಶುರುವಾಗಿದೆ. ಯಶಸ್ವಿಯಾಗಿ 11 ಸೀಸನ್ ಗಳನ್ನ ನಡೆಸಿಕೊಂಡು ಬರುತ್ತಿದ್ದ ರಿಯಾಲಿಟಿ ಶೋಗೆ ಬಿಗ್ ಶಾಕ್ ನೀಡಿದ್ದಾರೆ ಅಧಿಕಾರಿಗಳು. ಮಾಲಿನ್ಯ ನಿಯಂತ್ರಣ ಮಂಡಳಿಯ ನಿಯಮ ಉಲ್ಲಂಘನೆ ಆಗಿರುವ ಹಿನ್ನೆಲೆ ಬಿಗ್ ಬಾಸ್ ನಡೆಯುತ್ತಿದ್ದ ಜಾಗ ಅಂದರೆ ಜಾಲಿವುಡ್ ಸ್ಟುಡಿಯೋಗೆ (Jollywood Studio) ಬೀಗ ಜಡಿಯಲಾಗಿದೆ.

    ಬಿಗ್ ಬಾಸ್ ಮನೆಗೆ ಬೀಗ ಜಡಿದ ಬಳಿಕ ಅಲ್ಲಿದ್ದ ಸ್ಪರ್ಧಿಗಳನ್ನ ಈಗಲ್ ಟನ್ ರೆಸಾರ್ಟ್ ಗೆ ಸ್ಥಳಾಂತರ ಮಾಡಲಾಯಿತು. ರಾತ್ರಿಯಿಂದಲೇ ವಾಸ್ತವ್ಯ ಹೂಡಿರುವ ಸ್ಪರ್ಧಿಗಳು ಬೆಳಗ್ಗೆ ರೆಸಾರ್ಟ್ ಬಾಲ್ಕನಿಯಲ್ಲಿ ನಿಂತು ಮಾತಾಡಿಕೊಳ್ಳುತ್ತಿದ್ದರು. ಈ ಘಟನೆಯ ಅರಿವಿಲ್ಲದೇ ರಿಲ್ಯಾಕ್ಸ್ ಮೂಡ್ ಗೆ ಜಾರಿದ್ದಾರೆ. ಜೊತೆಗೆ ಬಿಗ್ ಬಾಸ್ ಸ್ಪರ್ಧಿಗಳಾದ ಧನುಷ್ ಗೌಡ (Dhanush Gowda) ಹಾಗೂ ಅಭಿಷೇಕ್ (Abhishek) ಧೂಮಪಾನ ಮಾಡುತ್ತಾ ಮಾತ್ನಾಡುತ್ತಾ ನಿಂತಿರುವ ವಿಡಿಯೋ ಪಬ್ಲಿಕ್ ಟಿವಿಗೆ ಸಿಕ್ಕಿದೆ.

    ಅಂದಹಾಗೆ ಜಾಲಿವುಡ್ ಸ್ಟುಡಿಯೋಗೆ ಬೆಂಗಳೂರು ದಕ್ಷಿಣ ಡಿಸಿ 10ದಿನಗಳ ಕಾಲಾವಕಾಶ ನೀಡಿದ್ದಾರೆ. 10 ದಿನಗಳಲ್ಲಿ ಒಳಗಡೆ ಆದ ಲೋಪ-ದೋಷಗಳನ್ನ ಸರಿಪಡಿಸಿಕೊಳ್ಳುವಂತೆ ಸೂಚಿಸಿ 10ದಿನ ತಾತ್ಕಾಲಿಕ ರಿಲೀಫ್ ನೀಡಲಾಗಿದೆ. ಆದರೆ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಯಾವುದೇ ಅನುಮತಿ ದೊರೆಯದ ಕಾರಣ ಬಿಗ್ ಬಾಸ್ ಮನೆಗೆ ಬಹುತೇಕ ಇಂದು (ಅ.8) ಶಿಫ್ಟ್ ಆಗೋದು ಡೌಟ್ ಎನ್ನಲಾಗ್ತಿದೆ.

  • ಬಿಗ್ ಬಾಸ್ ಮನೆಗೆ ಬೀಗ; ಮಾಜಿ ಸ್ಪರ್ಧಿಗಳು ತೀವ್ರ ಬೇಸರ

    ಬಿಗ್ ಬಾಸ್ ಮನೆಗೆ ಬೀಗ; ಮಾಜಿ ಸ್ಪರ್ಧಿಗಳು ತೀವ್ರ ಬೇಸರ

    – ರಾಜಕೀಯ ದುರುದ್ದೇಶ ಎಂದ ಪ್ರಶಾಂತ್ ಸಂಬರಗಿ

    ರಿಸರ ನಿಯಮ ಉಲ್ಲಂಘನೆ ಆರೋಪದ ಮೇಲೆ ಬಿಗ್‌ಬಾಸ್ (Bigg Boss) ರಿಯಾಲಿಟಿ ಶೋ ನಡೆಯುತ್ತಿದ್ದ ಜಾಲಿವುಡ್ ಸ್ಟುಡಿಯೋಸ್‌ಗೆ ಬೀಗ ಬಿದ್ದಿತ್ತು. ಈ ಹಿನ್ನೆಲೆ ಜಾಲಿವುಡ್ ಸ್ಟುಡಿಯೋದಿಂದ ಬಿಗ್‌ಬಾಸ್ 12ರ ಎಲ್ಲಾ ಸ್ಪರ್ಧಿಗಳನ್ನು ಹೊರಗೆ ಕಳುಹಿಸಲಾಗಿತ್ತು. ಶೋ ಸ್ಥಗಿತಗೊಂಡ ಬಗ್ಗೆ ಬಿಗ್‌ಬಾಸ್‌ನ ಮಾಜಿ ಸ್ಪರ್ಧಿಗಳು ಬೇಸರ ಹೊರಹಾಕಿದ್ದಾರೆ.

    ರಾಜಕೀಯ ದುರುದ್ದೇಶ: ಪ್ರಶಾಂತ್ ಸಂಬರಗಿ
    ಜಾಲಿವುಡ್‌ಗೆ ಬೀಗ ಬಿದ್ದ ಬಗ್ಗೆ `ಪಬ್ಲಿಕ್ ಟಿವಿ’ಯೊಂದಿಗೆ ಮಾತನಾಡಿದ ಬಿಗ್‌ಬಾಸ್ ಮಾಜಿ ಸ್ಪರ್ಧಿ ಪ್ರಶಾಂತ್ ಸಂಬರಗಿ (Prashanth Sambargi) ಮಾತನಾಡಿ, ರಾಜಕೀಯ ದುರುದ್ದೇಶದಿಂದ ಈ ನಿರ್ಧಾರ ಮಾಡಲಾಗಿದೆ. ಕಳೆದ ಬಾರಿ ಹುಲಿ ಉಗುರಿನ ಕಥೆ ಹೇಳಿ ವರ್ತೂರ್ ಸಂತೋಷ್‌ರನ್ನ ಬಂಧನ ಮಾಡಲಾಗಿತ್ತು. ನಾವು ಸ್ಪರ್ಧಿಯಾಗಿದ್ದಾಗಲು ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ಮಾಡಿ ರೋಲ್ ಕಾಲ್ ಮಾಡಿಕೊಂಡಿದ್ದನ್ನ ನೋಡಿದ್ದೇವೆ. ಈ ಬಾರಿಯೂ ಕಾಂಗ್ರೆಸ್ ಏಜೆಂಟ್‌ಗಳಾಗಿರುವ ನಕಲಿ, ಡೋಂಗಿ ಕನ್ನಡ ಹೋರಾಟಗಾರರ ದೂರಿನ ಮೇಲೆ ಕ್ರಮ ಮಾಡಲಾಗಿದೆ ಎಂದು ಕಿಡಿಕಾರಿದ್ದಾರೆ.

    ಸ್ಪರ್ಧಿಗಳು ನೂರಾರು ಕನಸು ಕಟ್ಟಿಕೊಂಡು ಬಂದಿರ್ತಾರೆ: ಶಿಶಿರ್ ಶಾಸ್ತ್ರಿ
    ಬಿಗ್‌ಬಾಸ್ 11ರ ಸ್ಪರ್ಧಿ ಶಿಶಿರ್ ಶಾಸ್ತ್ರಿ (Shishir Shastry) ಮಾತನಾಡಿ, ಶೋ ಹೀಗೆ ಸಡನ್ ಆಗಿ ನಿಂತಿರೋದು ತುಂಬಾ ಬೇಸರ ತಂದಿದೆ. 3 ತಿಂಗಳು ನಡೆಯುವ ಶೋ ಆಗಿರುವ ಬಿಗ್‌ಬಾಸ್‌ನಲ್ಲಿ ನೂರಾರು ಕಾರ್ಮಿಕರ ಶ್ರಮ ಇದೆ. ಶೋ ನಿಂತಿರೋದ್ರಿಂದ ಅವ್ರ ಜೀವನವೂ ಸಹ ಕಷ್ಟಕರವಾಗಲಿದೆ. ಸ್ಪರ್ಧಿಗಳು ಸಹ ನೂರಾರು ಕನಸು ಕಟ್ಟಿಕೊಂಡು ಶೋಗೆ ಹೋಗಿದ್ದಾರೆ. ಸಹಜವಾಗಿಯೇ ಅವರಿಗೆ ಶಾಕ್ ಆಗಿರುತ್ತದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

    ತಾತ್ಕಾಲಿಕವಾಗಿ ಶೋಗೆ ಹಿನ್ನೆಡೆ: ರಜತ್
    ಬಿಗ್‌ಬಾಸ್ 11ರ ಸ್ಪರ್ಧಿ ರಜತ್ (Rajath) ಮಾತನಾಡಿ, ಕಾನೂನಿನ ಮೇಲೆ ನನಗೆ ಅಪಾರವಾದ ಗೌರವ ಇದೆ. ಕೆಲವು ಸಂಘಟನೆಗಳು ಯಾಕೆ ಹೀಗೆ ಮಾಡುತ್ತಿವೆ ಅನ್ನೋದು ಗೊತ್ತಾಗುತ್ತಿಲ್ಲ. ಸ್ಪರ್ಧಿಗಳು ಬಿಗ್‌ಬಾಸ್‌ಗೆ ಸಾವಿರಾರು ಕನಸುಗಳನ್ನ ಕಟ್ಟಿಕೊಂಡು ಬಂದಿರುತ್ತಾರೆ. ತಾತ್ಕಾಲಿಕವಾಗಿ ಸ್ವಲ್ಪ ಹಿನ್ನೆಡೆ ಆಗಿ ಶೋ ನಿಂತಿರಬಹುದು. ಆದರೆ ಸುದೀಪ್ ಅವ್ರಿಗೆ ದೊಡ್ಡ ಶಕ್ತಿಯಿದೆ. ಮತ್ತೆ ಬಿಗ್‌ಬಾಸ್ ಪ್ರಾರಂಭವಾಗುತ್ತದೆ ಎಂದಿದ್ದಾರೆ.

    ಸ್ಪರ್ಧಿಗಳ ಕನಸಿಗೆ ಬರೆ: ಬಸ್ ಕಂಡೆಕ್ಟರ್ ಆನಂದ್
    ಬಿಗ್‌ಬಾಸ್ 6ರ ಸ್ಪರ್ಧಿ ಬಸ್ ಕಂಡೆಕ್ಟರ್ ಆನಂದ್ (Bus conductor Anand) ಪ್ರತಿಕ್ರಿಯಿಸಿ, ಇದು ಬಿಗ್‌ಬಾಸ್ ಮೇಲೆ ಬಂದ ಆರೋಪವಲ್ಲ. ಇದು ಕನ್ನಡ ರಿಯಾಲಿಟಿ ಶೋಗೆ ಆದ ಅವಮಾನ. ಶೋನಲ್ಲಿ ಕೆಲಸ ಮಾಡುತ್ತಿದ್ದ ಹಾಗೂ ಸ್ಪರ್ಧಿಗಳ ಕನಸುಗಳಿಗೆ ಬರೆ ಎಳೆದ ಹಾಗೆ ಆಗಿದೆ. ಜಾಲಿವುಡ್‌ನಲ್ಲಿ ಬಿಗ್‌ಬಾಸ್ ಸೆಟ್ ಹಾಕುವಾಗ ಗಮನಹರಿಸಬೇಕಿತ್ತು. ದುಡುಕಿ ನಿರ್ಧಾರ ತೆಗೆದುಕೊಂಡಿದ್ದಾರೆ. ಸೂರ್ಯ ಚಂದ್ರರೂ ಇರೋದು ಎಷ್ಟು ಸತ್ಯವೋ, ಇನ್ನೆರಡು ದಿನದ ಒಳಗೆ ಬಿಗ್‌ಬಾಸ್ ಆರಂಭವಾಗೋದು ಅಷ್ಟೇ ಸತ್ಯ ಎಂದು ಹೇಳಿದ್ದಾರೆ.

    ಸ್ಪರ್ಧಿಗಳು ಮತ್ತೆ ಬಿಗ್‌ಬಾಸ್ ಮನೆ ಒಳಗೆ: ರಕ್ಷಕ್ ಬುಲೆಟ್
    ಬಿಗ್‌ಬಾಸ್ ಸ್ಪರ್ಧಿ ರಕ್ಷಕ್ ಬುಲೆಟ್ (Rakshak Bullet) ಪ್ರತಿಕ್ರಿಯಿಸಿ, ಸಡನ್ನಾಗಿ ಎಲ್ಲಾ ಸ್ಪರ್ಧಿಗಳನ್ನು ಹೊರಗೆ ಕಳುಹಿಸಿದಾಗ ಸಹಜವಾಗಿಯೇ ಅವರಿಗೆ ಬೇಜಾರಾಗಿರುತ್ತದೆ. ಇಡೀ ಮನೆ ಲಾಕ್ ಆಗಿದೆ. ಈ ಸಲ ಮಾತ್ರ ಹೀಗೆ ಆಗಿದೆ. ಬಿಗ್‌ಬಾಸ್ ಶೋಗೆ ಸ್ಪರ್ಧಿಗಳು ಕನಸು ಕಟ್ಕೊಂಡು ಬಂದಿರುತ್ತಾರೆ. ಏಕಾಏಕಿ ಶೋ ಬಂದ್ ಆದಾಗ ಭಯ ಇರುತ್ತದೆ. ಆದರೆ ಈಗ ಮತ್ತೆ ಸ್ಪರ್ಧಿಗಳು ಬಿಗ್‌ಬಾಸ್ ಮನೆ ಒಳಗೆ ಹೋಗ್ತಿದ್ದಾರೆ ಎಂದಿದ್ದಾರೆ.